Tag: owner

  • ಕೋಲಾರದಲ್ಲಿ ಮಳೆ, ವಿದ್ಯುತ್ ತಂತಿ ತಗುಲಿ 14 ಕುರಿ ಸಾವು

    ಕೋಲಾರದಲ್ಲಿ ಮಳೆ, ವಿದ್ಯುತ್ ತಂತಿ ತಗುಲಿ 14 ಕುರಿ ಸಾವು

    – ವಿಷಪೂರಿತ ಮೇವು ತಿಂದು 2 ಹಸು ಸಾವು

    ಕೋಲಾರ: ಕೋಲಾರ ಜಿಲ್ಲೆಯಲ್ಲಿಂದು ಸಂಜೆ ಮಳೆರಾಯನ ಆರ್ಭಟ ಜೋರಾಗಿತ್ತು. ಅರ್ಧ ಗಂಟೆಗಳ ಕಾಲ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು 14 ಕುರಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

    ಜಿಲ್ಲೆಯ ಕೆಜಿಎಫ್ ತಾಲೂಕು ಚೆನ್ನಪಲ್ಲಿ ಗ್ರಾಮದ ಸುರೇಶ್ ಎಂಬವರಿಗೆ ಸೇರಿದ ಕುರಿಗಳು ಮೃತಪಟ್ಟಿದ್ದು, ಗಾಳಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕುರಿಗಳು ಸಾವನ್ನಪ್ಪಿವೆ. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ವಿಷಪೂರಿತ ನೀರಿನಿಂದ ಬೆಳೆದ ಮೇವು ತಿಂದು 2 ಹಸು ಸಾವು
    ವಿಷಪೂರಿತ ಮೇವು ತಿಂದು ಹಸುಗಳು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲುಕಿನ ಸೀತನಾಯಕನಹಳ್ಳಿ ಸಮೀಪ ನಡೆದಿದೆ. ಕಾರ್ಖಾನೆಯ ವಿಷಪೂರಿತ ತ್ಯಾಜ್ಯ ಹೊರಕ್ಕೆ ಬಿಟ್ಟ ಪರಿಣಾಮ ವಿಷಪೂರಿತವಾಗಿ ಮೇವು ತಿಂದ ಎರಡು ಹಸುಗಳು ಮೃತಪಟ್ಟಿವೆ. ಇದೀಗ ಹಸುವಿನ ಮಾಲೀಕ ಕಾರ್ಖಾನೆಯ ಬಳಿ ಹಸುವಿನ ಶವ ಇಟ್ಟು ಪ್ರತಿಭಟನೆ ಮಾಡಿದ್ದಾರೆ.

    ಕೋಲಾರ ಜಿಲ್ಲೆ ಮಾಲೂರಿನ ಕೈಗಾರಿಕಾ ಪ್ರದೇಶದ ಸೀತನಾಯಕನಹಳ್ಳಿ ಬಳಿ ಇರುವ ಕ್ಲೋರೈಡ್ ಮೆಟಲ್ ಲಿಮಿಟೆಡ್ ಎಂಬ ಕಂಪನಿಯ ಹೊಗೆ ವಿಷಪೂರಿತ ನೀರು ಬಿಡುಗಡೆ ಮಾಡಿದರ ಪರಿಣಾಮ ಈ ಘಟನೆ ನಡೆದಿದೆ. ನರಸಿಂಹ ರೆಡ್ಡಿ ಎಂಬವರಿಗೆ ಸೇರಿದ ಎರಡು ಹಸುಗಳು, ಅಂದಾಜು 1.5 ಲಕ್ಷ ಬೆಲೆಯುಳ್ಳದಾಗಿದೆ. ಹಾಗಾಗಿ ಪರಿಹಾರ ಭರಿಸಿಕೊಡುವಂತೆ ಕಾರ್ಖಾನೆ ಮುಂದೆ ಹಸುವಿನ ಮಾಲೀಕ ಪ್ರತಿಭಟನೆ ನಡೆಸು ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ವಿಜಯಪುರ ಜಿಲ್ಲೆಯಾದ್ಯಂತ ಮಳೆಯ ಆರ್ಭಟ – ಬಾಳೆ ನಾಶಗೊಳಿಸಿದ ರೈತ ಮಹಿಳೆ

  • ಅಬಕಾರಿ ಅಧಿಕಾರಿಗಳಿಂದ ಅಕ್ರಮ ಮದ್ಯ ಮಾರಾಟಕ್ಕೆ ಸಾಥ್: ಉಪ ಆಯುಕ್ತರಿಂದ ನೋಟಿಸ್

    ಅಬಕಾರಿ ಅಧಿಕಾರಿಗಳಿಂದ ಅಕ್ರಮ ಮದ್ಯ ಮಾರಾಟಕ್ಕೆ ಸಾಥ್: ಉಪ ಆಯುಕ್ತರಿಂದ ನೋಟಿಸ್

    – 5 ಲಕ್ಷ ರೂ ಮೌಲ್ಯದ ಅಕ್ರಮ ಮದ್ಯ ಜಪ್ತಿ
    – ಲಾಕ್ ಡೌನ್ ನಿಯಮ ಉಲ್ಲಂಘಿಸಿ ತಡರಾತ್ರಿವರೆಗೆ ಮದ್ಯ ಹಂಚಿಕೆ

    ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ನಡೆಯಲು ಸಾಥ್ ನೀಡುತ್ತಿದ್ದ ಅಬಕಾರಿ ಇನ್ಸ್‌ಪೆಕ್ಟರ್ ಗೆ, ಅಬಕಾರಿ ಉಪ ಆಯುಕ್ತೆ ಲಕ್ಷ್ಮೀ ಎಂ ನಾಯಕ್ ಶೋಕಾಸ್ ನೋಟಿಸ್ ಕಳುಹಿಸಿದ್ದಾರೆ.

    ಲಾಕ್ ಡೌನ್ ಹಿನ್ನೆಲೆ ರಾಯಚೂರು‌ ಜಿಲ್ಲೆಯಲ್ಲಿ ವಾರಕ್ಕೆ ಎರಡು ದಿನ ಮಾತ್ರ ಅದೂ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರ ವರೆಗೆ ಮದ್ಯದಂಗಡಿಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. ಆದರೆ ವಾರಪೂರ್ತಿ ಅಕ್ರಮ ಮದ್ಯ ಮಾರಾಟ ನಡೆಯಲು ಜಿಲ್ಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳೇ ಸಾಥ್ ನೀಡಿದ್ದಾರೆ. ಅಬಕಾರಿ ಉಪ ಆಯುಕ್ತರ ದಾಳಿ ವೇಳೆ ಅಬಕಾರಿ ಇನ್ಸ್ ಪೆಕ್ಟರ್ ಬಣ್ಣ ಬಯಲಾಗಿದೆ.

    ರಾಯಚೂರಿನ ರಾಜ್ಯ ಪಾನೀಯ ನಿಗಮ ನಿಯಮಿತ ಗೋದಾಮಿನಿಂದಲೇ ಕಳ್ಳವ್ಯವಹಾರ ನಡೆದಿದ್ದು, ಅಬಕಾರಿ ಇನ್ಸ್ ಪೆಕ್ಟರ್ ಮೋನಪ್ಪ, ಗೋದಾಮಿನ ವ್ಯವಸ್ಥಾಪಕ ಶಿವಪ್ಪರಿಂದ ಅಕ್ರಮ ದಂಧೆ ನಡೆದಿರುವುದು ಬಯಲಾಗಿದೆ. ಲಾಕ್ ಡೌನ್ ಹಿನ್ನೆಲೆ ಅಧಿಕಾರಿಗಳಿಂದಲೇ ಅಕ್ರಮ ಮಾರಾಟಕ್ಕೆ ಮದ್ಯ ಸರಬರಾಜಾಗುತ್ತಿರುವುದು ಬೆಳಕಿಗೆ ಬಂದಿದೆ. ಲಾಕ್ ಡೌನ್ ನಿಯಮ ಮೀರಿ ತಡರಾತ್ರಿವರೆಗೆ ಮದ್ಯ ಹಂಚಿಕೆ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪ ಆಯುಕ್ತೆ ಲಕ್ಷ್ಮೀ ಎಂ.ನಾಯಕ ಗೋದಾಮಿನ ಮೇಲೆ ದಾಳಿ ಮಾಡಿ ವಾಹನಗಳಿಗೆ ತುಂಬಿದ್ದ ಮದ್ಯವನ್ನ ಅನ್‍ಲೋಡ್ ಮಾಡಿಸಿದ್ದಾರೆ. ಅಬಕಾರಿ ಇನ್ಸ್ ಪೆಕ್ಟರ್ ಮೋನಪ್ಪನಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಇದನ್ನು ಓದಿ: ದಕ್ಷಿಣ ಕನ್ನಡದಲ್ಲಿ ಜೂನ್ 20ರವರೆಗೆ ಲಾಕ್‍ಡೌನ್ ಮುಂದುವರಿಕೆ

    ಅಕ್ರಮಕ್ಕೆ ಆಸ್ಪದ ನೀಡಿ ಕರ್ತವ್ಯ ಲೋಪ ಎಸಗಿದ್ದಲ್ಲದೆ, ಅಧಿಕಾರಿಗಳಿಗೆ ಮಾಹಿತಿ ನೀಡದೆ ಮನಬಂದತೆ ತಡರಾತ್ರಿವರೆಗೆ ಮದ್ಯ ಹಂಚಿಕೆ ಮಾಡಿರುವ ಆರೋಪ ಹಿನ್ನೆಲೆ ನೋಟಿಸ್ ಜಾರಿ ಮಾಡಲಾಗಿದೆ. ಅಕ್ರಮ ಮದ್ಯ ಹೊರಗಡೆಗೆ ಸಾಗಿಸುತ್ತಿದ್ದ ಎರಡು ವಾಹನ, 5 ಲಕ್ಷಕ್ಕೂ ಅಧಿಕ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದೆ. ಮದ್ಯದಂಗಡಿ ಮಾಲೀಕರಿಗೆ ಮದ್ಯ ವಿತರಣೆ ನೆಪದಲ್ಲಿ ಮಧ್ಯರಾತ್ರಿ ಕಳ್ಳ ವ್ಯವಹಾರ ನಡೆದಿರುವುದು ಬಯಲಾಗಿದೆ.

    ನಗರದ ಎಪಿಎಂಸಿ ಆವರಣದಲ್ಲಿರುವ ಕೆ.ಎಸ್.ಬಿ.ಸಿಎಲ್ ಡಿಪೋ ಗೋದಾಮಿನಿಂದ ನೇರವಾಗಿ ಗ್ರಾಮೀಣ ಭಾಗಗಳಿಗೆ ಮದ್ಯ ಸರಬರಾಜು ಆಗಿದ್ದು, ಮದ್ಯದ ಅಂಗಡಿಗಳ ಮಾಲೀಕರಿಗೂ ಮನಬಂದಂತೆ ಹಂಚಿಕೆ ಮಾಡಿರುವ ಆರೋಪ ಕೇಳಿ ಬಂದಿದೆ. ಎಪಿಎಂಸಿ ಬಳಿಯೇ ರಾತ್ರಿ ವೇಳೆ ಸಿಕ್ಕಿಬಿದ್ದ ಬೈಕ್ ಹಾಗೂ ಮಹೀಂದ್ರಾ ವಾಹನದಲ್ಲಿ ಲಕ್ಷಾಂತರ ರೂ. ಮದ್ಯ ಸಾಗಣೆ ಮಾಡಲಾಗುತ್ತಿತ್ತು, ಅಕ್ರಮ ಮದ್ಯ ಸಾಗಣೆ ಹಿನ್ನೆಲೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಇದನ್ನು ಓದಿ:ಕೋವಿಡ್ ನಿಯಮ ಉಲ್ಲಂಘನೆ- ಅಂಗಡಿಗಳ ಪರವಾನಗಿ ರದ್ದು, ಬೀಗ ಜಡಿದ ಪಾಲಿಕೆ ಅಧಿಕಾರಿಗಳು

    ಕಳ್ಳ ವ್ಯವಹಾರದಲ್ಲಿ ಸಿಕ್ಕಿಬಿದ್ದರೂ ಇನ್ಸ್ ಪೆಕ್ಟರ್ ಮೋನಪ್ಪ ಅಧಿಕಾರದಲ್ಲಿ ಮುಂದುವರಿದಿದ್ದು ಕೂಡಲೇ ಅಮಾನತ್ತುಗೊಳಿಸುವಂತೆ ಅನ್ಯಾಯಕ್ಕೊಳಗಾದ ಮದ್ಯದ ಅಂಗಡಿಗಳ ಮಾಲೀಕರು ಒತ್ತಾಯಿಸಿದ್ದಾರೆ. ಕಳೆದ ವರ್ಷ ಲಾಕ್ ಡೌನ್‍ನಲ್ಲೂ ಕರ್ತವ್ಯ ಲೋಪವೆಸಗಿ ಅಮಾನತ್ತಾಗಿದ್ದ ಅಬಕಾರಿ ನಿರೀಕ್ಷಕ ಮೋನಪ್ಪ ಮತ್ತೊಮ್ಮೆ ಭ್ರಷ್ಟಾಚಾರದ ಆರೋಪಗಳನ್ನ ಹೊತ್ತಿದ್ದಾರೆ.

