Tag: parappana agrahar

  • ಶಶಿಕಲಾ ರಾಜಾತಿಥ್ಯಕ್ಕೆ ಆದೇಶ ಕೊಟ್ಟಿದ್ದೇ ಸಿಎಂ- ಸತ್ಯನಾರಾಯಣ ರಾವ್ ಆರೋಪ

    ಶಶಿಕಲಾ ರಾಜಾತಿಥ್ಯಕ್ಕೆ ಆದೇಶ ಕೊಟ್ಟಿದ್ದೇ ಸಿಎಂ- ಸತ್ಯನಾರಾಯಣ ರಾವ್ ಆರೋಪ

    ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯಲ್ಲಿ ಜೈಲು ಸೇರಿರೋ ಶಶಿಕಲಾ ನಟರಾಜನ್‍ಗೆ ರಾಜ ಮರ್ಯಾದೆ ಕೊಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿರುವುದಾಗಿ ನಿವೃತ್ತ ಕಾರಾಗೃಹ ಡಿಜಿಪಿ ಸತ್ಯನಾರಾಯಣರಾವ್ ಆರೋಪ ಮಾಡಿದ್ದಾರೆ.  ಇದನ್ನೂ ಓದಿ: ಶಶಿಕಲಾಗೆ ವಿಶೇಷ ಸವಲತ್ತು ಕೊಡಿ ಅಂತ ಹೇಳಿಲ್ಲ – ಸತ್ಯನಾರಾಯಣರಾವ್ ಆರೋಪಕ್ಕೆ ಸಿಎಂ ಸ್ಪಷ್ಟನೆ


    ಜೈಲಲ್ಲಿ ಹಾಸಿಗೆ, ದಿಂಬು ಕೊಡುವಂತೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಖುದ್ದು ಕರೆದು ಸೂಚಿಸಿದ್ದರು. ಆದ್ರೆ ಇಂತಹ ಐಷಾರಾಮಿ ಸೌಲಭ್ಯ ನೀಡಲು ನನಗೆ ಅಧಿಕಾರವಿಲ್ಲವೆಂದರೂ ಸಿದ್ದರಾಮಯ್ಯ ಅವರು ಬಿಡಲಿಲ್ಲ. ಹೀಗಾಗಿ ಮುಖ್ಯಮಂತ್ರಿಗಳ ಆದೇಶದಂತೆ ನಾನು ಐಷಾರಾಮಿ ಸೌಲಭ್ಯ ನೀಡಿದ್ದೇನೆ. ಇದರಲ್ಲಿ ನನ್ನ ತಪ್ಪೇನಿಲ್ಲ ಅಂತ ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಸಮಿತಿ ಎದುರು ಸತ್ಯನಾರಾಯಣ ರಾವ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧದ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ ಸತ್ಯನಾರಾಯಣ ರಾವ್ ಮಂಗಳವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಶಶಿಕಲಾಗೆ ಕಿಚನ್ ಅಲ್ಲದೇ ಜೈಲಿನಲ್ಲಿದೆ ವಿಶೇಷ ವಿಸಿಟಿಂಗ್ ರೂಂ!

    ಜೈಲಿನಲ್ಲಿ ಶಶಿಕಲಾಗೆ ರಾಜಮರ್ಯಾದೆ ಕೊಡುತ್ತಿರೋ ವಿಚಾರಕ್ಕೆ ಸಂಬಂಧಿಸಿದಂತೆ ಆಗಿನ ಡಿಐಜಿಯಾಗಿದ್ದ ರೂಪಾ ಅವರು ವರದಿ ಕೊಟ್ಟಿದ್ದರು. ಆ ಬಳಿಕ ರಾಜಮರ್ಯಾದೆ ಕೊಡುತ್ತಿರೋ ವಿಚಾರ ಸಾಕಷ್ಟು ಸುದ್ದಿಯಾಗಿತ್ತು. ಆ ವರದಿಯ ತನಿಖೆಗೆ ಸರ್ಕಾರ ಕೂಡ ಆದೇಶ ಮಾಡಿತ್ತು. ಅದರಲ್ಲಿ ಸತ್ಯನಾರಾಯಣ ರಾವ್ ವಿರುದ್ಧ ಆರೋಪ ಮಾಡಲಾಗಿತ್ತು. ಆದ್ರೆ ಈ ಕುರಿತು ಸತ್ಯನಾರಾಯಣ ರಾವ್ ಅವರು ಪ್ರತಿಕ್ರಿಯಿಸಿ, ಶಸಿಕಲಾಗೆ ರಾಜಮರ್ಯಾದೆ ಕೊಟ್ಟಿರುವುದು ನನ್ನ ವೈಯಕ್ತಿಕ ಹಿತಾಸಕ್ತಿಯಿಂದಲ್ಲ. ಇದರಲ್ಲಿ ನಾನು ಯಾವುದೇ ರೀತಿಯ ಲಂಚ ಪಡೆದುಕೊಂಡಿಲ್ಲ. ಸರ್ಕಾರದ ಆದೇಶವನ್ನು ನಾನು ಪಾಲಿಸಿದ್ದೇನೆ ಅಂತ ಅರ್ಜಿಯಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಹಣ ಕೊಟ್ರೆ ಜೈಲಲ್ಲೇ ಅರಮನೆ ಸೌಕರ್ಯ: ಆರೋಪ ಸುಳ್ಳು ಎಂದ ಡಿಜಿ, ತನಿಖೆ ಮಾಡ್ಲಿ ಎಂದ ರೂಪಾ

    ಇದನ್ನೂ ಓದಿ: ಎಲ್‍ಇಡಿ ಟಿವಿ,ಕುಷನ್ ಬೆಡ್, ಮಿನರಲ್ ವಾಟರ್- ಪರಪ್ಪನ ಅಗ್ರಹಾರದಲ್ಲಿ ವಂಚಕ ತೆಲಗಿಗೆ ರಾಜಮರ್ಯಾದೆ

  • ಡಿಜಿ, ಐಜಿ ಜಟಾಪಟಿಗೆ ಕೈದಿಗಳು ಬಲಿ: ರಾತ್ರೋ ರಾತ್ರಿ 18 ಕೈದಿಗಳು ಬಳ್ಳಾರಿಗೆ ಶಿಫ್ಟ್

    ಡಿಜಿ, ಐಜಿ ಜಟಾಪಟಿಗೆ ಕೈದಿಗಳು ಬಲಿ: ರಾತ್ರೋ ರಾತ್ರಿ 18 ಕೈದಿಗಳು ಬಳ್ಳಾರಿಗೆ ಶಿಫ್ಟ್

    ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾಥಿತ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಶನಿವಾರ ಪರಪ್ಪನ ಅಗ್ರಹಾರ ಜೈಲಿನ ಸಜಾಬಂಧಿಗಳಿಗೆ ಜೈಲಾಧಿಕಾರಿಗಳು ಬೆದರಿಕೆ ಹಾಕಿದ ಪ್ರಕರಣದ ಬೆನ್ನಲ್ಲೇ ರಾತ್ರೋರಾತ್ರಿ 18 ಕೈದಿಗಳನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ದಾರೆ.

    ಜೈಲ್ ಸೂಪರಿಡೆಂಟ್ ಕೃಷ್ಣಕುಮಾರ್ ವಿರುದ್ಧ ಮಾತನಾಡಿದ ಬೆನ್ನಲ್ಲೇ ಕೈದಿಗಳನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ದಾರೆ. ನಿನ್ನೆ ಡಿಐಜಿ ರೂಪಾ ಭೇಟಿ ನೀಡಿದಾಗ ಜೈಲಿನ ಒಳಗೆ ಗಲಾಟೆ ನಡೆದಿತ್ತು. ಡಿಐಜಿ ರೂಪಾಗೆ ಸ್ಥಳಾಂತರಗೊಂಡ ಕೈದಿಗಳೆಲ್ಲಾ ದೂರು ನೀಡಿದ್ರು. ಹೀಗಾಗಿ ರೂಪ ಪರವಾಗಿ ನಿಂತ 18 ಕೈದಿಗಳನ್ನ ಸ್ಥಳಾಂತರ ಮಾಡಿದ್ದಾರೆ ಅಂತ ಗೊತ್ತಾಗಿದೆ.

    ಸಿಎಂ ಎಚ್ಚರಿಕೆ: ಅಶಿಸ್ತು ಪ್ರದರ್ಶಿಸುವ ಯಾವುದೇ ಅಧಿಕಾರಿಯನ್ನ ಸಹಿಸುವುದಿಲ್ಲ. ಡಿಐಜಿ ರೂಪಾ ಕೊಟ್ಟ ವರದಿಯಲ್ಲಿ ಯಾರಾದ್ರೂ ತಪ್ಪಿತಸ್ಥರು ಎಂದು ಇದ್ರೆ ಅವರ ಮೇಲೂ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇನೆ ಅಂತ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೆ, ನಿಯಮ ಮೀರುವಂತಹ ಅಧಿಕಾರಿಗಳು, ಅಶಿಸ್ತಿನ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುವುದಾಗಿ ಸಿಎಂ ಎಚ್ಚರಿಸಿದ್ದಾರೆ.

  • ಇಂದು ಶಶಿಕಲಾ ಶರಣಾಗದಿದ್ದರೆ ಸೆಷನ್ ಕೋರ್ಟ್ ಕೊಡುತ್ತೆ ಅರೆಸ್ಟ್ ವಾರೆಂಟ್!

    ಇಂದು ಶಶಿಕಲಾ ಶರಣಾಗದಿದ್ದರೆ ಸೆಷನ್ ಕೋರ್ಟ್ ಕೊಡುತ್ತೆ ಅರೆಸ್ಟ್ ವಾರೆಂಟ್!

    ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ದೋಷಿಯೆಂದು ಶಿಕ್ಷೆಗೆ ಗುರಿಯಾಗಿರುವ ದಿವಂಗತ ಜಯಲಲಿತಾ ಪರಮಾಪ್ತೆ, ಎಐಎಡಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಹಾಗೂ ಸಂಬಂಧಿಗಳಾದ ಸುಧಾಕರನ್ ಮತ್ತು ಇಳವರಸಿ ಇಂದು ಕೋರ್ಟ್ ಮುಂದೆ ಶರಣಾಗಲೇ ಬೇಕಾದ ಸ್ಥಿತಿ ನಿರ್ಮಾಣವಾಗಿದೆ.

    ಮಂಗಳವಾರ ಮೇಲ್ಮನವಿ ಅರ್ಜಿ ವಿಚಾರಣೆಯ ತೀರ್ಪು ನೀಡಿದ ಸುಪ್ರೀಂಕೋರ್ಟ್, ಇಂದೇ ಶರಣಾಗಬೇಕು ಅಂತಾ ತೀರ್ಪಿನಲ್ಲಿ ಸೂಚಿಸಿತ್ತು. ಆದ್ರೂ ಮೂವರಲ್ಲಿ ಯಾರೊಬ್ಬರೂ ಶರಣಾಗಲಿಲ್ಲ. ಇಂದು ಸುಪ್ರೀಂಕೋರ್ಟ್‍ನಲ್ಲಿ ಮೇಲ್ವಿಚಾರಣ ಅರ್ಜಿ ಹಾಗೂ ಶರಣಾಗತಿಗೆ 4 ವಾರಗಳ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಲಾಗುತ್ತೆ ಅಂತಾ ಶಶಿಕಲಾ ಗುಂಪಿನಿಂದ ಮಾಹಿತಿಯಿದ್ದು, ಅಂತಿಮವಾಗಿ ಉಳಿದಿರುವ ಏಕೈಕ ಮಾರ್ಗ ಅಂದ್ರೆ ಶರಣಾಗತಿ. 4 ವರ್ಷ ಜೈಲು ಶಿಕ್ಷೆ ಅನುಭವಿಸೋದು ಅಂತಾ ಹೇಳಲಾಗ್ತಿದೆ.

    ಬೆಂಗಳೂರಿನ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ಶಿಕ್ಷೆಯನ್ನು ಜಾರಿ ಮಾಡಿರುವ ಕಾರಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ 4 ವರ್ಷದಲ್ಲಿ ಉಳಿದಿರುವ ಶಿಕ್ಷೆಯನ್ನು ಅನುಭವಿಸಬೇಕಿದೆ. ಒಂದು ವೇಳೆ ಶಶಿಕಲಾ ಹಾಗೂ ಇಬ್ಬರು ಸಂಬಂಧಿಗಳು ಕೋರ್ಟ್‍ಗೆ ಶರಣಾಗಲು ವಿಳಂಬ ಮಾಡಿದ್ರೆ, ಹೈಕೋರ್ಟ್ ರಿಜಿಸ್ಟಾರ್ ಅವರಿಂದ ಸುಪ್ರೀಂಕೋರ್ಟ್‍ನ ಆದೇಶದ ಪ್ರತಿ ಪಡೆದು, ಸೆಷನ್ಸ್ ಕೋರ್ಟ್, ಈ ಮೂವರ ಮೇಲೂ ಅರೆಸ್ಟ್ ವಾರೆಂಟ್ ಬಳಸಿ ಬಂಧಿಸಿ ಕರೆತರುವಂತೆ ಸೂಚನೆ ನೀಡುವ ಸಾಧ್ಯತೆಗಳು ಕೂಡ ಹೆಚ್ಚಾಗಿವೆ.

    ಹಿರಿಯ ಅಧಿಕಾರಿಗಳ ಸಭೆ: ಇನ್ನು ಶಶಿಕಲಾ ನಟರಾಜನ್ ಜೈಲುಶಿಕ್ಷೆ ಅನುಭವಿಸಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಬರುತ್ತಿರುವ ಕಾರಣ ತಡರಾತ್ರಿ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ರು. ಎಸಿಪಿ ಸೂರ್ಯ ನಾರಾಯಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಯಾವ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂಬ ಕುರಿತು ಚರ್ಚಿಸಿದ್ರು. ಇನ್ನು ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ ಭದ್ರತೆಗಾಗಿ ಭಾರೀ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಕಳೆದ ಬಾರಿ ಜೈಲಿನೊಳಗಡೆ ಜಯಲಲಿತಾ ಪಕ್ಕದಲ್ಲೇ ಶಶಿಕಲಾ ಕೂಡ ಇದ್ದರು. ಈಗಲೂ ಅದೇ ಸೆಲ್ ನೀಡಲು ತೀರ್ಮಾನಿಸಿದ್ದು, ಈ ಹಿನ್ನೆಲೆಯಲ್ಲಿ ಅದನ್ನು ಸ್ವಚ್ಚಗೊಳಿಸಲಾಗಿದೆ. ಶಶಿಕಲಾ ಅಗತ್ಯಗಳಿಗೆ ತಕ್ಕಂತೆ ಸೆಲ್ ಸಿದ್ದಗೊಳಿಸಲಾಗಿದ್ದು, ಇದ್ರಲ್ಲಿ ವಿಶೇಷವಾಗಿ ಫಾರಿನ್ ಕಮೋಡ್ ಟಾಯ್ಲೆಟ್, 24 ಗಂಟೆ ಶುದ್ಧ ಕುಡಿಯುವ ನೀರು ವ್ಯವಸ್ಥೆ, ಸ್ನಾನಕ್ಕೆ ಬಿಸಿ ನೀರು ಇರುವಂತೆ ವ್ಯವಸ್ಥೆ ಮಾಡಲಾಗಿದೆ.