Tag: Opposition parties

  • ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ವಿಪಕ್ಷಗಳ ವ್ಯೂಹ ರಚಿಸಲು ಮುಹೂರ್ತ

    ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ವಿಪಕ್ಷಗಳ ವ್ಯೂಹ ರಚಿಸಲು ಮುಹೂರ್ತ

    ನವದೆಹಲಿ: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ (Lok Sabha election) ಬಿಜೆಪಿಯನ್ನು (BJP) ಒಗ್ಗಟ್ಟಾಗಿ ಎದುರಿಸಲು ವಿಪಕ್ಷಗಳು (Opposition parties) ದ್ವಿಮುಖವಾಗಿ ಮಾತ್ರ ಪೈಪೋಟಿ ಇರುವಂತೆ ಯೋಜನೆ ರೂಪಿಸುತ್ತಿವೆ.

    ಈ ಸಂಬಧ ಚಕ್ರವ್ಯೂಹ ರಚಿಸಲು ಮಹೂರ್ತ ಫಿಕ್ಸ್ ಮಾಡಿವೆ. ಬಲ್ಲ ಮೂಲಗಳ ಮಾಹಿತಿ ಪ್ರಕಾರ 450 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಎದುರು ಸರ್ವಸಮ್ಮತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ತಂತ್ರ ನಡೆಯುತ್ತಿವೆ. ಬಿಜೆಪಿ ವಿರೋಧಿ ಮತಗಳು ಛಿದ್ರವಾಗುವುದನ್ನು ತಪ್ಪಿಸಲು ಈ ರೀತಿಯ ವ್ಯೂಹ ರಚನೆ ಮಾಡಲಾಗುತ್ತಿದೆ. ಇದು ವಾಸ್ತವದಲ್ಲಿ ಸಾಧ್ಯವಿದೆಯೇ ಎಂಬ ಚರ್ಚೆಗಳು ಕೂಡ ನಡೆಯುತ್ತಿವೆ. ಇದನ್ನೂ ಓದಿ: ಸಿದ್ರಾಮಯ್ಯ ಸಾಲ ಮನ್ನಾ ಅಂದಿದ್ರು, ನಾವ್ ದುಡ್ಡು ಕಟ್ಟಲ್ಲ – ಬ್ಯಾಂಕ್ ಸಿಬ್ಬಂದಿಗೆ ಸ್ತ್ರಿಶಕ್ತಿ ಸಂಘದ ಮಹಿಳೆಯರಿಂದ ಕ್ಲಾಸ್

    ಈ ವಿಚಾರವಾಗಿ ಜೂ.23ರಂದು ಪಾಟ್ನಾದಲ್ಲಿ ವಿಪಕ್ಷಗಳೆಲ್ಲಾ ಸೇರಿ ಸಭೆ ಮಾಡಲು ನಿರ್ಧರಿಸಿವೆ. ಬಿಹಾರದ (Bihar) ಸಿಎಂ ನಿತೀಶ್ ಕುಮಾರ್ ನೇತೃತ್ವದಲ್ಲಿ ಪಾಟ್ನಾದಲ್ಲಿ ನಡೆಯುವ ಈ ಸಭೆಗೆ ಎಐಸಿಸಿ ಅಗ್ರನಾಯಕ ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಎಂಕೆ ಸ್ಟಾಲಿನ್, ಅರವಿಂದ್ ಕೇಜ್ರಿವಾಲ್, ಶರದ್ ಪವಾರ್, ಅಖಿಲೇಶ್ ಯಾದವ್, ಉದ್ಧವ್ ಠಾಕ್ರೆ, ಹೇಮಂತ್ ಸೋರೆನ್, ತೇಜಸ್ವಿ ಯಾದವ್, ಸಿಪಿಐ, ಸಿಪಿಎಂ ಪಕ್ಷಗಳ ನಾಯಕರು ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಹೊಸ ಷರತ್ತು – ಮಗ ತೆರಿಗೆದಾರನಾಗಿದ್ದರೆ ತಾಯಿಗೆ 2 ಸಾವಿರ ಸಿಗಲ್ಲ

  • ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ ಆರೋಪ – ಸುಪ್ರೀಂಕೋರ್ಟ್ ಮೆಟ್ಟಿಲೇರಿದ ವಿಪಕ್ಷಗಳು

    ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ ಆರೋಪ – ಸುಪ್ರೀಂಕೋರ್ಟ್ ಮೆಟ್ಟಿಲೇರಿದ ವಿಪಕ್ಷಗಳು

    ನವದೆಹಲಿ: ಕೇಂದ್ರೀಯ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶನಾಲಯ (ED) ನಂತಹ ಕೇಂದ್ರೀಯ ಸಂಸ್ಥೆಗಳನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ 14 ರಾಜಕೀಯ ಪಕ್ಷಗಳು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ.

    ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (Congress), ತೃಣಮೂಲ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಜಗಮ್ ಮತ್ತು ರಾಷ್ಟ್ರೀಯ ಜನತಾ ದಳವೂ ಸೇರಿ 14 ವಿಪಕ್ಷಗಳು ಒಳಗೊಂಡಿರುವ ಅರ್ಜಿದಾರರು ಬಂಧನಕ್ಕೆ ಪೂರ್ವ ಮಾರ್ಗಸೂಚಿಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸಂಸದ ಸ್ಥಾನದಿಂದ ರಾಹುಲ್‌ ಗಾಂಧಿ ಅನರ್ಹ

    ಪ್ರಕರಣವನ್ನು ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ಸಿಜೆಐ ಡಿ.ವೈ ಚಂದ್ರಚೂಡ್ (D.Y.Chandrachud) ಪೀಠದ ಮುಂದೆ ಮನವಿ ಮಾಡಿದರು. ಕೇಂದ್ರೀಯ ತನಿಖಾ ಸಂಸ್ಥೆಗಳ 95 ಪ್ರತಿಶತ ತನಿಖೆಗಳು ವಿರೋಧ ಪಕ್ಷಗಳ ನಾಯಕರ ವಿರುದ್ಧವಾಗಿವೆ. ಸಿಬಿಐ ಇಡಿಯನ್ನು ಸಂಪೂರ್ಣವಾಗಿ ನಮ್ಮ ವಿರುದ್ಧ ಬಳಸಲಾಗುತ್ತಿದೆ ಎಂದು ವಾದಿಸಿದರು.

    ವಾದ ಆಲಿಸಿದ ಸಿಜೆಐ ಡಿ.ವೈ ಚಂದ್ರಚೂಡ್, ತುರ್ತು ವಿಚಾರಣೆ ಸಾಧ್ಯವಿಲ್ಲ. ಏಪ್ರಿಲ್ 5 ರಂದು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: 12 ಗಂಟೆಗೊಮ್ಮೆ ಸ್ಥಳ ಬದಲಾವಣೆ – ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಅಮೃತ್‌ಪಾಲ್ ಸಿಂಗ್

  • ಪ್ರಧಾನಿ ಮೋದಿಗೆ ಪತ್ರ ಬರೆದ 8 ಪಕ್ಷಗಳು – ಏನಿದೆ ಅದರಲ್ಲಿ? – ಪತ್ರ ಬರೆದವರಿಂದ ದೂರ ಉಳಿದ ಕಾಂಗ್ರೆಸ್‌

    ಪ್ರಧಾನಿ ಮೋದಿಗೆ ಪತ್ರ ಬರೆದ 8 ಪಕ್ಷಗಳು – ಏನಿದೆ ಅದರಲ್ಲಿ? – ಪತ್ರ ಬರೆದವರಿಂದ ದೂರ ಉಳಿದ ಕಾಂಗ್ರೆಸ್‌

    ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ನಾಯಕ ಮನೀಶ್ ಸಿಸೋಡಿಯಾ (Manish Sisodia) ಅವರ ಬಂಧನ ವಿಚಾರವಾಗಿ ರಾಜಕೀಯ ಯುದ್ಧ ಏರ್ಪಟ್ಟಿದೆ. ಇದರ ನಡುವೆ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಎಂಟು ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದಿವೆ.

    ಮುಖ್ಯಮಂತ್ರಿಗಳಾದ ಕೆ.ಚಂದ್ರಶೇಖರ್ ರಾವ್, ಮಮತಾ ಬ್ಯಾನರ್ಜಿ, ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್ ಸೇರಿದಂತೆ ವಿರೋಧ ಪಕ್ಷದ ನಾಯಕರ ಸಹಿ ಇರುವ ಪತ್ರವನ್ನು ಮೋದಿ ಅವರಿಗೆ ಕಳುಹಿಸಲಾಗಿದೆ. ಆದರೆ ಈ ಪತ್ರದಲ್ಲಿ ಕಾಂಗ್ರೆಸ್ ಸಹಿ ಇಲ್ಲ. ಡಿಎಂಕೆ, ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಹೆಚ್‌.ಡಿ.ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷ ಕೂಡ ಈ ಕ್ರಮಕ್ಕೆ ಕೈಜೋಡಿಸಿಲ್ಲ. ಇದನ್ನೂ ಓದಿ: ಹಿಂಸೆಗೆ ಪ್ರಚೋದನೆ – ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

    ಈ ಕ್ರಮದಿಂದ ಹೊರಗುಳಿದ ಕಾಂಗ್ರೆಸ್‌ ವಿರುದ್ಧ ಎಎಪಿ ವಾಗ್ದಾಳಿ ನಡೆಸಿದೆ. “ರಾಷ್ಟ್ರೀಯ ಸಮಸ್ಯೆಗಳನ್ನು ಎತ್ತಿದಾಗ ಕಾಂಗ್ರೆಸ್ ಕಣ್ಮರೆಯಾಗುತ್ತದೆ. ಕಾಂಗ್ರೆಸ್ ಎಂದಿಗೂ ಪ್ರತಿಪಕ್ಷಗಳ ಜೊತೆ ನಿಂತಿಲ್ಲ. ಇದು ಅದರ ಇತಿಹಾಸ. ರಾಹುಲ್ ಗಾಂಧಿ ಮತ್ತು ರಾಬರ್ಟ್ ವಾದ್ರಾ ಅವರನ್ನು ಜೈಲಿಗೆ ಹಾಕುತ್ತೇವೆ ಎಂಬ ಬಿಜೆಪಿಯ ಹೇಳಿಕೆಯನ್ನು ನಾವು ಕೇಳುತ್ತಿದ್ದೇವೆ. ಇದು ಕೇವಲ ವಾಗ್ಯುದ್ಧವಾಗಿದೆ. ರಾಷ್ಟ್ರೀಯ ಸಮಸ್ಯೆಗಳು ಬಂದಾಗ ಕಾಂಗ್ರೆಸ್ ತಪ್ಪಿಸಿಕೊಳ್ಳುತ್ತಿದೆ ಎಂದು ಎಎಪಿ ವಕ್ತಾರ ಸೌರಭ್ ಭಾರದ್ವಾಜ್ ಟೀಕಾಪ್ರಹಾರ ನಡೆಸಿದ್ದಾರೆ.

    ನ್ಯಾಷನಲ್ ಕಾನ್ಫರೆನ್ಸ್‌ನ ಫಾರೂಕ್ ಅಬ್ದುಲ್ಲಾ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಉದ್ದವ್ ಠಾಕ್ರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಪತ್ರಕ್ಕೆ ಸಹಿ ಹಾಕಿದ್ದಾರೆ. ಇದನ್ನೂ ಓದಿ: ಮಂಗಳೂರು, ಕೊಯಮತ್ತೂರಲ್ಲಿ ಸ್ಫೋಟ ಮಾಡಿದ್ದು ನಾವೇ- ಹೊಣೆ ಹೊತ್ತ ಐಎಸ್‍ಕೆಪಿ

    ಪತ್ರದಲ್ಲೇನಿದೆ?
    “ಭಾರತ ಇನ್ನೂ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ ಎಂಬುದನ್ನು ನೀವು ಒಪ್ಪುತ್ತೀರಿ ಎಂದು ನಾವು ಭಾವಿಸುತ್ತೇವೆ. ವಿರೋಧ ಪಕ್ಷದ ಸದಸ್ಯರ ವಿರುದ್ಧ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆಯಾಗುತ್ತಿದೆ. ಇದು ನಾವು ಪ್ರಜಾಪ್ರಭುತ್ವದಿಂದ ನಿರಂಕುಶಪ್ರಭುತ್ವಕ್ಕೆ ಪರಿವರ್ತನೆಯಾಗಿದ್ದೇವೆ ಎಂಬುದನ್ನು ಸೂಚಿಸುತ್ತದೆ. ಕೇಂದ್ರೀಯ ತನಿಖಾ ದಳವು (ಸಿಬಿಐ) ಮನೀಶ್ ಸಿಸೋಡಿಯಾ ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದಿದ್ದರೂ ಅಕ್ರಮವೆಸಗಿರುವ ಆರೋಪದಲ್ಲಿ ಬಂಧಿಸಿದೆ. 2014 ರಿಂದ ನಿಮ್ಮ ಆಡಳಿತದಲ್ಲಿರುವ ತನಿಖಾ ಸಂಸ್ಥೆಗಳು ಬುಕ್ ಮಾಡಿದ, ಬಂಧಿಸಿದ, ದಾಳಿ ಮಾಡಿದ ಅಥವಾ ವಿಚಾರಣೆಗೆ ಒಳಪಡಿಸಿದ ಒಟ್ಟು ಪ್ರಮುಖ ರಾಜಕಾರಣಿಗಳ ಪೈಕಿ, ಗರಿಷ್ಠ ಮಂದಿ ವಿರೋಧ ಪಕ್ಷಕ್ಕೆ ಸೇರಿದವರಾಗಿದ್ದಾರೆ. ಬಿಜೆಪಿಗೆ ಸೇರಿದ ವಿರೋಧ ಪಕ್ಷದ ರಾಜಕಾರಣಿಗಳ ವಿರುದ್ಧ ತನಿಖಾ ಸಂಸ್ಥೆಗಳು ಮೃದು ಧೋರಣೆ ಹೊಂದಿವೆ ಎಂದು ಪತ್ರದಲ್ಲಿ ಬೇಸರ ವ್ಯಕ್ತಪಡಿಸಲಾಗಿದೆ.

  • ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ED ಅಧಿಕಾರ ಎತ್ತಿಹಿಡಿದ ಸುಪ್ರೀಂ – ʻಅಪಾಯಕಾರಿ ತೀರ್ಪುʼ ಎಂದ ವಿಪಕ್ಷಗಳು

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ED ಅಧಿಕಾರ ಎತ್ತಿಹಿಡಿದ ಸುಪ್ರೀಂ – ʻಅಪಾಯಕಾರಿ ತೀರ್ಪುʼ ಎಂದ ವಿಪಕ್ಷಗಳು

    ನವದೆಹಲಿ: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿ ದಾಖಲಾಗಿರುವ ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರವನ್ನು ಎತ್ತಿ ಹಿಡಿದು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿಗೆ ವಿರೋಧ ಪಕ್ಷಗಳು ಬೇಸರ ವ್ಯಕ್ತಪಡಿಸಿವೆ.

    ಪಿಎಂಎಲ್‌ಎ ಅಡಿ ತನಿಖಾ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರವನ್ನು ಸುಪ್ರೀಂ ಕೋರ್ಟ್‌ ನೀಡಿ ತೀರ್ಪು ಹೊರಡಿಸಿದೆ. ಇದು ʼಅಪಾಯಕಾರಿ ತೀರ್ಪುʼ 17 ವಿರೋಧ ಪಕ್ಷಗಳು ಆಕ್ಷೇಪವನ್ನು ವ್ಯಕ್ತಪಡಿಸಿವೆ. ಇದನ್ನೂ ಓದಿ: ಪಿಎಂಎಲ್‌ಎ ಅಡಿ ಬಂಧನ ಮಾಡಬಹುದು – ಇಡಿಗೆ ಸುಪ್ರೀಂನಿಂದ ಸಿಕ್ತು ಪರಮಾಧಿಕಾರ

    ಅಪಾಯಕಾರಿ ತೀರ್ಪು ಅಲ್ಪಕಾಲಿಕವಾಗಿರುತ್ತದೆ. ಸಾಂವಿಧಾನಿಕ ನಿಬಂಧನೆಗಳು ಶೀಘ್ರದಲ್ಲೇ ಮೇಲುಗೈ ಸಾಧಿಸುತ್ತವೆ ಎಂದು ನಾವು ಭಾವಿಸುತ್ತೇವೆ ಎಂದು ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಡಿಎಂಕೆ, ಆಮ್ ಆದ್ಮಿ ಪಕ್ಷ, ಸಿಪಿಐ(ಎಂ), ಸಮಾಜವಾದಿ ಪಕ್ಷ ಮತ್ತು ಆರ್‌ಜೆಡಿ ಪ್ರತಿನಿಧಿಗಳು ಸಹಿ ಹಾಕಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ಕಾನೂನು ದುರುಪಯೋಗದ ಮೂಲಕ ಸೇಡಿನ ರಾಜಕೀಯ ಮಾಡಲಾಗುತ್ತಿದೆ ಎಂದು ಕೇಂದ್ರದ ಆಡಳಿತದ ವಿರುದ್ಧ ವಿಪಕ್ಷಗಳು ಗಂಭೀರ ಆರೋಪ ಮಾಡಿವೆ. ಪಿಎಂಎಲ್‌ಎ ತೀರ್ಪನ್ನು ಮರುಪರಿಶೀಲನೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲು ವಿಪಕ್ಷಗಳು ಮುಂದಾಗಿವೆ.

    ನರೇಂದ್ರ ಮೋದಿ ಸರ್ಕಾರದ ಎಂಟು ವರ್ಷಗಳ ಅವಧಿಯಲ್ಲಿ ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ, ಇ.ಡಿ ದಾಳಿ ಶೇ.26 ಪಟ್ಟು ಹೆಚ್ಚಾಗಿದೆ. ಆದರೆ ಶಿಕ್ಷೆಯ ಪ್ರಮಾಣ ಕಡಿಮೆಯಾಗಿದೆ. 2014 ರಿಂದ ಅಕ್ರಮ ಹಣ ವರ್ಗಾವಣೆ ಆರೋಪದಡಿ 3,010 ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಲಾಯಿತು. ಆ ಪೈಕಿ ಕೇವಲ 23 ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ಹಣಕಾಸು ಸಚಿವಾಲಯವು ರಾಜ್ಯಸಭೆಯಲ್ಲಿ ಹಂಚಿಕೊಂಡ ಅಂಕಿಅಂಶದಲ್ಲಿ ತಿಳಿಸಿವೆ. 112 ಪ್ರಕರಣಗಳಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕಂಡುಬಂದಿಲ್ಲ.

    ನಾವು ನಮ್ಮ ಸರ್ವೋಚ್ಚ ನ್ಯಾಯಾಲಯದ ಮೇಲೆ ಅಪಾರ ಗೌರವ ಹೊಂದಿದ್ದೇವೆ. ಆದರೂ, ತೀರ್ಪಿನ ವಿಚಾರವಾಗಿ ಮರುಪರಿಶೀಲನೆ ಅಗತ್ಯವಿದೆ ಎಂದು ವಿಪಕ್ಷಗಳು ಅಭಿಪ್ರಾಯಪಟ್ಟಿವೆ. ಇದನ್ನೂ ಓದಿ: ಉಪರಾಷ್ಟ್ರಪತಿ ಚುನಾವಣೆ – NDA ಅಭ್ಯರ್ಥಿಗೆ BSP ಬೆಂಬಲ

    ಈ ದೂರಗಾಮಿ ತಿದ್ದುಪಡಿಗಳು ಸರ್ಕಾರದ ಕೈಗಳನ್ನು ಬಲಪಡಿಸಿವೆ. ಇದರಿಂದಾಗಿ ರಾಜಕೀಯ ಸೇಡು ತೀರಿಸಿಕೊಳ್ಳಲು ಆಡಳಿತ ಪಕ್ಷ ತೊಡಗಿಕೊಂಡಿದೆ. ಅತ್ಯುತ್ತಮ ನ್ಯಾಯಾಂಗ ವ್ಯವಸ್ಥೆಯು, ಕಾರ್ಯಾಂಗವು ಬೆಂಬಲಿಸುವ ವಾದಗಳನ್ನು ವಾಸ್ತವಿಕವಾಗಿ ಪುನರುಚ್ಛರಿಸಿರುವುದು ಬೇಸರ ತರಿಸಿದೆ ಎಂದು ವಿಪಕ್ಷಗಳು ಹೇಳಿವೆ.

    ಏನಿದು ಸುಪ್ರೀಂ ತೀರ್ಪು?
    ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌) ಅಡಿಯಲ್ಲಿ ವಿಧಿಸಲಾಗಿರುವ ನಿಬಂಧನೆ ಮತ್ತು ಆರೋಪಿಗಳನ್ನು ಬಂಧಿಸುವ ಜಾರಿ ನಿರ್ದೇಶನಾಲಯದ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು. ಇ.ಡಿ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿತ್ತು.

    ಪಿಎಂಎಲ್‌ಎ ಅಡಿ ದಾಖಲಾಗಿರುವ ಪ್ರಕರಣಗಳಲ್ಲಿ ಇಡಿ ಅಧಿಕಾರವನ್ನು ಸುಪ್ರೀಂ ಎತ್ತಿ ಹಿಡಿದಿದೆ. ತನಿಖೆಗೆ ಪೂರಕವಾಗಿ ಆರೋಪಿಗಳ ಆಸ್ತಿ, ಮನೆ ಮತ್ತು ಕಚೇರಿ ಹಾಗೂ ಸಂಬಂಧಿತ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಬಹುದು. ಕಾಯ್ದೆ ಅಡಿ ಬಂಧನ ಮತ್ತು ಆಸ್ತಿ, ನಗದು ವಶಪಡಿಸಿಕೊಳ್ಳಲು ಇ.ಡಿಗೆ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿತ್ತು. ಇದನ್ನೂ ಓದಿ: 10 ವರ್ಷ ದುಡಿದು SUV ಕಾರು ಖರೀದಿಸಿದ ಅಭಿಮಾನಿ – ಆನಂದ್ ಮಹೀಂದ್ರಾ ಮೆಚ್ಚುಗೆ ಮಾತು

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳಿಂದ ಅಭ್ಯರ್ಥಿಯಾಗಿ ಯಶವಂತ್‌ ಸಿನ್ಹಾ ಆಯ್ಕೆ

    ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳಿಂದ ಅಭ್ಯರ್ಥಿಯಾಗಿ ಯಶವಂತ್‌ ಸಿನ್ಹಾ ಆಯ್ಕೆ

    ನವದೆಹಲಿ: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳ ಮಾಜಿ ಸಚಿವ ಯಶವಂತ್ ಸಿನ್ಹಾ ಅವರು ವಿಪಕ್ಷಗಳ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.

    ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಮತ್ತು ವಿಶಿಷ್ಟವಾದ ವೃತ್ತಿ ಜೀವನದಲ್ಲಿ ಸಿನ್ಹಾ ಅವರು ಸಮರ್ಥ ಆಡಳಿತಗಾರರಾಗಿ, ನಿಪುಣ ಸಂಸದರಾಗಿ ಮತ್ತು ಹಣಕಾಸು, ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಮೆಚ್ಚುಗೆ ಪಡೆದಿದ್ದಾರೆ. ಕೇಂದ್ರ ಸಚಿವರಾಗಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರು ಭಾರತೀಯ ಗಣರಾಜ್ಯದ ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಸ್ವರೂಪ ಮತ್ತು ಅದರ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಅರ್ಹರಾಗಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ಮೋದಿ ಸರ್ಕಾರವು ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಸಂಬಂಧ ಯಾವುದೇ ಗಂಭೀರ ಪ್ರಯತ್ನ ಮಾಡದಿರುವುದಕ್ಕೆ ನಾವು ವಿಷಾದಿಸುತ್ತೇವೆ. ಆದ್ದರಿಂದ ನಾವು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಸಿನ್ಹಾ ಅವರ ಉಮೇದುವಾರಿಕೆಯನ್ನು ಬೆಂಬಲಿಸುವಂತೆ ಮನವಿ ಮಾಡುತ್ತೇವೆ. ಇದರಿಂದಾಗಿ ರಾಷ್ಟ್ರವು ಯೋಗ್ಯವಾದ ರಾಷ್ಟ್ರಪತಿಯನ್ನು ಅವಿರೋಧವಾಗಿ ಆಯ್ಕೆ ಮಾಡಬಹುದಾಗಿದೆ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

    ಸಂಸತ್‌ ಭವನದಲ್ಲಿ ಎನ್‌ಸಿಪಿ ವರಿಷ್ಠ ಶರದ್‌ ಪವಾರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಪಕ್ಷಗಳಿಂದ ಒಮ್ಮತದಿಂದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಯಶವಂತ್‌ ಸಿನ್ಹಾ ಅವರನ್ನು ಆಯ್ಕೆ ಮಾಡಲಾಯಿತು.

    Live Tv

  • ನಮ್ಮ ಅಂತಿಮ ಗುರಿ 2024ರ ಲೋಕಸಭಾ ಚುನಾವಣೆ- ವಿರೋಧ ಪಕ್ಷಗಳಿಗೆ ಸೋನಿಯಾ ಕರೆ

    ನಮ್ಮ ಅಂತಿಮ ಗುರಿ 2024ರ ಲೋಕಸಭಾ ಚುನಾವಣೆ- ವಿರೋಧ ಪಕ್ಷಗಳಿಗೆ ಸೋನಿಯಾ ಕರೆ

    ನವದೆಹಲಿ: ನಮ್ಮೆಲ್ಲರ ಅಂತಿಮ ಗುರಿ 2024ರ ಲೋಕಸಭಾ ಚುನಾವಣೆ ಆಗಿರಬೇಕು ಎಂದು ವಿರೋಧ ಪಕ್ಷಗಳಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಕರೆ ನೀಡಿದ್ದಾರೆ.

    ಈ ಕುರಿತು ಶುಕ್ರವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ ವಿರೋಧ ಪಕ್ಷಗಳಿಗೆ ಕರೆ ನೀಡಿದ್ದಾರೆ. ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಶರತ್ ಪವಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಈ ವೇಳೆ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಸಂಸತ್‍ನಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟಿನ ಬಗ್ಗೆ ನನಗೆ ವಿಶ್ವಾಸವಿದೆ. ಇದರ ಹೊರತಾಗಿಯೂ ದೊಡ್ಡ ಮಟ್ಟದ ರಾಜಕೀಯ ಯುದ್ಧವನ್ನು ಮಾಡಬೇಕಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಸೈನಿಕರ ಮೇಲೆ ದಾಳಿಯಾದ ಮರು ಕ್ಷಣವೇ ಪ್ರತಿದಾಳಿ – ಅಮೆರಿಕ ಅಧ್ಯಕ್ಷ ಬೈಡನ್ ಎಚ್ಚರಿಕೆ

    ನಮ್ಮ ಅಂತಿಮ ಗುರಿ 2024ರ ಲೋಕಸಭಾ ಚುನಾವಣೆ, ಈ ಕುರಿತು ವ್ಯವಸ್ಥಿತವಾಗಿ ಯೋಜನೆ ರೂಪಿಸುವುದನ್ನು ಪ್ರಾರಂಭಿಸಬೇಕಿದೆ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಚಳುವಳಿಯ ಮೌಲ್ಯಗಳು ಮತ್ತು ಸಂವಿಧಾನದ ತತ್ವ, ನಿಬಂಧನೆಗಳನ್ನು ನಂಬುವ ಸರ್ಕಾರವನ್ನು ನೀಡುವ ಉದ್ದೇಶದಿಂದ ಯೋಜನೆ ರೂಪಿಸಬೇಕು ಎಂದು ಹೇಳಿದ್ದಾರೆ.

    ಸಭೆಯ ಬಳಿಕ ಪ್ರತಿಪಕ್ಷಗಳು ಹೇಳಿಕೆ ಬಿಡುಗಡೆ ಮಾಡಿದ್ದು, ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು. ಜಮ್ಮು ಕಾಶ್ಮೀರದಲ್ಲಿನ ಎಲ್ಲ ರಾಜಕೀಯ ಖೈದಿಗಳನ್ನು ಬಿಡುಗಡೆಗೊಳಿಸಬೇಕು. ಕೇಂದ್ರ ಸೇವೆಗಳ ಜಮ್ಮು ಕಾಶ್ಮೀರ ಕೇಡರ್ ಸೇರಿದಂತೆ ಸಂಪೂರ್ಣ ರಾಜ್ಯತ್ವವನ್ನು ಮರುಸ್ಥಾಪಿಸಬೇಕು. ಆದಷ್ಟು ಬೇಗ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಬೇಕು ಎಂದು ವಿರೋಧ ಪಕ್ಷಗಳು ಕರೆ ನಿಡಿವೆ.

    ಮುಂಗಾರು ಅಧಿವೇಶನದ ಕುರಿತು ಹೇಳಿಕೆ ನೀಡಿರುವ ವಿರೋಧ ಪಕ್ಷಗಳು, ಪೆಗಾಸಸ್ ಹಾಗೂ ಕೃಷಿ ಕಾನೂನುಗಳ ಕುರಿತು ಗಲಾಟೆ ಎಬ್ಬಿಸಲಾಗಿತ್ತು. ಮಹಿಳಾ ಸಂಸದೆಯರು ಸೇರಿದಂತೆ ಸಂಸದರು ಮಾರ್ಷಲ್‍ಗಳಿಂದ ಗಾಯಗೊಂಡಿರುವ ಅಭೂತಪೂರ್ವ ದೃಶ್ಯಗಳಿಗೆ ಸಂಸತ್ತು ಸಾಕ್ಷಿಯಾಗಿತ್ತು. ಪ್ರತಿಪಕ್ಷಗಳು ನಿರ್ಣಾಯಕ ಸಮಸ್ಯೆಗಳನ್ನು ಎತ್ತುವ ಹಕ್ಕನ್ನು ನಿರಾಕರಿಸುವುದರ ಜೊತೆಗೆ ಸರ್ಕಾರವೂ ಅಡ್ಡಪಡಿಸುತ್ತಿತ್ತು ಎಂದು ಹೇಳಿವೆ.

    ಸಭೆಯಲ್ಲಿ ಯಾರ್ಯಾರು ಭಾಗವಹಿಸಿದ್ದರು?
    ಡಿಎಂಕೆಯ ಎಂ.ಕೆ.ಸ್ಟಾಲಿನ್, ಟಿಎಂಸಿಯ ಮಮತಾ ಬ್ಯಾನರ್ಜಿ, ಜೆಎಂಎಂನ ಹೇಮಂತ್ ಸೋರೆನ್, ಶಿವಸೇನೆಯ ಉದ್ಧವ್ ಠಾಕ್ರೆ, ಎನ್‍ಸಿಪಿಯ ಶರದ್ ಪವಾರ್, ಲೋಕತಾಂತ್ರಿಕ ಜನತಾದಳದ ಶರದ್ ಯಾದವ್, ಸಿಪಿಐ(ಎಂ)ನ ಸೀತಾರಾಮ್ ಯಚೂರಿ ಭಾಗವಹಿಸಿದ್ದರು. ಎಸ್‍ಪಿಯಿಂದ ಯಾರೂ ಭಾಗವಹಿಸಿರಲಿಲ್ಲ. ಒಟ್ಟು 19 ಪಕ್ಷಗಳ ಪ್ರತಿನಿಧಿಗಳು ಸೋನಿಯಾ ಗಾಂಧಿಯವರೊಂದಿಗಿನ ಸಭೆಯಲ್ಲಿ ಭಾಗವಹಿಸಿದ್ದರು.

  • ಪೌರತ್ವ ತಿದ್ದುಪಡಿ ಮಸೂದೆ, ಕೆಲ ವಿರೋಧ ಪಕ್ಷಗಳು ಪಾಕಿಸ್ತಾನದ ರೀತಿ ಮಾತನಾಡುತ್ತಿವೆ – ಮೋದಿ

    ಪೌರತ್ವ ತಿದ್ದುಪಡಿ ಮಸೂದೆ, ಕೆಲ ವಿರೋಧ ಪಕ್ಷಗಳು ಪಾಕಿಸ್ತಾನದ ರೀತಿ ಮಾತನಾಡುತ್ತಿವೆ – ಮೋದಿ

    ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಕುರಿತು ಕೆಲವು ವಿರೋಧ ಪಕ್ಷಗಳು ಪಾಕಿಸ್ತಾನದ ರೀತಿಯಲ್ಲೇ ಮಾತನಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಬುಧವಾರ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಪೌರತ್ವ ತಿದ್ದುಪಡಿ ಮಸೂದೆ ಕುರಿತು ಕೆಲವು ವಿರೋಧ ಪಕ್ಷಗಳು ಪಾಕಿಸ್ತಾನದ ರೀತಿಯಲ್ಲೇ ಮಾತನಾಡುತ್ತಿವೆ. ಆದರೆ ಇದು ಐತಿಹಾಸಿಕ ನಿರ್ಧಾರವಾಗಿದ್ದು, ಪೌರತ್ವ ತಿದ್ದುಪಡಿ ಮಸೂದೆ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ನಿರ್ಧಾರವಾಗಿದೆ ಎಂದು ಬಣ್ಣಿಸಿದ್ದಾರೆ.

    ಧಾರ್ಮಿಕ ಕಿರುಕುಳ ಅನುಭವಿಸುತ್ತಿರುವವರಿಗೆ ಈ ಮಸೂದೆಯಿಂದ ಶಾಶ್ವತ ಪರಿಹಾರ ಸಿಗಲಿದೆ. ಆದರೆ ಈ ವಿಚಾರವಾಗಿ ಕೆಲ ವಿರೋಧ ಪಕ್ಷಗಳು ಸುಖಾಸುಮ್ಮನೆ ಗದ್ದಲ ಎಬ್ಬಿಸುವ ಮೂಲಕ ಪಾಕಿಸ್ತಾನ ರೀತಿಯಲ್ಲಿ ಮಾತನಾಡುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಪೌರತ್ವ ತಿದ್ದುಪಡಿ ಮಸೂದೆಯನ್ನು ಡಿಸೆಂಬರ್ 9 ರಂದು ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದು, 311 ಮತಗಳಿಂದ ಪಾಸ್ ಸಹ ಆಗಿದೆ. ಆದರೆ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಭಾರೀ ಗದ್ದಲ ಎಬ್ಬಿಸಿದ್ದವು. ಈ ವೇಳೆ ಎಐಎಂಐಎಂ ಪಕ್ಷದ ನಾಯಕ ಅಸಾದುದ್ದಿನ್ ಓವೈಸಿ ಮಸೂದೆಯ ಪ್ರತಿಯನ್ನೇ ಹರಿದು ಹಾಕುವ ಮೂಲಕ ತೀವ್ರ ಚರ್ಚೆಗೆ ಕಾರಣರಾಗಿದ್ದರು.

    ವಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿ, ಇದು ಅಲ್ಪಸಂಖ್ಯಾತ ವಿರೋಧಿ ಎಂದು ಕರೆದರು. ಆರೋಪವನ್ನು ತಳ್ಳಿ ಹಾಕಿದ ಅಮಿತ್ ಶಾ, ಪೌರತ್ವ ತಿದ್ದುಪಡಿ ಮಸೂದೆಯು ಶೇ.0.001 ರಷ್ಟು ಕೂಡ ದೇಶದ ಅಲ್ಪಸಂಖ್ಯಾತ ಸಮುದಾಯದ ವಿರುದ್ಧವಿಲ್ಲ ಎಂದು ಸ್ಪಷ್ಟಪಡಿಸಿದ್ದರು.

    ಆರು ದಶಕಗಳ ಹಳೆಯ ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದ್ದು, ಬಾಂಗ್ಲಾದೇಶ, ಅಫ್ಘಾನಿಸ್ಥಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವುದು ತಿದ್ದುಪಡಿಯ ಉದ್ದೇಶವಾಗಿದೆ.

    ವಿಪಕ್ಷಗಳಿಗೆ ಶಾ ಸುದೀರ್ಘ ಉತ್ತರ:
    ವಿಪಕ್ಷಗಳ ಆರೋಪಗಳಿಗೆ ಅಮಿತ್ ಶಾ ಉತ್ತರಿಸಲು ಆರಂಭಿಸಿ, ಈ ಮಸೂದೆ ಯಾವುದೇ ರೀತಿಯಲ್ಲಿ ಅಲ್ಪಸಂಖ್ಯಾತರ ವಿರುದ್ಧವಲ್ಲ. ಕಾಂಗ್ರೆಸ್ ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸದಿದ್ದರೆ, ಪೌರತ್ವ ಮಸೂದೆಯನ್ನು ತರುವ ಅಗತ್ಯವೇ ಇರಲಿಲ್ಲ. ಸಮಾನತೆಯ ಕಾನೂನು ಇದ್ದರೆ ಅಲ್ಪಸಂಖ್ಯಾತರಿಗೆ ಹೇಗೆ ಸವಲತ್ತುಗಳು ಸಿಗುತ್ತವೆ? ಸಂವಿಧಾನದ 14ನೇ ವಿಧಿ ಶಿಕ್ಷಣ ಮತ್ತು ಇತರ ವಿಷಯಗಳಲ್ಲಿ ಉಲ್ಲಂಘನೆಯಾಗಿಲ್ಲವೇ? ಎಲ್ಲ ಉಲ್ಲಂಘನೆಗಳನ್ನು ಗಣನೆಗೆ ತೆಗೆದುಕೊಂಡ ನಂತರವೇ ಮಸೂದೆಯನ್ನು ರಚಿಸಲಾಗಿದೆ ಎಂದು ತಿಳಿಸಿದರು.

    ಅಫ್ಘಾನಿಸ್ತಾನದ ಸಂವಿಧಾನದ 2ನೇ ವಿಧಿ ಪ್ರಕಾರ, ಆ ದೇಶ ಇಸ್ಲಾಮಿಕ್ ಆಗಿದೆ. ಪಾಕಿಸ್ತಾನ ಕೂಡ ಇಸ್ಲಾಮಿಕ್ ಆಗಿದೆ. ಬಾಂಗ್ಲಾದೇಶದ ಸಂವಿಧಾನದಲ್ಲಿ ಇಸ್ಲಾಂ ಧರ್ಮ ಎಂದು ತಿಳಿಸಲಾಗಿದೆ. ನಾನು ಇದನ್ನು ಉಲ್ಲೇಖಿಸುತ್ತಿದ್ದೇನೆ. ಏಕೆಂದರೆ ಈ ಮೂರು ದೇಶಗಳ ಸಂವಿಧಾನವು ಧರ್ಮವನ್ನು ಉಲ್ಲೇಖಿಸುತ್ತದೆ. ಆದರೂ ಈ ಮೂರು ದೇಶಗಳಿಂದ ನಿರಾಶ್ರಿತರು ಇಲ್ಲಿಗೆ ಬರುತ್ತಿದ್ದಾರೆ ಎಂದು ಹೇಳಿದರು.

    ತುಳಿತಕ್ಕೊಳಗಾದ ಮುಸ್ಲಿಮರಿಗೆ ಆಶ್ರಯ ನೀಡುವ ಕುರಿತು ಪ್ರತಿಕ್ರಿಯಿಸಿದ ಅಮಿತ್ ಶಾ, ಮೂರು ನೆರೆಹೊರೆಯ ದೇಶಗಳ ಯಾವುದೇ ಮುಸ್ಲಿಂ ಧಾರ್ಮಿಕ ಕಿರುಕುಳದ ಆಧಾರದ ಮೇಲೆ ಪೌರತ್ವವನ್ನು ಕೋರಿದರೆ, ನಾವು ಮುಕ್ತ ಮನಸ್ಸಿನಿಂದ ಪರಿಗಣಿಸುತ್ತೇವೆ. ಪ್ರಧಾನಿ ಮೋದಿ ಸರ್ಕಾರದ ಹಿಂದಿನ ಅವಧಿಯಲ್ಲಿ ಪೌರತ್ವ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದರೂ ರಾಜ್ಯಸಭೆಯಲ್ಲಿ ಸಿಲುಕಿಕೊಂಡಿತ್ತು. ಈ ಮಸೂದೆಯನ್ನು ಕೇಂದ್ರ ಸಚಿವ ಸಂಪುಟ ಡಿಸೆಂಬರ್ 4ರಂದು ಅಂಗೀಕರಿಸಿತ್ತು. ಈ ಮಸೂದೆಯು ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಮುಸ್ಲಿಮೇತರರಿಗೆ (ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು) ಭಾರತೀಯ ಪೌರತ್ವ ನೀಡಲು ಅನುಕೂಲವಾಗಲಿದೆ ಎಂದು ತಿಳಿಸಿದರು.

  • ವಿಪಕ್ಷ ನಾಯಕರಿಗೆ ಕನಸಿನಲ್ಲೂ ಯಡಿಯೂರಪ್ಪ ಬರ್ತಾರೆ: ಬೊಮ್ಮಾಯಿ ಟಾಂಗ್

    ವಿಪಕ್ಷ ನಾಯಕರಿಗೆ ಕನಸಿನಲ್ಲೂ ಯಡಿಯೂರಪ್ಪ ಬರ್ತಾರೆ: ಬೊಮ್ಮಾಯಿ ಟಾಂಗ್

    ದಾವಣಗೆರೆ: ವಿರೋಧ ಪಕ್ಷಗಳ ನಾಯಕರಿಗೆ ಕನಸಿನಲ್ಲೂ ಯಡಿಯೂರಪ್ಪ ಬರ್ತಾರೆ, ಅದಕ್ಕಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ದಾವಣಗೆರೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಯಿ ವ್ಯಂಗ್ಯವಾಡಿದ್ದಾರೆ.

    ರಾಣಿಬೆನ್ನೂರು ಉಪ ಚುನಾವಣೆಯ ಪ್ರಚಾರಕ್ಕೆ ಹೊರಡುವ ಮುನ್ನ ಜಿಎಂಐಟಿ ಗೆಸ್ಟ್ ಹೌಸ್‍ನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಉಪಚುನಾವಣೆಯಲ್ಲಿ ಹಣದ ಹೊಳೆಯನ್ನು ಹರಿಸುತ್ತಾರೆ ಎಂದು ವಿರೋಧ ಪಕ್ಷ ನಾಯಕರು ಆರೋಪ ಮಾಡುತ್ತಿದ್ದಾರೆ. ಆರೋಪ ಮಾಡುವ ಎರಡು ಪಕ್ಷಗಳು ಈ ರೀತಿ ಮಾಡುವಂತಹ ಸಾಧ್ಯತೆ ಇರಬಹುದು ಎಂದು ನನಗೆ ಅನಿಸುತ್ತೆ, ಆದ್ದರಿಂದ ಅವರು ಈ ರೀತಿ ಹೇಳುತ್ತಿದ್ದಾರೆ. ಕಾನೂನಿನ ಪ್ರಕಾರ ಚುನಾವಣೆ ನಡೆಯಬೇಕು ಹಾಗೂ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಾರೆ ಎಂದು ತಿರುಗೇಟು ಕೊಟ್ಟರು.

    ವಿರೋಧ ಪಕ್ಷಗಳಿಗೆ ಗೊತ್ತಾಗಿದೆ 15 ಕ್ಕೆ 15 ಕ್ಷೇತ್ರಗಳಲ್ಲಿ ಸೋಲು ಖಚಿತ ಎಂದು. ಅದಕ್ಕೆ ನಾವು ಹೊಸ ಸರ್ಕಾರ ಮಾಡುತ್ತೇವೆ ಎಂದು ಹೊಸ ರಾಗ ಪ್ರಾರಂಭಿಸಿದ್ದಾರೆ. ಒಂದು ವಾರದಿಂದ ಸರ್ಕಾರ ಮಾಡಲ್ಲ ಎಂದವರು ಈಗ ಸರ್ಕಾರ ರಚಿಸುತ್ತೇವೆ ಎಂದಿದ್ದಾರೆ. ಸೋಲುವ ಭೀತಿಯಿಂದ ನಮ್ಮ ಮತದಾರರಾದರೂ ನಮ್ಮ ಪಕ್ಷಕ್ಕೆ ಮತಹಾಕಲಿ ಎಂದು ಈ ರೀತಿ ಮಾತನಾಡುತ್ತಿದ್ದಾರೆ. ಇದಕ್ಕಾಗಿ ಸಂಬಂಧ ಇದ್ದವರು, ಇಲ್ಲದವರು ದಿನಕ್ಕೆ ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

    ಇಷ್ಟೇ ಅಲ್ಲದೆ ಕಾಂಗ್ರೆಸ್ಸಿನ ಹರಿಪ್ರಸಾದ್ ಹಾಗೂ ಮೊಯ್ಲಿ ಅವರ ಇತ್ತೀಚಿನ ಮಾತುಗಳನ್ನು ಕೇಳಿದರೆ ಸೋಲುತ್ತೇವೆ ಎನ್ನುವುದು ಅವರಿಗೆ ಗೊತ್ತಾಗಿದೆ ಅನಿಸುತ್ತೆ. ಕಾಂಗ್ರೆಸ್ಸಿನಲ್ಲಿ ಅಂತರಿಕ ಹೊಂದಾಣಿಕೆ ಇಲ್ಲ ಎನ್ನುವುದು ಈಗ ಹೊರ ಬಿದ್ದಿದೆ. ಸಿದ್ದರಾಮಯ್ಯ ಎಲ್ಲಾ ಕಡೆ ಒಬ್ಬರೇ ಓಡಾಡುತ್ತಿದ್ದಾರೆ. ಉಳಿದವರು ಪತ್ರಿಕಾಗೋಷ್ಠಿಗಷ್ಟೇ ಸೀಮಿತರಾಗಿದ್ದಾರೆ. ಇದು ಕಾಂಗ್ರೆಸ್ಸಿನವರಿಗೆ ಸೋಲಿನ ಬಗ್ಗೆ ಸ್ಪಷ್ಟವಾಗಿದೆ ಎನ್ನುವುದನ್ನು ತೋರಿಸುತ್ತದೆ ಎಂದು ಸಚಿವರು ಟಾಂಗ್ ಕೊಟ್ಟರು.

    ಕಾಂಗ್ರೆಸ್ ಶಾಸಕರು ಅಸಮಧಾನಗೊಂಡಿದ್ದು, ಅವರಲ್ಲಿ ನಂಬಿಕೆ ಮೂಡಿಸಲು ಅವರ ನಾಯಕರು ಸರ್ಕಾರ ರಚನೆ ಮಾಡುತ್ತೇವೆ ಎನ್ನುತ್ತಾರೆ. ಈ ಮಧ್ಯೆ ಖರ್ಗೆಯವರ ದಿಢೀರ್ ಪ್ರವೇಶ ಸರ್ಕಾರ ರಚನೆಗಾಗಿ ಅಲ್ಲ ಎನ್ನುವುದು ಗೊತ್ತಿದೆ. ಖರ್ಗೆಯವರು ಒಳ್ಳೆ ಸುದ್ದಿ ನೀಡುತ್ತೇವೆ ಎನ್ನುತ್ತಾರೆ. ಯಾರಿಗೆ ಒಳ್ಳೆ ಸುದ್ದಿ? ರಾಜ್ಯದ ಜನತೆಗಿರಬೇಕು ಅಷ್ಟೇ ಎಂದರು. ಹಾಗೆಯೇ ಇದೇ ಸಂದರ್ಭದಲ್ಲಿ ಜೆಡಿಎಸ್ ನ ಶಾಸಕರು ಬಿಜೆಪಿ ಸೇರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡಲು ಗೃಹ ಸಚಿವರು ಹಿಂದೇಟು ಹಾಕಿದರು.

  • ಜಮ್ಮು ಕಾಶ್ಮೀರ ಚೇತರಿಸಿಕೊಳ್ಳಲು ಸಮಯ ಬೇಡವೇ – ರಾಹುಲ್ ವಿರುದ್ಧ ಮಾಯಾವತಿ ಗುಡುಗು

    ಜಮ್ಮು ಕಾಶ್ಮೀರ ಚೇತರಿಸಿಕೊಳ್ಳಲು ಸಮಯ ಬೇಡವೇ – ರಾಹುಲ್ ವಿರುದ್ಧ ಮಾಯಾವತಿ ಗುಡುಗು

    ನವದೆಹಲಿ: ಜಮ್ಮು ಕಾಶ್ಮೀರ ಈಗ ಚೇತರಿಸಿಕೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ, ರಾಜ್ಯಪಾಲರ ಅನುಮತಿ ಪಡೆಯದೇ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಸರಿಯೇ? ಇದರಿಂದ ಅವರಿಗೆ ರಾಜಕೀಯ ಮಾಡಲು ಅವಕಾಶ ನೀಡಿದಂತಾಗುವುದಿಲ್ಲವೇ ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಇತರ ನಾಯಕರ ವಿರುದ್ಧ ಬಿಎಸ್‍ಪಿ ನಾಯಕಿ ಮಾಯಾವತಿ ಹರಿಹಾಯ್ದಿದ್ದಾರೆ.

    ಈ ಕುರಿತು ಸರಣಿ ಟ್ವೀಟ್ ಮಾಡಿ ರಾಹುಲ್ ಗಾಂಧಿ ಹಾಗೂ ಇತರ ವಿರೋಧ ಪಕ್ಷಗಳ ನಾಯಕರ ಕ್ರಮವನ್ನು ಖಂಡಿಸಿರುವ ಅವರು, ಜಮ್ಮು ಕಾಶ್ಮೀರಕ್ಕೆ ಪ್ರವಾಸ ಕೈಗೊಳ್ಳುವ ಮೊದಲು ವಿರೋಧ ಪಕ್ಷಗಳ ಗುಂಪು ಯೋಚಿಸಬೇಕಿತ್ತು ಎಂದು ಕಿಡಿಕಾರಿದ್ದಾರೆ. ಈ ಮೂಲಕ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರದ ಪರವಾಗಿ ಮತ್ತೊಮ್ಮೆ ಬ್ಯಾಟ್ ಮಾಡಿದ್ದಾರೆ.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರೆ ವಿರೋಧ ಪಕ್ಷಗಳ ನಾಯಕರು ಶನಿವಾರ ಜಮ್ಮು ಕಾಶ್ಮೀರದ ಸ್ಥಿತಿಗತಿ ಅರಿಯಲು ಶ್ರೀನಗರಕ್ಕೆ ತೆರಳಿದ್ದರು. ಇದಕ್ಕೆ ರಾಜಕೀಯ ವಲಯದಲ್ಲಿ ಆರೋಪ ಪ್ರತ್ಯಾರೋಪಗಳು ವ್ಯಕ್ತವಾಗುತ್ತಿವೆ. ಇದೀಗ ಮಾಯಾವತಿ ಅವರು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ವಿರೋಧ ಪಕ್ಷದವರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುವ ಮೂಲಕ ಈ ವಿಷಯದ ಬಗ್ಗೆ ರಾಜಕೀಯ ಮಾಡಲು ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಅನುಮತಿ ಪಡೆಯದೇ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯಪಾಲರಿಗೆ ರಾಜಕೀಯ ಮಾಡಲು ಅವಕಾಶ ಸಿಗಲಿಲ್ಲವೇ? ಅಲ್ಲಿಗೆ ಹೋಗುವ ಮುನ್ನ ಸ್ವಲ್ಪ ಯೋಚಿಸಿದ್ದರೆ ಸೂಕ್ತವಾಗಿತ್ತು ಎಂದು ಹರಿಹಾಯ್ದಿದ್ದಾರೆ.

    ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತದ ಸಮಾನತೆ, ಐಕ್ಯತೆ ಮತ್ತು ಸಮಗ್ರತೆಯ ಪ್ರತಿಪಾದಕರಾಗಿದ್ದರು. ಹೀಗಾಗಿಯೇ ನಾನು ಜಮ್ಮು ಕಾಶ್ಮೀರದ 370ನೇ ವಿಧಿಯ ಪರವಾಗಿದ್ದೇನೆ ಎಂದು ಬಿಎಸ್‍ಪಿ ನಾಯಕಿ ಮಾಯಾವತಿ ತಿಳಿಸಿದ್ದರು.

    ದೇಶದಲ್ಲಿ ಸಂವಿಧಾನ ಜಾರಿಗೆ ಬಂದು 69 ವರ್ಷಗಳ ನಂತರ 370ನೇ ವಿಧಿ ರದ್ದುಪಡಿಸಲಾಗಿದೆ. ಅಲ್ಲಿನ ಪರಿಸ್ಥಿತಿ ಸಾಮಾನ್ಯವಾಗಲು ಇನ್ನೂ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ನ್ಯಾಯಾಲಯವೂ ಸಹ ಇದನ್ನು ಒಪ್ಪಿಕೊಂಡಿದೆ. ಹೀಗಾಗಿ ಸ್ವಲ್ಪ ಕಾಯುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ತಂಡ ಜಮ್ಮು ಕಾಶ್ಮೀರದ ಪರಿಸ್ಥಿತಿಯನ್ನು ಅರಿಯಲು ಶನಿವಾರ ಶ್ರೀನಗರಕ್ಕೆ ತೆರಳಿತ್ತು. ಆಗ ಶ್ರೀನಗರ ವಿಮಾನನಿಲ್ದಾಣದಿಂದ ಹೊರಗೆ ಕಾಲಿಡಲು ಭದ್ರತಾ ಸಿಬ್ಬಂದಿ ಬಿಟ್ಟಿಲ್ಲ. ಹೀಗಾಗಿ ಒಂದು ಗಂಟೆಯೊಳಗೇ ವಿರೋಧ ಪಕ್ಷಗಳ ನಾಯಕರ ತಂಡ ದೆಹಲಿಗೆ ಮರಳಿತ್ತು.

