Tag: Padma Shri Award

  • ಪದ್ಮಶ್ರೀ ಪುರಸ್ಕೃತ ಶಾಸ್ತ್ರೀಯ ಸಂಗೀತ ಗಾಯಕ ವಿಜಯ್ ಕುಮಾರ್ ಕಿಚ್ಲು ನಿಧನ

    ಪದ್ಮಶ್ರೀ ಪುರಸ್ಕೃತ ಶಾಸ್ತ್ರೀಯ ಸಂಗೀತ ಗಾಯಕ ವಿಜಯ್ ಕುಮಾರ್ ಕಿಚ್ಲು ನಿಧನ

    ಕೋಲ್ಕತ್ತಾ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ (Classical Singer) ಪಂಡಿತ್ ವಿಜಯ್ ಕುಮಾರ್ ಕಿಚ್ಲು (93) (Vijay Kumar Kichlu) ಉಸಿರಾಟದ ಸಮಸ್ಯೆಯಿಂದ ಶುಕ್ರವಾರ ಸಂಜೆ ಕೋಲ್ಕತ್ತಾ ಆಸ್ಪತ್ರೆಯಲ್ಲಿ ನಿಧನರಾದರು.

    ಕಿಚ್ಲು ಅವರನ್ನ ಆಸ್ಪತ್ರೆಗೆ ಕರೆತಂದಾಗ ಏದುಸಿರು ಬಿಡುತ್ತಿದ್ದರು. ಚಿಕಿತ್ಸೆ ಪ್ರಾರಂಭಿಸುವ ಮುನ್ನವೇ ಹೃದಯ ಸ್ತಂಭನಕ್ಕೆ ಒಳಗಾಗಿ ಸಂಜೆ 6.20ರ ಸುಮಾರಿಗೆ ನಿಧನರಾದರು ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಸದ್ದಿಲ್ಲದೇ ಆದಿಯೋಗಿ ಶಿವನ ದರ್ಶನ ಪಡೆದ ರಜನಿಕಾಂತ್

    ಕಿಚ್ಲು ಅವರು ದೀರ್ಘಕಾಲದವರೆಗೆ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ಹೃದಯ ವೈಫಲ್ಯತೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ತಿಂಗಳು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ವಾರಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇದನ್ನೂ ಓದಿ: ಕಲಬುರಗಿಯ ದರ್ಗಾ ಆವರಣದಲ್ಲಿ ಹಿಂದೂಗಳಿಂದ ಶಿವರಾತ್ರಿ, ಮುಸ್ಲಿಮರಿಂದ ಉರುಸ್ ಆಚರಣೆ

    1930 ರಲ್ಲಿ ಜನಿಸಿದ ಕಿಚ್ಲು ದಗರ್ ಬ್ರದರ್ಸ್ ಬಳಿ `ದ್ರುಪದ್’ ಮತ್ತು ಲತಾಫತ್ ಹುಸೇನ್ ಖಾನ್ ಅವರೊಂದಿಗೆ `ಖಯಾಲ್’ ಅಧ್ಯಯನ ಮಾಡಿದರು. 25 ವರ್ಷಗಳ ಕಾಲ ಕೋಲ್ಕತ್ತಾದ ಐಟಿಸಿ ಸಂಗೀತ ಸಂಶೋಧನಾ ಅಕಾಡೆಮಿಯ ಸಂಸ್ಥಾಪಕರು ಹಾಗೂ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು.

    ಇವರು 2018ರಲ್ಲಿ ಕಲೆ ಸಂಗೀತ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿಗೂ (Padma Shri Award) ಭಾಜನರಾಗಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚಿಕಿತ್ಸೆಗೆ ಕೇವಲ 20 ರೂ. ಫೀಸ್ ಪಡೆಯುತ್ತಿದ್ದ ಡಾಕ್ಟರ್‌ಗೆ ಪದ್ಮಶ್ರೀ

    ಚಿಕಿತ್ಸೆಗೆ ಕೇವಲ 20 ರೂ. ಫೀಸ್ ಪಡೆಯುತ್ತಿದ್ದ ಡಾಕ್ಟರ್‌ಗೆ ಪದ್ಮಶ್ರೀ

    ನವದೆಹಲಿ: ಚಿಕಿತ್ಸೆಗಾಗಿ ಜನರಿಂದ ಕೇವಲ 20 ರೂ. ಫೀಸ್ ಪಡೆಯುತ್ತಾ ಬಡವರಿಗೆ ನೆರವಾಗುತ್ತಿರುವ ಮಧ್ಯಪ್ರದೇಶದ ಡಾಕ್ಟರ್‍ರೊಬ್ಬರಿಗೆ (Doctor) 2023ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ (Padma Shri Award) ಒಲಿದಿದೆ.

    ಹೌದು. ಬುಧವಾರ ಸಂಜೆ ಕೇಂದ್ರ ಸರ್ಕಾರವು ಪದ್ಮಶ್ರೀ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಮಧ್ಯಪ್ರದೇಶದ (Madhya Pradesh) ಜಬಲ್‍ಪುರ (Jabalpur) ಜಿಲ್ಲೆಯ 77 ವರ್ಷದ ವೈದ್ಯ ಡಾ.ಎಂ.ಸಿ. ದಾವರ್ (Dr M C Dawar) ಅವರ ಹೆಸರಿದೆ.

    ಡಾ.ದಾವರ್ ಅವರು 1946ರ ಜ. 16ರಂದು ಪಾಕಿಸ್ತಾನದ ಪಂಜಾಬ್‍ನಲ್ಲಿ ಜನಿಸಿದರು. ದೇಶ ವಿಭಜನೆಯ ನಂತರ ದಾವರ್ ಕುಟುಂದವರೊಂದಿಗೆ ಭಾರತಕ್ಕೆ ಸ್ಥಳಾಂತರಗೊಂಡರು. 1967ರಲ್ಲಿ ತಮ್ಮ ಎಂಬಿಬಿಎಸ್ ಪದವಿಯನ್ನು ಜಬಲ್‌ಪುರದಲ್ಲಿ ಪೂರ್ಣಗೊಳಿಸಿದರು. ನಂತರ 1971ರಲ್ಲಿ ಇಂಡೋ ಪಾಕ್ ಯುದ್ಧದ ಸಮಯದಲ್ಲಿ ಸುಮಾರು ಒಂದು ವರ್ಷ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದರು.

    1972ರಿಂದ ಜಬಲ್ಪುರದಲ್ಲಿ ಆಸ್ಪತ್ರೆಯನ್ನು ತೆರೆದು, ಅಲ್ಲಿಂದ ಜನರಿಗೆ ಚಿಕಿತ್ಸೆ ನೀಡುತ್ತಾ ಬಂದಿದ್ದಾರೆ. ವಿಶೇಷವೆಂದರೆ ಅವರು ಆಸ್ಪತ್ರೆಯನ್ನು ಪ್ರಾರಂಭಿಸಿದಾಗ ಕೇವಲ 2 ರೂ. ಪಡೆಯುತ್ತಿದ್ದರು. ಎಲ್ಲ ಸೌಲಭ್ಯಗಳು ದುಬಾರಿಯಾಗುತ್ತಿರುವ ಈ ಸಮಯದಲ್ಲೂ ಕೇವಲ 20 ರೂ. ಅನ್ನು ಫೀಸ್ ಆಗಿ ಪಡೆಯುತ್ತಿದ್ದಾರೆ. ಇದರಿಂದಾಗಿ ಅನೇಕ ಬಡವರಿಗೆ ಅನೇಕ ಸಹಾಯವಾಗುತ್ತಿದೆ.

    ಈ ಬಗ್ಗೆ ಮಾತನಾಡಿದ ಅವರು, ಇಷ್ಟು ಕಡಿಮೆ ಶುಲ್ಕ ವಿಧಿಸುವ ಬಗ್ಗೆ ಮನೆಯಲ್ಲಿ ಚರ್ಚೆ ನಡೆದಿತ್ತು. ಆದರೆ ಅದರ ಬಗ್ಗೆ ಯಾವುದೇ ತಕರಾರು ಇರಲಿಲ್ಲ, ನಮ್ಮ ಏಕೈಕ ಗುರಿ ಜನರ ಸೇವೆಯಾಗಿದೆ. ಆದ್ದರಿಂದ ಶುಲ್ಕವನ್ನು ಹೆಚ್ಚಿಸಲಿಲ್ಲ. ನೀವು ತಾಳ್ಮೆಯಿಂದ ಕೆಲಸ ಮಾಡಿದರೆ ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ ಮತ್ತು ಸಾಧನೆಯನ್ನು ಗೌರವಿಸಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ನೂರು ಬಾರಿ ಮೋದಿ, ಶಾ ರಾಜ್ಯಕ್ಕೆ ಬಂದ್ರೂ, ಕಾಂಗ್ರೆಸ್ ನೂರಕ್ಕೆ ನೂರು ಗೆಲ್ಲುತ್ತೆ: ಸಿದ್ದರಾಮಯ್ಯ

    ದಾವರ್ ಅವರ ಮಗ ರಿಶಿ ಮಾತನಾಡಿ, ರಾಜಕೀಯದ ಉದ್ದೇಶದಿಂದ ಮಾತ್ರ ಪ್ರಶಸ್ತಿಗಳನ್ನು ನೀಡಲಾಗುತ್ತದೆ ಎಂದು ನಾವು ಭಾವಿಸಿದ್ದೆವು. ಆದರೆ ಸರ್ಕಾರವು ದೇಶಕ್ಕಾಗಿ ದುಡಿಯುವ ಜನರನ್ನು ಹುಡುಕಿ ಗೌರವಿಸುತ್ತಿರುವ ರೀತಿ ತುಂಬಾ ಒಳ್ಳೆಯದು. ನಮ್ಮ ತಂದೆಗೆ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದರು. ಇದನ್ನೂ ಓದಿ: ಟಿಕೆಟ್ ಘೋಷಣೆ ವೇಳೆ ಸಮಸ್ಯೆ, ಸವಾಲು ನಿರ್ವಹಣೆಗೆ ಬಿಜೆಪಿ ಹೈಕಮಾಂಡ್ ಪ್ರೀಪ್ಲಾನ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Hijab Row: ನಾವು ಯಾವ ದೇಶದಲ್ಲಿ ಇರುತ್ತೇವೆಯೋ ಆ ದೇಶದ ನಿಯಮಗಳನ್ನು ಪಾಲಿಸಬೇಕು: ಅಬ್ದುಲ್ ಖಾದರ್ ನಡುಕಟ್ಟಿನ್

    Hijab Row: ನಾವು ಯಾವ ದೇಶದಲ್ಲಿ ಇರುತ್ತೇವೆಯೋ ಆ ದೇಶದ ನಿಯಮಗಳನ್ನು ಪಾಲಿಸಬೇಕು: ಅಬ್ದುಲ್ ಖಾದರ್ ನಡುಕಟ್ಟಿನ್

    ಹುಬ್ಬಳ್ಳಿ: ಹಿಜಬ್ ಬಗ್ಗೆ ಕೋರ್ಟ್ ನೀಡಿರುವ ತೀರ್ಪನ್ನು ಗೌರವಿಸಿ. ಕೆಲವೊಮ್ಮೆ ಹರಾಮ್ ಇದ್ದದ್ದನ್ನು ಸಹ ಹಲಾಲ್ ಎಂದು ಭಾವಿಸಿಕೊಂಡು ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಹಿಜಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪದ್ಮಶ್ರೀ ಪುರಸ್ಕೃತ ಅಬ್ದುಲ್ ಖಾದರ್ ನಡುಕಟ್ಟಿನ್ ಅಭಿಪ್ರಾಯಪಟ್ಟಿದ್ದಾರೆ.

    ಹುಬ್ಬಳ್ಳಿಯಲ್ಲಿ ಹಿಜಬ್ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮುಸ್ಲಿಂ ಬಾಂಧವರಲ್ಲಿ ನನ್ನದೊಂದು ವಿನಂತಿ ಏನೆಂದರೆ, ನಾವು ಯಾವ ದೇಶದಲ್ಲಿ ಇರುತ್ತೇವೆಯೋ ಆ ದೇಶದ ನಿಯಮಗಳನ್ನು ಪಾಲಿಸಬೇಕು ಎಂದು ಮೊಹಮ್ಮದ್ ಪೈಗಂಬರರೇ ಹೇಳಿದ್ದಾರೆ. ಇದೀಗ ನಾವು ಇರುವ ದೇಶದ ನಿಯಮಗಳನ್ನು ಗೌರವಿಸಿ ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಮಡಿದ ನವೀನ್ ಪಾರ್ಥೀವ ಶರೀರ ಕೊನೆಗೂ ತಾಯ್ನಾಡಿಗೆ

    ಹಿಜಬ್ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪನ್ನು ಗೌರವಿಸಿ ಕೆಲವೊಮ್ಮೆ ಹರಾಮ್ ಇದ್ದದ್ದನ್ನು ಸಹ ಹಲಾಲ್ ಎಂದು ಭಾವಿಸಿಕೊಂಡು ಹೊಂದಾಣಿಕೆ ಮಾಡಿಕೊಳ್ಳಬೇಕು. ರಾಜ್ಯದ ಉಚ್ಚನ್ಯಾಯಾಲಯ ನೀಡಿರುವ ಆದೇಶವನ್ನು ಪಾಲನೆ ಮಾಡೋಣ. ನಮ್ಮ ನೆಲೆದ ಕಾನೂನಿಗೆ ಗೌರವ ನೀಡಬೇಕು. ಹಿಜಬ್ ವಿಚಾರದಲ್ಲಿ ಹೋರಾಟ ಮಾಡುವುದು ಸರಿಯಲ್ಲ ಎಂದು ಮುಸ್ಲಿಂ ಬಾಂಧವರಲ್ಲಿ ವಿನಂತಿಸಿಕೊಂಡರು. ಇದನ್ನೂ ಓದಿ: ಮಹಾತ್ಮ ಗಾಂಧಿ ಧರ್ಮಪತ್ನಿ ಕೂಡ ತಲೆಗೆ ಸೆರಗು ಹಾಕುತ್ತಿದ್ದರು: ಹಿಜಬ್‌ ಬೆಂಬಲಿಸಿದ ಹೆಚ್‌ಡಿಕೆ

  • ಪದ್ಮಶ್ರೀ ಪುರಸ್ಕೃತೆ ಶಾಂತಿದೇವಿ ನಿಧನ- ಪ್ರಧಾನಿ ಸೇರಿ ಗಣ್ಯರಿಂದ ಸಂತಾಪ

    ಪದ್ಮಶ್ರೀ ಪುರಸ್ಕೃತೆ ಶಾಂತಿದೇವಿ ನಿಧನ- ಪ್ರಧಾನಿ ಸೇರಿ ಗಣ್ಯರಿಂದ ಸಂತಾಪ

    ಭುವನೇಶ್ವರ್: ಸಮಾಜ ಸೇವಕಿ ಹಾಗೂ ಪದ್ಮಶ್ರೀ ಪುರಸ್ಕೃತೆ ಶಾಂತಿದೇವಿ (88) ಭಾನುವಾರ ರಾತ್ರಿ ಒಡಿಶಾದ ರಾಯಗಡ ಜಿಲ್ಲೆಯ ಗುಣಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

    ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಂತಿದೇವಿ ಪ್ರಜ್ಞಾಹೀನರಾಗಿದ್ದರು. ಕುಟುಂಬಸ್ಥರು ಅವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಶಾಂತಾದೇವಿ ಆಗಿನ ಅವಿಭಜಿತ ಕೊರಾಪುಟ್ ಜಿಲ್ಲೆಯ ಬುಡಕಟ್ಟು ಜನಾಂಗದ ಮಹಿಳೆಯರ ಉನ್ನತಿಗಾಗಿ ಹೋರಾಡಿ ಅತ್ಯಮೂಲ್ಯ ಕೊಡುಗೆಯನ್ನು ನೀಡಿದ್ದಾರೆ.

    ಬುಡಕಟ್ಟು ಮಕ್ಕಳಿಗಾಗಿ ರಾಯಗಡ ಜಿಲ್ಲೆಯ (ಅವಿಭಜಿತ ಕೊರಾಪುಟ್ ಜಿಲ್ಲೆ) ಸಂಖಲ್ಪದರ್ ಗ್ರಾಮದಲ್ಲಿ ಆಶ್ರಮವನ್ನು ಸ್ಥಾಪಿಸಿ ಕುಷ್ಠ ರೋಗಿಗಳ ಸೇವೆಯನ್ನು ಮಾಡಿದ್ದರು. ಅಷ್ಟೇ ಅಲ್ಲದೇ ಅನಾಥರು, ನಿರ್ಗತಿಕರು ಮತ್ತು ಬಡ ಮಕ್ಕಳ ಪುನರ್ವಸತಿಗಾಗಿ ಅವರು 1964ರಲ್ಲಿ ರಾಯಗಡ ಜಿಲ್ಲೆಯ ಗುಣಪುರದಲ್ಲಿ ಸೇವಾ ಸಮಾಜ ಆಶ್ರಮವನ್ನು ಸ್ಥಾಪಿಸಿದರು. ಇದನ್ನೂ ಓದಿ:  ಪಾಕ್ ಪ್ರಧಾನಿ ಅಂತರಾಷ್ಟ್ರೀಯ ಭಿಕ್ಷುಕ: ಸಿರಾಜುಲ್ ಹಕ್

    ಶಾಂತಿದೇವಿಯು ಗುಣಪುರ್ ಮತ್ತು ರಾಯಗಡದಲ್ಲಿ ಹೆಣ್ಣುಮಕ್ಕಳಿಗೆ ಮೀಸಲಾದ ಮೂರು ಅನಾಥಾಶ್ರಮಗಳನ್ನು ಸ್ಥಾಪಿಸಿದ್ದಾರೆ. ಬುಡಕಟ್ಟು ಬಾಲಕಿಯರಿಗಾಗಿ ಲಿಮಾಮೆಡಾದಲ್ಲಿ ಹಾಸ್ಟೆಲ್, ರಾಯಗಡ ಮತ್ತು ಗಜಪತಿಯಲ್ಲಿ ಬುಡಕಟ್ಟು ಮಕ್ಕಳಿಗಾಗಿ ಎಂಟು ಕಲ್ಯಾಣ ಕೇಂದ್ರಗಳನ್ನು ತೆರೆದಿದ್ದಾರೆ. ಒಡಿಶಾದ ಪ್ರಸಿದ್ಧ ಸಮಾಜ ಸೇವಕಿ, ಗಾಂಧಿವಾದಿ ಅನುಯಾಯಿಯಾದ ಶಾಂತಿದೇವಿ ಅವರಿಗೆ ಪದ್ಮಶ್ರೀ ಸೇರಿದಂತೆ ಜಮುನಾಲಾಲ್ ಬಜಾಜ್ ಪ್ರಶಸ್ತಿ ಮತ್ತು ರಾಧಾನತ್ ರಥ ಶಾಂತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇದನ್ನೂ ಓದಿ: ವಜ್ರ ಖಚಿತ ಐಫೋನ್ ಕದ್ದು ವಾಟ್ಸಪ್ ಸ್ಟೇಟಸ್‍ನಲ್ಲಿ ಸಿಕ್ಕಿ ಬಿದ್ರು 

    ಶಾಂತಿದೇವಿ ಅವರ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಬಡವರ ಹಾಗೂ ಹಿಂದುಳಿದವರ ಧ್ವನಿಯಾಗಿದ್ದ ಶಾಂತಿ ದೇವಿ ಅವರು ನೆನಪಿನಲ್ಲಿರುತ್ತಾರೆ. ಅವರು ಹಿಂದುಳಿದವರ ಹಾಗೂ ಬಡವರ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದರಲ್ಲದೇ, ನ್ಯಾಯಯುತ ಸಮಾಜಕ್ಕಾಗಿ ಹೋರಾಡಿದ್ದರು. ಅವರ ನಿಧನದಿಂದ ನೋವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

  • ನನಗೆ ಜನರ ಪ್ರೀತಿಯೇ ದೊಡ್ಡ ಪ್ರಶಸ್ತಿ: ಸೋನು ಸೂದ್

    ನನಗೆ ಜನರ ಪ್ರೀತಿಯೇ ದೊಡ್ಡ ಪ್ರಶಸ್ತಿ: ಸೋನು ಸೂದ್

    ಮುಂಬೈ: ಬೇರೆ ಬೇರೆ ಕ್ಷೇತ್ರದಲ್ಲಿ ಸಧನೆ ಮಾಡಿದ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ. ಸೋನುಗೆ ಪದ್ಮಶ್ರೀ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಈ ವಿಚಾರವಾಗಿ ನಟ ಸೋನು ಸೂದ್ ಮಾತನಾಡಿದ್ದಾರೆ.

    ಪ್ರಾಮಾಣಿಕವಾಗಿ ಹೇಳೋದಾದರೆ ಇದನ್ನು ನಾನು ನಿರೀಕ್ಷಿಸಿರಲಿಲ್ಲ. ನನಗೆ ಜನರ ಪ್ರೀತಿಯೇ ದೊಡ್ಡ ಪ್ರಶಸ್ತಿ. ನನ್ನ ಮನೆಯ ಕೆಳಗೆ ನನ್ನನ್ನು ಭೇಟಿಯಾಗಲು ಈಗಲೂ ಜನರು ಕಾಯುತ್ತಿದ್ದಾರೆ ಎಂದಿದ್ದಾರೆ. ಈ ಮೂಲಕ ಜನರ ಅಭಿಮಾನ ಹಾಗೂ ಪ್ರೀತಿಯೇ ದೊಡ್ಡದು ಎಂದು ರಿಯಲ್ ಹೀರೋ ಹೇಳಿದ್ದಾರೆ. ಇದನ್ನೂ ಓದಿ:  ಕಂಗನಾಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯುವಂತೆ ನವಾಬ್ ಮಲ್ಲಿಕ್ ಒತ್ತಾಯ

    ಮುಂದೆಯೂ ತಮ್ಮ ಕೆಲಸವನ್ನು ಮುಂದುವರಿಸಿಕೊಂಡು ಹೋಗುವ ಉದ್ದೇಶ ಇದೆ. ಈ ಬಗ್ಗೆ ಅವರು ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ. ಜನರು ಸಹಾಯಕ್ಕಾಗಿ ನನ್ನ ಬಳಿಗೆ ಬರುವವರೆಗೂ, ಅವರಿಗೆ ನನ್ನಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇನೆ. ನನ್ನ ಪ್ರಯತ್ನಗಳಿಗೆ ಮನ್ನಣೆ ಇದೆಯೋ ಇಲ್ಲವೋ ಎಂಬುದು ಮುಖ್ಯವಲ್ಲ. ಯಾರೋ ಗುರುತಿಸಬೇಕು ಎಂದು ನಾನು ಇದನ್ನು ಮಾಡುತ್ತಿಲ್ಲ. ನಾನು ಪ್ರತಿ ರಾತ್ರಿ ಚಿಂತೆ ಇಲ್ಲದೆ ಸುಖ ನಿದ್ರೆ ಪಡೆಯುತ್ತಿದ್ದೇನಲ್ಲ ಅದನ್ನು ಯಾರಿಂದಲೂ ವಿವರಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ:  ನನ್ನ ತಪ್ಪು ಸಾಬೀತಾದರೆ ಪದ್ಮಶ್ರೀ ಹಿಂದಿರುಗಿಸುವೆ: ಕಂಗನಾ ರಣಾವತ್

    ಸೋನು ಸೂದ್ ಅವರು ಕೊರೊನಾ ಸಂಕಷ್ಟ ಬಂದಾಗಿನಿಂದನೂ ಒಂದಲ್ಲಾ ಒಂದು ರೀತಿ ಜನರಿಗೆ ಸಹಾಯವನ್ನು ಮಾಡುತ್ತಾ ಜನರ ಬಾಕಿಗೆ ಬೆಳಕಾಗಿದ್ದಾರೆ. ಕೊರೊನಾ ಸಂಕಷ್ಟದಿಂದ ಕೆಲಸ ಕಳೆದುಕೊಂಡಿದ್ದ ಬಡ ಜನರಿಗೆ ಉದ್ಯೋಗ ಮಾಡಲು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡುತ್ತಿದ್ದಾರೆ.

  • ಕಂಗನಾಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯುವಂತೆ ನವಾಬ್ ಮಲ್ಲಿಕ್ ಒತ್ತಾಯ

    ಕಂಗನಾಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯುವಂತೆ ನವಾಬ್ ಮಲ್ಲಿಕ್ ಒತ್ತಾಯ

    ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್‍ಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕೆಂದು ಮಹಾರಾಷ್ಟ್ರದ ಸಚಿವ ಮತ್ತು ಎನ್‍ಸಿಪಿ ನಾಯಕ ನವಾಬ್ ಮಲ್ಲಿಕ್ ಹೇಳಿದ್ದಾರೆ.

    ಸದಾ ಒಂದಲ್ಲಾ ಒಂದು ವಿವಾದಗಳಿಂದ ಸುದ್ದಿಯಾಗುವ ನಟಿ ಕಂಗನಾ ರಣಾವತ್ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ 1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂದು ಪರೋಕ್ಷವಾಗಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸ್ವಾತಂತ್ರ್ಯ ಸಿಕ್ಕಿತು ಎಂದು ಹೇಳುವ ಮೂಲಕ ವಿವಾದಕ್ಕೆ ಸಿಲುಕಿದರು. ಕಂಗನಾರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣ ಸೇರಿದಂತೆ ಹಲವೆಡೆ ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಇದನ್ನೂ ಓದಿ: ಮನೆಯಲ್ಲಿದ್ರೆ ಮಕ್ಕಳ ಸಂಖ್ಯೆ ಹೆಚ್ಚಾಗುತ್ತೆ ಅನ್ನೋ ಭಯವಿದೆ: ಸೈಫ್ ಆಲಿ ಖಾನ್

    ಇದೀಗ ಕಂಗನಾ ಹೇಳಿಕೆ ವಿರುದ್ಧ ನವಾಬ್ ಮಲ್ಲಿಕ್ ಸಿಡಿದೆದ್ದಿದ್ದು, 2014ರಲ್ಲಿ ಸ್ವಾತಂತ್ರ್ಯ ಸಿಕ್ಕಿದೆ ಎಂಬ ಕಂಗನಾ ಹೇಳಿಕೆ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದೆ. ಹೀಗಾಗಿ ಆಕೆಗೆ ನೀಡುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇದು ಹುಚ್ಚುತನವೋ ಅಥವಾ ದೇಶದ್ರೋಹವೋ – ಕಂಗನಾ ವಿರುದ್ಧ ವರುಣ್ ಗಾಂಧಿ ಕಿಡಿ

    ಈ ಕುರಿತಂತೆ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಕೂಡ ಟ್ವೀಟ್ ಮಾಡಿದ್ದು, ಮಹಾತ್ಮ ಗಾಂಧಿ ಅವರ ತ್ಯಾಗ ಬಲಿದಾನಕ್ಕೆ ಅವಮಾನಗೊಳಿಸಿಸಲಾಗಿದೆ, ಶಹೀದ್ ಮಂಗಲ್ ಪಾಂಡೆಯಿಂದ ರಾಣಿ ಲಕ್ಷ್ಮೀಬಾಯಿಯವರೆಗೆ , ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ತಿರಸ್ಕರಿಸಲಾಗಿದೆ. ಈ ಆಲೋಚನೆಗೆ ಹುಚ್ಚುತನ ಎಂದು ಕರೆಯಬೇಕೋ, ದೇಶದ್ರೋಹ ಎನ್ನಬೇಕೋ’ ಎಂದು ಪ್ರಶ್ನಿಸಿದ್ದರು. ಅಲ್ಲದೇ ಕಂಗನಾ ವಿರುದ್ಧ ಆಮ್ ಆದ್ಮಿ ಪಾರ್ಟಿ ಮುಂಬೈ ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ.  ಇದನ್ನೂ ಓದಿ: ಡೆಸರ್ಟ್ ಸಫಾರಿ ಬಳಿಕ ಬಿಕಿನಿಯಲ್ಲಿ ಜಾನ್ವಿ, ಖುಷಿ ಕಪೂರ್ ಮೋಜು, ಮಸ್ತಿ

  • ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ನವದೆಹಲಿ: ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

    ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

    ಹಾಜಬ್ಬ ಕಳೆದ 20 ವರ್ಷಗಳಿಂದ ದಕ್ಷಿಣ ಕನ್ನಡದ ಕೊಣಾಜೆ ಸಮೀಪದ ಹರೇಕಳ ನ್ಯೂ ಪಡ್ಪು ಗ್ರಾಮದಲ್ಲಿ ಬಡ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿದ್ದಾರೆ. ವಿಶೇಷವೆಂದರೆ ತನಗಿಲ್ಲದ ಶಿಕ್ಷಣ ತನ್ನ ಊರಿನ ಮಕ್ಕಳಿಗೆ ಸಿಗಬೇಕು ಎನ್ನುವ ಮಹದಾಸೆಯಿಂದ ಕಿತ್ತಳೆ ಮಾರುತ್ತಿದ್ದ ಹರೇಕಳ ಹಾಜಬ್ಬ, ಕಿತ್ತಳೆ ಮಾರಿ ಜೀವನ ಸಾಗಿಸಿ ಉಳಿದ ಹಣದಿಂದಲೇ ಅಂಗನವಾಡಿ ಆರಂಭಿಸುವ ಮೂಲಕ ಶಿಕ್ಷಣ ನೀಡುತ್ತಿದ್ದಾರೆ.

    ಪ್ರಶಸ್ತಿ: 2004ರಲ್ಲಿ ಕನ್ನಡ ಪತ್ರಿಕೆಯೊಂದು ಹಾಜಬ್ಬರನ್ನು ವರ್ಷದ ವ್ಯಕ್ತಿ ಎಂದು ಪ್ರಶಸ್ತಿ ನೀಡಿ ಗುರುತಿಸುವ ಮೂಲಕ ಹಾಜಬ್ಬ ಬೆಳಕಿಗೆ ಬಂದಿದ್ದರು. ಬಳಿಕ ದೆಹಲಿಯ ಸಿಎನ್‍ಎನ್-ಐಬಿಎನ್ ರಿಯಲ್ ಹೀರೋ ಪ್ರಶಸ್ತಿ ನೀಡಿ ಗೌರವಿಸಿತ್ತು. ಮಂಗಳೂರು ವಿಶ್ವವಿದ್ಯಾನಿಲಯ ಇರುವ ಕೊಣಾಜೆ ಸಮೀಪದ ಹರೇಕಳದಲ್ಲಿ ಗ್ರಾಮೀಣ ಮಕ್ಕಳಲ್ಲಿ ಶಾಲೆಯ ಸೌಲಭ್ಯ ಇರಲಿಲ್ಲ. ಮಂಗಳೂರಿನ ಕೇಂದ್ರ ಪ್ರದೇಶ ಸ್ಟೇಟ್ ಬ್ಯಾಂಕ್ ಸರ್ಕಲಿನಲ್ಲಿ ಕಿತ್ತಳೆ ಹಣ್ಣು ಮಾರಾಟ ಮಾಡುವ ಕಾಯಕ ಮಾಡುತ್ತಿದ್ದ ಹಾಜಬ್ಬ ತಾವೇ ಶಾಲೆಯೊಂದನ್ನು ತನ್ನೂರಿನಲ್ಲಿ ನಿರ್ಮಿಸಿದ್ದರು.

    ಕಿತ್ತಳೆ ಮಾರಾಟ ಮಾಡುತ್ತಿದ್ದಾಗ ವಿದೇಶಿ ಮಹಿಳೆಯ ಆಂಗ್ಲ ಭಾಷೆಯ ಪ್ರಶ್ನೆಗೆ ಉತ್ತರ ನೀಡಲಾಗದ ಹಾಜಬ್ಬರಿಗೆ ಶಿಕ್ಷಣದ ಮಹತ್ವ ಅರಿವಾಗಿತ್ತು. ಈ ಹಿನ್ನೆಲೆಯಲ್ಲಿಯೇ ತನ್ನೂರಿನ ಮಕ್ಕಳಿಗೆ ಶಾಲೆ ತೆರೆಯಲು ಕಚೇರಿಯಿಂದ ಕಚೇರಿಗೆ ಅಲೆದು ಶಾಲೆ ನಿರ್ಮಾಣ ಮಾಡಿದ್ದರು. ಇವರ ಸಾಧನೆಯ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದರೂ ಹೆಚ್ಚಿನ ಪ್ರಚಾರ ಪಡೆದುಕೊಂಡಿರಲಿಲ್ಲ. ಇದೀಗ ಅವರು ತನ್ನೂರಿನಲ್ಲಿ ಕಾಲೇಜು ಆರಂಭಿಸುವ ಆಶಯ ಹೊಂದಿದ್ದಾರೆ.

  • ಪುನೀತ್‍ಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಮುನಿರತ್ನ

    ಪುನೀತ್‍ಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಮುನಿರತ್ನ

    ಕೋಲಾರ: ಪುನೀತ್ ಒಬ್ಬ ನಾಯಕ ನಟನಲ್ಲದೆ, ಸೇವೆಯಲ್ಲಿ ಅವರ ಕಾರ್ಯ ಶ್ಲಾಘನೀಯವಾದುದು. ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದರೆ ಅದಕ್ಕಿಂತ ದೊಡ್ಡ ಸಂತೋಷ ಮತ್ತೊಂದಿಲ್ಲ. ಕೇಂದ್ರ ಸರ್ಕಾರ ಅವರಿಗೆ ಪ್ರಶಸ್ತಿಯನ್ನು ನೀಡಬೇಕು ಎಂದು ತೋಟಗಾರಿಕಾ ಸಚಿವ ಮುನಿರತ್ನ ಆಗ್ರಹಿಸಿದ್ದಾರೆ.

    ಕೋಲಾರದ ಕೋಟಿಲಿಂಗ ದೇಗುಲಕ್ಕೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು. ಇದೇ ವೇಳೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. ಉಪಚುನಾವಣೆ ಸೋಲಿನಿಂದ ತೈಲ ಬೆಲೆ ಇಳಿಕೆಯಾಗಿಲ್ಲ. ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗಿದ್ದರಿಂದ ಇಷ್ಟು ದಿನ ದುಬಾರಿಯಾಗಿತ್ತು. ಬದಲಿಗೆ ಉಪಚುನಾವಣೆಯಲ್ಲಿ ಸೋತಿದ್ದರಿಂದ ಬೆಲೆ ಇಳಿಕೆಯಾಗಿಲ್ಲ ಎಂದರು. ಇದನ್ನೂ ಓದಿ: ಅಪ್ಪು ಸದಾ ನಮ್ಮ ಹೃದಯದಲ್ಲಿ ನಗುತ್ತಿರುತ್ತಾರೆ – ಪುನೀತ್ ನೆನೆದು ಬಿಕ್ಕಿ, ಬಿಕ್ಕಿ ಅತ್ತ ಸೂರ್ಯ

    ಉಪಚುನಾವಣೆಯ ಸೋಲಿನಿಂದ ಬಿಜೆಪಿಗೆ ಹಿನ್ನಡೆಯಾಗಿಲ್ಲ. ಆದರೆ ಕಳೆದ ಉಪ ಚುನಾವಣೆಯಲ್ಲಿ ಸೋತಿದ್ದನ್ನು ಕಾಂಗ್ರೆಸ್‍ನವರು ಮರೆತಿದ್ದಾರೆ. ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರ ಊಹಾಪೋಹ. ಯೋಗೇಶ್ವರ್ ಅವರನ್ನು ಕಾಂಗ್ರೆಸ್‍ಗೆ ಸೇರಿಸಿಕೊಳ್ಳಲು ಇನ್ನೊಬ್ಬರು ಬಯಸ್ತಿದ್ದಾರೆ. ಆದರೆ ಯೋಗೇಶ್ವರ್ ಬಿಜೆಪಿ ಬಿಡುವುದಿಲ್ಲ. ಅವರಿಗೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್‍ಗೆ ಬಿಟ್ಟ ವಿಚಾರ ಎಂದು ಹೇಳಿದರು. ಇದನ್ನೂ ಓದಿ: ನನ್ನ ಮಗುವನ್ನು ಕಳೆದುಕೊಂಡಿದ್ದೇನೆ – ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ

  • ನನ್ನ ಆರೋಪ ಸುಳ್ಳೆಂದರೆ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡ್ತೇನೆ: ಕಂಗನಾ

    ನನ್ನ ಆರೋಪ ಸುಳ್ಳೆಂದರೆ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡ್ತೇನೆ: ಕಂಗನಾ

    – ಬಾಲಿವುಡ್ ಕ್ವೀನ್‍ಗೆ ಪೊಲೀಸರಿಂದ ಸಮನ್ಸ್

    ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ವಿಚಾರದಲ್ಲಿ ನಾನು ಮಾಡಿದ ಆರೋಪ ಸುಳ್ಳು ಎಂದರೆ ನನಗೆ ಬಂದ ಪದ್ಮಶ್ರೀ ಪ್ರಶಸ್ತಿಯನ್ನು ನಾನು ವಾಪಸ್ ನೀಡುತ್ತೇನೆ ಎಂದು ನಟಿ ಕಂಗನಾ ರಣಾವತ್ ಅವರು ಹೇಳಿದ್ದಾರೆ.

    ಜೂನ್ 14ರಂದು ನಟ ಸುಶಾಂತ್ ಸಿಂಗ್ ರಜಪೂತ್ ಅವರು ತಮ್ಮ ಮುಂಬೈ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸುಶಾಂತ್ ಆತ್ಮಹತ್ಯೆ ನಂತರ ಅವರ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದವು. ಈ ನಡುವೆ ನಟಿ ಕಂಗನಾ ರಣಾವತ್ ಅವರು ಸುಶಾಂತ್ ಅವರದ್ದು ಆತ್ಮಹತ್ಯೆಯಲ್ಲ, ಅದೊಂದು ಯೋಜಿತ ಕೊಲೆ ಎಂದು ಆರೋಪ ಮಾಡಿದ್ದರು.

    ಸುಶಾಂತ್ ಸಾವಿನ ನಂತರ ವಿಡಿಯೋ ಮಾಡುವ ಮೂಲಕ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದ್ದ ಕಂಗನಾ, ಬಾಲಿವುಡ್ ಮೂವಿ ಮಾಫಿಯಾ ಸುಶಾಂತ್ ಅವರನ್ನು ಪ್ಲಾನ್ ಮಾಡಿ ಮರ್ಡರ್ ಮಾಡಿದೆ. ಬಾಲಿವುಡ್‍ನಲ್ಲಿ ಇರುವ ಸ್ವಜನಪಕ್ಷಪಾತಕ್ಕೆ ಸುಶಾಂತ್ ಬಲಿಯಾಗಿದ್ದಾರೆ ಎಂದು ಆರೋಪ ಮಾಡಿದ್ದರು. ಜೊತೆಗೆ ಗಲ್ಲಿ ಬಾಯ್ ಸಿನಿಮಾ ಮತ್ತು ನಟ ಸಂಜಯ್ ದತ್ ಅವರ ಹೆಸರನ್ನು ನೇರವಾಗಿ ತೆಗೆದುಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಈ ಕಾರಣದಿಂದ ಮುಂಬೈ ಪೊಲೀಸರು, ಕಂಗನಾ ವಿರುದ್ಧ ಸಮನ್ಸ್ ಜಾರಿಮಾಡಿದ್ದು, ಅವರ ಆರೋಪವನ್ನು ಸಾಬೀತು ಪಡಿಸುವಂತೆ ಹೇಳಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕಂಗನಾ, ನಾನು ಹೇಳಿರುವುದನ್ನು ಸಾಬೀತು ಪಡಿಸಲು ಸಾಧ್ಯವಿಲ್ಲ. ಆದರೆ ನಾನು ಹೇಳಿರುವುದು ಸಾರ್ವಜನಿಕ ವಲಯದಲ್ಲಿದೆ. ಅದನ್ನು ಜನರು ಒಪ್ಪಿಕೊಳ್ಳುತ್ತಾರೆ. ನನ್ನ ಮಾತುಗಳನ್ನು ಜನರು ಒಪ್ಪಿಕೊಳ್ಳದಿದ್ದರೆ, ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡುತ್ತೇನೆ ಎಂದು ಹೇಳಿದ್ದಾರೆ.

    ಈ ಹಿಂದೆ ವಿಡಿಯೋ ಮಾಡಿದ್ದ ಕಂಗನಾ, ಸುಶಾಂತ್ ಸಿನಿಮಾ ರಂಗಕ್ಕೆ ಬಂದು ಕಾಯ್ ಪೋಚೆನಂತಹ ಸಿನಿಮಾ ಮಾಡಿದ್ದಾರೆ. ಸ್ಟಾರ್ ಕಿಡ್‍ಗಳ ಡೆಬ್ಯು ಅವಾರ್ಡ್ ನೀಡುವವರು, ಸುಶಾಂತ್‍ಗೆ ಅವಾರ್ಡ್ ಯಾಕೆ ನೀಡಿಲಿಲ್ಲ. ಕೇದರ್ ನಾಥ್, ಧೋನಿ, ಚಿಚೋರೆ ರೀತಿಯ ಒಳ್ಳೆಯ ಸಿನಿಮಾ ಮಾಡಿದ್ದಾರೆ. ಗಲ್ಲಿಬಾಯ್ ರೀತಿಯ ಕೆಟ್ಟ ಸಿನಿಮಾಗಳಿಗೆ ಅವಾರ್ಡ್ ನೀಡುವ ನೀವು, ಚಿಚೋರೆ ರೀತಿಯ ಒಳ್ಳೆಯ ಸಿನಿಮಾ ಗುಡ್ ಡೈರೆಕ್ಟರ್ ಗೆ ಯಾಕೆ ಪ್ರಶಸ್ತಿ ನೀಡುವುದಿಲ್ಲ ಎಂದು ನೇರವಾಗಿಯೇ ನೆಪ್ಟೋಯಿಸಂ ಬಗ್ಗೆ ಮಾತನಾಡಿದ್ದರು.

    ನಾವು ಏನೇ ಮಾಡಿದರೂ ನೀವು ಒಪ್ಪುವುದಿಲ್ಲ. ನಾನು ಕೂಡ ಒಳ್ಳೆಯ ಸಿನಿಮಾ ಮಾಡಿದ್ದೇನೆ. ನಿರ್ಮಾಣ, ನಿರ್ದೇಶನ ಮಾಡಿದ್ದೇನೆ. ನಮ್ಮ ಸಿನಿಮಾವನ್ನು ನೀವು ಯಾಕೆ ಒಪ್ಪುವುದಿಲ್ಲ. ನನ್ನ ಮೇಲೆ ಯಾಕೆ 6 ದೂರುಗಳನ್ನು ದಾಖಲಿಸಿದ್ದೀರಾ? ಒಬ್ಬ ಪತ್ರಕರ್ತ ಸುಶಾಂತ್ ಬಗ್ಗೆ ಬಹಳ ಕೆಟ್ಟದಾಗಿ ಬರೆಯುತ್ತಾನೆ. ಆತ ಖಿನ್ನತೆಗೆ ಒಳಗಾಗಿದ್ದ, ಡ್ರಗ್ಸ್ ಅಡಿಕ್ಟ್ ಎಂದೆಲ್ಲ ಬರೆಯುತ್ತಾರೆ. ಯಾಕೆ ನಿಮಗೆ ಸಂಜಯ್ ದತ್ ಅವರ ಅಡಿಕ್ಷನ್ ಕ್ಯೂಟ್ ಆಗಿ ಇತ್ತಾ ಎಂದು ಖಾರವಾಗಿ ಪ್ರಶ್ನೆ ಮಾಡಿದ್ದರು.

  • ಪದ್ಮಶ್ರೀ ಹರೇಕಳ ಹಾಜಬ್ಬ ಅವರಿಗೆ ಅರಸು ಪ್ರಶಸ್ತಿ ಪ್ರದಾನ

    ಪದ್ಮಶ್ರೀ ಹರೇಕಳ ಹಾಜಬ್ಬ ಅವರಿಗೆ ಅರಸು ಪ್ರಶಸ್ತಿ ಪ್ರದಾನ

    ಮಂಗಳೂರು: ಕಿತ್ತಳೆ ಹಣ್ಣು ಮಾರಾಟ ಮಾಡಿ ಬಂದ ಆದಾಯದಲ್ಲಿ ಗ್ರಾಮೀಣ ಭಾಗದ ಕನ್ನಡ ಶಾಲೆಯನ್ನು ಕಟ್ಟಿ ಬೆಳೆಸಿದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಮಂಗಳೂರಿನ ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ವತಿಯಿಂದ ಅರಸು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

    ನಗರದ ಹಿರಿಯ ವೈದ್ಯ ಮತ್ತು ಪ್ರತಿಷ್ಠಾನದ ಅಧ್ಯಕ್ಷ ಡಾ.ಅಣ್ಣಯ್ಯ ಕುಲಾಲ್ ಉಳ್ತೂರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರತಿಷ್ಠಾನದ ವಿಶಂತಿ ಸಂಭ್ರಮದ ನೆನಪಿಗಾಗಿ ಈ ವರ್ಷದಿಂದ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಅರಸು ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಡಾ.ಮೋಹನ ಆಳ್ವ ಮತ್ತು ಡಾ.ಎಂ.ವಿ.ಕುಲಾಲ್ ಅವರಿಗೆ ಜನವರಿ 19 ರಂದು ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಅನಿವಾರ್ಯ ಕಾರಣದಿಂದ ಅಂದು ಗೈರುಹಾಜರಾಗಿದ್ದ ಹಾಜಬ್ಬ ಅವರಿಗೆ ಸರಳ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅಣ್ಣಯ್ಯ ಕುಲಾಲ್, “ಹಾಜಬ್ಬ ಅವರ ಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ಅದಕ್ಕೂ ಮುನ್ನವೇ ಹಾಜಬ್ಬನವರ ಸೇವೆಯನ್ನು ಪ್ರತಿಷ್ಠಾನ ಗುರುತಿಸಿ ಮೊದಲ ವರ್ಷದ ಅರಸು ಪ್ರಶಸ್ತಿ ಘೋಷಿಸಿತ್ತು. 19ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅವರು ಹಾಜರಾಗದಿದ್ದರೂ, ಇಂದು ಪದ್ಮಶ್ರೀ ಪುರಸ್ಕೃತರಾಗಿ ನಮ್ಮ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ಹೆಮ್ಮೆಯ ವಿಚಾರ” ಎಂದರು.

    ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹಾಜಬ್ಬ ಅವರು, “ನಾನೆಂದೂ ಪ್ರಶಸ್ತಿಗಾಗಿ ಕೆಲಸ ಮಾಡಿಲ್ಲ. ಅನಕ್ಷರಸ್ಥನಾದ ನನಗೆ ಶಿಕ್ಷಣದ ಮಹತ್ವ ಗೊತ್ತಿತ್ತು. ಬಡಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣದಿಂದ ಎಲ್ಲ ಪ್ರತೀಕೂಲಗಳನ್ನೂ ಮೆಟ್ಟಿ ನಿಂತು ಸಮಾಜದ ಸಹಕಾರದೊಂದಿಗೆ ಕನ್ನಡ ಶಾಲೆಯನ್ನು ಕಟ್ಟಿ ಬೆಳೆಸಲು ಸಾಧ್ಯವಾಯಿತು. ಈ ಪ್ರಶಸ್ತಿ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ” ಎಂದು ಬಣ್ಣಿಸಿದರು.

    ಪ್ರತಿಷ್ಠಾನದ ಕಾರ್ಯದರ್ಶಿ ಮಮತಾ ಅಣ್ಣಯ್ಯ ಕುಲಾಲ್, ರಾಜ್ಯ ಐಎಂಎ ಹಿರಿಯ ಉಪಾಧ್ಯಕ್ಷ ಡಾ.ಜಿ.ಕೆ.ಭಟ್ ಸಂಕಬಿತ್ತಿಲು, ವೀರನಾರಾಯಣ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಮೋದರ್, ಮಂಜಣ್ಣ ಬ್ರಿಗೇಡ್ ಅಧ್ಯಕ್ಷ ಮನೋಜ್ ಕುಮಾರ್ ಕೋಡಿಕೆರೆ, ಕನ್ನಡ ಕಟ್ಟೆಯ ಸುರೇಶ್ ಆಚಾರ್, ಕರವೇ ಕರಾವಳಿ ಅಧ್ಯಕ್ಷ ಜಾರ್ಜ್, ಸುಜೀರ್ ಕುಡುಪು, ಮಹಾಬಲ ಕುಲಾಲ್, ಬೈರಾಡಿ ಕೆರೆ ಸಂರಕ್ಷಣಾ ಸಮಿತಿಯ ಶೋಭಾ ಕೇಶವ್, ರಾಜೇಶ್ ಕುಂದರ್, ದೇವದಾಸ್ ಶೆಟ್ಟಿ, ಪ್ರಸಾದ್ ಕಣ್ಣೂರು, ಕುಲಾಲ್ ಯುವವೇದಿಕೆಯ ಅಕ್ಷಯ್ ಕುಲಾಲ್, ಜೇನುಗೂಡಿನ ಅನಿಲ್ ಮತ್ತು ಚಂದ್ರು, ಕುಂಭ ವೈದ್ಯಕೂಟದ ಡಾ.ಸುಷ್ಮಾ ಮತ್ತಿತರರು ಉಪಸ್ಥಿತರಿದ್ದರು.