Tag: Pankaja

  • ಕಿರುತೆರೆಗೆ ಎಸ್.ನಾರಾಯಣ್ ಪುತ್ರ ಪಂಕಜ್ : ಧಾರಾವಾಹಿಗೆ ನಾಯಕ

    ಕಿರುತೆರೆಗೆ ಎಸ್.ನಾರಾಯಣ್ ಪುತ್ರ ಪಂಕಜ್ : ಧಾರಾವಾಹಿಗೆ ನಾಯಕ

    ತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ‘ಸಿರಿಕನ್ನಡ’ ವಾಹಿನಿಯಲ್ಲಿ ಇದೇ ಜೂನ್ 5 ರಿಂದ ‘ಊರ್ಮಿಳಾ’,‌ ‘ಬ್ರಾಹ್ಮಿನ್ಸ್ ಕೆಫೆ’ ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ ‘ಸಖತ್ ಜೋಡಿ’ ಎಂಬ ರಿಯಾಲಿಟಿ ಶೋ ಆರಂಭವಾಗಲಿದೆ. ಈ ಕುರಿತು ಮಾಹಿತಿ ನೀಡಲು ವಾಹಿನಿ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

    ನಮ್ಮ ಸಿರಿಕನ್ನಡ ವಾಹಿನಿಗೆ ಪ್ರೋತ್ಸಾಹ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ. ಈಗಾಗಲೇ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ಮೂಲಕ ಸಿರಿಕನ್ನಡ ಕನ್ನಡಿಗರ ಮನ ಗೆದ್ದಿದೆ. ಜೂನ್ 5 ರಿಂದ ಊರ್ಮಿಳಾ ಹಾಗೂ ಬ್ರಾಹ್ಮಿನ್ಸ್ ಕೆಫೆ ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ ಸಖತ್ ಜೋಡಿ ಎಂಬ ರಿಯಾಲಿಟಿ ಶೋ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ನಮ್ಮ ವಾಹಿನಿಯಿಂದ ಅಪಾರ ವೆಚ್ಚದಲ್ಲಿ ಈ ರಿಯಾಲಿಟಿ ಶೋ ನಿರ್ಮಾಣವಾಗುತ್ತಿದೆ. ಈ ಶೋನಲ್ಲಿ ಭಾರಿ ಮೊತ್ತದ ಉಡುಗೊರೆಗಳು ಇದೆ. ಮುಂದೆ ನಮ್ಮ ವಾಹಿನಿಯ ವೀಕ್ಷಕರಿಗೆ ಅರ್ಧಗಂಟೆಗೊಮ್ಮೆ ಪ್ರಶ್ನೆ ಕೇಳುವುದು. ಗೆದ್ದವರಿಗೆ ವಿಶೇಷ ಬಹುಮಾನ ನೀಡುವ ಯೋಜನೆ ಕೂಡ ಹಾಕಿಕೊಂಡಿದ್ದೇವೆ ಎಂದರು ವಾಹಿನಿಯ ಮುಖ್ಯಸ್ಥರಾದ ರಾಜೇಶ್ ರಾಜಘಟ್ಟ.‌ ಇದೇ ಸಂದರ್ಭದಲ್ಲಿ ಸಂಸ್ಥಾಪಕ ನಿರ್ದೇಶಕರಾದ ಶಿವಕುಮಾರ್ ಅವರು ಉಪಸ್ಥಿತರಿದ್ದರು.

    ನನ್ನನ್ನು ಹಾಸ್ಯ ನಟನಾಗಿ ಗುರುತಿಸಿದ್ದೀರಿ. ಸಖತ್ ಜೋಡಿ ಎಂಬ ಸಖತ್ ಕಾರ್ಯಕ್ರಮವನ್ನು ನಾನು ಹಾಗೂ ಹೇಮಲತಾ ನಿರೂಪಣೆ ಮಾಡುತ್ತಿದ್ದೇವೆ. ಈಗಾಗಲೇ ಮೂರು ಎಪಿಸೋಡ್ ಚಿತ್ರೀಕರಣವಾಗಿದೆ. ಊರ್ಮಿಳಾ ಧಾರಾವಾಹಿ ತಂಡದವರು, ಈ ಬಾರಿಯ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಟಾಪರ್ಸ್ ಹಾಗೂ ಜಾನಪದ ಕಲಾವಿದರು ಪಾಲ್ಗೊಂಡಿದ್ದರು. ಜೂನ್ 5 ರಿಂದ ಸೋಮವಾರದಿಂದ ಶುಕ್ರವಾರದವರೆಗೂ ಸಂಜೆ 6ಗಂಟೆಗೆ ಸಖತ್ ಜೋಡಿ ಪ್ರಸಾರವಾಗಲಿದೆ. ಇದಕ್ಕಾಗಿ ಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿ ಸೆಟ್ ಹಾಕಲಾಗಿದೆ ಎಂದು ಹಿತೇಶ್ ತಿಳಿಸಿದರು. ಇದನ್ನೂ ಓದಿ:ಪಿಎಚ್‌ಡಿ ಪ್ರವೇಶ ಪರೀಕ್ಷೆ ಬರೆದ ನಟಿ ಪವಿತ್ರಾ ಲೋಕೇಶ್

    ಖ್ಯಾತ ನಿರ್ದೇಶಕ ಎಸ್ ನಾರಾಯಣ್ (S. Narayan) ಪುತ್ರ ಪಂಕಜ್ (Pankaja) ಹಾಗೂ ರಶ್ಮಿತಾ ಪ್ರಧಾನಪಾತ್ರದಲ್ಲಿ ನಟಿಸುತ್ತಿರುವ ಊರ್ಮಿಳಾ (Urmila) ಧಾರಾವಾಹಿ ಇದೇ ಜೂನ್ 5 ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗಲಿದೆ. ನಾನು ಚಿಕ್ಕ ವಯಸ್ಸಿನಲ್ಲಿ ಬಾಲ ಕಲಾವಿದನಾಗಿ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದೆ. ಈಗ ಈ ಧಾರಾವಾಹಿ ಮೂಲಕ ಕಿರುತೆರೆಗೆ ಮತ್ತೆ ಬಂದಿದ್ದೇನೆ ಎಂದರು ಪಂಕಜ್. ರಶ್ಮಿತಾ, ಆಶಾರಾಣಿ, ಶಿವು ಮುಂತಾದವರು ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು.

     

    ರವಿ.ಆರ್.ಗರಣಿ ಕಥೆ ಬರೆದಿರುವ ಬ್ರಾಹ್ಮಿನ್ಸ್ ಕೆಫೆ (Brahmins Cafe) ವಿಭಿನ್ನ ಕಥಾಹಂದರ ಹೊಂದಿದೆ. ಜೂನ್ 5ರಿಂದ ಸೋಮವಾರದಿಂದ ಶುಕ್ರವಾರದವರೆಗೂ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಶಿವು ಎಂಬ ಹೊಸಹುಡುಗ ಈ ಧಾರಾವಾಹಿಯ ಮೂಲಕ ಕಿರುತೆರೆ ಪ್ರವೇಶಿಸುತ್ತಿದ್ದಾನೆ. ಗಾಯತ್ರಿ ಸೆಲ್ವಂ ಹಾಗೂ ಸೆಲ್ವಂ ಈ ಧಾರಾವಾಹಿ ನಿರ್ಮಾಣ ಮಾಡುತ್ತಿದ್ದಾರೆ ಎಂದು ನಿರ್ದೇಶಕ ಸಂಜೀವ್ ತಗಡೂರು ತಿಳಿಸಿದರು. ಧಾರಾವಾಹಿಯಲ್ಲಿ ಅಭಿನಯಿಸುತ್ತಿರುವ ಶ್ರೀನಾಥ್ ವಸಿಷ್ಠ, ಪ್ರಥಮ ಪ್ರಸಾದ್, ಶಿವು, ರಾಮಸ್ವಾಮಿ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸುಬ್ಬಲಕ್ಷ್ಮಿ’ ಪತಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸುಬ್ಬಲಕ್ಷ್ಮಿ’ ಪತಿ

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಸುಬ್ಬಲಕ್ಷ್ಮಿ ಸಂಸಾರ’ ಧಾರಾವಾಹಿಯಲ್ಲಿ ಈ ಹಿಂದೆ ನಟಿಸುತ್ತಿದ್ದ ನಟ ಭವಾನಿ ಸಿಂಗ್ ತಮ್ಮ ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಭವಾನಿ ಸಿಂಗ್ ತಮ್ಮ ಬಹುಕಾಲದ ಗೆಳತಿ ಪಂಕಜಾ ಶಿವಣ್ಣ ಅವರ ಜೊತೆ ಮದುವೆ ಆಗಿದ್ದಾರೆ. ಭವಾನಿ ಹಾಗೂ ಪಂಕಜಾ ಎರಡು ವರ್ಷದಿಂದ ಸ್ನೇಹಿತರಾಗಿದ್ದರು. ಬಳಿಕ ಭವಾನಿ ಅವರು ಪಂಕಜಾ ಅವರನ್ನು ಪ್ರಪೋಸ್ ಮಾಡಿದ್ದು, ಇವರಿಬ್ಬರ ಸ್ನೇಹ ಪ್ರೀತಿಗೆ ತಿರುಗಿ ಈಗ ಮದುವೆಯಾಗಿದ್ದಾರೆ. ಇದನ್ನೂ ಓದಿ: ನಿಶ್ಚಿತಾರ್ಥ ಮಾಡಿಕೊಂಡ ‘ಸುಬ್ಬಲಕ್ಷ್ಮಿ’ ಪತಿ

    ಕೆಲ ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಇದೀಗ ಅದ್ಧೂರಿಯಾಗಿ ಮದುವೆ ಮಾಡಿಕೊಂಡಿದ್ದಾರೆ. ಮದುವೆಯ ಫೋಟೋಗಳನ್ನು ಭವಾನಿ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇವರಿಬ್ಬರ ಆರತಕ್ಷತೆ ಕೂಡ ಅದ್ಧೂರಿಯಾಗಿ ನಡೆದಿದೆ. ಆರತಕ್ಷತೆಗೆ ಸಹ ಕಲಾವಿದರು ಬಂದು ನವ ಜೋಡಿಗೆ ಶುಭಾಶಯ ತಿಳಿಸಿದ್ದಾರೆ.

    ಮೂಲತಃ ರಾಜಸ್ಥಾನದವರಾಗಿರುವ ಭವಾನಿ ಸಿಂಗ್ ಬೆಂಗಳೂರಿನಲ್ಲಿ ಬಿಬಿಎಂ ಪದವಿ ಮಾಡಿದ್ದಾರೆ. ಈ ಹಿಂದೆ ಭವಾನಿ ಸಿಂಗ್ ನಟಿಸಿದ ‘ಸುಬ್ಬಲಕ್ಷ್ಮಿ ಸಂಸಾರ’ ಧಾರಾವಾಹಿಯಲ್ಲಿ ಪಂಕಜಾ ನಾಯಕಿಯ ಸ್ನೇಹಿತೆಯ ಪಾತ್ರದಲ್ಲಿ ಅಭಿನಯಿಸಿದ್ದರು.

    ಸುಬ್ಬಲಕ್ಷ್ಮಿ ಸಂಸಾರ ಅಲ್ಲದೆ ಭವಾನಿ ಸಿಂಗ್ ‘ಚರಣದಾಸಿ’ ಧಾರಾವಾಹಿಯಲ್ಲಿ ನಟಿಸಿದ್ದರು. ಸದ್ಯ ಭವಾನಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ರಕ್ಷಾ ಬಂಧನ’ ಧಾರಾವಾಹಿಯಲ್ಲೂ ನಟಿಸುತ್ತಿದ್ದಾರೆ.

     

    View this post on Instagram

     

    My Wife My Life !! @pankajashivanna . I Love You ❤️❤️❤️

    A post shared by Bhavani Singh (@bhavanisingh.official) on