Tag: Pakoda

  • ಉಳಿದ ಅನ್ನದಲ್ಲಿ ಮಾಡಿ ಬಿಸಿ ಬಿಸಿ ಪಕೋಡ

    ಉಳಿದ ಅನ್ನದಲ್ಲಿ ಮಾಡಿ ಬಿಸಿ ಬಿಸಿ ಪಕೋಡ

    ನ್ನ ಉಳಿದಿದೆ ಏನು ಮಾಡುವುದು ಅಂತ ಯೋಚನೆ ಮಾಡ್ತಿದ್ದೀರಾ? ಹಾಗಾದ್ರೆ ನಾವು ಇಂದು ಉಳಿದ ಅನ್ನದಲ್ಲಿ ಬಿಸಿ ಬಿಸಿ ಹಾಗೂ ರುಚಿಕರ ಪಕೋಡ ಮಾಡುವ ವಿಧಾನವನ್ನ ಹೇಳಿಕೊಡ್ತೇವೆ. ಕಡಲೆ ಹಿಟ್ಟಿನಿಂದ ಮಾಡುವ ಈರುಳ್ಳಿ ಪಕೋಡವನ್ನು ತಿಂದಿದ್ದೇವೆ. ಆದರೆ ಇಂದು ಮಾಡುತ್ತಿರುವ ಅನ್ನದ ಪಕೋಡ (Rice Pakoda) ಗರಂ ಗರಂ ಎಂದು ಸಖತ್ ರುಚಿಯಾಗಿರುತ್ತದೆ.

    ಬೇಕಾಗುವ ಸಾಮಗ್ರಿಗಳು:
    * ಅನ್ನ – 3 ಕಪ್,
    * ಕಡಲೆಹಿಟ್ಟು – 4 ಚಮಚ
    * ಈರುಳ್ಳಿ – 2
    * ಹಸಿಮೆಣಸು – 2
    * ಕೊತ್ತಂಬರಿ ಸೊಪ್ಪು- ಸ್ವಲ್ಪ
    * ಚಾಟ್ ಮಸಾಲ- 1 ಚಮಚ,
    * ರುಚಿಗೆ ತಕ್ಕಷ್ಟು ಉಪ್ಪು
    * ಶುಂಠಿ 1 ಇಂಚು


    ಮಾಡುವ ವಿಧಾನ:

    * ಪಾತ್ರೆಯೊಂದಕ್ಕೆ ಬೇಯಿಸಿದ ಅನ್ನ, ಹೆಚ್ಚಿದ ಈರುಳ್ಳಿ, ಕೊತ್ತಂಬರಿ ಸೊಪ್ಪು, ಹಸಿಮೆಣಸು, ಜಜ್ಜಿದ ಶುಂಠಿ, ಚಾಟ್ ಮಸಾಲ, ಉಪ್ಪು ಹಾಗೂ ಕಡಲೆಹಿಟ್ಟು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು.

    * ಅಗತ್ಯವಿರುವಷ್ಟು ನೀರು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ, ಪಕೋಡ ಹದಕ್ಕೆ ಕಲೆಸಿಕೊಳ್ಳಿ. ಇದನ್ನೂ ಓದಿ:  ಅಲಸಂಡೆ ಕಾಳಿನ ಸಾರು ಅನ್ನದ ಜೊತೆಗೆ ಸೂಪರ್

    * ಕಾಯಿಸಿದ ಎಣ್ಣೆಗೆ ಹಿಟ್ಟನ್ನು ಉಂಡೆ ಮಾಡಿ ಒಂದೊಂದಾಗಿ ಬಿಡಿ. ಅದನ್ನು ಎರಡೂ ಕಡೆ ಚೆನ್ನಾಗಿ ಕರಿಯಿರಿ. ಸಂಜೆ ಹೊತ್ತಿಗೆ ತಿನ್ನಲು ಬಿಸಿಯಾದ ಅನ್ನದ ಪಕೋಡ ಸವಿಯಲು ಸಿದ್ಧವಾಗುತ್ತದೆ.

  • ರಸ್ತೆ ಬದಿ ಜನರಿಗೆ ಪಕೋಡ ಹಂಚಿದ ಮಮತಾ ಬ್ಯಾನರ್ಜಿ

    ರಸ್ತೆ ಬದಿ ಜನರಿಗೆ ಪಕೋಡ ಹಂಚಿದ ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ಜಾರ್‌ಗ್ರಾಮ್‌ನಲ್ಲಿ (Jhargram) ರಸ್ತೆ ಬದಿಯ ಟೀ ಸ್ಟಾಲ್‍ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ (Bengal Chief Minister) ಮಮತಾ ಬ್ಯಾನರ್ಜಿ (Mamata Banerjee) ಅವರು ಜನರಿಗೆ ಪಕೋಡ ಹಂಚಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಮಮತಾ ಬ್ಯಾನರ್ಜಿ ಅವರ ಸುತ್ತಾ ಬೆಂಗಾವಲು ಪಡೆ ಸುತ್ತುವರಿದಿದ್ದು, ಗ್ರಾಹಕರಿಗೆ ಸಣ್ಣ ನ್ಯೂಸ್ ಪೇಪರ್ ತುಂಡಿನಲ್ಲಿ ಪಕೋಡವನ್ನು ಸುತ್ತಿಕೊಡುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಅಲ್ಲದೇ ಎಲ್ಲರಿಗೂ ಪಕೋಡ ಸಿಕ್ಕಿದ್ಯಾ ಎಂದು ಹೇಳುತ್ತಿರುವುದನ್ನು ಕೇಳಿಸಿಕೊಳ್ಳಬಹುದಾಗಿದೆ. ಮಮತಾ ಬ್ಯಾನರ್ಜಿ ಅವರು ಬುಡಕಟ್ಟು ಜನಾಂಗದ ಕಾರ್ಯಕ್ರಮಕ್ಕಾಗಿ ಜಾರ್‍ಗ್ರಾಮ್‍ಗೆ ಆಗಮಿದ್ದರು.  ಇದನ್ನೂ ಓದಿ: ಬೆಂಗ್ಳೂರು ಬಳಿ ಟಾಟಾ ಐಫೋನ್ ಉತ್ಪಾದನಾ ಘಟಕ – 60 ಸಾವಿರ ಮಂದಿಗೆ ಉದ್ಯೋಗ

    ಮಮತಾ ಬ್ಯಾನರ್ಜಿ ಅವರು, ಬೀದಿಬದಿಯಲ್ಲಿ ತಿಂಡಿಗಳನ್ನು ಮಾರಾಟ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಮುನ್ನ ವರ್ಷದ ಆರಂಭದಲ್ಲಿ ಡಾರ್ಜಿಲಿಂಗ್‍ನ ಒಂದು ಸಣ್ಣ ಸ್ಟಾಲ್‍ವೊಂದರಲ್ಲಿ ಮಮತಾ ಬ್ಯಾನರ್ಜಿ ಅವರು ಮೊಮೋವನ್ನು ತಯಾರಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ‘ನೋ ಜಾಬ್’ ಎಂದವರಿಗೆ ಪಕೋಡ, ಜಿಲೇಬಿ ಮಾಡಿ ತೋರಿಸಿದ ಯುಪಿ ಮಂತ್ರಿಗಳು!

    ‘ನೋ ಜಾಬ್’ ಎಂದವರಿಗೆ ಪಕೋಡ, ಜಿಲೇಬಿ ಮಾಡಿ ತೋರಿಸಿದ ಯುಪಿ ಮಂತ್ರಿಗಳು!

    ಲಕ್ನೋ: ನೋ ಜಾಬ್ ಎಂದು ಮೋದಿ ಸರ್ಕಾರವನ್ನು ಟೀಕಿಸುತ್ತಿದ್ದ ಪ್ರತಿಪಕ್ಷಗಳಿಗೆ ಉತ್ತರ ಪ್ರದೇಶದ ಮಂತ್ರಿಗಳು ಪಕೋಡ ಮತ್ತು ಜಿಲೇಬಿ ಮಾಡುವ ಮೂಲಕ ಉತ್ತರ ಕೊಟ್ಟಿದ್ದಾರೆ.

    ಈ ಹಿಂದೆ ಅಲಹಾಬಾದ್ ಎಂದು ಕರೆಯಲ್ಪಡುತ್ತಿದ್ದ ಪ್ರಯಾಗ್‍ರಾಜ್‍ನ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿನ ಸಚಿವರು, ಬೆಂಬಲಿಗರು ಪ್ರಚಾರಕ್ಕಾಗಿ ಅಲ್ಲಿನ ಮಾರುಕಟ್ಟೆಗೆ ಹೋಗಿದ್ದಾರೆ. ಅಲ್ಲಿ ಪೂರಿ, ಚಹಾ ಮತ್ತು ಪಕೋಡ ಮಾಡುವ ಮೂಲಕ ನಿರುದ್ಯೋಗ ಸಮಸ್ಯೆ ಬಗ್ಗೆ ಪ್ರಶ್ನೆ ಕೇಳುತ್ತಿದ್ದವರಿಗೆ ಉತ್ತರ ಕೊಟ್ಟಿದ್ದಾರೆ. ಈ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಸಾಮಾನ್ಯ ಜನರಿಗೆ ಅವರು ಮಾಡಿದ ಪಕೋಡಾ ಮತ್ತು ಜಿಲೇಬಿಯನ್ನು ಕೊಟ್ಟಿ ಸಂಭ್ರಮಿಸಿರುವುದು ಫೋಟೋದಲ್ಲಿ ಕಾಣಬಹುದು. ಇದನ್ನೂ ಓದಿ: ರಷ್ಯಾ ಭಾಷೆ ಮಾತಾಡುವ ರಾಯಭಾರಿಗಳನ್ನು ಉಕ್ರೇನ್‍ಗೆ ಕಳುಹಿಸಲಾಗುತ್ತಿದೆ: ಸಿಎಂ

    vh9q6m8

    ಬಿಜೆಪಿ ಎಂಎಲ್‍ಎಗಳು ಸ್ಥಳೀಯ ಮಾರುಕಟ್ಟೆಯಲ್ಲಿ ಪೂರಿ, ಚಹಾ ಮತ್ತು ಪಕೋಡ ಮಾಡಿದ ವೀಡಿಯೋ ನೋಡಿದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಾರೆ. ಈ ವೇಳೆ ಶ್ರೀ ಗುಪ್ತ ಅವರು, ಬಿಜೆಪಿ ಸರ್ಕಾರವು ಜನರಿಗೆ ಸಾವಿರಾರು ಕೆಲಸಗಳನ್ನು ಕೊಟ್ಟಿದೆ. ಅದನ್ನು ಜನರು ಸರಿಯಾಗಿ ನಿಭಾಯಿಸಿಕೊಂಡು ಹೋಗಬೇಕು. ಈ ಕೆಲಸಗಳಿಗೆ ಯಾರು ದುಡ್ಡು ಕೊಡಬೇಕು ಎಂಬುದಿಲ್ಲ. ಜನರು ಸ್ನ್ಯಾಕ್ಸ್ ಮಾರಾಟ ಮಾಡಿದರೂ ಅದು ಸಹ ಉದ್ಯೋಗವೇ ಎಂದು ಹೇಳಿದ್ದಾರೆ.

    ಇಲ್ಲಿನ ಜನರು ನನ್ನನ್ನು ಪ್ರೀತಿಯಿಂದ ನಮ್ಮ ಅಂಗಡಿಗೂ ಬಂದು ಏನಾದರೂ ಮಾಡಿಕೊಡಿ ಎನ್ನುತ್ತಾರೆ. ಅದೇ ಸಂತೋಷದ ವಿಷಯ ಎಂದು ತಿಳಿಸಿದ್ದಾರೆ.

    ಸಮಾಜವಾದಿ ಪಕ್ಷದ ಜನರು ನಿರುದ್ಯೋಗಿಗಳು. ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಕಾಲದಲ್ಲಿ ಪೂರ್ವಾಂಚಲ್ ಎಕ್ಸ್‍ಪ್ರೆಸ್‍ವೇ ನಿರ್ಮಿಸುವಾಗ 15,000 ಕೋಟಿ ವೆಚ್ಚವಾಯಿತು. ಆದರೆ ನಾವು 4,500 ಕೋಟಿ ರೂ. ಕಡಿಮೆ ಬಜೆಟ್‍ನಲ್ಲಿ ವಿಶಾಲವಾದ, ಉತ್ತಮವಾದ, ಉದ್ದವಾದ ಎಕ್ಸ್‍ಪ್ರೆಸ್‍ವೇ ಮಾಡಿದ್ದೇವೆ. ಈ ಕುರಿತು ನೀವು ಸರಿಯಾಗಿ ಯೋಚಿಸಬೇಕು ಎಂದು ಜನರಿಗೆ ಹೇಳಿದರು. ಇದನ್ನೂ ಓದಿ:  ವೈದ್ಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್, ರಷ್ಯಾಗೇ ಹೆಚ್ಚಾಗಿ ಯಾಕೆ ಹೋಗ್ತಾರೆ ಗೊತ್ತಾ?

    ಈ ಮಧ್ಯೆ ಮತ್ತೊಬ್ಬ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಅವರು ಪ್ರಯಾಗ್‍ರಾಜ್‍ನಲ್ಲಿ ಪಕೋಡಗಳನ್ನು ಮಾಡಿರುವುದು ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

  • ಬಜ್ಜಿ ತಿಂದು ತಾಯಿ, ಮಗ ಸಾವು

    ಬಜ್ಜಿ ತಿಂದು ತಾಯಿ, ಮಗ ಸಾವು

    ಬೆಳಗಾವಿ: ವಿಷಾಹಾರ ಸೇವಿಸಿ ತಾಯಿ ಮತ್ತು ಮಗ ಧಾರುಣವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿ ಸಂಭವಿಸಿದೆ. ಭಾನುವಾರ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ತಾಯಿ ಪಾರ್ವತಿ ಮಳಗಲಿ(53), ಮಗ ಸೋಮನಿಂಗಪ್ಪ ಮಳಗಲಿ(28) ಮೃತ ದುರ್ದೈವಿಗಳಾಗಿದ್ದಾರೆ. ಹೊಲದಲ್ಲಿ ಕೆಲಸ ಮುಗಿಸಿ ಸಂಜೆ ಮನೆಗೆ ಬಂದ ಬಳಿಕ ತಾಯಿ-ಮಗ ಇಬ್ಬರು ಬಜ್ಜಿ ಮಾಡಿ ತಿಂದಿದ್ದರು. ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪಿದ್ದಾರೆ.

    ಬಜ್ಜಿ ಮಾಡಿ ತಿಂದ ಇಬ್ಬರಿಗೂ ವಾಂತಿ ಬೇಧಿ ಶುರುವಾಗಿದೆ. ಇದರಿಂದ ತೀವ್ರ ಅಸ್ವಸ್ಥರಾದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವ ವೇಳೆ ಮಾರ್ಗ ಮಧ್ಯ ತಾಯಿ-ಮಗ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: FIR ಇಲ್ಲದೇ ನನ್ನನ್ನು ಗೃಹ ಬಂಧನದಲ್ಲಿರಿಸಿದೆ: ಪ್ರಿಯಾಂಕಾ ಗಾಂಧಿ ಕಿಡಿ

    ನಿನ್ನೆ ಮೃತದೇಹಗಳ ಮರಣೋತ್ತರ ಪರೀಕ್ಷೆಯ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಮಾರಿಹಾಳ ಪೊಲೀಸರು ಕಾಯುತ್ತಿದ್ದಾರೆ. ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಫಟಾಫಟ್ ಅಂತ ಮಾಡಿ ಬಿಸಿ ಬಿಸಿಯಾದ ಅನ್ನದ ಪಕೋಡ

    ಫಟಾಫಟ್ ಅಂತ ಮಾಡಿ ಬಿಸಿ ಬಿಸಿಯಾದ ಅನ್ನದ ಪಕೋಡ

    ನ್ನ ಉಳಿದಿದೆ ಏನು ಮಾಡುವುದು ಎಂದು ಯೋಚನೆ ಮಾಡುತ್ತಾ ಇದ್ದೀರ. ಹಾಗಾದರೆ ನಾವು ಇಂದು ಉಳಿದ ಅನ್ನದಲ್ಲಿ ಬಿಸಿ ಬಿಸಿಯಾಗಿ ಮತ್ತು ನಾಲಿಗೆ ರುಚಿಯನ್ನು ಹೆಚ್ಚಿಸುವ ಪಕೋಡವನ್ನು ಮಾಡುವ ವಿಧಾನವನ್ನು ಹೇಳುತ್ತೇವೆ. ಕಡಲೆ ಹಿಟ್ಟಿನಿಂದ ಮಾಡುವ ಈರುಳ್ಳಿ ಪಕೋಡವನ್ನು ತಿಂದಿದ್ದೇವೆ. ಆದರೆ ಇಂದು ಮಾಡುತ್ತಿರುವ ಅನ್ನದ ಪಕೋಡ ಗರಂ ಗರಂ ಎಂದು ಸಖತ್ ರುಚಿಯಾಗಿರುತ್ತದೆ.

    ಬೇಕಾಗುವ ಸಾಮಗ್ರಿಗಳು:
    * ಅನ್ನ – 3 ಕಪ್,
    * ಕಡಲೆಹಿಟ್ಟು – 4 ಚಮಚ
    * ಈರುಳ್ಳಿ – 2
    * ಹಸಿಮೆಣಸು – 2
    * ಕೊತ್ತಂಬರಿ ಸೊಪ್ಪು- ಸ್ವಲ್ಪ
    * ಚಾಟ್ ಮಸಾಲ- 1 ಚಮಚ,
    * ರುಚಿಗೆ ತಕ್ಕಷ್ಟು ಉಪ್ಪು
    * ಶುಂಠಿ 1 ಇಂಚು


    ಮಾಡುವ ವಿಧಾನ:

    * ಪಾತ್ರೆಯೊಂದಕ್ಕೆ ಬೇಯಿಸಿದ ಅನ್ನ, ಹೆಚ್ಚಿದ ಈರುಳ್ಳಿ, ಕೊತ್ತಂಬರಿ ಸೊಪ್ಪು, ಹಸಿಮೆಣಸು, ಜಜ್ಜಿದ ಶುಂಠಿ, ಚಾಟ್ ಮಸಾಲ, ಉಪ್ಪು ಹಾಗೂ ಕಡಲೆಹಿಟ್ಟು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು.

    * ಅಗತ್ಯವಿರುವಷ್ಟು ನೀರು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ, ಪಕೋಡ ಹದಕ್ಕೆ ಕಲೆಸಿಕೊಳ್ಳಿ. ಇದನ್ನೂ ಓದಿ:  ಅಲಸಂಡೆ ಕಾಳಿನ ಸಾರು ಅನ್ನದ ಜೊತೆಗೆ ಸೂಪರ್

    * ಕಾಯಿಸಿದ ಎಣ್ಣೆಗೆ ಹಿಟ್ಟನ್ನು ಉಂಡೆ ಮಾಡಿ ಒಂದೊಂದಾಗಿ ಬಿಡಿ. ಅದನ್ನು ಎರಡೂ ಕಡೆ ಚೆನ್ನಾಗಿ ಕರಿಯಿರಿ. ಸಂಜೆ ಹೊತ್ತಿಗೆ ತಿನ್ನಲು ಬಿಸಿಯಾದ ಅನ್ನದ ಪಕೋಡ ಸವಿಯಲು ಸಿದ್ಧವಾಗುತ್ತದೆ.

  • ಸಂಜೆ ತಿಂಡಿಗೆ  ಹೆಸರುಬೇಳೆ ಪಕೋಡ ಮಾಡಿ

    ಸಂಜೆ ತಿಂಡಿಗೆ ಹೆಸರುಬೇಳೆ ಪಕೋಡ ಮಾಡಿ

    ಳೆಗಾಲ ಶುರುವಾಗಿದೆ. ಚಳಿ ಇರುವುದರಿಂದ ನಾಲಿಗೆ ಕೊಂಚ ಬಿಸಿ ಬಸಿಯಾಗಿ ಏನನ್ನಾದರು ತಿನ್ನಲು ಬಯಸುತ್ತದೆ. ಪ್ರತಿನಿತ್ಯ ಒಂದಲ್ಲಾ ಒಂದು ರುಚಿಕರವಾದ ಅಡುಗೆಯನ್ನು ಮಾಡಿ ಸವಿಯುವ ನೀವು ಇಂದು ಮನೆಯಲ್ಲಿ ಬಿಸಿ ಬಿಸಿಯಾದ ಹೆಸರು ಬೇಳೆ ಪಕೋಡವನ್ನು ಮಾಡಿ.

    ಬೇಕಾಗುವ ಸಾಮಗ್ರಿಗಳು:
    * ಹೆಸರುಬೇಳೆ- 1ಕಪ್
    * ಹಸಿಮೆಣಸಿನಕಾಯಿ-3
    * ಬೆಳ್ಳುಳ್ಳಿ ಪೇಸ್ಟ್- ಅರ್ಧ ಟೀ ಸ್ಪೂನ್
    * ಶುಂಠಿ- ಅರ್ಧ ಟೀ ಸ್ಪೂನ್
    * ಅಡುಗೆ ಎಣ್ಣುಗೆ
    * ಕೊತ್ತಂಬರಿ
    * ರುಚಿಗೆ ತಕ್ಕಷ್ಟು ಉಪ್ಪು
    * ಕೋತ್ತಂಬರಿ ಬೀಜ- 1 ಟೀ ಸ್ಪೂನ್
    * ಮೆಣಸಿನ ಪುಡಿ – ಅರ್ಧ ಟೀ ಸ್ಪೂನ್

    ಮಾಡುವ ವಿಧಾನ:
    * ಪಾತ್ರೆಯಲ್ಲಿ ಹೆಸರುಬೇಳೆಯನ್ನು ಹಾಕಿ, 3-4 ಗಂಟೆಗಳ ಕಾಲ ನೆನೆಯಿಟ್ಟಿರಬೇಕು. ಇದನ್ನೂ ಓದಿ: ನೀವು ಮಾಡಿ ಸಿಹಿ ದೋಸೆ

    * ನಂತರ ಮಿಕ್ಸರ್ ಪಾತ್ರೆಗೆ ನೆನೆಸಿಕೊಂಡ ಹೆಸರುಬೇಳೆ, ಹಸಿಮೆಣಸಿನ ಕಾಯಿ, ಶುಂಠಿ ಮತ್ತು ಬೆಳ್ಳುಳ್ಳಿ ಪೇಸ್ಟ್ ಸೇರಿಸಿ ರುಬ್ಬಿಕೊಳ್ಳಬೇಕು. ರುಬ್ಬಿಕೊಂಡ ಮಿಶ್ರಣವು ದಪ್ಪ ಸ್ಥಿರತೆಯಿಂದ ಕೂಡಿರಬೇಕು.ಹೆಚ್ಚಾಗಿ ನೀರನ್ನು ಸೇರಿಸಬಾರದು

    * ರುಬ್ಬಿಕೊಂಡ ಮಿಶ್ರಣಕ್ಕೆ ಹಸಿ ಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು, ಉಪ್ಪು, ಮೆಣಸಿನ ಪುಡಿ ಸ್ವಲ್ಪ ಅಡುಗೆ ಎಣ್ಣೆ ಸೇರಿಸಿ ಮಿಶ್ರಗೊಳಿಸಬೇಕು.

    * ಬಾಣಲೆಯಲ್ಲಿ ಎಣ್ಣೆ ಎಣ್ಣೆ ಬಿಸಿಯಾದ ಬಳಿಕ ಪಕೋಡವನ್ನು ಬಿಡಿ. ಪಕೋಡವು ಎರಡು ಬದಿಯಲ್ಲೂ ಚೆನ್ನಾಗಿ ಬೆಂದು ಹೊಂಬಣ್ಣಕ್ಕೆ ಬರುವ ತನಕ ಫ್ರೈ ಮಾಡಿದರೆ ರುಚಿಯಾ ಬಿಸಿ ಬಿಸಿಯಾದ ಹೆಸರುಬೇಳೆ ಪಕೋಡ ಸವಿಯಲು ಸಿದ್ಧವಾಗುತ್ತದೆ.

  • ಪಕೋಡಾ, ಬೋಂಡ-ಬಜ್ಜಿ ಮಾರಿ ಬದುಕು ಕಟ್ಟಿಕೊಂಡ ಮಂಡ್ಯದ ಯುವ ಎಂಜಿನಿಯರ್

    ಪಕೋಡಾ, ಬೋಂಡ-ಬಜ್ಜಿ ಮಾರಿ ಬದುಕು ಕಟ್ಟಿಕೊಂಡ ಮಂಡ್ಯದ ಯುವ ಎಂಜಿನಿಯರ್

    ಮಂಡ್ಯ: ಇತ್ತೀಚೆಗಷ್ಟೆ ಪ್ರಧಾನಿ ಮೋದಿ ಪಕೋಡಾ ಮಾರುವುದು ಕೂಡ ಒಂದು ಉದ್ಯೋಗ ಎಂಬ ಹೇಳಿಕೆ ನೀಡಿದ್ರು. ಈ ಹೇಳಿಕೆ ವಿಪಕ್ಷಗಳಿಗೆ ಪ್ರಧಾನಿ ವಿರುದ್ದ ಟೀಕೆಗೆ ಅಸ್ತ್ರವಾಗಿತ್ತು. ಆದ್ರೆ ಪರ ವಿರೋಧದ ಹಂಗಿಲ್ಲದೆ ಎಂಜಿನಿಯರ್ ಒಬ್ಬರು ಬೋಂಡ-ಬಜ್ಜಿ ಮಾರುತ್ತ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

    ಮಂಡ್ಯ ಜಿಲ್ಲೆಯಲ್ಲಿ ಎಂಜಿನಿಯರಿಂಗ್ ಮುಗಿಸಿದ ಯುವಕ ವೆಂಕಟೇಶ್ (ಮನು) ಬಜ್ಜಿ-ಬೋಂಡಾ ಮಾರಿ ಜೀವನ ನಡೆಸುತ್ತಿದ್ದಾರೆ. ಕೆ.ಆರ್.ಪೇಟೆ ಪಟ್ಟಣದ ನಿವಾಸಿಯಾಗಿರುವ ವೆಂಕಟೇಶ್ ಬಿಇ ಮೆಕಾನಿಕಲ್ ಓದಿದ್ದಾರೆ. ಇಂದು ಯಾವುದೇ ಸಂಕೋಚವಿಲ್ಲದೇ ಕೆ.ಆರ್.ಪೇಟೆ ಪಟ್ಟಣದ ರಸ್ತೆ ಬದಿ ತಳ್ಳುವ ಗಾಡಿಯಲ್ಲಿ ಪಕೋಡಾ, ಬೋಂಡಾ, ಬಜ್ಜಿ ಮಾರುತ್ತಿದ್ದಾರೆ.

    ವೆಂಕಟೇಶ್ ಪ್ರಥಮ ದರ್ಜೆಯ ಅಂಕ ಪಡೆದು ಎಂಜಿನಿಯರಿಂಗ್ ಮುಗಿಸಿದ್ದಾರೆ. ಖಾಸಗಿ ಕಂಪನಿಯವರು ತನ್ನ ಓದಿಗೆ ಬೆಲೆ ಕೊಡದಿದ್ದಾಗ, ತನ್ನ ತಂದೆಗೆ ಜೀವನ ಕೊಟ್ಟ ಈ ಉದ್ಯಮವನ್ನು ಮುಂದುವರಿಸಿದ್ದಾರೆ. ಎಂಜಿನಿಯರಿಂಗ್ ಮುಗಿಸಿದ ಹೊಸದರಲ್ಲಿ ಒಂದೆರಡು ಕಂಪನಿಗಳಿಲ್ಲಿ ಕೆಲಸ ಕೂಡ ಮಾಡಿದ್ದಾರೆ. ಜೊತೆಗೆ ಶ್ರವಣಬೆಳಗೊಳದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಇಂದು ಪ್ರತಿದಿನ ಬಜ್ಜಿ ಬೋಂಡಾ ಮಾರುವ ಮೂಲಕವೇ ಸಾವಿರಾರು ರೂಪಾಯಿ ಸಂಪಾದಿಸುತ್ತಿದ್ದಾರೆ.

  • ರಾಹುಲ್ ಗಾಂಧಿ ಸಮಾವೇಶಕ್ಕೆ ಬರೋರಿಗೆ ಸಿಗುತ್ತೆ ಸಮೋಸಾ, ಬನ್!

    ರಾಹುಲ್ ಗಾಂಧಿ ಸಮಾವೇಶಕ್ಕೆ ಬರೋರಿಗೆ ಸಿಗುತ್ತೆ ಸಮೋಸಾ, ಬನ್!

    ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಸಮಾವೇಶವೊಂದರಲ್ಲಿ ಪಕೋಡಾ ಮಾರಾಟ ಮಾಡಿದ ಬೆನ್ನಲ್ಲೇ ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಸಮೋಸಾ ಬಂದಿದೆ.

    ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಸಮೋಸಾ ಮಾರಾಟ ಮಾಡೋ ಪ್ರತಿಭಟನೆ ಮಾಡುತ್ತಿಲ್ಲ. ಬದಲಾಗಿ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಬರೋ ಕಾರ್ಯಕರ್ತರು ಹಾಗೂ ಜನರಿಗೆ ಉಚಿತವಾಗಿ ಸಮೋಸಾ ಹಾಗೂ ಬನ್ ದೊರೆಯುತ್ತಿದೆ.

    ಬಳ್ಳಾರಿ ನಗರ ಶಾಸಕ ಅನಿಲ್ ಲಾಡ್ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಬರೋ ಕಾರ್ಯಕರ್ತರಿಗಾಗೆ ಲಕ್ಷಾಂತರ ಸಮೋಸಾ ಹಾಗೂ ಬನ್ ವ್ಯವಸ್ಥೆ ಮಾಡಿದ್ದಾರೆ. ಪ್ರತಿಯೊಬ್ಬರಿಗೆ ನಾಲ್ಕು ಬನ್ ಹಾಗೂ 6 ಸಮೋಸಾದ ಪ್ಯಾಕೆಟ್ ನೀಡುತ್ತಿರುವುದು ವಿಶೇಷವಾಗಿದೆ.

  • ರಾಜ್ಯಸಭೆಯ ಮೊದಲ ಭಾಷಣದಲ್ಲೇ ಪಕೋಡಾ ವಿಚಾರ ಎತ್ತಿ ಕೈ ವಿರುದ್ಧ ಶಾ ವಾಗ್ದಾಳಿ

    ರಾಜ್ಯಸಭೆಯ ಮೊದಲ ಭಾಷಣದಲ್ಲೇ ಪಕೋಡಾ ವಿಚಾರ ಎತ್ತಿ ಕೈ ವಿರುದ್ಧ ಶಾ ವಾಗ್ದಾಳಿ

    ನವದೆಹಲಿ: ರಾಜ್ಯಸಭೆಯ ಮೊದಲ ಭಾಷಣದಲ್ಲೇ ಪಕೋಡಾವನ್ನು ಮಾರಾಟ ಮಾಡಿ ಮೋದಿ ಹೇಳಿಕೆಯನ್ನು ಟೀಕಿಸುತ್ತಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

    ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಯಾವುದೇ ಒಬ್ಬ ವ್ಯಕ್ತಿ ನಿರುದ್ಯೋಗಿಯಾಗಿ ಇರುವುದಕ್ಕಿಂತ ಕಾರ್ಮಿಕನಾಗಿ ಅಥವಾ ಪಕೋಡಾ ವ್ಯಾಪಾರಿ ಆಗುವುದು ಉತ್ತಮ. ಪಕೋಡಾ ಮಾರಾಟ ಮಾಡಲು ಯಾವುದೇ ಮುಜುಗರ ಪಡಬೇಕಿಲ್ಲ ಎಂದರು.

    ದೇಶದ ಯುವ ಜನತೆಗೆ ಹೊಸ ಉದ್ಯೋಗ ಸೃಷ್ಟಿ ಮಾಡಲು ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಈ ಹಿಂದಿನ ಹಲವು ಸರ್ಕಾರಗಳು ಬಡತನ ನಿರ್ಮೂಲನೆ ಎಂಬ ಘೋಷಣೆಗಳನ್ನು ಇಟ್ಟು ಅಧಿಕಾರ ವಹಿಸಿಕೊಂಡರೂ ಯಶಸ್ವಿಯಾಗಿರಲಿಲ್ಲ. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದು ಜಾರಿಗೆ ಬರುತ್ತಿದೆ. ಉದ್ಯೋಗ ಸೃಷ್ಟಿಯ ಬಗ್ಗೆ ನಮ್ಮ ಸರ್ಕಾರ ಜಾಗೃತವಾಗಿದೆ. ಆದರೆ ಒಮ್ಮಿದೊಮ್ಮೆಗೆ ಬದಲಾವಣೆ ಮಾಡಲು ಸಾಧ್ಯವೇ? ವಿರೋಧಿಗಳ ಟೀಕೆಗಳನ್ನು ಕೇಳಲು ನಮಗೆ ಸಂತಸವಾಗುತ್ತಿದೆ ಎಂದು ಹೇಳಿ ತರಾಟೆಗೆ ತೆಗೆದುಕೊಂಡರು.

    ಕಾಂಗ್ರೆಸ್ 60 ವಷಗಳ ಅಧಿಕಾರ ಅವಧಿಯಲ್ಲಿ ಉದ್ಯೋಗ ಸೃಷ್ಟಿಗೆ ನೀಡಿದ ಕೊಡುಗೆ ಏನು ಎನ್ನುವುದನ್ನು ಪ್ರಶ್ನಿಸಿಕೊಳ್ಳಬೇಕಿದೆ. ನಾವು ಈಗಾಗಲೇ ಉದ್ಯೋಗ ಸೃಷ್ಟಿಯ ಬಗ್ಗೆ ಕಾರ್ಯಪ್ರವೃತ್ತವಾಗಿದ್ದೇವೆ. ಸರ್ಕಾರದ ಸ್ಮಾರ್ಟ್ ಆಫ್ ಇಂಡಿಯಾ, ಮುದ್ರಾ ಯೋಜನಾ ಮುಂತಾದ ಯೋಜನೆಗಳು ಪ್ರಗತಿಯಲ್ಲಿದೆ ಎಂದರು.

    2014 ರಲ್ಲಿ ದೇಶದ ಜನರು ಶಕ್ತಿಶಾಲಿ ಸರ್ಕಾರಕ್ಕೆ ಮತ ಹಾಕುವ ಮೂಲಕ ಐತಿಹಾಸಿಕ ನಿರ್ಣಯ ಮಾಡಿದ್ದಾರೆ. ಈ ಮೂಲಕ ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡಿ ಅಭಿವೃದ್ಧಿ, ಶಾಂತಿಯನ್ನು ಬಯಸಿದ್ದಾರೆ. ಸರ್ಕಾರ ರಚನೆ ಮಾಡಲು ಸಂಪೂರ್ಣ ಬಹುಮತವಿದ್ದರೂ ಬಿಜೆಪಿ ಎನ್‍ಡಿಎ ಒಕ್ಕೂಟದ ಮಿತ್ರ ಪಕ್ಷಗಳ ಮೂಲಕ ಸರ್ಕಾರ ರಚನೆ ಮಾಡಿದೆ ಎಂದರು.

    ಅಮಿತ್ ಶಾ ಮೊದಲ ಭಾಷಣ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಟಾಪಿಕ್ ಆಗಿದ್ದು, ಟ್ವಿಟ್ಟರ್ ನಲ್ಲಿ ಭಾರತದಲ್ಲಿ #ShahSpeaksInRajyaSabha ಹ್ಯಾಶ್ ಟ್ಯಾಗ್ ನಂಬರ್ ಒನ್ ಟ್ರೆಂಡಿಂಗ್ ಟಾಪಿಕ್ ಆಗಿತ್ತು.

    ಕೆಲ ದಿನಗಳ ಹಿಂದೆ ಖಾಸಗಿ ಮಾಧ್ಯಮದ ಕಾರ್ಯಕ್ರಮದ ವೇಳೆ ಪ್ರಧಾನಿ ಮೋದಿ ಅವರು ಪಕೋಡಾ ಮಾರಾಟ ಮಾಡುವುದು ಒಂದು ಸ್ವಯಂ ಉದ್ಯೋಗವಾಗಿದ್ದು, ಪಕೋಡಾ ಮಾರಾಟ ಮಾಡುವ ವ್ಯಕ್ತಿ ಪ್ರತಿದಿನ ಸಂಜೆ 200 ರೂ. ಗಳಿಸುತ್ತಾರೆ ಎಂದಿದ್ದರು. ಮೋದಿ ಅವರ ಈ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿ ದೇಶಾದ್ಯಂತ ಪ್ರತಿಭಟನೆಯನ್ನು ನಡೆಸಿತ್ತು.

    ಬೆಂಗಳೂರಿನ ಆರಮನೆ ಮೈಧಾನದಲ್ಲಿ ಭಾನುವಾರ ನಡೆದ ಪರಿವರ್ತನಾ ಯಾತ್ರೆ ವೇಳೆಯು ಪ್ರಧಾನಿಗಳ ವಿರುದ್ಧ ಪ್ರತಿಭಟನೆ ನಡೆಸಿತ್ತು. ವಿಶ್ವವಿದ್ಯಾಲಯ ಘಟಿಕೋತ್ಸವದ ದಿನ ವಿದ್ಯಾರ್ಥಿಗಳು ಧರಿಸುವ ಗೌನ್ ಹಾಕಿಕೊಂಡಿದ್ದ ವಿದ್ಯಾರ್ಥಿಗಳು ಪಕೋಡಾ ಮಾರಾಟ ಮಾಡಿ ಪ್ರತಿಭಟನೆ ನಡೆಸಿದ್ದರು.

  • ಮೋದಿ ಉದ್ಯೋಗ ಸೃಷ್ಟಿ ನೀತಿಯನ್ನು ಟೀಕಿಸಿದವರಿಗೆ ಬಜೆಟ್‍ನಲ್ಲಿ ಜೇಟ್ಲಿ ಉತ್ತರಿಸಿದ್ದು ಹೀಗೆ

    ಮೋದಿ ಉದ್ಯೋಗ ಸೃಷ್ಟಿ ನೀತಿಯನ್ನು ಟೀಕಿಸಿದವರಿಗೆ ಬಜೆಟ್‍ನಲ್ಲಿ ಜೇಟ್ಲಿ ಉತ್ತರಿಸಿದ್ದು ಹೀಗೆ

    ನವದೆಹಲಿ: ಈ ಹಣಕಾಸು ವರ್ಷದಲ್ಲಿ 70 ಲಕ್ಷ ಹೊಸ ಉದ್ಯೋಗ ಸೃಷ್ಟಿಸಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

    ಉದ್ಯಮಶೀಲರಿಗೆ ಹಣಕಾಸು ನೆರವು ನೀಡಲು ಆರಂಭಿಸಿರುವ ಮುದ್ರಾ ಯೋಜನೆಗೆ 3 ಲಕ್ಷ ಕೋಟಿ ರೂ. ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮ(ಎಂಎಸ್‍ಎಂಇ) ಗಳಿಗೆ ಪ್ರೋತ್ಸಾಹ ನೀಡಲು 3794 ಕೋಟಿ ರೂಗಳ ಅನುದಾನ ಬಜೆಟ್ ನಲ್ಲಿ ಸಿಕ್ಕಿದೆ.

    ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಉದ್ಯೋಗ ಸೃಷ್ಟಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡುತ್ತಾ, ಪಕೋಡಾ ಮಾಡಿ ಮಾರುವುದು ಕೂಡ ಒಂದು ಉದ್ಯೋಗವೇ ಎಂದು ಹೇಳಿದ್ದರು.

    ಪ್ರಧಾನಿಯವರ ಈ ಹೇಳಿಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಬೆಂಗಳೂರಿನ ಎಂಎಸ್‍ಸಿ, ಎಂಎ ಹಾಗೂ ಎಂಜಿನೀಯರಿಂಗ್ ವಿದ್ಯಾರ್ಥಿಗಳು ನಗರದ ಬಿಜೆಪಿ ಕಚೇರಿಯೆದುರು ಪಕೋಡ ಮಾಡಿ ಅದನ್ನು 10 ರೂ.ಗೆ ಮಾರುವುದರ ಮೂಲಕ ಪ್ರತಿಭಟನೆ ನಡೆಸಿದ್ದರು.

    ಉದ್ಯೋಗ ಕೊಡುತ್ತೇವೆ ಎಂದಿದ್ದ ಪ್ರಧಾನಿ ಮೋದಿ ಪಕೋಡ ಮಾರುವಂತೆ ಹೇಳಿದ್ದರು. ಆದರೆ ಪಕೋಡಾ ಮಾರುವ ಉದ್ಯೋಗ ಸೃಷ್ಟಿ ಮಾಡಿದ್ದು ನರೇಂದ್ರ ಮೋದಿಯಲ್ಲ, ಉದ್ಯೋಗ ಸೃಷ್ಟಿಸಿ ಎಂದರೆ ಪಕೋಡಾ ಮಾರಾಟದ ಉದಾಹರಣೆ ನೀಡಿದ್ದರು.

    ಆ ಬಳಿಕ ಆಮ್ ಆದ್ಮಿ ಪಾರ್ಟಿ ವತಿಯಿಂದಲೂ ಕೆಲಸ ಸಿಕ್ಕಿಲ್ವಾ..? ಬಜ್ಜಿ ವಡಾ ಪಕೋಡಾ ಮಾರು 200 ರೂ. ಸಂಪಾದಿಸು, ಅದೇ ನಿನ್ನ ಉದ್ಯೋಗ ಅಂತ ಬೋರ್ಡ್ ಹಾಕೋ ಮೂಲಕ ಮೋದಿ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇದನ್ನು ಓದಿ: ಮೋದಿ ವಿರುದ್ಧ ಉದ್ಯೋಗ ಸೃಷ್ಟಿಗಾಗಿ Msc, MA, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ `ಪಕೋಡ’ ಪ್ರತಿಭಟನೆ

    https://www.youtube.com/watch?v=LqnbGiE0F3Q