Tag: Pants

  • ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಪ್ರತಿಭಟನೆ – ಮೂವರು ಕಾರ್ಯಕರ್ತರ ಪ್ಯಾಂಟ್‍ಗೆ ತಗುಲಿದ ಬೆಂಕಿ

    ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಪ್ರತಿಭಟನೆ – ಮೂವರು ಕಾರ್ಯಕರ್ತರ ಪ್ಯಾಂಟ್‍ಗೆ ತಗುಲಿದ ಬೆಂಕಿ

    ಹಾವೇರಿ: ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ಮೂವರು ಮಂದಿಯ ಪ್ಯಾಂಟ್‍ಗೆ ಬೆಂಕಿ ಕಿಡಿ ತಗುಲಿದ ಘಟನೆ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ನಡೆದಿದೆ.

    ರಾಜಸ್ಥಾನದ ಉದಯಪುರದಲ್ಲಿ ಮಂಗಳವಾರ ಹಾಡಹಗಲೇ ನಡೆದ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಹಾವೇರಿಯಲ್ಲಿ ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಟೈರ್ ಸುಡಲು ಅವಕಾಶ ನೀಡದ್ದಕ್ಕೆ ಪೊಲೀಸರ ಜೊತೆ ಕಾರ್ಯಕರ್ತರ ವಾಗ್ವಾದ ನಡೆಸಿದರು. ಇಂದಿನಿಂದ ಪಂಜಾಬ್ ಪ್ರತಿಮನೆಗೂ 300 ಯೂನಿಟ್ ಉಚಿತ ವಿದ್ಯುತ್ ಪೂರೈಕೆ: ಭಗವಂತ್ ಮಾನ್

    ಕಾರ್ಯಕರ್ತರು ತಂದಿಟ್ಟ ಟೈರ್‌ಗಳನ್ನು ಪೊಲೀಸರು ವಾಪಸ್ಸ್ ಕಳಿಸಿದರು. ಪೊಲೀಸರ ವಿರೋಧದ ನಡುವೆಯೂ ಟೈರ್‌ಗೆ ಬೆಂಕಿ ಹಚ್ಚಿದ ನಂತರ ಮೂವರು ಕಾರ್ಯಕರ್ತರ ಪ್ಯಾಂಟಿಗೆ ಬೆಂಕಿಯ ಕಿಡಿ ಹತ್ತಿಕೊಂಡಿದೆ. ಪ್ಯಾಂಟ್‍ಗಳಿಗೆ ಬೆಂಕಿ ಹತ್ತಿದ್ದನ್ನು ಗಮನಿಸಿ ತಕ್ಷಣವೇ ಬೆಂಕಿಯನ್ನು ಕಾರ್ಯಕರ್ತರು ಆರಿಸಿದ್ದಾರೆ. ಪ್ರತಿಭಟನೆಯಲ್ಲಿ ಭಾರೀ ಅನಾಹುತ ತಪ್ಪಿದೆ. ಎರಡು ತಿಂಗಳ ಹಿಂದೆಯೇ ತಾಯಿಯಾಗಿದ್ದ ಆಲಿಯಾ ಭಟ್!

    Live Tv

  • ಶರ್ಟ್ ಪ್ಯಾಂಟ್ ಧರಿಸಿ ನಗರ ಸುತ್ತಾಡಿದ ಆನೆ

    ಶರ್ಟ್ ಪ್ಯಾಂಟ್ ಧರಿಸಿ ನಗರ ಸುತ್ತಾಡಿದ ಆನೆ

    ಆನೆಯೊಂದು ಶರ್ಟ್ ಪ್ಯಾಂಟ್ ಧರಿಸಿ ಮಾವುತನೊಂದಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಫೋಟೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ. ಈ ಫೋಟೋವನ್ನು ಮಹೇಂದ್ರ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವಿಟ್ಟರ್‍ನಲ್ಲಿ ಶೇರ್ ಮಾಡಿಕೊಂಡಿದ್ದು, ನಂಬಲಾಗದ ಭಾರತ. ಎಲಿ-ಪಂಟ್ ಎಂದು ಬರೆದುಕೊಂಡಿದ್ದಾರೆ.

    ಈ ಫೋಟೋದಲ್ಲಿ ಆನೆ ನೇರಳೆ ಬಣ್ಣದ ಶರ್ಟ್ ಧರಿಸಿ ಅದಕ್ಕೆ ಮ್ಯಾಚ್ ಆಗುವಂತಹ ಪ್ಯಾಂಟ್ ಧರಿಸಿಕೊಂಡು ಮಾವುತನೊಂದಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಮೂಲಕ ಜನರ ಗಮನ ಸೆಳೆದಿದೆ.

    ಮೈಕ್ರೋ ಬ್ಲಾಗಿಂಗ್‍ನಲ್ಲಿ ಫೋಟೋ ವೈರಲ್ ಆಗುತ್ತಿದ್ದಂತೆಯೇ ಸುಮಾರು 28,400 ಲೈಕ್ಸ್ ಹಾಗೂ 1,900 ಕಮೆಂಟ್‍ಗಳು ಹರಿದುಬಂದಿದೆ. ಕೆಲವರು ಆನೆ ಡ್ರಸ್‍ನಲ್ಲಿ ಬಹಳ ಮುದ್ದಾಗಿ ಕಾಣಿಸಿಕೊಂಡಿದೆ ಎಂದರೆ ಇನ್ನೂ ಕೆಲವರು ಆನೆ ವಿಚಿತ್ರವಾಗಿ ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ.

    10 ಮಂದಿ ಟೈಲರ್‍ ಗಳು ಆನೆ ಅಳತೆಯನ್ನು ತೆಗೆದುಕೊಂಡು ಪ್ಯಾಂಟ್ ಹೊಲಿದಿರಬೇಕು ಮತ್ತೊಬ್ಬರು ಹಾಸ್ಯಮಯವಾಗಿ ಕಮೆಂಟ್ ಮಾಡಿದ್ದಾರೆ.

  • ಬೈಕ್‍ನಲ್ಲಿ ತೆರಳುತ್ತಿದ್ದಾಗ ಪ್ಯಾಂಟ್‍ನಲ್ಲಿದ್ದ ಮೊಬೈಲ್ ಬ್ಲಾಸ್ಟ್

    ಬೈಕ್‍ನಲ್ಲಿ ತೆರಳುತ್ತಿದ್ದಾಗ ಪ್ಯಾಂಟ್‍ನಲ್ಲಿದ್ದ ಮೊಬೈಲ್ ಬ್ಲಾಸ್ಟ್

    ಶಿವಮೊಗ್ಗ: ಬೈಕ್ ಚಲಾಯಿಸುವಾಗ ಪ್ಯಾಂಟ್ ಜೇಬಿನಲ್ಲಿ ಮೊಬೈಲ್ ಬ್ಲಾಸ್ಟ್ ಆಗಿ, ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸೊರಬದಲ್ಲಿ ನಡೆದಿದೆ.

    ಸೊರಬ ತಾಲೂಕು ಕುಪ್ಪಗುಡ್ಡೆ ಗ್ರಾಮದ ಕೆರೆ ಬಳಿ ಘಟನೆ ನಡೆದಿದ್ದು, ತವನಂದಿ ಗ್ರಾಮದ ಶರತ್ (22) ಗಾಯಗೊಂಡ ಯುವಕ. ಶರತ್ ಮತ್ತವನ ಸ್ನೇಹಿತ ತವನಂದಿ ಗ್ರಾಮದಿಂದ ಕುಪ್ಪಗುಡ್ಡೆಗೆ ಹೋಗುವಾಗ ಕೆರೆಯ ಬಳಿ ಮೊಬೈಲ್ ಸ್ಫೋಟಗೊಂಡಿದೆ.

    ಇದರಿಂದ ಯುವಕರು ಗಾಬರಿಯಲ್ಲಿ ನಿಯಂತ್ರಣ ಕಳೆದುಕೊಂಡು ಕೆರೆಗೆ ಬಿದ್ದಿದ್ದಾರೆ. ತಕ್ಷಣ ಹಿಂಬದಿ ಬೈಕ್ ಸವಾರ ಶರತ್‍ನನ್ನು ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶರತ್‍ನ ಬಲ ತೂಡೆಗೆ ಗಾಯವಾಗಿದೆ. ಈ ಕುರಿತು ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪ್ರಚಾರದ ಸಮಯದಲ್ಲೂ ಡಿಕೆಶಿಯಿಂದ ಭರ್ಜರಿ ಶಾಪಿಂಗ್!

    ಪ್ರಚಾರದ ಸಮಯದಲ್ಲೂ ಡಿಕೆಶಿಯಿಂದ ಭರ್ಜರಿ ಶಾಪಿಂಗ್!

    ಬಳ್ಳಾರಿ: ಜಿಲ್ಲಾ ಉಸ್ತುವಾರಿ ಸಚಿವ ಡಿಕೆಶಿ ಶಿವಕುಮಾರ್ ಅವರು ಇಂದು ಬಳ್ಳಾರಿಯಲ್ಲಿ ಲೋಕಸಭೆ ಉಪಚುನಾವಣೆ ಹಿನ್ನೆಲೆ ಪ್ರಚಾರದ ವೇಳೆ ಗಾರ್ಮೆಂಟ್ಸ್‌ನಲ್ಲಿ ಪ್ಯಾಂಟ್ ಟ್ರಯಲ್ ನೋಡಿ ಶಾಪಿಂಗ್ ಮಾಡಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ಮೂರು ಜನ ಸೇರಿ ಜನರ ಬದುಕನ್ನೇ ನರಕ ಮಾಡಿದ್ದಾರೆ. ಗಾರ್ಮೆಂಟ್ಸ್ ನಲ್ಲಿ 40 ರೂ. 70 ರೂ.ಗಳಿಗೆಲ್ಲಾ ಕೆಲಸ ಮಾಡುತ್ತಿದ್ದಾರೆ. ಅದೇ ಜೀನ್ಸ್ ಪ್ಯಾಂಟ್ ಗಳನ್ನು ಬೆಂಗಳೂರಲ್ಲಿ 2-3 ಸಾವಿರಕ್ಕೆ ಮಾರುತ್ತಾರೆ. ಜನರ ಕಷ್ಟ ನೋಡಿದರೆ ನೋವಾಗುತ್ತದೆ. ನಾನು ಒಂದಷ್ಟು ಪ್ಯಾಂಟು ಶರ್ಟು ತಗೆದುಕೊಂಡು ಹೋಗುತ್ತೇನೆ ಬಟ್ಟೆ ಒಳ್ಳೆಯದಿದೆ ಎಂದು ಹೇಳಿದರು.

    ಮಿಲ್ಲರ್ ಪೇಟೆಯ ಗಣೇಶ್ ಗುಡಿಯ ಗಾರ್ಮೆಂಟ್ಸ್‌ನಲ್ಲಿ ಪ್ಯಾಂಟ್ ಟ್ರಯಲ್ ನೋಡಿ ಆನಂತರ 5 ಜೀನ್ಸ್ ಪ್ಯಾಂಟ್ ಖರೀದಿಸಿ ಒಂದು ಪ್ಯಾಂಟ್ ಗೆ 500 ರೂ. ಒಟ್ಟು 2,500 ರೂ ಮೊತ್ತದ ಪ್ಯಾಂಟ್ ಅನ್ನು ಖರೀದಿಸಿದರು.

    ಮನೆ ಮನೆ ಪ್ರಚಾರದ ಸಂದರ್ಭದಲ್ಲಿ ಡಿಕೆಶಿ ಅವರನ್ನು ಜನರು ಆರತಿ ಮಾಡಿ ಸ್ವಾಗತ ಮಾಡಿದ್ದರು. ಈ ವೆಳೆ ಆರತಿ ಮಾಡಿದ ಮಹಿಳೆಗೆ ಹಣವನ್ನು ನೀಡಿದರು. ಬಳಿಕ ಸೋಮಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಸೋಮಣ್ಣ ಅವರು ಹೇಳಿದಂತೆ ಶ್ರೀರಾಮುಲು ಮುಖ್ಯಮಂತ್ರಿಯಾಗಲಿ ಪ್ರಧಾನಿಯಾಗಲಿ. ಮೋದಿಯನ್ನು ಇಳಿಸಿ ಶ್ರೀರಾಮಲುವನ್ನು ಪ್ರಧಾನಿ ಮಾಡಲಿ. ಯಡಿಯೂರಪ್ಪ ಬದಲು ಶ್ರೀರಾಮುಲುವನ್ನು ಸಿಎಂ ಮಾಡಲಿ ಸಂತೋಷ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಡುರಸ್ತೆಯಲ್ಲಿಯೇ ಮಹಿಳೆಯ ಪ್ಯಾಂಟ್ ಎಳೆದು ಕಿರುಕುಳ!

    ನಡುರಸ್ತೆಯಲ್ಲಿಯೇ ಮಹಿಳೆಯ ಪ್ಯಾಂಟ್ ಎಳೆದು ಕಿರುಕುಳ!

    ಮುಂಬೈ: 33 ವರ್ಷದ ವ್ಯಕ್ತಿಯೊಬ್ಬ 40 ವರ್ಷದ ಮಹಿಳೆಯ ಪ್ಯಾಂಟ್ ಎಳೆದು ಕಿರುಕುಳ ನೀಡಿದ್ದು, ಇದೀಗ ಆತ ಪೊಲೀಸರ ಅತಿಥಿಯಾಗಿದ್ದಾನೆ.

    ಈ ಘಟನೆ ಕಂಡಿವಾಲಿಯ ನ್ಯೂ ಲಿಂಕ್ ರೋಡ್ ನಲ್ಲಿ ನಡೆದಿದೆ. ರಾಮ್‍ರಾಜ್ ಪವಾರ್ ಬಂಧಿತ ಆರೋಪಿ. ಮಹಿಳೆ ಬೋರಿವಲಿಯಲ್ಲಿರುವ ತಮ್ಮ ನಿವಾಸದಿಂದ ಬಿಟ್ಟು ಮಲಾಡ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಆರೋಪಿಯು ಕೂಡ ತನ್ನ ಸ್ಕೂಟರಿನಿಂದ ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋಗಿದ್ದಾನೆ. ಅಲ್ಲದೇ ಸ್ಕೂಟರ್ ನಿಲ್ಲಿಸಿ ಮಹಿಳೆಯ ಹಿಂದೆ ನಡೆದುಕೊಂಡು ಹಿಂಬಾಲಿಸಿ ಹೋಗಿದ್ದಾನೆ. ಬಳಿಕ ಸ್ವಲ್ಪ ದೂರ ಹೋಗುತ್ತಿದ್ದಂತೆ ಆಕೆಯ ಪ್ಯಾಂಟ್ ಎಳೆದು ಅಸಭ್ಯವಾಗಿ ಆಕೆಯನ್ನು ಮುಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

    ಮಹಿಳೆ ತಕ್ಷಣ ಆಘಾತಗೊಂಡು ಕಾಪಾಡಿ ಎಂದು ಕೂಗಿಕೊಂಡಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಜನರು ದೌಡಾಯಿಸಿದ್ದಾರೆ. ಜನರು ಬರುತ್ತಿದ್ದಂತೆ ಆರೋಪಿ ಓಡಿ ಹೋಗಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಆತನನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

    ಸದ್ಯಕ್ಕೆ ಪೊಲೀಸರು ಆರೊಪಿಯನ್ನು ಬಂಧಿಸಿ ಐಪಿಸಿ ಸೆಕ್ಷನ್ 354 ರ ಅಡಿಯಲ್ಲಿ ಆತನ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಪೊಲೀಸರು ಸಂತ್ರಸ್ತ ಮಹಿಳೆ ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

    ನ್ಯಾಯಾಲಯವು ಜಾಮೀನು ನೀಡುವವರೆಗೂ ಆತ ಜೈಲಿನಲ್ಲಿರುತ್ತಾನೆ. ಪೊಲೀಸರು ಬಂಧಿತ ಆರೋಪಿ ಮೇಲೆ ಯಾವುದಾದರೂ ಕ್ರಿಮಿನಲ್ ಕೇಸ್ ಇದೆಯಾ ಎಂದು ತನಿಖೆ ಮಾಡುತ್ತಿದ್ದಾರೆ ಎಂದು ಹಿರಿಯ ಇನ್ಸ್ ಪೆಕ್ಟರ್ ಪ್ರಮೋದ್ ಧವಾರೆ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews