Tag: Parashuram Waghmore

  • ಗೌರಿ ಹತ್ಯೆಯ ಶಂಕಿತ ಹಂತಕರಿಂದ ಸ್ಫೋಟಕ ಮಾಹಿತಿ

    ಗೌರಿ ಹತ್ಯೆಯ ಶಂಕಿತ ಹಂತಕರಿಂದ ಸ್ಫೋಟಕ ಮಾಹಿತಿ

    -ಮಾಧ್ಯಮಗಳ ಜೊತೆ ಮಾತನಾಡಿದ ಪರಶುರಾಮ್ ವಾಗ್ಮೋರೆ, ಮನೋಹರ್ ಯಡವೆ

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಂಕಿತ ಆರೋಪಿಗಳಾದ ಮನೋಹರ್ ಯಡವೆ ಮತ್ತು ಪರಶುರಾಮ್ ವಾಗ್ಮೋರೆ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.

    ಇಂದು ಕೋಕಾ ನ್ಯಾಯಾಲಯಕ್ಕೆ 13 ಆರೋಪಿಗಳನ್ನು ಎಸ್‍ಐಟಿ ಅಧಿಕಾರಿಗಳು ಕರೆತಂದಿದ್ದರು. ಈ ವೇಳೆ ಮಾಧ್ಯಮಗಳನ್ನು ನೋಡುತ್ತಲೇ ಪರಶುರಾಮ್ ವಾಗ್ಮೋರೆ, ನಾವು ಏನು ಮಾಡಿಲ್ಲ, ನಾವೆಲ್ಲ ನಿರಪರಾಧಿಗಳು, ಹಿಂದೂ ಪರ ಸಂಘಟನೆಗಳಲ್ಲಿ ಇದ್ದಿದ್ದು ನಿಜ. ಆದರೆ ಕೊಲೆ ಮಾಡೋ ಮಟ್ಟಕ್ಕೆ ಹೋಗೋರಲ್ಲ. ನಮಗೂ ಇದಕ್ಕೂ ಏನು ಸಂಬಂಧ ಇಲ್ಲ ಸುಮ್ಮನೆ ನಮ್ಮನ್ನು ತಂದು ಟಾರ್ಗೆಟ್ ಮಾಡುತ್ತಿದ್ದಾರೆ. ಒಬ್ಬರು ಹೊಡೀತಿದ್ದಾರೆ, ಒಬ್ಬರು ಕನ್ವಿನ್ಸ್ ಮಾಡುತ್ತಿದ್ದಾರೆ. ನಿಮ್ಮ ಫ್ಯಾಮಿಲಿಗೆ 25 ಲಕ್ಷ, 30 ಲಕ್ಷ ಕೊಟ್ತಿವಿ ಒಪ್ಪಿಕೊಳ್ಳಿ ಎನ್ನುತ್ತಿದ್ದಾರೆ ಅಂತಾ ಹೇಳಿದ್ದಾನೆ.

    ಕೊಲೆ ಮಾಡಿದ್ದಾಗಿ ಒಪ್ಪಿಕೊಳ್ಳದೇ ಇದ್ದಲ್ಲಿ ನಿಮ್ಮ ಅಣ್ಣ ಅಥವಾ ತಮ್ಮ ಅಥವಾ ಗೆಳೆಯರನ್ನು ತಂದು ಫಿಟ್ ಮಾಡ್ತಿವಿ ಎಂದು ಸಿಕ್ಕಾಪಟ್ಟೆ ಟಾರ್ಚರ್ ಕೊಟ್ಟಿದ್ದಾರೆ. 8 ದಿನ ಟಾರ್ಚರ್ ಕೊಟ್ಟಿದ್ದಾರೆ. ಖಾಲಿ ಪೇಪರ್ ಮೇಲೆ ಸ್ಟೇಟ್‍ಮೆಂಟ್ ತಗೊಂಡಿದ್ದಾರೆ, ಖಾಲಿ ಪೇಪರ್‍ನಲ್ಲಿ ಸಹಿ ಪಡೆದಿದ್ದಾರೆ.. ಅವರೆ ಹೇಳಿಕೊಟ್ಟಿದ್ದನ್ನು ಹೇಳಿಸಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ನಮ್ಮ ಕುಟುಂಬದ ಸದಸ್ಯರಿಗೆ ಏನಾದರೂ ಆದ್ರೆ ಎಸ್‍ಐಟಿ ಅವರೆ ಹೊಣೆ. ನನ್ನ ತಾಯಿ ಹಾಸಿಗೆ ಹಿಡಿದಿದ್ದಾರೆ. ಇದುವರೆಗೂ ಚೇತರಿಸಿಕೊಂಡಿಲ್ಲ. ಇದಕ್ಕೆಲ್ಲಾ ಯಾರು ಹೊಣೆ? ಇಲ್ಲಿರೋರು ಯಾರೂ ನಮಗೂ ಪರಿಚಯವೇ ಇಲ್ಲ. ಫೋನ್ ಲಿಂಕ್ ಸಹ ಇಲ್ಲ. ಎಲ್ಲರನ್ನೂ ಇಲ್ಲಿ ತಂದು ಗುಡ್ಡೆ ಹಾಕಿದ್ದಾರೆ. ಮಾನಸಿಕವಾಗಿ, ದೈಹಿಕವಾಗಿ ಹಿಂಸೆ ಮಾಡುತ್ತಿದ್ದಾರೆ ಅಂತಾ ಪರಶುರಾಮ್ ಹೇಳಿದ್ದಾನೆ.

    ನನಗೂ ಇದಕ್ಕೂ ಸಂಬಂಧವೇ ಇಲ್ಲ. ಅನಾವಶ್ಯಕವಾಗಿ ನಮ್ಮನ್ನು ಇಲ್ಲಿ ತಂದು ಫಿಟ್ ಮಾಡಿದ್ದಾರೆ. ಬಂಧನವಾಗಿರೋರೆಲ್ಲ ನಮಗೆ ಪರಿಚಯವೇ ಇಲ್ಲ. ಇವರೆಲ್ಲಾ ಇಲ್ಲಿ ಬಂದ ಮೇಲೆಯೇ ನಮಗೆ ಗೊತ್ತಾಗಿದ್ದು, ಯಾರದ್ದೋ ಫೋಟೋ ತಂದು ತೋರಿಸಿ, ಇವರು ಪರಿಚಯ ಎಂದು ಒಪ್ಪಿಕೊಳ್ಳಿ ಅಂತಾರೆ. ಮೇ 14ರಂದು ಬಂಧಿಸಿ, ಭಗವಾನ್ ಹತ್ಯೆ ಕೇಸ್ ಒಪ್ಪಿಕೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ. ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಮನೋಹರ್ ಯಡವೆ ಆರೋಪಿಸಿದ್ದಾನೆ.

    ಎಸ್‍ಐಟಿ ಆರೋಪಿಗಳನ್ನು ಸೂಕ್ತ ಸಾಕ್ಷ್ಯಾಧಾರಗಳ ಮೇಲೆ ಬಂಧಿಸಿದ್ದಾರೆ. ಇದೂವರೆಗೂ ಆರೋಪಿಗಳು ಮಾಧ್ಯಮಗಳ ಮುಂದೆ ಯಾವುದೇ ಹೇಳಿಕೆ ನೀಡಿರಲಿಲ್ಲ. ಇಂದು ದಿಢೀರ್ ಅಂತಾ ಮಾಧ್ಯಮಗಳನ್ನು ಕಂಡಕೂಡಲೇ ಸ್ಫೋಟಕ ಮಾಹಿತಿಗಳನ್ನು ಹೊರ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/oKmyWQuoB5M

  • ಗೌರಿ ಹತ್ಯೆ ಪ್ರಕರಣ-ಮತ್ತೊಬ್ಬ ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನ

    ಗೌರಿ ಹತ್ಯೆ ಪ್ರಕರಣ-ಮತ್ತೊಬ್ಬ ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನ

    ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಮತ್ತೊಬ್ಬ ಕಾರ್ಯಕರ್ತನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬೆಳಗಾವಿಯಲ್ಲಿ ಆರೋಪಿ ಭರತ್ ನನ್ನು ಬಂಧಿಸಿ, ಮತ್ತಿಬ್ಬರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಬಂಧಿತರು ಪರಶುರಾಮ್ ವಾಗ್ಮೋರೆಗೆ ಬೆಳಗಾವಿಯಲ್ಲಿ ಆಶ್ರಯ ಕೊಟ್ಟಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಪರಶುರಾಮ್ ವಾಗ್ಮೋರೆ ನೀಡಿದ್ದ ಮಾಹಿತಿ ಆಧಾರದ ಮೇಲೆ ಭರತ್ ನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ತನಿಖೆಯನ್ನು ಚುರುಕುಗೊಳಿಸಿರುವ ಎಸ್‍ಐಟಿ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 12 ಜನರನ್ನು ಬಂಧಿಸಿದ್ದು, ಅದರಲ್ಲಿ ಈಗ ಕೊನೆಯ ವ್ಯಕ್ತಿಯೇ ಭರತ್ ಆಗಿದ್ದಾರೆ.

    ಯಾರು ಈ ಪರಶುರಾಮ್ ವಾಗ್ಮೋರೆ?
    ವಿಜಯಪುರ ಜಿಲ್ಲೆಯ ಸಿಂಧಗಿ ಪಟ್ಟಣದ ನಿವಾಸಿ ಪರಶುರಾಮ್ ವಾಗ್ಮೋರೆ. ವಯಸ್ಸು 26. ಕಟ್ಟಾ ಹಿಂದೂವಾದಿಯಾಗಿದ್ದು, ಶ್ರೀರಾಮಸೇನೆ, ಹಿಂದೂ ಜಾಗೃತಿ ವೇದಿಕೆಯಲ್ಲೂ ಗುರುತಿಸಿಕೊಂಡಿದ್ದ. ಈ ಹಿಂದೆ ಸಿಂಧಗಿ ತಹಶೀಲ್ದಾರ್ ಕಚೇರಿ ಬಳಿ ಪಾಕ್ ಧ್ವಜ ಹಾರಿಸಿದ ಪ್ರಕರಣದಲ್ಲಿ ಪರಶುರಾಮ್ ಹೆಸರು ಕೇಳಿ ಬಂದಿತ್ತು. ಪರಶುರಾಮ್ ಒಬ್ಬ ಶಾರ್ಪ್ ಶೂಟರ್ ಆಗಿದ್ದು, ಅಮೋಲ್ ಕಾಳೆ, ಮನೋಹರ್ ಯವಡೆಗೆ ಎಂಬವರಿಗೆ ತರಬೇತಿ ನೀಡಿದ್ದ ಎನ್ನುವ ಮಾಹಿತಿ ಈಗ ಲಭ್ಯವಾಗಿದೆ. ಸಂಬಂಧಿಕರ ಅಂಗಡಿಯಲ್ಲಿ ಪರಶುರಾಮ್ ಕೆಲಸ ಮಾಡಿಕೊಂಡಿದ್ದ.

  • ಗೌರಿ ಹಂತಕ ಆರೋಪಿ ವಾಗ್ಮೋರೆಗೆ ಪಶ್ಚಾತ್ತಾಪ – ಕೋರ್ಟ್ ನಲ್ಲಿ ನೀಡ್ತಾನಂತೆ ತಪ್ಪೊಪ್ಪಿಗೆ ಹೇಳಿಕೆ!

    ಗೌರಿ ಹಂತಕ ಆರೋಪಿ ವಾಗ್ಮೋರೆಗೆ ಪಶ್ಚಾತ್ತಾಪ – ಕೋರ್ಟ್ ನಲ್ಲಿ ನೀಡ್ತಾನಂತೆ ತಪ್ಪೊಪ್ಪಿಗೆ ಹೇಳಿಕೆ!

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್‍ನಲ್ಲಿ ಬಂಧಿತನಾಗಿರುವ ಹಂತಕ ಆರೋಪಿ ಪರಶುರಾಮ್ ವಾಗ್ಮೋರೆಗೆ ಪಶ್ಚಾತಾಪ ಆಗಿದೆಯಂತೆ. ಈ ಹಿನ್ನೆಲೆಯಲ್ಲಿ ಕಾನೂನು ಹೋರಾಟವನ್ನು ನಿಲ್ಲಿಸಿ ತಾನು ಮಾಡಿದ್ದ ಪಾಪಕ್ಕೆ ಪ್ರಾಯಶ್ಚಿತ ಮಾಡಿಕೊಳ್ಳಲು ನಿರ್ಧರಿಸಿದ್ದಾನೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಐಪಿಸಿ ಸೆಕ್ಷನ್ 314ರ ಅಡಿಯಲ್ಲಿ ತಪ್ಪೊಪ್ಪಿಗೆ ಸ್ಟೇಟ್‍ಮೆಂಟ್ ನೀಡಲು ತಯಾರಾಗಿದ್ದು, ನಾನು ಮಾಡಿದ್ದು ತಪ್ಪಾಯ್ತು. ನ್ಯಾಯಾಧೀಶರ ಮುಂದೆ ಎಲ್ಲವನ್ನೂ ಹೇಳ್ತೀನಿ ಎಂದಿದ್ದಾನೆ. ಹೀಗಾಗಿ ಎಸ್‍ಐಟಿ ಅಧಿಕಾರಿಗಳು ವಾಗ್ಮೋರೆ ಸ್ಟೇಟ್‍ಮೆಂಟ್ ರೆಕಾರ್ಡ್ ಮಾಡಿಸಲು ಸಿದ್ಧತೆ ನಡೆಸುತ್ತಿದ್ದಾರೆ.

    ಒಂದು ವೇಳೆ ಪರಶುರಾಮ್ ವಾಗ್ಮೋರೆ ಸ್ಟೇಟ್‍ಮೆಂಟ್ ಕೊಟ್ಟರೆ, ಈವರೆಗೆ ಬಾಯಿ ಬಿಡದೆ ಸುಮ್ಮನಿದ್ದ ಐವರು ಆರೋಪಿಗಳಿಗೆ ಸಂಕಷ್ಟ ಎದುರಾಗಲಿದೆ.

    ಪರುಶುರಾಮ್ ವಾಗ್ಮೋರೆ, ಎಸ್‍ಐಟಿ ಪೊಲೀಸರ ತನಿಖೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸ್ತಿರೋದು ಎಸ್‍ಐಟಿ ಪೊಲೀಸರಿಗೆ ಖುಷಿ ತಂದಿತ್ತು. ಇದರ ಬೆನ್ನಲ್ಲೆ ಪರುಶುರಾಮ್ ತನ್ನ ತಾಯಿಯನ್ನು ಒಮ್ಮೆ ನೋಡಬೇಕು ಅನ್ನೋ ಆಸೆಯನ್ನು ಎಸ್‍ಐಟಿ ಪೊಲೀಸರ ಮುಂದೆ ಹೇಳಿಕೊಂಡಿದ್ದನು. ಈ ಬೇಡಿಕೆಗೆ ಸ್ಪಂದಿಸಿದ ಎಸ್‍ಐಟಿ ಅಧಿಕಾರಿಗಳು ಬೆಂಗಳೂರಿನ ಸಿಐಡಿ ಕಚೇರಿಯಲ್ಲಿರುವ ಎಸ್‍ಐಟಿಯಲ್ಲಿ ಪರುಶುರಾಮ್ ತಾಯಿ ಮತ್ತು ತಂದೆಯನ್ನು ಭೇಟಿಗೆ ಅವಕಾಶ ಮಾಡಿಕೊಟ್ಟಿದ್ರು.