    370ನೇ ವಿಧಿಯನ್ನು ರದ್ದುಪಡಿಸಿದ ಕೇಂದ್ರ ಸರ್ಕಾರದ ಕ್ರಮಕ್ಕೆ ಬಿಎಸ್‍ಪಿಯ ಮಾಯಾವತಿ, ಬಿಜು ಜನತಾದಳ, ಎಐಎಡಿಎಂಕೆ, ಜಗನ್ ಮೋಹನ್ ರೆಡ್ಡಿಯವರ ವೈಎಸ್‍ಆರ್ ಕಾಂಗ್ರೆಸ್, ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಾರ್ಟಿ, ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಬೆಂಬಲ ಸೂಚಿಸಿ, ಸಂಸತ್‍ನಲ್ಲಿ ಬಹುಮತ ಸಾಬೀತಿಗೆ ನೆರವಾಗಿದ್ದವು. ಆದರೆ, ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಜಮ್ಮು ಕಾಶ್ಮೀರದಲ್ಲಿ ಭಾರೀ ನಿರ್ಬಂಧಗಳನ್ನು ಹೇರಲಾಗಿದೆ ಎಂದು ವಿರೋಧಿಸಿದ್ದವು.

  • ಪಕ್ಷ, ವಿಪಕ್ಷ ಬಿಟ್ಟು ನಿಷ್ಪಕ್ಷವಾಗಿ ಅಭಿವೃದ್ಧಿಗೆ ಕೈಜೋಡಿಸಿ: ಮೋದಿ ಮನವಿ

    ಪಕ್ಷ, ವಿಪಕ್ಷ ಬಿಟ್ಟು ನಿಷ್ಪಕ್ಷವಾಗಿ ಅಭಿವೃದ್ಧಿಗೆ ಕೈಜೋಡಿಸಿ: ಮೋದಿ ಮನವಿ

    ನವದೆಹಲಿ: ಪಕ್ಷ, ವಿಪಕ್ಷ ಬಿಟ್ಟು ನಿಷ್ಪಕ್ಷವಾಗಿ ಅಭಿವೃದ್ಧಿಗೆ ಕೈಜೋಡಿಸಿ ಎಂದು ಪ್ರಧಾನಿ ನರೇಂದ್ರ ಮೋದಿ, ವಿರೋಧ ಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ.

    ಸಂಸತ್ ಆವರಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಂಸತ್ತಿನ ಘನತೆ ಉಳಿಸುವ ನಿಟ್ಟಿನಲ್ಲಿ ಮುಂದಿನ ಐದು ವರ್ಷ ಅಧಿಕಾರ ನಡೆಸುತ್ತೇವೆ. ಸಂಸತ್‍ನಲ್ಲಿ ವಿರೋಧ ಪಕ್ಷ ಪಾತ್ರ ಪ್ರಮುಖವಾಗಿದೆ. ಪ್ರತಿಪಕ್ಷಗಳು ತಮ್ಮ ಸಂಖ್ಯೆಯ ಬಗ್ಗೆ ಚಿಂತಿಸುವ ಅವಶ್ಯಕತೆಯಿಲ್ಲ. ಅವರು ಸಂಸತ್‍ನಲ್ಲಿ ಸಕ್ರಿಯವಾಗಿ ಮಾತನಾಡುತ್ತಾರೆ ಹಾಗೂ ಭಾಗವಹಿಸುತ್ತಾರೆ ಎಂಬ ವಿಶ್ವಾಸ ನನಗೆ ಇದೆ ಎಂದು ತಿಳಿಸಿದರು.

    ಬಹಳ ವರ್ಷಗಳ ನಂತರ ಒಂದು ಪಕ್ಷಕ್ಕೆ ಭಾರೀ ಬಹುಮತವನ್ನು ದೇಶದ ಜನತೆ ನೀಡಿದ್ದಾರೆ. ಇದು ಅವರ ಸೇವೆಗೆ ಸಿಕ್ಕ ಉತ್ತಮ ಅವಕಾಶ. ಜನರ ಪರವಾಗಿರುವ ನಿರ್ಧಾರಗಳನ್ನು ಬೆಂಬಲಿಸುವಂತೆ ಎಲ್ಲ ವಿಪಕ್ಷಗಳಿಗೆ ಕೇಳಿಕೊಳ್ಳುತ್ತೇನೆ ಎಂದು ಮೋದಿ ಹೇಳಿದರು.

    ಈ ಬಾರಿಯ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸಂಸತ್‍ನಲ್ಲಿದ್ದಾರೆ. ಇದು ನನಗೆ ಬಹಳ ಖುಷಿ ತಂದಿದೆ ಎಂದು ತಿಳಿಸಿದರು.

    17ನೇ ಲೋಕಸಭೆಯ ಮೊಟ್ಟ ಮೊದಲ ಅಧಿವೇಶನ ಇಂದು ಆಂಭವಾಗಿದ್ದು, ಸಂಸತ್‍ಗೆ ಆಯ್ಕೆಯಾದ 542 ಸಂಸದರು ಪ್ರಮಾಣವಚನ ಸ್ವೀಕರಿಸಿದರು. ಕರ್ನಾಟಕದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರಾದ ಸದಾನಂದಗೌಡ ಹಾಗೂ ಸುರೇಶ್ ಅಂಗಡಿ ಅವರು ಕನ್ನಡದಲ್ಲಿಯೇ ಸಂಸತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಇತರೇ ಸಂಸದರು ಮೇಜು ಕುಟ್ಟಿ ಸ್ವಾಗತಿಸಿದರು.

    542 ಸಂಸದರಲ್ಲಿ 267 ಮಂದಿ ಲೋಕಸಭೆಗೆ ಹೊಸ ಸದಸ್ಯರಾಗಿದ್ದು, ಅತೀ ದೊಡ್ಡ ಪಕ್ಷವಾಗಿರುವ ಬಿಜೆಪಿ 303 ಸದಸ್ಯ ಬಲದ ಪ್ರಚಂಡ ಬಹುಮತ ಹೊಂದಿದೆ. ಆದರೆ ಕಳೆದ ಬಾರಿಯಂತೆ ಈ ಬಾರಿಯೂ ಲೋಕಸಭೆಯಲ್ಲಿ ಯಾವುದೇ ಅಧಿಕೃತ ವಿಪಕ್ಷವಿಲ್ಲ. ಕಾಂಗ್ರೆಸ್ 52 ಸಂಸದರನ್ನು ಹೊಂದಿದ್ದರೂ ಅಧಿಕೃತ ವಿಪಕ್ಷ ಸ್ಥಾನಕ್ಕೆ 55 ಸ್ಥಾನಗಳು ಅಗತ್ಯವಿದೆ. ಉಳಿದಂತೆ ಡಿಎಂಕೆ -23, ಟಿಎಂಸಿ -22, ಜೆಡಿಯು 16, ಬಿಎಸ್‍ಪಿ -10, ವೈಎಸ್‍ಆರ್ಪಿ -22, ಶಿವಸೇನೆ -18, ಬಿಜೆಡಿ-12, ಟಿಆರ್‍ಎಸ್ -9, ಎಲ್‍ಜೆಪಿ – 6 ಸಂಸದರನ್ನು ಹೊಂದಿದೆ.