Tag: pakistan

  • ಪಾಕ್ ಸೇನೆಯಿಂದ ಪೈಶಾಚಿಕ ಕೃತ್ಯ – ಇಬ್ಬರು ಭಾರತೀಯ ಯೋಧರ ಶಿರಚ್ಛೇದ

    ಪಾಕ್ ಸೇನೆಯಿಂದ ಪೈಶಾಚಿಕ ಕೃತ್ಯ – ಇಬ್ಬರು ಭಾರತೀಯ ಯೋಧರ ಶಿರಚ್ಛೇದ

    ನವದೆಹಲಿ: ಭಾರತೀಯ ಯೋಧರ ಸಹನೆ ಪರೀಕ್ಷಿಸಿ ಕಾಲ್ಕೆರದು ಪದೇ ಪದೇ ಕದನವಿರಾಮ ಉಲ್ಲಂಘಿಸುವ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿಸೆಪ್ಟೆಂಬರ್ 29, 2016ರಲ್ಲಿ `ಸರ್ಜಿಕಲ್ ಸ್ಟ್ರೈಕ್’ ಮಾಡಿದ್ರೂ ಪಾಕಿಸ್ತಾನಕ್ಕೆ ಬುದ್ಧಿ ಬಂದಿಲ್ಲ. ಸೋಮವಾರ ಬೆಳಗ್ಗೆ ಜಮ್ಮು ಕಾಶ್ಮೀರದ ಪೂಂಚ್ ಸೆಕ್ಟರ್‍ನಲ್ಲಿ ಗಡಿ ನಿಯಂತ್ರಣ ರೇಖೆ ದಾಟಿ ಭಾರತೀಯ ಸೇನೆಯ ಇಬ್ಬರು ಯೋಧರನ್ನು ಬರ್ಬರ, ಅಮಾನುಷವಾಗಿ ಕೊಂದಿದೆ.

    ಯೋಧರ ಶಿರಚ್ಛೇದನ ಮಾಡಿ ದೇಹವನ್ನು ತುಂಡರಿಸಿ ಪೈಶಾಚಿಕವಾಗಿ ನಡೆದುಕೊಂಡಿದೆ. ಮಧ್ಯಾಹ್ನ ಗಸ್ತಿನಲ್ಲಿ ಯೋಧರಿಗೆ ಕೃಷ್ಣಘಾಟ್ ಬಳಿ ಶಿರಚ್ಛೇದನವಾಗಿ ಬಿದ್ದಿದ್ದ ಸೇನಾ ಕಿರಿಯ ಕಮಾಂಡೆಂಟ್ ಪರಮ್‍ಜಿತ್ ಸಿಂಗ್ ಹಾಗೂ ಬಿಎಸ್‍ಎಫ್‍ನ ಹೆಡ್ ಕಾನ್ಸಟೇಬಲ್ ಪರಮ್ ಸಾಗರ್ ಎಂಬ ಇಬ್ಬರು ಯೋಧರ ಶವ ಪತ್ತೆಯಾಗಿದೆ.

    ಈ ಇಬ್ಬರು ನೆಲ ಬಾಂಬ್ ನಿಷ್ಕ್ರಿಯಗೊಳಿಸಲು ಎಲ್‍ಒಸಿಯಲ್ಲಿ ಪಹರೆ ನಡೆಸ್ತಿದ್ರು. ಇನ್ನು, ಪಾಕಿಸ್ತಾನದ ಕೃತ್ಯವನ್ನು ಅತ್ಯುಘ್ರವಾಗಿ ಖಂಡಿಸಿರೋ ಸೇನೆ, ಶೀಘ್ರದಲ್ಲೇ ತಕ್ಕ ಉತ್ತರ ಕೊಡೋದಾಗಿ ಎಚ್ಚರಿಕೆ ರವಾನಿಸಿದೆ.

    ಅಂದಹಾಗೆ, ನಿನ್ನೆ ತಾನೇ ಎಲ್‍ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಖಮರ್ ಭಜ್ವಾ ಭೇಟಿ ನೀಡಿ ತಮ್ಮ ಜಾಗವನ್ನು ಉಳಿಸಿಕೊಳ್ಳೋಣ. ನೀವು ಹೋರಾಡಿ ಅಂತಾ ಅವರ ಸೈನಿಕರಿಗೆ ಹುರಿದುಂಬಿಸಿದ್ರು. ಈ ಭೇಟಿಯ ಬೆನ್ನಲ್ಲೇ ಪಾಕ್ ಸೈನಿಕರು ನಮ್ಮ ಭಾರತೀಯ ಸೈನಿಕರ ಶಿರಚ್ಛೇದನ ಮಾಡಿದ್ದಾರೆ.

    ಘಟನೆ ಬಗ್ಗೆ ಪ್ರಧಾನಿ ಮೋದಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮಾಹಿತಿ ನೀಡಿದ್ದಾರೆ. ಪಾಕಿಸ್ಥಾನಕ್ಕೆ ತಿರುಗೇಟು ನೀಡಲು ಚಿಂತನೆ ನಡೆಸಿದ್ದಾರೆ. ಇನ್ನು, ಪಾಕಿಸ್ತಾನ ತನ್ನ ಅವಸಾನವನ್ನ ಆಹ್ವಾನಿಸಿಕೊಳ್ತಿದೆ ಅಂತ ರಾಜಕೀಯ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

  • ಭಾರತದ ನಿವೃತ್ತ ನೌಕಾ ಸೇನೆಯ ಅಧಿಕಾರಿಗೆ ಪಾಕ್‍ನಲ್ಲಿ ಗಲ್ಲು ಶಿಕ್ಷೆ

    ಭಾರತದ ನಿವೃತ್ತ ನೌಕಾ ಸೇನೆಯ ಅಧಿಕಾರಿಗೆ ಪಾಕ್‍ನಲ್ಲಿ ಗಲ್ಲು ಶಿಕ್ಷೆ

    ನವದೆಹಲಿ: ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ.

    ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿದೆ.

    ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    ಕೂಲಭೂಷಣ್ ಯಾದವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು.

    ಇದನ್ನೂ ಓದಿ: 13 ವರ್ಷದ ಹಿಂದೆ ಸೆಹ್ವಾಗ್ ಮುಲ್ತಾನ್ ಸುಲ್ತಾನ್ ಆದ ಕಥೆ ಓದಿ

  • ಪಾಕಿಸ್ತಾನದ ರಾಷ್ಟ್ರಗೀತೆ ಹಾಡಿದ ಕಾಶ್ಮೀರಿ ಕ್ರಿಕೆಟಿಗರು ಪೊಲೀಸರ ವಶಕ್ಕೆ

    ಪಾಕಿಸ್ತಾನದ ರಾಷ್ಟ್ರಗೀತೆ ಹಾಡಿದ ಕಾಶ್ಮೀರಿ ಕ್ರಿಕೆಟಿಗರು ಪೊಲೀಸರ ವಶಕ್ಕೆ

    ಶ್ರೀನಗರ: ಪಾಕಿಸ್ತಾನ ಕ್ರಿಕೆಟ್ ತಂಡದ ಸಮವಸ್ತ್ರ ಧರಿಸಿ ಪಾಕಿಸ್ತಾನ ರಾಷ್ಟ್ರಗೀತೆಯನ್ನು ಹಾಡಿದ್ದ ಕಾಶ್ಮೀರದ ಕ್ರಿಕೆಟಿಗರನ್ನು ಗಂದೇರ್‍ಬಾಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಕ್ರಿಕೆಟಿಗರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದ್ದು, ಅವರೀಗ ಪೊಲೀಸ್ ಠಾಣೆಯಲ್ಲಿ ಇದ್ದಾರೆ ಎಂದು ಕೇಂದ್ರ ಕಾಶ್ಮೀರ ಡಿಐಜಿ ಗುಲಾಮ್ ಹಸನ್ ಭಟ್ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

    ಪೊಲೀಸರು ಕ್ರಿಕೆಟಿಗರನ್ನು ವಶಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ಇಲ್ಲಿನ ಸ್ಥಳೀಯರು ಪೊಲೀಸ್ ಠಾಣೆ ಎದುರು ಜಮಾಯಿಸಿ ಯುವಕರನ್ನು ಬಿಡುಗಡೆಗೊಳೀಸುವಂತೆ ಒತ್ತಾಯಿಸಿದ್ದಾರೆಂದು ವರದಿಯಾಗಿದೆ.

    ಕಾಶ್ಮೀರದಲ್ಲಿ ನಡೆದ ಸ್ಥಳೀಯ ಕ್ರಿಕೆಟ್ ಪಂದ್ಯದ ಆರಂಭಕ್ಕೂ ಮುನ್ನ ಎರಡರಲ್ಲಿ ಒಂದು ತಂಡ ಪಾಕಿಸ್ತಾನ ಕ್ರಿಕೆಟ್ ತಂಡದ ಹಸಿರು ಬಣ್ಣದ ಸಮವಸ್ತ್ರ ಧರಿಸಿ ಪಾಕಿಸ್ತಾನ ರಾಷ್ಟ್ರಗೀತೆ ಪ್ರಸಾರವಾಗುತ್ತಿದ್ದ ವೇಳೆ ಎದೆ ಮೇಲೆ ಕೈ ಇರಿಸಿಕೊಂಡು ರಾಷ್ಟ್ರಗೀತೆಗೆ ಗೌರವ ಸೂಚಿಸಿದ ವೀಡಿಯೋ ಬುಧವಾರದಂದು ವೈರಲ್ ಆಗಿತ್ತು.

    ಪ್ರಧಾನಿ ಮೋದಿ ಏಪ್ರಿಲ್ 2 ರಂದು ಚೆನಾನಿ – ನಶ್ರಿ ರಸ್ತೆ ಸುರಂಗ ಮಾರ್ಗ ಉದ್ಘಾಟಿಸಲು ಕಾಶ್ಮೀರಕ್ಕೆ ಭೇಟಿ ನೀಡಿದ್ದ ದಿನದಂದೇ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

    https://www.youtube.com/watch?v=lW6nC77lzV4

  • ಪಾಕಿಸ್ತಾನದಲ್ಲಿರುವ ಪತ್ನಿಯನ್ನು ಕರೆತರಲು ಹುಬ್ಬಳ್ಳಿ  ಯುವಕನ ಪರದಾಟ

    ಪಾಕಿಸ್ತಾನದಲ್ಲಿರುವ ಪತ್ನಿಯನ್ನು ಕರೆತರಲು ಹುಬ್ಬಳ್ಳಿ ಯುವಕನ ಪರದಾಟ

    ಹುಬ್ಬಳ್ಳಿ: ಪಾಕಿಸ್ತಾನದ ಯುವತಿಯನ್ನು ಮದುವೆ ಆದ ಹುಬ್ಬಳ್ಳಿ ಯುವಕರೊಬ್ಬರು ತನ್ನ ಪತ್ನಿಯನ್ನು ಭಾರತಕ್ಕೆ ಕರೆತರಲು ಪರದಾಡುತ್ತಿದ್ದಾರೆ. ಹುಬ್ಬಳ್ಳಿಯ ನವನಗರ ಮೂಲದ ಡೇನಿಯಲ್ ಹೆನ್ರಿ ದೇವನೂರು ಎಂಬವರೇ ತನ್ನ ಪತ್ನಿಗಾಗಿ ಪರದಾಡುತ್ತಿರುವ ವ್ಯಕ್ತಿ.

    ಡೇನಿಯಲ್ 2016 ಜೂನ್ 25 ರಂದು ದೂರದ ಸಂಬಂಧಿಯಾದ ಪಾಕಿಸ್ತಾನ ಮೂಲದ ಸಿಲ್ವಿಯಾ ನೂರಿನ್ ಎಂಬ ಯುವತಿಯನ್ನು ಲಾಹೋರ್‍ನ ಪೆಂಟ್ ಕೊಸ್ಟಲ್ ಚರ್ಚ್‍ನಲ್ಲಿ ವಿವಾಹವಾಗಿದ್ದರು. ನಂತರ ಜುಲೈ 11 ರಂದು ಭಾರತಕ್ಕೆ ಹಿಂದಿರುಗಿ ಬಂದಿದ್ದರು.

    ಆದರೆ ಈಗ 9 ತಿಂಗಳಾದ್ರು ಕೂಡ ವೀಸಾ ಸಿಗದೇ ಪರದಾಡುತ್ತಿದ್ದಾರೆ. ತನ್ನ ಪತ್ನಿಯನ್ನು ಭಾರತಕ್ಕೆ ಕರೆ ತರಲು ಸತತ ಪ್ರಯತ್ನ ಮಾಡುತ್ತಿರುವ ಡೇನಿಯಲ್‍ಗೆ ಪಾಕಿಸ್ತಾನ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ತನ್ನ ಪತ್ನಿ ಭಾರತಕ್ಕೆ ಬರಬೇಕಾದ್ರೆ ಸ್ಪಾನ್ಸರ್‍ಶಿಪ್ ಸರ್ಟಿಫಿಕೇಟ್ ಪಡೆಯಬೇಕು. ಅದಕ್ಕೆ `ಎ’ ಗ್ರೇಡ್ ಪಾಕಿಸ್ತಾನದ ಅಧಿಕಾರಿ ಸಹಿ ಮಾಡಬೇಕು. ಅಂದಾಗ ಮಾತ್ರ ಭಾರತಕ್ಕೆ ಬರಲು ವಿಜಿಟರ್ ವೀಸಾ ಸಿಗಲಿದೆ. ಆದ್ರೆ ಪಾಕಿಸ್ತಾನದ ಯಾವೊಬ್ಬ ಅಧಿಕಾರಿಯೂ ಕೂಡ ಸ್ಪಾನ್ಸರ್‍ಶಿಪ್ ಸರ್ಟಿಫಿಕೆಟ್‍ಗೆ ಸಹಿ ಮಾಡಲು ಮುಂದೆ ಬರುತ್ತಿಲ್ಲವಾದ ಕಾರಣಡೇನಿಯಲ್ ಪತ್ನಿಗಾಗಿ ಪರಿತಪಿಸುವಂತಾಗಿದೆ.

    ಭಾರತ ಹಾಗೂ ಪಾಕಿಸ್ತಾನದ ರಾಜತಾಂತ್ರಿಕ ಸಂಬಂಧಗಳು ಸರಿ ಇಲ್ಲದ ಕಾರಣ ನೀಡಿ ಯಾವ ಅಧಿಕಾರಿಯೂ ಸಹಿ ಮಾಡುತ್ತಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ತನ್ನ ಸಂಗಾತಿಯ ಭೇಟಿಗಾಗಿ ಹೆಣಗಾಡುತ್ತಿರುವ ಡೆನಿಯಲ್ ಕೊನೆಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ನೆರವು ಕೋರಿ ಮನವಿ ಮಾಡಿದ್ದಾರೆ.

     

  • 13 ವರ್ಷದ ಹಿಂದೆ ಸೆಹ್ವಾಗ್ ಮುಲ್ತಾನ್ ಸುಲ್ತಾನ್ ಆದ ಕಥೆ ಓದಿ

    13 ವರ್ಷದ ಹಿಂದೆ ಸೆಹ್ವಾಗ್ ಮುಲ್ತಾನ್ ಸುಲ್ತಾನ್ ಆದ ಕಥೆ ಓದಿ

    ಬೆಂಗಳೂರು:  13 ವರ್ಷಗಳ ಹಿಂದೆ ಈ ಅವಧಿಯಲ್ಲಿ ಭಾರತದ ಟೆಸ್ಟ್ ಕ್ರಿಕೆಟ್‍ನಲ್ಲಿ ಯಾರು ನಿರ್ಮಿಸದ ಹೊಸ ದಾಖಲೆಯನ್ನು ಸೆಹ್ವಾಗ್ ಬರೆದಿದ್ದರು. ಮೊದಲ ಬಾರಿಗೆ ಕ್ರಿಕೆಟ್‍ನಲ್ಲಿ ಬದ್ಧ ವೈರಿ ಎಂದೇ ಪರಿಗಣಿಸಲಾಗಿರುವ ಪಾಕ್ ವಿರುದ್ಧ ತ್ರಿಶತಕ ಸಿಡಿಸಿ ಮುಲ್ತಾನಿನ ಸುಲ್ತಾನ ಎಂಬ ಗೌರವಕ್ಕೆ ವೀರೂ ಪಾತ್ರರಾಗಿದ್ದರು.

    ಮೊದಲ ಟೆಸ್ಟ್ ಪಂದ್ಯದಲ್ಲಿ ಸಿಕ್ಸರ್, ಬೌಂಡರಿಗಳನ್ನು ಸಿಡಿಸಿ ಪಾಕಿನ ಬೌಲರ್‍ಗಳನ್ನು ಬೆವರಿಳಿಸಿಬಿಟ್ಟಿದ್ದರು ಸೆಹ್ವಾಗ್. 531 ನಿಮಿಷಗಳ ಕಾಲ ಕ್ರಿಸ್‍ನಲ್ಲಿ ಸೆಹ್ವಾಗ್ ಎದುರಿಸಿದ್ದು 375 ಎಸೆತ. ಬಾರಿಸಿದ್ದು 39 ಬೌಂಡರಿ, 6 ಸಿಕ್ಸರ್, ಒಟ್ಟು ಹೊಡೆದದ್ದು 309 ರನ್.

    ಟಾಸ್ ಗೆದ್ದ ದ್ರಾವಿಡ್ ಬ್ಯಾಟಿಂಗ್ ಆರಿಸಿಕೊಂಡರು. ಬ್ಯಾಟಿಂಗ್ ಆರಂಭಿಸಿದ ಸೆಹ್ವಾಗ್ ಆರಂಭದಲ್ಲಿ ನಿಧನವಾಗಿ ಆಡಲು ಆರಂಭಿಸಿ ನಂತರ ಎಂದಿನ ಏಕದಿನ ಶೈಲಿಯಲ್ಲಿ ಬ್ಯಾಟ್ ಬೀಸಲು ಆರಂಭಿಸಿದರು. ಪರಿಣಾಮ ಮೊದಲ ವಿಕೆಟ್‍ಗೆ ಅಕಾಶ್ ಚೋಪ್ರಾ ಜೊತೆಗೂಡಿ 39.4 ಓವರ್‍ಗಳಲ್ಲಿ 160 ರನ್ ಬಂತು.

    ನಂತರ ಬಂದ ದ್ರಾವಿಡ್ 6ರನ್ ಗಳಿಸಿ ಬೇಗನೇ ಔಟಾದರೂ ಸಚಿನ್ ಬಂದ ಮೇಲೆ ಇಬ್ಬರ ಜುಗಲ್‍ಬಂದಿ ಜೋರಾಯಿತು. ಪಾಕ್ ಬೌಲರ್‍ಗಳ ಮೇಲೆ ಬೌಂಡರಿಗಳ ಮಳೆಯನ್ನೇ ಸುರಿಸಿದ ಸೆಹ್ವಾಗ್ 107 ಎಸೆತಗಳಲ್ಲಿ ಶತಕ ಸಿಡಿಸಿ, 222 ಎಸೆತಗಳಲ್ಲಿ 200 ರನ್ ಹೊಡೆದರು. ಸೆಹ್ವಾಗ್, ಸಚಿನ್ ಭರ್ಜರಿ ಆಟದಿಂದಾಗಿ ಮೊದಲ ದಿನದ ಅಂತ್ಯಕ್ಕೆ ಭಾರತದ ಸ್ಕೋರ್ 90 ಓವರ್‍ಗಳಲ್ಲಿ 2 ವಿಕೆಟ್ ನಷ್ಟಕ್ಕೆ 356 ರನ್. ಸೆಹ್ವಾಗ್ 228 ರನ್ ಗಳಿಸಿದ್ದರೆ, ಸಚಿನ್ 60 ರನ್ ಗಳಿಸಿ ಕ್ರೀಸ್‍ನಲ್ಲಿದ್ದರು.

    ದ್ವಿಶತಕ ಸಿಡಿಸಿದ ಸೆಹ್ವಾಗ್ ತ್ರಿಶತಕ ಸಿಡಿಸುತ್ತಾರಾ ಎನ್ನುವ ಪ್ರಶ್ನೆ ಎದ್ದಿತ್ತು. ಯಾಕೆಂದರೆ ಸೆಹ್ವಾಗ್ ಶತಕದ ಬಳಿಕ ಏಕದಿನ ಪಂದ್ಯದಂತೆ ಬ್ಯಾಟ್ ಬೀಸುತ್ತಿದ್ದರು. ಹೀಗಾಗಿ ತ್ರಿಶತಕ ಸಿಡಿಸುವುದು ಕಷ್ಟ ಎನ್ನುವ ಭಾವನೆ ಅಭಿಮಾನಿಗಳಲ್ಲಿ ಮೂಡಿತ್ತು. ಆದರೆ ಸೆಹ್ವಾಗ್ ಅಭಿಮಾನಿಗಳಿಗೆ ನಿರಾಸೆ ಮಾಡಲಿಲ್ಲ. ಮಾರ್ಚ್ 29 ರಂದು ಸ್ಪಿನ್ನರ್ ಮುಷ್ತಾಕ್ ಎಸೆದ ಎಸೆತವನ್ನು ಸಿಕ್ಸರ್‍ಗೆ ಅಟ್ಟುವ ಮೂಲಕ ಮೊದಲ ತ್ರಿಶತಕ ಸಿಡಿಸಿದರು. ಈ ಮೂಲಕ ಭಾರತದ ಟೆಸ್ಟ್ ಕ್ರಿಕೆಟ್‍ನಲ್ಲಿ ತ್ರಿಶತಕ ಸಿಡಿಸಿದ ಮೊದಲ ಆಟಗಾರ ಎನ್ನುವ ಹೆಗ್ಗಳಿಗೆ ಪಾತ್ರರಾದರು.

    ಅಂತಿಮವಾಗಿ 309 ರನ್‍ಗಳಿಸಿದ್ದಾಗ ಸಮಿ ಎಸೆತದಲ್ಲಿ ತೌಫಿಕ್ ಉಮರ್‍ಗೆ ಕ್ಯಾಚ್ ನೀಡಿ ಸೆಹ್ವಾಗ್ ಔಟಾದರು. 375 ಎಸೆತಗಳನ್ನು ಎದುರಿಸಿದ ಈ ಅಮೋಘ ಇನ್ನಿಂಗ್ಸ್ ನಲ್ಲಿ 39 ಬೌಂಡರಿ, 6 ಸಿಕ್ಸರ್ ಗಳು ಸಿಡಿಯಲ್ಪಟ್ಟಿತ್ತು. ಮೂರನೇ ವಿಕೆಟ್‍ಗೆ ಸೆಹ್ವಾಗ್ ಮತ್ತು ಸಚಿನ್ 83.5 ಓವರ್‍ಗಳಲ್ಲಿ 336 ರನ್‍ಗಳ ಜೊತೆಯಾಟವನ್ನು ಆಡುವ ಮೂಲಕ ಭಾರತದ ಇನ್ನಿಂಗ್ಸ್ 500 ರನ್‍ಗಳ ಗಡಿಯನ್ನು ದಾಟಿಸಿದ್ದರು.

    ಈ ಟೆಸ್ಟ್‍ನಲ್ಲಿ ಸಚಿನ್ ಔಟಾಗದೇ 194 ರನ್, ಯುವರಾಜ್ 59 ರನ್ ಹೊಡೆದರು. ಅಂತಿಮವಾಗಿ ಭಾರತ 161.5 ಓವರ್‍ಗಳಲ್ಲಿ 5 ವಿಕೆಟ್ ಕಳೆದುಕೊಂಡು 675 ರನ್ ಗಳಿಸಿದ್ದಾಗ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಭಾರತದ ಒಟ್ಟು 675 ರನ್‍ಗಳಲ್ಲಿ ಸೆಹ್ವಾಗ್ 509 ರನ್‍ಗಳವರೆಗೂ ಕ್ರೀಸ್‍ನಲ್ಲಿದ್ದು ವಿಶೇಷ.

    ನಂತರ ಬ್ಯಾಟ್ ಮಾಡಿದ ಪಾಕಿಸ್ತಾನ ಮೊದಲ ಇನ್ನಿಂಗ್ಸ್ ನಲ್ಲಿ 407 ರನ್‍ಗಳಿಗೆ ಆಲೌಟ್ ಆಗಿದ್ದರೆ, ಎರಡನೇ ಇನ್ನಿಂಗ್ಸ್ ನಲ್ಲಿ 206 ರನ್‍ಗಳಿಗೆ ಆಲೌಟ್ ಆಯ್ತು. ಪರಿಣಾಮ ಭಾರತ ಒಂದು ಇನ್ನಿಂಗ್ಸ್ ಮತ್ತು 52 ರನ್‍ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.

    5 ವರ್ಷಗಳ ಬಳಿಕ ಸರಣಿ: 1999ರ ಕಾರ್ಗಿಲ್ ಯುದ್ಧದ ಬಳಿಕ ಭಾರತ ಮತ್ತು ಪಾಕ್ ನಡುವೆ ಯಾವುದೇ ಸರಣಿ ನಡೆಯಲಿಲ್ಲ. ಆದರೆ 2004ರಲ್ಲಿ ಎರಡೂ ಕಡೆ ಮಾತುಕತೆಗಳು ಫಲಪ್ರದವಾಗಿ 5 ವರ್ಷಗಳ ಬಳಿಕ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಸರಣಿ ಆಡಲು ಬಂದಿಳಿತ್ತು. ಮೂರು ಟೆಸ್ಟ್ ಸರಣಿಯನ್ನು ಭಾರತ 2-1 ಅಂತರಗಳಿಂದ ಗೆದ್ದುಕೊಂಡಿತ್ತು.

    ಸೆಹ್ವಾಗ್ ಇನ್ನಿಂಗ್ಸ್ ಹೀಗಿತ್ತು:
    50 ರನ್ – 60 ಎಸೆತ, 9 ಬೌಂಡರಿ, 1 ಸಿಕ್ಸರ್
    100 ರನ್ – 107 ಎಸೆತ, 14 ಬೌಂಡರಿ, 4 ಸಿಕ್ಸರ್
    150 ರನ್ – 150 ಎಸೆತ, 20 ಬೌಂಡರಿ, 5 ಸಿಕ್ಸರ್
    200 ರನ್ – 222 ಎಸೆತ, 26 ಬೌಂಡರಿ, 5 ಸಿಕ್ಸರ್
    250 ರನ್ – 299 ಎಸೆತ, 32 ಬೌಂಡರಿ, 5 ಸಿಕ್ಸರ್
    300 ರನ್ – 364 ಎಸೆತ, 38 ಬೌಂಡರಿ, 6 ಸಿಕ್ಸರ್
    309 ರನ್ – 375 ಎಸೆತ, 39 ಬೌಂಡರಿ, 6 ಸಿಕ್ಸರ್

  • ಮತ್ತೆ ಭಾರತ, ಪಾಕ್ ಕ್ರಿಕೆಟ್ ಆರಂಭ: ದುಬೈನಲ್ಲಿ ಸರಣಿ?

    ಮತ್ತೆ ಭಾರತ, ಪಾಕ್ ಕ್ರಿಕೆಟ್ ಆರಂಭ: ದುಬೈನಲ್ಲಿ ಸರಣಿ?

    ಮುಂಬೈ: ಪಂಜಾಬ್‍ನ ಪಠಾಣ್‍ಕೋಟ್ ವಾಯುನೆಲೆ ಮೇಲೆ ದಾಳಿ, ಕಾಶ್ಮೀರ ಉರಿ ಸೇನಾ ಕಚೇರಿ ಮೇಲೆ ಉಗ್ರರ ದಾಳಿ ಆ ಬಳಿಕ ಸೇನೆಯ ಸರ್ಜಿಕಲ್ ಸ್ಟ್ರೈಕ್ ನಿಂದಾಗಿ ಹದೆಗೆಟ್ಟಿದ್ದ ಭಾರತ ಪಾಕಿಸ್ತಾನದ ಸಂಬಂಧ ಈಗ ಕ್ರಿಕೆಟ್ ಮೂಲಕ ಮತ್ತೆ ಆರಂಭವಾಗುವ ಸಾಧ್ಯತೆಯಿದೆ.

    ಬಿಸಿಸಿಐ ಕೇಂದ್ರ ಗೃಹ ಸಚಿವಾಲಯಕ್ಕೆ ಅನುಮತಿ ಕೋರಿ ಬರೆದ ಪತ್ರದಿಂದಾಗಿ ಹಳಸಿದ ಸಂಬಂಧ ಮತ್ತೆ ಆರಂಭಗೊಳ್ಳುತ್ತಾ ಎನ್ನುವ ಪ್ರಶ್ನೆ ಈಗ ಹುಟ್ಟಿಕೊಂಡಿದೆ.

    2014ರ ಫ್ಯೂಚರ್ ಟೂರ್ಸ್ ಆಂಡ್ ಪ್ರೋಗ್ರಾಂ(ಎಫ್‍ಟಿಪಿ) ಪ್ರಕಾರ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಸರಣಿ ನಡೆಯಬೇಕು. ಆದರೆ ಉಗ್ರರ ದಾಳಿ ಮತ್ತು ಗಡಿಯಲ್ಲಿನ ಅಪ್ರಚೋದಿತ ದಾಳಿಯಿಂದ ಭಾರತ ಸರ್ಕಾರ ಸರಣಿ ಆಡಲು ಬಿಸಿಸಿಐಗೆ ಅನುಮತಿ ನೀಡಿರಲಿಲ್ಲ. ಆದರೆ ಈಗ ದುಬೈನಲ್ಲಿ ಸರಣಿ ಆಡಲು ಬಿಸಿಸಿಐ ಉತ್ಸುಕವಾಗಿದ್ದು ಈ ಸಂಬಂಧ ಅನುಮತಿ ನೀಡುವಂತೆ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ.

    2016ರಲ್ಲಿ ಯುಎಇಯಲ್ಲಿ ಸರಣಿ ನಡೆಸಲು ಬಂದಿದ್ದ ಪ್ರಸ್ತಾಪವನ್ನು ಬಿಸಿಸಿಐ ತಿರಸ್ಕರಿಸಿತ್ತು. ಕಳೆದ ವರ್ಷ ಭಾರತ ಮತ್ತು ಪಾಕಿಸ್ತಾನ ಮಧ್ಯೆ ಕ್ರಿಕೆಟ್ ಸರಣಿ ನಡೆಸುವಂತೆ ಬಹಳಷ್ಟು ಮಾತುಕತೆ ನಡೆದಿದ್ದರೂ ಯಾವುದೇ ಫಲಪ್ರದವಾಗಿರಲಿಲ್ಲ.

    ಇದನ್ನೂ ಓದಿ: ಭಾರತದ ವಿರುದ್ಧ ಆಸೀಸ್ ಸೋತಿದ್ದೂ ಮಾತ್ರವಲ್ಲ, ಈಗ 3.25 ಕೋಟಿಯ ಬಹುಮಾನವೂ ಹೋಯ್ತು!

    “ಸೆಪ್ಟೆಂಬರ್ ನವೆಂಬರ್‍ನಲ್ಲಿ ಕ್ರಿಕೆಟ್ ಸರಣಿ ಆಡಲು ಬಿಸಿಸಿಐ ಮಂದಾಗಿದೆ. ಎರಡೂ ರಾಷ್ಟ್ರಗಳ ನಡುವೆ ಸಂಬಂಧ ಹದೆಗೆಟ್ಟ ಕಾರಣ ಕೇಂದ್ರ ಸರ್ಕಾರ ಅನುಮತಿ ನೀಡಿರಲಿಲ್ಲ. ಆದರೆ ಈ ಬಾರಿ ಸರ್ಕಾರ ಯಾವ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎನ್ನುವುದು ಗೊತ್ತಿಲ್ಲ. ಎಫ್‍ಟಿಪಿ ಅನ್ವಯ ಸರಣಿ ಆಡಲೇಬೇಕಿದೆ. ಹೀಗಾಗಿ ಪಾಕ್ ವಿರುದ್ಧ ದುಬೈಗೆ ಟೀಂ ಇಂಡಿಯಾವನ್ನು ಕಳುಹಿಸಲು ಬಿಸಿಸಿಐ ಮುಂದಾಗಿದೆ. ಸರ್ಕಾರದಿಂದ ಅನುಮತಿ ಸಿಗದೇ ಇದ್ದರೆ ಬಿಸಿಸಿಐ ಏನು ಮಾಡಲು ಸಾಧ್ಯವಿಲ್ಲ” ಎಂದು ಮೂಲಗಳು ಮಾಧ್ಯಮಕ್ಕೆ ತಿಳಿಸಿವೆ.

    ಭಾರತ ಪಾಕಿಸ್ತಾನ ನಡುವೆ 2017-08ರಲ್ಲಿ ಕೊನೆಯ ಟೆಸ್ಟ್ ಸರಣಿ ನಡೆದಿದ್ದರೆ, 2012-13ರಲ್ಲಿ ಕೊನೆಯ ಏಕದಿನ ಸರಣಿ ನಡೆದಿತ್ತು. ಎರಡೂ ತಂಡಗಳು 2016ರ ಮಾರ್ಚ್ ನಲ್ಲಿ ಕೊನೆಯ ಪಂದ್ಯವನ್ನು ಆಡಿತ್ತು. ಕೋಲ್ಕತ್ತಾದಲ್ಲಿ ನಡೆದ ಟಿ20 ವಿಶ್ವಕಪ್‍ನಲ್ಲಿ ಭಾರತ 6 ವಿಕೆಟ್‍ಗಳಿಂದ ಪಂದ್ಯವನ್ನು ಗೆದ್ದುಕೊಂಡಿತ್ತು.

    ಇದನ್ನೂ ಓದಿ:  ವಿಶ್ವದ ವೇಗದ ಕಾರಿನಲ್ಲಿ ದುಬೈ ಪೊಲೀಸರ ಪ್ಯಾಟ್ರೋಲಿಂಗ್!

  • ವೀಡಿಯೋ: ಸಿಂಹದ ಮೇಲೆ ಕುಳಿತು ವರನ ಮೆರವಣಿಗೆ!

    ವೀಡಿಯೋ: ಸಿಂಹದ ಮೇಲೆ ಕುಳಿತು ವರನ ಮೆರವಣಿಗೆ!

    ಇಸ್ಲಾಮಾಬಾದ್: ಕುದುರೆ ಮೇಲೆ, ಬೈಕ್‍ನಲ್ಲಿ, ದುಬಾರಿ ಕಾರಿನಲ್ಲಿ ಅಥವಾ ಪಲ್ಲಕ್ಕಿಯಲ್ಲಿ ಕುಳಿತು ವಧು/ವರ ಮದುವೆ ಮಂಟಪಕ್ಕೆ ಬರೋದನ್ನ ನೋಡಿದ್ದೀವಿ. ಆದ್ರೆ ಪಾಕಿಸ್ತಾನದಲ್ಲಿ ಕೋಟ್ಯಾಧಿಪತಿ ವ್ಯಕ್ತಿಯೊಬ್ಬರ ಮಗ ಸಿಂಹದ ಮೇಲೆ ಕುಳಿತು ಮೆರವಣಿಗೆ ಮೂಲಕ ಮದುವೆ ಮಂಟಪಕ್ಕೆ ಬಂದಿದ್ದಾರೆ.

    ಏನು ಸಿಂಹನಾ ಅಂತ ಅಚ್ಚರಿ ಪಡಬೇಡಿ. ವರ ಕುಳಿತಿದ್ದು ಸಿಂಹ ಇದ್ದ ಬೋನಿನ ಮೇಲಷ್ಟೆ. ಚಿನ್ನಾಭರಣಗಳನ್ನ ಮೈಮೇಲೆ ಧರಿಸಿ ವರ ಸಿಂಹವಿದ್ದ ಬೋನಿನ ಮೇಲೆ ಕುಳಿತು, ಸ್ನೇಹಿತರು ಹಾಗೂ ಸಂಬಂಧಿಕರು ಕುಣಿಯುತ್ತಾ, ನೋಟುಗಳ ಸುರಿಮಳೆಗೈಯ್ಯುತ್ತಾ ಅದ್ಧೂರಿ ಮೆರವಣಿಗೆ ಮೂಲಕ ಮಂಟಪ ತಲುಪಿದ್ದಾರೆ. ಈ ಮದುವೆಯ ಬಗ್ಗೆ ಪಾಕಿಸ್ತಾನದ ಮಾಧ್ಯಮಗಳಲ್ಲೂ ವರದಿಯಾಗಿದೆ.

    ವರ ತಾನು ಸಿಂಹದ ಮೇಲೆ ಕುಳಿತು ಮದುವೆ ಮಂಟಪಕ್ಕೆ ಬರಬೇಕು ಅಂತ ಆಸೆ ಪಟ್ಟಿದ್ದರಂತೆ. ಮಗನ ಆಸೆ ಈಡೇರಿಸಬೇಕು ಎಂದು ವರನ ತಂದೆ ಅಂದುಕೊಂಡಿದ್ದರು. ಆದ್ರೆ ಸಿಂಹದ ಮೇಲೆ ಕುಳಿತು ಬರುವುದು ಸಾಧ್ಯವಿಲ್ಲದ ಮಾತು ಎಂದು ಅರಿತು ಬೋನಿನೊಳಗೆ ಹಾಕಲಾದ ಸಿಂಹವನ್ನ ತರಿಸಿದ್ದಾರೆ. ನಂತರ ಬೋನಿನ ಮೇಲೆ ಚೇರ್ ಹಾಕಿಸಿ ವರನನ್ನು ಅದರ ಮೇಲೆ ಕುಳ್ಳಿರಿಸಿ ಮೆರವಣಿಗೆ ಮಾಡಿದ್ದಾರೆ. ಮದುವೆಗೆ 15 ಸಾವಿರಕ್ಕೂ ಹೆಚ್ಚು ಅತಿಥಿಗಳನ್ನ ಆಹ್ವಾನಿಸಲಾಗಿತ್ತು ಎಂದು ವರದಿಯಾಗಿದೆ.

  • ಪಾಕ್‍ನಲ್ಲಿ ಅತ್ತೆ ಮನೆಯವರ ಕಿರುಕುಳಕ್ಕೊಳಗಾದ ಭಾರತೀಯ ಮಹಿಳೆಗೆ ಸುಷ್ಮಾ ಸ್ವರಾಜ್ ನೆರವು

    ಪಾಕ್‍ನಲ್ಲಿ ಅತ್ತೆ ಮನೆಯವರ ಕಿರುಕುಳಕ್ಕೊಳಗಾದ ಭಾರತೀಯ ಮಹಿಳೆಗೆ ಸುಷ್ಮಾ ಸ್ವರಾಜ್ ನೆರವು

    ನವದೆಹಲಿ: ಪಾಕಿಸ್ತಾನದಲ್ಲಿರುವ ಭಾರತೀಯ ಮೂಲದ ಮಹಿಳೆಯೊಬ್ಬರು ಅತ್ತೆ ಮನೆಯವರ ಕಿರುಕುಳ ಅನುಭವಿಸುತ್ತಿದ್ದಾರೆ ಎಂಬ ವಿಷಯ ತಿಳಿದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮಹಿಳೆಯ ನೆರವಿಗೆ ನಿಂತಿದ್ದಾರೆ.

    ಮಹಿಳೆಯ ತಂದೆ ಯೂಟ್ಯೂಬ್ ವೀಡಿಯೋ ಮೂಲಕ ಪಾಕಿಸ್ತಾನದಲ್ಲಿರವ ತಮ್ಮ ಮಗಳಿಗೆ ಆಕೆಯ ಅತ್ತೆ ಮನೆಯವರು ಕಿರುಕುಳ ನೀಡುತ್ತಿರುವ ಬಗ್ಗೆ ತಿಳಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸುಷ್ಮಾ ಸ್ವರಾಜ್, ಪಾಕಿಸ್ತಾನದಲ್ಲಿರುವ ಮಹಿಳೆಯನ್ನು ಭಾರತೀಯ ರಾಯಭಾರ ಕಚೇರಿ ಭೇಟಿ ಮಾಡಿದೆ ಎಂದು ಹೇಳಿ ಅವರ ಸುರಕ್ಷತೆ ಮತ್ತು ಭಾರತಕ್ಕೆ ಹಿಂದಿರುಗುವ ಬಗ್ಗೆ ಭರವಸೆ ನೀಡಿದ್ದಾರೆ.

    ಮೊಹಮದಿ ಬೇಗಂ ಅನುಭವಿಸುತ್ತಿರುವ ಕಿರುಕುಳದ ಬಗ್ಗೆ ಆಕೆಯ ತಂದೆ ಮೊಹಮದ್ ಅಕ್ಬರ್ ಅವರಿಂದ ಯೂಟ್ಯೂಬ್ ವೀಡಿಯೋ ಬಂದಿರುವ ಬಗ್ಗೆ ಸುಷ್ಮಾ ಸ್ವರಾಜ್ ಟ್ವಿಟ್ಟರ್‍ನಲ್ಲಿ ತಿಳಿಸಿದ್ದಾರೆ. ಮೂಲತಃ ಹೈದರಾಬಾದ್‍ನವರಾದ ಮೊಹಮದಿ ಬೇಗಂ ಅವರ ಪಾಸ್‍ಪೋರ್ಟ್ ಅವಧಿ ಕಳೆದ ವರ್ಷವೇ ಮುಗಿದಿದ್ದು, ಭಾರತೀಯ ರಾಯಭಾರ ಕಚೇರಿಯವರಿಗೆ ಬೇಗಂ ಅವರ ಪಾಸ್‍ಪೋರ್ಟ್ ನವೀಕರಿಸಿ ಭಾರತಕ್ಕೆ ಮರಳಲು ನೆರವಾಗುವಂತೆ ಸುಷ್ಮಾ ಸ್ವರಾಜ್ ಸೂಚಿಸಿದ್ದಾರೆ.

    ಈ ನಡುವೆ ಭಾರತೀಯ ರಾಯಭಾರ ಕಚೇರಿಯವರು ಭೇಟಿಯಾದ ಬಳಿಕ ತನ್ನ ಗಂಡ ಮೊಹಮ್ಮದ್ ಯೂನಿಸ್ ತನ್ನನ್ನು ಹೊಡೆದು ಕೋಣೆಯಲ್ಲಿ ಕೂಡಿಹಾಕಿದ್ದಾರೆಂದು ಮೊಹಮದಿ ಬೇಗಂ ತನ್ನ ತಾಯಿ ಹಜಾರಾ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.

    ಈ ಬಗ್ಗೆ ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿರೋ ಹಜಾರಾ, ನನ್ನ ಮಗಳು ದೈಹಿಕ ಹಾಗೂ ಮಾನಸಿಕ ಕಿರುಕುಳದಿಂದ ಕುಗ್ಗಿ ಹೋಗಿದ್ದಾಳೆ. ಆಕೆಗೆ ಕೂಡಲೇ ವೈದ್ಯಕೀಯ ನೆರವಿನ ಅಗತ್ಯವಿದೆ. ಯೂನಿಸ್ ಹಾಗೂ ಬೇಗಂಗೆ 3 ಗಂಡುಮಕ್ಕಳು ಹಾಗೂ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಮಕ್ಕಳೂ ಕೂಡ ಬೇಗಂ ಜೊತೆಗೆ ಬಂದರೆ ಒಳ್ಳೆಯದು. ಆಕೆಯನ್ನು ಆದಷ್ಟು ಬೇಗ ಮನೆಗೆ ಕರೆದುಕೊಂಡು ಬರಬೇಕೆಂದು ಮನವಿ ಮಾಡಿದ್ದಾರೆ.

    ಮೊಹಮದಿ ಬೇಗಂ ಅವರ ತಂದೆ ಅಕ್ಬರ್ ಸೈಕಲ್ ಮೆಕಾನಿಕ್ ಆಗಿದ್ದು, ಜನವರಿಯಲ್ಲಿ ಸುಷ್ಮಾ ಸ್ವರಾಜ್ ಅವರಿಗೆ ಇ-ಮೇಲ್ ಮಾಡುವ ಮೂಲಕ ಮಗಳನ್ನು ಭಾರತಕ್ಕೆ ಕರೆತರಲು ಸಹಾಯ ಕೋರಿದ್ದರು.

    ಸುಳ್ಳು ಹೇಳಿ ಮದುವೆಯಾಗಿದ್ದ: ಮೊಹಮ್ಮದ್ ಯೂನಿಸ್ ತನ್ನ ರಾಷ್ಟ್ರೀಯತೆಯ ಬಗ್ಗೆ ಮುಚ್ಚಿಟ್ಟು, ತಾನು ಓಮನ್‍ನವನು ಎಂದು ಹೇಳಿ 1996ರಲ್ಲಿ ಮಗಳನ್ನ ಮದುವೆಯಾಗಿದ್ದ. ಏಜೆಂಟ್‍ವೊಬ್ಬರ ಮುಖಾಂತರ ಫೋನಿನಲ್ಲೇ ನಿಖಾ ಮಾಡಲಾಗಿತ್ತು. ನಂತರ ಬೇಗಂ ಮೆಕಾನಿಕ್ ಆಗಿದ್ದ ಯೂನಿಸ್‍ನನ್ನು ಮಸ್ಕಟ್‍ನಲ್ಲಿ ಹೋಗಿ ಸೇರಿದಳು. ಆದ್ರೆ 12 ವರ್ಷಗಳ ನಂತರ ಕೆಲಸ ಕಳೆದುಕೊಂಡ ಯೂನಿಸ್ ತಾನು ಪಾಕಿಸ್ತಾನದವನೆಂದು ಬಾಯ್ಬಿಟ್ಟಾಗ ಮಹಮದಿ ಬೇಗಂಗೆ ಶಾಕ್ ಆಗಿತ್ತು ಎಂದು ಅಕ್ಬರ್ ಹೇಳಿದ್ದಾರೆ.

    2012ರಲ್ಲಿ ಬೇಗಂ ಹೈದರಾಬಾದ್‍ಗೆ ಬಂದಿದ್ದಳು. ಮದುವೆಯಾದ 21 ವರ್ಷಗಳಲ್ಲಿ ಆಕೆ ಭಾರತಕ್ಕೆ ಭೇಟಿ ನೀಡಿದ್ದು ಇದೊಂದೇ ಸಲ ಎಂದು ಅಕ್ಬರ್ ಹೇಳಿದ್ದಾರೆ.

  • ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ 11ರ ಪಾಕ್ ಬಾಲಕಿಯಿಂದ ಮೋದಿಗೆ ಶುಭಾಶಯ!

    ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ 11ರ ಪಾಕ್ ಬಾಲಕಿಯಿಂದ ಮೋದಿಗೆ ಶುಭಾಶಯ!

    ಇಸ್ಲಾಮಾಬಾದ್: ಉತ್ತರಪ್ರದೇಶದಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿರೋದಕ್ಕೆ ಪಾಕಿಸ್ತಾನದ 11ರ ಬಾಲಕಿಯೊಬ್ಬಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭ ಕೋರಿದ್ದಾಳೆ.

    ಪಾಕಿಸ್ತಾನದ 11ರ ಹರೆಯದ ಅಖೀದತ್ ನವೀದ್ ಎಂಬಾಕೆ ಪತ್ರದ ಮೂಲಕ ಪ್ರಧಾನಿಗೆ ವಿಶ್ ಮಾಡಿದ್ದಾಳೆ. ಪಾಕಿಸ್ತಾನ ಮತ್ತು ಭಾರತದ ಮಧ್ಯೆ ಶಾಂತಿಯ ಅಗತ್ಯವಿದ್ದು, ಮೋದಿ ಅವರಿಂದ ಈ ಕೆಲಸ ಶೀಘ್ರವಾಗಿ ಆಗುತ್ತದೆ ಎಂದು ಹೇಳಿದ್ದಾಳೆ.

    ಪತ್ರದಲ್ಲೇನಿದೆ?: `ಜನರ ಮನಸ್ಸನ್ನು ಗೆಲ್ಲುವುದು ಅದ್ಭುತವಾದ ಕೆಲಸ ಎಂದು ನನ್ನ ತಂದೆ ಹೇಳುತ್ತಿದ್ದರು. ಅಂತೆಯೇ ನೀವು ಈಗಾಗಲೇ ಭಾರತೀಯರ ಮನ ಗೆದ್ದಿದ್ದೀರಿ. ಹೀಗಾಗಿ ನೀವು ಉತ್ತರಪ್ರದೇಶದಲ್ಲಿ ಭರ್ಜರಿ ಜಯ ಗಳಿಸಿದ್ದೀರಿ. ಅಂತೆಯೇ ಮತ್ತಷ್ಟು ಭಾರತೀಯರು ಹಾಗೂ ಪಾಕಿಸ್ತಾನ ಜನತೆಯ ಹೃದಯಗಳನ್ನು ಗೆಲ್ಲಬೇಕಾದರೆ, ಉಭಯ ರಾಷ್ಟ್ರಗಳ ನಡುವೆ ಸ್ನೇಹ ಮತ್ತು ಶಾಂತಿಯನ್ನು ಕಾಪಾಡಬೇಕು. ಈ ಎರಡೂ ರಾಷ್ಟ್ರಗಳ ನಡುವೆ ಉತ್ತಮ ಸಂಬಂಧದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿಯ ಸೇತುವೆಯನ್ನು ನಿರ್ಮಾಣ ಮಾಡಿ. ನಾವು ಬುಲೆಟ್‍ಗಳನ್ನು ಖರೀದಿ ಮಾಡುವ ಬದಲಾಗಿ ಪುಸ್ತಕಗಳನ್ನು ಖರೀದಿ ಮಾಡಲು ನಿರ್ಧರಿಸೋಣ. ಪಿಸ್ತೂಲ್‍ಗಳನ್ನು ಖರೀದಿ ಮಾಡೋ ಬದಲು ಬಡವರಿಗಾಗಿ ಔಷಧಿಗಳನ್ನು ಖರೀದಿ ಮಾಡೋಣವೆಂದು ನಿರ್ಧಾರ ಕೈಗೊಳ್ಳೋಣ ಅಂತಾ ಅಖೀದತ್ ಪ್ರಧಾನಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾಳೆ.

    ಪತ್ರದ ಕೊನೆಯಲ್ಲಿ ಶಾಂತಿ ಮತ್ತು ಸಂಘರ್ಷ ಯಾವುದು ಬೇಕು ಎಂಬ ಆಯ್ಕೆ ಎರಡೂ ರಾಷ್ಟ್ರಗಳ ಕೈಯಲ್ಲಿದೆ ಎಂದು ಹೇಳಿದ್ದು, ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಪ್ರಧಾನಿಗೆ ಶುಭಾಶಯ ತಿಳಿಸಿದ್ದಾಳೆ.

     

  • ಭಾರತ-ಪಾಕ್ ಗಡಿಯಲ್ಲಿ ಅತ್ಯಂತ ಎತ್ತರದ ತ್ರಿವರ್ಣಧ್ವಜ ಹಾರಿಸಿದ ಭಾರತ- ಪಾಕ್‍ಗೆ ಈಗ ಭಯವೇನು ಗೊತ್ತಾ?

    ಭಾರತ-ಪಾಕ್ ಗಡಿಯಲ್ಲಿ ಅತ್ಯಂತ ಎತ್ತರದ ತ್ರಿವರ್ಣಧ್ವಜ ಹಾರಿಸಿದ ಭಾರತ- ಪಾಕ್‍ಗೆ ಈಗ ಭಯವೇನು ಗೊತ್ತಾ?

    ನವದೆಹಲಿ: ಭಾರತ ಪಾಕಿಸ್ತಾನ ಗಡಿಯಲ್ಲಿರುವ ಅಮೃತಸರ ಬಳಿಯ ಅಟ್ಟಾರಿಯಲ್ಲಿ ಭಾನುವಾರದಂದು ಭಾರತ ಅತ್ಯಂತ ಎತ್ತರದ ತ್ರಿವರ್ಣ ಧ್ವಜವನ್ನ ಹಾರಿಸಿದೆ.

    120 ಅಡಿ ಉದ್ದ, 80 ಅಡಿ ಅಗಲವಿರುವ ಧ್ವಜವನ್ನ 360 ಅಡಿ ಉದ್ದದ ಸ್ತಂಭದ ಮೇಲೆ ಹಾರಿಸಲಾಗಿದೆ. ಈ ಧ್ವಜ ಎಷ್ಟು ಎತ್ತರವಿದೆ ಎಂದರೆ ಇದನ್ನು ಸುಮಾರು 30 ಕಿ.ಮೀ ದೂರದಲ್ಲಿರುವ ಲಾಹೋರ್‍ನಲ್ಲಿರುವ ಪ್ರಸಿದ್ಧ ಅನಾರ್ಕಲಿ ಬಜಾರ್‍ನಿಂದಲೂ ಕಾಣಬಹುದಾಗಿದೆ. 100 ಕೆಜಿ ತೂಕವಿರುವ ಈ ಧ್ವಜವನ್ನ ಎತ್ತರದ ಪ್ರದೇಶದಲ್ಲಿ ಜೋರಾಗಿ ಬೀಸೋ ಗಾಳಿಯನ್ನು ತಡೆದುಕೊಳ್ಳಲು ಸಹಾಯವಾಗುವಂತೆ ಪ್ಯಾರಾಚೂಟ್ ಮೆಟೀರಿಯಲ್‍ನಿಂದ ಮಾಡಲಾಗಿದೆ.

    360 ಅಡಿ ಉದ್ದವಿರುವ ಸ್ತಂಭ 55 ಟನ್ ತೂಕವಿದ್ದು ದೆಹಲಿಯ ಕುತುಬ್ ಮಿನಾರ್‍ಗಿಂತ ಎತ್ತರವಿದೆ. ಧ್ವಜ ಸ್ತಂಭದ ಸುತ್ತ ಎಲ್‍ಇಡಿ ಫ್ಲಡ್ ಲೈಟ್‍ಗಳನ್ನ ಹಾಕಲಾಗಿದ್ದು, ರಾತ್ರಿ ಹೊತ್ತಿನಲ್ಲೂ ಮೈಲಿ ದೂರದಲ್ಲಿದ್ರೂ ಧ್ವಜ ಕಾಣುವಂತೆ ಮಾಡಲಾಗಿದೆ.

    ಈ ಯೋಜನೆಗೆ ಸುಮಾರು 4 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಅಮೃತಸರ ಇಂಪ್ರೂವ್‍ಮೆಂಟ್ ಟ್ರಸ್ಟ್ ಇದನ್ನು ಪೂರ್ಣಗೊಳಿಸಿದೆ. ಧ್ವಜದ ದೈನಂದಿನ ನಿರ್ವಹಣೆಯನ್ನು ಬಿಎಸ್‍ಎಫ್‍ನ ಆದೇಶದಂತೆ ಮಾಡಲಾಗುತ್ತದೆ ಎಂದು ವರದಿಯಾಗಿದೆ. ಅತೀ ಎತ್ತರದ ಈ ತ್ರಿವರ್ಣ ಧ್ವಜ ಈಗ ಅಟ್ಟಾರಿ ವಾಗಾ ಗಡಿಯಲ್ಲಿ ಪ್ರತಿದಿನ ಸಂಜೆ ಬೀಟಿಂಗ್ ರಿಟ್ರೀಟ್ ವೀಕ್ಷಿಸಲು ಬರುವ ಸಾವಿರಾರು ಜನರ ಆಕರ್ಷಣೆಯ ಕೇಂದ್ರಬಿಂದುವಾಗಿದೆ.

    ಪಾಕಿಸ್ತಾನದ ವಿರೋಧ: ಇದೇ ವೇಳೆ ಗಡಿ ಭಾಗದಲ್ಲಿ ಎತ್ತರದ ಧ್ವಜ ಅಳವಡಿಸಿರುವುದಕ್ಕೆ ಪಾಕಿಸ್ತಾನ ವಿರೋಧ ವ್ಯಕ್ತಪಡಿಸಿದೆ. ಭಾರತ ಈ ಧ್ವಜವನ್ನು ಗಡಿ ಭಾಗದಲ್ಲಿ ಗೂಢಾಚಾರಿಕೆ ಮಾಡಲು ಬಳಸುತ್ತದೆ ಎಂದು ಪಾಕಿಸ್ತಾನ ಹೆದರಿದೆ.

    ಈ ಹೇಳಿಕೆಯನ್ನು ಭಾರತ ತಳ್ಳಿಹಾಕಿದ್ದು, ಧ್ವಜಸ್ತಂಭವನ್ನು ಝೀರೋ ಲೈನ್‍ಗಿಂತ 200 ಮೀಟರ್ ಒಳಗೆ ಅಳವಡಿಸಲಾಗಿದೆ. ಧ್ವಜ ನಿಂತಿರುವುದು ಭಾರತದ ಮಣ್ಣಿನಲ್ಲಿ. ದೇಶವೊಂದು ತನ್ನ ನೆಲದಲ್ಲಿ ಧ್ವಜ ಹಾರಿಸುವುದನ್ನು ಯಾವುದೇ ಕಾನೂನಾಗಲೀ ಅಥವಾ ಅಂತರಾಷ್ಟ್ರೀಯ ಕಟ್ಟುಪಾಡುಗಳಾಗಲೀ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ.