Tag: Order

  • ಮುಂಬೈನಲ್ಲಿ ಮಾಸ್ಕ್ ಕಡ್ಡಾಯ – ಧರಿಸದೇ ಹೊರಬಂದರೆ ಅರೆಸ್ಟ್

    ಮುಂಬೈನಲ್ಲಿ ಮಾಸ್ಕ್ ಕಡ್ಡಾಯ – ಧರಿಸದೇ ಹೊರಬಂದರೆ ಅರೆಸ್ಟ್

    – ಮನೆಯಲ್ಲಿ ತಯಾರಿಸಿದ ಮಾಸ್ಕ್ ಧರಿಸಬಹುದು
    – ಹೆಚ್ಚಾಗುತ್ತಿರುವ ಕೊರೊನಾ ತಡೆಗಟ್ಟಲು ಕ್ರಮ

    ಮುಂಬೈ: ಭಾರತದಲ್ಲಿ ಕೊರೊನಾ ವೈರಸ್ ನ ಹಾಟ್‍ಸ್ಪಾಟ್ ಆಗಿರುವ ಮುಂಬೈನಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಒಂದೇ ವೇಳೆ ಮಾಸ್ಕ್ ಧರಿಸದೇ ಹೊರಬಂದರೆ ಅಂತವರನ್ನು ಅರೆಸ್ಟ್ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

    ಜನರು ಧರಿಸುವ ಮಾಸ್ಕ್ ಗಳು ಕೆಮಿಕಲ್ ಇರುವ ಉತ್ತಮ ಗುಣಮಟ್ಟದ್ದು ಆಗಿರಬಹುದು ಅಥವಾ ಮನೆಯಲ್ಲಿ ತಯಾರಿಸಿದ ತೊಳೆಯಬಹುದಾದ ಮಾಸ್ಕ್ ಗಳನ್ನಾದರು ಧರಿಸಬಹುದು. ಆದರೆ ಎಲ್ಲಾ ಸಾರ್ವಜನಿಕ ಸ್ಥಳಗಳು, ಕಚೇರಿಗಳು, ಸಭೆಗಳು ಮತ್ತು ವಾಹನಗಳ ಒಳಗೂ ಮಾಸ್ಕ್ ಗಳನ್ನು ಧರಿಸುವುದು ಕಡ್ಡಾಯವಾಗಿರುತ್ತದೆ ಎಂದು ಮುಂಬೈ ನಗರ ಪಾಲಿಕೆ ಆಯುಕ್ತ ಪ್ರವೀಣ್ ಪರದೇಶಿ ಆದೇಶಿಸಿದ್ದಾರೆ.

    ಈ ವಿಚಾರವಾಗಿ ಇಂದು ಮಾತನಾಡಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ಜನರು ದಿನಬಳಕೆ ವಸ್ತುಗಳನ್ನು ಕೊಂಡುಕೊಳ್ಳಲು ತಮ್ಮ ಮನೆಗಳಿಂದ ಹೊರಗೆ ಹೋಗುವಾಗ ಮಾಸ್ಕ್ ಬಳಸಬೇಕೆಂದು ಒತ್ತಾಯಿಸಿದ್ದರು.

    ಈಗಾಗಲೇ ಚಂಡೀಗಢ, ನಾಗಾಲ್ಯಾಂಡ್ ಮತ್ತು ಒಡಿಶಾದಲ್ಲಿ ಅಲ್ಲಿನ ಅಧಿಕಾರಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯ ಎಂದು ಆದೇಶ ಮಾಡಿದ್ದಾರೆ.

    2 ಕೋಟಿಗಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಮುಂಬೈ ಮತ್ತು ಅದರ ಉಪನಗರಗಳಲ್ಲಿ ಇಲ್ಲಿಯವರೆಗೆ 782 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದರ ಜೊತೆಗೆ 50 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಇಂದಿನ ಆರೋಗ್ಯ ಬುಲೆಟಿನ್ ನಲ್ಲಿ ವರದಿಯಾಗಿದೆ. ಈ ಅಂಕಿಅಂಶಗಳ ಮೂಲಕ ಮಹಾರಾಷ್ಟ್ರ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣ ಹೊಂದಿರುವ ರಾಜ್ಯ ಎಂದು ಗುರುತಿಸಿಕೊಂಡಿದೆ.

    ಮಹಾರಾಷ್ಟ್ರದಲ್ಲಿ ಇನ್ನೊಂದು ಅಘಾತಕಾರಿ ಸಂಗತಿ ಎಂದರೆ, ಇಂದು ಕೂಡ ಹೆಚ್ಚು ಜನರು ವಾಸಿಸುವ ಧಾರವಿ ಸ್ಲಂನಲ್ಲಿ ಎರಡು ಹೊಸ ಕೊರೊನಾ ಪ್ರಕರಣಗಳು ಕಂಡು ಬಂದಿವೆ. ಈ ಮೂಲಕ ಏಷ್ಯಾದ ಅತೀ ದೊಡ್ಡ ಸ್ಲಂ ಆಗಿರುವ ಧಾರವಿಯಲ್ಲಿ ಸುಮಾರು 9 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

  • ಕೊರೊನಾ ಭೀತಿ ಎಫೆಕ್ಟ್ – ಟ್ರಾಫಿಕ್ ಪೊಲೀಸರಿಗೆ ಖಡಕ್ ಆದೇಶ

    ಕೊರೊನಾ ಭೀತಿ ಎಫೆಕ್ಟ್ – ಟ್ರಾಫಿಕ್ ಪೊಲೀಸರಿಗೆ ಖಡಕ್ ಆದೇಶ

    ಬೆಂಗಳೂರು: ಕೊರೊನಾ ವೈರಸ್ ಕೇಸ್‍ಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಸದಾ ಜನರ ನಡುವೆ ಕೆಲಸ ಮಾಡುವ ಟ್ರಾಫಿಕ್ ಪೊಲೀಸರಿಗೆ ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಖಡಕ್ ಆದೇಶ ನೀಡಿದ್ದಾರೆ.

    ಠಾಣೆಗೆ ಬರುವವರನ್ನು ಬಾಗಿಲಲ್ಲೇ ತಡೆದು ಸ್ಯಾನಿಟೈಸರ್ ಹಾಕಿ ಒಳಗೆ ಬಿಡಬೇಕು. ಯಾವುದೇ ವ್ಯಕ್ತಿಯೊಂದಿಗೆ ಮಾತಾಡಬೇಕಾದರು ಕನಿಷ್ಟ ಮೂರು ಅಡಿ ದೂರದಲ್ಲಿ ನಿಂತು ಮಾತಾಡಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕರ್ವತ್ಯ ನಿರ್ವಹಿಸಬೇಕು. ಯಾವುದೇ ಸಿಬ್ಬಂದಿಗೆ ಕೆಮ್ಮು, ನೆಗಡಿ, ಶೀತ, ಜ್ವರದಂತ ಲಕ್ಷಣಗಳು ಕಾಣಿಸಿಕೊಂಡರೆ ಆ ಸಿಬ್ಬಂದಿ ಕಡ್ಡಯವಾಗಿ ರಜೆ ತಗೋಬೇಕು ಎಂದು ರವಿಕಾಂತೇಗೌಡ ಆದೇಶಿಸಿದ್ದಾರೆ.

    ರವಿಕಾಂತೇಗೌಡ ಅವರ ಈ ಆದೇಶ ಎಲ್ಲಾ ಸಿಬ್ಬಂದಿ ಪಾಲಿಸುತ್ತಿಲ್ಲ. ಬಹುತೇಕರು ಯಾವುದೇ ಮಾಸ್ಕ್ ಇಲ್ಲದೇ ಓಡಾಡುತ್ತಿದ್ದಾರೆ. ಠಾಣೆಗಳಲ್ಲೂ ಕೂಡ ಮಾಸ್ಕ್ ಇಲ್ಲದೇ ಕೆಲಸ ನಿರ್ವಹಿಸುತ್ತಿರುವುದು ಕಂಡು ಬಂದಿದ್ದು, ಮಾಸ್ಕ್ ಮತ್ತು ಸ್ಯಾನಿಟೈಜರ್ ಖರೀದಿಗೆ ನಾವೇ ಹಣ ಹಾಕಿಕೊಳ್ಳಬೇಕು ಎಂದು ಕೆಲ ಸಿಬ್ಬಂದಿ ಬೇಸರ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಕೆಲ ಸಿಬ್ಬಂದಿ ಕೂಡ ಕೊರೊನಾ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಮುಕ್ತವಾಗಿ ಕೆಲಸ ನಿರ್ವಹಿಸುವುದಕ್ಕೆ ಹಿಂದೇಟು ಹಾಕುತ್ತಿರುವುದು ಕಂಡುಬಂದಿದೆ.

  • ಶ್ರೀರಾಮುಲುಗೆ “ತೆಲುಗಿನಿಂದ ಕನ್ನಡ ಕಲಿಯಿರಿ” ಪುಸ್ತಕ ಕಳುಹಿಸಿದ ಕವಿತಾ ರೆಡ್ಡಿ

    ಶ್ರೀರಾಮುಲುಗೆ “ತೆಲುಗಿನಿಂದ ಕನ್ನಡ ಕಲಿಯಿರಿ” ಪುಸ್ತಕ ಕಳುಹಿಸಿದ ಕವಿತಾ ರೆಡ್ಡಿ

    ರಾಯಚೂರು: ನಗರದ ಪೊಲೀಸ್ ಮೈದಾನದಲ್ಲಿ ಗಣರಾಜ್ಯೋತ್ಸವ ವೇಳೆ ಧ್ವಜಾರೋಹಣ ಬಳಿಕ ಮಾತನಾಡಿದ ಭಾಷಣ ವೇಳೆ ಕನ್ನಡ ತಪ್ಪುತಪ್ಪಾಗಿ ಉಚ್ಛರಿಸಿದ್ದ ಆರೋಗ್ಯ ಸಚಿವ ಶ್ರೀರಾಮುಲುಗೆ ಕಾಗಜ್ ಇಂಡಿಯಾ ಸಂಸ್ಥಾಪಕಿ, ಪರ್ವತಾರೋಹಿ ಕವಿತಾ ರೆಡ್ಡಿ “ತೆಲುಗಿನಿಂದ ಕನ್ನಡ ಕಲಿಯಿರಿ” ಪುಸ್ತಕವನ್ನು ಕಳುಹಿಸುವ ಮೂಲಕ ಅಣುಕಿಸಿದ್ದಾರೆ.

    ಗೌರವಾನ್ವಿತ ರಾಮುಲು ಅಣ್ಣನವರೇ ಕನ್ನಡ ಕೊಲ್ಲಬೇಡಿ. ನಿಮಗಾಗಿ ತೆಲುಗಿನಿಂದ ಕನ್ನಡ ಕಲಿಯಿರಿ ಪುಸ್ತಕ ಕಳುಹಿಸುವೆ. ಮುಂದಿನ ಆಗಸ್ಟ್ 15 ರೊಳಗಾಗಿ ಕನ್ನಡ ಕಲಿಯಿರಿ. ಮತ್ತೊಮ್ಮೆ ಕನ್ನಡ ಕೊಲ್ಲದಿರಿ. ಕುಮಾರಸ್ವಾಮಿಯವರನ್ನು ಪಾಕಿಸ್ತಾನಕ್ಕೆ ಹೋಗು ಎಂದು ಹೇಳುವ ಮುಂಚೆ ಕನ್ನಡ ಕಲಿಯಿರಿ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಈ ಮೂಲಕ ಶ್ರೀರಾಮುಲು ಕನ್ನಡ ಉಚ್ಛಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತವಾಗಿದೆ. 75 ರೂಪಾಯಿ ಬೆಲೆಯ ಪುಸ್ತಕವನ್ನು ರಾಮುಲು ಬಳ್ಳಾರಿ ನಿವಾಸದ ವಿಳಾಸಕ್ಕೆ ಕವಿತಾ ರೆಡ್ಡಿ ಆರ್ಡರ್ ಮಾಡಿದ್ದಾರೆ.

  • ಮುನಿಯಪ್ಪ ಬೆಂಬಲಿಗರ ಅಮಾನತು ಆದೇಶ ವಾಪಸ್ ಪಡೆದ ಕಾಂಗ್ರೆಸ್

    ಮುನಿಯಪ್ಪ ಬೆಂಬಲಿಗರ ಅಮಾನತು ಆದೇಶ ವಾಪಸ್ ಪಡೆದ ಕಾಂಗ್ರೆಸ್

    ಕೋಲಾರ: ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಬೆಂಬಲಿಗರ ಅಮಾನತು ಆದೇಶವನ್ನು ಕಾಂಗ್ರೆಸ್ ಹಿಂದಕ್ಕೆ ಪಡೆದಿದೆ.

    ಜಿಲ್ಲೆಯ ಕಾಂಗ್ರೆಸ್ ಮುಖಂಡರು ಸದ್ಯ ನಿರಾಳವಾಗಿದ್ದು, ಕೆಪಿಸಿಸಿ ಗೆ ಕ್ಷಮಾಪಣೆ ಪತ್ರ ರವಾನಿಸಿದ್ದಾರೆ. ಪತ್ರಿಕಾಗೋಷ್ಠಿಯ ಕುರಿತು ಲಿಖಿತ ಸಮಜಾಯಿಷಿ ನೀಡಿ ಕ್ಷಮೆ ಕೋರಿದ ಹಿನ್ನೆಲೆ ಆರು ಜನ ಕೈ ಮುಖಂಡರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೂಚನೆ ಮೇರೆಗೆ ಪ್ರಧಾನ ಕಾರ್ಯದರ್ಶಿಗಳಾದ ಅಮಾನದು ಆದೇಶವನ್ನು ಘೋರ್ಪಡೆ ಅವರು ಹಿಂಪಡೆದಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ಕೆಲ ಶಾಸಕರು ಹಾಗೂ ಮುಖಂಡರು ಕೆ.ಎಚ್.ಮುನಿಯಪ್ಪ ವಿರುದ್ಧ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ವಿರುದ್ಧವಾಗಿ ಕೆಲಸ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅ.17 ರಂದು ಕೈ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ್ದರು.

    ಪಕ್ಷ ವಿರೋಧಿಗಳನ್ನು ಕಾಪಾಡಲು ಕೆ.ಸಿ ವೇಣುಗೋಪಾಲ್ ಪ್ರಯತ್ನ ಮಾಡಿದ್ದಾರೆ ಎಂದು ಆರೋಪ ಮಾಡಿ ಕಾಂಗ್ರೆಸ್‍ನ ಹಿರಿಯ ನಾಯಕರ ವಿರುದ್ಧ ನಗರಸಭೆ ಮಾಜಿ ಅಧ್ಯಕ್ಷ ಖಲೀಲ್ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅದ್ಯಕ್ಷ ದಿನೇಶ್ ಗುಂಡೂರಾವ್ ಅವರು ಏಳು ಜನ ಕೈ ಮುಖಂಡರನ್ನು ಅಮಾನತುಗೊಳಿಸುವಂತೆ ಆದೇಶಿಸಿದ್ದರು. ಇದೀಗ ನಗರ ಸಭೆ ಮಾಜಿ ಅಧ್ಯಕ್ಷ ಖಲೀಲ್ ಹೊರತುಪಡಿಸಿ ಆರು ಮಂದಿ ಕೈ ಮುಖಂಡರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.

  • ನಿವಾಸ ಖಾಲಿ ಮಾಡಿ, ಇಲ್ದಿದ್ರೆ ನೀರು, ವಿದ್ಯುತ್ ಕಡಿತ – ಮಾಜಿ ಸಂಸದರಿಗೆ ಸೂಚನೆ

    ನಿವಾಸ ಖಾಲಿ ಮಾಡಿ, ಇಲ್ದಿದ್ರೆ ನೀರು, ವಿದ್ಯುತ್ ಕಡಿತ – ಮಾಜಿ ಸಂಸದರಿಗೆ ಸೂಚನೆ

    ನವದೆಹಲಿ: ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾಗಿ ಸುಮಾರು 2 ತಿಂಗಳು ಕಳೆದಿದೆ. ಆದರೆ ಮಾಜಿ ಸಂಸದರು ನೂತನ ಸಂಸದರಿಗೆ ಸರ್ಕಾರಿ ನಿವಾಸ ಬಿಟ್ಟು ಕೊಡದೆ ಅಲ್ಲಿಯೇ ವಾಸವಿದ್ದಾರೆ. ಈ ನಡೆಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ 1 ವಾರದೊಳಗೆ ಸರ್ಕಾರಿ ನಿವಾಸವನ್ನು ಖಾಲಿ ಮಾಡುವಂತೆ ಮಾಜಿ ಸಂಸದರಿಗೆ ಆದೇಶ ನೀಡಿದೆ. ಜೊತೆಗೆ ಮೂರು ದಿನದೊಳಗೆ ನಿವಾಸಗಳಿಗೆ ನೀಡಿದ್ದ ನೀರು, ಗ್ಯಾಸ್ ಹಾಗೂ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

    ಹೌದು. ಮೇ 25ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 16ನೇ ಲೋಕಸಭೆಯನ್ನು ವಿಸರ್ಜನೆ ಮಾಡಿದ್ದರು. ಬಳಿಕ ಎರಡನೇ ಬಾರಿಗೆ ಮೋದಿ ಸರ್ಕಾರ ಅಧಿಕಾರಕ್ಕೆ ಬಂತು. ನಿಯಮದ ಪ್ರಕಾರ, ಲೋಕಸಭೆ ವಿಸರ್ಜನೆಗೊಂಡ 1 ತಿಂಗಳ ಒಳಗೆ ಮಾಜಿ ಸಂಸದರು ಸರ್ಕಾರಿ ನಿವಾಸಗಳನ್ನು ಖಾಲಿ ಮಾಡಬೇಕು. ಆದರೆ ಅವಧಿ ಮೀರಿ 2 ತಿಂಗಳು ಕಳೆಯುತ್ತಾ ಬಂದಿದ್ದರೂ ಮಾಜಿ ಸಂಸದರು ಮಾತ್ರ ನಿವಾಸ ಖಾಲಿ ಮಾಡಿಲ್ಲ. ಇದನ್ನೂ ಓದಿ:ಅಧಿಕೃತ ನಿವಾಸವನ್ನು 1 ತಿಂಗಳಲ್ಲಿ ತೆರವುಗೊಳಿಸಿ ಮೆಚ್ಚುಗೆಗೆ ಪಾತ್ರರಾದ ಸುಷ್ಮಾ ಸ್ವರಾಜ್

    ನಗರದ ಪ್ರತಿಷ್ಠಿತ ಲ್ಯೂಟೆನ್ಸ್ ದೆಹಲಿ ಪ್ರದೇಶದಲ್ಲಿ ಹಂಚಿಕೆ ಮಾಡಲಾಗಿದ್ದ ಸರ್ಕಾರಿ ನಿವಾಸಗಳಲ್ಲಿಯೇ 200 ಮಾಜಿ ಸಂಸದರು ಉಳಿದುಕೊಂಡಿದ್ದಾರೆ. ಅವರಿಗೆ ಮನೆ ಖಾಲಿ ಮಾಡಲು ಏಳು ದಿನಗಳ ಗಡುವು ನೀಡಲಾಗಿದ್ದು, ಮೂರು ದಿನದೊಳಗೆ ನೀರು ಮತ್ತು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಕೇಂದ್ರ ಸೂಚನೆ ನೀಡಿದೆ ಎಂದು ಸಂಸತ್‍ನ ವಸತಿ ಸಮಿತಿ ಅಧ್ಯಕ್ಷ ಸಿ.ಆರ್.ಪಾಟೀಲ್ ತಿಳಿಸಿದ್ದಾರೆ.

    ಮಾಜಿ ಸಂಸದರು ಸರ್ಕಾರಿ ನಿವಾಸವನ್ನು ಖಾಲಿ ಮಾಡದ ಕಾರಣಕ್ಕೆ ಹೊಸ ಸಂಸದರಿಗೆ ವಸತಿ ಕಲ್ಪಿಸುವುದು ಕಷ್ಟವಾಗಿದೆ. ಸದ್ಯ ನೂತನ ಸಂಸದರು ಉಳಿದುಕೊಳ್ಳಲು ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

    ಕೆಲ ದಿನಗಳ ಹಿಂದೆ ಮೃತಪಟ್ಟಿದ್ದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಜೂನ್ ತಿಂಗಳಿನಲ್ಲಿ ಟ್ವೀಟ್ ಮಾಡಿ ಸರ್ಕಾರ ನೀಡಿದ ನಿವಾಸವನ್ನು ಖಾಲಿ ಮಾಡುತ್ತೇನೆ ಎಂದು ತಿಳಿಸಿದ್ದರು. ನಾನೀಗ ನಂ.8 ಸಫ್ದಾರ್ಜಂಗ್ ರಸ್ತೆ, ನವದೆಹಲಿಯ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿದ್ದೇನೆ. ಹೀಗಾಗಿ ನಾನು ಈ ವಿಳಾಸ ಹಾಗೂ ಸಂಪರ್ಕ ಸಂಖ್ಯೆಯಲ್ಲಿ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದರು. ಸುಷ್ಮಾ ಸ್ವರಾಜ್ ಅವರ ಈ ನಡೆ ಮೆಚ್ಚುಗೆಗೆ ಪಾತ್ರವಾಗಿತ್ತು.

    ಅನಧಿಕೃತವಾಗಿ ಸಾರ್ವಜನಿಕ ನಿವಾಸದಲ್ಲಿ ತಂಗಿರುವ ವ್ಯಕ್ತಿಗಳನ್ನು ಹೊರ ಹಾಕುವ ತಿದ್ದುಪಡಿ ಮಸೂದೆ ಈ ಬಾರಿಯ ಸಂಸತ್ತಿನಲ್ಲಿ ಮಂಡನೆಯಾಗಿ ಎರಡು ಸದನದಲ್ಲಿ ಪಾಸ್ ಆಗಿತ್ತು.

    ಈ ಕಾಯ್ದೆ ಅನ್ವಯ ಆರಂಭದಲ್ಲಿ ನೋಟಿಸ್ ನೀಡಲಾಗುತ್ತದೆ. ಬಳಿಕ ಶೋಕಾಸ್ ನೋಟಿಸ್ ನೀಡಿ ತನಿಖೆ ನಡೆಸಲಾಗುತ್ತದೆ. ಅಷ್ಟೇ ಅಲ್ಲದೇ ಎಸ್ಟೇಟ್ ಅಧಿಕಾರಿಗೆ ತೆರವುಗೊಳಿಸುವಂತೆ ಸೂಚಿಸಲಾಗುತ್ತದೆ. ಬಂಗಲೆಯಲ್ಲಿ 5 ತಿಂಗಳಿಗೂ ಹೆಚ್ಚು ದಿನಗಳ ಕಾಲ ವಾಸವಾಗಿದ್ದಲ್ಲಿ 10 ಲಕ್ಷ ರೂ. ದಂಡ ವಿಧಿಸುವ ಅಂಶ ಕಾಯ್ದೆಯಲ್ಲಿದೆ.

    ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಕಳೆದ ವರ್ಷ ಲಕ್ನೋನಲ್ಲಿರುವ ಸರ್ಕಾರಿ ಬಂಗಲೆ ಖಾಲಿ ಮಾಡಲು 2 ವರ್ಷಗಳ ಕಾಲಾವಕಾಶವನ್ನು ಕೇಳಿ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೆ, ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ಅವರ ಅಧಿಕೃತ ನಿವಾಸವನ್ನು ಬಿಎಸ್‍ಪಿ ಸಂಸ್ಥಾಪಕ ಹಾಗೂ ಮಾರ್ಗದರ್ಶಕ ಕನ್ಶಿ ರಾಮ್ ಅವರ ಸ್ಮಾರಕವನ್ನಾಗಿ ಪರಿವರ್ತಿಸಲು ಯತ್ನಿಸಿ ಟೀಕೆ ಒಳಗಾಗಿದ್ದರು.

  • ನೋವಾಗಿದೆ, ನಾನೇನು ಮಾಡಲು ಸಾಧ್ಯ, ನಾನು ಬಡವ: ಝೊಮ್ಯಾಟೊ ಡೆಲಿವರಿ ಬಾಯ್

    ನೋವಾಗಿದೆ, ನಾನೇನು ಮಾಡಲು ಸಾಧ್ಯ, ನಾನು ಬಡವ: ಝೊಮ್ಯಾಟೊ ಡೆಲಿವರಿ ಬಾಯ್

    ನವದೆಹಲಿ: ಮುಸ್ಲಿಂ ವ್ಯಕ್ತಿ ಆಹಾರವನ್ನು ತಂದಿದ್ದಕ್ಕೆ ಆರ್ಡರ್ ಕ್ಯಾನ್ಸಲ್ ಮಾಡಿದ ಸುದ್ದಿ ಇದೀಗ ದೇಶದೆಲ್ಲಡೆ ಚರ್ಚೆಯಾಗುತ್ತಿದೆ. ಈ ನಡುವೆ ನೋವಾಗಿದೆ, ನಾನು ಏನೂ ಮಾಡಬಹುದು, ನಾನು ಬಡವ ಎಂದು ಮುಸ್ಲಿಂ ಡೆಲಿವರಿ ಬಾಯ್ ಫಯಾಜ್ ಪ್ರತಿಕ್ರಿಯಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಫಯಾಜ್, ಆಹಾರವನ್ನು ಆರ್ಡರ್ ಮಾಡಿದ ವ್ಯಕ್ತಿಯ ವಿಳಾಸ ಕೇಳಲು ನಾನು ಅವರಿಗೆ ಕರೆ ಮಾಡಿದೆ. ಆದರೆ ಅವರು ಆರ್ಡರ್ ಕ್ಯಾನ್ಸಲ್ ಮಾಡಿದ್ದೇನೆ ಎಂದು ಹೇಳಿದ್ದರು. ಬಳಿಕ ಕಾರಣ ತಿಳಿದ ಮೇಲೆ ನನಗೆ ಬಹಳ ನೋವಾಗಿದೆ. ಆದರೆ ನಾನು ಏನೂ ಹೇಳಲು ಸಾಧ್ಯ. ಜನರು ಹೇಗೆ ಹೇಳುತ್ತಾರೋ ಹಾಗೆ. ನಾವು ಈ ಬಗ್ಗೆ ಏನೂ ಮಾಡಲು ಸಾಧ್ಯ. ನಾನು ಬಡವ ಹಾಗಾಗಿ ಇದನ್ನು ಸಹಿಸಿಕೊಳ್ಳಬೇಕು ಎದು ಹೇಳಿದ್ದಾರೆ.

    ಆಗಿದ್ದೇನು?
    ಮಂಗಳವಾರ ಅಮಿತ್ ಶುಕ್ಲಾ ಎಂಬರು ತಮ್ಮ ಆರ್ಡರ್ ಕ್ಯಾನ್ಸಲ್ ಮಾಡಿ ಝೊಮ್ಯಾಟೊ ಆ್ಯಪ್ ಅನ್ ಇನ್‍ಸ್ಟಾಲ್ ಮಾಡಿಕೊಂಡು ಈ ಸಂಬಂಧ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದರು. ಝೊಮ್ಯಾಟೊ ಆರ್ಡರ್ ನಾನು ಕ್ಯಾನ್ಸಲ್ ಮಾಡಿದ್ದೇನೆ. ಕಾರಣ ಹಿಂದೂ ಅಲ್ಲದ ವ್ಯಕ್ತಿಯ ಕೈಯಲ್ಲಿ ನನಗೆ ಆಹಾರ ಕಳುಹಿಸಲಾಗುತ್ತಿತ್ತು. ನಾನು ಡೆಲಿವರಿ ಬಾಯ್ ನನ್ನು ಬದಲಿಸಿ ಎಂದು ಕೇಳಿದ್ದಕ್ಕೆ ಆಗಲ್ಲ ಎಂದಿದ್ದರು. ಕೊನೆಗೆ ಆರ್ಡರ್ ಕ್ಯಾನ್ಸಲ್ ಮಾಡಿದ್ದರಿಂದ ಹಣ ರಿಫಂಡ್ ಮಾಡಲು ಸಾಧ್ಯವಿಲ್ಲ ಎಂದು ಕಂಪನಿ ತಿಳಿಸಿತು. ನೀವು ಡೆಲಿವರಿ ತೆಗೆದುಕೊಳ್ಳುವಂತೆ ನನ್ನ ಮೇಲೆ ಒತ್ತಡ ಹಾಕುವಂತಿಲ್ಲ ಮತ್ತು ನನಗೆ ರಿಫಂಡ್ ಬೇಕಾಗಿಲ್ಲ. ಹಾಗಾಗಿ ಆರ್ಡರ್ ಕ್ಯಾನ್ಸಲ್ ಮಾಡಿ ಎಂದು ಅಮಿತ್ ಟ್ವಿಟ್ಟರ್ ನಲ್ಲಿ ಝೊಮ್ಯಾಟೊಗೆ ಟ್ಯಾಗ್ ಮಾಡಿಕೊಂಡಿದ್ದರು.

    https://twitter.com/ZomatoIN/status/1156429449258250240?ref_src=twsrc%5Etfw%7Ctwcamp%5Etweetembed%7Ctwterm%5E1156429449258250240%7Ctwgr%5E363937393b636f6e74726f6c&ref_url=https%3A%2F%2Fwww.indiatoday.in%2Ftrending-news%2Fstory%2Fcustomer-cancels-zomato-order-for-sending-non-hindu-delivery-boy-their-classy-reply-wins-internet-1575491-2019-07-31

    ಮತ್ತೊಂದು ಟ್ವೀಟ್‍ನಲ್ಲಿ ಝೊಮ್ಯಾಟೊ ಆ್ಯಪ್ ಅನ್ ಇನ್‍ಸ್ಟಾಲ್ ಬಗ್ಗೆ ಹೇಳಿಕೊಂಡಿರುವ ಅಮಿತ್, ನಾನು ಆ ವ್ಯಕ್ತಿಯಿಂದ ಆಹಾರ ಸ್ವೀಕರಿಸಲ್ಲ ಎಂದು ಹೇಳುತ್ತಿದ್ದರೂ ಕಂಪನಿ ನನ್ನ ಮೇಲೆ ಒತ್ತಡ ಹಾಕುತ್ತಿದೆ. ಆರ್ಡರ್ ಕ್ಯಾನ್ಸಲ್ ಮಾಡಿದ್ರೂ ರಿಫಂಡ್ ಮಾಡಿಲ್ಲ. ಈ ಸಂಬಂಧ ನಮ್ಮ ವಕೀಲರ ಬಳಿ ಚರ್ಚಿಸುತ್ತೇನೆ ಎಂದು ಹೇಳುವ ಮೂಲಕ ಕೋರ್ಟ್ ಮೊರೆ ಹೋಗುವ ಮಾಹಿತಿ ನೀಡಿದ್ದರು. ಈ ಟ್ವೀಟಿಗೆ ಪ್ರತಿಕ್ರಿಯಿಸಿರುವ ಝೊಮ್ಯಾಟೊ, ಆಹಾರಕ್ಕೆ ಯಾವುದೇ ಧರ್ಮವಿರಲ್ಲ. ಆಹಾರವೇ ಒಂದು ಧರ್ಮ ಎಂದು ಚಿಕ್ಕದಾಗಿ ಬರೆದು ಖಡಕ್ ತಿರುಗೇಟು ನೀಡಿತ್ತು.

    ಈ ಕುರಿತು ಪ್ರತಿಕ್ರಿಯಿಸಿರುವ ಝೊಮ್ಯಾಟೊ ಸ್ಥಾಪಕ ದೀಪೇಂದ್ರ ಗೊಯಲ್, ನಮಗೆ ಐಡಿಯಾ ಆಫ್ ಇಂಡಿಯಾ, ಗೌರವಯುತ ಗ್ರಾಹಕರು ಮತ್ತು ಪಾರ್ಟನರ್ ಗಳ ವಿವಿಧತೆಯ ಬಗ್ಗೆ ಹೆಮ್ಮೆ ಇದೆ. ಆದರೆ ನಮ್ಮ ಮೌಲ್ಯಗಳಿಗೆ ಅಡ್ಡಿಯುಂಟು ಮಾಡುವ ವ್ಯವಹಾರವನ್ನು ಕಳೆದುಕೊಳ್ಳುವುದರಿಂದ ನಮಗೆ ಯಾವುದೇ ರೀತಿಯಲ್ಲಿ ದುಃಖ ಆಗಲಾರದು ಎಂದು ಬರೆದು ಕೊನೆಗೆ ತ್ರಿವರ್ಣ ಧ್ವಜದ ಟಿಕ್ಕರ್ ಹಾಕಿಕೊಂಡಿದ್ದಾರೆ.

    https://twitter.com/UberEats_IND/status/1156552511509024768

    ಭಾರೀ ಚರ್ಚೆ: ಈಗ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆಗುತ್ತಿದ್ದು ಈ ಹಿಂದೆ ವಾಜಿದ್ ಎಂಬವರು ಹಲಾಲವಲ್ಲದ ಆಹಾರ ಕಳುಹಿಸಿದ್ದಕ್ಕೆ ನಾನು ಈ ಆಹಾರ ಸ್ವೀಕರಿಸುವುದಿಲ್ಲ ಎಂದಿದ್ದರು. ಇದಕ್ಕೆ ಝೊಮ್ಯಾಟೋ ನಿಮ್ಮ ಆರ್ಡರ್ ನಂಬರ್ ಕಳುಹಿಸಿ ಎಂದು ಕೇಳಿಕೊಂಡಿತ್ತು. ಈ ವಿಚಾರವನ್ನು ಪ್ರಸ್ತಾಪಿಸಿ ಜನ ಒಂದು ಧರ್ಮದವರಿಗೆ ಈ ರೀತಿ, ಇನ್ನೊಂದು ಧರ್ಮದವರಿಗೆ ಈ ರೀತಿ ಮಾಡುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ.

    ಝೂಮ್ಯಾಟೋದ ನಿರ್ಧಾರಕ್ಕೆ ಉಬರ್ ಈಟ್ಸ್ ಬೆಂಬಲ ನೀಡಿದೆ. “ಆಹಾರಕ್ಕೆ ಯಾವುದೇ ಧರ್ಮವಿರಲ್ಲ. ಆಹಾರವೇ ಒಂದು ಧರ್ಮ” ಎಂದು ಬರೆದಿರುವ ಟ್ವೀಟ್ ಅನ್ನು ರೀಟ್ವೀಟ್ ಮಾಡಿ ನಿಮ್ಮ ನಿರ್ಧಾರ ಪರ ಇದ್ದೇವೆ ಎಂದು ಹೇಳಿಕೊಂಡಿದೆ.

  • ರಾಜ್ಯಪಾಲರ ಆದೇಶಕ್ಕೆ ಡೋಂಟ್ ಕೇರ್ – ರಾತ್ರೋ ರಾತ್ರಿ ಕಡತ ವಿಲೇವಾರಿ

    ರಾಜ್ಯಪಾಲರ ಆದೇಶಕ್ಕೆ ಡೋಂಟ್ ಕೇರ್ – ರಾತ್ರೋ ರಾತ್ರಿ ಕಡತ ವಿಲೇವಾರಿ

    – ಬಡ್ತಿ, ನೇಮಕಾತಿ, ವರ್ಗಾವಣೆಯಲ್ಲಿ ಸರ್ಕಾರ ಬ್ಯುಸಿ

    ಬೆಂಗಳೂರು: ರಾಜ್ಯಪಾಲರ ಆದೇಶಕ್ಕೂ ಡೋಂಟ್ ಕೇರ್ ಎನ್ನದ ಮೈತ್ರಿ ಸರ್ಕಾರದ ಸಿಎಂ ಮತ್ತು ಸಚಿವರು ರಾತ್ರೋ ರಾತ್ರಿ ಕಡತಗಳನ್ನು ವಿಲೇವಾರಿ ಮಾಡುತ್ತಿದ್ದಾರೆ.

    ಶಾಸಕರ ರಾಜೀನಾಮೆ ಪರ್ವದ ಹಿನ್ನೆಲೆ ಪತನದ ಹಾದಿಯಲ್ಲಿರುವ ಮೈತ್ರಿ ಸರ್ಕಾರ ಯಾವುದೇ ಮಹತ್ತರ ನಿರ್ಧಾರವನ್ನು ಕೈಗೊಳ್ಳಬೇಡಿ ಎಂದು ರಾಜ್ಯಪಾಲರು ಆದೇಶ ನೀಡಿದ್ದರು. ಈ ಆದೇಶವನ್ನು ಲೆಕ್ಕಿಸದ ಸರ್ಕಾರದ ರಾತ್ರಿ 10 ಗಂಟೆಯ ಸಮಯದಲ್ಲೂ ಕೆಲಸ ಮಾಡುತ್ತಿರುವುದು ಕಂಡು ಬಂದಿದೆ.

    ತಡ ರಾತ್ರಿ ಶಕ್ತಿ ಭವನದ ಮುಂದೆ ಆಧಿಕಾರಿಗಳು ಫೈಲ್ ಹಿಡಿದುಕೊಂಡು ಓಡಾಡುತ್ತಿರುವುದು ಕಂಡು ಬಂದಿದೆ. ಬಹುಮತ ಸಾಬೀತು ಪಡಿಸುವ ಒತ್ತಡ ನಡುವೆಯೂ ಮೈತ್ರಿ ಸರ್ಕಾರ ಕಡತ ವಿಲೇವಾರಿಯಲ್ಲಿ ಬ್ಯುಸಿಯಾಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    ಬಡ್ತಿ, ನೇಮಕಾತಿ, ವರ್ಗಾವಣೆ ಮತ್ತು ಅನುದಾನ ಬಿಡುಗಡೆಯಲ್ಲಿ ತೊಡಗಿರುವ ಸರ್ಕಾರ, ಹಳೆಯ ದಿನಾಂಕವನ್ನು ಹಾಕಿ ಕಡತ ವಿಲೇವಾರಿ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಸವರಾಜು ಬೊಮ್ಮಯಿ ಆರೋಪ ಮಾಡಿದ್ದರು. ಅವರು ಆರೋಪಕ್ಕೆ ಈಗ ನಡೆಯುತ್ತಿರುವ ದೃಶ್ಯಗಳು ಪುಷ್ಠಿ ನೀಡಿದ್ದಂತೆ ಆಗಿದೆ.

  • ಮಾಧ್ಯಮಗಳಿಗೆ ಮಾಹಿತಿ ನೀಡಿದ್ರೆ ಅಮಾನತು – ಪೊಲೀಸ್ ಇಲಾಖೆಯಲ್ಲಿ ಹೊಸ ಆರ್ಡರ್

    ಮಾಧ್ಯಮಗಳಿಗೆ ಮಾಹಿತಿ ನೀಡಿದ್ರೆ ಅಮಾನತು – ಪೊಲೀಸ್ ಇಲಾಖೆಯಲ್ಲಿ ಹೊಸ ಆರ್ಡರ್

    ಮೈಸೂರು: ಮಾಧ್ಯಮಗಳಿಗೆ ಮಾಹಿತಿ ನೀಡಿದರೆ ಅಮಾನತು ಮಾಡುತ್ತೇವೆ ಎಂದು ಮೈಸೂರು ಪೊಲೀಸ್ ಆಯುಕ್ತರಾದ ಕೆ.ಟಿ. ಬಾಲಕೃಷ್ಣ ಲಿಖಿತ ರೂಪದಲ್ಲಿ ಆದೇಶ ಹೊರಡಿಸಿದ್ದಾರೆ.

    ಆದೇಶದಲ್ಲಿ ಏನಿದೆ?
    ರಾಜ್ಯ ಸರ್ಕಾರದ ಮಾಧ್ಯಮ ನಿಮಯದ ಪ್ರಕಾರ ಎಸ್ಪಿ, ಪೊಲೀಸ್ ಆಯುಕ್ತರು ಮತ್ತು ವಲಯ ಐಜಿಪಿಯವರು ಅಥವಾ ಇವರಿಂದ ಅನುಮೋದನೆಗೊಂಡ ನೋಡೆಲ್ ಅಧಿಕಾರಿಗಳು ಮಾತ್ರ ಮಾಧ್ಯಮಕ್ಕೆ ಮಾಹಿತಿ ಕೊಡಬೇಕು.

    ಈ ನಿಯಮದ ಪ್ರಕಾರ ಮೈಸೂರು ನಗರದ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಅನುಮತಿ ಇಲ್ಲದೆ ಇಲಾಖೆಯ ಯಾವುದೇ ವಿವರಗಳನ್ನು ಮಾಧ್ಯಮಗಳಿಗೆ ನೀಡುವಂತಿಲ್ಲ. ಒಂದು ವೇಳೆ ನೀಡಿದರೆ ವಿಚಾರಣೆ ಬಾಕಿ ಇರಿಸಿಕೊಂಡು ಅಮಾನತು ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಪೊಲೀಸ್ ಆಯುಕ್ತರ ಈ ಆದೇಶದಿಂದ ಇಡೀ ಪೊಲಿಸ್ ಇಲಾಖೆಯೇ ಬೆಸ್ತು ಬಿದ್ದಿದೆ.

  • ಡೆಪ್ಯೂಟಿ ಕಮಿಶನರ್ ಆಗಿ ನೇಮಕ – ತಂದೆಗೆ ಮಗಳಿಂದ ಖಡಕ್ ಆದೇಶ

    ಡೆಪ್ಯೂಟಿ ಕಮಿಶನರ್ ಆಗಿ ನೇಮಕ – ತಂದೆಗೆ ಮಗಳಿಂದ ಖಡಕ್ ಆದೇಶ

    ಕೋಲ್ಕತ್ತಾ: ಮಂಗಳವಾರ ಐಎಸ್‍ಸಿ ಪಠ್ಯದ 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ದೇಶಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಂದು ದಿನದ ಮಟ್ಟಕ್ಕೆ ಡೆಪ್ಯೂಟಿ ಕಮಿಶನರ್ ಆಗಿ ತನ್ನ ತಂದೆಗೆ ಆರ್ಡರ್ ಮಾಡಿದ್ದಾಳೆ.

    ರಿಚ್ಚ ಸಿಂಗ್ ಜಿ.ಡಿ ಬಿರ್ಲಾ ಸೆಂಟರ್‍ನಲ್ಲಿ ಓದುತ್ತಿದ್ದು, 12ನೇ ತರಗತಿ ಪರೀಕ್ಷೆಯಲ್ಲಿ ಶೇ. 99.25 ಅಂಕಗಳನ್ನು ಪಡೆದಿದ್ದಾಳೆ. ರಿಚ್ಚ ಶೇ. 99.25 ಅಂಕಗಳನ್ನು ಪಡೆಯುವ ಮೂಲಕ ದೇಶಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾಳೆ. ರಿಚ್ಚ ಸಾಧನೆಯನ್ನು ಗೌರವಿಸಲು ಕೋಲ್ಕತ್ತಾ ಪೊಲೀಸರು ಆಕೆಯನ್ನು ಒಂದು ದಿನದ ಮಟ್ಟಿಗೆ ಡೆಪ್ಯೂಟಿ ಕಮಿಶನರ್ ಹುದ್ದೆಯನ್ನು ನೀಡಿ ಪುರಸ್ಕರಿಸಿದ್ದರು.

    ರಿಚ್ಚ ಸಿಂಗ್ ಸಾಧನೆಯನ್ನು ಪ್ರೋತ್ಸಾಹಿಸಲು ಕೋಲ್ಕತ್ತಾ ಪೊಲೀಸರು ಆಕೆಗೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೂ ಡೆಪ್ಯೂಟಿ ಕಮಿಷನರ್ ಆಗಿ ನೇಮಿಸಿದ್ದರು. ಇದೇ ವಿಭಾಗದಲ್ಲಿ ರಿಚ್ಚ, ತಂದೆ ರಾಜೇಶ್ ಸಿಂಗ್ ಅವರು ಹೆಚ್ಚುವರಿ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ.

    ರಿಚ್ಚ ಡೆಪ್ಯೂಟಿ ಕಮಿಶನರ್ ಆಗಿ ಕುರ್ಚಿಯಲ್ಲಿ ಕುಳಿತ್ತಿದ್ದ ವೇಳೆ ಅಲ್ಲಿದ್ದ ಪೊಲೀಸರು ನಿನ್ನ ತಂದೆಗೆ ಏನು ಆದೇಶ ನೀಡಬೇಕು ಎಂದುಕೊಂಡಿದ್ದೀಯಾ ಎಂದು ಕೇಳಿದ್ದಾರೆ. ಅದಕ್ಕೆ ರಿಚ್ಚ ನನ್ನ ತಂದೆ ಬೇಗನೆ ಮನೆಗೆ ಮರಳಬೇಕು ಎಂದು ಆದೇಶಿಸುತ್ತೇನೆ ಎಂದು ಹೇಳಿದ್ದಾಳೆ.

    ಪೊಲೀಸ್ ಅಧಿಕಾರಿಗಳು 12ನೇ ತರಗತಿ ನಂತರ ಏನು ಓದಲು ಇಷ್ಟಪಡುತ್ತೀಯಾ ಎಂದು ಕೇಳಿದ್ದಾರೆ. ಆಗ ಅವಳು ಮುಂದೆ ಇತಿಹಾಸ ಅಥವಾ ಸಮಾಜಶಾಸ್ತ್ರ ಓದಬೇಕೆಂದು ಬಯಸುತ್ತೇನೆ. ಅಲ್ಲದೆ ಯುಪಿಎಸ್‍ಸಿ ಪರೀಕ್ಷೆ ಕೂಡ ಬರೆಯುವ ಕನಸು ಇದೆ ಎಂದು ಉತ್ತರಿಸಿದ್ದಾಳೆ.

    ಮಗಳು ಡೆಪ್ಯೂಟಿ ಕಮಿಶನರ್ ಸ್ಥಾನದಲ್ಲಿ ಕುಳಿತ್ತಿದ್ದನ್ನು ನೋಡಿದ ತಂದೆ ರಾಜೇಶ್ ಭಾವುಕರಾಗಿ,”ನನ್ನ ಖುಷಿಯನ್ನು ಹೇಗೆ ಹೇಳಬೇಕು ಎಂಬುದು ನನಗೆ ಗೊತ್ತಾಗುತ್ತಿಲ್ಲ. ಈ ದಿನ ನನ್ನ ಮಗಳು ನನಗೆ ಬಾಸ್ ಆಗಿದ್ದಾಳೆ. ಬೇಗ ಮನೆಗೆ ಬರಬೇಕು ಎಂದು ಆದೇಶಿಸಿದ್ದಾಳೆ. ನಾನು ಆಕೆಯ ಆದೇಶವನ್ನು ಪಾಲಿಸುತ್ತೇನೆ” ಎಂದು ಪ್ರತಿಕ್ರಿಯಿಸಿದ್ದಾರೆ.

  • ಡಿಸಿಪಿ ಅಣ್ಣಾಮಲೈ ವರ್ಗಾವಣೆ ಆದೇಶ ರದ್ದು

    ಡಿಸಿಪಿ ಅಣ್ಣಾಮಲೈ ವರ್ಗಾವಣೆ ಆದೇಶ ರದ್ದು

    ಬೆಂಗಳೂರು: ನಗರದ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರನ್ನು ವರ್ಗಾವಣೆ ಮಾಡಲ್ಲ ಎಂದು ಸರ್ಕಾರ ಹೇಳಿದೆ.

    ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿಯಲ್ಲಿ ಅಣ್ಣಾಮಲೈ ಹೆಸರಿತ್ತು. ವರ್ಗಾವಣೆಯಾದ ಬಳಿಕ ಅವರಿಗೆ ಯಾವುದೇ ಹುದ್ದೆ ನೀಡಿರಲಿಲ್ಲ. ಹೀಗಾಗಿ ಅಣ್ಣಾಮಲೈ ವರ್ಗಾವಣೆ ವಿಚಾರದ ಚರ್ಚೆಗೆ ಗ್ರಾಸವಾಗಿತ್ತು.

    ಚರ್ಚೆಯಾದ ಕೂಡಲೇ ಎಚ್ಚೆತ್ತುಕೊಂಡ ಸರ್ಕಾರ ಅಣ್ಣಾಮಲೈ ವರ್ಗಾವಣೆಯನ್ನು ರದ್ದು ಮಾಡಿದೆ. ಅಧಿಕಾರಿಗಳ ಹೆಸರನ್ನು ಟೈಪ್ ಮಾಡುವ ವೇಳೆ ಸಿಬ್ಬಂದಿ ಎಡವಟ್ಟಿನಿಂದಾಗಿ ಅಣ್ಣಾಮಲೈ ಹೆಸರು ನಮೂದಾಗಿದ್ದರಿಂದ ಈ ಗೊಂದಲ ಸೃಷ್ಟಿಯಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

    ಸಿಲಿಕಾನ್ ಸಿಟಿಯಲ್ಲಿ ಭೂ ಮಾಫಿಯಾ ಮಟ್ಟಹಾಕಲು ಸರ್ಕಾರ ಚಿಕ್ಕಮಗಳೂರಿನಲ್ಲಿ ಎಸ್‍ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಣ್ಣಾಮಲೈ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿಸಿತ್ತು.

    ಕಳೆದ ತಿಂಗಳು ಜನವರಿಯಲ್ಲಿ ಅಣ್ಣಾಮಲೈ ಅವರು ಬೆಳ್ಳಂಬೆಳಗ್ಗೆ ರೌಡಿಶೀಟರ್‍ಗಳ ಮನೆ ಮೇಲೆ ದಾಳಿ ಮಾಡಿ ಬಿಸಿ ಮುಟ್ಟಿಸಿದ್ದರು. ಕೋಣನಕುಂಟೆ, ಸುಬ್ರಮಣ್ಯಪುರ, ಕುಮಾರಸ್ವಾಮಿ ಲೇಔಟ್, ತಲ್ಲಘಟ್ಟಪುರ ಹಾಗೂ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಮಾರಕಾಸ್ತ್ರಗಳು ಹಾಗೂ ದಾಖಲೆ ಇಲ್ಲದ ನೂರಾರು ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದರು. ರೌಡಿಗಳು ಕೊಲೆ, ಕೊಲೆ ಯತ್ನ, ರಾಬರಿ, ಡಕಾಯಿತಿ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದರು. ದಾಳಿ ನಡೆಸಿದ ಬಳಿಕ ಅಣ್ಣಾಮಲೈ ಅಪರಾಧ ಕೃತ್ಯದಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv