Tag: Parima D’Souza

  • ‘ಪರಿಮಳಾ ಡಿಸೋಜಾ’ ಚಿತ್ರದ 2ನೇ ಹಾಡು ರಿಲೀಸ್ ಮಾಡಿದ ಜಿ.ಟಿ ದೇವೇಗೌಡ

    ‘ಪರಿಮಳಾ ಡಿಸೋಜಾ’ ಚಿತ್ರದ 2ನೇ ಹಾಡು ರಿಲೀಸ್ ಮಾಡಿದ ಜಿ.ಟಿ ದೇವೇಗೌಡ

    ‘ಪರಿಮಳಾ ಡಿಸೋಜಾ’ (Parima D’Souza) ಚಿತ್ರದ ಕಂದ ಕಂದ  ಎಂಬ ಹಾಡು (Song) ಸಾಂಸ್ಕೃತಿಕ ನಗರಿ ಮೈಸೂರಿನ ಡಿ ಆರ್ ಸಿ ಚಿತ್ರಮಂದಿರದಲ್ಲಿ ಬಿಡುಗಡೆಯಾಯಿತು. ವಿ.ನಾಗೇಂದ್ರಪ್ರಾಸಾದ್ (Nagendra Prasad) ಬರೆದಿರುವ ಈ ಹಾಡನ್ನು ಅನುರಾಧಾ ಭಟ್ (Anuradha Bhatt) ಸುಶ್ರಾವ್ಯವಾಗಿ ಹಾಡಿದ್ದಾರೆ. ಕ್ರಿಸ್ಟೋಫರ್ ಜೇಸನ್ ಸಂಗೀತ ನೀಡಿದ್ದಾರೆ.‌ ಇದೇ ಸಂದರ್ಭದಲ್ಲಿ ಚಿತ್ರತಂಡದಿಂದ ವಿಜೃಂಭಣೆಯಿಂದ ಪುನೀತ್ ರಾಜ್‌ಕುಮಾರ್ ಅವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಗಣ್ಯ ವ್ಯಕ್ತಿಗಳಿಗೆ  ಪುನೀತ್ ರಾಜಕುಮಾರ್ ಅವರ ಕಂಚಿನ ಪ್ರತಿಮೆಯನ್ನು  ಉಡುಗೊರೆಯಾಗಿ ನೀಡಲಾಯಿತು.

    ಚಾಮುಂಡೇಶ್ವರಿ ಕ್ಷೇತ್ರದ ಮಾನ್ಯ ಶಾಸಕರಾದ ಜಿ.ಟಿ ದೇವೇಗೌಡ  ಹಾಗೂ ಮೈಸೂರಿನ ತಹಶೀಲ್ದಾರರು ಹಾಗೂ ತಾಲ್ಲೂಕು ದಂಡಾಧಿಕಾರಿಗಳಾದ ಬಿ.ಎನ್ ಗಿರೀಶ್ ಖ್ಯಾತ ಕನ್ನಡ ಚಲನಚಿತ್ರ ತಾರೆ ಭವ್ಯ ಮುಂತಾದ ಗಣ್ಯರು ಸೇರಿ ಈ ಹಾಡು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹಿಂದೆ ಮೈಸೂರಿನ ಉಸ್ತುವಾರಿ ಮಂತ್ರಿಯಾಗಿದ್ದಾಗ, ಪುನೀತ್ ರಾಜ್‌ಕುಮಾರ್ ಮೈಸೂರಿನಲ್ಲಿ ಆಫೀಸ್ ಮಾಡಲು ನನ್ನನು ಭೇಟಿ ಆಗಿದ್ದರು. ಆಗ ಎಷ್ಟು ಹೇಳಿದರು ನಮ್ಮ ಮುಂದೆ ಕುಳಿತುಕೊಳ್ಳದೆ, ನಿಂತುಕೊಂಡೆ ಮಾತನಾಡಿದ್ದು, ಪುನೀತ್ ಅವರು ಹಿರಿಯರಿಗೆ ಕೊಡುತ್ತಿದ್ದ ಗೌರವಕ್ಕೆ ಸಾಕ್ಷಿ ಎಂದು

    ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡ ಅವರು ಪುನೀತ್ ರಾಜಕುಮಾರ್  ಅವರನ್ನು ನೆನಪಿಸಿಕೊಂಡರು.  ‘ಪರಿಮಳಾ ಡಿಸೋಜಾ’ ಚಿತ್ರಕ್ಕೂ ಶಾಸಕರು ಶುಭ ಕೋರಿದರು. ನಟಿ ಭವ್ಯ ಅವರು ಮಾತನಾಡಿ,  ಪುನೀತ್ ರಾಜ್‌ಕುಮಾರ್ ಅವರ ಜೊತೆ ಅಭಿನಯಿಸಿದ ದಿನಗಳನ್ನು ನೆನಪಿಸಿಕೊಂಡು ಭಾವುಕರಾದರು. ಆನಂತರ ‘ಪರಿಮಳಾ ಡಿಸೋಜಾ’ ಚಿತ್ರದ ತಮ್ಮ ಪಾತ್ರದ ಕುರಿತು ಮಾತನಾಡಿದರು.

    ಭವ್ಯ, ಶ್ರೀನಿವಾಸ್ ಪ್ರಭು, ಕೋಮಲ ಬನವಾಸೆ, ಪೂಜಾ ರಾಮಚಂದ್ರ, ಸುನೀಲ್ ಎ ಮೋಹಿತೆ, ವಿನೋದ್ ಶೇಷಾದ್ರಿ, ಶಿವಕುಮಾರ್ ಆರಾಧ್ಯ, ಮೀಸೆ ಆಂಜನಪ್ಪ, ಜಯರಾಮಣ್ಣ, ಜ್ಯೋತಿ ಮರೂರು, ಉಗ್ರಂ ರೆಡ್ಡಿ, ರೋಹಿಣಿ ಜಗನ್ನಾಥ್, ಚಂದನ ಶ್ರೀನಿವಾಸ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಅಮ್ಮನ ಮತ್ತೊಂದು  ಹಾಡಿಗೆ ದನಿಯಾದ ಜೋಗಿ ಪ್ರೇಮ್

    ಅಮ್ಮನ ಮತ್ತೊಂದು ಹಾಡಿಗೆ ದನಿಯಾದ ಜೋಗಿ ಪ್ರೇಮ್

    ಪ್ರಪಂಚದಲ್ಲಿ ಅಮ್ಮನ ಪ್ರೀತಿಗಿಂತ ಮಿಗಿಲಾದ ಪ್ರೀತಿ ಮತ್ತೊಂದಿಲ್ಲ. ಅಂತಹ ಅಮ್ಮ ಜೊತೆಗಿದ್ದರೆ ಧೈರ್ಯವೂ ಕೂಡ.  ಅದ್ಭುತ ವ್ಯಕ್ತಿತ್ವದ ಅಮ್ಮನ ಬಗ್ಗೆ “ಅಮ್ಮ ಎಂಬ ಹೆಸರೆ ಆತ್ಮ ಬಲ” ಎಂಬ  ಹಾಡನ್ನು ಪ್ರೇಮಕವಿ ಕೆ.ಕಲ್ಯಾಣ್ ಬರೆದಿದ್ದಾರೆ “ಪರಿಮಳ ಡಿಸೋಜಾ” (Parima D’Souza) ಚಿತ್ರಕ್ಕಾಗಿ. ಖ್ಯಾತ ನಿರ್ದೇಶಕ ಜೋಗಿ ಪ್ರೇಮ್ (Jogi Prem) ಈ ಗೀತೆಯನ್ನು ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಸಮಾರಂಭ ನಡೆಯಿತು. ಕೆ.ಕಲ್ಯಾಣ್, ನಟಿ ಭವ್ಯ, ಜಂಕಾರ್ ಮ್ಯೂಸಿಕ್ ಭರತ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    ನಮ್ಮ ಚಿತ್ರಕ್ಕಾಗಿ ಕೆ.ಕಲ್ಯಾಣ್ ಅಮ್ಮನ ಬಗ್ಗೆ ಒಳ್ಳೆಯ ಹಾಡು ಬರೆದಿದ್ದಾರೆ. ಅಷ್ಟೇ ಅದ್ಭುತವಾಗಿ ಜೋಗಿ ಪ್ರೇಮ್ ಹಾಡಿದ್ದಾರೆ. ಕ್ರಿಸ್ಟೋಫರ್ ಜೇಸನ್ ಸಂಗೀತ ನೀಡಿದ್ದಾರೆ. ಜಂಕಾರ್ ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಮರ್ಡರ್ ಮಿಸ್ಟರಿ ಜೊತೆಗೆ ಆಕ್ಷನ್, ಸೆಂಟಿಮೆಂಟ್ ಎಲ್ಲಾ ಅಂಶಗಳಿರುವ “ಪರಿಮಳ ಡಿಸೋಜಾ” ತೆರೆಗೆ ಬರಲು ಸಿದ್ದವಾಗಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಗಿರಿಧರ್ (Giridhar) ಹೆಚ್ ಟಿ. ಇದನ್ನೂ ಓದಿ: ಖ್ಯಾತ ತಮಿಳು ಹಾಸ್ಯ ನಟ ಮಯಿಲ್‌ಸಾಮಿ ಹಠಾತ್ ನಿಧನ

    ತಾಯಿ ಬಗ್ಗೆ ಹಾಡು ಬರೆಯಬೇಕೆಂದರೆ ಏನೋ ಒಂಥರ ಖುಷಿ. ಈ ಹಾಡನ್ನು ಶೀಘ್ರವಾಗಿ ಬರೆಯಬೇಕಿತ್ತು. ಆಗ ನಿರ್ಮಾಪಕರು ನನ್ನ ಅತ್ತಿಗೆಯ ಮೂಲಕ ಬೇಗ ಬರೆದುಕೊಡಲು ಹೇಳಿಸಿದರು. ಆಗ ನನಗೆ ತಿಳಿಯಿತು ನಿರ್ಮಾಪಕರು ನಮಗೆ ಬಳಗ ಎಂದು. ಅಮ್ಮನ ಹಾಡನ್ನು ಪ್ರೇಮ್ ಅವರು ಅಷ್ಟೇ ಅದ್ಭುತವಾಗಿ ಹಾಡಿದ್ದಾರೆ ಎಂದು ಪ್ರೇಮಕವಿ ಕಲ್ಯಾಣ್ ತಿಳಿಸಿದರು.  ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಾನು ಈ ಚಿತ್ರದಲ್ಲಿ ತಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ಹಾಡು ತುಂಬಾ ಚೆನ್ನಾಗಿದೆ. ಒಳ್ಳೆಯದಾಗಲಿ ಎಂದರು ಹಿರಿಯ ನಟಿ ಭವ್ಯ.  “ಪರಿಮಳ ಡಿಸೋಜಾ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಇಂದು ಅಮ್ಮನ ಹಾಡು ಲಿರಿಕಲ್ ವಿಡಿಯೋ ಬಿಡುಗಡೆಯಾಗಿದೆ. ಹಾಡು‌ ಬರೆದ ಕಲ್ಯಾಣ್ ಅವರಿಗೆ, ಸುಮಧುರವಾಗಿ ಹಾಡಿದ್ದ ಪ್ರೇಮ್ ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ ನಿರ್ಮಾಪಕ ವಿನೋದ್ ಶೇಷಾದ್ರಿ, ತಾವು ಈ ಚಿತ್ರದಲ್ಲಿ ನಟಿಸಿರುವುದಾಗಿ ಹೇಳಿದರು.

    ಸಂಗೀತ ನಿರ್ದೇಶಕ ಕ್ರಿಸ್ಟೋಫರ್ ಜೋಸನ್, ಛಾಯಾಗ್ರಾಹಕ ರಾಮು ಹಾಗೂ ಚಿತ್ರದಲ್ಲಿ ನಟಿಸಿರುವ ಕೋಮಲ ಬನವಾಸಿ ಸೇರಿದಂತೆ ಅನೇಕ ಕಲಾವಿದರು “ಪರಿಮಳ ಡಿಸೋಜಾ” ಚಿತ್ರದ ಬಗ್ಗೆ ಮಾತನಾಡಿದರು. ತಾಯಿಯ ಬಗ್ಗೆಗಿನ ಹಾಡು ಬಿಡುಗಡೆ ಸಮಾರಂಭ ಆಗಿರುವುದರಿಂದ ವಿಶೇಷವಾಗಿ ಮೂರು ಜನ ತಾಯಂದಿರನ್ನು ಸನ್ಮಾನಿಸಲಾಯಿತು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪರಿಮಳಾ ಡಿಸೋಜಾ’ ಸಿನಿಮಾ ಪೋಸ್ಟರ್ ಬಿಡುಗಡೆ ಮಾಡಿದ ಸಚಿವ ಮುನಿರತ್ನ

    ‘ಪರಿಮಳಾ ಡಿಸೋಜಾ’ ಸಿನಿಮಾ ಪೋಸ್ಟರ್ ಬಿಡುಗಡೆ ಮಾಡಿದ ಸಚಿವ ಮುನಿರತ್ನ

    ಗಾಗಲೆ ರಾಜ್ಯದ ಮೂವರು ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರ ಸ್ವಾಮಿ, ಬಿ ಎಸ್ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ‘ಪರಿಮಳ ಡಿಸೋಜಾ’ ಚಲನಚಿತ್ರದ ಸಿನೆಮಾ ಪೋಸ್ಟರ್ ಬಿಡುಗಡೆ ಮಾಡಿದ್ದು , ಈಗ ಪರಿಮಳ ಡಿಸೋಜಾ ಚಲನಚಿತ್ರದ ಮೋಶನ್ ಪೋಸ್ಟರ್ ಅನ್ನು ತೋಟಗಾರಿಕೆ,ಯೋಜನೆ ಹಾಗೂ ಸಾಂಖ್ಯಿಕ ಸಚಿವರಾದ  ಮುನಿರತ್ನ ಹಾಗೂ ಖ್ಯಾತ ಚಲನಚಿತ್ರ ಸಾಹಿತಿಗಳಾದ ಕೆ ಕಲ್ಯಾಣ್  ಬಿಡುಗಡೆ ಮಾಡಿದ್ದಾರೆ.

    ಸಸ್ಪೆನ್ಸ್ ಥ್ರಿಲ್ಲರ್ ಆಕ್ಸನ್ ಪ್ಯಾಮಿಲಿ ಸೆಂಟಿಮೆಂಟ್ ಕಥಾವಸ್ತುವನ್ನು ಹೊಂದಿರುವ ಬಹುನಿರೀಕ್ಷೇಯ ಪರಿಮಳ ಡಿಸೋಜಾ ಕನ್ನಡ ಚಲನಚಿತ್ರದ ಮೋಶನ್ ಪೋಸ್ಟರ್ ಅನ್ನು ತೋಟಗಾರಿಕೆ,ಯೋಜನೆ ಹಾಗೂ ಸಾಂಖ್ಯಿಕ ಸಚಿವರಾದ  ಮುನಿರತ್ನ ಹಾಗೂ ಖ್ಯಾತ ಚಲನಚಿತ್ರ ಸಾಹಿತಿಗಳಾದ ಕೆ ಕಲ್ಯಾಣ್  ಮಂಗಳವಾರ ಸಂಜೆ 6 ಗಂಟೆಗೆ ಬಿಡುಗಡೆ ಮಾಡಿ “ ಪರಿಮಳ ಡಿಸೋಜಾ” ಚಲನಚಿತ್ರ ತಂಡಕ್ಕೆ ಶುಭಕೋರಿದ್ದಾರೆ. ಇದನ್ನೂ ಓದಿ: ಅಭಿಷೇಕ್ ಅಂಬರೀಶ್ ಚಿತ್ರದಲ್ಲಿ ಅಬ್ಬರಿಸಲಿದ್ದಾರಾ ರಾಣಾ ದಗ್ಗುಭಾಟಿ?

    ಈ ಚಿತ್ರದಲ್ಲಿ ಶ್ರೀನಿವಾಸ್ ಪ್ರಭು, ಭವ್ಯ, ಕೋಮಲ ಬನವಾಸೆ , ವಿನೋದ್ ಶೇಷಾದ್ರಿ , ಪೂಜ ರಾಮಚಂದ್ರ, ರೋಹಿಣಿ ಜಗನಾಥ್, ಚಂದನ ಶ್ರೀನಿವಾಸ್, ಮೀಸೆ ಆಂಜನಪ್ಪ, ಶಿವಕುಮಾರ್ ಆರಾಧ್ಯ, ನಾಗಮಂಗಲ ಜಯರಾಮ್ ಸುನೀಲ್ ಮೋಹಿತೆ, ಉಗ್ರಂ ರೆಡ್ಡಿ ಮುಂತಾದ ನೂರಕ್ಕು ಹೆಚ್ಚು ಕಲಾವಿಧರು ಅಭಿನಯಿಸಿರುವ ಈ ಚಿತ್ರಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಹಾಗೂ ನಿರ್ದೇಶನವನ್ನು ಡಾ.ಗಿರಿಧರ್ ಹೆಚ್ ಟಿ ,ಸಿನೇಮಾಟೊಗ್ರಪಿಯನ್ನು ಕೆ ರಾಮ್, ಸಂಕಲನ ಸಂಜೀವ್ ರೆಡ್ಡಿ, ಸಂಗೀತವನ್ನು ಕ್ರಿಸ್ಟೋಫರ್ ಜೇಸನ್ ಮಾಡಿದ್ದಾರೆ. ನಿರ್ಮಾಪಕರು ವಿನೋದ್ ಶೇಷಾದ್ರಿ ಅವರು ವಿಲೇಜ್ ರೋಡ್ ಫಿಲಂಸ್ ಲಾಂಚನದಲ್ಲಿ ನಿರ್ಮಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]