Tag: Order

  • ಶಾಸಕ ಡಾ.ಸುಧಾಕರ್‌ಗೆ ಮಣಿದ ಕಾಂಗ್ರೆಸ್!?

    ಶಾಸಕ ಡಾ.ಸುಧಾಕರ್‌ಗೆ ಮಣಿದ ಕಾಂಗ್ರೆಸ್!?

    ಚಿಕ್ಕಬಳ್ಳಾಪುರ: ಕ್ಷೇತ್ರದ ಶಾಸಕ ಡಾ.ಕೆ ಸುಧಾಕರ್ ಅವರ ಬೆಂಬಲಿಗರನ್ನು ಅಮಾನತ್ತು ಮಾಡಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತನ್ನ ಆದೇಶವನ್ನು ಹಿಂಪಡೆದಿದೆ.

    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜನವರಿ 8 ರಂದು ಶಾಸಕ ಸುಧಾಕರ್ ಬೆಂಬಲಿಗರನ್ನ ಅಮಾನತು ಮಾಡಿದ್ದ ಕೆಪಿಸಿಸಿ ಒಂದು ವಾರದಲ್ಲೇ ಅಮಾನತು ಆದೇಶ ರದ್ದುಪಡಿಸಿದೆ. ಇದರೊಂದಿಗೆ ಡಾ. ಸುಧಾಕರ್ ಅವರ ಒತ್ತಡಕ್ಕೆ ಮಣಿದಿದೆ ಎಂಬ ಅನುಮಾನ ಮೂಡಿದೆ.

    ಶಾಸಕ ಸುಧಾಕರ್ ಅವರಿಗೆ ಪಿಸಿಬಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೈ ತಪ್ಪಿದ್ದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಕೆಪಿಸಿಸಿ ಕಚೇರಿ ಎದುರು ಜನವರಿ 8 ರಂದು ಪ್ರತಿಭಟನೆ ನಡೆಸಿದ್ದರು.  ತಮ್ಮ ಪ್ರತಿಭಟನೆಗೆ ಪಕ್ಷದ ನಾಯಕರು ಬೆಲೆ ನೀಡದ ಪರಿಣಾಮ ಅಸಮಾಧಾನಗೊಂಡ ಶಾಸಕರ ಬೆಂಬಲಿಗರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಕಾರ್ಯಕಾರಿಣಿ ಸಭೆ ಬಳಿಯೂ ಪ್ರತಿಭಟನೆ ನಡೆಸಿದ್ದರು.

     

    ಪಕ್ಷದ ಕಾರ್ಯಕರ್ತರ ಪ್ರತಿಭಟನೆಗೆ ಕೆರಳಿದ್ದ ವೇಣುಗೋಪಾಲ್ ಅವರು ಸುಧಾಕರ್ ಅವರ ಬೆಂಬಲಿಗರನ್ನು ಅಮಾನತು ಮಾಡುವಂತೆ ಸೂಚಿಸಿದ್ದರು. ಇದರ ಅನ್ವಯ ಕೆಪಿಸಿಸಿ ಕಾರ್ಯರ್ಶಿ ಕೃಷ್ಣಮೂರ್ತಿ, ಚಿಕ್ಕಬಳ್ಳಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ. ರಫೀಕ್ ಹಾಗೂ ಮಂಚೇನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಅವರನ್ನು ಅಮಾನತು ಮಾಡಲಾಗಿತ್ತು. ಸದ್ಯ ಈ ಅಮಾನತು ರದ್ದಾಗಿದೆ.

    ಆಪರೇಷನ್ ಕಮಲ ಪ್ಲಾಪ್ ಆದ ಸಮಯದಲ್ಲೇ ವೇಣುಗೋಪಾಲ್ ಜೊತೆ ಸಾಕಷ್ಟು ಓಡಾಟ ನಡೆಸಿದ್ದ ಶಾಸಕ ಸುಧಾಕರ್ ತಮ್ಮ ಬೆಂಬಲಿಗರ ಅಮಾನತು ಆದೇಶವನ್ನ ರದ್ದುಪಡಿಸಲು ಈ ಮೂಲಕ ಯಶಸ್ವಿಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆರ್ಮಿಯಲ್ಲಿ ಸಲಿಂಗಕಾಮಕ್ಕೆ ಅವಕಾಶವಿಲ್ಲ- ಬಿಪಿನ್ ರಾವತ್

    ಆರ್ಮಿಯಲ್ಲಿ ಸಲಿಂಗಕಾಮಕ್ಕೆ ಅವಕಾಶವಿಲ್ಲ- ಬಿಪಿನ್ ರಾವತ್

    ನವದೆಹಲಿ: ಸಲಿಂಗಕಾಮ ಅಪರಾಧವಲ್ಲ ಅಂತ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಆರ್ಮಿಗೆ ಇದು ಅನ್ವಯವಾಗುವುದಿಲ್ಲ ಎಂದು ಭೂಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

    ಸೇನೆಯ ವಾರ್ಷಿಕ ಸುದ್ದಿಗೋಷ್ಠಿ ನಡೆಸಿ ಇಂದು ಮಾತನಾಡಿದ ಅವರು, ಸಲಿಂಗಕಾಮಕ್ಕೆ ಸೇನೆಯಲ್ಲಿ ಅವಕಾಶ ನೀಡಲ್ಲ. ಭಾರತೀಯ ಸೇನೆಯ ಕಾನೂನಿನ ವಿಧಿಗಳ ಪ್ರಕಾರ ಸಲಿಂಗಕಾಮಕ್ಕೆ ಅವಕಾಶವಿಲ್ಲ. ಹೀಗಾಗಿ ಕೋರ್ಟ್ ಆದೇಶವನ್ನು ಸೇನೆಯಲ್ಲಿ ಅಳವಡಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

    ನಾವು ದೇಶದ ಕಾನೂನುಗಳನ್ನು ಮೀರಿದ ವ್ಯಕ್ತಿಗಳಲ್ಲ ಎಂದು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಅವರು, ಸೇನೆಗೆ ಸೇರಿದವರು ಕೆಲವು ಹಕ್ಕುಗಳನ್ನು ಕಳೆದುಕೊಳ್ಳುತ್ತಾರೆ. ಇದರಿಂದಾಗಿ ಕೆಲವು ಸಾಮಾನ್ಯರಿಗಿಂತ ನಮಗೆ ಭಿನ್ನವಾಗಿರುತ್ತದೆ. ಈ ನಿಟ್ಟಿನಲ್ಲಿ ಸಲಿಂಗಕಾಮಕ್ಕೆ ಸೇನೆಯಲ್ಲಿ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

    ಕೋರ್ಟ್ ತೀರ್ಪು ಏನು?:
    ಸಲಿಂಗಕಾಮ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಸೆಪ್ಟೆಂಬರ್ 6ರಂದು ತೀರ್ಪು ನೀಡಿತ್ತು. ಈ ತೀರ್ಪಿನಿಂದಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377ರ ರದ್ದುಗೊಳಿಸಲಾಗಿದೆ. ಐಪಿಸಿ ಸೆಕ್ಷನ್ 377ರ ಪ್ರಕಾರ ಯಾವುದೇ ವ್ಯಕ್ತಿ, ಮಹಿಳೆ ಅಥವಾ ಪ್ರಾಣಿಗಳೊಂದಿಗೆ ನಿಸರ್ಗಕ್ಕೆ ವಿರುದ್ಧವಾಗಿ ಲೈಂಗಿಕ ಕ್ರಿಯೆ ನಡೆಸಿದರೆ ಅದು ಅಪರಾಧವಾಗಿತ್ತು. ಇಂತಹ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಅಥವಾ 10 ವರ್ಷ ಜೈಲು ಹಾಗೂ ದಂಡ ವಿಧಿಸಬಹುದಾಗಿತ್ತು.

    ಕಾಲದ ಜೊತೆ ಕಾನೂನು ಕೂಡ ಬದಲಾಗಬೇಕು ಎಂದು ಹೇಳಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಆರ್. ಫಾಲಿ ನಾರಿಮನ್, ಎ.ಎಂ.ಖಾನ್‍ವಿಲ್ಕರ್, ಡಿ.ವೈ.ಚಂದ್ರಚೂಡ್ ಮತ್ತು ಇಂದೂ ಮಲ್ಹೋತ್ರ ಅವರನ್ನು ಒಳಗೊಂಡ ಈ ಪೀಠವು ಐಪಿಸಿ 377 ಅನ್ನು ಅಸಿಂಧುಗೊಳಿಸಿ ಆದೇಶವನ್ನು ಪ್ರಕಟಿಸಿತ್ತು. ಈ ಮೂಲಕ 156 ವರ್ಷದ ಹಿಂದಿನ ಬ್ರಿಟಿಷ್ ಕಾನೂನು ರದ್ದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೊಸ ವರ್ಷದಂದು ಪ್ರವಾಸಿ ತಾಣ ಮುತ್ತತ್ತಿಗೆ ನೋ ಎಂಟ್ರಿ

    ಹೊಸ ವರ್ಷದಂದು ಪ್ರವಾಸಿ ತಾಣ ಮುತ್ತತ್ತಿಗೆ ನೋ ಎಂಟ್ರಿ

    ಮಂಡ್ಯ: ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ.

    ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ ಹಲವು ಅಹಿತಕರ ಘಟನೆಗಳು ಕೂಡ ಈ ಹಿಂದೆ ಸಂಭವಿಸಿದೆ. ಅಲ್ಲದೆ ಪ್ರದೇಶದಲ್ಲಿ ಹೊಸ ವರ್ಷ ಆಚರಣೆಗೆಂದು ಬರುವ ಪುಂಡ ಪೋಕರಿಗಳಿಗೆ ಕಡಿವಾಣ ಹಾಕಬೇಕೆಂದು ಇಲ್ಲಿನ ಆಡಳಿತ ಮಂಡಳಿ ಹೊಸ ತೀರ್ಮಾನವನ್ನು ತೆಗೆದುಕೊಂಡಿದೆ. ಇದನ್ನೂ ಓದಿ: ಹಚ್ಚಹಸಿರಿನ ಮಧ್ಯೆ ಹಾಲ್ನೊರೆ ಸೂಸುತ್ತಾ ಜುಳು-ಜುಳು ಹರೀತಿದೆ ಇರ್ಪು ಫಾಲ್ಸ್

    ಈ ಬಾರಿ ಮುತ್ತತ್ತಿಯಲ್ಲಿ ಪ್ರವಾಸಿಗರು ಹೊಸ ವರ್ಷ ಆಚರಣೆಗೆ ಬರುವಂತಿಲ್ಲ. ಹೌದು, ಡಿಸೆಂಬರ್ 31 ರ ಬೆಳಗ್ಗೆ 6 ಗಂಟೆಯಿಂದ 2019 ಜನವರಿ 1ರ ಮಧ್ಯರಾತ್ರಿವರೆಗೂ ಪ್ರವಾಸಿಗರ ಪ್ರವೇಶವನ್ನು ಮುತ್ತತ್ತಿಯಲ್ಲಿ ನಿಷೇಧಿಸಲಾಗಿದೆ. ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡುವ ಸಾಧ್ಯತೆ ಹೆಚ್ಚಾಗಿದ್ದು, ಕಳೆದ ಕೆಲವು ವರ್ಷಗಳಿಂದ ಹಲವು ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದನ್ನು ತಡೆಯಬೇಕು ಎಂಬ ಉದ್ದೇಶದಿಂದ ಪೊಲೀಸ್ ಇಲಾಖೆ ಮುತ್ತತ್ತಿಯಲ್ಲಿ ಪ್ರವಾಸಿಗರನ್ನು ಹೊಸ ವರ್ಷ ಆಚರಣೆಗೆ ಬಿಡಬಾರದು ಎಂದು ಅಲ್ಲಿನ ಅಧಿಕಾರಗಳ ಬಳಿ ಮನವಿ ಮಾಡಿಕೊಂಡಿದ್ದರು.

    ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕಾವೇರಿ ನದಿ ಹರಿಯುತ್ತಿದ್ದು, ಮೋಜು ಮಸ್ತಿ ವೇಳೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಪ್ರವಾಸಿಗರ ಹಿತದೃಷ್ಟಿಗಾಗಿ ಮುತ್ತತ್ತಿಗೆ ಹೊಸ ವರ್ಷದ ವೇಳೆ ಪ್ರವಾಸಿಗರಿಗೆ ನಿಷೇಧ ಹೇರಿ ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಅವರು ಪೊಲೀಸರ ಮನವಿಗೆ ಸಮ್ಮತಿಸಿ ಆದೇಶ ಹೊರಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಜಿಎಫ್ ಚಿತ್ರ ಬಿಡುಗಡೆಗೆ ತಡೆಯಾಜ್ಞೆ- ಕೋರ್ಟ್ ಆದೇಶದಲ್ಲೇನಿದೆ?

    ಕೆಜಿಎಫ್ ಚಿತ್ರ ಬಿಡುಗಡೆಗೆ ತಡೆಯಾಜ್ಞೆ- ಕೋರ್ಟ್ ಆದೇಶದಲ್ಲೇನಿದೆ?

    ಬೆಂಗಳೂರು: ಕೆಜಿಎಫ್ ಚಿತ್ರ ಬಿಡುಗಡೆ ಬಗ್ಗೆ 10 ನೇ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದ ಪ್ರತಿ ಲಭ್ಯವಾಗಿದೆ.

    ಕೋರ್ಟ್ ಆದೇಶದಲ್ಲಿ, ಹಕ್ಕುಚ್ಯುತಿ ಸಂಬಂಧಪಟ್ಟಂತೆ ವೆಂಕಟೇಶ್ ಹಾಗೂ ಆನಂದ್ ಎಂಬವರು ಚಿತ್ರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಚಲನಚಿತ್ರಕ್ಕೆ ಸಂಬಂದಪಟ್ಟ ಆರ್. ಲಕ್ಷ್ಮೀನಾರಾಯಣ್ ಹಾಗೂ ವಿಜಯ್ ಕಿರಗಂದೂರು ಇದೂವರೆಗೂ ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಹೀಗಾಗಿ ಮುಂದಿನ ವಿಚಾರಣೆವರೆಗೂ ಚಲನಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಲಾಗಿದೆ.

    ಅರ್ಜಿದಾರರ ಹೆಸರು:
    1. ವೆಂಕಟೇಶ್ ಜಿ.
    ವಕೀಲರು ಕೆ. ರಘುನಾಥ್
    2. ಆನಂದ್ ಎಸ್
    ಮಾಲೀಕರು, ಅಶ್ವಿನಿ ಫಿಲಂಸ್ , ನಂ 29/1, 1ನೇ ಮುಖ್ಯ ರಸ್ತೆ, 1ನೇ ಕ್ರಾಸ್, ಅಜಾದ್ ನಗರ, ಬೆಂಗಳೂರು.

    ಪ್ರತಿವಾದಿಗಳು:
    1. ಲಕ್ಷ್ಮೀನಾರಾಯಣ ಆರ್ ಅಲಿಯಾಸ್ ಲಕ್ಷ್ಮೀ ನಾರಾಯಣ ಗೌಡ
    2. ವಿಜಯ್ ಕಿರಗಂದೂರ್
    ಮಾಲೀಕರು, ಹೊಂಬಾಳೆ ಫಿಲಂಸ್, ನಂ 1312, 2ನೇ ಮಹಡಿ, 11ನೇ ಮುಖ್ಯರಸ್ತೆ, ವಿಜಯನಗರ, ಬೆಂಗಳೂರು.
    ನಂ 45/11 3ನೇ ಮಹಡಿ, ಕುಮಾರಕೃಪ, ಉತ್ತರ ಉದ್ಯಾನವನ ರಸ್ತೆ, ಗಾಂಧಿಭವನ, ಬೆಂಗಳೂರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೋರ್ಟ್ ಆದೇಶವನ್ನು ಧಿಕ್ಕರಿಸುತ್ತಿರುವುದು ದೇಶದ ದುರಂತ: ನಾಗಮೋಹನ್ ದಾಸ್

    ಕೋರ್ಟ್ ಆದೇಶವನ್ನು ಧಿಕ್ಕರಿಸುತ್ತಿರುವುದು ದೇಶದ ದುರಂತ: ನಾಗಮೋಹನ್ ದಾಸ್

    ಮಂಗಳೂರು: ಅಯೋಧ್ಯೆ ವಿಚಾರದಲ್ಲಿ ಹೀಗೇ ತೀರ್ಪು ನೀಡಬೇಕೆಂದು ಒತ್ತಡ ಹೇರಲಾಗುತ್ತಿದೆ. ಇದು ದೇಶದ ದುರಂತ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ನಾಗಮೋಹನ್ ದಾಸ್ ಹೇಳಿದ್ದಾರೆ.

    ನಗರದಲ್ಲಿ ನಡೆದ ಎಡಪಂಥೀಯ ಚಿಂತಕರ ಜನನುಡಿ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ನ್ಯಾಯಾಂಗದ ಸ್ವಾತಂತ್ರ್ಯ ಕಸಿದುಕೊಳ್ಳಲಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಆದೇಶಕ್ಕಾಗಿ ಸುಪ್ರೀಂ ಕೋರ್ಟ್ ಮೇಲೆ ಒತ್ತಡ ಹೇರಲಾಗುತ್ತಿದೆ. ಅಷ್ಟೇ ಅಲ್ಲದೆ ಇಷ್ಟು ಸಮಯದೊಳಗಾಗಿ ತೀರ್ಪು ನೀಡಬೇಕೆಂಬ ಸೂಚನೆ ನೀಡಲಾಗುತ್ತೆ ಎಂದು ದೂರಿದರು. ಇದನ್ನು ಓದಿ: ಮೂರು ವೋಟರ್ ಐಡಿ ಕಾರ್ಡ್ ಹೊಂದಿರುವುದು ನಿಜವೇ: ಪ್ರಕಾಶ್ ರೈ ಹೇಳಿದ್ದು ಏನು?

    ರಾಮ ಮಂದಿರ ನಿರ್ಮಾಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪು ಒಪ್ಪಿಗೆಯಾಗದಿದ್ದರೆ ನಾವು ಸಹಿಸಲ್ಲ ಎನ್ನುವವರಿದ್ದಾರೆ. ನ್ಯಾಯಾಲಯದ ಆದೇಶವನ್ನು ಧಿಕ್ಕರಿಸುವ ಕೆಲಸ ಆಗುತ್ತಿರುವುದು ದೇಶದ ದುರಂತ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸ್ಯಾಂಕಿ ಕೆರೆಗೆ ಹೋಗೋ ಮುನ್ನಾ ಈ ಆದೇಶ ಓದಿ

    ಸ್ಯಾಂಕಿ ಕೆರೆಗೆ ಹೋಗೋ ಮುನ್ನಾ ಈ ಆದೇಶ ಓದಿ

    ಬೆಂಗಳೂರು: ಸ್ಯಾಂಕಿ ಟ್ಯಾಂಕಿಗೆ ಹೋಗುವ ಮುನ್ನಾ ಜನರು ಈ ಆದೇಶವನ್ನು ನೋಡಲೇಬೇಕು. ಇನ್ಮುಂದೆ ಸ್ಯಾಂಕಿ ಕೆರೆಯ ದಡದಲ್ಲಿ ವಾಕ್ ಮಾಡುವವರಿಗೆ ಹೊಸ ನಿಯಮ ಜಾರಿಯಾಗಿದೆ.

    ಸ್ಯಾಂಕಿ ಟ್ಯಾಂಕ್ ಕೆರೆಯಲ್ಲಿ ಇನ್ಮುಂದೆ ತರ್ಪಣ ಬಿಡುವುದು, ಪೂಜೆ ಮಾಡುವುದು, ಫೋಟೋ ತೆಗೆಯೋದು, ನಾಯಿಗಳನ್ನು ವಾಕ್‍ಗೆ ಕರೆದುಕೊಂಡು ಹೋಗುವುದು ಎಲ್ಲವೂ ಕೂಡ ನಿಷಿದ್ಧವಾಗಿದೆ. ಈ ಬಗ್ಗೆ ಆದೇಶ ಫಲಕವನ್ನು ಕೂಡ ಕೆರೆಯಂಗಳದಲ್ಲಿ ಹಾಕಲಾಗಿದೆ.

    ಬಿಬಿಎಂಪಿಯ ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ತರ್ಪಣ ಬಿಡುವುದಕ್ಕೆ ಬೆಂಗಳೂರಿನಲ್ಲಿ ಕೆರೆಗಳೇ ಇಲ್ಲ, ನಾವು ಎಂಎಲ್‍ಎ ಮನೆಯಲ್ಲಿ ಅಥವಾ ಬಿಬಿಎಂಪಿ ಅಧಿಕಾರಿಗಳ ಮನೆಯ ಟ್ಯಾಂಕ್‍ನಲ್ಲಿ ಪಿಂಡ ಬಿಡಲು ಆಗುತ್ತಾ ಅಂತಾ ಪುರೋಹಿತರು ಕಿಡಿಕಾರಿದ್ದಾರೆ.

    ಇದರ ಜೊತೆಗೆ ಹವ್ಯಾಸಿ ಫೋಟೋಗ್ರಾಫರ್ ಗಳ ಕೂಡ ಫೋಟೋ ನಿಷೇಧಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ಲಾಲ್ ಬಾಗ್ ಹಾಗೂ ಕಬ್ಬನ್ ಪಾರ್ಕ್ ಸೇರಿದಂತೆ ಎಲ್ಲಾ ಕಡೆ ಫೋಟೋಗ್ರಾಫಿಗೆ ನಿಷೇಧ ಹೇರಲಾಗಿದೆ. ಇಲ್ಲೂ ಫೋಟೋಗ್ರಾಫಿ ಬ್ಯಾನ್ ಮಾಡಿರುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸದ್ಯ ಈ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ಬಿಬಿಎಂಪಿಗೆ ಮತ್ತೆ ಮನವಿ ಸಲ್ಲಿಸಲಿದ್ದೇವೆ ಎಂದು ಸಾರ್ವಜನಿಕರು ಪಬ್ಲಿಕ್ ಟಿವಿಗೆ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗಣೇಶ ವಿಸರ್ಜನೆ ವೇಳೆ ಡಿಜೆ ಬಳಕೆ ನಿಷೇಧ- ಡಿಸಿ ವಿರುದ್ಧ ಸಂಸದ ಗರಂ

    ಗಣೇಶ ವಿಸರ್ಜನೆ ವೇಳೆ ಡಿಜೆ ಬಳಕೆ ನಿಷೇಧ- ಡಿಸಿ ವಿರುದ್ಧ ಸಂಸದ ಗರಂ

    ಕೊಪ್ಪಳ: ಜಿಲ್ಲೆಯಾದ್ಯಂತ ಗಣೇಶ ಉತ್ಸವ ಸೇರಿ ಇತರ ಕಾರ್ಯಕ್ರಮಗಳಲ್ಲೂ ಡಿಜೆ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವುದು ಸಂಸದ ಸಂಗಣ್ಣ ಕರಡಿ ಆಕ್ರೋಶಕ್ಕೆ ಕಾರಣವಾಗಿದೆ.

    ಗಣೇಶ ವಿಸರ್ಜನೆ ಅಂದರೆ ಹಬ್ಬ, ಆಡಂಬರ ಮತ್ತು ಡಿಜೆ ಸೌಂಡ್‍ನೊಂದಿಗೆ ಕುಣಿತ ಸಾಮಾನ್ಯ. ಆದರೆ ಕೊಪ್ಪಳ ಜಿಲ್ಲೆಯಲ್ಲಿ ಕಳೆದ 2 ವರ್ಷದಿಂದ ಡಿಜೆ ನಿಷೇಧಿಸಿದ್ದರಿಂದ ಇಂಥ ಆಡಂಬರಕ್ಕೆ ಬ್ರೇಕ್ ಬಿದ್ದಿದೆ. ಜಿಲ್ಲಾಧಿಕಾರಿಗಳ ಈ ನಡೆಗೆ ಬಿಜೆಪಿಯಿಂದ ಆಯ್ಕೆಯಾಗಿರೋ ಜನಪ್ರತಿನಿಧಿಗಳು ಕೋಪಗೊಂಡಿದ್ದಾರೆ. ಈ ಕಾರಣಕ್ಕೆ ಸಂಸದ ಸಂಗಣ್ಣ ಕರಡಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಪ್ರಗತಿ ಪರಿಶೀಲನೆ ಸಭೆಯಲ್ಲೇ ಡಿಸಿ ವಿರುದ್ಧ ಸಿಡಿಮಿಡಿಗೊಂಡರು.

    ಕಳೆದ ಮೂರು ವರ್ಷದ ಹಿಂದೆ ಕೊಪ್ಪಳ ಜಿಲ್ಲೆಯಲ್ಲಿ ಬನಾಯೆಂಗೇ ಮಂದಿರ ಎಂಬ ಹಾಡು ನಿಷೇಧಿಸಲಾಗಿತ್ತು. ಎರಡು ವರ್ಷದಿಂದ ಭಾರೀ ಧ್ವನಿಯ ಡಿಜೆ ಬಳಕೆಯನ್ನೇ ನಿಷೇಧಿಸಲಾಗಿದೆ. ಈ ಹಿಂದೆ ಗಂಗಾವತಿ ಶಾಸಕರಾಗಿದ್ದ ಇಕ್ಬಾಲ್ ಅನ್ಸಾರಿ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಡಿಜೆ ನಿಷೇಧ ಮಾಡಿದ್ದರು. ಶಾಸಕರ ಈ ಕ್ರಮದ ಕುರಿತು ಚುನಾವಣೆಯಲ್ಲೂ ಚರ್ಚೆಯಾಗಿ ಬಿಜೆಪಿಯ ಕೆಲ ಮುಖಂಡರು, ಗಂಗಾವತಿಯಲ್ಲಿ ಗಣೇಶ ಚತುರ್ಥಿ ವೇಳೆ ಡಿಜೆ ಬಳಕೆ ಮಾಡಬೇಕು ಅಂದ್ರೆ ಬಿಜೆಪಿಗೆ ವೋಟ್ ಮಾಡಿ ಅಂತಾ ಪ್ರಚಾರ ಮಾಡಿದ್ದರು. ಆದರೆ ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ ಸೋಲುಂಡಿದ್ದರೂ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗಿದೆ. ಅನ್ಸಾರಿ ಈ ಬಾರಿಯೂ ಒತ್ತಡ ಹಾಕಿ ಡಿಜೆ ಬ್ಯಾನ್ ಮಾಡಿರೋದು ಬಿಜೆಪಿಗರ ಸಿಟ್ಟಿಗೆ ಕಾರಣವಾಗಿದೆ.

    ಗಣೇಶ ಚತುರ್ಥಿ ಹಿನ್ನೆಲೆಯಲ್ಲಿಯೇ ಕೊಪ್ಪಳದಲ್ಲಿ ಡಿಜೆಗೆ ನಿಷೇಧ ಹೇರಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಹಂಪಿ ಉತ್ಸವ, ಇಟಗಿ ಉತ್ಸವದಲ್ಲಿ ಡಿಜೆಯನ್ನು ಬಳಸುತ್ತಾರೆ. ಆಗ ಆಗದ ತೊಂದರೆ ಗಣೇಶ ಹಬ್ಬದಲ್ಲಿ ತೊಂದರೆಯಾಗುತ್ತಾ ಎಂಬುದು ಗಣೇಶ ಸ್ಥಾಪನಾ ಮಂಡಳಿ ಯುವಕರ ಪ್ರಶ್ನೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರಾಣಿಗಳು ಕಾಡಿನಿಂದ ನಾಡಿಗೆ ಬರದಂತೆ ಗೋಡೆಗೆ ಮೊಳೆ ಹೊಡೆದ ಇಲಾಖೆ!

    ಪ್ರಾಣಿಗಳು ಕಾಡಿನಿಂದ ನಾಡಿಗೆ ಬರದಂತೆ ಗೋಡೆಗೆ ಮೊಳೆ ಹೊಡೆದ ಇಲಾಖೆ!

    – ತೆರವಿಗೆ ಸುಪ್ರೀಂ ಆದೇಶವಿದ್ರೂ ನಿರ್ಲಕ್ಷ್ಯ

    ಮೈಸೂರು: ಕಾಡು ಪ್ರಾಣಿಗಳ ಕಾಡಿನಿಂದ ಹೊರಬರದಂತೆ ತಡೆಯಲು ಅರಣ್ಯ ಇಲಾಖೆ ಅನುಸರಿಸಿರೋ ಕ್ರಮ ಕಾಡು ಪ್ರಾಣಿಗಳ ಪ್ರಾಣಕ್ಕೆ ಕುತ್ತು ತಂದಿದ್ದು, ಕಬ್ಬಿಣದ ಮೊಳೆಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದರೂ ನಿರ್ಲಕ್ಷ್ಯವನ್ನು ತೋರುತ್ತಿದೆ.

    ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ದೊಡ್ಡ ದೊಡ್ಡ ಚೂಪಾದ ಕಬ್ಬಿಣದ ಮೊಳೆಗಳ ಗೋಡೆಯನ್ನು ಅರಣ್ಯ ಇಲಾಖೆ ನಿರ್ಮಿಸಿದೆ. ಈ ಚೂಪಾದ ಕಬ್ಬಿಣದ ಮೊಳೆಗಳ ಗೋಡೆ ಶುದ್ಧ ಅವೈಜ್ಞಾನಿಕ. ಇದು ಪ್ರಾಣಿಗಳ ಜೀವಕ್ಕೆ ಕುತ್ತು ತರುತ್ತಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ಅರಣ್ಯ ಇಲಾಖೆಗೆ ಛೀಮಾರಿ ಹಾಕಿ ತಕ್ಷಣವೇ ಚೂಪಾದ ಮೊಳೆಗಳ ಗೋಡೆ ತೆರವು ಮಾಡುವಂತೆ ಆದೇಶಿಸಿದೆ. ಆದರೂ, ಅರಣ್ಯ ಇಲಾಖೆ ಮಾತ್ರ ಕಬ್ಬಿಣದ ಮೊಳೆಗಳ ಗೋಡೆ ತೆರವಿಗೆ ಮೀನಾಮೇಷ ಎಣಿಸುತ್ತಿದೆ.

    ಈ ಚೂಪಾದ ಕಬ್ಬಿಣದ ಮೊಳೆ ಮೇಲೆ ಅಪ್ಪಿ-ತಪ್ಪಿ ಚಿರತೆ, ಹುಲಿ, ಚಿಂಕೆ ಹೀಗೆ ಯಾವುದಾದರೂ ಕಾಡು ಪ್ರಾಣಿಗಳು ಕಾಲಿಟ್ಟರೆ ಅವುಗಳ ಜೀವ ಹೋಗುವುದು ನಿಶ್ಚಿತ. ಇದನ್ನು ಗಮನಿಸಿಯೇ ಸುಪ್ರೀಂ ಕೋರ್ಟ್ ಗೋಡೆ ತೆರವಿಗೆ ಇಲಾಖೆಗೆ ನಿರ್ದೇಶಿಸಿದೆ. ಆದರೂ ಅರಣ್ಯ ಇಲಾಖೆ ಕಾಡು ಪ್ರಾಣಿಗಳ ಬಲಿಗಾಗಿ ಕಾದಿದೆ ಏನೋ ಎಂಬಂತೆ ವರ್ತಿಸುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಂಗಳೂರು-ಶಿರಾಡಿ-ಬೆಂಗಳೂರು ಸಂಚಾರಕ್ಕೆ ಸದ್ಯಕ್ಕೆ ಶುರುವಾಗಲ್ಲ!

    ಮಂಗಳೂರು-ಶಿರಾಡಿ-ಬೆಂಗಳೂರು ಸಂಚಾರಕ್ಕೆ ಸದ್ಯಕ್ಕೆ ಶುರುವಾಗಲ್ಲ!

    – ಅನಿರ್ದಿಷ್ಟಾವಧಿಗೆ ಸಂಚಾರ ನಿಷೇಧ ಹೇರಿದ ದಕ್ಷಿಣ ಕನ್ನಡ ಡಿಸಿ

    ಮಂಗಳೂರು: ಮಂಗಳೂರು-ಬೆಂಗಳೂರು ಸಂಚಾರ ಶಿರಾಡಿ ಘಾಟ್ ಮೂಲಕ ಸದ್ಯಕ್ಕಂತೂ ಆರಂಭವಾಗುವ ಸಾಧ್ಯತೆಯಿಲ್ಲ. ಭಾರೀ ಮಳೆಯಿಂದಾಗಿ ಶಿರಾಡಿಘಾಟ್‍ನಲ್ಲಿ ಆಗಸ್ಟ್ 25ರವರೆಗೆ ವಾಹನ ಸಂಚಾರಕ್ಕೆ ಹೇರಿದ ನಿಷೇಧವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

    ಮಳೆ ನಿಂತರೂ ಶಿರಾಡಿ ಘಾಟ್‍ನಲ್ಲಿ ಕೆಲ ಪ್ರದೇಶಗಳಲ್ಲಿ ಗುಡ್ಡಕುಸಿತ ನಿಂತಿಲ್ಲ. ಈ ಹಿನ್ನೆಲೆಯಲ್ಲಿ ನಿಷೇಧವನ್ನು ಅನಿರ್ದಿಷ್ಟಾವಧಿಗೆ ಮುಂದುವರಿಸಲಾಗಿದೆ. ಕಳೆದ ವಾರ ಸುರಿದ ಭಾರೀ ಮಳೆಗೆ ಶಿರಾಡಿಘಾಟ್‍ನ ಹಲವೆಡೆ ಗುಡ್ಡ ಕುಸಿದು ಸಂಚಾರ ಅಸ್ತವ್ಯಸ್ತವಾಗಿತ್ತು. ಅಲ್ಲದೆ ಹೆಚ್ಚಿನ ತೊಂದರೆಯಾಗಬಾರದು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಕರಾವಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಪರ್ಯಾಯ ರಸ್ತೆಗಳನ್ನು ಶೀಘ್ರವೇ ಅಭಿವೃದ್ಧಿ ಪಡಿಸುವಂತೆ ಬೇಡಿಕೆ ಇಟ್ಟು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ #ConnectUsToMangalore ಬಳಸಿ ಅಭಿಯಾನ ಆರಂಭಿಸಿದ್ದಾರೆ.

    ಕಳೆದ ವಾರದ ಮಳೆ ವೇಳೆ ಶಿರಾಡಿ ಘಾಟ್‍ನ ದೊಡ್ಡತಪ್ಲು ಬಳಿ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿತ್ತು. ಈ ಘಟನೆಯಲ್ಲಿ ಕೆ.ಆರ್.ಪೇಟೆ ಮೂಲದ ಸಂದೀಪ್ ಹಾಗು ಮಾನ್ವಿ ಮೂಲದ ವೆಂಕಟೇಶ್ ಸಾವನ್ನಪ್ಪಿದ್ದರು. ಇನ್ನು ಟ್ಯಾಂಕರ್ ನೋಡಲು ಹೋದ ಮಂಗಳೂರು ಮೂಲದ ರಾಮದೇವ್ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈಗ ಮತ್ತೇ ಗುಡ್ಡ ಕುಸಿತ ಹೆಚ್ಚಾಗಿದ್ದರಿಂದ ಮುಂದಾಗುವ ಅನಾಹುತ ತಪ್ಪಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಎಲ್ಲ ರೀತಿಯ ವಾಹಗಳ ಸಂಚಾರಕ್ಕೂ ನಿರ್ಬಂಧ ಹೇರಿದೆ. ಇದನ್ನೂ ಓದಿ: #ConnectUsToMangalore ಕರಾವಳಿ ಸಂಪರ್ಕಕ್ಕೆ ಪರ್ಯಾಯ ಮಾರ್ಗ ಕಲ್ಪಿಸಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಧಿಕಾರಕ್ಕಾಗಿ ತಂದೆ-ತಾಯಿ ಗೊತ್ತಿಲ್ಲ ಅಂದ್ರು – ನಕಲಿ ಜಾತಿ ಪತ್ರ ನೀಡಿ ಸಿಕ್ಕಿಬಿದ್ರು ಅಗ್ರಹಾರದ ಗಾಯತ್ರಿ

    ಅಧಿಕಾರಕ್ಕಾಗಿ ತಂದೆ-ತಾಯಿ ಗೊತ್ತಿಲ್ಲ ಅಂದ್ರು – ನಕಲಿ ಜಾತಿ ಪತ್ರ ನೀಡಿ ಸಿಕ್ಕಿಬಿದ್ರು ಅಗ್ರಹಾರದ ಗಾಯತ್ರಿ

    ಬೆಂಗಳೂರು: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವ ವೇಳೆ ಜಾತಿ ಪ್ರಮಾಣ ಪತ್ರ ನೀಡಿಕ್ಕೆ ಸರಿಯಾದ ದಾಖಲೆ ಇಲ್ಲದ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಕೆಪಿ ಅಗ್ರಹಾರ ಗಾಯತ್ರಿ ಅವರ ಜಾತಿ ಪ್ರಮಾಣ ಪತ್ರ ರದ್ದುಪಡಿಸಿ ಆದೇಶ ನೀಡಿದ್ದಾರೆ.

    ನಗರದ ಕೆಪಿ ಅಗ್ರಹಾರ ಕಾರ್ಪೊರೇಟರ್ ಎಂ ಗಾಯತ್ರಿ ಗಣೇಶ್ ಅವರ ಜಾತಿ ಪ್ರಮಾಣ ಪತ್ರ ರದ್ದು ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಬಿಬಿಎಂಪಿ ಚುನಾವಣೆಯಲ್ಲಿ ಎಸ್‍ಟಿ ಮಹಿಳೆಗೆ ಮೀಸಲಾಗಿದ್ದ ಕೆಪಿ ಅಗ್ರಹಾರ ವಾರ್ಡ್ ನಿಂದ ಎಂ ಗಾಯತ್ರಿ ಅವರು ನಾಯಕ ಜನಾಂಗದ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸ್ಪರ್ಧಿಸಿ ಗೆಲುವು ಪಡೆದಿದ್ದರು. ಈ ವೇಳೆ ದಾಖಲೆ ಪರಿಶೀಲಿಸದೆ ತಹಶೀಲ್ದಾರ್ ರಾಮಲಕ್ಷ್ಮಣ್ ಜಾತಿ ಪ್ರಮಾಣಪತ್ರ ನೀಡಿದ್ದರು.

    ಏನಿದು ಪ್ರಕರಣ:
    ಕಾರ್ಪೊರೇಟರ್ ಎಂ ಗಾಯತ್ರಿ ಗಣೇಶ್‍ಗೆ ತಂದೆ-ತಾಯಿ, ಜಾತಿ ಬಗ್ಗೆ ಮಾಹಿತಿ ಇಲ್ಲ. ಇದೇ ಕಾರಣಕ್ಕೆ ನಾಯಕ ಜಾತಿ ಹೆಸರಿನಲ್ಲಿ ಶಾಲೆಯನ್ನು ಬಳಕೆ ಮಾಡಿ ಜಾತಿ ಪ್ರಮಾಣಪತ್ರ ಮಾಡಲಾಗಿದೆ. ನಗರದ ಕೆಪಿ ಆಗ್ರಹಾರದಲ್ಲಿರುವ ಸಿದ್ದಲಿಂಗೇಶ್ವರ ಶಾಲೆಯಲ್ಲಿ ವ್ಯಾಸಂಗ ನಡೆಸಿರುವ ಕುರಿತು ದಾಖಲೆ ಸೃಷ್ಟಿ ಮಾಡಲಾಗಿದ್ದು, ಆದರೆ ಅವರ ಶೈಕ್ಷಣಿಕ ಆರ್ಹತೆ ಬಗ್ಗೆ ಶಾಲೆಯಲ್ಲಿ ಯಾವುದೇ ಪೂರಕ ಮಾಹಿತಿ ಲಭಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಕ್ರಮಕೈಗೊಂಡಿದ್ದಾರೆ.

    ಬಿಬಿಎಂಪಿ ಚುನಾವಣೆ ಸ್ಪರ್ಧೆ ಮಾಡುವ ಉದ್ದೇಶದಿಂದಲೇ 1ನೇ ತರಗತಿಯಿಂದ 5ನೇ ತರಗತಿಯವರೆಗೆ ವ್ಯಾಸಂಗ ಮಾಡಿರುವಂತೆ ದಾಖಲೆ ಸೃಷ್ಟಿಸಲಾಗಿದ್ದು, ನಾಯಕ ಜಾತಿ ಪ್ರಮಾಣ ಪತ್ರ ಪಡೆಯಲು ಸಿದ್ದಲಿಂಗೇಶ್ವರ ಶಾಲೆ ಬಳಕೆ ಮಾಡಿದ್ದಾರೆ. 2015 ಜೂನ್ ನಲ್ಲಿ ಗಾಯಿತ್ರಿ ಅವರು ಜಾತಿ ಪ್ರಮಾಣ ಪತ್ರ ಪಡೆದಿದ್ದು, 2015 ಜುಲೈ ನಲ್ಲಿ ಬಿಬಿಎಂಪಿ ಚುನಾವಣೆ ನಡೆದಿತ್ತು. ಅಂದರೆ ಚುನಾವಣೆಯಲ್ಲಿ ಮೀಸಲಾತಿ ಘೋಷಣೆ ಆದ ಮೇಲೆ ಜಾತಿ ಪ್ರಮಾಣ ಪತ್ರ ಪಡೆಯಲಾಗಿದೆ ಎಂಬುದು ಕಾಣಸಿಗುತ್ತದೆ.

    ಶಾಲೆಯಲ್ಲಿ ವರ್ಗಾವಣೆ ಪ್ರಮಾಣ ಪತ್ರ ಪಡೆಯುವ ವೇಳೆಯೂ 5ನೇ ತರಗತಿ ಪಾಸ್ ಎಂದು ಬರೆಯಲಾಗಿದೆ. ಆದರೆ ದಾಖಲೆಯಲ್ಲಿ ಗಾಯಿತ್ರಿ ಅವರು 5ನೇ ತರಗತಿ ಅನುತ್ತೀರ್ಣ ಎಂದು ನಮೂದಿಸಲಾಗಿದೆ. ಈ ಕುರಿತು ಡಿಡಿಪಿಐ ಹಾಗೂ ಇತರೇ ಅಧಿಕಾರಿಗಳು ವರದಿ ನೀಡಿದ್ದು, ಈ ವರದಿ ಅನ್ವಯ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.

    ಒಂದೊಮ್ಮೆ ಈ ಕುರಿತು ಗಾಯಿತ್ರಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ರೂ ಸಹ ವರದಿಯ ಅನ್ವಯ ಅರ್ಜಿ ತಿರಸ್ಕೃತ ಗೊಳ್ಳುವ ಸಾಧ್ಯತೆಯೂ ಇದೇ. ಆರೋಪ ಸಾಬೀತಾದಲ್ಲಿ ಗಾಯಿತ್ರಿ ಅವರು ಈ ಅವಧಿಯಲ್ಲಿ ಪಡೆದಿರುವ ಎಲ್ಲಾ ಸೌಲಭ್ಯಗಳನ್ನ ಹಿಂದಿರುಗಿಸುವ ಅನಿವಾರ್ಯ ಎದುರಾಗಲಿದೆ. ಅಲ್ಲದೇ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಆರೋಪದಡಿ 6 ವರ್ಷ ಚುನಾವಣೆಗೆ ಮತ್ತೆ ಸ್ಪರ್ಧೆ ಮಾಡುವಂತಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews