Tag: owner

  • ಮುದ್ದಿನ ನಾಯಿಗಾಗಿ ವಿಮಾನದ ಬ್ಯುಸಿನೆಸ್ ಕ್ಲಾಸ್ ಕ್ಯಾಬಿನ್ ಬುಕ್

    ಮುದ್ದಿನ ನಾಯಿಗಾಗಿ ವಿಮಾನದ ಬ್ಯುಸಿನೆಸ್ ಕ್ಲಾಸ್ ಕ್ಯಾಬಿನ್ ಬುಕ್

    ಮುಂಬೈ: ಮನುಷ್ಯನ ಅತ್ಯುತ್ತಮ ಸ್ನೇಹಿತ ಎಂದರೆ ನಾಯಿ ಎಂದೇ ಹೇಳಬಹುದು. ವ್ಯಕ್ತಿಯೊಬ್ಬರು ತಮ್ಮ ನೆಚ್ಚಿನ ನಾಯಿಗಾಗಿ ಮುಂಬೈನಿಂದ ಚೆನ್ನೈಗೆ ಪ್ರಯಾಣಿಸಲು 2.5 ಲಕ್ಷ ರೂ. ಖರ್ಚು ಮಾಡಿ ಏರ್ ಇಂಡಿಯಾ ಬ್ಯುಸಿನೆಸ್ ಕ್ಲಾಸ್ ಕ್ಯಾಬಿನ್‍ ಬುಕ್ ಮಾಡಿದ್ದಾರೆ.

    ಇಬ್ಬರು ಬುಧವಾರ ಬೆಳಗ್ಗೆ 9 ಗಂಟೆಗೆ ಮುಂಬೈನಿಂದ ಚೆನ್ನೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಎಐ-671 ವಿಮಾನದಲ್ಲಿ ಜೆ-ಬ್ಯುಸಿನೆಸ್ ಕ್ಲಾಸ್ ಕ್ಯಾಬಿನ್ ಬುಕ್ ಮಾಡಿದ್ದಾರೆ. ಈ ವಿಮಾನದಲ್ಲಿ ನಾಯಿಯು ತನ್ನ ಮಾಲೀಕನೊಂದಿಗೆ ಐಷಾರಾಮಿಯಾಗಿ ಪ್ರಯಾಣಿಸಿದೆ. ಈ ವಿಮಾನದಲ್ಲಿ 12 ಜೆ- ಕ್ಲಾಸ್ ಸೀಟುಗಳಿದೆ. ಇದನ್ನೂ ಓದಿ: ಮತ್ತೆ ಒಂದಾಗಲಿರುವ ರಾಜಕುಮಾರ ಜೋಡಿ – ಸೆಟ್ಟೇರಲಿದೆ ಪುನೀತ್, ಸಂತೋಷ್ ಕಾಂಬಿನೇಷನ್‍ನ ಹೊಸ ಸಿನಿಮಾ

    ಮುಂಬೈನಿಂದ ಚೆನ್ನೈಗೆ ಎರಡು ಗಂಟೆಗಳ ಕಾಲ ಪ್ರಯಾಣಿಸಲು ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಸರಾಸರಿ 18,000 ದಿಂದ 20,000 ರೂ. ಆಗಿದೆ. ಪ್ರಸ್ತುತ ಏರ್ ಇಂಡಿಯಾ ಕೆಲವು ನಿಯಮಗಳ ಅನುಸಾರ ಸಾಕುಪ್ರಾಣಿಗಳನ್ನು ವಿಮಾನದಲ್ಲಿ ಪ್ರಯಾಣಿಸಲು ಅವಕಾಶ ನೀಡಿದೆ. ಇದನ್ನೂ ಓದಿ: ಜಯಮೃತ್ಯುಂಜಯ ಸ್ವಾಮೀಜಿ ಶಾಪದಿಂದಲೇ ಯಡಿಯೂರಪ್ಪನವರ ಅಧಿಕಾರ ಹೋಗಿದೆ: ವಿಜಯಾನಂದ ಕಾಶಪ್ಪನವರ್

  • ಗುಟ್ಕಾ ಸಾಲ ಕೊಡದ್ದಕ್ಕೆ ಪಾನ್ ಶಾಪ್ ಮಾಲೀಕನನ್ನೇ ಕೊಂದ

    ಗುಟ್ಕಾ ಸಾಲ ಕೊಡದ್ದಕ್ಕೆ ಪಾನ್ ಶಾಪ್ ಮಾಲೀಕನನ್ನೇ ಕೊಂದ

    – ಬೆಚ್ಚಿ ಬಿದ್ದ ಕುಂದಾ ನಗರಿ

    ಬೆಳಗಾವಿ: ಗುಟ್ಕಾ ಸಾಲ ಕೊಡಲಿಲ್ಲ ಎಂಬ ಕಾರಣಕ್ಕೆ ಪಾನ್ ಶಾಪ್ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಘಟನೆಯಿಂದ ಕುಂದಾನಗರಿ ಜನ ಬೆಚ್ಚಿಬಿದ್ದಿದ್ದಾರೆ.

    ಮಂಗಳವಾರ ರಾತ್ರಿ ಬೆಳಗಾವಿಯ ವಡಗಾವಿ ಪ್ರದೇಶದ ಲಕ್ಷ್ಮೀ ನಗರದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮ ಜೋರಾಗಿತ್ತು. ಜನರು ಗಣೇಶನ ವಿಸರ್ಜನೆಯಲ್ಲಿಯೇ ತಲ್ಲೀನರಾಗಿದ್ದರು. ಆದರೆ ಇತ್ತ ಆರೋಪಿ ದತ್ತಾತ್ರೇಯ ಶಿವಾನಂದ ಜತ್ತಿನಮಠ ಗುಟ್ಕಾ ಸಾಲ ಕೊಡು ಎಂದು ಬಂದಿದ್ದು, ಉದ್ರಿ ಕೊಡುವುದಿಲ್ಲ ಎಂದು ಪಾನ್ ಶಾಪ್ ಮಾಲೀಕ ಬಾಲಕೃಷ್ಣ ಶೆಟ್ಟಿ ಹೇಳಿದ್ದಾರೆ. ಇಷ್ಟು ಅಂದಿದ್ದೇ ತಡ ಪಾನ್ ಅಂಗಡಿ ಮಾಲೀಕನನ್ನು ದತ್ತಾತ್ರೇಯ ಶಿವಾನಂದ ಜತ್ತಿನಮಠ ಹತ್ಯೆ ಮಾಡಿದ್ದಾನೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಅಪಘಾತ – ನಿನ್ನೆಯಷ್ಟೇ ಕೆಲಸಕ್ಕೆ ಸೇರಿದ್ದ ಕೃತಿಕ ರಾಮಾನ್

    ಹತ್ಯೆಯಾದ ಬಾಲಕೃಷ್ಣ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವರು. ಕಳೆದ 25 ವರ್ಷಗಳಿಂದ ಪಾನ್ ಶಾಪ್ ನಡೆಸುತ್ತಿದ್ದರು. ಬೆಳಗ್ಗೆಯಿಂದ ರಾತ್ರಿವರೆಗೂ ಪಾನ್ ಶಾಪ್ ನಡೆಸಿಕೊಂಡು ಪತ್ನಿ, ಮಕ್ಕಳನ್ನು ಸಾಕುತ್ತಿದ್ದರು.

    ಘಟನೆ ಸಂಬಂಧ ಕೊಲೆಯಾದ ಬಾಲಕೃಷ್ಣ ಶೆಟ್ಟಿ ಆಪ್ತ ಪ್ರಭಾಕರ್ ಶೆಟ್ಟಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಮಾದಕ ವಸ್ತು ಸೇವಿಸಿ ಬಂದು, ಗುಟ್ಕಾ ಸಾಲ ಕೊಡುವಂತೆ ಪದೇ ಪದೇ ಕಿರಿ ಕಿರಿ ಮಾಡುತ್ತಿದ್ದರು. ಉದ್ರಿ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮನೆಗೆ ಹೋಗುತ್ತಿದ್ದ ಸಮಯದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಆರೋಪಿ ದತ್ತಾತ್ರೇಯ ಶಿವಾನಂದ ಜತ್ತಿನಮಠ ನಮ್ಮ ಉಡುಪಿಯವರಿಗೆ ಸಾಕಷ್ಟು ತೊಂದರೆ ಕೊಡುತ್ತಿದ್ದ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಯಾವುದೇ ಕಾರಣಕ್ಕೂ ಹೊರಗೆ ಬಿಡಬಾರದು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

  • ತಿರುಪತಿ ತಿಮ್ಮಪ್ಪನ ನಕಲಿ ಟಿಕೆಟ್ ನೀಡಿ 2 ಲಕ್ಷ ವಂಚನೆ

    ತಿರುಪತಿ ತಿಮ್ಮಪ್ಪನ ನಕಲಿ ಟಿಕೆಟ್ ನೀಡಿ 2 ಲಕ್ಷ ವಂಚನೆ

    ಚಿಕ್ಕಬಳ್ಳಾಪುರ: ತಿರುಪತಿ ತಿಮ್ಮಪ್ಪ, ಏಡುಕೊಂಡಲವಾಡ, ಆಪತ್ಭಾಂದವ ಅನಾಥ ರಕ್ಷಕ ಅಂತಲೇ ಕರೆಸಿಕೊಳ್ಳುವ ತಿರುಪತಿ ತಿಮ್ಮಪ್ಪನ ಹೆಸರಿನಲ್ಲಿಯೇ ವಂಚಕನೊರ್ವ ಲಕ್ಷಾಂತರ ರೂಪಾಯಿ ದೋಖಾ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

    ನಗರದ ಅಮೇಜಿಂಗ್ ಡ್ರೀಮ್ ಹೆಸರಿನ ಟ್ರಾವೆಲ್ ಏಜೆನ್ಸಿ ಮಾಲೀಕೆ ಪ್ರಿಯದರ್ಶಿನಿ ವಂಚನೆಗೊಳಗಾಗಿದ್ದು, ಆಂಧ್ರಪ್ರದೇಶ ವೆಸ್ಟ್ ಗೋದಾವರಿ ಜಿಲ್ಲೆಯ ಪಂಜಾ ವೇಮವರಂನ ಪಂಜಾ ರಮಣ ಪ್ರಸಾದ್ ತಿರುಪತಿ ವೆಂಕಟೇಶ್ವರನ ದರ್ಶನಕ್ಕೆ ಟಿಕೆಟ್ ಬುಕ್ ಮಾಡಿಕೊಡುವುದಾಗಿ ಹೇಳಿ ನಂಬಿಸಿ ನೂರಾರು ಟಿಕೆಟ್‍ಗಳನ್ನು ಕೊಟ್ಟಿದ್ದಾನೆ. ಆದರೆ ಕೊಟ್ಟ ಟಿಕೆಟ್‍ಗಳನ್ನು ಪಡೆದು ತಿಮ್ಮಪ್ಪನ ದರ್ಶನಕ್ಕೆ ತೆರಳಿದಾಗ ಆತ ನೀಡಿದ್ದ ಟಿಕೆಟ್‍ಗಳು ನಕಲಿ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ:  ಸಾಲಬಾಧೆ ತಾಳದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ

    ತಮ್ಮ ಬಳಿ ಇರುವ ಟಿಕೆಟ್ ನಕಲಿ ಅಂತ ತಿಳಿದು ದರ್ಶನಕ್ಕೆ ಹೋದವರಿಗೆ ಶಾಕ್ ಆಗಿದೆ. ಇಷ್ಟರಲ್ಲಾಗಲೇ ಪ್ರಿಯದರ್ಶಿನಿ 143 ಜನರಿಂದ ತಲಾ 900 ರೂಪಾಯಿಯಂತೆ 1,28,700 ರೂಪಾಯಿ ಹಣವನ್ನು ಪಡೆದು, ವಂಚಕ ಪಂಜಾ ರಮಣ ಪ್ರಸಾದ್ ಖಾತೆಗೆ ಜಮಾ ಮಾಡಿದ್ದಾರೆ. ವಂಚನೆಯಾಗಿರುವ ಬಗ್ಗೆ ತಿಳಿಯುತ್ತಿದ್ದಂತೆ ಪ್ರಸಾದ್‍ಗೆ ಕರೆ ಮಾಡಿ ವಂಚನೆ ಮಾಡಿರುವ ಬಗ್ಗೆ ಕೇಳುತ್ತಿದ್ದಂತೆ, ಆತ ತನ್ನ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಇನ್ನೂ ಪ್ರಸಾದ್ ಇವರಿಗೆ ಅಲ್ಲದೆ ಇನ್ನೂ ಹಲವರಿಂದ 10 ಲಕ್ಷಕ್ಕೂ ಹೆಚ್ಚು ರೂಪಾಯಿ ವಂಚಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಪ್ಯಾರಾಲಂಪಿಕ್ಸ್ ಕ್ರೀಡಾಪಟುಗಳನ್ನು ಭೇಟಿ ಮಾಡಿ ಅಭಿನಂದಿಸಿದ ಪ್ರಧಾನಿ

    ವಂಚಕ ರಮಣ ಪ್ರಸಾದ್ ಪಂಜಾಬ್ ನ್ಯಾಷನಲ್ ಬ್ಯಾಂಕ್ ತಿರುಪತಿ ಶಾಖೆಯಲ್ಲಿ ಅಕೌಂಟ್ ಹೊಂದಿದ್ದು, ಅದೇ ಖಾತೆಯಿಂದಲೇ ಹಣ ಪಡೆದು ವಂಚಿಸಿದ್ದಾನೆ. ಈಗಾಗಲೇ ಆತನ ವಿರುದ್ಧ ತಿರುಪತಿಯಲ್ಲಿ ಹಲವು ವಂಚನೆ ಪ್ರಕರಣಗಳು ದಾಖಲಾಗಿವೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಮುಂಬೈನಿಂದಲೇ ವಕೀಲರಿಗೆ ಕರೆ ಮಾಡಿ ಅನುಶ್ರೀ ಮಾತುಕತೆ!

    ಸದ್ಯ ವಂಚಕ ರಮಣ ಪ್ರಸಾದ್‍ನನ್ನು ಬಂಧಿಸಿ ನ್ಯಾಯ ಕೊಡಿಸುವಂತೆ ವಂಚನೆಗೊಳಗಾದ ಪ್ರಿಯದರ್ಶಿನಿ ಚಿಕ್ಕಬಳ್ಳಾಪುರ ನಗರದ ಸೈಬರ್ ಕ್ರೈಂ ಬ್ರಾಂಚ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಏನೇ ಆಗಲಿ ಕೋಟ್ಯಾಂತರ ಜನ ಭಕ್ತರನ್ನು ಹೊಂದಿರುವ ತಿರುಪತಿ ತಿಮ್ಮಪ್ಪನ ಹೆಸರಿನಲ್ಲಿ ವಂಚಕ ಭಕ್ತರಿಗೆ ವಂಚನೆ ಮಾಡಿ ಪಂಗನಾಮ ಹಾಕಿರುವುದನ್ನುವಿಪರ್ಯಾಸ ಎಂದೇ ಹೇಳಬಹುದಾಗಿದೆ.

  • ಟೀ ಶರ್ಟ್ ಒಳಗೆ 5, ಪಂಚೆಯೊಳಗೆ 5 ಟೀ ಶರ್ಟ್ ಕದ್ದು ಮಾಲೀಕನ ಕೈಗೆ ಸಿಕ್ಕಿಬಿದ್ದ!

    ಟೀ ಶರ್ಟ್ ಒಳಗೆ 5, ಪಂಚೆಯೊಳಗೆ 5 ಟೀ ಶರ್ಟ್ ಕದ್ದು ಮಾಲೀಕನ ಕೈಗೆ ಸಿಕ್ಕಿಬಿದ್ದ!

    ಚೆನ್ನೈ: ಯುವಕನೊಬ್ಬ ಪಂಚೆಯೊಳಗೆ 10 ಟೀ ಶರ್ಟ್ ಕದ್ದು, ಅಂಗಡಿ ಮಾಲೀಕನ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಹಾಕಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇನ್ನೂ ಈ ವೀಡಿಯೋವನ್ನು ಮೊಬೈಲ್‍ನಲ್ಲಿ ಸೆರೆಹಿಡಿಯಲಾಗಿದೆ.

    tamil nadu man

    ಆರೋಪಿಯನ್ನು ತುತುಕುಡಿಯ ಸೆಲ್ವಮಧನ್ ಎಂದು ಗುರುತಿಸಲಾಗಿದ್ದು, ತಮಿಳುನಾಡಿನ ತಿಸಾಯನವಿಲೈ ಬಳಿಯ ಬಟ್ಟೆ ಅಂಗಡಿಯೊಂದರಲ್ಲಿ ಈ ಘಟನೆ ನಡೆದಿದೆ. ಹಬ್ಬ ಇದ್ದ ಕಾರಣ ಹೆಚ್ಚು ಜನ ತುಂಬಿದ ಅಂಗಡಿಗೆ ನುಗ್ಗಿ ಲಾಭ ಗಳಿಸಲು ಪ್ರಯತ್ನಿಸಿದ ಆರೋಪಿ ಅಂಗಡಿಯ ಕೆಲಸಗಾರರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ. ಇದನ್ನೂ ಓದಿ: ಸಾಲಬಾಧೆ ತಾಳದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ

    tamil nadu man

    ಮೊದಲಿಗೆ ಅಂಗಡಿಯ ಕೆಲಸಗಾರರಿಗೆ ಟೀ ಶರ್ಟ್ ಕೇಳಿ ನಂತರ ಅದನ್ನು ಟ್ರಯಲ್ ರೂಮ್‍ನಲ್ಲಿ ಧರಿಸಿ ಪರಿಶೀಲಿಸುವುದಾಗಿ ಹೇಳಿ ಹೋಗಿದ್ದಾನೆ. ಆದರೆ ಬಳಿಕ ಟೀ ಶರ್ಟ್ ಇಲ್ಲದೇ ಟ್ರಯಲ್ ರೂಮ್‍ನಿಂದ ಹೊರಗೆ ಬಂದಾಗ, ಆರೋಪಿಯನ್ನು ಅಂಗಡಿಯವರು ಟೀಶರ್ಟ್ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಟೀ ಶರ್ಟ್ ಸೈಜ್ ಸರಿ ಇಲ್ಲ ಎಂದು ಅದನ್ನು ಟ್ರಯಲ್ ರೂಮ್‍ನಲ್ಲಿಯೇ ಬಿಟ್ಟಿರುವುದಾಗಿ ಸೆಲ್ವಂ ಮಧನ್ ಹೇಳಿದ್ದಾನೆ. ಇದನ್ನೂ ಓದಿ: ಲಂಕೆಯಲ್ಲಿ ‘ಪಿಪಿಪಿ’ ಸಾಂಗ್ ಗುಂಗು – ಭರ್ಜರಿ ಸ್ಟೆಪ್ಸ್ ಹಾಕಿದ ಯೋಗಿ, ಕೃಷಿ ತಾಪಂಡ

    ಈ ಬಗ್ಗೆ ಅನುಮಾನಗೊಂಡ ಅಂಗಡಿಯವರು ಕೂಡಲೆ ಮಾಲೀಕರಿಗೆ ತಿಳಿಸಿದ್ದಾರೆ. ನಂತರ ಮಾಲೀಕರು ಆರೋಪಿಗೆ ಬಟ್ಟೆಯನ್ನು ತೆಗೆಯುವಂತೆ ಸೂಚಿಸಿದ್ದಾರೆ. ಆಗ ಆರೋಪಿ 5 ಟೀಶರ್ಟ್ ಧರಿಸಿದ್ದು, ಪಂಚೆಯೊಳಗೆ 5 ಟೀ ಶರ್ಟ್ ಬಚ್ಚಿಟ್ಟಿಕೊಂಡಿರುವುದು ಪತ್ತೆಯಾಗಿದೆ. ಆದರೆ ಈ ಘಟನೆ ಸಂಬಂಧ ಮಾಲೀಕರು ಯಾವುದೇ ದೂರು ನೀಡದೇ ಯುವಕನನ್ನು ಹಾಗೆಯೇ ಬಿಟ್ಟು ಕಳುಹಿಸಿಕೊಟ್ಟಿದ್ದಾರೆ.

  • ಪಾರ್ಸಲ್ ಕೊಡಲು ತಡ- ರೆಸ್ಟೋರೆಂಟ್ ಮಾಲೀಕನನ್ನ ಗುಂಡಿಕ್ಕಿ ಕೊಂದ ಫುಡ್ ಡೆಲಿವರಿ ಬಾಯ್

    ಪಾರ್ಸಲ್ ಕೊಡಲು ತಡ- ರೆಸ್ಟೋರೆಂಟ್ ಮಾಲೀಕನನ್ನ ಗುಂಡಿಕ್ಕಿ ಕೊಂದ ಫುಡ್ ಡೆಲಿವರಿ ಬಾಯ್

    ನವದೆಹಲಿ: ಫುಡ್ ಡೆಲಿವರಿ ಬಾಯ್ ಒಬ್ಬ ಪಾರ್ಸಲ್ ನೀಡುವುದು ತಡವಾಯಿತು ಎಂಬ ಕಾರಣಕ್ಕೆ ರೆಸ್ಟೋರೆಂಟ್ ಮಾಲೀಕನಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

    ಸುನಿಲ್ ಅಗರ್‍ವಾಲ್ ಮೃತನಾಗಿದ್ದಾನೆ. ಮಿತ್ರ ಎಂಬ ಸ್ವಂತ ರೆಸ್ಟೋರೆಂಟ್ ಹೊಂದಿದ್ದರು. ರಾತ್ರಿ ಫುಡ್ ಡೆಲಿವರಿ ಬಾಯ್‍ನಿಂದ ಕೊಲೆಯಾಗಿದ್ದಾರೆ. ಫುಡ್ ತಡವಾಗುತ್ತದೆ ಎನ್ನುವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ. ಇದನ್ನೂ ಓದಿ: ಕೇಳದೇ ಪಾನಿಪುರಿ ತಂದ ಗಂಡ- ಪ್ರಾಣ ಬಿಟ್ಟ ಪತ್ನಿ

     

    ಮಿತ್ರ ರೆಸ್ಟೋರೆಂಟ್‍ಗೆ ಚಿಕನ್ ಬಿರಿಯಾನಿ ಹಾಗೂ ಪೂರಿ ಸಬ್ಜಿ ಆರ್ಡರ್ ಬಂದಿತ್ತು. ಆ ಆರ್ಡರ್ ಅನ್ನು ತೆಗೆದುಕೊಂಡು ಹೋಗಲು ಮಂಗಳವಾರ ರಾತ್ರಿ ಡೆಲಿವರಿ ಬಾಯ್ ಬಂದಿದ್ದ. ಆತ ಬರುವ ವೇಳೆಗೆ ಬಿರಿಯಾನಿ ರೆಡಿಯಾಗಿತ್ತು. ಆದರೆ ಪೂರಿ, ಸಬ್ಜಿ ಪಾರ್ಸಲ್ ರೆಡಿ ಮಾಡಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಹೋಟೆಲ್‍ನವರು ಹೇಳಿದ್ದರು. ಇದೇ ವಿಷಯಕ್ಕೆ ಡೆಲಿವರಿ ಬಾಯ್ ಮತ್ತು ರೆಸ್ಟೋರೆಂಟ್ ಸಿಬ್ಬಂದಿ ನಡುವೆ ಜಗಳವಾಗಿತ್ತು. ಇದನ್ನೂ ಓದಿ: ಕಾಂಗ್ರೆಸ್ 20 ವರ್ಷದಲ್ಲಿ ನಿರ್ನಾಮ ಆಗುತ್ತೆ: ಉಮೇಶ್ ಕತ್ತಿ

    ಈ ವೇಳೆ ರೆಸ್ಟೋರೆಂಟ್ ಸಿಬ್ಬಂದಿಗೆ ಸ್ವಿಗ್ಗಿ ಡೆಲಿವರಿ ಬಾಯ್ ಮನಬಂದಂತೆ ಬೈದಿದ್ದ. ಇದರಿಂದ ಕೋಪಗೊಂಡ ಆ ಸಿಬ್ಬಂದಿ ರೆಸ್ಟೋರೆಂಟ್ ಮಾಲೀಕರಿಗೆ ವಿಷಯ ತಿಳಿಸಿದ್ದ. ಜಗಳ ನಿಲ್ಲಿಸಲು ಅಲ್ಲಿಗೆ ಬಂದ ಸುನಿಲ್ ಹಣೆಗೆ ಈ ವೇಳೆ ಸ್ವಿಗ್ಗಿ ಡೆಲಿವರಿ ಏಜೆಂಟ್ ಗುಂಡು ಹಾರಿಸಿದ್ದಾನೆ. ತಕ್ಷಣ ರೆಸ್ಟೋರೆಂಟ್ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು. ಡೆಲಿವರಿ ಬಾಯ್ ನಾಪತ್ತೆಯಾಗಿದ್ದು, ಆತನನ್ನು ಹಿಡಿಯಲು ಮೂರು ಪೊಲೀಸರ ತಂಡ ರಚಿಸಲಾಗಿದೆ.

  • ಶ್ವಾನದ ಸವಿನೆನಪಿಗೆ ಕಂಚಿನ ಪ್ರತಿಮೆ – ಬಿಡಿಸಲಾಗದ ಮಾಲೀಕ, ಶ್ವಾನದ ನಂಟು

    ಶ್ವಾನದ ಸವಿನೆನಪಿಗೆ ಕಂಚಿನ ಪ್ರತಿಮೆ – ಬಿಡಿಸಲಾಗದ ಮಾಲೀಕ, ಶ್ವಾನದ ನಂಟು

    ಹೈದರಾಬಾದ್: ಸಾಮಾನ್ಯವಾಗಿ ಜನರು ಸಾಕು ಪ್ರಾಣಿಗಳನ್ನು ತಮ್ಮ ಮನೆಯ ಸದಸ್ಯರಂತೆ ಭಾವಿಸುತ್ತಾರೆ. ಮನುಷ್ಯರಂತೆ ಅನೇಕ ಮಂದಿ ಪ್ರಾಣಿಗಳೊಂದಿಗೆ ಕೂಡ ಉತ್ತಮ ಪ್ರೀತಿ ಹಾಗೂ ಬಾಂಧವ್ಯವನ್ನು ಹೊಂದಿರುತ್ತಾರೆ. ತಮ್ಮ ನೆಚ್ಚಿನ ಶ್ವಾನ, ಬೆಕ್ಕು ಮತ್ತು ಇತರೆ ಸಾಕು ಪ್ರಾಣಿಗಳು ಸತ್ತಾಗ ದುಃಖ ವ್ಯಕ್ತಪಡಿಸುತ್ತಾರೆ. ಆದರೆ ಆಂಧ್ರ ಪ್ರದೇಶದ ವ್ಯಕ್ತಿಯೊಬ್ಬರು 5 ವರ್ಷಗಳ ಹಿಂದೆ ನಿಧನ ಹೊಂದಿದ ಶ್ವಾನದ ನೆನಪಿಗಾಗಿ ಕಂಚಿನ ಪ್ರತಿಮೆಯನ್ನು ಸ್ಥಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ.

    ಹೌದು, ಆಂಧ್ರ ಪ್ರದೇಶದ ಪ್ರಕಾಶ್ ಎಂಬವರು 9 ವರ್ಷಗಳ ಕಾಲ ಶ್ವಾನವನ್ನು ಬಹಳ ಪ್ರೀತಿಯಿಂದ ಸಾಕಿದ್ದರು. ಆದರೆ 5 ವರ್ಷದ ಹಿಂದೆ ಶ್ವಾನ ಮೃತಪಟ್ಟಿದೆ. ಅಂದಿನಿಂದ ಶ್ವಾನದ ಸವಿನೆನಪಿಗಾಗಿ ಪ್ರತಿಮೆಯನ್ನು ಸ್ಥಾಪಿಸಿ ಪ್ರತಿವರ್ಷ ಶ್ವಾನ ಪುಣ್ಯ ಸ್ಮರಣೋತ್ಸವವನ್ನು ಆಚರಿಸುತ್ತಾರೆ.

    ಈ ವೇಳೆ ಶ್ವಾನದ ಪ್ರತಿಮೆಗೆ ಪೂಜೆ ಸಲ್ಲಿಸಿ, ಪ್ರಾರ್ಥನೆ ಮಾಡಿ, ಗ್ರಾಮಸ್ಥರಿಗೆ ಊಟವನ್ನು ಆಯೋಜಿಸುತ್ತಾರೆ. ಇದೀಗ ಶ್ವಾನದ ಪ್ರತಿಮೆಗೆ ಪೂಜೆ ಮಾಡುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಈ ಕುರಿತಂತೆ ಮಾಧ್ಯಮದೊಂದಿಗೆ ಮಾತನಾಡಿದ ಪ್ರಕಾಶ್, ನಾವು ಈ ಪ್ರಾಣಿಯನ್ನು ನಮ್ಮ ಸ್ವಂತ ಮಗುವಿನಂತೆ ಭಾವಿಸಿದ್ದೆವು. ಹಲವಾರು ವರ್ಷಗಳ ಕಾಲ ಬಹಳ ಪ್ರೀತಿಯಿಂದ ಶ್ವಾನವನ್ನು ಸಾಕಿದ್ದೆವು. ಶ್ವಾನ ಜೀವನ ಪೂರ್ತಿ ಸಹಕಾರಿ ಮತ್ತು ನಿಯತ್ತಾಗಿತ್ತು. ಇದೀಗ ಶ್ವಾನದ ಐದನೇ ಪುಣ್ಯಸ್ಮರಣೆಯನ್ನು ಆಚರಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ

  • ಸಾಯುವ ಮುನ್ನ ಮಾಲೀಕನೊಂದಿಗೆ ಶ್ವಾನ ಟ್ರಿಪ್ – ಫೋಟೋ ವೈರಲ್

    ಸಾಯುವ ಮುನ್ನ ಮಾಲೀಕನೊಂದಿಗೆ ಶ್ವಾನ ಟ್ರಿಪ್ – ಫೋಟೋ ವೈರಲ್

    ಲ್ಯುಕೇಮಿಯಾ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಶ್ವಾನವನ್ನು ಅದರ ಮಾಲೀಕ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದ ಫೋಟೋಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಶ್ವಾನಪ್ರಿಯರು ಈ ಕಥೆ ಕೇಳಿ ಭಾವುಕರಾಗಬಹುದು. ಅಲ್ಲದೇ ಕಣ್ಣೀರು ಸಹ ತರಿಸಬಹುದು, ಆದರೆ ಈ ಕಥೆಯನ್ನು ನೀವು ಕೇಳಲೇಬೇಕು. 10 ವರ್ಷದ ಲ್ಯಾಬ್ರಡೂಡ್ಲ್ ಎಂಬ ಮಾಂಟಿ ಹೆಸರಿನ ಶ್ವಾನವೊಂದು ಲ್ಯುಕೇಮಿಯಾ ಕಾಯಿಲೆ ವಿರುದ್ಧ ತಿಂಗಳು ಗಟ್ಟಲೇ ಹೋರಾಡಿ ನಿಧನ ಹೊಂದಿದೆ. ಆದರೆ ಈ ಮುನ್ನ ಶ್ವಾನದ ಮಾಲೀಕ ಕಾರ್ಲೋಸ್ ಫ್ರೆಸ್ಕೊ ತನ್ನ ಶ್ವಾನದೊಂದಿಗೆ ಕೊನೆಯಾದಾಗಿ ಟ್ರಿಪ್‍ಗೆ ಹೋಗಿ ಅದರ ಜೊತೆ ಕಾಲ ಕಳೆದ ಫೋಟೋಗಳನ್ನು ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿದ್ದು, ಈ ಫೋಟೋಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಅನಾರೋಗ್ಯದಿಂದಾಗಿ ಮಾಂಟಿಗೆ ನಡೆಯಲು ಸಾಧ್ಯವಾಗದ ಕಾರಣ, ಕಾರ್ಲೋಸ್ ಮಾಂಟಿಯನ್ನು ವೇಲ್ಸ್‍ನ ಬ್ರೆಕಾನ್‍ನಲ್ಲಿರುವ ತಮ್ಮ ನೆಚ್ಚಿನ ಪವರ್ತಕ್ಕೆ ವೀಲ್ ಚೇರ್ ಮುಖಾಂತರ, ಮಾಂಟಿಯನ್ನು ಕರೆದುಕೊಂಡು ಹೋಗಿದ್ದರು. ಈ ಮುನ್ನ ಕಾರ್ಲೋಸ್ ಹಾಗೂ ಮಾಂಟಿ ಜೊತೆಗೆ ಹಲವಾರು ಬಾರಿ ಟ್ರಿಪ್‍ಗೆ ಒಟ್ಟಿಗೆ ಹೋಗಿದ್ದೆವು. ಆದರೆ ಈ ಬಾರಿ ಮಾಂಟಿಗೆ ಕ್ಯಾನ್ಸರ್ ನಿಂದ ಬಳಲುತ್ತಿದ್ದರಿಂದ ನಾನು ಅವನೊಂದಿಗೆ ಹೋಗುತ್ತಿರುವ ಕೊನೆ ಟ್ರಿಪ್ ಎಂದು ನನಗೆ ಮೊದಲೇ ಗೊತ್ತಿರುವುದಾಗಿ ತಿಳಿಸಿದ್ದರು. 18 ತಿಂಗಳ ಹಿಂದೆ ಮಾಂಟಿಗೋ ಕೀಮೋಥೆರಪಿ ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸಿದ್ದನು. ಆದರೆ ಕೊನೆಗೆ ಚಿಕಿತ್ಸೆ ಫಲಾಕಾರಿಯಾಗಲಿಲ್ಲ.

    ಅಲ್ಲದೇ ನಾನು ಅವನು ಪ್ರವಾಸಕ್ಕೆ ಹೋದಾಗ ಅಲ್ಲಿ ಕೆಲವು ಸ್ಥಳೀಯರು ಮಾಂಟಿ ಕುಳಿತಿದ್ದ ವೀಲ್ ಚೇರ್‍ನನ್ನು ತಳ್ಳುತ್ತಾ ಅವನೊಂದಿಗೆ ಸುಂದರವಾದ ಕಾಲ ಕಳೆದರು. ಈ ವೇಳೆ ಮಾಂಟಿ ದುರ್ಬಲನಾಗಿದ್ದರೂ ಅನೇಕ ಮಂದಿಗೆ ಹತ್ತಿರವಾದ, ಎಲ್ಲರ ಗಮನ ಸೆಳೆಯುವುದರ ಜೊತೆಗೆ ಅನೇಕ ಮಂದಿ ಅವನಿಗೆ ಶುಭ ಹಾರೈಸಿದರು. ಪರ್ವದ ಮೇಲಿದ್ದ ಮಂದಿ ಇವನ ಕಥೆಯನ್ನು ಕೇಳಿ ದುಃಖಿತರಾಗಿದ್ದರು. ಇದನ್ನೂ ಓದಿ:ಮೇಕೆದಾಟು ಯೋಜನೆ – ಮೂರು ಮಹತ್ವದ ನಿರ್ಣಯಗಳಿಗೆ ತಮಿಳುನಾಡು ಅಂಗೀಕಾರ

  • ವಿವಿಧ ಆಕೃತಿಯಲ್ಲಿ ಮೂಡಿ ಬಂದ ಹಲಸಿನ ಹಣ್ಣು – ವಿಸ್ಮಯಕಾರಿ ಬೆಳವಣಿಗೆ

    ವಿವಿಧ ಆಕೃತಿಯಲ್ಲಿ ಮೂಡಿ ಬಂದ ಹಲಸಿನ ಹಣ್ಣು – ವಿಸ್ಮಯಕಾರಿ ಬೆಳವಣಿಗೆ

    ಬೆಂಗಳೂರು: ಒಂದು ರೂಪದಲ್ಲಿ ಗಣೇಶನ ಆಕೃತಿ, ಮತ್ತೊಂದು ಕಡೆಯಿಂದ ಗರುಡನ ರೀತಿ, ತಾಯಿ ಮಗುವಿನ ಆಕೃತಿ, ಜಾಂಬವಂತ ಕರಡಿ ಹೀಗೆ ನಾನಾ ರೂಪದಲ್ಲಿ ಕಾಣುವ ಹಲಸಿನ ಅಪರೂಪದ ಹಣ್ಣು ವಿಸ್ಮಯಕಾರಿ ರೀತಿಯಲ್ಲಿ ಬೆಳವಣಿಗೆಯಾಗಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಜಕ್ಕನಹಳ್ಳಿ ನಿವಾಸಿ ಶಿವಕುಮಾರ್ ಎಂಬವರ ತೋಟದಲ್ಲಿ ಒಂದು ಪುರಾತನವಾದ ಹಲಸಿನ ಮರ ಇದೆ. ಈ ಮರದಲ್ಲಿ ಬಿಟ್ಟ ಹಣ್ಣು ನಾನಾ ಆಕೃತಿಯಲ್ಲಿ ಆ ಹಲಸಿನ ಹಣ್ಣನ್ನ ತಮ್ಮ ಊಹೆಯಂತೆ ಕಾಣತೊಡಗಿದೆ. ಮರದಲ್ಲಿ ಕಂಡ ಈ ಅಪರೂಪದ ಹಣ್ಣನ್ನು ಮಾಲೀಕ ಶಿವಕುಮಾರ್ ಮನೆಗೆ ತಂದು ದೇವರ ಹಣ್ಣು ಎಂದು ಮನೆಯವರಿಗೆ ಮತ್ತು ಸ್ನೇಹಿತರಿಗೆ ತೋರಿಸಿ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಮಾತನಾಡಿದ ಅವರು, ನಮ್ಮ ತೋಟದಲ್ಲಿ ಸಾಕಷ್ಟು ವರ್ಷದ ಹಳೆಯ ಮರ ಇದೆ. ಈ ಹಲಸಿನ ಮರದಲ್ಲಿ ಈ ಹಣ್ಣು ನೋಡಿದಾಗ ನನಗೆ ನಾಲ್ಕೈದು ರೂಪದಲ್ಲಿ ಗೋಚರವಾಗಿದೆ, ಒಂದು ರೀತಿಯಲ್ಲಿ ಈ ಹಣ್ಣು ನೋಡಲು ಖುಷಿಯಾಗಿದೆ ಎಂದಿದ್ದಾರೆ. ಇನ್ನೂ ಈ ಹಣ್ಣು ಅವರವರ ಮನಸ್ಥಿತಿಗೆ ನೋಡುವ ರೀತಿಯಲ್ಲಿ ಗೋಚರವಾಗುವ ದೃಷ್ಟಿಯಲ್ಲಿ ಕಾಣಬಹುದಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಿಂತಾಮಣಿಯಿಂದ ನವದೆಹಲಿಗೆ 250 ಟನ್ ಮಾವು ಹೊತ್ತು ಹೊರಟ ಕಿಸಾನ್ ರೈಲು

  • ಕಳ್ಳನಿಗೆ ಕೈ ಕೊಟ್ಟ ಬೈಕ್ – ಮರಳಿ ತಂದು ಮಾಲೀಕನ ಮನೆ ಮುಂದೆ ನಿಲ್ಲಿಸಿದ

    ಕಳ್ಳನಿಗೆ ಕೈ ಕೊಟ್ಟ ಬೈಕ್ – ಮರಳಿ ತಂದು ಮಾಲೀಕನ ಮನೆ ಮುಂದೆ ನಿಲ್ಲಿಸಿದ

    ಕಲಬುರಗಿ: ಕಳ್ಳತನ ಮಾಡಿದ ಬೈಕ್ ಸ್ಟಾರ್ಟ್ ಆಗದಿದ್ದಾಗ ಕಳ್ಳನೊಬ್ಬ ಅದನ್ನು ವಾಪಸ್ ತಂದು ನಿಲ್ಲಿಸಿ ಹೋಗಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ಪಟ್ಟಣದ ಆಗ್ರೋ ರಸ್ತೆಯಲ್ಲಿ ನಡೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಮಹಾದೇವ ಕಲಕೇರಿ ಎಂಬವರಿಗೆ ಸೇರಿದ ಬೈಕ್ ನಿನ್ನೆ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಕಳ್ಳತನ ಆಗಿತ್ತು. ನಂತರ ಒಂದಿಷ್ಟು ಮುಂದಕ್ಕೆ ತಳ್ಳಿಕೊಂಡು ಹೋದ ಕಳ್ಳನೋರ್ವ ಬೈಕ್ ಚಾಲನೆ ಮಾಡಲು ಪ್ರಯತ್ನಿಸಿದ್ದಾನೆ. ಬೈಕ್ ಸ್ಟಾರ್ಟ್ ಆಗದಿದ್ದಾಗ ವಾಪಸ್ ಅದನ್ನು ಬೈಕ್ ಮಾಲೀಕನ ಮನೆ ಮುಂದೆಯೇ ತಂದು ನಿಲ್ಲಿಸಿ ಹೋಗಿದ್ದಾನೆ.

    ಕಳ್ಳನ ಕರಾಮತ್ತು ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಕಳೆದ ಕೆಲ ದಿನಗಳಿಂದ ಅಫಜಲಪುರ ಪಟ್ಟಣದಲ್ಲಿ ಬೈಕ್ ಗಳ ಕಳ್ಳತನಗಳು ಮರುಕಳಿಸುತ್ತಿದ್ದು, ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬೆಡ್ ಕೆಳಗೆ ಸುರಂಗ ಮಾರ್ಗ – ವೀಡಿಯೋ ವೈರಲ್

  • ಸಾಕಿದ ನಾಯಿಯನ್ನು ಕಚ್ಚಿದ್ದಕ್ಕೆ ಬೀದಿ ನಾಯಿಯನ್ನೇ ಕೊಲೆಗೈದ

    ಸಾಕಿದ ನಾಯಿಯನ್ನು ಕಚ್ಚಿದ್ದಕ್ಕೆ ಬೀದಿ ನಾಯಿಯನ್ನೇ ಕೊಲೆಗೈದ

    ಬೆಂಗಳೂರು: ತಾನು ಸಾಕಿದ ನಾಯಿಯನ್ನು ಬೀದಿ ನಾಯಿಯೊಂದು ಕಚ್ಚಿತೆಂದು ವ್ಯಕ್ತಿಯೊಬ್ಬ ನಾಯಿಯನ್ನು ಹೊಡೆದು ದರದರನೆ ಎಳೆದು ತಂದು ಬಿಸಾಕಿ ಅಮಾನವೀಯವಾಗಿ ನಡೆದುಕೊಂಡ ಘಟನೆ ನಗರದ ಹೆಬ್ಬಗೋಡಿ ಬಳಿಯ ಮಡಿವಾಳದಲ್ಲಿ ನಡೆದಿದೆ.

    ಹೆಬ್ಬಗೋಡಿ ಬಳಿಯ ಮಡಿವಾಳದ ಮುಖ್ಯರಸ್ತೆಯಲ್ಲಿ ಮನೆ ನಾಯಿಯನ್ನು ಕಚ್ಚಿದೆ ಎಂದು ವ್ಯಕ್ತಿಯೊಬ್ಬ ಬೀದಿ ನಾಯಿಯನ್ನು ಹೊಡೆದು ಕೊಲೆ ಮಾಡಿದ್ದಾನೆ. ವ್ಯಕ್ತಿ ಕುಡಿದ ಮತ್ತಿನಲ್ಲಿ ಮನೆ ನಾಯಿಯ ಜೊತೆ ಹೋಗುವಾಗ ಬೀದಿನಾಯಿ ಬೊಗಳಿ ಆತನ ನಾಯಿಗೆ ಕಚ್ಚಿದೆ. ಬಳಿಕ ನಾಯಿಯನ್ನು ಹಿಂಬಾಲಿಸಿಕೊಂಡು ಬೀದಿ ನಾಯಿ ಮನೆ ಬಳಿ ಹೋಗಿದ್ದಕ್ಕೆ ಸಿಟ್ಟಿಗೆದ್ದ ನಾಯಿ ಮಾಲೀಕ ಮನೆ ಬಳಿಯಿದ್ದ ಕಬ್ಬಿಣದ ರಾಡ್ ನಿಂದ ಬೀದಿ ನಾಯಿ ತಲೆಗೆ ಬೀಸಿ, ಬಳಿಕ ರಸ್ತೆಯಲ್ಲಿ ಎಳೆದೊಯ್ದು ಕ್ರೂರವಾಗಿ ನಡೆದುಕೊಂಡಿದ್ದಾನೆ. ಇದನ್ನೂ ಓದಿ: ಕಾಣೆಯಾಗಿದ್ದ ಚಿನ್ನದ ಸರ ನಾಯಿ ಮಲದಲ್ಲಿ ಪತ್ತೆ

    ನಾಯಿಯನ್ನು ಕೊಂದು ರಸ್ತೆಯಲ್ಲಿ ಎಳೆದಾಡುತ್ತಿದ್ದಾಗ ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿ ಇದನ್ನು ಪ್ರಶ್ನಿಸಿದ್ದಾರೆ. ಈ ಸಂದರ್ಭ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಹೆಬ್ಬಗೋಡಿ ಪೊಲೀಸ್ ಠಾಣೆಗೆ ದೂರು ಕೊಟ್ಟಿರುವ ಯಲಹಂಕ ಪ್ರಾಣಿ ದಯಾ ಸಂಘದ ಅನಿರುದ್ದ್, ರಸ್ತೆಯ ಬದಿ ಬಿದ್ದಿದ್ದ ನಾಯಿಯನ್ನು ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ಮಾಡಿದ್ದಾರೆ. ಘಟನೆ ಬಳಿಕ ಅಮಾನವೀಯವಾಗಿ ನಡೆದುಕೊಂಡ ವ್ಯಕ್ತಿ ತಲೆಮರೆಸಿಕೊಂಡಿದ್ದು ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.