Tag: PA

  • ಪರಮೇಶ್ವರ್ ಪಿಎ ಆತ್ಮಹತ್ಯೆಗೆ ಶರಣು

    ಪರಮೇಶ್ವರ್ ಪಿಎ ಆತ್ಮಹತ್ಯೆಗೆ ಶರಣು

    ಬೆಂಗಳೂರು: ಐಟಿ ವಿಚಾರಣೆ ಎದುರಿಸುವುದಕ್ಕೆ ಆಗಲ್ಲ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ ಮಾಜಿ ಡಿಸಿಎಂ ಪರಮೇಶ್ವರ್ ಅವರ ಪಿಎ ರಮೇಶ್ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ರಮೇಶ್ 6 ವರ್ಷದಿಂದ ಪರಮೇಶ್ವರ್ ಬಳಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಪರಮೇಶ್ವರ್ ಮನೆ ಮೇಲೆ ಐಟಿ ದಾಳಿ ಆದ ಹಿನ್ನೆಲೆಯಲ್ಲಿ ರಮೇಶ್ ಮನೆ ಮೇಲೂ ದಾಳಿ ನಡೆದಿತ್ತು. ಆದರೆ ಮನೆಯಲ್ಲಿ ಯಾವುದೇ ದಾಖಲೆ ಸಿಕ್ಕಿರಲಿಲ್ಲ. ಪರಮೇಶ್ವರ್ ಪತ್ರ ವ್ಯವಹಾರದ ಬಗ್ಗೆ ರಮೇಶ್‍ಗೆ ತಿಳಿದಿತ್ತು. ಹಾಗಾಗಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

    ಪತ್ರ ವ್ಯವಹಾರದ ಬಗ್ಗೆ ಐಟಿ ಅಧಿಕಾರಿಗಳು 2 ದಿನ ವಿಚಾರಣೆ ನಡೆಸಿದ್ದರು. ಈ ವೇಳೆ ಐಟಿ ಅಧಿಕಾರಿಗಳು ಜೈಲಿಗೆ ಹೋಗ್ತಿಯಾ, ಈಗಾಗಲೇ ನಮಗೆ ಹವಾಲಾ ದಂಧೆ ಸಾಕ್ಷ್ಯ ಸಿಕ್ಕಿದೆ ಎಂದು ಬೆದರಿಕೆ ಹಾಕಿದ್ದರು. ಇದರಿಂದ ರಮೇಶ್ ಹೆದರಿಕೊಂಡಿದ್ದರು ಎನ್ನಲಾಗಿದೆ.

    ಇಂದು ಬೆಳಗ್ಗೆ ರಮೇಶ್ ತನ್ನ ಆಪ್ತರಿಗೆ ಕರೆ ಮಾಡಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮೊಬೈಲ್ ಸ್ವಿಚ್ ಆಫ್ ಮಾಡಿ ಕೊಂಡಿದ್ದರು. ಇಬ್ಬರು ಆಪ್ತರ ಬಳಿ ಮಾತನಾಡಿ, ನಾನು ಯೂನಿವರ್ಸಿಟಿ ಕ್ಯಾಂಪಸ್‍ನಲ್ಲಿದ್ದೀನಿ ಎಂದು ಹೇಳಿ ರಮೇಶ್ ನಾಪತ್ತೆ ಆಗಿದ್ದಾರೆ.

    ಆಪ್ತರಿಗೆ ಕರೆ ಮಾಡಿ ರಮೇಶ್, ನಾನು ಬಡವ. ಹೀಗಿದ್ದರೂ ಅಧಿಕಾರಿಗಳು ನನ್ನ ಮನೆ ಮೇಲೆ ಐಟಿ ದಾಳಿ ನಡೆಸಿದ್ದಾರೆ. ನನಗೆ ಐಟಿ ವಿಚಾರಣೆ ಎದುರಿಸುವುದಕ್ಕೆ ಆಗುವುದಿಲ್ಲ. ಐಟಿ ಅಧಿಕಾರಿಗಳು ಸಿಕ್ಕಾಪಟ್ಟೆ ಪ್ರಶ್ನೆಗಳನ್ನು ಕೇಳುತ್ತಾರೆ. ನನಗೆ ಅವರ ಪ್ರಶ್ನೆಗಳಿಗೆ ಉತ್ತರಿಸಲು ಆಗುವುದಿಲ್ಲ ಎಂದು ಹೇಳಿ ಮೊಬೈಲ್ ಸ್ವಿಚ್ ಆಫ್ ಮಾಡಿ ಎಸ್ಕೇಪ್ ಆಗಿದ್ದರು.

    https://www.youtube.com/watch?v=YMis798cmjE

  • ಅತ್ತ ಕಾಂಗ್ರೆಸ್ ಶಾಸಕರ ರೆಸಾರ್ಟ್ ಪಾಲಿಟಿಕ್ಸ್ – ಇತ್ತ ಸಚಿವರ ಕ್ಷೇತ್ರದಲ್ಲಿ ಪಿಎಗಳ ದರ್ಬಾರ್..!

    ಅತ್ತ ಕಾಂಗ್ರೆಸ್ ಶಾಸಕರ ರೆಸಾರ್ಟ್ ಪಾಲಿಟಿಕ್ಸ್ – ಇತ್ತ ಸಚಿವರ ಕ್ಷೇತ್ರದಲ್ಲಿ ಪಿಎಗಳ ದರ್ಬಾರ್..!

    ಚಿಕ್ಕೋಡಿ/ಬೆಳಗಾವಿ: ಒಂದು ಕಡೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು ಲಜ್ಜೆ ಬಿಟ್ಟು ರೆಸಾರ್ಟ್ ರಾಜಕಾರಣದಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ಇದೇ ಅವಕಾಶ ಅಂತ ಸಚಿವರ ಪಿಎಗಳು ದರ್ಪ ಮೆರೆಯುತ್ತಿದ್ದಾರೆ.

    ಆಪರೇಷನ್ ಕಮಲ ಭೀತಿಯಿಂದ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿದ್ದೇ ಸೇರಿದ್ದು ಸಚಿವರ ಪಿಎಗಳ ದರ್ಬಾರ್ ಶುರುವಾಗಿದೆ. ಯಮಕನಮರಡಿ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಪ್ರಕಾಶ್ ಬಸ್ಸಾಪೂರೆ, ಹುಕ್ಕೇರಿ ತಾಲೂಕಿನ ಗೋಟೂರ ಗ್ರಾಮದಲ್ಲಿ ರಾಜ್ಯ ಹೆದ್ದಾರಿಯ ರಸ್ತೆ ಅಗಲೀಕರಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಈಗ ಶಾಸಕರ ಪಿಎಗಳ ಶಿಷ್ಟಾಚಾರ ಉಲ್ಲಂಘನೆ ಹಾಗೂ ದರ್ಬಾರ್ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಬೇಸಿಗೆ ಮುನ್ನವೇ ನೀರಿಗೆ ಹಾಹಾಕಾರ

    ಸತೀಶ್ ಜಾರಕಿಹೊಳಿ ಅವರಿಗೆ 10 ಕ್ಕೂ ಹೆಚ್ಚು ಜನ ಪಿಎಗಳಿದ್ದಾರೆ. ಕ್ಷೇತ್ರದಲ್ಲಿ ಶಾಸಕರಗಿಂತ ಪಿಎಗಳ ದೌಲತ್ತೆ ಹೆಚ್ಚು. ಯಾವುದೇ ಕೆಲಸ ಕಾರ್ಯಗಳು ಆಗಬೇಕಾದರೆ ಪಿಎಗಳ ರೆಕಮೆಂಡ್ ಇರಲೇಬೇಕು ಎಂದು ಕ್ಷೇತ್ರದ ಜನ ಅಳಲು ತೋಡಿಕೊಳ್ಳುತ್ತಿದ್ದರು ಶಾಸಕರು ಕೇರ್ ಮಾಡುತ್ತಿಲ್ಲ. ಹೀಗಾಗಿ ಪಿಎಗಳ ದರ್ಬಾರ್ ಹಾಗೂ ಅರಣ್ಯ ಸಚಿವರ ರೆಸಾರ್ಟ್ ರಾಜಕಾರಣದ ವಿರುದ್ಧ ಬಿಜೆಪಿ ಮುಖಂಡ ಹಾಗೂ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮಾರುತಿ ಅಷ್ಟಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಲು-ಬಾಯಿ ಜ್ವರದಿಂದ ಸಾವನ್ನಪ್ಪಿದ ಹಸುಗಳು- ರೆಸಾರ್ಟ್ ನಲ್ಲಿ ಕುಳಿತ್ರು ಕಷ್ಟ ಕೇಳಬೇಕಾದ ಶಾಸಕರು !

    ಇನ್ನೂ ಭೂಮಿ ಪೂಜೆಗೆ ಲೋಕೋಪಯೋಗಿ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘಿಸಿ ಪಿಎಗಳಿಗೆ ಅವಕಾಶ ಕೊಟ್ಟಿದ್ದು, ಕೂಡ ಈಗ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕಡೆ ಜನ ಬರಗಾಲದಿಂದ ನೀರು, ಜಾನುವಾರುಗಳ ಮೇವಿಗಾಗಿ ಪರದಾಡುತ್ತಿದ್ದರೆ ಇತ್ತ ಶಾಸಕರು ರೆಸಾರ್ಟ್ ರಾಜಕಾರಣದಲ್ಲಿ ಬ್ಯುಸಿ ಆಗಿರುವುದು ನಿಜಕ್ಕೂ ದುರಂತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪೊಲೀಸ್ ಪೇದೆ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣಕ್ಕೆ ಟ್ವಿಸ್ಟ್ – ಪ್ರಮುಖ ಆರೋಪಿಯ ಜೊತೆ ಮಾಜಿ ಸಿಎಂ ಪಿಎ ನಂಟು

    ಪೊಲೀಸ್ ಪೇದೆ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣಕ್ಕೆ ಟ್ವಿಸ್ಟ್ – ಪ್ರಮುಖ ಆರೋಪಿಯ ಜೊತೆ ಮಾಜಿ ಸಿಎಂ ಪಿಎ ನಂಟು

    ಬೆಂಗಳೂರು: ಪೊಲೀಸ್ ಪೇದೆ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದ್ದು, ಪ್ರಮುಖ ಆರೋಪಿ ಶಿವಕುಮಾರ್ ಜೊತೆ ಮಾಜಿ ಸಿಎಂ ಪಿಎ ನಂಟು ಹೊಂದಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಹೌದು, ಪೊಲೀಸ್ ಪೇದೆ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣದ ಹಿಂದೆ ಬಿಜೆಪಿ ಮುಖಂಡ ಈಶಪ್ಪ ಕೈವಾಡ ಇದೆ ಎನ್ನುವ ವಿಚಾರ ಮೂಲಗಳು ತಿಳಿಸಿವೆ. ಶಾಸಕ ಸ್ಥಾನದ ಆಕಾಂಕ್ಷಿಯಾಗಿದ್ದ ಈಶಪ್ಪ ಶಿವಕುಮಾರ್ ಜೊತೆ ಸೇರಿಕೊಂಡಿದ್ದರು ಎನ್ನುವ ವಿಚಾರದ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಕೊಪ್ಪಳದ ಗಜೇಂದ್ರಗಡದಲ್ಲಿ ಪ್ರಭಾವಿ ವ್ಯಕ್ತಿಯಾಗಿರುವ ಈಶಪ್ಪ, ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಈಗ ಕೋಟಿ ಕೋಟಿ ಒಡೆಯರಾಗಿ ಬದಲಾಗಿದ್ದಾರೆ. ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಲೀಕ್ ನಲ್ಲಿ ಸ್ವಾಮೀಜಿಯ ಕೈವಾಡ

    ನವೆಂಬರ್ 25ರಂದು ನಡೆಯಬೇಕಿದ್ದ ಪೊಲೀಸ್ ಪೇದೆ ಹುದ್ದೆಯ ಲಿಖಿತ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿತ್ತು. ಹೀಗಾಗಿ ಪರೀಕ್ಷೆಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಭಾರೀ ಜಾಲವನ್ನು ಪತ್ತೆ ಹಚ್ಚಿ ಕಿಂಗ್ ಪಿನ್ ಸೇರಿದಂತೆ 115 ಮಂದಿಯನ್ನು ಬಂಧಿಸಿದ್ದರು.

    ಕೊಡಗು ಜಿಲ್ಲೆಯ ಸೋಮವಾರಪೇಟೆಯ ವಿದ್ಯಾಮಂದಿರ ಕೊಠಡಿಯೊಂದರಲ್ಲಿ ರಾಜ್ಯದ ವಿವಿಧೆಡೆಯಿಂದ ಪರೀಕ್ಷಾರ್ಥಿಗಳನ್ನು ಕರೆಸಿಕೊಂಡು ಪ್ರಶ್ನೆ ಪತ್ರಿಕೆ ವಿತರಿಸಲು ಸಿದ್ಧತೆ ನಡೆಸಲಾಗಿತ್ತು. ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳುವ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಆದ್ರೆ ಈ ಮೊದಲೇ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿಗಳಾದ ಬಿ.ಆರ್.ವೇಣುಗೋಪಾಲ್, ಬಿ.ಬಾಲರಾಜು ನೇತೃತ್ವದ ಎರಡು ತಂಡಗಳು ದಾಳಿ ನಡೆಸಿದ್ದವು. ದಾಳಿ ವೇಳೆ ಕಿಂಗ್‍ಪಿನ್ ಶಿವಕುಮಾರ್‍ನನ್ನು ಪ್ರಶ್ನೆ ಪತ್ರಿಕೆಗಳ ಸಹಿತ ಬಂಧಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಮ್ ಬಾಸ್ ಇಲ್ಲೇ ಇದ್ದಾರೆ, ನಾನ್ ಇಲ್ಲಿಂದ ಹೋಗಲ್ಲ – ಸ್ವಾಮಿ ನಿಷ್ಠೆ ಮೆರೆದ ರೆಡ್ಡಿ ಪಿಎ ಅಲಿಖಾನ್

    ನಮ್ ಬಾಸ್ ಇಲ್ಲೇ ಇದ್ದಾರೆ, ನಾನ್ ಇಲ್ಲಿಂದ ಹೋಗಲ್ಲ – ಸ್ವಾಮಿ ನಿಷ್ಠೆ ಮೆರೆದ ರೆಡ್ಡಿ ಪಿಎ ಅಲಿಖಾನ್

    ಬೆಂಗಳೂರು: ಅಂಬಿಡೆಂಟ್ ಕಂಪೆನಿ ಜೊತೆ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರೋ ಮಾಜಿ ಗಣಿಧಣಿ ಜನಾರ್ದನ ರೆಡ್ಡಿ ಅವರ ಪಿಎ ಅಲಿಖಾನ್ ಸ್ವಾಮಿನಿಷ್ಠೆ ಮೆರೆದಿದ್ದಾರೆ.

    ರೆಡ್ಡಿ ವಿಚಾರಣೆಯಾಗುತ್ತಿದ್ದಂತೆಯೇ ಅಲಿಖಾನ್ ನನ್ನು ಮನೆಗೆ ತೆರಳುವಂತೆ ಪೊಲೀಸರು ಸೂಚಿಸಿದ್ದರು. ಈ ವೇಳೆ ಅಲಿಖಾನ್, ನಮ್ಮ ಬಾಸ್ ಇಲ್ಲೇ ಇದ್ದಾರೆ. ಹೀಗಾಗಿ ನಾನೂ ಇಲ್ಲೇ ಇರುತ್ತೀನಿ. ನಮ್ಮ ಬಾಸ್ ನ ಬಿಟ್ಟು ಹೋಗಲ್ಲ ಅಂತ ಹೇಳಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ಈ ಮೂಲಕ ಕಷ್ಟದ ವೇಳೆಯೂ ಶಿಷ್ಯ ಆಲಿಖಾನ್ ಗಣಿಧಣಿಗೆ ನಿಷ್ಠೆ ಮೆರೆದಿದ್ದಾನೆ ಎಂದು ಹೇಳಲಾಗುತ್ತಿದೆ.

    ರೆಟ್ಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಿಖಾನ್ ನನ್ನು ಶನಿವಾರ ಪೊಲೀಸರು ಬಂಧಿಸಿದ್ದು, ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದರು. ಆದ್ರೆ ಸದ್ಯ ಅಲಿಖಾನ್ , ಜನಾರ್ದನ ರೆಡ್ಡಿ ಜೊತೆಯೇ ಸಿಸಿಬಿ ಕಚೇರಿಯಲ್ಲಿದ್ದಾನೆ.

    ಅಲಿಖಾನ್ ಅರೆಸ್ಟ್:
    ಅಂಬಿಡೆಂಟ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಜೊತೆ ಸಿಸಿಬಿ ಅಧಿಕಾರಿಗಳ ಬಳಿ ಆಗಮಿಸಿದ್ದ ಅಲಿಖಾನ್ ನನ್ನು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಅಲಿಖಾನ್ ನನ್ನು ಶನಿವಾರ ಪೊಲೀಸರು ಬಂಧಿಸಿದ್ದರು. ಅಲಿಕಾನ್ ವಿರುದ್ಧ ನಿನ್ನೆ ಬೆಳಗ್ಗೆಯೇ ಅಕ್ರಮ ಶಸ್ತ್ರಾಸ್ತ್ರದ ಕಾಯ್ದೆಯಡಿ ಸಿಸಿಬಿ ಪೊಲೀಸರು ಪ್ರತ್ಯೇಕ ಕೇಸ್ ದಾಖಲಿಸಿದ್ದರು. ಹೀಗಾಗಿ ರೆಡ್ಡಿ ಜೊತೆ ಬಂದ ಅಲಿಖಾನ್ ನನ್ನು ಸಿಸಿಬಿ ಬಂಧಿಸಿತ್ತು. ಅಲಿಖಾನ್ ಹೊಂದಿರುವ ಶಸ್ತ್ರಾಸ್ರ ಪರವಾನಿಗೆ 2017ರಲ್ಲಿ ಅಂತ್ಯಗೊಂಡಿತ್ತು. ಪರವಾನಿಗೆಯನ್ನು ನವೀಕರಣ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಅಲಿಖಾನ್ ಬಂಧನವಾಗಿದೆ. ಅಲಿಖಾನ್ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದಾಗ 5 ಜೀವಂತ ಗುಂಡುಗಳು ಪತ್ತೆಯಾಗಿದ್ದವು ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಆಂಬಿಡೆಂಟ್ ಡೀಲ್ ಪ್ರಕರಣದ ಸೂತ್ರಧಾರಿ ಆಗಿರುವ ಅಲಿಖಾನ್ ಜಾಮೀನು ಸಹ ಪಡೆದುಕೊಂಡಿದ್ದ. ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಜನಾರ್ದನ ರೆಡ್ಡಿ ಜೊತೆಯಲ್ಲಿ ಅಲಿಖಾನ್ ಸಿಸಿಬಿ ಕಚೇರಿಗೆ ಆಗಮಿಸುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಬೆಂಗ್ಳೂರಲ್ಲಿ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ

    ಬೆಂಗ್ಳೂರಲ್ಲಿ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ

    ಬೆಂಗಳೂರು: ಪಬ್ಲಿಕ್ ಟಿವಿ ಆಯೋಜಿಸಿರುವ ವಿದ್ಯಾಪೀಠ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮವನ್ನು ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಉದ್ಘಾಟಿಸಿದ್ದಾರೆ.

    ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ ನಂತರ ಮುಂದೇನು ಮಾಡಬೇಕು ಎಂಬ ಸಂಪೂರ್ಣ ಮಾಹಿತಿ ನಿಮಗೆ ಲಭ್ಯವಾಗಲಿದೆ. ಯಾವ ಕಾಲೇಜಿನಲ್ಲಿ ಯಾವೆಲ್ಲ ಕೋರ್ಸ್ ಗಳಿವೆ? ಈಗಿನ ಎಜ್ಯುಕೇಶನ್ ಟ್ರೆಂಡ್ ಏನು? ವಿವಿಧ ಕೋರ್ಸ್ ಬಗ್ಗೆ ಅತಿಥಿಗಳ ಉಪನ್ಯಾಸ ಅಲ್ಲದೇ ಶಿಕ್ಷಣ ಸಂಸ್ಥೆಗಳ ಮಾಹಿತಿ ಕೇಂದ್ರಗಳು ಇಲ್ಲಿ ಇರಲಿವೆ. ಹೀಗಾಗಿ ನಿಮಗೆ ಯಾವುದೇ ಕೋರ್ಸ್ ಬಗ್ಗೆ ಸಂದೇಹ ಇದ್ದರೆ ಅಲ್ಲೇ ಪರಿಹಾರ ಮಾಡಿಕೊಳ್ಳಬಹುದು.

    ಅನಿಮೇಶನ್,ಮೀಡಿಯಾ, ಗೇಮಿಂಗ್, ಕೋಚಿಂಗ್ ಇನ್ಸಿಟ್ಯೂಷನ್, ಕಾಮರ್ಸ್ ಮತ್ತು ಬ್ಯಾಂಕಿಂಗ್, ಎಂಜಿನಿಯರಿಂಗ್, ಮೆಡಿಕಲ್, ಫ್ಯಾಶನ್ ಮತ್ತು ಹೋಟೆಲ್ ಮ್ಯಾನೇಜ್‍ಮೆಂಟ್, ಕಾನೂನು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು, ಮಾಸ್ ಕಮ್ಯೂನಿಕೇಶನ್, ಎಂಬಿಎ ಅಷ್ಟೇ ಅಲ್ಲದೆ ವಿದೇಶಿ ಶಿಕ್ಷಣ ಸಂಸ್ಥೆಗಳ ಬಗ್ಗೆಯೂ ಇಲ್ಲಿ ಮಾಹಿತಿ ಸಿಗಲಿದೆ. ಕರ್ನಾಟಕ ಸಿಇಟಿ, ನೀಟ್ ಪರೀಕ್ಷೆ, ಕಾಮೆಡ್ ಕೆ ಕೌನ್ಸಿಲಿಂಗ್ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ. ಅಷ್ಟೇ ಅಲ್ಲದೇ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಇದರಲ್ಲಿ ಭಾಗವವಹಿಸುತ್ತಿದ್ದು, ವಿವಿಧ ಸ್ಕಾಲರ್ ಶಿಪ್ ಬಗ್ಗೆಯೂ ಮಾಹಿತಿ ಸಿಗಲಿದೆ.

    ಗಾರ್ಡನ್ ಸಿಟಿ ಯುನಿವರ್ಸಿಟಿ ಕುಲಪತಿ ಡಾ.ವಿ.ಜಿಜೋಸೆಫ್, ಕೇಂಬ್ರಿಡ್ಜ್ ಇನ್ಸ್‍ಟಿಟ್ಯೂಟ್ ಟೆಕ್ನಾಲಜಿ ಚೇರ್ಮನ್ ಡಿ.ಕೆ.ಮೋಹನ್, ಸಿಎಂಆರ್ ಯೂನಿವರ್ಸಿಟಿ ಶಿವಕುಮಾರ್, ಮನೋಹರ್ ನಾಯ್ಡು, ಡಾ.ರಮೇಶ್, ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ, ಪಬ್ಲಿಕ್ ಟಿವಿ ಸಿಒಒ ಸಿ.ಕೆ.ಹರೀಶ್, ಪಬ್ಲಿಕ್ ಟಿವಿ ಸಿಇಒ ಅರುಣ್ ಉಪಸ್ಥಿತರಿದ್ದಾರೆ. ಬೆಳಗ್ಗೆ 9.30ರಿಂದ ಆರಂಭಗೊಂಡು ಸಂಜೆ 6 ಗಂಟೆಯವರೆಗೂ ಈ ಕಾರ್ಯಕ್ರಮ ನಡೆಯಲಿದೆ.

  • ಉಪೇಂದ್ರ ರಿಯಲ್ ಹೀರೋ ಅಲ್ಲ, ರೀಲ್ ಹೀರೋ ಅಂದಿದ್ದಕ್ಕೆ ಉಪಾಧ್ಯಕ್ಷೆಗೆ ಬಿತ್ತಂತೆ ಒದೆ!

    ಉಪೇಂದ್ರ ರಿಯಲ್ ಹೀರೋ ಅಲ್ಲ, ರೀಲ್ ಹೀರೋ ಅಂದಿದ್ದಕ್ಕೆ ಉಪಾಧ್ಯಕ್ಷೆಗೆ ಬಿತ್ತಂತೆ ಒದೆ!

    ಬೆಂಗಳೂರು: ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಆಪ್ತ ಕಾರ್ಯದರ್ಶಿಯೊಬ್ಬರು ಕೆಪಿಜೆಪಿ ಮಹಿಳಾ ಉಪಾಧ್ಯಕ್ಷೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವೊಂದು ಕೇಳಿಬಂದಿದೆ.

    ಉಪೇಂದ್ರ ಅವರ ಪಿಎ ಹಿತೇಶ್ ಬೆಂಗಳೂರಿನ ಸುಂಕದಕಟ್ಟೆಯ ಮುದ್ದಿನಪಾಳ್ಯದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕೆಪಿಜೆಪಿ ಪಕ್ಷದ ರಾಜ್ಯ ಮಹಿಳಾ ಉಪಾಧ್ಯಕ್ಷೆ ಲಲಿತಾ ಮೇರಿ ಆರೋಪಿಸಿದ್ದಾರೆ.

    ಶನಿವಾರ ರಾತ್ರಿ ಕೆಪಿಜೆಪಿ ಪಕ್ಷದ ಮಹಿಳಾ ವಾಟ್ಸಾಪ್ ಗ್ರೂಪ್‍ಗೆ ಉಪೇಂದ್ರ ರಿಯಲ್ ಹೀರೋ ಅಲ್ಲ, ರೀಲ್ ಹೀರೋ ಯಾರು ನಂಬಬೇಡಿ ಎಂದು ಲಲಿತಾ ಮೇರಿ ಮಸೇಜ್ ಮಾಡಿದ್ದರು. ಲಲಿತಾ ಮೇರಿ ಅವರ ಈ ಮಸೇಜ್‍ಗೆ ಹಿತೇಶ್ ಪ್ರತಿಕ್ರಿಯಿಸಿ, ಯಾರೇ ನೀನು, ನಾಯಿ ಅಂತ ಹೇಳಿದ್ದಾರೆ. ಈ ವಿಚಾರವಾಗಿ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ಬಳಿಕ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಸುಂಕದಕಟ್ಟೆಯ ಕೆಇಎಲ್ ಕಾಲೇಜ್ ಬಳಿ ಲಲಿತಾ ಮೇರಿ ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಹೆಲ್ಮೆಟ್ ಧರಿಸಿ ಬೈಕ್‍ನಲ್ಲಿ ಬಂದ ಹಿತೇಶ್ ಮತ್ತು ಆತನ ಸ್ನೇಹಿತ ಹಲ್ಲೆ ಮಾಡಿದ್ದಾರೆ. ಅಲ್ಲದೇ ನಮ್ ಬಾಸ್ ಬಗ್ಗೆ ಕೆಟ್ಟದಾಗಿ ಮಾತಾನಾಡುತ್ತೀಯಾ ಎಂದು ಅವಾಚ್ಯ ಪದಗಳಿಂದ ನಿಂದಿಸಿ ಪರಾರಿಯಾಗಿದ್ದಾರೆ ಎಂದು ಮೇರಿ ಹೇಳಿದ್ದಾರೆ.

    ಹಿತೇಶ್ ನನ್ನ ಮೇಲೆ ಹಲ್ಲೆ ಮಾಡಿದ್ದರ ಹಿಂದೆ ನಟ ಉಪೇಂದ್ರನ ಕೈವಾಡ ಇದೆ ಎಂದು ಮೇರಿ ಆರೋಪ ಮಾಡುತ್ತಿದ್ದಾರೆ. ಸದ್ಯ ಮೇರಿ ಸುಂಕದಕಟ್ಟೆಯ ಲಕ್ಷ್ಮೀ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಬಗ್ಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.

    https://www.youtube.com/watch?v=h1pj6VMxsXE

     

  • ಸಚಿವರ ಹೆಸ್ರಲ್ಲಿ ಫೇಸ್‍ಬುಕ್‍ನಲ್ಲಿ ಪೋಸ್ಟ್- ಅನಂತ್ ಕುಮಾರ್ ಹೆಗ್ಡೆ ಪಿಎಯಿಂದ ದೂರು

    ಸಚಿವರ ಹೆಸ್ರಲ್ಲಿ ಫೇಸ್‍ಬುಕ್‍ನಲ್ಲಿ ಪೋಸ್ಟ್- ಅನಂತ್ ಕುಮಾರ್ ಹೆಗ್ಡೆ ಪಿಎಯಿಂದ ದೂರು

    ಕಾರವಾರ: ಕೇಂದ್ರ ಕೌಶಾಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದು ಪೋಸ್ಟ್ ಮಾಡಿದ ವ್ಯಕ್ತಿಗಳ ವಿರುದ್ಧ ಸಚಿವರ ಆಪ್ತ ಕಾರ್ಯದರ್ಶಿ ದೂರು ದಾಖಲಿಸಿದ್ದಾರೆ.

    ಸಚಿವರ ಫೋಟೋದೊಂದಿಗೆ ಕೆಂಪೇ ಗೌಡ ಅವರ ವಿರುದ್ಧ ವಿವಾದಿತ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರ್ಕೆಟ್ ಠಾಣೆಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ದೂರು ದಾಖಲಿಸಿದ್ದಾರೆ.

    ಚುನಾವಣೆಯ ಸಂದರ್ಭದಲ್ಲಿ ಈ ರೀತಿಯ ಆಕ್ಷೇಪಾರ್ಹ ಸಂದೇಶಗಳನ್ನು ಹರಿಯಬಿಟ್ಟಿರುವುದು ಸಮಾಜದಲ್ಲಿ ಗೊಂದಲ ನಿರ್ಮಿಸಿ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡ ಭಾವನೆಯನ್ನು ಕೆರಳಿಸಿ, ಜಾತಿ ಗಲಭೆಗಳನ್ನು ಸೃಷ್ಟಿಸಲು ಪಿತೂರಿ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಅಲ್ಲದೇ ಅನಂತ್ ಕುಮಾರ್ ಹೆಗ್ಡೆಯವರ ಹೆಸರನ್ನು ತೇಜೋವಧೆ ಮಾಡುವ ಉದ್ದೇಶದಿಂದಲೇ ಸಂದೆಶಗಳನ್ನು ಹಾಕಿರುತ್ತಾರೆ. ಈ ಹಿನ್ನೆಲೆಯಲ್ಲಿ ಫೇಸ್ ಬುಕ್ ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಯುಆರ್ ಎಲ್ ಲಿಂಕ್ ಗಳನ್ನು ನೀಡಿ ಮನವಿ ಮಾಡಿದ್ದಾರೆ.

    ಫೇಸ್ ಬುಕ್ ಪೋಸ್ಟ್ ನಲ್ಲೇನಿದೆ?
    `ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಕೆಂಪೇಗೌಡರ ಪ್ರತಿಮೆ ಉರುಳಿಸ್ತೇವೆ. ಅಲ್ಲದೇ ಕೆಂಪೇಗೌಡರ ಪ್ರತಿಮೆ ಉರುಳಿಸಿ ಶಿವಾಜಿ ಪ್ರತಿಮೆಯನ್ನು ಸ್ಥಾಪಿಸುತ್ತೇವೆ’ ಅಂತ ಸಚಿವರ ಫೋಟೋದೊಂದಿಗೆ ಈ ಹೇಳಿಕೆಯನ್ನು ಬರೆಯಲಾಗಿದೆ.

    ಪ್ರಜಾಕೀಯ ಸಪೋರ್ಟರ್ಸ್ ಹೆಸರಿನ ಫೇಸ್‍ಬುಕ್ ಖಾತೆಯಲ್ಲಿ ಈ ಪೋಸ್ಟ್ ಹಾಕಲಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಚಿವ ಅನಂತ್ ಕುಮಾರ್ ಹೆಗಡೆ ಈ ಹೇಳಿಕೆ ನೀಡಿದ್ದಾರೆ ಎಂದು ಎಂದು ಜನ ಭಾವಿಸಿ ಅವರ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದಾರೆ.

  • ಶಾಸಕರ ಪಿಎ ಅಂತ ಹೇಳಿ ದರ್ಬಾರ್ ನಡೆಸಿದವನಿಗೆ ಗ್ರಾಮಸ್ಥರಿಂದ ಹಲ್ಲೆಗೆ ಯತ್ನ!

    ಶಾಸಕರ ಪಿಎ ಅಂತ ಹೇಳಿ ದರ್ಬಾರ್ ನಡೆಸಿದವನಿಗೆ ಗ್ರಾಮಸ್ಥರಿಂದ ಹಲ್ಲೆಗೆ ಯತ್ನ!

    ಚಿಕ್ಕಬಳ್ಳಾಪುರ: ಶಾಸಕರ ಪಿಎ ಅಂತ ಹೇಳಿ ದರ್ಬಾರ್ ನಡೆಸಿದ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ನ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಲು ಮುಂದಾದ ಘಟನೆ ಚಿಕ್ಕಬಳ್ಳಾಪುರ ತಾಲೂಕು ಆವಲಗುರ್ಕಿ ಗ್ರಾಮದಲ್ಲಿ ನಡೆದಿದೆ.

    ಶಾಸಕ ಡಾ.ಕೆ.ಸುಧಾಕರ್ ಒಡೆತನದ ಶ್ರೀ ಸಾಯಿಕೃಷ್ಣ ಚಾರಿಟೇಬಲ್ ಟ್ರಸ್ಟ್ ನ ಸಿಬ್ಬಂದಿ ಅವಿನಾಶ್ ನನ್ನ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು ಮರಕ್ಕೆ ಕಟ್ಟಿ ಹಾಕಲು ಯತ್ನಿಸಿದರು.

    ಅವಲಗುರ್ಕಿ ಗ್ರಾಮದಲ್ಲಿ ಜಿಲ್ಲಾಡಳಿತ ವತಿಯಿಂದ ಕೊಳವೆಬಾವಿ ಕೊರೆಸಲಾಗುತ್ತಿದ್ದು ನೀರು ಸಿಗದೆ ವೈಫಲ್ಯವಾಗಿದೆ. ಹೀಗಾಗಿ ಮತ್ತೊಂದು ಕೊಳವೆಬಾವಿ ಕೊರೆಯುವಂತೆ ಗ್ರಾಮಸ್ಥರು ಪಟ್ಟು ಹಿಡಿದು ಬೋರ್ ವೆಲ್ ಲಾರಿ ಅಡ್ಡಗಟ್ಟಿ ಪ್ರತಿಭಟನೆ ನಡೆಸುತ್ತಿದ್ದರು. ಆದ್ರೆ ಈ ವೇಳೆ ಸ್ಥಳಕ್ಕೆ ಬಂದ ಅವಿನಾಶ್ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಸ್ಥಳದಿಂದ ಬೋರ್ ವೆಲ್ ಲಾರಿಯನ್ನ ಕಳುಹಿಸಿದ್ದಾನೆ. ಇದ್ರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಬೋರ್ ವೆಲ್ ಲಾರಿ ಅಡ್ಡಗಟ್ಟಿ, ಅವಿನಾಶ್ ನನ್ನ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.