Tag: pan card

  • ಧರ್ಮಸ್ಥಳ ಕೇಸ್‌ | ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪಾನ್ ಕಾರ್ಡ್‌ ‌ರಹಸ್ಯ ಬಯಲು; ವಾರಸುದಾರರು ಪತ್ತೆ

    ಧರ್ಮಸ್ಥಳ ಕೇಸ್‌ | ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪಾನ್ ಕಾರ್ಡ್‌ ‌ರಹಸ್ಯ ಬಯಲು; ವಾರಸುದಾರರು ಪತ್ತೆ

    – ಧರ್ಮಸ್ಥಳ ಪ್ರಕರಣಕ್ಕೂ ಇದಕ್ಕೂ ಸಂಬಂಧ ಇಲ್ಲವೆಂದ ಕುಟುಂಬಸ್ಥರು

    ನೆಲಮಂಗಲ: ಧರ್ಮಸ್ಥಳದಲ್ಲಿ (Dharmasthala) ಎಸ್‌ಐಟಿ ತನಿಖೆ ವೇಳೆ ಪಾಯಿಂಟ್‌ ನಂ.1ನಲ್ಲಿ ಸಿಕ್ಕ ಡೆಬಿಟ್‌, ಪ್ಯಾನ್‌ ಕಾ‌ರ್ಡ್‌ನ ವಾರಸುದಾರರ ವಿಳಾಸ ಪತ್ತೆಯಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ (Nelamangala) ತಾಲೂಕಿನ ದಾಬಸ್‌ಪೇಟೆ ನಿವಾಸಿಯಾಗಿದ್ದ ಸುರೇಶ್ ಎಂಬಾತನದ್ದು ಅನ್ನೋದು ಗೊತ್ತಾಗಿದೆ.

    ಗಂಗಮರಿಯಪ್ಪ ಹಾಗೂ ಸಿದ್ದಲಕ್ಷ್ಮಮ್ಮ ಎಂಬುವರ ಪುತ್ರ ಸುರೇಶ್ ಪರ್ಸ್‌ನಲ್ಲಿ ಎರಡು ಪ್ಯಾನ್‌ ಕಾರ್ಡ್‌ಗಳು ಪತ್ತೆಯಾಗಿತ್ತು. ಒಂದು ಸುರೇಶ್‌ ಎಂಬಾತನ ಪ್ಯಾನ್‌ ಕಾರ್ಡ್ (PAN Card), ಮತ್ತೊಂದು ಅವರ ತಾಯಿ ಸಿದ್ದಲಕ್ಷ್ಮಮ್ಮ ಅವರ ಪ್ಯಾನ್ ಕಾರ್ಡ್ ಎಂಬುದು ಬಹಿರಂಗವಾಗಿತ್ತು. 2‌ ವರ್ಷಗಳ ಹಿಂದೆ ಮನೆ ಬಿಟ್ಟು ತೆರಳಿದ್ದ ಸುರೇಶ್ ಆಗ ಧರ್ಮಸ್ಥಳಕ್ಕೆ ತೆರಳಿದ್ದ ಎನ್ನಲಾಗಿದೆ. ಮಾರ್ಚ್ ತಿಂಗಳಲ್ಲಿ ಜಾಂಡಿಸ್‌ನಿಂದಾಗಿ (Jandes) ಸುರೇಶ್ ಸಾವನ್ನಪ್ಪಿದ್ದರು. ಇನ್ನು ಸಿದ್ದಲಕ್ಷ್ಮಮ್ಮ ಬದುಕಿದ್ದಾರೆ. ಈ ಕುರಿತು ಸುರೇಶ್‌ ಕುಟುಂಬಸ್ಥರು ʻಪಬ್ಲಿಕ್‌ ಟಿವಿʼಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ – ಸಹಾಯವಾಣಿ ತೆರೆದ ಎಸ್‌ಐಟಿ 

    ಮೃತ ಸುರೇಶ್ ಅಕ್ಕ ರೂಪಾ ʻಪಬ್ಲಿಕ್ ಟಿವಿʼ ಜೊತೆ ಮಾತನಾಡಿ, ಸಾಕಷ್ಟು ಬಾರಿ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಆಗ ಧರ್ಮಸ್ಥಳದಲ್ಲಿ ಮಿಸ್ ಆಗಿರಬೇಕು. ನಮ್ಮ ತಾಯಿಯ ಎಟಿಎಂ ಕಾರ್ಡ್ ಕಳೆದು ಹೋಗಿದೆ ಎಂದು ಹೇಳಿದ್ದ. ಆಗ ನಮ್ಮ ತಾಯಿ ಹೊಸ ಎಟಿಎಂ ಕಾರ್ಡ್ ತೆಗೆದುಕೊಂಡಿದ್ದರು. ಸುರೇಶ್‌ 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ, 5 ತಿಂಗಳ ಹಿಂದೆ ಇಲ್ಲೇ ಮೃತಪಟ್ಟಿದ್ದರು. ಧರ್ಮಸ್ಥಳದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅನಾಮಿಕ ವ್ಯಕ್ತಿ ನಟೋರಿಯಸ್ ಕೆಲಸ ಮಾಡಿ ಕ್ಷೇತ್ರದಿಂದ ಉಚ್ಚಾಟನೆಗೊಂಡಿದ್ದ: ಧರ್ಮಸ್ಥಳ ಗ್ರಾ.ಪಂ ಮಾಜಿ ಅಧ್ಯಕ್ಷ

    ಮೃತ ಸುರೇಶ್ ತಾಯಿ ಮಾತನಾಡಿ, ಅಲ್ಲಿ ಸಿಕ್ಕ ದಾಖಲೆಗಳು ನನ್ನದು ಹಾಗೂ ನನ್ನ ಮಗನದ್ದೇ, ಈ ಹಿಂದೆ ಧರ್ಮಸ್ಥಳಕ್ಕೆ ಹೋದಾಗ ಕಳೆದು ಹೋಗಿದೆ ಎಂದು ನನ್ನ ಮಗ ಸುರೇಶ್ ಹೇಳಿದ್ದ. ಸುರೇಶ್ ಅನಾರೋಗ್ಯದಿಂದ ಮೃತ ಪಟ್ಟಿದ್ದಾನೆ. ನನ್ನ ಎಟಿಎಂ ಕಾರ್ಡ್ ಸುರೇಶ್ ಬಳಿ ಇತ್ತು, ಅಲ್ಲಿ ಹೋದಾಗ ಕಳೆದು ಹೋಗಿದೆ. ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿ ಅನಾರೋಗ್ಯದಿಂದ ಮೃತ ಪಟ್ಟಿದ್ದಾನೆ. ಧರ್ಮಸ್ಥಳ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲವೆಂದು ಹೇಳಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ – 6ನೇ ಪಾಯಿಂಟಲ್ಲಿ 12 ಮೂಳೆಗಳು ಪತ್ತೆ, ಇಂದು 7ನೇ ಸಮಾಧಿ ಅಗೆತ

  • ಧರ್ಮಸ್ಥಳ ಕೇಸ್;‌ ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪಾನ್‌ ಕಾರ್ಡ್‌ ರಹಸ್ಯ ಬಯಲು – ವಾರಸುದಾರ ಮಹಿಳೆ ಇನ್ನೂ ಜೀವಂತ

    ಧರ್ಮಸ್ಥಳ ಕೇಸ್;‌ ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪಾನ್‌ ಕಾರ್ಡ್‌ ರಹಸ್ಯ ಬಯಲು – ವಾರಸುದಾರ ಮಹಿಳೆ ಇನ್ನೂ ಜೀವಂತ

    ಮಂಗಳೂರು: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪಾಯಿಂಟ್‌ ನಂಬರ್‌ ಒಂದರಲ್ಲಿ ಸಿಕ್ಕ ಡೆಬಿಟ್‌ ಕಾರ್ಡ್‌, ಪಾನ್‌ ಕಾರ್ಡ್‌ ರಹಸ್ಯ ಬಯಲಾಗಿದೆ. ಡೆಬಿಟ್ ಕಾರ್ಡ್ ವಾರಿಸುದಾರ ಮಹಿಳೆ ಇನ್ನೂ ಜೀವಂತವಾಗಿದ್ದಾರೆ.

    ಪಾಯಿಂಟ್ ನಂಬರ್ ಒನ್‌ನಲ್ಲಿ ಡೆಬಿಟ್ ಹಾಗೂ ಪಾನ್ ಕಾರ್ಡ್ ಪತ್ತೆಯಾಗಿತ್ತು. ಅನಾರೋಗ್ಯದಿಂದ ಪಾನ್ ಕಾರ್ಡ್ ವಾರಿಸುದಾರ ಸಾವು ಎಂದು ಮಾಹಿತಿ ಸಿಕ್ಕಿತ್ತು. ಇದೀಗ, ಆ ಡೆಬಿಟ್ ಕಾರ್ಡ್ ಸಾವಿಗೀಡಾದ ವ್ಯಕ್ತಿಯ ತಾಯಿಗೆ ಸೇರಿದ್ದು ಎಂದು ಮಾಹಿತಿ ಲಭಿಸಿದೆ.

    ಡೆಬಿಟ್‌ ಕಾರ್ಡ್‌ ವಾರಸುದಾರ ಮಹಿಳೆ ಇನ್ನೂ ಜೀವಂತವಾಗಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಮಹಿಳೆಯನ್ನು ಸಂಪರ್ಕಿಸಿದ್ದಾರೆ. ಮಹಿಳೆ ಇನ್ನೂ ಜೀವಂತ ಎಂದು ಮಾಹಿತಿ ಸಿಕ್ಕಿದೆ. ಡೆಬಿಟ್ ಕಾರ್ಡ್ ಬಳಕೆದಾರರ ಮಾಹಿತಿಯನ್ನು ಎಸ್‌ಐಟಿ ಖಚಿತಪಡಿಸಿದೆ.

    ಇದೇ ಡೆಬಿಟ್ ಕಾರ್ಡ್ ಹಾಗೂ ಪಾನ್ ಕಾರ್ಡ್ ಕುರಿತು ಅನೇಕ ಊಹಾಪೋಹ ಸೃಷ್ಟಿಯಾಗಿತ್ತು. ಸದ್ಯ ಎಲ್ಲ ಉಹಾಪೋಹಗಳಿಗೆ ತೆರೆ ಬಿದ್ದಿದೆ.

  • QR ಕೋಡ್‌ ಇಲ್ಲದ ಪಾನ್‌ ಕಾರ್ಡ್‌ ಮಾನ್ಯವೇ? ಪಾನ್‌ 2.0 ಯೋಜನೆ ಏನು? ಹೊಸ ಪಾನ್‌ ಪಡೆಯುವುದು ಹೇಗೆ?

    QR ಕೋಡ್‌ ಇಲ್ಲದ ಪಾನ್‌ ಕಾರ್ಡ್‌ ಮಾನ್ಯವೇ? ಪಾನ್‌ 2.0 ಯೋಜನೆ ಏನು? ಹೊಸ ಪಾನ್‌ ಪಡೆಯುವುದು ಹೇಗೆ?

    ಪಾನ್‌ ಕಾರ್ಡ್‌ (PAN Card) ಸರ್ಕಾರ ಜಾರಿಗೊಳಿಸಿರುವ ಮಹತ್ವದ ದಾಖಲೆಗಳಲ್ಲಿ ಒಂದಾಗಿದೆ. ಇಂದಿನ ದಿನಗಳಲ್ಲಿ ನಿಮ್ಮ ಯಾವುದೇ ಸರ್ಕಾರಿ ಕೆಲಸ ಕಾರ್ಯಗಳನ್ನು ಮಾಡಬೇಕಂದರೆ ಪಾನ್ ಕಾರ್ಡ್ ಅತ್ಯಗತ್ಯ. ಪಾನ್‌ ಕಾರ್ಡ್‌ನಲ್ಲಿ ಮಹತ್ವದ ಬದಲಾವಣೆ ತರುವ ಸಲುವಾಗಿ ಕೇಂದ್ರ ಸರ್ಕಾರ ಪಾನ್‌ 2.0 ಎಂಬ ಯೋಜನೆ ಅನುಷ್ಠಾನಕ್ಕೆ ತರಲು ಅನುಮೋದನೆ ನೀಡಿದೆ. ಆದಾಯ ಹೊಂದಿರುವ ಪ್ರತಿ ವ್ಯಕ್ತಿಯೂ ಇಂದು ದೇಶದಲ್ಲಿ ಪಾನ್ ಕಾರ್ಡ್ ಹೊಂದುವುದು ಅತೀ ಅಗತ್ಯವಾಗಿದೆ. ಅದೂ ಅಲ್ಲದೆ ಈಗಾಗಲೇ ಪಾನ್‌ ಕಾರ್ಡ್‌ ಆಧಾರ್‌ ಜೊತೆ ಲಿಂಕ್‌ ಮಾಡುವುದು ಕೂಡ ಅತ್ಯಗತ್ಯವಾಗಿದೆ. ಇದರ ನಡುವೆಯೇ ಇದೀಗ ಕೇಂದ್ರ ಸರ್ಕಾರ ಪಾನ್ ಕಾರ್ಡ್ 2.0 ಯೋಜನೆಗೆ ಅನುಮೋದನೆ ನೀಡಿದೆ. ಇನ್ನುಮುಂದೆ ಪ್ರತಿಯೊಂದು ಪಾನ್‌ ಕಾರ್ಡ್‌ನಲ್ಲೂ ಕ್ಯೂಆರ್‌ ಕೋಡ್‌ (QR Code) ಇರಲಿದೆ. ಹಾಗಿದ್ರೆ ಏನಿದು ಪಾನ್‌ 2.0 ಯೋಜನೆ? ಯಾರೆಲ್ಲಾ ಅರ್ಜಿ ಸಲ್ಲಿಸಬೇಕು? ಕ್ಯೂಆರ್‌ ಕೋಡ್‌ ಇಲ್ಲದ ಪಾನ್‌ ಹೊಂದಿರುವವರು ಅಪ್ಡೇಟ್‌ ಮಾಡಿಕೊಳ್ಳುವುದು ಹೇಗೆ ಎಂಬೆಲ್ಲಾ ವಿಷಯಗಳನ್ನು ಇಲ್ಲಿ ವಿವರಿಸಲಾಗಿದೆ.

    ಏನಿದು ಪಾನ್‌ 2.0 ಯೋಜನೆ?
    ಪಾನ್ ಕಾರ್ಡ್‌ನಲ್ಲಿ ಮಹತ್ವದ ಬದಲಾವಣೆ ಹಾಗೂ ಹೆಚ್ಚುವರಿ ಸುರಕ್ಷತೆ, ಸುಲಭ ಹಾಗೂ ಸರಳ ತೆರಿಗೆ ಪಾವತಿ ವ್ಯವಸ್ಥೆ ಸೇರಿದಂತೆ ಹಲವು ಪ್ರಯೋಜನಗಳನ್ನುನೀಡಲು ಕೇಂದ್ರ ಸರ್ಕಾರ ಪಾನ್‌ 2.0 ಯೋಜನೆಗೆ ಅನುಮತಿ ನೀಡಿದೆ. ಇದಕ್ಕಾಗಿ ಕೇಂದ್ರ ಕ್ಯಾಬಿನೆಟ್ ಬರೋಬ್ಬರಿ 1,435 ಕೋಟಿ ರೂಪಾಯಿ ಮೀಸಲಿಟ್ಟಿದೆ. ಪಾನ್ 2.0 ಯೋಜನೆಯು ಎಲ್ಲಾ ಸರ್ಕಾರಿ ಡಿಜಿಟಲ್ ವ್ಯವಸ್ಥೆಗಳಲ್ಲಿ ಪಾನ್ ಸಂಖ್ಯೆಯನ್ನು ಸಾಮಾನ್ಯ ವ್ಯಾಪಾರ ಗುರುತಿಸುವಿಕೆಯನ್ನಾಗಿ ಮಾಡುವ ಗುರಿ ಹೊಂದಿದೆ. ಕ್ಯಾಬಿನೆಟ್ ಆರ್ಥಿಕ ವ್ಯವಹಾರಗಳ ಸಮಿತಿ (CCEA) ಆದಾಯ ತೆರಿಗೆ ಇಲಾಖೆಯಡಿಯಲ್ಲಿ ಯೋಜನೆಗೆ ಅನುಮೋದನೆ ನೀಡಿದೆ.

    ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಪ್ರಕಾರ, ಅಸ್ತಿತ್ವದಲ್ಲಿರುವ ಪಾನ್ ಸಂಖ್ಯೆಗಳು ಮಾನ್ಯವಾಗಿರುತ್ತವೆ. ವರ್ಧಿತ ವೈಶಿಷ್ಟ್ಯಗಳೊಂದಿಗೆ ಹೊಸ ಕಾರ್ಡ್‌ಗಳನ್ನು ನೀಡಲಾಗುತ್ತದೆ. ಹೀಗಾಗಿ ಹಳೇ ಪಾನ್ ಕಾರ್ಡ್ ಇರುವವರು ಹೊಸ ಯೋಜನೆಯಿಂದ ಆತಂಕ ಪಡುವ ಅವಶ್ಯಕತೆ ಇಲ್ಲ. ಹಳೇ ಕಾರ್ಡ್ ಕಾರ್ಯನಿರ್ವಹಿಸುತ್ತದೆ ಎಂದಿದ್ದಾರೆ.

    ಈ ಹೊಸ ಪಾನ್ 2.0 ಕೇಂದ್ರ ಸರ್ಕಾರದ ಆಡಳಿತ ಪ್ರಾಜೆಕ್ಟ್ ಆಗಿದ್ದು ಲೇಟೆಸ್ಟ್ ಟೆಕ್ನಾಲಜಿಯ ಮೂಲಕ ತೆರಿಗೆದಾರರ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಆಧುನೀಕರಿಸಲು ವಿನ್ಯಾಸಗೊಳಿಸಲಾಗಿರುವ ಹೊಸ ಯೋಜನೆಯಾಗಿದೆ. ಭಾರತದಲ್ಲಿ ತೆರಿಗೆದಾರರ ಸೇವೆಗಳನ್ನು ಸುಧಾರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ಪ್ಯಾನ್ ಕಾರ್ಡ್‌ಗಳಲ್ಲಿ (PAN Card) ಹೊಸ QR ಕೋಡ್ ವ್ಯವಸ್ಥೆಯನ್ನು ಅಳವಡಿಸಲು ಅಡ್ವಾನ್ಸ್ ಆವೃತ್ತಿಯಾದ ಪಾನ್ 2.0 ಅನ್ನು ಪರಿಚಯಿಸಿದೆ.

    ಪಾನ್ ಕಾರ್ಡ್‌ಗಳಲ್ಲೂ QR ಕೋಡ್‌ಗಳನ್ನು ಪರಿಚಯಿಸಲಾಗುತ್ತದೆ. ಇದರಿಂದ ನಿಮ ಪ್ರತಿಯೊಂದು ಬ್ಯಾಂಕ್ ಮತ್ತು ಹಣಕಾಸಿನ ವ್ಯವಹಾರಗಳ ಮೇಲೆ ಸರ್ಕಾರಿ ಸಂಸ್ಥೆಗಳು ಎಲ್ಲವನ್ನು ಡಿಜಿಟಲ್ ವ್ಯವಸ್ಥೆಗಳಿಗೆ ಮಾರ್ಪಡಿಸಿ ತನ್ನ ಕಣ್ಣ ಮುಂದೆ ಇಡುವ ಗುರಿಯನ್ನು ಹೊಂದಿದ್ದು ಇದರಿಂದ ಕಪ್ಪು ಹಣಕ್ಕೆ ಬ್ರೇಕ್ ಹಾಕಲಿದೆ.

    ಕ್ಯೂಆರ್‌ ಕೋಡ್‌ ಇಲ್ಲದ ಪಾನ್‌ ಮಾನ್ಯವೇ?
    ಅಸ್ತಿತ್ವದಲ್ಲಿರುವ ಪಾನ್ ಸಂಖ್ಯೆಗಳು ಮಾನ್ಯವಾಗಿರುತ್ತವೆ. ವರ್ಧಿತ ವೈಶಿಷ್ಟ್ಯಗಳೊಂದಿಗೆ ಹೊಸ ಕಾರ್ಡ್‌ಗಳನ್ನು ನೀಡಲಾಗುತ್ತದೆ. ಹೀಗಾಗಿ ಹಳೇ ಪಾನ್ ಕಾರ್ಡ್ ಇರುವವರು ಹೊಸ ಯೋಜನೆಯಿಂದ ಆತಂಕ ಪಡುವ ಅವಶ್ಯಕತೆ ಇಲ್ಲ. ಹಳೇ ಕಾರ್ಡ್ ಕಾರ್ಯನಿರ್ವಹಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ಇನ್ನು ಅಪ್‌ಗ್ರೇಡ್ ಮಾಡಲಾದ ಪಾನ್ 2.0 ಕಾರ್ಡ್ QR ಕೋಡ್ ಸೇರಿದಂತೆ ಹೊಸ ವೈಶಿಷ್ಟ್ಯಗಳನ್ನು ಹೊಂದಿರುತ್ತದೆ ಮತ್ತು ಇದನ್ನು ಉಚಿತವಾಗಿ ಒದಗಿಸಲಾಗುತ್ತದೆ. ಸದ್ಯ ಹಳೇ ಕಾರ್ಡ್ ಇರುವವರಿಗೂ ಹೊಸ ಕಾರ್ಡನ್ನು ಉಚಿತವಾಗಿ ನೀಡಲಾಗುತ್ತದೆ. ಹೀಗಾಗಿ ಹೊಸ ಕಾರ್ಡ್‌ಗಾಗಿ ಅರ್ಜಿ ಹಾಕುವುದು, ಶುಲ್ಕ ಪಾವತಿಸುವ ಅಗತ್ಯವಿಲ್ಲ. ಈ ಯೋಜನೆಯು ಪಾನ್ ಸೇವೆಗಳನ್ನು ಡಿಜಿಟಲೀಕರಣಗೊಳಿಸುತ್ತದೆ.

    ಪಾನ್ 2.0 ಯೋಜನೆಯಿಂದ ಡೇಟಾ ಮಾಹಿತಿ, ತೆರಿಗೆ ಪಾವತಿ ವ್ಯವಸ್ಥೆ ಸೇರಿದಂತೆ ಪಾನ್ ಸಂಬಂದಿಸಿದ ಕೆಲಸಗಳು ಅತೀ ಸುಲಭವಾಗಿ ನಡೆಯಲಿದೆ. ಈ ಯೋಜನೆಯು ಇ-ಆಡಳಿತ ವರ್ಧನೆಗಳು ಮತ್ತು PAN/TAN ಸೇವೆಗಳನ್ನು ಮರುವಿನ್ಯಾಸಗೊಳಿಸುವುದು, ಅಸ್ತಿತ್ವದಲ್ಲಿರುವ ವ್ಯವಸ್ಥೆಗಳನ್ನು ಸಂಯೋಜಿಸುವುದರ ಮೇಲೆ ಕೇಂದ್ರೀಕರಿಸುತ್ತದೆ.

    ಅಪ್‌ಗ್ರೇಡ್ ಮಾಡಲು ಅರ್ಜಿ ಸಲ್ಲಿಸಬೇಕೇ?
    ಪ್ರಸ್ತುತ ಕೇಂದ್ರ ಸರಕಾರದಿಂದ ಹೊರಡಿಸಿರುವ ಪ್ರಕಟಣೆಯನ್ವಯ ನಿಮ್ಮ ಬಳಿ ಇರುವ ಹಳೆಯ ಪಾನ್ ಕಾರ್ಡ್ ಅನ್ನು ಅಪ್‌ಗ್ರೇಡ್ ಮಾಡಲು ಹೊಸದಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಲಾಗಿದೆ.

    ಈಗಾಗಲೇ ದೇಶದಲ್ಲಿ 78 ಕೋಟಿಗೂ ಅಧಿಕ ಪಾನ್ ಕಾರ್ಡಗಳು ಅಸ್ತಿತ್ವದಲ್ಲಿದ್ದು ಈ ಎಲ್ಲಾ ಪಾನ್ ಕಾರ್ಡ್‌ಗಳನ್ನು ಉಚಿತವಾಗಿ ಕೇಂದ್ರ ಸರ್ಕಾರವು ಅಪ್‌ಗ್ರೇಡ್ ಮಾಡಿ ಸಾರ್ವಜನಿಕರಿಗೆ ವಿತರಣೆ ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ಪ್ರಯೋಜನಗಳೇನು?
    -ಪಾನ್ ಕಾರ್ಡ್‌ನಲ್ಲಿ ಕ್ಯೂಆರ್ ಕೋಡ್ ಅಳವಡಿಕೆ ಮಾಡುವುದರಿಂದ ತೆರಿಗೆದಾರರ ಮಾಹಿತಿಯನ್ನು ನಿಖರವಾಗಿ ದಾಖಲಿಸಲು ಸಹಾಯವಾಗುತ್ತದೆ.
    -ಕ್ಯೂಆರ್ ಕೋಡ್ ತಾಂತ್ರಿಕತೆಯಿಂದಾಗಿ ಬಳಕೆದಾರರ ಮಾಹಿತಿ ಸೋರಿಕೆಯಾಗದಂತೆ ತಡೆಯಲು ಸಹಕಾರಿಯಾಗಿದೆ.
    -ಸುಧಾರಿತ ಎನ್ಕ್ರಿಪ್ಶನ್ ತಾಂತ್ರಿಕತೆಯು ಈ ಕಾರ್ಡ್‌ನಲ್ಲಿ ಇರುವುದರಿಂದ ತೆರಿಗೆದಾರರ ಡೇಟಾವನ್ನು ಸುರಕ್ಷಿತವಾಗಿ ಸಂಗ್ರಹಣೆ ಮಾಡಲು ಸಾಧ್ಯವಾಗುತ್ತದೆ.
    -ತ್ವರಿತವಾಗಿ ಹಣಕಾಸಿಗೆ ಸಂಬಂಧಪಟ್ಟ ವಹಿವಾಟನ್ನು ಮಾಡಲು ಈ ವಿಧಾನವು ನೆರವಾಗುತ್ತದೆ ಎಂದು ಯೋಜನೆಯ ಕುರಿತಾದ ಪ್ರಕಟಣೆಯಲ್ಲಿ ಉಲೇಖಿಸಲಾಗಿದೆ.

    PAN 2.0ಗೆ ಯಾರಲ್ಲಾ ಅರ್ಹರು?
    ಪಾನ್ ಕಾರ್ಡ್‌ ಹೊಂದಿರುವವರು ಎಲ್ಲರೂ ಕೂಡ PAN 2.0 ಅಪ್‌ಗ್ರೇಡ್‌ಗೆ ಅರ್ಹರಾಗಿರುತ್ತಾರೆ . ನೀವು ಈಗಾಗಲೇ ಪಾನ್ ಹೊಂದಿದ್ದರೆ, ಮರು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಆದರೆ ನೀವು ಹೊಸ QR-ಕೋಡ್‌ಗಾಗಿ ವಿನಂತಿಸಬಹುದು. ಹಾಗೆ ಹೊಸದಾಗಿ ಅರ್ಜಿ ಸಲ್ಲಿಸುವವರು, ಮಾನ್ಯವಾದ ಗುರುತು ಮತ್ತು ವಿಳಾಸದ ಪುರಾವೆಗಳನ್ನು ಸಲ್ಲಿಸುವ ಮೂಲಕ ಪ್ರಮಾಣಿತ ಅರ್ಹತಾ ಮಾನದಂಡಗಳನ್ನು ನೀಡಬೇಕಾಗುತ್ತದೆ. ಪ್ಯಾನ್ 2.0 ಅನ್ನು ಎಲ್ಲಾ ತೆರಿಗೆದಾರರು ಉಚಿತವಾಗಿ ಬಳಕೆ ಮಾಡಿಕೊಳ್ಳಬಹುದು.

    ಹಳೇ ಪಾನ್‌ ಕಾರ್ಡ್‌ ಅಪ್ಡೇಟ್‌ ಮಾಡುವುದು ಹೇಗೆ?
    www.pan.utiitsl.com/PAN_ONLINE/homeaddresschange ಅಥವಾ www.onlineservices.nsdl.com/paam/endUserAddressUpdate.html ವೆಬ್‌ಸೈಟ್‌ಗೆ ಭೇಟಿ ನೀಡಿ.
    – ಹೊಸ ಪಾನ್‌ ಕಾರ್ಡ್/‌ ಅಪ್ಡೇಟ್‌ ಮಾಡಲು ಲಿಂಕ್‌ ಕ್ಲಿಕ್‌ ಮಾಡಿ.
    -ನಿಮ್ಮ ವಿಳಾಸ, ಇತರ ವಿವರಗಳನ್ನು ನಮೂದಿಸಿ.
    -ಪರಿಶೀಲನೆ ಉದ್ದೇಶಕ್ಕಾಗಿ ದಾಖಲೆಗಳನ್ನು ಕಳುಹಿಸಿ.
    -NSDL ದಾಖಲೆಗಳನ್ನು ಪರಿಶೀಲಿಸಿ ಎಲ್ಲವೂ ಸರಿಯಿದ್ದರೇ ಎರಡು ವಾರಗಳಲ್ಲಿ ಹೊಸ/ಅಪ್ಡೇಟ್ ಆಗಿರುವ PAN ಕಾರ್ಡ್ ನಿಮ್ಮ ಕೈ ಸೇರುತ್ತದೆ.

  • ರಾಜ್ಯದ ಸಬ್ ರಿಜಿಸ್ಟರ್ ಕಚೇರಿಗಳಲ್ಲಿ ಆಧಾರ್, ಪ್ಯಾನ್, ಪಾಸ್‌ಪೋರ್ಟ್ ಕಡ್ಡಾಯ: ಕೃಷ್ಣಭೈರೇಗೌಡ

    ರಾಜ್ಯದ ಸಬ್ ರಿಜಿಸ್ಟರ್ ಕಚೇರಿಗಳಲ್ಲಿ ಆಧಾರ್, ಪ್ಯಾನ್, ಪಾಸ್‌ಪೋರ್ಟ್ ಕಡ್ಡಾಯ: ಕೃಷ್ಣಭೈರೇಗೌಡ

    ಬೆಂಗಳೂರು: ರಾಜ್ಯದ ಸಬ್‌ ರಿಜಿಸ್ಟರ್ ಕಚೇರಿಗಳಲ್ಲಿ (Sub-Registrar Office) ಆಧಾರ್ ಕಾರ್ಡ್, ಪಾಸ್‌ಪೋರ್ಟ್, ಪ್ಯಾನ್ ಕಾರ್ಡ್ ಕಡ್ಡಾಯ. ನಿಮ್ಮ ಯಾವುದಾದರೊಂದು ದಾಖಲೆ ಇರಲೇಬೇಕು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ನಾನು ಫೀಲ್ಡಿಗೆ ಹೋದಾಗ ಎಲ್ಲರೂ ಕೇಳಿದ್ದಾರೆ ಮತ್ತು ಇದಕ್ಕೆ ಸಂಬಂಧಿಸಿದಂತೆ ಸಚಿವರು, ಶಾಸಕರು ಕೂಡ ಸಲಹೆ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ (CM Siddarmaiah) ಅವರು ಇದಕ್ಕೆ ಸೂಚನೆ ನೀಡಿದ್ದಾರೆ. ಅದರಂತೆಯೇ ಎಲ್ಲಾ ಕಡೆಯಲ್ಲಿಯೂ ಈ ವ್ಯವಸ್ಥೆಯನ್ನು ಜಾರಿಗೊಳಿಸಿದ್ದೇವೆ ಎಂದಿದ್ದಾರೆ.ಇದನ್ನೂ ಓದಿ: ಜಸ್ಟಿಸ್ ಹೇಮಾ ವರದಿಯಲ್ಲಿಯ ಹೆಸರು ಬಹಿರಂಗ ಪಡಿಸಿ: ಪೃಥ್ವಿರಾಜ್ ಸುಕುಮಾರನ್

    ವಂಚನೆ ಪ್ರಕರಣಗಳನ್ನು ತಪ್ಪಿಸಲು ಆಧಾರ್ ಅಥವಾ ಈ ಮೂರನ್ನು ಒಳಗೊಂಡ ಯಾವುದಾದರೊಂದು ದಾಖಲೆಯನ್ನು ಕೊಡಬೇಕು. ಇದು ಒಂದು ವ್ಯವಸ್ಥೆ ಮೇಲೆ ನಂಬಿಕೆ ಇಡುವಂತೆ ಮಾಡುತ್ತದೆ. ಸಕಾರಾತ್ಮಕವಾಗಿ ಸಾರ್ವಜನಿಕರು ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

    ಆಧಾರ್ ಜೋಡಣೆ ಮಾಡುವುದರಿಂದ ನಡೆಯುವ ವಂಚನೆಗಳನ್ನು ಕಡಿಮೆಗೊಳಿಸಬಹುದು. ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಜನರಿಗೆ ಸುಲಲಿತವಾಗಿ ಕೆಲಸವಾಗುವ ರೀತಿಯಲ್ಲಿ ಹೆಜ್ಜೆ ಇಡುತ್ತಿದ್ದೇವೆ. ಜೊತೆಗೆ ನೊಂದಣಿ ವ್ಯವಸ್ಥೆಯಲ್ಲಿ ಮತ್ತಷ್ಟು ಬದಲಾವಣೆ ತರುತ್ತಿದ್ದೇವೆ.ಇದನ್ನು ಓದಿ: ಟಾರ್ಚ್ ಹಾಕಿ ತಡಕಾಡೋದು ಸಿಎಂಗೆ ಶೋಭೆಯಲ್ಲ – ಶಿಶುಪಾಲನಂತೆ ತಪ್ಪಿನ ಮೇಲೆ ತಪ್ಪು ಮಾಡ್ತಿದ್ದೀರಿ: ಹೆಚ್‌ಡಿಕೆ ಎಚ್ಚರಿಕೆ

    ನಕಲಿ ವೈಯಕ್ತಿಕ ದಾಖಲೆಯನ್ನು ಸೃಷ್ಟಿಸಿ, ರಿಜಿಸ್ಟರ್ ಮಾಡಿಕೊಂಡು ವಂಚನೆ ಮಾಡುತ್ತಿದ್ದಾರೆ. ಈ ರೀತಿ ವ್ಯವಸ್ಥಿತವಾಗಿ ಜಮೀನುಗಳನ್ನು ದರೋಡೆ ಮಾಡುವ ಕೆಲಸ ನಡೆಯುತ್ತಿದೆ. ಈ ತರಹದ ವಂಚನೆಗಳನ್ನು ತಡೆಗಟ್ಟಲು ವ್ಯಾಪಕ ದೂರುಗಳು ಈಗಾಗಲೇ ಬಂದಿವೆ. ರಾಜ್ಯದ ಎಲ್ಲಾ ಸಬ್ ರಿಜಿಸ್ಟರ್ ಕಚೇರಿಗಳಲ್ಲೂ ಕಾವೇರಿ-2 (Kaveri-2) ಜಾರಿಗೊಳಿಸಲಾಗಿದೆ. ಅಪಾಂಯ್ಟ್‌ಮೆಂಟ್‌ ಸಿಸ್ಟಮ್ ಸರಿಯಾಗಿ ಪಾಲಿಸದೇ ಇರುವುದರಿಂದ ಇಷ್ಟು ದಿನ ಜನ ಜಂಗುಳಿ ಇರುತ್ತಿತ್ತು. ಈಗ ಅಪಾಂಯ್ಟ್‌ಮೆಂಟ್‌ ಸಿಸ್ಟಮ್ ಕಡ್ಡಾಯ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

  • PAN-Aadhaar Card ಇಂದೇ ಲಿಂಕ್ ಮಾಡಿಸಿಕೊಳ್ಳಿ- ಶುಕ್ರವಾರ ಕೊನೆಯ ದಿನ

    PAN-Aadhaar Card ಇಂದೇ ಲಿಂಕ್ ಮಾಡಿಸಿಕೊಳ್ಳಿ- ಶುಕ್ರವಾರ ಕೊನೆಯ ದಿನ

    ಬೆಂಗಳೂರು: ಪ್ಯಾನ್ ಕಾರ್ಡ್ (PAN Card) ಅನ್ನು ಆಧಾರ್ ಕಾರ್ಡ್ (Aadhaar Card) ನೊಂದಿಗೆ ಲಿಂಕ್ ಮಾಡೋಕೆ ಜೂನ್ 30 ಅಂದರೆ ಶುಕ್ರವಾರ ಕೊನೆಯ ದಿನವಾಗಿದೆ.

    ಕಳೆದ ಮೂರು ತಿಂಗಳಲ್ಲಿ ಆದಾಯ ತೆರಿಗೆ ಇಲಾಖೆಯು ಹಲವು ಬಾರಿ ದಿನಾಂಕವನ್ನು ವಿಸ್ತರಣೆ ಮಾಡಿತ್ತು. ಬಳಿಕ 2023ರ ಜೂನ್ 30ರ ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿತ್ತು. ಇದೀಗ ಪ್ಯಾನ್- ಆಧಾರ್ ಕಾರ್ಡ್ ಲಿಂಕ್ (PAN Card-Aadhaar Card Link) ಮಾಡಿಸಿಕೊಳ್ಳಲು ನಾಳೆ ಕೊನೆಯ ದಿನವಾಗಿದೆ. ಹೀಗಾಗಿ ಲಿಂಕ್ ಮಾಡಿಸದಿದ್ದವರು ಇಂದೇ ಈ ಕೆಲಸ ಮಾಡಿಕೊಳ್ಳಿ.

    ಒಂದು ವೇಳೆ ನಾಳೆ (ಶುಕ್ರವಾರ) ಯ ಒಳಗೆ ನಿಮ್ಮ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಿಸದಿದ್ದರೆ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ. ಜೊತೆಗೆ ಟ್ಯಾಕ್ಸ್ ಪೇ ಮಾಡುವವರಿಗೂ ಕೂಡ ಸಂಕಷ್ಟವಾಗಲಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಮೋದಿ ತಯಾರಿ – ಹಿರಿಯ ನಾಯಕರಿಗೆ 3 ಟಾರ್ಗೆಟ್

    ಲಿಂಕ್ ಮಾಡುವುದು ಏಕೆ.?: ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದಿರುವುದನ್ನು ತಪ್ಪಿಸುವ ಉದ್ದೇಶದಿಂದ ಆಧಾರ್ ಜೊತೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಬೇಕು ಎಂದು ಆದೇಶ ಹೊರಡಿಸಲಾಗಿತ್ತು. ಪ್ಯಾನ್ ಜೊತೆಗೆ ಆಧಾರ್ ಜೋಡಿಸುವ ವ್ಯವಸ್ಥೆಯನ್ನು 2017ರ ಏಪ್ರಿಲ್‍ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಆಗ ಪ್ಯಾನ್-ಆಧಾರ್ ಜೋಡಣೆಗೆ ಸರ್ಕಾರ ಯಾವುದೇ ಶುಲ್ಕ ವಿಧಿಸಿರಲಿಲ್ಲ. ಆದರೆ ನಿರೀಕ್ಷಿತ ಮಟ್ಟದಲ್ಲಿ ಆಧಾರ್- ಪ್ಯಾನ್ ಲಿಂಕ್ ಕಾರ್ಯಗತವಾಗಲಿಲ್ಲ. ಹೀಗಾಗಿ ಲಿಂಕ್‍ಗೆ ಹಲವು ಬಾರಿ ದಿನಾಂಕ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.

    ಒಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತೆ ಆಧಾರ್ ಪ್ಯಾನ್ ಕಾರ್ಡ್ ಲಿಂಕ್‍ಗೆ ಮತ್ತೆ ಅವಧಿ ವಿಸ್ತರಣೆ ಮಾಡುತ್ತಾ? ಅಥವಾ ನಾಳೆಯೇ ಆಧಾರ್ ಪ್ಯಾನ್ ಕಾರ್ಡ್ ಲಿಂಕ್‍ಗೆ ಅವಧಿ ಮುಗಿಯುತ್ತಾ ಎಂಬುದನ್ನು ಕಾದು ನೋಡಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ಯಾನ್‌ – ಆಧಾರ್‌ ಕಾರ್ಡ್‌ ಲಿಂಕ್‌; ಜೂನ್‌ 30 ರವರೆಗೆ ಅವಧಿ ವಿಸ್ತರಣೆ

    ಪ್ಯಾನ್‌ – ಆಧಾರ್‌ ಕಾರ್ಡ್‌ ಲಿಂಕ್‌; ಜೂನ್‌ 30 ರವರೆಗೆ ಅವಧಿ ವಿಸ್ತರಣೆ

    ಬೆಂಗಳೂರು: ಪ್ಯಾನ್‌ ಜೊತೆಗೆ ಆಧಾರ್‌ ಕಾರ್ಡ್‌ (AadhaarPanLink) ಜೋಡಣೆಗೆ ಜೂನ್‌ 30 ರ ವರೆಗೆ ಅವಧಿ ವಿಸ್ತರಿಸಿ ಹಣಕಾಸು ಸಚಿವಾಲಯ ಆದೇಶ ಹೊರಡಿಸಿದೆ.

    ಪ್ಯಾನ್‌ (Pan Card) ಜೊತೆಗೆ ಆಧಾರ್‌ (Aadhaar Card) ಲಿಂಕ್‌ಗೆ ಮಾ.31 ಕೊನೆ ದಿನವಾಗಿತ್ತು. ಈ ಅವಧಿಯನ್ನು ವಿಸ್ತರಿಸಲಾಗಿದೆ. 2023ರ ಜೂನ್‌ 30 ರ ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ: ಸಿದ್ದರಾಮಯ್ಯ

    ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌ ಹೊಂದಿರುವುದನ್ನು ತಪ್ಪಿಸುವ ಉದ್ದೇಶದಿಂದ ಆಧಾರ್‌ ಜೊತೆಗೆ ಪ್ಯಾನ್‌ ಲಿಂಕ್‌ ಮಾಡಿಸಬೇಕು ಎಂದು ಆದೇಶ ಹೊರಡಿಸಲಾಗಿತ್ತು. ಲಿಂಕ್‌ ಮಾಡಿಸಲು ಮಾ.31 ಕೊನೆ ದಿನವಾಗಿತ್ತು. ಇದಕ್ಕೆ ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲೆ ಗಡುವು ಮೂರು ತಿಂಗಳವರೆಗೆ ವಿಸ್ತರಣೆ ಮಾಡಲಾಗಿದೆ.

    ಪ್ಯಾನ್‌ ಜೊತೆಗೆ ಆಧಾರ್‌ ಜೋಡಿಸುವ ವ್ಯವಸ್ಥೆಯನ್ನು 2017ರ ಏಪ್ರಿಲ್‌ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಆಗ ಪ್ಯಾನ್‌-ಆಧಾರ್‌ ಜೋಡಣೆಗೆ ಸರ್ಕಾರ ಯಾವುದೇ ಶುಲ್ಕ ವಿಧಿಸಿರಲಿಲ್ಲ. ಆದರೆ ನಿರೀಕ್ಷಿತ ಮಟ್ಟದಲ್ಲಿ ಆಧಾರ್‌-ಪ್ಯಾನ್‌ ಲಿಂಕ್‌ ಕಾರ್ಯಗತವಾಗಲಿಲ್ಲ. ಹೀಗಾಗಿ ಲಿಂಕ್‌ಗೆ ಹಲವು ಬಾರಿ ದಿನಾಂಕ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.

    ಕೊನೆಯ ಹಂತ ಎಂದು ಹೇಳಿ 2023ರ ಮಾರ್ಚ್‌ 31ಕ್ಕೆ ಕೊನೆ ದಿನ ಎಂದು ಗಡುವು ವಿಧಿಸಿತ್ತು. ಪ್ಯಾನ್‌ ಅನ್ನು ಆಧಾರ್‌ ಜೊತೆಗೆ ಜೋಡಣೆಗೆ 1,000 ಶುಲ್ಕ ವಿಧಿಸಲಾಗಿತ್ತು. ಇದರ ವಿರುದ್ಧ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿತ್ತು. ಅಲ್ಲದೇ ದಿನಾಂಕ ವಿಸ್ತರಣೆಗೆ ಕೂಗು ಕೇಳಿಬಂದಿತ್ತು. ಇದನ್ನೂ ಓದಿ: ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ 5 ದಿನ ಪೊಲೀಸ್ ಕಸ್ಟಡಿಗೆ

  • ಪ್ಯಾನ್ ಕಾರ್ಡ್ ಕಳೆದುಕೊಂಡ ಪೀಟರ್ಸನ್‌ಗೆ ಸಹಾಯ ಮಾಡಿದ ಭಾರತೀಯ ತೆರಿಗೆ ಇಲಾಖೆ

    ಪ್ಯಾನ್ ಕಾರ್ಡ್ ಕಳೆದುಕೊಂಡ ಪೀಟರ್ಸನ್‌ಗೆ ಸಹಾಯ ಮಾಡಿದ ಭಾರತೀಯ ತೆರಿಗೆ ಇಲಾಖೆ

    ನವದೆಹಲಿ: ಇಂಗ್ಲೆಂಡ್‌ನ ಮಾಜಿ ನಾಯಕ ಕೆವಿನ್ ಪೀಟರ್ಸನ್ ಅವರು ಭಾರತಕ್ಕೆ ಭೇಟಿ ನೀಡಲು ಬೇಕಾದ ಪ್ಯಾನ್ ಕಾರ್ಡ್‌ನ್ನು ಕಳೆದುಕೊಂಡಿದ್ದರು. ಈ ಬಗ್ಗೆ ಯಾರದರೂ ಸಹಾಯ ಮಾಡುವ ಬಗ್ಗೆ ಟ್ವೀಟ್ ಮಾಡಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿದ್ದರು. ಇದಕ್ಕೆ ಈಗ ಭಾರತೀಯ ಆದಾಯ ತೆರಿಗೆ ಇಲಾಖೆ ಸಹಾಯ ಮಾಡಿದೆ.

    ಪೀಟರ್ಸನ್ ಅವರು ಅಂತಾರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿ ಪಡೆದ ನಂತರ ಐಪಿಎಲ್ ಪಂದ್ಯಕ್ಕಾಗಿ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ಯಾನ್ ಕಾರ್ಡ್‌ನ್ನು ಕಳೆದುಕೊಂಡಿರುವ ಬಗ್ಗೆ ದುಃಖವನ್ನು ಹಂಚಿಕೊಂಡಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?: ಭಾರತ ದಯವಿಟ್ಟು ಸಹಾಯ ಮಾಡಿ, ನಾನು ನನ್ನ ಪ್ಯಾನ್ ಕಾರ್ಡ್ ಅನ್ನು ಕಳೆದುಕೊಂಡಿದ್ದೇನೆ ಮತ್ತು ಸೋಮವಾರ ಭಾರತಕ್ಕೆ ಪ್ರಯಾಣಿಸುತ್ತಿದ್ದೇನೆ. ಆದರೆ ಕೆಲಸಕ್ಕಾಗಿ ನನಗೆ ಪ್ಯಾನ್ ಕಾರ್ಡ್ ಅಗತ್ಯವಿದೆ. ದಯವಿಟ್ಟು ನನಗೆ ಸಹಾಯ ಮಾಡಲು ನಾನು ಆದಷ್ಟು ಬೇಗ ಸಂಪರ್ಕಿಸಬಹುದಾದ ಯಾರಿಗಾದರೂ ದಯವಿಟ್ಟು ನನ್ನನ್ನು ನಿರ್ದೇಶಿಸಬಹುದೇ? ಎಂದು ತಿಳಿಸಿದ್ದಾರೆ. ಪೀಟರ್ಸನ್ ನಂತರ ತಮ್ಮ ಟ್ವೀಟ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ. ದನ್ನೂ ಓದಿ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಿಜೆಪಿ ಯತ್ನ: ಸಂಜಯ್ ರಾವತ್

    ಈ ಬಗ್ಗೆ ಭಾರತೀಯ ಆದಾಯ ತೆರಿಗೆ ಇಲಾಖೆಯೆ ಅಧಿಕೃತ ಖಾತೆ ಪ್ರತಿಕ್ರಿಯಿಸಿದ್ದು ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ನಿಮ್ಮ ಪ್ಯಾನ್ ವಿವರಗಳಿದ್ದರೆ, ಪ್ಯಾನ್ ಕಾರ್ಡ್‌ನ್ನು ನಕಲು ಇದ್ದರೆ ಅರ್ಜಿ ಸಲ್ಲಿಸುವ ವಿಧಾನಕ್ಕಾಗಿ ದಯವಿಟ್ಟು ಈ ಲಿಂಕ್‌ಗಳಿಗೆ ಭೇಟಿ ನೀಡಿ ಎಂದು ತಿಳಿಸಿದೆ. ಇದಕ್ಕೆ ಧನ್ಯವಾದ ತಿಳಿಸಿರುವ ಪೀಟರ್ಸನ್ ಅವರು ಮಾಹಿತಿಗಳನ್ನು ಇಮೇಲ್ ಮಾಡಿರುವುದಾಗಿ ತಿಳಿಸಿದ್ದಾರೆ. ದನ್ನೂ ಓದಿ: ಬಿಜೆಪಿ ಬೆಂಗಾವಲು ಪಡೆ ಮೇಲೆ ಎಸ್‍ಪಿ ಗೂಂಡಾಗಳಿಂದ ದಾಳಿ: ಕೇಶವ್ ಪ್ರಸಾದ್ ಮೌರ್ಯ

    ಮಾಜಿ ಇಂಗ್ಲೆಂಡ್ ನಾಯಕ ಪೀಟರ್ಸನ್‌ಗೆ ಟ್ವಿಟರ್‌ನಲ್ಲಿ ಸುಮಾರು 3.8 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಕಳೆದ ತಿಂಗಳ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ಕೊನೆಯ ಬಾರಿಗೆ ಪೀಟರ್ಸನ್ ಕಾಣಿಸಿಕೊಂಡಿದ್ದರು. ಇವರು ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಕ್ಕನ್ ಚಾರ್ಜರ್ಸ್, ಸನ್‌ರೈಸರ್ಸ್ ಹೈದರಾಬಾದ್, ರೈಸಿಂಗ್ ಪುಣೆ ಸೂಪರ್‌ಜೈಂಟ್, ಡೆಲ್ಲಿ ಕ್ಯಾಪಿಟಲ್ಸ್ ಪರ ಆಟವಾಡಿದ್ದಾರೆ.

  • ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ ಆಗಿಲ್ವಾ?- ಮಾರ್ಚ್ 31ರ ನಂತ್ರ ಬೀಳಲಿದೆ ಭಾರೀ ದಂಡ

    ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ ಆಗಿಲ್ವಾ?- ಮಾರ್ಚ್ 31ರ ನಂತ್ರ ಬೀಳಲಿದೆ ಭಾರೀ ದಂಡ

    ನವದೆಹಲಿ: ಸೆಕ್ಷನ್ 139ಎಎ ಪ್ರಕಾರ ಪ್ರತಿಯೊಬ್ಬ ನಾಗರಿಕನು ತನ್ನ ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ ಮಾಡಬೇಕೆಂದು ಆದಾಯ ತೆರಿಗೆ ಇಲಾಖೆ ಈ ಹಿಂದೆಯೇ ಆದೇಶ ಹೊರಡಿಸಿತ್ತು. ಇದೀಗ ಮಾರ್ಚ್ 31ರ ಒಳಗಾಗಿ ಆಧಾರ್ ಲಿಂಕ್ ಮಾಡಿಸದೆ ಇದ್ದಲ್ಲಿ 1,000 ರೂಪಾಯಿ ದಂಡ ವಿಧಿಸುದಾಗಿ ತಿಳಿಸಿದೆ.

    ಆದಾಯ ತೆರಿಗೆ ಇಲಾಖೆ ತಿಳಿಸಿರುವ ಪ್ರಕಾರ ಈಗಾಗಲೇ ಕೊಟ್ಟಿರುವ ಕಾಲಾವಕಾಶದ ಒಳಗಾಗಿ ಯಾರೂ ತಮ್ಮ ಪ್ಯಾನ್‍ಕಾರ್ಡಿಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡದೆ ಇರುತ್ತಾರೋ ಅಂತವರಿಗೆ 1 ಸಾವಿರ ರೂಪಾಯಿ ದಂಡ ಹಾಕಿ ಅವರ ಪ್ಯಾನ್ ಕಾರ್ಡನ್ನು ಅಮಾನ್ಯಗೊಳಿಸಲಾಗುವುದು ಎಂದು ತಿಳಿಸಿದೆ.

    2021ನೇ ಹಣಕಾಸು ಮಸೂದೆಯಲ್ಲಿ ಹೊಸ ಸೆಕ್ಷನ್ 234 ಅನ್ನು ಆದಾಯ ತೆರಿಗೆ ಕಾಯ್ದೆಯಾಗಿ ರೂಪುಗೊಳಿಸಲಾಗಿದ್ದು, ಇದರ ಪ್ರಕಾರ ಮಾರ್ಚ್ 31ರ ಒಳಗಾಗಿ ಪ್ಯಾನ್ ಕಾರ್ಡ್‍ಗೆ ಆಧಾರ್ ಲಿಂಕ್ ಮಾಡದೆ ಇದ್ದರೆ ಅಂತವರಿಗೆ ದಂಡ ವಿಧಿಸಲಾಗುವುದು ಮತ್ತು ಪ್ಯಾನ್ ಕಾರ್ಡ್ ಅಮಾನ್ಯಗೊಳಿಸಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಸೂಚಿಸಿದೆ.

  • ಚುನಾವಣೆಗೆ ನಿಂತ ಸ್ವಾಮೀಜಿಯ ಆಸ್ತಿ 3 ಕೋಟಿ

    ಚುನಾವಣೆಗೆ ನಿಂತ ಸ್ವಾಮೀಜಿಯ ಆಸ್ತಿ 3 ಕೋಟಿ

    – ಸ್ವಾಮೀಜಿ ಬಳಿ ಪಾನ್ ಕಾರ್ಡ್ ಇಲ್ಲ

    ಮುಂಬೈ: ಬಿಜೆಪಿ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸಿರುವ ಜಯಸಿದ್ದೇಶ್ವರ ಸ್ವಾಮೀಜಿ ಒಟ್ಟು 3 ಕೋಟಿ ರೂ. ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ.

    ಮಹಾರಾಷ್ಟ್ರದ ಸೋಲಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಜಯಸಿದ್ದೇಶ್ವರ ಸ್ವಾಮೀಜಿ ಬಳಿ 6 ಲಕ್ಷ 46 ಸಾವಿರ ನಗದು ಮತ್ತು 2 ಕೋಟಿ 72 ಲಕ್ಷ ಸ್ಥಿರಾಸ್ತಿಯನ್ನು ಹೊಂದಿದ್ದಾರೆ. ಆದ್ರೆ ಸ್ವಾಮೀಜಿ ಪಾನ್ ಕಾರ್ಡ್ ಹೊಂದಿಲ್ಲ. ಮೀಸಲು ಕ್ಷೇತ್ರವಾಗಿರುವ ಸೋಲಾಪುರದಲ್ಲಿ ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಸಿಂಧೆ ಮತ್ತು ವಂಚಿತ್ ಬಹುಜನ್ ಅದಾಡಿ (ವಿಬಿಎ) ನಾಯಕ ಪ್ರಕಾಶ್ ಅಂಬೇಡ್ಕರ್ ವಿರುದ್ಧ ಸ್ವಾಮೀಜಿ ಸ್ಪರ್ಧಿಸಿದ್ದಾರೆ.

    ಮಹಾರಾಷ್ಟ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಪಾನ್ ಕಾರ್ಡ್ ಹೊಂದಿರದ ಏಕ ಮಾತ್ರ ಅಭ್ಯರ್ಥಿ ಜಯಸಿದ್ದೇಶ್ವರ ಸ್ವಾಮೀಜಿ. ನನಗೆ ಪಾನ್ ಕಾರ್ಡ್ ಅವಶ್ಯಕತೆ ಇಲ್ಲ. ಕಾರಣ ನಾನು ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡಲ್ಲ ಎಂದು ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.

    ಅಭ್ಯರ್ಥಿ ಬಳಿ ಪಾನ್ ಕಾರ್ಡ್ ಇಲ್ಲದಿದ್ರೂ ವಿಧಾನ ಸಭೆ ಮತ್ತು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಬಹುದು. ರೆಗ್ಯೂಲರ್ ಹಾಗು ನಿಶ್ಚಿತ ಆದಾಯವನ್ನು ಹೊಂದಿರದ ಕಾರಣ ಸ್ವಾಮೀಜಿ ಪಾನ್ ಕಾರ್ಡ್ ಹೊಂದಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಹೇಳಿದ್ದಾರೆ.

  • ಆದಾಯ ತೆರಿಗೆ ಪಾವತಿಗೆ ಆಧಾರ್ ಕಡ್ಡಾಯ

    ಆದಾಯ ತೆರಿಗೆ ಪಾವತಿಗೆ ಆಧಾರ್ ಕಡ್ಡಾಯ

    ನವದೆಹಲಿ: ಆದಾಯ ತೆರಿಗೆ ಪಾವತಿಸಲು ಇನ್ನು ಮುಂದೆ ಪಾನ್ ಕಾರ್ಡಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದು ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ.

    ದೆಹಲಿ ಹೈಕೋರ್ಟ್ ಐಟಿ ರಿಟರ್ನ್ಸ್ ಸಲ್ಲಿಕೆಗೆ ಆಧಾರ್ ಕಡ್ಡಾಯವಲ್ಲ ಎಂದು ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಸರ್ಕಾರದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಐಟಿ ರಿಟರ್ನ್ಸ್ ಪಾವತಿ ಮಾಡಲು 2018-19 ಸಾಲಿಗೆ ಆಧಾರ್ ಕಡ್ಡಾಯ ಮಾಡಿ ಆದೇಶ ನೀಡಿದೆ.

    ಈಗಾಗಲೇ ಪಾನ್ ಕಾರ್ಡ್ ಪಡೆಯಲು ಆಧಾರ್ ಕಡ್ಡಾಯ ಮಾಡಲಾಗಿದ್ದು, ಸದ್ಯ ಎಲ್ಲಾ ಆದಾಯ ತೆರಿಗೆ ಪಾವತಿ ಮಾಡುವವರು ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ ಎಂದು ನ್ಯಾಯಾಲಯ ಹೇಳಿದೆ.

    ಸುಪ್ರೀಂ ಕೋರ್ಟ್ ಆಧಾರ್ ಕಾರ್ಡಿಗೆ ಇರುವ ಸಂವಿಧಾನಿಕ ಮಾನ್ಯತೆಯನ್ನು ಸೆಪ್ಟೆಂಬರ್ ತೀರ್ಪಿನಲ್ಲಿ ಎತ್ತಿ ಹಿಡಿದಿತ್ತು. ಆದರೂ ಬ್ಯಾಂಕ್ ಖಾತೆ, ಮೊಬೈಲ್ ಫೋನ್ ಮತ್ತು ಶಾಲಾ ಪ್ರವೇಶಕ್ಕೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಹೇಳಿತ್ತು. ಆದರೆ ಈಗ ನ್ಯಾಯಾಲಯ ಐಟಿ ರಿಟರ್ನ್ಸ್ ಸಲ್ಲಿಕೆ ಮಾಡಲು ವೈಯಕ್ತಿಕ ಆಧಾರ್ ಸಂಖ್ಯೆಯನ್ನು ಒದಗಿಸುವುದನ್ನು ಕಡ್ಡಾಯ ಮಾಡಿದೆ.

    ಆಧಾರ್ ಕಾರ್ಡನ್ನು ಪಾನ್ ಕಾರ್ಡಿಗೆ ಲಿಂಕ್ ಮಾಡಲು 2019 ಮಾರ್ಚ್ 31 ರವರೆಗೂ ಸಮಯಾವಕಾಶವನ್ನು ನೀಡಿದೆ. 2018 ಏಪ್ರಿಲ್ 1 ರಂದು ಸರ್ಕಾರದ ನೀಡಿದ್ದ ಆದೇಶದ ಅನ್ವಯ ಐಟಿ ರಿಟರ್ನ್ಸ್ ಸಲ್ಲಿಕೆ ವಿಳಂಬವಾದರೆ ಕನಿಷ್ಠ 10 ಸಾವಿರ ರೂ. ಶುಲ್ಕವನ್ನು ವಿಧಿಸಬಹುದಾಗಿದೆ. ಅಲ್ಲದೇ ಆದಾಯ ತೆರಿಗೆ ಇಲಾಖೆ ಐಟಿ ರಿಟರ್ನ್ಸ್ ಸಲ್ಲಿಸದವರಿಗೆ ಸೆಕ್ಷನ್ 142(1) ಅನ್ವಯ ನೋಟಿಸ್ ಕಳುಹಿಸಲು ಅವಕಾಶವಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv