Tag: Parimala D’Souza

  • ಅಣ್ಣಾವ್ರ ಹುಟ್ಟು ಹಬ್ಬದಂದು ರಿಲೀಸ್ ಆಯಿತು ‘ಪರಿಮಳ ಡಿಸೋಜಾ’ ಸಾಂಗ್

    ಅಣ್ಣಾವ್ರ ಹುಟ್ಟು ಹಬ್ಬದಂದು ರಿಲೀಸ್ ಆಯಿತು ‘ಪರಿಮಳ ಡಿಸೋಜಾ’ ಸಾಂಗ್

    ಡಾ.ರಾಜ್ ಕುಮಾರ್ (Dr. Raj Kumar) ಜನುಮದಿನಕ್ಕಾಗಿ ನಿನ್ನೆ ಸೋಮವಾರದಂದು  ವಿಲೇಜ್ ರೋಡ್ ಫಿಲಂಸ್ ಅವರು ನಿರ್ಮಿಸಿರುವ ‘ಪರಿಮಳ ಡಿಸೋಜಾ’ (Parimala D’Souza) ಕನ್ನಡ ಚಲನಚಿತ್ರದ ‘ಇದು ನನ್ನ ನಿನ್ನ ಒಲವಿನ ಗೀತೆ’ಯ ಲಿರಿಕಲ್ ವಿಡಿಯೋ ಸಾಂಗ್ (Song) ಅನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್‌ ಬಿಡುಗಡೆ (Release) ಮಾಡಿದ್ದಾರೆ.

    ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಹಾಗೂ ಶ್ರುತಿ ಅವರ ಯುಗಳ ಸ್ವರದಲ್ಲಿ ಈ ಗೀತೆ ಮೂಡಿ ಬಂದಿದ್ದು, ಕ್ರಿಸ್ಟೋಫರ್ ಜೇಸನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ವಿನೋದ್ ಶೇಷಾದ್ರಿ ಅವರ ಸಾಹಿತ್ಯದಲ್ಲಿ ಈ ಗೀತೆ ಮೂಡಿ ಬಂದಿದೆ. ಇದನ್ನೂ ಓದಿ:ನಟಿ ಅನುಷ್ಕಾ ಶೆಟ್ಟಿಗೆ ನಿನ್ನೆ ಎಲೋನ್ ಮಸ್ಕ್ ಕೊಟ್ಟ ಗಿಫ್ಟ್ ಏನು?

    ಈ ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು ವಿ.ನಾಗೇಂದ್ರ ಪ್ರಸಾದ್, ಕೆ.ಕಲ್ಯಾಣ್ ಮತ್ತು ಜಯಂತ್ ಕಾಯ್ಕಿಣಿ ಗೀತೆಗಳನ್ನು ಬರೆದಿದ್ದಾರೆ. ಕೆ.ಕಲ್ಯಾಣ್ ಬರೆದಿರುವ ಸಾಹಿತ್ಯಕ್ಕೆ ಖ್ಯಾತ ನಿರ್ದೇಶಕ  ಜೋಗಿ ಪ್ರೇಮ್ ಹಾಡಿರುವುದು ವಿಶೇಷ.

    ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯಕ್ಕೆ ಖ್ಯಾತ ಗಾಯಕಿ ಅನುರಾಧ ಭಟ್ ಹಾಡಿದ್ದಾರೆ. ಈ ಎರಡು ಹಾಡುಗಳು ಪುನೀತ್ ರಾಜ್ ಕುಮಾರ್ ಅವರ ಹುಟುಹಬ್ಬದಂದು ರಿಲೀಸ್ ಆಗಿವೆ. ‘ಇದು ನನ್ನ ನಿನ್ನ ಒಲವಿನ ಗೀತೆ’ ಲಿರಿಕಲ್ ವಿಡಿಯೋ ಸಾಂಗ್ ನಿನ್ನೆ ಡಾ.ರಾಜ್ ಕುಮಾರ್ ಅವರ  ಹುಟ್ಟು ಹಬ್ಬದಂದು ಬಿಡುಗಡೆಗೊಂಡಿದೆ.

  • ‘ಪರಿಮಳ ಡಿಸೋಜಾ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ ಮೂವರು ಮಾಜಿ ಸಿಎಂಗಳು

    ‘ಪರಿಮಳ ಡಿಸೋಜಾ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ ಮೂವರು ಮಾಜಿ ಸಿಎಂಗಳು

    ಡಾ. ಗಿರಿಧರ್ ಹೆಚ್ ಟಿ (Giridhar)ನಿರ್ದೇಶನದ ಹಾಗೂ ವಿಲೇಜ್ ರೋಡ್ ಫಿಲಂಸ್ ಸಂಸ್ಥೆಯ ಮೂಲಕ ವಿನೋದ್ ಶೇಷಾದ್ರಿ ಅವರು ನಿರ್ಮಿಸುತ್ತಿರುವ “ಪರಿಮಳ ಡಿಸೋಜಾ” (Parimala D’Souza) ಚಲನಚಿತ್ರದ ಪೋಸ್ಟರ್ (Poster)  ಅನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ (Yeddyurappa), ಹೆಚ್ ಡಿ ಕುಮಾರಸ್ವಾಮಿ (Kumaraswamy) ಹಾಗೂ ಸಿದ್ದರಾಮಯ್ಯ (Siddaramaiah) ಅವರು ಒಮ್ಮತದಿಂದ ಬಿಡುಗಡೆ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಇಡೀ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

    ಬೆಂಗಳೂರು, ಬಿಡದಿ, ನೆಲಮಂಗಲ, ಕನಕಪುರ, ಹಾಸನ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ ಹಲವಾರು ಸ್ಥಳಗಳಲ್ಲಿ 72 ದಿನಗಳಿಗೂ ಅಧಿಕ ಕಾಲ ಚಿತ್ರೀಕರಣ ಮಾಡಿರುವ ಸಸ್ಪೆನ್ಸ್-ಥ್ರಿಲ್ಲರ್-ಆಕ್ಷನ್ ಜೊತೆಗೆ ಮನರಂಜನಾತ್ಮಕ ಕಥೆಯನ್ನು ಹೊಂದಿರುವ ಈ ಚಲನಚಿತ್ರಕ್ಕೆ ಜೋಗಿ ಪ್ರೇಮ್ ಅವರು ಒಂದು ಅತ್ಯುತ್ತಮ ಹಾಡನ್ನು ಹಾಡುವ ಮೂಲಕ ಶುಭ ಹಾರೈಸಿದ್ದಾರೆ. ಇವರ ಜೊತೆಗೆ ಖ್ಯಾತ ಚಲನಚಿತ್ರ ಸಾಹಿತಿಗಳಾದ ಡಾ. ವಿ ನಾಗೇಂದ್ರ ಪ್ರಸಾದ್, ಜಯಂತ್ ಕಾಯ್ಕಿಣಿ ಮತ್ತು ಕೆ ಕಲ್ಯಾಣ್ ಅವರು ಸಾಹಿತ್ಯವನ್ನು ರಚಿಸಿದ್ದಾರೆ. ಇವರುಗಳ ಸಾಹಿತ್ಯಕ್ಕೆ ಖ್ಯಾತ ಹಿನ್ನಲೆ ಗಾಯಕರಾದ ರಾಜೇಶ್ ಕೃಷ್ಣನ್, ಶ್ರುತಿ ವಿ ಎಸ್, ಸುಪ್ರಿಯಾ ರಾಮ್, ನಕುಲ್ ಅಭ್ಯಂಕರ್ ಮತ್ತು ಅನುರಾಧ ಭಟ್ ಅವರುಗಳು ಹಾಡಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಆಟಕ್ಕೆ ಫುಲ್ ಸ್ಟಾಪ್ ಇಡಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ

    ಈ ಚಲನಚಿತ್ರಕ್ಕೆ ಕ್ರಿಸ್ಟೋಫರ್ ಜೇಸನ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಕೆ ರಾಮ್ ಅವರು ಛಾಯಾಗ್ರಹಣ, ಚಲನಚಿತ್ರದ ಸಂಕಲನವನ್ನು ಸಂಜೀವ್ ರೆಡ್ಡಿ ಮತ್ತು ಎಸ್.ಎಫ್.ಎಕ್ಸ್ ಹಾಗೂ 5.1 ಮಿಕ್ಸಿಂಗ್ ಅನ್ನು ಶಂಕರ್, ನೃತ್ಯ ನಿರ್ದೇಶನವನ್ನು ವಿಜಯನಗರ ಮಂಜು, ಅತ್ಯುತ್ತಮ ಆಕ್ಷನ್ ಸನ್ನಿವೇಶಗಳಿಗೆ ಬಂಡೆ ಚಂದ್ರು ಅವರು ಸಾಹಸ ನಿರ್ದೇಶನ ಮಾಡಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರವು ಅತಿ ಶೀಘ್ರದಲ್ಲಿ ಬಿಡುಗಡೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]