Tag: Outer Ring Road

  • ವಾಹನ ಸವಾರರ ಗಮನಕ್ಕೆ – ಬೆಂಗಳೂರಿನ ಈ ರಸ್ತೆಯಲ್ಲಿ 45 ದಿನ ಸಂಚಾರ ಬಂದ್

    ವಾಹನ ಸವಾರರ ಗಮನಕ್ಕೆ – ಬೆಂಗಳೂರಿನ ಈ ರಸ್ತೆಯಲ್ಲಿ 45 ದಿನ ಸಂಚಾರ ಬಂದ್

    ಬೆಂಗಳೂರು: ಔಟರ್ ರಿಂಗ್ ರೋಡ್‌ನ (Outer Ring Road) 9ನೇ ಮೇನ್ ಜಂಕ್ಷನ್ ನಿಂದ 5ನೇ ಮೇನ್‌ವರೆಗಿನ ಸರ್ವಿಸ್ ರಸ್ತೆಯನ್ನು ಮೆಟ್ರೋ ಸ್ಟೇಷನ್ ಕಾಮಗಾರಿಗಾಗಿ (Metro Station Work) ಮುಂದಿನ 45 ದಿನಗಳ ಕಾಲ ಬಂದ್ ಮಾಡಲಾಗುತ್ತಿದ್ದು, ಓಆರ್‌ಆರ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಔಟರ್ ರಿಂಗ್ ರೋಡ್‌ನಲ್ಲಿ ಸಂಚರಿಸುವ ವಾಹನ ಸವಾರರು ಬದಲಿ ಮಾರ್ಗದಲ್ಲಿ ಸಂಚರಿಸಲು ಸಂಚಾರಿ ಪೊಲೀಸರು (Traffic Police)  ಮನವಿ ಮಾಡಿದ್ದಾರೆ.

    ಹೌದು, ಹೆಚ್.ಎಸ್.ಆರ್ ಲೇಔಟ್ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಹೊರವರ್ತುಲ ರಸ್ತೆಯ 9ನೇ ಮುಖ್ಯರಸ್ತೆ ಜಂಕ್ಷನ್‌ನಿಂದ 5ನೇ ಮುಖ್ಯ ರಸ್ತೆ ಜಂಕ್ಷನ್ ವರೆಗೆ ಸರ್ವಿಸ್ ರಸ್ತೆಯಲ್ಲಿ ಮೇಟ್ರೋ ಸ್ಟೇಷನ್ ಕಾಮಗಾರಿ ಪ್ರಗತಿಯಲ್ಲಿದ್ದು, ಅ.6ರಿಂದ 45 ದಿನಗಳ ಕಾಲ ಕಾಮಗಾರಿ ನಡೆಯಲಿದೆ. 9ನೇ ಮುಖ್ಯ ರಸ್ತೆ ಜಂಕ್ಷನ್ ನಿಂದ 5ನೇ ಮುಖ್ಯ ರಸ್ತೆ ಜಂಕ್ಷನ್‌ವರೆಗಿನ ಹೊರವರ್ತುಲ ರಸ್ತೆ ಸರ್ವಿಸ್ ರಸ್ತೆಯನ್ನು ಕಾಮಗಾರಿಗಾಗಿ ಉಪಯೋಗಿಸಿಕೊಳ್ಳಲಾಗುತ್ತದೆ. ಇದನ್ನೂ ಓದಿ: ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಘರ್ಷಣೆ; 11 ಪಾಕಿಸ್ತಾನಿ ಸೈನಿಕರು, ಟಿಟಿಪಿಯ 19 ಉಗ್ರರು ಸಾವು

    ಕಾಮಗಾರಿ ಮುಗಿಯುವವರೆಗೆ ಇಬ್ಬಲೂರ್ ಕಡೆಯಿಂದ ಬಂದು ಸಿಲ್ಕ್ ಬೋರ್ಡ್ ಜಂಕ್ಷನ್ ಕಡೆಗೆ ಸಂಚರಿಸುವ ವಾಹನ ಸವಾರರು 14ನೇ ಮುಖ್ಯ ರಸ್ತೆ ಫೈಓವರ್ ಮೂಲಕ ಮುಖ್ಯರಸ್ತೆಯಲ್ಲಿಯೇ 5ನೇ ಮುಖ್ಯರಸ್ತೆ ಜಂಕ್ಷನ್‌ಗೆ ಸಾಗಿ ಅಥವಾ ಇತರ ಹೆಚ್.ಎಸ್.ಆರ್. ಲೇಔಟ್ ಒಳಭಾಗದ ರಸ್ತೆಗಳ ಮೂಲಕ ಸಾಗಿ ಸಿಲ್ಕ್ ಬೋರ್ಡ್ ಹಾಗು ಹೊಸೂರು ಮುಖ್ಯರಸ್ತೆಯಲ್ಲಿ ಸಂಚರಿಸಬೇಕು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಬೀಗ; ಸರ್ಕಾರದಿಂದ ಸುದೀಪ್ ಟಾರ್ಗೆಟ್: ಛಲವಾದಿ ನಾರಾಯಣಸ್ವಾಮಿ

  • ಔಟರ್ ರಿಂಗ್ ರೋಡ್‍ನಲ್ಲೇ ಹರಿಯುತ್ತಿದೆ ಚರಂಡಿ ನೀರು

    ಔಟರ್ ರಿಂಗ್ ರೋಡ್‍ನಲ್ಲೇ ಹರಿಯುತ್ತಿದೆ ಚರಂಡಿ ನೀರು

    ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರಮುಖ ಎಸ್‍ಇಝಡ್(ವಿಶೇಷ ಆರ್ಥಿಕ ವಲಯ)ಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಇದ್ದೆ ಇರುತ್ತೆ. ಈ ಟ್ರಾಫಿಕ್ ಜಾಮ್ ಸಮಸ್ಯೆಗೆ ಪರಿಹಾರವಾಗಿ ಮುಖ್ಯ ರಸ್ತೆಯಿಂದ ಎಸ್‍ಇಝಡ್ ಹೋಗಲು ಫ್ಲೈಓವರ್ ಕಾಮಗಾರಿಯನ್ನ ಮಾಡುತ್ತಿದ್ದಾರೆ. ಅದರೆ ಈಗಿರುವ ರಸ್ತೆ ಸ್ಥಿತಿ ಮಾತ್ರ ತೀರ ಅಧ್ವಾನವಾಗಿದ್ದು, ಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿದೆ.

    ಹೌದು. ಬೆಂಗಳೂರು ಮಾನ್ಯತಾ ಟೆಕ್ ಪಾರ್ಕ್ ಗೆ ಸಂಪರ್ಕ ಕಲ್ಪಸೋ ಔಟರ್ ರಿಂಗ್ ರೋಡ್ ಮತ್ತು ಸರ್ವಿಸ್ ರೋಡ್‍ನಲ್ಲಿ ಮ್ಯಾನ್ ಹೊಲ್‍ಗಳು ತುಂಬಿ ಕೊಳಚೆ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಒಂದು ಕಡೆ ಫ್ಲೈಓವರ್ ಕಾಮಗಾರಿಯಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದ್ದರೆ, ಇನ್ನೊಂದೆಡೆ ಒಳ ಚರಂಡಿಯ ನೀರು ರಸ್ತೆಯ ಮೇಲೆ ಬರುತ್ತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.

    ಕಳೆದ ಒಂದು ವಾರದಿಂದ ಇದೇ ರೀತಿಯ ಪರಿಸ್ಥಿತಿ ಇದ್ದರೂ ಜಲಮಂಡಳಿ ಅಧಿಕಾರಿಗಳಾಗಲಿ, ಸ್ಥಳೀಯ ಬಿಬಿಎಂಪಿ ಸದಸ್ಯರಾಗಲಿ ದುರಸ್ಥಿ ಕೆಲಸಕ್ಕೆ ಮುಂದಾಗಿಲ್ಲ. ದೇಶ ವಿದೇಶಗಳ ಅತಿಥಿಗಳು ಬಂದು ಹೋಗೋ ಮಾನ್ಯತಾ ಟೆಕ್ ಪಾರ್ಕ್ ರಸ್ತೆಯೇ ಹೀಗಾದರೆ ಹೇಗೆ? ರಸ್ತೆ ತುಂಬಾ ಚರಂಡಿ ನೀರು, ಜೊತೆಗೆ ಕೆಟ್ಟ ವಾಸನೆಯಿಂದ ಇಲ್ಲಿ ಸಂಚರಿಸೋದು ಹೇಗೆ ಎಂದು ವಾಹನ ಸವಾರರು ಪ್ರಶ್ನಿಸಿ ಕಿಡಿಕಾರುತ್ತಿದ್ದಾರೆ. ಹೀಗಿದ್ದರೂ ಕೂಡ ಸಮಸ್ಯೆ ಸರಿಪಡಿಸಲು ಯಾರು ಮುಂದಾಗಿಲ್ಲ.