Tag: parents

  • ಮಗು ಜಾಸ್ತಿ ಅತ್ತಿದ್ದಕ್ಕೆ ಚಮಚದಿಂದ ಬರೆ ಹಾಕಿದ ಅಂಗನವಾಡಿ ಶಿಕ್ಷಕಿ

    ಮಗು ಜಾಸ್ತಿ ಅತ್ತಿದ್ದಕ್ಕೆ ಚಮಚದಿಂದ ಬರೆ ಹಾಕಿದ ಅಂಗನವಾಡಿ ಶಿಕ್ಷಕಿ

    ಬೆಳಗಾವಿ: ಮಗು ಜಾಸ್ತಿ ಅಳುತ್ತದೆ ಎನ್ನುವ ಒಂದೇ ಕಾರಣಕ್ಕೆ ಅಂಗನವಾಡಿ ಶಿಕ್ಷಕಿಯೊಬ್ಬಳು ಚಮಚದಿಂದ ಮೂರು ವರ್ಷದ ಮುಗುವಿಗೆ ಬರೆ ಹಾಕಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

    ಜಿಲ್ಲೆಯ ಗೋಕಾಕ್ ಪಟ್ಟಣದ ಮಲ್ದಾರ್ ಗ್ರಾಮದ ಅಂಗನವಾಡಿಯ ಶಿಕ್ಷಕಿ ರೇಣುಕಾ ಬರೆ ಹಾಕಿದ ಶಿಕ್ಷಕಿ. ಬಾಲಕ ಮೊಹಮ್ಮದ್ ಕಬೀರ್ ಅಂಗನವಾಡಿಯಲ್ಲಿ ಜೋರಾಗಿ ಅಳುತ್ತಿದ್ದ. ಈತನನ್ನು ಹೆದರಿಸುವ ಉದ್ದೇಶದಿಂದ ಚಮಚವನ್ನು ಬಿಸಿ ಮಾಡಿ ಕೈಗೆ ಬರೆ ಹಾಕಿದ್ದಾಳೆ.

    ಮಧ್ಯಾಹ್ನ ಮನೆಗೆ ಬಂದ ಮಗುವಿನ ಕೈ ಗಮನಿಸಿದ ಪೋಷಕರು ಗಾಬರಿಗೊಂಡು ಕೂಡಲೇ ಅಂಗನವಾಡಿಗೆ ಬಂದು ವಿಚಾರಿಸಿದಾಗ ಶಿಕ್ಷಕಿ ರೇಣುಕಾ ಕೃತ್ಯ ಬೆಳಕಿಗೆ ಬಂದಿದೆ. ನಂತರ ಮಗುವಿನ ಕೈಗೆ ತೀವ್ರ ಗಾಯವಾಗಿದ್ದರಿಂದ ಕೂಡಲೇ ಗೋಕಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಕೊಡಿಸಿದ್ದಾರೆ.

    ಶಿಕ್ಷಕಿ ರೇಣುಕಾಳ ಕೃತ್ಯಕ್ಕೆ ಪೋಷಕರು ಆಕ್ರೋಶಗೊಂಡಿದ್ದು ಇತ್ತ ಶಿಕ್ಷಕಿಯನ್ನು ಅಮಾನತು ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

  • ಜೈಲಿನಿಂದ್ಲೇ ಪೋಷಕರಿಗೆ ಪತ್ರ ಬರೆದ ವರ್ಷಿಣಿ

    ಜೈಲಿನಿಂದ್ಲೇ ಪೋಷಕರಿಗೆ ಪತ್ರ ಬರೆದ ವರ್ಷಿಣಿ

    ಬೆಂಗಳೂರು: ರೌಡಿಶೀಟರ್ ಲಕ್ಷ್ಮಣನ ಕೊಲೆ ಕೇಸಿನಲ್ಲಿ ಜೈಲು ಶಿಕ್ಷೆಯಲ್ಲಿರುವ ವರ್ಷಿಣಿ ತಮ್ಮ ತಂದೆ-ತಾಯಿಗೆ ಪತ್ರವೊಂದನ್ನು ಬರೆದಿದ್ದಾಳೆ.

    ವರ್ಷಿಣಿಗೆ ತಾನು ಮಾಡಿದ್ದ ತಪ್ಪಿನ ಬಗ್ಗೆ ಜ್ಞಾನೋದಯವಾದಂತಿದೆ. ಪತ್ರದಲ್ಲಿ ಪೋಷಕರಲ್ಲಿ ವರ್ಷಿಣಿ ಕ್ಷಮೆ ಕೇಳಿದ್ದಾಳೆ. ಜೂನ್ 4 ರಂದು ಆರೋಪಿ ವರ್ಷಿಣಿಯ ಹುಟ್ಟು ಹಬ್ಬವಿತ್ತು. ಅದೇ ದಿನ ವರ್ಷಿಣಿ ಜೈಲಿನಿಂದ ಪೋಷಕರಿಗೆ ಪತ್ರ ಬರೆದಿದ್ದಾಳೆ. ತನ್ನ ತಾಯಿ ಪದ್ಮ ಜೈಲಿಗೆ ಮಗಳನ್ನ ನೋಡಿಕೊಂಡು ಬರುವುದಕ್ಕೆ ಹೋದಾಗ ತಾಯಿ ಕೈಯಲ್ಲಿ ಪತ್ರ ಕಳಿಸಿಕೊಟ್ಟಿದ್ದಾಳೆ ಎನ್ನಲಾಗಿದೆ. ಇದನ್ನೂ ಓದಿ: ರೌಡಿ ಲಕ್ಷ್ಮಣ್ ಕೊಲೆ ಆರೋಪಿ ವರ್ಷಿಣಿ ಮೇಲೆ ಕೋಕಾ ಕಾಯ್ದೆ ಪ್ರಯೋಗ!

    ಪತ್ರದಲ್ಲಿ ಏನಿದೆ?
    ಐ ಲವ್ ಯೂ ಅಪ್ಪ, ಅಮ್ಮ Sorry..sorry.sorry… ಹಲೋ ಮಮ್ಮಿ ಡ್ಯಾಡಿ ಎಲ್ಲರೂ ಹೇಗಿದ್ದೀರಾ. ನನಗೆ ಜೈಲಿನಲ್ಲಿರುವುದಕ್ಕೆ ಹಿಂಸೆ ಆಗುತ್ತಿದೆ. ಅಮ್ಮ-ಅಪ್ಪ ನೀವೆಲ್ಲ ತುಂಬಾನೇ ಒಳ್ಳೆಯವರು, ನಾನು ಕೆಟ್ಟವಳು. ನಾನು ಕೆಟ್ಟ ಹುಡುಗಿ, ನನ್ನಿಂದ ನಿಮಗೆ ತುಂಬಾ ತೊಂದರೆಯಾಗಿದೆ. ನನ್ನನ್ನು ಜೈಲಿನಿಂದ ಹೊರಗಡೆ ಕರೆದುಕೊಂಡು ಹೋಗಿ. ಜೈಲಿನಲ್ಲಿ ಇರುವುದಕ್ಕೆ ರೋದನೆ ಆಗುತ್ತಿದೆ. ಈ ರೀತಿ ಮನಶಾಂತಿ ಬೇಕೆಂದು ಪೋಷಕರ ಬಳಿ ಆರೋಪಿ ವರ್ಷಿಣಿ ತನ್ನ ಅಳಲನ್ನ ತೋಡಿಕೊಂಡಿದ್ದಾಳೆ. ಇದನ್ನೂ ಓದಿ: ಕೊನೆಗೂ ರೌಡಿ ಲಕ್ಷ್ಮಣ್ ಕೊಲೆ ಹಿಂದಿನ ರಹಸ್ಯ ಬಯಲು – ಮೂರು ಕಾರಣಕ್ಕೆ ಹತ್ಯೆಯ ಸ್ಕೆಚ್

    ವರ್ಷಿಣಿ ವಿರುದ್ಧ ಪೊಲೀಸರು ಕೋಕಾ ಆ್ಯಕ್ಟ್ ಕೂಡ ಜಾರಿ ಮಾಡಿದ್ದಾರೆ. ಕೊಕಾ ಆ್ಯಕ್ಟ್ ಭೇದಿಸಿಕೊಂಡು ಹೊರಗಡೆ ಬರುವುದಕ್ಕೆ ಆರೋಪಿ ವರ್ಷಿಣಿಗೆ ವರ್ಷಗಳೇ ಕಳೆದು ಹೋಗುತ್ತದೆ. ಹಾಗಾಗಿ ವರ್ಷಿಣಿಗೆ ಲಕ್ಷ್ಮಣನ ಕೊಲೆ ಕೇಸ್ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದ್ದು, ಜೈಲಿನಿಂದ ಪತ್ರ ಬರೆದು ತನ್ನ ಅಳಲನ್ನ ತೋಡಿಕೊಂಡಿದ್ದಾಳೆ.

  • ಚಲಿಸುತ್ತಿದ್ದ ರೈಲು ನಿಲ್ಲಿಸಿ 4ರ ಬಾಲಕನ ಜೀವ ಉಳಿಸಿದ ಚಾಲಕ

    ಚಲಿಸುತ್ತಿದ್ದ ರೈಲು ನಿಲ್ಲಿಸಿ 4ರ ಬಾಲಕನ ಜೀವ ಉಳಿಸಿದ ಚಾಲಕ

    ಪಣಜಿ: ಚಲಿಸುತ್ತಿದ್ದ ರೈಲನ್ನು ನಿಲ್ಲಿಸಿ ಚಾಲಕರೊಬ್ಬರು ಹಳಿ ಮೇಲೆ ಬಂದ 4 ವರ್ಷದ ಬಾಲಕನ ಜೀವವನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

    ಗೋವಾದ ಬಲ್ಲಿ ಮತ್ತು ಮಾರ್ಗೋವಾ ರೈಲ್ವೇ ನಿಲ್ದಾಣದ ನಡುವೆ ಈ ಘಟನೆ ನಡೆದಿದೆ. ಸೋಮವಾರ ನಾಲ್ಕು ವರ್ಷದ ಬಾಲಕನೊಬ್ಬನು ರೈಲಿನ ಹಳಿ ಮೇಲೆ ಓಡಾಡುತ್ತಿದ್ದನು. ರೈಲು ಬರುತ್ತಿದ್ದರೂ ಏನು ಅರಿಯದೆ ಬಾಲಕ ಹಳಿಗಳ ಮೇಲೆ ಬಂದಿದ್ದಾನೆ. ಈ ವೇಳೆ ಪರ್ನೆಮ್-ಕಾರವಾರ ರೈಲಿನ ಚಾಲಕ ಸುರೇಶ್ ಬಾಲಕನ್ನು ದೂರದಿಂದಲೇ ಗಮನಿಸಿ ತಕ್ಷಣವೇ ರೈಲನ್ನು ನಿಲ್ಲಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಒಂದು ಪುಟ್ಟ ಜೀವ ಉಳಿದುಕೊಂಡಿದೆ.

    ರೈಲು ನಿಲ್ಲಿಸಿದ ಬಳಿಕ ಸ್ವಲ್ಪವೇ ಅಂತರದಲ್ಲಿದ್ದ ಮಗುವನ್ನು ಚಾಲಕ ಓಡಿ ಹೋಗಿ ರಕ್ಷಿಸಿದ್ದಾರೆ. ಬಳಿಕ ಚಾಲಕ ಬಲ್ಲಿ ರೈಲ್ವೇ ನಿಲ್ದಾಣದ ಸ್ಟೇಷನ್ ಮಾಸ್ಟರ್ ಬಳಿ ಮಗುವನ್ನು ಕೊಟ್ಟು, ಪೋಷಕರಿಗೆ ಒಪ್ಪಿಸುವಂತೆ ಹೇಳಿ, ನಂತರ ತಮ್ಮ ಕೆಲಸಕ್ಕೆ ಹಿಂತಿರುಗಿದ್ದಾರೆ.

