Tag: Panchayat

  • ಪಂಚಾಯತ್‌ ಸಭೆಯಲ್ಲೇ ಅಧ್ಯಕ್ಷನ ಮೇಲೆ ಸದಸ್ಯನಿಂದ ಹಲ್ಲೆ

    ಪಂಚಾಯತ್‌ ಸಭೆಯಲ್ಲೇ ಅಧ್ಯಕ್ಷನ ಮೇಲೆ ಸದಸ್ಯನಿಂದ ಹಲ್ಲೆ

    ಮಡಿಕೇರಿ: ಪಂಚಾಯತ್‌(Panchayat) ಸಭಾಂಗಣದಲ್ಲಿಯೇ ಅಧ್ಯಕ್ಷನ ಮೇಲೆ ಸದಸ್ಯ ಹಲ್ಲೆ ಮಾಡಿರುವ ಘಟನೆ ಕೊಡಗು(Kodagu) ಜಿಲ್ಲೆಯ ಕುಶಾಲನಗರದ ಏಳನೇ ಹೊಸಕೋಟೆ ಗ್ರಾಮ ನಡೆದಿದೆ.

    ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ(General Meeting) ಅಧ್ಯಕ್ಷ ರಮೇಶ್ ಹಾಗೂ ಸದಸ್ಯ ಮುಸ್ತಫಾ ಎಂಬುವವರು ಕಾಮಗಾರಿ ಬಿಲ್ ಮಾಡುವ ಬಗ್ಗೆ ಮಾತನಾಡಿದ್ದಾರೆ. ಆ ಸಂದರ್ಭ ಪಂಚಾಯತ್‌ ಅಧ್ಯಕ್ಷರ ಗಮನಕ್ಕೆ ತರದೇ ಕಾಮಗಾರಿ ‌ಮಾಡಿ‌ ಬಿಲ್ ಮಾಡುವ ಬಗ್ಗೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಚೇತನ್ ವಿವಾದಾತ್ಮಕ ಹೇಳಿಕೆಗೆ ನೋ ಕಾಮೆಂಟ್ಸ್ ಎಂದ `ಕಾಂತಾರ’ ನಟ ರಿಷಬ್

    ಅಷ್ಟೇ ಅಲ್ಲದೇ ಸಭೆ ನಡೆಯುವಾಗಲೇ ಮುಸ್ತಾಫಾ ಅವರು ರಮೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಅಧ್ಯಕ್ಷ ರಮೇಶ್ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿದ ಆರೋಪಿ ಸದಸ್ಯ ಮುಸ್ತಫಾನನ್ನು ಬಂಧಿಸುವಂತೆ ಬಿಜೆಪಿಯ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಸ್ತೆ ಕಾಂಕ್ರೀಟಿಕರಣ ತಡೆದ ಮಹಿಳೆ – ಛತ್ರಿಯ ಹಿಡಿಯಲ್ಲಿ ತಲೆ ಒಡೆದ ಪಂಚಾಯಿತಿ ಸದಸ್ಯ

    ರಸ್ತೆ ಕಾಂಕ್ರೀಟಿಕರಣ ತಡೆದ ಮಹಿಳೆ – ಛತ್ರಿಯ ಹಿಡಿಯಲ್ಲಿ ತಲೆ ಒಡೆದ ಪಂಚಾಯಿತಿ ಸದಸ್ಯ

    ಉಡುಪಿ: ನಮ್ಮ ಮನೆಯ ಮುಂದೆ ರಸ್ತೆ ಆಗಲಿ, ನಮ್ಮ ಊರು ಉದ್ಧಾರ ಆಗಲಿ ಅಂತ ಎಲ್ಲರೂ ಅಪೇಕ್ಷಿಸುತ್ತಾರೆ. ಆದರೆ ಉಡುಪಿಯ ಆತ್ರಾಡಿಯಲ್ಲೊಂದು ವಿಚಿತ್ರ ಘಟನೆ ನಡೆದಿದೆ. ನಮ್ಮ ಮನೆಯ ಮುಂದೆ ರಸ್ತೆ ಬೇಡ ಎಂದು ಮಹಿಳೆಯೊಬ್ಬರು ರಂಪಾಟ ಮಾಡಿದ್ದಾರೆ. ಇದರಿಂದ ಕೋಪಗೊಂಡ ಪಂಚಾಯಿತಿ ಸದಸ್ಯ ಛತ್ರಿಯ ಹಿಡಿಯಲ್ಲಿ ಮಹಿಳೆಯ ತಲೆ ಒಡೆದಿದ್ದಾರೆ.

    ಉಡುಪಿ ಸಮೀಪದ ಆತ್ರಾಡಿ ಗ್ರಾಮ ಪಂಚಾಯಿತಿ ಸದಸ್ಯ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಸಂಗ ನಡೆದಿದೆ. ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಿಸಲು ತಡೆಯೊಡ್ಡಿದ್ದಕ್ಕಾಗಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಹಲ್ಲೆ ನಡೆಸಲಾಗಿದೆ. ಆತ್ರಾಡಿ ಸಮೀಪದ ಪಡುಮನೆ ನಾಗಬನ ನಿವಾಸಿ ಆರತಿ(45) ಹಲ್ಲೆಗೊಳಗಾದ ಮಹಿಳೆ. ಆಕೆ ರಸ್ತೆ ಅಭಿವೃದ್ಧಿಗೆ ಅಡ್ಡಿಪಡಿಸಿದ್ದೇ ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣ.

    ಆರತಿಯವರ ಪಟ್ಟಾ ಜಾಗದಲ್ಲಿ ವಿರೋಧದ ನಡುವೆಯೂ ಆತ್ರಾಡಿ ಗ್ರಾಮ ಪಂಚಾಯಿತಿ ಕಾಂಕ್ರೀಟ್ ರಸ್ತೆ ನಿರ್ಮಿಸಲು ತಯಾರು ನಡೆಸಿತ್ತು. ಮನೆಯವರ ಆಕ್ಷೇಪ ಇದ್ದರೂ ರಸ್ತೆ ಕಾಮಗಾರಿ ಪ್ರಾರಂಭಿಸಿದ್ದನ್ನು ಆರತಿ ಪ್ರಶ್ನಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಸ್ಥಳದಲ್ಲಿದ್ದ ಪಂಚಾಯಿತಿ ಸದಸ್ಯ ರತ್ನಾಕರ್ ಶೆಟ್ಟಿ ತಳ್ಳಿದ್ದಾರೆ. ಆರತಿ ತನ್ನ ಚಪ್ಪಲಿ ತೆಗೆದು ರತ್ನಾಕರ್ ಶೆಟ್ಟಿ ಮತ್ತು ಪಕ್ಕದಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗದಿದ್ದರೇ ಕೊಲೆ ಮಾಡುವುದಾಗಿ ಬೆದರಿಕೆ- ಇಬ್ಬರ ವಿರುದ್ಧ ಎಫ್‍ಐಆರ್

    ಕೋಪಗೊಂಡ ಚಂದ್ರಹಾಸ್ ಶೆಟ್ಟಿ ಹಾಗೂ ಸಂತೋಷ್ ಪೂಜಾರಿ ಆರತಿಯ ಮೇಲೆ ಹಲ್ಲೆ ನಡೆಸಿದ್ದಾರೆ. ವಾಗ್ವಾದದ ಸಂದರ್ಭ ರತ್ನಾಕರ್ ಶೆಟ್ಟಿ ಛತ್ರಿಯ ಹಿಡಿಯಲ್ಲಿ ಹೊಡೆದು ಆರತಿಯವರನ್ನು ತಳ್ಳಿದ ಪರಿಣಾಮ ಅವರ ತಲೆಗೆ ಗಂಭೀರ ಗಾಯವಾಗಿದೆ. ಗಲಾಟೆಯನ್ನು ತಡೆಯಲು ಬಂದ ಆರತಿ ಅವರ ಮಗಳ ಮೇಲೂ ಹಲ್ಲೆ ನಡೆಸಲಾಗಿದೆ.

    ಇದೀಗ ಆರತಿ ಅವರು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ರತ್ನಾಕರ್ ಶೆಟ್ಟಿ ಮತ್ತು ತಂಡ ಈ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಕೊಡಬೇಕಾಗಿದೆ. ಇದನ್ನೂ ಓದಿ: ಕೋರ್ಟ್ ಮುಂದೆಯೇ ರೌಡಿಶೀಟರ್ ಮೇಲೆ ಅಟ್ಯಾಕ್ – ದುಷ್ಕರ್ಮಿಗಳನ್ನು ಹಿಡಿದು ಠಾಣೆಗೆ ದಬ್ಬಿದ ಪೊಲೀಸ್ರು

    Live Tv
    [brid partner=56869869 player=32851 video=960834 autoplay=true]

  • ಮೋದಿ ಫೋಟೋವನ್ನು ತೆಗೆಸಿದ ಪಂಚಾಯತ್‌ ಅಧ್ಯಕ್ಷ – ಡಿಎಂಕೆ ವಿರುದ್ಧ ಬಿಜೆಪಿ ಕಿಡಿ

    ಮೋದಿ ಫೋಟೋವನ್ನು ತೆಗೆಸಿದ ಪಂಚಾಯತ್‌ ಅಧ್ಯಕ್ಷ – ಡಿಎಂಕೆ ವಿರುದ್ಧ ಬಿಜೆಪಿ ಕಿಡಿ

    ಚೆನ್ನೈ: ಕೇಂದ್ರದ ಹಿಂದಿ ಹೇರಿಕೆ ಯತ್ನಕ್ಕೆ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತೊಂದು ಮಜಲು ಮುಟ್ಟಿವೆ. ವೆಪ್ಪತ್ತೂರು ಟೌನ್‌ ಪಂಚಾಯತ್‍ನಲ್ಲಿ ಅಳವಡಿಸಲಾಗಿದ್ದ ಪ್ರಧಾನಿ ಮೋದಿ ಫೋಟೋವನ್ನು ಪಂಚಾಯತ್ ಅಧ್ಯಕ್ಷ ಅಂಜಮ್ಮಳ್ ತೆಗೆದುಹಾಕಿದ್ದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಫೋಟೋ ತೆಗೆದ ಬೆನ್ನಲ್ಲೇ ಬಿಜೆಪಿಯಿಂದ ತೀವ್ರ ಪ್ರತಿರೋಧ ವ್ಯಕ್ತವಾಗಿದೆ. ಪಂಚಾಯತ್‌ ಅಧ್ಯಕ್ಷರ ಕೃತ್ಯ ಖಂಡಿಸಿ ಬಿಜೆಪಿ ಪ್ರತಿಭಟನೆಗಳನ್ನು ನಡೆದಿದೆ. ಕುಂಬಕೋಣಮ್, ತಿರುವಿದೈ ಮರುತ್ತೂರ್‍ನಲ್ಲಿ ಪೊಲೀಸ್ ದೂರು ದಾಖಲಾಗಿದೆ. ಇದನ್ನೂ ಓದಿ: ಪ್ರಧಾನಿ ಒಂದೇ ಒಂದು ಮಾತು – ಈಶ್ವರಪ್ಪ ದಿಢೀರ್‌ ರಾಜೀನಾಮೆ

    ಪ್ರತಿಭಟನೆ ಜೋರಾಗುತ್ತಿದ್ದಂತೆ ಎಚ್ಚೆತ್ತ ಪಂಚಾಯತ್‌ ಸಿಬ್ಬಂದಿ ನಡೆದಿದ್ದ ಯಡವಟ್ಟನ್ನು ಸರಿಪಡಿಸಿದ್ದಾರೆ. ಮತ್ತೆ ಮೋದಿ ಫೋಟೋವನ್ನು ಅಳವಡಿಸಿದ್ದಾರೆ.  ಇದನ್ನೂ ಓದಿ: ಸರ್ಕಾರಿ ಅಧಿಕಾರಿಗಳು ಹೊಟೇಲ್‌ಗಳಲ್ಲಿ ಉಳಿದುಕೊಳ್ಳುವಂತಿಲ್ಲ, 30 ನಿಮಿಷಗಳಿಗೂ ಹೆಚ್ಚು ಲಂಚ್ ಬ್ರೇಕ್ ಇಲ್ಲ: ಯೋಗಿ

    https://twitter.com/CTR_Nirmalkumar/status/1514107754000318469?

    ಬಿಜೆಪಿ ನಾಯಕ ಸಿಟಿಆರ್‌ ನಿರ್ಮಲ್‌ ಪ್ರತಿಕ್ರಿಯಿಸಿ, ನಿನ್ನೆ ತಂಜಾವೂರು ವೆಪ್ಪತ್ತೂರು ಪಂಚಾಯತ್ ಕಚೇರಿಯಲ್ಲಿ ಡಿಎಂಕೆ ಪ್ರಧಾನಿಯವರ ಫೋಟೋ ತೆಗೆದು ಹಾಕಿತ್ತು. ಇಂದು ಬಿಜೆಪಿ ಕೌನ್ಸಿಲರ್ ಚಂದ್ರಶೇಖರ್, ಮಂಡಲದ ಮುಖಂಡ ರಾಜೇಂದ್ರನ್ ಮತ್ತು ಬಿಜೆಪಿ ಕಾರ್ಯಕಾರಿಣಿಗಳು ಮತ್ತೆ ಅದೇ ಕಚೇರಿಯಲ್ಲಿ ಮಹಾತ್ಮ ಗಾಂಧಿಯವರ ಭಾವಚಿತ್ರದ ಪಕ್ಕದಲ್ಲಿ ಪ್ರಧಾನಿಯವರ ಚಿತ್ರವನ್ನು ಅಳವಡಿಸಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ.

  • ಓಬಿಸಿ ಮೀಸಲಾತಿ ಕೈಬಿಟ್ಟು ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸುವುದಿಲ್ಲ: ಈಶ್ವರಪ್ಪ

    ಓಬಿಸಿ ಮೀಸಲಾತಿ ಕೈಬಿಟ್ಟು ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸುವುದಿಲ್ಲ: ಈಶ್ವರಪ್ಪ

    ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಬಿಟ್ಟು ಯಾವುದೇ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ‌ಮಾಡೋದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌ ಈಶ್ವರಪ್ಪ ಭರವಸೆ ನೀಡಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಮರಿತಿಬ್ಬೇಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಮೀಸಲಾತಿ‌ ಬಿಟ್ಟು ಚುನಾವಣೆ ಮಾಡೋದಿಲ್ಲ ಎಂದು ಭರವಸೆ ಕೊಟ್ಟಿದ್ದಾರೆ.

    ಜಿಲ್ಲಾ ಪಂಚಾಯಿತಿ ಚುನಾವಣೆ ಯಾಕೆ ಮಾಡುತ್ತಿಲ್ಲ.‌ ಯಾವಾಗ ಜಿಲ್ಲಾ ಪಂಚಾಯಿತ ಚುನಾವಣೆ ನಡೆಸುತ್ತೀರಾ? ಈಗಾಗಲೇ 11 ತಿಂಗಳಿಂದ ಆಡಳಿತ ಅಧಿಕಾರಿಗಳು ಜಿಲ್ಲಾ ಪಂಚಾಯಿತಿಯಲ್ಲಿ ಕೆಲಸ ನಡೆಸುತ್ತಿದ್ದಾರೆ.  ಎಷ್ಟು ದಿನಗಳಲ್ಲಿ ಚುನಾವಣೆ ಮಾಡ್ತೀರಾ.?ವಿಧಾನಸಭೆ ಮಾತ್ರ ಇಟ್ಟುಕೊಂಡು ಎಲ್ಲಾ ಇಲಾಖೆ ಮುಚ್ಚಿ ಬಿಡಿ ಅಂತ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಗೋವಾದಲ್ಲಿ ಅತಂತ್ರ ಫಲಿತಾಂಶ – ಕುದುರೆ ವ್ಯಾಪಾರಕ್ಕೆ ವೇದಿಕೆ ಸಜ್ಜು

    ಚುನಾವಣೆ ಆಯೋಗಕ್ಕೆ ಚುನಾವಣೆ ಮಾಡಲು ನಾವು ಪತ್ರ ಬರೆದೇವು. ಆಗ ಚುನಾವಣೆ ಆಯೋಗ ಚುನಾವಣೆ ಕ್ಷೇತ್ರಗಳ ಸೀಮಾ ನಿರ್ಣಯ ಮಾಡಿತು.‌ ಇದರ ವಿರುದ್ದ 888 ಆಕ್ಷೆಪಣೆ ಬಂದವು.‌ ಹೀಗಾಗಿ ಸೀಮಾ ನಿರ್ಣಯ ಮಾಡಲು ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ. ಸಮಿತಿ ವರದಿ ಬಂದ ಕೂಡಲೇ ಚುನಾವಣೆ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗೋವಾದಲ್ಲಿ ಕಾಂಗ್ರೆಸ್ ಸೋಲಿನ ಅಸಲಿಯತ್ತು ಬಹಿರಂಗ

    ಆತಂಕ ವಿಚಾರ ಅಂದರೆ ಓಬಿಸಿ ವಿಚಾರವಾಗಿ ಸುಪ್ರೀಂಕೋರ್ಟ್ ಒಂದು ತೀರ್ಪು ನೀಡಿದೆ. ಓಬಿಸಿ ಮೀಸಲಾತಿ ಬಿಟ್ಟು ಚುನಾವಣೆ ನಡೆಸುವಂತೆ ಹೇಳಿದೆ. ಇದು ನಮಗೆ ಸಮಸ್ಯೆ ಆಗ್ತಿದೆ. ಹೀಗಾಗಿ ಓಬಿಸಿ ಮೀಸಲಾತಿ ಇಟ್ಟುಕೊಂಡು ಚುನಾವಣೆ ಮಾಡಲು ಸರ್ಕಾರ ಚರ್ಚೆ ಮಾಡುತ್ತೇವೆ. ಈಗಾಗಲೇ ಸಿಎಂ ಜೊತೆ ಸಭೆ ಮಾಡಲಾಗಿದೆ. ಓಬಿಸಿ ಮೀಸಲಾತಿ ಸೇರಿಸಿಕೊಂಡು ಚುನಾವಣೆ ಮಾಡಲು ಕಾನೂನು ತಜ್ಞರ ಜೊತೆ ಚರ್ಚೆ ಆಗ್ತಿದೆ. ಈ ಬಗ್ಗೆ ಚರ್ಚೆ ಮಾಡಿ ಶೀಘ್ರವೇ ನಿರ್ಧಾರ ಮಾಡುತ್ತೇವೆ. ಓಬಿಸಿ ಮೀಸಲಾತಿ ಬಿಟ್ಟು ಸರ್ಕಾರ ಯಾವುದೇ ಕಾರಣಕ್ಕೂ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸೊಲ್ಲ ಅಂತ ಭರವಸೆ ಕೊಟ್ಟರು.

    ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸಿದ್ದರಾಮಯ್ಯರಿಂದ ಮೋಸ: ಚರ್ಚೆ ವೇಳೆ‌ ವಿಪಕ್ಷ ನಾಯಕ ಹರಿಪ್ರಸಾದ್,‌ ಸಿದ್ದರಾಮಯ್ಯ ಅವಧಿಯಲ್ಲಿ ಜಾತಿ ಗಣತಿ ಆಗಿದೆ. ಕಾಂತರಾಜು ಆಯೋಗದ ಗಣತಿ ಅಂಕಿಅಂಶಗಳನ್ನ ಸುಪ್ರೀಂಕೋರ್ಟ್‌ಗೆ ನೀಡಿ‌ ಮೀಸಲಾತಿ ಬಗ್ಗೆ ತೀರ್ಮಾನ ಮಾಡಿ ಅಂತ ಸಲಹೆ ನೀಡಿದರು. ಅಲ್ಲದೆ ನೀವು ಅಧಿಕಾರದಿಂದ ಇಳಿಯೋ ಮುನ್ನ ಓಬಿಸಿಗೆ ಒಳ್ಳೆ ಕೆಲಸ ಮಾಡಿ ಎಂದರು.‌ ಇದಕ್ಕೆ ತಿರುಗೇಟು ಕೊಟ್ಟ ಸಚಿವ ಈಶ್ವರಪ್ಪ, ನಿಮ್ಮ ಬಾಯಿಗೆ ಸಕ್ಕರೆ ಹಾಕಲಾ? ಚಿಕನ್ ಹಾಕಲಾ? ಮೀನು ಹಾಕಲಾ ಸಿದ್ದರಾಮಯ್ಯ, ಸಿದ್ದರಾಮಯ್ಯ ಅಂತೀರಾ ನೀವು. ಹಿಂದುಳಿದ ವರ್ಗಗಳಿಗೆ ರಾಜ್ಯದಲ್ಲಿ ಯಾರಾದ್ರು ಮೋಸ ಮಾಡಿದ್ರೆ ಅದು ಸಿದ್ದರಾಮಯ್ಯ ಮಾತ್ರ . ಓಬಿಸಿ ಜನಾಂಗಕ್ಕೆ‌ ಸಿದ್ದರಾಮಯ್ಯ ಏನು ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಮಧ್ಯೆ ಪ್ರವೇಶ ಮಾಡಿದ ಹರಿಪ್ರಸಾದ್, ನಿಮ್ಮ ಮತ್ತು ಸಿದ್ದರಾಮಯ್ಯ ನಡುವೆ ಇರೋ ಮ್ಯಾಚ್ ಫಿಕ್ಸಿಂಗ್ ನಮಗೆ ಗೊತ್ತಿಲ್ಲ. ಅದಕ್ಕೆ ಸಚಿವ ಈಶ್ವರಪ್ಪ, ನನ್ನ ಸಿದ್ದರಾಮಯ್ಯ ಸಂಬಂಧ ಈ ಜನ್ಮದಲ್ಲಿ ಯಾರಿಗೂ ಗೊತ್ತಾಗೊಲ್ಲ ಎಂದು ಟಾಂಗ್ ಕೊಟ್ಟರು. ಅಲ್ಲದೆ ಕಾಂತರಾಜು ವರದಿ ಆಯೋಗದ ಅಂಕಿಅಂಶಗಳನ್ನ ಬಳಕೆ ಮಾಡಲು ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.

  • 8 ದಿನಕ್ಕೆ ಪಂಚಾಯತ್‌ ಕೆಲಸಕ್ಕೆ ಸೇರಿದ ಎಂಜಿನಿಯರಿಂಗ್‌ ಪದವೀಧರೆ ಸಹೋದ್ಯೋಗಿಯ ಆಸೆಗೆ ಪ್ರಾಣ ಬಿಟ್ಟಳು

    8 ದಿನಕ್ಕೆ ಪಂಚಾಯತ್‌ ಕೆಲಸಕ್ಕೆ ಸೇರಿದ ಎಂಜಿನಿಯರಿಂಗ್‌ ಪದವೀಧರೆ ಸಹೋದ್ಯೋಗಿಯ ಆಸೆಗೆ ಪ್ರಾಣ ಬಿಟ್ಟಳು

    ತಿರುವನಂತಪುರಂ: ಸರ್ಕಾರಿ ಕೆಲಸಕ್ಕೆ ಸೇರಿದ ಯುವತಿ 8 ದಿನಕ್ಕೆ, ಸಹೋದ್ಯೋಗಿಯಿಂದಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಕೇರಳದ ಕೋಯ್ಕೋಡ್‍ನಲ್ಲಿ ನಡೆದಿದೆ.

    ಕೃಷ್ಣಪ್ರಿಯಾ(22) ಕೊಲೆಯಾದ ದುರ್ದೈವಿಯಾಗಿದ್ದಾಳೆ. ಥಿಕ್ಕೋಡಿ ನಿವಾಸಿ ನಂದನ್‍ಕುಮಾರ್(26) ಪಂಚಾಯತ್ ದಿನಗೂಲಿ ನೌರಕನಾಗಿದ್ದ ನಂದನ್‍ಕುಮಾರ್ ಕೃಷ್ಣಪ್ರಿಯಾಗೆ ಬೆಂಕಿಯಿಟ್ಟು ತಾನೂ ಪ್ರಾಣ ಬಿಟ್ಟಿದ್ದಾನೆ.

    ಸ್ನಾತಕೋತ್ತರ ಪದವಿಯಲ್ಲಿ ಕಂಪ್ಯೂಟರ್ ಸೈನ್ಸ್ ಮುಗಿಸಿದ್ದ ಕೃಷ್ಣಪ್ರಿಯಾ ಪಂಚಾಯತ್ ಕಚೇರಿಯಲ್ಲಿ ಯೋಜನಾ ಸಹಾಯಕಿ ಹುದ್ದೆಗೆ(project assistant in the Panchayat) ಕೇವಲ 8 ದಿನಗಳ ಹಿಂದಷ್ಟೇ ಸೇರಿದ್ದಳು. ನಂದನ್‍ಕುಮಾರ್ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ. ಪಂಚಾಯಾತ್ ಕಚೇರಿಯ ಮುಂದೆಯೇ ಕೃಷ್ಣಪ್ರಿಯಾಗೆ ಬೆಂಕಿ ಹಚ್ಚಿದ್ದಾನೆ. ಬಳಿಕ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಪಂಚಾಯತ್ ಕಚೇರಿಯ ಸಿಬ್ಬಂದಿ ಸ್ಥಳೀಯರ ಸಹಾಯ ಪಡೆದು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಚಿಕಿತ್ಸೆ ಫಲಕಲಾರಿಯಾಗದೇ ಇಬ್ಬರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲೆ ಶೌಚಾಲಯ ಸ್ವಚ್ಛಗೊಳಿಸಿದ ಮಧ್ಯಪ್ರದೇಶದ ಸಚಿವ

    ಮದುವೆ ಪ್ರಸ್ತಾಪವನ್ನು ಕೃಷ್ಣಪ್ರಿಯಾ ತಿರಸ್ಕರಿಸಿದ್ದಳು. ಈ ವಿಚಾರವಾಗಿ ನೊಂದಿದ್ದ ನಂದನ್‍ಕುಮಾರ್ ಈ ಕೃತ್ಯವನ್ನು ಮಾಡಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ. ಇಬ್ಬರ ಸಾವಿಗೆ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಿದೆ. ಇದನ್ನೂ ಓದಿ:  7 ಎಕರೆ ಆಸ್ತಿಗಾಗಿ ಕಿಡ್ನಾಪ್ ಆಗಿದ್ದ 98ರ ಅಜ್ಜಿ ಓಣಿಯಲ್ಲಿ ಪತ್ತೆ

  • 85 ವರ್ಷದ ಅಜ್ಜಿಗೆ ಒಲಿದುಬಂತು ಪಂಚಾಯತ್ ಅಧ್ಯಕ್ಷೆ ಸ್ಥಾನ

    85 ವರ್ಷದ ಅಜ್ಜಿಗೆ ಒಲಿದುಬಂತು ಪಂಚಾಯತ್ ಅಧ್ಯಕ್ಷೆ ಸ್ಥಾನ

    ಹೈದರಾಬಾದ್: 85 ವರ್ಷದ ಎಸ್. ಪೆರುಮಾತಾಳ್ ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಪಂಚಾಯತ್ ಚುನಾವಣೆಯಲ್ಲಿ ಗೆದ್ದು ಶಿವಂತಿಪಟ್ಟಿ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

    85 ವರ್ಷದ ಎಸ್. ಪೆರುಮಾತಾಳ್ ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಈ ವೇಳೆ ಪೆರುಮಾತಾಳ್ ಬಹುಮತವನ್ನು ಪಡೆದು ಆಯ್ಕೆಯಾಗುವ ಮೂಲಕವಾಗಿ ಅತ್ಯಂತ ಹಿರಿಯ ಪಂಚಾಯತ್ ಸದಸ್ಯೆ ಮತ್ತು ಅಧ್ಯಕ್ಷೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದೀರ್ಘಕಾಲದಿಂದಲೂ ರಾಜಕೀಯದಲ್ಲಿ ಪೆರುಮಾತಾಳ್ ತೊಡಗಿಸಿಕೊಂಡಿದ್ದರು. ಆದರೆ ಇದೆ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದು ಅಧಿಕಾರ ಚುಕ್ಕಾಣಿಯನ್ನು ಹಿಡಿದಿದ್ದಾರೆ. ರಾಜಕೀಯದಲ್ಲಿ ತೊಡಗಿಕೊಂಡಿದ್ದ ಪೆರುಮಾತಾಳ್ ತಮ್ಮ ಮಗನಿಗಾಗಿ ಪ್ರಚಾರದಲ್ಲಿ ತೊಡಗಿಕೊಳ್ಳುತ್ತಿದ್ದರು. ಆದರೆ ಈ ಭಾರಿ ತಾವೇ ಸ್ಪರ್ಧೆ ಮಾಡಿ 1,568 ಮತಗಳನ್ನು ಪಡೆದುಕೊಂಡು ಪಂಚಾಯತ್ ಅಧ್ಯಕ್ಷರಾಗಿದ್ದಾರೆ. ಇದನ್ನೂ ಓದಿ: ಮತ್ತೆ ಸರ್ಜಿಕಲ್‌ ಸ್ಟ್ರೈಕ್‌? – ಪಾಕಿಸ್ತಾನಕ್ಕೆ ಅಮಿತ್‌ ಶಾ ಎಚ್ಚರಿಕೆ

    ಪ್ರತಿನಿತ್ಯ ಜನರೊಂದಿಗೆ ಮಾತನಾಡುವುದರಿಂದ, ಪಂಚಾಯತ್‍ನಲ್ಲಿ ಪ್ರಚಾರ ಮಾಡುವುದು, ಮನೆಗಳಿಗೆ ಭೇಟಿ ನೀಡುವುದು ನನಗೆ ಯಾವುದೇ ಸಮಸ್ಯೆಯಾಗಿಲ್ಲ. ಪಂಚಾಯತ್‍ಗೆ ಕುಡಿಯುವ ನೀರಿನ ಪೂರೈಕೆ ನಿರಂತರವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ. ನನ್ನ ಬಾಲ್ಯದಿಂದಲೂ ಕುಡಿಯುವ ನೀರು ಇಲ್ಲಿನ ಪ್ರಮುಖ ಸಮಸ್ಯೆಯಾಗಿದೆ. ಆ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸುತ್ತೇನೆ. ನಾವು ಮಳೆಯ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದ್ದು, ನಮ್ಮಲ್ಲಿ ಕುಡಿಯುವ ನೀರಿಗೆ ಬೇರೆ ಯಾವುದೇ ಮೂಲವಿಲ್ಲ. ಬೀದಿ ದೀಪಗಳನ್ನು ಅಳವಡಿಸಲು ಮತ್ತು ಪಂಚಾಯತ್‍ನಲ್ಲಿ ರಸ್ತೆಗಳನ್ನು ನಿರ್ಮಿಸಲು ಪ್ರಯತ್ನಿಸುತ್ತೇನೆ ಎಂದು ಪೆರುಮಾತಾಳ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇದೆ: ಸಿಧು

  • ಎಂಜಿನಿಯರಿಂಗ್ ಓದುತ್ತಿರುವಾಗಲೇ ಜಿ.ಪಂ.ಅಧ್ಯಕ್ಷೆಯಾದ ಯುವತಿ

    ಎಂಜಿನಿಯರಿಂಗ್ ಓದುತ್ತಿರುವಾಗಲೇ ಜಿ.ಪಂ.ಅಧ್ಯಕ್ಷೆಯಾದ ಯುವತಿ

    ಚೆನ್ನೈ: 22 ವರ್ಷದ ತಮಿಳುನಾಡಿನ ಯುವತಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆಯಾಗುವ ಮೂಲಕ ಸುದ್ದಿಯಾಗಿದ್ದಾರೆ.

    ಹೊಸದಾಗಿ ರಚನೆಯಾದ ತೆಂಕಸಿ ಜಿಲ್ಲೆಯಲ್ಲಿ ಮಹಿಳೆಯರಿಗಾಗಿ ಮೀಸಲಾಗಿರುವ ವೆಂಕದಂಪಟ್ಟಿ ಪಂಚಾಯತ್ ನಲ್ಲಿ 22 ವರ್ಷದ ಯುವತಿ ಸರುಲತಾ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

    ಈ ಗೆಲುವಿನ ಬಗ್ಗೆ ನನಗೆ ಸಂತೋಷವಾಗಿದೆ ಮತ್ತು ನಾನು ವಿನಮ್ರನಾಗಿದ್ದೇನೆ, ಜನರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂದಿದ್ದಾರೆ.

    ಈ ಕುರಿತು ಸರುಲತಾ ಅವರು ಪ್ರತಿಕ್ರಿಯಿಸಿದ್ದು, ನಾನು ಈ ಗೆಲುವಿಗೆ ತುಂಬಾ ಸಂತೋಷ ಪಡುತ್ತೇನೆ. ನನ್ನನ್ನು ನಂಬಿದ ಜನರಿಗೆ ನಾನು ವಿನಮ್ರನಾಗಿದ್ದೇನೆ ಎಂದು ತಿಳಿಸಿದರು. ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಹೆಚ್ಚು ಹೆಚ್ಚು ವಿದ್ಯಾವಂತ ಯುವಕರು ರಾಜಕೀಯ ಪ್ರವೇಶಿಸಬೇಕು. ವಿದ್ಯಾವಂತ ಯುವಕರು ಇತರರಿಗಿಂತ ಹೆಚ್ಚು ಉತ್ತಮವಾಗಿ ಆಡಳಿತ ಮಾಡಬಹುದು ಎಂದು ಅವರು ನಂಬುತ್ತಾರೆ. ಇದನ್ನೂ ಓದಿ: ರಾಷ್ಟ್ರಪತಿ ಭೇಟಿಯಾದ ಕಾಂಗ್ರೆಸ್ ನಿಯೋಗ

    ಒಟ್ಟು 5 ಜನರು ಈ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, 22 ವರ್ಷದ ಯುವತಿ ಈ ಚುನಾವಣೆಯಲ್ಲಿ ಗೆದ್ದಿದ್ದಾರೆ. ಲತಾ ಅವರು ಕೊಯಮತ್ತೂರಿನಲ್ಲಿ ಹಿಂದುಸ್ತಾನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪದವಿ ಓದುತ್ತಿದ್ದಾರೆ.

    ತಮಿಳುನಾಡಿನ ಹೊಸದಾಗಿ ರಚನೆಯಾದ ಒಂಬತ್ತು ಜಿಲ್ಲೆಗಳಲ್ಲಿ ಚುನಾವಣೆ ನಡೆದಿತ್ತು. ಸರುಲತಾ ಅವರ ತಂದೆ ರವಿ ಸುಬ್ರಮಣಿಯನ್ ಅವರು ಕಳೆದ ಬಾರಿ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.

    ಪಂಚಾಯತ್ ಅಧಿಕಾರ ನಿರ್ವಹಣೆಗೆ ಕುಟುಂಬದ ಪುರುಷರ ಸಹಾಯವನ್ನು ಪಡೆಯುತ್ತಿರಾ ಎಂಬ ಪ್ರಶ್ನೆಗೆ, ನಾನು ಜನರೊಂದಿಗೆ ಸಮಾಲೋಚಿಸಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಒಡೆದು ಹೋದ 4 ಕೆರೆ ಕಟ್ಟೆಗಳು – ಆತಂಕದಲ್ಲಿ ಗ್ರಾಮಸ್ಥರು

    ಮುಂದೆ ಭವಿಷ್ಯದಲ್ಲಿ ವಿಧಾನಸಭೆಗೆ ಅಥವಾ ಸಂಸತ್ತಿಗೆ ಹೋಗುವ ಆಸೆ ಇದೆಯಾ ಎಂದು ಕೇಳಿದ್ದಕ್ಕೆ ನಾನು ಅದರ ಬಗ್ಗೆ ಏನೂ ಯೋಚಿಸಿಲ್ಲ ಎಂದು ಹೇಳಿದ್ದಾರೆ.

  • ಗ್ರಾಮೀಣ ಭಾಗದ ಜನರು ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಬೇಕು: ಸವದಿ

    ಗ್ರಾಮೀಣ ಭಾಗದ ಜನರು ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಬೇಕು: ಸವದಿ

    ಚಿಕ್ಕೋಡಿ: ಸರ್ಕಾರ ಗ್ರಾಮೀಣ ಭಾಗಗಳಲ್ಲಿ ಸ್ಥಾಪಿಸಿರುವ ಗ್ರಂಥಾಲಯಗಳ ಸದುಪಯೋಗವನ್ನು ಪ್ರತಿಯೊಂದು ಗ್ರಾಮದ ಜನರು ಪಡೆದುಕೊಳ್ಳಬೇಕು ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಂಥಾಲಯಗಳಿಗೆ ಸಾರ್ವಜನಿಕ ಗ್ರಂಥಾಲಯದ ಮೂಲಕ ಬಂದಿರುವ ಪುಸ್ತಕಗಳನ್ನು ಹಂಚಿಕೆ ಮಾಡಿ ಮಾತನಾಡಿದ ಅವರು, ಗ್ರಂಥಾಲಯ ಎಂದರೆ ಇಡೀ ವಿಶ್ವವೇ ಇದ್ದ ಹಾಗೆ ದೇಶದ ಇತಿಹಾಸ, ಒಳ್ಳೆಯ ವಿಚಾರ, ಪರಿಸರ, ಜ್ಞಾನ, ಜಗತ್ತು, ಇತಿಹಾಸ ಪರಂಪರೆಯನ್ನು ಪುಸ್ತಕ ಕಲಿಸುತ್ತದೆ ಎಲ್ಲರೂ ಓದುವುದನ್ನು ಹವ್ಯಾಸ ಮಾಡಿಕೊಳ್ಳಬೇಕೆಂದು ಕರೆ ನೀಡಿದರು. ಇದನ್ನೂ ಓದಿ: ರಮೇಶ್ ಕುಮಾರ್ ವಿರುದ್ಧ ಜೆ.ಪಿ ನಗರ ಎಎಸ್‍ಐ ಗರಂ

    ಪುಸ್ತಕ ಓದುವುದರಿಂದ ಮಾನಸಿಕವಾಗಿ, ದೈಹಿಕವಾಗಿ ಆರೋಗ್ಯವಂತರಾಗಿ ಇರುತ್ತಾರೆ. ಸರ್ಕಾರ ಹಲವಾರು ಯೋಜನೆಗಳನ್ನು ಗ್ರಾಮಗಳಿಗೆ ಒದಗಿಸಿದೆ, ಆ ಯೋಜನೆಗಳನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು. ಇನ್ನೂ ಉಳಿದ ಗ್ರಾಮ ಪಂಚಾಯತ್‍ಗಳಿಗೆ ಸರ್ಕಾರದಿಂದ ಗ್ರಂಥಾಲಯ ಸ್ಥಾಪನೆ ಕಾರ್ಯ ಆಗುತ್ತಿದೆ ಎಂದರು.

    ಈ ವೇಳೆ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ, ಉಪ ತಹಶೀಲ್ದಾರ್ ಮಹಾದೇವ ಬಿರಾದಾರ್, ಡಿವೈಎಸ್‍ಪಿ ಅಲೀಶ್, ಕಂದಾಯ ನಿರೀಕ್ಷಿಕ ಎಂ.ಎಂ ಮಿರ್ಜಿ, ಕುಮಾರ್ ಹಾಡಕರ, ಉದ್ಯಮಿ ಸಂತೋಷ್ ಸಾವಡಕರ ಸೇರಿದಂತೆ ಹಲವರು ಉಪಸ್ಥಿರಿದ್ದರು. ಇದನ್ನೂ ಓದಿ: ಕೆಂಗೇರಿ ಮೆಟ್ರೋ ವೇದಿಕೆ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಕನ್ನಡ ಮಾಯ

  • ಎಂಜಲು ನೆಕ್ಕುವ ಶಿಕ್ಷೆ ವಿಧಿಸಿದ ಪಂಚಾಯತ್- ಪೊಲೀಸ್ ಠಾಣೆ ಮೇಟ್ಟಿಲೇರಿದ ಮಹಿಳೆ

    ಎಂಜಲು ನೆಕ್ಕುವ ಶಿಕ್ಷೆ ವಿಧಿಸಿದ ಪಂಚಾಯತ್- ಪೊಲೀಸ್ ಠಾಣೆ ಮೇಟ್ಟಿಲೇರಿದ ಮಹಿಳೆ

    ಮುಂಬೈ: ಮೊದಲ ಪತಿಯಿಂದ ವಿಚ್ಛೇದನ ಪಡೆದುಕೊಂಡು 2ನೇ ವಿವಾಹವಾಗಿದ್ದ ಮಹಿಳೆಯೊಬ್ಬರಿಗೆ ಸ್ಥಳೀಯ ಪಂಚಾಯತಿಯೊಂದು ಎಂಜಲು ನೆಕ್ಕುವ ಶಿಕ್ಷೆ ವಿಧಿಸುವ ಮೂಲಕವಾಗಿ ಸುದ್ದಿಯಾಗಿದೆ.

    ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಈ ಘಟನೆ ಕಳೆದ ತಿಂಗಳು ನಡೆದಿದ್ದು, ಪಂಚಾಯತಿ ಆದೇಶ ತಿರಸ್ಕರಿಸಿದ ಮಹಿಳೆ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಇದೀಗ ಪ್ರಕರಣ ಬೆಳಕಿಗೆ ಬಂದಿದೆ.

    2015ರಲ್ಲಿ ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಮಹಿಳೆ, 2019ರಲ್ಲಿ ಎರಡನೇ ಮದುವೆಯಾಗಿದ್ದರು. ಸಂತ್ರಸ್ತೆ ನಾಥ್ ಜೋಗಿ ಸಮುದಾಯಕ್ಕೆ ಸೇರಿದವರಾಗಿದ್ದು, ಸ್ಥಳೀಯ ಪಂಚಾಯತ್ ಸದಸ್ಯರು ಮಹಿಳೆಯ ಎರಡನೇ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

    ಇದರಂತೆ ಮಹಿಳೆಯ ಎರಡನೇ ವಿವಾಹದ ಬಗ್ಗೆ ಪಂಚಾಯತ್ ಸದಸ್ಯರು ಸಭೆ ನಡೆಸಿ ಮಾತುಕತೆ ನಡೆಸಿದ್ದು, ಸಭೆ ವೇಳೆ ಮಹಿಳೆಯ ಸಹೋದರಿ, ಸಂಬಂಧಿಕರನ್ನು ಕರೆಸಿದ್ದಾರೆ. ಈ ವೇಳೆ ಪಂಚಾಯತ್ ಸದಸ್ಯರು ಬಾಳೆ ಎಲೆ ಮೇಲೆ ಉಗುಳಲಿದ್ದು, ಈ ಉಗುಳನ್ನು ಶಿಕ್ಷೆಯಾಗಿ ಮಹಿಳೆ ನೆಕ್ಕಬೇಕೆಂದು ತಿಳಿಸಿದ್ದಾರೆ. ಅಲ್ಲದೆ, ಮಹಿಳೆ ಎರಡನೇ ಮದುವೆ ಮಾಡಿಕೊಂಡ ಶಿಕ್ಷೆಗಾಗಿ ರೂ.1 ಲಕ್ಷ ದಂಡ ಕಟ್ಟುವಂತೆಯೂ ತಿಳಿಸಿದ್ದಾರೆ. ಶಿಕ್ಷೆ ಪೂರ್ಣಗೊಂಡ ಬಳಿಕ ಮಹಿಳೆಯನ್ನು ಮರಳಿ ಸಮುದಾಯಕ್ಕೆ ಸೇರಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

    ಬಳಿಕ ಮಹಿಳೆಯ ಸಹೋದರಿ ಹಾಗೂ ಸಂಬಂಧಿಕರು ಶಿಕ್ಷೆ ಕುರಿತು ಮಾಹಿತಿ ನೀಡಿದ್ದಾರೆ. ಶಿಕ್ಷೆ ಬಗ್ಗೆ ತಿಳಿದ ಮಹಿಳೆ ಆಘಾತಗೊಂಡಿದ್ದು, ಕೂಡಲೇ ಪೊಲೀಸ್ ಠಾಣೆ ಮೆಟ್ಟಿಲೇರಿ, ಪಂಚಾಯತ್ ಸದಸ್ಯರ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಇದೀಗ ಪಂಚಾಯತ್ ಸದಸ್ಯರ ವಿರುದ್ಧ ಸಾಮಾಜಿಕ ಬಹಿಷ್ಕಾರ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯ್ದೆ 2016, ಮಹಾರಾಷ್ಟ್ರ ಜನರ ಸಂರಕ್ಷಣೆ ಸೆಕ್ಷನ್ 5 ಮತ್ತು 6 ರ ಅಡಿಯಲ್ಲಿ ಎಐಆರ್ ದಾಖಲು ಮಾಡಿಕೊಂಡು, ತನಿಖೆ ಆರಂಭಿಸಿದ್ದಾರೆ.

  • ಹೊರ ಜಿಲ್ಲೆಯಿಂದ ಬಂದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ಇಲ್ದೇ ಇದ್ರೆ ಗ್ರಾಮಕ್ಕಿಲ್ಲ ಪ್ರವೇಶ

    ಹೊರ ಜಿಲ್ಲೆಯಿಂದ ಬಂದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ಇಲ್ದೇ ಇದ್ರೆ ಗ್ರಾಮಕ್ಕಿಲ್ಲ ಪ್ರವೇಶ

    – 7 ದಿನ ಮನೆಯಿಂದ ಹೊರ ಬರುವಂತಿಲ್ಲ

    ಧಾರವಾಡ: ಕೊರೊನಾ ಎರಡನೇ ಅಲೆ ಜೋರಾಗಿ ಹಬ್ಬುತ್ತಿದ್ದಂತೆ ಜಿಲ್ಲೆಯ ಜನ ತಾವಾಗಿಯೇ ಮುನ್ನೆಚ್ಚರಿಕಾ ಕ್ರಮಕ್ಕೆ ಮುಂದಾಗಿದ್ದಾರೆ. ಬೆಂಗಳೂರು ಸಹಿತ ಹೊರ ಜಿಲ್ಲೆಯಿಂದ ಆಗಮಿಸುವವರು ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಬಂದರೆ ಮಾತ್ರ ಹಳ್ಳಿಗಳಿಗೆ ಪ್ರವೇಶ. ಇಲ್ಲದೆ ಇದ್ದರೆ ಹಳ್ಳಿ ಪ್ರವೇಶಕ್ಕೆ ಅನುಮತಿ ನೀಡದೇ ಇರಲು ನಿರ್ಧರಿಸಿದ್ದಾರೆ.

    ಕಳೆದ ವರ್ಷ ಕೊರೊನಾ ಮೊದಲ ಅಲೆ ಬಂದಾಗ ಲಾಕ್‍ಡೌನ್ ಆಗುತ್ತಿದ್ದಂತೆ ಹಳ್ಳಿ ಹಳ್ಳಿಗಳನ್ನೆಲ್ಲಾ ಲಾಕ್ ಮಾಡಲಾಗಿತ್ತು. ಆದರೆ ಎರಡನೇ ಅಲೆ ಜೋರಾಗಿದ್ದರೂ ಬಹುತೇಕ ಹಳ್ಳಿಗಳು ಇನ್ನೂ ಲಾಕ್ ಆಗಿಲ್ಲ. ಆದರೆ ಈ ಬಾರಿ ಸರ್ಕಾರ ಲಾಕ್‍ಡೌನ್ ಮಾಡಿದರು ಕೂಡ ಕೆಲವು ಕ್ರಮಗಳು ಸಡಿಲಿಕೆಯಲ್ಲಿದೆ. ಹಾಗಾಗಿ ಹಳ್ಳಿಗರು ಸಹ ಉದಾಸೀನ ವಹಿಸೋಕೆ ಆರಂಭ ಮಾಡಿ ಬಿಟ್ಟಿದ್ದಾರೆ. ಆದರೆ ಧಾರವಾಡ ಜಿಲ್ಲೆಯ ಹಳ್ಳಿ ಹಳ್ಳಿಯಲ್ಲೂ ಜನ ಕೊರೊನಾ ನಿಯಂತ್ರಣಕ್ಕೆ ತಮಗೆ ತಾವೇ ಟಫ್ ರೂಲ್ಸ್‍ಗಳನ್ನು ಹಾಕಿಕೊಳ್ಳಲು ಮುಂದಾಗಿದ್ದಾರೆ.

    ಧಾರವಾಡ ಸಮೀಪದ ಹೆಬ್ಬಳ್ಳಿ ಗ್ರಾಮ ಸುಮಾರು 18 ಸಾವಿರ ಜನಸಂಖ್ಯೆವುಳ್ಳ ದೊಡ್ಡ ಗ್ರಾಮವಾಗಿದ್ದು, ಹೆಬ್ಬಳ್ಳಿಯಲ್ಲಿ ಈಗಾಗಲೇ 8 ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ. ಹೀಗಾಗಿ ಇದು ಬೆಳೆಯಬಾರದು. ಈ ಚೈನ್ ಲಿಂಕ್ ಕಟ್ ಮಾಡಬೇಕು ಎಂದುಕೊಂಡು ಹೆಬ್ಬಳ್ಳಿ ಗ್ರಾಮ ಪಂಚಾಯತ್‍ನವರು ಮತ್ತು ಸಾರ್ವಜನಿಕರು ಟಫ್ ರೂಲ್ಸ್ ಹಾಕಿಕೊಂಡಿದ್ದಾರೆ.

    ಈ ಪ್ರಕಾರ ಬೆಂಗಳೂರಿನಿಂದ ಬರುವವರಿಗೆ ನೇರವಾಗಿ ಗ್ರಾಮಕ್ಕೆ ಪ್ರವೇಶ ಇಲ್ಲ. ಊರಿಗೆ ಬರುವುದಾದರೆ ಮೊದಲು ಆಸ್ಪತ್ರೆಗೆ ಹೋಗಿ ಕೋವಿಡ್ ಟೆಸ್ಟ್ ಮಾಡಿಸಬೇಕು. ನೆಗಟಿವ್ ಬಂದರೆ ಮಾತ್ರ ಊರೊಳಗೆ ಬರಬೇಕು ಎನ್ನುವ ರೂಲ್ಸ್ ಮಾಡಿದ್ದಾರೆ. ಅದಲ್ಲದೆ ಬೇರೆ ಯಾವುದೇ ಊರಿನಿಂದ ಬಂದರೂ ಏಳು ದಿನ ಮನೆಬಿಟ್ಟು ಹೊರಗೆ ಬರದೇ ಕ್ವಾರಂಟೈನ್ ಆಗಬೇಕು ಎಂದು ಎಲ್ಲರಿಗೂ ತಿಳಿ ಹೇಳಿದ್ದಾರೆ.