Tag: owner

  • ಜಾಗ ನೀಡದ್ದಕ್ಕೆ ವ್ಯಕ್ತಿಯ ಹತ್ಯೆಗೆ ಯತ್ನ – ಆಸಿಡ್ ದಾಳಿ, ಕಾರಿಗೆ ಬೆಂಕಿ

    ಜಾಗ ನೀಡದ್ದಕ್ಕೆ ವ್ಯಕ್ತಿಯ ಹತ್ಯೆಗೆ ಯತ್ನ – ಆಸಿಡ್ ದಾಳಿ, ಕಾರಿಗೆ ಬೆಂಕಿ

    ಚಿತ್ರದುರ್ಗ: ವ್ಯಕ್ತಿಯೊಬ್ಬರ ಕಾರಿಗೆ ಆಸಿಡ್ ದಾಳಿ ನಡೆಸಿ ಬೆಂಕಿ ಹಚ್ಚಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ಸೂಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಆಂಧ್ರಪ್ರದೇಶದ ಹಳ್ಳಿಯೊಂದರಲ್ಲಿರುವ ಜಮೀನನ್ನು ರಿಯಲ್ ಎಸ್ಟೇಟ್ ಉದ್ಯಮಿಯಾದ ಸುರೇಶ್‍ಗೆ ಮಾರಾಟ ಮಾಡಲು ವೇಣುಗೋಪಾಲ್ ಅವರ ತಂದೆ ಮುಂದಾಗಿದ್ದರು. ಆದರೆ ತಂದೆಯ ನಿರ್ಧಾರವನ್ನು ವಿರೋಧಿಸಿದ್ದರು. ಹೀಗೆ ಕೆಲಸದ ಮೇಲೆ ಅನ್ಯ ಕಾರ್ಯನಿಮಿತ್ತ ಚಳ್ಳಕೆರೆಗೆ ವೇಣುಗೋಪಾಲ್ ಬಂದಿದ್ದರು. ಈ ವೇಳೆ ಆಂಧ್ರ ಪ್ರದೇಶದಿಂದ ಹಿಂಬಾಲಿಸಿಕೊಂಡು ಬಂದಿರುವ ಸುರೇಶ್ ಅಂಡ್ ಟೀಂ, ಮೊಳಕಾಲ್ಮೂರಿನ ಸೂಕೆನಹಳ್ಳಿ ಬಳಿ ಏಕಾಏಕಿ ವೇಣುಗೋಪಾಲ್ ಕಾರಿಗೆ ಬೆಂಕಿ ಹಾಕಿ, ಆಸಿಡ್ ದಾಳಿಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

    ಕೃತ್ಯವೆಸಗಲು ಮೊದಲೇ ಪೂರ್ವಸಿದ್ಧತೆ ಮಾಡಿಕೊಂಡಿರುವ ದುಷ್ಕರ್ಮಿಗಳು ಮೊಳಕಾಲ್ಮೂರಿನಿಂದ ವಾಪಾಸ್ ಹೊರಟ ವೇಣುಗೋಪಾಲ್ ಕಾರನ್ನು ಅಡ್ಡಗಟ್ಟಿ ಹತ್ಯೆಗೆ ಯತ್ನ ಮಾಡಲಾಗಿದೆ. ಆಂಧ್ರಪ್ರದೇಶ ರಾಜ್ಯದ ಹಿಂದುಪುರ ಮೂಲದ ಸುರೇಶ ಹಾಗೂ ಆತನ ಸಹಚರರಾದ ಆಂಜನೇಯ, ಚೌಡಪ್ಪ ಸೇರಿದಂತೆ ಐವರು ಈ ಕೃತ್ಯ ನಡೆಸಿದ್ದಾರೆಂಬ ಎಂದು ಹೇಳಲಾಗುತ್ತಿದೆ.

    ದುಷ್ಕøತ್ಯದಿಂದಾಗಿ ವೇಣುಗೋಪಾಲ್ ಕಾರು ಸುಟ್ಟು ಸಂಪೂರ್ಣ ಭಸ್ಮವಾಗಿದ್ದು, ಗಂಭೀರವಾಗಿ ಗಾಯಗೊಂಡ ವೇಣುಗೋಪಾಲ್‍ರನ್ನು ಬಳ್ಳಾರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಕೃತ್ಯದ ಸ್ಥಳದಿಂದ ಪರಾರಿಯಾಗಿದ್ದಾರೆ.

    ಸದ್ಯ ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೃತ್ಯದ ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ.

  • ಕೆಲಸ ಕೊಟ್ಟ ಮಾಲೀಕನ ಲಾರಿಯನ್ನೇ ಕದ್ದ ಖದೀಮ ಅಂದರ್

    ಕೆಲಸ ಕೊಟ್ಟ ಮಾಲೀಕನ ಲಾರಿಯನ್ನೇ ಕದ್ದ ಖದೀಮ ಅಂದರ್

    ರಾಯಚೂರು: ನಗರದ ಆಟೋನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಲಾರಿಯನ್ನ ಕದ್ದು ಮಾರಾಟಕ್ಕೆ ಮುಂದಾಗಿದ್ದ ಕಳ್ಳನನ್ನ ಸದರ್ ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಆಶ್ರಯ ಕಾಲೋನಿಯ ನಿವಾಸಿ ಗೋವಿಂದ ಬಂಧಿತ ಆರೋಪಿ. ಹಣದ ಅವಶ್ಯಕತೆ ಕಾರಣಕ್ಕೆ ತನ್ನ ಮಾಲೀಕನ ಲಾರಿಯನ್ನೇ ಕದ್ದು ಸಿಕ್ಕಿಬಿದ್ದಿದ್ದಾನೆ.

    ಆಟೋ ನಗರದ ಸೈಯದ್ ಹುಸೇನ್ ಎಂಬವರಿಗೆ ಸೇರಿದ ಲಾರಿಯನ್ನ ಗೋವಿಂದ ಕದ್ದು ಮಾರಾಟಕ್ಕೆ ಮುಂದಾಗಿದ್ದ. ರಾಯಚೂರು ತಾಲೂಕಿನ ಗಂಜಳ್ಳಿ ಬಳಿ ಲಾರಿಯೊಂದಿಗೆ ಆರೋಪಿ ಸೆರೆಸಿಕ್ಕಿದ್ದಾನೆ.

    ಎರಡು ದಿನಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ್ದ ಗೋವಿಂದ, ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ್ದ ಲಾರಿಯೊಂದಿಗೆ ಪರಾರಿಯಾಗಿದ್ದ. ಜೆಸಿಬಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಗೋವಿಂದನಿಗೆ ಸೈಯದ್ ಹುಸೇನ್ ಕೆಲಸ ನೀಡಿದ್ದ. ಆದರೆ ಗೋವಿಂದ ಮಾಲೀಕನ 8 ಲಕ್ಷ ರೂಪಾಯಿ ಮೌಲ್ಯದ ಲಾರಿ ಕಳ್ಳತನ ಮಾಡಿದ್ದಾನೆ. ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸದರ್ ಬಜಾರ್ ಠಾಣೆ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.

  • ಪ್ರೀತಿಯ ʼಗುಂಡʼನನ್ನು ಹುಡುಕಿಕೊಟ್ಟವರಿಗೆ 10 ಸಾವಿರ ನಗದು ಬಹುಮಾನ

    ಪ್ರೀತಿಯ ʼಗುಂಡʼನನ್ನು ಹುಡುಕಿಕೊಟ್ಟವರಿಗೆ 10 ಸಾವಿರ ನಗದು ಬಹುಮಾನ

    ಬೆಂಗಳೂರು: ಕಳೆದ ಎರಡು ದಿನದ ಹಿಂದೆ ಮನೆಯ ಬಳಿ ಆಟವಾಡುತಿದ್ದ ಪ್ರೀತಿಯ ಶ್ವಾನ ನಾಪತ್ತೆಯಾಗಿದ್ದು, ಮುದ್ದಿನ ಶ್ವಾನ ಕಳೆದು ಹೋಗಿದಕ್ಕೆ ಕುಟುಂಬಸ್ಥರು ಬೇಸರಗೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

    ಇತ್ತ ಸಹಪಾಠಿ ಗುಂಡನ ನಾಪತ್ತೆಯಿಂದ ಉಳಿದ ಶ್ವಾನಗಳು ಸಹ ಊಟ ಮಾಡದೆ ನೀರು ಕುಡಿಯದೇ ಮಂಕಾಗಿ ಹೋಗಿವೆ. ಬೆಂಗಳೂರು ಹೊರವಲಯ ನೆಲಮಂಗಲ ನಗರದ ಹರ್ಷ ಕ್ಯಾಂಪಸ್ ನಿಂದ ಶ್ವಾನ ನಾಪತ್ತೆಯಾಗಿದೆ. ಹರ್ಷ ವಿದ್ಯಾಸಂಸ್ಥೆಗಳ ಮಾಲೀಕ ಶಿವಕುಮಾರ್ ಅವರ ಸಾಕು ನಾಯಿ ಗುಂಡ ನಾಪತ್ತೆಯಾಗಿದೆ.

    ಕಳೆದ ಒಂದೂವರೆ ವರ್ಷದಿಂದ ಗುಂಡನನ್ನು ಶಿವಕುಮಾರ್ ಮುದ್ದಾಗಿ ಸಾಕಿದ್ದರು. ಬಿಳಿ, ಕಪ್ಪು ಬಣ್ಣದ ಗುಂಡ ಕಳೆದ ಶನಿವಾರದಿಂದ ನಾಪತ್ತೆಯಾಗಿದ್ದಾನೆ. ಹೀಗಾಗಿ ಹುಡುಕಿ ಕೊಟ್ಟವರಿಗೆ 10,000 ಇನಾಮು ನೀಡಲು ತೀರ್ಮಾನ ಮಾಡಿದ್ದಾರೆ. ಶ್ವಾನದ ಮಾಲೀಕ ಯಶಸ್ ಮಾತನಾಡಿ ಪ್ಲೀಸ್ ಯಾರಿಗಾದರೂ ಸಿಕ್ಕಿದರೆ ನಮಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದಾರೆ.

  • ತಾನು ಪ್ರೀತಿಸ್ತಿದ್ದ ಹುಡುಗಿ ಮೇಲೆ ಕಣ್ಣಾಕಿದ್ದಕ್ಕೆ ಸಹೋದ್ಯೋಗಿಯನ್ನೇ ಮುಗಿಸಿದ!

    ತಾನು ಪ್ರೀತಿಸ್ತಿದ್ದ ಹುಡುಗಿ ಮೇಲೆ ಕಣ್ಣಾಕಿದ್ದಕ್ಕೆ ಸಹೋದ್ಯೋಗಿಯನ್ನೇ ಮುಗಿಸಿದ!

    – ಓರ್ವನ ಕೊಲೆಯಲ್ಲಿ ಟ್ರಯಾಂಗಲ್ ಲವ್ ಸ್ಟೋರಿ ಅಂತ್ಯ

    ಬೆಂಗಳೂರು: ತಾನು ಪ್ರೀತಿಸುತ್ತಿರುವ ಹುಡುಗಿ ಮೇಲೆ ಕಣ್ಣಾಕಿದ ಸಹೋದ್ಯೋಗಿಯನ್ನೇ ಕೊಲೆ ಮಾಡಿದ ಘಟನೆಯೊಂದು ಬೆಂಗಳೂರಿನ ಬನ್ನೇರುಘಟ್ಟದ ಬಳಿ ನಡೆದಿದೆ.

    ರವಿಕುಮಾರ್ ಕೊಲೆಯಾದವ. ಈತನನ್ನು ಹುಡುಗಿಯ ಪ್ರಿಯಕರ ಲೋಕೇಶ್ ಕೊಲೆ ಮಾಡಿದ್ದಾನೆ. ರವಿಕುಮಾರ್ ಬಳಿ ಲೋಕೇಶ್ ಕೆಲಸ ಮಾಡಿಕೊಂಡಿದ್ದ. ಈ ವೇಳೆ ಲೋಕೇಶ್ ಗೆ ಹುಡುಗಿಯೊಬ್ಬಳ ಜೊತೆಗೆ ಲವ್ ಆಗಿತ್ತು. ಹುಡುಗಿಯನ್ನು ಕರೆದುಕೊಂಡು ಬಂದು  ರವಿಕುಮಾರ್ ಗೆ ಪರಿಚಯ ಮಾಡಿಸಿದ್ದ.

    ಹೀಗೆ ಆದ ಪರಿಚಯದಿಂದ ಲೋಕೇಶ್ ಗೆ ಗೊತ್ತಾಗದಂತೆ ತನ್ನನ್ನು ಪ್ರೀತಿಸುವಂತೆ ರವಿಕುಮಾರ್ ಕಿರುಕುಳ ನೀಡಲು ಆರಂಭಿಸಿದ್ದಾನೆ. ಈ ವಿಚಾರ ತಿಳಿದ ಲೋಕೇಶ್,  ರವಿಕುಮಾರ್ ನನ್ನು ಕಿಡ್ನಾಪ್ ಮಾಡಿ ಬನ್ನೇರುಘಟ್ಟದ ಬಳಿ ಕೊಲೆ ಮಾಡಿದ್ದ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬೈಯ್ಯಪ್ಪನಹಳ್ಳಿ ಪೊಲೀಸರು ಲೋಕೇಶ್ ಸೇರಿ ಮೂವರನ್ನು ಬಂಧಿಸಿದ್ದಾರೆ.

  • ಅವನನ್ನು ಚೆನ್ನಾಗಿ ನೋಡಿಕೊಳ್ಳಿ – ಪ್ರೀತಿಯ ಶ್ವಾನದ ಬಗ್ಗೆ ಭಾವನಾತ್ಮಕ ಸಾಲು ಬರೆದ ಮಾಲೀಕ

    ಅವನನ್ನು ಚೆನ್ನಾಗಿ ನೋಡಿಕೊಳ್ಳಿ – ಪ್ರೀತಿಯ ಶ್ವಾನದ ಬಗ್ಗೆ ಭಾವನಾತ್ಮಕ ಸಾಲು ಬರೆದ ಮಾಲೀಕ

    – ಸಂಬಂಧಿಕರಿಂದ ಅವನನ್ನು ಬಿಟ್ಟು ಹೋಗುವ ಪರಿಸ್ಥಿತಿ ಬಂದಿದೆ

    ಮೆಕ್ಸಿಕೋ: ಅವನನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಪತ್ರ ಬರೆದು ಮಾಲೀಕನೋರ್ವ ತಾನು ಪ್ರೀತಿಯಿಂದ ಸಾಕಿದ್ದ ಶ್ವಾನವನ್ನು ಪಾರ್ಕಿನ ಬೆಂಚಿಗೆ ಕಟ್ಟಿ ಹೋಗಿರುವ ಘಟನೆ ಮೆಕ್ಸಿಕೋ ನಗರದಲ್ಲಿ ನಡೆದಿದೆ.

    ತಾನು ಪ್ರೀತಿಯಿಂದ ಸಾಕಿದ್ದ ಶ್ವಾನವನ್ನು ಸಂಬಂಧಿಕರು ನಿಂದಿಸುತ್ತಾರೆ ಎಂಬ ಕಾರಣಕ್ಕೆ ಆತ ಇದನ್ನು ಬೇರೆಯವರಿಗೆ ಕೊಡುವ ತೀರ್ಮಾನ ಮಾಡಿದ್ದಾನೆ. ಅದಕ್ಕಾಗಿ ಒಂದು ಭಾವನಾತ್ಮಕ ಪತ್ರ ಬರೆದು ಶ್ವಾನವನ್ನು ಪಾರ್ಕಿನಲ್ಲಿರುವ ಬೆಂಚ್‍ಗೆ ಕಟ್ಟಿ, ಯಾರಾದರೂ ಇವನನ್ನು ದತ್ತು ತೆಗೆದುಕೊಂಡು ಚೆನ್ನಾಗಿ ನೋಡಿಕೊಳ್ಳಿ ಎಂದು ಮನವಿ ಮಾಡಿದ್ದಾನೆ.

    ಪತ್ರದಲ್ಲೇನಿದೆ?
    ನಾನು ಈ ಪತ್ರದ ಮೂಲಕ ಶ್ವಾನವನ್ನು ದತ್ತು ಪಡೆಯಲು ಮತ್ತು ಅವವನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಮನವಿ ಮಾಡುತ್ತೇನೆ. ನಾನು ಪ್ರೀತಿಯಿಂದ ಸಾಕಿದ್ದ ನಾಯಿಯನ್ನು ಈ ರೀತಿ ಬಿಟ್ಟುಹೋಗಲು ಬಹಳ ಬೇಸರವಾಗುತ್ತಿದೆ. ಆದರೆ ನನ್ನ ಸಂಬಂಧಿಕರು ಅವನನ್ನು ದಿನ ಬೈಯುತ್ತಾರೆ. ಅವರು ನಿಂದಿಸುವುದನ್ನು ನೋಡಲಾಗದೇ ಈ ತೀರ್ಮಾನ ಮಾಡಿದ್ದೇನೆ. ಈ ಪತ್ರ ಓದಿ ದತ್ತು ಪಡೆಯಬೇಕು ಎಂದರೆ ಕೆರೆದುಕೊಂಡು ಹೋಗಿ. ಇಲ್ಲ ಈ ಪತ್ರವನ್ನು ಬೇರೆಯವರಿಗಾಗಿ ಇಲ್ಲೇ ಬಿಟ್ಟು ಹೋಗಿ ಎಂದು ಬರೆದುಕೊಂಡಿದ್ದಾರೆ.

    ತನ್ನ ಮಾಲೀಕನನ್ನು ಕಳೆದುಕೊಂಡ ಶ್ವಾನ ಬೆಂಚಿನ ಮೇಲೆ ಮಲಗಿಕೊಂಡು, ಬಂದು ಪತ್ರ ಓದುವವರನ್ನು ನೋಡುತ್ತಾ ಕುಳಿತ್ತಿದೆ. ಪತ್ರ ಓದಿದ ಯಾರೂ ಶ್ವಾನವನ್ನು ದತ್ತು ಪಡೆದುಕೊಂಡಿಲ್ಲ. ಕೊನೆಗೆ ಅನಿಮಲ್ ಚಾರಿಟಿಯವರು ಬಂದು ಶ್ವಾನವನ್ನು ಕರೆದುಕೊಂಡು ಹೋಗಿದ್ದಾರೆ. ಜೊತೆಗೆ ಶ್ವಾನಕ್ಕೆ ‘ಬೋಸ್ಟನ್’ ಎಂದು ನಾಮಕರಣ ಮಾಡಿದ್ದಾರೆ.

  • ಮಾಲೀಕನ ರಕ್ಷಣೆಗೆ ಧಾವಿಸುವ ಗೋವು- ವೀಡಿಯೋ ವೈರಲ್

    ಮಾಲೀಕನ ರಕ್ಷಣೆಗೆ ಧಾವಿಸುವ ಗೋವು- ವೀಡಿಯೋ ವೈರಲ್

    – ಗೋವಿನ ಪ್ರಾಮಾಣಿಕತೆಗೆ ಜನ ಫಿದಾ

    ಗಾಂಧಿನಗರ: ಕೆಲ ದಿನಗಳ ಹಿಂದೆ ಮಾಲೀಕನನ್ನ ರಕ್ಷಿಸುವ ವೀಡಿಯೋ ವೈರಲ್ ಆಗಿತ್ತು. ಖಾಸಗಿ ಮಾಧ್ಯಮ ವೀಡಿಯೋ ರಿಯಾಲಿಟಿ ಚೆಕ್ ನಡೆಸಿ ವರದಿ ಬಿತ್ತರಿಸಿದೆ.

    ಗುಜರಾತ್ ರಾಜ್ಯದ ಕಛ್ ಜಿಲ್ಲೆಯ ನಿವಾಸಿ ಮಾನದ್ ಎಂಬವರ ಹಸು ತನ್ನ ಸ್ನೇಹಿತನಂತೆ ಸಾಕಿಕೊಂಡಿದ್ದಾರೆ. ಮಾಲೀಕನ ಮೇಲೆ ಯಾರಾದ್ರೂ ಹಲ್ಲೆಗೆ ಯತ್ನಿಸಿದ್ರೆ ಹಸು ಪ್ರತ್ಯಕ್ಷವಾಗಿ ಒಡೆಯನ ರಕ್ಷಣೆಗೆ ಮುಂದಾಗುತ್ತದೆ.

    ನಾನು ಹಸುವನ್ನು ಗೆಳೆಯನಂತೆ ನೋಡಿಕೊಂಡಿದ್ದೇನೆ. ನನಗೆ ಅಪಾಯವಾದ್ರೆ ರಕ್ಷಣೆಗೆ ಬರುತ್ತೆ. ನೀವು ಬೇಕಾದ್ರೆ ನನ್ನ ಹಲ್ಲೆ ನಡೆಸಿದಂತೆ ನಟಿಸಿ ದೂರದಲ್ಲಿರುವ ನನ್ನ ಹಸು ಓಡೋಡಿ ಬರುತ್ತೆ ಎಂದು ಮಾನದ್ ಹೇಳುತ್ತಾರೆ. ಸ್ಥಳಕ್ಕೆ ತೆರಳಿದ ಮಾಧ್ಯಮ ಸಿಬ್ಬಂದಿ ರಿಯಾಲಿಟಿ ಚೆಕ್ ನಡೆಸಿದ್ದಾರೆ. ಆತನೊಂದಿಗೆ ಇನ್ನೋರ್ವ ಕೋಲಿನಿಂದ ಹೊಡೆದಾಡುವಂತೆ ನಟಿಸಿದಾಗಲೂ ಮೇಯುತ್ತಿದ್ದ ಹಸು ಬಂದಿದೆ.

    ಮಾನದ್ 12 ವರ್ಷದವಾಗಿರಿಂದಲೇ ಹಸುಗಳನ್ನು ಮೇಯಿಸಿಕೊಂಡು ಬರುತ್ತಿದ್ದಾರೆ. ಮಾನದ್ 20 ಜಾನುವಾರುಗಳಿದ್ದು, ಅದರಲ್ಲಿ ಈ ಹಸು ತುಂಬಾ ವಿಶೇಷ ಗುಣವನ್ನು ಹೊಂದಿದೆ. ಇನ್ನು ಮಾನದ್ ಬಿಡುವಿನ ಸಮಯದಲ್ಲಿ ಆಟೋ ಸಹ ಓಡಿಸುತ್ತಾರೆ.

  • ತೋಟದ ಮನೆಗೆ ನುಗ್ಗಿ ದರೋಡೆಗೆ ಯತ್ನ: ಅರ್ಧ ಗಂಟೆ ಕಾದಾಟ ನಡೆಸಿ ಕಳ್ಳನ ಹಿಡಿದ ಮಾಲೀಕ

    ತೋಟದ ಮನೆಗೆ ನುಗ್ಗಿ ದರೋಡೆಗೆ ಯತ್ನ: ಅರ್ಧ ಗಂಟೆ ಕಾದಾಟ ನಡೆಸಿ ಕಳ್ಳನ ಹಿಡಿದ ಮಾಲೀಕ

    ಚಾಮರಾಜನಗರ: ತೋಟದ ಮನೆಗೆ ನುಗ್ಗಿ ಮಾಲೀಕನ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ ಮಾಡಿದ್ದ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ.

    ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊಂಗಳ್ಳಿಯಲ್ಲಿ ಘಟನೆ ನಡೆದಿದ್ದು, ಬಂಧಿತ ದರೋಡೆಕೋರರನ್ನು ಗುಂಡ್ಲುಪೇಟೆ ತಾಲೂಕು ಕೋಡಹಳ್ಳಿಯ ಸಿದ್ದ, ಪ್ರದೀಪ ಹಾಗೂ ರವಿ ಎಂದು ಗುರುತಿಸಲಾಗಿದೆ.

    ಹೊಂಗಳ್ಳಿ ಹೊರವಲಯಲದಲ್ಲಿ ಕೇರಳ ಮೂಲದ ಪ್ರದೀಪ್ ಅವರು ತೋಟ ಗುತ್ತಿಗೆ ಪಡೆದು ತೋಟದ ಮನೆಯಲ್ಲೇ ವಾಸವಿದ್ದಾರೆ. ತಡ ರಾತ್ರಿ ತೋಟದ ಮನೆಗೆ ನುಗ್ಗಿದ ಮೂವರು ದರೋಡೆಕೋರರ ತಂಡ ಮಾಲೀಕ ಪ್ರದೀಪ್ ಮೇಲೆ ಖಾರದಪುಡಿ ಎರಚಿ ರಾಡ್ ನಿಂದ ಹಲ್ಲೆ ನಡೆಸಿದೆ. ಈ ವೇಳೆ ಮಾಲೀಕ ಪ್ರದೀಪ್ ಸಹ ಪ್ರತಿ ದಾಳಿ ನಡೆಸಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ಹೊಡೆದಾಟ ನಡೆದಿದೆ. ಇದೇ ಸಂದರ್ಭದಲ್ಲಿ ಮನೆಯ ಒಳಗಿನಿಂದ ಕಬ್ಬಿಣದ ರಾಡ್ ತಂದ ಪ್ರದೀಪ್ ದರೋಡೆಕೋರರ ಮೇಲೆ ಬೀಸಿದ ಪರಿಣಾಮ ಓರ್ವ ದರೋಡೆಕೋರ ಸ್ಥಳದಲ್ಲೇ ಕುಸಿದುಬಿದ್ದಿದ್ದಾನೆ.

    ಉಳಿದಿಬ್ಬರು ದರೋಡೆಕೋರರು ಪ್ರದೀಪ್ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಹಾಗೂ ಪತ್ನಿ ಕುತ್ತಿಗೆಯಲ್ಲಿದ್ದ 40 ಗ್ರಾಂ. ಚಿನ್ನದ ಸರ ದೋಚಿ ಪರಾರಿಯಾಗಿದ್ದಾರೆ. ತಕ್ಷಣ ಪ್ರದೀಪ್ ಗ್ರಾಮಸ್ಥರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಧಾವಿಸಿದ ಗ್ರಾಮಸ್ಥರು ಕುಸಿದುಬಿದ್ದು, ಗಾಯಗೊಂಡಿದ್ದ ದರೋಡೆಕೋರನ ಕೈಕಾಲು ಕಟ್ಟಿ ಗುಂಡ್ಲುಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಸ್ಥಳಕ್ಕೆ ಧಾವಿಸಿದ ಗುಂಡ್ಲುಪೇಟೆ ಪೊಲೀಸರು ಕುಸಿದುಬಿದ್ದಿದ್ದ, ಗ್ರಾಮಸ್ಥರು ಹಿಡಿದಿಟ್ಟಿದ್ದ ದರೋಡೆಕೋರನನ್ನು ಬಂಧಿಸಿ ಕರೆದೊಯ್ದು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈತ ನೀಡಿದ ಸುಳಿವಿನ ಮೇರೆಗೆ ಸರ್ಕಲ್ ಇನ್‍ಸ್ಪೆಕ್ಟರ್ ಮಹದೇವಸ್ವಾಮಿ, ಎಸ್‍ಐ ರಾಜೇಂದ್ರ ನೇತೃತ್ವದಲ್ಲಿ ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಉಳಿದ ಇಬ್ಬರು ದರೋಡೆಕೋರರನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ತೋಟದ ಮಾಲೀಕ ಪ್ರದೀಪ್ ನನ್ನು ಚಿಕಿತ್ಸೆಗಾಗಿ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

  • ಮುಸ್ಲಿಮರು, ನಾಯಿಗಳಿಗೆ ಪ್ರವೇಶವಿಲ್ಲ – ವೈರಲ್ ಆಯ್ತು ಅಪಾರ್ಟ್‍ಮೆಂಟ್ ನಿಯಮದ ಪೋಸ್ಟ್

    ಮುಸ್ಲಿಮರು, ನಾಯಿಗಳಿಗೆ ಪ್ರವೇಶವಿಲ್ಲ – ವೈರಲ್ ಆಯ್ತು ಅಪಾರ್ಟ್‍ಮೆಂಟ್ ನಿಯಮದ ಪೋಸ್ಟ್

    ಮುಂಬೈ: 3ಬಿಎಚ್‍ಕೆ ಫ್ಲ್ಯಾಟ್ ಲಭ್ಯವಿದೆ. ಆದರೆ ಮುಸ್ಲಿಮರು, ನಾಯಿಗಳಿಗೆ ಪ್ರವೇಶವಿಲ್ಲ ಎಂದು ಮುಂಬೈ ನಗರದ ಅಪಾರ್ಟ್‍ಮೆಂಟ್ ಮಾಲೀಕ ಹಾಕಿರುವ ಟು ಲೆಟ್ ಫಲಕ ಈಗ ವಿವಾದಕ್ಕೆ ಕಾರಣವಾಗಿದೆ.

    3 ಬಿಎಚ್‍ಕೆ ನಿವಾಸ ಭೋಗ್ಯಕ್ಕೆ ಲಭ್ಯವಿದೆ. ಆದರೆ ಮುಸ್ಲಿಮರು ಹಾಗೂ ನಾಯಿಗಳನ್ನು ಹೊಂದಿರುವವರಿಗೆ ಪ್ರವೇಶವಿಲ್ಲ ಎಂದು ಹಾಕಿದ್ದಾರೆ. ಮುಂಬೈ ನಿವಾಸಿ ಅನ್ಮೆಶ್ ಪಾಟೀಲ್ ಈ ನಿಯಮಗಳು ಹಾಗೂ ಫ್ಲ್ಯಾಟ್‍ನ ಚಿತ್ರವನ್ನು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇದೀಗ ಸಖತ್ ವೈರಲ್ ಆಗಿದೆ. ವರ್ಣಬೇಧ ನೀತಿಗೆ ಇದೊಂದು ಉದಾಹರಣೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪತ್ರಕರ್ತೆ ರಾಣಾ ಅಯ್ಯುಬ್ ಈ ಪೋಸ್ಟ್ ಶೇರ್ ಮಾಡಿ, ಮುಸ್ಲಿಮರು ಹಾಗೂ ನಾಯಿಗಳಿಗೆ ಪ್ರವೇಶವಿಲ್ಲ ಎಂಬುದು ಮುಂಬೈನ ಬಾಂದ್ರಾದಲ್ಲಿ ಸೊಗಸಾದ ವಿಳಾಸವಾಗಿದೆ. ಇದು 20ನೇ ಶತಮಾನದ ಭಾರತ, ನಮ್ಮದು ಕೋಮುವಾದಿ ರಾಷ್ಟ್ರವಲ್ಲ. ಇದು ವರ್ಣಬೇಧ ನೀತಿಯಲ್ಲವೇ ಹೇಳಿ ಎಂದು ಪ್ರಶ್ನಿಸಿದ್ದಾರೆ.

    ನಾನೂ ಸಹ ಕಳೆದ ಮೂರು ತಿಂಗಳಿಂದ ಬಾಂದ್ರಾದಲ್ಲಿ ಮನೆ ಹುಡುಕುತ್ತಿದ್ದೇನೆ. ನನ್ನ ಹೆಸರು ರಾಣಾ ಇದು ಮುಸ್ಲಿಂ ಹೆಸರಲ್ಲ ಎಂಬುದು ಹಲವು ಮಾಲೀಕರಿಗೆ ತಿಳಿಯುತ್ತದೆ. ಆದರೆ ನಮ್ಮ ಸರ್‍ನೇಮ್ ಶೇಖ್ ಎಂಬುದನ್ನು ಓದಿದಾಗ ನಮ್ಮ ಬ್ರೋಕರ್ ಕಡೆಯಿಂದ ಕರೆ ಬರುತ್ತದೆ. ಆಗ ಬ್ರೋಕರ್ ಅಸಹ್ಯಕರವಾಗಿ ಕ್ಷಮೆಯಾಚಿಸುತ್ತಾರೆ ಎಂದು ಅವರು ತಮ್ಮ ಮನೆ ಹುಡುಕುವ ಅನುಭವವನ್ನು ಹಂಚಿಕೊಂಡಿದ್ದಾರೆ.

    ಈ ಪೋಸ್ಟ್ ಪಾಕಿಸ್ತಾನ ರಾಷ್ಟ್ರಪತಿ ಡಾ.ಆರೀಫ್ ಅಲ್ವಿ ಅವರ ಗಮನ ಸೆಳೆದಿದ್ದು, ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹಿಂದುತ್ವ ಹಾಗೂ ಆರ್‍ಎಸ್‍ಎಸ್‍ನ ಉಗ್ರಗಾಮಿ ಮತ್ತು ತತ್ವಶಾಸ್ತ್ರದಿಂದ ಪ್ರೋತ್ಸಾಹಿಸಲ್ಪಟ್ಟ ಸಮಾಜ ಮಾತ್ರ ಇದನ್ನು ಈ ರೀತಿಯಾಗಲು ಬಿಡುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಪರ, ವಿರೋಧ ಚರ್ಚೆಗಳು ನಡೆಯುತ್ತಿದ್ದು, ಹಲವರು ಈ ಕುರಿತು ವಿರೋಧ ವ್ಯಕ್ತಪಡಿಸಿದರೆ, ಇನ್ನೂ ಹಲವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಮನೆಯ ಮಾಲೀಕ ಸಹ ತಮ್ಮ ನಿಯಮಗಳನ್ನು ಸಮರ್ಥಿಸಿಕೊಂಡಿದ್ದು, ಇದು ಖಾಸಗಿ ಆಸ್ತಿ, ನನ್ನ ಮನೆಗೆ ಯಾರು ಬಾಡಿಗೆಗೆ ಬರಬೇಕು ಎಂಬುದನ್ನು ನಿರ್ಧರಿಸುವ ಎಲ್ಲ ಹಕ್ಕನ್ನು ಹೊಂದಿದ್ದೇನೆ ಎಂದು ಹೇಳಿದ್ದಾರೆ.

  • ಅತ್ಯಾಚಾರಕ್ಕೆ ವಿರೋಧ- 13 ವರ್ಷದ ಬಾಲಕಿಗೆ ಬೆಂಕಿ ಹಚ್ಚಿದ ಮಾಲೀಕ

    ಅತ್ಯಾಚಾರಕ್ಕೆ ವಿರೋಧ- 13 ವರ್ಷದ ಬಾಲಕಿಗೆ ಬೆಂಕಿ ಹಚ್ಚಿದ ಮಾಲೀಕ

    – ಮನೆ ಕೆಲಸದ ಬಾಲಕಿ ಮೇಲೆ ಮಾಲೀಕ ಅತ್ಯಾಚಾರ

    ಹೈದರಾಬಾದ್: ಅತ್ಯಾಚಾರ ವಿರೋಧಿಸಿದ್ದಕ್ಕೆ ಮಾಲೀಕ 13 ವರ್ಷದ ಬಾಲಕಿಗೆ ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ನಡೆದಿದೆ. ಕಳೆದ ಒಂದು ತಿಂಗಳಿಂದ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಬಾಲಕಿ ಸಾವನ್ನಪ್ಪಿದ್ದಾಳೆ.

    ತೆಲಂಗಾಣದ ಖಮ್ಮಮ್ ನಗರದಲ್ಲಿ ಘಟನೆ ನಡೆದಿದ್ದು, ಬುಡಕಟ್ಟು ಜನಾಂಗದ ಬಾಲಕಿ ಮೇಲೆ ಆಕೆಯ ಮಾಲೀಕನೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಒಪ್ಪದ್ದಕ್ಕೆ ಬೆಂಕಿ ಹಚ್ಚಿ ಸಜೀವ ದಹನ ಮಾಡಲು ಯತ್ನಿಸಿದ್ದು, ಬಾಲಕಿಯನ್ನು ಹೈದರಾಬಾದ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದೊಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿ ಬಾಲಕಿ ಸಾವನ್ನಪ್ಪಿದ್ದಾಳೆ.

    ಪೊಲೀಸರು ಈ ಕುರಿತು ಮಾಹಿತಿ ನೀಡಿದ್ದು, 13 ವರ್ಷದ ಬಾಲಕಿ ತೆಲಂಗಾಣದ ಖಮ್ಮಮ್ ಪಟ್ಟಣದ ಆರೋಪಿಯ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದಳು. ಸೆಪ್ಟೆಂಬರ್ 18ರಂದು ಆರೋಪಿ ಕಿರುಕುಳ ನೀಡಲು ಮುಂದಾಗಿದ್ದು, ಈ ವೇಳೆ ಬಾಲಕಿ ವಿರೋಧಿಸಿದ್ದಾಳೆ. ಆಗ ಆರೋಪಿ ಅವಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಪರಿಣಾಮ ಬಾಲಕಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದವು.

    ಸುಟ್ಟಗಾಯಗಳು ಹೆಚ್ಚಾಗಿದ್ದರಿಂದ ಬಾಲಕಿಯನ್ನು ಹೈದರಾಬಾದ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ತೆಲಂಗಾಣ ಪೊಲೀಸರಿಗೆ ಪ್ರಕರಣದ ಕುರಿತು ತಿಳಿದಿದೆ. ಈ ಕುರಿತು ಖಮ್ಮಮ್ ಪೊಲೀಸ್ ಆಯುಕ್ತ ತಫ್ಸೀರ್ ಇಕ್ಬಾಲ್ ಖಚಿತಪಡಿಸಿದ್ದು, ಹೈದರಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಬಾಲಕಿ ಸಾವನ್ನಪ್ಪಿದ್ದಾಳೆ. ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‍ಗಳಡಿ ದೂರು ದಾಖಲಾಗಿತ್ತು. ಈಗ ಕೊಲೆ ಮಾಡಿರುವುದಾಗಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.

    ಪ್ರಕರಣದ ಕುರಿತು ಅರಿತ ತೆಲಂಗಾಣ ರಾಜ್ಯ ಮಾನವ ಹಕ್ಕುಗಳ ಆಯೋಗ(ಟಿಎಸ್‍ಎಚ್‍ಆರ್‍ಸಿ) ಖಮ್ಮಮ್ ಪೊಲೀಸರಿಗೆ ವರದಿ ನೀಡುವಂತೆ ತಿಳಿಸಿದೆ. ಪ್ರಕರಣ ನಡೆಯುತ್ತಿದ್ದಂತೆ ಪೊಲೀಸರಿಗೆ ತಿಳಿಸದೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕುಟುಂಬಸ್ಥರು ಸಹ ನಮಗೆ ಮಾಹಿತಿ ನೀಡಿಲ್ಲ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

  • ಶಿವಮೊಗ್ಗದಲ್ಲಿ ರಾಬರಿಗೆ ಯತ್ನ- ಮಾಲೀಕ ಗನ್ ತೋರಿಸ್ತಿದ್ದಂತೆ ದರೋಡೆಕೋರರು ಪರಾರಿ

    ಶಿವಮೊಗ್ಗದಲ್ಲಿ ರಾಬರಿಗೆ ಯತ್ನ- ಮಾಲೀಕ ಗನ್ ತೋರಿಸ್ತಿದ್ದಂತೆ ದರೋಡೆಕೋರರು ಪರಾರಿ

    – ಏರ್ ಗನ್ ನೋಡಿ ಭಯಬಿದ್ದ ಕಳ್ಳರು

    ಶಿವಮೊಗ್ಗ: ಮಲೆನಾಡಿನಲ್ಲಿ ಇತ್ತಿಚೇಗೆ ಕೊಲೆ, ಸುಲಿಗೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ಎರಡು ಜೋಡಿ ಕೊಲೆಗಳು ನಡೆದಿವೆ.

    ಈ ಘಟನೆ ಮಾಸುವ ಮುನ್ನವೇ ನಿನ್ನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಗ್ರಾಮದಲ್ಲಿ ರಾಬರಿಗೆ ಬಂದ ತಂಡ ಮನೆಯ ಮಾಲೀಕ ಏರ್ ಗನ್ ಕೈಗೆತ್ತಿಕೊಳ್ಳುತ್ತಿದ್ದಂತೆ ಗನ್ ಎಂದು ಭಾವಿಸಿ ಹಾಗೂ ತಕ್ಷಣ ಗ್ರಾಮಸ್ಥರನ್ನು ಮನೆ ಬಳಿ ಬಂದ್ದಿದ್ದನ್ನು ಕಂಡು ಪರಾರಿಯಾಗಿದ್ದಾರೆ.

    ನಿನ್ನೆ ರಾತ್ರಿ ಮೇಗರವಳ್ಳಿಯ ಪುರುಷೋತ್ತಮ್ ಹೆಗಡೆ, ಗಣೇಶ್ ಹೆಗಡೆ ಹಾಗೂ ರೇವಂತ್ ಹೆಗಡೆ ಅವರ ಮನೆ ಬಾಗಿಲು ಬಡಿದು ಮಚ್ಚು, ಲಾಂಗ್ ತೋರಿಸಿ ದರೋರೆಗೆ ಯತ್ನ ಮಾಡಿದ್ದಾರೆ. ಈ ವೇಳೆ ಮನೆಯವರ ಕೂಗಾಟ ಕೇಳಿ ಗ್ರಾಮಸ್ಥರು ಹೆಗಡೆ ಮನೆಯವರ ಬಳಿ ಬರುವಷ್ಟರಲ್ಲಿ ಇನೋವಾ ಕಾರಿನಲ್ಲಿ ಬಂದಿದ್ದ ದರೋಡೆಕೋರರು ಪರಾರಿಯಾಗಿದ್ದಾರೆ. ಇದರಿಂದ ಗ್ರಾಮದಲ್ಲಿ ಆಂತಕದ ವಾತಾವರಣ ಸೃಷ್ಟಿಯಾಗಿದೆ.

    ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಬರಿ ಯತ್ನ ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮೇಗರವಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಹೆಗಡೆ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.