    ಪೋಷಕರಿಂದ ತಪ್ಪಿಸಿಕೊಂಡಿದ್ದ ಈ ಮಗುವನ್ನು ರೈಲ್ವೇ ಅಧಿಕಾರಿಗಳು ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಪೊಲೀಸರು ವಿಚಾರಣೆ ನಡೆಸಿ ಮಗುವಿನ ಪೋಷಕರನ್ನು ಪತ್ತೆ ಹಚ್ಚಿದ್ದು, ಬಿಹಾರ್ ಮೂಲದವರಾದ ಮಗುವಿನ ಹೆತ್ತವರು ಬಲ್ಲಿಯಲ್ಲಿ ವಾಸವಾಗಿದ್ದಾರೆ ಎಂದು ವಿಚಾರಣೆ ಬಳಿಕ ತಿಳಿದುಬಂದಿದೆ. ಸದ್ಯ ಬಾಲಕನನ್ನು ಹೆತ್ತವರ ಮಡಿಲಿಗೆ ಪೊಲೀಸರು ಸುರಕ್ಷಿತವಾಗಿ ಸೇರಿಸಿದ್ದಾರೆ. ಹಾಗೆಯ ರೈಲು ಚಾಲಕನ ಕಾರ್ಯಕ್ಕೆ ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಪೋಷಕರಿಗೆ ಪತ್ರ ಬರೆದು, ಟಿಕ್‍ಟಾಕ್ ಗೆಳೆಯನ ಭೇಟಿಗೆ ಮನೆ ಬಿಟ್ಟ 14ರ ಪೋರಿ

    ಪೋಷಕರಿಗೆ ಪತ್ರ ಬರೆದು, ಟಿಕ್‍ಟಾಕ್ ಗೆಳೆಯನ ಭೇಟಿಗೆ ಮನೆ ಬಿಟ್ಟ 14ರ ಪೋರಿ

    ಮುಂಬೈ: ಟಿಕ್ ಟಾಕ್ ಇತ್ತೀಚಿನ ಕಾಲದಲ್ಲಿ ಯುವ ಪೀಳಿಗೆಯನ್ನು ತುಂಬಾ ಆಕರ್ಷಿಸುತ್ತಿದೆ. ಇದಕ್ಕೆ ಪೂರಕ ಎಂಬಂತೆ ಮುಂಬೈಯಲ್ಲಿ ಪೋಷಕರಿಗೆ ಪತ್ರ ಬರೆದಿಟ್ಟು 14 ವರ್ಷದ ಹುಡುಗಿಯೊಬ್ಬಳು ಟಿಕ್‍ಟಾಕ್ ಗೆಳೆಯನನ್ನು ಭೇಟಿ ಮಾಡಲು ಮನೆ ಬಿಟ್ಟುಹೋಗಿದ್ದಾಳೆ.

    ಪೋಷಕರಿಗೆ ನಾನು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಚಿಂತಿಸಬೇಡಿ ಎಂದು ಭಾವನಾತ್ಮಕ ಪತ್ರ ಬರೆದಿಟ್ಟು, ನೇಪಾಳ ಮೂಲದ 16 ವರ್ಷದ ರಿಯಾಜ್ ಅಫ್ರೀನ್ ನನ್ನು ಭೇಟಿ ಮಾಡಲು ಮನೆ ಬಿಟ್ಟು ಹೋಗಿದ್ದಾಳೆ.

    ಹುಡುಗಿ ಬರೆದ ಪತ್ರದಲ್ಲಿ “ಮಮ್ಮಿ ನಾನು ಮನೆ ಬಿಟ್ಟು ಹೋಗುತ್ತಿದ್ದೇನೆ. ನನಗೆ ಬಾಬಾ (ತಂದೆ) ಮೇಲೆ ತುಂಬಾ ಬೇಸರವಾಗಿದೆ. ನನ್ನ ಬಗ್ಗೆ ಜಾಸ್ತಿ ಯೋಚಿಸಬೇಡ. ಈ ಕಾರಣಕ್ಕೆ ನೀವು ಅತ್ಮಹತ್ಯೆ ಮಾಡಿಕೊಳ್ಳುವುದಿಲ್ಲ ಎಂದು ದೇವರ ಮೇಲೆ ಆಣೆ ಮಾಡಿ. ನಾನು ಯಾವುದೋ ಹುಡುಗ ಜೊತೆ ಮನೆ ಬಿಟ್ಟು ಹೋಗುತ್ತಿಲ್ಲ” ಎಂದು ಪತ್ರ ಬರೆದು ಮನೆ ಬಿಟ್ಟು ಹೋಗಿದ್ದಾಳೆ.

    ಈ ಪತ್ರವನ್ನು ನೋಡಿ ಭಯಗೊಂಡ ಪೋಷಕರು ತಕ್ಷಣ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಕೇವಲ ಎಂಟು ಗಂಟೆಯ ಒಳಗಡೆ ಹುಡುಗಿಯನ್ನು ಪತ್ತೆ ಮಾಡಿ ಪೋಷಕರಿಗೆ ಒಪ್ಪಿಸಿದ್ದಾರೆ.

    ಈ ಹುಡುಗಿ ಟಿಕ್ ಟಾಕ್‍ನಲ್ಲಿ ವಿಡಿಯೋ ಮಾಡುವ ಒಬ್ಬ ಹುಡುಗನ ಅಭಿಮಾನಿಯಾಗಿದ್ದು. ಆ ಹುಡುಗನ್ನು ಭೇಟಿ ಮಾಡಲು ನೇಪಾಳಕ್ಕೆ ಹೋಗುವ ಪ್ಲಾನ್ ಮಾಡಿದ್ದಳು ಎಂದು ಅವಳ ಸ್ನೇಹಿತೆ ಹೇಳಿದ ಮಾಹಿತಿ ಮೇರೆಗೆ ಪೊಲೀಸರು ಹುಡುಗಿಯನ್ನು ಪತ್ತೆ ಹಚ್ಚಿದ್ದಾರೆ.

    ಇದೇ ವೇಳೆ ಹುಡುಗಿಯನ್ನು ವಿಚಾರಣೆ ನಡೆಸಿದಾಗ, ಹುಡುಗರೊಂದಿಗೆ ಮಾತನಾಡಲು ಬಿಡದ ತಂದೆಯ ಮೇಲೆ ಇದ್ದ ಅಸಮಾಧಾನದಿಂದ ಮನೆಬಿಟ್ಟು ಹೋಗಿದ್ದೆ ಎಂದು ತಿಳಿಸಿದ್ದಾಳೆ.

  • ರಾಷ್ಟ್ರಮಟ್ಟದ ಈಜುಪಟು ಆತ್ಮಹತ್ಯೆಗೆ ಶರಣು

    ರಾಷ್ಟ್ರಮಟ್ಟದ ಈಜುಪಟು ಆತ್ಮಹತ್ಯೆಗೆ ಶರಣು

    ಪುಣೆ: ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಏಳು ಚಿನ್ನದ ಪದಕ ಗೆದ್ದಿದ್ದ 21 ವರ್ಷದ ಈಜುಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಣೆಯಲ್ಲಿ ನಡೆದಿದೆ.

    ಸಾಹಿಲ್ ಜೋಶಿ(21) ಅತ್ಮಹತ್ಯೆ ಮಾಡಿಕೊಂಡ ಈಜುಪಟು. ಕೋಥ್ರೂಡ್ ಪ್ರದೇಶದ ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಈ ಘಟನೆ ಶುಕ್ರವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಪೋಷಕರು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಸೀಲಿಂಗ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಹಿಲ್ ತಂದೆ ತನ್ನ ಮಗನಿಗೆ ಆಫೀಸ್‍ನಿಂದ ಕರೆ ಮಾಡಿದ್ದಾರೆ ಸಾಕಷ್ಟು ಬಾರಿ ಕರೆ ಮಾಡಿದರೂ ಸ್ವೀಕರಿಸದ ಹಿನ್ನೆಲೆಯಲ್ಲಿ ತಂದೆ ಮನೆಗೆ ಬಂದು ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

    ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಯಾವುದೇ ರೀತಿಯ ಡೆತ್ ನೋಟ್ ಸಿಕಿಲ್ಲ. ಯಾವುದೋ ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು. ಎಂಬಿಬಿಎಸ್ ಓದುತ್ತಿದ್ದ ಜೋಶಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಆದ್ದರಿಂದ ನಾವು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಜೋಶಿ ಅವರ ಕೋಚ್ ಮನೋಜ್ ಎರಾಂಡೆ, ಜೋಶಿ ಅತ್ಯಂತ ಪ್ರತಿಭಾವಂತ ಈಜುಗಾರನಾಗಿದ್ದ. ಅವನು ರಾಷ್ಟ್ರೀಯ ಮಟ್ಟದಲ್ಲಿ 9 ಸ್ಪರ್ಧೆಗಳಲ್ಲಿ ಭಾಗವಹಿಸಿ 7 ಚಿನ್ನದ ಪದಕ ಗೆದ್ದಿದ್ದಾನೆ. ಅವನ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ ಎಂದು ಹೇಳಿದ್ದಾರೆ.

  • ಜೈನ ಸನ್ಯಾಸಿನಿಯಾದ 12ರ ಬಾಲಕಿ

    ಜೈನ ಸನ್ಯಾಸಿನಿಯಾದ 12ರ ಬಾಲಕಿ

    -ಮಗಳ ನಿರ್ಧಾರಕ್ಕೆ ಹೆತ್ತವರ ಸಮ್ಮತಿ

    ಸೂರತ್: 12ರ ಬಾಲಕಿಯೊಬ್ಬಳು ಜೈನ ಸನ್ಯಾಸಿನಿಯಾಗಿ ದೀಕ್ಷೆ ಪಡೆಯಲು ಮುಂದಾಗಿದ್ದಾಳೆ. ಮಗಳ ಈ ನಿರ್ಧಾರಕ್ಕೆ ತಂದೆ-ತಾಯಿ ಕೂಡ ಬೆಂಬಲ ನೀಡಿರುವುದು ಸದ್ಯ ಎಲ್ಲರ ಗಮನ ಸೆಳೆದಿದೆ.

    ಸೂರತ್‍ನ 12 ವರ್ಷದ ಖುಷಿ ಶಾ ಜೈನ ಸನ್ಯಾಸಿನಿ ಆಗಲು ನಿರ್ಧರಿಸಿದ್ದಾಳೆ. ಖುಷಿ ಕುಟುಂಬದಲ್ಲಿ ಜೈನ ಸನ್ಯಾಸತ್ವ ಸ್ವೀಕರಿಸುತ್ತಿರುವುದು ಇವರೇ ಮೊದಲೇನಲ್ಲ. ಹೀಗಾಗಿ ಈ ಬಗ್ಗೆ ಬಾಲಕಿ ಮಾತನಾಡಿ, ನಾನು ಚಿಕ್ಕವಳಿದ್ದಾಗ ನಮ್ಮ ಕುಟುಂಬದ ನಾಲ್ವರು ಸನ್ಯಾಸತ್ವದ ಹಾದಿ ಹಿಡಿದಿದ್ದರು. ಸಿಮಂದರ್ ಸ್ವಾಮೀಜಿ ತಮ್ಮ ಎಂಟನೇ ವಯಸ್ಸಿನಲ್ಲಿ ಸನ್ಯಾಸತ್ವ ದೀಕ್ಷೆ ಸ್ವೀಕರಿಸಿದ್ದರು. ನಾನು 12ನೇ ವಯಸ್ಸಿನಲ್ಲಿ ದೀಕ್ಷೆ ಪಡೆಯುತ್ತೇನೆ ಎಂದು ಹೇಳಿದಳು.

    ಸರ್ಕಾರಿ ಉದ್ಯೋಗಿಯಾಗಿರುವ ಖುಷಿ ತಂದೆ ವಿನಿತ್ ಶಾ ಹಾಗೂ ತಾಯಿ ಮಗಳ ಈ ನಿರ್ಧಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ತಮ್ಮ ಮಗಳು ತನ್ನ ಆಂತರ್ಯದ ಬಗ್ಗೆ ತಿಳಿದುಕೊಂಡಿದ್ದಾಳೆ. ಇದು ಎಲ್ಲ ಮಕ್ಕಳಲ್ಲಿ ಬರುವುದಿಲ್ಲ. ನಮ್ಮ ಮಗಳ ಬಗ್ಗೆ ನಮಗೆ ಹೆಮ್ಮೆ ಇದೆ. ಆಕೆ ಸನ್ಯಾಸಿಯಾಗಿ ಲಕ್ಷಾಂತರ ಜನರ ಬದುಕಿನಲ್ಲಿ ಬೆಳಕು ತರಲಿ ಎಂದು ಮಗಳ ನಿರ್ಧಾರಕ್ಕೆ ತಂದೆ-ತಾಯಿ ಶುಭ ಹಾರೈಸಿದರು.

    ಕಳೆದ ವರ್ಷ ನವೆಂಬರ್‍ನಲ್ಲಿ ಆಕೆ 6ನೇ ತರಗತಿಯಲ್ಲಿ ಓದುತ್ತಿದ್ದಾಗಲೇ ಶಾಲೆ ಬಿಟ್ಟಿದ್ದಾಳೆ. 6ನೇ ತರಗತಿ ಪರೀಕ್ಷೆಯಲ್ಲಿ 97 ಅಂಕ ಪಡೆದಿದ್ದಳು. ಈಗಾಗಲೇ ಆಕೆ ಬರಿಗಾಲಲ್ಲಿ ಸಾವಿರಾರು ಕಿ.ಮೀ ಪ್ರವಾಸ ಮಾಡಿದ್ದಾಳೆ. ದೀಕ್ಷೆಯ ನಂತರ ಜೀವನವನ್ನು ಮತ್ತಷ್ಟು ಹತ್ತಿರದಿಂದ ನೋಡಲಿದ್ದಾಳೆ ಎಂದು ತಂದೆ ತಿಳಿಸಿದರು.

    ತಾಯಿ ಮಾತನಾಡಿ, ನಮ್ಮ ಮಗಳು ಡಾಕ್ಟರ್ ಆಗಬೇಕು ಎಂದು ನಾನು ಬಯಸಿದ್ದೆ. ಆದರೆ, ಅವಳ ನಿರ್ಧಾರಕ್ಕೆ ನಾವು ಆಕೆ ದೀಕ್ಷೆ ತೆಗೆದುಕೊಳ್ಳುವುದಕ್ಕೆ ಸಮ್ಮತಿಸಿದ್ದೇವೆ. ಆಕೆಯ ಆಸೆಯನ್ನು ಪೂರೈಸುವುದು ನಮ್ಮ ಕರ್ತವ್ಯ. ಆಕೆಯ ನಿರ್ಧಾರದಿಂದ ನಮಗೆ ಹೆಮ್ಮೆ ಇದೆ ಎಂದು ಮಗಳ ನಡೆಗೆ ಬೆಂಬಲಿಸಿದರು.

    ಜೈನ ಸನ್ಯಾಸತ್ವ ದೀಕ್ಷೆ ಸ್ವೀಕರಿಸುವುದು ಸಾಮಾನ್ಯವಲ್ಲ. ಅದು ಬರೀ ಪ್ರಕ್ರಿಯೆ ಮಾತ್ರವಲ್ಲ, ಕಠಿಣ ವ್ರತಗಳನ್ನು ನಿರ್ವಹಿಸಬೇಕಿರುತ್ತದೆ. ದೀಕ್ಷೆ ನೀಡುವ ಸಮಯದಲ್ಲಿ ದೇಹದ ಮೇಲಿನ ವ್ಯಾಮೋಹ ಕಳೆದುಕೊಳ್ಳಲು ತಲೆ ಕೂದಲನ್ನು ಸಂಪೂರ್ಣವಾಗಿ ತೆಗೆಯಲಾಗುತ್ತದೆ. ಹೊಸ ಸನ್ಯಾಸಿಗಳು ಮಹಾವ್ರತ ಹೆಸರಿನ ಐದು ಪ್ರತಿಜ್ಞೆಗಳನ್ನು ಪಾಲಿಸಬೇಕಾಗಿರುತ್ತದೆ. ಇದರಲ್ಲಿ ಪ್ರತಿದಿನ ಕ್ರಿಯಾದಿಗಳು ಒಳಗೊಂಡಿರುತ್ತವೆ. ಹಾಗೆಯೇ ಎಂಟು ಸಿದ್ಧಾಂತಗಳನ್ನು (ಪ್ರವಚನ ಮಾತ್ರಕ್) ಅಭ್ಯಾಸ ಮಾಡಬೇಕು. ಜೊತೆಗೆ ಆರು ಕಡ್ಡಾಯ ಕ್ರಿಯೆಗಳನ್ನು (ಅವಸ್ಯಾಕ್) ಪಾಲಿಸಲೇಬೇಕು. ಈ ಎಲ್ಲಾ ಕಠಿಣ ವ್ರತ, ಸಿದ್ಧಾಂತ ಹಾಗೂ ಕ್ರಿಯೆಗಳನ್ನು ಪಾಲಿಸಿ ಜೈನ ಸನ್ಯಾಸಿನಿಯಾಗಲು ಖುಷಿ ಮುಂದಾಗಿದ್ದಾಳೆ.

  • ಪೋಷಕರನ್ನು ಕಳೆದುಕೊಂಡ ಪಿಯೋನ್‍ಗೆ ಶಾಲಾ ಸಿಬ್ಬಂದಿಯಿಂದ ಮದುವೆ

    ಪೋಷಕರನ್ನು ಕಳೆದುಕೊಂಡ ಪಿಯೋನ್‍ಗೆ ಶಾಲಾ ಸಿಬ್ಬಂದಿಯಿಂದ ಮದುವೆ

    ಮುಂಬೈ: ಪೋಷಕರನ್ನು ಕಳೆದುಕೊಂಡ ಪಿಯೋನ್‍ಗೆ ಶಾಲಾ ಸಿಬ್ಬಂದಿಯೇ ಮದುವೆ ಮಾಡಿಸುವ ಮೂಲಕ ಎಲ್ಲರಿಗೂ ಮಾದರಿ ಆಗಿದೆ.

    ಅಂಕುಶ್ ಶಾಲಾ ಆವರಣದಲ್ಲಿ ಪ್ರತಿಭಾ ಅಡ್ಗಾಲೆ ಅವರನ್ನು ಸರಳವಾಗಿ ಮದುವೆ ಆಗಿದ್ದಾರೆ. ಅಂಕುಶ್ ಬೋಸ್ಲೆ ಪುಣೆಯ ಎಸ್‍ವಿಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಎರಡು ವರ್ಷದಿಂದ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಶಾಲಾ ಸಿಬ್ಬಂದಿ ಹಣ ಸಂಗ್ರಹಿಸಿ ಅಂಕುಶ್ ಮದುವೆ ಮಾಡಿಸಿದ್ದಾರೆ.

    ನನ್ನ ತಾಯಿ ಕಳೆದ 8 ತಿಂಗಳ ಹಿಂದೆ ಬ್ಲಡ್ ಕ್ಯಾನ್ಸರ್ ನಿಂದ ಮೃತಪಟ್ಟಿದ್ದರು. ಅವರು ಸಾವನ್ನಪ್ಪುವ ಮೊದಲು ನನಗೆ ಮದುವೆ ಮಾಡಿಕೋ ಎಂದು ಹೇಳುತ್ತಿದ್ದರು. ನಾನು ಬಿಟ್ಟರೆ ನನ್ನ ಮಗನನ್ನು ನೋಡಿಕೊಳ್ಳಲು ಯಾರೂ ಇಲ್ಲ ಎಂದು ನನ್ನ ತಾಯಿ ಯೋಚಿಸುತ್ತಿದ್ದರು. ಆದರೆ ನನ್ನ ತಾಯಿಗೆ ಚಿಕಿತ್ಸೆಗೆ ಖರ್ಚು ಮಾಡುತ್ತಿದ್ದರಿಂದ ಮದುವೆ ಆಗಲು ಸಾಧ್ಯವಾಗಲಿಲ್ಲ ಎಂದು ಅಂಕುಶ್ ಹೇಳಿದ್ದಾರೆ.

    ನನ್ನ ತಂದೆ ಐದು ವರ್ಷದ ಹಿಂದೆ ಮರಣ ಹೊಂದಿದ್ದರು. ನನಗೆ ಮೂವರು ಸಹೋದರಿಯರಿದ್ದು, ಮೂವರಿಗೂ ಈಗಾಗಲೇ ಮದುವೆ ಆಗಿದೆ. ನಾನು ಮದುವೆ ಆಗುತ್ತೇನೆ ಎಂದುಕೊಂಡಿರಲಿಲ್ಲ. ಆದರೆ ಈಗ ಶಾಲಾ ಸಿಬ್ಬಂದಿ ಹಾಗೂ ಶಿಕ್ಷಕರು ಹಣ ಸಂಗ್ರಹಿಸಿ ನನಗೆ ಮದುವೆ ಮಾಡಿಸಿದ್ದಾರೆ ಎಂದು ಅಂಕುಶ್ ತಿಳಿಸಿದ್ದಾರೆ.

    ಅಂಕುಶ್ ಮದುವೆಯಲ್ಲಿ 300ರಿಂದ 400ಕ್ಕೂ ಹೆಚ್ಚು ಅತಿಥಿಗಳು ಬಂದಿದ್ದು, ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ಮದುವೆಗೆ ಬಂದ ಅತಿಥಿಗಳಲ್ಲಿ ಶಾಲೆಯ ನಿವೃತ್ತ ಶಿಕ್ಷಕರು ಹಾಗೂ ಮಾಜಿ ಪ್ರಾಂಶುಪಾಲರು ಭಾಗಿಯಾಗಿದ್ದರು.

  • ಪ್ರೀತಿಸಿ ಮೋಸ ಮಾಡಿದ ಮಗ -ಮಗಳಂತೆ ಸಾಕಿ ಬೇರೆ ಹುಡ್ಗನಿಗೆ ಕನ್ಯಾದಾನ ಮಾಡಿದ ತಂದೆ

    ಪ್ರೀತಿಸಿ ಮೋಸ ಮಾಡಿದ ಮಗ -ಮಗಳಂತೆ ಸಾಕಿ ಬೇರೆ ಹುಡ್ಗನಿಗೆ ಕನ್ಯಾದಾನ ಮಾಡಿದ ತಂದೆ

    ತಿರವನಂತಪುರಂ: ಸಾಮಾನ್ಯವಾಗಿ ಮಗ ಪ್ರೀತಿಸಿ ಹುಡುಗಿಯನ್ನು ಮನೆಗೆ ಕರೆದುಕೊಂಡು ಬಂದರೆ ಪೋಷಕರು ವಿರೋಧಿಸುತ್ತಾರೆ. ಆದರೆ ಕೇರಳದ ಕೊಟ್ಟಯಂನಲ್ಲಿ ತಂದೆಯೊಬ್ಬರು ತಮ್ಮ ಮಗ ಪ್ರೀತಿಸಿ ಮೋಸ ಮಾಡಿದ್ದ ಯುವತಿಯನ್ನು ಮಗಳಂತೆ ಸಾಕಿದ್ದು, ಬೇರೆ ಹುಡುಗನೊಂದಿಗೆ ಮದುವೆ ಮಾಡಿಸಿರುವ ಅಪರೂಪದ ಘಟನೆ ನಡೆದಿದೆ.

    ಇಂತಹ ಅಪರೂಪದ ಘಟನೆಯ ಬಗ್ಗೆ ಸಂಧ್ಯಾ ಪಲ್ಲವಿ ಅವರು ಫೇಸ್‍ಬುಕ್‍ನಲ್ಲಿ ಬರೆದು ಪೋಸ್ಟ್ ಮಾಡಿದ್ದರು. ಇದೀಗ ಆ ಫೋಸ್ಟ್ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆದ ನಂತರ ಪೋಸ್ಟ್ ಡಿಲೀಟ್ ಮಾಡಿದ್ದಾರೆ.

    ಪೋಸ್ಟ್ ನಲ್ಲಿ ಏನಿತ್ತು?
    ಇಂದು ನಾನು ಸ್ನೇಹಿತರೊಬ್ಬರ ಒಂದು ವಿಶೇಷ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದೆ. ಈ ಮದುವೆ ಕೊಟ್ಟಯಂ ಜಿಲ್ಲೆಯ ತಿರುನಕ್ಕರ ಗ್ರಾಮದಲ್ಲಿ ನಡೆದಿದೆ. ಆದರೆ ಮಾಂಗಲ್ಯಧಾರಣೆ ವೇಳೆ ಕಣ್ಣೀರು ಬಂದಿತ್ತು ಎಂದು ಮೊದಲಿಗೆ ಹೇಳಿಕೊಂಡಿದ್ದಾರೆ.

    ತಿರುನಕ್ಕರ ನಿವಾಸಿ ಶಾಜಿ ಮತ್ತು ಅವರ ಪತ್ನಿ ಅತಿಥಿಗಳನ್ನು ಬರಮಾಡಿಕೊಳ್ಳುವ ಕಾರ್ಯದಲ್ಲಿ ಬ್ಯುಸಿಯಾಗಿದ್ದರು. ಆರು ವರ್ಷಗಳ ಹಿಂದೆ ಶಾಜಿ ಅವರ ಮಗ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಈ ವೇಳೆ ತನ್ನ ಸಹಪಾಠಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ನಂತರ ಇಬ್ಬರು ಮನೆಬಿಟ್ಟು ಓಡಿಹೋಗಿದ್ದರು. ಇತ್ತ ಮಗಳ ಕಾಣೆಯಾಗಿದ್ದಳು ಎಂದು ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಪೊಲೀಸರು ಅವರಿಬ್ಬರನ್ನು ಪತ್ತೆಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

    ಈ ವೇಳೆ ಹುಡುಗನ ಜೊತೆ ಓಡಿ ಹೋದ ಮಗಳು ನಮಗೆ ಬೇಡ ಎಂದು ಹುಡುಗಿಯನ್ನು ಆಕೆಯ ಪೋಷಕರು ಬಿಟ್ಟು ಹೋದರು. ಕೊನೆಗೆ ಮಕ್ಕಳಿಗೆ 18 ವರ್ಷ ತುಂಬಿದ ಮೇಲೆ ಮದುವೆ ಮಾಡುತ್ತೇವೆ ಎಂದು ಹುಡುಗನ ಪೋಷಕರು ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದರು.

    ತಂದೆ ಶಾಜಿ ಮಗನನ್ನು ಹಾಸ್ಟೆಲಿಗೆ ಸೇರಿಸಿ ವಿದ್ಯಾಭ್ಯಾಸವನ್ನು ಮುಂದುರಿಸಿದ್ದರು. ಇತ್ತ ಮಗ ಕರೆದುಕೊಂಡು ಬಂದ ಹುಡುಗಿಯನ್ನು ಮನೆಯಲ್ಲಿರಿಸಿ ಓದು ಮುಂದುವರಿಯುವಂತೆ ನೋಡಿಕೊಂಡಿದ್ದರು. ಈ ಮಧ್ಯೆ ಮಗ ಬೇರೊಂದು ಹುಡುಗಿಯನ್ನು ಪ್ರೀತಿ ಮಾಡಿದ್ದಾನೆ. ಅಷ್ಟೇ ಅಲ್ಲದೇ ಕಳೆದ ವರ್ಷ ಮಗ ಊರಿಗೆ ಮರಳಿ ಬರುವಾಗ ಬೇರೊಂದು ಹುಡುಗಿಯನ್ನು ಮದುವೆಯಾಗಿ ಬಂದಿದ್ದಾನೆ.

    ಪ್ರೀತಿಸಿದ್ದ ಹುಡುಗಿಗೆ ಮೋಸ ಮಾಡಿದ್ದಕ್ಕಾಗಿ ಮಗನನ್ನು ತಮ್ಮ ಕುಟುಂಬದಿಂದ ಹೊರಹೋಗುವಂತೆ ಹೇಳಿದ್ದಾರೆ. ಇತ್ತ ಆತನಿಗಾಗಿ ಕಾಯುತ್ತಿದ್ದ ಯುವತಿಗೆ ತನ್ನ ಮಗನಿಗೆ ಸೇರಬೇಕಿದ್ದ ಆಸ್ತಿಯನ್ನು ಆಕೆಯ ಹೆಸರಿಗೆ ಬರೆದಿದ್ದಾರೆ. ಅಷ್ಟೇ ಅಲ್ಲದೇ ಕರುನಾಗಪಳ್ಳಿ ನಿವಾಸಿ ಅಜಿತ್ ಜೊತೆ ಆ ಹುಡುಗಿಯ ಮದುವೆ ಮಾಡಿಸಿದ್ದಾರೆ. ತಂದೆ-ತಾಯಿ ಸ್ಥಾನದಲ್ಲಿ ನಿಂತು ಮಗಳಂತೆ ಸಾಕಿದ್ದ ಯುವತಿಯನ್ನು ತಿರುನಕ್ಕರ ದೇವಾಲಯದಲ್ಲಿ ಕನ್ಯಾದಾನ ಮಾಡಿಕೊಟ್ಟಿದ್ದಾರೆ.

    ಈ ದಂಪತಿಗೆ ಇನ್ನೊಬ್ಬ 8 ವರ್ಷದ ಮಗನಿದ್ದಾನೆ ಎಂದು ವಿಶೇಷ ಮದುವೆಯ ಸಂಪೂರ್ಣ ವಿವರವನ್ನು ಬರೆದಿದ್ದಾರೆ.

  • ಕುಡಿತ ಬಿಡಿಸಲು ಸೇರಿಸಿದ್ದ ಕೇಂದ್ರದಲ್ಲೇ ಯುವಕ ಸಾವು!

    ಕುಡಿತ ಬಿಡಿಸಲು ಸೇರಿಸಿದ್ದ ಕೇಂದ್ರದಲ್ಲೇ ಯುವಕ ಸಾವು!

    ಬೆಂಗಳೂರು: ಪುನರ್ವಸತಿ ಕೇಂದ್ರದಲ್ಲಿ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ನಡೆದಿದೆ.

    ಪ್ರೇಮ್(20) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಯುವಕ. ಪ್ರೇಮ್ ಪೋಷಕರು ಕುಡಿತ ಬಿಡಿಸಲು 25 ದಿನಗಳ ಹಿಂದೆ ಸುಂಕದಕಟ್ಟೆಯಲ್ಲಿರುವ ಪುನರ್ವಸತಿ ಕೇಂದ್ರಕ್ಕೆ ಸೇರಿಸಿದ್ದರು. ಆದರೆ ಶುಕ್ರವಾರ ಪ್ರೇಮ್ ಕೇಂದ್ರದಲ್ಲಿಯೇ ಸಾವನ್ನಪ್ಪಿದ್ದಾನೆ.

    ಮೃತ ಪ್ರೇಮ್ ಅಮೇಜಾನ್‍ನಲ್ಲಿ ಕೆಲಸ ಮಾಡುತ್ತಿದ್ದನು. ಆದರೆ ಪ್ರೇಮ್ ಕುಡಿತ ಹಾಗೂ ಗಾಂಜಾ ಚಟಕ್ಕೆ ಬಿದ್ದಿದ್ದನು. ಹೀಗಾಗಿ ಕುಡಿತ ಬಿಡಿಸಲು ಪೋಷಕರು ಸುಂಕದಕಟ್ಟೆಯಲ್ಲಿರುವ ಮದ್ಯಪಾನ, ಮಾದಕ ವ್ಯಸನಿಗಳ ಹಾಗೂ ಮನೋರೋಗ ಚಿಕಿತ್ಸಾ ಪುನರ್ವಸತಿ ಕೇಂದ್ರಕ್ಕೆ ಸೇರಿಸಿದ್ದರು.

    ಚಿಕಿತ್ಸೆ ವೇಳೆ ಪುನರ್ವಸತಿ ಕೇಂದ್ರದವರೇ ವಯರ್ ನಿಂದ ಪ್ರೇಮ್ ಕತ್ತು ಬಿಗಿದು ಕೊಲೆ ಮಾಡಿದ್ದಾರೆ. ನಮ್ಮ ಮಗನ ಕತ್ತಿನ ಮೇಲೆ ಗಾಯದ ಗುರುತುಗಳಿವೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಈ ಕುರಿತು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರೇಮ್ ಪೋಷಕರು ಪ್ರಕರಣ ದಾಖಲಿಸಿದ್ದಾರೆ.

  • ಪಾಕಿಸ್ತಾನದ ಒಂದೇ ಜಿಲ್ಲೆಯ 400ಕ್ಕೂ ಹೆಚ್ಚು ಮಕ್ಕಳಿಗೆ ಹೆಚ್‍ಐವಿ

    ಪಾಕಿಸ್ತಾನದ ಒಂದೇ ಜಿಲ್ಲೆಯ 400ಕ್ಕೂ ಹೆಚ್ಚು ಮಕ್ಕಳಿಗೆ ಹೆಚ್‍ಐವಿ

    ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹೆಚ್‍ಐವಿ ಹೆಚ್ಚಾಗುತ್ತಿದ್ದು ಒಂದೇ ಜಿಲ್ಲೆಯಲ್ಲಿ ಸುಮಾರು 400 ಕ್ಕೂ ಹೆಚ್ಚಿನ ಮಕ್ಕಳಲ್ಲಿ ಹೆಚ್‍ಐವಿ ಸೋಂಕು ಇರುವುದು ಪತ್ತೆಯಾಗಿದೆ.

    ಪಾಕಿಸ್ತಾನದ ಲರ್ಕಾನಾ ಜಿಲ್ಲೆಯ 400 ಕ್ಕೂ ಹೆಚ್ಚು ಮಕ್ಕಳಲ್ಲಿ ಹೆಚ್‍ಐವಿ ಪತ್ತೆಯಾಗಿದ್ದು ಪೋಷಕರಲ್ಲಿ ಭೀತಿ ಮೂಡಿಸಿದೆ. ಮಕ್ಕಳು ಜ್ವರಕ್ಕೆ ತುತ್ತಾದ ಕಾರಣ ಅವರನ್ನು ರಕ್ತ ಪರೀಕ್ಷೆಗೆ ಒಳಪಡಿಸಿದ್ದಾಗ ಈ ಆಘಾತಕಾರಿ ಸುದ್ದಿ ಬೆಳಕಿಗೆ ಬಂದಿದೆ.

    ಈ ಘಟನೆಗೆ ಕಾರಣ ಸ್ಥಳೀಯ ಡಾಕ್ಟರ್ ಮುಜಾಪ್ಫರ್ ಗಂಘಾರೋ ಎಂದು ಹೇಳಲಾಗಿದೆ. ಒಂದೇ ಬಾರಿ ಎಲ್ಲಾ ಮಕ್ಕಳಿಗೂ ಸೋಂಕು ಹರಡಲು ಆ ಜಿಲ್ಲೆಯ ವ್ಯಾಪ್ತಿಯಲ್ಲಿ ಬಳಸಲಾದ ಅವೈಜ್ಞಾನಿಕ ಸಿರಿಂಜ್‍ಗಳೇ ಕಾರಣ ಎಂದು ಪಾಕ್‍ನ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಅಲ್ಲಿನ ಮಕ್ಕಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಮುಜಾಪ್ಫರ್ ಗಂಘಾರೋ ಅವರು ಅಜಾಗರೂಕತೆಯಿಂದ ಸುಮಾರು 400 ಕ್ಕೂ ಹೆಚ್ಚು ಮಕ್ಕಳು ಹೆಚ್‍ಐವಿ ಸೋಂಕಿಗೆ ತುತ್ತಾಗಿದ್ದಾರೆ.

    ಲರ್ಕಾನಾ ಭಾಗದಲ್ಲಿ ಹೆಚ್‍ಐವಿ ಹೆಚ್ಚಾಗುತ್ತಿದೆ ಎಂದು ಅನುಮಾನಗೊಂಡ ಪಾಕಿಸ್ತಾನ ಹೆಚ್‍ಐವಿ ನಿಯಂತ್ರಣ ಸಂಸ್ಥೆ ಅಲ್ಲಿನ ಸುಮಾರು 13,800 ಜನರನ್ನು ಪರೀಕ್ಷೆ ಮಾಡಿದೆ. ಪರೀಕ್ಷೆಗೆ ಒಳಪಟ್ಟ ಅಷ್ಟೂ ಜನರಲ್ಲಿ 400 ಮಕ್ಕಳಿಗೆ ಮತ್ತು 100 ಮಂದಿ ವಯಸ್ಕರಿಗೆ ಹೆಚ್‍ಐವಿ ಇರುವುದು ತಿಳಿದು ಬಂದಿದೆ.

    ಈ ಘಟನೆ ಸಂಬಂಧ ಪಟ್ಟಂತೆ ವೈದ್ಯ ಮುಜಾಪ್ಫರ್ ಗಂಘಾರೋನನ್ನು ಪಾಕ್ ಪೊಲೀಸರು ಬಂಧಿಸಿದ್ದಾರೆ. ಈತ ಈ ಕೆಲಸವನ್ನು ಉದ್ದೇಶಪೂರ್ವಕವಾಗಿ ಮಾಡಿದ್ದಾನೋ ಇಲ್ಲವೋ ಇನ್ನೂ ತಿಳಿದುಬಂದಿಲ್ಲ. ಪಾಕಿಸ್ತಾನದಲ್ಲಿ ಹೆಚ್‍ಐವಿ ಹೆಚ್ಚಾಗುತ್ತಿದ್ದು ಏಷ್ಯಾ ಖಂಡದಲ್ಲೇ ಅತೀ ಹೆಚ್ಚು ವೇಗವಾಗಿ ಹೆಚ್‍ಐವಿ ಹಾರಡುತ್ತಿರುವ ದೇಶಗಳಲ್ಲಿ ಎರಡನೇ ಸ್ಥಾನದಲ್ಲಿದೆ.