Tag: Outrage

  • ರೆಸಾರ್ಟ್ ರಾಜಕಾರಣ ಮಾಡಿದ್ರೆ ಕತ್ತಿನ ಪಟ್ಟಿ ಹಿಡಿದು ಬುದ್ಧಿ ಕಲಿಸಬೇಕಾಗುತ್ತೆ: ಮಂಡ್ಯ ರೈತರು

    ರೆಸಾರ್ಟ್ ರಾಜಕಾರಣ ಮಾಡಿದ್ರೆ ಕತ್ತಿನ ಪಟ್ಟಿ ಹಿಡಿದು ಬುದ್ಧಿ ಕಲಿಸಬೇಕಾಗುತ್ತೆ: ಮಂಡ್ಯ ರೈತರು

    ಮಂಡ್ಯ: ರೈತರ ಸಮಸ್ಯೆ ಬಗೆ ಹರಿಸೋದು ಬಿಟ್ಟು ಹೀಗೆ ರೆಸಾರ್ಟ್ ರಾಜಕಾರಣ ಮಾಡುತ್ತ ಕುಳಿತರೆ ನಿಮ್ಮ ಕತ್ತಿನ ಪಟ್ಟಿ ಹಿಡಿದು ಬುದ್ಧಿ ಕಲಿಸಬೇಕಾಗುತ್ತದೆ ಎಂದು ಜನಪ್ರತಿನಿಧಿಗಳಿಗೆ ಮಂಡ್ಯ ರೈತರು ಎಚ್ಚರಿಕೆ ನೀಡಿದ್ದಾರೆ.

    ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಇಂದು ಮಂಡ್ಯದ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿದ್ದ ರೈತರು, ಸರ್ಕಾರದ ನಡೆ ವಿರುದ್ಧ ಆಕ್ರೋಶ ಹೊರಹಾಕಿದರು. ಅಧಿಕಾರದ ಸಲುವಾಗಿ ರೆಸಾರ್ಟ್ ಸೇರಿರುವ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಅಸಮಾಧಾನವನ್ನು ರೈತರು ಹೊರಹಾಕಿದ್ದಾರೆ.

    ಈ ಮೈತ್ರಿ ಸರ್ಕಾರದಲ್ಲಿ ಜನರ ಕಷ್ಟಗಳಿಗೇ ಸ್ಪಂದಿಸುವ ಕೆಲಸ ಆಗುತ್ತಿಲ್ಲ. ಅಧಿಕಾರವನ್ನು ಉಳಿಸಿಕೊಳ್ಳಲು ಎಲ್ಲರೂ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ. ಇದರ ಜೊತೆ ವಿರೋಧ ಪಕ್ಷಕ್ಕೂ ರಾಜ್ಯದ ರೈತರ ಸಮಸ್ಯೆ ಬೇಕಾಗಿಲ್ಲ. ಅವರು ಕೂಡ ಅಧಿಕಾರವನ್ನು ಹಿಡಿಯಲು ಓಡಾಡುತ್ತಿದ್ದಾರೆ. ನಮ್ಮ ನಾಡಿನ ಜನ ಎಚ್ಚೆತ್ತು ಚುನಾವಣೆ ಸಮಯದಲ್ಲಿ ಮನೆ ಬಳಿ ಬರುವ ರಾಜಕಾರಣಿಗಳಿಗೇ ಬುದ್ಧಿ ಕಲಿಸಬೇಕು. ಯಾವುದೇ ಪಕ್ಷದವರು ಆಗಲಿ ಮೊದಲು ಜನರ ಕಷ್ಟವನ್ನು ಆಲಿಸಿ ನಂತರ ಅವರು ರಾಜಕಾರಣ ಮಾಡಲಿ ಎಂದು ರೈತರು ಜನಪ್ರತಿನಿಧಿಗಳಿಗೆ ಕ್ಲಾಸ್ ತೆಗೆದುಕೊಂಡರು.

    ನಿಮಗೆ ವೋಟ್ ಹಾಕಿರೋದು ಯಾಕೆ? ಇಲ್ಲಿ ನೀರಿಲ್ಲದೆ ನಮ್ಮ ಬೆಳೆಗಳು ಒಣಗುತ್ತಿವೆ. ನೀವು ನಮ್ಮ ಕಷ್ಟಕ್ಕೆ ಸ್ಪಂದಿಸದೇ ರೆಸಾರ್ಟ್ ಸೇರಿಕೊಂಡಿದ್ದೀರಿ? ನಿಮಗೆ ಮಾನ ಮರ್ಯಾದೆ ಇಲ್ಲವೇ? ಇದು ಹೀಗೆ ಮುಂದುವರಿದರೆ ನಿಮ್ಮ ಕತ್ತಿನ ಪಟ್ಟಿ ಹಿಡಿದು ಬುದ್ಧಿ ಕಲಿಸಬೇಕಾಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಮಳೆಯಾದ್ರೆ ಕೆರೆಯಾಗುತ್ತೆ ಗ್ರಾಮದ ಮುಖ್ಯರಸ್ತೆ

    ಮಳೆಯಾದ್ರೆ ಕೆರೆಯಾಗುತ್ತೆ ಗ್ರಾಮದ ಮುಖ್ಯರಸ್ತೆ

    ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಮೆದೆಕೆರೆನಹಳ್ಳಿ ಗ್ರಾಮದಲ್ಲಿ ಮಳೆಯಾದರೆ ಮುಖ್ಯರಸ್ತೆಯೇ ಕೆರೆಯಾಗಿ ಮಾರ್ಪಾಡು ಆಗುತ್ತದೆ. ಗ್ರಾಮಸ್ಥರು ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಈ ಗ್ರಾಮದಲ್ಲಿ ಮಳೆಯಾದರೆ ಸಾಕು ಇಲ್ಲಿನ ಮುಖ್ಯ ರಸ್ತೆ ಕೆರೆಯಾಗಿ ಮಾರ್ಪಾಡು ಆಗುತ್ತಿದ್ದು, ಶಾಲಾ ಮಕ್ಕಳು ಶಾಲೆಗೆ ಹೋಗಬೇಕು ಅಂದರೆ ಹರಸಾಹಸ ಪಡುವಂತಹ ಸ್ಥಿತಿ ಉಂಟಾಗಿದೆ. ಕಳೆದ ಒಂದು ವಾರದಿಂದ ಇದೇ ಪರಿಸ್ಥಿತಿ ಇದ್ದು ಅಧಿಕಾರಿಗಳಿಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.

    ಮಳೆ ನೀರು ಸುವ್ಯವಸ್ಥಿತವಾಗಿ ಹೋಗಲು ಚರಂಡಿ ವ್ಯವಸ್ಥೆ ಮಾಡಿದರೆ ನೀರು ನಿಲ್ಲುವ ಪ್ರಶ್ನೆಯೇ ಇರುವುದಿಲ್ಲ. ಆದರೆ ಸುವ್ಯವಸ್ಥಿತವಾದ ಕಾಮಗಾರಿ ಮಾಡದೇ ಇದ್ದುದರಿಂದ ಗ್ರಾಮದ ಪ್ರಮುಖ ರಸ್ತೆಯೇ ಕೆರೆಯಾಗಿ ಮಾರ್ಪಡು ಆಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೂಡಲೇ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದು, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

  • ನಟ ವಿಜಯ್ ಬರ್ತ್ ಡೇ, ತಮಿಳುಮಯವಾದ ಶ್ರೀರಾಂಪುರ – ಕನ್ನಡಿಗರ ಆಕ್ರೋಶ

    ನಟ ವಿಜಯ್ ಬರ್ತ್ ಡೇ, ತಮಿಳುಮಯವಾದ ಶ್ರೀರಾಂಪುರ – ಕನ್ನಡಿಗರ ಆಕ್ರೋಶ

    ಬೆಂಗಳೂರು: ತಮಿಳು ನಟ ವಿಜಯ್ ಹುಟ್ಟು ಹಬ್ಬದ ಪ್ರಯುಕ್ತ ಶ್ರೀರಾಂಪುರ ತಮಿಳು ಮಯವಾಗಿದ್ದು ಇದಕ್ಕೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ತಮಿಳು ನಟ ವಿಜಯ್ ಅವರ ಬರ್ತ್ ಡೇ ಪ್ರಯುಕ್ತ ಅಖಿಲ ಕರ್ನಾಟಕ ಡಾ. ವಿಜಯ್ ಅಭಿಮಾನಿಗಳ ಸಂಘದಿಂದ ಶ್ರೀರಾಂಪುರದಲ್ಲಿ ವಿಜೃಂಭಣೆಯಿಂದ ಹುಟ್ಟು ಹಬ್ಬ ಆಚರಣೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಎಂಎಲ್‍ಎ ಹಾಗೂ ವಿಜಯ್ ಆಪ್ತ ಆನಂದ್ ವಿಶೇಷ ಅತಿಥಿಯಾಗಿ ಆಗಮಿಸಿದ್ದರು.

    ಶ್ರೀರಾಂಪುರದ ಸನ್‍ರೈಸ್ ಸರ್ಕಲ್‍ನಲ್ಲಿ ಬೃಹತ್ ವೇದಿಕೆ ಹಾಕಿ, ಬೆಳಗ್ಗೆಯಿಂದ ವೇದಿಕೆಯಲ್ಲಿ ವಿಜಯ್ ನಟನೆಯ ತಮಿಳು ಹಾಡುಗಳಿಗೆ ನೃತ್ಯ ಮಾಡಲಾಗುತ್ತಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಆಗಮಿಸಿದ ಕೂಡಲೇ ಕನ್ನಡ ಭಕ್ತಿಗೀತೆಗಳನ್ನು ಹಾಕಿ ನೃತ್ಯ ಮಾಡಲಾಗಿದೆ ಎನ್ನಲಾಗಿದೆ.

    ಶ್ರೀರಾಂಪುರ ತಮಿಳುವಾಗಿದ್ದಕ್ಕೆ ವಿರೋಧ ವ್ಯಕ್ತಪಡಿಸಿರುವ ಕನ್ನಡ ಪರ ಸಂಘಟನೆಗಳು ಕರ್ನಾಟಕದಲ್ಲಿ ಕನ್ನಡಕ್ಕೆ ನೆಲೆ ಇಲ್ಲದಾಂತಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಇನ್ನೂ ವೇದಿಕೆಯ ಫ್ಲೆಕ್ಸ್‍ನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಫೋಟೋಗಳು ಕಂಡು ಬಂದಿವೆ.

  • ಮಾನ ಮರ್ಯಾದೆ ಇಲ್ವ ನಿಮಗೆ, ನಿಮ್ಮ ಹುದ್ದೆಗಾದರೂ ಗೌರವ ಬೇಡವೇ – ಶಾಸಕ ಸುರೇಶ್‍ಗೌಡ ಗರಂ

    ಮಾನ ಮರ್ಯಾದೆ ಇಲ್ವ ನಿಮಗೆ, ನಿಮ್ಮ ಹುದ್ದೆಗಾದರೂ ಗೌರವ ಬೇಡವೇ – ಶಾಸಕ ಸುರೇಶ್‍ಗೌಡ ಗರಂ

    ಮಂಡ್ಯ: ಮಾನ ಮರ್ಯಾದೆ ಇಲ್ವ ನಿಮಗೆ? ನಿಮ್ಮ ಹುದ್ದೆಗಾದರೂ ಗೌರವ ಬೇಡವೇ? ಕಾಲೇಜಿನಲ್ಲಿ ರಾಜಕೀಯ ಮಾಡುತ್ತಿದ್ದೀರಾ? ಎಂದು ರಿಸಲ್ಟ್ ಕಡಿಮೆ ಬಂದ ಶಾಲಾ, ಕಾಲೇಜು ಪ್ರಿನ್ಸಿಪಾಲರ ವಿರುದ್ಧ ಶಾಸಕ ಸುರೇಶ್‍ಗೌಡ ಆಕ್ರೋಶಗೊಂಡಿದ್ದಾರೆ.

    ಮಂಡ್ಯ ಜಿಲ್ಲೆ, ನಾಗಮಂಗಲದ ಪ್ರವಾಸಿ ಮಂದಿರದಲ್ಲಿ ಶೈಕ್ಷಣಿಕ ಉನ್ನತಿ ಕುರಿತು ನಡೆಯುತ್ತಿದ್ದ ಸಭೆಯಲ್ಲಿ ಸುರೇಶ್‍ಗೌಡ ಭಾಗಿಯಾಗಿದ್ದರು. ಈ ಸಭೆಯಲ್ಲಿ ತಾಲೂಕಿನ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಕೂಡ ಭಾಗಿಯಾಗಿದ್ದರು. ಈ ಸಭೆಯಲ್ಲಿ ರಿಸಲ್ಟ್ ಕಡಿಮೆಯಿದ್ದ ಶಾಲಾ ಕಾಲೇಜು ವಿರುದ್ಧ ಶಾಸಕರು ಆಕ್ರೋಶ ಹೊರಹಾಕಿದ್ದಾರೆ.

    ಈ ವೇಳೆ ಇಬ್ಬರು ಪ್ರಾಂಶುಪಾಲರು ರಿಸಲ್ಟ್ ಕಡಿಮೆಯಾಗಲು ಕಾರಣ ತಿಳಿಸಲು ಬಂದಿದ್ದಾರೆ. ಇದರಿಂದ ಮತ್ತಷ್ಟು ಕೆರಳಿದ ಶಾಸಕರು ಬರೀ ಕಾರಣ ಹೇಳಬೇಡಿ. ಶಿಕ್ಷಕರು, ಪ್ರಿನ್ಸಿಪಾಲರು ನಿಮ್ಮ ಘನತೆ ಗೌರವ ಉಳಿಸಿಕೊಳ್ಳಬೇಕು. ಕೆಲವು ಕಡೆ ವಿದ್ಯಾರ್ಥಿಗಳು ಬಂದು ಸರಿಯಾಗಿ ಪಾಠ ಮಾಡುತ್ತಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ. ನಿಮ್ಮಿಂದ ನೂರಾರು ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಅವರ ಭವಿಷ್ಯ ಏನಾಗಬೇಕು ಎಂದು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡರು.

    ಸಮಸ್ಯೆ ಹೇಳುವವರು ಈಗ ಸಭೆ ಕರೆದಾಗ ಬಂದು ಹೇಳೋದಲ್ಲ. ನಾವು ಕ್ಷೇತ್ರದಲ್ಲೇ ಇರುತ್ತೇವೆ ಸಮಸ್ಯೆ ಬಂದ ತಕ್ಷಣ ಹೇಳಬೇಕು. ಇದೂವರೆಗೂ ನಿಮ್ಮ ಸಮಸ್ಯೆ ಹೇಳಿಲ್ಲ. ರಿಸಲ್ಟ್ ಬಗ್ಗೆ ಕೇಳಲು ಬಂದಾಗ ಸಮಸ್ಯೆ ಹೇಳುತ್ತೀರ ಎಂದು ಶಾಸಕ ಸುರೇಶ್‍ಗೌಡ ಆಕ್ರೋಶ ಹೊರ ಹಾಕಿದರು.

  • ಐತಿಹಾಸಿಕ ಬಸವೇಶ್ವರ ಜಾತ್ರೆಯಲ್ಲಿ ಯುವತಿಯರಿಂದ ಅಶ್ಲೀಲ ನೃತ್ಯ ಪ್ರದರ್ಶನ

    ಐತಿಹಾಸಿಕ ಬಸವೇಶ್ವರ ಜಾತ್ರೆಯಲ್ಲಿ ಯುವತಿಯರಿಂದ ಅಶ್ಲೀಲ ನೃತ್ಯ ಪ್ರದರ್ಶನ

    – ಸಂಘಟಕರ ವಿರುದ್ಧ ಬಸವ ಭಕ್ತರ ಆಕ್ರೋಶ

    ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದ ಬಸವೇಶ್ವರ ಜಾತ್ರೆಯ ಸಮಾರಂಭದಲ್ಲಿ ರಸಮಂಜರಿ ಕಾರ್ಯಕ್ರಮದ ಹೆಸರಿನಲ್ಲಿ ಯುವತಿಯರಿಂದ ಅಶೀಲ ನೃತ್ಯ ಪ್ರದರ್ಶನ ಏರ್ಪಡಿಸಿದ್ದ ಸಂಘಟಕರ ವಿರುದ್ಧ ಬಸವ ಭಕ್ತಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಂಘಟಕರು ಆಗಸ್ಟ್ 28 ರಂದು ನಡೆದ ರಸಮಂಜರಿ ಕಾರ್ಯಕ್ರಮದ ಹೆಸರಿನಲ್ಲಿ ಯುವತಿಯರಿಂದ ಅಶ್ಲೀಲ ನೃತ್ಯ ಪ್ರದರ್ಶನ ನಡೆಸಿದ್ದಾರೆ. ಯುವತಿಯರ ಅಶ್ಲೀಲ ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಸವ ಭಕ್ತರು ಆಕ್ರೋಶ ವ್ಯಕ್ತಪಡಿಸಿ, ಸಂಘಟಕರು ಬಸವಣ್ಣನವರಿಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಅಲ್ಲದೇ ಈ ಕುರಿತು ಸಚಿವರು ಏನು ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಕ್ತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಬಸವೇಶ್ವರ ಜನ್ಮಸ್ಥಳವಾದ ಬಸವನ ಬಾಗೇವಾಡಿಯಲ್ಲಿ ಐತಿಹಾಸಿಕ ಬಸವೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಆಗಸ್ಟ್ 27 ರಿಂದ 30 ರವರೆಗೆ ನಡೆಯುವ ನಾಲ್ಕು ದಿನಗಳ ಜಾತ್ರಾ ಮಹೋತ್ಸವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಜಾತ್ರಾ ಸಮಿತಿ ಸಂಘಟಕರು ಹಮ್ಮಿಕೊಂಡಿದ್ದರು. ಜಾತ್ರೆಯ ಉಸ್ತುವಾರಿಯನ್ನು ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರ ವಹಿಸಿಕೊಂಡಿತ್ತು. ಆಗಸ್ಟ್ 27 ರಂದು ಆರೋಗ್ಯ ಸಚಿವ ಶಿವಾನಂದ ಪಾಟೀಲರು ಸ್ವತಃ ತಾವೇ ಬೆಳ್ಳಿ ಪಲ್ಲಕ್ಕಿ ಹೊರುವ ಮೂಲಕ ಜಾತ್ರೆಗೆ ವಿದ್ಯುಕ್ತ ಚಾಲನೆ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಲಬುರಗಿ ಸಿಇಓ ವಿರುದ್ಧ ಗುಡುಗಿದ ಜಿಲ್ಲಾ ಪಂಚಾಯತ್ ಸದಸ್ಯರು

    ಕಲಬುರಗಿ ಸಿಇಓ ವಿರುದ್ಧ ಗುಡುಗಿದ ಜಿಲ್ಲಾ ಪಂಚಾಯತ್ ಸದಸ್ಯರು

    ಕಲಬುರಗಿ: ಜಿಲ್ಲೆಯ ಜಿಲ್ಲಾ ಪಂಚಾಯತ್ ನಲ್ಲಿ ಪಕ್ಷಭೇದ ಮರೆತು ಎಲ್ಲಾ ಸದಸ್ಯರು ಸಿಇಓ ವಿರುದ್ಧ ಒಟ್ಟಾಗಿ ಆಕ್ರೊಶ ವ್ಯಕ್ತಪಡಿಸಿದ್ದಾರೆ.

    ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಸಿಇಓ ಹೆಬ್ಸಿಬಾರಾಣಿ ಕೋರ್ಲಪಾಟಿ ಮಧ್ಯೆ ಮುಸುಕಿನ ಗುದ್ದಾಟ ಮುಗಿಯೋ ಲಕ್ಷಣ ಗೋಚರಿಸುತ್ತಿಲ್ಲ. ಕಳೆದ ಬಾರಿ 11 ನೇ ಜಿಲ್ಲಾ ಪಂಚಾಯತ್ ಸಭೆಯನ್ನ ಖುದ್ದು ಸಿಇಓ ಅವರೇ ಕರೆದು, ಅಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ ತಾರದೇ ಸಭೆಗೆ ಗೈರಾಗಿ ವಿದೇಶ ಪ್ರವಾಸ ಕೈಗೊಂಡಿದ್ದರು. ಆದರೆ ಇಂದು 12 ನೇ ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆ ಪಕ್ಷಬೇಧ ಮರೆತು ಸದಸ್ಯರೆಲ್ಲರು ಸಿಇಓ ವಿರುದ್ಧ ಮುಗಿಬಿದ್ದಿದ್ದಾರೆ.

    ಅರಳಗುಂಡಗಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ರೇವಣಸಿದ್ದಪ್ಪ ಸಂಕಾಲೆ ತಾಳ್ಮೆ ಕಳೆದುಕೊಂಡು ಸಿಇಓ ಹೆಬ್ಸಿಬಾರಾಣಿ ಕೋರ್ಲಪಾಟಿರನ್ನ ಏಕವಚನದಲ್ಲಿ ಕ್ಲಾಸ್ ತೆಗೆದುಕೊಂಡರು. ಸದಸ್ಯರಿಗೆ ಹಾಗೂ ಸಭೆಗೆ ಗೌರವ ಕೊಡಬೇಕು ಅನ್ನೊದು ನಿನಗೆ ಗೊತ್ತಿಲ್ವ, ಇಷ್ಟು ದಿನ ಏನಾಗಿತ್ತು, ಭ್ರಷ್ಟ ಅಧಿಕಾರಿಗಳ ವಿರುದ್ಧ ಯಾಕೆ ನೀನು ಕ್ರಮ ತೆಗೆದುಕೊಳ್ಳುತ್ತಿಲ್ಲ, ಮಾನ್ಯ ಅಧ್ಯಕ್ಷರೆ ನೀವು ಸಿಇಓ ಮಾತಿಗೆ ಮರಳಾಗಬೇಡಿ ಎಂದು ಗುಡುಗಿದರು.

    ಅಲ್ಲದೇ ಇತರ ಸದಸ್ಯರು ಕೂಡ ಸಿಇಓ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ನಿಮ್ಮ ಸೇವೆ ನಮಗೆ ಅವಶ್ಯಕತೆಯಿಲ್ಲ, ನೀವು ಇಲ್ಲಿಂದ ಹೊರಟುಹೋಗಿ ಅಂತಾ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

    ಸಭೆಗೂ ಮುನ್ನ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಒಟ್ಟಿಗೆ ಸಭೆ ನಡೆಸಿದ್ದರು. ಸಭೆಯ ಬಗ್ಗೆ ಹಾಗೂ ಸಿಇಓ ವಿರುದ್ಧ ಕೈಗೊಳ್ಳಬೇಕಾದ ನಿರ್ಣಯಗಳ ಬಗ್ಗೆ ಚರ್ಚಿಸಿದ್ದರು ಎನ್ನಲಾಗಿದೆ. ಒಟ್ಟಾರೆಯಾಗಿ ಕಲಬುರಗಿ ಜಿಲ್ಲಾ ಪಂಚಾಯತ್ ಸಭೆಯಲ್ಲಿ ಅಭಿವೃದ್ದಿ ವಿಷಯಗಳ ಬಗ್ಗೆ ಚರ್ಚಿಸದೇ, ಕೇವಲ ಸಿಇಓ ವಿರುದ್ದ ತಮ್ಮ ಆಕ್ರೋಶವನ್ನ ಹೊರಹಾಕಿದ್ದು, ಅಂತಿಮವಾಗಿ ಯಾರ ಕೈ ಮೇಲಾಗುತ್ತೆ ಅನ್ನೊದು ತೀವ್ರ ಕೂತುಹಲಕ್ಕೆ ಎಡೆ ಮಾಡಿಕೊಟ್ಟಿದೆ.

  • ಮಹಿಳಾ ದಿನಾಚರಣೆಯಂದೇ ಸಿಡಿದೆದ್ದ ವಿದ್ಯಾರ್ಥಿನಿಯರು – ಕಾಲೇಜಿನ ಮೇಲೆಯೇ ಕಲ್ಲೆಸೆದ್ರು!

    ಮಹಿಳಾ ದಿನಾಚರಣೆಯಂದೇ ಸಿಡಿದೆದ್ದ ವಿದ್ಯಾರ್ಥಿನಿಯರು – ಕಾಲೇಜಿನ ಮೇಲೆಯೇ ಕಲ್ಲೆಸೆದ್ರು!

    ಚಿಕ್ಕಬಳ್ಳಾಪುರ: ಯಾವುದೇ ಮಾಹಿತಿ ನೀಡದೇ ದಿಢೀರ್ ಆಗಿ ಕಾಲೇಜು ಕ್ಲೋಸ್ ಮಾಡಿದ ಆಡಳಿತ ಮಂಡಳಿ ವಿರುದ್ಧ ಮಹಿಳಾ ವಿದ್ಯಾರ್ಥಿಗಳು ಕಲ್ಲು ತೂರುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯ ಗೌರಿಬಿದನೂರು ಪಟ್ಟಣ ಹೊರವಲಯದ ಇಡಗೂರು ಬಳಿ ನಡೆದಿದೆ.

    ಪಟ್ಟಣದ ಖಾಸಗಿ ಹೈಟೆಕ್ ಪಾಲಿಟೆಕ್ನಿಕ್ ಸಂಸ್ಥೆಯ ಆಡಳಿತ ಮಂಡಳಿಯ ಭಿನ್ನಾಭಿಪ್ರಾಯ ಹಾಗೂ ಗಲಾಟೆಯಿಂದ ಏಕಾಏಕಿ ಡಿಪ್ಲೋಮಾ ಕಾಲೇಜು ಬಂದ್ ಆಗಿತ್ತು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯರು ಇಂದು ಮಹಿಳಾ ದಿನಾಚರಣೆ ಬಿಟ್ಟು ತಾವು ಓದುತ್ತಿದ್ದ ಕಾಲೇಜಿನ ಮೇಲೆಯೇ ಕಲ್ಲು ತೂರಾಟ ನಡೆಸಿ ಕಾಲೇಜು ಕಟ್ಟಡದ ಕಿಟಕಿ ಗಾಜುಗಳು ಪುಡಿ-ಪುಡಿ ಮಾಡಿದ್ದಾರೆ.

    ಏನಿದು ಘಟನೆ: ಗೌರಿಬಿದನೂರು ಪಟ್ಟಣದ ಹೊರವಲಯದಲ್ಲಿ ಇರುವ ಹೈಟೆಕ್ ಪಾಲಿಟೆಕ್ನಿಕ್ ಕಾಲೇಜು 2009 ರಲ್ಲಿ ಆರಂಭವಾಗಿತ್ತು. ಅಂದಿನಿಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲಾಗುತ್ತಿತ್ತು. ಪ್ರಸಕ್ತ ವರ್ಷದಲ್ಲಿ ಕಾಲೇಜಿನಲ್ಲಿ 91 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಕಳೆದ ಮೂರು ತಿಂಗಳಿನಿಂದ ಶಾಲೆಯ ಆಡಳಿತ ಮಂಡಳಿ ಸದಸ್ಯರ ನಡುವೆ ಹಣಕಾಸಿನ ವಿಚಾರವಾಗಿ ಭಿನ್ನಾಭಿಪ್ರಾಯ ಉಂಟಾಗಿದೆ. ಈ ಕಾರಣದಿಂದ ಕಾಲೇಜಿನ ಆಡಳಿತ ಮಂಡಳಿ ತಾಂತ್ರಿಕ ಶಿಕ್ಷಣ ಇಲಾಖೆಗೆ ಪತ್ರವನ್ನು ಬರೆದು ಕಾಲೇಜು ನಡೆಸಲು ಸಾಧ್ಯವಾಗದ ಕಾರಣ ಮುಚ್ಚುವ ವಿಚಾರವನ್ನು ತಿಳಿಸಿದ್ದರು. ಪತ್ರವನ್ನು ಪಡೆದ ತಾಂತ್ರಿಕ ಶಿಕ್ಷಣ ಇಲಾಖೆ ಸಮಿತಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಲೇಜು ಮುಚ್ಚುವುದು ಸೂಕ್ತ ಎಂಬ ಅಭಿಪ್ರಾಯವನ್ನು ನೀಡಿತ್ತು.

    ಸಮಿತಿಯ ಅಭಿಪ್ರಾಯದಂತೆ ಆಡಳಿತ ಮಂಡಳಿ ಸದ್ಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ 91 ವಿದ್ಯಾರ್ಥಿಗಳಿಗೆ ಬೇರೆ ಕಾಲೇಜಿಗೆ ವರ್ಗಾವಣೆ ಮಾಡಿಕೊಳ್ಳುವಂತೆ ಸೂಚನೆ ನೀಡಿತ್ತು. ಆದರೆ ಪರೀಕ್ಷೆಗೆ ಕೇವಲ ಒಂದು ತಿಂಗಳು ಬಾಕಿ ಇರುವ ಸಮಯದಲ್ಲಿ ಕಾಲೇಜಿನ ಆಡಳಿತ ಮಂಡಳಿ ನಿರ್ಧಾರ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲೆಯ ಬೇರೆ ಪಾಲಿಟೆಕ್ನಿಕ್ ಕಾಲೇಜುಗಳಿಗೆ ವರ್ಗಾವಣೆ ಮಾಡಿಕೊಳ್ಳುವ ವೇಳೆಗೆ ಪರೀಕ್ಷಾ ಅವಧಿ ಹತ್ತಿರ ಬರುವುದರಿಂದ ವಿದ್ಯಾರ್ಥಿಗಳ ಹೆಚ್ಚು ಕಷ್ಟವಾಗಲಿದೆ. ಪರೀಕ್ಷೆಗೆ ಸಿದ್ಧವಾಗಬೇಕಿದ್ದ ನಾವು ಭವಿಷ್ಯದ ಬಗ್ಗೆ ಯೋಚನೆ ಮಾಡುವಂತಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    https://www.youtube.com/watch?v=ZmxKMSJMBa4

  • ಟಿ20 ಸರಣಿಗೆ ಯುವಿ ಕೈಬಿಟ್ಟಿದ್ದು ಯಾಕೆ: ಬಿಸಿಸಿಐ ವಿರುದ್ಧ ಅಭಿಮಾನಿಗಳು ಗರಂ

    ಟಿ20 ಸರಣಿಗೆ ಯುವಿ ಕೈಬಿಟ್ಟಿದ್ದು ಯಾಕೆ: ಬಿಸಿಸಿಐ ವಿರುದ್ಧ ಅಭಿಮಾನಿಗಳು ಗರಂ

    ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಮೂರು ಟಿ20 ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಪಟ್ಟಿಯಲ್ಲಿ ಯುವರಾಜ್ ಸಿಂಗ್ ಅವರನ್ನು ಕೈ ಬಿಟ್ಟದ್ದಕ್ಕೆ ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

    ಅಕ್ಟೋಬರ್ 7ರಿಂದ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಪ್ರಾರಂಭವಾಗಲಿದ್ದು ರಾಂಚಿಯಲ್ಲಿ ಮೊದಲ ಪಂದ್ಯ ನಡೆಯಲಿದೆ. ಈ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿಯ ಎಂಎಸ್‍ಕೆ ಪ್ರಸಾದ್ ಅವರ ನೇತೃತ್ವದಲ್ಲಿ 15 ಜನ ಆಟಗಾರರ ಆಯ್ಕೆ ನಡೆದಿದೆ.

    ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯಗಳಲ್ಲಿ ಯುವರಾಜ್ ಸ್ಥಾನ ಸಿಗದೇ ಇದ್ದರೂ ಟಿ20ಗೆ ಆಯ್ಕೆಯಾಗುವ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದ್ದರು. ಆದರೆ ಬಿಸಿಸಿಐ ಆಯ್ಕೆ ಸಮಿತಿ ಯುವಿ ಯನ್ನು ಕೈಬಿಟ್ಟದ್ದಕ್ಕೆ ಅಭಿಮಾನಿಗಳಿಗೆ ನಿರಾಸೆಯಾಗಿದೆ.

     

    http://twitter.com/anuragd123/status/914709755158962176

    ಮಾಜಿ ನಾಯಕ ಸೌರವ್ ಗಂಗೂಲಿ ಬಿಸಿಸಿಐ ನ ನಡೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯುವರಾಜ್ ಸಿಂಗ್ ಮತ್ತೆ ಕಮ್ ಬ್ಯಾಕ್ ಮಾಡಲು ಬಿಸಿಸಿಐ ಅವಕಾಶ ನೀಡಬೇಕಿತ್ತು. ಆದರೆ ಯುವರಾಜ್ ಆಯ್ಕೆಯಲ್ಲಿ ಬಿಸಿಸಿಐ ಯಾಕೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಯುವರಾಜ್ ಸಿಂಗ್ ಆಸ್ಟ್ರೇಲಿಯಾ ವಿರುದ್ಧ ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಉತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಆಟಗಾರನಾಗಿದ್ದು, ಬೌಲಿಂಗ್ ಹಾಗೂ ಬ್ಯಾಟಿಂಗ್ ವಿಭಾಗದಲ್ಲೂ ಸಹ ಆಸ್ಟ್ರೇಲಿಯಾ ತಂಡವನ್ನು ಕಾಡಬಲ್ಲ ಸಾಮಥ್ರ್ಯ ಹೊಂದಿದ್ದಾರೆ. ಅಲ್ಲದೇ ಭಾರತ ಆಡಿದ ಹಲವು ಟಿ20 ಪಂದ್ಯಗಳಲ್ಲಿ ಯುವಿ ಗೆಲುವಿಗೆ ಮುಖ್ಯ ಪಾತ್ರವಾಹಿಸುತ್ತಿದ್ದರು.

    ಸುರೇಶ್ ರೈನಾ ಕೂಡ ಟಿ20 ಸರಣಿಗೆ ಆಯ್ಕೆಯಾಗಿಲ್ಲ. ಜೊತೆಗೆ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಜಿಂಕ್ಯಾ ರಹಾನೆಯನ್ನು ಕೂಡ ಕೈ ಬಿಡಲಾಗಿದೆ. ಆದರೆ ವೇಗದ ಬೌಲರ್ 38 ವರ್ಷದ ಆಶಿಶ್ ನೆಹ್ರಾ ಅವರನ್ನು ಸರಣಿಗೆ ಆಯ್ಕೆ ಮಾಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

    ಟಿ20 ಸ್ಟ್ರೈಕ್ ರೇಟ್:
    ಯುವರಾಜ್ ಸಿಂಗ್ ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 10 2013ರಲ್ಲಿ ರಾಜ್‍ಕೋಟ್ ನಲ್ಲಿ ನಡೆದ ಪಂದ್ಯದಲ್ಲಿ 57 ಬಾಲ್‍ಗಳಲ್ಲಿ 5 ಸಿಕ್ಸ್ 8 ಬೌಂಡರಿ ಸಹಿತ 77 ರನ್‍ಗಳನ್ನು ಬಾರಿಸಿದ್ದರು. ಜೊತೆಗೆ 2007ರ ಟಿ 20 ವಿಶ್ವಕಪ್ ಸೆಮಿ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ 38 ಬಾಲ್‍ಗೆ 70 ರನ್ ಬಾರಿಸಿ ಭಾರತ ವಿಶ್ವ ಕಪ್ ಫೈನಲ್ ಪ್ರವೇಶ ಮಾಡಲು ಪ್ರಮುಖ ಪಾತ್ರ ವಹಿಸಿದ್ದರು. 2017 ಫೆ.1ರಂದು ಬೆಂಗಳೂರಿನಲ್ಲಿ ಇಂಗ್ಲೆಂಡ್ ವಿರುದ್ಧ ಆಡಿದ ಪಂದ್ಯವೇ ಯುವಿ ಕೊನೆಯ ಟಿ 20 ಪಂದ್ಯವಾಗಿದ್ದು, ಈ ಪಂದ್ಯದಲ್ಲಿ 27 ರನ್ ಹೊಡೆದಿದ್ದರು.

    https://youtu.be/MHFgWsfZBk4