Tag: Pakistan Zindabad

  • ಭದ್ರಾವತಿ ಈದ್‌ ಮೆರವಣಿಗೆಯಲ್ಲಿ ಪಾಕ್‌ ಪರ ಘೋಷಣೆ

    ಭದ್ರಾವತಿ ಈದ್‌ ಮೆರವಣಿಗೆಯಲ್ಲಿ ಪಾಕ್‌ ಪರ ಘೋಷಣೆ

    ಶಿವಮೊಗ್ಗ: ಭದ್ರಾವತಿಯಲ್ಲಿ (Bhadravathi) ನಡೆದ ಈದ್ ಮಿಲಾದ್ ಮೆರವಣಿಗೆ (Eid Procession) ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ಭದ್ರಾವತಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ರಾತ್ರಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಕೆಲ ಯುವಕರು ಪಾಕಿಸ್ತಾನ ಜಿಂದಾಬಾದ್ (Pakistan Zindabad) ಎಂದು ಘೋಷಣೆ ಕೂಗಿದ್ದಾರೆ.

    ಈ ಸಂಬಂಧ ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಡಿಯೋ ಸತ್ಯಾಸತ್ಯತೆ ಜೊತೆಗೆ ಘೋಷಣೆ ಕೂಗಿದವರ ಶೋಧಕ್ಕೆ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ಈದ್‌ಮಿಲಾದ್ ವೇಳೆ 15 ನಿಮಿಷ ಪೊಲೀಸರನ್ನ ಸುಮ್ಮನಿರಿಸಿ ಹಾಡು ಪ್ರಸಾರ ಮೂವರ ವಿರುದ್ಧ ಕೇಸ್ ದಾಖಲು

     

    ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಮೊಗ್ಗ ಎಸ್‌ಪಿ ಜಿ.ಕೆ.ಮಿಥುನ್ ಕುಮಾರ್, ಇಂದು ಬೆಳಗ್ಗೆಯಿಂದ 12 ಸೆಕೆಂಡ್‌ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ್ದೇವೆ ಎಂದರು. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ವಿಡಿಯೋವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಈಗಾಗಲೇ ಕಳುಹಿಸಲಾಗಿದೆ. ಯಾವಾಗ, ಯಾರು, ಎಲ್ಲಿ ವಿಡಿಯೋ ಮಾಡಿದ್ದಾರೆ. ಅದರ ಪರಿಶೀಲನೆ ಆಗಲಿದೆ. ಪ್ರಕರಣದ ತನಿಖೆಗಾಗಿ 3 ಇನ್ಸ್ಪೆಕ್ಟರ್‌ಗಳ ನೇತೃತ್ವದಲ್ಲಿ 3 ಟೀಂ ರಚಿಸಿದ್ದೇವೆ. ವಿಡಿಯೋದಲ್ಲಿ ಇರುವವರನ್ನು ಗುರುತಿಸುತ್ತಿದ್ದೇವೆ. ವಿಡಿಯೋದಲ್ಲಿರುವವರ ಶೋಧಕ್ಕಾಗಿಯೇ ಒಂದು ಟೀಂ ಟೀಮ್ ಕೆಲಸ ಮಾಡಲಿದೆ. ಈದ್ ಮೆರವಣಿಗೆ ವೇಳೆ ವಿಡಿಯೋ ರೆಕಾರ್ಡಿಂಗ್ ಸಹ ಮಾಡಲಾಗಿತ್ತು. ಎಲ್ಲವನ್ನು ಪರಿಶೀಲಿಸಿ, ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

  • ಪಾಕ್ ಪರ ಯಾರೇ ಘೋಷಣೆ ಕೂಗಿದ್ರೂ ತಪ್ಪು, ಅದು ದೇಶದ್ರೋಹ: ಸಿಎಂ

    ಪಾಕ್ ಪರ ಯಾರೇ ಘೋಷಣೆ ಕೂಗಿದ್ರೂ ತಪ್ಪು, ಅದು ದೇಶದ್ರೋಹ: ಸಿಎಂ

    ಬೆಂಗಳೂರು: ಪಾಕಿಸ್ತಾನ ಪರ ಯಾರೇ ಘೋಷಣೆ ಕೂಗಿದ್ರೂ ತಪ್ಪು. ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದರು.

    ಮಂಗಳೂರಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದಿದ್ದಕ್ಕೆ ಹತ್ಯೆಯಾಗಿದೆ ಎಂಬ ಆರೋಪ ವಿಚಾರವಾಗಿ ಮಾತನಾಡಿದ ಸಿಎಂ, ಯಾರು ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದ್ರು? ಯಾರೇ ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಅದು ತಪ್ಪು. ಈ ಬಗ್ಗೆ ತನಿಖೆ ಮಾಡಿ ಕ್ರಮ ತೆಗೆದುಕೊಳ್ತೀ ಎಂದು ತಿಳಿಸಿದರು. ಇದನ್ನೂ ಓದಿ: ಅಯೋಧ್ಯೆಯ ಹೊಸ ಬಾಬ್ರಿ ಮಸೀದಿಗೆ ಪಾಕ್‌ ಸೈನಿಕರು ಮೊದಲ ಇಟ್ಟಿಗೆ ಇಡುವ ಕಾಲ ದೂರವಿಲ್ಲ: ನಾಲಿಗೆ ಹರಿಬಿಟ್ಟ ಪಾಕ್‌ ಶಾಸಕಿ

    ಯಾರೇ ಪಾಕಿಸ್ತಾನ ಪರ ಘೋಷಣೆ ಕೂಗಿದ್ರು ತಪ್ಪೇ, ಅದು ದೇಶದ್ರೋಹ. ತನಿಖೆ ನಡೆಯುತ್ತಿದೆ, 15 ಜನರ ಅರೆಸ್ಟ್ ಆಗಿದೆ ಎಂದು ಮಾಹಿತಿ ನೀಡಿದರು.

    ಇದೇ ವೇಳೆ, ಬಸವ ಜಯಂತಿ ಹಿನ್ನೆಲೆ ವಿಧಾನಸೌಧದ ಮುಂಭಾಗದಲ್ಲಿರುವ ಬಸವೇಶ್ವರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಪುಷ್ಪನಮನ ಸಲ್ಲಿಸಿದರು. ಸಚಿವ ಎಂಬಿ ಪಾಟೀಲ್, ಸಿಎಸ್ ಶಾಲಿನಿ ರಜನೀಶ್ ಸೇರಿ ಹಲವರು ಭಾಗಿಯಾಗಿದ್ದರು. ಇದನ್ನೂ ಓದಿ: ಪಾಕಿಸ್ತಾನಕ್ಕೆ ಜೈಕಾರ ಹಾಕೋರಿಗೆ ಚಪ್ಪಲಿಯಿಂದ ಹೊಡೆಯಿರಿ – ಯತ್ನಾಳ್

  • ವಿಧಾನಸೌಧದಲ್ಲೇ ಪಾಕ್‌ ಜಿಂದಾಬಾದ್‌ ಘೋಷಣೆ – 9 ತಿಂಗಳು ಕಳೆದರೂ ಇನ್ನೂ ಚಾರ್ಜ್‌ಶೀಟ್‌ ಹಾಕಿಲ್ಲ

    ವಿಧಾನಸೌಧದಲ್ಲೇ ಪಾಕ್‌ ಜಿಂದಾಬಾದ್‌ ಘೋಷಣೆ – 9 ತಿಂಗಳು ಕಳೆದರೂ ಇನ್ನೂ ಚಾರ್ಜ್‌ಶೀಟ್‌ ಹಾಕಿಲ್ಲ

    ಬೆಂಗಳೂರು: ರಾಜ್ಯಸಭೆ ಚುನಾವಣಾ (Rajya Sabha Election) ವೇಳೆ ವಿಧಾನಸೌಧದಲ್ಲೇ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಕರಣ ನಡೆದು 9 ತಿಂಗಳು ಕಳೆದರೂ ಇನ್ನೂ ಚಾರ್ಜ್‌ಶೀಟ್‌ ಹಾಕಿಲ್ಲ ಯಾಕೆ ಎಂಬ ಪ್ರಶ್ನೆ ಎದ್ದಿದೆ.

    ಕಾಂಗ್ರೆಸ್‌ ಸದಸ್ಯ ನಾಸಿರ್ ಹುಸೇನ್ (Nasir Hussain) ಅವರು ಗೆದ್ದ ಖುಷಿಯಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ (Pakistan Zindabad) ಎಂದು ಘೋಷಣೆ ಕೂಗಿದ್ದರು.ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧನ ಮಾಡಿ ಜೈಲಿಗೆ ಕಳುಹಿಸಲಾಗಿತ್ತು. ನಂತರದ ದಿನಗಳಲ್ಲಿ ಮೂವರು ಆರೋಪಿಗಳು ಜಾಮೀನು ಪಡೆದು ಹೊರಗೆ ಬಂದಿದ್ದರು.  ಇದನ್ನೂ ಓದಿ: ಮಣಿಪುರದ ನೂತನ ರಾಜ್ಯಪಾಲರಾಗಿ ಕೇಂದ್ರದ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ನೇಮಕ

    ಪೊಲೀಸರು ದೋಷಾರೋಪ ಪಟ್ಟಿಯನ್ನು (Chargesheet) ಸಲ್ಲಿಸಿಲ್ಲ ಅಷ್ಟೇ ಅಲ್ಲದೇ ಇಲ್ಲಿಯವರೆಗೆ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಹೇಳಿಕೆ ಪಡೆಯಲು ಸಾಧ್ಯವಾಗಿಲ್ಲ.

    ನವ ಮಾಸಗಳೇ ಕಳೆದರೂ ಅವರು ಪೊಲೀಸರ ಮುಂದೆ ಹಾಜರಾಗುವ ಸಾಹಸ ಮಾಡಿಲ್ಲ. ಸದ್ಯ ಪೊಲೀಸರು (Police) ಏನು ಮಾಡಲು ಆಗದೇ ಒದ್ದಾಡುತ್ತಿದ್ದಾರೆ. ಪೊಲೀಸರ ಈ ನಡೆ ಈಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

     

  • ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೇಸ್‌; ಪರಪ್ಪನ ಅಗ್ರಹಾರ ಜೈಲು ಸೇರಿದ ನಾಶೀಪುಡಿ

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೇಸ್‌; ಪರಪ್ಪನ ಅಗ್ರಹಾರ ಜೈಲು ಸೇರಿದ ನಾಶೀಪುಡಿ

    ಬೆಂಗಳೂರು: ವಿಧಾನಸೌಧ ಅವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ (Pakistan Zindabad) ಘೋಷಣೆ ಕೂಗಿದ ಪ್ರಕರಣದಲ್ಲಿ ಆರೋಪಿ ನಾಶೀಪುಡಿಯನ್ನ ವಿಧಾನಸೌಧ ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳಿಸಿಕೊಟ್ಟಿದ್ದಾರೆ.

    ಆರೋಪಿ ನಾಶೀಪುಡಿಯನ್ನ (Mohammed Shafi Nashipudi) ಎರಡನೇ ಬಾರಿ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದರು. ಮೊದಲನೇ ಬಾರಿ ಪಾಕ್ ಪರ ಘೋಷಣೆ ಕೂಗಿದ್ದ ಕಾರಣ ಪ್ರಕರಣ ಸಂಬಂದ ವಿಧಾನಸೌಧ ಪೊಲೀಸರು ಮುನಾವರ್ ಅಹ್ಮದ್‌, ಇಲ್ತಿಯಾಸ್, ನಾಶೀಪುಡಿಯನ್ನ ಬಂಧಿಸಿ ಮೂವರನ್ನ ಎರಡು ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ಮಾಡಿದ್ದರು. ನಿನ್ನೆ ಇಲ್ತಿಯಾಸ್ ಹಾಗೂ ಮುನಾವರ್ ಅಹ್ಮದ್‌ನನ್ನ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಬಿಡಲಾಗಿತ್ತು. ಇದನ್ನೂ ಓದಿ: ಪಾಕ್‌ ಪರ ಘೋಷಣೆ ಕುರಿತು ಕ್ಲೀನ್‌ ಚಿಟ್‌ ಕೊಟ್ಟ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚಿಸ್ಬೇಕು: ಸಿ.ಟಿ ರವಿ ಆಗ್ರಹ

    ಪ್ರಕರಣದ ಎ1 ಆರೋಪಿ ನಾಶೀಪುಡಿಯನ್ನ ಹೆಚ್ಚಿನ ವಿಚಾರಣೆಗೆ ಅವಶ್ಯಕತೆ ಇದೇ ಎನ್ನುವ ಕಾರಣಕ್ಕೆ ಒಂದು ದಿನ ಹೆಚ್ಚುವರಿಯಾಗಿ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದರು. ಘಟನೆ ಸಂಬಂದ ಆರೋಪಿ ನಾಶೀಪುಡಿಯ ವಿಚಾರಣೆ ಮುಗಿಸಿ ಇಂದು 12 ಗಂಟೆಗೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.

    ವಿಧಾನಸೌಧ ಪೊಲೀಸರ ತನಿಖೆ ಪೂರ್ಣವಾಗಿದ್ದರಿಂದ ಕಸ್ಟಡಿಗೆ ಕೇಳದ ಕಾರಣ ಪ್ರಕರಣದ ಎ1 ಆರೋಪಿ ನಾಶೀಪುಡಿಯನ್ನ ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದು ನಿಜ : ಉನ್ನತ ಪೊಲೀಸ್‌ ಮೂಲಗಳು

  • 2022ರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ – ಮಂಡ್ಯ ಬಿಜೆಪಿ ಕಾರ್ಯಕರ್ತ ವಶಕ್ಕೆ

    2022ರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ – ಮಂಡ್ಯ ಬಿಜೆಪಿ ಕಾರ್ಯಕರ್ತ ವಶಕ್ಕೆ

    ಮಂಡ್ಯ: ತನ್ನ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ (BJP) ವಿರುದ್ಧ ದ್ವೇಷದ ರಾಜಕೀಯಕ್ಕೆ ಕಾಂಗ್ರೆಸ್ (Congress) ಮುಂದಾಯಿತಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ.

    ಈ ಪ್ರಶ್ನೆ ಏಳಲು ಕಾರಣ 2022ರಲ್ಲಿ ಮಂಡ್ಯದಲ್ಲಿ (Mandya) ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ಪಾಕ್‌ ಪರ ಘೋಷಣೆ ಕೂಗಿದ ವಿಚಾರವನ್ನೇ ಮುಂದಿಟ್ಟುಕೊಂಡು ಈಗ ಕಾಂಗ್ರೆಸ್‌ ಪ್ರಕರಣ ದಾಖಲಿಸಿದೆ.

    ಮಂಡ್ಯದ ಸಂಜಯ್ ವೃತ್ತದಲ್ಲಿ 2022ರ ಡಿಸೆಂಬರ್ 17 ರಂದು ಅಂದಿನ ಪಾಕ್‌ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಇದನ್ನೂ ಓದಿ: ಸರ್‌, ನಾನು ನೂರಾರು ಕೋಟಿಗೆ ಬಾಳ್ತೀನಿ: ಪಾಕ್‌ ಪರ ಘೋಷಣೆ ಕೂಗಿದ್ದ ನಾಶಿಪುಡಿ ಯಾರು?

     

    ಈ ವೇಳೆ “ಪಾಕಿಸ್ತಾನ್ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್” ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದರು. ಘೋಷಣೆ ಕೂಗುವ ಬರದಲ್ಲಿ ಪಾಕಿಸ್ತಾನ ಮುರ್ದಾಬಾದ್‌ ಎಂದು ಹೇಳುವ ಬದಲು ಬಿಜೆಪಿ ಕಾರ್ಯಕರ್ತ ಪಾಕಿಸ್ತಾನ ಜಿಂದಾಬಾದ್‌ (Pakistan Zindabad) ಎಂದು ಘೋಷಣೆ ಕೂಗಿದ್ದ. ಕೂಡಲೇ ಎಚ್ಚೆತ್ತ ಕಾರ್ಯಕರ್ತರೊಬ್ಬರು ಘೋಷಣೆ ಕೂಗಿದ ಕಾರ್ಯಕರ್ತನ ಬಾಯಿ ಮುಚ್ಚಿಸಿದ್ದರು.

    ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕೈ  ಕಾರ್ಯಕರ್ತರು ಬಂಧನಕ್ಕೆ ಒಳಗಾದ ಬೆನ್ನಲ್ಲೇ ಈಗ ಕಾಂಗ್ರೆಸ್‌ ಮಂಡ್ಯದ ಬಿಜೆಪಿ ಕಾರ್ಯಕರ್ತರ ಮೇಲೆ ದೂರು ನೀಡಿದೆ. ಇದನ್ನೂ ಓದಿ: ಮಂಡ್ಯದ ಬೇಬಿ ಬೆಟ್ಟದಲ್ಲಿ ಇಂದಿನಿಂದ 4 ದಿನ ಟ್ರಯಲ್ ಬ್ಲಾಸ್ಟ್ – ಕೆಆರ್‌ಎಸ್‌ಗೆ ಬಂದ ತಜ್ಞರ ತಂಡ

     

    ಕನ್ನಂಬಾಡಿ ಕುಮಾರ್‌ ದೂರು ನೀಡಿದ್ದು ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 153 ಬಿ(ರಾಷ್ಟ್ರೀಯ ಸಮಗ್ರತೆ ಧಕ್ಕೆ ತರುವ ಹೇಳಿಕೆ) 505 (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆ) ಆರೋಪದ ಮೇರೆಗೆ ಆರಾಧ್ಯ, ರವಿ ಮತ್ತು ಇತರರನ್ನು ಆರೋಪಿಗಳನ್ನಾಗಿ ಮಾಡಿ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಪೊಲೀಸರು ಬಿಜೆಪಿ ಕಾರ್ಯಕರ್ತ ರವಿಯನ್ನು ವಶಕ್ಕೆ ಪಡೆದಿದ್ದಾರೆ.

    ಒಸಾಮಾ ಬಿನ್ ಲಾಡೆನ್ ಸತ್ತಿದ್ದಾನೆ. ಆದರೆ ಗುಜರಾತ್‌ನ ಕಟುಕ ಇನ್ನೂ ಬದುಕಿದ್ದಾನೆ ಮತ್ತು ಆತ ಭಾರತದ ಪ್ರಧಾನ ಮಂತ್ರಿ ಎಂಬ ಬಿಲಾವಲ್ ಭುಟ್ಟೋ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿತ್ತು.

     

  • ಯಾರ ಅನುಮತಿ ಪಡೆದು ಪರೀಕ್ಷೆ ಮಾಡಿದ್ದಾರೆ- ಖಾಸಗಿ ಎಫ್‌ಎಸ್‌ಎಲ್‌ ವರದಿಗೆ ಪರಮೇಶ್ವರ್‌ ಗರಂ

    ಯಾರ ಅನುಮತಿ ಪಡೆದು ಪರೀಕ್ಷೆ ಮಾಡಿದ್ದಾರೆ- ಖಾಸಗಿ ಎಫ್‌ಎಸ್‌ಎಲ್‌ ವರದಿಗೆ ಪರಮೇಶ್ವರ್‌ ಗರಂ

    ಬೆಂಗಳೂರು: ಖಾಸಗಿ ವಿಧಿ ವಿಜ್ಞಾನ ಪ್ರಯೋಗಾಲಯದವರು (FSL) ಯಾರ ಅನುಮತಿ ತೆಗೆದುಕೊಂಡು ಧ್ವನಿ ಪರೀಕ್ಷೆ ಮಾಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ (Parameshwar) ಪ್ರಶ್ನೆ ಮಾಡಿದ್ದಾರೆ.

    ಖಾಸಗಿ ಎಫ್‌ಎಸ್‌ಎಲ್‌ನವರು ನಡೆಸಿದ ಪರೀಕ್ಷೆಯಲ್ಲಿ ಪಾಕಿಸ್ತಾನ ಜಿಂದಾಬಾದ್‌ (Pakistan zindabad) ಎಂದು ಘೋಷಣೆ ಕೂಗಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ ಮಾಧ್ಯಮದವರು ಇಂದು ಪರಮೇಶ್ವರ್‌ ಅವರನ್ನು ಎಫ್‌ಎಸ್‌ಎಲ್‌  ವರದಿ ಯಾವಾಗ ರಿಲೀಸ್‌ ಆಗಲಿದೆ ಎಂದು ಪ್ರಶ್ನಿಸಿದರು.

     

    ಈ ಪ್ರಶ್ನೆಗೆ, ಯಾರ ಅನುಮತಿ ತೆಗೆದುಕೊಂಡು ಅವರು ಪರೀಕ್ಷೆ ಮಾಡಿದ್ದಾರೆ ಅಂತಾ ವಿಚಾರಿಸುತ್ತೇವೆ. ಈ ರೀತಿಯ ವರದಿಗಳನ್ನು ಬಹಿರಂಗಗೊಳಿಸುವುದಕ್ಕೆ ಅಧಿಕಾರ ಯಾರು ಕೊಟ್ಟಿದ್ದಾರೆ ಎಂದು ಪರಿಶೀಲಿಸುತ್ತೇವೆ ಎಂದು ಗರಂ ಆಗಿ ಉತ್ತರಿಸಿದರು. ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದು ನಿಜ : ಉನ್ನತ ಪೊಲೀಸ್‌ ಮೂಲಗಳು

    ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರವನ್ನು ಸರ್ಕಾರ ಮುಚ್ಚಿಡುತ್ತಿದೆ ಎಂಬ ವಿಪಕ್ಷಗಳ ಆರೋಪಕ್ಕೆ, ಎಫ್‌ಎಸ್‌ಎಲ್ ವರದಿಯನ್ನು ಮುಚ್ಚಿಡುವಂತಹ ಪ್ರಶ್ನೆಯೇ ಇಲ್ಲ. ವರದಿ ಬಂದ ಕೂಡಲೇ ಪ್ರಕಟ ಮಾಡುತ್ತೇವೆ. ಘೋಷಣೆ ಕೂಗಿದ್ದು ನಿಜವಾಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಭಾನುವಾರ ನಡೆದ ಪೊಲೀಸ್‌ ಅಧಿಕಾರಿಗಳ ಸಭೆಯಲ್ಲೂ ಸಹ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

     

  • ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದು ನಿಜ : ಉನ್ನತ ಪೊಲೀಸ್‌ ಮೂಲಗಳು

    ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದು ನಿಜ : ಉನ್ನತ ಪೊಲೀಸ್‌ ಮೂಲಗಳು

    – ಆಡಿಯೋದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಲಾಗಿದೆ
    – ಪಬ್ಲಿಕ್‌ ಟಿವಿಗೆ ಖಾಸಗಿ ಎಫ್‌ಎಸ್‌ಎಲ್‌ ತಜ್ಞ ಫಣೀಂದ್ರ ಹೇಳಿಕೆ

    ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ (Pakistan Zindabad) ಘೋಷಣೆ ಕೂಗಿದ ಸಂಬಂಧ ಇನ್ನೂ ವಿಧಿ ವಿಜ್ಞಾನ ಪ್ರಯೋಗಾಲಯದ (FSL) ವರದಿಯ ಬಗ್ಗೆ ಸರ್ಕಾರ ಅಧಿಕೃತವಾಗಿ ಹೇಳಿಲ್ಲ. ಆದರೆ ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದು ನಿಜ ಎಂದು ಪಬ್ಲಿಕ್‌ ಟಿವಿಗೆ ಉನ್ನತ ಪೊಲೀಸ್‌ ಮೂಲಗಳು (Police Source) ತಿಳಿಸಿವೆ. ಅಷ್ಟೇ ಅಲ್ಲದೇ ಖಾಸಗಿ ಎಫ್‌ಎಸ್‌ಎಲ್‌ ತಜ್ಞರ ಪರೀಕ್ಷೆಯಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ ವಿಚಾರ  ದೃಢಪಟ್ಟಿದೆ.

    ಹೌದು. ವಿಧಾನಸೌಧದಲ್ಲಿ ಪಾಕ್ ಜಿಂದಾಬಾದ್ ಘೋಷಣೆ ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ ಸರ್ಕಾರ ಎಫ್‌ಎಸ್‌ಎಲ್‌ಗೆ ವಿಡಿಯೋವನ್ನು ಕಳುಹಿಸಿಕೊಟ್ಟಿತ್ತು. ಎಫ್‌ಎಸ್‌ಎಲ್‌ಗೆ ಕಳುಹಿಸಿದ ಬಳಿಕ ಇಲ್ಲಿಯವರೆಗೆ ವಿಡಿಯೋದಲ್ಲಿ ಘೋಷಣೆ ಕೂಗಲಾಗಿದ್ಯಾ? ಇಲ್ಲವೇ? ಎಂಬುದರ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿಯನ್ನು ನೀಡಿಲ್ಲ.

     

    ಗೃಹ ಸಚಿವ ಪರಮೇಶ್ವರ್‌ (Parameshwar) ಜೊತೆ ಈ ಬಗ್ಗೆ ಕೇಳಿದಾಗ, ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಇನ್ನೂ ಬಂದಿಲ್ಲ. ವರದಿ ಬಂದ ಮೇಲೆ‌ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ 7 ಮಂದಿಯನ್ನು ಕರೆದು ತನಿಖೆ ಮಾಡಿ ವಾಯ್ಸ್ ರೆಕಾರ್ಡ್ ಸಹಾ ಮಾಡಿದ್ದೇವೆ. ಧ್ವನಿ (Voice) ತಾಳೆಯಾಗಬೇಕು. ಒಂದು ವಾಹಿನಿಯದ್ದು ಅಲ್ಲ ಸಾಕಷ್ಟು ಕ್ಲಿಪ್ ಇದೆ. ಎಲ್ಲವನ್ನೂ ಪರೀಕ್ಷೆ ಮಾಡಬೇಕಾಗುತ್ತದೆ ಎಂದು ಹೇಳಿದ್ದರು. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ – ಎನ್‌ಐಎಗೆ ಕೇಸ್‌ ವರ್ಗಾವಣೆ

    ಸರ್ಕಾರದ ಕಡೆಯಿಂದ ಧ್ವನಿ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಾರದೇ ಇದ್ದರೂ ಉನ್ನತ ಪೊಲೀಸ್‌ ಮೂಲಗಳ ಪ್ರಕಾರ ವಿಡಿಯೋ ಅಸಲಿಯಾಗಿದ್ದು ತಿರುಚಿಲ್ಲ. ಪಾಕ್‌ ಪರ ಘೋಷಣೆ ಕೂಗಿದ್ದು ನಿಜ ಎಂಬ ಮಾಹಿತಿ ಪಬ್ಲಿಕ್‌ ಟಿವಿಗೆ  ಸಿಕ್ಕಿದೆ. ಈ ಮಾಹಿತಿಗೆ ಪೂರಕ ಎಂಬಂತೆ ಒಟ್ಟು 8 ಮಂದಿ ನಾಸೀರ್‌ ಹುಸೇನ್‌ ಬೆಂಬಲಿಗರನ್ನು ವಶಕ್ಕೆ ಪಡೆದು ಧ್ವನಿಯನ್ನು ಪರೀಕ್ಷಿಸಲಾಗಿದೆ. ಪರೀಕ್ಷೆ ಮಾಡಿದ್ದರಿಂದಲೇ ಅನುಮಾನ ಜಾಸ್ತಿಯಾಗಿದೆ. ಒಂದು ವೇಳೆ ಧ್ವನಿ ಪರೀಕ್ಷೆ ಮಾಡದೇ ಇದ್ದಿದ್ದರೆ ಪಾಕಿಸ್ತಾನ ಜಿಂದಾಬಾದ್‌ ಎಂಬ ಘೋಷಣೆ ಕೂಗಿಲ್ಲ ಎನ್ನುವುದು ದೃಢಪಡುತ್ತಿತ್ತು. ಆದರೆ 8 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬೆನ್ನಲ್ಲೇ ವಿಡಿಯೋದಲ್ಲಿರುವ ಘೋಷಣೆ ಅಸಲಿ ಎಂಬ ವಿಶ್ಲೇಷಣೆ ವ್ಯಕ್ತವಾಗುತ್ತದೆ.

     

    ಪಾಕ್‌ ಪರ ಘೋಷಣೆ ಕೂಗಿದ್ದು ನಿಜ
    ರಾಜ್ಯ ಸರ್ಕಾರ ಸರ್ಕಾರಿ ಎಫ್‌ಎಸ್‌ಎಲ್‌ಗೆ ವಿಡಿಯೋ ಕಳುಹಿಸಿದರೆ ಅದೇ ವಿಡಿಯೋವನ್ನು ಖಾಸಗಿಯವರು ಪರೀಕ್ಷೆ ನಡೆಸಿದ್ದಾರೆ. ಖಾಸಗಿಯವರು ನಡೆಸಿದ ಎಫ್‌ಎಸ್‌ಎಲ್‌ ಪರೀಕ್ಷೆಯಲ್ಲಿ ನಾಸೀರ್‌ ಸಾಬ್‌ ಜಿಂದಾಬಾದ್‌ ಜೊತೆಗೆ ಪಾಕಿಸ್ತಾನ ಜಿಂದಾಬಾದ್‌ ಎಂಬ ಘೋಷಣೆ ಕೂಗಿದ ವಿಡಿಯೋ ಅಸಲಿ ಎಂದು ಎಫ್‌ಎಸ್‌ಎಲ್ ತಜ್ಞ ಫಣೀಂದ್ರ ಹೇಳಿದ್ದಾರೆ. ಇದನ್ನೂ ಓದಿ: ಬಾಂಬ್ ಬ್ಲಾಸ್ಟ್ ಗಾಯಾಳುಗಳಿಗೆ ಸರ್ಕಾರದಿಂದ ಚಿಕಿತ್ಸಾ ವೆಚ್ಚ – ಭರವಸೆ ಕೊಟ್ಟು ಸರ್ಕಾರ ಸೈಲೆಂಟ್

    ಈ ಬಗ್ಗೆ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿದ ಫಣೀಂದ್ರ ಅವರು, ವಿಡಿಯೋ ಸಾಚಾತನ ತಿಳಿಯಲು ಫ್ರೇಂ ಬೈ ಫ್ರೇಂ ಪರೀಕ್ಷೆ ಮಾಡಲಾಗಿದೆ. ವಿಡಿಯೋದಲ್ಲಿರುವ ಧ್ವನಿಯ ಸಾಚಾತನ ತಿಳಿಯಲು ಪದ, ಉಚ್ಛಾರಗಳ ಪರೀಕ್ಷೆ ಮಾಡಲಾಗಿದೆ. ಶಬ್ದ ವಿಜ್ಞಾನ ಅಥವಾ ಧ್ವನಿ ವಿಜ್ಞಾನ ವಿಶ್ಲೇಷಣೆಯಲ್ಲಿ ಕಂಡು ಬಂದ ಅಂಶ ಏನೆಂದರೆ ವಿಡಿಯೋದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂತ ಕೂಗಿರುವ ಸಾಧ್ಯತೆಯೇ ಹೆಚ್ಚು ಹಾಗೂ ಸಂಭವನೀಯ ಎಂದು ತಿಳಿಸಿದ್ದಾರೆ.

    ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ಕಾಂಗ್ರೆಸ್ಸಿನ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿದ್ದರು. ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಜೈಕಾರ ಕೂಗಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.

     

  • ಪಾಕ್‌ ಪರ ಘೋಷಣೆ – ಎಫ್‌ಎಸ್‌ಎಲ್‌ ವರದಿ ಇನ್ನೂ ಬಂದಿಲ್ಲ : ಪರಮೇಶ್ವರ್

    ಪಾಕ್‌ ಪರ ಘೋಷಣೆ – ಎಫ್‌ಎಸ್‌ಎಲ್‌ ವರದಿ ಇನ್ನೂ ಬಂದಿಲ್ಲ : ಪರಮೇಶ್ವರ್

    ಬೆಂಗಳೂರು: ವಿಧಾನಸೌಧದಲ್ಲಿ ಪಾಕ್‌ ಘೋಷಣೆ (Pakistan Zindabad Slogan) ಪ್ರಕರಣದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿ (FSL Report) ಇನ್ನೂ ಬಂದಿಲ್ಲ ವರದಿ ಇನ್ನೂ ವರದಿ ಬರಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Dr Parmeshwar) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು ವರದಿ ಬಂದ ಮೇಲೆ‌ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ 7 ಮಂದಿಯನ್ನು ಕರೆದು ತನಿಖೆ ಮಾಡಿ ವಾಯ್ಸ್ ರೆಕಾರ್ಡ್ ಸಹಾ ಮಾಡಿದ್ದೇವೆ. ಧ್ವನಿ (Voice) ತಾಳೆಯಾಗಬೇಕು.ಒಂದು ವಾಹಿನಿಯದ್ದು ಅಲ್ಲ ಸಾಕಷ್ಟು ಕ್ಲಿಪ್ ಇದೆ. ಎಲ್ಲವನ್ನೂ ಪರೀಕ್ಷೆ ಮಾಡಬೇಕಾಗುತ್ತದೆ ಎಂದರು.  ಇದನ್ನೂ ಓದಿ: ರಾಮೇಶ್ವರ ಕೆಫೆಯಲ್ಲಿ ಬಾಂಬ್‌ ಸ್ಫೋಟ: ತೇಜಸ್ವಿ ಸೂರ್ಯ ಅನುಮಾನ

     

    ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ವರದಿಯಲ್ಲಿ ಏನಿದೆ ಗೊತ್ತಿಲ್ಲ. ಕ್ಯಾಬಿನೆಟ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಅದರಂತೆ ಮುಂದುವರಿಯೋಣ ಎಂದು ಸಿಎಂ ಹೇಳಿದ್ದಾರೆ. ಡೇಟಾ ಹೊರಗೆ ಬರುವವರೆಗೂ ಏನೂ ಹೇಳಲಾಗದು ಎಂದು ಹೇಳಿದರು. ಇದನ್ನೂ ಓದಿ: ಮೈಸೂರು-ಕುಶಾಲನಗರ ರೈಲ್ವೇ ಯೋಜನಾ ವೆಚ್ಚ 3168.77 ಕೋಟಿ ರೂ.ಗೆ ಏರಿಕೆ!

    ಜಾತಿ ಗಣತಿ ವರದಿಗೆ ಲಿಂಗಾಯತ, ಒಕ್ಕಲಿಗ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರಿಗೆ ಸಂಖ್ಯೆ ಕಡಿಮೆ ಇರಬಹುದು ಎಂಬ ಆತಂಕ ಇರಬಹುದು. ಈಗ ನೀಡಿರುವ ವರದಿ ಆಯೋಗದ ವರದಿ ಅಂತ ರಿಪೋರ್ಟ್ ಅಂತ ಆಗುತ್ತದೆ. ಕಾಂತರಾಜ್ ವರದಿ, ಜಯಪ್ರಕಾಶ್ ಹೆಗಡೆ ವರದಿ ಅಂತ ಬರುವುದಿಲ್ಲ ಎಂದಿದ್ದಾರೆ.

     

  • ಪಾಕ್‌ ಪರ ಘೋಷಣೆ ಆರೋಪ; ಪೊಲೀಸರಿಂದ ನಾಸೀರ್‌ ಹುಸೇನ್‌ ಬೆಂಬಲಿಗನ ವಿಚಾರಣೆ

    ಪಾಕ್‌ ಪರ ಘೋಷಣೆ ಆರೋಪ; ಪೊಲೀಸರಿಂದ ನಾಸೀರ್‌ ಹುಸೇನ್‌ ಬೆಂಬಲಿಗನ ವಿಚಾರಣೆ

    – ನನ್ನ ತಾಯಿ ಮೇಲಿನ ಆಣೆಗೂ ದೇಶದ್ರೋಹಿ ಘೋಷಣೆ ಕೂಗಿಲ್ಲ ಎಂದ ಶಫಿ

    ಹಾವೇರಿ: ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ‘ಪಾಕಿಸ್ತಾನ ಜಿಂದಾಬಾದ್‌’ (Pakistan Zindabad) ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ನಾಸೀರ್‌ ಹುಸೇನ್‌ ಬೆಂಬಲಿಗನನ್ನು ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದಾರೆ.

    ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ವಿಧಾನಸೌಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ನಿನ್ನೆ ತಡರಾತ್ರಿ ಮಹಮ್ಮದ್‌ ಶಫಿ ನಾಶಿಪುಡಿ ಎಂಬ ವ್ಯಕ್ತಿಯನ್ನು ಧ್ವನಿ ಪರೀಕ್ಷೆಗಾಗಿ ಪೊಲೀಸರು ಕರೆದೊಯ್ದಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ – ಬಿಜೆಪಿ ನಾಯಕರ ವಿರುದ್ಧ ನಲಪಾಡ್ ದೂರು

    ಮಹಮ್ಮದ್‌ ಶಫಿ ನಾಶಿಪುಡಿ ರಾಜ್ಯಸಭಾ ಸದಸ್ಯ ನಾಸೀರ್‌ ಹುಸೇನ್‌ ಅವರ ಬೆಂಬಲಿಗ. ಬ್ಯಾಡಗಿ ಮೆಣಸಿಕಾಯಿ ವರ್ತಕರಾಗಿದ್ದಾರೆ. ಬ್ಯಾಡಗಿ ತಾಲೂಕು ಮೋಟೆಬೆನ್ನೂರ ಬಳಿಯಿರುವ ತಮ್ಮ SAN ಕೋಲ್ಡ್ ಸ್ಟೋರೇಜ್‌ನಲ್ಲಿದ್ದರು. ಅಲ್ಲಿಂದ ಪೊಲೀಸರು ವಿಚಾರಣೆಗೆ ಕರೆತಂದಿದ್ದಾರೆ.

    ಧ್ವನಿ ಹೋಲಿಕೆ ವಿಚಾರಣೆ ಹಿನ್ನೆಲೆಯಲ್ಲಿ‌ ವಿಚಾರಣೆ ನಡೆಸಲಾಗುತ್ತಿದೆ. ಪಾಕಿಸ್ತಾನದ ಪರ ಫೋಷಣೆ ಕೂಗಿದ್ದಾರೆಂದು ಮಹಮ್ಮದ್ ಶಫಿ ವಿರುದ್ಧ ಬ್ಯಾಡಗಿ ಬಿಜೆಪಿ ಮುಖಂಡರು ಆರೋಪ ಮಾಡಿದ್ದರು. ಇದನ್ನೂ ಓದಿ:

    ಪ್ರಕರಣ ಸಂಬಂಧ ಸ್ಪಷ್ಟನೆ ನೀಡಿರುವ ಮಹಮ್ಮದ್‌ ಶಫಿ, ನಾನು ನಾಸೀರ್ ಸಾಬ್ ಜಿಂದಾಬಾದ್ ಎಂದು ಕೂಗಿದ್ದೇನೆ. ನನ್ನ ತಾಯಾಣೆಗೂ ಆ ರೀತಿ ದೇಶದ್ರೋಹಿ ಘೋಷಣೆ ಕೂಗಿಲ್ಲ. ಯಾವ ತನಿಖೆಗೂ ಸಿದ್ಧನಿದ್ದೇನೆ ಎಂದು ತಿಳಿಸಿದ್ದರು.

  • ಪಾಕಿಸ್ತಾನ ಜಿಂದಾಬಾದ್‌ ಘೋಷಣೆ – ಎಡಿಟ್‌ ಮಾಡದ ಮೂಲ ವಿಡಿಯೋ ನೀಡಿದ ಪಬ್ಲಿಕ್‌ ಟಿವಿ

    ಪಾಕಿಸ್ತಾನ ಜಿಂದಾಬಾದ್‌ ಘೋಷಣೆ – ಎಡಿಟ್‌ ಮಾಡದ ಮೂಲ ವಿಡಿಯೋ ನೀಡಿದ ಪಬ್ಲಿಕ್‌ ಟಿವಿ

    ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್ (Pakistan Zindabad) ಘೋಷಣೆ ಆರೋಪದ ತನಿಖೆ ಚುರುಕುಗೊಂಡಿದೆ. ಪೊಲೀಸರು (Police) ಮಾಧ್ಯಮಗಳಿಂದ ಘಟನೆಯ ಮೂಲ ದೃಶ್ಯಾವಳಿಗಳನ್ನು ಪಡೆಯುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು (PUBLiC TV) ಸಂಪರ್ಕಿಸಿದ ವಿಧಾನಸೌಧ ಠಾಣೆ ಪೊಲೀಸರು ಮೂಲ ದೃಶ್ಯಾವಳಿ ಒದಗಿಸುವಂತೆ ಕೋರಿದ್ದರು. ಇದಕ್ಕೆ ಸ್ಪಂದಿಸಿದ ಪಬ್ಲಿಕ್ ಟಿವಿ, ಎಡಿಟ್ ಮಾಡದ ಮೂಲ ವಿಡಿಯೋ ತುಣಕನ್ನು ಪೊಲೀಸರಿಗೆ ನೀಡಿದೆ. ಇದನ್ನೂ ಓದಿ: BCCI ವಾರ್ಷಿಕ ಆಟಗಾರರ ರಿಟೈನರ್‌ಶಿಪ್ ಪಟ್ಟಿ ರಿಲೀಸ್‌ – ಯಶಸ್ವಿ, ರಿಂಕು ಪಡೆಯೋ ಸಂಬಳ ಎಷ್ಟು ಗೊತ್ತಾ?

     

    2024ರ ಫೆಬ್ರವರಿ 27ರಂದು ರಾಜ್ಯಸಭೆ ಚುನಾವಣೆಯ (Rajya Sabha Election) ಫಲಿತಾಂಶ ಹೊರಬಿದ್ದ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ (Nasser Hussain) ಅವರು ಬೆಂಬಲಿಗರೊಂದಿಗೆ ವಿಧಾನಸೌಧದಲ್ಲಿ ವಿಜಯೋತ್ಸವ ಆಚರಿಸುತ್ತಿದ್ದರು. ಇದನ್ನು ನಮ್ಮ ವರದಿಗಾರರು ಚಿತ್ರೀಕರಿಸುತ್ತಿದ್ದರು. ಇದನ್ನೂ ಓದಿ: ಇಸ್ರೋ ರಾಕೆಟ್‌ನಲ್ಲಿ ಚೀನಾ ಧ್ವಜ – ಭಾರತದ ಸಾಧನೆ ಒಪ್ಪಿಕೊಳ್ಳಲು ಡಿಎಂಕೆಗೆ ಆಗಲ್ಲ ಎಂದ ಮೋದಿ

     

    ಈ ಸಂದರ್ಭದಲ್ಲಿ ನಾಸೀರ್ ಹುಸೇನ್ ಅವರ ಕಿರು ಸಂದರ್ಶನ ಮಾಡಲು ಮುಂದಾದಾಗ ಅವರ ಬೆಂಬಲಿಗರಿದ್ದ ಗುಂಪುನಿಂದ ಜಿಂದಾಬಾದ್ ಜಿಂದಾಬಾದ್ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೇಳಿಬಂದಿದೆ. ಆ ಮೂಲ ದೃಶ್ಯಾವಳಿಯನ್ನು ತಮಗೆ ನೀಡುತ್ತಿದ್ದೇವೆ ಮತ್ತು ಈ ಮೂಲಕ ತನಿಖೆಗೆ ಸಹಕರಿಸುತ್ತಿದ್ದೇವೆ ಎಂದು ಲಿಖಿತ ರೂಪದಲ್ಲಿ ಪೊಲೀಸರಿಗೆ ವಿವರಣೆ ಕೊಟ್ಟಿದ್ದೇವೆ. ಪೊಲೀಸರು ಆ ವಿಡಿಯೋಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಸಿದ್ದಾರೆ.