Tag: parents

  • ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಆರೋಪಿಗೆ ಸ್ಥಳೀಯರಿಂದ ಗೂಸ

    ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಆರೋಪಿಗೆ ಸ್ಥಳೀಯರಿಂದ ಗೂಸ

    ಚಿತ್ರದುರ್ಗ: ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಸ್ಥಳೀಯರು ಭರ್ಜರಿ ಗೂಸ ಕೊಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಶುಗರ್ ಫ್ಯಾಕ್ಟರಿಯ ಕಾರ್ಮಿಕರಿಗಾಗಿ ನಿರ್ಮಿಸಿರುವ ಸಾಲು ಮನೆಗಳ ಬಳಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ತಿಂಗಳಿಂದ ವಾಸವಾಗಿದ್ದ ತುಮಕೂರು ಜಿಲ್ಲೆ ಶಿರಾ ಮೂಲದ ತಿಪ್ಪಯ್ಯ(42) ಎಂಬ ಕಾಮುಕ 8 ವರ್ಷದ ಅಪ್ರಾಪ್ತ ಬಾಲಕಿಗೆ ಚಾಕ್ಲೇಟ್ ಆಮಿಷವೊಡ್ಡಿ ಕರೆದೊಯ್ದು, ಬಾಲಕಿಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

    ಆಗ ಬಾಲಕಿ ಗಾಬರಿಗೊಂಡು ಜೋರಾಗಿ ಕಿರುಚಿದ್ದಾಳೆ. ಬಾಲಕಿ ಅಳುತ್ತಿರುವ ಶಬ್ಧ ಕೇಳಿದ ಅಲ್ಲಿನ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಮನೆಯಲ್ಲಿನ ಸ್ಥಿತಿ ಕಂಡು ತೀವ್ರ ಆಕ್ರೋಶಗೊಂಡಿರುವ ಸ್ಥಳೀಯರು ಆರೋಪಿ ತಿಪ್ಪಯ್ಯಗೆ ಭರ್ಜರಿ ಧರ್ಮದೇಟು ನೀಡಿದ್ದಾರೆ.  ಇದನ್ನೂ ಓದಿ :ಮಲೆನಾಡಲ್ಲಿ ಮಳೆಯಬ್ಬರ – ಸಿಡಿಲಿಗೆ ಗೃಹಪಯೋಗಿ ವಸ್ತುಗಳು ನಾಶ

    ಈ ವೇಳೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಮುಂದಾದ ಸಾರ್ವಜನಿಕರ ಪ್ರಯತ್ನ ಗಮನಿಸಿದ ಆರೋಪಿ ಅಲ್ಲಿಂದ ಅನಾರೋಗ್ಯದ ಡ್ರಾಮಾ ಮಾಡಿ ಎಸ್ಕೇಪ್ ಆಗಿದ್ದಾನೆ. ಇನ್ನು ಬಾಲಕಿಯ ಪೋಷಕರು ಸಹ ಮಾರ್ಯಾದೆಗೆ ಅಂಜಿ ದೂರು ದಾಖಲಿಸಲು ಹಿಂದೇಟು ಹಾಕಿದ್ದು, ಆರೋಪಿಗೆ ಸ್ಥಳೀಯರು ತರಾಟೆಗೆ ತೆಗೆದುಕೊಂಡು, ಧರ್ಮದೇಟು ನೀಡಿರುವ ದೃಶ್ಯ ಎಲ್ಲೆಡೆ ವೈರಲ್ ಆಗಿದೆ.  ಇದನ್ನೂ ಓದಿ :ಯುವ ಪ್ರೇಮಿಗಳೇ ದರೊಡೆಕೋರರ ಟಾರ್ಗೆಟ್- ಪೊಲೀಸರ ಸೋಗಿನಲ್ಲಿ ದೋಚುತ್ತಿದ್ದ ಮೂವರ ಬಂಧನ

  • ವರದಕ್ಷಿಣೆ ಕಿರುಕುಳ – 5 ದಿನಗಳ ಬಳಿಕ ನವವಿವಾಹಿತೆ ಶವ ಪತ್ತೆ

    ವರದಕ್ಷಿಣೆ ಕಿರುಕುಳ – 5 ದಿನಗಳ ಬಳಿಕ ನವವಿವಾಹಿತೆ ಶವ ಪತ್ತೆ

    ಹಾಸನ: ವರದಕ್ಷಿಣೆ ಕಿರುಕುಳವನ್ನು ತಾಳಲಾರದೇ ನದಿಗೆ ಜಿಗಿದಿದ್ದ ನವವಾಹಿತೆ ಶವ ಐದು ದಿನಗಳ ಬಳಿಕ ಪತ್ತೆಯಾಗಿದೆ.

    ಪೂಜಾ(20) ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಆಗಸ್ಟ್ 5 ರಂದು ಸಕಲೇಶಪುರದ ಹೇಮಾವತಿ ಸೇತುವೆಗೆ ಹಾರಿ ಪೂಜಾ ಆತ್ಮಹತ್ಯೆಗೆ ಮಾಡಿಕೊಂಡಿದ್ದರು. 5 ದಿನದಿಂದ ಮಗಳ ಮೃತ ದೇಹಕ್ಕಾಗಿ ದಿನವೂ ಹೊಳೆಯ ಬಳಿ ಪೋಷಕರು ರೋಧಿಸುತ್ತಿದ್ದರು. ಅಲ್ಲದೇ ಸಕಲೇಶಪುರ ಉಪವಿಭಾಗಾಧಿಕಾರಿ ಪ್ರತೀಕ್ ಬಯಾಲ್ ಸ್ಥಳದಲ್ಲೇ ಮೊಕ್ಕಾಂ ಹೂಡಿ ಕಾರ್ಯಾಚರಣೆ ನಡೆಸುತ್ತಿದ್ದರು. ಜೊತೆಗೆ ಅಗ್ನಿಶಾಮಕದಳದ ಸಿಬ್ಬಂದಿ ಕೂಡ ಸತತ ಹುಡುಕಾಟ ನಡೆಸಿತ್ತು. ಆದ್ರೆ ಇದೀಗ ಪೂಜಾ ಮೃತದೇಹ ಸಿಕ್ಕಿದೆ.

    ಚನ್ನರಾಯಪಟ್ಟಣ ತಾಲೂಕಿನ ಬೆಕ್ಕಾ ಗ್ರಾಮದ ಪೂಜಾ, ಸಕಲೇಶಪುರ ಅಶ್ವಥ್ ನನ್ನ ಪ್ರೀತಿಸುತ್ತಿದ್ದರು. ಈ ವಿಚಾರ ತಿಳಿದು ಪೂಜಾರವರ ಪೋಷಕರು 8 ತಿಂಗಳ ಹಿಂದೆ ಬೇರೊಬ್ಬ ಹುಡುಗನೊಂದಿಗೆ ನಿಶ್ಚಿತಾರ್ಥ ಮಾಡಿದ್ದರು. ಆದರೆ ಅದನ್ನು ದಿಕ್ಕರಿಸಿ ಪೂಜಾ ಅಶ್ವಥ್ ಎಂಬಾತನನ್ನು ಮದುವೆಯಾಗಿದ್ದಳು.

    ಸದ್ಯ ಪೂಜಾ ವರದಕ್ಷಿಣೆ ಕಿರುಕುಳವನ್ನು ತಾಳಲಾರದೇ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಫೋನ್‍ನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆ – ವರ್ಷ ಆಗುವುದರೊಳಗೆ ಯುವತಿ ಆತ್ಮಹತ್ಯೆ!

  • ಹುಟ್ಟುಹಬ್ಬಕ್ಕೆ ಡ್ರೆಸ್ ಕೊಡಿಸಿಲ್ಲವೆಂದು ಬಾಲಕಿ ಆತ್ಮಹತ್ಯೆ

    ಹುಟ್ಟುಹಬ್ಬಕ್ಕೆ ಡ್ರೆಸ್ ಕೊಡಿಸಿಲ್ಲವೆಂದು ಬಾಲಕಿ ಆತ್ಮಹತ್ಯೆ

    – ಸಾವಿನ ಹಿಂದೆ ಮೂಡಿದೆ ಅನುಮಾನ

    ಬೆಂಗಳೂರು: ಹುಟ್ಟುಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಲಿಲ್ಲವೆಂದು 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಯಲಹಂಕದ ಸಹಕಾರ ನಗರದಲ್ಲಿ ನಡೆದಿದೆ.

    ನಾಳೆ 16 ವರ್ಷದ ಬಾಲಕಿಯ ಹುಟ್ಟುಹಬ್ಬ, ಕಳೆದ ಒಂದು ವಾರದಿಂದಲೇ ಹೊಸ ಬಟ್ಟೆ ಕೊಡಿಸುವಂತೆ ಬಾಲಕಿ ಪೋಷಕರಿಗೆ ಒತ್ತಾಯ ಮಾಡಿದ್ದಳು. ಆದರೆ ಪೋಷಕರು ಆಕೆಯ ಮಾತನ್ನು ಅಷ್ಟು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಇಂದು ಸಹ ಹುಟ್ಟುಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಿ ಎಂದು ದುಂಬಾಲು ಬಿದ್ದಿದ್ದಳು. ಆದರೆ ಪೋಷಕರು ಅದ್ಯಾವುದನ್ನೂ ತಲೆಗೆ ಹಾಕಿಕೊಳ್ಳದೆ ಎಂದಿನಂತೆ ಕೆಲಸಕ್ಕೆಂದು ಹೊರಗಡೆ ಹೋಗಿದ್ದರು.

    ಬಟ್ಟೆ ಕೊಡಿಸದ್ದಕ್ಕೆ ಬೇಸರಗೊಂಡ ಬಾಲಕಿ, ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಚಾರ ತಿಳಿದು ವಾಪಸ್ ಬಂದ ಪೋಷಕರು, ಮಗಳ ಈ ನಿರ್ಧಾರದಿಂದ ಶಾಕ್ ಆಗಿದ್ದಾರೆ. ಕೇವಲ ಬಟ್ಟೆ ವಿಚಾರಕ್ಕೆ ಈ ರೀತಿ ಮಾಡಿಕೊಳ್ಳುತ್ತಾಳೆ ಎಂದು ಭಾವಿಸಿರಲಿಲ್ಲವೆಂದು ನೆನದು ಕಣ್ಣೀರು ಹಾಕಿದ್ದಾರೆ.

    ಇದೇ ವೇಳೆ ಮತ್ತೊಂದು ವಿಚಾರ ಕೂಡ ಬೆಳಕಿಗೆ ಬಂದಿದ್ದು, ಕೆಲ ತಿಂಗಳಿಂದ ಬಾಲಕಿ ಹುಡುಗನೊಬ್ಬನನ್ನು ಪ್ರೀತಿಸುತ್ತಿದ್ದಳು. ಹುಡುಗ ಸಹ ಇಷ್ಟಪಟ್ಟಿದ್ದನಂತೆ. ಈ ವಿಚಾರ ಮನೆಯಲ್ಲಿ ತಿಳಿದಿದ್ದು, ಬಳಿಕ ಅದೇ ಹುಡುಗನ ಜೊತೆ ಮದುವೆ ಮಾಡುವಂತೆ ಪೋಷಕರನ್ನು ಕೇಳಿದ್ದಳಂತೆ. ಆದರೆ ಪೋಷಕರು ಆ ಹುಡುಗ ನಿನಗೆ ಅಣ್ಣನ ವರಸೆ ಆಗಬೇಕು. ಹೀಗಾಗಿ ಮದುವೆ ಸಾಧ್ಯವಿಲ್ಲ ಎಂದು ಹೇಳಿದ್ದರು ಎನ್ನಲಾಗಿದೆ.

    ಈ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಬಂದ ಕೊಡುಗೆಹಳ್ಳಿ ಪೊಲೀಸರು, ಪರಿಶೀಲನೆ ನಡೆಸಿದ್ದು, ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

  • ಹೊಟ್ಟೆ ನೋವು ತಾಳಲಾರದೇ ವಿದ್ಯಾರ್ಥಿನಿ ಆತ್ಮಹತ್ಯೆ

    ಹೊಟ್ಟೆ ನೋವು ತಾಳಲಾರದೇ ವಿದ್ಯಾರ್ಥಿನಿ ಆತ್ಮಹತ್ಯೆ

    ಶಿವಮೊಗ್ಗ: ಹೊಟ್ಟೆ ನೋವು ತಾಳಲಾರದೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ನಡೆದಿದೆ.

    ಮೃತ ಯುವತಿಯನ್ನು ಚಂದ್ರಗುತ್ತಿ ಗ್ರಾಮದ ನಾಗರಾಜ ಮರಡಿ ಅವರ ಪುತ್ರಿ ಸುಚಿತ್ರಾ (17) ಎಂದು ಗುರುತಿಸಲಾಗಿದೆ. ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸುಚಿತ್ರಾರಿಗೆ ಕೆಲವು ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಳು.

    ಪೋಷಕರು ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಸುಚಿತ್ರಾಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಮನೆಯಲ್ಲಿ ಯಾರು ಇಲ್ಲದೇ ಇರುವುದರಿಂದ ಹೊಟ್ಟೆನೋವು ತಾಳಲಾರದೇ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಸದ್ಯ ಈ ಸಂಬಂಧ ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದು. ಪೊಲೀಸರು ಘಟನೆ ಕುರಿತಂತೆ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ:ಜಮೀನಿನಲ್ಲಿದ್ದ ರೈತನನ್ನು ಬಲಿ ತೆಗೆದುಕೊಂಡ ಕಾಡು ಪ್ರಾಣಿ

  • ಆಡುವಾಗ ಗಣೇಶ ಮೂರ್ತಿ ನುಂಗಿದ ಮೂರು ವರ್ಷದ ಮಗು

    ಆಡುವಾಗ ಗಣೇಶ ಮೂರ್ತಿ ನುಂಗಿದ ಮೂರು ವರ್ಷದ ಮಗು

    ಬೆಂಗಳೂರು: ಮೂರು ವರ್ಷದ ಮಗು ಆಟ ಆಡುತ್ತಾ ಚಿಕ್ಕ ಗಣೇಶ ಮೂರ್ತಿಯನ್ನು ನುಂಗಿದ ಘಟನೆ ಬೆಂಗಳೂರಿನ ಹೆಚ್‍ಎಎಲ್ ನಲ್ಲಿ ನಡೆದಿದ್ದು, ಪೋಷಕರ ಸಮಯಪ್ರಜ್ಞೆಯಿಂದ ಮಗು ಬದುಕುಳಿದಿದೆ.

    ಶುಕ್ರವಾರ ರಾತ್ರಿ ಮಗುವಿಗೆ ಆಡಲು ಪೋಷಕರು ಆಟಿಕೆ ನೀಡಿದ್ದರು. ಕೆಲ ಸಮಯದ ಬಳಿಕ ಆಟಿಕೆಯಲ್ಲಿ ಗಣೇಶ ಮೂರ್ತಿ ಇರಲಿಲ್ಲ. ಇದರಿಂದ ಅನುಮಾನಗೊಂಡ ಪೋಷಕರು ಕುಡಲೇ ಮಗುವನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರು ಎಕ್ಸ್ ರೇ ತೆಗೆದು ನೋಡಿದಾಗ ಅನ್ನನಾಳದಲ್ಲಿ ಗಣೇಶನ ವಿಗ್ರಹ ಕಂಡು ಬಂದಿದೆ.

    ವಿಗ್ರಹ ಮೆಟಲ್ ವಿಗ್ರಹವಾಗಿದ್ದರಿಂದ ಎಂಡೋಸ್ಕೋಪಿ ಮೂಲಕ ಮೂರ್ತಿಯನ್ನು ಹೊಟ್ಟೆಯ ಭಾಗಕ್ಕೆ ತಂದಿದ್ದಾರೆ. ನಂತರ ಹಂತ ಹಂತವಾಗಿ ನಿರ್ದಿಷ್ಟ ಜಾಗಕ್ಕೆ ತಂದ ವೈದ್ಯರು, ಮಗುವನ್ನು ಉಲ್ಟಾ ಮಲಗಿಸಿ ಗಣೇಶ ಮೂರ್ತಿಯನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪೋಷಕರ ಸಮಯ ಪ್ರಜ್ಞೆಯಿಂದ ಮಗುವಿ ಜೀವ ಉಳಿದಿದೆ. ಇದನ್ನೂ ಓದಿ: ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆ – ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ

    ಮಕ್ಕಳನ್ನು ಒಂಟಿಯಾಗಿ ಆಟವಾಡೋಕೆ ಬಿಟ್ಟ ವೇಳೆ ಅಪಾಯಕಾರಿ ವಸ್ತುಗಳನ್ನು ಮಕ್ಕಳ ಕೈಗೆ ಸಿಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಕೊಟ್ಟರು ಕೂಡ ಮಗುವಿನ ಜೊತೆಯಲ್ಲಿ ಯಾರಾದರೂ ಇದ್ರೆ ಒಳ್ಳೆಯದು ಅಂತಾ ವೈದ್ಯರು ಪೋಷಕರಿಗೆ ತಿಳಿ ಹೇಳಿದ್ದಾರೆ. ನೀವು ಏನಾದರೂ ಮಕ್ಕಳ ಕೈಗೆ ಈ ರೀತಿಯ ಚಿಕ್ಕ ಚಿಕ್ಕ ವಸ್ತುಗಳನ್ನು ನೀಡುವ ಮೊದಲು ಎಚ್ಚರಿಕೆ ವಹಿಸಿ.

  • ಬಾಲ್ಯ ವಿವಾಹ- ಕಟ್ಟಿದ ತಾಳಿ ಕಿತ್ತೆಸೆದು ಬಾಲಕಿ ಆಕ್ರೋಶ

    ಬಾಲ್ಯ ವಿವಾಹ- ಕಟ್ಟಿದ ತಾಳಿ ಕಿತ್ತೆಸೆದು ಬಾಲಕಿ ಆಕ್ರೋಶ

    ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಗ್ರಾಮವೊಂದರಲ್ಲಿ ತಂದೆ, ತಾಯಿ ಹಾಗೂ ಸಂಬಂಧಿಕರು ಸೇರಿ ಅಪ್ರಾಪ್ತೆಯನ್ನು ಬಾಲ್ಯವಿವಾಹದ ಕೂಪಕ್ಕೆ ತಳ್ಳಿದ್ದಾರೆ. ಈ ವೇಳೆ ಬಾಲಕಿಯ ಆಕ್ರೋಶದ ಕಟ್ಟೆ ಒಡೆದಿದ್ದು, ತಾಳಿ ಕಿತ್ತೆಸೆದು ಆಕ್ರೋಶ ವ್ಯಕ್ತಪಡಿಸಿದ್ದಾಳೆ.

    ಜಿಲ್ಲೆಯ ಹೊಸದುರ್ಗ ತಾಲೂಕು ವ್ಯಾಪ್ತಿಯ ಗ್ರಾಮದಲ್ಲಿ ಜುಲೈ 7ರಂದು ಈ ಬಾಲ್ಯ ವಿವಾಹ ನಡೆದಿದ್ದು, ವೀಡಿಯೋ ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆದ ಬಳಿಕ ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗದಲ್ಲಿ ಪಿಯುಸಿ ಓದುತ್ತಿದ್ದ 16 ವರ್ಷ 7 ತಿಂಗಳು ವಯಸ್ಸಿನ ಬಾಲಕಿಯನ್ನು ದಿಡೀರ್ ಎಂದು ಮನೆಗೆ ಕರೆತಂದಿದ್ದ ಪೋಷಕರು, ಒತ್ತಾಯಪೂರ್ವಕವಾಗಿ ತನ್ನ ಸೋದರ ಮಾವನೊಂದಿಗೆ ಜಮೀನಿನಲ್ಲಿ ಬಾಲ್ಯ ವಿವಾಹ ಮಾಡಿದ್ದಾರೆ.

    ಈ ವಿವಾಹವನ್ನು ವಿರೋಧಿಸಿ ಕಣ್ಣೀರಿಟ್ಟು ರೋಧಿಸಿರುವ ಬಾಲಕಿ, ಕಟ್ಟಿದ ತಾಳಿಯನ್ನು ಕಿತ್ತೆಸೆದು ಪೋಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಅಲ್ಲದೆ ನಂಬಿಸಿ ಮೋಸ ಮಾಡಿದಿಯಲ್ಲ ಅಪ್ಪ ಎಂದು ತಂದೆ ವಿರುದ್ಧ ಕಿಡಿ ಕಾರಿದ್ದಾಳೆ. ಬಾಲ್ಯ ವಿವಾಹದ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿರುವ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.

    ಈ ವೀಡಿಯೋ ವೈರಲ್ ಆದ ತಕ್ಷಣ ಎಚ್ಚೆತ್ತ ಚಿತ್ರದುರ್ಗ ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಬಾಲಕಿಯನ್ನು ರಕ್ಷಿಸಿದ್ದಾರೆ. ನೊಂದ ಬಾಲಕಿಗೆ ಬಾಲಮಂದಿರದಲ್ಲಿ ಆಶ್ರಯ ಕಲ್ಪಿಸಿದ್ದಾರೆ. ಅಲ್ಲದೆ ಬಾಲಕಿಗೆ ಒತ್ತಾಯಪೂರ್ವಕವಾಗಿ ಬಾಲ್ಯ ವಿವಾಹ ಮಾಡಿರುವ ಬಾಲಕಿಯ ತಂದೆ, ತಾಯಿ ಹಾಗೂ ಸೋದರ ಸಂಬಂಧಿಗಳು ಹಾಗೂ ಮಗನನ್ನು ಇಂದು ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್ಪಿ ರಾಧಿಕಾ ತಿಳಿಸಿದ್ದಾರೆ.

  • ಕೊರೊನಾಗೆ ಪೋಷಕರು ಬಲಿ – ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ರೇಣುಕಾಚಾರ್ಯ

    ಕೊರೊನಾಗೆ ಪೋಷಕರು ಬಲಿ – ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ರೇಣುಕಾಚಾರ್ಯ

    ದಾವಣಗೆರೆ: ಕೊರೊನಾ ಎರಡನೇ ಅಲೆಯಲ್ಲಿ ಸಾಕಷ್ಟು ಸಮಾಜ ಮುಖಿ ಕೆಲಸ ಮಾಡುವ ಮೂಲಕ ಮನೆ ಮಾತಾಗಿರುವ ಶಾಸಕ ಎಂ.ಪಿ ರೇಣುಕಾಚಾರ್ಯರವರು ಇದೀಗ ಅದೇ ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.

    ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ದೊಡ್ಡೇರಹಳ್ಳಿ ಗ್ರಾಮದ ಬಾಲಕಿ ಕೊರೊನಾದಿಂದ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ಶಾಸಕ ಎಂಪಿ ರೇಣುಕಾಚಾರ್ಯ ಇಂದು ಅ ಗ್ರಾಮಕ್ಕೆ ಪತ್ನಿ ಸುಮಿತ್ರಾರವರೊಂದಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಕೆಲ ವರ್ಷಗಳ ಹಿಂದೆ ತಾಯಿಯನ್ನು ಕಳೆದುಕೊಂಡು ಎರಡು ತಿಂಗಳ ಹಿಂದೆ ಕೋವಿಡ್ ನಿಂದ ತಂದೆಯನ್ನು ಕಳೆದುಕೊಂಡಿದ್ದ ಬಾಲಕಿಗೆ ಆರ್ಥಿಕ ಸಹಾಯ ಕೂಡ ಮಾಡಿದರು.

    ಬಳಿಕ ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆದು ತಂದೆ, ತಾಯಿ ಸ್ಥಾನದಲ್ಲಿ ನಿಂತು ಮುಂದಿನ ವಿದ್ಯಾಭ್ಯಾಸವನ್ನು ಕೊಡಿಸುವುದಾಗಿ ತಿಳಿಸಿದರು. ಅಲ್ಲದೇ ಪೋಷಕರನ್ನು ಕಳೆದುಕೊಂಡಿದ್ದ ಬಾಲಕಿಯನ್ನು ರೇಣುಕಾಚಾರ್ಯ ದಂಪತಿ ಬಾಚಿ ತಬ್ಬಿಕೊಂಡು ಸಾಂತ್ವನ ಹೇಳಿದರು. ಇದನ್ನೂ ಓದಿ: ಜಾರಕಿಹೊಳಿ, ಮುನಿರತ್ನ ಸಚಿವರಾಗ್ತಾರೆ: ನಾರಾಯಣಗೌಡ

  • ಕೆನಡಾದಲ್ಲಿ ಮಗನ ಮದುವೆ – ಆನ್‍ಲೈನ್‍ನಲ್ಲಿ  ಪೋಷಕರ ಆಶೀರ್ವಾದ

    ಕೆನಡಾದಲ್ಲಿ ಮಗನ ಮದುವೆ – ಆನ್‍ಲೈನ್‍ನಲ್ಲಿ ಪೋಷಕರ ಆಶೀರ್ವಾದ

    ಮುಂಬೈ: ಕೊರೊನಾ ವೈರಸ್ ಜಗತ್ತಿನಾದ್ಯಂತ ಹಬ್ಬಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಸದ್ಯ ಕೊರೊನಾ ಲಾಕ್‍ಡೌನ್ ಇರುವುದರಿಂದ ಎಲ್ಲೆಡೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಈ ನಡುವೆ ವಿದೇಶದಲ್ಲಿ ನಡೆದ ಮಗನ ಮದುವೆಗೆ ಪೋಷಕರೊಬ್ಬರು ಆನ್‍ಲೈನ್ ಮೂಲಕ ಆಶೀರ್ವಾದ ಮಾಡಿದ್ದಾರೆ.

    ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಿಲಿ ಮೂಲ ಕುಟುಂಬವೊಂದು ಸಾವಿರಾರು ಕಿ.ಲೋ ಮೀಟರ್ ದೂರ ಕೆನಾಡದಲ್ಲಿ ವಾಸಿಸುತ್ತಿರುವ ತಮ್ಮ ಮಗನ ಮದುವೆಯಲ್ಲಿ ಪಾಲ್ಗೊಳ್ಳಲು ವಿಭಿನ್ನವಾದ ದಾರಿಯನ್ನು ಕಂಡುಕೊಂಡಿದ್ದಾರೆ. ಹೌದು, ಡೊಂಬಿವಿಲಿಯ ದಂಪತಿ ತಮ್ಮ ಪುತ್ರ ಬೂಷಣ್ ಚೌಧರಿ ಹಾಗೂ ವಧು ಮಂದೀಪ್ ಕೌರ್ ಅವರ ವಿವಾಹ ಸಂಭ್ರಮಕ್ಕೆ ಆನ್‍ಲೈನ್ ಮೂಲಕ ಹಾಜರಾಗಿದ್ದಾರೆ.

    ಶನಿವಾರ ಮದುವೆ ಸಮಾರಂಭ ನಡೆದಿದ್ದು, ಡೊಂಬಿವಿಲಿಯಿಂದಲೇ ಅರ್ಚಕರು ಮಂತ್ರ ಹೇಳಿದ್ದಾರೆ. ಆಗ ನವ ಜೋಡಿ ಕೆನಡಾದಲ್ಲಿ ವಿವಾಹವಾಗಿದ್ದಾರೆ. ಈ ವೇಳೆ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರು ಇಬ್ಬರು ಫೇಸ್‍ಬುಕ್ ಹಾಗೂ ಯೂಟ್ಯೂಬ್‍ನಲ್ಲಿ ಲೈವ್ ಬಂದಿದ್ದಾರೆ. ನಂತರ ಮದುವೆಯಾಗುತ್ತಿರುವ ವೇಳೆ ಸಂಬಂಧಿಕರು ಮತ್ತು ಸ್ನೇಹಿತರು ನವಜೋಡಿಗೆ ಅಕ್ಷತೆಯನ್ನು ಆನ್‍ಲೈನ್‍ನಲ್ಲಿಯೇ ತೋರಿಸಿದ್ದಾರೆ. ಇದನ್ನೂ ಓದಿ:ಜಮ್ಮು ಸೇನಾ ಸ್ಟೇಷನ್ ಬಳಿ ಕಾಣಿಸಿದ ಡ್ರೋನ್ – ಸೇನೆಯಿಂದ 25 ಸುತ್ತು ಫೈರಿಂಗ್

    ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ವರನ ತಂದೆ ಹಿರಮಾನ್ ಚೌಧರಿ ಎರಡು ಕುಟುಂಬದವರು ಮದುವೆ ಮಾಡಬೇಕೆಂದು ನಿಶ್ಚಯಿಸಿದ್ದೇವು. ಸದ್ಯ ಕೊರೊನಾ ಇರುವುದರಿಂದ ಈ ರೀತಿ ವಿವಾಹ ಮಾಡುವುದು ಉತ್ತಮ ಎಂದು ಭಾವಿಸಿದ್ದೇವೆ ಹಾಗೂ ಇದರಿಂದ ಹಣ ಕೂಡ ವ್ಯರ್ಥವಾಗುವುದಿಲ್ಲ ಎಂದಿದ್ದಾರೆ.

  • ಸ್ವಂತ ಮಗುವನ್ನೇ ಕೊಂದು ಹೂತುಹಾಕಿದ ಪೋಷಕರು – ಮೃತದೇಹ ಹೊರತೆಗೆದು ಪರಿಶೀಲನೆ

    ಸ್ವಂತ ಮಗುವನ್ನೇ ಕೊಂದು ಹೂತುಹಾಕಿದ ಪೋಷಕರು – ಮೃತದೇಹ ಹೊರತೆಗೆದು ಪರಿಶೀಲನೆ

    ಹಾಸನ: ತಂದೆ ಹಾಗೂ ತಾಯಿ ಇಬ್ಬರು ಸೇರಿ ಸ್ವಂತ ಮಗುವನ್ನೇ ಕೊಂದು ಶವವನ್ನು ಕಾಫಿತೋಟದಲ್ಲಿ ಹೂತಿರುವ ಅನುಮಾನದ ಮೇಲೆ ಮಗುವಿನ ಮೃತದೇಹ ಹೊರತೆಗೆದು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಜಿಲ್ಲೆಯ ಆಲೂರು ತಾಲೂಕಿನ, ಕೆ.ಹೊಸಕೋಟೆ ಹೋಬಳಿಯ ಕಾಡ್ಲೂರು ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    ಕೂಲಿ ಕೆಲಸಕ್ಕೆಂದು ಅಸ್ಸಾಂನಿಂದ ತಾಲೂಕಿನ ಕೆ.ಹೊಸಕೋಟೆ ಹೋಬಳಿಗೆ ಆಗಮಿಸಿದ್ದ ಕೂಲಿಕಾರ್ಮಿಕರ ಕುಟುಂಬಸ್ಥರಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಕೆಲ ದಿನಗಳ ಹಿಂದೆ ಪತಿ, ಪತ್ನಿ ನಡುವೆ ಕೌಟುಂಬಿಕ ಕಾರಣಕ್ಕೆ ಜಗಳ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಮಗುವನ್ನು ಹೊಡೆದು ಸಾಯಿಸಿ ಶವವನ್ನು ಹೂತು ಹಾಕಲಾಗಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ. ಆದರೆ ಮಗು ಅನಾರೋಗ್ಯದಿಂದಾಗಿ ಮೃತಪಟ್ಟಿದೆ ಎಂಬುದು ಪೋಷಕರ ವಾದವಾಗಿದೆ. ಇದನ್ನೂ ಓದಿ: ಹತ್ತು ಲಕ್ಷ ಹಣದೊಂದಿಗೆ ಸುದ್ದಿಗೋಷ್ಠಿ ನಡೆಸಿದ ಹೆಚ್‍ಡಿ.ರೇವಣ್ಣ, ಶಿವಲಿಂಗೇಗೌಡ

    ಈ ಕುರಿತು ಸ್ಥಳೀಯರೊಬ್ಬರು ನೀಡಿದ ದೂರಿನ ಮೇರೆಗೆ ಒಂದೂವರೆ ವರ್ಷದ ಗಂಡು ಮಗುವಿನ ಮೃತದೇಹ ಹೊರತೆಗೆದು ಪರಿಶೀಲನೆ ನಡೆಸಲಾಗುತ್ತಿದೆ. ಉಪವಿಭಾಗಾಧಿಕಾರಿ ಮಾರ್ಗದರ್ಶನ ದಲ್ಲಿ ಸ್ಥಳಕ್ಕೆ ಭೇಟಿ ನೀಡಿರುವ ತಹಶೀಲ್ದಾರ್ ಮತ್ತು ಪೊಲೀಸ್ ಅಧಿಕಾರಿಗಳ ತಂಡ ಹೂತಿರುವ ಶವವನ್ನು ಹೊರ ತೆಗೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

  • ಮರ್ಯಾದಾ ಹತ್ಯೆಯ ಆರೋಪಿಗಳು ಅಂದರ್

    ಮರ್ಯಾದಾ ಹತ್ಯೆಯ ಆರೋಪಿಗಳು ಅಂದರ್

    ವಿಜಯಪುರ: ಭಾರೀ ಸಂಚಲನ ಮೂಡಿಸಿದ್ದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಕಲಕೇರಿ ಠಾಣಾ ವ್ಯಾಪ್ತಿಯ ಸಲಾದಹಳ್ಳಿ ಗ್ರಾಮದ ಹೊರವಲಯದಲ್ಲಿ ಮೊನ್ನೆ ಮಧ್ಯಾಹ್ನ ನಡೆದಿದ್ದ ಬಸವರಾಜ್ (19), ದಾವಲಭಿ (18) ಪ್ರೇಮಿಗಳ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರೇಮಿಗಳ ಹತ್ಯೆ ನಡೆಸಿದ್ದ ಆರೋಪಿಗಳಾದ ಯುವತಿ ತಂದೆ ಬಂದಗಿಸಾಬ್ ತಂಬದ್ (50), ಸಹೋದರ ದಾವಲ್‍ಪಟೇಲ್ (20), ಅಳಿಯರಾದ ಅಲ್ಲಾ ಪಟೇಲ್ (29), ರಫಿಕ್ (24) ಬಂಧನವಾಗಿದ್ದು, ಮತ್ತೋರ್ವ ಆರೋಪಿ ಲಾಳೆಸಾಬ್ ಗಾಗಿ ಹುಡುಕಾಟ ನಡೆದಿದೆ.

    ಭೀಕರ ಹತ್ಯೆ ನಡೆದ ಸಲಾದಹಳ್ಳಿ ಗ್ರಾಮದ ಸುತ್ತ ಆರೋಪಿಗಳ ಪತ್ತೆಗೆ ಕಲಕೇರಿ ಪಿಎಸ್‍ಐ ಗಂಗೂಬಾಯಿ ಬಿರಾದಾರ್ ಬಲೆ ಬೀಸಿದ್ದರು. ಚಡಚಣ ಸಿಪಿಐ ಚಿದಂಬರಂ ಅವರು ಈ ಮೂರು ತಂಡಗಳಿಗೆ ನೇತೃತ್ವವನ್ನ ವಹಿಸಿಕೊಂಡಿದ್ದರು. 24 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಲು ಪೀಲ್ಡಿಗಿಳಿದಿದ್ದ ಖಾಕಿ ಪಡೆ, ಯಶಸ್ಸು ಕಂಡಿದ್ದು, ಇಂದು ನಾಲ್ವರು ಆರೋಪಿಗಳನ್ನು ಕಲಕೇರಿ ಪೊಲೀಸರು ಬಂಧಿಸಿದ್ದಾರೆ. ಯುವತಿ ತಂದೆ ಹಾಗೂ ಆಕೆ ಸಹೋದರ ಸೇರಿ ನಾಲ್ವರನ್ನು ಬಂಧಸಿದ್ದಾರೆ.

    ಆರೋಪಿಗಳ ಪತ್ತೆಗೆ ಜಿಲ್ಲಾ ಪೊಲೀಸ್ ಇಲಾಖೆ ಮೂರು ಪ್ರತ್ಯೇಕ ತಂಡಗಳನ್ನು ರಚಿಸಿತ್ತು. ದೇವರಹಿಪ್ಪರಗಿ, ಆಲಮೇಲ, ಕಲಕೇರಿ ಠಾಣೆಗಳ ಪಿಎಸ್‍ಐ ಒಳಗೊಂಡ ಮೂರು ತಂಡಗಳು ಹಂತಕರಿಗಾಗಿ ಎರಡು ದನದಿಂದ ಹುಡುಕಾಟ ನಡೆಸುತ್ತಿದ್ದರು.

    ವಿಜಯಪುರದ ಲಾಡ್ಜ್, ಮಾರ್ಕೆಟ್, ದೇಗುಲಗಲ್ಲಿ ಆರೋಪಿಗಳಿಗಾಗಿ ದೇವರಹಿಪ್ಪರಗಿ ಪಿಎಸ್‍ಐ ರವಿ ಯಡವನ್ನವರ್ ಹುಡುಕಾಟ ನಡೆಸಿದರೆ, ಕಲಬುರಗಿ ಜಿಲ್ಲೆಯಲ್ಲಿ ಆಲಮೇಲ ಪಿಎಸ್‍ಐ ಸುರೇಶ ಗಡ್ಡಿ ತಂಡ ಬಲೆ ಬೀಸಿತ್ತು. ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ.