Tag: Paramedical

  • ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

    ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

    ಕಲಬುರಗಿ: ಹೃದಯಾಘಾತದಿಂದ (Heart Attack) 17 ವರ್ಷದ ವಿದ್ಯಾರ್ಥಿಯೊಬ್ಬ  ಮೃತಪಟ್ಟ  ಘಟನೆ ಚಿತ್ತಾಪುರ (Chittapur) ತಾಲೂಕಿನ ನಾಲವಾರ ಗ್ರಾಮದಲ್ಲಿ ನಡೆದಿದೆ.

    ಕೋರೇಶ್ ಸಿದ್ದಣ್ಣ ಮದ್ರಿ ಮೃತಪಟ್ಟ ಯುವಕ. ಕಲಬುರಗಿ (Kalaburagi) ನಗರದಲ್ಲಿ ಪ್ಯಾರಾ ಮೆಡಿಕಲ್ (Paramedical) ವ್ಯಾಸಂಗ ಮಾಡುತ್ತಿದ್ದ ಕೋರೇಶ್ ಗ್ರಾಮದಲ್ಲಿ ಸ್ನೇಹಿತರ ಜೊತೆ ಕುಳಿತಾಗ ಎದೆ ನೋವು ಕಾಣಿಸಿಕೊಂಡಿದೆ.

    ತಕ್ಷಣ ಗೆಳೆಯನೊಬ್ಬ ಕೋರೇಶ್‌ನನ್ನು ಆಸ್ಪತ್ರೆಗೆ (Hospital) ಕರೆದೊಯ್ಯಲು ಯತ್ನಿಸಿದ್ದಾನೆ. ಈ ಮಧ್ಯೆ ಬೈಕ್ (Bike) ಮೇಲೆ ತೆರಳುತ್ತಿದ್ದಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾನೆ.

    ಏಕೈಕ ಮಗನನ್ನು ಹೊಂದಿದ್ದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಹರೆಯಕ್ಕೆ ಕಾಲಿಡುತ್ತಿದ್ದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ದುರ್ಘಟನೆ ಇಡೀ ಗ್ರಾಮದ ಜನರಲ್ಲಿ ಬೇಸರ ಮೂಡಿಸಿದೆ. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಕೇಸ್ – ಅಪರಿಚಿತ ಕಂಟೇನರ್ ಟ್ರಕ್ ವಿರುದ್ಧ ದೂರು

  • ಉಡುಪಿ ಕಾಲೇಜಿನ ವೀಡಿಯೋ ಪ್ರಕರಣ- ಗುಜರಾತ್ FSLಗೆ ರವಾನೆ ಸಾಧ್ಯತೆ

    ಉಡುಪಿ ಕಾಲೇಜಿನ ವೀಡಿಯೋ ಪ್ರಕರಣ- ಗುಜರಾತ್ FSLಗೆ ರವಾನೆ ಸಾಧ್ಯತೆ

    ಉಡುಪಿ: ಪ್ಯಾರಾಮೆಡಿಕಲ್ ಕಾಲೇಜಿನ (Paramedical College) ಟಾಯ್ಲೆಟ್ ವೀಡಿಯೋ ಪ್ರಕರಣ ಮಹತ್ವದ ಘಟ್ಟದಲ್ಲಿದೆ. ಉಡುಪಿಯಲ್ಲಿ ಮೊದಲ ಹಂತದ ಸಿಐಡಿ ತನಿಖೆ ಪೂರೈಸಿದ್ದಾರೆ. ಈ ನಡುವೆ ಬೆಂಗಳೂರು ಎಫ್‍ಎಸ್‍ಎಲ್‍ನಲ್ಲಿ ವೀಡಿಯೋ ರಿಟ್ರೀವ್ ಆಗದಿದ್ದರೆ, ಆರೋಪಿತ ವಿದ್ಯಾರ್ಥಿನಿಯರ ಮೊಬೈಲ್ ಗಳನ್ನು ಗುಜರಾತ್ ಎಫ್‍ಎಸ್‍ಎಲ್‍ಗೆ (FSL) ಕಳುಹಿಸಲು ತಯಾರಿ ನಡೆಸಲಾಗಿದೆ.

    ಉಡುಪಿಯ (Udupi) ಪ್ಯಾರಾಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣದ ಮೊದಲ ಹಂತದ ಸಿಐಡಿ ತನಿಖೆ ಪೂರ್ಣಗೊಂಡಿದೆ. ಸಿಐಡಿ ಅಧಿಕಾರಿಗಳು ಎಫ್ ಎಸ್ ಎಲ್ ವರದಿಗೆ ಕಾಯುತ್ತಿದ್ದಾರೆ. ಆರೋಪಿತ ವಿದ್ಯಾರ್ಥಿನಿಯರಿಂದ ಪಡೆದ ಮೊಬೈಲ್ ಗಳಿಂದ ವೀಡಿಯೋಗಳನ್ನು ರಿಟ್ರೀವ್ ಮಾಡಲು ಬೆಂಗಳೂರು ಎಫ್‍ಎಸ್‍ಎಲ್ ಗೆ ಕಳುಹಿಸಲಾಗಿದೆ. ಯಾವುದೇ ವಿಡಿಯೋಗಳು ಲಭ್ಯವಾಗದಿದ್ದರೆ ಮೊಬೈಲ್ ಗಳನ್ನು ಗುಜರಾತ್ ಗೆ (Gujrath) ಕಳುಹಿಸಬೇಕಾಗುತ್ತದೆ. ಮೂರು ವಾರಗಳ ಹಿಂದೆ ಉಡುಪಿ ಪೊಲೀಸರು ಎಫ್ ಎಸ್ ಎಲ್ ಗೆ ಮೊಬೈಲ್ ಕಳುಹಿಸಿದ್ದರು. ಬೆಂಗಳೂರಿನಲ್ಲಿ ಇರುವ ತಾಂತ್ರಿಕತೆಯನ್ನು ಬಳಸಿಕೊಂಡು ರಿಟ್ರೀವ್ ಮಾಡಲು ಪ್ರಯತ್ನ ನಡೆಸಲಾಗಿದೆ. ಇದು ಸಾಧ್ಯವಾಗದಿದ್ದರೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ವೀಡಿಯೋ ರಿಟ್ರೀವ್ ಮಾಡಲು ಸಿಐಡಿ ಪೊಲೀಸರು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ಮೊಬೈಲ್ ಗಳನ್ನು ಗುಜರಾತ್ ಫೋರೆನ್ಸಿಕ್ ಲ್ಯಾಬೋರೇಟರಿಗೆ ರವಾನಿಸುವ ಸಾಧ್ಯತೆ ಇದೆ.

    ವಿದ್ಯಾರ್ಥಿನೀಯರ ಡಿಲೀಟ್ ಮಾಡಿರುವ ವೀಡಿಯೋ ಯಾವುದು? ಅದರಲ್ಲಿ ಏನಿದೆ ಅನ್ನೋದೇ ಸಿಐಡಿಗೆ ಪ್ರಾಮುಖ್ಯವಾಗಿದೆ. ಐ ಫೋನ್ ಮೊಬೈಲ್ ಗಳಲ್ಲಿ ಡಿಲೀಟ್ ಆದ ವಿಡಿಯೋಗಳನ್ನು ರಿಟ್ರೀವ್ ಮಾಡುವುದು ಸುಲಭ ಇಲ್ಲ. ಮೊದಲ ಹಂತದ ಸಿಐಡಿ ತನಿಖೆ ಪೂರ್ಣಗೊಂಡಿದೆ. ಒಂದು ವಾರಗಳ ಕಾಲ ಎಡಿಜಿಪಿ, ಹಾಗೂ ಎಸ್ ಪಿ ನೇತೃತ್ವದಲ್ಲಿ ತನಿಖಾಧಿಕಾರಿಯಾಗಿರುವ ಡಿವೈಎಸ್‍ಪಿ ಅಂಜು ಮಾಲ ತನಿಖೆ ಪೂರೈಸಿದ್ದಾರೆ. ಸಂತ್ರಸ್ತೆಯಿಂದ ಹೇಳಿಕೆ ಪಡೆದಿದ್ದಾರೆ. ಆರೋಪಿತ ವಿದ್ಯಾರ್ಥಿನಿಯರನ್ನು ಸಖಿ ಕೇಂದ್ರಕ್ಕೆ ಕರೆಸಿಕೊಂಡು ವಿಚಾರಣೆ ನಡೆಸಿದ್ದಾರೆ. ನ್ಯಾಯಾಲಯದಿಂದ ಸಂತ್ರಸ್ತೆ ಹಾಗೂ ಆರೋಪಿತ ವಿದ್ಯಾರ್ಥಿನಿ ನೀಡಿರುವ ಹೇಳಿಕೆಗಳ ಪ್ರತಿಯನ್ನು ಪಡೆಯಲಾಗಿದೆ. ಸರ್ಚ್ ವಾರೆಂಟ್ ಪಡೆದು ಆರೋಪಿತರ ಮನೆಯ ಮಹಜರು ಪೂರೈಸಿದ್ದರೂ ಎಫ್ ಎಸ್ ಎಲ್ ವರದಿ ಮುಖ್ಯವಾಗಿದೆ. ಇದನ್ನೂ ಓದಿ: ಟ್ಯೂಶನ್ ಮುಗಿಸಿ ಹೋಗ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ – ಗಾಯಗೊಂಡಿದ್ದ ಮತ್ತೊಂದು ಬಾಲಕ ಸಾವು

    ತನಿಖೆ ಪೂರ್ಣವಾಗಲು ಎಫ್ ಎಸ್ ಎಲ್ ವರದಿಯೇ ಪ್ರಾಮುಖ್ಯವಾಗಿದೆ. ಉನ್ನತ ಮಟ್ಟದ ಪರಿಶೀಲನೆಗೆ ಗುಜರಾತ್ ಗೆ ಮೊಬೈಲ್ ಗಳನ್ನು ಕಳುಹಿಸುವ ಬಗ್ಗೆ ಸಿಐಡಿ ನಿರ್ಧರಿಸುವ ಸಾಧ್ಯತೆ ಇದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯಾದ್ಯಂತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪುನರಾರಂಭಕ್ಕೆ ಗ್ರೀನ್ ಸಿಗ್ನಲ್

    ರಾಜ್ಯಾದ್ಯಂತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪುನರಾರಂಭಕ್ಕೆ ಗ್ರೀನ್ ಸಿಗ್ನಲ್

    – ಮುಖ್ಯಮಂತ್ರಿಗಳಿಂದ 5 ಲಕ್ಷ ಲಸಿಕೆಗೆ ಬೇಡಿಕೆ

    ಬೆಂಗಳೂರು: ರಾಜ್ಯಾದ್ಯಂತ ವೈದ್ಯಕೀಯ, ಆಯುಷ್, ದಂತ ವೈದ್ಯಕೀಯ ಹಾಗೂ ಪ್ಯಾರಾ ಮೆಡಿಕಲ್ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ರಾಜ್ಯಾದ್ಯಂತ ವೈದ್ಯಕೀಯ, ಆಯುಷ್, ದಂತ ವೈದ್ಯಕೀಯ ಹಾಗೂ ಪ್ಯಾರಾ ಮೆಡಿಕಲ್ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದ್ದು, ಕೊರೊನಾ ಲಸಿಕೆ ಪಡೆದಿರುವ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಮಾತ್ರ ಕಾಲೇಜು ಹಾಜರಾತಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

    ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳಲ್ಲಿ ತರಬೇತಿ:
    ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಇತರೆ ಸಿಬ್ಬಂದಿಗೆ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ನಿರ್ವಹಣೆ ಸಂಬಂಧ ವೈದ್ಯರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 18 ವರ್ಷ ಮೇಲಿನವರೆಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇದಕ್ಕಿಂತ ಕೆಳ ವಯಸ್ಸಿನ ಮಕ್ಕಳಿಗೆ ಸೋಂಕು ತಗುಲಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ಮಧ್ಯಮ, ಹಿರಿಯ ವಯಸ್ಸಿನವರಿಗೆ ನೀಡುವ ಚಿಕಿತ್ಸೆಯನ್ನು ಮಕ್ಕಳಿಗೆ ನೀಡಲು ಸಾಧ್ಯವಿಲ್ಲ. ಈ ವಯೋಮಾನದವರಿಗೆ ಸೋಂಕು ಬಂದರೆ ಮಕ್ಕಳ ತಜ್ಞರ ಬಳಿಯೇ ಹೋಗಬೇಕೆಂದು ಸೂಚಿಸಲಾಗಿದೆ. ಇದಕ್ಕೆ ಪೂರಕವಾಗಿ ವೈದ್ಯರಿಗೆ ತರಬೇತಿ ನೀಡಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವೈದ್ಯರಿಗೆ ತರಬೇತಿ ನೀಡಲಾಗುವುದು ಎಂದರು.

    ತರಬೇತಿಯನ್ನು ವಿಷಯ ತಜ್ಞರು ನೀಡುತ್ತಿದ್ದು, ಇದನ್ನು ದಾಖಲೆಯಾಗಿಸಿದರೆ ಅನುಕೂಲವಾಗುತ್ತದೆ. ಆದ್ದರಿಂದ ಇಲ್ಲಿ ನೀಡುವ ತರಬೇತಿಯನ್ನು ವೀಡಿಯೋ ರೆಕಾರ್ಡ್ ಮಾಡಿಸಿ ದಾಖಲಿಸಬೇಕು. ಇತರೆ ವೈದ್ಯರಿಗೂ ಈ ವಿಷಯ ತಿಳಿಸಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಉಮಾಪತಿಗೆ ಬ್ಲ್ಯಾಕ್‍ಮೇಲ್, ದರ್ಶನ್ ಹೊಡೆದಿದ್ದು ನಿಜ: ಸಂದೇಶ್ ಆಡಿಯೋ ಬಾಂಬ್

    ಡಾ.ದೇವಿಶೆಟ್ಟಿ ಸಮಿತಿ ಮೂರನೇ ಅಲೆ ಸಿದ್ಧತೆಗೆ ವರದಿ ನೀಡಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ವೈರಾಣು ರೂಪಾಂತರಗೊಳ್ಳುತ್ತಿದ್ದು, ಮುಂದುವರಿದ ದೇಶಗಳು ಕೂಡ ಎಡವಿದೆ. ಮೊದಲ ಅಲೆಯಲ್ಲಿ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಪರಿಣಾಮಕಾರಿಯಾಗಿ ನಿಯಂತ್ರಣ ಮಾಡಿದ್ದೇವೆ. ಎರಡನೇ ಅಲೆಗೆ ಮುನ್ನ ಮೂಲಸೌಕರ್ಯ ಹೆಚ್ಚಿಸಲಾಗಿದೆ. 4 ಸಾವಿರ ವೈದ್ಯರನ್ನು ನೇಮಿಸಲಾಗಿದೆ ಎಂದು ವಿವರಿಸಿದರು.

    ಕೇರಳ, ಮಹಾರಾಷ್ಟ್ರ ಗಡಿ ಹಂಚಿಕೊಳ್ಳುವುದರಿಂದ ಕೋವಿಡ್ ಬಗ್ಗೆ ಎಚ್ಚರವಾಗಿರಬೇಕು. ಸೋಂಕು ಇನ್ನೂ ಇರುವುದರಿಂದ ಸುರಕ್ಷತಾ ಕ್ರಮ ವಹಿಸಬೇಕು. ಬೆಂಗಳೂರು ನಗರ ಜಿಲ್ಲೆ ಕೋವಿಡ್ ಲಸಿಕಾಕರಣದಲ್ಲಿ ಮುಂಚೂಣಿಯಲ್ಲಿದೆ. ಇದಕ್ಕಾಗಿ ಎಲ್ಲ ಸಿಬ್ಬಂದಿಗೆ ಧನ್ಯವಾದ ಎಂದರು.

    ಮಕ್ಕಳಿಗೆ ಚಿಕಿತ್ಸೆ:
    ಪ್ರತಿ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಆರೈಕೆಗಾಗಿ ವಿಶೇಷ ವಿಭಾಗ ಆರಂಭಿಸಲಾಗುತ್ತಿದೆ. ಅದಕ್ಕೆ ಬೇಕಾದ ಮಾನವ ಸಂಪನ್ಮೂಲವನ್ನು ಒದಗಿಸಲಾಗಿದೆ. ಹಲವು ದೇಶಗಳಲ್ಲಿ ಮೂರನೇ ಅಲೆ ಬಂದಿದೆ. ಮೈಮರೆತರೆ ಮೂರನೇ ಅಲೆ ನಾವೇ ಉಂಟುಮಾಡಿದಂತಾಗುತ್ತದೆ. ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿದರೆ ಸೋಂಕು ಹರಡುವುದನ್ನು ತಪ್ಪಿಸಬಹುದು. ಕನಿಷ್ಠ ಶೇ.70 ಜನಸಂಖ್ಯೆಗೆ ಲಸಿಕೆ ನೀಡುವವರೆಗೂ ಎಚ್ಚರ ಅಗತ್ಯ ಎಂದರು.

    ಪ್ರಧಾನಿಗಳು, ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದು, ನಮ್ಮ ಮುಖ್ಯಮಂತ್ರಿಗಳು ದಿನಕ್ಕೆ 5 ಲಕ್ಷ ಲಸಿಕೆಗೆ ಬೇಡಿಕೆ ಇಟ್ಟಿದ್ದಾರೆ. ಒಂದು ತಿಂಗಳಲ್ಲಿ ಒಂದೂವರೆ ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಇದೆ. ಈಗಾಗಲೇ 2.40 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಿದ್ದೇವೆ ಎಂದು ಸಿಎಂ ಮನವಿ ಮಾಡಿದ್ದಾರೆ. ಈ ತಿಂಗಳಲ್ಲೇ ಹೆಚ್ಚು ಲಸಿಕೆ ಸಿಗುವ ನಿರೀಕ್ಷೆ ಇದೆ ಎಂದರು.

    ಹೆಚ್ಚು ಎಚ್ಚರಿಕೆಯಿಂದಿರಬೇಕೆಂದು ಪ್ರಧಾನಿ ಕಿವಿಮಾತು ಹೇಳಿದ್ದಾರೆ. ಲಸಿಕೆ ಹೆಚ್ಚು ನೀಡಲು ಹಾಗೂ ಕಂಟೇನ್ ಮೆಂಟ್ ನಿಯಮ ಪಾಲಿಸಲು ಸೂಚಿಸಿದ್ದಾರೆ. ಈಗಾಗಲೇ ಮೂಲಸೌಕರ್ಯ ಹೆಚ್ಚಳಕ್ಕೆ 23 ಸಾವಿರ ಕೋಟಿ ರೂ. ಅನ್ನು ಕೇಂದ್ರ ನೀಡಿದೆ. ಇದನ್ನು ಗ್ರಾಮೀಣ ಆರೋಗ್ಯ ಮೂಲಸೌಕರ್ಯ ಹೆಚ್ಚಿಸಲು ಬಳಸಲು ಸಲಹೆ ನೀಡಲಾಗಿದೆ ಎಂದರು.