Tag: parents

  • ಗೃಹಿಣಿ ಸಾವು, ಪೋಷಕರಿಂದ ಕೊಲೆ ಆರೋಪ

    ಗೃಹಿಣಿ ಸಾವು, ಪೋಷಕರಿಂದ ಕೊಲೆ ಆರೋಪ

    ಚಿಕ್ಕಮಗಳೂರು: ಹೂವಿನಹಡಗಲಿ ಡಿಪೋದಲ್ಲಿ ಕೆಎಸ್‍ಆರ್ ಟಿಸಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಜಿಲ್ಲೆಯ ತರೀಕೆರೆ ತಾಲೂಕಿನ ಚೀರನಹಳ್ಳಿ ಮೂಲದ ಮಂಜುಳ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ಪೋಷಕರು ಕೊಲೆಯಾಗಿದೆ ಎಂದು ಆರೋಪಿಸಿದ್ದಾರೆ.

    ಮೃತ ಮಂಜುಳ ಮೂಲತಃ ದಾವಣಗೆರೆ ಜಿಲ್ಲೆ ಮಾಯಕೊಂಡ ನಿವಾಸಿ. ಎಂಟು ವರ್ಷಗಳ ಹಿಂದೆ ತರೀಕೆರೆ ತಾಲೂಕಿನ ಚೀರನಹಳ್ಳಿ ಪ್ರದೀಪ್ ಜೊತೆ ವಿವಾಹವಾಗಿತ್ತು. ಪ್ರದೀಪ್ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ, ಹೀಗಾಗಿ ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಮಹಿಳೆ ಪೋಷಕರು ಆರೋಪಿಸಿದ್ದಾರೆ.

    ದಂಪತಿಗೆ ಐದು ವರ್ಷದ ಹೆಣ್ಣು ಮಗು ಹಾಗೂ 3 ವರ್ಷದ ಗಂಡು ಮಗುವಿದೆ. ಮೈಕ್ರೋ ಫೈನಾನ್ಸ್‍ನಲ್ಲಿ ಕೆಲಸ ಮಾಡುತ್ತಿದ್ದ ಪ್ರದೀಪ್, ಎರಡು ವರ್ಷಗಳಿಂದ ಮನೆಯಲ್ಲೇ ಮಕ್ಕಳನ್ನ ನೋಡಿಕೊಂಡು ಇದ್ದ. ಹೂವಿನಹಡಗಲಿ ಡಿಪೋದಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಮಂಜುಳ ಪತಿ ಊರಿಗೆ ಬಂದಿದ್ದರು.

    ಪ್ರದೀಪ್ ಹಾಗೂ ಮಂಜುಳ ನಡುವೆ ಆಗಾಗ್ಗೇ ಜಗಳವಾಗಿ ಮನಸ್ಥಾಪ ಕೂಡ ಇತ್ತಂತೆ. ಊರಿಗೆ ಬಂದ ಮಂಜುಳಾಗೆ ಪತಿ ಪ್ರದೀಪ್ ಬಾಕಿ ಇದ್ದ ವರದಕ್ಷಿಣೆ ಹಣ ತರುವಂತೆ ಪೀಡಿಸುತ್ತಿದ್ದ. ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಮಂಜುಳ, ಕಳೆದ ರಾತ್ರಿ ವಿಷ ಕುಡಿದಿದ್ದಾಳೆ. ಬಳಿಕ ಪತಿ ಹಾಗೂ ಕುಟುಂಬಸ್ಥರು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಬಳಿಕ ಮಂಜುಳ ಪೋಷಕರಿಗೆ ಬೆಳಗ್ಗೆ ಆರು ಗಂಟೆಗೆ ತಿಳಿಸಿದ್ದಾರೆ. ಇದು ಮಂಜುಳ ಪೋಷಕರ ಅನುಮಾನಕ್ಕೆ ಕಾರಣವಾಗಿದೆ. ಪತಿ ಮನೆಯವರೇ ಹೊಡೆದು ಉಸಿರುಗಟ್ಟಿ ಸಾಯಿಸಿ ಬಾಯಿಗೆ ವಿಷ ಹಾಕಿ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ಮಂಜುಳಾ ಪೋಷಕರು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ ದೇಹದ ಮೇಲೆ ಗಾಯದ ಕಲೆಗಳಿವೆ. ವಿಷ ಕುಡಿದವರ ದೇಹದ ಬಣ್ಣ ಬದಲಾಗುತ್ತೆ. ಆದರೆ ಮಂಜುಳಾ ದೇಹ ಮಾಮೂಲಿಯಂತಿತ್ತು. ಆಕೆ ಆತ್ಮಹತ್ಯೆ ಮಾಡಿಕೊಂಡಿಲ್ಲ. ಕೊಲೆ ಮಾಡಿದ್ದಾರೆಂದು ಮೃತ ಮಂಜುಳ ಪೋಷಕರು ಆರೋಪಿಸಿದ್ದಾರೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

  • ನೆಲಮಂಗಲದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ವ್ಹೀಲಿಂಗ್ ಪುಂಡರ ಪುಂಡಾಟ

    ನೆಲಮಂಗಲದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ವ್ಹೀಲಿಂಗ್ ಪುಂಡರ ಪುಂಡಾಟ

    ಬೆಂಗಳೂರು: ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನೇ ದಿನೇ ಬೈಕ್‍ನಲ್ಲಿ ವ್ಹೀಲಿಂಗ್ ಮಾಡುವ ಪುಂಡರ ಹಾವಳಿ ಹೆಚ್ಚುತ್ತಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಶೋಕಿ ಜಾಸ್ತಿಯಾಗಿದೆ. ಇವರ ಭಯಾನಕ ಡೆಡ್ಲಿ ವ್ಹೀಲಿಂಗ್‍ಗೆ ವಾಹನ ಸವಾರರಿಗೆ ಆತಂಕ ಶುರುವಾಗಿದೆ.

    ಪ್ರತಿನಿತ್ಯ ರಾತ್ರಿಯಾಯ್ತು ಅಂದರೆ ಬೆಂಗಳೂರು ನಗರದಿಂದ ಬೈಕ್ ಹಾವಳಿ ಪುಂಡರು ಬರುತ್ತಾರೆ. ಈ ಪುಂಡರು ಒಂದೇ ಚಕ್ರದಲ್ಲಿ ಭಯಾನಕ ಡೆಡ್ಲಿ ವ್ಹೀಲಿಂಗ್ ಮಾಡುತ್ತಾರೆ.

    ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ಭಯಾನಕ ವೀಡಿಯೋವನ್ನ ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದು ಬೆಂಗಳೂರು ನಗರ ಹಾಗೂ ನೆಲಮಂಗಲ ಪೊಲೀಸರು ಈ ಹುಚ್ಚಾಟಕ್ಕೆ ಕಡಿವಾಣ ಹಾಕುವಂತೆ ಮನವಿ ಮಾಡಿದ್ದಾರೆ.

    ಈಗಾಗಲೇ ನೆಲಮಂಗಲ ಪೊಲೀಸರು, ಸಾಕಷ್ಟು ಡೆಡ್ಲಿ ವ್ಹೀಲಿಂಗ್ ಸವಾರರ ವಿರುದ್ಧ ಪ್ರಕರಣ ದಾಖಲಿಸಿದ್ದರೂ, ಬಂಧನಕ್ಕೆ ಒಳಗಾಗಿದ್ದರೂ ಸಹ ಪುಂಡರ ಹಾವಳಿ ನಿಲ್ಲುತ್ತಿಲ್ಲ. ಹೀಗಾಗಿ ಪೋಷಕರು ಸಹ ಮಕ್ಕಳ ಬಗ್ಗೆ ಜಾಗೃತಿ ವಹಿಸಿ ಕಡಿವಾಣ ಹಾಕಬೇಕಿದೆ.

  • ತರಗತಿಯಲ್ಲೇ ಕುಳಿತು ಕುಡಿದ ಶಿಕ್ಷಕನ ಅಮಾನತ್ತಿಗೆ ಪೋಷಕರ ಮಾಸ್ಟರ್ ಪ್ಲ್ಯಾನ್

    ತರಗತಿಯಲ್ಲೇ ಕುಳಿತು ಕುಡಿದ ಶಿಕ್ಷಕನ ಅಮಾನತ್ತಿಗೆ ಪೋಷಕರ ಮಾಸ್ಟರ್ ಪ್ಲ್ಯಾನ್

    ಹೈದರಾಬಾದ್: ತರಗತಿಯಲ್ಲಿ ಕುಳಿತು ಕುಡಿಯುತ್ತಾ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ಧಗಳಿಂದ ಬೈಯ್ಯುತ್ತಿದ್ದ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

    ಕೆ. ಕೋಟೇಶ್ವರ ರಾವ್ ಅಮಾನತು ಆಗಿರುವ ಶಿಕ್ಷಕ. ಈತ ಕೃಷ್ಣ ಜಿಲ್ಲೆಯ ಪಲಕ ಮಂಡಲ್ ಪ್ರದೇಶದವನಾಗಿದ್ದಾನೆ. ಶಾಲೆಯಲ್ಲಿ ಮದ್ಯ ಸೇವನೆಯನ್ನು ಮಾಡಿ ಅಮಾನತು ಆಗಿ ಕೆಲಸವನ್ನು ಕಳೆದುಕೊಂಡಿದ್ದಾನೆ.

    ಕೋಟೇಶ್ವರ ರಾವ್ ಶಿಕ್ಷಕರ ಕೊಠಡಿಯಲ್ಲಿ ಮದ್ಯದ ಬಾಟಲಿಗಳನ್ನು ಇಟ್ಟುಕೊಂಡಿದ್ದನಂತೆ. ಈ ಕುರಿತಾಗಿ ಕೇಳಿದರೆ ಮಕ್ಕಳಿಗೆ ಮಕ್ಕಳ ಪಾಲಕರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡುತ್ತಿದ್ದನಂತೆ. ಈ ಬಗ್ಗೆ ಪ್ರಶ್ನಿಸಿದ ಮಹಿಳೆಗೆ ಬಟ್ಟೆ ಬಿಚ್ಚು ಎಂದು ರಾವ್ ಹೇಳಿದ್ದನಂತೆ. ಈ ಶಿಕ್ಷಕ ಶಾಲೆಯಲ್ಲಿದ್ದರೆ ಮಕ್ಕಳ ಭವಿಷ್ಯ ಹಾಳಾಗುತ್ತದೆ ಎಂದು ನಿರ್ಧರಿಸಿದ ಪೋಷಕರು ರಾವ್ ಶಾಲೆಯಲ್ಲಿ ಕುಳಿತು ಕುಡಿಯುತ್ತಾ ಇರುವ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

    ಕೋಟೇಶ್ವರ ರಾವ್ ಶಾಲೆಯಲ್ಲಿ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ವೀಡಿಯೋವನ್ನು ಪೋಷಕರು ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಶಿಕ್ಷಣ ಇಲಾಖೆಗೆ ಈ ಕುರಿತಾಗಿ ದೂರು ನೀಡಲಾಗಿತ್ತು. ತಕ್ಷಣ ಎಚ್ಚೆತ್ತುಕೊಂಡ ಅಧಿಕಾರಿಗಳು ಶಿಕ್ಷಕನ ಅಮಾನತು ಮಾಡಿದ್ದಾರೆ.

  • ಯುವತಿ ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿರಬಹುದು : ಡಿಕೆ ಶಿವಕುಮಾರ್

    ಯುವತಿ ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿರಬಹುದು : ಡಿಕೆ ಶಿವಕುಮಾರ್

    – ನರೇಶ್ ಪರಿಚಯ, ಬೇಕಾದ ಹುಡುಗ

    ಬೆಂಗಳೂರು: ಮೊದಲ ಬಾರಿಗೆ ಸಿಡಿ ಬಿಡುಗಡೆಯಾದಾಗ ಯುವತಿ ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿರಬಹುದು. ಆದರೆ ಇಲ್ಲಿಯವಗೂ ಸಿಕ್ಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‍ ರವರು ಹೇಳಿದ್ದಾರೆ.

     

    ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವೆಲ್ಲರೂ ಸಾರ್ವಜನಿಕರ ಮಧ್ಯೆ ಇದ್ದೇವೆ. ನೊಂದವರ ಮಧ್ಯೆ ನಾವು, ನೀವು ಸೇತುವೆಯಾಗಿ ಕೆಲಸ ಮಾಡುತ್ತೇವೆ. ರಾಜಕಾರಣಿಯಾಗಿ ನೊಂದವರಿಗೆ, ಕಷ್ಟದಲ್ಲಿರುವವರಿಗೆ ಜನಸೇವೆ ಮಾಡುವುದು ನಮ್ಮ ಪ್ರವೃತ್ತಿ. ಹಾಗೆಯೇ ಆ ಹೆಣ್ಣು ಮಗಳು ನನ್ನನ್ನು ಭೇಟಿ ಮಾಡುವ ಪ್ರಯತ್ನ ಮಾಡಿದ್ದಾಳೆ. ನಾವು ಒಬ್ಬ ರಾಜಕಾರಣಿಯಾಗಿ ನೊಂದಂತವರಿಗೆ, ಸಮಸ್ಯೆಯಲ್ಲಿ ಸಿಲುಕಿದವರು ಪ್ರಾಮಾಣಿಕರಾಗಿದ್ದಾರೆ ಸಹಾಯ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಯುವತಿ ಪೋಷಕರ ರಕ್ಷಣೆ ಕುರಿತಂತೆ, ಸರ್ಕಾರದಲ್ಲಿ ಉತ್ತಮ ಅಧಿಕಾರಿಗಳಿದ್ದು, ಅವರು ಯುವತಿ ಪೋಷಕರಿಗೆ ರಕ್ಷಣೆ ನೀಡುತ್ತಾರೆ. ಸದ್ಯ ಯುವತಿ ಪೋಷಕರು ಬೇರೆಯವರ ರಕ್ಷಣೆಯಲ್ಲಿದ್ದಾರೆ ಎಂಬ ಬಗ್ಗೆ ನನಗೆ ತಿಳಿದಿಲ್ಲ. ಅದರ ಬಗ್ಗೆ ಎಲ್ಲ ನಾನು ಏಕೆ ಟ್ರ್ಯಾಕ್ ಮಾಡಲಿ, ನನ್ನ ಬಳಿ ಯಾರಾದರೂ ಬಂದರೆ ಖಂಡಿತ ರಕ್ಷಣೆ ಮಾಡುತ್ತೇನೆ ಎಂದರು.

    ನರೇಶ್‍ನನ್ನು ಭೇಟಿ ಮಾಡಿದ್ದು ನಿಜ, ಅವನು ನಮ್ಮೊಂದಿಗೆ ಕೆಲವು ವಿಚಾರಗಳನ್ನು ತಿಳಿಸಿದ್ದಾನೆ. ನರೇಶ್ ನನಗೆ ಬೇಕಾದವನು, ಮಾಧ್ಯಮದ ಹುಡುಗ ಎಂದು ಹೇಳಿದರು.

  • 13 ವರ್ಷದ ಬಾಲಕನನ್ನು ಮದುವೆಯಾದ ಟ್ಯೂಷನ್ ಟೀಚರ್!

    13 ವರ್ಷದ ಬಾಲಕನನ್ನು ಮದುವೆಯಾದ ಟ್ಯೂಷನ್ ಟೀಚರ್!

    ಚಂಡೀಗಢ: ವಿಜ್ಞಾನ ಹಾಗೂ ಆಧುನಿಕತೆ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ. ಆದರೂ ಜನ ಕೆಲವು ಮೂಢನಂಬಿಕೆಗಳಿಂದ ಹೊರಗೆ ಬಂದಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಮಾಂಗಲ್ಯ ದೋಷ ಹೊಂದಿದ್ದ ಟ್ಯೂಷನ್ ಟೀಚರ್ ತನ್ನ ಬಳಿ ಪಾಠ ಕಲಿಯಲು ಬರುತ್ತಿದ್ದ, 13 ವರ್ಷದ ಬಾಲಕನನ್ನು ವಿವಾಹವಾಗಿರುವ ಘಟನೆ ಪಂಜಾಬ್ ಜಲಂಧರ್‍ನ ಬಸ್ತಿ ಬಾವಾ ಖೇಲ್ ಪ್ರದೇಶದಲ್ಲಿ ನಡೆದಿದೆ. ಮಾಂಗಲ್ಯ ದೋಷ ಹೊಂದಿರುವುದರಿಂದ ಮಹಿಳೆಗೆ ಮದುವೆಯಾಗುತ್ತಿಲ್ಲ ಎಂದು ಆಕೆಯ ಪೋಷಕರು ಆತಂಕಗೊಂಡಿದ್ದರು.

    ಒಮ್ಮೆ ಕುಟುಂಬದ ಜ್ಯೋತಿಷಿಯೊಬ್ಬರು ಮಹಿಳೆ ಜಾತಕದಲ್ಲಿ ಮಾಂಗಲ್ಯ ದೋಷವಿರುವುದರಿಂದ ಅವಳು ಮೊದಲಿಗೆ ಅಪ್ರಾಪ್ತ ಹುಡುಗನೊಂದಿಗೆ ಸಾಂಕೇತಿಕವಾಗಿ ವಿವಾಹ ಮಾಡಬೇಕೆಂದು ಸಲಹೆ ನೀಡಿದ್ದರು. ಹೀಗಾಗಿ ಟ್ಯೂಷನ್ ಟೀಚರ್ ಬಾಲಕನ ಪೋಷಕರಿಗೆ ನಿಮ್ಮ ಮಗ ಒಂದು ವಾರ ಟ್ಯೂಷನ್‍ಗಾಗಿ ನಮ್ಮ ಮನೆಯಲ್ಲಿಯೇ ಇರಬೇಕಾಗುತ್ತದೆ ಎಂದು ಉಳಿಸಿಕೊಂಡಿದ್ದಾಳೆ. ಬಳಿಕ ಬಾಲಕನೊಂದಿಗೆ ಅಂತಿಮವಾಗಿ ವಿವಾಹವಾಗಿದ್ದಾಳೆ.

    ಬಳಿಕ ಮನೆಗೆ ಹಿಂದಿರುಗಿದ ಬಾಲಕ ತನ್ನ ಪೋಷಕರಿಗೆ ನಡೆದ ಘಟನೆಯನ್ನೆಲ್ಲಾ ವಿವರಿಸಿದ್ದಾನೆ. ಟೀಚರ್ ಮನೆಯವರು ಹಳದಿ- ಮೆಹಂದಿ ಕಾರ್ಯಕ್ರಮ ಮತ್ತು ‘ಸುಹಾಗ್ರಾತ್’ (ಮದುವೆಯ ರಾತ್ರಿ) ಹೀಗೆ ಮದುವೆಯ ಹಲವಾರು ವಿಧಿವಿಧಾನವನ್ನು ಬಲವಂತವಾಗಿ ಮಾಡಿದರು ಎಂದು ಆರೋಪಿಸಿದ್ದಾನೆ. ನಂತರ ಟೀಚರ್ ಕೈ ಬಳೆಗಳನ್ನು ಹೊಡೆದು ವಿಧವೆಯೆಂದು ಘೋಷಿಸಿ, ಸಂತಾಪ ಸಭೆಯನ್ನು ನಡೆಸಿದರು. ಜೊತೆಗೆ ಒಂದು ವಾರ ನನ್ನನ್ನು ಅವರ ಮನೆ ಕೆಲಸ ಮಾಡುವಂತೆ ಒತ್ತಾಯಿಸಿದರು ಎಂದು ಹೇಳಿದ್ದಾನೆ.

    ಇದರಿಂದ ಬಾಲಕನ ಪೋಷಕರು ಘಟನೆ ಬಗ್ಗೆ ವಿವರಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಸದ್ಯ ಈ ಕುರಿತಂತೆ ಬಸ್ತಿ ಬಾವಾ ಖೇಲ್ ಪೊಲೀಸ್ ಠಾಣೆಯ ಅಧಿಕಾರಿ ಗಗನ್‍ದೀಪ್ ಸಿಂಗ್, ಬಾಲಕನ ಪೋಷಕರು ಘಟನೆ ವಿಚಾರವಾಗಿ ದೂರು ದಾಖಲಿಸಿದ್ದು, ಎರಡು ಕಡೆಯವರು ಇದೀಗ ರಾಜಿಯಾಗಿ ದೂರು ಹಿಂಪಡೆದಿದ್ದಾರೆ ಎಂದು ತಿಳಿಸಿದರು.

  • ಕಾಲೇಜಿಗೆ ಹೋಗು ಎಂದ ಪೋಷಕರು- ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವತಿ

    ಕಾಲೇಜಿಗೆ ಹೋಗು ಎಂದ ಪೋಷಕರು- ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವತಿ

    ಚಾಮರಾಜನಗರ: ಕಾಲೇಜಿಗೆ ಹೋಗು ಎಂದು ಪೋಷಕರು ಬಲವಂತ ಮಾಡಿದ್ದಕ್ಕೆ ಮನನೊಂದ ಯುವತಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.

    ಕೊಳ್ಳೇಗಾಲದ ಮೇಗಲದೊಡ್ಡಿ ಗ್ರಾಮದ ಲೂರ್ಧಸ್ವಾಮಿ ಅವರ ಮಗಳು ದಿವ್ಯಾ(19) ಮೃತ ದುರ್ದೈವಿ. ಈಕೆ ಕಳೆದ ವರ್ಷ ಕೊರೊನಾ ಹಿನ್ನೆಲೆ ಲಾಕ್‍ಡೌನ್ ನಿಂದ ಕಾಲೇಜಿಗೆ ಹೋಗದೆ ಕೂಲಿ ಕೆಲಸ ಮಾಡಿಕೊಂಡಿದ್ದಳು. ಆದರೆ ಕಾಲೇಜು ಆರಂಭವಾದ ಬಳಿಕ ಓದಲು ಹೋಗು ಎಂದು ಪೋಷಕರು ಬಲವಂತ ಮಾಡಿ ಕಾಲೇಜಿಗೆ ಕಳುಹಿಸಿದ್ದರು. ಕಾಲೇಜಿಗೆ ಹೋಗಲು ಇಷ್ಟವಿಲ್ಲದ ಕಾರಣ ದಿವ್ಯಾ ಇಂದು ಕ್ರಿಮಿನಾಶಕವನ್ನು ಸೇವಿಸಿದ್ದಾಳೆ.

    ಕ್ರಿಮಿನಾಶಕ ಕುಡಿದು ನರಳುತ್ತಿದ್ದ ಮಗಳನ್ನು ನೋಡಿದ ಪೋಷಕರು, ತಕ್ಷಣ ಕೊಳ್ಳೇಗಾಲ ಉಪ ವಿಭಾಗ ಸರ್ಕಾರಿ ಆಸ್ಪತ್ರೆಗೆ ಕರೆ ತರುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ದೂರು ಕೊಟ್ಟು ಸಿಡಿ ಯುವತಿ ಪೋಷಕರು ನಾಪತ್ತೆ..!

    ದೂರು ಕೊಟ್ಟು ಸಿಡಿ ಯುವತಿ ಪೋಷಕರು ನಾಪತ್ತೆ..!

    ಬೆಳಗಾವಿ: ಮಾಜಿ ಸಚಿವರ ರಾಸಲೀಲೆ ಸಿಡಿ ಕೇಸ್ ದಿನದಿಂದ ದಿನಕ್ಕೆ ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ನಿನ್ನೆ ತಾನೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಸಿಡಿ ಯುವತಿ ಪೋಷಕರು ನಾಪತ್ತೆಯಾಗಿದ್ದಾರೆ.

    ಹೌದು. ಮಂಗಳವಾರ ರಾತ್ರಿ ದೂರು ಕೊಟ್ಟ ಬಳಿಕ ಪೋಷಕರು ನಾಪತ್ತೆಯಾಗಿದ್ದಾರೆ. ಇದಕ್ಕೂ ಮೊದಲು 2 ದಿನಗಳ ಹಿಂದೆಯೇ ಮನೆ ಮಾಲೀಕನಿಗೆ ಬಾಡಿಗೆ ನೀಡಿರುವ ಯುವತಿ ಪೋಷಕರು ಮನೆ ಖಾಲಿ ಮಾಡಿದ್ದಾರೆ.

    ನಿನ್ನೆ ಸಿಡಿಯಲ್ಲಿದ್ದ ಮಗಳು ಕಿಡ್ನಾಪ್ ಆಗಿದ್ದಾಳೆ ಎಂದು ಯುವತಿಯ ತಂದೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುವತಿಯ ತಂದೆ, ತಾಯಿ ಮತ್ತು ಇಬ್ಬರು ಸಹೋದರರು, ಓರ್ವ ವಕೀಲರೊಂದಿಗೆ ಆಗಮಿಸಿ ನಿನ್ನೆ ದೂರು ನೀಡಿದ್ದಾರೆ. ಆದರೆ ದೂರಿನ ಪ್ರತಿಯಲ್ಲಿ ನೀಡಿದ ವಿಳಾಸದಲ್ಲಿದ್ದ ಮನೆಯಿಂದ ಎರಡು ದಿನಗಳ ಹಿಂದೆಯೇ ಯುವತಿ ತಂದೆ ತೆರಳಿದ್ದಾರೆ.

    ಯುವತಿ ಕುಟುಂಬ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ವಾಸವಿತ್ತು. ಆದರೆ ನಿನ್ನೆ ದೂರು ನೀಡಿ ಕುಟುಂಬ ಅಜ್ಞಾತವಾಗಿದೆ. ಇತ್ತ ಪೋಷಕರ ದೂರಿನಂತೆ ಯುವತಿ ಕಿಡ್ನ್ಯಾಪ್ ಕೇಸ್ ತನಿಖೆ ನಡೆಸಲು ವಿಶೇಷ ತಂಡ ರಚನೆ ಮಾಡಲಾಗಿದೆ. ಎಪಿಎಂಸಿ ಠಾಣೆ ಸಿಪಿಐ ಜಾವೇದ್ ಮುಷಾಪುರಿ ನೇತೃತ್ವದಲ್ಲಿ ವಿಶೇಷ ತಂಡ ರಚನೆಯಾಗಿದ್ದು, ಯುವತಿ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಕೈಗೊಳ್ಳಲಿದ್ದಾರೆ.

    ಸದ್ಯ ಪೊಲೀಸರು ಅಪರಿಚಿತನ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದು, ಯುವತಿ ಪೋಷಕರಿಗೆ ಯಾರ ಮೇಲೆ ಸಂಶಯವಿದೆ ಎಂಬ ಬಗ್ಗೆ ವಿಚಾರಣೆ ನಡೆಸಲಿದ್ದಾರೆ. ಮಾರ್ಚ್ 2ರಂದು ರಾತ್ರಿ 12 ರಿಂದ 1 ಗಂಟೆ ಮಧ್ಯೆ ಮಗಳನ್ನು ಬೆಂಗಳೂರಿನ ಹಾಸ್ಟೆಲ್‍ನಿಂದ ಕಿಡ್ನಾಪ್ ಮಾಡಿದ್ದಾರೆ. ಅಕ್ರಮ ಬಂಧನದಲ್ಲಿಟ್ಟು ಹೆದರಿಸಿ ಅಶ್ಲೀಲ ಸಿಡಿ ಮಾಡಿ ಹರಿಬಿಟ್ಟ ಆರೋಪಿಸಿ ಯುವತಿ ತಂದೆ ದೂರಿನಲ್ಲಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಅಪರಿಚಿತರ ವಿರುದ್ಧ ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

  • ಪೋಷಕರು ಬೈದಿದ್ದಕ್ಕೆ ವಿಷ ಸೇವಿಸಿ ವಿದ್ಯಾರ್ಥಿ ಸಾವು

    ಪೋಷಕರು ಬೈದಿದ್ದಕ್ಕೆ ವಿಷ ಸೇವಿಸಿ ವಿದ್ಯಾರ್ಥಿ ಸಾವು

    ರಾಯಚೂರು: ಕಾಲೇಜಿಗೆ ಹೋಗುವಂತೆ ಪೋಷಕರು ಬೈದಿದ್ದಕ್ಕೆ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದಿದೆ.

    ಲಿಂಗಸುಗೂರು ತಾಲೂಕಿನ ಗುಂತಗೋಳ ಗ್ರಾಮದ ಮೊದಲ ವರ್ಷ ಬಿಎ ವಿದ್ಯಾರ್ಥಿ ಮಂಜುನಾಥ್ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ವಿಷಸೇವನೆ ಮಾಡಿ ಗ್ರಾಮದಿಂದ ತನ್ನ ವಸತಿ ನಿಲಯಕ್ಕೆ ಬಂದಿದ್ದ ವಿದ್ಯಾರ್ಥಿ ಮನೆಯಲ್ಲಿ ಜಗಳವಾಗಿದ್ದಕ್ಕೆ ವಿಷ ಸೇವಿಸಿರುವುದಾಗಿ ಸ್ನೇಹಿತರಿಗೆ ಹೇಳಿಕೊಂಡಿದ್ದಾನೆ. ಅಸ್ವಸ್ಥಗೊಂಡ ವಿದ್ಯಾರ್ಥಿಯನ್ನು ಸ್ನೇಹಿತರು ಕೂಡಲೇ ಲಿಂಗಸುಗೂರು ತಾಲೂಕಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ವಿದ್ಯಾರ್ಥಿಯನ್ನು ರಾಯಚೂರು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಆಸ್ಪತ್ರೆ ಮಾರ್ಗ ಮಧ್ಯದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

    ಲಿಂಗಸುಗೂರು ಪರಿಶಿಷ್ಟ ವರ್ಗಗಳ ವಸತಿನಿಲಯದಲ್ಲಿದ್ದ ವಿದ್ಯಾರ್ಥಿ, ಎಂಟತ್ತು ದಿನಗಳಿಂದ ತನ್ನ ಗ್ರಾಮದಲ್ಲೇ ಉಳಿದಿದ್ದ. ಕಾಲೇಜಿಗೆ ಹೋಗುವಂತೆ ಪೋಷಕರು ಬುದ್ಧಿ ಮಾತು ಹೇಳಿದ್ದಕ್ಕೆ ಜಗಳವಾಡಿ ಬಂದಿದ್ದ ಎಂದು ಮೃತನ ಸಂಬಂಧಿಕರು ತಿಳಿಸಿದ್ದಾರೆ. ಘಟನೆ ಹಿನ್ನೆಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರೇಮಿಗಳಿಬ್ಬರು ಶವವಾಗಿ ಪತ್ತೆ

    ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರೇಮಿಗಳಿಬ್ಬರು ಶವವಾಗಿ ಪತ್ತೆ

    ಹಾವೇರಿ: ಅನುಮಾನಾಸ್ಪದ ರೀತಿಯಲ್ಲಿ ಪ್ರೇಮಿಗಳಿಬ್ಬರ ಮೃತದೇಹ ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

    ಮೃತಪಟ್ಟವರನ್ನು ಪ್ರವೀಣ ಬಾಗಿಲದ(24) ಮತ್ತು ನೇತ್ರಾ ಬಾಳಿಕಾಯಿ(18) ಎಂದು ಗುರುತಿಸಲಾಗಿದೆ. ನೇತ್ರಾ ಮೂಲತಃ ಹಾವೇರಿ ತಾಲ್ಲೂಕು ಗೌರಾಪುರ ಗ್ರಾಮದ ನಿವಾಸಿಯಾಗಿದ್ದು, ಹಳೇರಿತ್ತಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ಎಸ್.ಎಸ್‍ಎಲ್.ಸಿ ವಿದ್ಯಾಭ್ಯಾಸ ಮಾಡಿದ್ದಳು. ಪ್ರವೀಣ ಹಾವೇರಿ ತಾಲ್ಲೂಕು ಹಳೇರಿತ್ತಿ ಗ್ರಾಮದ ಯುವಕನಾಗಿದ್ದು, ಕಳೆದ ನಾಲ್ಕು ದಿನಗಳ ಹಿಂದೆ ಪ್ರೇಮಿಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

    ಮೃತದೇಹಗಳ ಬಳಿ ಬೀಯರ್ ಬಾಟಲಿ, ವಿಷದ ಬಾಟಲಿ ಮತ್ತು ಚಾಕು ಪತ್ತೆಯಾಗಿದೆ. ಅಲ್ಲದೆ ಮೃತದೇಹಗಳಿಂದ ಇನ್ನೂರು ಮೀಟರ್ ಸಮೀಪದಲ್ಲಿ ಪ್ರವೀಣ ತಂದಿದ್ದ ಬೈಕ್ ನಿಂತಿತ್ತು.

    ಕಳೆದ ಗುರುವಾರ ಮಗಳು ಮನೆ ಬಿಟ್ಟು ಹೋಗಿದ್ದಾಳೆ. ನಾವು ಊರು ಹಾಗೂ ಸಂಬಂಧಿಕರ ಮನೆಂiÀಲ್ಲೆಲ್ಲ ಹುಡುಕಾಟ ನಡೆಸಿ ಕೊನೆಗೆ ಪೊಲೀಸರಿಗೆ ದೂರು ಕೊಟ್ಟಿದ್ದೇವೆ. ಆದರೆ ಈಗ ಮೃತದೇಹ ಪತ್ತೆಯಾಗಿದೆ. ಎರಡು ಕುಟುಂಬ ಸದಸ್ಯರು ಮಕ್ಕಳನ್ನ ನೆನೆದು ಕಣ್ಣೀರು ಹಾಕುತ್ತಿದ್ದಾರೆ.

    ಈ ಘಟನೆಯು ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗುತ್ತಲ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಯುವಕನ ಸಂಬಂಧಿಕರು ಸಾವಿನ ವಿಚಾರವಾಗಿ ಅನುಮಾನ ವ್ಯಕ್ತಪಡಿಸುತ್ತಿದ್ದು, ತನಿಖೆಯಾಗಬೇಕು ಆಗ್ರಹಿಸಿದ್ದಾರೆ.

  • ಕಾಣೆಯಾಗಿದ್ದ ಮಗು ಎದುರು ಮನೆಯ ಸಂಪಿನಲ್ಲಿ ಶವವಾಗಿ ಪತ್ತೆ

    ಕಾಣೆಯಾಗಿದ್ದ ಮಗು ಎದುರು ಮನೆಯ ಸಂಪಿನಲ್ಲಿ ಶವವಾಗಿ ಪತ್ತೆ

    – ಮುಗಿಲುಮುಟ್ಟಿದ ಪೋಷಕರ ಆಕ್ರಂದನ

    ಚಿಕ್ಕಬಳ್ಳಾಪುರ: ಕಾಣೆಯಾಗಿದ್ದ ಮಗು ಪಕ್ಕದ ಮನೆಯ ಸಂಪಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾಪಲ್ಲಿ ಗ್ರಾಮದಲ್ಲಿ ನಡೆದಿದೆ.

    ರುಚಿತಾ(2) ಮೃತ ಮಗು. ನರಸಿಂಹಮೂರ್ತಿ ರಾಧಿಕಾ ದಂಪತಿ ಮಗಳನ್ನು ಕಳೆದುಕೊಂಡು ಇದೀಗ ದುಃಖಿತರಾಗಿದ್ದಾರೆ. ಮಗು ಕಾಣೆಯಾಗಿದೆ ಎಂದು ದಂಪತಿ ತಿಳಿದಿದ್ದರು. ಆದರೆ ಇದೀಗ ಮಗುವಿನ ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ನಿನ್ನೆ ಬೆಳಗ್ಗೆ 10 ಗಂಟೆಯಿಂದಲೇ ಮಗು ಕಾಣೆಯಾಗಿತ್ತು. ಪೋಷಕರು ಗ್ರಾಮದಲ್ಲೆಲ್ಲಾ ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಇಂದು ಮಗು ನೆರೆಮನೆಯ ನ್ಯಾರಪ್ಪ ಎಂಬವರ ಸಂಪಿನಲ್ಲಿ ಶವವಾಗಿ ಪತ್ತೆಯಾಗಿದೆ.

    ಮಗು ಸಿಕ್ಕ ಸಂಪಿನಲ್ಲಿ ಮೊದಲು ನೋಡಿದಾಗ ಮಗು ಕಂಡಿಲ್ಲ. ಆದರೆ ಈಗ ನೋಡಿದರೆ ಮಗು ಶವ ಪತ್ತೆಯಾಗಿದೆ. ಸಂಪಿಗೆ ಬೃಹತ್ ಗಾತ್ರದ ಚಪ್ಪಡಿ ಕಲ್ಲು ಅಡ್ಡ ಇಡಲಾಗಿದೆ. ಅದನ್ನ ಮಗು ಎತ್ತಿ ಅದರೊಳಗೆ ಬೀಳಲು ಸಾಧ್ಯವೇ ಇಲ್ಲ ಎಂದು ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಮಗು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.