Tag: pakistan

  • ಭಾರತೀಯ ಸೇನೆಯಿಂದ ಪಾಕ್ ಸೇನಾ ಪೋಸ್ಟ್ ಗಳ ಧ್ವಂಸ: ವಿಡಿಯೋ ನೋಡಿ

    ಭಾರತೀಯ ಸೇನೆಯಿಂದ ಪಾಕ್ ಸೇನಾ ಪೋಸ್ಟ್ ಗಳ ಧ್ವಂಸ: ವಿಡಿಯೋ ನೋಡಿ

    ನವದೆಹಲಿ: ಪಾಕಿಸ್ತಾನದ ಸೇನಾ ಪೋಸ್ಟ್ ಗಳ ಮೇಲೆ ದಾಳಿ ಮಾಡಿದ್ದನ್ನು ಭಾರತೀಯ ಸೇನೆ ಅಧಿಕೃತವಾಗಿ ಬಹಿರಂಗಪಡಿಸಿದೆ. ಜಮ್ಮು ಕಾಶ್ಮೀರದ ನೌಶೇರಾ ಸೆಕ್ಟರ್‍ನಲ್ಲಿ ನುಸುಳುಕೋರರಿಗೆ ನೆರವು ನೀಡಿದ್ದ ಪಾಕಿಸ್ತಾನದ ಸೇನಾ ಪೋಸ್ಟ್ ಗಳನ್ನ ಧ್ವಂಸ ಮಾಡಲಾಗಿದೆ.

    ಸೇನಾ ವಕ್ತಾರರಾದ ಮೇಜರ್ ಜೆನರಲ್ ಅಶೋಕ್ ನರುಲಾ ಈ ಬಗ್ಗೆ ಹೇಳಿಕೆ ನೀಡಿದ್ದು, ಪಾಕಿಸ್ತಾನದ ಸೇನೆ ಶಸ್ತ್ರಾಸ್ತ್ರ ಸಜ್ಜಿತ ನುಸುಳುಕೋರರಿಗೆ ನೆರವು ನೀಡಿತ್ತು. ಇತ್ತೀಚೆಗೆ ನೌಶೆರಾದಲ್ಲಿ ನಡೆದ ದಾಳಿಯಲ್ಲಿ ನಾವು ಪಾಕಿಸ್ತಾನದ ಸೇನಾ ಪೋಸ್ಟ್ ಗಳನ್ನ ಧ್ವಂಸ ಮಾಡಿದ್ದೇವೆ ಎಂದು ಹೇಳಿದ್ದಾರೆ.

    ಈ ದಾಳಿ ಯಾವಾಗ ನಡೆದಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ನರುಲಾ, ಇತ್ತೀಚೆಗೆ, ತೀರಾ ಇತ್ತೀಚಿನ ಕಾರ್ಯಾಚರಣೆ ಎಂದು ಹೇಳಿದ್ದಾರೆ.

    ಭಾರತೀಯ ಸೇನೆ ದಾಳಿಯ ವಿಡಿಯೋವನ್ನ ಕೂಡ ಬಿಡುಗಡೆ ಮಾಡಿದೆ. ಕಾಡಿನಂತಿರುವ ಪ್ರದೇಶದಲ್ಲಿ ಸ್ಫೋಟಕಗಳು ಸ್ಫೋಟಗೊಂಡ ನಂತರ ದಟ್ಟ ಹೊಗೆ ಆವರಿಸಿ ಕಟ್ಟದ ಕುಸಿಯುವುದನ್ನು ಕಾಣಬಹುದು.

    ಇದನ್ನೂ ಓದಿ: ಕಲ್ಲು ತೂರಿದ್ದ ಯುವಕನನ್ನು ಜೀಪಿಗೆ ಕಟ್ಟಿ ಮೆರವಣಿಗೆ ಮಾಡಿದ್ದ ಅಧಿಕಾರಿಗೆ ಸೇನೆಯಿಂದ ಪ್ರಶಸ್ತಿ

    ಭಯೋತ್ಪಾದನೆಯನ್ನ ಹತ್ತಿಕ್ಕುವ ತಂತ್ರಗಾರಿಕೆಯ ಭಾಗವಾಗಿ ಈ ದಾಳಿ ನಡೆಸಲಾಗಿದೆ. ಇದರಿಂದ ಉಗ್ರರ ಸಂಖ್ಯೆ ಕಡಿಮೆಯಾಗಿ, ಕಾಶ್ಮೀರದ ಯುವಕರು ಕೆಟ್ಟ ದಾರಿ ತುಳಿಯದಂತೆ ಆಗಬೇಕು ಎಂದು ನರುಲಾ ಹೇಳಿದ್ದಾರೆ.

    ಮಂಜು ಕರಗಲು ಆರಂಭಿಸಿದ್ದು, ಉಗ್ರರ ಆಕ್ರಮಣಕ್ಕೆ ಪರ್ವತ ಕಣಿವೆಗಳು ತೆರೆದುಕೊಳ್ಳುತ್ತಿದ್ದರಿಂದ ನುಸುಳುಕೋರರ ಸಂಖ್ಯೆ ಹೆಚ್ಚಾಗಬಹುದು ಎಂಬ ಬಗ್ಗೆ ಸೇನೆಗೆ ಅರಿವಿತ್ತು. ಭಾರತೀಯ ಸೇನೆ ಗಡಿ ನಿಯಂತ್ರಣಾ ರೇಖೆಯಲ್ಲಿ ಪ್ರಾಬಲ್ಯ ಹೊಂದಿದೆ. ನಮಗೆ ಜಮ್ಮು ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕು ಎಂದಿದ್ದಾರೆ.

    ಇದನ್ನೂ ಓದಿ: ಯಾವುದೇ ಸಮಯದಲ್ಲಿ ಯುದ್ಧ ನಡೆಯಬಹುದು, ಎಲ್ಲದಕ್ಕೂ ಸಿದ್ಧವಾಗಿರಿ: ಏರ್ ಚೀಫ್ ಮಾರ್ಷಲ್ ಪತ್ರ

    https://www.youtube.com/watch?v=ltXJtBhcno0

  • ಅಂದು ಬೇಡಿಕೆಯ ಆ್ಯಕ್ಟರ್ ಈಗ ಪೈಂಟರ್: ಇದು ಕಲಾವಿದನ ನೋವಿನ ಕಥೆ

    ಅಂದು ಬೇಡಿಕೆಯ ಆ್ಯಕ್ಟರ್ ಈಗ ಪೈಂಟರ್: ಇದು ಕಲಾವಿದನ ನೋವಿನ ಕಥೆ

    ಲಾಹೋರ್: ಪ್ರಸಿದ್ಧರಾಗಲು ಬಯಸುವ ಜನರಿಗೆ ಹಣ ಮಹತ್ತರ ಪ್ರೇರಣೆ ನೀಡುತ್ತದೆ ಎಂದರೆ ತಪ್ಪಾಗಲಾರದು. ಹಣ ಕಂಡರೆ ಹೆಣವೂ ಬಾಯಿಬಿಡುತ್ತದೆ ಎಂಬ ನಾಣ್ಣುಡಿಯೇ ಪ್ರಚಲಿತದಲ್ಲಿರುವುದು ಈ ಕಾರಣದಿಂದಲೇ. ಹಣ ಗಳಿಸಲು ಜನರು ಯಾವ ಹಾದಿಯಲ್ಲೂ ತುಳಿಯಲು ಹೇಸುವುದಿಲ್ಲ. ಕೆಲವರು ಇಂಥದ್ದೇ ಉದ್ಯೋಗ ಮಾಡಿಯೇ ಹಣ ಗಳಿಸುತ್ತೇನೆ ಎನ್ನುವ ಒಳ್ಳೆಯವರೂ ಇದ್ದಾರೆ. ಕೆಲವೊಮ್ಮೆ ದುರಾದೃಷ್ಟ ಕೈ ಹಿಡಿದಿದ್ದರೆ ಉನ್ನತ ಸ್ಥಾನದಲ್ಲಿದ್ದವರೂ ತಳಮಟ್ಟಕ್ಕೆ ತಲುಪುತ್ತಾರೆ ಎನ್ನುವುದಕ್ಕೆ ಈ ಪಾಕಿಸ್ತಾನಿ ನಟನ ಉದಾಹರಣೆ ಉತ್ತಮವಾಗಿದೆ.

    ಪ್ರಪಂಚದಾದ್ಯಂತ ಮನರಂಜನಾ ಉದ್ಯಮದಲ್ಲಿ ಮಿಂಚಿ ಸ್ಟಾರ್ ಗಿರಿಯನ್ನು ಪಡೆದುಕೊಂಡಿದ್ದ ಈ ನಟ ಅದನ್ನು ಪಡೆದುಕೊಂಡಿರುವಾಗಲೇ ಕಳೆದುಕೊಂಡ. ಈ ನಟನೇ ಶಾಹಿದ್ ನಸೀಬ್, ಕೆಲಸದ ಕೊರತೆಯಿಂದಾಗಿ ಪೈಂಟರ್ ವೃತ್ತಿಗೆ ಇಳಿದಿದ್ದಾರೆ.

    ಇತ್ತೀಚಿನ ಸಿನಿಮಾ ನಾಟಕ ವಿಸಿಲ್ ನಲ್ಲಿ ಖಳ ನಟನಾಗಿದ್ದ ಇವರು ಹಲವಾರು ದೂರದರ್ಶನ ಧಾರಾವಾಹಿಗಳಾದ ದುಲ್ಲಾರಿ, ಜಬ್ ಉಸೆ ಮೊಹಬ್ಬತ್ ಹುಯಿ ಮತ್ತು ಇಲ್ಟಾಜಾನಲ್ಲಿ ನಟಿಸಿದ್ದಾರೆ. ಆಗ ಅದೃಷ್ಟವಿತ್ತು ಈಗ ದುರಾದೃಷ್ಟ ಕೈ ಹಿಡಿದಿದ್ದರಿಂದ ಕಾರ್ಮಿಕನಾಗಿದ್ದಾರೆ.

    “ನಾನು ಎರಡು ನಾಟಕ ಧಾರವಾಹಿ ಮತ್ತು ಟೆಲಿಫಿಲ್ಮ್ ಗಳಲ್ಲಿ ಉತ್ತಮ ಪಾತ್ರವನ್ನು ಹೊಂದಿದ್ದೆನೆ. ಆದರೆ ಕಳೆದ ಹತ್ತು ವರ್ಷಗಳು ನನಗೆ ತುಂಬಾ ಕಠಿಣವಾದ ದಿನಗಳಾಗಿವೆ. ದಿ ವಿಸಿಲ್ ನನಗೆ ದೊಡ್ಡ ಅವಕಾಶವನ್ನು ಕೊಟ್ಟಿದೆ ಹಾಗೂ ಅವಕಾಶಗಳ ಬಾಗಿಲನ್ನು ತೆರೆಸಿದೆ. ಆದರೆ ಈಗ ದುರಾದೃಷ್ಟವಶಾತ್ ಯಾವ ಪಾತ್ರಗಳೂ ದೊರಕುತ್ತಿಲ್ಲ. ನಾನು ಹಣ ಗಳಿಸಲು ಪೈಂಟರ್ ಆಗಿದ್ದೇನೆ” ಎಂದು ಅವರು ಹೇಳಿದರು.

    ನಾನು ನಟನಾಗಲು ಆಶಿಸಿ ಹತ್ತು ವರ್ಷಗಳ ಹಿಂದೆ ನನ್ನ ಗ್ರಾಮವನ್ನು ಬಿಟ್ಟೆ. ಅಲ್ಲಿಂದೀಚೆಗೆ ನಾನು ಇಸ್ಲಾಮಾಬಾದ್, ಕರಾಚಿ, ಪೇಶಾವರ್‍ಗಳಲ್ಲಿ ಅಲೆದಾಡಿದ್ದೇನೆ ಈಗ ಲಾಹೋರ್‍ನಲ್ಲಿ ಕೆಲಸ ಹುಡುಕುತ್ತಿದ್ದೇನೆ. ಆದರೆ ಅದೃಷ್ಟ ನನ್ನ ಕಡೆಗಿಲ್ಲ” ಎಂದು ಶಾಹಿದ್ ಮುಂದುವರಿಸಿದರು. “ನಾನೀಗ ನನ್ನ ಗ್ರಾಮಕ್ಕೆ ಮರಳಲು ಸಾಧ್ಯವಿಲ್ಲ ಏಕೆಂದರೆ ಎಲ್ಲರೂ ನನ್ನ ವೈಫಲ್ಯವನ್ನು ನೋಡಿ ನಗುತ್ತಿದ್ದಾರೆ. ನನ್ನ ಜೊತೆ ಕೆಲಸ ಮಾಡುವವರೂ ಸಹ ‘ಶಾಹಿದ್ ರಂಗ್ವಾಲಾ’ ನಂತಹ ಹೆಸರುಗಳ ಮೂಲಕ ನನ್ನನ್ನು ಹಂಗಿಸುತ್ತಿದ್ದಾರೆ ಇದರಿಂದ ನನಗೆ ತುಂಬಾ ದುಖಃವಾಗಿದೆ” ಎಂದು ಬೇಸರ ಹಂಚಿದ್ದಾರೆ.

    ಅನೇಕ ನಿರ್ಮಾಪಕರು ಕೆಲಸಕ್ಕೆ ಬದಲಾಗಿ ತಮ್ಮ ಮನೆಗಳಲ್ಲಿ ಚಿತ್ರಿಸಲು ಬಳಸಿಕೊಂಡಿದ್ದಾರೆ. ಇಂದು ಮನರಂಜನಾ ಮಾಧ್ಯಮದಲ್ಲಿ ಯಾರೊಂದಿಗೂ ನಿಜವಾದ ಸಂಬಂಧ ಹೊಂದಲು ಸಾಧ್ಯವಿಲ್ಲ. ನಾನು ಕಳಪೆ ಕಲಾವಿದನಾಗಿದ್ದರಿಂದ ವಿಸಿಲ್ ನಿರ್ಮಾಪಕರು ಚಿತ್ರದ ಕ್ರೆಡಿಟ್‍ಗಳಲ್ಲಿ ನನ್ನ ಹೆಸರನ್ನು ಸೇರಿಸಿಲ್ಲ. ಆದರೆ ಇಡೀ ಸ್ಕ್ರಿಪ್ಟ್ ನ್ನು ನಾನು ಬರೆದಿದ್ದೇನೆ” ಎಂದು ಅವರು ನೋವು ಹಂಚಿಕೊಂಡರು.

    ಈಗ ದಿನವೂ ರಾತ್ರಿ ನಾನು ದುಖಿಃಸುತ್ತಿದ್ದೇನೆ. ನನ್ನ ಸಂಪಾದನೆ ಈಗ ಕೇವಲ 20 ಸಾವಿರ ರೂ.. ಇದರಲ್ಲಿಯೂ ಸ್ವಲ್ಪ ಹಣವನ್ನು ನಾನು ಉಳಿಸಲು ಪ್ರಯತ್ನಿಸುತಿದ್ದೇನೆ. ಈ ಹಣದಲ್ಲಿ ನನ್ನ ಹಾಡುಗಳನ್ನು ಬಿಡುಗಡೆ ಗೊಳಿಸುವದು ನನ್ನ ಉದ್ದೇಶ. ನಾನು ಕೆಲವು ಸಂಗೀತಗಾರರನ್ನು ಭೇಟಿಯಾಗಿದ್ದೇನೆ ಅವರು ಟ್ರಾಕ್ ಬಿಡುಗಡೆಗೊಳಿಸಲು 10 ಸಾವಿರ ರೂ. ಕೇಳುತ್ತಿದ್ದಾರೆ. ಇನ್ನು ಹೆಚ್ಚು ಹಣ ಗಳಿಸುವುದು ನನ್ನ ಉದ್ದೇಶ ಎಂದು ತಿಳಿಸಿದರು.

    ಪೈಟಿಂಗ್ ಜೊತೆಗೆ ಶಾಹಿದ್ ಕೆಲವು ಖಾಸಗಿ ಕಾರ್ಯಕ್ರಮಗಳನ್ನು ಕೂಡ ನಿರ್ವಹಿಸುತ್ತಿದ್ದಾರೆ. “ನಾನು ದಿನಕ್ಕೆ ಒಂದು ಬಾರಿ ಮಾತ್ರ ತಿನ್ನುತ್ತೇನೆ. ಹೆಚ್ಚು ಹಣ ನೀಡುವ ಯಾವುದೇ ಕೆಲಸವನ್ನು ನಾನೀಗ ಮಾಡುತ್ತಿಲ್ಲ. ನನ್ನ ರಾತ್ರಿಗಳನ್ನು ನಾನು ರಸ್ತೆಗಳಲ್ಲಿ ಕಳೆಯುತ್ತಿದ್ದೇನೆ. ಈ ದಿನಗಳು ನನಗೆ ತುಂಬಾ ಕಠಿಣವಾಗಿವೆ ಆದರೆ ಲಾಲಿವುಡ್ ಮತ್ತು ಬಾಲಿವುಡ್ ನಲ್ಲಿ ಇಂತಹ ದಿನಗಳನ್ನು ಅನೇಕರು ಎದುರಿಸಿದ್ದಾರೆ ಎಂದು ನನಗೆ ಗೊತ್ತು” ಎಂದು ಹೇಳಿದರು.

     

  • ಐಸಿಜೆಯಲ್ಲಿ ಭಾರತದ ಪರ ವಾದಕ್ಕೆ ಪಾಕ್ ವಕೀಲ ಖವರ್ ಖುರೇಷಿಗೆ ಮಣೆ ಹಾಕಿದ್ದ ಯುಪಿಎ

    ಐಸಿಜೆಯಲ್ಲಿ ಭಾರತದ ಪರ ವಾದಕ್ಕೆ ಪಾಕ್ ವಕೀಲ ಖವರ್ ಖುರೇಷಿಗೆ ಮಣೆ ಹಾಕಿದ್ದ ಯುಪಿಎ

    – ಕಾಂಗ್ರೆಸ್ಸಿಗೆ ಮೇಕ್ ಇನ್ ಇಂಡಿಯಾ ವಕೀಲರು ಬೇಡ, ಮೇಡ್ ಇನ್ ಪಾಕ್ ವಕೀಲರು ಬೇಕು
    – ವೃತ್ತಿರಪರರನ್ನು ನೇಮಿಸುವುದಕ್ಕೆ ಯಾವುದೇ ಗಡಿ ಇಲ್ಲ ಎಂದ ಕಾಂಗ್ರೆಸ್

    ನವದೆಹಲಿ: ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಪ್ರಕರಣದಲ್ಲಿ ಪಾಕ್ ಪರ ವಾದಿಸಿದ ವಕೀಲ ಖವರ್ ಖುರೇಶಿ ಅವರು 17 ವರ್ಷಗಳ ಹಿಂದೆ ನೆದರ್‍ಲ್ಯಾಂಡಿನ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ(ಐಸಿಜೆ) ಭಾರತವನ್ನು ಪ್ರತಿನಿಧಿಸಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

    2004ರ ದಾಭೋಲ್ ಪವರ್ ಪ್ರಾಜೆಕ್ಟ್ ಕೇಸ್‍ನಲ್ಲಿ ಭಾರತದ ಪರ ಅಂತಾರಾಷ್ಟ್ರೀಯ ಕೋರ್ಟ್ ನಲ್ಲಿ ಖವರ್ ಖುರೇಷಿ ವಾದಿಸಿದ್ದರು. ಇದೀಗ ಆ ವಿಚಾರವನ್ನು ಬಿಜೆಪಿ ಎತ್ತಿಕೊಂಡು ಕಾಂಗ್ರೆಸ್ ನಡೆಯನ್ನು ಪ್ರಶ್ನಿಸಿ ಟೀಕಿಸಿದ್ದು ವ್ಯಾಪಕ ಚರ್ಚೆಗೆ ಕಾರಣವಾಗುತ್ತಿದೆ.

    ಏನಿದು ಪ್ರಕರಣ?
    ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿರುವ ಅಮೆರಿಕ ಮೂಲದ ಎನ್‍ರೋನ್ ಕಂಪೆನಿ ಒಡೆತನದ ದಾಭೋಲ್ ಪವರ್ ಪ್ರಾಜೆಕ್ಟ್ ನಲ್ಲಿ 2001ರಲ್ಲಿ ಲೆಕ್ಕಪತ್ರ ಹಗರಣ ಸದ್ದು ಮಾಡಿತ್ತು. ಕೊನೆಗೆ ಕಂಪೆನಿ ಮಾಲೀಕರು ಹಾಗೂ ಮಹಾರಾಷ್ಟ್ರ ಸರ್ಕಾರದ ಮಧ್ಯೆ ವಿವಾದ ಉಂಟಾಗಿತ್ತು. ಬಳಿಕ ಭಾರತ ಸರ್ಕಾರ ಮಧ್ಯಸ್ಥಿಕೆ ವಹಿಸಿತ್ತು. ಆಗ 6 ಬಿಲಿಯನ್ ಡಾಲರ್ ನೀಡುವಂತೆ ಎನ್‍ರೋನ್ ಕಂಪೆನಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. 2004ರಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಏರಿದ ಬಳಿಕ ದಾಭೋಲ್ ಕೇಸಿಗೆ ಸಂಬಂಧಿಸಿದ ಸಂಪೂರ್ಣ ಕಾನೂನು ತಂಡವನ್ನು ಬದಲಾಯಿಸಿತ್ತು. ದೇಶದ ವಕೀಲರನ್ನು ಕಡೆಗಣಿಸಿ ಖವರ್ ಖುರೇಷಿ ಅವರನ್ನು ಭಾರತ ಪರವಾಗಿ ಐಸಿಜೆಯಲ್ಲಿ ಪ್ರತಿನಿಧಿಸಿ, ವಾದಿಸುವುದಕ್ಕೆ ನೇಮಕ ಮಾಡಿತ್ತು.

    ಕೇಸ್ ಏನಾಯ್ತು?
    ಕೇಸ್‍ನಲ್ಲಿ ಭಾರತದ ಪರ ವಾದಿಸಿದ್ದ ಖುರೇಷಿ ಸೋತಿದ್ದರು. ಕೊನೆಗೆ ಆ ಕೇಸನ್ನು ಆರ್ಬಿಟ್ರೇಶನ್ (ರಾಜಿ ಪಂಚಾತಿಕೆ) ಮೂಲಕ ಇತ್ಯರ್ಥಪಡಿಸಲಾಗಿತ್ತು.

    ಮರು ಜೀವ ಬಂದಿದ್ದು ಹೇಗೆ?
    ಭಾರತದ ಪರವಾಗಿ ಐಸಿಜೆಯಲ್ಲಿ ವಾದಿಸಲು ವಕೀಲ ಖವರ್ ಖುರೇಷಿ ಅವರನ್ನು ಯುಪಿಎ ಸರ್ಕಾರಕ್ಕೆ ಫಾಕ್ಸ್ ಮ್ಯಾಂಡಲ್ ಎನ್ನುವ ಸಂಸ್ಥೆ ಎಂದು ವಯಾನ್ ನ್ಯೂಸ್ ಬಹಿರಂಗ ಪಡಿಸಿದ್ದು ಈ ಪ್ರಕರಣ ಈಗ ಮರು ಜೀವ ಪಡೆದುಕೊಂಡಿದೆ.

    ಬಿಜೆಪಿಯ ಪ್ರಶ್ನೆ ಏನು?
    ದಾಭೋಲ್ ಪ್ರಾಜೆಕ್ಟ್ ಕೇಸಲ್ಲಿ ಹರೀಶ್ ಸಾಳ್ವೆ ಬದಲಿಗೆ, ಖುರೇಷಿಯನ್ನು ನೇಮಕ ಮಾಡಿದ್ದು ಯಾಕೆ? ನಿಮಗೆ ಪಾಕ್‍ನ ವಕೀಲರ ಮೇಲೆ ಯಾಕಷ್ಟು ನಂಬಿಕೆ ಎಂದು ಪ್ರಶ್ನಿಸಿದೆ. ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್ ಪ್ರತಿಕ್ರಿಯಿಸಿ, ಕಾಂಗ್ರೆಸ್ ಯಾವಾಗಲೂ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಾ ಬಂದಿದೆ. ಸರ್ಜಿಕಲ್ ಸ್ಟ್ರೈಕ್ ನಡೆಸಿದಾಗಲೂ ಅವರು ಭಾರತೀಯ ಸೇನೆಯನ್ನು ಪ್ರಶ್ನಿಸಿದರು. ಈಗ ಮತ್ತೊಮ್ಮೆ ಅವರ ಪಾಕಿಸ್ತಾನದ ಪರ ನಿಲುವು ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ.

    ಯಾಕೆ ಭಾರತೀಯ ವಕೀಲರು ಅಂದು ಸಿಕ್ಕಿಲ್ಲವೇ ಎಂದು ಕೇಳಿದ್ದಕ್ಕೆ ಅವರು, ಮಾಜಿ ಸಚಿವರಾದ ಸಲ್ಮಾನ್ ಖುರ್ಷಿದ್ ಮತ್ತು ಮಣಿ ಶಂಕರ್ ಅಯ್ಯರ್ ಅವರು ಪಾಕ್ ವಕೀಲರ ನೇಮಕದಲ್ಲಿ ಪ್ರಧಾನ ಪಾತ್ರ ವಹಿಸಿದ್ದಾರೆ. ಕಾಂಗ್ರೆಸ್ಸಿಗೆ ಮೇಕ್ ಇನ್ ಇಂಡಿಯಾದ ಬಗ್ಗೆ ಒಲವು ಇಲ್ಲ. ಹೀಗಾಗಿ ‘ಮೇಕ್ ಇನ್ ಇಂಡಿಯಾ’ದ ವಕೀಲರನ್ನು ನಿರ್ಲಕ್ಷಿಸಿ ‘ಮೇಡ್ ಇನ್ ಪಾಕಿಸ್ತಾನ’ ವಕೀಲರನ್ನು ನೇಮಿಸಿದೆ ಎಂದು ವಾಗ್ದಾಳಿ ನಡೆಸಿದರು.

    ಕಾಂಗ್ರೆಸ್ ಸ್ಪಷ್ಟನೆ ಏನು?
    ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ, ಪಾಕ್ ಮೂಲದ ಖವರ್ ಖುರೇಷಿ ಒಬ್ಬ ಸ್ವತಂತ್ರ ಬ್ಯಾರಿಸ್ಟರ್. ವೃತ್ತಿರಪರರನ್ನು ನೇಮಿಸೋದಕ್ಕೆ ಯಾವುದೇ ಗಡಿ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಪಾಕಿಸ್ತಾನದಲ್ಲೇ ವಿರೋಧ:
    ನೌಕಾಪಡೆಯ ಮಾಜಿ ಅಧಿಕಾರಿ, 46ರ ಹರೆಯದ ಕುಲಭೂಷಣ್ ವಿರುದ್ಧದ ಪ್ರಕರಣದಲ್ಲಿ ಐಸಿಜೆ ಭಾರತದ ಪರವಾಗಿ ತೀರ್ಪು ನೀಡಿತ್ತು. ಈ ಪ್ರಕರಣದಲ್ಲಿ ವಿಶ್ವ ಮಟ್ಟದಲ್ಲಿ ಪಾಕ್ ಮಾನ ಹರಾಜು ಆಗಲು ಖವರ್ ಖುರೇಷಿಯ ಅಸಮರ್ಥ ವಾದ ಮಂಡನೆಯೇ ಕಾರಣ. ಅವರು ಸರಿಯಾಗಿ ವಾದವನ್ನು ಮಂಡಿಸಲಿಲ್ಲ ಎಂದು ಪಾಕ್ ಮಾಧ್ಯಮಗಳು ಅವರನ್ನು ಟೀಕಿಸಿವೆ.

  • ಯಾವುದೇ ಸಮಯದಲ್ಲಿ ಯುದ್ಧ ನಡೆಯಬಹುದು, ಎಲ್ಲದಕ್ಕೂ ಸಿದ್ಧವಾಗಿರಿ: ಏರ್ ಚೀಫ್ ಮಾರ್ಷಲ್ ಪತ್ರ

    ಯಾವುದೇ ಸಮಯದಲ್ಲಿ ಯುದ್ಧ ನಡೆಯಬಹುದು, ಎಲ್ಲದಕ್ಕೂ ಸಿದ್ಧವಾಗಿರಿ: ಏರ್ ಚೀಫ್ ಮಾರ್ಷಲ್ ಪತ್ರ

    ನವದೆಹಲಿ: ಯಾವುದೇ ಕ್ಷಣದಲ್ಲಿ ಯುದ್ಧ ಎದುರಾಗುವ ಸಾಧ್ಯತೆ ಇದ್ದು ನೀವೆಲ್ಲರೂ ಸಿದ್ಧವಾಗಿರಿ ಎಂದು ಏರ್ ಚೀಫ್ ಮಾರ್ಷಲ್ ಬಿಎಸ್ ಧನೋವಾ ವಾಯುಪಡೆಯ ಪ್ರತಿಯೊಬ್ಬ ಅಧಿಕಾರಿಗೆ ವೈಯಕ್ತಿಕ ಪತ್ರ ಬರೆದಿದ್ದಾರೆ.

    ಈಗ ಇರುವ ಪರಿಸ್ಥಿತಿಯನ್ನು ಅವಲೋಕಿಸಿದರೆ, ನೆರೆ ರಾಷ್ಟ್ರಗಳ ಬಾಹ್ಯ ಬೆದರಿಕೆಯನ್ನು ನಾವು ಎದುರಿಸುತ್ತಿದ್ದೇವೆ. ಹೀಗಾಗಿ ಯಾವುದೇ ಸಮಯದಲ್ಲೂ ಕಾರ್ಯಾಚರಣೆ ನಡೆಸಲು ಸಿದ್ಧವಾಗಿರಿ ಎಂದು ಪತ್ರದಲ್ಲಿ ಬರೆದಿದ್ದಾರೆ.

    ವಾಯು ಸೇನೆಯ 12 ಸಾವಿರ ಅಧಿಕಾರಿಗಳಿಗೆ ಈ ಪತ್ರವನ್ನು ತಲುಪಿಸಲಾಗಿದೆ. ಈ ಪತ್ರದಲ್ಲಿ ನೆರೆ ರಾಷ್ಟ್ರಗಳಿಂದ ಭಾರತ ಎದುರಿಸುತ್ತಿರುವ ಯುದ್ಧ ಭಯವನ್ನು ಬಿಎಸ್ ಧನೋವಾ ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೇ ಈ ವಿಚಾರದಲ್ಲಿ ತರಬೇತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ವಾಯುಸೇನೆಯ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಈ ರೀತಿಯ ಪತ್ರ ಬರೆಯಲಾಗಿದೆ. ಈ ಮೊದಲು ಮೇ 1, 1950ರಲ್ಲಿ ಜನರಲ್ ಕಾರ್ಯಪ್ಪ ಮತ್ತು ಫೆಬ್ರವರಿ 1,1986ರಲ್ಲಿ ಜನರಲ್ ಸುಂದರ್ಜಿ ಎಲ್ಲ ಅಧಿಕಾರಿಗಳಿಗೆ ಪತ್ರ ಬರೆದಿದ್ದರು.

    ಈ ವಿಚಾರದ ಬಗ್ಗೆ ವಾಯುಸೇನೆಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಆಂತರಿಕ ಸಂವಹನಕ್ಕಾಗಿ ಈ ಪತ್ರ ಬರೆಯಲಾಗಿದೆ ಎಂದು ಹೇಳಿ ಈ ಪತ್ರದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

  • ಬಾಲಕಿಯನ್ನು ಕಚ್ಚಿದ್ದ ನಾಯಿಗೆ ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆ

    ಬಾಲಕಿಯನ್ನು ಕಚ್ಚಿದ್ದ ನಾಯಿಗೆ ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆ

    ಲಾಹೋರ್: ಭಾರತದ ಪ್ರಜೆ ಕುಲಭೂಷಣ್ ಜಾಧವ್‍ಗೆ ಗಲ್ಲು ಶಿಕ್ಷೆ ನೀಡಿದ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಈ ನಡುವೆ ನಾಯಿಯೊಂದಕ್ಕೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಪಾಕಿಸ್ತಾನ ವಿಶ್ವದಾದ್ಯಂತ ಸುದ್ದಿಯಲ್ಲಿದೆ.

    ಆಗಿದ್ದು ಇಷ್ಟೇ, ಪಂಜಾಬ್ ಪ್ರಾಂತ್ಯದಲ್ಲಿ ನಾಯಿಯೊಂದು ಬಾಲಕಿಗೆ ಕಚ್ಚಿತ್ತು. ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ನಾಯಿಯ ವಿರುದ್ಧ ದೂರು ನೀಡಿದ್ದರು. ವಿಚಾರಣೆ ನಡೆಸಿದ ಸಹಾಯ ಪೊಲೀಸ್ ಆಯುಕ್ತ ಸಲೀಂ, ಬಾಲಕಿಯನ್ನು ನಾಯಿ ಗಾಯಗೊಳಿಸಿದ ಕಾರಣ ಅದನ್ನು ಹತ್ಯೆ ಮಾಡಲೇಬೇಕು ಎಂದು ಹೇಳಿ ಗಲ್ಲು ಶಿಕ್ಷೆಯನ್ನು ಪ್ರಕಟಿಸಿದ್ದಾರೆ.

    ನಾಯಿ ಈಗಾಗಲೇ ಒಂದು ವಾರಗಳ ಕಾಲ ಜೈಲುಶಿಕ್ಷೆಯನ್ನು ಅನುಭವಿಸಿದೆ. ಈಗ ಸಹಾಯಕ ಕಮೀಷನರ್ ಅವರ ತೀರ್ಪನ್ನು ಪ್ರಶ್ನಿಸಿ, ಹೆಚ್ಚುವರಿ ಕಮೀಷನರ್ ಅವರನ್ನು ಭೇಟಿಯಾಗಲಿದ್ದೇನೆ ಎಂದು ನಾಯಿ ಮಾಲೀಕ ಹೇಳಿದ್ದಾರೆ ಎಂದು ಜಿಯೋ ಟಿವಿ ಸುದ್ದಿ ಪ್ರಸಾರ ಮಾಡಿದೆ.

    ಗಲ್ಲು ಶಿಕ್ಷೆಯಿಂದ ನನ್ನ ಮುದ್ದಿನ ನಾಯಿಯನ್ನು ಪಾರು ಮಾಡಲು ನಾನು ಎಲ್ಲ ಕೋರ್ಟ್ ಗಳ ಮೆಟ್ಟಿಲೇರಲು ಸಿದ್ಧನಿದ್ದೇನೆ ಎಂದು ನಾಯಿಯ ಮಾಲೀಕ ಜಮೀಲ್ ತಿಳಿಸಿದ್ದಾರೆ.

    ಇದನ್ನೂ ಓದಿ: ಜಾಗತಿಕ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ ಕಪಾಳ ಮೋಕ್ಷವಾದ ಕಥೆಯನ್ನು ಓದಿ

  • ಜಾಗತಿಕ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ ಕಪಾಳ ಮೋಕ್ಷವಾದ ಕಥೆಯನ್ನು ಓದಿ

    ಜಾಗತಿಕ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ ಕಪಾಳ ಮೋಕ್ಷವಾದ ಕಥೆಯನ್ನು ಓದಿ

    ಹೇಗ್: ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದ್ದು, ನೆದರ್‍ಲ್ಯಾಂಡಿನ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ಭಾರತದ ಮನವಿಯನ್ನು ಪುರಸ್ಕರಿಸಿ ಕುಲಭೂಷಣ್ ಜಾಧವ್‍ಗೆ ನೀಡಲಾಗಿದ್ದ ಗಲ್ಲು ಶಿಕ್ಷಗೆ ತಾತ್ಕಾಲಿಕ ತಡೆಯನ್ನು ನೀಡಿದೆ.

    ಭಾರತದ ಕಾಲಮಾನ ಮಧ್ಯಾಹ್ನ 3.30ಕ್ಕೆ ಮುಖ್ಯ ನ್ಯಾಯಾಧೀಶ ರೋನಿ ಅಬ್ರಾಹಂ ತೀರ್ಪು ಓದಲು ಆರಂಭಿಸಿ ಗಲ್ಲು ಶಿಕ್ಷೆಗೆ ತಡೆ ನೀಡಿದರು. ಹೀಗಾಗಿ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿರುವ ಪ್ರಮುಖ ಅಂಶವನ್ನು ನೀಡಲಾಗಿದೆ

    ಆರಂಭದಲ್ಲೇ ಹಿನ್ನಡೆ: ಪಾಕಿಸ್ತಾನ ತನ್ನ ವಾದದಲ್ಲಿ ಮಿಲಿಟರಿ ಕೋರ್ಟ್ ಈ ಶಿಕ್ಷೆಯನ್ನು ನೀಡಿದೆ. ಮಿಲಿಟರಿ ಕೋರ್ಟ್ ವಿಧಿಸಿರುವ ಶಿಕ್ಷೆ ಅಂತಾರಾಷ್ಟ್ರೀಯ ಕೋರ್ಟ್ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಹೇಳಿತ್ತು. ಈ ವಿಚಾರವನ್ನು ತೀರ್ಪು ಓದುವ ಆರಂಭದಲ್ಲೇ ಉಲ್ಲೇಖಿಸಿದ್ದ ನ್ಯಾಯಾಧೀಶರು, ವಿಯೆನ್ನಾ ಒಪ್ಪಂದಕ್ಕೆ ನೀವು ಸಹಿ ಹಾಕಿದ್ದೀರಿ. ಸಹಿ ಹಾಕಿದ ಕಾರಣ ನೀವು ಆ ಒಪ್ಪಂದದಂತೆ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಈ ಪ್ರಕರಣ ಈ ಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ವಿಯೆನ್ನಾ ಒಪ್ಪಂದದ 1ನೇ ವಿಧಿ ಪ್ರಕಾರ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಅಧಿಕಾರವಿದೆ. ಜಾಧವ್ ಬಂಧನದ ಬಗ್ಗೆ ಭಾರತಕ್ಕೆ ಮಾಹಿತಿ ನೀಡದಿರುವುದು, ರಾಜತಾಂತ್ರಿಕ ನೆರವಿಗೆ ಅವಕಾಶ ನೀಡದೇ ಇರುವುದು ವಿಯೆನ್ನಾ ಒಪ್ಪಂದ ವ್ಯಾಪ್ತಿಗೆ ಒಳಪಡುತ್ತದೆ. ಅಷ್ಟೇ ಅಲ್ಲೇ ಈ ಪ್ರಕರಣವನ್ನು ಇತ್ಯರ್ಥ ಪಡಿಸಲು ಈ ನ್ಯಾಯಾಲಯಕ್ಕೆ ಅಧಿಕಾರ ಇದೆ ಎಂದು ಹೇಳಿದರು.

    ಭಾರತ ಪ್ರಜೆ: ಭಾರತ ಮತ್ತು ಪಾಕಿಸ್ತಾನಗಳು ಎರಡೂ ಬಂಧನಕ್ಕೊಳಗಾಗಿರುವ ಕುಲಭೂಷಣ್ ಜಾಧವ್ ಭಾರತ ಪ್ರಜೆ ಎನ್ನುವುದನ್ನು ಹೇಳಿಕೊಂಡಿದ್ದು ಈ ವಿಚಾರವನ್ನು ಕೋರ್ಟ್ ಒಪ್ಪಿಕೊಂಡಿದೆ.

    ರಾಜತಾಂತ್ರಿಕ ನೆರವು: ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ನಾವು ಮನವಿ ಮಾಡಿದ್ದರೂ ಪಾಕ್ ತಿರಸ್ಕರಿಸಿದೆ ಎಂದು ಭಾರತ ವಾದಿಸಿತ್ತು. ಈ ಅಂಶಕ್ಕೆ ಸಂಬಂಧಿಸಿದಂತೆ ಕೋರ್ಟ್, ಒಬ್ಬ ವ್ಯಕ್ತಿ ಒಂದು ದೇಶದಲ್ಲಿ ಬಂಧಿತನಾದರೆ ಆತನ ಅಹವಾಲುಗಳನ್ನು ಕೇಳಿಕೊಳ್ಳಲು ಆ ದೇಶಕ್ಕೆ ಅಧಿಕಾರ ಇದೆ ಎಂದು ಹೇಳುವ ವಿಯೆನ್ನಾ ಒಪ್ಪಂದಕ್ಕೆ ನೀವು ಸಹಿ ಹಾಕಿದ್ದೀರಿ. ಈ ಒಪ್ಪಂದವನ್ನು ಉಲ್ಲಂಘಿಸಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ನೀವು ವಿಯೆನ್ನಾ ಒಪ್ಪಂದಂತೆ ರಾಜತಾಂತ್ರಿಕ ಸಹಾಯವನ್ನು ನೀಡಲು ಅನುಮತಿ ನೀಡಬೇಕು ಎಂದು ಕೋರ್ಟ್ ಪಾಕಿಸ್ತಾನಕ್ಕೆ ಸೂಚಿಸಿತು.

    ರಕ್ಷಣೆಯ ಮಾಹಿತಿ ನೀಡಿ: ಪಾಕಿಸ್ತಾನ ಜಾಧವ್ ಅವರ ಸಾವನ್ನು ಬಯಸುತ್ತಿದೆ ಎನ್ನುವ ವಿಚಾರವನ್ನು ತಿಳಿದ ಭಾರತ ಜಾಧವ್ ರಕ್ಷಣೆಯ ವಿಚಾರವನ್ನು ಪ್ರಸ್ತಾಪ ಮಾಡಿತ್ತು. ಯಾಕೆಂದರೆ ಗಲ್ಲು ಶಿಕ್ಷೆ ಅಲ್ಲದೇ ಹೋದರೂ ಬೇರೆ ಯಾರೋ ಒಬ್ಬ ವ್ಯಕ್ತಿ, ಖೈದಿಯ ಮೂಲಕ ಜಾಧವ್ ಅವರನ್ನು ಪಾಕ್ ಹತ್ಯೆ ಮಾಡಿದರೆ ಏನು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ, ವಿಚಾರಣೆ ಪೂರ್ಣಗೊಳ್ಳುವವರೆಗೂ ಜಾಧವ್ ಅವರ ಪ್ರಾಣಕ್ಕೆ ಅಪಾಯ ಇರುವ ಸಾಧ್ಯತೆಯಿದೆ. ಹೀಗಾಗಿ ಅವರನ್ನು ರಕ್ಷಿಸಬೇಕು ಎಂದು ಮನವಿ ಮಾಡಿತ್ತು. ಈ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಜಾಧವ್ ಅವರ ರಕ್ಷಣೆಗೆ ಸಂಬಂಧಿಸಿದಂತೆ ನೀವು ಏನು ಕ್ರಮವನ್ನು ತೆಗೆದುಕೊಂಡಿದ್ದೀರಿ ಎಂದು ಪಾಕಿಗೆ ಪ್ರಶ್ನಿಸಿ ಅದಕ್ಕೆ ಸಂಬಂಧಿಸಿ ವಿವರವನ್ನು ನೀಡಿ ಎಂದು ಸೂಚಿಸಿದೆ.

    ವಿವಾದಾತ್ಮಕವಾಗಿದೆ: ಜಾಧವ್ ಅವರು ಇರಾಕ್‍ನಲ್ಲಿ ಉದ್ಯಮ ನಡೆಸುತ್ತಿರುವ ಪಾಕಿಸ್ತಾನ ಕಿಡ್ನಾಪ್ ಮಾಡಿದೆ. ಅವರು ರಾ ಏಜೆಂಟ್ ಅಲ್ಲ ಎಂದು ಭಾರತ ಹೇಳುತ್ತಾ ಬಂದಿದ್ದರೂ ಪಾಕಿಸ್ತಾನ ತನ್ನ ಮೊಂಡು ವಾದವನ್ನು ಕೋರ್ಟ್ ನಲ್ಲೂ ಮುಂದುವರಿಸಿತ್ತು. ಈ ವಿಚಾರವನ್ನು ತೀರ್ಪಿನಲ್ಲಿ ಪ್ರಸ್ತಾಪಿಸಿದ ಕೋರ್ಟ್, ಜಾಧವ್ ಬಂಧನ ಎಲ್ಲಿ ಆಗಿದೆ ಎಂಬ ಬಗ್ಗೆಯೇ ವಿವಾದವಿದೆ ಎಂದು ಅಭಿಪ್ರಾಯಪಟ್ಟಿದೆ.

    ಗಲ್ಲು ಶಿಕ್ಷೆ ನೀಡುವಂತಿಲ್ಲ: ವಿಯೆನ್ನಾ ಒಪ್ಪಂದ ಉಲ್ಲಂಘನೆ, ಅಂತಾರಾಷ್ಟ್ರೀಯ ನ್ಯಾಯಾಲಯದ ವ್ಯಾಪ್ತಿಗೆ ಈ ಪ್ರಕರಣ ಬರುವುದಿಲ್ಲ ಎಂದು ನೀವು ವಾದ ಮಂಡಿಸಿರುವುದನ್ನು ನೋಡಿದಾಗ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಲು ಮುಂದಾಗಿದ್ದೀರಿ ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಹೀಗಾಗಿ ಈ ಪ್ರಕರಣದ ವಿಚಾರಣೆ ಮುಗಿದು ಅಂತಿಮ ತೀರ್ಪು ಬರುವವರೆಗೂ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸುವಂತಿಲ್ಲ ಎಂದು ಪಾಕಿಸ್ತಾನಕ್ಕೆ ಕೋರ್ಟ್ ಆದೇಶಿಸಿತು.

    ಭಾರತದ ವಾದ ಸಮ್ಮತವೇ? ವಿಯೆನ್ನಾ ಒಪ್ಪಂದ ವಿಧಿ 36ರ ಪ್ರಕಾರ ಅನ್ಯ ದೇಶದ ವ್ಯಕ್ತಿಯನ್ನು ಬಂಧಿಸಿದರೆ ಆ ಬಗ್ಗೆ ಯಾವುದೇ ವಿಳಂಬವಿಲ್ಲದೇ ಮಾಹಿತಿ ನೀಡಬೇಕು ಮತ್ತು ರಾಜತಾಂತ್ರಿಕ ನೆರವನ್ನು ಬಂಧಿತನ ಹಕ್ಕು ಎಂದು ಕೋರ್ಟ್ ಹೇಳಿತು.

    ತುರ್ತು ವಿಚಾರಣೆ ಅಗತ್ಯ ಯಾಕೆ? ಜಾಧವ್ ಮರಣ ದಂಡನೆ ಶಿಕ್ಷೆಗೆ ಒಳಪಟ್ಟಿದ್ದಾರೆ. ಹೀಗಾಗಿ ಯಾವಾಗ ಬೇಕಾದರೂ ಗಲ್ಲಿಗೇರಿಸಬಹುದು ಎಂಬ ಭಾರತದ ಆತಂಕದಿಂದಾಗಿ ಪ್ರಕರಣದ ತುರ್ತು ವಿಚಾರಣೆಗೆ ಅಗತ್ಯವಿದೆ. ಆಗಸ್ಟ್ 2017ರ ಬಳಿಕವಷ್ಟೇ ಗಲ್ಲಿಗೇರಿಸುವುದಾಗಿ ಪಾಕಿಸ್ತಾನ ಹೇಳಿದೆ. ಆದರೆ ಕೋರ್ಟ್ ಅಂತಿಮ ತೀರ್ಪು ನೀಡುವುದಕ್ಕೂ ಮೊದಲು ಗಲ್ಲಿಗೇರಿಸಲ್ಲ ಎಂಬ ಭರವಸೆಯನ್ನು ಪಾಕಿಸ್ತಾನ ಕೋರ್ಟ್‍ಗೆ ನೀಡಿಲ್ಲ. ಅಂದರೆ ಆಗಸ್ಟ್ ಬಳಿಕ ಪಾಕಿಸ್ತಾನ ಗಲ್ಲಿಗೇರಿಸುವ ಸಾಧ್ಯತೆ ಇದೆ. ಹೀಗಾಗಿ ಪ್ರಕರಣದ ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಕೋರ್ಟ್ ತೀರ್ಮಾನಿಸಿದೆ.

    ಈ ತೀರ್ಪಿಗೆ ಸಂಬಂಧಿಸಿದಂತೆ ಎಚ್.ರಂಗನಾಥ್ ವಿಮರ್ಶೆಯ ವಿಡಿಯೋ,  ತೀರ್ಪಿನ ಸಂಪೂರ್ಣ ಪ್ರತಿ ಮತ್ತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಟ್ವೀಟ್ ಗಳನ್ನು ನೀಡಲಾಗಿದೆ. 

    https://www.youtube.com/watch?v=EJ4z66WdyQo

  • ಪಾಕ್‍ಗೆ ಭಾರೀ ಮುಖಭಂಗ: ಕುಲಭೂಷಣ್ ಜಾಧವ್‍ಗೆ ತಾತ್ಕಾಲಿಕ ರಿಲೀಫ್

    ಪಾಕ್‍ಗೆ ಭಾರೀ ಮುಖಭಂಗ: ಕುಲಭೂಷಣ್ ಜಾಧವ್‍ಗೆ ತಾತ್ಕಾಲಿಕ ರಿಲೀಫ್

    ಹೇಗ್: ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ನೆದರ್‍ಲೆಂಡ್‍ನ ಹೇಗ್‍ನಲ್ಲಿರುವ ಅಂತಾರಾಷ್ಟ್ರೀಯ  ನ್ಯಾಯಾಲಯ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದೆ.

    ಭಾರತದ ಕಾಲಮಾನ ಮಧ್ಯಾಹ್ನ 3.30ಕ್ಕೆ ಮುಖ್ಯ ನ್ಯಾಯಾಧೀಶ ರೋನಿ ಅಬ್ರಾಹಂ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದ್ದು, ಕುಲಭೂಷಣ್ ಜಾಧವ್ ಅವರಿಗೆ ಭಾರತ ರಾಜತಾಂತ್ರಿಕ ನೆರವನ್ನು ನೀಡಬೇಕು ಎಂದು ಸೂಚಿಸಿದ್ದಾರೆ.

    ಭಾರತದ ಪರ ಹಿರಿಯ ವಕೀಲ ದೀಪಕ್ ಮಿತ್ತಲ್ ಹಾಗೂ ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ ವಾದ ಮಂಡಿಸಿದ್ದರು.

    ಮೂಲಭೂತ ಹಕ್ಕಿಗಾಗಿ ನಾವು ಹೋರಾಡುತ್ತಿದ್ದೇವೆ. ಜಾಧವ್ ಅವರನ್ನು ಬಿಡುಗಡೆ ಮಾಡಬೇಕು ಅಂತ ಭಾರತ ವಾದ ಮಂಡಿಸಿದ್ದರೆ, ಆದರೆ ಪಾಕಿಸ್ತಾನ ಭಾರತದ ವಾದವನ್ನು ಒಪ್ಪದೇ ಮೊಂಡಾಟ ಮಾಡ್ತು. ಭಾರತ ಅಂತಾರಾಷ್ಟ್ರೀಯ ಕೋರ್ಟನ್ನ ರಾಜಕೀಯ ಥಿಯೇಟರ್ ಥರ ಬಳಸ್ತಿದೆ ಅಂತಾ ವಾದ ಮಂಡಿಸಿತ್ತು.

    ಭಾರತದ ವಾದ ಹೀಗಿತ್ತು
    – ಜಾಧವ್ ವಿಚಾರಣೆ ವೇಳೆ ಪಕ್ಷಪಾತ ನಡೆದಿದ್ದು, ಪಾಕಿಸ್ತಾನ ಜಾಧವ್‍ಗೆ ರಾಜತಾಂತ್ರಿಕ ನೆರವು ನೀಡಲು ನಿರಾಕರಿಸಿದೆ.
    – ಅಕ್ರಮವಾಗಿ ಜಾಧವ್ ಬಂಧಿಸಿ ವಿಯೆನ್ನಾ ಒಪ್ಪಂದ ಮುರಿದಿದೆ.
    – ಪಾಕಿಸ್ತಾನದಿಂದ ಸತ್ಯದ ಸಮಾಧಿ ಮಾಡೋ ಪ್ರಯತ್ನ ಮಾಡುತ್ತಿದೆ.
    – ಕೋರ್ಟ್ ವಿಚಾರಣೆಗೆ ಮುನ್ನವೇ ಜಾಧವ್ ಗಲ್ಲಿಗೇರಿಸಲು ಪಾಕ್ ಪ್ರಯತ್ನಿಸ್ತಿದೆ
    – ಮೂಲಭೂತ ಹಕ್ಕಿಗಾಗಿ ನಾವು ಹೋರಾಡ್ತಿದ್ದೇವೆ, ಜಾಧವ್ ಬಿಡುಗಡೆ ಮಾಡಿ

    ಪಾಕಿಸ್ತಾನದ ವಾದ ಹೀಗಿತ್ತು
    – ಜಾಧವ್ ನಮ್ಮ ಬಳಿ ತಪ್ಪೊಪ್ಪಿಕೊಂಡಿದ್ದಾರೆ
    – ಜಾಧವ್ ಗಲ್ಲಿಗೇರಿಸಲು ನಮಗೆ ಆತುರ ಇಲ್ಲ
    – ಭಾರತದ ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ
    – ಭಾರತ ನ್ಯಾಯಾಲಯವನ್ನು ರಾಜಕೀಯ ನ್ಯಾಯಾಲಯವನ್ನಾಗಿ ಬಳಕೆ ಮಾಡ್ತಿದೆ
    – ರಾಜತಾಂತ್ರಿಕ ನೆರವಿಗೆ ಜಾಧವ್ ಅರ್ಹನಲ್ಲ
    – ಪಾಸ್‍ಪೋರ್ಟ್‍ನಲ್ಲಿ ಜಾಧವ್ ಅಂತಾ ಹೆಸರಿಲ್ಲ, ಮುಸ್ಲಿಂ ವ್ಯಕ್ತಿಯ ಹೆಸರು ಇದೆ

    ಏನಿದು ಪ್ರಕರಣ?
    ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿತ್ತು.

    ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು. ಕೂಲಭೂಷಣ್ ಯಾದವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು.

    ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ಭಾರತ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ಭಾರತದ ಮಾಡಿದ್ದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿತ್ತು.ಆದರೆ ನಿವೃತ್ತ ನೌಕಾ ಸೇನಾಧಿಕಾರಿ ಕುಲಭೂಷಣ್‍ರನ್ನು ಇರಾನ್‍ನಿಂದ ಪಾಕಿಸ್ತಾನ ಕಿಡ್ನ್ಯಾಪ್ ಮಾಡಿತ್ತು ಎಂಬ ಅಂಶವನ್ನು ಕೋರ್ಟ್‍ನಲ್ಲಿ ಭಾರತ ಮಂಡಿಸಿತ್ತು.

  • ಪಾಕಿಸ್ತಾನ ಸತ್ಯದ ಸಮಾಧಿ ಮಾಡ್ತಿದೆ: ಅಂತಾರಾಷ್ಟ್ರೀಯ ಕೋರ್ಟ್ ನಲ್ಲಿ ಭಾರತದ ವಾದ ಹೇಗಿತ್ತು? ವಿಡಿಯೋ ನೋಡಿ

    ಪಾಕಿಸ್ತಾನ ಸತ್ಯದ ಸಮಾಧಿ ಮಾಡ್ತಿದೆ: ಅಂತಾರಾಷ್ಟ್ರೀಯ ಕೋರ್ಟ್ ನಲ್ಲಿ ಭಾರತದ ವಾದ ಹೇಗಿತ್ತು? ವಿಡಿಯೋ ನೋಡಿ

    ಹೇಗ್: 18 ವರ್ಷಗಳ ಬಳಿಕ ನೆದರ್‍ಲೆಂಡ್‍ನ ಹೇಗ್‍ನಲ್ಲಿರು ಅಂತಾರಾಷ್ಟ್ರೀಯ ಕೋರ್ಟ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿವೆ. ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರೋ ಕುಲಭೂಷಣ್ ಜಾಧವ್ ವಿಚಾರದಲ್ಲಿ ಭಾರತ ಹಾಗೂ ಪಾಕಿಸ್ತಾನ ವಾದ ಪ್ರತಿವಾದ ಮಂಡಿಸಿವೆ.

    ಭಾರತದ ಪರ ಹಿರಿಯ ವಕೀಲ ದೀಪಕ್ ಮಿತ್ತಲ್ ಹಾಗೂ ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ ವಾದ ಮಂಡಿಸಿದ್ರು. ಕೋರ್ಟ್ ವಿಚಾರಣೆಗೆ ಮುನ್ನವೇ ಜಾಧವ್ ಅವರನ್ನು ಗಲ್ಲಿಗೇರಿಸಲು ಪಾಕ್ ಪ್ರಯತ್ನಿಸ್ತಿದೆ ಅಂತಾ ಸಾಳ್ವೆ ವಾದ ಮಂಡಿಸಿದರು.

    ಮೂಲಭೂತ ಹಕ್ಕಿಗಾಗಿ ನಾವು ಹೋರಾಡುತ್ತಿದ್ದೇವೆ. ಜಾಧವ್ ಅವರನ್ನು ಬಿಡುಗಡೆ ಮಾಡಬೇಕು ಅಂತ ವಾದ ಮಂಡಿಸಿದ್ರು. ಆದರೆ ಪಾಕಿಸ್ತಾನ ಭಾರತದ ವಾದವನ್ನು ಒಪ್ಪದೇ ಮೊಂಡಾಟ ಮಾಡ್ತು. ಭಾರತ ಅಂತಾರಾಷ್ಟ್ರೀಯ ಕೋರ್ಟನ್ನ ರಾಜಕೀಯ ಥಿಯೇಟರ್ ಥರ ಬಳಸ್ತಿದೆ ಅಂತಾ ವಾದ ಮಂಡಿಸಿತು.

    ಭಾರತದ ವಾದ ಏನಿತ್ತು?
    – ಜಾಧವ್ ವಿಚಾರಣೆ ವೇಳೆ ಪಕ್ಷಪಾತ ನಡೆದಿದ್ದು, ಪಾಕಿಸ್ತಾನ ಜಾಧವ್‍ಗೆ ರಾಜತಾಂತ್ರಿಕ ನೆರವು ನೀಡಲು ನಿರಾಕರಿಸಿದೆ.
    – ಅಕ್ರಮವಾಗಿ ಜಾಧವ್ ಬಂಧಿಸಿ ವಿಯೆನ್ನಾ ಒಪ್ಪಂದ ಮುರಿದಿದೆ.
    – ಪಾಕಿಸ್ತಾನದಿಂದ ಸತ್ಯದ ಸಮಾಧಿ ಮಾಡೋ ಪ್ರಯತ್ನ ಮಾಡುತ್ತಿದೆ.
    – ಕೋರ್ಟ್ ವಿಚಾರಣೆಗೆ ಮುನ್ನವೇ ಜಾಧವ್ ಗಲ್ಲಿಗೇರಿಸಲು ಪಾಕ್ ಪ್ರಯತ್ನಿಸ್ತಿದೆ
    – ಮೂಲಭೂತ ಹಕ್ಕಿಗಾಗಿ ನಾವು ಹೋರಾಡ್ತಿದ್ದೇವೆ, ಜಾಧವ್ ಬಿಡುಗಡೆ ಮಾಡಿ

    ಪಾಕಿಸ್ತಾನದ ವಾದ ಏನು?
    – ಜಾಧವ್ ನಮ್ಮ ಬಳಿ ತಪ್ಪೊಪ್ಪಿಕೊಂಡಿದ್ದಾರೆ
    – ಜಾಧವ್ ಗಲ್ಲಿಗೇರಿಸಲು ನಮಗೆ ಆತುರ ಇಲ್ಲ
    – ಭಾರತದ ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ
    – ಭಾರತ ನ್ಯಾಯಾಲಯವನ್ನು ರಾಜಕೀಯ ನ್ಯಾಯಾಲಯವನ್ನಾಗಿ ಬಳಕೆ ಮಾಡ್ತಿದೆ
    – ರಾಜತಾಂತ್ರಿಕ ನೆರವಿಗೆ ಜಾಧವ್ ಅರ್ಹನಲ್ಲ
    – ಪಾಸ್‍ಪೋರ್ಟ್‍ನಲ್ಲಿ ಜಾಧವ್ ಅಂತಾ ಹೆಸರಿಲ್ಲ, ಮುಸ್ಲಿಂ ವ್ಯಕ್ತಿಯ ಹೆಸರು ಇದೆ

    ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಪಾಕಿಸ್ತಾನ ವಿಯೆನ್ನಾ ಒಪ್ಪಂದವನ್ನು ಮುರಿದಿದ್ದು, ನೌಕಾಪಡೆಯಿಂದ ನಿವೃತ್ತರಾದ ಬಳಿಕ ಜಾಧವ್ ಅವರು ಇರಾನ್‍ನಲ್ಲಿ ಉದ್ಯಮ ನಡೆಸುತ್ತಿದ್ದರು. ಈ ವೇಳೆ ಪಾಕಿಸ್ತಾನ ಅಪಹರಿಸಿತ್ತು. ಆದರೆ, 2016ರ ಮಾರ್ಚ್ 3ರಂದು ಅವರನ್ನು ಬಲೂಚಿಸ್ತಾನದಲ್ಲಿ ಬಂಧಿಸಿದ್ದಾಗಿ ಪಾಕಿಸ್ತಾನ ಹೇಳಿದೆ ಎಂದು ಹಿರಿಯ ವಕೀಲ ಹರೀಶ್ ಸಾಳ್ವೆ ನೇತೃತ್ವದ ವಕೀಲರ ತಂಡವು ಮೇ 8ರಂದು ಅಂತರರಾಷ್ಟ್ರೀಯ ನ್ಯಾಯಾಲಯಕ್ಕೆ ಭಾರತದ ಪರವಾಗಿ ಅರ್ಜಿ ಸಲ್ಲಿಸಿತ್ತು.

  • ವಿಡಿಯೋ: ಪೈಶಾಚಿಕ ಕೃತ್ಯಕ್ಕೆ ಭಾರತೀಯ ಸೇನೆಯ ಪ್ರತ್ಯುತ್ತರ- 60 ಸೆಕೆಂಡ್‍ಗಳಲ್ಲಿ ಪಾಕ್ ಸೇನೆಯ ಬಂಕರ್ ಚಿಂದಿ

    ವಿಡಿಯೋ: ಪೈಶಾಚಿಕ ಕೃತ್ಯಕ್ಕೆ ಭಾರತೀಯ ಸೇನೆಯ ಪ್ರತ್ಯುತ್ತರ- 60 ಸೆಕೆಂಡ್‍ಗಳಲ್ಲಿ ಪಾಕ್ ಸೇನೆಯ ಬಂಕರ್ ಚಿಂದಿ

    ನವದೆಹಲಿ: ಕಾಶ್ಮೀರದಲ್ಲಿ ಇಬ್ಬರು ಭಾರತೀಯ ಯೋಧರ ಶಿರಚ್ಛೇದನ ಮಾಡಿ ಪೈಶಾಚಿಕ ಕೃತ್ಯವೆಸಗಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಿರುಗೇಟು ನೀಡಿದೆ.

    ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟಾರ್‍ನ ಗಡಿ ನಿಯಂತ್ರಣಾ ರೇಖೆಯ ಬಳಿ ಭಾರತೀಯ ಸೇನೆ ಪಾಕ್ ಬಂಕರ್ ಧ್ವಂಸಗೊಳಿಸಿದೆ. ಗುರಿಯಿಟ್ಟು ಕೇವಲ 60 ಸೆಕೆಂಡ್‍ಗಳಲ್ಲಿ ಬಂಕರ್ ಧ್ವಂಸಗೊಳಿಸಿರುವ ವಿಡಿಯೋದ ಬಗ್ಗೆ ಟೈಮ್ಸ್ ನೌ ವರದಿ ಮಾಡಿದೆ.

    ಯಶಸ್ವಿಯಾಗಿ ಗುರಿಯನ್ನ ಸಾಧಿಸಿದ್ದೇವೆ ಎಂದು ಯೋಧರು ಹೇಳುವುದನ್ನ ವಿಡಿಯೋದಲ್ಲಿ ಕೇಳಬಹುದು. ಸರ್, ಶೆಲ್ ಗುರಿಯನ್ನ ಹೊಡೆದಿದೆ. ನಾವು ಅದನ್ನ ಧ್ವಂಸಗೊಳಿಸಿದ್ದೇವೆ ಎಂದು ಯೋಧರೊಬ್ಬರು ಹೇಳಿರೋದು ವಿಡಿಯೋದಲ್ಲಿ ದಾಖಲಾಗಿದೆ.

    ಮೇ 1ರಂದು ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ಸೈನಿಕರು ಭಾರತೀಯ ಯೋಧರ ಮೇಲೆ ದಾಳಿ ನಡೆಸಿ ಇಬ್ಬರು ಭಾರತೀಯ ಯೋಧರ ಶಿರಚ್ಛೇದನ ಮಾಡಿ ಪೈಶಾಚಿಕ ಕೃತ್ಯವೆಸಗಿದ್ದರು. ಇದಕ್ಕೆ ತಕ್ಕ ಉತ್ತರ ನೀಡುವುದಾಗಿ ಭಾರತೀಯ ಸೇನೆ ಹೇಳಿತ್ತು.

    ಏಪ್ರಿಲ್ ನಲ್ಲಿ ನಡೆದ ದಾಳಿ: ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ ಸೇನೆಯ ಮೂಲಗಳು ಮಾಹಿತಿ ನೀಡಿದ್ದು,  ಯೋಧರ ಶಿರಚ್ಛೇದನ ಮಾಡಿದ್ದಕ್ಕೆ ಈ ದಾಳಿ ನಡೆದಿಲ್ಲ. ಈ ಘಟನೆ ನಡೆಯುವ ಮೊದಲೇ ಏಪ್ರಿಲ್ ನಲ್ಲಿ ನಡೆದ ದಾಳಿ ಎಂದು ಸ್ಪಷ್ಠೀಕರಣ ನೀಡಿವೆ.

    https://www.youtube.com/watch?v=UlOlfHILH2Q

  • ಅಪ್ಪನ ಸಾವಿಗೆ ಪ್ರತೀಕಾರವಾಗಿ 50 ತಲೆಗಳು ಬೇಕು: ಪಾ(ಪಿ)ಕಿಗಳಿಂದ ಶಿರಚ್ಛೇದನಗೊಂಡ ಯೋಧನ ಮಗಳ ಮಾತು

    ಅಪ್ಪನ ಸಾವಿಗೆ ಪ್ರತೀಕಾರವಾಗಿ 50 ತಲೆಗಳು ಬೇಕು: ಪಾ(ಪಿ)ಕಿಗಳಿಂದ ಶಿರಚ್ಛೇದನಗೊಂಡ ಯೋಧನ ಮಗಳ ಮಾತು

    ನವದೆಹಲಿ: ನನ್ನ ತಂದೆಯ ಸಾವಿಗೆ ಪ್ರತೀಕಾರವಾಗಿ 50 ತಲೆಗಳು ಬೇಕು ಎಂದು ಪಾಕಿಸ್ತಾನದ ಸೈನಿಕರ ಪೈಶಾಚಿಕ ಕೃತ್ಯದಿಂದ ಹುತಾತ್ಮರಾದ ಯೋಧರೊಬ್ಬರ ಮಗಳು ಸುದ್ದಿ ಸಂಸ್ಥೆಗೆ ಹೇಳಿಕೆ ನೀಡಿದ್ದಾರೆ.

    ಸೋಮವಾರದಂದು ಪಾಕಿಸ್ತಾನದ ಸೈನಿಕರು ಕಾಶ್ಮೀರದಲ್ಲಿ ಭಾರತದೊಳಗೆ ನುಗ್ಗಿ ಇಬ್ಬರು ಯೋಧರನ್ನು ಕೊಂದು ಅವರ ಶಿರಚ್ಛೇದನ ಮಾಡಿದ್ದರು. ಮೃತರಲ್ಲಿ ಬಿಎಸ್‍ಎಫ್ ಯೋಧ ಪ್ರೇಮ್ ಸಾಗರ ಕೂಡ ಒಬ್ಬರಾಗಿದ್ದು, ಅವರ ಮಗಳು ತನ್ನ ತಂದೆಯ ಬಲಿದಾನಕ್ಕೆ ಭಾರತ ಹೇಗೆ ಪ್ರತೀಕಾರ ತೀರಿಸಿಕೊಳ್ಳಬೇಕು ಎಂಬುದನ್ನ ಈ ಮಾತುಗಳ ಮೂಲಕ ಹೇಳಿದ್ದಾರೆ.

    ಪಾಕಿಸ್ತಾನಿ ಸೈನಿಕರ ಈ ಅಮಾನವೀಯ ಕೃತ್ಯಕ್ಕೆ ಹುತಾತ್ಮರಾದ ಮತ್ತೊಬ್ಬ ಯೋಧ ಪರಮ್‍ಜೀತ್ ಸಿಂಗ್ ಅವರ ಮೃತದೇಹವನ್ನು ಇಂದು ಪಂಜಾಬ್‍ನ ಸ್ವಗ್ರಾಮ ಟಾರ್ನ್ ಟರಾನ್‍ಗೆ ಕೊಂಡೊಯ್ಯಲಾಯ್ತು. ಆಕ್ರೋಶಗೊಂಡ ಪರಮ್‍ಜೀತ್ ಅವರ ಸಂಬಂಧಿಕರು, ನಾವು ಅವರ ಮುಖವನ್ನು ನೋಡುವವರೆಗೂ ದೇಹವನ್ನು ಅಂತ್ಯಕ್ರಿಯೆ ಮಾಡುವುದಿಲ್ಲ. ಯಾರ ದೇಹ ಇದು? ಬಾಕ್ಸ್‍ನೊಳಗೆ ಮುಚ್ಚಲಾಗಿದೆ ಎಂದು ರಾಷ್ಟ್ರಧ್ವಜವನ್ನು ಹೊದಿಸಿದ್ದ ಶವಪೆಟ್ಟಿಗೆಯನ್ನು ತೋರಿಸುತ್ತಾ ಹೇಳಿ ದುಃಖಿತರಾದ್ರು. ನಮಗೆ ದೇಹವನ್ನು ತೋರುಸುತ್ತಿಲ್ಲವಲ್ಲ ಯಾಕೆ? ಎಂದು ಪ್ರಶ್ನಿಸಿದ್ರು.

    ಸೋಮವಾರ ಬೆಳಿಗ್ಗೆ 8.30ರ ವೇಳೆಗೆ ಪೂಂಚ್ ಸೆಕ್ಟರ್‍ನ ಗಡಿ ನಿಯಂತ್ರಣಾ ರೇಖೆಯ ಬಳಿ ಭಾರತೀಯ ಯೋಧರು ಎರಡು ಪೋಸ್ಟ್‍ಗಳ ನಡುವೆ ಗಸ್ತು ತಿರುಗುತ್ತಿದ್ದ ವೇಳೆ ಅವರ ಮೇಲೆ ಪಾಕಿಸ್ತಾನಿಗಳು ಮಾರ್ಟರ್ ಬಾಂಬ್‍ಗಳಿಂದ ದಾಳಿ ನೆಡೆಸಿದ್ದರು. ಈ ವೇಳೆ ಇಬ್ಬರು ಯೋಧರು ರಕ್ಷಣೆಗಾಗಿ ಓಡಿದ್ರು. ಇನ್ನುಳಿದ ಇಬ್ಬರ ಮೇಲೆ ಪಾಕಿಸ್ತಾನಿಗಳು ದಾಳಿ ಮಾಡಿ ಶಿರಚ್ಛೇದನ ಮಾಡಿದ್ದರು.