Tag: parents

  • ರಾಜ್ಯದಲ್ಲಿ ಹೊಸ ಟ್ರೆಂಡ್ ಶುರು – ಸರ್ಕಾರಿ ಶಾಲೆಗಳಿಗೆ ಡಿಮ್ಯಾಂಡಪ್ಪೋ, ಡಿಮ್ಯಾಂಡ್

    ರಾಜ್ಯದಲ್ಲಿ ಹೊಸ ಟ್ರೆಂಡ್ ಶುರು – ಸರ್ಕಾರಿ ಶಾಲೆಗಳಿಗೆ ಡಿಮ್ಯಾಂಡಪ್ಪೋ, ಡಿಮ್ಯಾಂಡ್

    – ಖಾಸಗಿ ಶಾಲೆಗೆ ಟಾಟಾ, ಸರ್ಕಾರಿ ಸ್ಕೂಲಲ್ಲಿ ಪಾಠ

    ಬೆಂಗಳೂರು: ರಾಜ್ಯದಲ್ಲಿ ಹೊಸ ಟ್ರೆಂಡ್ ಶುರುವಾಗಿದೆ. ಇದು ಹೊಸ ಫ್ಯಾಷನ್, ಹೊಸ ಟೆಕ್ನಾಲಜಿ ಟ್ರೆಂಡ್ ಅಲ್ಲ. ನೂತನ ಎಜುಕೇಷನ್ ಟ್ರೆಂಡ್ ಆರಂಭವಾಗಿದೆ. ಇದೇ ಮೊದಲಿಗೆ ಖಾಸಗಿ ಶಾಲೆಗಳು ಡಿಮ್ಯಾಂಡ್ ಇಳಿಸಿಕೊಂಡಿದ್ದು, ಸರ್ಕಾರಿ ಶಾಲೆಗಳಿಗೆ ಸಖತ್ ಬೇಡಿಕೆ ಶುರುವಾಗಿದೆ.

    ಹೌದು..ಗ್ರಾಮೀಣ ಅಲ್ಲ ಬೆಂಗಳೂರಲ್ಲೂ ಖಾಸಗಿ ಶಾಲೆಗಳಿಗೆ ಡಿಮ್ಯಾಂಡ್ ಕುಗ್ಗಿದೆ. ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರಿ ಶಾಲೆಗೆ ಹೆಚ್ಚಾಗಿ ಮಕ್ಕಳು ಆಗಮಿಸುತ್ತಿದ್ದಾರೆ. ತಾಲೂಕು, ಹೋಬಳಿ, ಗ್ರಾಮೀಣ ಭಾಗದಲ್ಲಿಯೂ ಹೆಚ್ಚಿನ ಮಕ್ಕಳು ಸರ್ಕಾರಿ ಶಾಲೆಗೆ ಸೇರಿಕೊಳ್ಳುತ್ತಿದ್ದಾರೆ. ಸರ್ಕಾರಿ ಶಾಲೆ ಅಂದರೆ ಸಾಕು ಮೂಗು ಮುರಿಯುತ್ತಿದ್ದವರೇ ಹೆಚ್ಚು. ಅಲ್ಲದೇ ಸರ್ಕಾರಿ ಶಾಲೆಗಂತೂ ನಮ್ಮ ಮಕ್ಕಳನ್ನು ಕಳಿಸಲ್ಲ ಎನ್ನುತ್ತಿದ್ದರು. ಆದರೆ ಈಗ ಪೋಷಕರು ತಮ್ಮ ಅಭಿಪ್ರಾಯವನ್ನೇ ಬದಲಾಯಿಸಿಕೊಂಡಿದ್ದಾರೆ.

    ಮಹಾಮಾರಿ ಕೊರೊನಾ ಪರಿಣಾಮದಿಂದ ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚಾಗಿದೆ. ಇದರಿಂದ ಖಾಸಗಿ ಶಾಲೆಯ ಫೀಸ್ ಕಟ್ಟಲಾಗದೇ ಪೋಷಕರ ಪರದಾಡುತ್ತಿದ್ದಾರೆ. ಜೊತೆಗೆ ಅನ್‍ಲೈನ್ ಕ್ಲಾಸ್ ಫೀ ಕಟ್ಟಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ದೂರದೂರಿಗೆ ಮಕ್ಕಳನ್ನು ಬಸ್ಸಿನಲ್ಲಿ ಕಳಿಸಲು ಪೋಷಕರು ಭಯ ಪಡುತ್ತಿದ್ದಾರೆ. ಇದರಿಂದ ಪೋಷಕರು ಸರ್ಕಾರಿ ಶಾಲೆಗಳ ಕಡೆ ಮುಖ ಮಾಡುತ್ತಿದ್ದು, ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸುತ್ತಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 914 ಸರ್ಕಾರಿ ಶಾಲೆ ಇವೆ. 914 ಸರ್ಕಾರಿ ಶಾಲೆ ಪೈಕಿ 350 ಶಾಲೆಗಳಲ್ಲಿ ದಾಖಲಾತಿ ಹೆಚ್ಚಳವಾಗಿದೆ. ಖಾಸಗಿ ಶಾಲೆ ಬಿಡಿಸಿ ಸರ್ಕಾರಿ ಶಾಲೆಗಳಿಗೆ ಪೋಷಕರು ಮೊರೆ ಹೋಗುತ್ತಿದ್ದಾರೆ. ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಅಡ್ಮಿಷನ್ ಹೆಚ್ಚಳವಾಗುವ ಮೂಲಕ ಸರ್ಕಾರಿ ಶಾಲೆಗಳಿಗೆ ಈಗ ಡಿಮ್ಯಾಂಡ ಶುರುವಾಗಿದೆ. ಜೊತೆಗೆ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಟಿಸಿಗಳಿಗೆ ಡಿಮ್ಯಾಂಡ್ ಶುರುವಾಗಿದೆ.

    ಹಾವೇರಿ ಜಿಲ್ಲೆಯಲ್ಲೂ ಸರ್ಕಾರಿ ಶಾಲೆಗಳಿಗೆ ಡಿಮ್ಯಾಂಡ್ ಶುರುವಾಗಿದೆ. ಸಾವಿರಾರು ಮಕ್ಕಳು ಖಾಸಗಿ ಶಾಲೆ ತೊರೆದಿದ್ದು, ಸರ್ಕಾರಿ ಶಾಲೆಗೆ ಸೇರಿಕೊಂಡಿದ್ದಾರೆ. 1ರಿಂದ 7ನೇ ಕ್ಲಾಸ್ ತರಗತಿಗಳಿಗೆ ದಾಖಲಾತಿ ಹೆಚ್ಚಳವಾಗಿದೆ. ನಮ್ಮ ಕೈಯಲ್ಲಿ ಖಾಸಗಿ ಶಾಲೆಗೆ ಶುಲ್ಕ ಕಟ್ಟಲು ಹಣ ಇಲ್ಲ. ಸಣ್ಣ ಮಕ್ಕಳನ್ನ ವಾಹನದಲ್ಲಿ ಕಳಿಸಲು ಭಯ ಆಗುತ್ತಿದೆ. ಸರ್ಕಾರಿ ಶಾಲಾ ಶಿಕ್ಷಕರಿಂದ ಉಚಿತ ಮತ್ತು ಮನೆ ಪಾಠ ಇದೆ. ಹೀಗಾಗಿ ನಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗೆ ಕಳುಹಿಸುತ್ತೀವಿ ಎಂದು ಪೋಷಕರ ಹೇಳುತ್ತಿದ್ದಾರೆ.

    ‘ಸರ್ಕಾರಿ’ ಶಾಲೆಗಳ ಒಲವಿಗೆ ಕಾರಣಗಳು
    * ಡೊನೇಷನ್ ಹಾವಳಿ ತಪ್ಪಿಸಿಕೊಳ್ಳಲು ಪರ್ಯಾಯ ಮಾರ್ಗ
    * ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ, ಬಿಸಿಯೂಟ ಸೇರಿ ಹಲವು ಸೌಲಭ್ಯ
    * ಕೊರೊನಾ ಭೀತಿ ದೂರಾಗಿಸಲು ಹತ್ತಿರದ ಸರ್ಕಾರಿ ಶಾಲೆಗೆ ಆದ್ಯತೆ
    * ಖಾಸಗಿ ಶಾಲಾ ವಾಹನ ಸೌಕರ್ಯಕ್ಕೆ ಹೆಚ್ಚುವರಿ ಶುಲ್ಕ ತೆರಬೇಕು
    * ಕೊರೊನಾದಿಂದಾಗಿ ಹಳ್ಳಿಗಳಿಗೆ ವಲಸೆ ಹೋದವರಿಂದ ಸರ್ಕಾರಿ ಶಾಲೆಗಳ ಮೊರೆ
    * ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಸಿಗುವ ಬಗ್ಗೆ ಮನವರಿಕೆ
    * ಆನ್‍ಲೈನ್ ಶಿಕ್ಷಣದ ಬಗ್ಗೆ ನಿರಾಸಕ್ತಿ, ವಿದ್ಯಾಗಮ ಯೋಜನೆ ಬಗ್ಗೆ ಕುತೂಹಲ

  • ಅಂತರ್ಜಾತಿ ಯುವಕನನ್ನ ಮದುವೆಯಾದ ಮಗಳು – ಮನನೊಂದ ಪೋಷಕರು ಆತ್ಮಹತ್ಮೆ

    ಅಂತರ್ಜಾತಿ ಯುವಕನನ್ನ ಮದುವೆಯಾದ ಮಗಳು – ಮನನೊಂದ ಪೋಷಕರು ಆತ್ಮಹತ್ಮೆ

    ಬೆಂಗಳೂರು: ಮಗಳು ಅಂತರ್ಜಾತಿ ವಿವಾಹವಾದ ಹಿನ್ನೆಲೆಯಲ್ಲಿ ಮನನೊಂದ ಅಪ್ಪ ಅಮ್ಮ ಮನೆ ಮುಂದಿನ ನೀರಿನ ಸಂಪ್‍ಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ನಡೆದಿದೆ.

    ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹಾರೋಕೇತನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಿವಲಿಂಗಪ್ಪ (51) ಮತ್ತು ಚಂದ್ರಕಲಾ (45) ಆತ್ಮಹತ್ಯೆಗೆ ಶರಣಾದ ದಂಪತಿ. ಪ್ರೀತಿಯಿಂದ ಬೆಳೆಸಿದ ಮಗಳು ಅಂತರ್ಜಾತಿ ವಿವಾಹವಾದ ಹಿನ್ನೆಲೆ ಮನನೊಂದ ಹೆತ್ತವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಮಗಳು ಗುರುವಾರ ಮತ್ತೊಂದು ಸಮುದಾಯದ ಹುಡುಗನನ್ನು ಪ್ರೀತಿಸಿ ಆತನ ಜೊತೆಯೇ ಮದುವೆಯಾಗಿ ಮನೆ ಬಿಟ್ಟು ಹೋಗಿದ್ದಳು. ಮದುವೆಯ ವಿಚಾರ ತಿಳಿದು ಮನನೊಂದ ದಂಪತಿ ಮನೆಯ ಮುಂದಿನ ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ ನಮ್ಮ ಸಾವಿಗೆ ನಾವೇ ಜವಾಬ್ದಾರರು ಎಂದು ಡೆತ್‍ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.

    ಮಾಹಿತಿ ತಿಳಿದು ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಬಂದು ಮೃತದೇಹಗಳನ್ನು ಸಂಪಿನಿಂದ ಹೊರತೆಗೆದು ನೆಲಮಂಗಲ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

  • ತಮನ್ನಾ ಪೋಷಕರಿಗೆ ಕೊರೊನಾ ಪಾಸಿಟಿವ್

    ತಮನ್ನಾ ಪೋಷಕರಿಗೆ ಕೊರೊನಾ ಪಾಸಿಟಿವ್

    ಮುಂಬೈ: ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರ ತಂದೆ ಮತ್ತು ತಾಯಿ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿದೆ.

    ಈ ವಿಚಾರವನ್ನು ಸ್ವತಃ ತಮನ್ನಾ ಅವರೇ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಜೊತೆಗೆ ಕೊರೊನಾ ಟೆಸ್ಟ್ ಗೆ ಅವರು ಕೂಡ ಒಳಗಾಗಿದ್ದು, ನನ್ನ ವರದಿ ನೆಗೆಟಿವ್ ಬಂದಿದೆ. ಆದರೆ ನನ್ನ ತಂದೆ ಸಂತೋಷ್ ಭಾಟಿಯಾ ಮತ್ತು ತಾಯಿ ರಜನಿ ಭಾಟಿಯಾ ಅವರ ವರದಿ ಪಾಸಿಟಿವ್ ಬಂದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಮನ್ನಾ ತಿಳಿಸಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ತಮನ್ನಾ, ಕಳೆದ ವಾರದಿಂದ ನನ್ನ ಪೋಷಕರಿಗೆ ಅಲ್ಪ ಪ್ರಮಾಣದ ಕೊರೊನಾ ಗುಣಲಕ್ಷಣಗಳು ಕಂಡು ಬಂದಿದ್ದವು. ಮುಂಜಾಗ್ರತ ಕ್ರಮವಾಗಿ ನಮ್ಮ ಮನೆಯವರೆಲ್ಲ ತಕ್ಷಣ ಕೊರೊನಾ ಟೆಸ್ಟ್‍ಗೆ ಒಳಗಾದೆವು. ಈಗ ತಾನೇ ವರದಿ ಬಂದಿದ್ದು, ನನ್ನ ಪೋಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸಂಬಂಧಪಟ್ಟ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ನಾವು ಐಸೊಲೇಷನ್‍ಗೆ ಒಳಗಾಗಿದ್ದೇವೆ ಎಂದು ತಮನ್ನಾ ಮಾಹಿತಿ ನೀಡಿದ್ದಾರೆ.

    ನಾನು ಮತ್ತು ನನ್ನ ಸಿಬ್ಬಂದಿ ಸೇರಿದಂತೆ ನಮ್ಮ ಮನೆಯ ಉಳಿದ ಎಲ್ಲ ಸದಸ್ಯರಿಗೂ ಕೊರೊನಾ ನೆಗೆಟಿವ್ ಬಂದಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಮ್ಮ ಪೋಷಕರು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಮನವಿ ಮಾಡುತ್ತೇನೆ. ನೀವು ಕೂಡ ನನ್ನ ಪೋಷಕರಿಗಾಗಿ ಪ್ರಾರ್ಥಿಸಿ ಎಂದು ತಮನ್ನಾ ಟ್ವೀಟ್ ಮೂಲಕ ಕೇಳಿಕೊಂಡಿದ್ದಾರೆ.

  • ಪತಿಯಿಂದ ಸೀಮೆಎಣ್ಣೆ ಬಾಟಲ್ ಕಿತ್ಕೊಂಡು ಪ್ರುತಿಗೆ ಸುರಿದು ಬೆಂಕಿ ಹಚ್ಚಿದ್ಲು – ಮಗಳ ಜೊತೆ ತಾಯಿಯೂ ಸಾವು

    ಪತಿಯಿಂದ ಸೀಮೆಎಣ್ಣೆ ಬಾಟಲ್ ಕಿತ್ಕೊಂಡು ಪ್ರುತಿಗೆ ಸುರಿದು ಬೆಂಕಿ ಹಚ್ಚಿದ್ಲು – ಮಗಳ ಜೊತೆ ತಾಯಿಯೂ ಸಾವು

    – ಕೈ ಮುಗಿದು ಮನವಿ ಮಾಡಿದರೂ ಕೇಳಿಲ್ಲ

    ಹೈದರಾಬಾದ್: ಬೇರೆ ಜಾತಿಯ ಹುಡುಗನನ್ನು ಮದುವೆಯಾಗಲು ಬಯಸಿದ್ದಕ್ಕಾಗಿ ತಾಯಿಯೊಬ್ಬಳು ತನ್ನ ಮಗಳಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಳೆ. ಆದರೆ ಅದೇ ಬೆಂಕಿ ತಾಯಿಗೂ ಹೊತ್ತಿಕೊಂಡಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ತೆಲಂಗಾಣದ ಶಡ್ನಗರದಲ್ಲಿ ನಡೆದಿದೆ.

    ಮೃತರನ್ನು ತಾಯಿ ಚಂದ್ರಕಲಾ ಮತ್ತು ಮಗಳು ಶ್ರಾವಂತಿ ಎಂದು ಗುರುತಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ತಾಯಿ ಮತ್ತು ಮಗಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಶಡ್ನಗರ ಪೊಲೀಸರು ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಚಂದ್ರಕಲಾ ಮತ್ತು ಶ್ರಾವಂತಿ ಇಬ್ಬರೂ ಶಡ್ನಗರ ನಿವಾಸಿಗಳು. ಮೃತ ಶ್ರಾವಂತಿ ಅದೇ ಪ್ರದೇಶದ ಹುಡುಗನನ್ನು ಪ್ರೀತಿಸುತ್ತಿದ್ದು, ಹುಡುಗ ಬೇರೆ ಜಾತಿಯವನಾಗಿದ್ದನು. ಇವರಿಬ್ಬರ ಪ್ರೀತಿ ವಿಚಾರ ಪೋಷಕರಿಗೆ ಗೊತ್ತಾಗಿದೆ. ನಂತರ ಪೋಷಕರು ಮಗಳು ಶ್ರಾವಂತಿಗೆ ಬೈದು ಬುದ್ಧಿ ಹೇಳಿದ್ದಾರೆ. ಆದರೂ ಶ್ರಾವಂತಿ ಕೇಳಲಿಲ್ಲ. ಪದೇ ಪದೇ ಇದೇ ವಿಚಾರಕ್ಕೆ ಮಗಳು ಮತ್ತು ಪೋಷಕರ ನಡುವೆ ಅನೇಕ ಬಾರಿ ಜಗಳ ನಡೆಯುತ್ತಿತ್ತು.

    ಇತ್ತೀಚೆಗೆ ತಾಯಿ ಚಂದ್ರಕಲಾ, ಮಗಳು ಶ್ರಾವಂತಿ ಜೊತೆ ಮತ್ತೆ ಜಗಳ ಮಾಡಿದ್ದಾಳೆ. ಆತನಿಂದ ದೂರವಿರು ಎಂದು ಎಚ್ಚರಿಕೆ ನೀಡಿದಳು. ಅದೇ ಸಮಯಕ್ಕೆ ತಂದೆ ಮನೆಗೆ ಬಂದು ಮಗಳ ಮೇಲೆ ಕೋಪ ಮಾಡಿಕೊಂಡು ಬೈದಿದ್ದನು. ಆದರೂ ಶ್ರಾವಂತಿ ಈ ಮದುವೆಗೆ ಒಪ್ಪಿಕೊಳ್ಳುವಂತೆ ಪೋಷಕರ ಬಳಿ ಕೈ ಮುಗಿದು ಮನವಿ ಮಾಡಿಕೊಂಡಳು. ಇದರಿಂದ ಆಕ್ರೋಶಗೊಂಡ ತಂದೆ ಅವಳಿಗೆ ಸೀಮೆಎಣ್ಣೆ ಬಾಟಲ್ ಕೊಟ್ಟು ಪ್ರಿಯಕರನನ್ನು ಮರೆತು ಹೋಗು ಅಥವಾ ನೀನೇ ಸಾಯಿ ಎಂದು ಹೇಳಿದ್ದಾನೆ.

    ಈ ವೇಳೆ ಚಂದ್ರಕಲಾ ತನ್ನ ಪತಿಯಿಂದ ಸೀಮೆಎಣ್ಣೆಯನ್ನು ಕಿತ್ತುಕೊಂಡು ಮಗಳು ಶ್ರಾವಂತಿಯ ಮೇಲೆ ಸುರಿದು ಬೆಂಕಿ ಹಚ್ಚಿದ್ದಾಳೆ. ಆದರೆ ತಾಯಿಗೂ ಕೂಡ ಬೆಂಕಿ ಹೊತ್ತಿಕೊಂಡಿದ್ದು, ತಾಯಿ ಮತ್ತು ಮಗಳು ಶೇ.80ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದರು. ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸದ್ಯಕ್ಕೆ ಪೊಲೀಸರು ಈ ಕುರಿತು ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮಾಡುತ್ತಿದ್ದಾರೆ.

  • ನಮ್ಮ ಮಕ್ಕಳು ತಪ್ಪು ಮಾಡಿಲ್ಲ, ಬಿಟ್ಟುಬಿಡಿ – ಠಾಣೆ ಮುಂದೆ ಗಲಭೆಕೋರರ ಪೋಷಕರು ಕಣ್ಣೀರು

    ನಮ್ಮ ಮಕ್ಕಳು ತಪ್ಪು ಮಾಡಿಲ್ಲ, ಬಿಟ್ಟುಬಿಡಿ – ಠಾಣೆ ಮುಂದೆ ಗಲಭೆಕೋರರ ಪೋಷಕರು ಕಣ್ಣೀರು

    ಬೆಂಗಳೂರು: ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 300ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಡಿಜೆ ಹಳ್ಳಿ ಪೊಲೀಸ್ ಠಾಣೆ ಮುಂದೆ ಗಲಭೆಕೋರರ ಪೋಷಕರು ಜಮಾಯಿಸಿದ್ದಾರೆ.

    ಗಲಭೆ ಪ್ರಕರಣ ನಡೆದ ದಿನದಿಂದ ಡಿಜೆ ಹಳ್ಳಿ ಪೊಲೀಸರು ಮಿಡ್‍ನೈಟ್ ಕಾರ್ಯಾಚರಣೆ ಮಾಡುವ ಮೂಲಕ ಪ್ರತಿದಿನ ಆರೋಪಿಗಳನ್ನು ಬಂಧಿಸುತ್ತಿದ್ದಾರೆ. ಶನಿವಾರ ರಾತ್ರಿಯೂ ಸುಮಾರು 57 ಮಂದಿ ಗಲಭೆಕೋರರನ್ನ ಬಂಧಿಸಿದ್ದಾರೆ. ಆದ್ದರಿಂದ ಗಲಭೆಕೋರರ ಪೋಷಕರು ಡಿಜೆ ಹಳ್ಳಿ ಪೊಲೀಸ್ ಠಾಣೆ ಮುಂದೆ ಬಂದು ಗಲಾಟೆ ಮಾಡಿದ್ದಾರೆ.

    ನಮ್ಮ ಮಕ್ಕಳು ಗಲಾಟೆ ನಡೆದ ದಿನ ಇರಲಿಲ್ಲ. ಕೆಲಸ ಮುಗಿಸಿ ಬಂದು ಮಕ್ಕಳು ಮಲಗಿದ್ದರು. ಆದರೆ ಪೊಲೀಸರು ಮಧ್ಯರಾತ್ರಿ ಬಂದು ಮಲಗಿದ್ದವರನ್ನು ಕರೆದುಕೊಂಡು ಬಂದಿದ್ದಾರೆ. ಅವರನ್ನು ನೋಡಲು, ಮಾತನಾಡಲು ಬಿಡುತ್ತಿಲ್ಲ. ನಮ್ಮ ಮಕ್ಕಳು ತಪ್ಪು ಮಾಡಿಲ್ಲ. ಅವರನ್ನ ಬಿಟ್ಟು ಬಿಡಿ ಎಂದು ಸ್ಟೇಷನ್ ಮುಂದೆ ಪೋಷಕರು ಕಣ್ಣೀರು ಹಾಕಿದ್ದಾರೆ.

    ಪೋಷಕರನ್ನ ಠಾಣೆ ಮುಂದೆ ಜಮಾಯಿಸದಂತೆ ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಗಲಭೆ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಇರುವ ಹಿನ್ನಲೆಯಲ್ಲಿ ಯಾವುದೇ ಗುಂಪು, ಜಮಾವಣೆ ಮಾಡದಂತೆ ಪೋಷಕರನ್ನ ವಾಪಸ್ ಕಳಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಪ್ರತಿ ದಿನ ಸ್ಟೇಷನ್ ಮುಂದೆ ಪೋಷಕರು ಬರುತ್ತಿದ್ದಾರೆ.

    ಇತ್ತ ಡಿಜೆ ಹಳ್ಳಿ ಪೊಲೀಸ್ ಠಾಣೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಡಿಜೆ ಹಳ್ಳಿ ಪೊಲೀಸರು ಗಲಭೆ ಆರೋಪಿಗಳನ್ನ ಬಂಧಿಸಿದ್ದರು. ಕೆಲವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಠಾಣೆ ಆವರಣ, ಒಳಗೆ, ಮುಂಭಾಗ ಸ್ಯಾನಿಟೈಸ್ ಮಾಡಲಾಗುತ್ತಿದೆ.

  • ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದ್ದು, ಸೆಪ್ಟೆಂಬರ್ 7ರಿಂದ 18ರ ವರೆಗೆ ಪರೀಕ್ಷೆ ನಡೆಯಲಿದೆ.

    ಪದವಿ ಪೂರ್ವ ಪರೀಕ್ಷಾ ಮಂಡಳಿ ಇಂದು ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎರಡು ಅವಧಿಯಲ್ಲಿ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ಹಾಗೂ ಮಧ್ಯಾಹ್ನ 2.15ರಿಂದ 5.30ರ ವರೆಗೆ ಪರೀಕ್ಷೆ ನಡೆಯಲಿವೆ. ಸೆಪ್ಟೆಂಬರ್ 7 ರಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಉರ್ದು, ಸಂಸ್ಕøತ, ಮಧ್ಯಾಹ್ನ 2.15ರಿಂದ 5.30ರ ವರೆಗೆ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್‍ನೆಸ್, ಹೋಮ್ ಸೈನ್, ಸೆ.8ರಂದು ಬೆಳಗ್ಗೆ ಇತಿಹಾಸ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ, ಸೆ.9ರಂದು ಬೆಳಗ್ಗೆ ಹಿಂದಿ, ಮಧ್ಯಾಹ್ನ ತಮಿಳು, ತೆಲುಗು, ಮಳಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್ ಪರೀಕ್ಷೆಗಳು ನಡೆಯಲಿವೆ.

    ಸೆ.10ರಂದು ಬೆಳಗ್ಗೆ ಇಂಗ್ಲಿಷ್, ಸೆ.11ರಂದು ಐಚ್ಛಿಕ ಕನ್ನಡ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಭೂಗರ್ಭಶಾಸ್ತ್ರ, ಸೆ.12ರಂದು ಬೆಳಗ್ಗೆ ಅರ್ಥಶಾಸ್ತ್ರ, ಭೌತಶಾಸ್ತ್ರ, ಸೆ.14ರಂದು ಬೆಳಗ್ಗೆ ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ರಸಾಯನ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಸೆ.15ರಂದು ಬೆಳಗ್ಗೆ ಕನ್ನಡ, ಸೆ.16ರಂದು ಬೆಳಗ್ಗೆ ರಾಜ್ಯಶಾಸ್ತ್ರ, ಬೇಸಿಕ್ ಮ್ಯಾಥ್ಸ್, ಸೆ.17ರಂದು ಬೆಳಗ್ಗೆ ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ಗಣಿತ, ಸೆ.18ರಂದು ಬೆಳಗ್ಗೆ ಭೂಗೋಳಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

  • ಓಡಿ ಹೋಗಿ ಮದ್ವೆಯಾದ ನಂತ್ರ ದೂರವಾದ ಜೋಡಿ – 6 ತಿಂಗಳಲ್ಲೇ ಯುವಕ ಶವವಾಗಿ ಪತ್ತೆ

    ಓಡಿ ಹೋಗಿ ಮದ್ವೆಯಾದ ನಂತ್ರ ದೂರವಾದ ಜೋಡಿ – 6 ತಿಂಗಳಲ್ಲೇ ಯುವಕ ಶವವಾಗಿ ಪತ್ತೆ

    – ಸಂಬಂಧಿ ಯುವತಿಯ ಜೊತೆ ಪ್ರೀತಿ, ವಿವಾಹ
    – ಭರವಸೆ ನೀಡಿ ದೂರ ಮಾಡಿದ್ದ ಹುಡುಗಿಯ ತಂದೆ

    ಚೆನ್ನೈ: ಹುಡುಗಿ ಮನೆಯವರ ವಿರುದ್ಧವಾಗಿ ಆರು ತಿಂಗಳ ಹಿಂದೆ ಓಡಿ ಹೋಗಿ ಮದುವೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ ತಮಿಳುನಾಡಿದ ಧರ್ಮಪುರಿ ಜಿಲ್ಲೆಯಲ್ಲಿ ನಡೆದಿದೆ.

    ವಿಜಿ (24) ಕೊಲೆಯಾಗಿರುವ ಯುವಕ. ಧರ್ಮಪುರಿ ಜಿಲ್ಲೆಯಲ್ಲಿ ಶನಿವಾರ ಈತನ ಮೃತದೇಹ ಪತ್ತೆಯಾಗಿದೆ. ಯುವಕನ ಕುತ್ತಿಗೆ ಮತ್ತು ತಲೆಯಲ್ಲಿ ಗಾಯದ ಗುರುತುಗಳು ಪತ್ತೆಯಾಗಿದೆ. ವಿಜಿ ಆರು ತಿಂಗಳ ಹಿಂದೆ ತನ್ನ ಸಂಬಂಧಿಯೇ ಆಗಿದ್ದ ಯುವತಿಯನ್ನು ಆಕೆಯ ಪೋಷಕರ ವಿರುದ್ಧವಾಗಿ ಮದುವೆಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಒಟ್ಟಾರ್ತಿನೈ ಮೂಲದ ವಿಜಿ ಅದೇ ಗ್ರಾಮದ ಸಂಬಂಧಿಯಾಗಿದ್ದ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ ಯುವತಿಯ ಕುಟುಂಬದವರು ಮೊದಲಿನಿಂದಲೂ ಇವರ ಸಂಬಂಧಕ್ಕೆ ವಿರುದ್ಧ ವ್ಯಕ್ತಪಡಿಸುತ್ತಿದ್ದರು. ಆದ್ದರಿಂದ ಆರು ತಿಂಗಳ ಹಿಂದೆ ಈ ಜೋಡಿ ಓಡಿ ಹೋಗಿದ್ದು, ಯುವತಿಯ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದರು. ವಿವಾಹವಾದ ನಂತರ ನವದಂಪತಿ ತಮ್ಮ ಗ್ರಾಮಕ್ಕೆ ಮರಳಿ ಹಿಂದಿರುಗಿದ್ದಾರೆ.

    ಯುವತಿಯ ತಂದೆ ಮುರಳಿ ರಾಜ್, ಇನ್ನು ಆರು ತಿಂಗಳಲ್ಲಿ ನಿಮ್ಮಿಬ್ಬರ ವಿವಾಹ ಕಾರ್ಯಕ್ರಮವನ್ನು ನಡೆಸುವುದಾಗಿ ವಿಜಿಗೆ ಭರವಸೆ ನೀಡಿದ್ದನು. ಅಲ್ಲಿಯವರೆಗೆ ಮಗಳು ನಮ್ಮ ಮನೆಯಲ್ಲಿಯೇ ಇರಲಿ. ಈ ವೇಳೆ ಅವಳು ಎಂಜಿನಿಯರಿಂಗ್ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಬೇಕು ಎಂದು ತಂದೆ ತಿಳಿಸಿದ್ದರು. ಆಗ ಇಬ್ಬರು ಇದಕ್ಕೆ ಸಮ್ಮತಿಸಿ ತಮ್ಮ ತಮ್ಮ ಮನೆಗಳಿಗೆ ಹೋಗಿದ್ದರು. ಇತ್ತೀಚೆಗೆ ಈ ಜೋಡಿ ಮತ್ತೊಮ್ಮೆ ತಮ್ಮ ವಿವಾಹದ ಬಗ್ಗೆ ಮಾತನಾಡಿದ್ದಾರೆ. ಆಗ ಮುರಳಿ ರಾಜ್ ಮುಂದಿನ ತಿಂಗಳು ವಿವಾಹವನ್ನು ನಡೆಸುವುದಾಗಿ ತಿಳಿಸಿದ್ದನು.

    ಈ ಮಧ್ಯೆ ಶನಿವಾರ ಒಟ್ಟಾರ್ತಿನೈನಿಂದ ಕೆಲವು ಕಿಲೋಮೀಟರ್ ದೂರದಲ್ಲಿರುವ ಕುಮ್ಮಣ್ಣೂರು ರಸ್ತೆಯ ಬಳಿ ಯುವಕನ ಮೃತದೇಹ ಬಿದ್ದಿರುವುದನ್ನು ಸ್ಥಳೀಯರು ನೋಡಿದ್ದಾರೆ. ತಕ್ಷಣ ಪರಹನ್ಪಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

    ವಿಜಿಯ ಮೃತದೇಹವನ್ನು ಕುಮ್ಮಣ್ಣೂರಿನಲ್ಲಿ ಪತ್ತೆ ಮಾಡಲಾಗಿದೆ. ಯುವಕನ ಕುತ್ತಿಗೆಯಲ್ಲಿ ಹಗ್ಗದ ಗುರುತು ಇರುವುದು ಪತ್ತೆಯಾಗಿದೆ. ಅಲ್ಲದೇ ಆತನ ತಲೆಯ ಹಿಂಭಾಗದಲ್ಲಿ ತೀವ್ರವಾಗಿ ಗಾಯವಾಗಿದೆ. ಯುವತಿಯ ತಂದೆ ತಮ್ಮ ಮಗನನ್ನು ಕೊಲೆ ಮಾಡಿದ್ದಾನೆ ಎಂದು ವಿಜಿಯ ಕುಟುಂಬದವರು ಆರೋಪಿಸಿದ್ದಾರೆ. ಆದ್ದರಿಂದ ವಿಜಿಯ ತಂದೆ ಮುರಳಿ ರಾಜ್ ವಿರುದ್ಧ ದೂರು ನೀಡಿದ್ದಾರೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ವಿಶ್ವನಾಥನ್ ತಿಳಿಸಿದ್ದಾರೆ.

    ಸದ್ಯಕ್ಕೆ ಈ ಕುರಿತು ಐಪಿಸಿ ಸೆಕ್ಷನ್ ಅಡಿಯಲ್ಲಿ ಪೊಲೀಸರು ಪರಹನ್ಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇತ್ತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

  • ಹೆಗಲ ಮೇಲೆ ಆಕ್ಸಿಜನ್ ಸಿಲಿಂಡರ್, ಟ್ರೇಯಲ್ಲಿ ಕಂದಮ್ಮ- ಬದುಕುಳಿಯಲಿಲ್ಲ ಮಗು

    ಹೆಗಲ ಮೇಲೆ ಆಕ್ಸಿಜನ್ ಸಿಲಿಂಡರ್, ಟ್ರೇಯಲ್ಲಿ ಕಂದಮ್ಮ- ಬದುಕುಳಿಯಲಿಲ್ಲ ಮಗು

    -ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಕ್ಷೇತ್ರದಲ್ಲಿ ಅಮಾನವೀಯ ಘಟನೆ

    ಪಾಟ್ನಾ: ಬಿಹಾರದ ಆರೋಗ್ಯ ವ್ಯವಸ್ಥೆಯನ್ನು ತೋರಿಸುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫೋಟೋದಲ್ಲಿ ತಂದೆ ಹೆಗಲ ಮೇಲೆ ಆಕ್ಸಿಜನ್ ಸಿಲಿಂಡರ್ ಹೊತ್ತುಕೊಂಡಿದ್ರೆ, ತಾಯಿ ಟ್ರೇಯಲ್ಲಿ ನವಜಾತ ಶಿಶುವನ್ನು ಹಿಡಿದುಕೊಂಡಿದ್ದಾರೆ. ಕೇಂದ್ರ ರಾಜ್ಯ ಆರೋಗ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಕ್ಷೇತ್ರದಲ್ಲಿಯೇ ಘಟನೆ ನಡೆದಿದೆ.

    ಜುಲೈ 23ರಂದು ಈ ಘಟನೆ ನಡೆದಿದೆ. ರಾಜಪುರದ ಸುಖೌನಾ ಗ್ರಾಮದ ನಿವಾಸಿ ಸುಮನ್ ಕುಮಾರ್ ಗರ್ಭಿಣಿ ಪತ್ನಿಯನ್ನು ಬಕ್ಸರ್ ಸಾರ್ವಜನಿಕರ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಆಸ್ಪತ್ರೆ ಸಿಬ್ಬಂದಿ ಗರ್ಭಿಣಿಯನ್ನು ದಾಖಲಿಸಿಕೊಂಡಿಲ್ಲ. ಕೊನೆಗೆ ಸುಮನ್ ಕುಮಾರ್ ಪತ್ನಿಯನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು.

    ಸುಮನ್ ಪತ್ನಿಗೆ ಹೆರಿಗೆಯ ಬಳಿಕ ಮಗುವಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಖಾಸಗಿ ಆಸ್ಪತ್ರೆ ತಂದೆಯ ಹೆಗಲ ಮೇಲೆ ಆಕ್ಸಿಜನ್ ಸಿಲಿಂಡರ್ ಹೊರಿಸಿನ ಟ್ರೇಯಲ್ಲಿ ಮಗುವನ್ನು ಇರಿಸಿ ತಾಯಿಯ ಕೈಗೆ ಕೊಟ್ಟು ಹೊರಗೆ ಕಳುಹಿಸಿದ್ದಾರೆ. ಮಗುವಿಗೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಪೋಷಕರು ಆಕ್ಸಿಜನ್ ಸಿಲಿಂಡರ್ ಹೊತ್ತು ಆಸ್ಪತ್ರೆ ತಿರುಗಾಡಿದ್ದಾರೆ. ಕೊನೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡುವಷ್ಟರಲ್ಲಿ ಕಂದಮ್ಮನ ಪ್ರಾಣಪಕ್ಷಿ ಹಾರಿತ್ತು.

    ಫೋಟೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಗ್ಯ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

  • ಮನೆ ಮನೆಗೆ ತೆರಳಿ ಪಾಠದ ಜೊತೆ ಕೊರೊನಾ ಜಾಗೃತಿ ಮೂಡಿಸ್ತಿರೋ ಶಿಕ್ಷಕರು

    ಮನೆ ಮನೆಗೆ ತೆರಳಿ ಪಾಠದ ಜೊತೆ ಕೊರೊನಾ ಜಾಗೃತಿ ಮೂಡಿಸ್ತಿರೋ ಶಿಕ್ಷಕರು

    ರಾಯಚೂರು: ಕೋವಿಡ್ 19 ಅಟ್ಟಹಾಸದಿಂದ ಜನಜೀವನವೇ ಬದಲಾಗಿದೆ. ಶಾಲಾ ಕಾಲೇಜುಗಳು ಯಾವಾಗ ಆರಂಭವಾಗುತ್ತವೆ ಅನ್ನೋ ಸ್ಪಷ್ಟತೆ ಇನ್ನೂ ಮೂಡಿಲ್ಲ. ಹೀಗಾಗಿ ಮಕ್ಕಳ ಅಕ್ಷರಭ್ಯಾಸ ತಪ್ಪಬಾರದು ಅಂತ ಶಾಲೆಗೆ ಬೀಗ ಹಾಕಿದ್ರೂ ರಾಯಚೂರಿನ ಲಿಂಗಸುಗೂರಿನಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ಮನೆ ಬಾಗಿಲಿಗೆ ತೆರಳಿ ಪಾಠ ಮಾಡುತ್ತಿದ್ದಾರೆ.

    ತಾಲೂಕಿನ ಪುಟ್ಟಹಳ್ಳಿ ಕೆಸರಟ್ಟಿ ಗ್ರಾಮದ ಮುಖ್ಯೋಪಾಧ್ಯಾಯ ಚಂದ್ರಶೇಖರಪ್ಪ ಹಾಗೂ ಸಹ ಶಿಕ್ಷಕರು ಮಧ್ಯಾಹ್ನದವರೆಗೆ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಹೇಳುತ್ತಿದ್ದಾರೆ. ಹೋಂ ವರ್ಕ್ ಕೊಟ್ಟು ಮರುದಿನ ಬಂದು ಪರಿಶೀಲಿಸುತ್ತಿದ್ದಾರೆ. ಪಾಠದ ಜೊತೆಗೆ ಮಕ್ಕಳು ಹಾಗೂ ಪೋಷಕರಿಗೆ ಕೊರೊನಾ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.

    ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಪಾಠ ಮಾಡುತ್ತಾರೆ. ಮಕ್ಕಳಿಗೆ ನೀಡಿದ ಹೋಂ ವರ್ಕ್‍ನ್ನ ಮಾಡಿಸುವಂತೆ ಪೋಷಕರಿಗೆ ಸೂಚನೆ ನೀಡುತ್ತಿದ್ದಾರೆ. ಮಕ್ಕಳ ಶಿಕ್ಷಣದಲ್ಲಿ ಪೋಷಕರ ಪಾತ್ರ, ಗ್ರಾಮದ ಸ್ವಚ್ಛತೆ ಬಗ್ಗೆಯೂ ಅರಿವು ಮೂಡಿಸುತ್ತಿದ್ದಾರೆ. ಶಿಕ್ಷಕರ ನಡೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ‘ರಾತ್ರಿ ರಕ್ತ ತರುವಂತೆ ಹೇಳಿ ಬೆಳಗ್ಗೆ ಸಾವಿನ ಸುದ್ದಿ ತಿಳಿಸಿದ್ರು’- ವೈದ್ಯರ ವಿರುದ್ಧ ಕಿಡಿ

    ‘ರಾತ್ರಿ ರಕ್ತ ತರುವಂತೆ ಹೇಳಿ ಬೆಳಗ್ಗೆ ಸಾವಿನ ಸುದ್ದಿ ತಿಳಿಸಿದ್ರು’- ವೈದ್ಯರ ವಿರುದ್ಧ ಕಿಡಿ

    ವಿಜಯಪುರ: ಹೆರಿಗೆ ಸಮಯದಲ್ಲಿ ತಾಯಿ-ಮಗು ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ.

    ನಗರದ ಜಿಲ್ಲಾ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಹೆರಿಗೆಗೆಂದು ಕವಿತಾರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಗ ನಾರ್ಮಲ್ ಡೆಲಿವರಿಯಾಗುತ್ತೆ ಎಂದು ವೈದ್ಯರು ಹೇಳಿದ್ದಾರೆ.

    ತಡರಾತ್ರಿ ರಕ್ತ ತೆಗೆದುಕೊಂಡು ಬರಲು ವೈದ್ಯರು ಸೂಚಿಸಿದ್ದಾರೆ. ಆದರೆ ಬೆಳಗ್ಗೆ ಸಾವಿನ ವಿಚಾರವನ್ನೇ ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ವೈದ್ಯರ ನಿರ್ಲಕ್ಷ್ಯದಿಂದಲೇ ತಾಯಿ ಹಾಗೂ ಮಗುವಿನ ಸಾವಾಗಿದೆ ಎಂದು ಆರೋಪಿಸುತ್ತಿದ್ದಾರೆ.

    ಘಟನೆಯ ಬಳಿಕ ಜಿಲ್ಲಾ ಹೆರಿಗೆ ಆಸ್ಪತ್ರೆ ಎದುರು ಸಂಬಂಧಿಕರು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.