Tag: Orchestra

  • ಆರ್ಕೇಸ್ಟ್ರಾದಲ್ಲಿ ಫ್ಲೆಕ್ಸ್ ಹಾಕಿಸೋ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ

    ಆರ್ಕೇಸ್ಟ್ರಾದಲ್ಲಿ ಫ್ಲೆಕ್ಸ್ ಹಾಕಿಸೋ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ

    ಮಂಡ್ಯ: ಆರ್ಕೇಸ್ಟ್ರಾದಲ್ಲಿ ಫ್ಲೆಕ್ಸ್ ಹಾಕಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಜಗಳದಲ್ಲಿ ಯುವಕನನ್ನು ಆತನ ಸ್ನೇಹಿತರೇ ಹೊಡೆದು ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ (Mandya) ನಡೆದಿದೆ.

    ಮೃತ ಯುವಕನನ್ನು ಅರುಣ್(22) ಎಂದು ಗುರುತಿಸಲಾಗಿದ್ದು, ಈತ ತನ್ನ 18ನೇ ವಯಸ್ಸಿನಲ್ಲೇ ಪೊಲೀಸ್‍ರ ರೌಡಿಶೀಟರ್‌ನ ಲಸ್ಟ್‌ನಲ್ಲಿ ಸೇರಿಕೊಂಡಿದ್ದ. ಆಗಾಗ ಊರಿನಲ್ಲಿ ನಡೆಯುತ್ತಿದ್ದ ಸಣ್ಣ-ಪುಟ್ಟ ಗಲಾಟೆಯಲ್ಲಿ ಭಾಗಿಯಾಗುತ್ತಿದ್ದ. ಇದೀಗ ಜೊತೆಯಲ್ಲಿ ಇದ್ದವರೇ ಆತನನ್ನು ಹೊಡೆದು ಕೊಲೆ ಗೈದಿದ್ದಾರೆ. ಇದನ್ನೂ ಓದಿ: ಮಹಾನಗರ ಪಾಲಿಕೆ ಚುನಾವಣೆ ಟಿಕೆಟ್ ಮಾರಾಟ – ಆಪ್ ವಿರುದ್ಧ ಬಿಜೆಪಿ ಗಂಭೀರ ಆರೋಪ

    ಅರುಣ್ ಕೊಲೆಗೆ ಇದೇ ತಿಂಗಳ 19 ರಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆದ ಆರ್ಕೇಸ್ಟ್ರಾವೇ ಕಾರಣ. ಅರುಣ್ ಹಾಗೂ ಆತನ ಸ್ನೇಹಿತರು ಈ ಹಿಂದೆ ಶಾಸಕ ಡಿಸಿ ತಮ್ಮಣ್ಣ ಅವರ ಬೆಂಬಲಿಗರಾಗಿದ್ದರು. ಆದರೆ ಕನ್ನಡ ರಾಜ್ಯೋತ್ಸವದ ಆರ್ಕೇಸ್ಟ್ರಾದಲ್ಲಿ ದೊಡ್ಡರಸಿನಕೆರೆ ಗ್ರಾಮದಲ್ಲಿ ಸಮಾಜ ಸೇವಕ ಕದಲೂರು ಉದಯ್ ಅವರ ಫ್ಲೆಕ್ಸ್ ಮಾತ್ರ ಹಾಕಿದ್ದಾರೆ. ಈ ಬಗ್ಗೆ ಅರುಣ್ ಸ್ನೇಹಿತರೊಂದಿಗೆ ಇಷ್ಟು ದಿನ ನೀವು ತಮ್ಮಣ್ಣ ಜೊತೆಗೆ ಇದ್ದು ಈಗ ಉದಯ್ ಫೋಟೋ ಹಾಕಿಸಿದ್ದೀರಾ ಎಂದು ಮಾತನಾಡಿದ್ದಾನೆ. ಇದೇ ಜಗಳ ನಡೆದು ಅರುಣ್‍ನನ್ನು ದೊಡ್ಡರಸಿನಕೆರೆ ಗ್ರಾಮದ ದೊಡ್ಡಯ್ಯ, ದೇವರಾಜು, ಅಭಿ, ಗಜ, ಬೆಳ್ಳಾ ರಾಘುಳಿ ಸೇರಿದಂತೆ 8 ಮಂದಿ ನನ್ನ ಮಗನನ್ನು ಹೊಡೆದು ಕೊಲೆ ಮಾಡಿದ್ದಾರೆ ಎಂದು ಅರಣ್ ತಂದೆ ರಮೇಶ್ ಆರೋಪಿಸಿದ್ದಾರೆ.

    ಭಾನುವಾರ ಸಂಜೆ ಅರುಣ್ ಮೇಲೆ ದೊಡ್ಡರಸಿನಕೆರೆ ಗ್ರಾಮದ ಸರ್ಕಲ್‍ನಲ್ಲಿ ನಾಲ್ವರು ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಬಳಿಕ ಗ್ರಾಮಸ್ಥರು ಗಲಾಟೆ ಬಿಡಿಸಿ ಕಳುಹಿಸಿದ್ದಾರೆ. ನಂತರ ಅರುಣ್‍ನನ್ನು ಕೆ.ಎಂ.ದೊಡ್ಡಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ದೇವರಹಳ್ಳಿ ಬಳಿಕ ಮತ್ತೆ ಅಡ್ಡಗಟ್ಟಿ ಹಲ್ಲೆ ಮಾಡಲಾಗಿದೆ. ದೊಣ್ಣೆ, ಕಲ್ಲಿನಿಂದ ಹಲ್ಲೆ ಮಾಡಿರುವ ಕಾರಣ ಅರುಣ್ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾನೆ. ನಂತರ ಅರುಣ್‍ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅರುಣ್ ಸಾವನ್ನಪ್ಪಿದ್ದಾನೆ. ಸದ್ಯ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೆಎಂ ದೊಡ್ಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನೂ ಅರುಣ್ ಮೇಲೆ ಹಲ್ಲೆ ಮಾಡಿದವರ ಮನೆ ಮೇಲೆ ಅರುಣ್ ಸ್ನೇಹಿತರು ಕಲ್ಲು ಎಸೆದು ಕಿಟಕಿ ಗಾಜುಗಳನ್ನು ಪುಡಿಗೊಳಿಸಿದ್ದಾರೆ.

    ಒಟ್ಟಾರೆ ಮೀಸೆ ಚಿಗುರೋ ವಯಸ್ಸಿನಲ್ಲಿ ರೌಡಿಶೀಟರ್ ಆಗಿದ್ದವ, ಇದೀಗ ಆರ್ಕೇಸ್ಟ್ರಾದ ಫ್ಲೆಕ್ಸ್‌ ವಿಚಾರಕ್ಕೆ ಬಾಳಿ ಬದುಕಬೇಕಾದವ ಹೆಣವಾಗಿ ಮಲಗಿದ್ದು, ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಕುಕ್ಕರ್ ಬಾಂಬ್ ಬ್ಲಾಸ್ಟ್- ಜಾಗತಿಕ ಉಗ್ರ ಸಂಘಟನೆಯಿಂದ ಪ್ರಭಾವಿತನಾಗಿದ್ದ ಶಾರೀಕ್: ADGP

    Live Tv
    [brid partner=56869869 player=32851 video=960834 autoplay=true]

  • ಆರ್ಕೆಸ್ಟ್ರಾಗಾಗಿ ಎಂಟು ಹಾಡುಗಳನ್ನು ಬರೆದ ಡಾಲಿ ಧನಂಜಯ್

    ಆರ್ಕೆಸ್ಟ್ರಾಗಾಗಿ ಎಂಟು ಹಾಡುಗಳನ್ನು ಬರೆದ ಡಾಲಿ ಧನಂಜಯ್

    ಟ ಧನಂಜಯ್ ಗೀತ ರಚನೆಕಾರರಾಗಿಯೂ ಫೇಮಸ್ ಆಗಿದ್ದಾರೆ. ಈವರೆಗೂ ಚಿತ್ರಗಳಿಗಾಗಿ ಒಂದೊಂದು ಹಾಡುಗಳನ್ನು ಬರೆಯುತ್ತಿದ್ದವರು. ಇದೀಗ ಆರ್ಕೆಸ್ಟ್ರಾ ಸಿನಿಮಾಗಾಗಿ ಅವರು ಎಂಟು ಹಾಡುಗಳನ್ನು ಬರೆದಿದ್ದಾರೆ. ಈ ಸಿನಿಮಾದಲ್ಲಿ ಬರುವ ಅಷ್ಟೂ ಹಾಡುಗಳಿಗೂ ಡಾಲಿ ಸಾಹಿತ್ಯ ಬರೆದಿದ್ದಾರೆ. ಒಂದಕ್ಕಿಂತ ಒಂದು ಹಾಡುಗಳು ವಿಶೇಷವಾಗಿವೆ. ಈ ಹಾಡುಗಳಿಗೆ ರಘು ದೀಕ್ಷಿತ್ ಅವರ ಸಂಗೀತ ಸಂಯೋಜನೆಯಿದೆ. ಇದೇ ಮೊದಲ ಬಾರಿಗೆ ಒಂದು ಚಿತ್ರದ ಅಷ್ಟೂ ಹಾಡುಗಳನ್ನು ಡಾಲಿ ರಚಿಸಿದ್ದಾರೆ.

    ಕಳೆದ ಕೆಲವು ವರ್ಷಗಳ ಹಿಂದೆ ಮೈಸೂರಿನ ಹುಡುಗರೆಲ್ಲಾ ಸೇರಿ ನಿರ್ಮಾಣ ಮಾಡಿದ್ದ “ಬಾರಿಸು ಕನ್ನಡ ಡಿಂಡಿಮವ” ಹಾಡು ತುಂಬಾ ಜನಪ್ರಿಯವಾಯಿತು. ಈಗ ಅದೇ ತಂಡ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ನಾನು ಮೊದಲು ಮೈಸೂರಿನ ನೇತ್ರಣ್ಣ ಹಾಗೂ ಕೃಪಾಕರ್, ಸೇನಾನಿ ಅವರನ್ನು ನೆನೆದು ಮಾತು ಆರಂಭಿಸುತ್ತೇನೆ. ಮೈಸೂರಿನಲ್ಲಿ ನಮ್ಮದೊಂದು ತಂಡ. ಗೆಳೆಯರಿಗೆಲ್ಲಾ ರಂಗಭೂಮಿಯಲ್ಲಿ ಆಸಕ್ತಿ. ‌ಧನಂಜಯ ನನಗೆ ಕಾಲೇಜಿನಲ್ಲಿ ಸೀನಿಯರ್. ಆಗಿನಿಂದಲೂ ಗೆಳೆಯ ಮತ್ತು ಸಹಕಾರ ನೀಡಿದವ. “ಮೈಸೂರು” ಆರ್ಕೇಸ್ಟ್ರಾ ತುಂಬಾ ಜನಪ್ರಿಯ. ಈ ಕುರಿತು ಕಥೆ ಮಾಡಿ‌ ಸಿನಿಮಾ ಮಾಡಬೇಕೆಂದು ಕನಸು. ಕೆಲವು ಗೆಳೆಯರ ಸಹಾಯದಿಂದ ಚಿತ್ರ ಆರಂಭಿಸಿದ್ದೆವು.‌ ಬೆಂಗಳೂರಿನ ಗಾಂಧಿನಗರ  ಸಿನಿಮಾದವರಿಗೆ ಹೆಸರುವಾಸಿ. ಹಾಗೆ,  ಮೈಸೂರಿನ ಗಾಂಧಿನಗರ “ಆರ್ಕೆಸ್ಟ್ರಾ” ದವರಿಗೆ ಹೆಸರುವಾಸಿ. ಅಲ್ಲಿ ಸಂಪರ್ಕ ಮಾಡಿ ಎಲ್ಲೆಲ್ಲಿ “ಆರ್ಕೇಸ್ಟ್ರಾ” ನಡೆಯುತ್ತದೆ?  ಎಂಬ ಮಾಹಿತಿ ಪಡೆದು, ಅಲ್ಲೇ ಹೋಗಿ ನೈಜವಾಗಿ ಚಿತ್ರೀಕರಣ ಮಾಡುತ್ತಿದ್ದೆವು. ಒಂದು ನೈಜತೆಗಾಗಿ, ಮತ್ತೊಂದು ಸೆಟ್ ಹಾಕುವಷ್ಟು ಹಣವಿರಲಿಲ್ಲ. “ಆರ್ಕೇಸ್ಟ್ರಾ” ಹಾಡುಗಾರನಾಗಬೇಕೆಂಬ ಆಸೆಹೊತ್ತ ಹುಡುಗನೊಬ್ಬನ ಸುತ್ತ ಹೆಣೆದಿರುವ ಕಥೆಯಿದು. ಪೂರ್ಣ ಈ ಚಿತ್ರದ ನಾಯಕ. ರಾಜಲಕ್ಷ್ಮೀ ನಾಯಕಿ. ದಿಲೀಪ್ ರಾಜ್, ನಾಗಭೂಷಣ್, ಮಹೇಶ್ ಮುಂತಾದ ರಂಗಭೂಮಿ ಕಲಾವಿದರು ಇದರಲ್ಲಿ ನಟಿಸಿದ್ದಾರೆ. ಜೋಸಫ್ ಛಾಯಾಗ್ರಹಣ ಮಾಡಿದ್ದಾರೆ. ಡಾಲಿ ಎಲ್ಲಾ ಹಾಡುಗಳನ್ನು ಬರೆದಿದ್ದಾರೆ. ರಘು ದೀಕ್ಷಿತ್ ಸಂಗೀತ ನೀಡಿದ್ದಾರೆ. Krg ಸ್ಟುಡಿಯೋಸ್ ಹಾಗೂ ಡಾಲಿ ಪಿಕ್ಚರ್ಸ್ ನಮ್ಮ ಚಿತ್ರವನ್ನು ಅರ್ಪಿಸುತ್ತಿದ್ದಾರೆ ಎಂದು ನಿರ್ದೇಶಕ ಸುನೀಲ್ ಮಾಹಿತಿ ನೀಡಿದರು.

    ಮೈಸೂರಿನ ಕಲಾಮಂದಿರ ಹಾಗೂ ರಂಗಾಯಣದ ಸುತ್ತ ನಾವು ಕಥೆಯ ಬಗ್ಗೆ ಮಾತನಾಡುತ್ತಾ ತಿರುಗುತ್ತಿದಾಗ, ಅದನ್ನು ಗಮನಿಸಿದ ಕೃಪಾಕರ್, ಸೇನಾನಿ ಅವರು ತಮ್ಮದೇ ಕ್ಯಾಮೆರಾ ಹಾಗೂ ಎಡಿಟಿಂಗ್ ಸೆಟಪ್ ಹಾಗೂ ಜೋಸೆಫ್ ಎಂಬ ಛಾಯಾಗ್ರಾಹಕನನ್ನು ನೀಡಿ ನಮಗೆ ಸಹಾಯ ಮಾಡಿದರು. ಚಿತ್ರೀಕರಣ ತಡವಾದರೆ ಧನಂಜಯ ಬೇಗ ಶುರುಮಾಡುವಂತೆ ಹುರಿದುಂಬಿಸುತ್ತಿದ್ದರು. ಸಂಗೀತ ನಿರ್ದೇಶಕ ರಘದೀಕ್ಷಿತ್ ನಮ್ಮ ಸಹಾಯಕ್ಕೆ ನಿಂತರು. ಈಗ ಕೆ.ಆರ್.ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಬಿಡುಗಡೆಗೆ ಬೇಕಾದ ಅನುಕೂಲ ಮಾಡಿಕೊಡುತ್ತಿದ್ದಾರೆ. ಎಲ್ಲರಿಗೂ ಧನ್ಯವಾದ. ಇದನ್ನೂ ಓದಿ:ಐದು ಭಾಷೆ, ಐದು ಸ್ಟಾರ್ ನಟರಿಂದ ಕಿಚ್ಚನ ವಿಕ್ರಾಂತ್ ರೋಣ ಟ್ರೈಲರ್ ರಿಲೀಸ್

    ನಾನು ಮೂಲತಃ ರಂಗಭೂಮಿಯವನು. “ಆರ್ಕೇಸ್ಟ್ರಾ” ಸಿನಿಮಾ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದೇನೆ. ಯುವಕರ ತಂಡದ ಶ್ರಮದಿಂದ ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನನ್ನ ಪಾತ್ರಕೂಡ ಚೆನ್ನಾಗಿದೆ ಎಂದರು ನಟ ದಿಲೀಪ್ ರಾಜ್. ನಾನು ಮೈಸೂರಿನವನು. ನಟ ನಾಗಭೂಷಣ್ ಮೂಲಕ ಈ ತಂಡದ ಪರಿಚಯವಾಯಿತು. ನಿರ್ದೇಶಕ ಸುನೀಲ್ ಪೆನ್ ಡ್ರೈವ್ ಮೂಲಕ ಈ ಚಿತ್ರದ ಕಥೆ ಕಳಿಸಿದ್ದರು. ನೋಡಿ ಕೆಲಸ ಶುರು ಮಾಡಿದೆ. ಮೈಸೂರಿನ ನೇತ್ರಣ್ಣ ಅವರ ಜಾಗವೇ ನಮ್ಮ ಆಫೀಸ್. ಡಾಲಿ ಬರೆದ ಎರಡು ಸಾಲುಗಳು ನನಗೆ ಇಷ್ಟವಾಯಿತು.  ವಿಶೇಷವೆಂದರೆ ಈ ಚಿತ್ರದ ಎಂಟು ಹಾಡುಗಳನ್ನು  ಡಾಲಿ ಅವರೆ ಬರೆದಿದ್ದಾರೆ. ಹಣ ಪಡೆಯದೆ ಸಂಗೀತ ನಿರ್ದೇಶನದ ಜವಾಬ್ದಾರಿ ಹೊತ್ತು ಕೊಂಡಿದ್ದೇನೆ. ಹಾಗಾಗಿ ನನ್ನನ್ನು ನಿರ್ಮಾಪಕ ಅಂತ ನಿರ್ಧರಿಸಿದ್ದಾರೆ ಎಂದರು ರಘು ದೀಕ್ಷಿತ್. ನಾವೆಲ್ಲಾ ಮೈಸೂರಿನ ಕಾಲೇಜ್ ನಲ್ಲಿ ನಾಟಕ ಮಾಡಬೇಕಾದರೆ, ಬೀಳುತ್ತಿದ್ದ ವಿಸಿಲ್ ಗೆ ನಮ್ಮ ತಲೆ ತಿರುಗುತ್ತಿತ್ತು. ಆಮೇಲೆ ಸಿನಿಮಾ ನಟನೆಗೆ ಬಂದ ಮೇಲೆ ವಾಸ್ತವ ಅರ್ಥವಾಯಿತು. ಆನಂತರ ಮತ್ತೆ ಜನ ಕೈ ಹಿಡಿದರು. ನನ್ನ ಮೊದಲ ದಿನಗಳಿಂದಲೂ ನನ್ನ ಸ್ನೇಹಿತರು ನನ್ನ ಜೊತೆ ಇದ್ದಾರೆ. ನಾನು ಅವರ ಜೊತೆ ಇರುತ್ತೇನೆ . ನಮ್ಮೊಂದಿಗೆ ಕೆ.ಆರ್.ಜಿ ಸ್ಟುಡಿಯೋಸ್ ಅವರು ಇದ್ದಾರೆ ಎಂದರು ಡಾಲಿ ಧನಂಜಯ.

    Live Tv

  • ವೇದಿಕೆ ಮೇಲೆ ಹಾಡು ಹೇಳುತ್ತಾ ಪ್ರಾಣಬಿಟ್ಟ ಮಲಯಾಳಂ ಗಾಯಕ

    ವೇದಿಕೆ ಮೇಲೆ ಹಾಡು ಹೇಳುತ್ತಾ ಪ್ರಾಣಬಿಟ್ಟ ಮಲಯಾಳಂ ಗಾಯಕ

    ತಿರುವನಂತಪುರಂ: ವೇದಿಕೆ ಮೇಲೆ ಹಾಡು ಹೇಳುವ ವೇಳೆ ಕುಸಿದು ಬಿದ್ದು ಮಲಯಾಳಂ ಗಾಯಕ ಎಡವ ಬಶೀರ್(87) ಶನಿವಾರ ಸಾವನ್ನಪ್ಪಿದ್ದಾರೆ.

    ಕೇರಳದಲ್ಲಿ ನಡೆಯುವ ಆರ್ಕೆಸ್ಟ್ರಾಗಳಲ್ಲಿ ಹಾಡು ಹಾಡುವ ಮೂಲಕ ಎಡವ ಬಶೀರ್ ಹೆಚ್ಚು ಜನಪ್ರಿಯರಾಗಿದ್ದಾರೆ. ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಬ್ಲೂ ಡೈಮಂಡ್ಸ್ ಆರ್ಕೆಸ್ಟ್ರಾದ ಗೋಲ್ಡನ್ ಜುಬಿಲಿ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ 1978ರಲ್ಲಿ ಬಿಡುಗಡೆಯಾದ ಹಿಂದಿ ಚಲನಚಿತ್ರ ಟೂಟ್ ಟಾಯ್ಸ್‍ನ ಪ್ರಸಿದ್ಧ ಭಾರತೀಯ ಗಾಯಕ ಕೆಜೆ ಯೇಸುದಾಸ್ ಅವರ ಮಾನ ಹೋ ತುಮ್ ಬೇಹದ್ ಹಸೀನ್… ಹಾಡನ್ನು ಹಾಡುವಾಗ ಎಡವ ಬಶೀರ್ ಕುಸಿದುಬಿದ್ದಿದ್ದಾರೆ. ಇದನ್ನೂ ಓದಿ: ನಾವು ಬೇರೆ ಭಾಷೆಯನ್ನು ಇಂಪ್ರೆಸ್ ಮಾಡೋದು ಬೇಕಿಲ್ಲ: ಸುದೀಪ್

    ಹಾಡು ಹಾಡುತ್ತಾ ವೇದಿಕೆ ಮೇಲೆ ಕುಳಿತುಕೊಳ್ಳಲು ಪ್ರಯತ್ನಿಸಿದ ಅವರು ಇದ್ದಕ್ಕಿದಂತೆ ಕೆಳಗೆ ಕುಸಿದು ಬಿದ್ದಿದ್ದಾರೆ. ಜೊತೆಗೆ ಅವರ ಕೈಯಲ್ಲಿದ್ದ ಮೈಕ್ ಕೂಡ ಕೆಳಗೆ ಬಿದ್ದಿದೆ. ನಂತರ ಕೂಡಲೇ ವೇದಿಕೆಯತ್ತ ಜನರು ಆಗಮಿಸಿ, ಬಶೀರ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಜಗ್ಗೇಶ್‍ಗೆ ರಾಜ್ಯಸಭಾ ಟಿಕೆಟ್- ರಾಯರ ಕೃಪೆ, ಪವಾಡಕ್ಕೆ ಧನ್ಯ ಅಂದ್ರು ನವರಸ ನಾಯಕ

  • ಗಂಗಮ್ಮನಿಗೆ ಕಲಾವಿದರ ಕಲ್ಯಾಣ ವೇದಿಕೆ ನೆರವು- ಗಾಯನ ಕಲಾವಿದರಿಗೆ ಆಹಾರ ಕಿಟ್ ವಿತರಣೆ

    ಗಂಗಮ್ಮನಿಗೆ ಕಲಾವಿದರ ಕಲ್ಯಾಣ ವೇದಿಕೆ ನೆರವು- ಗಾಯನ ಕಲಾವಿದರಿಗೆ ಆಹಾರ ಕಿಟ್ ವಿತರಣೆ

    – ವಾದ್ಯಗೋಷ್ಠಿ ನಡೆಸಲು ಅನುಮತಿ ನೀಡುವಂತೆ ಮನವಿ

    ಕೊಪ್ಪಳ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಾವಿರಾರು ಕೂಲಿ ಕಾರ್ಮಿಕರು ಬಡವರು, ಕಲಾವಿದರು ಸೇರಿದಂತೆ ಆರ್ಥಿಕವಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಗಾಯನ ವೃತ್ತಿ ಅವಲಂಬಿತರು ಪರದಾಡುತ್ತಿದ್ದಾರೆ. ಇದೀಗ ಅಂತಹರನ್ನು ಗುರುತಿಸಿ ಕಲ್ಯಾಣ ವೇದಿಕೆಯ ಕೊಪ್ಪಳ ಜಿಲ್ಲಾ ಘಟಕದಿಂದ ಆಹಾರ ಕಿಟ್ ವಿತರಣೆ ಮಾಡಲಾಗುತ್ತಿದೆ.

    ಲಾಕ್‍ಡೌನ್ ಬಳಿಕ ಸಾರ್ವಜನಿಕ ಸಭೆ, ಸಮಾರಂಭ, ಮದುವೆ, ಕಲ್ಯಾಣದಂತಹ ಕಾರ್ಯಕ್ರಮಗಳಲ್ಲಿ ಗಾಯನ ಕಛೇರಿಗೆ ಅವಕಾಶಗಳಿಲ್ಲದಂತಾಗಿದೆ. ಇದರಿಂದ ಗಾಯನ ವೃತ್ತಿ ಅವಲಂಬಿತರು ಪರದಾಡುತ್ತಿದ್ದರು. ಇದನ್ನು ಮನಗಂಡ ಜಿಲ್ಲಾ ಕಲಾವಿದರ ಕಲ್ಯಾಣ ವೇದಿಕೆ ಬಡ ಕಲಾವಿದರನ್ನು ಗುರುತಿಸಿ ಆಹಾರ ಸಾಮಗ್ರಿಗಳ ಕಿಟ್ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

    ಎಸ್.ಗಂಗಮ್ಮ ಅವರಿಗೆ ಆಹಾರದ ಕಿಟ್ ನೀಡುವ ಮೂಲಕ ಕಲಾವಿದರ ಕಲ್ಯಾಣ ವೇದಿಕೆ ನೆರವಾಗಿದೆ. ಅಲ್ಲದೇ ಸಂಘಟನೆಯ ಪ್ರಮುಖರು, ಜಿಲ್ಲೆಯ ಇತರ ಕಲಾವಿದರಿಗೆ ಇದನ್ನ ವಿಸ್ತರಿಸುವ ಬಗ್ಗೆ ನಿರ್ಣಯ ಕೈಗೊಂಡರು. ಈ ಸಂದರ್ಭದಲ್ಲಿ ಕಲಾವಿದರ ಕಲ್ಯಾಣ ವೇದಿಕೆಯ ಜಿಲ್ಲಾಧ್ಯಕ್ಷರು ಶ್ರೀ ವಿಜಯ್ ವಿಶ್ವ ಕರ್ಮ, ಉಪಾಧ್ಯಕ್ಷರು ಶ್ರೀ ಮಾಜಿದ್ ಖಾನ್, ಕಾರ್ಯದರ್ಶಿಗಳು ಶ್ರೀ ಅಮರೇಶ್ ಜವಳಿ, ಸಹ ಕಾರ್ಯದರ್ಶಿ ಶ್ರೀ ಪ್ರಸಾದ್ ಬನ್ನಿಗಿಡದ್ ಹಾಗೂ ಜಿಲ್ಲಾ ಖಜಾಂಚಿ ಶ್ರೀ ಮಿಮಿಕ್ರಿ ಮಾರೇಶ್ ಪಾಲ್ಗೊಂಡಿದ್ದರು.

    ಅಲ್ಲದೇ ಜಿಲ್ಲಾಧಿಕಾರಿಗಳಿಗೆ ಮದುವೆ ಸಮಾರಂಭಗಳಲ್ಲಿ ವಾದ್ಯಗೋಷ್ಠಿ ನಡೆಸಲು ಅನುಮತಿ ನೀಡುವಂತೆ ಜಿಲ್ಲಾ ಕಲಾವಿದರ ಕಲಾ ಸಾಂಸ್ಕೃತಿಕ ಸಂಸ್ಥೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

    ಪತ್ರದಲ್ಲಿ ಏನಿದೆ?
    “ದೇಶದಲ್ಲಿ ಕೊರೊನಾ ಆಕ್ರಮಣದಿಂದ ಲಾಕ್‍ಡೌನ್ ಉಂಟಾಗಿ ಎಲ್ಲರೂ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಅದರಲ್ಲೂ ಕಲೆಯನ್ನೇ ನಂಬಿ ಜೀವನ ನಡೆಸುತ್ತಿದ್ದ ಕೊಪ್ಪಳ ಜಿಲ್ಲೆಯ ವಾದ್ಯಗೋಷ್ಠಿ ಕಲಾವಿದರು ಮೂರು ತಿಂಗಳಿನಿಂದ ಯಾವುದೇ ಕಾರ್ಯಕ್ರಮಗಳಿಲ್ಲದೆ ತಮ್ಮ ಕುಟುಂಬ ನಡೆಸಲು ಕಷ್ಟಕರವಾಗಿದೆ. ಸರ್ಕಾರವೂ ಈ ವಾದ್ಯಗೋಷ್ಠಿ ಕಲಾವಿದರಿಗೆ ಯಾವುದೇ ತರಹದ ಆರ್ಥಿಕ ನೆರವು ನೀಡಿರುವುದಿಲ್ಲ. ಆದ್ದರಿಂದ ನೀವು ಕಲಾವಿದರ ಜೀವನೋಪಾಯಕ್ಕಾಗಿ ಮದುವೆ, ಸಮಾರಂಭಗಳಲ್ಲಿ ವಾದ್ಯಗೋಷ್ಠಿಯನ್ನು ಮಾಡಲು ಅನುಮತಿ ಮಾಡಿಕೊಡಬೇಕೆಂದು” ಪತ್ರದಲ್ಲಿ ಮನವಿ ಮಾಡಿಕೊಂಡಿದೆ.

  • ದೇವರ ಉತ್ಸವದ ವೇಳೆ ಸ್ಥಳೀಯರು, ಕರವೇ ಕಾರ್ಯಕರ್ತರ ನಡುವೆ ಮಾರಾಮಾರಿ

    ದೇವರ ಉತ್ಸವದ ವೇಳೆ ಸ್ಥಳೀಯರು, ಕರವೇ ಕಾರ್ಯಕರ್ತರ ನಡುವೆ ಮಾರಾಮಾರಿ

    ಬೆಂಗಳೂರು: ಕನ್ನಡ ಹಾಡುಗಳನ್ನು ಬಳಸಿಲ್ಲ ಎಂಬ ಕಾರಣಕ್ಕೆ ಸ್ಥಳೀಯರು ಮತ್ತು ಕರವೇ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

    ಈ ಘಟನೆ ಶನಿವಾರ ರಾತ್ರಿ ನಡೆದಿದ್ದು, ಜೆಜೆ ನಗರ ಬಳಿಯ ಮಾರ್ಕಂಡೇಶ್ವರ ನಗರದಲ್ಲಿ ಗಂಗಮ್ಮ ದೇವಿ ಉತ್ಸವ ವೇಳೆ ಮನರಂಜನೆಗಾಗಿ ಆರ್ಕೆಸ್ಟ್ರಾ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕನ್ನಡ ಹಾಡುಗಳನ್ನು ಹಾಕದೇ ಕೇವಲ ತಮಿಳು ಹಾಡನ್ನು ಹಾಕಿದ್ದನ್ನು ಕರವೇ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

    ಈ ಆರ್ಕೆಸ್ಟ್ರಾದ ಉಸ್ತುವಾರಿಯನ್ನು ರೌಡಿಶೀಟರ್‍ ಗಳಾದ ಲವ, ಕುಶ ನೋಡಿಕೊಳ್ಳುತ್ತಿದ್ದು, ತಮಿಳು ಹಾಡುಗಳನ್ನು ಹಾಡದಂತೆ ಕರವೇ ಕಾರ್ಯಕರ್ತರು ಮನವಿ ಮಾಡಿಕೊಂಡರು ಅವರ ಮಾತಿಗೆ ಕಿವಿ ಕೊಡದೆ ತಮಿಳು ಸಾಂಗ್ ಹಾಕಿದ್ದ ಕಾರಣ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ.

    ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಜೆಜೆ ನಗರ ಪೊಲೀಸರು ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.