Tag: Pakistan Minister

  • ಪಾಕ್‌ ವಿರುದ್ಧ ಮುಂದಿನ 36 ಗಂಟೆಗಳಲ್ಲಿ ಮಿಲಿಟರಿ ಕ್ರಮಕ್ಕೆ ಭಾರತ ಮುಂದಾಗಿದೆ: ಪಾಕ್‌ ಸಚಿವ

    ಪಾಕ್‌ ವಿರುದ್ಧ ಮುಂದಿನ 36 ಗಂಟೆಗಳಲ್ಲಿ ಮಿಲಿಟರಿ ಕ್ರಮಕ್ಕೆ ಭಾರತ ಮುಂದಾಗಿದೆ: ಪಾಕ್‌ ಸಚಿವ

    – ಮೋದಿ ಬ್ಯಾಕ್‌ ಟು ಬ್ಯಾಕ್‌ ಸಭೆಗೆ ಬೆಚ್ಚಿದ ಪಾಕಿಸ್ತಾನದಿಂದ ಮಧ್ಯರಾತ್ರಿ ಸುದ್ದಿಗೋಷ್ಠಿ
    – ಪಹಲ್ಗಾಮ್‌ ದಾಳಿಯಲ್ಲಿ ಪಾಕಿಸ್ತಾನ ಭಾಗಿಯಾಗಿಲ್ಲ: ಅತಾವುಲ್ಲಾ ತರಾರ್ ಸ್ಪಷ್ಟನೆ

    ಇಸ್ಲಾಮಾಬಾದ್: ಪಾಕಿಸ್ತಾನ (Pakistan) ವಿರುದ್ಧ ಮಿಲಿಟರಿ ಕ್ರಮಕ್ಕೆ ಭಾರತ ಮುಂದಾಗುತ್ತಿದೆ. ಮುಂದಿನ 24-36 ಗಂಟೆಗಳಲ್ಲಿ ಭಾರತ (India) ಮಿಲಿಟರಿ ಕಾರ್ಯಾಚರಣೆ ನಡೆಸಲು ಯೋಜಿಸುತ್ತಿದೆ ಎಂದು ಪಾಕ್‌ ಸಚಿವ ಅತಾವುಲ್ಲಾ ತರಾರ್‌ (Attaullah Tarar) ಹೇಳಿಕೆ ನೀಡಿದ್ದಾರೆ. ಅಲ್ಲದೇ, ಸೇನಾ ಕ್ರಮ ಕೈಗೊಂಡರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಪ್ರಧಾನಿ ಮೋದಿ (PM Modi) ಅವರ ಸರಣಿ ಸಭೆ ನಡೆಸಿದ್ದು, ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಮೋದಿ ಬ್ಯಾಕ್‌ ಟು ಬ್ಯಾಕ್‌ ಸಭೆಗೆ ಪಾಕಿಸ್ತಾನ ಅಕ್ಷರಶಃ ಬೆಚ್ಚಿಬಿದ್ದಿದೆ. ಇದರ ಬೆನ್ನಲ್ಲೇ ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿ ಪಾಕಿಸ್ತಾನ ಮಾತನಾಡಿದೆ. ಇದನ್ನೂ ಓದಿ: ಉಗ್ರರು ದಾಳಿ ನಡೆಸಿದ ಬೈಸರನ್‌ ಕಣಿವೆಯನ್ನು ಮಿನಿ ಸ್ವಿಟ್ಜರ್ಲೆಂಡ್ ಎನ್ನುವುದ್ಯಾಕೆ?

    26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿದೆ ಎಂಬ ಭಾರತದ ಆರೋಪ ಆಧಾರರಹಿತವಾದದ್ದು. ಕಪೋಲಕಲ್ಪಿತ ಆರೋಪಗಳ ಆಧಾರದ ಮೇಲೆ ಭಾರತೀಯ ಪಡೆಗಳು ದಾಳಿ ನಡೆಸಲು ಸಿದ್ಧತೆ ನಡೆಸುತ್ತಿವೆ ಎಂದು ಪಾಕ್ ಸಚಿವ ಅತಾವುಲ್ಲಾ ತರಾರ್ ಹೇಳಿದ್ದಾರೆ.

    ಭಾರತ ಸ್ವತಃ ತಾನೇ ತೀರ್ಪುಗಾರನಂತೆ ವರ್ತಿಸುತ್ತಿದೆ. ಜವಾಬ್ದಾರಿಯುತ ರಾಷ್ಟ್ರವಾಗಿ ಸತ್ಯವನ್ನು ಖಚಿತಪಡಿಸಿಕೊಳ್ಳಲು ತಜ್ಞರ ಆಯೋಗಕ್ಕೆ ವಿಶ್ವಾಸಾರ್ಹ, ಪಾರದರ್ಶಕ ಹಾಗೂ ಸ್ವತಂತ್ರ ತನಿಖೆ ನಡೆಸಲು ಪಾಕಿಸ್ತಾನ ಮುಕ್ತ ಅವಕಾಶ ನೀಡಿದೆ. ಪಾಕಿಸ್ತಾನವು ಭಯೋತ್ಪಾದನೆಯ ಬಲಿಪಶುವಾಗಿದೆ ಎಂದು ತರಾರ್‌ ಮಾತನಾಡಿದ್ದಾರೆ. ಇದನ್ನೂ ಓದಿ: ಫಸ್ಟ್‌ ಟೈಂ ಮೋದಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ ಮೋಹನ್‌ ಭಾಗವತ್‌

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ತೆಗೆದುಕೊಂಡ ಹಲವಾರು ಕ್ರಮಗಳ ನಂತರ ಗಡಿಯುದ್ದಕ್ಕೂ ಉದ್ವಿಗ್ನತೆ ಹೆಚ್ಚಾಯಿತು. ಭಾರತವು 1960 ರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ. ಏಪ್ರಿಲ್ 27 ರಿಂದ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ ವೀಸಾಗಳನ್ನು ರದ್ದುಗೊಳಿಸಿದೆ. ಅಟ್ಟಾರಿ ಭೂ-ಸಾರಿಗೆ ಪೋಸ್ಟ್ ಅನ್ನು ತಕ್ಷಣವೇ ಮುಚ್ಚಿತು.

  • ಕಾಶ್ಮೀರ ಸಮಸ್ಯೆ ಬಗೆಹರಿಸಲು ಯುದ್ಧವೊಂದೇ ಆಯ್ಕೆಯಲ್ಲ: ಯೂ ಟರ್ನ್ ಹೊಡೆದ ಪಾಕ್

    ಕಾಶ್ಮೀರ ಸಮಸ್ಯೆ ಬಗೆಹರಿಸಲು ಯುದ್ಧವೊಂದೇ ಆಯ್ಕೆಯಲ್ಲ: ಯೂ ಟರ್ನ್ ಹೊಡೆದ ಪಾಕ್

    ಇಸ್ಲಾಮಾಬಾದ್: ಕಾಶ್ಮೀರ ಸಮಸ್ಯೆ ಬಗೆಹರಿಸಲು ಯುದ್ಧವೊಂದೇ ಆಯ್ಕೆಯಲ್ಲ ಎಂದು ಪಾಕಿಸ್ತಾನ ಸಚಿವ ವಿದೇಶಾಂಗ ವ್ಯವಹಾರಗಳ ಸಚಿವ ಶಾ ಮೊಹಮ್ಮದ್ ಖುರೇಷಿ ಹೇಳಿದ್ದಾರೆ.

    ಪಾಕ್ ಸಚಿವ ಖುರೇಷಿ ಅವರ ಹೇಳಿಕೆಯೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅಭಿಪ್ರಾಯದ ವಿರುದ್ಧವಾಗಿದೆ. ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಜಾಗತಿಕ ಸಮುದಾಯ ಸ್ಪಷ್ಟ ನಿಲುವು ಪ್ರಕಟಿಸದಿದ್ದರೆ ಪರಮಾಣು ಯುದ್ಧ ಮಾಡಲಾಗುವುದು. ಭಾರತ-ಪಾಕಿಸ್ತಾನ ನಡುವೆ ಯುದ್ಧ ನಡೆಯುವ ಸಾಧ್ಯತೆಯೂ ಇದೆ ಎಂದು ಇಮ್ರಾನ್ ಖಾನ್ ಬೆದರಿಕೆ ಹಾಕಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ನಲ್ಲಿ ಪ್ರಕಟಿಸಿತ್ತು. ಈ ಬೆನ್ನಲ್ಲೇ ಖುರೇಷಿ ಅವರು, ಕಾಶ್ಮೀರ ಸಮಸ್ಯೆ ಬಗೆಹರಿಸಲು ಯುದ್ಧವೊಂದೇ ಆಯ್ಕೆಯಲ್ಲ ಎಂದು ಹೇಳುವ ಮೂಲಕ ಯೂ ಟರ್ನ್ ಹೊಡೆದಿದ್ದಾರೆ. ಇದನ್ನೂ ಓದಿ:  ಭಾರತ-ಪಾಕ್ ಮಧ್ಯೆ ಅಕ್ಟೋಬರ್ ಇಲ್ಲವೇ ನವೆಂಬರ್‌ನಲ್ಲಿ ಯುದ್ಧ: ಪಾಕ್ ಸಚಿವ

    ಸಂದರ್ಶನವೊಂದರಲ್ಲಿ ಮಾತನಾಡಿದ ಮೊಹಮ್ಮದ್ ಖುರೇಷಿ ಅವರು, ದಕ್ಷಿಣ ಏಷ್ಯಾದ ಮೇಲೆ ಪರಮಾಣು ನೆರಳು ಸುಳಿದಾಡುತ್ತಿದೆ. ಭಾರತ ಹಾಗೂ ಪಾಕಿಸ್ತಾನವು ಕಾಶ್ಮೀರ ಕುರಿತು ಮಾತುಕತೆ ಪ್ರಾರಂಭಿಸಲು ಶೂನ್ಯ ಮೊತ್ತದ ಮನಸ್ಥಿತಿಯಿಂದ ಹೊರಬರಬೇಕು. ಪಾಕಿಸ್ತಾನ ಯಾವಾಗಲು ಶಾಂತಿಯನ್ನು ಬಯಸುತ್ತದೆ. ಆಕ್ರಮಣಕಾರಿ ನೀತಿಯನ್ನು ಎಂದಿಗೂ ಅನುಸರಿಸಲಿಲ್ಲ ಎಂದು ಹೇಳಿದ್ದಾರೆ.

    ಪರಮಾಣು ಬಾಂಬ್ ಹೊಂದಿರುವ ಎರಡು ನೆರೆಯ ದೇಶಗಳು ಯುದ್ಧಕ್ಕೆ ಹೋಗುವ ಭಾರೀ ಅಪಾಯಕ್ಕೆ ಮುಂದಾಗಬಾರದು. ಈ ವಿಚಾರವಾಗಿ ಅನೇಕ ಬಾರಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಹೇಳಿಕೆ ನೀಡಿದ್ದಾರೆ. ಅವರ ನೇತೃತ್ವದ ಸರ್ಕಾರವು ಮಾತುಕತೆ ಪ್ರಾರಂಭಿಸಲು ಭಾರತಕ್ಕೆ ಪದೇ ಪದೇ ಅವಕಾಶ ನೀಡುತ್ತಿದೆ ಎಂದು ಖುರೇಷಿ ತಿಳಿಸಿದ್ದಾರೆ. ಇದನ್ನೂ ಓದಿ:  ಭಾರತದೊಂದಿಗೆ ಯುದ್ಧದ ಭವಿಷ್ಯ ನುಡಿದಿದ್ದ ಪಾಕ್ ಸಚಿವನಿಗೆ ವಿದ್ಯುತ್ ಶಾಕ್: ವಿಡಿಯೋ

    ಖುರೇಷಿ ಅವರು, ಕಾಶ್ಮೀರ ಭಾರತ-ಪಾಕ್ ನಡುವಿನ ದ್ವಿಪಕ್ಷೀಯ ವಿಷಯವಾಗಿದೆ ಎಂಬ ಭಾರತದ ಸಮರ್ಥನೆಯನ್ನು ತಳ್ಳಿಹಾಕಿದ್ದು, ಇದು ಅಂತರಾಷ್ಟ್ರೀಯ ವಿಷಯವಾಗಿದೆ. ಈ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗಬೇಕಿದೆ ಎಂದು ಒತ್ತಾಯಿಸಿದ್ದಾರೆ.

    ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದಾಗಿನಿಂದ ಇಮ್ರಾನ್ ಖಾನ್ ಭಾರತದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಹೀಗಾಗಿ ಕಾಶ್ಮೀರದ ಮೇಲಿನ ಭಾರತದ ನಡೆಯನ್ನು ಕಾನೂನುಬಾಹಿರ ಎಂದು ದೂರಿದ್ದಾರೆ. ಇದು ಭಾರತ-ಪಾಕಿಸ್ತಾನ ನಡುವಿನ ಶಿಮ್ಲಾ ಒಪ್ಪಂದದ ಬಗೆಗಿನ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.

  • ಭಾರತದೊಂದಿಗೆ ಯುದ್ಧದ ಭವಿಷ್ಯ ನುಡಿದಿದ್ದ ಪಾಕ್ ಸಚಿವನಿಗೆ ವಿದ್ಯುತ್ ಶಾಕ್: ವಿಡಿಯೋ

    ಭಾರತದೊಂದಿಗೆ ಯುದ್ಧದ ಭವಿಷ್ಯ ನುಡಿದಿದ್ದ ಪಾಕ್ ಸಚಿವನಿಗೆ ವಿದ್ಯುತ್ ಶಾಕ್: ವಿಡಿಯೋ

    – ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾಗ ಘಟನೆ

    ಇಸ್ಲಾಮಾಬಾದ್: ಭಾರತದೊದಿಂಗೆ ಯುದ್ಧದ ಭವಿಷ್ಯ ನುಡಿದಿದ್ದ ಪಾಕಿಸ್ತಾನದ ರೈಲ್ವೇ ಸಚಿವ ಶೇಖ್ ರಶೀದ್ ಅಹ್ಮದ್ ಅವರಿಗೆ ವಿದ್ಯುತ್ ಶಾಕ್ ಹೊಡೆದ ಪ್ರಸಂಗ ಇಂದು ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಸಾರ್ವಜನಿಕ ಸಮಾವೇಶದಲ್ಲಿ ಸಚಿವ ರಶೀದ್ ಅಹ್ಮದ್ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕೆಟ್ಟದಾಗಿ ವಾಗ್ದಾಳಿ ನಡೆಸಿದ್ದರು. ಈ ವೇಳೆ ವಿದ್ಯುತ್ ಶಾಕ್ ಹೊಡೆದಿದ್ದರಿಂದ ಸ್ವಲ್ಪ ಸಮಯ ಆತಂಕಕ್ಕೆ ಒಳಗಾದರು.

    ಪ್ರಧಾನಿ ನರೇಂದ್ರ ಮೋದಿ ಅವರ ತಂತ್ರಗಳು ನಮಗೆ ತಿಳಿದಿವೆ ಎಂದು ಹೇಳಿದರು. ಈ ಮಾತಗಳನ್ನು ಉಚ್ಚರಿಸಿದ ಕೆಲವೇ ಸೆಕೆಂಡ್‍ಗಳಲ್ಲಿ ಅವರು ಹಿಡಿದಿದ್ದ ಮೈಕ್‍ನ ಕೇಬಲ್ ಬಲಗೈಗೆ ತಾಕಿದ ಪರಿಣಾಮ ವಿದ್ಯುತ್ ಶಾಕ್ ಹೊಡೆದಿದೆ. ಸ್ವಲ್ಪ ಗಾಬರಿಯಾದ ಸಚಿವರು ಭಾಷಣ ಮುಂದುವರಿಸಿ, ನನ್ನ ಪ್ರಕಾರ ವಿದ್ಯುತ್ ಶಾಕ್ ನಂತರವೂ ಪ್ರಧಾನಿ ಮೋದಿ ಈ ಸಭೆಯ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದರು.

    ರಾವಲ್ಪಿಂಡಿಯಲ್ಲಿ ಬುಧವಾರ ಕಾಶ್ಮೀರ ವಿಚಾರವಾಗಿ ಮಾತನಾಡಿದ ರಶೀದ್ ಅಹ್ಮದ್, ಭಾರತ-ಪಾಕ್ ನಡುವೆ ಅಕ್ಟೋಬರ್ ಇಲ್ಲವೇ ನವೆಂಬರ್ ನಲ್ಲಿ ಯುದ್ಧ ನಡೆಯಲಿದೆ. ಈ ಬಾರಿಯ ಯುದ್ಧದ ಮೂಲಕ ಕಾಶ್ಮೀರ ಸಮಸ್ಯೆ ಬಗೆಹರಿಯಲಿದೆ ಎಂದು ಹೇಳಿದ್ದರು.

    ವಿಶ್ವಸಂಸ್ಥೆ ನಿಜವಾಗಿಯೂ ಈ ಸಮಸ್ಯೆಯನ್ನು ಬಗೆಹರಿಸಲು ಬಯಸಿದ್ದರೆ ಕಾಶ್ಮೀರದಲ್ಲಿ ಜನಾಭಿಪ್ರಾಯಕ್ಕೆ ಅವಕಾಶ ನೀಡಬಹುದಿತ್ತು. ಆದರೆ ಅದು ಆಗಲಿಲ್ಲ ಎಂದು ಕಾಶ್ಮೀರ ವಿಚಾರವಾಗಿ ಮೌನವಾಗಿರುವ ಮುಸ್ಲಿಂ ದೇಶಗಳ ವಿರುದ್ಧವೂ ಸಚಿವರು ಅಸಮಾಧಾನ ಹೊರಹಾಕಿದ್ದರು.

    ಕಾಶ್ಮೀರ ವಿಚಾರವಾಗಿ ಭಾರತದೊಂದಿಗೆ ಇನ್ನೂ ಮಾತುಕತೆ ಯೋಚಿಸುವವರು ಮೂರ್ಖರು. ಕಾಶ್ಮೀರ ವಿಚಾರ ಬಂದಾಗ ಚೀನಾ ನಮ್ಮ ಬೆಂಬಲಕ್ಕೆ ನಿಲ್ಲುತ್ತದೆ. ವಿಶ್ವಸಂಸ್ಥೆಯಲ್ಲಿ ಸೆಪ್ಟಂಬರ್ 27ರಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಮಹತ್ವದ ಭಾಷಣ ಮಾಡಲಿದ್ದಾರೆ. ಚೀನಾದ ನಮ್ಮೊಂದಿಗೆ ನಿಂತಿರುವುದು ನಮ್ಮ ಅದೃಷ್ಟ ಎಂದು ಶೇಖ್ ರಶೀದ್ ಅಹ್ಮದ್ ಹೇಳಿದ್ದರು.

  • ನಿಮ್ಮನ್ನು ಕಂಗೆಡಿಸಲು ನನ್ನ ಒಂದು ಟ್ವೀಟ್ ಸಾಕು: ಪಾಕ್ ಸಚಿವನಿಗೆ ತಿರುಗೇಟು ನೀಡಿದ್ದ ಸುಷ್ಮಾ

    ನಿಮ್ಮನ್ನು ಕಂಗೆಡಿಸಲು ನನ್ನ ಒಂದು ಟ್ವೀಟ್ ಸಾಕು: ಪಾಕ್ ಸಚಿವನಿಗೆ ತಿರುಗೇಟು ನೀಡಿದ್ದ ಸುಷ್ಮಾ

    ಇಸ್ಲಾಮಾಬಾದ್: ನಿಮ್ಮ ಜೊತೆ ಟ್ವಿಟ್ಟರ್ ಜಗಳ ಮಿಸ್ ಮಾಡಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡುವ ಮೂಲಕ ಪಾಕಿಸ್ತಾನದ ಸಚಿವರೊಬ್ಬರು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

    ಪಾಕಿಸ್ತಾನದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಹುಸೇನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಸುಷ್ಮಾ ಸ್ವರಾಜ್ ಅವರ ಕುಟುಂಬಕ್ಕೆ ನಾನು ಸಂತಾಪ ಸೂಚಿಸುತ್ತೇನೆ. ಟ್ವಿಟ್ಟರಿನಲ್ಲಿ ನಾನು ಸುಷ್ಮಾ ಅವರ ಜೊತೆ ಆಡುತ್ತಿದ್ದ ಜಗಳವನ್ನು ಮಿಸ್ ಮಾಡಿಕೊಳ್ಳುತ್ತೇನೆ. ಸುಷ್ಮಾ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ.

    2019ರಲ್ಲಿ ಇಬ್ಬರು ಹಿಂದೂ ಬಾಲಕಿಯರ ಅಪಹರಣ ಮಾಡಿ ಬಲವಂತವಾಗಿ ಮತಾಂತರ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ವಿಷಯಕ್ಕಾಗಿ ಫವಾದ್ ಹುಸೇನ್ ಹಾಗೂ ಸುಷ್ಮಾ ಸ್ವರಾಜ್ ಅವರ ನಡುವೆ ಟ್ವಿಟ್ಟರಿನಲ್ಲಿ ಜಗಳ ನಡೆದಿತ್ತು.

    ಪಾಕ್‍ನ ಸಿಂಧ್ ಪ್ರಾಂತ್ಯದಲ್ಲಿ ಹೋಳಿ ಆಚರಣೆಯಲ್ಲಿ ತೊಡಗಿದ್ದ ಯುವತಿಯನ್ನು ಅಪಹರಣ ಮಾಡಿದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಅಲ್ಲದೇ ಹಿಂದೂ ಸಮುದಾಯ ಈ ಘಟನೆಯ ಬಗ್ಗೆ ಪ್ರತಿಭಟನೆ ನಡೆಸಿ ಕೃತ್ಯ ನಡೆಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

    ಹಿಂದೂ ಸಮುದಾಯ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸುಷ್ಮಾ ಸ್ವರಾಜ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಪಾಕಿಸ್ತಾನದ ಭಾರತೀಯ ಹೈಕಮಿಷನರ್ ಗೆ ಈ ಬಗ್ಗೆ ವರದಿ ಕಳುಹಿಸಲು ಕೇಳಿದ್ದೇನೆ. ಪಾಕ್‍ನ ಸಿಂಧ್ ಪ್ರಾಂತ್ಯದಲ್ಲಿ ಹೋಳಿ ಆಚರಿಸುವಾಗ ಇಬ್ಬರು ಹಿಂದೂ ಯುವತಿಯರ ಅಪಹರಣ ಮಾಡಲಾಗಿದೆ” ಎಂದು ಟ್ವೀಟ್ ಮಾಡಿದ್ದರು.

    ಈ ಟ್ವೀಟ್‍ಗೆ ಸಚಿವ ಫವಾದ್ ಹುಸೇನ್, “ಮೆಡಮ್ ಇದು ಪಾಕಿಸ್ತಾನಕ್ಕೆ ಸಂಬಂಧಿಸಿದ ವಿಷಯ. ಅಲ್ಪಸಂಖ್ಯಾತರಿಗೆ ಕಿರುಕುಳ ನೀಡಲು ಇದು ಮೋದಿ ಅವರ ಭಾರತ ಅಲ್ಲ. ಇದು ಇಮ್ರಾನ್ ಖಾನ್ ಅವರ ಹೊಸ ಪಾಕಿಸ್ತಾನ. ನಮ್ಮ ರಾಷ್ಟ್ರಧ್ವಜದ ಬಿಳಿ ಬಣ್ಣ ನಮಗೆ ಪ್ರಿಯವಾಗಿದೆ. ಭಾರತೀಯ ಅಲ್ಪಸಂಖ್ಯಾತರ ಹಕ್ಕುಗಳ ವಿಷಯದಲ್ಲಿ ನೀವು ಇದೇ ಪರಿಶ್ರಮದಿಂದ ವರ್ತಿಸುವಿರಿ ಎಂದು ನಾನು ಭಾವಿಸುತ್ತೇನೆ” ಎಂದು ರೀ-ಟ್ವೀಟ್ ಮಾಡಿದ್ದರು.

    ಫವಾದ್ ಹುಸೇನ್ ಅವರ ಟ್ವೀಟ್‍ಗೆ ಸುಷ್ಮಾ ಅವರು, “ನಾನು ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನರ್ ಗೆ ವರದಿ ಕೇಳಿದ್ದೇನೆ ಅಷ್ಟೇ. ನಿಮ್ಮನ್ನು ಕಂಗೆಡಿಸಲು ಇದು ಸಾಕು. ಇದು ನಿಮ್ಮ ತಪ್ಪಿತಸ್ಥ ಭಾವನೆ ತೋರಿಸುತ್ತಿದೆ” ಎಂದು ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದರು.