Tag: oppose

  • ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ

    ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ

    ಬೆಳಗಾವಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯ ಅವಶ್ಯಕತೆ ಏನಿದೆ ಎಂದು ಸರ್ಕಾರಕ್ಕೆ ಮಾಜಿ ಸಚಿವ ಎಚ್‍.ಡಿ ರೇವಣ್ಣ ಪ್ರಶ್ನಿಸಿದ್ದಾರೆ.

    ಬೆಳಗಾವಿಯಲ್ಲಿ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿಯ ಉದ್ದೇಶ ಸಮುದಾಯದ ಟಾರ್ಗೆಟ್ ಅಲ್ಲ, ಇದು ವೋಟ್‍ಗಳು ಟಾರ್ಗೆಟ್ ಆಗಿದೆ. ಹೀಗಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೆಗೆ ನಮ್ಮ ಸಂಪೂರ್ಣ ವಿರೋಧ ಇದೆ. ಮಹಾತ್ಮಾ ಗಾಂಧಿಜೀಯವರು ಹೇಳಿದಂತೆ ನಾವೆಲ್ಲರೂ ಒಗ್ಗಟ್ಟಾಗಿರಬೇಕು ಎಂಬುದು ನಮ್ಮ ಭಾವನೆ. ಇಚ್ಛೆ ಇದ್ದವರು ಮತಾಂತರ ಆಗುತ್ತಾರೆ, ಇಲ್ಲದವರು ಆಗಲ್ಲ. ನಾವು ಈ ಮಸೂದೆ ವಿರೋಧ ಮಾಡುತ್ತೇವೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ:  ಶಾಸಕರೊಬ್ಬರ ಸಂತೃಪ್ತಿಗೆ ಡಿಕೆಶಿ ಎಂಇಎಸ್ ಪರ ಬ್ಯಾಟಿಂಗ್: ಸಚಿವ ಈಶ್ವರಪ್ಪ

    ನಮ್ಮದು ಪ್ರಾದೇಶಿಕ ಪಕ್ಷ, ಉತ್ತರ ಕರ್ನಾಟಕದ ಅಭಿವೃದ್ಧಿ ಉದ್ದೇಶವಿಟ್ಟೇ ಎಚ್.ಡಿಕೆ ಬೆಳಗಾವಿಯಲ್ಲಿ ಅಧಿವೇಶನಕ್ಕೆ ನಾಂದಿ ಹಾಡಿದರು. ಉತ್ತರ ಕರ್ನಾಟಕಕಕ್ಕೆ ಕುಮಾರಸ್ವಾಮಿ ಏನೇನು ಮಾಡಿದ್ದಾರೆ ಜ್ಞಾಪಕದಲ್ಲಿಟ್ಟುಕೊಳ್ಳಬೇಕು. ಬೆಳಗಾವಿಯಲ್ಲಿ ನಡೆದ ಘಟನೆ ಬಗ್ಗೆ ರಾಷ್ಟ್ರೀಯ ಪಕ್ಷಗಳ ನಾಯಕರು ವಿಭಿನ್ನ ಹೇಳಿಕೆ ನೀಡುತ್ತಿದ್ದಾರೆ. ಪ್ರಚೋದನೆ ಮಾಡುವ ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಆಗಬೇಕು ಎಂಬುದು ನಮ್ಮ ನಿಲುವು ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಮತಾಂತರ ನಿಷೇಧ ಮಸೂದೆ ಸಂವಿಧಾನಕ್ಕೆ ವಿರುದ್ಧವಾಗಿದೆ: ಡಿಕೆಶಿ

    BJP - CONGRESS

    ನಮ್ಮ ಪಕ್ಷದ ಶಾಸಕರು ಕಿಡಿಗೇಡಿಗಳ ಕೃತ್ಯವನ್ನು ಸದನದಲ್ಲಿ ಖಂಡಿಸಿದ್ದಾರೆ. ಆದರೆ ಬೆಳಗಾವಿಯ ನಾಯಕರು ಹಾಗೂ ಎರಡು ರಾಷ್ಟ್ರೀಯ ಪಕ್ಷಗಳು ವೋಟ್‍ಗಾಗಿ ಹಿಂದೆ ಬಿದ್ದಿವೆ. ಮತಕ್ಕಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಕರ್ನಾಟಕದ ಸಮಗ್ರ ಅಭಿವೃದ್ಧಿ, ನೀರಾವರಿ ಯೋಜನೆಗಳ ಚರ್ಚೆಗೆ ನಿಲುವಳಿ ಸೂಚನೆ ಮಂಡಿಸಲಿದ್ದೇವೆ. ಮಹದಾಯಿ ವಿವಾದ ಬಗೆಹರಿಸಲು ಇಷ್ಟು ವರ್ಷ ಬೇಕಾ? ಮಹದಾಯಿ, ಕೃಷ್ಣಾ, ಘಟಪ್ರಭಾ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆಗೆ ನಿಲುವಲಿ ಸೂಚನೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಳ್ಳ ಸೇರುತ್ತಿದೆ ಉಮೇಶ್ ಕತ್ತಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ತ್ಯಾಜ್ಯ ನೀರು

  • ಕಾವೇರಿ ಮಾತೆಯ ಶಾಪ ಸಿಎಂ ಅವರನ್ನು ಸುಮ್ಮನೆ ಬಿಡಲ್ಲ: ಕೆ.ಜೆ.ಬೋಪಯ್ಯ

    ಕಾವೇರಿ ಮಾತೆಯ ಶಾಪ ಸಿಎಂ ಅವರನ್ನು ಸುಮ್ಮನೆ ಬಿಡಲ್ಲ: ಕೆ.ಜೆ.ಬೋಪಯ್ಯ

    ಮಡಿಕೇರಿ: ಕಾವೇರಿ ಮಾತೆಯ ಶಾಪ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಸುಮ್ಮನೆ ಬಿಡುವುದಿಲ್ಲವೆಂದು ಮಾಜಿ ಸ್ಪೀಕರ್ ಹಾಗೂ ಹಾಲಿ ಶಾಸಕ ಕೆ.ಜೆ.ಬೋಪಯ್ಯ ಕಿಡಿಕಾರಿದ್ದಾರೆ.

    ಶುಕ್ರವಾರ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ನಗರದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಟಿಪ್ಪು ಜಯಂತಿಯನ್ನು ಈ ಮಣ್ಣಿನಲ್ಲಿ ಆಚರಣೆ ಮಾಡುತ್ತಿದ್ದೀರಾ? ಬೆಂಗಳೂರಿನಲ್ಲಿ ನಡೆಯುವ ಆಚರಣೆಯಲ್ಲಿ ಸಿಎಂ ಕುಮಾರಸ್ವಾಮಿ ಹೆಸರಿಲ್ಲ. ಆದರೆ ಇಲ್ಲಿ ಏಕೆ ದಮನ ಮಾಡುವ ರೀತಿ ಮಾಡುತ್ತಿದ್ದೀರಿ? ಎಲ್ಲೂ ಇಲ್ಲದ ಸುತ್ತೋಲೆ, ಸೆಕ್ಷನ್‍ಗಳು ಏತಕ್ಕೆ? ನೀವು ಕಾರ್ಯಕ್ರಮಕ್ಕೆ ಹೋಗದೆ, ಒಡೆದು ಆಳುವ ರೀತಿ ಮಾಡುತ್ತಿದ್ದೀರಾ. ನಾಡಿನ ಜನತೆ ಬುದ್ಧಿವಂತರಿದ್ದಾರೆ, ಎಲ್ಲವನ್ನು ನೋಡುತ್ತಿರುತ್ತಾರೆ ಎಂದು ಹೇಳಿದರು.

    ಈಗಲೂ ಕಾಲ ಮಿಂಚಿಲ್ಲ, ದಯಮಾಡಿ ಟಿಪ್ಪು ಜಯಂತಿಯನ್ನು ಕೈ ಬಿಡಿ. ಈ ಪುಣ್ಯ ನೆಲದಲ್ಲಿ ಜಯಂತಿ ಮಾಡಬೇಡಿ. ಒಂದು ವೇಳೆ ಮಾಡಿದರೆ, ಕಾವೇರಿ ಮಾತೆಯ ಶಾಪ ತಟ್ಟೇ ತಗಲುತ್ತದೆ. ಸಿದ್ದರಾಮಯ್ಯ ಅವರಿಗೆ ಅದ ರೀತಿ ನಿಮಗೂ ಅಗುತ್ತೆ ಇದನ್ನ ನೆನಪಿನಲ್ಲಿ ಇಟ್ಟುಕೊಳ್ಳಿ. ಕಾವೇರಿ ಶಾಪ ನಿಮಗೂ ತಟ್ಟುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಶನಿವಾರ ನಡೆಯುವ ಪ್ರತಿಭಟನೆಯಲ್ಲಿ ನಾವು ಭಾಗವಹಿಸುತ್ತೇವೆ. ನಮ್ಮ ಮೇಲೆ ಮೊಕದ್ದಮೆ ದಾಖಲು ಮಾಡಿದರೆ ನಾವು ಹೆದರುವುದಿಲ್ಲ. ನೀವು ನಮ್ಮ ಮೇಲೆ ಮರಣದಂಡನೆಯಾಗಲಿ, ಜೀವಾವಧಿ ಶಿಕ್ಷೆಯಾಗಲಿ ನೀಡಲು ಸಾಧ್ಯವಿಲ್ಲ. ಏನು? ನಮ್ಮ ಮೇಲೆ ಕೇಸ್ ಹಾಕಿ, ಒಳಗೆ ಹಾಕಿಸಬಹುದು. ಆದರೆ ನಾವು ಹೊರಗಡೆ ಬಂದ ಮೇಲೆ ನೀವು ಇರ್ತೀರಾ ಆಗ ನೋಡಿ ಎಂದು ಅಸಮಾಧಾನ ಹೊರಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಟಿಪ್ಪು ಜಯಂತಿಯಲ್ಲಿ ಶಿಷ್ಟಾಚಾರಕ್ಕೂ ನನ್ನ ಹೆಸರು ಬಳಸಬೇಡಿ: ಅನಂತಕುಮಾರ್ ಹೆಗಡೆ

    ಟಿಪ್ಪು ಜಯಂತಿಯಲ್ಲಿ ಶಿಷ್ಟಾಚಾರಕ್ಕೂ ನನ್ನ ಹೆಸರು ಬಳಸಬೇಡಿ: ಅನಂತಕುಮಾರ್ ಹೆಗಡೆ

    ಕಾರವಾರ: ರಾಜ್ಯ ಸರ್ಕಾರದಿಂದ ನಡೆಯುವ ಟಿಪ್ಪು ಜಯಂತಿಯ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರಕ್ಕೂ ನನ್ನ ಹೆಸರನ್ನು ನಮೂದಿಸಬೇಡಿ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ ವಿರೋಧ ವ್ಯಕ್ತಪಡಿಸಿದ್ದಾರೆ.

    ಹೌದು, ಇದೇ ತಿಂಗಳ 10 ರಂದು ರಾಜ್ಯ ಸರ್ಕಾರದಿಂದ ನಡೆಯುವ ಟಿಪ್ಪು ಜಯಂತಿಗೆ ಅನಂತಕುಮಾರ್ ಹೆಗಡೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸರ್ಕಾರಿ ಕಚೇರಿಗಳಲ್ಲಿ ನಡೆಯುವ ಟಿಪ್ಪು ಜಯಂತಿಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮಗಳ ಪಟ್ಟಿಯಲ್ಲಿ ಶಿಷ್ಟಾಚಾರಕ್ಕೂ ತಮ್ಮ ಹೆಸರನ್ನು ನಮೂದಿಸದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಬೆಳಗಾವಿ ಮತ್ತು ಉತ್ತರಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

    ಕೇಂದ್ರ ಸಚಿವರು ಪತ್ರವನ್ನು ತಮ್ಮ ವಿಶೇಷ ಕರ್ತವ್ಯಾಧಿಕಾರಿ ವಿಜಯ್‍ಕುಮಾರ್ ತೋರ್ ಗಲ್ ಮೂಲಕ ರವಾನಿಸಿದ್ದಾರೆ. ಪತ್ರದಲ್ಲಿ ಕರ್ನಾಟಕದ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ರಾಜ್ಯ ಜನತೆಯ ತೀವ್ರ ವಿರೋಧದ ನಡುವೆಯೂ ನವೆಂಬರ್ 10ರಂದು ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಣೆ ನಡೆಸಲು ನಿರ್ಧರಿಸಿದ್ದಾರೆ. ಆದರೆ ಟಿಪ್ಪು ಕನ್ನಡ ವಿರೋಧಿ ಮತ್ತು ಹಿಂದೂ ವಿರೋಧಿಯಾಗಿರುವುದು ಇತಿಹಾಸದಿಂದ ತಿಳಿಯುತ್ತದೆ. ಇದಲ್ಲದೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇದರ ವಿರುದ್ಧ ಪ್ರತಿಭಟನೆಗಳು ನಡೆದು ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಒಬ್ಬ ಸಮಾಜಘಾತುಕ ವ್ಯಕ್ತಿಯನ್ನು ವೈಭವೀಕರಿಸಿ ಆತನ ಜಯಂತಿ ಮಾಡ ಹೊರಟಿರುವುದು ನಿಜಕ್ಕೂ ಖಂಡನೀಯ. ಇದನ್ನು ಸಚಿವ ಅನಂತಕುಮಾರ್ ಹೆಗಡೆ ನಿಷ್ಟುರವಾಗಿ ಖಂಡಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ವಿಷ ಕುಡಿದ ಯುವಪ್ರೇಮಿಗಳು – ಪ್ರೇಮಿ ಸಾವು, ಪ್ರಿಯತಮೆ ತೀವ್ರ ಅಸ್ವಸ್ಥ

    ವಿಷ ಕುಡಿದ ಯುವಪ್ರೇಮಿಗಳು – ಪ್ರೇಮಿ ಸಾವು, ಪ್ರಿಯತಮೆ ತೀವ್ರ ಅಸ್ವಸ್ಥ

    ಚಿತ್ರದುರ್ಗ: ಯುವ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ವಿಷ ಸೇವಿಸಿದ್ದ ಅಪ್ರಾಪ್ತ ಬಾಲಕಿ ಈಗ ತೀವ್ರ ಅಸ್ವಸ್ಥಳಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.

    ಜಗದೀಶ್ ಮೃತ ಯುವಕ. ಚಿತ್ರದುರ್ಗ ತಾಲೂಕಿನ ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ಜಗದೀಶ್ ಮತ್ತು ಅದೇ ಗ್ರಾಮದ ಸುಮಾರು 17 ವರ್ಷದ ಬಾಲಕಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಯುವಕ ಬೇರೆ ಜಾತಿ ಎಂಬ ಕಾರಣಕ್ಕೆ ಬಾಲಕಿಯ ಪೋಷಕರು ಇವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

    ಹೀಗಾಗಿ ಕಳೆದ 6ತಿಂಗಳ ಹಿಂದೆ ಮನೆಬಿಟ್ಟು ಹೋಗಿದ್ದ ಪ್ರೇಮಿಗಳು ಅಜ್ಞಾತ ಸ್ಥಳದಲ್ಲಿ ಮದುವೆಯಾಗಿದ್ದರು ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಮಗಳು ಕಾಣೆಯಾಗಿರುವ ಬಗ್ಗೆ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದರು. ಬಳಿಕ ಪೊಲೀಸರು ಪ್ರೇಮಿಗಳನ್ನು ಪತ್ತೆ ಹಚ್ಚಿ ಕರೆದುಕೊಂಡು ಬಂದಿದ್ದರು. ಅಲ್ಲದೇ ರಾಜಿ ಪಂಚಾಯ್ತಿ ಮಾಡಿ ಬಾಲಕಿಯನ್ನ ಪೋಷಕರ ವಶಕ್ಕೆ ನೀಡಿದ್ದರು.

    ಇದರಿಂದ ಮನನೊಂದ ಪ್ರೇಮಿಗಳು ಶನಿವಾರ ಚಿತ್ರದುರ್ಗ ತಾಲೂಕು ಅಳಗವಾಡಿ ಸಮೀಪದ ಬೆಟ್ಟಕ್ಕೆ ತೆರಳಿ ಅಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನು ಅಲ್ಲಿದ್ದ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಸದ್ಯಕ್ಕೆ ಬಾಲಕಿ ತೀವ್ರ ಅಸ್ವಸ್ಥಳಾಗಿದ್ದು, ದಾವಣಗೆರೆ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

    ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿರೋ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೇ ಭೇಟಿ ನೀಡಿದ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಯುವ ಜೋಡಿಗಳು ಆತ್ಮಹತ್ಯೆ ಮಾಡಿಕೊಳ್ಳಲು ತಂದಿದ್ದ, ವಿಷದ ಬಾಟಲ್, ಸಿಹಿ ತಿನಿಸುಗಳು, ತಂಪು ಪಾನಿಯ ಮತ್ತು ನೀರು ಸೇರಿದಂತೆ ನೇಣುಹಾಕಿಕೊಳ್ಳಲು ತಂದಿದ್ದ ಹಗ್ಗ ಕೂಡ ಸ್ಥಳದಲ್ಲಿ ಪತ್ತೆಯಾಗಿದೆ. ಈ ವಸ್ತುಗಳನ್ನೆಲ್ಲಾ ಗಮನಿಸಿದಾಗ, ಜಾತಿ ವಿಚಾರದಲ್ಲಿ ಪೋಷಕರ ವಿರೋಧ ಮತ್ತು ಸಮಾಜಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ಕಠಿಣ ನಿರ್ಧಾರಕ್ಕೆ ಪ್ರೇಮಿಗಳು ಬಂದಿದ್ದರು ಎಂಬ ಬಗ್ಗೆ ಅನುಮಾನಗಳು ವ್ಯಕ್ತವಾಗಿದೆ.

    ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಯುವಕನ ಪೋಷಕರು ಆರೋಪಿಸಿದ್ದಾರೆ. ಈ ಸಂಬಂಧ ಭರಮಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ.