Tag: Palestine

  • ಇಸ್ರೇಲ್, ಹಮಾಸ್ ಯುದ್ಧ – ಸಾವು ನೋವುಗಳನ್ನು ಖಂಡಿಸಿದ ಪ್ರಧಾನಿ ಮೋದಿ

    ಇಸ್ರೇಲ್, ಹಮಾಸ್ ಯುದ್ಧ – ಸಾವು ನೋವುಗಳನ್ನು ಖಂಡಿಸಿದ ಪ್ರಧಾನಿ ಮೋದಿ

    ನವದೆಹಲಿ: ಇಸ್ರೇಲ್ (Israel) ಮತ್ತು ಪ್ಯಾಲೆಸ್ತೀನ್ (Palestine) ಬಂಡುಕೋರ ಸಂಘಟನೆ ಹಮಾಸ್ (Hamas) ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಅಪಾರ ಪ್ರಮಾಣದ ಸಾವು-ನೋವುಗಳು ಸಂಭವಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಶುಕ್ರವಾರ ಖಂಡಿಸಿದ್ದಾರೆ.

    ವಾಯ್ಸ್ ಆಫ್ ದಿ ಗ್ಲೋಬಲ್ ಸೌತ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಹೊಸ ಸವಾಲುಗಳ ಕುರಿತು ಮಾತನಾಡಿ, ಭಾರತವು ಸಂಘರ್ಷದಲ್ಲಿ ಸಂಯಮವನ್ನು ಅನುಸರಿಸಿದೆ ಎಂದು ಹೇಳಿದರು.

    ನಾವು ಸಂವಾದ ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡಿದ್ದೇವೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ನಾಗರಿಕರ ಸಾವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಪ್ಯಾಲೆಸ್ತೀನ್ ಅಧ್ಯಕ್ಷ ಮಹಮದ್ ಅಬ್ಬಾಸ್ ಅವರೊಂದಿಗಿನ ಮಾತುಕತೆಯ ನಂತರ ಭಾರತವು ಪ್ಯಾಲೆಸ್ತೀನಿಯರಿಗೆ ಮಾನವೀಯ ನೆರವು ಕಳುಹಿಸಿದೆ. ಇದು ಜಾಗತಿಕ ಒಳಿತಿಗಾಗಿ ಜಾಗತಿಕ ದಕ್ಷಿಣದ ದೇಶಗಳು ಒಂದಾಗಬೇಕಾದ ಸಮಯ ಎಂದು ಅವರು ತಿಳಿಸಿದರು. ಇದನ್ನೂ ಓದಿ: 68 ಸಾವಿರ ದಂಡ ಪಾವತಿಸಿದ್ದೇನೆ – ಲುಲು ಮಾಲ್‌ಗೆ ಕರೆಂಟ್‌ ಶಾಕ್‌ ಕೊಟ್ಟ ಕುಮಾರಸ್ವಾಮಿ

    ಪೂರ್ವ ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ವಸಾಹತು ಚಟುವಟಿಕೆಗಳನ್ನು ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದ ಬೆನ್ನಲ್ಲೇ ಅವರು ಹೇಳಿಕೆಗಳನ್ನು ನೀಡಿದ್ದಾರೆ. ನಿರ್ಣಯದ ಪರವಾಗಿ ಮತ ಚಲಾಯಿಸಿದ 145 ರಾಷ್ಟ್ರಗಳಲ್ಲಿ ಭಾರತವೂ ಸೇರಿದೆ. 7 ದೇಶಗಳು ಇಸ್ರೇಲ್ ವಿರುದ್ಧವಾಗಿ ಮತ ಚಲಾಯಿಸಿದವು ಮತ್ತು 18 ಗೈರುಹಾಜರಾದವು. ಭಾರತವು ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ಗೆ ಎರಡು ರಾಜ್ಯ ಪರಿಹಾರಕ್ಕಾಗಿ ತನ್ನ ಕರೆಯನ್ನು ಉಳಿಸಿಕೊಂಡಿದೆ ಮತ್ತು ಇಸ್ರೇಲ್-ಹಮಾಸ್ ಯುದ್ಧದಲ್ಲಿ ಸಿಲುಕಿರುವ ನಾಗರಿಕರನ್ನು ರಕ್ಷಿಸಲು ಪುನರುಚ್ಚರಿಸಿದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ವಿಶ್ವಕಪ್ ಫೈನಲ್ಸ್ ಬೆಟ್ಟಿಂಗ್ ಭರಾಟೆ – 15 ದಿನದಲ್ಲಿ 30 ಕೇಸ್, 42 ಮಂದಿ ಅರೆಸ್ಟ್

  • ಇಸ್ರೇಲ್‌ ಧೋರಣೆ ಖಂಡಿಸಿದ ವಿಶ್ವಸಂಸ್ಥೆ ನಿರ್ಣಯಕ್ಕೆ ಭಾರತ ಬೆಂಬಲ

    ಇಸ್ರೇಲ್‌ ಧೋರಣೆ ಖಂಡಿಸಿದ ವಿಶ್ವಸಂಸ್ಥೆ ನಿರ್ಣಯಕ್ಕೆ ಭಾರತ ಬೆಂಬಲ

    ಟೆಲ್‌ ಅವೀವ್: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ವಸಾಹತು ಧೋರಣೆಯನ್ನು ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ.

    ಪೂರ್ವ ಜೆರುಸಲೇಂ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ಮತ್ತು ಆಕ್ರಮಿತ ಸಿರಿಯನ್ ಗೋಲನ್‌ನಲ್ಲಿ ವಸಾಹತು ಚಟುವಟಿಕೆಗಳನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಲಾಯಿತು. ಇದನ್ನು ವಿರೋಧಿಸಿದ ಏಳು ದೇಶಗಳಲ್ಲಿ ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾ ಸೇರಿವೆ. ಹದಿನೆಂಟು ದೇಶಗಳು ಮತದಾನದಿಂದ ದೂರ ಉಳಿದವು.

    ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ “ತಕ್ಷಣದ ಹಾಗೂ ನಿರಂತರ ಮಾನವೀಯ ಒಪ್ಪಂದಕ್ಕೆ ಕರೆ ನೀಡುವ ಯುಎನ್ ನಿರ್ಣಯದ ಮೇಲೆ ಭಾರತವು ಮತದಾನದಿಂದ ದೂರ ಉಳಿದಿತ್ತು.

    ಇಸ್ರೇಲ್ ಮೇಲೆ ಅಕ್ಟೋಬರ್ 7 ರಂದು ಹಮಾಸ್‌ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಕಾರವಾಗಿ ಇಸ್ರೇಲ್‌ ಯುದ್ಧ ಘೋಷಿಸಿತು. ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ಧದಿಂದಾಗಿ ಗಾಜಾದಲ್ಲಿ 11,000 ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ.

     

    ಗಾಜಾದಲ್ಲಿ ತೆರೆದುಕೊಳ್ಳುತ್ತಿರುವ ಮಾನವೀಯ ಬಿಕ್ಕಟ್ಟಿನ ಬಗ್ಗೆ ಭಾರತವು ಕಳವಳ ವ್ಯಕ್ತಪಡಿಸಿದೆ. ಆದರೆ ಭಯೋತ್ಪದನೆ ಬಗ್ಗೆ ಯಾವುದೇ ಸಂದಿಗ್ಧತೆ ಇರಲು ಸಾಧ್ಯವಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

  • 90 ಸಾವಿರ ಪ್ಯಾಲೆಸ್ತೇನಿಯನ್ನರ ಬದಲು ಭಾರತೀಯರ ನೇಮಕಕ್ಕೆ ಮುಂದಾದ ಇಸ್ರೇಲ್‌

    90 ಸಾವಿರ ಪ್ಯಾಲೆಸ್ತೇನಿಯನ್ನರ ಬದಲು ಭಾರತೀಯರ ನೇಮಕಕ್ಕೆ ಮುಂದಾದ ಇಸ್ರೇಲ್‌

    ಟೆಲ್‌ ಅವೀವ್‌: ಪ್ಯಾಲೆಸ್ತೇನ್‌ (Palestine) ಕಾರ್ಮಿಕರ ಬದಲು ಭಾರತದ (India) ಕಾರ್ಮಿಕರನ್ನು ನೇಮಿಸಿಕೊಳ್ಳಲು ಇಸ್ರೇಲ್‌ (Isreal) ಈಗ ಮುಂದಾಗಿದೆ.

    ಹೌದು. ಹಮಾಸ್‌ ಜೊತೆಗಿನ ಯುದ್ಧದ ನಂತರ 90 ಸಾವಿರ ಪ್ಯಾಲೆಸ್ತೇನ್‌ ಕಾರ್ಮಿಕರ ಕೆಲಸದ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಈಗ ಪ್ಯಾಲೆಸ್ತೇನ್‌ ಪ್ರಜೆಗಳ ಬದಲಿಗೆ 1 ಲಕ್ಷ ಭಾರತೀಯ ಕಾರ್ಮಿಕರನ್ನು ನೇಮಿಸಿಕೊಳ್ಳಲು ಕಂಪನಿಗಳಿಗೆ ಅನುಮತಿ ನೀಡುವಂತೆ ಇಸ್ರೇಲಿ ನಿರ್ಮಾಣ (Construction) ಉದ್ಯಮವು ಸರ್ಕಾರವನ್ನು ಕೇಳಿದೆ ಎಂದು ವರದಿಯಾಗಿದೆ.

    ಇದೀಗ ನಾವು ಭಾರತದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಬೇಡಿಕೆಗೆ ಅನುಮತಿ ನೀಡಲು ಇಸ್ರೇಲ್ ಸರ್ಕಾರದ ನಿರ್ಧಾರಕ್ಕಾಗಿ ನಾವು ಕಾಯುತ್ತಿದ್ದೇವೆ. ಇಡೀ ವಲಯವನ್ನು ನಡೆಸಲು ಮತ್ತು ಅದನ್ನು ಸಾಮಾನ್ಯ ಸ್ಥಿತಿಗೆ ತರಲು ಸಾಧ್ಯವಾಗುವಂತೆ ಭಾರತದಿಂದ 50 ಸಾವಿರದಿಂದ 1 ಲಕ್ಷ ಕಾರ್ಮಿಕರನ್ನು ತೊಡಗಿಸಿಕೊಳ್ಳಲು ನಾವು ಆಶಿಸುತ್ತೇವೆ ಎಂದು ವೆಸ್ಟ್ ಬ್ಯಾಂಕ್‌ನ ವಾಯ್ಸ್ ಆಫ್ ಅಮೇರಿಕಾ ವರದಿಯು ಇಸ್ರೇಲ್ ಬಿಲ್ಡರ್ಸ್ ಅಸೋಸಿಯೇಶನ್‌ನ ಉಪಾಧ್ಯಕ್ಷ ಹೈಮ್ ಫೀಗ್ಲಿನ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ. ಇದನ್ನೂ ಓದಿ: ಗಾಜಾ ನಗರವನ್ನೇ ವಿಭಜಿಸಿದ ಇಸ್ರೇಲ್‌ – 2 ನಗರಗಳ ಮಧ್ಯೆ ಸಂಪರ್ಕ ಕಡಿತ

    ವರದಿಯ ಪ್ರಕಾರ, ಇಸ್ರೇಲಿ ನಿರ್ಮಾಣ ಉದ್ಯಮದಲ್ಲಿ ಉದ್ಯೋಗಿಯಾಗಿರುವ ಕಾರ್ಮಿಕರ ಪೈಕಿ ಪ್ಯಾಲೆಸ್ತೇನಿಯನ್ನರು ಸರಿಸುಮಾರು 25 ಪ್ರತಿಶತವನ್ನು ಹೊಂದಿದ್ದಾರೆ. ನಾವು ಈಗ ಯುದ್ಧದಲ್ಲಿದ್ದೇವೆ. ನಮ್ಮ ಮಾನವ ಸಂಪನ್ಮೂಲದ ಸುಮಾರು 25 ಪ್ರತಿಶತದಷ್ಟು ಇರುವ ಪ್ಯಾಲೆಸ್ತೇನ್‌ ಕೆಲಸಗಾರರು ಬರುತ್ತಿಲ್ಲ. ಇವರಿಗೆ ಇಸ್ರೇಲ್‌ನಲ್ಲಿ ಕೆಲಸ ಮಾಡಲು ಅನುಮತಿ ಇಲ್ಲ ಎಂದು ಫೀಗ್ಲಿನ್ ಹೇಳಿದ್ದಾರೆ.

    ಮೇ ತಿಂಗಳಲ್ಲಿ ಇಸ್ರೇಲ್ ಭಾರತದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಇಸ್ರೇಲ್‌ 42 ಸಾವಿರ ಭಾರತೀಯರಿಗೆ ಇಸ್ರೇಲ್‌ನಲ್ಲಿ ಕೆಲಸ ಮಾಡಲು ಅವಕಾಶ ನೀಡುತ್ತದೆ. ನಿರ್ಮಾಣ ಮತ್ತು ನರ್ಸಿಂಗ್ ಕ್ಷೇತ್ರಗಳಲ್ಲಿ 42 ಸಾವಿರ ಭಾರತೀಯ ಕಾರ್ಮಿಕರಿಗೆ ಉದ್ಯೋಗಕ್ಕೆ  ಅನುಮತಿ ನೀಡುವ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

    ತಮ್ಮ ದೇಶದ ಮೇಲಿನ ದಾಳಿ ದೇಶದಲ್ಲಿ ಉದ್ಯೋಗದಲ್ಲಿದ್ದ ಪ್ಯಾಲೆಸ್ತೀನ್‌ ಕಾರ್ಮಿಕರು ಕಾರಣ. ಅವರು ನಮ್ಮ ದೇಶದ ಬಗ್ಗೆ ಹಮಾಸ್‌ ಉಗ್ರರಿಗೆ ಮಾಹಿತಿ ನೀಡಿದ್ದರು ಎಂಬ ಕಾರಣ ನೀಡಿ ಇಸ್ರೇಲ್‌ ಕಳೆದ ವಾರ ಗಾಜಾಗೆ ಗಡಿಪಾರು ಮಾಡಿದೆ.

    ಪ್ಯಾಲೆಸ್ತೇನ್‌ ಜೊತೆಗಿನ ಸಂಬಂಧ ಸುಧಾರಣೆಯಾಗುತ್ತಿದ್ದಂತೆ ಇಸ್ರೇಲ್‌ ಪ್ಯಾಲೆಸ್ತೇನ್‌ ಪ್ರಜೆಗಳಿಗೆ  ಮಾನವೀಯ ದೃಷ್ಟಿಯಿಂದ ಕೆಲ ವರ್ಷಗಳಿಂದ ದೇಶದಲ್ಲಿ ಉದ್ಯೋಗ ನೀಡಿತ್ತು. ಉದ್ಯೋಗ ಪಡೆದ ಪ್ರಜೆಗಳು ಹಮಾಸ್‌ ಉಗ್ರರ ಜೊತೆ ಕೈ ಜೋಡಿಸಿದ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಅವರನ್ನು ಇಸ್ರೇಲ್‌ ಗಡಿಪಾರು ಮಾಡಿದೆ. ಮೊಬೈಲಿನಲ್ಲೇ ಲೇಟೆಸ್ಟ್‌ ಸುದ್ದಿ ಓದಲು ಪಬ್ಲಿಕ್‌ ಟಿವಿ ವಾಟ್ಸಪ್‌ ಚಾನೆಲಿಗೆ ಸೇರ್ಪಡೆಯಾಗಿಪಬ್ಲಿಕ್‌ ಟಿವಿ ವಾಟ್ಸಪ್‌ ಚಾನೆಲ್‌

    ಇಸ್ರೇಲ್‌ನ ಬೇಡಿಕೆಗೆ ಸಂಬಂಧಿಸಿದಂತೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿಯಾಗಿದೆ.

     

  • ಇಸ್ರೇಲ್‌ ದಾಳಿ ನಿಲ್ಲಿಸಲು ನಿಮ್ಮ ಸಾಮರ್ಥ್ಯ ಬಳಸಿ: ಮೋದಿಗೆ ಕರೆ ಮಾಡಿ ಇರಾನ್‌ ಅಧ್ಯಕ್ಷ ಮನವಿ

    ಇಸ್ರೇಲ್‌ ದಾಳಿ ನಿಲ್ಲಿಸಲು ನಿಮ್ಮ ಸಾಮರ್ಥ್ಯ ಬಳಸಿ: ಮೋದಿಗೆ ಕರೆ ಮಾಡಿ ಇರಾನ್‌ ಅಧ್ಯಕ್ಷ ಮನವಿ

    ಟೆಹ್ರಾನ್: ಗಾಜಾ (Gaza) ಮೇಲಿನ ಇಸ್ರೇಲ್‌ (Israel) ದಾಳಿಗಳನ್ನು ಕೊನೆಗೊಳಿಸಲು ಭಾರತ ತನ್ನ ಎಲ್ಲಾ ಸಾಮರ್ಥ್ಯಗಳನ್ನು ಬಳಸಬೇಕು ಎಂದು ಪ್ರಧಾನಿ ಮೋದಿಗೆ (Narendra Modi) ಕರೆ ಮಾಡಿ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಒತ್ತಾಯಿಸಿದ್ದಾರೆ.

    ಮೋದಿ ಜೊತೆಗೆ ಫೋನ್‌ ಕರೆ ಮಾತುಕತೆ ವೇಳೆ ಇರಾನ್‌ (Iran) ಅಧ್ಯಕ್ಷ, ಪಾಶ್ಚಿಮಾತ್ಯ ವಸಾಹತುಶಾಹಿ ವಿರುದ್ಧ ಭಾರತದ ಹೋರಾಟಗಳು ಹಾಗೂ ವಿಶ್ವದ ಅಲಿಪ್ತ ಚಳವಳಿಯ ಸಂಸ್ಥಾಪಕರ ದೇಶವಾದ ಭಾರತದ ಸ್ಥಾನವನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಗಾಜಾ ನಗರವನ್ನೇ ವಿಭಜಿಸಿದ ಇಸ್ರೇಲ್‌ – 2 ನಗರಗಳ ಮಧ್ಯೆ ಸಂಪರ್ಕ ಕಡಿತ

    ಗಾಜಾದ ತುಳಿತಕ್ಕೊಳಗಾದ ಜನರ ವಿರುದ್ಧ ಜಿಯೋನಿಸ್ಟ್‌ ಅಪರಾಧಗಳನ್ನು ಕೊನೆಗೊಳಿಸಲು ಭಾರತವು ತನ್ನೆಲ್ಲಾ ಸಾಮರ್ಥ್ಯ ಬಳಸುವ ನಿರೀಕ್ಷಿ ಇದೆ. ಕದನ ವಿರಾಮಕ್ಕಾಗಿ ಯಾವುದೇ ಜಾಗತಿಕ ಜಂಟಿ ಪ್ರಯತ್ನವನ್ನು ಟೆಹ್ರಾನ್ ಬೆಂಬಲಿಸುತ್ತದೆ. ಸಂಕಷ್ಟದಲ್ಲಿರುವ ಗಾಜಾದ ಜನರಿಗೆ ನೆರವು ನೀಡುತ್ತದೆ ಎಂದು ರೈಸಿ ತಿಳಿಸಿದ್ದಾರೆ.

    ಪ್ಯಾಲೆಸ್ತೀನ್‌ ಜನರ ಹತ್ಯೆಯು ಪ್ರಪಂಚದ ಎಲ್ಲಾ ಸ್ವತಂತ್ರ ರಾಷ್ಟ್ರಗಳನ್ನು ಕೆರಳಿಸಿದೆ. ಅಮಾಯಕ ಮಹಿಳೆಯರು ಮತ್ತು ಮಕ್ಕಳ ಹತ್ಯೆ, ಆಸ್ಪತ್ರೆಗಳು, ಶಾಲೆಗಳು, ಮಸೀದಿಗಳು, ಚರ್ಚ್‌ಗಳು ಮತ್ತು ವಸತಿ ಪ್ರದೇಶಗಳ ಮೇಲಿನ ದಾಳಿಗಳು ಖಂಡನೀಯ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪತ್ನಿಗೆ 17 ಬಾರಿ ಇರಿದು, ದೇಹದ ಮೇಲೆ ಗಾಡಿ ಓಡಿಸಿದ್ದ ಕೇರಳದ ವ್ಯಕ್ತಿಗೆ ಅಮೆರಿಕದಲ್ಲಿ ಜೀವಾವಧಿ ಶಿಕ್ಷೆ

    ಎಲ್ಲಾ ದೇಶಗಳು ಸ್ವಾತಂತ್ರ್ಯಕ್ಕಾಗಿ ಪ್ಯಾಲೇಸ್ಟಿನಿ ಜನರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕು. ನಾಜಿ ಜರ್ಮನಿಯ ವಿರುದ್ಧ ಯುರೋಪಿಯನ್ ರಾಷ್ಟ್ರಗಳ ಹೋರಾಟ ಶ್ಲಾಘನೀಯ ಮತ್ತು ವೀರರ ಕೃತ್ಯವಾಗಿದೆ. ಆದರೆ ಮಕ್ಕಳ ಹತ್ಯೆ ಮತ್ತು ಕ್ರಿಮಿನಲ್ ಜಿಯೋನಿಸ್ಟ್ ಆಡಳಿತದ ವಿರುದ್ಧ ಪ್ಯಾಲೇಸ್ಟಿನಿಯನ್ ಜನರು ಹೋರಾಟ ನಡೆಸುವುದು ಖಂಡನೀಯವೇ ಎಂದು ಪ್ರಶ್ನಿಸಿದ್ದಾರೆ.

  • ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ – 195 ಮಂದಿ ಸಾವು

    ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ – 195 ಮಂದಿ ಸಾವು

    ಟೆಲ್ ಅವೀವ್: ಹಮಾಸ್ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ (Israel) ನಡೆಸಿದ ವೈಮಾನಿಕ ದಾಳಿಯಿಂದ (Air Strike) ಕನಿಷ್ಠ 195 ಪ್ಯಾಲೆಸ್ತೀನ್‍ನ (Palestine) ನಾಗರೀಕರು ಸಾವನ್ನಪ್ಪಿದ್ದಾರೆ. ಇದರಲ್ಲಿ ಸುಮಾರು 770ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    ದಾಳಿಯ ನಂತರ 120 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಈ ನಡುವೆ ಓರ್ವ ಇಸ್ರೇಲ್ ಸೈನಿಕ ಕೂಡ ಸಾವನ್ನಪ್ಪಿದ್ದಾನೆ ಎಂದು ಹಮಾಸ್ ಹೇಳಿದೆ. ಕಳೆದ ಎರಡು ದಿನಗಳ ದಾಳಿಯಲ್ಲಿ ಇಬ್ಬರು ಹಮಾಸ್ ಮಿಲಿಟರಿ ನಾಯಕರನ್ನು ಹೊಡೆದುರುಳಿಸಲಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಅಲ್ಲದೇ ಇನ್ನೂ ಅಡಗಿರುವ ಹಮಾಸ್ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿಯುತ್ತಿದೆ ಎಂದು ಇಸ್ರೇಲ್ ಸೇನೆ ಹೇಳಿಕೊಂಡಿದೆ. ಇದನ್ನೂ ಓದಿ: ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ; ಹಮಾಸ್‌ ಕಮಾಂಡರ್‌ ಸೇರಿ 60ಕ್ಕೂ ಹೆಚ್ಚು ಮಂದಿ ಬಲಿ

    ಇಸ್ರೇಲ್, ಈಜಿಪ್ಟ್ ಮತ್ತು ಹಮಾಸ್ ನಡುವಿನ ಒಪ್ಪಂದದ ಅಡಿಯಲ್ಲಿ 500 ಜನರ ಪಟ್ಟಿಯಲ್ಲಿ ಕನಿಷ್ಠ 320 ವಿದೇಶಿ ನಾಗರಿಕರನ್ನು ಈಜಿಫ್ಟ್‌ಗೆ ಕಳುಹಿಸಲಾಗಿದೆ. ಉಳಿದ ವಿದೇಶಿ ನಾಗರಿಕರನ್ನು ಯುದ್ಧ ಪ್ರದೇಶದಿಂದ ಕಳಿಸುವ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ಉಳಿದ ವಿದೇಶಿ ಪ್ರಜೆಗಳನ್ನು ಸುರಕ್ಷಿತವಾಗಿ ಈಜಿಫ್ಟ್‍ಗೆ ಕಳುಹಿಸಲು ಕ್ರಮಕೈಗೊಳ್ಳಲಾಗಿದೆ.

    ಇದರ ನಡುವೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರು ಇಸ್ರೇಲ್‍ಗೆ ಒಂದು ತಿಂಗಳಲ್ಲಿ ತಮ್ಮ ಎರಡನೇ ಭೇಟಿಗಾಗಿ ಇಂದು ತೆರಳಲಿದ್ದಾರೆ. ಅಲ್ಲಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು (Benjamin Netanyahu) ಸೇರಿದಂತೆ ಇಸ್ರೇಲಿ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಮಸ್ಲಿಂ ರಾಷ್ಟ್ರಗಳ ಪ್ರತಿನಿಧಿಗಳು ಭಾಗಿಯಾಗಿ ಶಾಂತಿ ಮಾತುಕತೆ ನಡೆಸುವ ಸಾಧ್ಯತೆ ಇದೆ. ಇದನ್ನೂ ಓದಿ: ಇಸ್ರೇಲ್‌ ನಿಯಂತ್ರಣವಿಲ್ಲದ ಏಕೈಕ ಕ್ರಾಸಿಂಗ್‌ ದಾಟಿ ಈಜಿಪ್ಟ್‌ಗೆ ಹೊರಟ ವಿದೇಶಿಯರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಕ್-ಬಾಂಗ್ಲಾ ಪಂದ್ಯದ ವೇಳೆ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಯುವಕರು – ನಾಲ್ವರು ವಶಕ್ಕೆ

    ಪಾಕ್-ಬಾಂಗ್ಲಾ ಪಂದ್ಯದ ವೇಳೆ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಯುವಕರು – ನಾಲ್ವರು ವಶಕ್ಕೆ

    ಕೋಲ್ಕತ್ತಾ: ಮಂಗಳವಾರ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ (Eden Gardens Stadium) ನಡೆದ ಪಾಕಿಸ್ತಾನ-ಬಾಂಗ್ಲಾದೇಶ ವಿಶ್ವಕಪ್ (World Cup) ಕ್ರಿಕೆಟ್ ಪಂದ್ಯದ ವೇಳೆ ಪ್ಯಾಲೆಸ್ತೀನ್ (Palestinian) ಧ್ವಜ (Flag) ಹಾರಿಸಿದ ನಾಲ್ವರು ಯುವಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ವಶಕ್ಕೆ ಪಡೆದವರಲ್ಲಿ ಇಬ್ಬರು ಜಾರ್ಖಂಡ್‌ನ ನಿವಾಸಿಗಳಾಗಿದ್ದು, ಇನ್ನಿಬ್ಬರು ಕೋಲ್ಕತ್ತಾದ ಎಕ್ಬಾಲ್‌ಪೋರ್ ಮತ್ತು ನೆರೆಯ ಹೌರಾದಿಂದ ಬಂದವರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಬ್ಬರನ್ನು ಗೇಟ್ ಸಂಖ್ಯೆ 6ರ ಬಳಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ್ದಕ್ಕಾಗಿ ವಶಕ್ಕೆ ಪಡೆದಿದ್ದು, ಮತ್ತಿಬ್ಬರನ್ನು ಬ್ಲಾಕ್ ಜಿ1 ನಲ್ಲಿ ವಶಕ್ಕೆ ಪಡೆಯಲಾಗಿದೆ. ನಾವು ಅವರ ಉದ್ದೇಶವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಐಪಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಮತ್ತೆ 100 ರೂ. ಏರಿಕೆ!

    ಮೈದಾನ ಪೊಲೀಸ್ ಠಾಣೆಯಿಂದ ನಾಲ್ವರನ್ನು ಕಾನೂನು ಪರಿಪಾಲಕರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಮೊದಲಿಗೆ ಅಲ್ಲಿ ಪೋಸ್ಟಿಂಗ್ ಮಾಡಿದ ಪೊಲೀಸರಿಗೆ ಪ್ರತಿಭಟನಾಕಾರರು ಏನು ಮಾಡುತ್ತಿದ್ದಾರೆ ಎಂದು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ನಂತರ ಅವರು ಪ್ಯಾಲೆಸ್ತೀನ್ ಧ್ವಜವನ್ನು ಹಾರಿಸುತ್ತಿರುವುದನ್ನು ಗಮನಿಸಿದ ಬಳಿಕ ಅವರನ್ನು ವಶಕ್ಕೆ ಪಡೆಯಲಾಯಿತು. ಆದರೆ ಅವರು ಯಾವುದೇ ಘೋಷಣೆಯನ್ನು ಕೂಗಲಿಲ್ಲ ಎಂದು ಐಪಿಎಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿಗೆ ಕೇಜ್ರಿವಾಲ್‌ ಕಂಡರೆ ಭಯ, ಶ್ರೀಘ್ರವೇ ಬಂಧನ ಸಾಧ್ಯತೆ – ಸಚಿವೆ ಅತಿಶಿ

    ಆರಂಭಿಕ ತನಿಖೆಯಲ್ಲಿ ಇಪ್ಪತ್ತು ವಯಸ್ಸಿನ ನಾಲ್ವರು ಯುವಕರು ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷವನ್ನು ಪ್ರತಿಭಟಿಸುತ್ತಿದ್ದು, ಜನರಲ್ಲಿ ಸಂಚಲನ ಮೂಡಿಸುವ ಸಲುವಾಗಿ ಅಂತರ್‌ರಾಷ್ಟ್ರೀಯ ಪಂದ್ಯವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಕೋಲ್ಕತ್ತಾ ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಯಾರ ಪ್ರಭಾವಕ್ಕೂ ಒಳಗಾಗದಿದ್ರೆ ಫೋನ್‌ ಹ್ಯಾಕಿಂಗ್‌ ಪ್ರಯತ್ನ ಯಾಕೆ? – ಯಾವುದಕ್ಕೂ ಹೆದರಲ್ಲ: ರಾಗಾ ತಿರುಗೇಟು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ದಾಳಿ – ಭಟ್ಕಳದಲ್ಲಿ ಕ್ರಿಕೆಟ್ ಪಂದ್ಯಾವಳಿ ರದ್ದು ಮಾಡಿದ ಮುಸ್ಲಿಂ ಯೂಥ್ ಫೆಡರೇಶನ್

    ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ದಾಳಿ – ಭಟ್ಕಳದಲ್ಲಿ ಕ್ರಿಕೆಟ್ ಪಂದ್ಯಾವಳಿ ರದ್ದು ಮಾಡಿದ ಮುಸ್ಲಿಂ ಯೂಥ್ ಫೆಡರೇಶನ್

    – ಮದುವೆ, ಮನೋರಂಜನೆ ಖರ್ಚಿಗೆ ಮಿತಿ ಹೇರುವಂತೆ ಕರೆ

    ಕಾರವಾರ: ಪ್ಯಾಲೆಸ್ತೀನ್ (Palestine) ಮೇಲೆ ಇಸ್ರೇಲ್ (Israel) ದಾಳಿ ಖಂಡಿಸಿ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkal) ಐಪಿಎಲ್ ಮಾದರಿಯಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಲೀಗ್ ಪಂದ್ಯಾವಳಿ ರದ್ದು ಮಾಡಿದೆ. ಇದರ ಜೊತೆಗೆ ಯುದ್ಧ ಮುಗಿಯುವವರೆಗೆ ಭಟ್ಕಳದ ಮುಸ್ಲಿಮರಿಗೆ ಮದುವೆ, ಮನೋರಂಜನೆ ಖರ್ಚಿಗೆ ಮಿತಿ ಹೇರುವಂತೆ ಮುಸ್ಲಿಂ ಯೂಥ್ ಫೆಡರೇಶನ್ (Muslim Youth Federation) ಕರೆ ಕೊಟ್ಟಿದೆ.

    ಈ ಕುರಿತು ಭಟ್ಕಳದಲ್ಲಿ ಮುಸ್ಲಿಂ ಯೂಥ್ ಫೆಡರೇಶನ್‌ನ ಅಧ್ಯಕ್ಷ ಆಝೀಜ್ ಉರ್ರೆಹಮಾನ್ ಮಾಧ್ಯಮ ಹೇಳಿಕೆ ನೀಡಿದ್ದು, ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್‌ನವರು ನಮ್ಮ ಸಹೋದರ ಮುಸ್ಲಿಮರನ್ನು ಹತ್ಯೆ ಮಾಡುತ್ತಿದ್ದಾರೆ. ಈ ದುಃಖದ ಸಂದರ್ಭದಲ್ಲಿ ನಾವು ಮೋಜು ಮಾಡುವುದು ಸರಿಯಲ್ಲ. ಅವರಿಗೆ ಸಹಾಯ ಮಾಡಬೇಕಿದೆ. ಭಟ್ಕಳದಲ್ಲಿ ಮುಸ್ಲಿಮರು ಮದುವೆ, ಮನೋರಂಜನೆಗೆ ಖರ್ಚು ಮಾಡುವುದನ್ನು ಕಡಿಮೆ ಮಾಡಿ ಅವರಿಗೆ ಸಹಾಯ ಮಾಡಬೇಕೆಂದು ಕೇಳಿಕೊಂಡಿದ್ದಾರೆ.

    ಭಟ್ಕಳದಲ್ಲಿ ಪ್ರತಿ ವರ್ಷ ಐಪಿಎಲ್ ಮಾದರಿಯಲ್ಲಿ ಕ್ರಿಕೆಟ್ (Cricket) ಪಂದ್ಯಾವಳಿಯನ್ನು ಮುಸ್ಲಿಂ ಯೂಥ್ ಪೆಡರೇಷನ್ ಆಯೋಜನೆ ಮಾಡಿಕೊಂಡು ಬಂದಿದೆ. ನವೆಂಬರ್ 3 ರಿಂದ ಒಂದು ತಿಂಗಳ ಕಾಲ ಐಪಿಎಲ್ ಮಾದರಿಯಲ್ಲಿ ನಡೆಯುತ್ತಿತ್ತು. ಭಟ್ಕಳ ಕ್ರಿಕೆಟ್ ಲೀಗ್-5 ಪಂದ್ಯಾವಳಿಗಾಗಿ ಕಳೆದ ತಿಂಗಳು 200 ಆಟಗಾರರನ್ನು ತಾಲೂಕಿನಲ್ಲಿ ಗುರುತಿಸಿ, ಹರಾಜು ಹಾಕಿ 12 ತಂಡವನ್ನು ಮುಸ್ಲಿಂ ಯೂಥ್ ಫೆಡರೇಶನ್ ಆಯ್ಕೆ ಮಾಡಿತ್ತು. ಇದಕ್ಕಾಗಿ ಭಟ್ಕಳ ತಾಲೂಕು ಕ್ರೀಡಾಂಗಣವನ್ನು ಆಯ್ಕೆ ಮಾಡಿ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಇದನ್ನೂ ಓದಿ: ಕ್ರೀಡಾ ಉತ್ಸವದಲ್ಲಿ ಟ್ರ್ಯಾಕ್ಟರ್ ಅಡಿಗೆ ಸಿಲುಕಿ ವ್ಯಕ್ತಿ ಸಾವು – ಟ್ರ್ಯಾಕ್ಟರ್ ಸ್ಟಂಟ್ ಬ್ಯಾನ್ ಮಾಡಿದ ಪಂಜಾಬ್

    ಈಗ ಇಸ್ರೇಲ್ ದಾಳಿ ಖಂಡಿಸಿ ಈ ಪಂದ್ಯಾವಳಿಯನ್ನು ರದ್ದು ಮಾಡಿದ್ದು ಪ್ಯಾಲೆಸ್ತೀನ್ ಪರ ನಿಂತಿದೆ. ಹೀಗಾಗಿ ಪ್ಯಾಲೆಸ್ತೀನ್ ಮುಸ್ಲಿಂ ಜನರಿಗೆ ಸಹಾಯ ಮಾಡಲು ಭಟ್ಕಳದ ಮುಸ್ಲಿಮರು ಸಿದ್ಧರಾಗಿದ್ದಾರೆ. ಇದನ್ನೂ ಓದಿ: ಭಾರತದ ನೆಲದಲ್ಲಿ ಹಮಾಸ್‌ ಕಾರ್ಯಕ್ರಮ ಬೇಕಿತ್ತಾ? – ಕೇರಳ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಬ್ಬರು ವೃದ್ಧ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

    ಇಬ್ಬರು ವೃದ್ಧ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

    ಟೆಲ್ ಅವಿವ್: ಗಾಜಾ ಪಟ್ಟಿಯಲ್ಲಿ (Gaza Strip) ಇಬ್ಬರು ಇಸ್ರೇಲಿ ಒತ್ತೆಯಾಳುಗಳನ್ನು (Hostages) ಬಿಡುಗಡೆ ಮಾಡಿರುವುದಾಗಿ ಹಮಾಸ್ (Hamas) ತಿಳಿಸಿದೆ.

    ಮಾನವೀಯ ಕಾರಣಗಳಿಂದಾಗಿ ಇಬ್ಬರು ವೃದ್ಧ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ. ಮಾನವೀಯ ಹಾಗೂ ಅವರ ಆರೋಗ್ಯದ ಕಾಳಜಿಯ ಹಿನ್ನೆಲೆ ನಾವು ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ ಎಂದು ಹಮಾಸ್ ಸೋಮವಾರ ತಿಳಿಸಿದೆ.

    ಬಿಡುಗಡೆಯಾದ ಒತ್ತೆಯಾಳುಗಳನ್ನು ನೂರಿಟ್ ಕೂಪರ್ (79) ಹಾಗೂ ಯೋಚೆವೆಡ್ ಲಿಫ್‌ಶಿಟ್ಜ್ (85) ಎಂದು ಸ್ಥಳೀಯ ಮಾಧ್ಯಮಗಳು ಗುರುತಿಸಿವೆ. ಗಾಜಾ ಗಡಿಯ ಸಮೀಪವಿರುವ ನಿರ್ ಓಜ್‌ನ ಕಿಬ್ಜತ್ಜ್‌ನಲ್ಲಿ ಈ ಇಬ್ಬರು ವೃದ್ಧೆಯರನ್ನು ಅವರ ಪತಿಯರೊಂದಿಗೆ ತಮ್ಮ ಮನೆಗಳಿಂದ ಹಮಾಸ್ ಉಗ್ರರು ಒತ್ತೆಯಾಳಾಗಿ ತೆಗೆದುಕೊಂಡಿದ್ದರು. ಇದೀಗ ವೃದ್ಧ ಮಹಿಳೆಯರನ್ನು ಆರೋಗ್ಯದ ಹಾಗೂ ಮಾನವೀಯ ದೃಷ್ಟಿಯಿಂದ ಬಿಡುಗಡೆ ಮಾಡಿದರೂ ಅವರ ಪತಿಯರನ್ನು ಬಿಡುಗಡೆ ಮಾಡಲಾಗಿಲ್ಲ ಎನ್ನಲಾಗದೆ.

    ಇದಕ್ಕೆ ಸಂಬಂಧಿಸಿದಂತೆ ಇಂಟರ್‌ನ್ಯಾಷನಲ್ ಕಮಿಟಿ ಆಫ್ ದಿ ರೆಡ್‌ಕ್ರಾಸ್ ಒತ್ತೆಯಾಳುಗಳ ಬಿಡುಗಡೆಯನ್ನು ಸುಗಮಗೊಳಿಸಿದೆ ಎಂದು ತಿಳಿಸಿದೆ. ಬಿಡುಗಡೆಯಾದ ಒತ್ತೆಯಾಳುಗಳು ಈಜಿಪ್ಟಿನ ರಫಾ ಕ್ರಾಸಿಂಗ್‌ಗೆ ಆಗಮಿಸಿದ್ದಾರೆ ಎಂದು ಈಜಿಪ್ಟ್ ಸುದ್ದಿ ಸಂಸ್ಥೆ ಸೋಮವಾರ ತಡರಾತ್ರಿ ವರದಿ ಮಾಡಿದೆ. ಆದರೆ ಈ ಬಗ್ಗೆ ಇಸ್ರೇಲ್ (Israel) ಯಾವುದೇ ಅಧಿಕೃತ ಪ್ರಕಟಣೆಯನ್ನು ಮಾಡಿಲ್ಲ. ಇದನ್ನೂ ಓದಿ: ಹಮಾಸ್ ರಾಕೆಟ್ ಲಾಂಚರ್‌ಗಳು ಧ್ವಂಸ – ಇಸ್ರೇಲ್ ಬಳಸಿದ Iron Sting ಬಾಂಬ್ ಎಷ್ಟು ಪವರ್‌ಫುಲ್?

    ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಗಾಜಾ ಪಟ್ಟಿ ಬಳಿ ದಾಳಿ ನಡೆಸಿ ಇಸ್ರೇಲಿ ಪ್ರಜೆಗಳು ಸೇರಿದಂತೆ ನೂರಾರು ಜನರನ್ನು ಅಪಹರಿಸಿದ್ದರು. ಅವರನ್ನು ಒತ್ತೆಯಾಳಾಗಿ ಇಟ್ಟ 2 ವಾರಗಳ ಬಳಿಕ ಕಳೆದ ಶುಕ್ರವಾರ ಅಮೆರಿಕ ಮೂಲದ ಜುಡಿತ್ ಹಾಗೂ ನಟಾಲಿ ರಾನನ್ ಅವರನ್ನು ಹಮಾಸ್ ಬಿಡುಗಡೆ ಮಾಡಿದೆ. ಇಸ್ರೇಲಿ ಸೇನೆಯ ಅಂದಾಜಿನ ಪ್ರಕಾರ 220ಕ್ಕೂ ಹೆಚ್ಚು ಇಸ್ರೇಲಿ ನಾಗರಿಕರು ಹಮಾಸ್ ವಶದಲ್ಲಿದ್ದಾರೆ.

    ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೋಮವಾರ ಪ್ಯಾಲೆಸ್ತೀನ್ ಗುಂಪು ಮೊದಲು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದರೆ ಮಾತ್ರವೇ ಕದನ ವಿರಾಮದ ಬಗ್ಗೆ ಮಾತುಕತೆ ನಡೆಸಬಹುದು ಎಂದಿದ್ದಾರೆ. ಇಸ್ರೇಲ್ ಸೋಮವಾರ ಗಾಜಾದ ಮೇಲೆ ತನ್ನ ವೈಮಾನಿಕ ದಾಳಿಯನ್ನು ಹೆಚ್ಚಿಸಿದೆ. ಕಳೆದ 24 ಗಂಟೆಗಳಲ್ಲಿ ಬಾಂಬ್ ದಾಳಿಗೆ 436 ಜನರು ಸಾವನ್ನಪ್ಪಿರುವುದಾಗಿ ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: Israel Hamas War: ಸಂಕಷ್ಟದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತದಿಂದ ಮಾನವೀಯ ನೆರವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೆಲುವಿನ ತನಕ ವಿರಮಿಸುವುದಿಲ್ಲ: ಇಸ್ರೇಲ್ ಪ್ರಧಾನಿ ಪ್ರತಿಜ್ಞೆ

    ಗೆಲುವಿನ ತನಕ ವಿರಮಿಸುವುದಿಲ್ಲ: ಇಸ್ರೇಲ್ ಪ್ರಧಾನಿ ಪ್ರತಿಜ್ಞೆ

    ಟೆಲ್ ಅವಿವ್: ಇಸ್ರೇಲ್ (Israel) ಹಾಗೂ ಪ್ಯಾಲೆಸ್ತೀನ್ (Palestine) ನಡುವಿನ ಯುದ್ಧ ಮುಂದುವರಿದಿದ್ದು, ಯಾವುದೇ ಕಾರಣಕ್ಕೂ ನಾವು ಹಿಂದೆ ಸರಿಯಲ್ಲ. ಗೆಲುವಿನ ತನಕ ವಿರಮಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಪ್ರತಿಜ್ಞೆ ಮಾಡಿದ್ದಾರೆ.

    ಹಮಾಸ್ (Hamas Terrorists) ಬಂಡುಕೋರರು ಒತ್ತಯಾಳಾಗಿಟ್ಟುಕೊಂಡವರಲ್ಲಿ ಇಬ್ಬರನ್ನು ಬಿಡುಗಡೆ ಮಾಡಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಅವರು, ಗೆಲುವಿನ ಕಡೆಯ ಕ್ಷಣದ ವರೆಗೂ ಹೋರಾಟ ನಡೆಸುತ್ತೇವೆ. ಬಾಂಬ್ ದಾಳಿಯಲ್ಲಿ ಯಾವುದೇ ವಿರಾಮವಿಲ್ಲ ಎಂದು ತಿಳಿಸಿದ್ದಾರೆ.

    ಹಮಾಸ್ ವಿರುದ್ಧದ ಹೋರಾಟಕ್ಕೆ 14ನೇ ದಿನ ತುಂಬಿದೆ. ಗಾಜಾದ ಆರೋಗ್ಯ ಸಚಿವಾಲಯದಿಂದ ಮಾಹಿತಿಗಳ ಪ್ರಕಾರ ಈವರೆಗೂ 4,137 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ, 13,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಸ್ರೇಲ್‌ನಲ್ಲಿ 1,400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಆಕ್ರಮಣದ ಸಮಯದಲ್ಲಿ ಹಮಾಸ್ 203 ಜನರನ್ನು ಒತ್ತೆಯಾಳಾಗಿರಿಸಿಕೊಂಡಿದೆ. ಅವರನ್ನು ಬಿಡುಗಡೆ ಮಾಡುವವರೆಗೂ ನಾವು ದಾಳಿ ಮುಂದುವರಿಸುತ್ತೇನೆ ಎಂದು ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇದನ್ನೂ ಓದಿ: ಹಮಾಸ್ ಉಗ್ರರಿಂದ ಇಬ್ಬರು ಒತ್ತೆಯಾಳುಗಳ ಬಿಡುಗಡೆ – ಮತ್ತಷ್ಟು ಜನರ ರಿಲೀಸ್ ಸಾಧ್ಯತೆ

    ಈ‌ ನಡುವೆ ಇಸ್ರೇಲ್ ಗಾಜಾದಲ್ಲಿ ನಡೆಸುತ್ತಿರುವ ದಾಳಿಯ ತೀವ್ರತೆಯನ್ನು ಕಡಿಮೆ ಮಾಡಬೇಕು ಎಂದು ಅಮೆರಿಕಾದ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಇಸ್ರೇಲ್‌ನಲ್ಲಿ ಬಂಡುಕೋರರು ದಾಳಿ ಮಾಡಿದ ನಂತರ ಗಾಜಾದಲ್ಲಿ ಒತ್ತೆಯಾಳುಗಳಾಗಿದ್ದ ಇಬ್ಬರು ಅಮೆರಿಕನ್ನರನ್ನ ಬಿಡುಗಡೆ ಮಾಡಿದ ಬಳಿಕ ಶ್ವೇತ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಹೆಚ್ಚಿನ ಒತ್ತೆಯಾಳುಗಳು ಹೊರಬರುವವರೆಗೆ ಇಸ್ರೇಲ್ -ಗಾಜಾದ ಸಂಭಾವ್ಯ ನೆಲದ ಆಕ್ರಮಣವನ್ನು ವಿಳಂಬಗೊಳಿಸಬೇಕು ಎಂದು ಹೇಳಿದ್ದಾರೆ.

    ಅಮೆರಿಕ ಸಂಯುಕ್ತ ಸಂಸ್ಥಾನದೊಂದಿಗೆ ಯುರೋಪಿನ ಹಲವಾರು ಸರ್ಕಾರಗಳು ಗಾಜಾದ ಮೇಲೆ ನೆಲದ ಆಕ್ರಮಣವನ್ನು ವಿಳಂಬಗೊಳಿಸುವಂತೆ ಇಸ್ರೇಲ್ ಅನ್ನು ಒತ್ತಾಯಿಸುತ್ತಿವೆ. ಸೌದಿ ಅರೇಬಿಯಾ ಕಳೆದ ಎರಡು ವಾರಗಳಲ್ಲಿ ಗಾಜಾದ ಮೇಲೆ ಇಸ್ರೇಲ್‌ನ ಬಾಂಬ್ ದಾಳಿಯನ್ನು ಬಹಳ ಟೀಕಿಸಿದೆ. ಇದನ್ನೂ ಓದಿ: ಇಸ್ರೇಲ್-ಹಮಾಸ್ ಯುದ್ಧದಲ್ಲಿ 5,000ಕ್ಕೂ ಹೆಚ್ಚು ಮಂದಿ ಬಲಿ – ಗಾಜಾಗೆ ನುಗ್ಗಲು ಯಹೂದಿ ಸೇನೆ ರೆಡಿ

    ಇದಕ್ಕೆ ಪ್ರತಿಕ್ರಿಸಿರುವ ಇಸ್ರೇಲ್‌ನ ರಕ್ಷಣಾ ಸಚಿವ ಯೋವ್ ಗ್ಯಾಲಂಟ್, ಗಾಜಾ ಪಟ್ಟಿಯಲ್ಲಿ ಜನರ ಜೀವನವನ್ನು ನಿಯಂತ್ರಿಸಲು ಮಿಲಿಟರಿ ಯೋಜಿಸುವುದಿಲ್ಲ. ಹಮಾಸ್‌ನೊಂದಿಗಿನ ಯುದ್ಧಕ್ಕೆ ಮೂರು ಹಂತಗಳಿವೆ, ಮೊದಲು ವಾಯುದಾಳಿ ಮತ್ತು ನೆಲದ ಕುಶಲತೆಯಿಂದ ದಾಳಿ ಮಾಡುತ್ತೇವೆ, ನಂತರ ಪ್ರತಿರೋಧದ ಹಮಾಸ್ ನೆಲೆಗಳಲ್ಲಿ ದಾಳಿ ಮಾಡಲಾಗುತ್ತದೆ ಅಂತಿಮವಾಗಿ ಗಾಜಾ ಪಟ್ಟಿಯಲ್ಲಿ ಜೀವನದ ಸುಗಮಗೊಳಿಸಲಿದೆ ಎಂದು ಅವರು ಹೇಳಿದ್ದಾರೆ.

     Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ಯಾಲೆಸ್ತೀನಿಯರಿಗೆ 2.5 ಕೋಟಿ ರೂ. ನೆರವು ಘೋಷಿಸಿದ ಮಲಾಲ

    ಪ್ಯಾಲೆಸ್ತೀನಿಯರಿಗೆ 2.5 ಕೋಟಿ ರೂ. ನೆರವು ಘೋಷಿಸಿದ ಮಲಾಲ

    ಟೆಲ್ ಅವಿವ್: ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸುಫ್ ಜಾಯ್ (Malala Yousafzai) ಅವರು ಪ್ಯಾಲೆಸ್ತೀನಿಯನ್ನರಿಗೆ (Palestine) ಸಹಾಯ ಮಾಡುವ ಮೂರು ದತ್ತಿಗಳಿಗೆ 3,00,000 ಡಾಲರ್ (ಸುಮಾರು 2.5 ಕೋಟಿ) ನೆರವು (Assistance) ನೀಡುವುದಾಗಿ ಘೋಷಿಸಿದ್ದಾರೆ.

    ಮಂಗಳವಾರ ಗಾಜಾದಲ್ಲಿ (Gaza) ಆಸ್ಪತ್ರೆಯೊಂದರ ಮೇಲೆ ನಡೆದ ಬಾಂಬ್ ದಾಳಿಯಲ್ಲಿ ಸುಮಾರು 500 ಜನರು ಸಾವನ್ನಪ್ಪಿದ ಘಟನೆಯನ್ನು ಕಂಡು ತಾನು ಗಾಬರಿಗೊಂಡಿದ್ದೇನೆ ಎಂದು ಯೂಸುಫ್ ಜಾಯ್ ಹೇಳಿದರು ಮತ್ತು ಸಾಮೂಹಿಕ ಶಿಕ್ಷೆ ಇದಕ್ಕೆ ಉತ್ತರವಲ್ಲ ಎಂದರು. ಇದನ್ನೂ ಓದಿ: ಓಮನ್‌ನ ಐತಿಹಾಸಿಕ ಶಿವ ದೇವಾಲಯಕ್ಕೆ ಕೇಂದ್ರ ಸಚಿವ ಮುರಳೀಧರನ್ ಭೇಟಿ

    ಗಾಜಾದ ಅಲ್-ಅಹ್ಲಿ ಆಸ್ಪತ್ರೆಯ ಮೇಲೆ ನಡೆದ ಬಾಂಬ್ ದಾಳಿಯನ್ನು ನೋಡಿ ನಾನು ಗಾಬರಿಗೊಂಡಿದ್ದೇನೆ ಮತ್ತು ಅದನ್ನು ನಿಸ್ಸಂದಿಗ್ಧವಾಗಿ ಖಂಡಿಸುತ್ತೇನೆ ಎಂದು ಯೂಸುಫ್ ಜಾಯ್ ವೀಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ. ಗಾಜಾಕ್ಕೆ ಮಾನವೀಯ ನೆರವನ್ನು ಅನುಮತಿಸಲು ಮತ್ತು ಕದನ ವಿರಾಮದ ಕರೆಯನ್ನು ಪುನರುಚ್ಚರಿಸಲು ನಾನು ಇಸ್ರೇಲಿ ಸರ್ಕಾರವನ್ನು ಒತ್ತಾಯಿಸುತ್ತೇನೆ. ಇದನ್ನೂ ಓದಿ: ಬೈಡನ್ ನಿರ್ಗಮನದ ಬಳಿಕ ಹಮಾಸ್ ದಾಳಿ ತೀವ್ರ – ಇಂದು ಇಸ್ರೇಲ್‌ಗೆ ರಿಷಿ ಸುನಾಕ್ ಭೇಟಿ

    ದಾಳಿಯಲ್ಲಿರುವ ಪ್ಯಾಲೆಸ್ತೀನಿಯನ್ ಜನರಿಗೆ ಸಹಾಯ ಮಾಡುವ ಮೂರು ದತ್ತಿಗಳಿಗೆ ನಾನು 3,00,000 ಡಾಲರ್ ಅನ್ನು ನಿರ್ದೇಶಿಸುತ್ತಿದ್ದೇನೆ. ನೊಬೆಲ್ ಪ್ರಶಸ್ತಿ ವಿಜೇತರು ತಕ್ಷಣದ ಕದನ ವಿರಾಮ ಮತ್ತು ಶಾಶ್ವತ ಶಾಂತಿಗಾಗಿ ಶ್ರಮಿಸಬೇಕು ಎಂದು ಸರ್ಕಾರಗಳಿಗೆ ಕರೆ ನೀಡಿದರು. ಇದನ್ನೂ ಓದಿ: ದೇಶ ತೊರೆಯಿರಿ – ಅಫ್ಘಾನ್‌ ಪ್ರಜೆಗಳಿಗೆ ಪಾಕ್‌ ದಿಢೀರ್‌ ಎಚ್ಚರಿಕೆ ನೀಡಿದ್ದು ಯಾಕೆ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]