Tag: Panlik Tv

  • ಸುಧಾಮೂರ್ತಿ, ನಾರಾಯಣಮೂರ್ತಿಯನ್ನು ಶಾಲೆಯ ಉದ್ಘಾಟಕರಾಗಿ ಕರೆತರಬೇಕು: ಕಾರಜೋಳ

    ಸುಧಾಮೂರ್ತಿ, ನಾರಾಯಣಮೂರ್ತಿಯನ್ನು ಶಾಲೆಯ ಉದ್ಘಾಟಕರಾಗಿ ಕರೆತರಬೇಕು: ಕಾರಜೋಳ

    – ಶಾಲೆಯ ನಿರ್ಮಾಣವನ್ನು ಉತ್ತಮ ಗುಣಮಟ್ಟದಲ್ಲಿ ಮಾಡಬೇಕು ಎಂದು ಸೂಚಿಸಿದ್ದೇನೆ

    ವಿಜಯಪುರ: ಡಾ.ಸುಧಾಮೂರ್ತಿ ಮತ್ತು ಡಾ.ನಾರಾಯಣಮೂರ್ತಿರನ್ನು ಶಾಲೆಯ ಉದ್ಘಾಟಕರಾಗಿ ಕರೆತರಬೇಕು ಎಂದು ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ.ಕಾರಜೋಳ ಹೇಳಿದರು.

    ಪದ್ಮಶ್ರೀ ಕಾಕಾ ಕಾರ್ ಖಾನಿಸ್ ಪ್ರೌಢಶಾಲೆ ನಿರ್ಮಾಣ ಕಾಮಗಾರಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ಶಂಕುಸ್ಥಾಪನೆ ಮಾಡಿದ್ದಾರೆ. ಅದಕ್ಕೂ ಮೊದಲು ಮಾಧ್ಯಮಗಳೊಂದಿದಗೆ ಮಾತನಾಡಿದ ಅವರು, ಈ ಶಾಲೆ ನಿರ್ಮಿಸುವ ಕಾರ್ಯ 6 ತಿಂಗಳಲ್ಲಿ ಮುಗಿಸಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲ ಚಟುವಟಿಕೆಗಳು ಪ್ರಾರಂಭ ಆಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

    ಡಾ.ಸುಧಾಮೂರ್ತಿ ಮತ್ತು ಡಾ.ನಾರಾಯಣಮೂರ್ತಿ ಅವರನ್ನು ಈ ಪ್ರೌಢಶಾಲೆ ಕಟ್ಟಡ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಕರೆತರುವ ಆಶಯ ತಮ್ಮದಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ:ಸೆ.5ರಂದು ‘ಗೌರಿ ಲಂಕೇಶ್ ದಿನ’ವನ್ನಾಗಿ ಆಚರಿಸಲಿದೆ ಕೆನಡಾದ ಬರ್ನಾಬಿ ನಗರ

    2020-21ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯ ಅಡಿಯಲ್ಲಿ 10 ಕೋಟಿ ರೂ. ಅನುದಾನ ಮಾಡಲಾಗಿತ್ತು. ಅದರಲ್ಲಿ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯ, ವಾಚನಾಲಯ, ದೈಹಿಕ ಶಿಕ್ಷಣ ವಿಭಾಗದ ಕೊಠಡಿ ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಕಾಲಾವಧಿಯಲ್ಲಿ ಪೂರ್ಣ ಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ:ಮದುವೆ ಮನೆಗೆ ಹೋಗಿ ಪ್ರಾಣಕ್ಕೆ ಆಪತ್ತು ತಂದುಕೊಂಡ 100ಕ್ಕೂ ಹೆಚ್ಚು ಜನರು

    1933 ರಲ್ಲಿ ಗಾಂಧೀಜಿಯವರಿಂದ ಪ್ರೇರಣೆ ಪಡೆದು ಕಾಕಾ ಕಾರಖಾನೀಸ ಅವರು ಹರಿಜನ ಕನ್ಯಾ ಮಂದಿರ ಮತ್ತು ಹರಿಜನ ಗಂಡು ಮಕ್ಕಳ ಹಾಸ್ಟೆಲ್ ಪ್ರಾರಂಭ ಮಾಡಿ 236 ಮಕ್ಕಳನ್ನು ಓದಿಸಿ ಕರ್ನಾಟಕದ ಗಾಂಧಿ ಅನಿಸಿಕೊಂಡರು. ದೀನ ದಲಿತರ ಉದ್ಧಾರಕ್ಕಾಗಿ ಅವರ ಜೀವನವನ್ನೇ ಮುಡುಪಾಗಿಟ್ಟವರು ಎಂದು ನೆನೆಪಿಸಿಕೊಂಡರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಬಸನಗೌಡ ಪಾಟೀಲ ವಹಿಸಿದ್ದರು. ಈ ಕಟ್ಟಡವು 2020-21 ನೇ ಸಾಲಿನ 5054-ಎಸ್.ಸಿ.ಪಿ ಅಡಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ 10 ಕೋಟಿ ರೂ.ಗಳಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಇದನ್ನೂ ಓದಿ:ಹುಬ್ಬಳ್ಳಿಗೆ ಅಮಿತ್ ಶಾರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿಎಂ

    ಕಟ್ಟಡದಲ್ಲಿ ಏನಿದೆ?

    ಕಟ್ಟಡದ ನೆಲಮಹಡಿ(1140,00 ಚಿ.ಮೀ), ಮೊದಲ ಮಹಡಿ (1180,00 ಚಿ.ಮೀ), ಎರಡನೇ ಮಹಡಿ (980,00 ಚ.ಮೀ) ಹಾಗೂ ಟೆರೆಸ್ ಮಹಡಿ (50.00 ಚ.ಮೀ) ಒಟ್ಟು 3350.00 ಚ.ಮೀ ವಿಸ್ತೀರ್ಣವನ್ನು ಹೊಂದಿದ್ದು, ಶಾಲೆಗೆ ಅವಶ್ಯವಿರುವ ಅನುಕೂಲತೆಗಳನ್ನು ಕಲ್ಪಿಸಲಾಗಿದೆ. ನೆಲ ಮಹಡಿಯು ಅಡ್ಮಿನಿಸ್ಟ್ರೇಟಿವ್ ಆಫೀಸ್, ರಿಸರ್ಚ್ ಸೆಂಟರ್, ಪ್ರಿನ್ಸಿಪಲ್ ಚೇಂಬರ್, ಕ್ಲಾಸ್ ರೂಮ್ಸ್-4, ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಪ್ರಯೋಗಾಲಯ, ಯೋಗಾ ಸೆಂಟರ್, ಲೇಡಿಸ್ ವೇಟಿಂಗ್ ರೂಮ್ ಗಳನ್ನು ಒಳಗೊಂಡಿರುತ್ತದೆ.

    ಯಾವ ಸೌಲಭ್ಯವಿದೆ?

    ಮೊದಲನೇ ಮಹಡಿಯ ಕಾನ್ಫರನ್ಸ್ ರೂಮ್, ಲೈಬ್ರರಿ, ಮ್ಯಾನೇಜಮೆಂಟ್ ರೂಮ್, ಸ್ಟಾಫ್ ರೂಮ್, ಕ್ಲಾಸ್ ರೂಮ್ಸ್-4, ಹೆಲ್ತ್ ಸೆಂಟರ್, ಸ್ಟೋರ್ ಮತ್ತು ರೆಕಾಡ್ರ್ಸ್, ಇಂಡೋರ್ ಸ್ಪೋಟ್ರ್ಸ ಫೆಸಿಲಿಟ, ಜೆಂಟ್ಸ್ ವೇಟಿಂಗ್ ರೂಮ್ ಗಳನ್ನು ಒಳಗೊಂಡಿರುತ್ತದೆ. ಎರಡನೇ ಮಹಡಿಯ ರೆಸೋನನ್ಸ್ ಸೆಂಟರ್, ಡಿಜಿಟಲ್ ಲೈಬ್ರರಿ, ಮ್ಯಾನೇಜಮೆಂಟ್ ರೂಮ್, ಕ್ಲಾಸ್ ರೂಮ್ಸ್-4, ಮಲ್ಟಿ ಪರಪಸ್ ಹಾಲ್ ಗಳನ್ನು ಒಳಗೊಂಡಿದ್ದು, ಮೂರನೇ ಮಹಡಿಯು ಸ್ಟೇರಕೇಸ್ ಹೆಡ್ ರೂಮ್ಸ್ ಗಳಿರುತ್ತದೆ. ಇದನ್ನೂ ಓದಿ:ಬೆಳಗಾವಿ ಮೂವರು ನಾಯಕರನ್ನ ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ

    ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಶ್ರೀ ರಮೇಶ್ ಜಿಗಜಿಣಗಿ, ಜಿಲ್ಲಾಧಿಕಾರಿ ಪಿ, ಸುನೀಲ್ ಕುಮಾರ್, ಪೆÇಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್, ಮುಖಂಡರುಗಳಾದ ಗೋಪಾಲನಾಯಕ್, ಅಡಿವೆಪ್ಪ ಸಾಲಗಲ್, ಸಿದ್ದು ರಾಯಣ್ಣವರ, ರಮೇಶ್ ಆಸಂಗಿ, ಶಂಕರ್, ಭೀರಪ್ಪ ಅರ್ಧಾವೂರ, ಹಾಗೂ ಇತರೆ ಅಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.

  • ಹೋಮ್ ವರ್ಕ್ ಕಿರಿ ಕಿರಿ ತಪ್ಪಿಸಿಕೊಳ್ಳಲು ಅತ್ಯಾಚಾರದ ಕಥೆ ಹಣೆದ ವಿದ್ಯಾರ್ಥಿನಿ

    ಹೋಮ್ ವರ್ಕ್ ಕಿರಿ ಕಿರಿ ತಪ್ಪಿಸಿಕೊಳ್ಳಲು ಅತ್ಯಾಚಾರದ ಕಥೆ ಹಣೆದ ವಿದ್ಯಾರ್ಥಿನಿ

    ಕಾರವಾರ: ಶಾಲೆಯಲ್ಲಿ ಕೊಟ್ಟ ಹೋಮ್ ವರ್ಕ್ ನಿಂದ ತಪ್ಪಿಸಿಕೊಳ್ಳಲು ಪಾಲಕರ ಕಣ್ತಿಪ್ಪಿಸಿ ಕಾಡಿನಲ್ಲಿ ಅಡಗಿ ಕುಳಿ ವಿದ್ಯಾರ್ಥಿನಿ ಅತ್ಯಾಚಾರದ ನಾಟಕವಾಡಿದ್ದಾಳೆ. ವಿದ್ಯಾರ್ಥಿನಿಯ ಅಸಲಿಯತ್ತನ್ನು ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿ ಬಯಲು ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯಲ್ಲಿ ನಡೆದಿದೆ.

    ಹತ್ತನೇ ತರಗತಿ ಓದುತಿದ್ದ ವಿದ್ಯಾರ್ಥಿನಿ ಶಾಲೆಯಲ್ಲಿ ನೀಡಿದ ಹೋಮ್ ವರ್ಕ ಸರಿಯಾಗಿ ಮಾಡುವುದಿಲ್ಲ ಎಂದು ಮುಖ್ಯ ಶಿಕ್ಷಕರು ಪಾಲಕರಿಗೆ ದೂರು ನೀಡಿದ್ದರು. ಹೀಗಾಗಿ ವಿದ್ಯಾರ್ಥಿನಿಯನ್ನ ಪಾಲಕರು ತರಾಟೆ ತೆಗೆದುಕೊಂಡಿದ್ದಾರೆ. ಇದರಿಂದ ತಪ್ಪಿಸಿಕೊಳ್ಳಲು ವಿದ್ಯಾರ್ಥಿನಿ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾಳೆ.

    ಕೋಪಗೊಂಡ ವಿದ್ಯಾರ್ಥಿನಿ ಮನೆಯ ಹಿಂಭಾಗದಲ್ಲಿರುವ ಕಾಡಿನಲ್ಲಿ ಅವಿತು ಕುಳಿತಿದ್ದಳು. ಈ ವೇಳೆ ಮಗಳು ಕಾಣದಿದ್ದಾಗ ಪೋಷಕರು ಅಪಹರಣವಾಗಿರಬೇಕು ಎಂದು ಯಲ್ಲಾಪುರ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಈಕೆಗಾಗಿ ಮನೆಯ ಸುತ್ತಮುತ್ತ ಕಾಡಿನಲ್ಲಿ ಹುಡುಕಾಟ ನಡೆಸಿದ್ದರು. ಈ ವೇಳೆ ವಿದ್ಯಾರ್ಥಿನಿ ತಾನೇ ಕೈ ಕಾಲುಗಳಿಗೆ ಹಗ್ಗ ಸುತ್ತಿಕೊಂಡು ಅತ್ಯಾಚಾರದ ಕಥೆ ಹಣೆದಿದ್ದಾಳೆ.

    ವಿದ್ಯಾರ್ಥಿನಿಯನ್ನು ಠಾಣೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅತ್ಯಾಚಾರವಾಗಿಲ್ಲ ಎಂದು ವರದಿ ಬಂದಿದೆ. ಈ ವೇಳೆ ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ನಡೆಸಿದಾಗ ಈಕೆಯ ನಿಜವಾದ ಬಣ್ಣ ಬಯಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನಿಂತಿದ್ದ ಟ್ರಕ್‍ಗೆ ಗುದ್ದಿದ ಕಾರು- 6 ಯುವಕರು ಸಾವು

    ನಿಂತಿದ್ದ ಟ್ರಕ್‍ಗೆ ಗುದ್ದಿದ ಕಾರು- 6 ಯುವಕರು ಸಾವು

    – ಪಾರ್ಟಿಯಿಂದ ಬರ್ತಿದ್ದ ವೇಳೆ ಅಪಘಾತ

    ಭೋಪಾಲ್: ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಂತಿದ್ದ  ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಯುವಕರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ತಲವಾಲಿ ಬಳಿ ನಡೆದಿದೆ.

    ಮೃತರನ್ನು ರಿಶಿ ಪವಾರ್(19), ಸೂರಜ್(25), ಚಂದ್ರಭಾನ ರಘುವಂಶಿ(23), ಸೋನು ಜತ್(23), ಸುಮಿತ್ ಸಿಂಗ್(30) ಮತ್ತು ದೇವ್(28) ಎಂದು ಗುರುತಿಸಲಾಗಿದೆ. ಮೃತರು ಇಂದೋರ್‍ ನಿವಾಸಿಗಳಾಗಿದ್ದಾರೆ. ಈ ಯುವಕರ ತಂಡ ಪಾರ್ಟಿ ಮುಗಿಸಿಕೊಂಡು ಮಾಂಗ್ಲಿಯಾದಿಂದ ತಮ್ಮ ನಗರಕ್ಕೆ ಬರುತ್ತಿರುವಾಗ ಈ ಅಪಘಾತ ಸಂಭವಿಸಿದೆ ಎಂದು ಲಸುದಿಯ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

    ವೇಗವಾಗಿ ಚಲಿಸುತ್ತಿದ್ದ ಕಾರು ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಂತಿದ್ದ ತೈಲ ಸಾಗಾಣೆ ಮಾಡುವ ಟ್ಯಾಂಕರ್‍ಗೆ ಗುದ್ದಿದೆ. ಕಾರ್ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಈ ವೇಳೆ ಕಾರಿನಲ್ಲಿದ್ದ ಕೆಲ ಯುವಕರ ದೇಹದ ಭಾಗಗಳು ಕಟ್ ಆಗಿವೆ.

    ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗಾಗಿ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಪೋಷಕರಿಗೆ ಮೃತದೇಹವನ್ನು ನೀಡುತ್ತೇವೆ. ಚಾಲಕ ನಿದ್ರೆ ಮಂಪರಿಗೆ ಜಾರಿರಬಹುದು ಅಥವಾ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ಕಾರು ನಿಯಂತ್ರಣಕ್ಕೆ ಸಿಗದೆ ಅಪಘಾತ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.