Tag: Orphanage

  • 200 ಮಕ್ಕಳನ್ನು ಶಾಲೆಗೆ ಕಳಿಸದೇ ಇಸ್ಲಾಮಿಕ್ ಶಿಕ್ಷಣ – ಬೆಂಗಳೂರಿನ ಅನಾಥಾಶ್ರಮದ ಮೇಲೆ NCPCR ದಾಳಿ

    200 ಮಕ್ಕಳನ್ನು ಶಾಲೆಗೆ ಕಳಿಸದೇ ಇಸ್ಲಾಮಿಕ್ ಶಿಕ್ಷಣ – ಬೆಂಗಳೂರಿನ ಅನಾಥಾಶ್ರಮದ ಮೇಲೆ NCPCR ದಾಳಿ

    ಬೆಂಗಳೂರು: ಕಾವಲ್‌ ಬೈರಸಂದ್ರದಲ್ಲಿರುವ ಮುಸ್ಲಿಮ್ ಸಮುದಾಯಕ್ಕೆ (Muslim Community) ಸೇರಿದ ಅನಾಥಾಶ್ರಮದ (Orphanage) ಮೇಲೆ ರಾಷ್ಟ್ರೀಯ ಮಕ್ಕಳ ಆಯೋಗ (NCPCR) ದಾಳಿ ನಡೆಸಿದೆ.

    200 ಅನಾಥ ಮಕ್ಕಳನ್ನು ಶಾಲೆಗೆ ಕಳಿಸದೇ ಇಸ್ಲಾಮಿಕ್ ಶಿಕ್ಷಣ (Islamic education) ನೀಡಲಾಗುತ್ತಿದೆ ಎಂದು ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ (Priyank Kanoongo) ಆರೋಪಿಸಿದ್ದಾರೆ. ತಾಲಿಬಾನಿ ಮಾದರಿಯಲ್ಲಿ ಇಲ್ಲಿ ಮಕ್ಕಳು ಬದುಕುವಂತಾಗಿದೆ. ಮೂಲಭೂತ ಸೌಕರ್ಯಗಳನ್ನು ಮಕ್ಕಳಿಗೆ ಕಲ್ಪಿಸಿಲ್ಲ. ಮಕ್ಕಳನ್ನು ಕೂಡಿ ಹಾಕಲಾಗಿದೆ ಎಂದು ಆಪಾದಿಸಿದ್ದಾರೆ.

    ಖುದ್ದು ನಾನೇ ಹೋಗಿ ಸ್ಥಳ ಪರಿಶೀಲನೆ ಮಾಡಿದ್ದೇನೆ. ಅಲ್ಲಿ ಸ್ಪಷ್ಟವಾಗಿ ಕಾನೂನು ಉಲ್ಲಂಘನೆ ಮಾಡಿ ಮಕ್ಕಳನ್ನು ಕೂಡಿ ಹಾಕಿ ಹಾಕಲಾಗಿದೆ. ಎಫ್‌ಐಆರ್‌ ದಾಖಲಿಸುವಂತೆ ನಾವು ಕರ್ನಾಟಕ ಸರ್ಕಾರದ (Karnataka Government) ಮುಖ್ಯ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿ ಮಾಡುತ್ತಿದ್ದೇವೆ. ಮುಂದಿನ ಕ್ರಮಕ್ಕೆ ನಾವು ಆಗ್ರಹಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

    ಈ ಆರೋಪವನ್ನು ಅನಾಥಾಶ್ರಮದ ಟ್ರಸ್ಟಿ ಅಶ್ರಫ್ ಖಾನ್ ಅಲ್ಲಗಳೆದಿದ್ದಾರೆ. ಅನಾಥಾಶ್ರಮದಲ್ಲಿ ಮಕ್ಕಳಿಗೆ ಎಲ್ಲಾ ಸೌಲಭ್ಯ ಕಲ್ಪಿಸಿದ್ದೇವೆ. ಶಾಲೆಯಲ್ಲಿ ಓದಿಸಲು ನಮ್ಮಲ್ಲಿ ಹಣವಿಲ್ಲ. ಅದಕ್ಕೆ ನಾವೇ ಇಸ್ಲಾಮಿಕ್ ಶಿಕ್ಷಣ ಕೊಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    ಆಯೋಗದವರು ಸುಳ್ಳು ಆರೋಪ ಮಾಡಿದ್ದಾರೆ. ಅನಾಥಶ್ರಮದಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ನೀಡಲಾಗಿದೆ. ಪಕ್ಕದ ಶಾಲೆಯಲ್ಲಿ ಮಕ್ಕಳನ್ನು ಓದಿಸಲು ಹಣವಿಲ್ಲ. ಈ ಅನಾಥಾಶ್ರಮದಲ್ಲಿ ಇಸ್ಲಾಮಿಕ್ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ಹೇಳಿದರು.

     

  • ಅನಾಥಾಶ್ರಮಗಳಿಗೆ ಭೇಟಿ ನೀಡಿ, ಆಹಾರ ಪೂರೈಸಿದ ಸತೀಶ್ ನೀನಾಸಂ

    ಅನಾಥಾಶ್ರಮಗಳಿಗೆ ಭೇಟಿ ನೀಡಿ, ಆಹಾರ ಪೂರೈಸಿದ ಸತೀಶ್ ನೀನಾಸಂ

    ನ್ನಡದ ಹೆಸರಾಂತ ನಟ ಸತೀಶ್ ನೀನಾಸಂ ನಿನ್ನೆ ಬೆಂಗಳೂರಿನ ಅನಾಥಾಶ್ರಮಗಳಿಗೆ ಭೇಟಿ ನೀಡಿದ್ದಾರೆ. ಪೆಟ್ರೊಮ್ಯಾಕ್ಸ್ ತಂಡದೊಂದಿಗೆ ಭೇಟಿ ನೀಡಿದ ಅವರು, ಅಲ್ಲಿ ವಾಸವಿದ್ದವರ ಜೊತೆ ಊಟ ಮಾಡಿ, ಅವರಿಗೂ ಊಟ ಕೊಡಿಸಿ ಕೆಲ ಹೊತ್ತು ಕಳೆದಿದ್ದಾರೆ. ಸತೀಶ್ ಅವರು ಅನಾಥಾಶ್ರಮಕ್ಕೆ ಹೋಗುವುದಕ್ಕೆ ಕಾರಣವಿದೆ. ಸದ್ಯದಲ್ಲೇ ಅವರ ಪೆಟ್ರೋಮ್ಯಾಕ್ಸ್ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಸತೀಶ್, ಫುಡ್ ಡೆಲಿವರಿ ಬಾಯ್ ಆಗಿ ನಟಿಸಿದ್ದಾರೆ. ಈ ಪಾತ್ರ ಪ್ರೇರಣೆಯಿಂದಾಗಿ ಅವರು ಅಲ್ಲಿಗೆ ಹೋಗಿದ್ದಾರಂತೆ.

    ಆಗಾಗ್ಗೆ ನಾನು ಅನಾಥಾಶ್ರಮಗಳಿಗೆ ಮತ್ತು ವೃದ್ಧಾಶ್ರಮಗಳಿಗೆ ಹೋಗುತ್ತಲೇ ಇರುತ್ತೇನೆ. ಈ ಬಾರಿಯ ವಿಶೇಷತೆ ಅಂದರೆ, ನಾನು ಪೆಟ್ರೊಮ್ಯಾಕ್ಸ್ ಸಿನಿಮಾದಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ನಟಿಸಿದ್ದೇನೆ. ಹಸಿದ ಹೊಟ್ಟೆಗಳಿಗೆ ಆಹಾರ ಪೂರೈಸುವ ಪಾತ್ರವದು. ಆ ನೆಪವಾಗಿಟ್ಟುಕೊಂಡು ಈ ಬಾರಿ ಹೋಗಿದ್ದೆ. ಪ್ರತಿ ಬಾರಿ ಹೋದಾಗಲೂ ನನಗೆ ಬೇರೆ ಬೇರೆ ರೀತಿಯ ಅನುಭವಗಳು ಆಗುತ್ತವೆ. ಈ ಬಾರಿಯಂತೂ ನಾನು ತುಂಬಾ ಭಾವುಕನಾಗಿಬಿಟ್ಟೆ. ಸಿನಿಮಾದ ಕಥೆ ತುಂಬಾ ಎಮೋಷನಲ್ ಆಗಿದೆ. ಅದನ್ನು ಹಾಸ್ಯ ರೂಪದಲ್ಲಿ ಕಟ್ಟುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು ಎಂದಿದ್ದಾರೆ ಸತೀಶ್. ಇದನ್ನೂ ಓದಿ : Breaking- ಫಹಾದ್ ಫಾಸಿಲ್ ಗಾಗಿ ಸಿನಿಮಾ ಮಾಡಲು ಮತ್ತೆ ತಮಿಳಿಗೆ ಹೊರಟ ಪವನ್ ಕುಮಾರ್

    ನೀರ್ ದೋಸೆ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ವಿಜಯ್ ಪ್ರಸಾದ್ ಈ ಚಿತ್ರದ ನಿರ್ದೇಶಕರು. ಸತೀಶ್ ಜೊತೆ ಹರಿಪ್ರಿಯಾ ನಾಯಕಿಯಾಗಿ ನಟಿಸಿದ್ದಾರೆ. ಕಾರುಣ್ಯ ರಾಮ್, ನಾಗಭೂಷಣ್, ಅರುಣ್ ಸೇರಿದಂತೆ ಹಲವು ಕಲಾವಿದರು ಇದ್ದಾರೆ. ವಿಜಯ್ ಪ್ರಸಾದ್, ಸುಧೀರ್, ಸತೀಶ್ ನೀನಾಸಂ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉಕ್ರೇನ್‍ನ ಅನಾಥಾಶ್ರಮಗಳ ಮೇಲೆ ರಷ್ಯಾ ದಾಳಿ- ಬಾಲಕಿ ಸೇರಿ 6 ಮಂದಿ ಸಾವು

    ಉಕ್ರೇನ್‍ನ ಅನಾಥಾಶ್ರಮಗಳ ಮೇಲೆ ರಷ್ಯಾ ದಾಳಿ- ಬಾಲಕಿ ಸೇರಿ 6 ಮಂದಿ ಸಾವು

    ಕೀವ್: ಉಕ್ರೇನ್‍ನ ಶಿಶುಪಾಲನಾ ಕೇಂದ್ರ ಸೇರಿದಂತೆ ಅನಾಥಾಶ್ರಮಗಳ ಮೇಲೆ ರಷ್ಯಾ ದಾಳಿ ನಡೆಸಿದ್ದು, 7 ವರ್ಷದ ಬಾಲಕಿ ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದಾರೆ.

    ಉಕ್ರೇನ್‍ನ ಈಶಾನ್ಯ ನಗರದ ಓಖ್ಟಿರ್ಕಾದಲ್ಲಿ ರಷ್ಯಾದ ದಾಳಿ ನಡೆಸಿದ ಪರಿಣಾಮವಾಗಿ ಏಳು ವರ್ಷದ ಬಾಲಕಿ ಸೇರಿದಂತೆ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ ಶಿಶುವಿಹಾರ ಶಾಲೆ ಮತ್ತು ಅನಾಥಾಶ್ರಮದಲ್ಲಿ ಘಟನೆ ನಡೆದಿದೆ ಎಂದು ಗವರ್ನರ್ ಡಿಮಿಟ್ರಿ ಝಿವಿಟ್ಸ್ಕಿ ತಿಳಿಸಿದರು.

    ಉಕ್ರೇನ್, ರಷ್ಯಾ ಯುದ್ಧ 4ನೇ ದಿನಕ್ಕೆ ಕಾಲಿಟ್ಟಿದ್ದು, ದಿನೇ ದಿನೇ ಉಗ್ರಸ್ವರೂಪ ಪಡೆದುಕೊಳ್ಳುತ್ತಿದೆ. ಉಕ್ರೇನ್‍ನಲ್ಲಿ ಅಪಾರ ಸಾವು, ನೋವುಗಳು ಆಗುತ್ತಿವೆ. ಈಗ ಶಿಶು ಪಾಲನಾಕೇಂದ್ರ, ಅನಾಥಾಶ್ರಮಗಳ ಮೇಲೆ ರಷ್ಯಾ ಬಾಂಬ್ ದಾಳಿ ನಡೆಸಿದ್ದಾರೆ. ಇದರಲ್ಲಿ ರಷ್ಯಾ ಬಾಂಬ್ ದಾಳಿಗೆ 7 ವರ್ಷದ ಬಾಲಕಿ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಅಂತಾರಾಷ್ಟ್ರೀಯ ತನಿಖೆಗೆ ಉಕ್ರೇನ್ ಒತ್ತಾಯಿಸುತ್ತಿದೆ. ಇದನ್ನೂ ಓದಿ: ಯುದ್ಧಪೀಡಿತ ಉಕ್ರೇನ್‍ನಿಂದ ಗ್ರೌಂಡ್ ರಿಪೋರ್ಟ್ ಮಾಡಿದ ವಿದ್ಯಾರ್ಥಿಗಳು

    ನಿನ್ನೆ ಬಂಕರ್‌ಗಳಲ್ಲಿ ರಷ್ಯಾ ಬಾಂಬ್ ದಾಳಿಯನ್ನು ನಡೆಸಿತ್ತು. ಇದೀಗ ಶಿಶುಪಾಲನಾ ಕೇಂದ್ರದಲ್ಲಿ ದಾಳಿ ನಡೆಸಿದೆ. ಈ ಮೊದಲು ಕೈವಾದ ಜೂಲಿಯಾನಿ ವಿಮಾನ ನಿಲ್ದಾಣದ ಪಕ್ಕ ರಷ್ಯಾ ಕ್ಷಿಪಣಿ ದಾಳಿ ನಡೆಸಿತ್ತು. ಉಕ್ರೇನ್‍ನ ಹಲವು ಪ್ರದೇಶಗಳನ್ನು ರಷ್ಯಾ ಮಿಲಿಟರಿ ಪಡೆ ಸುತ್ತುವರಿದಿದ್ದು, ಅಲ್ಲಲ್ಲಿ ಬಾಂಬ್‍ಗಳ ದಾಳಿ ನಡೆಯುತ್ತಿದೆ. ಉಕ್ರೇನ್‍ನಲ್ಲಿ ಈವರೆಗೆ 300ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಕರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಿಸಿದ ರಷ್ಯಾ ಸೇನೆ..!

  • ವೃದ್ಧೆಯಿಂದ ಅನಾಥಾಶ್ರಮಕ್ಕೆ ಲಕ್ಷಾಂತರ ಬೆಲೆ ಬಾಳುವ ಜಾಗ ದಾನ

    ವೃದ್ಧೆಯಿಂದ ಅನಾಥಾಶ್ರಮಕ್ಕೆ ಲಕ್ಷಾಂತರ ಬೆಲೆ ಬಾಳುವ ಜಾಗ ದಾನ

    ಮಡಿಕೇರಿ: ಕೋಟ್ಯಂತರ ರೂಪಾಯಿಯ ಆಸ್ತಿ ಇದ್ದರೂ ಇತ್ತೀಚಿನ ದಿನಗಳಲ್ಲಿ ದಾನ ನೀಡುವವರ ಸಂಖ್ಯೆ ತೀರಾ ವಿರಳ. ಆದರೆ ಇಳಿ ವಯಸ್ಸಿನ ವೃದ್ಧೆ ಲಕ್ಷಾಂತರ ರೂ. ಬೆಲೆ ಬಾಳುವ ತಮ್ಮ ಜಾಗವನ್ನು ವಿಕಾಸ್ ಜನ ಸೇವಾ ಟ್ರಸ್ಟ್‌ ಅನಾಥಶ್ರಮಕ್ಕೆ ದಾನ ನೀಡಿ ಮಾದರಿಯಾಗಿದ್ದಾರೆ.

    ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಏಳನೇ ಹೊಸಕೋಟೆಯ ನಿವಾಸಿ ಬೋಳ್ಳಮ್ಮ (82) ಅವರು ತಮಗೆ ಇರುವ ಅಲ್ಪಸ್ವಲ್ಪ ಆಸ್ತಿಯಲ್ಲಿ 30 ಸೆಂಟ್ ಜಾಗವನ್ನು ವಿಕಾಸ್ ಜನ ಸೇವಾ ಟ್ರಸ್ಟ್‌ ಅನಾಥಾಶ್ರಮಕ್ಕೆ ದಾನವಾಗಿ ನೀಡಿದ್ದಾರೆ. ಸುಂಟಿಕೊಪ್ಪ ಸಮೀಪ ಇರುವ ಅಶ್ರಮದ ಮಾಲೀಕ ರಮೇಶ್ ಅವರು ಸರ್ಕಾರ ಯಾವುದೇ ಯೋಜನೆಯ ಸಹಾಯ ಪಡೆಯದೆ, ಬಾಡಿಗೆ ಮನೆ ಮಾಡಿಕೊಂಡು ಪ್ರಸ್ತುತ 28 ಅನಾಥರಿಗೆ ಆಶ್ರಯ ನೀಡಿದ್ದಾರೆ.

    ಸಂಕಷ್ಟದಲ್ಲಿ ಆಶ್ರಮ ನಡೆಸುತ್ತಿರುವುದನ್ನು ಗಮನಿಸಿದ ವೃದ್ಧೆ, ತಮಗೆ ಇರುವ ಸ್ವಲ್ಪ ಜಾಗವನ್ನೇ ಅನಾಥಶ್ರಮಕ್ಕೆ ದಾನ ನೀಡಿ ಮಾನವೀಯತೆ ಮೇರೆದಿದ್ದಾರೆ. ಇಂದು ನಾಗರಪಂಚಮಿ ಹಬ್ಬ ಆಗಿರುವುದರಿಂದ ಶಾಸಕ ಅಪ್ಪಚ್ಚು ರಂಜನ್ ಮೂಲಕ ಜಾಗ ದಾನದ ಪತ್ರವನ್ನು ನೀಡಿದರು. ಇದೇ ಸಂದರ್ಭದಲ್ಲಿ ಮಾತಾನಾಡಿದ ಶಾಸಕ ಅಪ್ಪಚ್ಚು ರಂಜನ್, ಅನಾಥಾಶ್ರಮಕ್ಕೆ ಇನ್ನಷ್ಟು ಜಾಗದ ಅವಶ್ಯಕತೆ ಇರುವುದರಿಂದ ವಯಕ್ತಿಕವಾಗಿ ಇನ್ನೂ 70 ಸೆಂಟ್ ಜಾಗ ಖರೀದಿಸಿ, ಒಟ್ಟು ಒಂದು ಎಕರೆ ಜಾಗದಲ್ಲಿ ಒಳ್ಳೆಯ ಅಶ್ರಮ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

  • ಅನಾಥಾಶ್ರಮದ ಮಕ್ಕಳ ಜೊತೆ ಭೋಜನ ಸವಿದ ರಾಹುಲ್ ಗಾಂಧಿ

    ಅನಾಥಾಶ್ರಮದ ಮಕ್ಕಳ ಜೊತೆ ಭೋಜನ ಸವಿದ ರಾಹುಲ್ ಗಾಂಧಿ

    ತಿರುವನಂತಪುರಂ: ಈಸ್ಟರ್ ಹಬ್ಬದ ಪ್ರಯುಕ್ತ ಅನಾಥಾಶ್ರಮದ ಮಕ್ಕಳ ಜೊತೆ ಕುಳಿತು ಭೋಜನ ಸವಿದ ರಾಹುಲ್ ಗಾಂಧಿ ಅವರು ಪ್ರಿಯಾಂಕಾ ಗಾಂಧಿ ಅವರಿಗೆ ವೀಡಿಯೋ ಕಾಲ್ ಮಾಡಿದ್ದಾರೆ.

    ಕಾಂಗ್ರೆಸ್ ನಾಯಕ, ವಯಾನಾಡ್ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಈಸ್ಟರ್ ಹಬ್ಬದ ಸಂಭ್ರಮವನ್ನು ವಯಾನಾಡ್‍ನ ಜೀವನ ಜ್ಯೋತಿ ಅನಾಥಾಶ್ರಮದಲ್ಲಿ ಮಕ್ಕಳೊಂದಿಗೆ ಔತನಕೂಟ ಮಾಡಿ ಸಂಭ್ರಮಿಸಿದ್ದಾರೆ. ರಾಹುಲ್ ಗಾಂಧಿ ಮಕ್ಕಳ ಪಕ್ಕದಲ್ಲಿಯೆ ಕುಳಿತು ಬೋಜನವನ್ನು ಸವಿದಿದ್ದಾರೆ. ಈ ವೇಳೆ ತಮ್ಮ ಮೊಬೈಲ್‍ನಿಂದ ಪ್ರಿಯಾಂಕಾ ಅವರಿಗೆ ವೀಡಿಯೋ ಕಾಲ್ ಮಾಡಿ ಮಕ್ಕಳ ಜೊತೆಯಲ್ಲಿ ಮಾತನಾಡಿದ್ದಾರೆ. ಈ ವೀಡಿಯೋ ಸಖತ್ ವೈರಲ್ ಆಗಿದೆ.

    ಹೊಸ ಆರಂಭದ ಪ್ರತೀಕವಾದ ಈಸ್ಟರ್ ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡು ಟ್ವಿಟ್ಟರ್‍ನಲ್ಲಿ ರಾಹುಲ್ ಗಾಂಧಿ ಶುಭಾಶಯ ತಿಳಿಸಿದ್ದರು.

    ವಯಾನಾಡ್ ಮತ್ತು ಕೇರಳದ ಜನತೆಗೆ ಈಸ್ಟರ್ ಹಬ್ಬದ ಶುಭಾಶಗಳು ಎಂದು ಬರೆದುಕೊಂಡು ಪ್ರಿಯಾಂಕ ಗಾಂಧಿ ಕಾಂಗ್ರೆಸ್‍ನ ಅಧಿಕೃತ ಖಾತೆಯಲ್ಲಿ ಶುಭಾಶಯ ತಿಳಿಸಿದ್ದರು. ಈ ವಿಚಾರವಾಗಿ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಟೀಕಿಸಿದ್ದರು. ವಯನಾಡ್ ಮತ್ತು ಕೇರಳದ ಜನತೆಗೆ ಅಷ್ಟೇ ಶುಭಾಶಯವನ್ನು ಕೋರಿದ್ದು ಏಕೆ ಎಂದು ಪ್ರಶ್ನಿಸಿದ್ದರು

  • ಅನಾಥಾಶ್ರಮದ ದಾನಿಯಿಂದಲೇ ಅಪ್ರಾಪ್ತೆ ಮೇಲೆ ಒಂದು ವರ್ಷ ನಿರಂತರ ಅತ್ಯಾಚಾರ

    ಅನಾಥಾಶ್ರಮದ ದಾನಿಯಿಂದಲೇ ಅಪ್ರಾಪ್ತೆ ಮೇಲೆ ಒಂದು ವರ್ಷ ನಿರಂತರ ಅತ್ಯಾಚಾರ

    – ಮತ್ತುಬರುವ ಜ್ಯೂಸ್ ನೀಡಿ ಕೃತ್ಯ
    – ಅನಾಥಾಶ್ರಮದ ವಾರ್ಡನ್, ಸಹೋದರಗೆ ಹಣ ನೀಡಿ ಕೃತ್ಯ

    ಹೈದರಾಬಾದ್: ಅನಾಥಾಶ್ರಮದಲ್ಲೇ 14 ವರ್ಷದ ಬಾಲಕಿ ಮೇಲೆ ಅನಾಥಾಶ್ರಮದ ದಾನಿ ಒಂದು ವರ್ಷ ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಡೆದಿದೆ.

    ತೆಲಂಗಾಣದ ಮೆಡ್ಚಲ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಅನಾಥಾಶ್ರಮದಲ್ಲಿದ್ದ ಬಾಲಕಿ ಮೇಲೆ ದಾನಿ ಸತತ ಒಂದು ವರ್ಷ ಕಾಲ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅನಾಥಾಶ್ರಮದ ಮಾಲೀಕನನ್ನು ಚೀಲುಕುರಿ ವಿಜಯ್ ಎಂದು ಗುರುತಿಸಲಾಗಿದ್ದು, ಈತ ಹಾಸ್ಟೆಲ್ ವಾರ್ಡನ್ ಸಹ ಆಗಿದ್ದಾನೆ. ಈತನ ಸಹೋದರ ಸುರಪಾನೇನಿ ಜಯದೀಪ್ ಹಾಗೂ ಅನಾಥಾಶ್ರಮದ ದಾನಿ ನರೆಡ್ಲಾ ವೇಣುಗೋಪಾಲ ರೆಡ್ಡಿಯನ್ನು ಸಹ ಪೊಲೀಸರು ಬಂಧಿಸಿದ್ದಾರೆ.

    ಬಾಲಕಿಯನ್ನು 2015ರಲ್ಲಿ ಆಕೆಯ ಚಿಕ್ಕಪ್ಪ ಅನಾಥಶ್ರಮಕ್ಕೆ ಸೇರಿಸಿದ್ದ. 2019ರಲ್ಲಿ ಅನಾಥಾಶ್ರಮದ ಮಾಲೀಕ ವಿಜಯ್ ಬಾಲಕಿಗೆ 5ನೇ ಮಹಡಿಯಲ್ಲಿರುವ ರೂಮ್‍ನಲ್ಲಿರುವಂತೆ ತಿಳಿಸಿದ್ದಾರೆ. ನಂತರ ವೇಣುಗೋಪಾಲ್ ಬಾಲಕಿಗೆ ಮತ್ತುಬರುವ ಜ್ಯೂಸ್ ಕುಡಿಸಿ, ಪ್ರಜ್ಞಾಹೀನಳಾಗುತ್ತಿದ್ದಂತೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಕುರಿತು ಬಾಲಕಿ ಅನಾಥಾಶ್ರಮದ ವಾರ್ಡನ್‍ಗೆ ಮಾಹಿತಿ ನೀಡಿದ್ದು, ಈ ಕುರಿತು ಬಾಯ್ಬಿಡದಂತೆ ಆತ ಬೆದರಿಕೆ ಹಾಕಿದ್ದಾನೆ. ನಂತರ ಆರೋಪಿ ಪದೇ ಪದೇ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ.

    ವೇಣುಗೋಪಾಲ್ ವಾರ್ಡನ್ ವಿಜಯ್ ಹಾಗೂ ಆತನ ಸಹೋದರನಿಗೆ ಹಲವು ಬಾರಿ ಹಣ ನೀಡಿದ್ದಾನೆ. ಅಲ್ಲದೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಪೈಕಿ ನಾನೊಬ್ಬಳೇ ಅಲ್ಲ, ಇನ್ನೂ ಹಲವರಿದ್ದಾರೆ ಎಂದು ಬಾಲಕಿ ಹೇಳಿದ್ದಾಳೆ.

    ಲಾಕ್‍ಡೌನ್ ವೇಳೆ ತಮ್ಮ ಚಿಕ್ಕಪ್ಪನ ಮನೆಯಲ್ಲಿ ಇರಲು ಬಾಲಕಿ ತೆರಳಿದ್ದಾಳೆ. ಈ ವೇಳೆ ಅನಾಥಾಶ್ರಮದ ವಾರ್ಡನ್ ಎಚ್ಚರಿಸಿದ್ದು, ಕೊರೊನಾ ಪರೀಕ್ಷೆಯ ವರದಿ ತರದೆ ಮರಳಿ ಕರೆದುಕೊಳ್ಳುವುದಿಲ್ಲ ಎಂದು ಬೆದರಿಸಿದ್ದಾನೆ. ಈ ವೇಳೆ ಚಿಕ್ಕಪ್ಪ ಸಹ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ. ನಂತರ ಬಾಲಕಿ ಅವಳ ಚಿಕ್ಕಮ್ಮನ ಮನೆಗೆ ತೆರಳಿದ್ದು, ಚಿಕ್ಕಪ್ಪ ಹಲ್ಲೆ ಮಾಡಿದ ಗಾಯಗಳನ್ನು ತೋರಿಸಿದ್ದಾಳೆ. ಈ ವೇಳೆ ಹಲವು ಬಾರಿ ಪ್ರಶ್ನಿಸಿದಾಗ ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಕುರಿತು ಸಹ ಹೇಳಿಕೊಂಡಿದ್ದಾಳೆ. ನಂತರ ಪೊಲೀಸರಿಗೆ ದೂರು ನೀಡಲಾಗಿದ್ದು, ಸಂಬಂಧಿಸಿದ ಸೆಕ್ಷನ್ ಗಳಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ದವಸ-ಧಾನ್ಯ ವಿತರಿಸಿದ ದರ್ಶನ್ ಅಭಿಮಾನಿಗಳು

    ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ದವಸ-ಧಾನ್ಯ ವಿತರಿಸಿದ ದರ್ಶನ್ ಅಭಿಮಾನಿಗಳು

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇದೆ. ಹೀಗಾಗಿ ಡಿ ಬಾಸ್ ಹುಟ್ಟುಹಬ್ಬವನ್ನು ಆಚರಿಸಲು ಸಜ್ಜಾಗುತ್ತಿರುವ ಅಭಿಮಾನಿಗಳು ದರ್ಶನ್ ಮಾತಿಗೆ ಬೆಲೆಕೊಟ್ಟು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ದವಸ-ಧಾನ್ಯ ವಿತರಿಸಿ ಮಾದರಿಯಾಗಿದ್ದಾರೆ.

    ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ನೆಚ್ಚಿನ ನಟನಿಗಾಗಿ ಅಭಿಮಾನಿಗಳು ಕೇಕ್, ಹಾರ, ಗಿಫ್ಟ್ ಗಳನ್ನು ತರುವುದು ಸಾಮಾನ್ಯ. ಆದರೆ ದರ್ಶನ್ ಅವರು, “ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ದಯಮಾಡಿ ತರಬೇಡಿ. ಅದೇ ಹಣದಲ್ಲಿ ಈ ವರ್ಷವೂ ಸಹ ನಿಮ್ಮ ಕೈಲಾದ ಅಕ್ಕಿ, ಬೇಳೆ, ಸಕ್ಕರೆ ಹಾಗೂ ಇತರೆ ದವಸ-ಧಾನ್ಯಗಳನ್ನು ದಾನ ನೀಡಿ, ಅದನ್ನು ಒಗ್ಗೂಡಿಸಿ ಸೇರಬೇಕಾದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನನ್ನದು” ಎಂದು ಅಭಿಮಾನಿಗಳಿಗೆ ತಿಳಿಸಿದ್ದರು.

    ಈ ಬಗ್ಗೆ ತಿಳಿಯುತ್ತಿದ್ದಂತೆ ಅಭಿಮಾನಿಗಳು ದವಸ-ಧಾನ್ಯಗಳನ್ನು ತಂದು ದರ್ಶನ್ ಅವರಿಗೆ ನೀಡುತ್ತಿದ್ದಾರೆ. ಅಕ್ಕಿ, ಬೇಳೆ ಸೇರಿದಂತೆ ಹಲವು ದವಸ-ಧಾನ್ಯಗಳು ತಂದುಕೊಟ್ಟು ಕೈಲಾದ ಸಹಾಯ ಮಾಡುತ್ತಿದ್ದಾರೆ. ಅಭಿಮಾನಿಗಳು ನೀಡಿದ್ದ ದವಸ ಧಾನ್ಯಗಳ ಮೂಟೆಯ ರಾಶಿಯೇ ದರ್ಶನ್ ಮನೆಯಲ್ಲಿದ್ದು, ರಾಶಿ ರಾಶಿ ಮೂಟೆಯನ್ನು ಈಗ ವಿತರಿಸುವ ಕೆಲಸ ನಡೆಯುತ್ತಿದೆ. ದರ್ಶನ್ ಹಾಗೂ ಅವರ ಅಭಿಮಾನಿಗಳು ಮಾಡುತ್ತಿರುವ ಈ ಕಾರ್ಯ ನಿಜಕ್ಕೂ ಎಲ್ಲರ ಮನ ಗೆದ್ದಿದೆ.

    ಈಗಾಗಲೆ ಅನಾಥಾಶ್ರಮ, ವೃದ್ಧಾಶ್ರಮ ಸೇರಿದಂತೆ ಆಹಾರದ ಅಗತ್ಯವಿರುವವರಿಗೆ ಸಂಗ್ರಹವಾಗಿರುವ ದವಸ-ಧಾನ್ಯಗಳನ್ನು ವಿತರಿಸಲಾಗುತ್ತಿದೆ. ಅಭಿಮಾನಿಗಳು ಅನಾಥಾಶ್ರಮಕ್ಕೆ, ವೃದ್ಧಾಶ್ರಮಕ್ಕೆ ತೆರಳಿ ಅಕ್ಕಿ, ಬೇಳೆ ಧಾನ್ಯಗಳನ್ನು ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದು, ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಮಕ್ಕಳು ದರ್ಶನ್ ಹಾಗೂ ಅವರ ಅಭಿಮಾನಿಗಳಿಗೆ ಧನ್ಯವಾದ ಹೇಳಿ ಹುಟ್ಟುಹಬ್ಬಕ್ಕೆ ಶುಭಕೋರುತ್ತಿದ್ದಾರೆ. ಇತ್ತ ವೃದ್ಧಾಶ್ರಮದಲ್ಲಿರುವ ಹಿರಿಯರು ದರ್ಶನ್ ನಮಗೆ ಅನ್ನ ದಾನ ಮಾಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ನೂರು ವರ್ಷ ಚೆನ್ನಾಗಿ ಇರಲಿ ಎಂದು ಹರಸಿ ಖುಷಿ ವ್ಯಕ್ತಪಡಿಸಿದ್ದಾರೆ.

    ಕಳೆದ ವರ್ಷದ ದರ್ಶನ್ ಮಾತಿಗೆ ಬೆಲೆಕೊಟ್ಟು ಅಭಿಮಾನಿಗಳು ಅಕ್ಕಿ, ಬೇಳೆ ಸೇರಿದಂತೆ ಹಲವು ಪದಾರ್ಥಗಳನ್ನು ದಾನ ನೀಡಿ ಡಿ ಬಾಸ್ ಹುಟ್ಟುಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಿಸಿದ್ದರು. ಈ ವರ್ಷವು ಅದೇ ರೀತಿ ಅರ್ಥಪೂರ್ಣವಾಗಿ ದರ್ಶನ್ ಹುಟ್ಟುಹಬ್ಬ ಆಚರಣೆ ಮಾಡಲು ಅಭಿಮಾನಿಗಳು ಸಜ್ಜಾಗಿದ್ದಾರೆ.

  • ಆನಾಥಾಶ್ರಮದ ಊಟ ತಿಂದು ಬೀದಿ ನಾಯಿಗಳ ಸಾವು

    ಆನಾಥಾಶ್ರಮದ ಊಟ ತಿಂದು ಬೀದಿ ನಾಯಿಗಳ ಸಾವು

    ಬೆಂಗಳೂರು: ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದ ಹತ್ತಾರು ನಾಯಿಗಳ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಬೀದಿ ನಾಯಿಗಳ ಸಾವಿಗೆ ಕಾರಣವಾಗಿದ್ದು, ಆನಾಥಾಶ್ರಮದಲ್ಲಿ ಮಿಕ್ಕಿದ ಊಟ ಬೀದಿಗೆ ಎಸೆದಿದ್ದೆ ಕಾರಣ ಎನ್ನಲಾಗಿದೆ.

    ಈ ಹಿನ್ನೆಲೆಯಲ್ಲಿ ಆಶ್ರಮದ ಮ್ಯಾನೇಜರ್ ಜೋಸೆಫ್ ಫ್ರಾನ್ಸಿಸ್‍ನನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಮಿಕ್ಕಿದ ಊಟವನ್ನು ಕೆಲವರು, ಆನಾಥ ಆಶ್ರಮಕ್ಕೆ ತಂದು ಕೊಟ್ಟಿದ್ದರು. ಆ ಊಟವನ್ನು ಮಕ್ಕಳು ಉಪಯೋಗಿಸಿದ ನಂತರ ಎರಡು ದಿನ ಅನಾಥಶ್ರಮದಲ್ಲೇ ಉಳಿದಿತ್ತು. ಇದನ್ನು ನೋಡಿದ ಮ್ಯಾನೇಜರ್ ಫ್ರಾನ್ಸಿಸ್ ಬೀದಿ ನಾಯಿಗಳಿಗೆ ಹಾಕಿದ್ದರು.

    ಎರಡು ದಿನದ ಹಿಂದಿನ ಊಟ ತಿಂದ ಹನ್ನೊಂದು ನಾಯಿಗಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದವು. ಬೆಳಗ್ಗೆ ಅಲ್ಲಿಗೆ ವಾಕಿಂಗ್ ಬಂದ ಸ್ಥಳೀಯರು ತಕ್ಷಣ ವೆಟರ್ನರಿ ಡಾಕ್ಟರ್ ಗೆ ಕರೆಸಿ ಚಿಕಿತ್ಸೆ ಕೊಡಿಸುವಷ್ಟರಲ್ಲಿ ಏಳು ನಾಯಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮೂರು ನಾಯಿಗಳು ಪ್ರಾಯಪಾಯದಿಂದ ಪರಾಗಿದ್ದವು. ಈ ಸಂಬಂಧ ಸ್ಥಳೀಯರು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

    ಆನಾಥಾಶ್ರಮದ ಊಟದಿಂದ ನಾಯಿಗಳು ಸಾವನ್ನಪ್ಪಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದ್ದು, ನಾಯಿಗಳು ಸಾವನ್ನಪ್ಪಿರುವ ವಿಷ ಅಹಾರ ಯಾವುದು ಅನ್ನೋದು ಎಫ್‍ಎಸ್‍ಎಲ್ ವರದಿಯಿಂದ ಬಹಿರಂಗವಾಗಬೇಕಿದೆ.

  • ಭಾವಿ ಪತ್ನಿ ಜೊತೆ ಅನಾಥಾಶ್ರಮದ ಮಕ್ಕಳಿಗೆ ಹಾಸಿಗೆ ನೀಡಿದ ನಟ ಚೇತನ್

    ಭಾವಿ ಪತ್ನಿ ಜೊತೆ ಅನಾಥಾಶ್ರಮದ ಮಕ್ಕಳಿಗೆ ಹಾಸಿಗೆ ನೀಡಿದ ನಟ ಚೇತನ್

    ಬೆಂಗಳೂರು: ‘ಆ ದಿನಗಳು’ ಸಿನಿಮಾ ಖ್ಯಾತಿಯ ನಟ ಚೇತನ್ ಸಿನಿಮಾರಂಗದಲ್ಲಿ ಮಾತ್ರವಲ್ಲದೇ ಸಾಮಾಜಿಕ ಕೆಲಸಗಳ ಮೂಲಕ ಗುರುತಿಸಿಕೊಂಡವರು. ಅವರ ನಿಸ್ವಾರ್ಥ ಸೇವೆಗೆ ಈಗ ಅವರ ಭಾವಿ ಪತ್ನಿ ಮೇಘಾ ಕೂಡ ಸಾಥ್ ನೀಡಿದ್ದಾರೆ.

    ಚೇತನ್ ಹಾಗೂ ಮೇಘಾ ಒಟ್ಟಿಗೆ ಸೇರಿ ತಂದೆ-ತಾಯಿ ಇಲ್ಲದೆ ಅನಾಥಾಶ್ರಮದಲ್ಲಿ ಇರುವ ಮಕ್ಕಳಿಗೆ ಸಹಾಯ ಮಾಡಿದ್ದಾರೆ. ಅನಾಥಾಶ್ರಮದ ಮಕ್ಕಳಿಗೆ ಹಾಸಿಗೆಗಳನ್ನು ನೀಡಿ ಮಕ್ಕಳು ಸರಿಯಾಗಿ ಮಲಗಲು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಹೀಗೆ ಮಕ್ಕಳಿಗೆ ಸಹಾಯ ಮಾಡುವ ಮೂಲಕ ಈ ಜೋಡಿ ಖುಷಿಪಟ್ಟಿದ್ದಾರೆ. ಈ ಬಗ್ಗೆ ಚೇತನ್ ತಮ್ಮ ಫೇಸ್‍ಬುಕ್ ನಲ್ಲಿ ಹಂಚಿಕೊಂಡಿದ್ದು, ಜೋಡಿಯ ಈ ಸೇವೆಗೆ ಅಭಿಮಾನಿಗಳು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅನಾಥ ಮಕ್ಕಳ ಜೊತೆ ನಟ ಚೇತನ್ ಪ್ರೀವೆಡ್ಡಿಂಗ್ ಫೋಟೋಶೂಟ್

    https://www.facebook.com/chetanahimsa/posts/4114619898563628

    ಪೋಸ್ಟ್ ನಲ್ಲಿ ಏನಿದೆ?
    ಮೇಘ, ವಿನಯ್, ಮತ್ತು ನಾನು ಕೆಲಸ ಮಾಡುತ್ತಿದ್ದೇವೆ. ಆಶ್ರಮ ಮಕ್ಕಳಿಗೆ ಹಾಸಿಗೆ ನೀಡಲು ನಾವು ತಯಾರಾಗುತ್ತಿದ್ದೇವೆ ಎಂದು ಬರೆದು, ಅನಾಥಾಶ್ರಮಕ್ಕೆ ಹಾಸಿಗೆ ಹೊತ್ತ ಹೋಗುತ್ತಿವ ಫೋಟೋ ಹಾಗೂ ಹಾಸಿಗೆಗಳನ್ನು ಜೋಡಿಸಿಟ್ಟಿರುವ ಫೋಟೋಗಳನ್ನು ಫೇಸ್‍ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ಈ ಕೆಲಸಕ್ಕೆ ಸಹಕಾರ ನೀಡಿದ ಪುನೀತ್ ಎಂಬವರಿಗೆ ಚೇತನ್ ಧನ್ಯವಾದ ತಿಳಿಸಿದ್ದಾರೆ.

    ಚೇತನ್ ಹಾಗೂ ಮೇಘ ಮದುವೆಗೆ ಕೆಲವೇ ದಿನಗಳು ಬಾಕಿ ಇದೆ. ಫೆಬ್ರವರಿ 2 ರಂದು ಚೇತನ್ ಮತ್ತು ಮೇಘ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅನಾಥಾಶ್ರಮದಲ್ಲಿ ಅವರ ವಿವಾಹ ಮಹೋತ್ಸವ ನಡೆಯಲಿದೆ.

    ಮದುವೆ ಸಂಭ್ರಮದಲ್ಲಿರುವ ಚೇತನ್ ಹಾಗೂ ಮೇಘಾ ಇತ್ತೇಚೆಗೆ ಸ್ಪೆಷಲ್ ಪ್ರೀವೆಡ್ಡಿಂಗ್ ಶೂಟ್ ಮಾಡಿಸಿದ್ದರು. ಅನಾಥ ಮಕ್ಕಳ ಜೊತೆ ಫೋಟೋ ಶೂಟ್ ಮಾಡಿಸಿಕೊಂಡಿರುವ ನವಜೋಡಿಗಳ ಫೋಟೋ ಎಲ್ಲರ ಮೆಚ್ಚುಗೆಗೆ ಕಾರಣವಾಗಿತ್ತು. ಮಕ್ಕಳ ಜೊತೆ ಬಣ್ಣದ ಓಕುಳಿಯ ಚಿತ್ತಾರ ಬಿಡಿಸಿ, ಬುಗುರಿ ಆಟವಾಡಿ, ಪೇಟಿಂಗ್ ಮಾಡಿ ನವಜೋಡಿ ಫೋಟೋ ಶೂಟ್ ಮಾಡಿಸಿದ್ದರು. ಪುಟಾಣಿ ಮಕ್ಕಳ ನಗುವಿನೊಂದಿಗೆ ಹೊಸ ಜೀವನದ ಆರಂಭದ ಸಂಭ್ರಮದಲ್ಲಿದ್ದಾರೆ ಚೇತನ್ ಮೇಘಾ. ಈ ಸ್ಪೆಷಲ್ ಫೋಟೋ ಶೂಟ್ ಎಲ್ಲರ ಗಮನ ಸೆಳೆದಿತ್ತು.

  • ಸೋನಿಯಾ ಹುಟ್ಟುಹಬ್ಬವನ್ನು ಅನಾಥಾಶ್ರಮ, ವೃದ್ಧಾಶ್ರಮದಲ್ಲಿ ಆಚರಿಸಿದ ಜನಾರ್ದನ ಪೂಜಾರಿ

    ಸೋನಿಯಾ ಹುಟ್ಟುಹಬ್ಬವನ್ನು ಅನಾಥಾಶ್ರಮ, ವೃದ್ಧಾಶ್ರಮದಲ್ಲಿ ಆಚರಿಸಿದ ಜನಾರ್ದನ ಪೂಜಾರಿ

    ಮಂಗಳೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯ ಹುಟ್ಟುಹಬ್ಬಕ್ಕೆ ಕರ್ನಾಟಕ ಕಾಂಗ್ರೆಸ್ ಹೀನಾಯ ಸೋಲಿನ ಉಡುಗೊರೆ ಕೊಟ್ಟರೆ ಕಾಂಗ್ರೆಸ್‍ನ ಹಿರಿಯ ನಾಯಕ ಜನಾರ್ದನ ಪೂಜಾರಿ ಅನಾಥಾಶ್ರಮಗಳಿಗೆ ಫಲವಸ್ತು, ಊಟ ಕೊಡುವುದರ ಮೂಲಕ ಹುಟ್ಟುಹಬ್ಬ ಆಚರಿಸಿದ್ದಾರೆ.

    ಈ ಬಾರಿ ದೇಶದೆಲ್ಲೆಡೆ ಮಹಿಳೆಯರ ಮೇಲಿನ ದೌರ್ಜನ್ಯದಿಂದ ನೊಂದು ತನ್ನ ಜನ್ಮ ದಿನಾಚರಣೆ ಮಾಡುವುದಿಲ್ಲ ಎಂದು ಸೋನಿಯಾ ಗಾಂಧಿ ಘೋಷಿಸಿದ್ದರು. ಈ ರೀತಿ ಹೆಣ್ಣು ಮಕ್ಕಳ ದೌರ್ಜನ್ಯದಿಂದ ನೊಂದು ಹುಟ್ಟುಹಬ್ಬ ಆಚರಿಸದಿರುವ ಉದಾತ್ತ ಮಹಿಳೆ ಜಗತ್ತಿನಲ್ಲಿಯೇ ಬೇರೆ ಯಾರು ಇರುವುದಿಲ್ಲ ಎಂದು ಕೇಂದ್ರ ಸರ್ಕಾರದ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.

    ಹೀಗಾಗಿ ಪ್ರತಿ ವರ್ಷ ಸೋನಿಯಾ ಗಾಂಧಿಯ ಹುಟ್ಟುಹಬ್ಬವನ್ನು ವಿವಿಧ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯ ಮಾಡುವ ಮೂಲಕ ಜನಾರ್ದನ ಪೂಜಾರಿ ಆಚರಿಸುತ್ತಿದ್ದರು. ಅದೇ ರೀತಿ ಈ ವರ್ಷವೂ ನಗರದ ಸಂತ ಅಂತೋನಿಯವರ ಸೈಂಟ್ ಜೋಸೆಫ್ ಪ್ರಶಾಂತ್ ನಿವಾಸದ ವೃದ್ಧಾಶ್ರಮ, ಕೋಣಾಜೆಯ ಅಭಯಾಶ್ರಮಗಳಿಗೆ ಹಣ್ಣು-ಹಂಪಲು ನೀಡಿದ್ದಾರೆ. ಮಂಗಳೂರಿನ ಶಕ್ತಿನಗರದಲ್ಲಿರುವ ಸಾನಿಧ್ಯ ವಿಶೇಷ ಮಕ್ಕಳ ಶಾಲೆಯಲ್ಲಿ ಊಟ ಹಾಗೂ ಹಣ್ಣುಹಂಪಲು ನೀಡಿ ಹುಟ್ಟುಹಬ್ಬ ಆಚರಿಸಿದರು.

    ಬಳಿಕ ಮಾತನಾಡಿದ ಅವರು, ಬಡವರ ಆಶಯದಂತೆ ಸೋನಿಯಾ ಗಾಂಧಿ ಜನ್ಮ ದಿನವನ್ನು ಈ ಬಾರಿಯೂ ಸರಳವಾಗಿ ಆಚರಿಸುವುದಾಗಿ ತಿಳಿಸಿದ್ದಾರೆ. ಪ್ರತಿ ವರ್ಷ ಆಶ್ರಮದಲ್ಲಿರುವ ಬಡವರ ಸಂತೋಷಕ್ಕಾಗಿ ಸೋನಿಯಾ ಗಾಂಧಿಯವರ ಜನ್ಮ ದಿನವನ್ನು ಅವರೊಂದಿಗೆ ಆಚರಿಸುತ್ತೇನೆ. ಅದಕ್ಕಾಗಿ ಬಡವರು ಸದಾ ಅದರ ನಿರೀಕ್ಷೆಯಲ್ಲಿರುತ್ತಾರೆ. ಆ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರ ಹುಟ್ಟು ಹಬ್ಬದ ಆಚರಣೆ ಬೇಡ ಎಂದರು, ಹಾಗಾಗಿ ಈ ರೀತಿಯಲ್ಲಿ ಆಚರಿಸಲಾಯಿತು ಎಂದರು.

    ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕಳ್ಳಿಗೆ ತಾರಾನಾಥ ಶೆಟ್ಟಿ, ಅಬ್ದುಲ್ ಸಲೀಂ, ಮನಪಾ ಸದಸ್ಯೆ ಜೆಸಿಂತಾ, ಮಾಜಿ ಮನಪಾ ಸದಸ್ಯೆ ಸಬಿತಾ ಮಿಸ್ಕಿತ್, ದೀಪಕ್ ಪೂಜಾರಿ ಮತ್ತು ಟಿ.ಕೆ ಸುಧೀರ್, ಲಕ್ಷ್ಮೀ ನಾರಾಯಣ, ರಮಾನಂದ ಪೂಜಾರಿ, ನೀರಜ್ ಪಾಲ್, ಮೋಹನ್ ಶೆಟ್ಟಿ, ಕರುಣಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.