Tag: Pakistani Nationals

  • ಕಾಶ್ಮೀರದ ಹಲವೆಡೆ ಭದ್ರತಾ ಸಿಬ್ಬಂದಿ ಭರ್ಜರಿ ಕಾರ್ಯಾಚರಣೆ – ಇದುವರೆಗೆ 175ಕ್ಕೂ ಹೆಚ್ಚು ಮಂದಿ ವಶಕ್ಕೆ

    ಕಾಶ್ಮೀರದ ಹಲವೆಡೆ ಭದ್ರತಾ ಸಿಬ್ಬಂದಿ ಭರ್ಜರಿ ಕಾರ್ಯಾಚರಣೆ – ಇದುವರೆಗೆ 175ಕ್ಕೂ ಹೆಚ್ಚು ಮಂದಿ ವಶಕ್ಕೆ

    – ಉಗ್ರರಿಗೆ ಸ್ಥಳೀಯ ಮಟ್ಟದಲ್ಲಿ ಸಹಾಯ ಮಾಡುತ್ತಿದ್ದ ಹಿನ್ನೆಲೆ ವಶಕ್ಕೆ
    – 24 ಗಂಟೆಯಲ್ಲಿ ಐವರು ಉಗ್ರರ ಮನೆ ಧ್ವಂಸ

    ಶ್ರೀನಗರ: ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನೆತ್ತರು ಹರಿಸಿದ್ದ ಉಗ್ರರ ವಿರುದ್ಧ ಭಾರತೀಯ ಸೇನೆಯ (Indian Army) ಕಾರ್ಯಾಚರಣೆ ಶುರುವಾಗಿದೆ. ಕುಲ್ಗಾಮ್ ಜಿಲ್ಲೆಯ ಮುತಲ್ಹಾಮಾ ಗ್ರಾಮದಲ್ಲಿ ಉಗ್ರ ಝಾಕೀರ್ ಅಹ್ಮದ್ ಗಣಿ, ಶೋಪಿಯಾನ್‌ನ ಚೋಟಿಪೋರಾ ಗ್ರಾಮದಲ್ಲಿ ಎಲ್‌ಇಟಿ ಕಮಾಂಡರ್ ಶಾಹಿದ್ ಅಹ್ಮದ್ ಕುಟ್ಟೆ ಉಗ್ರನ ಮನೆಯನ್ನು ನೆಲಸಮಗೊಳಿಸಲಾಗಿದೆ. ಪುಲ್ವಾಮಾದ ಮರ‍್ರಾನ್ ಪ್ರದೇಶದಲ್ಲಿ ಅಹ್ಸಾನ್ ಉಲ್ ಹಕ್ ಮನೆ ಸ್ಫೋಟಿಸಿ ನಿನ್ನೆಯಷ್ಟೇ ನೆಲಸಮ ಮಾಡಲಾಗಿತ್ತು.

    ಇನ್ನೂ ಉಗ್ರರಿಗೆ ಹಣಕಾಸು ಸಹಾಯ ಮಾಡಿರುವ ಶಂಕೆಯಲ್ಲಿ ಅನಂತನಾಗ್ (Anantnag) ಜಿಲ್ಲೆಯಲ್ಲಿ 175 ಮಂದಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದೇ ವೇಳೆ ಕುಪ್ವಾರದಲ್ಲಿ ಕೂಂಬಿಂಗ್ ವೇಳೆ 8 ಎಕೆ 47 ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಲಂಡನ್‌ನಲ್ಲಿ ಭಾರತೀಯರ ಪ್ರತಿಭಟನೆ ವೇಳೆ ಕತ್ತು ಕೊಯ್ಯುವ ಸನ್ನೆ ಮಾಡಿದ ಪಾಕ್ ಅಧಿಕಾರಿ

    ಇನ್ನೂ ಪಾಕಿಸ್ತಾನ ಪ್ರಜೆಗಳು ದೇಶ ತೊರೆಯಲು ಕೇಂದ್ರ ಸರ್ಕಾರ 48 ಗಂಟೆ ಗಡುವು ನೀಡಿತ್ತು. ಈ ಬೆನ್ನಲ್ಲೇ ಭಾರತಕ್ಕೆ ಭೇಟಿ ನೀಡಿದ ಒಟ್ಟು 191 ಪಾಕಿಸ್ತಾನಿ ಪ್ರಜೆಗಳು ಪಂಜಾಬ್‌ನ ಅಮೃತಸರದ ಅಟ್ಟಾರಿ-ವಾಘಾ ಭೂಮಾರ್ಗದ ಮೂಲಕ ವಾಪಸ್ ಮರಳಿದ್ದಾರೆ. ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ 287 ಭಾರತೀಯ ಪ್ರಜೆಗಳು ಸಹ ಹಿಂತಿರುಗಿದ್ದಾರೆ ಎಂದು ಗೃಹ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕದಲ್ಲಿರುವ 98 ಜನ ಪಾಕಿಸ್ತಾನ ಪ್ರಜೆಗಳಿಗೂ ದೇಶ ತೊರೆಯುವಂತೆ ಸೂಚಿಸಲಾಗಿದೆ.

    ಈ ಮಧ್ಯೆ, ವಾಘಾ ಗಡಿ ಬಂದ್ ಆದ ಕಾರಣ ಪಾಕ್ ವಧು-ರಾಜಸ್ಥಾನದ ವರ ಮದುವೆ ಅತಂತ್ರಗೊಂಡಿದೆ. ಈ ಮಧ್ಯೆ, ಉಗ್ರರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿವೆ. ಇದನ್ನೂ ಓದಿ: ಪಾಕಿಸ್ತಾನದ ಲಾಹೋರ್‌ ಏರ್‌ಪೋರ್ಟ್‌ನಲ್ಲಿ ಭಾರೀ ಅಗ್ನಿ ದುರಂತ – ರನ್‌ವೇ ಬಂದ್‌, ವಿಮಾನಗಳ ಹಾರಾಟ ಸ್ಥಗಿತ

  • ಉತ್ತರ ಪ್ರದೇಶದಲ್ಲಿ ಸುಮಾರು 1,200 ಪಾಕಿಸ್ತಾನಿ ಪ್ರಜೆಗಳು ಪತ್ತೆ – ಗಡೀಪಾರು ಪಕ್ರಿಯೆ ಶುರು

    ಉತ್ತರ ಪ್ರದೇಶದಲ್ಲಿ ಸುಮಾರು 1,200 ಪಾಕಿಸ್ತಾನಿ ಪ್ರಜೆಗಳು ಪತ್ತೆ – ಗಡೀಪಾರು ಪಕ್ರಿಯೆ ಶುರು

    ಲಕ್ನೋ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ‌ ಉಗ್ರರ ದಾಳಿಯ (Pahalgam Terror Attack) ಬಳಿಕ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧದ ಕ್ರಮಗಳನ್ನು ಹೆಚ್ಚಿಸಿದೆ. ಹಲವು ಬಲವಾದ ಕ್ರಮಗಳ ಭಾಗವಾಗಿ ಪಾಕಿಸ್ತಾನಿ ಪ್ರಜೆಗಳಿಗೆ ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ. ಹಾಗಾಗಿ ಪಾಕ್‌ ಪ್ರಜೆಗಳು ವಾಘಾ ಗಡಿಯ (Wagah Border) ಮೂಲಕ ದೇಶ ತೊರೆಯಲು ಪ್ರಾರಂಭಿಸಿದ್ದಾರೆ.

    ಈ ನಡುವೆ ರಾಜ್ಯ ಸರ್ಕಾಗಳು ಪಾಕ್‌ ಪ್ರಜೆಗಳನ್ನು (Pakistani Nationals) ಪತ್ತೆಹಚ್ಚಿ ಗಡೀಪಾರುವ ಕೆಲಸ ಮಾಡುತ್ತಿವೆ. ಈ ಕಾರ್ಯಾಚರಣೆ ಉತ್ತರ ಪ್ರದೇಶವೊಂದರಲ್ಲೇ ಸುಮಾರು 1000 ದಿಂದ 1,200 ಪಾಕ್‌ ಪ್ರಜೆಗಳು ಪತ್ತೆಯಾಗಿದ್ದಾರೆಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಪಹಲ್ಗಾಮ್‌ನಲ್ಲೊಬ್ಬ ಸೂಪರ್‌ ಹಿರೋ.. ಬಿಜೆಪಿ ಕುಟುಂಬ ಕಾಪಾಡಿದ ಕಾಶ್ಮೀರಿ ಮುಸ್ಲಿಂ!

    ಉತ್ತರ ಪ್ರದೇಶ ಹಿರಿಯ ಪೊಲೀಸ್‌ ಅಧಿಕಾರಿಗಳ ಪ್ರಕಾರ, ರಾಜ್ಯದಲ್ಲಿ 1,000 ರಿಂದ 1,200 ಪಾಕಿಸ್ತಾನಿ ಪ್ರಜೆಗಳು ವಾಸಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಅಧಿಕೃತ ಗಡೀಪಾರು ಆದೇಶ ಇನ್ನೂ ಬಂದಿಲ್ಲವಾದರೂ, ನಿರ್ದೇಶನ ಹೊರಡಿಸಿದ ತಕ್ಷಣ ವಾಪಸಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ ರಾಜ್ಯದಲ್ಲಿರುವ ಪಾಕಿಸ್ತಾನಿಯರನ್ನ ಗುರುತಿಸುವ ಪ್ರಕ್ರಿಯೆ ಶುರುವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಂದೂಗಳ ನರಮೇಧ ನಡೆಸಿದ ಉಗ್ರರಿಗೆ ತಕ್ಕ ಶಿಕ್ಷೆ – ಇಬ್ಬರು ಭಯೋತ್ಪಾದಕರ ಮನೆಗಳು ಬ್ಲಾಸ್ಟ್!

    ಅಮಿತ್ ಶಾ ಬಿಗ್‌ ವಾರ್ನಿಂಗ್‌:
    ಉಗ್ರರ ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಯಾವೊಬ್ಬ ಪಾಕಿಸ್ತಾನಿ ಪ್ರಜೆಯೂ ಕೇಂದ್ರ ಸರ್ಕಾರ ನೀಡಿರುವ ಗಡುವನ್ನು ಮೀರಿ ದೇಶದಲ್ಲಿ ಉಳಿಯದಂತೆ ನೋಡಿಕೊಳ್ಳಬೇಕೆಂದು ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದ್ದಾರೆ. ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಈ ಬಗ್ಗೆ ಅಮಿತ್ ಶಾ ಮಾತನಾಡಿದ್ದಾರೆ. ಎಲ್ಲಾ ರಾಜ್ಯಗಳು ತಮ್ಮ ವ್ಯಾಪ್ತಿಯಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಪತ್ತೆಹಚ್ಚಿ ದೇಶದಿಂದ ವಾಪಸ್ ಕಳುಹಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಗ್ರರ ದಾಳಿ ನಡೆದ ಪಹಲ್ಗಾಮ್‌ನಲ್ಲಿ ನಿಮ್ಮ ʻPublic TVʼ; ಬೈಸರನ್ ವ್ಯಾಲಿಯಿಂದ ಕನ್ನಡದ ಏಕೈಕ ಚಾನಲ್ ಪ್ರತ್ಯಕ್ಷ ವರದಿ..!