Tag: P.T Parameshwar naik

  • ಕೈಯಲ್ಲಿದ್ದ ಮೈಕ್ ಬಿಸಾಡಿದ ಶಾಸಕ ಪಿಟಿ ಪರಮೇಶ್ವರ್ ನಾಯ್ಕ್!

    ಕೈಯಲ್ಲಿದ್ದ ಮೈಕ್ ಬಿಸಾಡಿದ ಶಾಸಕ ಪಿಟಿ ಪರಮೇಶ್ವರ್ ನಾಯ್ಕ್!

    – ಡಿಕೆಶಿ ಮೇಲೆ ಮುನಿಸಿಕೊಂಡ್ರಾ ಪಿಟಿಪಿ?

    ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದ ಸಭೆಯಲ್ಲಿ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ಮೈಕ್ ಬಿಸಾಡಿದ ಘಟನೆ ನಡೆಯಿತು.

    ದಾವಣಗೆರೆಯ ಜಿಲ್ಲೆ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿರುವ ಸಂತ ಸೇವಾಲಾಲ್ ಜನ್ಮ ಸ್ಥಳ ಭಾಯಗಾಡ್ ನಲ್ಲಿ ಬಂಜಾರ ಸಮುದಾಯದ ಜನರ ಜೊತೆ ಡಿಕೆಶಿ ಸಂವಾದ ವೇಳೆ ಘಟನೆ ಜರುಗಿದೆ.

    ಬಂಜಾರ ಸಮುದಾಯದ ಸಮಸ್ಯೆಗಳನ್ನು ಸಂವಾದದ ಮೂಲಕ ಡಿ.ಕೆ.ಶಿವಕುಮಾರ್ ಆಲಿಸುತ್ತಿದ್ದರು. ಈ ವೇಳೆ ಯುವತಿ, ಬಂಜಾರ ಸಮುದಾಯದ ಮಹಿಳೆಯರ ಸಮಸ್ಯೆ ಮತ್ತು ಸಮುದಾಯದ ಜನರಿಗೆ ಮನೆ ಸಿಗದೆ ಇರೋ ಬಗ್ಗೆ ಪ್ರಸ್ತಾಪಿಸಿದ್ದರು. ಶಾಸಕ ಪಿಟಿ ಪರಮೇಶ್ವರ ನಾಯ್ಕ್ ಯುವತಿಯ ಪ್ರಶ್ನೆಗೆ ಉತ್ತರ ನೀಡಲು ಮುಂದಾದರು. ಈ ವೇಳೆ ನಾವು ಉತ್ತರ ನೀಡಲು ಬಂದಿಲ್ಲ ಅಂತ ಡಿಕೆ ಶಿವಕುಮಾರ್ ಪಿಟಿ ಪರಮೇಶ್ವರ್ ನ್ನು ತಡೆದರು.

    ಇದರಿಂದ ಸಿಟ್ಟಾದ ಶಾಸಕ ಪಿಟಿ ಪರಮೇಶ್ವರ್ ನಾಯ್ಕ್ ಕೈಯಲ್ಲಿದ್ದ ಮೈಕ್ ನ್ನು ಸಿಟ್ಟಿನಿಂದ ಎಸೆದರು. ಶಾಸಕ ಪಿಟಿ ಪರಮೇಶ್ವರ ನಾಯ್ಕ್ ರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದಿಟ್ಟವಾಗಿ ನೋಡಿ ಸುಮ್ಮನಾದರು. ಇದನ್ನೂ ಓದಿ: ಶಾಸಕ ಪಿಟಿ ಪರಮೇಶ್ವರ್ ನಾಯ್ಕ್ ತಮ್ಮ ಶಿವಾಜಿ ನಾಯ್ಕ್ ಅರೆಸ್ಟ್

  • ಶಾಸಕ ಪಿಟಿ ಪರಮೇಶ್ವರ್ ನಾಯ್ಕ್ ತಮ್ಮ ಶಿವಾಜಿ ನಾಯ್ಕ್ ಅರೆಸ್ಟ್

    ಶಾಸಕ ಪಿಟಿ ಪರಮೇಶ್ವರ್ ನಾಯ್ಕ್ ತಮ್ಮ ಶಿವಾಜಿ ನಾಯ್ಕ್ ಅರೆಸ್ಟ್

    ದಾವಣಗೆರೆ: ಮಾಜಿ ಸಚಿವ, ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ಸೋದರ ಶಿವಾಜಿ ನಾಯ್ಕ್ ಹಲ್ಲೆಗೆ ಸಂಬಂಧಿಸಿದಂತೆ 6 ಜನರನ್ನು ಅರಿಸೀಕೆರೆ ಪೊಲೀಸರು ಬಂಧಿಸಿದ್ದಾರೆ.

    ಪಿಟಿಪಿ ತಮ್ಮ ಶಿವಾಜಿ ನಾಯ್ಕ್ ಆತನ ಪತ್ನಿ ಕುಮಾರಿ ಭಾಯಿ, ಮಗ ರಾಹುಲ್ ಬಂಧನವಾಗಿದೆ. ಇತ್ತ ಹಲ್ಲೆಗೊಳಗಾದ ಜಗದೀಶ್, ಪತ್ನಿ ಶ್ರೀದೇವಿ, ಜಗದೀಶ್ ಅಣ್ಣ ಶಿವಕುಮಾರ್ ಬಂಧಿತರಾಗಿದ್ದಾರೆ. ದೂರು ಪ್ರತಿ ದೂರು ದಾಖಲಾದ ಹಿನ್ನೆಲೆಯಲ್ಲಿ ಎರಡು ಕಡೆಯವರನ್ನೂ ಬಂಧಿಸಲಾಗಿದೆ. ಇದನ್ನೂ ಓದಿ: ಶಾಸಕ ಪರಮೇಶ್ವರ್ ನಾಯ್ಕ್ ಸೋದರನಿಂದ ವೃದ್ಧನ ಮೇಲೆ ಹಲ್ಲೆಗೆ ಯತ್ನ 

    ನಿನ್ನೆ ದೂರು ಪ್ರತಿ ದೂರು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. 6 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಜೈಲಿಗೆ ಸ್ಥಳಾಂತರಿಸಲಾಗಿದೆ.

    ಪ್ರಕರಣದ ಹಿನ್ನೆಲೆ:
    ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ಸೋದರ ಶಿವಾಜಿ ನಾಯ್ಕ್ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರದಲ್ಲಿ ಶರಣ್ ನಾಯ್ಕ್ ಎನ್ನುವ ವೃದ್ಧನ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಶಿವಾಜಿ ನಾಯ್ಕ್ ಮನೆಯ ಪಕ್ಕದಲ್ಲಿಯೇ ಶರಣ್ ನಾಯ್ಕ್ ವಾಸವಾಗಿದ್ದಾರೆ. ಶರಣ್ ನಾಯ್ಕ್ ಮತ್ತು ಶಿವಾಜಿ ನಾಯ್ಕ್ ಮಧ್ಯೆ ಮನೆಯ ಜಾಗದ ವಿಚಾರವಾಗಿ ವಿವಾದ ಇತ್ತು. ಈ ಹಿಂದೆಯೂ ಹಲವು ಬಾರಿ ಎರಡೂ ಕುಟುಂಬಗಳ ಗಲಾಟೆ ನಡೆದಿದೆ.

    ಇದೇ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದೆ. ಈ ವೇಳೆ ಶಿವಾಜಿ ನಾಯ್ಕ್ ಕಬ್ಬಿಣದ ಹಾರೆಯಿಂದ ಹಲ್ಲೆಗೆ ಯತ್ನ ನಡೆಸಿದ್ದು, ತಳ್ಳಾಟ ನೂಕಾಟ ನಡೆದಿದೆ. ಸದ್ಯ ವೃದ್ಧನನ್ನು ದಾವಣಗೆರೆಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಮತ್ತೇ ನಿನ್ನೇ ಇದೇ ವಿಚಾರವಾಗಿ ಗಲಾಟೆಯಾಗಿದೆ ನಂತರ 2 ಮನೆಯಿಂದ 6 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

  • ರೈತರ ಮೇಲೆ ಮಾಜಿ ಸಚಿವ ಪರಮೇಶ್ವರ ನಾಯ್ಕ ಪುತ್ರನಿಂದ ಹಲ್ಲೆ

    ರೈತರ ಮೇಲೆ ಮಾಜಿ ಸಚಿವ ಪರಮೇಶ್ವರ ನಾಯ್ಕ ಪುತ್ರನಿಂದ ಹಲ್ಲೆ

    ದಾವಣಗೆರೆ: ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರ ಪುತ್ರ ಹಾಗೂ ಬೆಂಬಲಿಗರು ರೈತರ ಮೇಲೆ ಹಲ್ಲೆ ನಡೆಸಿದ ಘಟನೆ ಬಳ್ಳಾರಿ ಜಿಲ್ಲೆ ಹರಪನಹಳ್ಳಿಯ ಹೊರವಲಯದಲ್ಲಿ ನಡೆದಿದೆ.

    ಕಲ್ಲು ಗಣಿಗಾರಿಕೆ ವಿಚಾರವಾಗಿ ಪ್ರಶ್ನಿಸಿದ ಹರಪನಹಳ್ಳಿಯ ರೈತರ ಮೇಲೆ ಮಾಜಿ ಸಚಿವರ ಪುತ್ರ ಭರತ್ ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ಕಲ್ಲು ಗಣಿಗಾರಿಕೆಯಿಂದ ತಮ್ಮ ಜಮೀನಿಗೆ ತೊಂದರೆ ಆಗುತ್ತಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟವರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಮಗೆ ಧೂಳಿನಿಂದ ಭಾರೀ ಸಮಸ್ಯೆಯಾಗಿದೆ ಎಂದು ರೈತರು ಆರೋಪಿಸಿದ್ದರು. ಹೀಗಾಗಿ ರೈತರು ಉಪವಿಭಾಗಾಧಿಕಾರಿಗಳನ್ನು ಪರಿಶೀಲನೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಇದೇ ಮಾರ್ಗದಲ್ಲಿ ಪಿ.ಟಿ. ಪರಮೇಶ್ವರ ನಾಯ್ಕ್ ಕಾರಿನಲ್ಲಿ ಹೋಗುವಾಗ ಧೂಳು ಬಂದ ಕಾರಣ ರೈತರು ಆಕ್ಷೇಪಿಸಿದರು.

    ರೈತರ ಆಕ್ಷೇಪಣೆಯಿಂದ ಕೋಪಗೊಂಡ ಪರಮೇಶ್ವರ ನಾಯ್ಕ್ ಅವರ ಪುತ್ರ ಹಾಗೂ ಬೆಂಬಲಿಗರು ಕಾರಿನಿಂದ ಇಳಿದು ಬಂದು ಹಲ್ಲೆ ಮಾಡಿದ್ದಾರೆ. ತಕ್ಷಣವೇ ಕಾರಿನಿಂದ ಇಳಿದು ಬಂದ ಪರಮೇಶ್ಚರ ನಾಯ್ಕ ಗಲಾಟೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಸೆರೆ ಹಿಡಿದಿದ್ದಾರೆ.

    ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ರೈತರು ಹರಪನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ಸೇರಿಸಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಸೋಲಿನ ಭೀತಿಯಿಂದ ಶಾ, ಮೋದಿ ನಿದ್ದೆ ಮಾಡ್ತಿಲ್ಲ: ಪಿ.ಟಿ ಪರಮೇಶ್ವರ್ ನಾಯ್ಕ್

    ಸೋಲಿನ ಭೀತಿಯಿಂದ ಶಾ, ಮೋದಿ ನಿದ್ದೆ ಮಾಡ್ತಿಲ್ಲ: ಪಿ.ಟಿ ಪರಮೇಶ್ವರ್ ನಾಯ್ಕ್

    ದಾವಣಗೆರೆ: ಪಂಚ ರಾಜ್ಯಗಳ ಫಲಿತಾಂಶ ಬಂದಾಗಿನಿಂದ ಮೋದಿ, ಅಮಿತ್ ಶಾ ನಿದ್ದೆ ಮಾಡುತ್ತಿಲ್ಲ. ವಾಮಮಾರ್ಗದ ಮೂಲಕ ಕರ್ನಾಟಕದಲ್ಲಿ ಅಧಿಕಾರ ಹಿಡಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮುಜರಾಯಿ ಸಚಿವ ಪಿ.ಟಿ ಪರಮೇಶ್ವರ್ ನಾಯ್ಕ್ ಕಿಡಿಕಾರಿದ್ದಾರೆ.

    ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿತ್ತು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ, ಬಿಜೆಪಿಯವರ ಆಪರೇಷನ್ ಕಮಲ ನಡೆಯೋದಿಲ್ಲ. ರಾಜ್ಯದ ಜನ ಕಾಂಗ್ರೆಸ್-ಜೆಡಿಎಸ್ ಪಕ್ಷದ ಪರವಾಗಿದ್ದಾರೆ. ಮೋದಿ ಹಾಗೂ ಅಮಿತ್ ಶಾಗೆ ಮುಂದಿನ ಚುನಾವಣೆಯಲ್ಲಿ ಸೋಲುವ ಭೀತಿ ಇದೆ. ಆದರಿಂದ ಈ ರೀತಿ ಆಪರೇಷನ್ ಕಮಲ ಅಂತ ತಂತ್ರ ಮಾಡುತ್ತಿದ್ದಾರೆ. ಯಾವ ಶಾಸಕರು ಕಾಂಗ್ರೆಸ್ ಬಿಟ್ಟು ಹೋಗಲ್ಲ ಎಂದಿದ್ದಾರೆ.

    ಸುಮ್ಮನೆ ಬಿಜೆಪಿಯವರು ಕಳೆದ 6 ತಿಂಗಳಿಂದ ಇದೇ ರೀತಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ. ಕುಡಿಯಲು ನೀರು ಸಹ ಇಲ್ಲದೆ ಜನರು ಒದ್ದಾಡುತ್ತಿದ್ದಾರೆ. ಆದ್ರೆ ಬಿಜೆಪಿ ವಿರೋಧ ಪಕ್ಷವಾಗಿ ತನ್ನ ಕೆಲಸ ಮಾಡುತ್ತಿಲ್ಲ ಎಂದು ಹರಿಹಾಯ್ದಿದ್ದಾರೆ.

    ಸಚಿವ ಸ್ಥಾನದ ಕುರಿತು ಪ್ರತಿಕ್ರಿಯಿಸಿ, ನನಗೆ ಸಚಿವ ಸ್ಥಾನ ಕೊಟ್ಟಿದ್ದಕ್ಕೆ ಯಾರು ಸಹ ಅಸಮಾಧಾನಗೊಂಡಿಲ್ಲ. ಅದರಲ್ಲೂ ಬಳ್ಳಾರಿಯಲ್ಲಿ ಯಾವ ಶಾಸಕರು ಸಹ ಬೇಸರಗೊಂಡಿಲ್ಲ. ಅಲ್ಲದೇ ಪಕ್ಷದಿಂದ ನಮಗೆ ಬುಲಾವ್ ಬಂದಿಲ್ಲ. ಆರಾಮಾಗಿ ಇಲ್ಲೇ ಇದ್ದೇನೆ ನೋಡಿ ಎಂದು ಪಿ.ಟಿ ಪರಮೇಶ್ವರ್ ನಾಯ್ಕ್ ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv