Tag: parivartha yatra

  • ಸ್ವಪಕ್ಷದ ವಿರುದ್ಧವೇ ಶಾಸಕರ ಮುನಿಸು- ಆನಂದ್ ಸಿಂಗ್ ಅನುಪಸ್ಥಿತಿಯಲ್ಲೇ ಪರಿವರ್ತನಾ ಯಾತ್ರೆಗೆ ಸಿದ್ಧತೆ

    ಸ್ವಪಕ್ಷದ ವಿರುದ್ಧವೇ ಶಾಸಕರ ಮುನಿಸು- ಆನಂದ್ ಸಿಂಗ್ ಅನುಪಸ್ಥಿತಿಯಲ್ಲೇ ಪರಿವರ್ತನಾ ಯಾತ್ರೆಗೆ ಸಿದ್ಧತೆ

    ಬಳ್ಳಾರಿ: ಮಾಜಿ ಸಚಿವ, ಬಿಜೆಪಿ ಶಾಸಕ ಆನಂದಸಿಂಗ್ ಅನುಪಸ್ಥಿತಿಯಲ್ಲೇ ಹೊಸಪೇಟೆಯಲ್ಲಿ ಪರಿವರ್ತನಾ ಯಾತ್ರೆ ನಡೆಸಲು ಬಿಜೆಪಿ ತೀರ್ಮಾನಿಸಿದೆ.

    ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡು ಪರಿವರ್ತನಾ ಯಾತ್ರೆಯಿಂದ ದೂರ ಉಳಿದಿರುವ ಶಾಸಕ ಆನಂದ್ ಸಿಂಗ್ ಮನವೊಲಿಸಿದ್ರೂ ಯಾವುದೇ ಪ್ರಯೋಜನವಾಗಲಿಲ್ಲ. ಇಂದು ಸಂಜೆ ಹೊಸಪೇಟೆಯಲ್ಲಿ ನಡೆಯಬೇಕಿರುವ ಪರಿವರ್ತನಾ ಯಾತ್ರೆ ಯಾವುದೇ ಕಾರಣಕ್ಕೂ ರದ್ದಾಗಬಾರದೆಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರಾವ್ ಸೂಚನೆ ನೀಡಿದ್ದು, ಸಕಲ ಸಿದ್ಧತೆ ನಡೆದಿದೆ. ಇದನ್ನೂ ಓದಿ: ಬಿಜೆಪಿ ಮಂತ್ರಿ ವಿರುದ್ಧದ ಬಂದ್‍ ಗೆ ಬಿಜೆಪಿ ಶಾಸಕನ ಬೆಂಬಲ!

    ಆನಂದ್ ಸಿಂಗ್ ಬದಲಾಗಿ ಗಣಿ ಉದ್ಯಮಿ ಕಿಶೋರ್ ಪತ್ತಿಗೊಂಡಗೆ ಪರಿವರ್ತನಾ ಯಾತ್ರೆಯ ಉಸ್ತುವಾರಿ ನೀಡಲಾಗಿದೆ. ಕಿಶೋರ್ ಪತ್ತಿಗೊಂಡರಿಗೆ ಟಿಕೆಟ್ ನೀಡಲಾಗುತ್ತೆ ಅನ್ನೋ ಮಾತುಗಳು ಕೇಳಿ ಬರುತ್ತಿರುವುದರಿಂದ ಶಾಸಕ ಆನಂದ್ ಸಿಂಗ್ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದು, ಇಂದು ಪರಿವರ್ತನಾ ಯಾತ್ರೆಯಲ್ಲಿ ಗೈರಾಗಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಕ್ಷೇತ್ರದ ಜನರು ಪೊರಕೆ ಏಟು ನೀಡಿದರೂ ಸ್ವೀಕರಿಸುತ್ತೇನೆ :ಡಿಕೆಶಿ

    ಆದ್ರೆ ಬಿಜೆಪಿ ಹೈಕಮಾಂಡ್ ಆನಂದ್ ಸಿಂಗ್ ಗೆ ಸೊಪ್ಪು ಹಾಕದೇ ಪತ್ತಿಗೊಂಡ ನೇತೃತ್ವದಲ್ಲಿ ಪರಿವರ್ತನಾ ಯಾತ್ರೆ ನಡೆಸಲು ಮುಂದಾಗಿದೆ.

  • ಹಾಲಾಡಿ ಸೇರ್ಪಡೆಗೆ ಬಿಜೆಪಿಯಲ್ಲೇ ವಿರೋಧ -ಕಾರ್ಯಕರ್ತರ ಮೇಲೆ ಲಾಠಿಚಾರ್ಜ್

    ಹಾಲಾಡಿ ಸೇರ್ಪಡೆಗೆ ಬಿಜೆಪಿಯಲ್ಲೇ ವಿರೋಧ -ಕಾರ್ಯಕರ್ತರ ಮೇಲೆ ಲಾಠಿಚಾರ್ಜ್

    ಉಡುಪಿ: ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬಿಜೆಪಿ ಸೇರುವುದಕ್ಕೆ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗಿದೆ.

    ಕುಂದಾಪುರದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಕೆಲ ಬಿಜೆಪಿ ಕಾರ್ಯಕರ್ತರು ಬಹಿರಂಗ ಆಕ್ರೋಶ ವ್ಯಕ್ತಪಡಿಸಿ ಬ್ಯಾನರ್ ಪ್ರದರ್ಶಿಸಿದ್ರು. ಈ ವೇಳೆ ಮಧ್ಯಪ್ರವೇಶಿಸಿ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಲಾಡಿಯೇ ನಮ್ಮ ನಾಯಕ, ಅವರೇ ಮುಂದಿನ ಶಾಸಕ. ಒಪ್ಪದವರು ಈಗಲೇ ಪಕ್ಷ ಬಿಟ್ಟು ಹೋಗಿ ಅಂತಾ ಗುಡುಗಿದ್ರು. ಹಾಲಾಡಿ ಮತ್ತು ಬಿಜೆಪಿ ಬಣಗಳ ಗಲಾಟೆಯಿಂದಾಗಿ ಪೊಲೀಸರು ಅನಿವಾರ್ಯವಾಗಿ ಲಾಠಿಜಾರ್ಜ್ ಮಾಡ್ಬೇಕಾಯ್ತು.

    ಇದೇ ವೇಳೆ ಸಿಪಿಎಂ ಬೆಂಬಲದಿಂದ ಕೇರಳದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಕೊಲೆಯಾಗಿದೆ ಎಂಬುದು ಸ್ಪಷ್ಟವಾಗಿದೆ. ಕೇರಳದಲ್ಲಿ ಬಿಜೆಪಿ ನೇತೃತ್ವದಲ್ಲಿ ಹಲವು ಹೋರಾಟ ನಡೆದಿದೆ ಆದರೂ ಕೊಲೆಗಳ ಸರಣಿ ಮುಂದುವರೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ಆಕ್ರೋಶ ವ್ಯಕ್ತಪಡಿಸಿದರು.

    ಇದನ್ನೂ ಓದಿ: ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಕುಂದಾಪುರ ಶಾಸಕ ಶ್ರೀನಿವಾಸ ಶೆಟ್ಟಿ

    ಸರ್ಕಾರ ಕೊಲೆ ಆರೋಪಿಗಳನ್ನು ಬಂಧಿಸುವ ವಿಶ್ವಾಸ ನಮಗಿಲ್ಲ. ಈ ಹತ್ಯೆಯನ್ನು ಖಂಡಿಸುತ್ತೇನೆ. ಮಣಪ್ಪುರಂ ಕಣ್ಣೂರು ದಾಟಿ ಕ್ರೌರ್ಯ ಕರಾವಳಿಗೆ ಬರಲು ಬಿಡಲ್ಲ. ರಾಜ್ಯದಲ್ಲೂ ಹಿಂದೂ ಯುವಕರ ಕೊಲೆಯಾಗುತ್ತಿದೆ. ಸಿಎಂ ಉಗ್ರ ಸಂಘಟನೆಗಳ ಜೊತೆ ಸ್ನೇಹ ಬೆಳೆಸ್ತಿದ್ದಾರೆ ಎಂದು ಆರೋಪಿಸಿದರು.

    ಕರಾವಳಿಯ ಯುವಕರು ಐಸೀಸ್, ಸೇರ್ಪಡೆಯಾಗುತ್ತಿದ್ದಾರೆ. ಮಂಗಳೂರಲ್ಲಿ ಎನ್‍ಐಎ ಕಚೇರಿ ಕೂಡಲೇ ತೆರೆಯಬೇಕು. ಕೇಂದ್ರಕ್ಕೆ ಈ ಬಗ್ಗೆ ಮನವಿ ಮಾಡಿ ಒತ್ತಡ ಹೇರುತ್ತೇನೆ ಎಂದು ಹೇಳಿದರು.