  • ಪಡಿತರ ಅಕ್ಕಿಗೆ ಪಾಲಿಶ್ ಮಾಡಿ ಸೋನಾ ಮಸೂರಿ ಎಂದು ಮಾರಾಟ – ಮಾಲೀಕ ಬಂಧನ

    ಪಡಿತರ ಅಕ್ಕಿಗೆ ಪಾಲಿಶ್ ಮಾಡಿ ಸೋನಾ ಮಸೂರಿ ಎಂದು ಮಾರಾಟ – ಮಾಲೀಕ ಬಂಧನ

    ಚಿಕ್ಕಬಳ್ಳಾಪುರ: ಕೊರೊನಾ ಸಂಕಷ್ಟದ ಸಮಯದಲ್ಲಿ ಬಡ ಜನರಿಗೆ ಅನುಕೂಲವಾಗುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಉಚಿತವಾಗಿ ನೀಡಿದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ, ಪಡಿತರ ಅಕ್ಕಿಗೆ ಪಾಲಿಶ್ ಮಾಡಿ ಸೋನಾ ಮಸೂರಿ ಎಂದು ಮಾರಾಟ ಮಡುತ್ತಿದ್ದ ರೈಸ್ ಮಿಲ್ ಮಾಲೀಕನನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ವೇಣುಗೋಪಾಲ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಅಗಲಗುರ್ಕಿ ಬಳಿ ಇರೋ ಕೈಗಾರಿಕಾ ಪ್ರದೇಶದಲ್ಲಿ ಸಪ್ತಗಿರಿ ರೈಸ್ ಮಿಲ್ ನಡೆಸುತ್ತಿರುವ ಈತ ಸರ್ಕಾರದ ಪಡಿತರ ಅಕ್ಕಿಗೆ ಕನ್ನ ಹಾಕಿ ಪಾಲಿಶ್ ಮಾಡಿ ವಿವಿಧ ಬ್ರ್ಯಾಂಡ್ ಗಳ ಹೆಸರಲ್ಲಿ ಸೋನಾ ಮಸೂರಿ ಅಕ್ಕಿ ಎಂದು ಜನರಿಗೆ ವಂಚಿಸುತ್ತಿದ್ದ. ಈ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆ ದಾಳಿ ಮಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸರ ತಂಡ ವೇಣುಗೋಪಾಲನನ್ನು ಬಂಧಿಸಿದ್ದಾರೆ. ಇದನ್ನೂ ಓದಿ:ಬಂಗಾರದ ಮೋಹದ ರಾಣಿಯ ಮಹಾವಂಚನೆಯ ಕಥೆ – RBI ಹೆಸರಿನಲ್ಲಿ ನಕಲಿ ದಾಖಲೆ

    ವೇಣುಗೋಪಾಲ ಪಡಿತರ ಅಕ್ಕಿಯನ್ನು ಪಾಲಿಶ್ ಮಾಡಿ ಸೋನಾ ಮಸೂರಿ ಅಕ್ಕಿ ಎಂದು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ, ಪಡಿತರ ಅಕ್ಕಿಗೆ ಪಾಲಿಶ್ ಮಾಡಿ ಕರ್ನೂಲ್ ಸೋನಾ ಮಸೂರಿ, ನಂಬರ್ 1 ಸೇರಿದಂತೆ ಹಲವು ಬ್ರ್ಯಾಂಡ್‍ಗಳ ಹೆಸರಲ್ಲಿ ಜನರಿಗೆ ದುಬಾರಿ ಬೆಲೆಗೆ ಮಾರುತ್ತಿದ್ದ ಮತ್ತು ಅಕ್ರಮವಾಗಿ ಅಕ್ಕಿಯನ್ನು ದಾಸ್ತಾನು ಮಾಡಿಕೊಂಡಿದ್ದ.

    ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ರೈಸ್ ಮಿಲ್ ಚಾಲನೆ ಮಾಡುತ್ತಿದ್ದ. ದಾಳಿ ವೇಳೆ ರೈಸ್ ಮಿಲ್ ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 350 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಜಿಲ್ಲಾಡಳಿತ ವಶಪಡಿಸಿಕೊಂಡಿದೆ. ನಂದಿಗಿರಿಧಾಮ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಲಸಿಕೆ ತೆಗೆದುಕೊಳ್ಳದವರಿಗೆ ಮದ್ಯ ಸಿಗಲ್ಲ – ಎಣ್ಣೆ ಪ್ರಿಯರಿಗೆ ಶಾಕ್

    ಲಸಿಕೆ ತೆಗೆದುಕೊಳ್ಳದವರಿಗೆ ಮದ್ಯ ಸಿಗಲ್ಲ – ಎಣ್ಣೆ ಪ್ರಿಯರಿಗೆ ಶಾಕ್

    – ಉತ್ತರ ಪ್ರದೇಶದ ಜಿಲ್ಲಾಡಳಿತದಿಂದ ಆದೇಶ ಜಾರಿ
    – ಲಸಿಕೆ ಟಾರ್ಗೆಟ್ ರೀಚ್ ಆಗಲು ತಂತ್ರಗಾರಿಕೆ

    ಲಕ್ನೋ: ಕೊರೊನಾ ಲಸಿಕೆ ಪಡೆದವರಿಗೆ ಮಾತ್ರ ಮದ್ಯ ನೀಡಲು ಉತ್ತರ ಪ್ರದೇಶದ ಬಾರ್ ಮಾಲೀಕರು ಮುಂದಾಗಿದ್ದಾರೆ.

    ಲಸಿಕೆ ಪಡೆಯುವಂತೆ ಜನರನ್ನು ಪ್ರೇರೇಪಿಸಲು ಸರ್ಕಾರ ವಿವಿಧ ಮಾರ್ಗಗಳನ್ನು ಅನುಸರಿಸುತ್ತಿದೆ. ಈ ನಡುವೆ ಉತ್ತರ ಪ್ರದೇಶದ ಇಟಾವಾ ಜಿಲ್ಲಾಡಳಿತ ಒಂದು ಹೆಜ್ಜೆ ಮುಂದೆ ಹೋಗಿ ಲಸಿಕೆ ಪಡೆದವರಿಗೆ ಮಾತ್ರ ಮದ್ಯ ನೀಡಬೇಕೆಂದು ಎಲ್ಲ ಮದ್ಯದಂಗಡಿಗಳಿಗೆ ಆದೇಶ ಹೊರಡಿಸಿದೆ. ಇದನ್ನೂ ಓದಿ: ಲಸಿಕೆ ವಿತರಣೆ – ದಕ್ಷಿಣ ಭಾರತದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ, ಟಾಪ್ 10 ರಾಜ್ಯಗಳು ಯಾವುದು?

    ಈ ಆದೇಶವನ್ನು ಬಾರ್ ಮಾಲೀಕರು ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಬಾರ್ ಮುಂಭಾಗ ಗೋಡೆಗಳ ಮೇಲೆ “ಲಸಿಕೆ ಪಡೆದವರು ಮಾತ್ರ ಮದ್ಯ ಖರೀದಿಗೆ ಅರ್ಹರು” ಎಂದು ನೋಟಿಸ್ ಅಂಟಿಸಿದ್ದಾರೆ. ಈ ಆದೇಶದ ಅನ್ವಯ ಗ್ರಾಹಕರು ಆರಂಭದಲ್ಲಿ ಲಸಿಕೆ ಪಡೆದ ಪ್ರಮಾಣ ಪತ್ರವನ್ನು ತೋರಿಸಿದ ಬಳಿಕ ಅವರಿಗೆ ಮದ್ಯವನ್ನು ನೀಡಲಾಗುತ್ತದೆ. ಇದನ್ನೂ ಓದಿ: ಮದ್ಯದಂಗಡಿಗೆ ಮುಗಿಬಿದ್ದ ಜನ

    ಸರ್ಕಾರ ಈ ಆದೇಶ ಹೊರಡಿಸಿಲ್ಲ ಎಂದು ಅಬಕಾರಿ ಇಲಾಖೆ ಹೇಳಿದೆ. ಲಸಿಕೆ ಗುರಿಯನ್ನು ಮುಟ್ಟಲು ಈ ಆದೇಶವನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಡಳಿತ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.

    ಲಸಿಕೆ ವಿತರಣೆ ಆರಂಭಿಸಿ ಸುಮಾರು ಆರು ತಿಂಗಳಾಗುತ್ತಾ ಬಂದಿದೆ. ಆದರೂ ನಿರೀಕ್ಷಿತ ಮಟ್ಟದಲ್ಲಿ ಲಸಿಕೆ ವಿತರಣೆ ಸಾಧ್ಯವಾಗಿಲ್ಲ. ಒಂದೆಡೆ ಲಸಿಕೆ ಕೊರತೆ ಕಾರಣವಾಗಿದ್ದರೆ ಇನ್ನೊಂದೆಡೆ ಜನರು ಸ್ವಯಂಪ್ರೇರಿತರಾಗಿ ಮುಂದೆ ಬರುತ್ತಿಲ್ಲ.

    ಕೇಂದ್ರ ಆರೋಗ್ಯ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ ಲಸಿಕೆ ವಿತರಣೆಯಲ್ಲಿ ಕೇರಳ, ಆಂಧ್ರ, ತಮಿಳುನಾಡಿಗಿಂತ ಕರ್ನಾಟಕ ಮುಂದಿದೆ. ರಾಷ್ಟ್ರಮಟ್ಟದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನ, ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದ್ದರೆ ಕರ್ನಾಟಕ 6ನೇ ಸ್ಥಾನದಲ್ಲಿದೆ.

  • ನೆಟ್ಟಿಗರ ಮನಗೆಲ್ಲುತ್ತಿರುವ ಗಿಳಿ ಹಾಡು – ವೀಡಿಯೋ ವೈರಲ್

    ನೆಟ್ಟಿಗರ ಮನಗೆಲ್ಲುತ್ತಿರುವ ಗಿಳಿ ಹಾಡು – ವೀಡಿಯೋ ವೈರಲ್

    ಮಾಲೀಕ ಹೇಳಿದ ಕೆಲಸವನ್ನು ಸಾಮಾನ್ಯವಾಗಿ ಗಿಳಿಗಳು ಮಾಡುತ್ತವೆ. ಆದರೆ ಗಿಳಿಯೊಂದು ತನ್ನ ಮಾಲೀಕ ನುಡಿಸುತ್ತಿದ್ದ ಗಿಟಾರ್ ವಾದ್ಯಕ್ಕೆ ಹಾಡನ್ನು ಹಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಈ ವೀಡಿಯೋವನ್ನು ‘ಫ್ಲಾಪ್ ಇರಾ ಆರೆಂಜ್ ಕೋಟ್ ಗಾಯ್’ ಎಂಬ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಮಾಲೀಕ ಫ್ರಾಂಕ್ ಗಿಟಾರ್ ನುಡಿಸುವ ಅಭ್ಯಾಸ ಹೊಂದಿದ್ದು, ಅವರು ಗಿಟಾರ್ ನುಡಿಸುವಾಗಲೆಲ್ಲ ಗಿಳಿ ಮೆಲೋಡಿಯಾಗಿ ಹಾಡು ಹೇಳುತ್ತದೆ ಎಂದು ತಿಳಿಸಿದ್ದಾರೆ. ಇದನ್ನು ಓದಿ: ಕೋವಿಡ್-19ನಿಂದ ತಪ್ಪಿಸಿಕೊಳ್ಳಲು ಈ ವ್ಯಕ್ತಿ ಬೈಕ್‍ಗೆ ಮಾಡಿದ್ದೇನು ಗೊತ್ತಾ?

    ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, 35 ಲಕ್ಷ ವೀವ್ಸ್ ಆಗಿದ್ದು, 70 ಸಾವಿರ ರೀ ಟ್ವೀಟ್ ಮತ್ತು 262 ಸಾವಿರ ಲೈಕ್ಸ್ ಪಡೆದುಕೊಂಡಿದೆ. ಈ ವೀಡಿಯೋ ನೋಡಿ ಅನೇಕ ಮಂದಿ ಇದು ಅದ್ಭುತ ಗಿಳಿ ಇಲ್ಲಿಯವರೆಗೂ ಇಂತಹ ಗಿಳಿಯನ್ನು ನಾನು ನೋಡಿಲ್ಲ ಎಂದು ಕಮೆಂಟ್ ಮಾಡುತ್ತಿದ್ದಾರೆ.

  • ಒಡತಿಯೊಂದಿಗೆ ಯೋಗ ಮಾಡಿದ ಕ್ಯೂಟ್ ಶ್ವಾನ – ವೀಡಿಯೋ ವೈರಲ್

    ಒಡತಿಯೊಂದಿಗೆ ಯೋಗ ಮಾಡಿದ ಕ್ಯೂಟ್ ಶ್ವಾನ – ವೀಡಿಯೋ ವೈರಲ್

    ಶ್ವಾನವೊಂದು ತನ್ನ ಒಡತಿಯೊಂದಿಗೆ ಯೋಗಾಭ್ಯಾಸ ಮಾಡುತ್ತಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಎಲ್ಲರ ಮನಗೆಲ್ಲುತ್ತಿದೆ.

    ವೀಡಿಯೋದಲ್ಲಿ ಶ್ವಾನವು ತನ್ನ ಒಡತಿ ಜೊತೆ ಯೋಗಾಸನದ ಮ್ಯಾಟ್ ಹಾಸಿಕೊಂಡು ಅವರ ಪಕ್ಕದಲ್ಲಿ ನಿಂತು ಯೋಗ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಈ ವೀಡಿಯೋವನ್ನು ಮೇರಿ ಹಾಗೂ ಸೀಕ್ರೆಟ್ ಎಂಬವರು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕೆಲವು ಸರಳ ಬೆಳಗಿನ ಡೊಗಾ. ಸೀಕ್ರೆಟ್(ಶ್ವಾನ) ಕೊನೆಯದಾಗಿ ಪೋಸ್ ನೀಡಿದೆ. ಮೊದಲಿಗೆ ಒಂದು ಬದಿಯಲ್ಲಿ ಇನ್ನೊಂದಕ್ಕೆ ಸುತ್ತಿಕೊಳ್ಳದೆ ತನ್ನ ಪಂಜಗಳನ್ನು ಹಿಡಿದಿಡಲು ಕಷ್ಟಪಟ್ಟಿತು. ಆದರೆ ಸಮತೋಲನವನ್ನು ಹೇಗೆ ಉಳಿಸಿಕೊಳ್ಳಬೇಕೆಂದು ಇದೀಗ ಶ್ವಾನ ಕಲಿತುಕೊಂಡಿದೆ ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದಾರೆ.

     

    View this post on Instagram

     

    A post shared by Mary & Secret (@my_aussie_gal)

    ವೀಡಿಯೋದಲ್ಲಿ 6 ವರ್ಷದ ಸೀಕ್ರೆಟ್, ಮಕ್ಕಳಂತೆ ಯೋಗಾಸನದ ಭಂಗಿಗಳನ್ನು ತೋರಿಸಿದೆ. ಕೋಬ್ರಾ ಪೋಸ್, ಡೌನ್‍ವಾರ್ಡ್ ಡಾಗ್, ಮೂರು ಕಾಲಿನಲ್ಲಿ ನಿಂತುಕೊಂಡು ಯೋಗ ಮಾಡಿದೆ. ಅಲ್ಲದೆ ಮೆಲೋಡಿ ಪಿಯಾನೋ ಮ್ಯೂಸಿಕ್‍ನನ್ನು ಹಿನ್ನೆಲೆಯಲ್ಲಿ ಪ್ಲೇ ಆಗುತ್ತಿರುವುದವುದನ್ನು ಕೇಳಬಹುದಾಗಿದೆ.

    ಅಮೆರಿಕದ ಮಾಜಿ ವೃತ್ತಿಪರ ಬಾಸ್ಕೆಟ್ ಬಾಲ್ ಆಟಗಾರ ರೆಕ್ಸ್ ಚಾಪ್ಮನ್‍ರವರು ಕೂಡ ಈ ವೀಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇಲ್ಲಿಯವರೆಗೂ ಈ ವೀಡಿಯೋಗೆ ಸೋಶಿಯಲ್ ಮೀಡಿಯಾದಲ್ಲಿ 4 ಮಿಲಿಯನ್ ವ್ಯೂಸ್ ಬಂದಿದೆ.

  • ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!

    ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!

    – ನಿತ್ಯ ಪೂಜೆ ಮಾಡುವ ಮನೆಗೇ ಕನ್ನ ಹಾಕಿದ್ದ ಸರ್ವಜ್ಞ

    ಕೊಪ್ಪಳ: ಕಳ್ಳತನ ಮಾಡುವಾಗ ನೋಡಿದಳೆಂದು ಮನಯೊಡತಿಯನ್ನೇ ಅರ್ಚಕ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

    ಜಿಲ್ಲೆಯ ಗಂಗಾವತಿ ನಗರದ ಗುಂಡಮ್ಮನ ಕ್ಯಾಂಪ್ ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಅರ್ಚಕ ಸರ್ವಜ್ಞ ತಾನು ನಿತ್ಯ ಪೂಜೆ ಮಾಡುತ್ತಿದ್ದ ಮನೆಯ ಒಡತಿ ಗುಂಡಮ್ಮನ ಕ್ಯಾಂಪ್ ನ ಶಿವಮ್ಮ(72) ಅಮರಜ್ಯೋತಿಯವರನ್ನು ಕೊಲೆ ಮಾಡಿದ್ದಾನೆ. ಕಳ್ಳತನ ಪ್ರಕರಣ ಬೇಧಿಸಲು ಮುಂದಾದ ಪೊಲೀಸರಿಗೆ ಆಘಾತವಾಗಿದ್ದು, ಕೊಲೆ ಪ್ರಕರಣ ಸಹ ಬೆಳಕಿಗೆ ಬಂದಿದೆ. ಇದೀಗ ಅರ್ಚಕ ಸರ್ವಜ್ಞ ಹಾಗೂ ಮನೆಯ ಗುಮಾಸ್ತ ಗಣೇಶನನ್ನು ಪೊಲೀಸರು ಬಂಧಿಸಿದ್ದಾರೆ.

    ಶಿವಮ್ಮ ಅಮರಜ್ಯೋತಿಯವರ ಮನೆಯಲ್ಲಿ ಮಾರ್ಚ್ 5ರಂದು ಕಳ್ಳತನವಾಗಿತ್ತು. ಅದೇ ದಿನ 72 ವರ್ಷದ ಶಿವಮ್ಮ ಸಾವನ್ನಪ್ಪಿದ್ದರು. ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಮನೆಯವರು ಭಾವಿಸಿದ್ದರು. ಆದರೆ ಶಿವಮ್ಮಗೆ ಹೃದಯಾಘಾತವಾಗಿರಲಿಲ್ಲ, ಬದಲು ಕೊಲೆ ಮಾಡಲಾಗಿತ್ತು. ಮನೆ ಕಳ್ಳತನವಾಗಿದ್ದರಿಂದ ಮಾಲೀಕ ನರಸಪ್ಪ ಅಮರಜ್ಯೋತಿ ದೂರು ದಾಖಲಿಸಿದ್ದರು. ಆದರೆ ಮನೆ ಕಳ್ಳತನ ಪ್ರಕರಣ ಭೇದಿಸುವ ವೇಳೆ ಅಸಲಿ ಮರ್ಡರ್ ಕಹಾನಿ ಹೊರ ಬಿದ್ದಿದೆ.

    ಮನೆ ಕಳ್ಳತನವಾದ ದಿನ ಶಿವಮ್ಮ ಹೃದಯಾಘಾತದಿಂದ ಸಾವನ್ನಪ್ಪಿಲ್ಲ. ಅಸಲಿಗೆ ಮನೆ ಅರ್ಚಕ ಸರ್ವಜ್ಞ ಬ್ರಾಹ್ಮಣ ಶಿವಮ್ಮಳನ್ನು ಕೊಲೆ ಮಾಡಿದ್ದ. ಕಳ್ಳತನ ಮಾಡುವಾಗ ಶಿವಮ್ಮ ನೋಡಿದ್ದಳು. ಹೀಗಾಗಿ ಅರ್ಚಕ ಸರ್ವಜ್ಞ ಶೌಚಾಲಯದ ರೂಮ್ ನಲ್ಲಿ ಶಿವಮ್ಮಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

    ಅರ್ಚಕ ತನ್ನ ಒಡೆಯನ ಮನೆಯಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ ಮಾಡಿ ಮನೆ ಹಿಂದೆ ಬಚ್ಚಿಟ್ಟಿದ್ದ. ಈ ವಿಷಯವನ್ನು ಗುಮಾಸ್ತ ಗಣೇಶ್‍ಗೆ ತಿಳಿಸಿ ಬಂಗಾರದ ಪೆಟ್ಟಿಗೆ ತಗೆದುಕೊಂಡು ಹೋಗುವಂತೆ ಸೂಚಿಸಿದ್ದನು. ಮನೆ ಕಳ್ಳತನ ಪ್ರಕರಣ ಬೆನ್ನು ಹತ್ತಿದ ಪೊಲೀಸರಿಗೆ ಸಿಕ್ಕಿದ್ದು ಕೊಲೆಗಾರರು. ಇದೀಗ ಅರ್ಚಕ ಸರ್ವಜ್ಞ ಹಾಗೂ ಗುಮಾಸ್ತ ಗಣೇಶನ್ನು ಪೊಲೀಸರು ಬಂಧಿಸಿದ್ದು, ಜೈಲಿಗೆ ಅಟ್ಟಿದ್ದಾರೆ.

    ಅರ್ಚಕ ಸಿಕ್ಕಿಬಿದ್ದಿದ್ದೇಗೆ?
    ಅರ್ಚಕ ಸರ್ವಜ್ಞ ಸಿಕ್ಕಿ ಬೀಳಲು ಮನೆಯಲ್ಲಿ ಅಳವಡಿಸಿದ ಸಿ.ಸಿ.ಕ್ಯಾಮೆರಾ ಕಾರಣವಾಗಿದ್ದು, ಶಿವಮ್ಮ ಅಮರಜ್ಯೋತಿ ಮನೆಯಲ್ಲಿ ಸಿಸಿ ಕ್ಯಾಮೆರಾಗೆ ಯಾರೋ ಟವೆಲ್ ಹಾಕಿದ್ದು ಸೆರೆಯಾಗಿದೆ. ಈ ಹಿನ್ನಲೆ ಶಿವಮ್ಮ ಸಾವನ್ನಪ್ಪಿದ ದಿನ ಮನೆಯವರು ದುಃಖದಲ್ಲಿದ್ದರು. ಮರು ದಿನ ಸಿಸಿ ಕ್ಯಾಮೆರಾ ನೋಡಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರ ತನಿಖೆ ವೇಳೆ ಅರ್ಚಕ ಸರ್ವಜ್ಞ ಸತ್ಯ ಬಾಯಿ ಬಿಟ್ಟಿದ್ದಾನೆ.

    ಅರ್ಚಕ ಹಾಗೂ ಗಣೇಶ್ ಕಾರಿಗಾಗಿ ಸಾಲ ಮಾಡಿಕೊಂಡಿದ್ದು, ಸಾಲದ ಹಣ ತೀರಿಸಲು ಶಿವಮ್ಮ ಮನೆಯಲ್ಲಿದ್ದ ಹಣ, ಬಂಗಾರದ ಪೆಟ್ಟಿಗೆಯನ್ನ ಕಳ್ಳತನ ಮಾಡಲು ಸ್ಕೆಚ್ ಹಾಕಿದ್ದನು. ನಿತ್ಯ ಎಂಟು ಗಂಟೆಗೆ ಪೂಜೆ ಮಾಡಲು ಬರ್ತಿದ್ದ ಅರ್ಚಕ, ಮಾರ್ಚ್ 5ರಂದು ಬೆಳಗಿನ ಜಾವ 6 ಗಂಟೆಗೆ ಪೂಜೆ ಮಾಡಲು ಬಂದಿದ್ದ. ಪೂಜೆ ನೆಪದಲ್ಲಿ ಬಂಗಾರದ ಪೆಟ್ಟಿಗೆ ಮನೆ ಹಿಂದೆ ಇಟ್ಟು ಹಣ ದರೋಡೆ ಮಾಡಲು ಪ್ರಯತ್ನ ಮಾಡಿದ್ದು, ಇದನ್ನು ಶಿವಮ್ಮ ನೋಡಿದ್ದರು. ಬಳಿಕ ಶಿವಮ್ಮಳನ್ನು ಶೌಚಾಲಯದಲ್ಲಿ ಕತ್ತು ಹಿಸುಕಿ ಕೊಲೆ ಮಾಡಿ ನಾಟಕ ಮಾಡಿದ್ದನು. ಶಿವಮ್ಮ ಮೃತಳಾದ ದಿನ ಮನೆಯವರೊಂದಿಗೆ ಏನೂ ಅನುಮಾನ ಬಾರದಂತೆ ಅರ್ಚಕ ನಡೆದುಕೊಂಡಿದ್ದ. ಅಲ್ಲದೆ ಮನೆಯವರಿಗೆ ಸಮಾಧಾನ ಮಾಡಿದ್ದ. ಹೊಂಚು ಹಾಕಿ ಕಳ್ಳತನ ಮಾಡಿದ್ದ ಅರ್ಚಕ ಇದೀಗ ಮನೆ ಒಡತಿಯನ್ನೆ ಕೊಂದಿದ್ದು, ಇಡೀ ಮನೆಗೆ ಶಾಕ್ ಆಗಿದೆ.

    ಎರಡು ವರ್ಷಗಳ ಕಾಲ ಮನೆಯಲ್ಲಿ ಪೂಜೆ ಮಾಡಿದ ಅರ್ಚಕ, ಹಣದಾಸೆಗೆ ಮನೆ ಒಡತಿಯನ್ನೆ ಕೊಲೆ ಮಾಡಿದ್ದಾನೆ. ಇಡೀ ಕುಟುಂಬ ಅರ್ಚಕ ಸರ್ವಜ್ಞನನ್ನು ಮನೆ ಮಗನಂತೆ ನೋಡಿಕೊಂಡಿತ್ತು. ಆದರೆ ಹಣದಾಸೆಗೆ ಮನೆ ಒಡತಿಯನ್ನೇ ಕೊಲೆ ಮಾಡಿದ ಅರ್ಚಕ ಸರ್ವಜ್ಞನ ವಿರುದ್ಧ ಮನೆಯವರು ಹಿಡಿಶಾಪ ಹಾಕುತ್ತಿದ್ದಾರೆ.

  • ಗಿಳಿಗಾಗಿ ಮಾಲೀಕನ ಪರಾದಾಟ – ಹುಡುಕಿಕೊಟ್ಟರೆ 10 ಸಾವಿರ ಬಹುಮಾನ

    ಗಿಳಿಗಾಗಿ ಮಾಲೀಕನ ಪರಾದಾಟ – ಹುಡುಕಿಕೊಟ್ಟರೆ 10 ಸಾವಿರ ಬಹುಮಾನ

    ಲಕ್ನೋ: ಸಾಮಾನ್ಯವಾಗಿ ಮನುಷ್ಯರು ಪ್ರಾಣಿಗಳನ್ನು ಹೆಚ್ಚಾಗಿ ಹಚ್ಚಿಕೊಂಡಿರುವುದನ್ನು ನೋಡಿರುತ್ತೇವೆ. ಆದರೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ವ್ಯಕ್ತಿಯೋರ್ವ ಕಳೆದು ಹೋಗಿರುವ ಗಿಳಿಯನ್ನು ಹುಡುಕಿಕೊಂಡುವಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೆ ಗಿಳಿಯನ್ನು ಹುಡುಕಿಕೊಟ್ಟವರಿಗೆ 10,000 ರೂ. ಹಣವನ್ನು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

    ಹೌದ ಸಾಕಿದ್ದ ಗಿಳಿಯೊಂದು ಕಾಣೆಯಾಗಿದ್ದು, ಇದೀಗ ಅಲಿಗಢ ಜಿಲ್ಲೆಯಲ್ಲಿ ಗಿಳಿಯ ವಿಚಾರ ಭಾರೀ ಚರ್ಚೆಯಾಗುತ್ತಿದೆ. ವಿಶೇಷವೆಂದರೆ ಈ ಗಿಳಿ ವಿದೇಶಿ ತಳಿಯದ್ದಾಗಿದೆ. ನಗರದ ಕ್ವಾರ್ಸಿ ಪೊಲೀಸ್ ಠಾಣಾ ಪ್ರದೇಶದಿಂದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದೆ.

    ಗಿಳಿಯ ಮಾಲೀಕ ಎಸ್.ಸಿ.ವಷ್ರ್ನಿ ಎಂದು ಗುರುತಿಸಲಾಗಿದ್ದು, ಇವರು ದೀಂದಯಾಲ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಗದು ಬಹುಮಾನ ಮತ್ತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಲ್ಲದೇ, ಗಿಳಿ ಹುಡುಕಲು ಸಹಾಯ ಮಾಡುವಂತೆ ಕರಪತ್ರಗಳನ್ನು ಮುದ್ರಿಸಿ ಸುತ್ತಮುತ್ತಲಿನವರಿಗೆ ಹಂಚಿದ್ದಾರೆ. ಅಲ್ಲದೆ ಗಿಳಿ ಹುಡುಕಲು ಸಹಾಯ ಮಾಡಿದವರಿಗೆ 10,000ರೂ. ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.

  • ಕ್ಷುಲ್ಲಕ ಕಾರಣಕ್ಕೆ ತಮ್ಮನಿಂದಲೇ ಅಣ್ಣನ ಕೊಲೆ

    ಕ್ಷುಲ್ಲಕ ಕಾರಣಕ್ಕೆ ತಮ್ಮನಿಂದಲೇ ಅಣ್ಣನ ಕೊಲೆ

    ಹಾಸನ: ಕ್ಷುಲ್ಲಕ ಕಾರಣಕ್ಕೆ ಅಣ್ಣನನ್ನೇ ತಮ್ಮ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೇವಾಲದಕೆರೆ ಗ್ರಾಮದಲ್ಲಿ ನಡೆದಿದೆ.

    ಮೃತಪಟ್ಟ ವ್ಯಕ್ತಿ ರವಿ (47) ಎಂದು ಗುರುತಿಸಲಾಗಿದೆ. ಕಡೂರು ಮೂಲದ ರವಿ ಕಾಫಿ ಪ್ಲಾಂಟರ್ ಸುದೀಶ್ ಎಂಬವವರ ತೋಟದಲ್ಲಿ ಕಾಫಿ ಕುಯ್ಲು ಮಾಡಲು ಹೋಗಿದ್ದು, ಈ ವೇಳೆ ಕಾಫಿ ಬೀಜ ಕುಯ್ಲು ಮಾಡಲು ಚಿಕ್ಕಪ್ಪನ ಮಗ ಪ್ರದೀಪ್(29)ನನ್ನು ಕೆಲಸಕ್ಕೆ ಕರೆದುಕೊಂಡು ಹೋಗಿದ್ದಾರೆ.

    ನಿನ್ನೆ ಇಬ್ಬರು ಕೆಲಸ ಮುಗಿಸಿ ಮದ್ಯಪಾನ ಮಾಡಿ ಮನೆಗೆ ಬಂದು ನಾನ್ ವೆಜ್ ಅಡುಗೆ ಮಾಡಿ ಊಟ ಮುಗಿಸಿದ ನಂತರ ರವಿ ಜಗಳ ಆರಂಭಿಸಿದ್ದಾನೆ. ನಾನೇ ಅಡುಗೆ ಪದಾರ್ಥಗಳನ್ನೆಲ್ಲಾ ತಂದಿದ್ದೀನಿ, ನೀನು ರಾಗಿಹಿಟ್ಟನ್ನು ಕೂಡ ತಂದಿಲ್ಲ ಎಂದು ಬಾಯಿಗೆ ಬಂದಂತೆ ಬೈದು ಪ್ರದೀಪ್‍ನನ್ನು ಮನೆಯಿಂದ ಹೊರಹಾಕಿದ್ದಾನೆ. ರವಿ ಪಾತ್ರೆಗಳನ್ನೆಲ್ಲಾ ಸಹೋದರನ ಮೇಲೆ ಎಸೆದು ಹಲ್ಲೆಗೆ ಮುಂದಾಗಿದ್ದಾನೆ.

    ಇದರಿಂದ ಕೋಪಗೊಂಡ ಪ್ರದೀಪ್ ಕೋಣೆಯೊಳಗೆ ಹೋಗಿ ದೊಣ್ಣೆಯಿಂದ ರವಿ ತಲೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿ ಶವದ ಪಕ್ಕದಲ್ಲಿಯೇ ಕುಳಿತಿದ್ದಾನೆ. ಇಂದು ಬೆಳಗ್ಗೆ ತೋಟದ ಮಾಲೀಕ ಇಬ್ಬರನ್ನು ಕೆಲಸಕ್ಕೆ ಕರೆಯಲು ಬಂದಾಗ ಕೊಲೆ ನಡೆದಿರುವುದು ವಿಚಾರ ತಿಳಿದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದೀಗ ಪೊಲೀಸರು ಆರೋಪಿ ಪ್ರದೀಪ್ ನನ್ನು ಬಂಧಿಸಿದ್ದು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಲಾಗಿದೆ.

  • 50 ರೂ. ಸಂಬಳದಿಂದ ಬೇಸತ್ತು ಮಾಲೀಕನ ಮಗನನ್ನೇ ಅಪಹರಿಸಿ ಕೊಂದ ಅಪ್ರಾಪ್ತರು!

    50 ರೂ. ಸಂಬಳದಿಂದ ಬೇಸತ್ತು ಮಾಲೀಕನ ಮಗನನ್ನೇ ಅಪಹರಿಸಿ ಕೊಂದ ಅಪ್ರಾಪ್ತರು!

    ಲಕ್ನೋ: ಪ್ರತಿ ನಿತ್ಯ ಮಾಡುತ್ತಿದ್ದ ಕೆಲಸಕ್ಕೆ 30-50 ರೂ. ಸಂಬಳ ನೀಡುತ್ತಿದ್ದರಿಂದ ಬೇಸತ್ತ ಅಪ್ರಾಪ್ತರಿಬ್ಬರು ಮಾಲೀಕನ ಮಗನನ್ನೇ ಅಪಹರಿಸಿ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಆದಿತ್ಯ(5) ಮೃತ ಬಾಲಕ. ಅಲಿಗರ್ ಪ್ರದೇಶದಲ್ಲಿ ಈ ಘಟನೆ ಜರುಗಿದ್ದು, 16 ವರ್ಷದ ಆರೋಪಿಗಳು ಹಿಂದಿ ಧಾರವಾಹಿಗಳಿಂದ ಪ್ರೇರಿತಗೊಂಡು ಕೃತ್ಯವೆಸಗಿದ್ದಾನೆ ಎಂಬ ಸತ್ಯ ಬಹಿರಂಗಗೊಂಡಿದೆ.

    ಫೆಬ್ರವರಿ 13ರಂದು ಬಾಲಕ ಮನೆಯಿಂದ ಹೊರಗೆ ಆಟವಾಡುತ್ತಿದ್ದ ವೇಳೆ ಅಪಹರಣವಾಗಿದ್ದಾನೆ. ಆದಿತ್ಯನನ್ನು ಹುಡುಕುವಲ್ಲಿ ಅವರ ತಂದೆ ವಿಫಲವಾದಾಗ ಕೊನೆಗೆ ಪೊಲೀಸರ ಮೊರೆ ಹೋಗಿದ್ದಾರೆ. ಆದರೆ ಎರಡು ದಿನಗಳ ನಂತರ ಬಾಲಕ ಶವ ಗುಂಡಿಯೊಂದಲ್ಲಿ ಪತ್ತೆಯಾಗಿದೆ.

    ಆರೋಪಿಗಳು ಬಾಲಕನನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಬಳಿಕ ಬಾಲಕನ ಮೃತದೇಹವನ್ನು ಪ್ಲಾಸ್ಟಿಕ್ ಚೀಲದೊಳಗೆ ತುಂಬಿ ಅರಣ್ಯ ಪ್ರದೇಶವೊಂದರಲ್ಲಿ ಗುಂಡಿಯೊಂದರಲ್ಲಿ ಹೂತು ಹಾಕಿದ್ದಾರೆ.

    ಫೆಬ್ರವರಿ 14ರಂದು ಬಾಲಕನೊಬ್ಬನ ಶವ ಗುಂಡಿಯೊಂದರಲ್ಲಿ ಪತ್ತೆಯಾಗಿದೆ ಎಂಬ ಸುದ್ದಿ ಕೇಳಿಬಂದಿತ್ತು. ಈ ವಿಷಯ ತಿಳಿದ ಬಾಲಕನ ಕುಟುಂಬಸ್ಥರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಬಾಲಕನ ಮೃತದೇಹ ಗುಂಡಿಯೊಳಗೆ ಪತ್ತೆಯಾಗಿದೆ. ಈ ವೇಳೆ ಆರೋಪಿಗಳು ಬಾಲಕನ ಬಟ್ಟೆ ಮತ್ತು ಚಪ್ಪಲಿಯನ್ನು ಸುಡುವ ಪ್ರಯತ್ನ ಕೂಡ ಮಾಡಿದ್ದಾರೆ. ಅಲ್ಲದೆ ಆರೋಪಿಗಳು ಕೊಲೆ ಕುರಿತ ಸಾಕ್ಷಿಗಳನ್ನು ನಾಶಪಡಿಸಲು ಪ್ರಯತ್ನಿಸಿದ್ದಾರೆ ಎಂದು ಎಸ್ಪಿ(ಗ್ರಾಮೀಣ) ಶುಭಮ್ ಪಟೇಲ್ ಹೇಳಿದ್ದಾರೆ.