– ಈ ಬಾರಿ ಪಾಕ್ ವಿಶ್ವಕಪ್ ಗೆಲ್ಲಲಿದೆ, ಇದು ದೇವರ ಇಚ್ಛೆ ಎಂದ ಪಿಸಿಬಿ ಮುಖ್ಯಸ್ಥ
ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಪಾಕಿಸ್ತಾನ ದಯನೀಯ ಸ್ಥಿತಿ ತಲುಪಿದೆ. ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದೆ. 1 ಕಿಲೋ ಗೋಧಿ ಹಿಟ್ಟಿಗೆ 800 ಪಾಕಿಸ್ತಾನಿ ರೂ.ಗಳು, 1 ರೊಟ್ಟಿಯ ಬೆಲೆ 25 ಪಾಕಿಸ್ತಾನಿ ರೂ. ತಲುಪಿದೆ. ಪೆಟ್ರೋಲ್ ದರವಂತು ಹೇಳತೀರದಾಗಿದೆ. ಹೀಗಿದ್ದರೂ ಕ್ರಿಕೆಟ್ ಆಟಗಾರರಿಗೆ (Pak Cricketers) ಬಂಪರ್ ಬಹುಮಾನ ಘೋಷಿಸಿದೆ.
PCB Chairman Mohsin Naqvi interacted with the Pakistan players today at the Gaddafi Stadium in Lahore and wished them well for the upcoming assignments. He also presented special jerseys to @iNaseemShah and @iMRizwanPak for achieving 100 international wickets and completing 3,000… pic.twitter.com/eIviKB7nsY
ಹೌದು. ಜೂನ್ ತಿಂಗಳಲ್ಲಿ ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ (T20 World Cup) ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಗೆದ್ದರೆ ತಂಡದ ಪ್ರತಿ ಆಟಗಾರನಿಗೂ 1 ಲಕ್ಷ US ಡಾಲರ್ (ಭಾರತದ ರೂಪಾಯಿ 83.44 ಲಕ್ಷ ರೂ.) ಬಹುಮಾನ ನೀಡುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಘೋಷಣೆ ಮಾಡಿದೆ.
ಪಾಕ್ ತಂಡವು ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಹೊರಡುವ ಮುನ್ನ ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ (Mohsin Naqvi) ಆಟಗಾರರೊಂದಿಗೆ 2 ಗಂಟೆಗಳ ಕಾಲ ಸಮಾಲೋಚನೆ ನಡೆಸಿದರು. ಈ ವೇಳೆ ಬಹುಮಾನದ ಮೊತ್ತವನ್ನು ಘೋಷಣೆ ಮಾಡಿದರಲ್ಲದೇ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ಘನತೆಗೆ ಹೋಲಿಸಿದ್ರೆ, ಈ ಹಣ ಏನೇನು ಅಲ್ಲ. ಆದ್ದರಿಂದ ಟಿ20 ವಿಶ್ವಕಪ್ ಗೆದ್ದರೆ ತಂಡದ ಪ್ರತಿಯೊಬ್ಬ ಆಟಗಾರನಿಗೂ 100,000 ಯುಎಸ್ ಡಾಲರ್ ಬಹುಮಾನ ನೀಡುವುದಾಗಿ ಘೋಷಿಸಿದ್ದೇವೆ ಎಂದು ತಿಳಿಸಿದರು.
ಇದೇ ವೇಳೆ ಆಟಗಾರರಿಗೆ ಖಡಕ್ ಸೂಚನೆ ನೀಡಿದ ಪಿಸಿಬಿ ಮುಖ್ಯಸ್ಥ, ಸದ್ಯಕ್ಕೆ ನೀವು ಯಾರ ಬಗ್ಗೆಯೂ ಕಾಳಜಿ ವಹಿಸಬೇಡಿ, ತಂಡಕ್ಕಾಗಿ, ದೇಶಕ್ಕಾಗಿ ಆಡುವ ಬಗ್ಗೆ ಮಾತ್ರ ಗಮನಹರಿಸಿ. ತಂಡದಲ್ಲಿ ಎಲ್ಲಾ ಆಟಗಾರರು ಒಗ್ಗಟ್ಟಾಗಿದ್ದಾರೆ, ವೇಗಿ ಶಾಹೀನ್ ಶಾ ಆಫ್ರಿದಿ ಉತ್ತಮ ಪ್ರದರ್ಶನ ನೀಡುತ್ತಾರೆ ಎಂಬ ಭರವಸೆಯೂ ನಮಗಿದೆ. ಈ ಸಲ ಟ್ರೋಫಿ ಗೆಲ್ಲಬೇಕು ಎಂಬುದು ದೇವರ ಇಚ್ಚೆ. ಖಚಿತವಾಗಿ ನಮ್ಮ ತಂಡ ಗೆಲುವು ಸಾಧಿಸುತ್ತದೆ. ಈ ದೇಶವು ನಿಮ್ಮ ಮೇಲೆ ಸಾಕಷ್ಟು ನಿರೀಕ್ಷೆಯಿಟ್ಟಿದೆ. ಅವುಗಳನ್ನು ಯಾವುದೇ ಕಾರಣಕ್ಕೂ ಹುಸಿಗೊಳಿಸಬಾರದು ಎಂದು ಸಲಹೆ ನೀಡಿದರು.
ಇದೇ ವೇಳೆ ವಿಕೆಟ್ ಕೀಪರ್-ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಟಿ20 ಕ್ರಿಕೆಟ್ನಲ್ಲಿ 3,000 ರನ್ ಪೂರೈಸಿದ್ದರ ನೆನಪಿಗಾಗಿ ಕೆಲ ಆಟಗಾರರಿಗೆ ಪಾಕ್ ತಂಡದ ಜೆರ್ಸಿಯನ್ನು ವಿತರಿಸಲಾಯಿತು.
ಮುಂಬೈ: 2023ರ ವಿಶ್ವಕಪ್ (2023 World Cup) ಟೂರ್ನಿಯಲ್ಲಿ ಪಾಕಿಸ್ತಾನ ಕಳಪೆ ಪ್ರದರ್ಶನ ತೋರಿದ್ದು, ಲೀಗ್ ಸುತ್ತಿನಲ್ಲೇ ಹೊರಬಿದ್ದಿತು. ಇನ್ನೂ ಸೋಲಿನ ಹೊಣೆಹೊತ್ತು ಬಾಬರ್ ಆಜಂ (Babar Azam) ಪಾಕ್ ತಂಡದ ಎಲ್ಲಾ ಸ್ವರೂಪದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದಕ್ಕೆ ಬೆಂಗಳೂರು ಮೂಲದ ಹಾಗೂ ಕಿವೀಸ್ ಸ್ಟಾರ್ ಪ್ಲೇಯರ್ ರಚಿನ್ ರವೀಂದ್ರ (Rachin Ravindr) ಪ್ರತಿಕ್ರಿಯಿಸಿದ್ದಾರೆ.
You’re an outstanding batsman, Stepping down from captaincy is a wise move; now, without the added pressure, you can focus on showcasing your incredible talent and making wonders as a player.#BabarAzamhttps://t.co/Wo4LKH7Ch5
ಈ ಬಗ್ಗೆ ಸೋಶಿಯಲ್ ಮೀಡಿಯಾ X ಖಾತೆಯಲ್ಲಿ ಬರೆದುಕೊಂಡಿರುವ ರಚಿನ್ ರವೀಂದ್ರ, ನೀವು ಅತ್ಯುತ್ತಮ ಬ್ಯಾಟ್ಸ್ಮ್ಯಾನ್ ನಾಯಕತ್ವದಿಂದ ಕೆಳಗಿಳಿಯುವುದು ಬುದ್ಧಿವಂತಿಕೆಯ ಲಕ್ಷಣ. ಈಗ ನಿಮಗೆ ಹೆಚ್ಚಿನ ಒತ್ತಡವಿಲ್ಲ. ನಿಮ್ಮ ಅದ್ಭುತ ಪ್ರತಿಭೆಯನ್ನ ಪ್ರದರ್ಶಿಸಲು ಮತ್ತು ಆಟಗಾರನಾಗಿ ಸಾಧನೆಗಳನ್ನು ಮಾಡಲು ಗಮನಹರಿಸಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: World Cup Semifinal: 48 ವರ್ಷಗಳ ವಿಶ್ವಕಪ್ ಇತಿಹಾಸದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದ ಶಮಿ.!
ಬಾಬರ್ ಆಜಂ ನವೆಂಬರ್ 15 ರಂದು ಪಾಕಿಸ್ತಾನ ಕ್ರಿಕೆಟ್ ತಂಡದ ಎಲ್ಲಾ ಸ್ವರೂಪದ (ಟೆಸ್ಟ್, ಏಕದಿನ, ಟಿ20) ನಾಯಕತ್ವಕ್ಕೂ ರಾಜೀನಾಮೆ ನೀಡಿದ್ದರು. ಈ ಮಾಹಿತಿಯನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯನ್ನೂ ಹಂಚಿಕೊಂಡಿದ್ದರು.
ಅಫ್ರಿದಿಗೆ ಟಿ20 ನಾಯಕನ ಪಟ್ಟ: ಬಾಬರ್ ಆಜಂ ಮೂರು ಸ್ವರೂಪದ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ವೇಗಿ ಶಾಹೀನ್ ಶಾ ಅಫ್ರಿದಿ (Shaheen Shah Afridi) ಅವರಿಗೆ ಟಿ20 ತಂಡದ ನಾಯಕತ್ವದ ಹೊಣೆ ನೀಡಿದೆ. ಶಾನ್ ಮಸೂದ್ (Shan Masood) ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದಾರೆ. ಏಕದಿನ ಕ್ರಿಕೆಟ್ ತಂಡಕ್ಕೆ ಶೀಘ್ರದಲ್ಲೇ ನಾಯಕನನ್ನ ನೇಮಿಸುವುದಾಗಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. 34 ವರ್ಷದ ಶಾನ್ ಮಸೂದ್ ಪಾಕಿಸ್ತಾನ ತಂಡದ ಪರ 30 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. 28.52 ಸರಾಸರಿಯಲ್ಲಿ 1,597 ರನ್ ಗಳಿಸಿದ್ದಾರೆ. 156 ರನ್ ಶಾನ್ ಮಸೂದ್ ಅವರ ಗರಿಷ್ಠ ಸ್ಕೋರ್ ಆಗಿದ್ದಾರೆ. ಇನ್ನೂ ಶಾಹೀನ್ ಶಾ ಅಫ್ರಿದಿ ಅವರು 53 ಏಕದಿನ ಪಂದ್ಯ ಮತ್ತು 52 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿದ್ದು, ಕ್ರಮವಾಗಿ 104 ರನ್ ಗಳಿಸಿ 64 ವಿಕೆಟ್ಗಳನ್ನು ಪಡೆದಿದ್ದಾರೆ.
ಬಾಬರ್ ಹೇಳಿಕೆಯಲ್ಲಿ ಏನಿತ್ತು?
2019ರಲ್ಲಿ ಪಾಕಿಸ್ತಾನ ತಂಡವನ್ನು (Pakistan Cricket Team) ಮುನ್ನಡೆಸಲು ನಾನು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ನಿಂದ ಕರೆ ಸ್ವೀಕರಿಸಿದ ಕ್ಷಣವನ್ನು ನಾನು ಈಗಲೂ ನೆನಪಿಸಿಕೊಳ್ಳುತ್ತೇನೆ. ಕಳೆದ 4 ವರ್ಷಗಳಲ್ಲಿ ನಾನು ಮೈದಾನದಲ್ಲಿ ಮತ್ತು ಮೈದಾನದ ಹೊರೆಗೆ ಅನೇಕ ಏಳು-ಬೀಳುಗಳನ್ನು ಅನುಭವಿಸಿದ್ದೇನೆ. ಆದಾಗ್ಯೂ ಕ್ರಿಕೆಟ್ ಜಗತ್ತಿನಲ್ಲಿ ತುಂಬು ಹೃದಯದಿಂದ ಅದೇ ಉತ್ಸಾಹ ಮತ್ತು ಪಾಕಿಸ್ತಾನದ ಘನತೆ ಉಳಿಸಿಕೊಳ್ಳುವ ಸದುದ್ದೇಶ ಹೊಂದಿದ್ದೇನೆ ಎಂಬುದಾಗಿ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ರಾತ್ರಿ ನಾನು ಭಾರತ – ನ್ಯೂಜಿಲೆಂಡ್ ಸೆಮಿಫೈನಲ್ ವೀಕ್ಷಿಸಿದ್ದೆ: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ
ಸಹ ಆಟಗಾರರು, ಕೋಚ್ಗಳು ಮತ್ತು ನಿರ್ವಹಣಾ ಮಂಡಳಿಯ ಸಾಮೂಹಿಕ ಪ್ರಯತ್ನದ ಫಲವಾಗಿ ವೈಟ್ಬಾಲ್ ಮಾದರಿಯ ಕ್ರಿಕೆಟ್ನಲ್ಲಿ ವಿಶ್ವದ ನಂ.1 ಸ್ಥಾನವನ್ನೂ ತಲುಪಿದ್ದೆ. ಈ ಜರ್ನಿ ಸಮಯದಲ್ಲಿ ನನಗೆ ಬೆಂಬಲ ನೀಡಿದ್ದನ್ನು ನಾನು ಎಂದಿಗೂ ಮರೆಯುವುದಿಲ್ಲ. ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳಿಗೆ ನನ್ನ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ ಎಂದು ಭಾವುಕವಾಗಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಾನಿಂದು ಪಾಕಿಸ್ತಾನ ಕ್ರಿಕೆಟ್ ತಂಡದ ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿಯುತ್ತಿದ್ದೇನೆ. ಇದು ಕಠಿಣ ನಿರ್ಧಾರ ಆದರೆ ಈ ಕರೆಗೆ ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ನಾನು ಮೂರು ಮಾದರಿಗಳಲ್ಲಿ ಆಟಗಾರನಾಗಿ ಪಾಕಿಸ್ತಾನ ತಂಡ ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆ. ನನ್ನ ಅನುಭವ ಮತ್ತು ಸಮರ್ಪಣೆಯೊಂದಿಗೆ ಹೊಸ ನಾಯಕ ಮತ್ತು ತಂಡವನ್ನು ಬೆಂಬಲಿಸುತ್ತೇನೆ. ಇಷ್ಟು ದಿನ ಈ ಮಹತ್ವದ ಜವಾಬ್ದಾರಿ ನನಗೆ ವಹಿಸಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ನನ್ನ ಪ್ರಾಮಾಣಿಕ ಧನ್ಯವಾದ ತಿಳಿಸುತ್ತೇನೆ ಎಂಬುದಾಗಿ ತಮ್ಮ ಹೇಳಿಕೆಯಲ್ಲಿ ತಿಳಿದ್ದಾರೆ. ಇದನ್ನೂ ಓದಿ: ತುಮಕೂರಿನಲ್ಲೊಂದು ಕ್ರಿಕೆಟ್ ಪ್ರೇಮಿಗಳ ಮದುವೆ – ಮಂಟಪದಲ್ಲೇ ಇಂಡೋ-ಕಿವೀಸ್ ಸೆಮಿ ಫೈನಲ್ ವೀಕ್ಷಣೆ
2023ರ ವಿಶ್ವಕಪ್ ಟೂರ್ನಿಯಲ್ಲಿ 9ರ ಪೈಕಿ ಕೇವಲ 4 ಲೀಗ್ ಪಂದ್ಯಗಳಲ್ಲಿ ಮಾತ್ರವೇ ಗೆಲುವು ಸಾಧಿಸಿತು. ಇದರಿಂದ ಲೀಗ್ ಸುತ್ತಿನಲ್ಲೇ ಹೊರಬಿದ್ದಿತು. ಬಾಬರ್ ಆಜಂ 9 ಪಂದ್ಯಗಳಲ್ಲಿ 40 ಸರಾಸರಿಯೊಂದಿಗೆ 82.90 ಸ್ಟ್ರೈಕ್ರೇಟ್ನಲ್ಲಿ 320 ರನ್ ಗಳಿಸಿದ್ದರು.
ಇಸ್ಲಾಮಾಬಾದ್: 2023ರ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಹೀನಾಯ ಸೋಲಿನೊಂದಿಗೆ ತವರಿಗೆ ಮರಳಿದ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ತಂಡದ ಮಾಜಿ ವೇಗಿ ಹಾಗೂ ಪಾಕ್ ತಂಡಕ್ಕೆ ಬೌಲಿಂಗ್ ಕೋಚ್ ಆಗಿದ್ದ ಮೊರ್ನೆ ಮೊರ್ಕೆಲ್ (Morne Morkel) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಪ್ರಕಟಿಸಿದೆ.
ದಕ್ಷಿಣ ಆಫ್ರಿಕಾ ತಂಡದ ಮಾಜಿ ವೇಗಿಯೂ ಆಗಿದ್ದ ಮೊರ್ಕೆಲ್ ಪ್ರಸಕ್ತ ವರ್ಷದ ಜೂನ್ ತಿಂಗಳಲ್ಲಿ 6 ತಿಂಗಳ ಒಪ್ಪಂದದ ಮೇರೆಗೆ ಪಾಕಿಸ್ತಾನ ತಂಡಕ್ಕೆ ಬೌಲಿಂಗ್ ಕೋಚ್ (Pakistans Bowling Coach) ಆಗಿ ನೇಮಕಗೊಂಡಿದ್ದರು. ಶೀಘ್ರದಲ್ಲೇ ಮೊರ್ಕೆಲ್ ಸ್ಥಾನಕ್ಕೆ ಬದಲಿ ಕೋಚ್ ನೇಮಿಸುವುದಾಗಿ ಮಂಡಳಿ ತಿಳಿಸಿದೆ. ಇದನ್ನೂ ಓದಿ: Six In Six – ಒಂದೇ ಓವರ್ನಲ್ಲಿ 6 ವಿಕೆಟ್ ಕಿತ್ತು ಇತಿಹಾಸ ಸೃಷ್ಟಿಸಿದ ಆಸೀಸ್ ಕ್ರಿಕೆಟಿಗ
ಪಾಕಿಸ್ತಾನ ತಂಡವು ಇದೇ ವರ್ಷದ ಡಿಸೆಂಬರ್ 14 ರಿಂದ 2024ರ ಜನವರಿ 7ರ ವರೆಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಅಷ್ಟರಲ್ಲಿ ಬದಲಿ ಕೋಚ್ ನೇಮಕ ಮಾಡುವುದಾಗಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: World Cup: ಈ ದಾಖಲೆ ಬರೆದ ಭಾರತದ ಮೊದಲ ಕ್ಯಾಪ್ಟನ್ ರೋಹಿತ್ ಶರ್ಮಾ
ಮೊರ್ಕೆಲ್ ಬೌಲಿಂಗ್ ಕೋಚ್ ಆಗಿ ನಿಯೋಜನೆಗೊಂಡ ಬಳಿಕ ಶ್ರೀಲಂಕಾ ವಿರುದ್ಧ ನಡೆದ 2 ಟೆಸ್ಟ್ ಸರಣಿಗೆ ಕೋಚ್ ಆಗಿದ್ದರು. ಆಗ ಪಾಕಿಸ್ತಾನ 2-0 ಅಂತರದಲ್ಲಿ ಲಂಕಾ ವಿರುದ್ಧ ಸರಣಿ ಗೆದ್ದುಕೊಂಡಿತ್ತು. ಆ ನಂತರ ಅಫ್ಘಾನಿಸ್ತಾನ ವಿರುದ್ಧ ನಡೆದ ಏಕದಿನ ಸರಣಿಯಲ್ಲೂ ತವರಿನಲ್ಲೇ ವೈಟ್ವಾಶ್ ಮಾಡಿತ್ತು. ಆ ಬಳಿಕ ಮೊರ್ಕೆಲ್ ಏಕದಿನ ಏಷ್ಯಾಕಪ್ ಸಂದರ್ಭದಲ್ಲೂ ಕೋಚ್ ಆಗಿದ್ದರು. ಆದ್ರೆ ಪಾಕ್ ಏಷ್ಯಾಕಪ್ನಲ್ಲಿ ಸೂಪರ್ ಫೋರ್ ಹಂತದಲ್ಲಿ ಶ್ರೀಲಂಕಾ ವಿರುದ್ಧ ಸೋತು ಫೈನಲ್ ಪ್ರವೇಶಿಸದೇ ಹಿಂದಿರುಗಿತ್ತು. ಇದೀಗ ವಿಶ್ವಕಪ್ ಟೂರ್ನಿಯಲ್ಲಿ ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದಿದೆ.
ಚೆನ್ನೈ: 1992ರಲ್ಲಿ ವಿಶ್ವಕಪ್ (World Cup 2023) ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಪಾಕ್ ತಂಡ ಮರ್ಮಾಘಾತಕ್ಕೀಡಾಗಿದೆ. ಆರಂಭಿಕ ಪಂದ್ಯಗಳಲ್ಲಿ ನೆದರ್ಲೆಂಡ್ಸ್ ಮತ್ತು ಶ್ರೀಲಂಕಾ (SriLanka) ವಿರುದ್ಧ ಉತ್ತಮ ಪ್ರದರ್ಶನ ನೀಡಿದ್ದ ಪಾಕ್ ಬಳಿಕ ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿದೆ.
ಇಲ್ಲಿನ ಚೆಪಾಕ್ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಏಕದಿನ ವಿಶ್ವಕಪ್ ಟೂರ್ನಿಯ 22ನೇ ಪಂದ್ಯದಲ್ಲಿ ಅದ್ಭುತ ಆಟವಾಡಿದ ಅಫ್ಘಾನಿಸ್ತಾನ ತಂಡ 8 ವಿಕೆಟ್ಗಳಿಂದ ಬದ್ಧ ಎದುರಾಳಿ ಪಾಕಿಸ್ತಾನ (Pakistan) ತಂಡವನ್ನ ಬಗ್ಗು ಬಡಿಯಿತು. ಇದರಿಂದ ಪಾಕಿಸ್ತಾನ ತಂಡ ಭಾರತ, ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನದ (Afghanistan) ಎದುರು ಮುಗ್ಗರಿಸಿ ಹ್ಯಾಟ್ರಿಕ್ ಸೋಲಿನ ಆಘಾತಕ್ಕೊಳಗಾಗಿದೆ. ಇದನ್ನೂ ಓದಿ: ಪುಟಿನ್ಗೆ ಏನೂ ಆಗಿಲ್ಲ, ಆರೋಗ್ಯವಾಗಿದ್ದಾರೆ – ಕ್ರೆಮ್ಲಿನ್ ಸ್ಪಷ್ಟನೆ
ಈ ನಡುವೆ, ಪಾಕ್ ತಂಡದ ಆರಂಭಿಕ ಆಟಗಾರ, ಅಬ್ದುಲ್ಲಾ ಶಫೀಕ್ ಭಾವುಕವಾಗಿ ಟ್ವೀಟ್ ಮೂಲಕ ಪಾಕಿಸ್ತಾನ ಜನತೆಗೆ ಕ್ಷಮೆ ಕೋರಿದ್ದಾರೆ. ನಾಯಕ ಬಾಬರ್ ಆಜಂ (Babar Azam) ಜೊತೆಗೆ ಅಫ್ಘಾನಿಸ್ತಾನದ ವಿರುದ್ಧ ಸೋತು ಮೈದಾನದಿಂದ ಹೊರನಡೆಯುತ್ತಿದ್ದ ಚಿತ್ರವನ್ನು ಹಂಚಿಕೊಂಡಿದ್ದು, ನಮ್ಮನ್ನು ಕ್ಷಮಿಸಿಬಿಡಿ ಪಾಕಿಸ್ತಾನ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಒಡೆದ ಹೃದಯದ ಇಮೋಜಿಯನ್ನೂ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಪರ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.
ಬಲಿಷ್ಠ ಬ್ಯಾಟಿಂಗ್ ಹಾಗೂ ಬೌಲಿಂಗ್ ಪಡೆಯನ್ನು ಹೊಂದಿದ್ದ ಪಾಕಿಸ್ತಾನ ಈ ಬಾರಿ ಖಂಡಿತ ಫೈನಲ್ ತಲುಪಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೀಗ ಸತತ ಸೋಲಿನಿಂದ ಕಂಗೆಟ್ಟಿರುವ ಪಾಕಿಸ್ತಾನ ತಂಡಕ್ಕೆ ಸೆಮಿಫೈನಲ್ ಹಾದಿ ಮುಳ್ಳಿನ ಹಾದಿಯಾಗಿದೆ. ಉಳಿದ ನಾಲ್ಕರಲ್ಲಿ 4 ಪಂದ್ಯಗಳನ್ನೂ ಗೆದ್ದರಷ್ಟೇ ಮುಂದಿನ ಹಂತಕ್ಕೇ ತಲುಪುವ ಅವಕಾವಿದೆ. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ – ಚಿನ್ನದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಸಾಗಿದ ಅಭಿಮನ್ಯು
ಟೂರ್ನಿಯಲ್ಲಿ ಈ ಮೊದಲು ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ತಂಡಕ್ಕೆ ಆಘಾತ ನೀಡಿ 69 ರನ್ಗಳ ಅವಿಸ್ಮರಣೀಯ ಜಯ ದಾಖಲಿಸಿದ್ದ ಅಫ್ಘಾನಿಸ್ತಾನ ತಂಡ ಚೆಪಾಕ್ನಲ್ಲಿ ಎಲ್ಲ ವಿಭಾಗಗಳಲ್ಲಿ ಪ್ರಾಬಲ್ಯ ಮೆರೆದು ಪಾಕಿಸ್ತಾನ ತಂಡದ ಹೆಡೆಮುರಿ ಕಟ್ಟಿದೆ. ಈ ಜಯದೊಂದಿಗೆ ಅಫ್ಘಾನ್ ತಂಡ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಏಷ್ಯಾ ಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಎದುರು ಅನುಭವಿಸಿದ್ದ ಸೋಲಿಗೆ ಅಫಘಾನಿಸ್ತಾನ ತಂಡ ಈಗ ಸೇಡು ತೀರಿಸಿಕೊಂಡಿದೆ.
ಅಹಮದಾಬಾದ್: ವಿಶ್ವಕಪ್ (World Cup) ಟೂರ್ನಿಯ ರೋಚಕ ಇಂಡೋ-ಪಾಕ್ (Ind vs Pak) ಸಮರಕ್ಕೆ ಕ್ಷಣಗಣನೆ ಬಾಕಿಯಿದೆ. ಮಧ್ಯಾಹ್ನ 2 ಗಂಟೆಗೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಆರಂಭವಾಗಲಿದೆ. ಈ ಪಂದ್ಯ ನೋಡಲು ಮೈದಾನಕ್ಕೆ ಜನಸಾಗರವೇ ಹರಿದು ಬಂದಿದೆ. ಎಲ್ಲ ಟಿಕೆಟ್ಗಳು ಕೂಡ ಸೋಲ್ಡ್ ಔಟ್ ಆಗಿದ್ದು, ಟಿಕೆಟ್ ಸಿಗದ ಕೆಲವರು ಸ್ಟೇಡಿಯಂನ ಹೊರ ಭಾಗದಲ್ಲಿ ಭಾರತ ತಂಡದ ಜೆರ್ಸಿಯನ್ನು ಹಾಕಿ ಸಂಭ್ರಮಾಚರಣೆ ಮಾಡುವ ಮೂಲಕ ತಂಡಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.
ಇನ್ನೇನು ಕೆಲವೇ ಗಂಟೆಗಳಲ್ಲಿ ಮನರಂಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.30ರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬಾಲಿವುಡ್ ಗಾಯಕರಾದ ಶಂಕರ್ ಮಹಾದೇವನ್, ಸುಖ್ವಿಂದರ್ ಸಿಂಗ್, ಅರ್ಜಿತ್ ಸಿಂಗ್ ಸಂಗೀತ ಸುಧೆ ಹರಿಸಲಿದ್ದಾರೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿ ಹಲವು ಮಾಜಿ ಆಟಗಾರರು ಈ ಪಂದ್ಯ ವೀಕ್ಷಣೆಗೆ ಅಹಮದಾಬಾದ್ಗೆ ಆಗಮಿಸಿದ್ದಾರೆ. ಇದನ್ನೂ ಓದಿ: World Cup 2023: ಇಂಡೋ-ಪಾಕ್ ಕದನ ಯಾವಾಗಲೂ ರಣಕಣ ಏಕೆ? – ನೆನಪಿದೆಯಾ ಆ ಕರಾಳ ದಿನಗಳು?
ಟೀಂ ಇಂಡಿಯಾ ಗೆಲುವಿಗೆ ಹೋಮ, ಹವನ:
ಪ್ರತಿಬಾರಿ ಭಾರತದ ಗೆಲುವಿಗಾಗಿ ದೇಶದ ಹಲವು ಕಡೆಗಳಲ್ಲಿ ಅಭಿಮಾನಿಗಳು ಪೂಜೆ ಮತ್ತು ಪ್ರಾರ್ಥನೆ ನಡೆಸಿದ್ದಾರೆ. ಪಂದ್ಯಕ್ಕೆ ಭಾರೀ ಕಟ್ಟೆಚ್ಚರ ವಹಿಸಿದ್ದು, ಗುಜರಾತ್ ಪೊಲೀಸ್, ಎನ್ಎಸ್ಜಿ, ಆರ್ಎಎಫ್, ಗೃಹರಕ್ಷಣಾ ಪಡೆ ಸಹಿತ ಕ್ರೀಡಾಂಗಣದ ಸುತ್ತ ವಿವಿಧ ಭದ್ರತಾ ಏಜೆನ್ಸಿಗಳಿಂದ ಒಟ್ಟು 11 ಸಾವಿರ ರಕ್ಷಣಾ ಸಿಬ್ಬಂದಿಯನ್ನು ಬಿಗಿಭದ್ರತೆಗಾಗಿ ನಿಯೋಜಿಸಲಾಗಿದೆ. ಇದನ್ನೂ ಓದಿ: Ind vs Pak ರೋಚಕ ಸಮರಕ್ಕೆ ಕ್ಷಣಗಣನೆ – ಮೋದಿ ಕ್ರೀಡಾಂಗಣದಲ್ಲಿ ಜನಸಾಗರ, ಭಾರತದ ಗೆಲುವಿಗೆ ಹೋಮ ಹವನ
ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ.
#WATCH | Team India arrives at Narendra Modi Stadium in Ahmedabad, Gujarat.
2016ರಲ್ಲಿ ಕೊನೆಯದ್ದಾಗಿ ಭಾರತಕ್ಕೆ ಬಂದಿದ್ದ ಪಾಕ್ ಈಡನ್ ಗಾರ್ಡನ್ನಲ್ಲಿ ಟೀಂ ಇಂಡಿಯಾ (Team India) ವಿರುದ್ಧ ಕಣಕ್ಕಿಳಿದಿತ್ತು. ಅಂದು ಮಳೆ ಅಡ್ಡಿಯಾದ್ದರಿಂದ ಪಾಕ್ ತಂಡ ನೀಡಿದ್ದ 119 ರನ್ಗಳ ಗುರಿಯನ್ನು 18 ಓವರ್ಗಳಲ್ಲಿ ತಲುಪಲು ಭಾರತಕ್ಕೆ ಟಾರ್ಗೆಟ್ ನೀಡಲಾಗಿತ್ತು. ಆದ್ರೆ ಬಲಿಷ್ಠ ಭಾರತ ತಂಡ 15.5 ಓವರ್ಗಳಲ್ಲೇ ಈ ಗುರಿ ಪೂರೈಸಿತ್ತು. ಇದೀಗ 7 ವರ್ಷಗಳ ಮತ್ತೆ ಭಾರತಕ್ಕೆ ಎಂಟ್ರಿ ಕೊಟ್ಟಿರುವ ಪಾಕ್ ತಂಡವನ್ನು ಬಗ್ಗು ಬಡಿಯಲು ಟೀಂ ಇಂಡಿಯಾ ಸಜ್ಜಾಗಿದೆ. ಇದನ್ನೂ ಓದಿ: ಇಂಡೋ-ಪಾಕ್ ವಿಶ್ವ ಸಮರ: ʻಗೆದ್ದು ಬಾ ಭಾರತʼ – ಕೋಟ್ಯಂತರ ಅಭಿಮಾನಿಗಳ ಶುಭ ಹಾರೈಕೆ
ಚಿಕ್ಕಬಳ್ಳಾಪುರ ಚೌಡೇಶ್ವರಿಗೆ ವಿಶೇಷ ಪೂಜೆ: ಪಾಕ್ ವಿರುದ್ಧ ಭಾರತ ಜಯ ಸಾಧಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಚೌಡೇಶ್ವರಿ ದೇವಾಲಯದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚೌಡೇಶ್ವರಿ ದೇವಿ ಬಳಿ ಭಾರತ ಧ್ವಜ ಇಟ್ಟು ಪೂಜೆ ಮಾಡಿಸಿ ಭಾರತ ತಂಡ ಗೆಲ್ಲಲಿ ಅಂತ ಅಭಿಮಾನಿಗಳು ಅಶಿಸಿದ್ದಾರೆ.
ಮುಂಬೈ: ಪ್ರತಿಷ್ಠಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ನಿರ್ಣಾಯಕ ಘಟ್ಟದಲ್ಲಿದ್ದು, (ICC World Cup 2023) ಇಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ.
1987 ಮತ್ತು 1996ರಲ್ಲಿ ಪಾಕಿಸ್ತಾನದ (Pakistan) ಜೊತೆಗೆ 2011ರಲ್ಲಿ ಬಾಂಗ್ಲಾದೇಶದ ಜೊತೆಗೆ ಸಹ ಆತಿಥ್ಯದೊಂದಿಗೆ ವಿಶ್ವಕಪ್ ಟೂರ್ನಿ ಆಯೋಜಿಸಿದ್ದ ಭಾರತ ಈ ಬಾರಿ ಪೂರ್ಣ ಆತಿಥ್ಯ ವಹಿಸಿಕೊಂಡಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಎದುರಾಗುತ್ತಿವೆ ಅಂದ್ರೆ ಸಾಕು ಪ್ರತಿ ಕ್ಷಣವೂ ಮೈ ರೋಮಾಂಚನವಾಗುತ್ತದೆ. ದೇಶದ ಮೂಲೆ ಮೂಲೆಯಲ್ಲಿರುವ ಕ್ರಿಕೆಟ್ ಅಭಿಮಾನಿಗಳು (Cricket Fans) ಈ ಪಂದ್ಯಗಳನ್ನು ಕಣ್ತುಂಬಿಕೊಳ್ಳೋದಕ್ಕೆ ತುದಿಗಾಲಿನಲ್ಲಿ ಕಾಯುತ್ತಿರುತ್ತಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಮಾತ್ರ ಏಕೆ ಇಷ್ಟೊಂದು ಕ್ರೇಜ್ ಹೆಚ್ಚಾಗಿದೆ? ಎಂಬುದನ್ನಿಲ್ಲಿ ತಿಳಿಯೋಣ. ಇದನ್ನೂ ಓದಿ: ರೋಹಿತ್ ಶರ್ಮಾ ಸ್ಫೋಟಕ ಶತಕ – 8 ವಿಕೆಟ್ಗಳ ಜಯದೊಂದಿಗೆ ಪಾಕ್ ಹಿಂದಿಕ್ಕಿದ ಭಾರತ
ಇತಿಹಾಸವೇ ರೋಚಕ..?
ಪಾಕಿಸ್ತಾನ ಮುಸ್ಲಿಂ ರಾಷ್ಟ್ರವಾಗಿ ಬೇರ್ಪಟ್ಟ ನಂತರ ಭಾರತದ ವಿರುದ್ಧ ದ್ವೇಷ ಸಾಧಿಸುತ್ತಲೇ ಬಂದಿತು. 1947-48ರಲ್ಲಿ ರಾಜ ಹರಿಸಿಂಗ್ ಭಾರತದೊಂದಿಗೆ ಕಾಶ್ಮೀರ ವಿಲೀನ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇಂಡೋ ಪಾಕ್ ಯುದ್ಧ (Indo Pak War) ನಡೆಯಿತು. ಆ ನಂತರ 1965ರಲ್ಲಿ ಕಾಶ್ಮೀರಕ್ಕಾಗಿ ನಡೆದ ಯುದ್ಧ, 1971ರಲ್ಲಿ ಪೂರ್ವ ಪಾಕಿಸ್ತಾನ (ಇಂದಿನ ಬಾಂಗ್ಲಾದೇಶ) ವಿಮೋಚನೆಗಾಗಿ ನಡೆದ ಯುದ್ಧ, 1999 ರಲ್ಲಿ ನಡೆದ ಕಾರ್ಗಿಲ್ ಯುದ್ಧ ಇವೆಲ್ಲವೂ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧವನ್ನ ಮತ್ತಷ್ಟು ಹದಗೆಡಿಸುತ್ತಾ ಹೋಯಿತು. ಆದ್ರೆ ಕ್ರೀಡೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಕಾರ್ಗಿಲ್ ಯುದ್ಧದ ನಂತರವೂ ಭಾರತ ಮತ್ತು ಪಾಕ್ ತಂಡಗಳು ದ್ವಿಪಕ್ಷಿಯ ಸರಣಿ, ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಮುಖಾಮುಖಿಯಾಗಿವೆ. ಭಾರತ ತಂಡವು ಸಹ ಪಾಕಿಸ್ತಾನದಲ್ಲೇ ದ್ವಿಪಕ್ಷಿಯ ಸರಣಿಗಳನ್ನಾಡಿದೆ. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿ (Mumbai Attack) ಎರಡು ರಾಷ್ಟ್ರಗಳ ಮೇಲೆ ಭಾರೀ ಪರಿಣಾಮ ಬೀರಿತು. ಇದನ್ನೂ ಓದಿ: ದುಷ್ಮನ್ ಅಲ್ಲ ದೋಸ್ತಿ – ಕೊಹ್ಲಿಯನ್ನು ಹಾಡಿ ಹೊಗಳಿದ ಗಂಭೀರ್, ಫ್ಯಾನ್ಸ್ ವಿರುದ್ಧ ಮತ್ತೆ ಗರಂ
ನೆನಪಿದೆಯಾ ಆ ಕರಾಳ ದಿನ..?
2008ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿ, ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನ ನಡೆಸಿ 166 ಜನರನ್ನು ಹತ್ಯೆಗೈದಿದ್ದರು. 300ಕ್ಕೂ ಹೆಚ್ಚು ಜನರನ್ನ ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್ಗಳಲ್ಲಿ ದಾಳಿ ನಡೆಸಲಾಗಿತ್ತು. ಇದನ್ನೂ ಓದಿ: ಇಂಡೋ-ಪಾಕ್ ಕದನ: 10 ಸೆಕೆಂಡ್ ಜಾಹೀರಾತಿನ ಬೆಲೆ ಕೇಳಿದ್ರೆ ಎದೆ ಬಡಿತ ಹೆಚ್ಚಿಸುತ್ತೆ..!
ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಇದಾದ ಬಳಿಕ 2019ರ ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ಪಾಕ್ ಉಗ್ರರು, ಭಾರತೀಯ ಯೋಧರನ್ನು ಭೀಕರವಾಗಿ ಬಾಂಬ್ ದಾಳಿಯಲ್ಲಿ ಕೊಂದರು. ಇದು ಇನ್ನಷ್ಟು ಭಾರತೀಯರ ನಿದ್ದೆಗೆಡಿಸಿತ್ತು. ಇದನ್ನೂ ಓದಿ: 7-0 ದಾಖಲೆ ಬಗ್ಗೆ ಚಿಂತೆಯಿಲ್ಲ, ಈ ಬಾರಿ ಮುರಿಯುತ್ತೇವೆ: ಅಜಂ ವಿಶ್ವಾಸ
2016ರಲ್ಲಿ ಕೊನೆಯದ್ದಾಗಿ ಭಾರತಕ್ಕೆ ಬಂದಿದ್ದ ಪಾಕ್ ಈಡನ್ ಗಾರ್ಡನ್ನಲ್ಲಿ ಟೀಂ ಇಂಡಿಯಾ ವಿರುದ್ಧ ಕಣಕ್ಕಿಳಿದಿತ್ತು. ಅಂದು ಮಳೆ ಅಡ್ಡಿಯಾದ್ದರಿಂದ ಪಾಕ್ ತಂಡ ನೀಡಿದ್ದ 119 ರನ್ಗಳ ಗುರಿಯನ್ನು 18 ಓವರ್ಗಳಲ್ಲಿ ತಲುಪಲು ಭಾರತಕ್ಕೆ ಟಾರ್ಗೆಟ್ ನೀಡಲಾಗಿತ್ತು. ಆದ್ರೆ ಬಲಿಷ್ಠ ಭಾರತ ತಂಡ 15.5 ಓವರ್ಗಳಲ್ಲೇ ಈ ಗುರಿ ಪೂರೈಸಿತ್ತು. ಇದೀಗ 7 ವರ್ಷಗಳ ಮತ್ತೆ ಭಾರತಕ್ಕೆ ಎಂಟ್ರಿ ಕೊಟ್ಟಿರುವ ಪಾಕ್ ತಂಡವನ್ನು ಬಗ್ಗು ಬಡಿಯಲು ಟೀಂ ಇಂಡಿಯಾ ಸಜ್ಜಾಗಿದೆ. ಇದನ್ನೂ ಓದಿ: ಇಂಡೋ-ಪಾಕ್ ವಿಶ್ವ ಸಮರ: ʻಗೆದ್ದು ಬಾ ಭಾರತʼ – ಕೋಟ್ಯಂತರ ಅಭಿಮಾನಿಗಳ ಶುಭ ಹಾರೈಕೆ
1992ರಲ್ಲಿ ಪಾಕಿಸ್ತಾನ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. 1992ರಲ್ಲಿ ಏಕದಿನ ವಿಶ್ವಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ 7 ಬಾರಿ ಮುಖಾಮುಖಿಯಾಗಿವೆ. 1992, 1999, 2003, 2011, 2015 ಹಾಗೂ 2019ರಲ್ಲಿ ಇತ್ತಂಡಗಳು ಮುಖಾಮುಖಿಯಾಗಿವೆ. ಅಲ್ಲದೇ ಟಿ20 ವಿಶ್ವಕಪ್ನಲ್ಲಿ 7 ಬಾರಿ, ಚಾಂಪಿಯನ್ಸ್ ಟ್ರೋಫಿಯಲ್ಲಿ 5 ಬಾರಿ ಒಟ್ಟು 19 ಬಾರಿ ಇತ್ತಂಡಗಳು ಮುಖಾಮುಖಿಯಾಗಿವೆ. ಭಾರತ ಇದುವರೆಗೆ ಏಷ್ಯಾಕಪ್ ಟೂರ್ನಿಯಲ್ಲಿ ಪಾಕ್ ವಿರುದ್ಧ ಸೋತಿದೆಯೇ ಹೊರತು ವಿಶ್ವಕಪ್ ಟೂರ್ನಿಯಲ್ಲಿ ಸೋತಿಲ್ಲ. ಈ ಬಾರಿಯೂ ಪಾಕ್ ವಿರುದ್ಧ ಗೆಲ್ಲುವ ವಿಶ್ವಾಸದಲ್ಲೇ ಮುಂದುವರಿದಿದೆ.
ಅಹಮದಾಬಾದ್: ಭಾರತ ಈಗ ನವರಾತ್ರಿ ಸಂಭ್ರಮಕ್ಕೆ ಅಣಿಯಾಗುತ್ತಿದೆ. ಬದ್ಧವೈರಿ ಪಾಕಿಸ್ತಾನ ತಂಡವನ್ನು ಟೀಂ ಇಂಡಿಯಾ ಶನಿವಾರ (ಅ.14) ವಿಶ್ವಕಪ್ ಸಮರದಲ್ಲಿ ಹುರಿದು ಮುಕ್ಕಿದರೆ ದೇಶದೆಲ್ಲೆಡೆ ಸಂಭ್ರಮ ಇಮ್ಮಡಿಗೊಳ್ಳಲಿದೆ. ಜೊತೆಗೆ ಅಭಿಮಾನಿಗಳಿಗೆ ನವರಾತ್ರಿಗೆ ಗೆಲುವಿನ ಉಡುಗೊರೆಯೂ ಸಿಗಲಿದೆ. ಈ ಪಂದ್ಯಕ್ಕಾಗಿ ಕೇವಲ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲ, ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದೆ.
ಶನಿವಾರ ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ. 1.32 ಲಕ್ಷ ಆಸನಗಳ ಸಾಮರ್ಥ್ಯ ಹೊಂದಿರುವ ವಿಶ್ವದ ಅತಿದೊಡ್ಡ ಕ್ರೀಡಾಂಗಣದಲ್ಲಿ ಬದ್ಧ ವೈರಿಯನ್ನು ಬಗ್ಗು ಬಡಿದು ಭಾರತ ಸಂಭ್ರಮಿಸಲಿ ಅನ್ನೋದು 140 ಕೋಟಿ ಭಾರತೀಯರ ಪ್ರಾರ್ಥನೆ. ಅಭಿಮಾನಿಗಳ ಬೆಂಬಲವೂ ರೋಹಿತ್ ಶರ್ಮಾ ಪಡೆಯ ಬೆನ್ನಿಗೆ ಇರಲಿದೆ. ಇದನ್ನೂ ಓದಿ: ಭಾರತ, ಹಿಂದೂ ಧರ್ಮ ಅವಹೇಳನ – ಗಡಿಪಾರಾದ ಬಳಿಕ ಕ್ಷಮೆ ಕೇಳಿದ ಪಾಕ್ ನಿರೂಪಕಿ
1992 ರಿಂದ 2019ರ ವರೆಗೂ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ 7 ಪಂದ್ಯಗಳನ್ನಾಡಿರುವ ಭಾರತ, 7 ಬಾರಿಯೂ ವಿಜಯದ ಮಾಲೆ ಹಾಕಿಕೊಂಡಿದೆ. ಈ ವಿಶ್ವಕಪ್ನಲ್ಲಿ ಆಡುತ್ತಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ಬಲಾಬಲವನ್ನು ನೋಡಿದಾಗ, ಈ ಸಲವೂ ಭಾರತವೇ ಗೆಲ್ಲುವ ಫೇವರಿಟ್ ಆಗಿದೆ. ಭಾರತ 8ನೇ ಜಯಕ್ಕೆ ಹಪಹಪಿಸುತ್ತಿದ್ದರೆ, ಮೊದಲ ಜಯ ಸಾಧಿಸಿ ಇತಿಹಾಸ ಸೃಷ್ಟಿಸುವ ತವಕದಲ್ಲಿದೆ. ಇದನ್ನೂ ಓದಿ: 7-0 ದಾಖಲೆ ಬಗ್ಗೆ ಚಿಂತೆಯಿಲ್ಲ, ಈ ಬಾರಿ ಮುರಿಯುತ್ತೇವೆ: ಅಜಂ ವಿಶ್ವಾಸ
ಭಾರತ ತಂಡದಲ್ಲಿರುವ ಬ್ಯಾಟರ್ಗಳೆಲ್ಲರೂ ಕ್ರಿಕೆಟ್ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಬೌಲರ್ಗಳೂ ಒಬ್ಬರಿಗಿಂತ ಒಬ್ಬರು ದೊಡ್ಡ ರೆಕಾರ್ಡ್ ಮಾಡಿದವರಿದ್ದಾರೆ. ಈ ಪಂದ್ಯದಲ್ಲಿ ಲಯ, ಸಾಮರ್ಥ್ಯ, ಪ್ರತಿಭೆ ಇವೆಲ್ಲಕ್ಕಿಂತ ಮಿಗಿಲಾಗಿ ಯಾರು ಭಾವನೆಗಳನ್ನು ಸಮರ್ಥವಾಗಿ ನಿಭಾಯಿಸುತ್ತಾರೋ ಅವರಿಗೆ ವಿಜಯಲಕ್ಷ್ಮಿ ಒಲಿಯುತ್ತಾಳೆ. ಹೀಗಾಗಿ ರೋಹಿತ್ ಪಡೆಗಿರುವ ಅತಿದೊಡ್ಡ ಸವಾಲು ಭಾವನೆಗಳ ಬಂಧನಕ್ಕೆ ಒಳಗಾಗದಿರುವುದು.
ಅಹಮದಾಬಾದ್ನ ಇತ್ತೀಚಿನ ದಾಖಲೆಯನ್ನು ಪರಿಗಣಿಸಿ, ವೇಗದ ಬೌಲರ್ಗಳಿಗೆ ಹೆಚ್ಚು ನೆರವು ಸಿಗಲಿದೆ ಎನ್ನುವ ನಂಬಿಕೆಯೊಂದಿಗೆ ಭಾರತ ಕಣಕ್ಕಿಳಿದರೆ ಮೊಹಮದ್ ಶಮಿಗೆ ಅವಕಾಶ ಸಿಗಬಹುದು. ಶಮಿ ಐಪಿಎಲ್ನಲ್ಲಿ ಗುಜರಾತ್ ತಂಡದಲ್ಲಿ ಆಡುವ ಕಾರಣ, ಇಲ್ಲಿನ ಪಿಚ್ ಬಗ್ಗೆ ಅವರಿಗೆ ಹೆಚ್ಚಿನ ಮಾಹಿತಿ ಇರಲಿದೆ. ಒಂದು ವೇಳೆ ದೊಡ್ಡ ಬೌಂಡರಿಗಳು ಎನ್ನುವ ಅಂಶವನ್ನು ತಲೆಯಲ್ಲಿಟ್ಟುಕೊಂಡು ಆಡುವ ಹನ್ನೊಂದನ್ನು ನಿರ್ಧರಿಸಿದರೆ ಆಗ ಆರ್.ಅಶ್ವಿನ್ರನ್ನು ಆಡಿಸಬಹುದು ಎಂದು ಹೇಳಲಾಗಿದೆ.
ಅಹಮದಾಬಾದ್: ಏಕದಿನ ವಿಶ್ವಕಪ್ (ICC World Cup) ಟೂರ್ನಿಯಲ್ಲಿ ಅಕ್ಟೋಬರ್ 14ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಆದ್ರೆ ಪಂದ್ಯದ ನಡುವೆ ಮಾಧ್ಯಮಗಳಲ್ಲಿ ಪ್ರಸಾರಗೊಳ್ಳುವ ಜಾಹೀರಾತಿನ (Advertisement) ಮೌಲ್ಯ ಕೇಳಿದ್ರೆ ನಿಜಕ್ಕೂ ಎದೆ ಬಡಿತ ಹೆಚ್ಚಿಸುತ್ತೆ. ಏಕೆಂದರೆ ಪ್ರತಿ 10 ಸೆಕೆಂಡ್ ಜಾಹೀರಾತಿಗೆ ಬರೋಬ್ಬರಿ 25 ರಿಂದ 30 ಲಕ್ಷ ರೂ. ನಿಗದಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಿ20 ವಿಶ್ವಕಪ್ ಟೂರ್ನಿ ಬಳಿಕ ಡಿಸ್ನಿ ಪ್ಲಸ್ ಹಾಟ್ಸ್ಟಾರ್ (Disney Hot Star) ಸಂಸ್ಥೆಯ ಪ್ರಸಾರ ಒಪ್ಪಂದ ಮುಕ್ತಾಯಗೊಳ್ಳಲಿದೆ. ಆದ್ದರಿಂದ ಡಿಸ್ನಿ ಸ್ಟಾರ್ ಈ ಪಂದ್ಯದ ಸಂಪೂರ್ಣ ಲಾಭ ಪಡೆಯುವ ನಿರೀಕ್ಷೆಯಲ್ಲಿದೆ. ಪಂದ್ಯದ ವೇಳೆ ಪ್ರಸಾರಗೊಳ್ಳುವ ಪ್ರತಿ 10 ಸೆಕೆಂಡ್ ಜಾಹೀರಾತಿಗೆ ಬರೋಬ್ಬರಿ 25 ರಿಂದ 30 ಲಕ್ಷ ರೂ. ನಿಗದಿಪಡಿಸಲಾಗಿದೆ. ಭಾರತದ ಇತರ ಪಂದ್ಯಗಳ ವೇಳೆ 10 ಸೆಕೆಂಡ್ ಜಾಹೀರಾತಿನ ಸ್ಲಾಟ್ಗೆ ಅಂದಾಜು 10 ಲಕ್ಷ ರೂ. ನಿಗದಿ ಮಾಡಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ದುಷ್ಮನ್ ಅಲ್ಲ ದೋಸ್ತಿ – ಕೊಹ್ಲಿಯನ್ನು ಹಾಡಿ ಹೊಗಳಿದ ಗಂಭೀರ್, ಫ್ಯಾನ್ಸ್ ವಿರುದ್ಧ ಮತ್ತೆ ಗರಂ
ಆರಂಭದಲ್ಲಿ ಉಭಯ ತಂಡಗಳ ಈ ಪಂದ್ಯದ ವೇಳೆ ಪ್ರತಿ 10 ಸೆಕೆಂಡ್ ಜಾಹೀರಾತಿಗೆ 17 ರಿಂದ 18 ಲಕ್ಷ ರೂ. ಮೊತ್ತ ನಿಗದಿ ಪಡಿಸಲಾಗಿತ್ತು. ಆದ್ರೆ ಬೇಡಿಕೆ ಹೆಚ್ಚಾಗಿದ್ದರಿಂದ ಸಂಸ್ಥೆ ಇದರ ಲಾಭ ಪಡೆಯಲು ಉದ್ದೇಶಿಸಿದ್ದು, ಜಾಹೀರಾತಿನ ಮೌಲ್ಯವನ್ನು 25 ರಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ. ಏಷ್ಯಾಕಪ್ ಟೂರ್ನಿ ವೇಳೆಯೂ ಜಿಯೋ ಆಪ್ ಇಷ್ಟೇ ಪ್ರಮಾಣದ ದರವನ್ನು ನಿಗದಿ ಮಾಡಿತ್ತು. ಇದನ್ನೂ ಓದಿ: ಭಾರತ, ಹಿಂದೂ ಧರ್ಮ ಅವಹೇಳನ – ಗಡಿಪಾರಾದ ಬಳಿಕ ಕ್ಷಮೆ ಕೇಳಿದ ಪಾಕ್ ನಿರೂಪಕಿ
ಈಗಾಗಲೇ ಈ ಪಂದ್ಯವನ್ನು ಕಣ್ತುಂಬಿಕೊಳ್ಳುವ ನಿಟ್ಟಿನಲ್ಲಿ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ. ಅಹಮದಾಬಾದ್ನ ಬಹುತೇಕ ಹೋಟೆಲ್ಗಳು ಬುಕ್ ಆಗಿವೆ. ಕೆಲವು ಹೋಟೆಲ್ಗಳು 2 ದಿನಕ್ಕೆ ಸುಮಾರು 1 ಲಕ್ಷ ರೂ.ವರೆಗೂ ವಿಧಿಸಿತ್ತು. ಆದರೂ ಬಹುತೇಕ ಹೋಟೆಲ್ಗಳು ಈಗಾಗಲೇ ಹೌಸ್ಫುಲ್ ಆಗಿದೆ. ಸಾಮಾನ್ಯ ದಿನಗಳಲ್ಲಿ ನಗರದ ಐಷಾರಾಮಿ ಹೋಟೆಲ್ಗಳ ದರ ಪ್ರತಿದಿನಕ್ಕೆ 5 ರಿಂದ 8 ಸಾವಿರ ಇರುತ್ತದೆ. ಆದರೆ ಭಾರತ ಮತ್ತು ಪಾಕ್ ಪಂದ್ಯ ನಡೆಯುವ ದಿನದಂದು ದರ 40,000 ರೂ.ಗೆ ಜಿಗಿದಿದೆ. ಕಡಿಮೆ ಖರ್ಚಿನ ಹೋಟೆಲ್ಗಳೂ ಲಭ್ಯವಿದ್ದು, ಅಭಿಮಾನಿಗಳು ದಾಂಗುಡಿಯಿಡುತ್ತಿದ್ದಾರೆ.
ಈ ಮೊದಲು ಇಂಡೋ ಪಾಕ್ ಕದನ ಅಕ್ಟೋಬರ್ 15 ರಂದು ನಿಗದಿಯಾಗಿತ್ತು. ಆದ್ರೆ ಅಂದು ನವರಾತ್ರಿ ಉತ್ಸವ ಆರಂಭದ ದಿನವಾದ್ದರಿಂದ ಭದ್ರತಾ ಸಮಸ್ಯೆ ಎದುರಾಗಬಹುದು ಎಂದು ಭದ್ರತಾ ಏಜೆನ್ಸಿಗಳು ಸಲಹೆ ನೀಡಿತ್ತು. ಈ ಕಾರಣದಿಂದ ಪಂದ್ಯದ ದಿನಾಂಕವನ್ನು ಬದಲಿಸಿ ಅಕ್ಟೋಬರ್ 14ಕ್ಕೆ ನಿಗದಿ ಮಾಡಲಾಗಿದೆ. ಇದನ್ನೂ ಓದಿ: World Cup 2023: ಗುಡ್ನ್ಯೂಸ್ – ಪಾಕ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಸೇರಲಿದ್ದಾರೆ ಗಿಲ್
ಹೈದರಾಬಾದ್: ವಿಶ್ವಕಪ್ (ODI World Cup) ಆರಂಭಕ್ಕೂ ಮುನ್ನ ನಡೆದಿರುವ ಎರಡೂ ಅಭ್ಯಾಸ ಪಂದ್ಯಗಳಲ್ಲಿ ಪಾಕಿಸ್ತಾನ (Pakistan) ಸೋಲು ಕಂಡಿದೆ. ಈ ಬಗ್ಗೆ ಪಾಕ್ ತಂಡದ ಉಪನಾಯಕ ಶಾದಾಬ್ ಖಾನ್ (Shadab Khan), ನಾವು ಪ್ರತಿದಿನ ಹೈದರಾಬಾದ್ ಬಿರಿಯಾನಿ ತಿನ್ನುತ್ತಿದ್ದೇವೆ. ಅದಕ್ಕೆ ಸ್ಲೋ ಆಗಿದ್ದೇವೆ ಎಂದು ತಮಾಷೆಯಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದ ಬಳಿಕ ಖಾನ್ ಮಾತನಾಡಿದ್ದಾರೆ. ನಾವು ಭಾರತಕ್ಕೆ ಏಳು ವರ್ಷಗಳ ಬಳಿಕ ಬಂದಿದ್ದೇವೆ. ನಮ್ಮ ತಂಡ ಹೈದರಾಬಾದ್ಗೆ ಆಗಮಿಸಿ ಒಂದು ವಾರ ಕಳೆದಿದೆ. ಇಲ್ಲಿ ಬಂದ ಮೇಲೆ ಇಲ್ಲಿನ ಬಿರಿಯಾನಿಯನ್ನು ಯಾಕೆ ರುಚಿ ನೋಡಬಾರದು ಎಂದು ಪ್ರತಿದಿನ ಬಿರಿಯಾನಿ ತಿನ್ನುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ ಮಹಿ ನ್ಯೂ ಲುಕ್; ಯಾರಿದು ಹೀರೋ ಅಂತಿದ್ದಾರೆ ಫ್ಯಾನ್ಸ್
ಮಂಗಳವಾರ ಹೈದರಾಬಾದ್ನ ಉಪ್ಪಲ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ 15 ರನ್ಗಳಿಂದ ಸೋಲು ಕಂಡಿದೆ. ಇದಕ್ಕೂ ಮುನ್ನ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ಸೋತಿತ್ತು. ಇದೇ ವಿಚಾರದ ಬಗ್ಗೆ ಪ್ರತಿಕ್ರಿಸಿರುವ ಶಾಬಾದ್ ಖಾನ್, ಹೈದರಾಬಾದಿ ಬಿರಿಯಾನಿಯಿಂದಾಗಿ ಸ್ವಲ್ಪ ಸ್ಲೋ ಆಗಿದ್ದೇವೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.
ಎರಡೂ ಅಭ್ಯಾಸ ಪಂದ್ಯಗಳನ್ನು ಸೋತಿರುವ ಪಾಕಿಸ್ತಾನ ವಿಶ್ವಕಪ್ನಲ್ಲಿ ಶುಭಾರಂಭ ಮಾಡಲು ಕಾಯುತ್ತಿದೆ. ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಎರಡೂ ಪಂದ್ಯಗಳಲ್ಲಿ ಪಾಕಿಸ್ತಾನ 300ಕ್ಕೂ ಅಧಿಕ ರನ್ ಗಳಿಸಿತ್ತು. ಆಸ್ಟ್ರೇಲಿಯಾ ವಿರುದ್ಧದ 352 ರನ್ಗಳ ಗುರಿ ಬೆನ್ನಟ್ಟಿದಾಗ ಅಂತಿಮವಾಗಿ 337 ರನ್ಗಳಿಗೆ ಆಲೌಟ್ ಆಗಿತ್ತು.
ಐಸಿಸಿ ಏಕದಿನ ವಿಶ್ವಕಪ್ಗೆ ಕ್ಷಣಗಣನೆ ಆರಂಭವಾಗಿದೆ. ಟೂರ್ನಿಯಲ್ಲಿ 10 ತಂಡಗಳು ಪೈಪೋಟಿ ನಡೆಸಲು ಎಲ್ಲಾ ರೀತಿಯಲ್ಲಿ ಸಜ್ಜಾಗಿವೆ. ಗುರುವಾರ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಅಕ್ಟೋಬರ್ 6 ರಂದು ಪಾಕಿಸ್ತಾನ ತಂಡ ನೆದರ್ಲ್ಯಾಂಡ್ಸ್ ವಿರುದ್ಧ ಹೈದರಾಬಾದ್ನ ಉಪ್ಪಲ್ ಸ್ಟೇಡಿಯಂನಲ್ಲೇ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಇದನ್ನೂ ಓದಿ: Asian Games 2023: ಚೊಚ್ಚಲ ಅಂತಾರಾಷ್ಟ್ರೀಯ T20 ಶತಕ ಸಿಡಿಸಿ ಗಿಲ್ ದಾಖಲೆ ಮುರಿದ ಯಶಸ್ವಿ