ಬೆಂಗಳೂರು: ಭಾರತ-ಪಾಕಿಸ್ತಾನ (India – Pakistan) ನಡುವೆ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ಕಾರಣ, ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಪೊಲೀಸರಿಗೆ ರಜೆ ಕೊಡುವುದಿಲ್ಲ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ (G Parameshwar) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಯುದ್ದ ಭೀತಿ ಇದೆ. ಗಡಿ ಭಾಗದಲಲ್ಲಿ ಚಟುವಟಿಕೆಗಳು ನಡೆಯುತ್ತಿದೆ. ಉಗ್ರರನ್ನು ನಮ್ಮ ಸೇನೆ ಸದೆಬಡಿಯುತ್ತಿದೆ. ಇಂದಿನ ಪರಿಸ್ಥಿತಿ ತೀವ್ರ ಆದ್ರೆ, ಯುದ್ಧ ಆಗಬಹುದು. ಹೀಗಾಗಿ ಕೇಂದ್ರ ಎಲ್ಲಾ ರಾಜ್ಯಗಳಿಗೆ ಎಚ್ಚರ ವಹಿಸುವಂತೆ ಸೂಚನೆ ಕೊಟ್ಟಿದೆ. ಈ ಹಿನ್ನೆಲೆ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಿದ್ದೇವೆ. ಬೇರೆ ಯಾವುದೇ ರೀತಿಯ ಚಟುವಟಿಕೆಗಳ ಬಗ್ಗೆ ಎಚ್ಚರ ವಹಿಸುವಂತೆ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.
ಒಂದು ವೇಳೆ ಯುದ್ಧದ ಸಮಯ ಬಂದರೆ ನೀರು, ಆಹಾರ ಪದಾರ್ಥ, ಅಗತ್ಯ ವಸ್ತುಗಳ ಸಂಗ್ರಹದ ಬಗ್ಗೆ ಕ್ರಮಕ್ಕೆ ತಯಾರಿ ಮಡೆಯುತ್ತದೆ. ಈ ಬಗ್ಗೆ ಸಿಎಂ ಜೊತೆಗೆ ಸಭೆ ನಡೆಸಿ ಚರ್ಚಿಸುತ್ತೇವೆ. ಮುಂದೆ ಕೇಂದ್ರದಿಂದ ಬರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುತ್ತೇವೆ. ದೇಶದಲ್ಲಿ ಈ ಪರಿಸ್ಥಿತಿ ಇರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ರಾಜ್ಯದ ಪೊಲೀಸರಿಗೆ ರಜೆಗಳನ್ನು ಮಂಜೂರು ಮಾಡುವುದಿಲ್ಲ. ಕೇಂದ್ರ ಸರ್ಕಾರ ಎಲ್ಲವೂ ಸರಿಯಿದೆ ಎಂದು ಸೂಚನೆ ಕೊಡುವರೆಗೂ ನಮ್ಮ ಪೊಲೀಸರಿಗೆ ರಜೆ ಕೊಡಲ್ಲ ಎಂದು ಮಾಹಿತಿ ನೀಡಿದರು.
ಅಲ್ಲದೇ ಕರಾವಳಿ ಭಾಗದಲ್ಲಿ ಪೊಲೀಸರು ಮತ್ತಷ್ಟು ಪರಿಣಾಮವಾಗಿ ಕೆಲಸ ಮಾಡಬೇಕು. ಅಲ್ಲಿ ಕೂಡ ಭದ್ರತೆ ನೀಡಲಾಗಿದೆ. ಕೋಸ್ಟಲ್ ಭಾಗದಲ್ಲಿ ನಮ್ಮ ಅಧಿಕಾರದಲ್ಲಿರೋ ಕಡೆ ಭದ್ರತೆ ಕೊಡ್ತೀವಿ, ನೌಕಾಪಡೆ, ಅಂತಾರಾಷ್ಟ್ರೀಯ ಗಡಿಯಲ್ಲಿ ಎಲ್ಲ ಕಡೆಯೂ ಭದ್ರತೆ ಹೆಚ್ಚಿಸಲಾಗಿದೆ. ಕೇಂದ್ರ ಏನಾದ್ರು ಬಾರ್ಡರ್ ನಲ್ಲಿ ಸೆಕ್ಯುರಿಟಿ ಕೊಡೋದಾದರೆ ಕೇಂದ್ರ ನಮಗೆ ಸೂಚನೆ ಕೊಡುತ್ತದೆ. ಅದನ್ನ ನಾವು ಪಾಲನೆ ಮಾಡ್ತೀವಿ ಎಂದು ಹೇಳಿದರು.
ನವದೆಹಲಿ: ಪಾಪಿ ಪಾಕಿಸ್ತಾನ (Pakistan) ಗಡಿ ಮೀರಿ ಭಾರತದ ಮೇಲೆ ದಾಳಿ ಮಾಡುತ್ತಿದೆ. ಶೆಲ್ ದಾಳಿ ನಡೆಸಿ ಅಮಾಯಕರನ್ನ ಗುರಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಾದ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ, ಹರಿಯಾಣ ಹಾಗೂ ಹಿಮಾಚಲ ಪ್ರದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ. ಜಮ್ಮು-ಕಾಶ್ಮೀರದಲ್ಲಿ (Jammu And Kashmir) ಬೆಳಗ್ಗಿನವರೆಗೂ ಬ್ಲಾಕ್ಔಟ್ ಘೋಷಿಸಲಾಗಿತ್ತು.
#WATCH | Delhi | #OperationSindoor | Wing Commander Vyomika Singh says, “…Pakistan Army has been observed to be moving its troops towards forward areas, indicating an offensive intent to further escalation. Indian armed forces remain in a high state of operational readiness,… pic.twitter.com/hmbqPVEGBF
ಮೂಲಸೌಕರ್ಯಗಳಿಗೆ ಹಾನಿ:
ಇಂದು ರಕ್ಷಣಾ ಸಚಿವಾಲಯ ನಡೆಸಿದ ಮಹತ್ವದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಂಗ್ ಕಮಾಂಡರ್ ವ್ಯೂಮಿಕಾ ಸಿಂಗ್ (Vyomika Singh), ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಶ್ರೀನಗರ, ಅವರಂತಿಪುರ ಹಾಗೂ ಉಧಂಪುರದಲ್ಲಿರುವ ಆಸ್ಪತ್ರೆ, ಶಾಲೆ ಇತರ ಮೂಲ ಸೌಕರ್ಯಗಳ ಮೇಲೆ ದಾಳಿ ಮಾಡಿದೆ ಎಂದು ತಿಳಿಸಿದರು.
ಅಲ್ಲದೇ ದಾಳಿ ನಡೆಸಲು ತನ್ನ ಸೈನ್ಯವನ್ನು ಮುಂದಕ್ಕೆ ಸಾಗಿಸುತ್ತಿದೆ, ಇದು ಪರಿಸ್ಥಿತಿಯನ್ನ ಮತ್ತಷ್ಟು ಉಲ್ಬಣಗೊಳಿಸುವ ಆಕ್ರಮಣಕಾರಿ ಉದ್ದೇಶವನ್ನ ಸೂಚಿಸುತ್ತದೆ. ಭಾರತೀಯ ಸಶಸ್ತ್ರ ಪಡೆಗಳು ಹೆಚ್ಚಿನ ಕಾರ್ಯಾಚರಣೆಯ ಸನ್ನದ್ಧತೆಯಲ್ಲಿವೆ. ಎಲ್ಲಾ ಪ್ರತಿಕೂಲ ಕ್ರಮಗಳನ್ನು ಪರಿಣಾಮಕಾರಿಯಾಗಿ ಎದುರಿಸಲಾಗಿದೆ ಮತ್ತು ದಿಟ್ಟ ಉತ್ತರ ಸಹ ನೀಡಲಾಗಿದೆ. ಪಾಕಿಸ್ತಾನ ಮತ್ತೂ ದಾಳಿಗೆ ಪ್ರೈತ್ನಿಸಿದ್ರೆ ನಮ್ಮ ಸೇನೆ ತಕ್ಕ ಉತ್ತರ ನೀಡಲಿದೆ ಎಂದು ಎಚ್ಚರಿಸಿದರು.
ಪಾಕ್ ವಾಯುನೆಲೆಗಳು ಛಿದ್ರ:
ಇನ್ನೂ ಭಾರತ ನಡೆಸಿದ ವಾಯುದಾಳಿಯಲ್ಲಿ ಸಿಯಾಲ್ಕೋಟ್, ಪಸ್ರೂರ್ ರಾಡಾರ್ ಸೈಟ್, ರಹೀಮ್ ಯಾರ್ ಖಾನ್, ಮುರಿದ್, ರಫೀಕ್, ಚುನಿಯನ್, ಚಕ್ಲಾಲಾ, ಸುಕ್ಕೂರ್ ಮೊದಲಾದ ಪಾಕಿಸ್ತಾನ ವಾಯುನೆಲೆಗಳನ್ನು ಧ್ವಂಸಗೊಳಿಸಿದೆ. ಜೊತೆಗೆ ಭಾರತದ ಮೇಲೆ ಪದೇ ಪದೇ ದಾಳಿಗೆ ಯತ್ನಿಸುತ್ತಿದ್ದ ಡ್ರೋನ್ ಲಾಂಚ್ಪ್ಯಾಡನ್ನೇ ಉಡೀಸ್ ಮಾಡಿದೆ ಎಂದು ಫೋಟೋ ಮತ್ತು ವಿಡಿಯೋ ಸಮೇತ ವಿವರಿಸಿದರು.
ಅಮೃತಸರದಲ್ಲಿ ಪಾಕ್ ಡ್ರೋನ್ ಉಡೀಸ್:
ಭಾರತೀಯ ಸೇನೆಯು ಪಾಕಿಸ್ತಾನದ ಡ್ರೋನ್ಗಳನ್ನು ಅಮೃತಸರದ ಖಾಸಾ ಕಂಟೋನ್ಮೆಂಟ್ನಲ್ಲಿ ಹೊಡೆದುರುಳಿಸಿದೆ. ಭಾರತದ ಸಾರ್ವಭೌಮತ್ವವನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಪಾಕಿಸ್ತಾನವು ಡ್ರೋನ್ ದಾಳಿಗಳ ಮೂಲಕ ಗಡಿಗಳಲ್ಲಿ ತೊಂದರೆ ಸೃಷ್ಟಿಸುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ. ಶನಿವಾರ ಮುಂಜಾನೆ 5 ಗಂಟೆಗೆ ಖಾಸಾ ಕಂಟೋನ್ಮೆಂಟ್ ಬಳಿ ಹಾರುತ್ತಿದ್ದ ಹಲವು ಡ್ರೋನ್ಗಳನ್ನು ಹೊಡೆದುರುಳಿಸಲಾಗಿದೆ.
ಜೆ&ಕೆ ಗುರಿಯಾಗಿಸಿ ಡ್ರೋನ್ ದಾಳಿ
ಜಮ್ಮು ಮತ್ತು ಕಾಶ್ಮೀರವನ್ನು ಗುರಿಯಾಗಿಸಿ ಪಾಕಿಸ್ತಾನ ಶನಿವಾರವೂ ಹಲವಾರು ಡ್ರೋನ್ ದಾಳಿಗಳನ್ನು ನಡೆಸಿದೆ. ಶನಿವಾರ ಬೆಳಗಿನ ಜಾವ ಪಾಕಿಸ್ತಾನವು ಜಮ್ಮು ವಾಯುನೆಲೆ ಮತ್ತು ಉಧಂಪುರ ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದೆ, ಅಲ್ಲದೇ ಜಮ್ಮುವಿನ ಪ್ರಸಿದ್ಧ ಶಂಭು ದೇವಾಲಯದ ಮೇಲೂ ಕ್ಷಿಪಣಿ ದಾಳಿಗೆ ಪಾಕ್ ಯತ್ನಿಸಿದೆ. ಆದ್ರೆ ಭಾರತ ಈ ದಾಳಿಯನ್ನು ವಿಫಲಗೊಳಿಸಿದೆ. ಉಧಂಪುರದಲ್ಲಿ ಪಾಕಿಸ್ತಾನದ ಕ್ಷಿಪಣಿ ಬಿದ್ದಿದೆ. ಅದರ ಅವಶೇಷಗಳನ್ನು ಹೊರತೆಗೆಯಲಾಗಿದೆ.
ಭಾರತದ ʻಆಪರೇಷನ್ ಸಿಂಧೂರʼ (Operation Sindoor) ಎಫೆಕ್ಟ್ ಪಾಕಿಸ್ತಾನದ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಭಾರತ ನಡೆಸಿದ ವಾಯುದಾಳಿಗೆ ಪತರುಗುಟ್ಟಿಹೋಗಿರುವ ಪಾಕ್ ತಾನು ನಂಬಿದ್ದ ಶಕ್ತಿಶಾಲಿ ಅಸ್ತ್ರಗಳಿಂದಲೇ ಶತಕೋಟಿ ನಷ್ಟ ಅನುಭವಿಸಿದೆ. ಇದರಿಂದ ಪಾಕಿಸ್ತಾನದ (Pakistan) ಆರ್ಥಿಕ ಸ್ಥಿತಿ ಈಗಾಗಲೇ ಅಧೋಗತಿ ತಲುಪಿದ್ದು, ದಿವಾಳಿಯ ಆಗುವ ಹಂತಕ್ಕೆ ತಲುಪಿದೆ.
ಭಾರತದ (India) ವಿರುದ್ಧದ ಹೋರಾಟಕ್ಕೂ ಭಿಕ್ಷೆ ಬೇಡುವ ಪರಿಸ್ಥಿತಿಗೆ ತಲುಪಿದೆ. ಭಾರತದ ದಾಳಿಯಿಂದ ತನಗೆ ಭಾರೀ ನಷ್ಟವಾಗವಾಗಿದ್ದು ಸಾಲ ನೀಡುವಂತೆ ಅಂತಾರಾಷ್ಟ್ರೀಯ ಸಮುದಾಯದಲ್ಲಿ ಬೇಡಿಕೆ ಇಟ್ಟಿದೆ. ಪಾಕಿಸ್ತಾನದ ಆರ್ಥಿಕ ಇಲಾಖೆಯ ಆರ್ಥಿಕ ವ್ಯವಹಾರಗಳ ವಿಭಾಗದ ಸಾಮಾಜಿಕ ಜಾಲತಾಣ ʻxʼ ಖಾತೆಯಲ್ಲಿ ಸಾಲಕ್ಕಾಗಿ ಅಧಿಕೃತ ಮನವಿ ಮಾಡಿಕೊಂಡಿದೆ. ಇದು ವಿಶ್ವಮಟ್ಟದಲ್ಲಿ ಟೀಕೆಗೆ ಒಳಗಾಗುತ್ತಿದ್ದಂತೆ ವರಸೆ ಬದಲಿಸಿದ ಪಾಕ್ ʻತನ್ನ ಎಕ್ಸ್ ಖಾತೆ ಹ್ಯಾಕ್ ಆಗಿದೆʼ ಎಂದು ಹೇಳಿಕೊಂಡಿದೆ. ಇದಾದ ಬಳಿಕ ಭಾರತದ ಆಕ್ಷೇಪದ ನಡುವೆಯೂ ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) 2 ಕಂತುಗಳಲ್ಲಿ 19 ಸಾವಿರ ಕೋಟಿ ಸಾಲ ಮಂಜೂರು ಮಾಡಿದೆ. ಇದನ್ನೂ ಓದಿ: 44 ಸೆಕೆಂಡ್ನಲ್ಲಿ 72 ರಾಕೆಟ್ – ಏನಿದು ಪಿನಾಕಾ ರಾಕೆಟ್ ಲಾಂಚರ್?
ಹಾಗಾದ್ರೆ ಆರ್ಥಿಕವಾಗಿ ಕಂಗೆಟ್ಟಿದ್ದ ಪಾಕ್ ಭಾರತದ ಒಂದೇ ಏರ್ಸ್ಟ್ರೈಕ್ಗೆ ಭಿಕ್ಷೆ ಬೇಡುವ ಸ್ಥಿತಿ ತಲುಪಿದ್ದು ಏಕೆ? ತಾನು ಸರ್ವಶ್ರೇಷ್ಠ ಹಾಗೂ ಶಕ್ತಿಶಾಲಿ ಎಂದು ನಂಬಿದ್ದ ಅಸ್ತ್ರಗಳೇ ಮುಳುವಾಗಿದ್ದು ಹೇಗೆ? ಭಾರತದ ದಾಳಿಯಲ್ಲಿ ಛಿದ್ರವಾದ ಪಾಕ್ನ ಫೈಟರ್ ಜೆಟ್ಗಳು ಯಾವುವು? ಅವುಗಳ ಬೆಲೆ ಎಷ್ಟು ಎಂಬೆಲ್ಲ ಮಾಹಿತಿ ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…
ಹೌದು… ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಗಡಿ ಸೇರಿದಂತೆ ಭಾರತದ ಒಟ್ಟು 36 ಕಡೆ ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸಿತ್ತು. ಎರಡು ದಿನಗಳಲ್ಲಿ (ಮೇ 8, 9) 300-400 ಮಿಸೈಲ್ಗಳು, ಡ್ರೋನ್ಗಳಿಂದ ದಾಳಿ ನಡೆಸಿತ್ತು. ಈ ಎಲ್ಲ ದಾಳಿಗಳನ್ನ ಭಾರತ ವಿಫಲಗೊಳಿಸಿತು. ಜೊತೆಗೆ ಪಾಕಿಸ್ತಾನ ಮಿಲಿಟರಿಯಲ್ಲಿ ಶಕ್ತಿಶಾಲಿ ಅಸ್ತ್ರಗಳೆಂದು ಕರೆಯುತ್ತಿದ್ದ F-16, JF-17, J-10 ಮತ್ತು Saab-2000 Erieye AWACS (ವಾಯುಗಾಮಿ ಮುನ್ನೆಚ್ಚರಿಕೆ ಮತ್ತು ನಿಯಂತ್ರಣ ವ್ಯವಸ್ಥೆ) ವಿಮಾನವನ್ನು ಛಿದ್ರಗೊಳಿಸಿ, ಶತಕೋಟಿ ನಷ್ಟ ಉಂಟುಮಾಡಿತು. ಇದು ಮೊದಲೇ ಕುಸಿದಿರುವ ಪಾಕ್ ಆರ್ಥಿಕತೆಗೆ ಮತ್ತಷ್ಟು ಹೊಡೆತ ಕೊಟ್ಟಿದೆ. ಇದನ್ನೂ ಓದಿ: ಭಾರತದ 36 ಕಡೆ 400 ಮಿಸೈಲ್ನಿಂದ ಪಾಕ್ ದಾಳಿ: ಕರ್ನಲ್ ಸೋಫಿಯಾ ಖುರೇಷಿ
JF-17 ವಿಶೇಷತೆ ಏನು – ಬೆಲೆ ಎಷ್ಟು?
ಜೆಎಫ್-17 ಥಂಡರ್ (JF 17 Thunder) ಪಾಕಿಸ್ತಾನ ಮತ್ತು ಚೀನಾದ ಸಹಭಾಗಿತ್ವದಲ್ಲಿ ನಿರ್ಮಿಸಲಾದ ಬಹುಪಯೋಗಿ ಯುದ್ಧ ವಿಮಾನ. ಇದನ್ನು ಪಾಕಿಸ್ತಾನ್ ಏರೋನಾಟಿಕಲ್ ಕಾಂಪ್ಲೆಕ್ಸ್ (PAC) ಮತ್ತು ಚೆಂಗ್ಡು ಏರ್ಕ್ರಾಫ್ಟ್ ಕಾರ್ಪೊರೇಷನ್ (CAC) ಜಂಟಿಯಾಗಿ ಅಭಿವೃದ್ಧಿಪಡಿಸಿವೆ. 1990ರ ದಶಕದಲ್ಲಿ ಅಮೆರಿಕ ಪರಮಾಣು ಒಪ್ಪಂದದ ಬಳಿಕ ಪಾಕಿಸ್ತಾನಕ್ಕೆ ಎಫ್-16 ಪೂರೈಕೆ ನಿಲ್ಲಿಸಿತ್ತು. ಆಗ 1992ರಲ್ಲಿ ಚೀನಾ ಜೊತೆಗಿನ ಒಪ್ಪಂದಕ್ಕೆ ಪಾಕ್ ಸಹಿ ಹಾಕಿತು. ಬಳಿಕ 1995ರಲ್ಲಿ ಜೆಫ್-17 ಯುದ್ಧವಿಮಾನ ತಯಾರಿಸುವ ಯೋಜನೆ ಶುರುವಾಯಿತು.
2009ರಲ್ಲಿ ಮೊದಲ ಜೆಫ್-17 ಯುದ್ಧ ವಿಮಾನವನ್ನು ಪಾಕಿಸ್ತಾನ ವಾಯುಪಡೆಗೆ ಸೇರ್ಪಡೆಗೊಳಿಸಿತು. ಇದೀಗ ಪಾಕ್ ಬಳಿ 150ಕ್ಕೂ ಹೆಚ್ಚು ವಿಮಾನಗಳಿವೆ. ಇದು ಹಗುರ ಮತ್ತು ವೇಗದ ಫೈಟರ್ ಜೆಟ್ ಆಗಿದ್ದು, ಗರಿಷ್ಠ ತೂಕ 13,500 ಕೆಜಿಯಷ್ಟು ಇರಲಿದೆ. ಜೆಫ್-17 ಬೆಲೆ ಸುಮಾರು 15 ದಶಲಕ್ಷ ಡಾಲರ್ ಅಂದ್ರೆ ಸುಮಾರು 120 ಕೋಟಿ ರೂ. ಇದೆ, ಇದರ ಬ್ಲಾಕ್-3 ರೂಪಾಂತರದ ಬೆಲೆ 25-30 ದಶಲಕ್ಷ ಡಾಲರ್ನಷ್ಟಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: `ಆಪರೇಷನ್ ಸಿಂಧೂರ’ಕ್ಕೆ ತತ್ತರಿಸಿ ಮಿತ್ರರಾಷ್ಟ್ರಗಳ ಬಳಿ ಸಾಲಕ್ಕಾಗಿ ಅಂಗಲಾಚಿದ ಪಾಕ್ – ಟ್ರೋಲ್
F-16 ವಿಶೇಷತೆ ಏನು, ಬೆಲೆ ಎಷ್ಟು?
ಎಫ್-16 ಅಮೆರಿಕದ ರಕ್ಷಣಾ ಕಂಪನಿ ಜನರಲ್ ಡೈನಾಮಿಕ್ಸ್ (ಈಗ ಲಾಕ್ಹೀಡ್ ಮಾರ್ಟಿನ್) ಅಭಿವೃದ್ಧಿಪಡಿಸಿರುವ ಅತ್ಯಾಧುನಿಕ ಯುದ್ಧವಿಮಾನ. 1981ರಲ್ಲಿ ಪಾಕಿಸ್ತಾನವು ಅಮೆರಿಕದಿಂದ 40 ಎಫ್-16 ಯುದ್ಧ ವಿಮಾನಗಳನ್ನು ಆರ್ಡರ್ ಮಾಡಿತು. 1983-87ರ ಅವಧಿಯಲ್ಲಿ ಈ ಯುದ್ಧ ವಿಮಾನಗಳನ್ನು ʻಪೀಸ್ ಗೇಟ್-1, ಗೇಟ್-2ʼ ಶಾಂತಿ ಒಪ್ಪಂದಗಳ ಅಡಿಯಲ್ಲಿ ಅಮೆರಿಕ ಪೂರೈಕೆ ಮಾಡಿತು. ಆಗ ಉಗ್ರರ ವಿರುದ್ಧ ಕಾರ್ಯಾಚರಣೆಗೆ ಮಾತ್ರ ಎಫ್-16 ಬಳಸಬೇಕೆಂದು ಅಮೆರಿಕ ಷರತ್ತು ವಿಧಿಸಿತ್ತು, ಆದ್ರೆ ಭಾರತದ ವಿರುದ್ಧ ಪಾಕ್ ಈ ವಿಮಾನ ಪ್ರಯೋಗಿಸಿದೆ. ಮೊದಲ ಜೆಟ್ 1983ರ ಜನವರಿ 15ರಂದು ಪಾಕಿಸ್ತಾನ ತಲುಪಿತು.
ಇದಾದ ಬಳಿಕ 1988ರಲ್ಲಿ ಪಾಕಿಸ್ತಾನವು ಇನ್ನೂ 11 ಎಫ್-16 ಯುದ್ಧ ವಿಮಾನಗಳಿಗೆ ಆರ್ಡರ್ ನೀಡಿತು. ಆದ್ರೆ 1990ರ ಪರಮಾಣು ಒಪ್ಪಂದದ ಮೇಲೆ ಅಮೆರಿಕ ಜೆಟ್ ಪೂರೈಕೆಗೆ ನಿರ್ಬಂಧ ಹೇರಿತ್ತು. ಇದಾದ 15 ವರ್ಷಗಳ ನಂತರ 2005ರಲ್ಲಿ ಮತ್ತೆ ಅಮೆರಿಕ ಎಫ್-16 ಖರೀದಿಗೆ ಪಾಕ್ಗೆ ಅವಕಾಶ ಮಾಡಿಕೊಟ್ಟಿತು. ಆಗ ಪಾಕಿಸ್ತಾನ 18 ಹೊಸ ಎಫ್-16 ಯುದ್ಧ ವಿಮಾನಗಳನ್ನು ಖರೀದಿ ಮಾಡಿತು. 2010ರ ವೇಳೆಗೆ ಪಾಕ್ ಆರ್ಡರ್ ಮಾಡಿದ್ದ ಅಷ್ಟೂ ವಿಮಾನಗಳನ್ನು ಅಮೆರಿಕ ಪೂರೈಕೆ ಮಾಡಿತು. ಸದ್ಯ ಪಾಕ್ ಸುಮಾರು 75 ರಿಂದ 85 ಎಫ್-16 ಯುದ್ಧ ವಿಮಾನಗಳನ್ನು ಹೊಂದಿದೆ. ಇದರಲ್ಲಿ A, B, C, D ನಂತೆ 4 ರೂಪಾಂತರಗಳಿವೆ. ಪ್ರತಿಯೊಂದರ ಬೆಲೆಯೂ ಅದರ ಮಾದರಿಯನ್ನು ಅವಲಂಬಿಸಿರುತ್ತದೆ. ಸದ್ಯ ಹೊಸ ಎಫ್-16 ಬೆಲೆ 40 ರಿಂದ 70 ದಶಲಕ್ಷ ಡಾಲರ್ನಷ್ಟಿದೆ. ಅಂದ್ರೆ ಸುಮಾರು 300 ರಿಂದ 500 ಶತಕೋಟಿ ರೂಪಾಯಿ ಇದೆ.
AWACS ವಿಶೇಷತೆ ಏನು, ಬೆಲೆ ಎಷ್ಟು?
AWACS ರೆಡಾರ್ ವ್ಯವಸ್ಥೆಯ ವಿಮಾನಗಳು ಯಾವುದೇ ದೇಶದ ವಾಯುಪಡೆಯ ರಕ್ಷಣಾ ವ್ಯವಸ್ಥೆಯ ಭಾಗವಾಗಿದೆ. ಹಾಗೆಯೇ ಪಾಕ್ ಸಹ ತನ್ನ ವಾಯುಸೇನೆಗೆ ಇದನ್ನು ಅಳವಡಿಸಿಕೊಂಡಿದೆ. ಇದರಲ್ಲಿರುವ ತಿರುಗುವ ರೆಡಾರ್ ವ್ಯವಸ್ಥೆಯು 400 ಕಿಮೀ ಗಿಂತಲೂ ಹೆಚ್ಚು ವ್ಯಾಪ್ತಿವರೆಗೂ ಶತ್ರುಗಳ ಮೇಲೆ ನಿಗಾ ಇಡುತ್ತದೆ. ಹಾಗಾಗಿ ಇದನ್ನ ʻಸ್ಕೈ ಐಸ್ʼ (ಆಕಾಶದ ಕಣ್ಣು) ಎಂದು ಕರೆಯುತ್ತಾರೆ. ಈ ವಿಮಾನಗಳು ಶತ್ರುಗಳ ಯುದ್ಧ ವಿಮಾನಗಳು, ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಸಮಯಕ್ಕೆ ಸರಿಯಾಗಿ ಪತ್ತೆ ಹಚ್ಚಿ ಆ ದೇಶದ ವಾಯುಪಡೆಗೆ ನಿರ್ದೇಶನ ನೀಡುವಲ್ಲಿ ಸಹಾಯ ಮಾಡುತ್ತವೆ. ಇದನ್ನೂ ಓದಿ: ಭಾರತದ ವಿರೋಧದ ನಡುವೆಯೂ ಪಾಕ್ಗೆ 19,000 ಕೋಟಿ ಸಾಲ ಕೊಟ್ಟ ಐಎಂಎಫ್
ಪಾಕಿಸ್ತಾನವು ಒಟ್ಟು 9 ವಾಯುಗಾಮಿ ರೆಡಾರ್ ವ್ಯವಸ್ಥೆಗಳನ್ನು ಹೊಂದಿದೆ, ಅವುಗಳಲ್ಲಿ ಸ್ವೀಡನ್ನ ಸಾಬ್-2000 ಎರಿಯೇ ಮತ್ತು ಚೀನಾದ ZDK-03 ಕರಕೋರಂ ಈಗಲ್ ಸೇರಿವೆ. ಚೀನಾ ನಿರ್ಮಿತ ರೆಡಾರ್ ವ್ಯವಸ್ಥೆಗೆ ಪಾಕ್ 2024ರಲ್ಲೇ ಗುಡ್ಬೈ ಹೇಳಿಕೊಂಡಿದೆ. ಆದ್ರೆ ಈಗ ಭಾರತದ ದಾಳಿಯಲ್ಲಿ ಛಿದ್ರವಾದ ಪತನಗೊಂಡ ರೆಡಾರ್ ಚೀನಾದ್ದೆ ಎಂದು ಕೆಲ ವರದಿಗಳು ತಿಳಿಸಿವೆ.
ಸಾಬ್-2000 ಎರಿಯೇ ಒಂದು ಮಧ್ಯಮ-ಶ್ರೇಣಿಯ ವಾಯುಗಾಮಿ ರೆಡಾರ್ ವ್ಯವಸ್ಥೆಯಾಗಿದೆ. ಇದರ ಬೆಲೆ ಸುಮಾರು 100 ರಿಂದ 150 ದಶಲಕ್ಷ ಡಾಲರ್ ಅಂದರೆ 830 ರಿಂದ 1,245 ಕೋಟಿ ರೂ.ಗಳ ವರೆಗೆ ಇರುತ್ತದೆ. ಇದಕ್ಕೆ ನಾವು ರೆಡಾರ್, ನಿಯಂತ್ರಣ ವ್ಯವಸ್ಥೆ, ತರಬೇತಿ ಮತ್ತು ಲಾಜಿಸ್ಟಿಕ್ಸ್ ಸೇರಿಸಿದ್ರೆ, ಅದರ ಒಟ್ಟು ವೆಚ್ಚ 200 ದಶಲಕ್ಷ ಡಾಲರ್ ಅಂದ್ರೆ 1,660 ಕೋಟಿ ರೂ.ಗಳಷ್ಟು ತಲುಪಬಹುದು ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ವಾಯುನೆಲೆಯ ಮೇಲೆ ಭಾರತ ದಾಳಿ – ಇಸ್ಲಾಮಾಬಾದ್, ರಾವಲ್ಪಿಂಡಿಯಲ್ಲಿ ಅಲ್ಲೋಲ ಕಲ್ಲೋಲ
ನವದೆಹಲಿ: ಭಾರತದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ಡ್ರೋನ್, ಫೈಟರ್ ಜೆಟ್ (Fighter Jets) ಹಾಗೂ ಕ್ಷಿಪಣಿ ದಾಳಿಯನ್ನು ಭಾರತೀಯ ಸಶಸ್ತ್ರ ಪಡೆಗಳು ಸಮರ್ಥವಾಗಿ ಹಿಮ್ಮೆಟ್ಟಿಸಿವೆ. ಜೊತೆಗೆ ಪ್ರತೀಕಾರದ ದಾಳಿ ನಡೆಸಿರುವ ಭಾರತ ಸ್ವದೇಶಿ ನಿರ್ಮಿತ ʻಆಕಾಶ್ʼ ಕ್ಷಿಪಣಿ (Akash Missile) ಸೇರಿ ಒಟ್ಟು ಮೂರು ರಾಷ್ಟ್ರಗಳು ತಯಾರಿಸಿದ ಕ್ಷಿಪಣಿಗಳನ್ನು ಪರಿಣಾಮಕಾರಿಯಾಗಿ ಬಳಸಿ ದಾಳಿ ನಡೆಸಿರುವುದಾಗಿ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಹೌದು.. ಆಪರೇಷನ್ ಸಿಂಧೂರ (Operation Sindoor) ಪಾರ್ಟ್-1 ಮತ್ತು ಪಾರ್ಟ್-2ನಲ್ಲಿ ರಷ್ಯಾ, ಇಸ್ರೇಲ್ ಹಾಗೂ ನಾವು (ಭಾರತ) ನಿರ್ಮಿಸಿದ ಮೂರು ರಾಷ್ಟ್ರಗಳ ವೆಪನ್ ಬಳಸಿ ಪಾಕ್ ಉಗ್ರರ ತಾಣಗಳು, ಬಂದರು ಇತರ ಪ್ರಮುಖ ನೆಲೆಗಳನ್ನು ಛಿದ್ರ, ಛಿದ್ರ ಮಾಡಿವೆ. 1971ರ ಬಳೀಕ ಕರಾಚಿ ಬಂದರಿನ ಮೇಲೂ ದಾಳಿ ನಡೆಸಿ, ಶತ್ರುಗಳಲ್ಲಿ ನಡುಕ ಹುಟ್ಟಿಸಿವೆ. ಚೀನಾ ನಿರ್ಮಿತ ಪವರ್ಫುಲ್ ಶಸ್ತ್ರಾಸ್ತ್ರಗಳನ್ನು (Chinese weapon) ಭೇಸಿದಿ ಪಾಕ್ ಪತರುಗುಟ್ಟುವಂತೆ ಮಾಡಿದ್ದು ಈ ಅಸ್ತ್ರಗಳೇ ಅನ್ನುವುದು ಗಮನಾರ್ಹ.
ಯಾವ ಅಸ್ತ್ರ – ಯಾವ ದೇಶ ನಿರ್ಮಿಸಿದ್ದು?
1. ಸುದರ್ಶನ್ ಚಕ್ರ – S-400 ಮಿಸೈಲ್ – ರಷ್ಯಾ ನಿರ್ಮಿತ
2. ಕಾಮಿಕಾಜ್ ಡ್ರೋನ್ – ಭಾರತ ನಿರ್ಮಿತ
3. ಏರ್ ಮಿಸೈಲ್ – ಭಾರತ ನಿರ್ಮಿತ
4. ಹಾರ್ಪಿ ಡ್ರೋನ್ – ಇಸ್ರೇಲ್ ನಿರ್ಮಿತ
5. ಡೀಪ್ ಸ್ಟ್ರೈಕ್ ಕ್ರೂಸರ್ ಕ್ಷಿಪಣಿ – ಭಾರತ ನಿರ್ಮಿತ
2ಕ್ಕೂ ಹೆಚ್ಚು ಫೂಟರ್ ಜೆಟ್ ಉಡೀಸ್:
ಕ್ಷಿಪಣಿ ದಾಳಿಗಷ್ಟೇ ನಿಲ್ಲದ ಭಾರತೀಯ ಸೇನೆಯ ಪರಾಕ್ರಮ ಇನ್ನೂ ಮುಂದುವರಿಯಿತು. ಚೀನಾ ನಿರ್ಮಿತ ಜೆಎಫ್-10, JF-17 ಅಮೆರಿಕ ನಿರ್ಮಿತ ಎಫ್-16 ಶಕ್ತಿಶಾಲಿ ಫೈಟರ್ಜೆಟ್ ಹಾಗೂ ಡ್ರೋನ್, ಕ್ಷಿಪಣಿಗಳನ್ನ ಸಾಲು ಸಾಲಾಗಿ ಹೊಡೆದುರುಳಿಸಿತು. ಈ ಕಾರ್ಯಾಚರಣೆಯಲ್ಲಿ ಭಾರತ ಈ ಕಾರ್ಯಾಚರಣೆಯಲ್ಲಿ L-70 ಗನ್, ಆಕಾಶ್, MRSAM, Zu-23, L-70 ಮತ್ತು ಶಿಲ್ಕಾ ಡಿಫೆನ್ಸ್ ಸಿಸ್ಟಮ್ಗಳನ್ನ ಬಳಕೆ ಮಾಡಿತ್ತು. ಶತ್ರುಗಳ ವಾಯುದಾಳಿಗಳನ್ನು ಸಮರ್ಥವಾಗಿ ಎದುರಿಸಬಲ್ಲ ಈ ರಕ್ಷಣಾ ವ್ಯವಸ್ಥೆಗಳು ಪಾಕ್ಗೆ ದಿಟ್ಟ ಉತ್ತರ ನೀಡುವಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದವು.
ಗುರುವಾರ ಭಾರತೀಯ ನಗರಗಳನ್ನ (Indian Cities) ಟಾರ್ಗೆಟ್ ಮಾಡಿದ್ದ ಪಾಕ್ಗೆ ದಿಟ್ಟ ಉತ್ತರ ನೀಡಿದ್ದ ಭಾರತೀಯ ವಾಯುಸೇನೆ, ಲಾಹೋರ್ನಲ್ಲಿರುವ ರೆಡಾರ್ ಕೇಂದ್ರವನ್ನೇ ಧ್ವಂಸ ಮಾಡಿತ್ತು. ಶೇಖ್ಪುರ, ಸಿಯಾಲ್ ಕೋಟ್, ಗುಜರನ್ ವಾಲಾ ಮತ್ತು ನರೊವಾಲಾ ಮತ್ತ ಚಕ್ವಾಲ್ ಮೇಲೂ ಭಾರತದ ಕಾಮಕಾಜಿ ಡ್ರೋನ್ ದಾಳಿ ನಡೆಸಿತ್ತು. ಒಟ್ಟು 25 ಕ್ಷಿಪಣಿಗಳನ್ನು ಭಾರತ ಹಾರಿಸಿತ್ತು, ಇದರಲ್ಲಿ 7 ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯನ್ನ ಗುರಿಯಾಗಿಸಿದ್ದವು. ಆದರೂ ಕಿತಾಪತಿ ಬಿಡದ ಪಾಕಿಸ್ತಾನ ರಾತ್ರಿ ವೇಳೆಗೆ ಜಮ್ಮುವಿನ ಮೇಲೆ 100 ಕ್ಷಿಪಣಿಗಳಿಂದ ದಾಳಿ ನಡೆಸಿತ್ತು. ಇದಕ್ಕೆ ಕೆರಳಿ ಕೆಂಡವಾದ ಭಾರತ ಏಕಾಏಕಿ ನೂರಕ್ಕೂ ಹೆಚ್ಚು ಕ್ಷಿಪಣಿಗಳನ್ನ ಪಾಕ್ ಮೇಲೆ ಹಾರಿಸಿತು. ಇದರಿಂದ ಪಾಕ್ನ 16 ನಗರಗಳಲ್ಲಿ ಭಾರೀ ಹಾನಿ ಸಂಭವಿಸಿದೆ.
ನವದೆಹಲಿ: ಅಕ್ರಮವಾಗಿ ಭಾರತಕ್ಕೆ ನುಸುಳುತ್ತಿದ್ದ ಜೈಶ್-ಎ-ಮೊಹಮ್ಮದ್ (Jaish-e-Mohammed) ಸಂಘಟನೆಯ 7 ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಸಾಂಭಾದಲ್ಲಿ (Samba) ಭಾರತದ ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಪ್ರತೀಕಾರದ ಸಮರ ಈಗ ವಿಶ್ವಮಟ್ಟದಲ್ಲಿ ಸದ್ದು ಮಾಡುತ್ತಿದೆ. ಗುರುವಾರ ರಾತ್ರಿ ಜಮ್ಮುವಿನ ಮೇಲೆ ಪಾಕ್ 100 ಕ್ಷಿಪಣಿಗಳ ದಾಳಿ ನಡೆಸಿದ ಬಳಿಕ ಭಾರತ ಪ್ರತೀಕಾರದ ತೀವ್ರತೆಯನ್ನ ಹೆಚ್ಚಿಸಿದೆ. ಹೀಗಾಗಿ ರಾತ್ರಿಯಿಡೀ ವಾರ್ರೂಮ್ನಲ್ಲೇ ವಾಸ್ತವ್ಯ ಹೂಡಿದ ಪ್ರದಾನಿ ಮೋದಿ ಎನ್ಎಸ್ಎ, ಸಿಡಿಎಸ್ ಅವರಿಂದ ಕ್ಷಣ ಕ್ಷಣದ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಮುಂದಿನ ಕ್ರಮಗಳ ಬಗ್ಗೆಯೂ ಸೂಚಿಸಿದ್ದಾರೆ. ಈ ಕುರಿತ ವಿಡಿಯೋ ಇಲ್ಲಿದೆ…
ನವದೆಹಲಿ: ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಭಾರತ ʻಆಪರೇಷನ್ ಸಿಂಧೂರʼ (Operation Sindoor) ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಭಿಕಾರಿಸ್ತಾನದ ಮೇಲೆ ಮಿಸೈಲ್ಗಳ ಸುರಿಮಳೆಗೈದಿದೆ. ಈ ನಡುವೆ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಆದ್ರೆ ಪಾಕ್ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತ (India) ದೇಶಾದ್ಯಂತ 24 ವಿಮಾನ ನಿಲ್ದಾಣಗಳ (Airports) ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಜಮ್ಮುವಿನ ಮೇಲೆ ದಾಳಿಗೆ ಯತ್ನಿಸಿದ್ದ ಪಾಕ್ನ 50ಕ್ಕೂ ಹೆಚ್ಚು ಡ್ರೋನ್ಗಳು ಮಟಾಶ್
ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು (Indian Airlines) ಪ್ರಯಾಣ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಪ್ಲ್ಯಾನ್ ಮಾಡಿಕೊಳ್ಳುವಂತೆ ತಿಳಿಸಿವೆ. ಇನ್ನೂ ದೇಶಾದ್ಯಂತ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇದನ್ನೂ ಓದಿ: ಪಾಕ್ ದಾಳಿಯನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಿದ್ದೇವೆ – ಭಾರತೀಯ ಸೇನೆ ಅಭಯ
ದೆಹಲಿ ಏರ್ಪೋರ್ಟ್ ಸಹಜ ಸ್ಥಿತಿಯಲ್ಲಿ ಕಾರ್ಯಾಚರಣೆ – ಕೆಲ ವಿಮಾನ ಹಾರಾಟ ರದ್ದು
ಇನ್ನೂ ದೇಶದ ರಾಜಧಾನಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಭದ್ರತೆ ಹೆಚ್ಚಿಸಿರುವ ಕಾರಣ ಕೆಲವು ವಿಮಾನಗಳ ಹಾರಾಟಗಳು ರದ್ದಾಗಿವೆ. ಪ್ರಯಾಣಿಕರು ತಮ್ಮ ವಿಮಾನಯಾನದ ಬಗ್ಗೆ ಮಾಹಿತಿ ತಿಳಿದುಕೊಂಡು ಏರ್ಪೋರ್ಟ್ಗೆ ಬರಲು ಸೂಚಿಸಲಾಗಿದೆ. ಇದನ್ನೂ ಓದಿ: ಪಾಕಿಸ್ತಾನಿಗಳಿಗೆ ಶಸ್ತ್ರಾಸ್ತ್ರಗಳನ್ನ ತ್ಯಜಿಸುವಂತೆ ಅಮೆರಿಕ ಹೇಳಲು ಸಾಧ್ಯವಿಲ್ಲ: ಜೆಡಿ ವ್ಯಾನ್ಸ್
ನವದೆಹಲಿ: ಪಾಕಿಸ್ತಾನ ಸಶಸ್ತ್ರಪಡೆಗಳು (Pakistan Armed Forces) ಮೇ 8 ಮತ್ತು 9ರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ನಡೆಸಿದ ದಾಳಿಯನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಿರುವುದಾಗಿ ಭಾರತೀಯ ಸೇನೆ (Indian Army) ಅಧಿಕೃತ ಹೇಳಿಕೆ ನೀಡಿದೆ.
OPERATION SINDOOR
Pakistan Armed Forces launched multiple attacks using drones and other munitions along entire Western Border on the intervening night of 08 and 09 May 2025. Pak troops also resorted to numerous cease fire violations (CFVs) along the Line of Control in Jammu and… pic.twitter.com/WTdg1ahIZp
ಈ ಕುರಿತು ಇಂಡಿಯನ್ ಆರ್ಮಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಪಾಕಿಸ್ತಾನ ಸಶಸ್ತ್ರ ಪಡೆಗಳು ಇದೇ ಮೇ 08 ಮತ್ತು 09ರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್ಗಳು (Drones) ಮತ್ತು ಇತರ ಯುದ್ಧಸಾಮಗ್ರಿಗಳನ್ನು ಬಳಸಿಕೊಂಡು ಅನೇಕ ದಾಳಿಗಳನ್ನು ನಡೆಸಿದವು. ಜಮ್ಮು ಮತ್ತು ಕಾಶ್ಮೀರದ (Jammu and Kashmir) ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕ್ ಪಡೆಗಳು ಹಲವಾರು ಕದನ ವಿರಾಮ ಉಲ್ಲಂಘನೆ ಮಾಡಿವೆ. ಆದ್ರೆ ಪಾಕ್ನ ಡ್ರೋನ್ ದಾಳಿಗಳನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಿ, ಸಿಎಫ್ವಿಗಳಿಗೆ ತಕ್ಕ ಉತ್ತರ ನೀಡಲಾಗಿದೆ ಎಂದು ಸೇನೆ ಹೇಳಿದೆ. ಇದನ್ನೂ ಓದಿ: ಪಾಕ್ನ ಪ್ರಮುಖ ಎಫ್-16 ಹೊಡೆದುರುಳಿಸಿದ ಭಾರತೀಯ ವಾಯು ಸೇನೆ
ಅಲ್ಲದೇ ಭಾರತೀಯ ಸೇನೆಯು ರಾಷ್ಟ್ರದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಬದ್ಧವಾಗಿದೆ. ಎಲ್ಲಾ ದುಷ್ಟ ವಿನ್ಯಾಸಗಳಿಗೆ ಬಲದಿಂದ ಪ್ರತಿಕ್ರಿಯಿಸಲಾಗುವುದು ಎಂದು ಹೇಳಿದೆ. ಇದನ್ನೂ ಓದಿ: ಸಾಂಬಾದಲ್ಲಿ ಹಲವು ಪಾಕ್ ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ಗುಜರಾತ್ ಸೇರಿದಂತೆ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿರುವ 15 ನಗರಗಳಲ್ಲಿನ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಉದ್ವಿಗ್ನತೆ ಹೆಚ್ಚಿಸಲು ಪಾಕ್ ಪ್ರಯತ್ನಿಸಿತು. ಆದರೆ, ಆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಇದರಿಂದ ಯಾವುದೇ ಹಾನಿ ಸಂಭವಿಸಿಲ್ಲ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಇದನ್ನೂ ಓದಿ: ಪಾಕಿಸ್ತಾನಿಗಳಿಗೆ ಶಸ್ತ್ರಾಸ್ತ್ರಗಳನ್ನ ತ್ಯಜಿಸುವಂತೆ ಅಮೆರಿಕ ಹೇಳಲು ಸಾಧ್ಯವಿಲ್ಲ: ಜೆಡಿ ವ್ಯಾನ್ಸ್
– ಶೆಹಬಾಜ್ ಷರೀಫ್ ಮನೆಗೆ 20 ಕಿಮೀ ದೂರದಲ್ಲಿ ಸ್ಫೋಟದ ಸದ್ದು
ಇಸ್ಲಾಮಾಬಾದ್: ಭಾರತ ನಡೆಸಿದ ಮಿಸೈಲ್ ದಾಳಿಗೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ನಡುಗುವಂತಾಗಿದೆ. ಪಾಕ್ ಪ್ರಧಾನಿ ಮನೆ ಬಳಿಯೇ ದಾಳಿಯಾಗಿದೆ ಎಂದು ವರದಿಯಾಗಿದೆ.
ಪಾಕ್ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಶೆಹಬಾಜ್ ಶರೀಫ್ ಅವರ ಮನೆಯಿದೆ. ಮನೆಗೆ 20 ಕಿಮೀ ದೂರದಲ್ಲೇ ಸ್ಫೋಟದ ಸದ್ದಾಗಿದೆ. ಇದನ್ನೂ ಓದಿ: ಭಾರತ-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಣೆ
ಭಾರತದ ದಾಳಿಗೆ ಪಾಕ್ ಪ್ರಧಾನಿಯೂ ಬೆಚ್ಚಿದ್ದಾರೆ. ಪಾಕಿಸ್ತಾನದಲ್ಲಿ ದಿಕ್ಕು ತೋಚದ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದ ಹಲವು ನಗರಗಳು ಕತ್ತಲಲ್ಲಿ ಸಿಲುಕಿವೆ. ಕೆಲವು ನಗರಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.
ರಸ್ತೆಗಳಿಗೆ ಬಾರದಂತೆ ಪಾಕ್ ನಾಗರಿಕರಿಗೆ ಅಲ್ಲಿನ ಸ್ಥಳೀಯ ಆಡಳಿತಗಳಿಂದ ಸೂಚನೆ ನೀಡಿದೆ. ಪಾಕಿಸ್ತಾನದ ಪೈಲಟ್ನನ್ನು ಭಾರತೀಯ ಸೇನೆ ವಶಕ್ಕೆ ಪಡೆದಿರೋದು ಎನ್ನಲಾಗಿದೆ. ಇದನ್ನೂ ಓದಿ: ಭಾರತದ ಮೇಲೆ ಪಾಕ್ನಿಂದ 100 ಕ್ಷಿಪಣಿ ದಾಳಿ
ಇಸ್ಲಾಮಾಬಾದ್: ಭಾರತೀಯ ಸೇನೆ ʻಆಪರೇಷನ್ ಸಿಂಧೂರʼ (Operation Sindoor) ಹೆಸರಿನಡಿ ಉಗ್ರ ನೆಲೆಗಳ ಮೇಲೆ ನಡೆಸಿದ ಪ್ರತೀಕಾರದ ದಾಳಿಯಲ್ಲಿ 31 ಮಂದಿ ಸಾವನ್ನಪ್ಪಿದ್ದು, 46 ಮಂದಿ ಗಾಯಗೊಂಡಿರುವುದಾಗಿ ಪಾಕ್ ಸೇನೆ (Pakistan Army) ಹೊಣೆ ಹೊತ್ತುಕೊಂಡಿದೆ.
ಭಾರತದ ದಾಳಿಯಲ್ಲಿ JEM ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ 10 ಜನ ಸೇರಿದಂತೆ ಒಟ್ಟು 31 ಮಂದಿ ಸಾವನ್ನಪ್ಪಿದ್ದು, 46 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಿರಬಹುದು ಎಂದು ಪಾಕ್ ಸೇನಾ ವಕ್ತಾರರು ಹೇಳಿರುವುದಾಗಿ ವರದಿಗಳು ತಿಳಿಸಿವೆ. ಇದನ್ನೂ ಓದಿ: ಪ್ರತಿ ರಕ್ತದ ಹನಿಗೂ ಸೇಡು ತೀರಿಸಿಕೊಳ್ತೀವಿ – ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
ಏನಿದು ʻಆಪರೇಷನ್ ಸಿಂಧೂರʼ?
ಕಳೆದ ಏಪ್ರಿಲ್ 22ರಂದು ಕಾಶ್ಮೀರದ ಪೆಹಲ್ಗಾಮ್ನ ಬೈಸರನ್ ಕಣಿವೆ ಪ್ರದೇಶದಲ್ಲಿ ನಾಲ್ವರು ಉಗ್ರರು ಓರ್ವ ವಿದೇಶಿ ಪ್ರಜೆ ಸೇರಿದಂತೆ 26 ಪ್ರವಾಸಿಗರನ್ನ ಗುಂಡಿಕ್ಕಿ ಕೊಂದಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಪಣ ತೊಟ್ಟಿದ್ದ ಭಾರತ ಮಂಗಳವಾರ ತಡರಾತ್ರಿ 1:44 ಗಂಟೆ ಸುಮಾರಿಗೆ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಪಾಕ್ ಸೇನೆಯಾಗಲಿ ಅಥವಾ ನಾಗರಿಕರ ಮೇಲಾಗಲಿ ದಾಳಿ ಮಾಡದೇ ಉಗ್ರರ ನೆಲೆಗಳನ್ನು ಮಾತ್ರವೇ ಗುರಿಯಾಗಿಸಿ ದಾಳಿ ನಡೆಸಿದೆ. ಇದನ್ನೂ ಓದಿ: `ಆಪರೇಷನ್ ಸಿಂಧೂರ’ಕ್ಕೆ ತತ್ತರಿಸಿದ ಪಾಕ್ – ತುರ್ತು ಪರಿಸ್ಥಿತಿ ಘೋಷಣೆ
ಮೋಸ್ಟ್ವಾಂಟೆಡ್ಗಳನ್ನ ತಯಾರು ಮಾಡ್ತಿದ್ದ ನೆಲೆಗಳು ಧ್ವಂಸ:
ಭಾರತ ಧ್ವಂಸ ಮಾಡಿರುವ ಈ ಉಗ್ರರ ನೆಲೆಗಳು ಮೋಸ್ಟ್ ಡೇಂಜರಸ್ ತಾಣಗಳು ಎಂದೇ ಗುರುತಿಸಿಕೊಂಡಿದ್ದು, ಇಡೀ ವಿಶ್ವಕ್ಕೆ ಕಂಟಕವಾಗಿದ್ದವು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಇಲ್ಲಿ ಅಡಗಿಸಿಡಲಾಗಿತ್ತು. ಜೊತೆಗೆ ವಿಶ್ವಾದ್ಯಂತ ವಿವಿಧೆಡೆಗೆ ಕಳುಹಿಸಲು ಉಗ್ರರಿಗೆ ಇಲ್ಲಿ ತರಬೇತಿ ನೀಡಲಾಗುತ್ತಿತ್ತು ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕುಟುಂಬದ 10 ಜನರ ಹತ್ಯೆ – ಅವರೆಲ್ಲರೂ ಅಲ್ಲಾನ ಅತಿಥಿಗಳಾಗಿದ್ದಾರೆ ಎಂದ ಉಗ್ರ ಮಸೂದ್
ದಾಳಿ ಒಪ್ಪಿಕೊಳ್ಳದ ಪಾಕ್:
ಅಲ್ಲದೇ ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ದಾಳಿ ಕುರಿತು ಮತ್ತೆ ಪ್ರಸ್ತಾಪಿಸಿದ ಷರೀಫ್, ಪಹಲ್ಗಾಮ್ ದಾಳಿ ನಡೆದಾಗ ನಾನು ಟರ್ಕಿಗೆ ಭೇಟಿ ನೀಡಿದ್ದೆ. ಈ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಆಗಲೇ ನಾವು ಈ ಬಗ್ಗೆ ಸ್ಪಷ್ಟನೆ ನೀಡಿದ್ದೇವೆ, ತನಿಖೆಗೆ ಸಹಕರಿಸಲೂ ಸಿದ್ಧರಿದ್ದೇವೆ ಎಂದು ಹೇಳಿದ್ದೆವು. ಆದ್ರೆ ಭಾರತ ನಮ್ಮ ಸ್ಪಷ್ಟನೆಯನ್ನು ಸ್ವೀಕರಿಸದೇ ದಾಳಿ ನಡೆಸಿದೆ ಎಂದು ಹೇಳಿದ್ದಾರೆ.