Tag: PA

  • ಸುಳ್ಳು ಆರೋಪ ಮಾಡಿದ ಮಾಜಿ ಶಾಸಕನ ಮೇಲೆ ಮಾನನಷ್ಟ ಮೊಕದ್ದಮೆ ಹಾಕ್ತೀನಿ: ಪಾಪೇಶ್

    ಸುಳ್ಳು ಆರೋಪ ಮಾಡಿದ ಮಾಜಿ ಶಾಸಕನ ಮೇಲೆ ಮಾನನಷ್ಟ ಮೊಕದ್ದಮೆ ಹಾಕ್ತೀನಿ: ಪಾಪೇಶ್

    ಚಿತ್ರದುರ್ಗ: ಆಧಾರ ರಹಿತವಾಗಿ ನನ್ನ ಮೇಲೆ ಸುಳ್ಳು ಆರೋಪ ಮಾಡಿರುವ ಮೊಳಕಾಲ್ಮೂರು ಮಾಜಿ ಶಾಸಕ ತಿಪ್ಪೇಸ್ವಾಮಿ ಮೇಲೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಸಚಿವ ಶ್ರೀರಾಮುಲು ಆಪ್ತ ಸಹಾಯಕ ಪಾಪೇಶ್ ಗುಡುಗಿದ್ದಾರೆ.

    ನಿನ್ನೆ ಮಾಜಿ ಶಾಸಕ ತಿಪ್ಪೇಸ್ವಾಮಿ ಸುದ್ದಿಗೋಷ್ಠಿ ನಡೆಸಿ ಸಚಿವರ ಪಿಎಗಳಾದ ಹನುಮಂತ ರಾಯ ಹಾಗೂ ಪಾಪೇಶ್ ವಿರುದ್ಧ 772 ಜನ ಫಲಾನುಭವಿಗಳ ನೇರ ಸಾಲದ ಹಣವನ್ನು ನುಂಗಿದ್ದಾರೆಂಬ ಆರೋಪ ಮಾಡಿದ ಬೆನ್ನಲ್ಲೇ ಇಂದು ಶ್ರೀರಾಮುಲು ಪಿಎ ಪಾಪೇಶ್ ಹಾಗೂ ಬೆಂಬಲಿಗ ಜಯಪಾಲಯ್ಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಇದನ್ನೂ ಓದಿ: ಪೊಲೀಸ್‍ಗೆ ಕಪಾಳಮೋಕ್ಷ ಮಾಡಿದ ಮಾಜಿ ಶಾಸಕ ಎ.ಪಾಪಾರೆಡ್ಡಿ

    ಈ ವೇಳೆ ಮಾತನಾಡಿದ ಪಾಪೇಶ್, ಮಾಜಿ ಶಾಸಕ ತಿಪ್ಪೇಸ್ವಾಮಿ ಸುಖಾಸುಮ್ಮನೆ ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮೊಳಕಾಲ್ಮೂರು ಕ್ಷೇತ್ರದಲ್ಲಿ ಹೇಳಲು ಹೆಸರಿಲ್ಲದಂತಾಗಿದ್ದ ತಿಪ್ಪೇಸ್ವಾಮಿಗೆ ನಮ್ಮ ಸಚಿವರಾದ ಶ್ರೀರಾಮುಲು ಅವರು ಇವರಿಗೆ ಕೊಟ್ಟ ಭಿಕ್ಷೆಯಿಂದ ಬಿಎಸ್‍ಆರ್ ಪಕ್ಷದಿಂದ ಗೆದ್ದು ಶಾಸಕರಾಗಿದ್ದರು. ಈಗ ಮಾಜಿ ಶಾಸಕರಾಗಿರೋದು ಸಹ ಸಚಿವರ ಕೃಪೆಯಿಂದಲೇ ಎಂಬುದನ್ನು ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದೀಪಾವಳಿ ಗಿಫ್ಟ್ ಅಲ್ಲ, ಪೆಟ್ರೋಲ್, ಡೀಸೆಲ್ ಬೆಲೆ ಇನ್ನೂ ಕಡಿಮೆಯಾಗಬೇಕು: ಸತೀಶ್ ಜಾರಕಿಹೊಳಿ

    ನಮ್ಮ ಮೇಲೆ ಬಂದಿರುವ ಆರೋಪಗಳೆಲ್ಲಾ ಸುಳ್ಳು. ಮಾಜಿ ಶಾಸಕರನ್ನು ಜನರು ಮರೆಯುತ್ತಾರೆಂದು ಈ ರೀತಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ನೇರ ಸಾಲ ಫಲಾನುಭವಿಗಳಿಗೆ ಹಣ ತಲುಪದ ಬಗ್ಗೆ ಮಾಹಿತಿ ಇಲ್ಲ. ಒಂದು ವೇಳೆ ಅಕ್ರಮವಾಗಿದ್ದರೆ, ಸಚಿವರ ಗಮನಕ್ಕೆ ತಂದು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ಮಾಡುತ್ತೇವೆ. ಅಲ್ಲದೇ ನಮ್ಮ ಮೇಲೆ ಮರಳು ದಂಧೆ ಆರೋಪ ಸಹ ಮಾಡಿರುವ ಮಾಜಿ ಶಾಸಕರು, ಒಮ್ಮೆ ಭೂ ವಿಜ್ಞಾನ ಇಲಾಖೆ ಹಾಗೂ ಡಿಸಿ ಕಚೇರಿಯಿಂದ ಮಾಹಿತಿ ಪಡೆಯಬೇಕು. ಅವುಗಳೆಲ್ಲವೂ ಅವರ ಅವಧಿಯಲ್ಲೇ ಪರ್ಮಿಟ್ ಪಡೆದ ಪ್ರದೇಶಗಳಾಗಿವೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ನಿಮ್ಮ ಪಾದಕ್ಕೆ ನಮಸ್ಕಾರ ಮಾಡ್ತೀನಿ, ಪುನೀತ್‍ಗೆ ಕೆಟ್ಟ ಹೆಸ್ರು ತರಬೇಡಿ: ರಾಘವೇಂದ್ರ ರಾಜ್ ಕುಮಾರ್

    ಮಾಜಿ ಶಾಸಕರು ಪದೇ ಪದೇ ನಮ್ಮ ಸಚಿವರ ವಿರುದ್ಧ ಏಕವಚನದಲ್ಲಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಅಲ್ಲದೇ ಪಿಎಗಳು ಕೇವಲ ಸಚಿವರ ಪಟ್ಟಿಯನ್ನು ಅಧಿಕಾರಿಗಳಿಗೆ ತಲುಪಿಸುವ ಕಾರ್ಯ ಮಾಡುತ್ತೇವೆ. ಆದರೆ ತಿಪ್ಪೇಸ್ವಾಮಿ ಪೂರ್ವಗ್ರಹ ಪೀಡಿತರಾಗಿ ಮಾತನಾಡುತ್ತಿದ್ದಾರೆ. ಒಂದು ವೇಳೆ ಮಾಜಿ ಶಾಸಕರ ಆರೋಪ ಸಾಭೀತಾದ್ರೆ ಅವರ ಮನೆಯಲ್ಲಿ ಕೆಲಸ ಮಾಡುತ್ತೇವೆ ಎಂದು ಸವಾಲು ಹಾಕಿದರು.

    ಸುದ್ದಿಗೋಷ್ಠಿಯಲ್ಲಿ ರಾಮುಲು ಬೆಂಬಲಿಗರಾದ ಜಯಪಾಲಯ್ಯ, ಮಂಜುನಾಥ್, ತಾಯಮ್ಮ ಉಪಸ್ಥಿತರಿದ್ದರು. ಇದನ್ನೂ ಓದಿ: ಕಂಠೀರವ ಸ್ಟುಡಿಯೋ ಬಳಿ ಬಿಗಿ ಪೊಲೀಸ್ ಭದ್ರತೆ

  • ಬಿಎಂಟಿಸಿ ಟು ಪಿಎ ಜರ್ನಿ – ಸಾವಿರ ಲೆಕ್ಕದಲ್ಲಿ ಸಂಬಳ ಪಡೆಯುತ್ತಿದ್ದವ ಕೋಟಿ ಕುಬೇರನಾದ ಕಥೆ ಓದಿ

    ಬಿಎಂಟಿಸಿ ಟು ಪಿಎ ಜರ್ನಿ – ಸಾವಿರ ಲೆಕ್ಕದಲ್ಲಿ ಸಂಬಳ ಪಡೆಯುತ್ತಿದ್ದವ ಕೋಟಿ ಕುಬೇರನಾದ ಕಥೆ ಓದಿ

    ಬೆಂಗಳೂರು: ಬಿಎಂಟಿಸಿ ನಿರ್ವಾಹಕನಾಗಿ ತಿಂಗಳಿಗೆ ಸಾವಿರದಲ್ಲಿ ಸಂಬಳ ಪಡೆಯುತ್ತಿದ್ದ ಉಮೇಶ್ 10 ವರ್ಷದಲ್ಲಿ ಕೋಟಿ ಕುಳವಾಗಿ ಬೆಳೆದ ಕಥೆಯೇ ರೋಚಕ.

    ಐಟಿ ರೇಡ್ ಆಗಿರುವ ಬಿಎಂಟಿಸಿ ಸಿಬ್ಬಂದಿ ಉಮೇಶ್ ಡಿಪೋ ನಂಬರ್ 11ರಲ್ಲಿ ಕಂಡಕ್ಟರ್ ಕಂ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಉಮೇಶ್ ಬಿಎಂಟಿಸಿಯಿಂದ ಪಡೆಯುತ್ತಿದ್ದ ತಿಂಗಳ ಸಂಬಳ 32 ಸಾವಿರ ರೂಪಾಯಿ. ಕೈಗೆ ಸಿಗುತ್ತಿದ್ದಿದ್ದು 28 ಸಾವಿರ ರೂಪಾಯಿ.

    2007-08ರಲ್ಲಿ ಬಿಎಂಟಿಸಿ ಉದ್ಯೋಗಿಯಾದ ಉಮೇಶ್, ಟ್ರೈನಿಯಾಗಿ ಕೆಲಸ ಮಾಡುತ್ತಿದ್ದ. ಕೆಲಸಕ್ಕೆ ಸೇರಿದ ಒಂದೇ ವರ್ಷಕ್ಕೆ ಉದ್ಯೋಗ ಬೇಡ ಎನ್ನಿಸಿತ್ತು. ಇದೇ ವೇಳೆ ಬಿ.ಎಸ್.ಯಡಿಯೂರಪ್ಪ ಮೊದಲಬಾರಿಗೆ ಸಿಎಂ ಆಗಿದ್ದರು. ಈ ವೇಳೆ ಉಮೇಶ್ ಎರವಲು ಸೇವೆ ಅರ್ಜಿ ಸಲ್ಲಿಸಿದ್ದ. 2008ರಲ್ಲಿ ಎರವಲು ಸೇವೆಯಡಿ ವಿಧಾನಸೌಧದತ್ತ ಪ್ರಯಾಣ ಬೆಳೆಸಿದ್ದ. ಎರವಲು ಸೇವೆಗೆ ನಿಯೋಜನೆಯಾಗುವ ಮುನ್ನ ಉಮೇಶ್ ತಿಂಗಳಿಗೆ 3,500ರೂ. ಸಂಬಳ ಪಡೆಯುತ್ತಿದ್ದ. ಒಂದೇ ವರ್ಷಕ್ಕೆ ಟ್ರೇನಿಯಿಂದ ಪ್ರೊಬೆಷನರಿಯಾಗಿ ಬಡ್ತಿ ಪಡೆದು ತಿಂಗಳಿಗೆ 18 ಸಾವಿರ ರೂ.ವೇತನ ಪಡೆಯುತ್ತಿದ್ದ. ಇದನ್ನೂ ಓದಿ: ಬಿಎಸ್‍ವೈ ಆಪ್ತನ ಮನೆ ಮೇಲೆ ಐಟಿ ರೇಡ್

    ಇದೀಗ ಉಮೇಶ್ ವೇತನ ತಿಂಗಳೀಗೆ 30ರಿಂದ 32 ಸಾವಿರ ರೂ. ಇದೆ. ಎರವಲು ಸೇವೆಗೆ ನಿಯೋಜನೆಯಾದರೆ ಎರಡು ವರ್ಷದ ಬಳಿಕ ಮಾತೃ ಇಲಾಖೆಯಲ್ಲಿ ಕೆಲಸ ಮಾಡಿ, ಡೆಪ್ಟೇಷನ್ ಪಡೆಯಬಹುದು. ಆದರೆ ಉಮೇಶ್ ಮಾತ್ರ 2008ರಿಂದ ಎರವಲು ಸೇವೆಯಲ್ಲಿಯೇ ಮುಂದುವರಿಯುತ್ತಿರುವುದು ವಿಶೇಷ.

    ಇಷ್ಟು ಕಡಿಮೆ ವೇತನವಿದ್ದರೂ ಉಮೇಶ್ ಕೋಟ್ಯಧಿಪತಿ ಆಗಿದ್ದಾನೆ. ಸದ್ಯ ರಾಜಾಜಿನಗರದ ಭಾಷ್ಯಂ ಸರ್ಕಲ್ ಬಳಿ 3 ಅಂತಸ್ತಿನ ಮನೆಯಲ್ಲಿ ಬಾಡಿಗೆ ಇದ್ದು, ಸಹಕಾರ ನಗರದಲ್ಲಿ ಕೋಟ್ಯಂತರ ಮೌಲ್ಯದ ಮನೆ ನಿರ್ಮಾಣ ಮಾಡುತ್ತಿದ್ದಾನೆ. ಬಗಲಗುಂಟೆಯಲ್ಲಿ ಸೈಟ್‍ಗಳಿವೆ. ನೆಲಮಂಗಲದಲ್ಲಿ ಜಮೀನು, ಬಿಡಿಎನಲ್ಲಿ ಅನೇಕ ಸೈಟ್‍ಗಳು ಮಂಜೂರಾಗಿವೆ. ಅಲ್ಲದೆ ತನ್ನ ಹಾಗೂ ಕುಟುಂಬಸ್ಥರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಆಸ್ತಿ ಹೊಂದಿದ್ದಾನೆ. ಇತ್ತೀಚೆಗೆ ಎಲೆಕ್ಷನ್‍ನಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಹೋದರನನ್ನೂ ಗೆಲ್ಲಿಸಿಕೊಂಡಿದ್ದಾನೆ.

    ಬಿಎಸ್‍ವೈ ಸಂಪರ್ಕ ಹೇಗೆ?
    ಮೂಲತಃ ಶಿವಮೊಗ್ಗ ಜಿಲ್ಲೆಯ ಆಯನೂರಿನವನಾದ ಉಮೇಶ್, ಬಿ.ಎಸ್.ಯಡಿಯೂರಪ್ಪನವರ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ. 2008ರಲ್ಲಿ ಬಿಎಸ್‍ವೈ ಸಿಎಂ ಆಗಿದ್ದಾಗ ಆಪ್ತ ಶಾಖೆಯಲ್ಲಿ ಕೆಲಸ ಕೆಲಸ ಮಾಡಿದ್ದ. ಅಧಿಕಾರ ಕಳೆದುಕೊಂಡರೂ ಬಿಎಸ್‍ವೈ ನಂಟು ಬಿಟ್ಟಿರಲಿಲ್ಲ. ಬಿಎಸ್‍ವೈ ವಿರೋಧ ಪಕ್ಷದ ನಾಯಕರಾಗಿದ್ದಾಗಲೂ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. 2019ರಲ್ಲಿ ಮತ್ತೆ ಬಿಎಸ್‍ವೈ ಸಿಎಂ ಆದಾಗ ಸಹ ಆಪ್ತ ಸಹಾಯಕನಾಗಿ ಮುಂದುವರಿದಿದ್ದ. ಯಡಿಯೂರಪ್ಪನವರ ಎಲ್ಲ ಖಾಸಗಿ ಕೆಲಸಗಳನ್ನು ನಿರ್ವಹಿಸುತ್ತಿದ್ದ. ಇದೀಗ ಬಿಎಸ್‍ವೈ ರಾಜೀನಾಮೆ ಬಳಿಕ ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿಯವರ ಕಚೇರಿಯಲ್ಲಿ ಸಹಾಯಕನಾಗಿ ಸೇರ್ಪಡೆಯಾಗಿದ್ದ. ಸಿಎಂ ಆಪ್ತ ಸಹಾಯಕನಾದರೂ ಬಿಎಸ್‍ವೈ ಮನೆಯಲ್ಲೇ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

    ಉಮೇಶ್ ಮೊದಲು ಆಯನೂರು ಮಂಜುನಾಥ್ ಅವರಿಗೆ ಪಿಎ ಆಗಿದ್ದ. ಆಯನೂರು ಎಂಪಿ ಆದ ಮೇಲೆ ಬಿಎಸ್‍ವೈ ಜೊತೆ ಇರಲು ಬಿಟ್ಟರು. ಆಗಿನಿಂದ ಯಡಿಯೂರಪ್ಪನವರ ಕುಟುಂಬದ ಜತೆ ಆಪ್ತತೆ ಬೆಳೆಯಿತು. ಯಡಿಯೂರಪ್ಪನವರು ವಿಧಾನಸಭೆ ವಿಪಕ್ಷ ನಾಯಕರಾದಾಗಿಂದ ಉಮೇಶ್ ಜೊತೆಗಿದ್ದಾನೆ. ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ಮಾಜಿ ಸಿಎಂ ಎಸ್.ಎಂ ಕೃಷ್ಣ

    ವರ್ಗಾವಣೆ, ಟೆಂಡರ್ ಡೀಲ್‍ಗಳಲ್ಲಿ ಶಾಮೀಲು
    ಇದೀಗ ಶಿವಮೊಗ್ಗ, ಬೆಂಗಳೂರಿನಲ್ಲಿ ನೂರಾರು ಕೋಟಿ ರೂ. ಆಸ್ತಿ ಮಾಡಿರುವ ಆರೋಪ ಕೇಳಿಬಂದಿದೆ. ಉಮೇಶ್ ವಿಜಯನಗರದಲ್ಲಿ ಒಂದು ಭವ್ಯ ಮನೆಯ ನಿರ್ಮಾಣ ಮಾಡುತ್ತಿದ್ದಾನೆ. 60*120 ವಿಸ್ತೀರ್ಣದಲ್ಲಿ ಮನೆ ನಿರ್ಮಾಣ ಮಾಡಲಾಗುತ್ತಿದೆ. ಹಲವು ವರ್ಗಾವಣೆಗಳು, ಟೆಂಡರ್ ಡೀಲ್ ಗಳಲ್ಲಿ ಶಾಮೀಲಾಗಿರುವ ಆರೋಪ ಕೇಳಿ ಬಂದಿದೆ.

    ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರಗೆ ಉಮೇಶ್ ಪಿಎ ಆಗಿದ್ದ. ತನ್ನೊಂದಿಗೂ ಅರವಿಂದ್ ಎಂಬುವವನನ್ನು ಪಿಎಯಾಗಿ ಇಟ್ಟುಕೊಂಡಿದ್ದ. ಶಿವಮೊಗ್ಗದ ಡೀಲ್ ಗಳನ್ನು ಅರವಿಂದ್ ನೋಡಿಕೊಳ್ಳುತ್ತಿದ್ದಾನೆ ಎನ್ನಲಾಗಿದೆ. ಅರವಿಂದ್ ಹಾಗೂ ಇನ್ನೂ ಇಬ್ಬರ ಜೊತೆ ಸೇರಿ ಡೀಲ್ ವ್ಯವಹಾರ ಮಾಡುತ್ತಿದ್ದಾನೆ ಎನ್ನುವುದು ಈಗ ಬಂದಿರುವ ಆರೋಪ. ಇದನ್ನೂ ಓದಿ: 2023ರಲ್ಲೂ ಬೊಮ್ಮಾಯಿ ಸಿಎಂ ಆಗಿ ದಸರಾ ಉದ್ಘಾಟಿಸಲಿದ್ದಾರೆ: ಪ್ರತಾಪ್ ಸಿಂಹ

    ಆ ಇಬ್ಬರ ಪೈಕಿ ಒಬ್ಬ ಬಿ.ಎಸ್.ಯಡಿಯೂರಪ್ಪನವರಿಗೆ ಗನ್ ಮ್ಯಾನ್ ಆಗಿದ್ದವ. ಮತ್ತೊಬ್ಬ ವಿಧಾನಸೌಧದಲ್ಲಿ ಈಗ ಗುತ್ತಿಗೆ ನೌಕರ. ವರ್ಗಾವಣೆ, ಟೆಂಡರ್ ಡೀಲ್ ಗೆ ಇಳಿದ ಮೇಲೆ ರಹಸ್ಯ ನಡೆ ಅನುಸರಿಸುತ್ತಿದ್ದ. ತನ್ನ ಗುಪ್ತ ವ್ಯವಹಾರಗಳ ಬಗ್ಗೆ ಉಮೇಶ್ ರಹಸ್ಯ ಕಾಪಾಡುತ್ತಿದ್ದ. ಉಮೇಶ್ ಬಿ.ಎಸ್.ಯಡಿಯೂರಪ್ಪನವರಿಗೆ ಪಿಎ ಆಗಿದ್ದಾಗ ಸರ್ಕಾರಿ ಕಾರಲ್ಲೇ ಓಡಾಡುತ್ತಿದ್ದ, ಡೀಲ್ ನಡೆಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

  • ಭ್ರಷ್ಟಾಚಾರಿಗಳ ಪರ ಸಿಎಂ ನಿಂತಿದ್ದಾರೆ: ಎಎಪಿ ಆರೋಪ

    ಭ್ರಷ್ಟಾಚಾರಿಗಳ ಪರ ಸಿಎಂ ನಿಂತಿದ್ದಾರೆ: ಎಎಪಿ ಆರೋಪ

    ಬೆಂಗಳೂರು: ರಾಜ್ಯದ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ರವರ ಆಪ್ತ ಸಹಾಯಕನನ್ನು ಕೋಟ್ಯಾಂತರ ರೂಪಾಯಿಗಳ ಆರ್ಥಿಕ ಅಪರಾಧದಲ್ಲಿ ಬಂಧಿಸಿ ನಂತರ ಮುಖ್ಯಮಂತ್ರಿಗಳ ಒತ್ತಡದಿಂದ ಆರೋಪಿಯನ್ನು ಗೃಹ ಇಲಾಖೆಯ ಬಿಡುಗಡೆ ಮಾಡಿದೆ ಎಂದು ಆಮ್ ಆದ್ಮಿ ಪಕ್ಷ ಸಿಸಿಬಿ ಕಚೇರಿ ಎದುರು ಪ್ರತಿಭಟನೆ ಮಾಡಿದೆ.

    ಮುಖ್ಯಮಂತ್ರಿಗಳು ಹಾಗೂ ಪ್ರಭಾವಿ ಮಂತ್ರಿಗಳು ತಮ್ಮ ಸ್ವೇಚ್ಛಾಚಾರಕ್ಕೆ ಗೃಹ ಇಲಾಖೆಯನ್ನು ದುರ್ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಸಿಸಿಬಿ ಎದುರು ನಡೆಸಿದ ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಯಿತು.

    ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಅವರು ಮಾತನಾಡಿ, ರಾಜ್ಯದಲ್ಲಿ ಜನಸಾಮಾನ್ಯರಿಗೊಂದು ನ್ಯಾಯ ಅಧಿಕಾರಸ್ಥರಿಗೆ ಒಂದು ನ್ಯಾಯ. ಭ್ರಷ್ಟರನ್ನು ಬಂಧಿಸಬೇಕಾದ ಪೊಲೀಸ್ ಇಲಾಖೆಯನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡು ಸಾಂವಿಧಾನಿಕವಾಗಿ ಪ್ರತಿಭಟನೆ ಮಾಡುವ ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದು ಖಂಡನೀಯ ಎಂದು ಕಿಡಿಕಾರಿದರು.

    ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದ ಪಕ್ಷದ ಹಿಂದುಳಿದ ವರ್ಗಗಳ ಅಧ್ಯಕ್ಷ ರಾಜಶೇಖರ್ ದೊಡ್ಡಣ್ಣ ಅವರು ಮಾತನಾಡಿ, ಆರೋಪಿ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಮರು ಬಂಧನ ಆಗಲೇಬೇಕು, ಇದರ ಜೊತೆಗೆ ಮುಖ್ಯಮಂತ್ರಿಗಳ ಮಗ ವಿಜಯೇಂದ್ರರವರ ವಿಚಾರಣೆಯು ಸಹ ಮಾಡಬೇಕು. ನಾವು ಶಾಂತಿಯುತವಾದ ಪ್ರತಿಭಟನೆಯ ಮೂಲಕ ಅಗ್ರಹಿಸಿದರೆ ರಾಜ್ಯ ಸರ್ಕಾರ ಸರ್ವಾಧಿಕಾರಿ ನೀತಿಯನ್ನು ಅನುಸರಿಸಿ ನಾಚಿಕೆ ಬಿಟ್ಟು ಪ್ರತಿಭಟನಾಕಾರರನ್ನು ಬಂಧಿಸಿದೆ ಎಂದು ಆರೋಪಿಸಿದರು. ಇದನ್ನೂ ಓದಿ : ಸಚಿವ ರಾಮುಲು ಪಿಎ ರಾಜಣ್ಣ ಅರೆಸ್ಟ್

    ಆದಾಯ ತೆರಿಗೆ ಇಲಾಖೆ ಜಾರಿ ನಿರ್ದೇಶನಾಲಯಗಳ ಮೂಲಕವೂ ಸಹ ಪ್ರಭಾವಿಗಳ ಅಕ್ರಮಗಳು ಹೊರಬರಬೇಕಿದೆ. ಈ ರೀತಿಯ ಬೃಹತ್ ಹಗರಣವನ್ನು ಮುಚ್ಚಿಹಾಕಲು ಪ್ರಭಾವಿಗಳು ಯತ್ನಿಸುತ್ತಿದ್ದಾರೆ. ಈ ಹಗರಣವದ ನಿಷ್ಪಕ್ಷಪಾತವಾದ ತನಿಖೆಯಾಗಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಘಟಕದ ಅಧ್ಯಕ್ಷ ಬಿ.ಟಿ ನಾಗಣ್ಣ ಆಗ್ರಹಿಸಿದರು.

    ಬೆಂಗಳೂರು ನಗರದ ಮೈಸೂರು ರಸ್ತೆಯಲ್ಲಿ ಇರುವ ಸಿಸಿಬಿ (ಕೇಂದ್ರ ಅಪರಾಧ ದಳ) ಕಚೇರಿಯ ಎದುರು ನಡೆದ ಈ ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಮುಖ್ಯ ವಕ್ತಾರ ಶರತ್ ಖಾದ್ರಿ , ಉಷಾ ಮೋಹನ್, ಪ್ರಕಾಶ್ ನಾಗರಾಜ್, ಶಿಲ್ಪ ಬಿ, ಗೋಪಿನಾಥ್ ಮೊದಲಾದ ಮುಖಂಡರ ಜೊತೆಗೆ ನೂರಾರು ಮಂದಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು. ಪ್ರತಿಭಟನಾಕಾರರನ್ನು ಈ ಸಂದರ್ಭದಲ್ಲಿ ಬಂಧಿಸಲಾಯಿತು.

  • ಸಿಎಂ ಪುತ್ರನ ಹೆಸರಲ್ಲಿ ರಾಮುಲು PA ಡೀಲ್..? – 3 ಆಡಿಯೋದಲ್ಲಿ 5 ಕೋಟಿಗೆ ಡಿಮ್ಯಾಂಡ್

    ಸಿಎಂ ಪುತ್ರನ ಹೆಸರಲ್ಲಿ ರಾಮುಲು PA ಡೀಲ್..? – 3 ಆಡಿಯೋದಲ್ಲಿ 5 ಕೋಟಿಗೆ ಡಿಮ್ಯಾಂಡ್

    – ಕೋಟಿ ಡೀಲ್‍ಗೆ ನೂರು ರೂಪಾಯಿ ಕೋಡ್‍ವರ್ಡ್
    – ಪ್ರಭಾವಿಗಳ ಒತ್ತಡಕ್ಕೆ ಮಣಿದ್ರಾ ಸಿಸಿಬಿ ಪೊಲೀಸರು..?
    – ನಂಗೆ ಗೊತ್ತಿಲ್ಲದೆ ಅರೆಸ್ಟ್ ಮಾಡಿದ್ದು ಸರೀನಾ ಅಂದ್ರು ರಾಮುಲು..?

    ಬೆಂಗಳೂರು: ಸಿಎಂ ಪುತ್ರ ವಿಜಯೇಂದ್ರ ಹಾಗೂ ಮೂವರು ಸಚಿವರ ಹೆಸರೇಳಿಕೊಂಡು ಗುತ್ತಿಗೆ, ವರ್ಗಾವಣೆ, ಕೆಲಸದ ಆಮಿಷವೊಡ್ಡಿ ಕೋಟಿ ಕೋಟಿ ದೋಖಾ ಮಾಡಿದರೂ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಆಪ್ತ ಸಹಾಯಕ ಬಚಾವ್ ಆಗಿದ್ದಾರೆ.

    ನೀರಾವರಿ ಇಲಾಖೆ ಸಬ್ ಕಾಂಟ್ರಾಕ್ಟ್ ನೀಡೋ ವಿಚಾರದಲ್ಲಿ ಮೂವರು ಗುತ್ತಿಗೆದಾರರೊಂದಿಗೆ ಸಚಿವ ಶ್ರೀರಾಮುಲು ಪಿಎ ರಾಜಣ್ಣ ಮಾತನಾಡಿದ್ದಾರೆ ಎನ್ನಲಾಗಿದ್ದು, ಅದರಲ್ಲಿ ಸಿಎಂ ಪುತ್ರ ವಿಜಯೇಂದ್ರ ಹೆಸರನ್ನು ಪ್ರಸ್ತಾಪಿಸಿದ್ದಾರೆ ಅಂತ ಗೊತ್ತಾಗಿದೆ. 3 ಆಡಿಯೋದಲ್ಲಿ ಸುಮಾರು 5 ಕೋಟಿವರೆಗೆ ಪ್ರಸ್ತಾಪಿಸಿದ್ದಾರೆ. ಡೀಲ್ ಓಕೆಯಾದ್ರೆ ವಿಜಯೇಂದ್ರ ಹತ್ತಿರ ಮಾತನಾಡಿ ಸಹಿ ಹಾಕಿಸಿಕೊಡೋದಾಗಿಯೂ ರಾಮುಲು ಪಿಎ ಆಶ್ವಾಸನೆ ಕೊಟ್ಟಿದ್ದಾರೆ ಅಂತ ಹೇಳಲಾಗಿದೆ.

    ಸಿಎಂ ಪುತ್ರ ವಿಜಯೇಂದ್ರ ದೂರು ಕೊಟ್ಟಿದ್ಯಾಕೆ…?:
    * ಆಡಿಯೋ 1 – ಗುತ್ತಿಗೆದಾರನ ಬಳಿ 1 ಕೋಟಿ ಹಣಕ್ಕೆ ಬೇಡಿಕೆ!
    (1 ಕೋಟಿಗೆ 100 ರೂ. ಅಂತ ಕೋಡ್ ವರ್ಡ್)
    * ಆಡಿಯೋ 2 – ಗುತ್ತಿಗೆದಾರನ ಬಳಿ 3 ಕೋಟಿ ಹಣಕ್ಕೆ ಡಿಮ್ಯಾಂಡ್!
    (3 ಕೋಟಿಗೆ 300 ರೂ. ಅಂತ ಕೋಡ್ ವರ್ಡ್)
    * ಆಡಿಯೋ 3 – 75 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ!
    (75 ಲಕ್ಷಕ್ಕೆ 75 ರೂಪಾಯಿ ಅಂತ ಕೋಡ್ ವರ್ಡ್…..)

    ಪೊಲೀಸ್ ಫ್ರೆಶರ್: ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಕೇಸಲ್ಲಿ ಸಿಸಿಬಿ ಪೊಲೀಸರು ಒತ್ತಡಕ್ಕೆ ಒಳಗಾದ್ರಾ ಅನ್ನೋ ಸಂಶಯ ವ್ಯಕ್ತವಾಗಿದೆ. ಸಿಎಂ ಪುತ್ರ ವಿಜಯೇಂದ್ರ ದೂರು ಕೊಟ್ಟರೂ, ಕೇವಲ ವಿಚಾರಣೆಯನ್ನಷ್ಟೇ ನಡೆಸಿ, ಬಂಧನ ಮಾಡದೆ ರಾಮುಲು ಆಪ್ತನನ್ನು ಬಿಟ್ಟು ಕಳುಹಿಸಿದ್ದಾರೆ. ಬೆಳಗ್ಗೆಯಿಂದ ಪೊಲೀಸರ ಮೇಲೆ ರಾಮುಲು ಒತ್ತಡ ಹೇರಿದ್ದರಿಂದ ಯಾವುದೇ ಎಫ್‍ಐಆರ್ ಹಾಕದೆ ಧ್ವನಿ ಮಾದರಿ ಸಂಗ್ರಹ, ವಾಟ್ಸಪ್ ಚಾಟ್, ಡೀಲ್ ಆಡಿಯೋವನ್ನು ಪಡೆದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟು ಕಳುಹಿಸಿದ್ದಾರೆ. ಸಾಮಾನ್ಯರ ಮೇಲೆ ದೂರು ಬಂದಿದ್ದರೆ, ಸಿಸಿಬಿ ಪೊಲೀಸರು ಹೀಗೆಯೇ ವರ್ತಿಸುತ್ತಿದ್ದಾರಾ..? ಪ್ರಭಾವಿಗಳ ಕೇಸ್ ಅಂತ ಪೊಲೀಸರು ಬೇಕಾಬಿಟ್ಟಿಯಾಗಿ ವರ್ತಿಸಿದ್ರಾ ಅನ್ನೋ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ವಿಜಯೇಂದ್ರನೇ ಡಿ ಪ್ಯಾಕ್ಟರ್ ಸಿಎಂ, ಯಡಿಯೂರಪ್ಪ ಡಿ ಜೀರೋ ಸಿಎಂ: ಸಿದ್ದರಾಮಯ್ಯ

    ಸಿಸಿಬಿ ಪೊಲೀಸರು ಎಡವಿದ್ದೆಲ್ಲಿ….?
    ಸೈಬರ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ವೇಳೆ ಎಡವಟ್ಟು ಮಾಡಿದ್ದಾರೆ. ರಾಮುಲು ಆಪ್ತನ ವಿರುದ್ಧ ಸಿಸಿಬಿ ಹಾಕಿರೋದು 2 ಸೆಕ್ಷನ್ ಅಷ್ಟೇ. ಐಟಿ ಆಕ್ಟ್ ಸೆಕ್ಷನ್ 66 ಮತ್ತು ಐಪಿಸಿ ಸೆಕ್ಷನ್ 420 ಅಡಿ ಎಫ್‍ಐಆರ್ ದಾಖಲಿಸಲಾಗಿದೆ. ಐಟಿ ಆಕ್ಟ್ 66- ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಬಿಡುಗಡೆ ಮಾಡಲಾಗಿದೆ. ಐಪಿಸಿ 420- ವಂಚನೆ ಆರೋಪ(ವಿಜಯೇಂದ್ರ ತನಗೆ ಆಗಿರೋ ವಂಚನೆ ಉಲ್ಲೇಖಿಸಿಲ್ಲ). ಎಫ್‍ಐಆರ್ ಪ್ರಾಥಮಿಕ ಸಾರಂಶದಲ್ಲಿ ಹೆಸರಷ್ಟೇ ಬಳಕೆ ಮಾಡಲಾಗಿದೆ.

    ಇತ್ತ ತಮ್ಮ ಆಪ್ತ ಸಹಾಯಕ ರಾಜಣ್ಣ ಕೋಟಿ ಕೋಟಿ ಡೀಲ್ ಮಾಡಿ ವಂಚನೆ ಎಸಗಿದ್ದಾನೆ ಅನ್ನೋ ಆರೋಪಕ್ಕಿಂತ ವಿಜಯೇಂದ್ರ ತಮಗೆ ನೆಪಮಾತ್ರಕ್ಕೂ ಮಾಹಿತಿ ಕೊಟ್ಟಿಲ್ಲ ಅಂತ ಸಚಿವ ಶ್ರೀರಾಮುಲು ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ್ದಾರೆ. ಆಪ್ತ ರಾಜಣ್ಣನನ್ನು ಸಿಸಿಬಿಯವರು ಎತ್ತಾಕಿಕೊಂಡು ಹೋದ್ರು ಎಂಬ ಸುದ್ದಿ ಕೇಳಿ, ಆಪ್ತರ ಬಳಿ ವಿಜಯೇಂದ್ರ ಬಗ್ಗೆ ರಾಮುಲು ಕೂಗಾಡಿದ್ರಂತೆ. ನನಗೆ ಹೇಳಿದ್ರೆ ಆಗ್ತಿರಲಿಲ್ವಾ..? ನಾನು ಸರಿ ಮಾಡ್ತಿರಲಿಲ್ವಾ..? ನನಗೆ ಕೆಟ್ಟ ಹೆಸರು ತರಬೇಕು ಅಂತಾನೆ ಹೀಗೆ ಮಾಡಿದಂತಿದೆ. ನಾನು ವಿಜಯೇಂದ್ರರನ್ನು ಭೇಟಿ ಮಾಡಲ್ಲ, ಅದೇನಾಗುತ್ತೋ ಆಗ್ಲಿ ಅಂತಾ ಗರಂ ಆಗಿದ್ರು ಎನ್ನಲಾಗಿದೆ.

    ಇಡೀ ರಾತ್ರಿ ಸಚಿವ ರಾಮುಲು ನಿದ್ದೆ ಕೂಡ ಮಾಡಿರಲಿಲ್ಲ ಅಂತಾ ತಿಳಿದುಬಂದಿದೆ. ಬೆಳಗ್ಗೆ ರಾಮುಲು ಆಡಿದ ಮಾತುಗಳಲ್ಲೂ ಇದೇ ಧ್ವನಿಸ್ತಾ ಇತ್ತು. ತಪ್ಪು ಯಾರು ಮಾಡಿದ್ರು ತಪ್ಪು.. ತನಿಖೆ ನಡೀತಿದೆ ಅಂದ್ರು. ಹಿರಿಯ ಮಂತ್ರಿಯಾಗಿ ತಮಗೆ ಈ ವಿಚಾರದಲ್ಲಿ ಅವಮಾನವಾಗಿದೆ ಎಂಬುದನ್ನು ಪರೋಕ್ಷವಾಗಿ ಹೇಳಿದ್ರು. ಇದಾದ ಕೂಡಲೇ ಸಿಎಂ ಭೇಟಿ ಮಾಡಿ ರಾಜಣ್ಣನ ಬಿಡುಗಡೆಗೆ ಒತ್ತಡ ಹೇರಿದ್ರು. ಕೆಲವೇ ಕ್ಷಣಗಳಲ್ಲಿ ಆರೋಪಿ ರಾಜಣ್ಣನನ್ನು ಸಿಸಿಬಿ ಬಿಟ್ಟು ಕಳಿಸಿದ್ದು ಕಾಕತಾಳಿಯ.

    ಟ್ವೀಟ್ ಸಮರ: ಸಿಎಂ ಪುತ್ರ ವಿಜಯೇಂದ್ರ ಹಾಗೂ ರಾಮುಲು ಆಪ್ತ ಸಹಾಯಕ ರಾಜಣ್ಣ ಮಧ್ಯೆ ಟ್ವೀಟ್ ಸಮರ ನಡೆದಿದೆ. ರಾಮುಲು ಪಿಎ ವಿರುದ್ಧ ದೂರು ನೀಡಿದ್ದನ್ನು ವಿಜಯೇಂದ್ರ ಸಮರ್ಥಿಸಿಕೊಂಡಿದ್ದಾರೆ. ಹಾಗೆಯೇ ರಾಮುಲು ಆಪ್ತ ಸಹಾಯಕ, ಆರೋಪಿ ರಾಜಣ್ಣ ನಾನು ತಪ್ಪೇ ಮಾಡಿಲ್ಲ. ಆಡಿಯೋದಲ್ಲಿರುವ ಧ್ವನಿ ನನ್ನದಲ್ಲ ಎಂದಿದ್ದಾರೆ. ವಿಜಯೇಂದ್ರ ಕರೆದು ಮಾತನಾಡಬಹುದಿತ್ತು ಅಂತಲೂ ಬೇಸರಿಸಿಕೊಂಡಿದ್ದಾರೆ. ಅಂದ ಹಾಗೇ ಬಳ್ಳಾರಿ ಮೂಲದ ರಾಜಣ್ಣ ಕಳೆದ 20 ವರ್ಷದಿಂದ ರಾಮುಲು-ಜನಾರ್ದನರೆಡ್ಡಿ ಬಲಗೈ ಬಂಟರಾಗಿದ್ದರು.

    ಸಚಿವ ರಾಮುಲು ಪಿಎ ರಾಜಣ್ಣ ವಿರುದ್ಧದ ಡೀಲ್ ಆರೋಪ, ಬಂಧನ ಬಿಡುಗಡೆ ಪ್ರಹಸನ.. ಸಹಜವಾಗಿಯೇ ವಿಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಅವರಂತೂ ಸಿಎಂ ಕುಟುಂಬದ ವಿರುದ್ಧ, ಸಚಿವ ರಾಮುಲು ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತ್ರ, ರಾಮುಲು ಪಿಎ, ವಿಜಯೇಂದ್ರ ಬಗ್ಗೆ ಮಾತನಾಡೋದು ನನ್ನ ಲೆವೆಲ್ ಅಲ್ಲ ಎನ್ನುತ್ತಾ ಜಾರಿಕೊಂಡಿದ್ದಾರೆ. ಇನ್ನೂ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿಕಾಡಿರೋ ಮಾಜಿ ಸಚಿವ ರೇವಣ್ಣ, ಡಿನೋಟಿಫಿಕೇಶನ್ ಮುಖ್ಯಮಂತ್ರಿ ಯಡಿಯೂರಪ್ಪಗೆ ದೇವರೇ ಶಿಕ್ಷೆ ಕೊಡೋ ಕಾಲ ಬರುತ್ತೆ ಅಂತಾ ಶಪಿಸಿದ್ದಾರೆ.

  • ಆಪ್ತ ಅರೆಸ್ಟ್ – ವಿಜಯೇಂದ್ರ ವಿರುದ್ಧ ಶೀರಾಮುಲು ಕೆಂಡಾಮಂಡಲ

    ಆಪ್ತ ಅರೆಸ್ಟ್ – ವಿಜಯೇಂದ್ರ ವಿರುದ್ಧ ಶೀರಾಮುಲು ಕೆಂಡಾಮಂಡಲ

    ಬೆಂಗಳೂರು: ವಿಜಯೇಂದ್ರ ಮೇಲೆ ಸಚಿವ ಶ್ರೀರಾಮುಲು ಕೆಂಡಾಮಂಡಲವಾಗಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ರಾಜಣ್ಣ ತಪ್ಪು ಮಾಡುತ್ತಿದ್ದಾನೆ ಎಂದರೆ ನನ್ನ ಬಳಿ ಹೇಳಬಹುದಿತ್ತು. ನಾನು ಅವನ ಮೇಲೆ ಕ್ರಮ ಕೈಗೊಳ್ಳುತ್ತಿದ್ದೆ. ಅದು ಬಿಟ್ಟು ವಿಜಯೇಂದ್ರ ಏಕಾಏಕಿ ದೂರು ಕೊಟ್ಟಿರುವುದು ಸರಿಯಲ್ಲ. ಇದರಿಂದ ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ ಎಂದು ಸಚಿವ ಶ್ರೀರಾಮುಲು ಅಸಮಾಧಾನ ಹೊರಹಾಕಿದ್ದಾರೆ.

    ಸಿಎಂ ಅವರ ಈ ನಡೆಯಿಂದ ನನ್ನ ಹೆಸರು ಹಾಳಾಗಿದೆ. ನನ್ನ ಹೆಸರು ಹಾಳು ಮಾಡೊದಕ್ಕೆ ಕಾಯ್ತಾ ಇದ್ದರು. ಈಗಾಗಲೇ ಸಾಕಷ್ಟು ಹೆಸರು ಹಾಳು ಮಾಡಿದ್ದಾರೆ. ರಾಜಣ್ಣ ತಪ್ಪು ಮಾಡುತ್ತಿದ್ದಾನೆ ಅಂದ್ರೆ ನನ್ನ ಬಳಿ ಹೇಳಬಹುದಿತ್ತು. ನಾನು ಅವನ ಮೇಲೆ ಕ್ರಮ ಕೈಗೊಳ್ತಿದ್ದೆ. ಅದು ಬಿಟ್ಟು ವಿಜಯೇಂದ್ರ ಏಕಾಏಕಿ ದೂರು ಕೊಟ್ಟಿರುವ ಬಗ್ಗೆ ರಾಮುಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ:ಸಚಿವ ರಾಮುಲು ಪಿಎ ರಾಜಣ್ಣ ಅರೆಸ್ಟ್

    ಈ ಆರೋಪದಿಂದಾಗಿ ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ. ಇದರಲ್ಲಿ ನನ್ನ ತೇಜೋವಧೆಗೆ ಇಳಿದಿದ್ದಾರೆ ಅನಿಸುತ್ತಿದೆ. ನನ್ನ ಆಪ್ತ ನನ್ನ ಆಪ್ತ ಅಂತಾ ಬಹಿರಂಗವಾಗಿ ನನ್ನ ಹೆಸರು ಡ್ಯಾಮೇಜ್ ಆಗುತ್ತಿದೆ. ನಾನು ವಿಜಯೇಂದ್ರ ಮತ್ತು ಸಿಎಂ ಜೊತೆ ನಾನು ಈ ಕುರಿತು ಮಾತನಾಡುತ್ತೇನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಈ ಕುರಿತು ಇನ್ನೇನು ಮಾತನಾಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಶ್ರೀರಾಮುಲು ಆಪ್ತ ಬಂಧನ – ವಿಜಯೇಂದ್ರ ಮೊದಲ ಪ್ರತಿಕ್ರಿಯೆ

  • ಸಚಿವ ರಾಮುಲು ಪಿಎ ರಾಜಣ್ಣ ಅರೆಸ್ಟ್

    ಸಚಿವ ರಾಮುಲು ಪಿಎ ರಾಜಣ್ಣ ಅರೆಸ್ಟ್

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹೆಸರೇಳಿಕೊಂಡು ಹಣ ವಸೂಲಿ ಆರೋಪದಲ್ಲಿ ಸಚಿವ ಶ್ರೀರಾಮುಲು ಪಿಎ ಅರೆಸ್ಟ್ ಆಗಿದ್ದಾರೆ.

    ಸ್ವತಃ ವಿಜಯೇಂದ್ರ ದೂರು ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಶ್ರೀರಾಮುಲು ಮನೆಯಲ್ಲೇ ಆರೋಪಿ ರಾಜಣ್ಣನನ್ನ ವಶಕ್ಕೆ ಪಡೆದಿದ್ದಾರೆ. ಕೆಲಸ ಕೊಡಿಸ್ತೀನಿ, ವರ್ಗಾವಣೆ ಮಾಡಿಸ್ತೀನಿ ಅಂತ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರೋ ಆರೋಪ ಕೇಳಿ ಬಂದಿದೆ.

    ರಾಜಣ್ಣ 8 ವರ್ಷದಿಂದ ರಾಮುಲು ಬಳಿ ಕೆಲಸ ಮಾಡ್ತಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 20ಕ್ಕೂ ಹೆಚ್ಚು ಆಡಿಯೋ ವಶಕ್ಕೆ ಪಡೆದಿದ್ದಾರೆ. ಪ್ರತಿಯೊಂದು ಆಡಿಯೋದಲ್ಲಿ ಸಿಎಂ ಹೆಸರು ಉಲ್ಲೇಖ ಮಾಡಿರೋದು ಪತ್ತೆಯಾಗಿದೆ. ನಿನ್ನೆಯಿಂದ ಆರೋಪಿಯನ್ನು ಟ್ರೇಸ್ ಮಾಡ್ತಿದ್ದ ಪೊಲೀಸರು ಇಂದು ಬಂಧಿಸಿದ್ದಾರೆ.

    ಇತ್ತ ರಾಮುಲು ಬೆಂಬಲಿಗರು ಕಿಡ್ನಾಪ್ ಅಂತ ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಇದನ್ನೂ ಓದಿ: ಮಗುವಿನ ಗಂಟಲಲ್ಲಿ ಸಿಲುಕಿದ್ದ ಡಬ್ಬಿ ಹೊರತೆಗೆದ ವೈದ್ಯರು

  • ತೇಜಸ್ವಿ ಸೂರ್ಯ ಆಪ್ತ ಸಹಾಯಕನ ಹೆಸರಿನಲ್ಲಿ ವಂಚನೆ- ಎಫ್‍ಐಆರ್ ದಾಖಲು

    ತೇಜಸ್ವಿ ಸೂರ್ಯ ಆಪ್ತ ಸಹಾಯಕನ ಹೆಸರಿನಲ್ಲಿ ವಂಚನೆ- ಎಫ್‍ಐಆರ್ ದಾಖಲು

    – ಬೆಡ್, ವೆಂಟಿಲೇಟರ್, ರೆಮ್‍ಡಿಸಿವಿರ್ ಕೊಡಿಸುವುದಾಗಿ ಹಣ ಪಡೆದು ವಂಚನೆ

    ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಆಪ್ತ ಸಹಾಯಕನ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಜಯನಗರ ಠಾಣಾ ವ್ಯಾಪ್ತಿಯ ಕೆಲ ಆಸ್ಪತ್ರೆ ಬಳಿ ಕೊರೊನಾ ರೋಗಿಗಳ ಪೋಷಕರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಆರೋಪಿ ಶಿವಲಿಂಗಯ್ಯ, ನಾನು ಸಂಸದ ತೇಜಸ್ವಿ ಸೂರ್ಯ ಪಿಎ ಎಂದು ಹೇಳಿಕೊಳ್ಳುತ್ತಿದ್ದ. ನಂತರ ಕೊರೊನಾ ಸಂಬಂಧಿಸಿದ ಚಿಕಿತ್ಸೆ, ಬೆಡ್ ವ್ಯವಸ್ಥೆ, ವೆಂಟಿಲೇಟರ್, ರೆಮ್‍ಡಿಸಿವಿರ್ ಬೇಕಾದರೆ ನಾನು ಕೊಡಿಸುತ್ತೇನೆ ಎಂದು ಹೇಳಿ ಹಣ ಪಡೆದು ವಂಚನೆ ಮಾಡುತ್ತಿದ್ದ.

    ಇದೇ ರೀತಿ ವ್ಯಕ್ತಿಯೊಬ್ಬರ ಬಳಿ, ಹತ್ತು ಸಾವಿರ ಹಣ ನೀಡಿದರೆ ಐದು ರೆಮ್‍ಡಿಸಿವಿರ್ ಇಂಜೆಕ್ಷನ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ. ಈ ಸಂಬಂಧ ತೇಜಸ್ವಿ ಸೂರ್ಯರ ಕಚೇರಿ ಬಳಿ ತೆರಳಿ ವಿಚಾರಿಸಿದಾಗ ಆ ವ್ಯಕ್ತಿ ನಕಲಿ ಅನ್ನೋದು ಪತ್ತೆಯಾಗಿತ್ತು. ಅವರ ಬಳಿ ಫೋನ್ ನಂಬರ್ ಪಡೆದು ಖುದ್ದು ತೇಜಸ್ವಿ ಸೂರ್ಯ ಪಿಎ ಭಾನುಪ್ರಕಾಶ್ ಫೋನ್ ಮಾಡಿದಾಗ ನಾನೇ ಅವರ ಪಿಎ ಎಂದು ಶಿವಲಿಂಗಯ್ಯ ಪರಿಚಯ ಮಾಡಿಕೊಂಡಿದ್ದ.

    ನಂತರ ಅಸಲಿ ವಿಚಾರ ತಿಳಿದ ಆರೋಪಿ ಶಿವಲಿಂಗಯ್ಯ ಫೋನ್ ಸ್ವೀಚ್ ಆಫ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾನೆ. ಈ ಸಂಬಂಧ ಜಯನಗರ ಠಾಣೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.

  • ಲಂಚಕ್ಕೆ ಬೇಡಿಕೆ ಆರೋಪ – ಆರ್ ಅಶೋಕ್ ಪಿಎ ವಿರುದ್ಧ ಎಫ್‍ಐಆರ್

    ಲಂಚಕ್ಕೆ ಬೇಡಿಕೆ ಆರೋಪ – ಆರ್ ಅಶೋಕ್ ಪಿಎ ವಿರುದ್ಧ ಎಫ್‍ಐಆರ್

    – ಕೇಸ್ ದಾಖಲಿಸಿ ತನಿಖೆಗೆ ಸೂಚಿಸಿದ ನ್ಯಾಯಾಲಯ

    ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಸಬ್ ರಿಜಿಸ್ಟ್ರಾರ್ ಚೆಲುವರಾಜು ಅವರಿಂದ ಲಂಚ ಕೇಳಿದ ಕಂದಾಯ ಸಚಿವ ಆರ್ ಅಶೋಕ್ ಪಿ.ಎ ಗಂಗಾಧರ್ ವಿರುದ್ಧ ಶೃಂಗೇರಿ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ಜನವರಿ 20ರಂದು ವಾಟ್ಸಪ್ ಮೂಲಕ ಫೋನ್ ಮಾಡಿದ್ದ ಅಶೋಕ್ ಪಿಎ ಗಂಗಾಧರ್, 24ರಂದು ಸಚಿವರು ಶೃಂಗೇರಿಗೆ ಬರುತ್ತಾರೆ ಭೇಟಿಯಾಗಿ ಎಂದು ಹೇಳಿದ್ದರು. 24ರಂದು ಸಂಜೆ 6 ಗಂಟೆಗೆ ಸಬ್ ರಿಜಿಸ್ಟ್ರಾರ್ ಚೆಲುವರಾಜು ಶೃಂಗೇರಿಯ ಆದಿಚುಂಚನಗಿರಿ ಸಮುದಾಯ ಭವನಕ್ಕೆ ಬಂದಿದ್ದರು. ಸಚಿವರು ಸಂಜೆ 7.30ಕ್ಕೆ ಶೃಂಗೇರಿಗೆ ಭೇಟಿ ನೀಡಿದ್ದರು.

    ಆಗ ಪಿ.ಎ. ಗಂಗಾಧರ್ ಅಲ್ಲೇ ಇದ್ದ ಒಂದು ರೂಮಿನಲ್ಲಿ ಭೇಟಿಯಾಗಿ ಏನಿದೆ ಕೊಡಿ ಎಂದಿದ್ದರು. ಇದೇ ವೇಳೆ ಚೆಲುವರಾಜು, ನಾನು ಯಾರಿಗೂ ಹಣ ಕೊಡುವುದಿಲ್ಲ. ಯಾರಿಂದಲೂ ಹಣ ಪಡೆಯುವುದಿಲ್ಲ ಎಂದಿದ್ದರು. ಅದಕ್ಕೆ ಅವರು ಆಯ್ತು ಹೋಗಿ ಎಂದಿದ್ದರು. ಕೈಯಲ್ಲಿದ್ದ ಪೇಪರ್ ನೋಡಿ ಏನದು ಎಂದು ಕೇಳಿದ್ದರು. ನಾನು ದೂರಿನ ಪ್ರತಿ. ಕರ್ನಾಟಕ ಸೆಕ್ರೆಟರಿಗೆ ಕಳಿಸಿದ್ದೇನೆ. ಸಚಿವರಿಗೂ ಕೊಡಿ ಎಂದು ಹೇಳಿದೆ. ಅವರು ನೀವೇ ಕೊಡಿ ಎಂದು ಹೋದರು.

    ಸಚಿವರ ಪಿ.ಎ. ಗಂಗಾಧರ್ ರಾತ್ರಿ ಮತ್ತೆ ಫೋನ್ ಮಾಡಿದ್ದರು. ನಾನು ನೋಡಿರಲಿಲ್ಲ, ನಾನು ಬೆಳಗ್ಗೆ ಫೋನ್ ಮಾಡಿದ್ದಕ್ಕೆ ಏನೋ… ಫೈಲ್ ಕೊಡುತ್ತೇನೆ ಎಂದು ಹೇಳಿ ಕೊಡಲಿಲ್ಲ ಎಂದರು. ನಾನು ಯಾವ ಫೈಲ್ ಇಲ್ಲ. ನೀವು ಲಂಚ ಕೇಳಿದ್ರಿ ನಾನು ಇಲ್ಲ ಎಂದು ಹೇಳಿದ್ದೆ ಎಂದು ಚೆಲುವರಾಜು ಹೇಳಿದ್ದರಂತೆ.

    ಸರ್ಕಾರಿ ಅಧಿಕಾರಿಯಿಂದ ಲಂಚ ಕೇಳಿದ ಬಗ್ಗೆ ಹಾಗೂ ನಿನ್ನ ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆಂದು ಶೃಂಗೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸರ್ಕಾರಿ ಅಧಿಕಾರಿಯಾಗಿರುವುದರಿಂದ ಪೊಲೀಸರು ಕೇಸ್ ದಾಖಲಿಸಿ ತನಿಖೆ ನಡೆಸುವಂತೆ ಕೋರಿ ಶೃಂಗೇರಿ ಜೆಎಂಎಫ್‍ಸಿ ನ್ಯಾಯಾಲಯದ ಅನುಮತಿ ಕೋರಿದ್ದರು. ಈ ಬಗ್ಗೆ ಶೃಂಗೇರಿ ನ್ಯಾಯಾಲಯ ಕೂಡ ಕೇಸ್ ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿರೊ ಹಿನ್ನೆಲೆ ಶೃಂಗೇರಿ ಪೊಲೀಸರು ಎಫ್‍ಐಆರ್ ತನಿಖೆ ಕೈಗೊಂಡಿದ್ದಾರೆ.

  • ಪರಂ ಪಿಎ ಆತ್ಮಹತ್ಯೆಗೆ ಟ್ವಿಸ್ಟ್- ರಮೇಶ್ ಮನೆಗೆ ಐಟಿಯವ್ರು ಹೋಗಿರೋ ಸಿಸಿಟಿವಿ ದೃಶ್ಯ ಲಭ್ಯ

    ಪರಂ ಪಿಎ ಆತ್ಮಹತ್ಯೆಗೆ ಟ್ವಿಸ್ಟ್- ರಮೇಶ್ ಮನೆಗೆ ಐಟಿಯವ್ರು ಹೋಗಿರೋ ಸಿಸಿಟಿವಿ ದೃಶ್ಯ ಲಭ್ಯ

    ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಸಾವಿಗೆ ಐಟಿ ಅಧಿಕಾರಿಗಳೇ ಕಾರಣ ಎಂದು ರಮೇಶ್ ಕುಟುಂಬಸ್ಥರು, ಕೈನಾಯಕರು ದೂರಿದ್ದಾರೆ. ಆದರೆ ಐಟಿ ಅಧಿಕಾರಿಗಳು ನಾವು ರಮೇಶ್ ಮನೆ ಮೇಲೆ ಐಟಿ ದಾಳಿ ನಡೆಸಿಲ್ಲ. ಅಲ್ಲದೆ ಯಾವುದೇ ಹೇಳಿಕೆಯನ್ನೂ ಪಡೆದಿಲ್ಲ. ದಾಳಿ ವೇಳೆ ಪರಮೇಶ್ವರ್ ನಿವಾಸದಲ್ಲೇ ಇದ್ದ ರಮೇಶ್ ಹೇಳಿಕೆಯನ್ನ ಪಂಚನಾಮೆಗಾಗಿ ಪಡೆಯಲಾಗಿದೆಯಷ್ಟೇ ಅಂತ ಸ್ಪಷ್ಟಪಡಿಸಿದ್ದಾರೆ. ಆದರೆ ಐಟಿ ಅಧಿಕಾರಿಗಳು, ಉಲ್ಲಾಳದಲ್ಲಿರುವ ರಮೇಶ್ ಮನೆಗೆ ಹೋಗಿ ಬಂದಿರೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಪಬ್ಲಿಕ್ ಟಿವಿಗೆ ಲಭಿಸಿದೆ.

    ಹೌದು. ಕಳೆದ ಮೂರು ದಿನಗಳಿಂದ ಐಟಿ ಅಧಿಕಾರಿಗಳು ಪರಮೇಶ್ವರ್ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದರು. ಶನಿವಾರ ನಸುಕಿನ ಜಾವ 3.30ರ ಸುಮಾರಿಗೆ ಎಲ್ಲಾ ಅಂತ್ಯಗೊಳಿಸಿ ಐಟಿ ಅಧಿಕಾರಿಗಳು ವಾಪಸ್ ಆಗಿದ್ದರು. ಈ ವೇಳೆ ರಮೇಶ್ ಕೂಡ ಪರಮೇಶ್ವರ್ ಜೊತೆಯೇ ಇದ್ದರು. ಐಟಿ ರೇಡ್ ನೋಡಿದ್ದ ರಮೇಶ್ ತುಂಬಾ ಹೆದರಿದ್ದರು. ಇದನ್ನ ತಮ್ಮ ಸಾಹೇಬ್ರು ಪರಮೇಶ್ವರ್ ಬಳಿಯೂ ಹಂಚಿಕೊಂಡಿದ್ದರು. ಆಗ ಪರಮೇಶ್ವರ್, ರಮೇಶ್‍ಗೆ ಧೈರ್ಯ ಹೇಳಿ, ಈಗ ಇಲ್ಲೇ ಮಲಗು ಬೆಳಗ್ಗೆ ಮನೆಗೆ ಹೋಗು ಅಂದಿದ್ದರು. ಇದನ್ನೂ ಓದಿ: ಪರಂ ಪಿಎ ಸೂಸೈಡ್ ಪ್ರಕರಣ – ಇಂದು ರಾಮನಗರದ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

    ಸಾಹೇಬ್ರ ಮಾತಿನಂತೆ ಬೆಳಗ್ಗೆ 6 ಗಂಟೆಗೆ ಹೊರಟ ರಮೇಶ್ ಆತ್ಮಹತ್ಯೆಗೆ ನಿರ್ಧಾರ ಮಾಡಿದಂತಿತ್ತು. ಹೀಗಾಗಿ ತಮ್ಮ ಉಲ್ಲಾಳ ನಿವಾಸಕ್ಕೆ ಬಂದು ಕುಟುಂಬಸ್ಥರ ಜೊತೆ 2 ತಾಸು ಕಳೆದು, ತಿಂಡಿ ತಿಂದು 9 ಗಂಟೆ 7 ನಿಮಿಷಕ್ಕೆ ಸರಿಯಾಗಿ ಮನೆಯಿಂದ ಹೊರಬಂದಿದ್ದರು. ಈ ವೇಳೆ ಮನೆಯವರಿಗೆಲ್ಲ ಟಾಟಾ ಮಾಡಿದ್ದರು. ವಿದಾಯದ ಅರಿವಿಲ್ಲದ ಕುಟುಂಬಸ್ಥರು ರಮೇಶ್ ನನ್ನ ಸಂತೋಷದಿಂದಲೇ ಕಳುಹಿಸಿಕೊಟ್ಟರು. ಅಲ್ಲಿಂದ ರಮೇಶ್ ನೇರವಾಗಿ ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್‍ಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಪರಮೇಶ್ವರ್ ಆಪ್ತ ರಮೇಶ್ ಐಟಿಗೆ ಬೆದರಿದ್ರಾ? ಕೊನೆ ಕ್ಷಣ ಹೇಗಿತ್ತು?

    ಐಟಿ ಅಧಿಕಾರಿಗಳು ನಾವು ರಮೇಶ್ ಮನೆ ಮೇಲೆ ದಾಳಿಯೇ ನಡೆಸಿಲ್ಲ ಎಂದು ಹೇಳಿದ್ದಾರೆ. ಆದರೆ ಅ.10ರಂದು ಮಧ್ಯಾಹ್ನ 1.15ರ ಸುಮಾರಿಗೆ ಐಟಿ ಅಧಿಕಾರಿಗಳು ರಮೇಶ್ ಅವರ ಉಲ್ಲಾಳ ನಿವಾಸಕ್ಕೆ ಬಂದು ಕೆಲವೊಂದು ದಾಖಲೆಗಳನ್ನು ಹೊತ್ತೊಯ್ದಿದ್ದಾರೆ. ಅಲ್ಲದೇ ರಮೇಶ್ ಪಂಚಾನಾಮೆ ಮಾಡಿ ಹವಾಲಾ ಬಗ್ಗೆ, ಮೆಡಿಕಲ್ ಸೀಟ್‍ಗಳು ಎಷ್ಟಕ್ಕೆ ಮಾರಾಟವಾಗಿದೆ ಅಂತೆಲ್ಲಾ ಪ್ರಶ್ನೆ ಮಾಡಿ ಬೆದರಿಸಿದ್ದಾರೆ ಎನ್ನಲಾಗುತ್ತಿದೆ. ಇದನ್ನೆಲ್ಲಾ ನೋಡಿದ ರಮೇಶ್ ಭಯಗೊಂಡಿದ್ದಾರೆ. ಇಂದು ನಮ್ಮನ್ನು ಸಾಕ್ಷಿಯಾಗಿ ಮಾಡಿದ್ದಾರೆ. ಮುಂದಿನ ದಿನ ನನ್ನನ್ನೂ ಆರೋಪಿಯನ್ನಾಗಿ ಮಾಡಬಹುದು. ಇದರಿಂದ ನನ್ನ ಮಾನ ಹೋಗುತ್ತೆ ಅಂತ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಮೇಶ್ ಡೆತ್‍ನೋಟ್‍ ನಲ್ಲಿ ಪರೋಕ್ಷವಾಗಿ ಐಟಿ ಬೆದರಿಕೆಯನ್ನ ಬಿಚ್ಚಿಟ್ಟಿದ್ದಾರೆ. ಹೀಗಾಗಿ ಐಟಿ ಇಲಾಖೆ ಸ್ಪಷ್ಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದನ್ನೂ ಓದಿ: ಪರಮೇಶ್ವರ್ ಪಿಎ ರಮೇಶ್ ವಿಚಾರಣೆ ನಡೆಸಿಲ್ಲ: ಐಟಿ ಸ್ಪಷ್ಟನೆ

    ಈ ನಡುವೆ, ಐಟಿ ಅಧಿಕಾರಿಗಳ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ರಮೇಶ್ ಸಹೋದರ ಸತೀಶ್ ದೂರು ಕೊಟ್ಟಿದ್ದಾರೆ. ಪೊಲೀಸರು ಸಿಆರ್‍ಪಿಸಿ ಸೆಕ್ಷನ್ 174ರ ಅಡಿ ಅಸಹಜ ಸಾವು ಎಂದು ಕೇಸ್ ದಾಖಲಿಸಿಕೊಂಡಿದ್ದಾರೆ.

    https://www.youtube.com/watch?v=U7jgbwAAatQ

  • ಪರಂ ಪಿಎ ಸೂಸೈಡ್ ಪ್ರಕರಣ – ಇಂದು ರಾಮನಗರದ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

    ಪರಂ ಪಿಎ ಸೂಸೈಡ್ ಪ್ರಕರಣ – ಇಂದು ರಾಮನಗರದ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

    ರಾಮನಗರ: ಆದಾಯ ತೆರಿಗೆ ಇಲಾಖೆ(ಐಟಿ) ದಾಳಿಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಅಂತ್ಯಕ್ರಿಯೆ ಇಂದು ಬೆಳಗ್ಗೆ 11 ಗಂಟೆಗೆ ರಾಮನಗರದ ಸ್ವಗ್ರಾಮ ಮೆಳೆಹಳ್ಳಿಯಲ್ಲಿ ನಡೆಯಲಿದೆ.

    ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನ ಸ್ವಗ್ರಾಮಕ್ಕೆ ರವಾನಿಸಲಾಯಿತು. ಮೃತದೇಹ ನೋಡುತ್ತಿದ್ದಂತೆಯೇ ರಮೇಶ್ ಪತ್ನಿ, ತಾಯಿ-ತಂದೆ ಸೇರಿದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

    ರಮೇಶ್ ಮೃತದೇಹವನ್ನ ರಾತ್ರಿ ಮನೆಯ ಮುಂಭಾಗ ಅಂತಿಮ ದರ್ಶನಕ್ಕೆ ಇಡಲಾಗಿತ್ತು. 11 ಗಂಟೆಯ ನಂತರ ಸ್ವಗ್ರಾಮದಲ್ಲಿನ ರಮೇಶ್ ಜಮೀನಿನಲ್ಲಿ ಚಿತೆಯಲ್ಲಿಟ್ಟು ಅಗ್ನಿ ಸ್ಪರ್ಶಿಸುವ ಮೂಲಕ ಅಂತ್ಯಸಂಸ್ಕಾರವನ್ನು ನೆರವೇರಿಸುವುದಾಗಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಪರಮೇಶ್ವರ್ ಆಪ್ತ ರಮೇಶ್ ಐಟಿಗೆ ಬೆದರಿದ್ರಾ? ಕೊನೆ ಕ್ಷಣ ಹೇಗಿತ್ತು?

    ಶನಿವಾರ ಬೆಳಗ್ಗೆ ತನ್ನಿಬ್ಬರು ಆಪ್ತರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿ ಮೊಬೈಲ್ ಸ್ವಿಚ್ಚ್ ಆಫ್ ಆಡಿಕೊಂಡಿದ್ದರು. ಆ ನಂತರ ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ರಮೇಶ್ ಶವ ಪತ್ತೆಯಾಗಿತ್ತು.

    https://www.youtube.com/watch?v=unFC-S4yhps