Tag: Pak

  • ಮೋದಿ ಟೀಕಿಸೋ ಭರದಲ್ಲಿ ಪಾಕ್ ಮೇಲೆ ಪ್ರೀತಿ ತೋರಿದ ಕಾಂಗ್ರೆಸ್ ಶಾಸಕ

    ಮೋದಿ ಟೀಕಿಸೋ ಭರದಲ್ಲಿ ಪಾಕ್ ಮೇಲೆ ಪ್ರೀತಿ ತೋರಿದ ಕಾಂಗ್ರೆಸ್ ಶಾಸಕ

    ಚಿಕ್ಕಮಗಳೂರು: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಜ್ಜನ, ಸೌಮ್ಯ ವ್ಯಕ್ತಿತ್ವ ಹೊಂದಿರುವವನು. ಪಾಕ್‍ನೊಳಗೆ ಬಿದ್ದ ಭಾರತದ ಪೈಲಟ್‍ನನ್ನ ವಾಪಸ್ ಕಳಿಸಿದ್ದಾರೆ ಎಂದರೆ ಅದು ಅವರ ಸೌಜನ್ಯ, ಭಯಕ್ಕಲ್ಲ ಎಂದು ಪಾಕಿಸ್ತಾನ ಪರ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮೃದು ಧೋರಣೆ ತೋರಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಎನ್.ಆರ್.ಪುರ ತಾಲೂಕಿನ ಮೆಣಸೂರಿನಲ್ಲಿ ಮತಯಾಚನೆ ಮಾಡುವ ವೇಳೆ ಪ್ರಧಾನಿ ಮೋದಿಯನ್ನ ಟೀಕಿಸುವ ಭರದಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್‍ರನ್ನ ಹಾಡಿ ಹೊಗಳಿದ್ದಾರೆ. ಆದ್ದರಿಂದ ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

    ಇದೇ ಆಡಿಯೋದಲ್ಲಿ ಗೋವಾದಿಂದ 2 ಬಾಟಲಿ ವಿಸ್ಕಿ ತಂದರೆ ದಂಡ ಹಾಕುತ್ತಾರೆ. 350 ಕೆ.ಜಿ. ಆರ್.ಡಿ.ಎಕ್ಸ್ ನ ಜೀಪಿನಲ್ಲಿ ತಂದು ಸೈನಿಕರ ಬಸ್ಸಿಗೆ ಗುದ್ದಿ ಸೈನಿಕರ ಹತ್ಯೆ ಮಾಡುತ್ತಾರೆ. ಮೋದಿಯವರೆ ಆಗ ಎಲ್ಲೋಗಿತ್ತು ನಿಮ್ಮ ಭದ್ರತೆ, 56 ಇಂಚಿನ ಎದೆ, ನಿಮ್ಮ ಶೌರ್ಯ ಎಂದು ಮೋದಿಯನ್ನ ಟೀಕಿಸುವಾಗ ಪಾಕಿಸ್ತಾನದ ಅಭಿಮಾನಿಯಾಗಿದ್ದಾರೆ. ಮೋದಿ ನೋಡಿ ಪಾಕಿಸ್ತಾನ ಹೆದರಲ್ಲ. ನಮ್ಮ ದೇಶದ ಜನ, ಸೈನಿಕರು ಹಾಗೂ ಭಾವನೆಗಳಿಗೆ ಬೇರೆ ದೇಶಗಳು ಬೆಲೆ ಕೊಡುತ್ತಿವೆ ಎಂದು ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

    ನೀವು ಅಧಿಕಾರದಲ್ಲಿದ್ದಾಗಲೇ ಹಲವು ದಾಳಿಗಳಾಗಿದ್ವು. ಆಗ ಎಲ್ಲೋಗಿತ್ತು ನಿಮ್ಮ ಪೌರುಷ, 56 ಇಂಚಿನ ಎದೆಗಾರಿಕೆ. ನಮ್ಮ ದೇಶದ ಭದ್ರತೆ ಹಾಗೂ ಸೈನಿಕರ ಬಗ್ಗೆ ಮಾತನಾಡಲು ನಿಮಗೆ ಅಧಿಕಾರವಿಲ್ಲ. ಪ್ರಧಾನಿ ಕುರ್ಚಿ ಅಂದರೆ ಮಹಾರಾಜನಿದ್ದಂತೆ, ನೀವು ಮಹಾರಾಜನಂತೆ ನಡೆದುಕೊಳ್ಳಬೇಕಿತ್ತು. ನಿಮ್ಮ ಸರ್ಕಾರ ಮಸೀದಿ ಹಾಗೂ ಚರ್ಚ್ ಕಟ್ಟಲಿಲ್ಲ. ನಮ್ಮ ಕಾಂಗ್ರೆಸ್ ಮತ್ತು ಜಾತ್ಯಾತೀತ ಜನತಾದಳದ ಸರ್ಕಾರ ಮಸೀದಿ ಹಾಗೂ ಕ್ರೈಸ್ತ ದೇವಾಲಯಗಳನ್ನ ನಿರ್ಮಾಣ ಮಾಡಿಕೊಟ್ಟಿದ್ದೇವೆ ಎಂದು ಮೋದಿ ಟೀಕಿಸುವ ಭರದಲ್ಲಿ ಪಾಕಿಸ್ತಾನವನ್ನ ಹೊಗಳಿ ಸಾರ್ವಜನಿಕರ ಟೀಕೆಗೆ ಗುರಿಯಾಗುತ್ತಿದ್ದಾರೆ.

    ಸ್ಥಳೀಯ ಮಟ್ಟದಲ್ಲಿ ಆಡಿಯೋ ವೈರಲ್ ಆಗಿದ್ದು, ಇದೂವರೆಗೂ ಶಾಸಕರು ಯಾವುದೇ ಸ್ಪಷ್ಟನೆ ನೀಡಿಲ್ಲ.

  • ಪಾಕ್ ನಿಂದ ಒಂದು ಗುಂಡು ಗಡಿ ದಾಟಿದ್ರೂ ಅಸಂಖ್ಯಾತ ಗುಂಡು ಹಾರಿಸಿ: ರಾಜನಾಥ್ ಸಿಂಗ್

    ಪಾಕ್ ನಿಂದ ಒಂದು ಗುಂಡು ಗಡಿ ದಾಟಿದ್ರೂ ಅಸಂಖ್ಯಾತ ಗುಂಡು ಹಾರಿಸಿ: ರಾಜನಾಥ್ ಸಿಂಗ್

    ಬೆಂಗಳೂರು: ಭಾರತೀಯ ಸೈನಿಕರ ಗುಂಡಿನ ದಾಳಿಗೆ ಪ್ರತಿದಿನ ಗಡಿಯಲ್ಲಿ 5-6 ಉಗ್ರರು ಹತ್ಯೆಯಾಗುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜ್‍ನಾಥ್ ಸಿಂಗ್ ಹೇಳಿದ್ದಾರೆ.

    ಪಾಕಿಸ್ತಾನ ಪದೇ-ಪದೇ ಕದನ ವಿರಾಮವನ್ನು ಉಲ್ಲಂಘಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವರು, ನೆರೆಯ ದೇಶಗಳು ನಿರಂತರವಾಗಿ ಭಾರತದ ಗಡಿಯೊಳಗೆ ಉಗ್ರಗಾಮಿಗಳನ್ನು ಕಳುಹಿಸಲು ಪ್ರಯತ್ನಿಸುತ್ತಿದ್ದಾರೆ. ಗಡಿಯಲ್ಲಿ ದೇಶದ ರಕ್ಷಣೆ ಮಾಡುತ್ತಿರುವ ಭಾರತೀಯ ಸೈನಿಕರ ಗುಂಡಿಗೆ ಪ್ರತಿ ದಿನ 5-6 ಉಗ್ರರು ಸಾಯುತ್ತಿದ್ದಾರೆ ಎಂದು ತಿಳಿಸಿದರು.

    ನೀವಾಗಿಯೇ ಮೊದಲು ಗುಂಡನ್ನು ಹಾರಿಸಬೇಡಿ, ಒಂದು ವೇಳೆ ಪಾಕಿಸ್ತಾನದಿಂದ ಒಂದು ಗುಂಡು ನಮ್ಮ ಗಡಿ ಪ್ರದೇಶವನ್ನು ದಾಟಿದರೂ, ಪ್ರತ್ಯುತ್ತರವಾಗಿ ಅಸಂಖ್ಯಾತ ಗುಂಡುಗಳನ್ನು ಹಾರಿಸುವಂತೆ ತಿಳಿಸಿರುವುದಾಗಿ ಹೇಳಿದರು.

    ಇದೇ ಸಂದರ್ಭದಲ್ಲಿ ಚೀನಾದೊಂದಿಗಿನ ಡೋಕ್ಲಾಂ ಗಡಿ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಭಾರತದ ದುರ್ಬಲ ದೇಶವಲ್ಲ, ಡೋಕ್ಲಾಂ ಸಂಘರ್ಷವನ್ನು ಚೀನಾದೊಂದಿಗೆ ಬಗೆಹರಿಸಿದ ವಿಧಾನವೇ ಭಾರತದ ಬಲವನ್ನು ತಿಳಿಸುತ್ತದೆ. ವಿಶ್ವ ಹಲವು ಜನರು ಆಸಕ್ತಿಯಿಂದ ಚೀನಾ ಮತ್ತು ಭಾರತದ ನಡುವಿನ ಸಂಘರ್ಷವನ್ನು ಗಮನಿಸುತ್ತಿದ್ದರು ಎಂದು ತಿಳಿಸಿದರು.

    ಒಂದು ವೇಳೆ ಭಾರತವು ದುರ್ಬಲ ರಾಷ್ಟ್ರವಾಗಿದ್ದಾರೆ ಚೀನಾದೊಡನೆ ಇದ್ದ ಸಂಘರ್ಷವನ್ನು ಪರಿಹಾರಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು.