Tag: Park

  • ದಾವಣಗೆರೆಯಲ್ಲಿ ಏಕಾಏಕಿ 36 ಮನೆಗಳ ತೆರವು – ಬೀದಿಗೆ ಬಿದ್ದ ಕುಟುಂಬಗಳು

    ದಾವಣಗೆರೆಯಲ್ಲಿ ಏಕಾಏಕಿ 36 ಮನೆಗಳ ತೆರವು – ಬೀದಿಗೆ ಬಿದ್ದ ಕುಟುಂಬಗಳು

    – ಪಾರ್ಕ್ ಜಾಗದಲ್ಲಿ ಮನೆ ಕಟ್ಟಿದ್ದಕ್ಕೆ ಕ್ರಮ

    ದಾವಣಗರೆ: ನಗರದ (Davanagere) ರಾಮನಗರ ಕೈಗಾರಿಕಾ ಪ್ರದೇಶದಲ್ಲಿದ್ದ 36 ಮನೆಗಳನ್ನು ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವು ಮಾಡಿದ್ದಾರೆ.

    2013-14ರಿಂದ ಪಾಲಿಕೆಯ ಪಾರ್ಕ್ ಜಾಗದಲ್ಲಿ ಜನ ಮನೆ ಕಟ್ಟಿಕೊಂಡಿದ್ದರು. ಅದು ಪಾಲಿಕೆಯ ಪಾರ್ಕ್ ಜಾಗ ಎಂದು 2018ರಲ್ಲಿ ನ್ಯಾಯಾಲಯದಲ್ಲಿ ವ್ಯಕ್ತಿಯೊಬ್ಬರು ದಾವೆ ಹೂಡಿದ್ದರು. ದೂರುದಾರರ ಹಾಗೂ ಮನೆ ಮಾಲೀಕರ ವಾದ ಆಲಿಸಿದ್ದ ನ್ಯಾಯಾಲಯ ಪಾಲಿಕೆ ಪಾರ್ಕ್ ಜಾಗದಲ್ಲಿ ಮನೆಗಳನ್ನು ಕಟ್ಟಿಕೊಂಡಿರೋದು ಅಕ್ರಮ. ಆ ಮನೆಗಳನ್ನು ತಕ್ಷಣವೇ ತೆರವುಗೊಳಿಸಿ ಎಂದು ತಹಸೀಲ್ದಾರ್ ಅವರಿಗೆ ನಿರ್ದೇಶನ ನೀಡಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ ತಹಸೀಲ್ದಾರ್ ಡಾ.ಅಶ್ವಥ್ ಅಲ್ಲಿನ ನಿವಾಸಿಗಳಿಗೆ ಮನೆ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ್ದರು. ಆದರೆ, ಅಲ್ಲಿನ ನಿವಾಸಿಗಳು ಮನೆ ತೆರವು ಮಾಡದ ಕಾರಣ ಇಂದು (ಅ.11) ಬೆಳಗ್ಗೆ ಪೊಲೀಸರ ಬಿಗಿ ಬಂದೋಬಸ್ತ್‍ನಲ್ಲಿ ಮನೆ ತೆರವುಗೊಳಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ & ಕೊಲೆ ಪ್ರಕರಣ – ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ: ಆರ್.‌ ಅಶೋಕ್‌

    ಮನೆ ತೆರವಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಗಮಿಸುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಒಂದೆರಡು ದಿನ ಅವಕಾಶ ಕೊಡಿ ನಾವೇ ಮನೆ ಖಾಲಿ ಮಾಡ್ತಿವಿ ಎಂದು ಗೊಗರೆದರು. ಕೆಲವರು ಜೆಸಿಬಿಗೆ ಅಡ್ಡ ಹೋಗಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಅಲ್ಲಿನ ನಿವಾಸಿಗಳ ಪರವಾಗಿ ಪಾಲಿಕೆ ಮಾಜಿ ಸದಸ್ಯ ಪಾಮೇನಹಳ್ಳಿ ನಾಗರಾಜ್ ಅಧಿಕಾರಿಗಳ ಕಾಲು ಹಿಡಿಯಲು ಮುಂದಾಗಿದ್ದರು. ಆದರೂ ಅಧಿಕಾರಿಗಳ ಮನಸ್ಸು ಕರಗದ ಹಿನ್ನೆಲೆ ಪ್ರತಿಭಟನೆ ನಡೆಸಲು ಮುಂದಾದಾಗಾ ಪೊಲೀಸರು ಅಲ್ಲಿಂದ ಕಳಿಸಿದ್ದಾರೆ.

    ನಿವಾಸಿಗಳು ಮನೆಗಳಿಗೆ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ರು. ಪಾಲಿಕೆ ವತಿಯಿಂದ ನೀರು ಸೌಲಭ್ಯ ಕೂಡ ಕಲ್ಪಿಸಲಾಗಿತ್ತು. ಅಷ್ಟೇ ಅಲ್ಲ ವೋಟರ್ ಐಡಿ, ಪಡಿತರ ಕೂಡ ವಿತರಣೆ ಮಾಡುತ್ತಿದ್ದರು. ಆರಂಭದಲ್ಲೇ ಇದು ಪಾರ್ಕ್ ಜಾಗ ಅಂತ ಹೇಳಿದ್ರೆ ನಾವು ಮನೆಗಳನ್ನೇ ಕಟ್ಟುತ್ತಿರಲಿಲ್ಲ. ಮನೆಗಳನ್ನ ಕಟ್ಟಿಕೊಂಡ್ಮೇಲೆ ಅಧಿಕಾರಿಗಳು ಮತ್ತು ಕೆಲವರು ಬಂದು ಇದು ಪಾರ್ಕ್ ಜಾಗ ಅಂತ ತಗಾದೆ ತೆಗೆದಿದ್ದಾರೆ. ನ್ಯಾಯಾಲಯದ ಆದೇಶಕ್ಕೆ ಬೆಲೆ ಕೊಡ್ತಿವಿ. ಮನೆ ಖಾಲಿ ಮಾಡೋಕೆ ಸಮಯವಕಾಶ ನೀಡಿ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ಜನರಿಗೆ ಪುನರ್ವಸತಿ ಕಲ್ಪಿಸಲು ಅಧಿಕಾರಿಗಳು ಬೂದಾಳ್ ರಸ್ತೆ ಹಾಗೂ ತುರ್ಚಘಟ್ಟ ಬಳಿ ಜಾಗ ಗೊತ್ತುಪಡಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆ | ಆಟ ಆಡುವಾಗ ಭದ್ರಾ ನಾಲೆಗೆ ಬಿದ್ದು ಕೊಚ್ಚಿ ಹೋದ ಬಾಲಕ

  • ಕೋಲಾರ ನಗರದ 19 ಉದ್ಯಾನವನಗಳ ಅಭಿವೃದ್ಧಿಗೆ ಮುಂದಾದ ನಗರಸಭೆ

    ಕೋಲಾರ ನಗರದ 19 ಉದ್ಯಾನವನಗಳ ಅಭಿವೃದ್ಧಿಗೆ ಮುಂದಾದ ನಗರಸಭೆ

    – ಅಮೃತ್ ಸಿಟಿ ಯೋಜನೆಯ 8 ಕೋಟಿ ಹಣ ಬಳಕೆ ಮೂಲಕ ಕಾಯಕಲ್ಪ

    ಕೋಲಾರ: ಮಕ್ಕಳಿಗೆ ಆಟವಾಡೋದಕ್ಕೆ, ಹಿರಿಯರು ವಿಶ್ರಾಂತಿ ಪಡೆಯೋದಕ್ಕೆ, ಜನರು ಬೆಳಗ್ಗೆ ಸಂಜೆ ವಾಯು ವಿಹಾರಕ್ಕೆ ಉದ್ಯಾನವನಗಳು (Park) ಅವಶ್ಯಕ. ಹಳ್ಳಿಯಲ್ಲಾದ್ರೆ ಮರ, ಗಿಡಗಳು ಸಿಗುತ್ತವೆ. ಆದರೆ ನಗರ ಪ್ರದೇಶದಲ್ಲಿ ವಾಯು ವಿಹಾರಕ್ಕೆ ಸೂಕ್ತ ಜಾಗ ಉದ್ಯಾನವನಗಳು. ಇಂತಹ ಉದ್ಯಾನವನಗಳ ಅಭಿವೃದ್ದಿಗೆ ಕೋಲಾರ ನಗರಸಭೆ (Kolar City Municipal Council) ಮಾಸ್ಟರ್ ಪ್ಲಾನ್ ರೂಪಿಸಿದೆ.

    ಹೌದು, ನಗರವನ್ನ ಸುತ್ತಿ ಬರುವ ಜನರು ಸುಸ್ತಾಗಿ ಕೊನೆ ಪಕ್ಷ ಒಂದು ಕ್ಷಣ ವಿಶ್ರಮಿಸೋಣ ಅಂದರೆ ನಗರ ಪ್ರದೇಶಗಳಲ್ಲಿ ಸಿಗೋದೇ ಪಾರ್ಕ್‌ಗಳು. ಇನ್ನೂ ಸಾಕಷ್ಟು ಜನರು ಬೆಳಗ್ಗೆ ಸಂಜೆ ವಾಯು ವಿಹಾರ ಮಾಡೋದು ಸಹ ಇದೆ ಪಾರ್ಕ್‌ಗಳಲ್ಲಿ. ಮತ್ತೆ ಕೆಲವು ಉದ್ಯಾನವನಗಳಲ್ಲಿ ಇತ್ತೀಚೆಗೆ ತೆರೆದ ವ್ಯಾಯಾಮ, ಜಿಮ್ ಸಹ ಮಾಡಲಾಗಿದೆ. ಆದರೆ ಈ ಪಾರ್ಕ್‌ಗಳು ಸರಿಯಾದ ನಿರ್ವಹಣೆ ಇಲ್ಲದೆ ಪಾಳು ಬಿದ್ದಿವೆ. ಪಾರ್ಕ್‌ಗಳು ಕುಡುಕರ ಅಡ್ಡೆಗಳಾಗಿ, ನಿರ್ವಹಣೆ ಇಲ್ಲದೆ ಅಳವಿನಂಚಿಗೆ ತಲುಪಿವೆ. ಇದನ್ನ ಮನಗಂಡ ಡಿಸಿ ಎಂಆರ್ ರವಿ ಅವರು ನಗರಸಭೆ ಮೂಲಕ ಅಭಿವೃದ್ಧಿಗೆ ಮುಂದಾಗಿದ್ದಾರೆ. ಕೋಲಾರ ನಗರಸಭೆ ಸರ್ವಜ್ಞ ಪಾರ್ಕ್, ಅಂಬೇಡ್ಕರ್ ಪಾರ್ಕ್, ಕುವೆಂಪು ಪಾರ್ಕ್ ಸೇರಿದಂತೆ ನಗರದಲ್ಲಿರುವ 19 ಉದ್ಯಾನವನಗಳಿಗೆ ಕಾಯಕಲ್ಪ ನೀಡಲು ಮಾಸ್ಟರ್ ಪ್ಲಾನ್‌ವೊಂದು ತಯಾರಾಗಿದೆ. ಇದನ್ನೂ ಓದಿ: ಕರ್ತವ್ಯನಿರತ ಯೋಧನಿಗೆ ವಿದ್ಯುತ್ ಶಾಕ್ – ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಸಾವು

    ಸ್ವಚ್ಛತಾ ಹಿ ಸೇವಾ ಆಂದೋಲನದ ಭಾಗವಾಗಿ ಅಕ್ಟೋಬರ್ 2ರವರೆಗೆ ನಡೆಯಲಿರುವ ಈ ಅಭಿಯಾನದಲ್ಲಿ, ಪ್ರತಿ ಭಾನುವಾರ ನಗರದ ಎಲ್ಲಾ ಉದ್ಯಾನವನಗಳನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಚ್ಛಗೊಳಿಸಲು ನಿರ್ಧರಿಸಲಾಗಿದೆ. ಅದರಂತೆ 85 ವರ್ಷಗಳಷ್ಟು ಹಳೆಯದಾದ ಸರ್ವಜ್ಞ ಪಾರ್ಕ್‌ನಲ್ಲಿರುವ ಬ್ಯಾಂಡ್ ಸ್ಟಾಂಡ್ ಮತ್ತು ರೇಡಿಯೋ ಕಿಯೋಸ್ಕ್ ಅನ್ನು ದುರಸ್ತಿಪಡಿಸಿ ಜನರ ಅನುಕೂಲಕ್ಕೆ ಅನುವು ಮಾಡಿಕೊಡಲು ಈಗಾಗಲೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇದನ್ನೂ ಓದಿ: ನೇಪಾಳದಲ್ಲಿ ಅಲ್ಲೋಲ ಕಲ್ಲೋಲ – ಹಣಕಾಸು ಸಚಿವನನ್ನ ಬೀದಿಯಲ್ಲಿ ಅಟ್ಟಾಡಿಸಿ ಹೊಡೆದ ಉದ್ರಿಕ್ತರು

    ಇನ್ನು ಕೋಲಾರ ಜಿಲ್ಲೆಯಲ್ಲಿ ಸುಮಾರು 56 ಪಾರ್ಕ್ಗಳಿವೆ. ಈ ಪೈಕಿ 19 ಕೋಲಾರ ನಗರದಲ್ಲೆ ಇವೆ. ಇದರಲ್ಲಿ ಉತ್ತಮ ಸ್ಥಿತಿಯಲ್ಲಿರುವ ಪಾರ್ಕ್‌ಗಳೇ ಕಡಿಮೆ. ಜಿಲ್ಲೆಯ ಬಹುತೇಕ ಪಾರ್ಕ್‌ಗಳು ನಿರ್ವಹಣೆ ಇಲ್ಲದೆ ಸೊರಗಿ ತನ್ನ ಸ್ವರೂಪವನ್ನೇ ಕಳೆದುಕೊಂಡಿವೆ. ಹಾಗಾಗಿ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ 15ನೇ ಹಣಕಾಸು ಯೋಜನೆಯಡಿ ಅಮೃತ್ ನಗರೋತ್ಥಾನ ಕಾರ್ಯಕ್ರಮದಡಿಯಲ್ಲಿ ಉದ್ಯಾನಗಳ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮುಲ್ಲಾಗಳ ಸರ್ಕಾರ ಅನ್ನೋದು ಸಾಬೀತಾಗಿದೆ: ಅಶೋಕ್

    ನಗರದ ಸಮಾನ ಮನಸ್ಕರು ನಾಗರಿಕ ವೇದಿಕೆ ರಚಿಸಿಕೊಂಡು ಉದ್ಯಾನಗಳ ನಿರ್ವಹಣೆ ಮತ್ತು ಸ್ವಚ್ಛತಾ ಪಾಲನೆಗೆ ಅಮೃತ್ ಯೋಜನೆಯಡಿ ಉದ್ಯಾನಗಳಿಗೆ ಕಾಯಕಲ್ಪ ನೀಡುವುದು ಇದರ ಉದ್ದೇಶವಾಗಿದೆ. ಈಗಾಗಲೆ 8 ಕೋಟಿ ರೂ. ಅನುದಾನ ಮೀಸಲಿಟ್ಟಿರುವ ನಗರಸಭೆ ಮುಂದಿನ ಅಕ್ಟೋಬರ್ 2ರ ವೇಳೆ ಎಲ್ಲಾ ಪಾರ್ಕ್‌ಗಳನ್ನು ಸುಂದರೀಕರಣ ಮಾಡೋದು ಇದರ ಉದ್ದೇಶವಾಗಿದೆ. ಇದನ್ನೂ ಓದಿ: ನೇಪಾಳದ ಏರ್‌ಪೋರ್ಟ್ ಬಳಿ ಹೊಗೆ ಕಂಡು ದೆಹಲಿಗೆ ವಾಪಸಾದ ವಿಮಾನ – ಏರ್‌ ಇಂಡಿಯಾ, ಇಂಡಿಗೋ ಹಾರಾಟ ರದ್ದು

    ಅದರಂತೆ ಕುಳಿತುಕೊಳ್ಳಲು ಕಲ್ಲಿನ ಬೆಂಚುಗಳು, ನಡಿಗೆ ಪಥ, ಕಾರಂಜಿಗಳು ಹಾಗೂ ವಿದ್ಯುತ್ ದೀಪಗಳನ್ನು ಸರಿಪಡಿಸಿ ಸಾರ್ವಜನಿಕರ ಅನುಕೂಲಕ್ಕೆ ತಕ್ಕ ಹಾಗೆ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸುವುದು ಇವರ ಉದ್ದೇಶ. ಅದರಂತೆ ಸ್ವಚ್ಛತಾ ಹಿ ಸೇವಾ ಅಭಿಯಾನದ ನೆನಪಿಗಾಗಿ ಎಲ್ಲಾ ಉದ್ಯಾನಗಳಲ್ಲಿ ಸಸಿಗಳನ್ನು ನೆಟ್ಟು, ಮಕ್ಕಳಿಗೆ, ವೃದ್ಧರಿಗೆ, ಸಮಾನ ಮನಸ್ಕರಿಗೆ ಉದ್ಯಾನವನಗಳನ್ನ ಹಸಿರಾಗಿಸಿ ಸುಂದರ ಮಾಡಲು ನಿರ್ಧಾರ ಮಾಡಲಾಗಿದೆ. ಇದು ಕೋಲಾರ ನಾಗರೀಕರು ಸೇರಿದಂತೆ ನಿತ್ಯ ಪಾರ್ಕ್‌ನಲ್ಲಿ ವಾಯುವಿಹಾರ ಮಾಡುವವರಿಗೆ ಖುಷಿಯ ವಿಚಾರವಾಗಿದೆ. ಇದನ್ನೂ ಓದಿ: ಪುತ್ರನಿಗೆ ಶಸ್ತ್ರಚಿಕಿತ್ಸೆ – ಶಾಸಕ ವಿನಯ್‌ಗೆ 2 ದಿನಗಳ ಮಧ್ಯಂತರ ಜಾಮೀನು ಮಂಜೂರು

    ಒಟ್ಟಿನಲ್ಲಿ ಮನಸ್ಸಿಗೆ ನೆಮ್ಮದಿ ಸಿಗಲಿ, ದೇಹಕ್ಕೆ ಒಂದಷ್ಟು ಉಲ್ಲಾಸ ಉತ್ಸಾಹ ಸಿಗಲಿ ಎಂದು ಜನರು ಉದ್ಯಾನವನಗಳಿಗೆ ಬರುತ್ತಾರೆ. ಆದರೆ ಪಾರ್ಕ್‌ಗಳ ಸರಿಯಾದ ನಿರ್ವಹಣೆ ಇಲ್ಲದೆ ಒಂದಷ್ಟು ನೆಮ್ಮದಿ ಇಲ್ಲದೆ ಇರುವುದನ್ನ ಮನಗಂಡ ಅಧಿಕಾರಿಗಳು ಉದ್ಯಾನವಗಳ ಅಭಿವೃದ್ಧಿಗೆ ಒತ್ತು ನೀಡಿರುವುದು ಖುಷಿಯ ವಿಚಾರವೇ ಸರಿ. ಇದನ್ನೂ ಓದಿ: ಈ ಜನ್ಮದಲ್ಲೇ ಮುಸ್ಲಿಂ ಧರ್ಮಕ್ಕೆ ಹೋಗಿಬಿಡಿ, ನಾವೇ ಹಾರ ಹಾಕಿ ಕಳುಹಿಸ್ತೇವೆ: ಶೋಭಾ ಕರಂದ್ಲಾಜೆ

  • ಜೆಪಿ ಪಾರ್ಕ್ ವಾರ್ಡ್‌ನಲ್ಲಿರುವ ಉದ್ಯಾನವನಕ್ಕೆ ಭರತ್ ಭೂಷಣ್ ಹೆಸರು

    ಜೆಪಿ ಪಾರ್ಕ್ ವಾರ್ಡ್‌ನಲ್ಲಿರುವ ಉದ್ಯಾನವನಕ್ಕೆ ಭರತ್ ಭೂಷಣ್ ಹೆಸರು

    ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Attack) ಭರತ್ ಭೂಷಣ್ ಹತ್ಯೆ ಹಿನ್ನೆಲೆ ವಾರ್ಡ್ ನಂ.17 ಜೆಪಿ ಪಾರ್ಕ್ ವಾರ್ಡ್‌ನಲ್ಲಿರುವ ಉದ್ಯಾನವನಕ್ಕೆ ಭರತ್ ಭೂಷಣ್  ಹೆಸರನ್ನು ನಾಮಕರಣ ಮಾಡಲಾಗಿದೆ.

    ಭರತ್ ಸ್ಮರಣೆಗಾಗಿ ಪಾರ್ಕ್‌ಗೆ ಭರತ್ ಭೂಷಣ್ ಪಾರ್ಕ್ (Bharath Bhushan Park) ಎಂದು ನಾಮಕರಣ ಮಾಡಲಾಗಿದೆ. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಬರುವ ವಾರ್ಡ್‌ನ ಪಾರ್ಕ್ ಇದಾಗಿದ್ದು, ಭರತ್ ಭೂಷಣ್ ನಿವಾಸದ ಬಳಿ ಇದೆ. ಅಲ್ಲದೇ ಭರತ್ ಭೂಷಣ್ ಇದೇ ಪಾರ್ಕ್‌ನಲ್ಲಿ ಪ್ರತಿದಿನ ವಾಕಿಂಗ್ ಮಾಡುತ್ತಿದ್ದರು. ಪಾರ್ಕ್ ಒಳಗಿನ ಸಬಾಂಗಣದಲ್ಲಿ ಯಾವುದೇ ಕಾರ್ಯಕ್ರಮ ನಡೆದರೂ ಭರತ್ ಅದರಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುತ್ತಿದ್ದರು. ಈಗ ಭರತ್ ಸ್ಮರಣೆಗಾಗಿ ಶಾಸಕ ಮುನಿರತ್ನ (Muniratna) ಅವರು ಭರತ್ ಹೆಸರನ್ನೇ ಪಾರ್ಕ್‌ಗೆ ನಾಮಕರಣ ಮಾಡಿದ್ದಾರೆ. ಇದನ್ನೂ ಓದಿ: ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು ಸಚಿವ ಸಂಪುಟ ಸಭೆ – 8 ಜಿಲ್ಲೆಗಳಿಗೆ ಬಂಪರ್‌?

    ಬೆಳಗ್ಗೆ 5:30ರ ವೇಳೆಗೆ ಭರತ್ ಭೂಷಣ್ ಮೃತದೇಹ ಸುಂದರ ನಗರಕ್ಕೆ ಆಗಮಿಸಿತು. ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ, ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಭರತ್ ಭೂಷಣ್ ನಿವಾಸದ ಸುತ್ತ ಬಿಗಿಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಿಎಂ ಜೊತೆ ಹಲವು ಗಣ್ಯರು ಆಗಮನ ಹಿನ್ನೆಲೆ ವಿವಿಐಪಿ ದರ್ಶನದ ವ್ಯವಸ್ಥೆ ಕೂಡ ಮಾಡಲಾಗಿದೆ. ಇದನ್ನೂ ಓದಿ: ಕಾಶ್ಮೀರ ಭಾರತದ ಮುಕುಟ ಮಣಿ, ಭಯೋತ್ಪಾದನೆ ಮೂಲಕ ಸತ್ಯ ಮುಚ್ಚಿಹಾಕಲು ಸಾಧ್ಯವಿಲ್ಲ: ಕ್ಯಾ.ಬ್ರಿಜೇಶ್ ಚೌಟ

  • ವಾಯುವಿಹಾರಿಗಳ ಮೇಲೂ ಸರ್ಕಾರ ತೆರಿಗೆ? – ಮೈದಾನದಲ್ಲಿ ಪ್ರಾಕ್ಟೀಸ್ ಮಾಡೋರಿಗೆ ಗಂಟೆಗೆ 200 ರೂ.

    ವಾಯುವಿಹಾರಿಗಳ ಮೇಲೂ ಸರ್ಕಾರ ತೆರಿಗೆ? – ಮೈದಾನದಲ್ಲಿ ಪ್ರಾಕ್ಟೀಸ್ ಮಾಡೋರಿಗೆ ಗಂಟೆಗೆ 200 ರೂ.

    – ವಾಯುವಿಹಾರಿಗಳಿಗೆ ತಿಂಗಳಿಗೆ 300 ರೂ. ಶುಲ್ಕ?

    ತುಮಕೂರು: ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ತೆರಿಗೆ ಬರೆ ಮುಂದುವರಿದಿದೆ. ವಾಯುವಿಹಾರಿಗಳ ಮೇಲೂ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿರುವ ವಿಲಕ್ಷಣ ಪ್ರಕರಣ ಬಯಲಾಗಿದೆ.

    ಗ್ಯಾರಂಟಿಗಳಿಗೆ ಹಣ ಹೊಂದಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ತೆರಿಗೆ ಹಾಕ್ತಿದೆ ಎಂಬ ಆರೋಪ ಕೇಳಿಬಂದಿದೆ. ಎಲ್ಲೆಲ್ಲಿ ಸಾಧ್ಯವೋ ಅಲ್ಲಿ ತೆರಿಗೆ, ಶುಲ್ಕ ಅಂತ ರಾಜ್ಯ ಸರ್ಕಾರ ಸಾರ್ವಜನಿಕರಿಂದ ವಸೂಲಿ ಮಾಡುತ್ತಿದೆ ಎಂದು ಜನರು ಅಸಮಾಧಾನ ಹೊರಹಾಕಿದ್ದಾರೆ. ಈ ಮಧ್ಯೆ ವಾಯುವಿಹಾರಿಗಳಿಗೂ, ಕ್ರೀಡಾಪಟುಗಳಿಗೂ ತೆರಿಗೆ ಹಾಕಲು ಸರ್ಕಾರ ಹೊರಟಿದೆ.

    ಸರ್ಕಾರಿ ಕ್ರೀಡಾಂಗಣಗಳಲ್ಲಿ ತರಬೇತಿ ಪಡೆಯುವ ಕ್ರೀಡಾಪಟುಗಳಿಗೆ ಹಾಗೂ ವಾಯುವಿಹಾರ ಮಾಡುವ ಸಾರ್ವಜನಿಕರಿಗೂ ಶುಲ್ಕ ವಿಧಿಸುವ ಸುತ್ತೋಲೆ ಹೊರಡಿಸಿದೆ. ಇದು ಇಡೀ ರಾಜ್ಯಾದ್ಯಂತ ಮಾ.1 ರಿಂದ ಜಾರಿಯಾಗಲಿದೆ. ವಿಶೇಷವಾಗಿ ತುಮಕೂರು ನಗರದ ಮಹಾತ್ಮಾ ಗಾಂಧಿ ಕ್ರೀಡಾಂಗಣ ವಿಶ್ವ ದರ್ಜೆಯ ಸ್ಥಾನಕ್ಕೆ ನಿರ್ಮಾಣ ಮಾಡಲಾಗಿದೆ. ಇಲ್ಲಿ ಪ್ರಾಕ್ಟಿಸ್ ಮಾಡುವ ಪ್ರತಿ ಕ್ರೀಡಾಪಟುಗಳಿಗೂ ವಾಕಿಂಗ್ ಮಾಡೋರಿಗೂ ಶುಲ್ಕ ವಿಧಿಸಲಾಗುತ್ತದೆ. ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ವಾಕ್ ಮಾಡುವ ವಯೋವೃದ್ಧರಿಗೆ ತಿಂಗಳಿಗೆ 300 ರೂ. ಶುಲ್ಕ ವಿಧಿಸುವ ಸುತ್ತೋಲೆ ಹೊರಡಿಸಲಾಗಿದೆ.

    ಯುವ ಸಬಲೀಕರಣ & ಕ್ರೀಡಾ ಇಲಾಖೆ ಹೊರಡಿಸಿರುವ ಪ್ರಕಟಣೆಯಲ್ಲಿ ಏನಿದೆ?
    * ವಾಯುವಿಹಾರಿಗಳಿಗೆ ಮಾಸಿಕ ಶುಲ್ಕ 300 ರೂ.
    * ಕ್ರೀಡಾಪಟುಗಳಿಗೆ ವಾರ್ಷಿಕ ಶುಲ್ಕ 5000 ರೂ.
    * ಕ್ರೀಡಾಪಟುಗಳಿಗೆ ಮಾಸಿಕ ಶುಲ್ಕ 500 ರೂ.
    * ಬ್ಯಾಡ್ಮಿಂಟನ್ ಅಂಕಣಕ್ಕೆ 200 ರೂ. (ಪ್ರತಿ ಗಂಟೆಗೆ)
    * ಅಥ್ಲೆಟಿಕ್ ಕ್ರೀಡಾಪಟುಗಳಿಗೆ ಮಾಸಿಕ 150 ರೂ.
    * ವಾಲಿಬಾಲ್, ಖೋಖೋ ಅಂಕಣಕ್ಕೆ ಮಾಸಿಕ 500 ರೂ.
    * ಕಬ್ಬಡಿ, ಬಾಸ್ಕೆಟ್ ಬಾಲ್ ಅಂಕಣಕ್ಕೆ ಮಾಸಿಕ 500 ರೂ.
    * ಮಲ್ಟಿ ಜಿಮ್ ಕ್ರೀಡಾಪಟುಗಳಿಗೆ ಮಾಸಿಕ 300 ರೂ.
    * ಪ.ಜಾತಿ-ಪ.ಪಂಗಡ ಕ್ರೀಡಾಪಟುಗಳಿಗೆ 150 ರೂ.
    * ಕ್ರೀಡಾಂಗಣ ಪ್ರವೇಶ ಗುರುತಿನ ಚೀಟಿ 50 ರೂ.

    ಪ್ರತಿ ಕ್ರೀಡೆಗೂ ಶುಲ್ಕ ನಿಗದಿಪಡಿಸಲಾಗಿದೆ. ರಾಜ್ಯ, ರಾಷ್ಟç, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಿ ಕೀರ್ತಿ ತಂದ ಕ್ರೀಡಾಪಟುಗಳಿಗೂ ಉಚಿತ ತರಬೇತಿ ಇಲ್ಲಿ ಸಿಗೋದಿಲ್ಲ. ಕ್ರೀಡಾಂಗಣ ನಿರ್ವಹಣೆ ಮಾಡಲು ಸರ್ಕಾರದ ಬಳಿ ಹಣ ಇಲ್ಲ. ಉಚಿತವಾಗಿ ತರಬೇತಿ ಕೊಡಬೇಕಾದ ಸರ್ಕಾರವೇ ಶುಲ್ಕ ವಿಧಿಸಲು ಮುಂದಾಗಿದೆ ಎಂದು ವಿರೋಧ ವ್ಯಕ್ತವಾಗಿದೆ.

  • ಬೆಳ್ಳಂಬೆಳಗ್ಗೆ ರಾಮನಗರ ಟೌನ್ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ

    ಬೆಳ್ಳಂಬೆಳಗ್ಗೆ ರಾಮನಗರ ಟೌನ್ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ

    – ಕಾಡಾನೆ ಕಂಡು ಕಾಲ್ಕಿತ್ತ ವಾಕಿಂಗ್‌ಗೆ ಬಂದಿದ್ದ ಮಂದಿ

    ರಾಮನಗರ: ಜಿಲ್ಲೆಯಲ್ಲಿ ಕಾಡಾನೆಗಳ (Wild Elephant) ಉಪಟಳ ನಿರಂತರವಾಗಿ ಮುಂದುವರೆದಿದ್ದು, ಬೆಳ್ಳಂಬೆಳಗ್ಗೆ ರಾಮನಗರ ನಗರ (Ramanagara Town)  ವ್ಯಾಪ್ತಿಯಲ್ಲಿ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಹೆಚ್ಚಿಸಿವೆ.

    ರಾಮನಗರ ಟೌನ್ ವ್ಯಾಪ್ತಿಯ ರಂಗರಾಯರ ಕೆರೆ ಸಮೀಪ ಕಾಡಾನೆ ಕಂಡು ಪಕ್ಕದ ಪಾರ್ಕ್ನಲ್ಲಿ ವಾಕಿಂಗ್ ಮಾಡುತ್ತಿದ್ದ ಜನ ಎದ್ನೋ ಬಿದ್ನೋ ಎಂದು ಓಡಿದ್ದಾರೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಗಳನ್ನು ವಾಪಸ್ ಕಾಡಿಗಟ್ಟುವ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಐಶ್ವರ್ಯ ಗೌಡಳಿಂದ ವಂಚನೆಗೆ ಒಳಗಾಗಿದ್ರೆ ದೂರು ನೀಡಿ: ಎಸ್ಪಿ

    ಪಕ್ಕದ ದೊಡ್ಡಮಣ್ಣುಗುಡ್ಡೆ ಅರಣ್ಯ ವ್ಯಾಪ್ತಿಯಿಂದ ನಗರ ಪ್ರದೇಶಕ್ಕೆ ಬಂದಿರುವ ಕಾಡಾನೆಗಳು ರಂಗರಾಯರದೊಡ್ಡಿ ಲೇಔಟ್‌ನಲ್ಲಿ ಓಡಾಡಿ ಬಳಿಕ ಪಕ್ಕದ ಬೆಟ್ಟವನ್ನೇರಿವೆ. ನಿತ್ಯ ಒಂದಲ್ಲ ಒಂದು ಕಡೆ ಕಾಡಾನೆಗಳು ಉಪಟಳ ನೀಡುತ್ತಿರುವುದು ಅರಣ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಇದನ್ನೂ ಓದಿ: ಚೀನಾದಲ್ಲಿ ಮತ್ತೆ ವೈರಸ್‌ ಸ್ಫೋಟ; ರೋಗಿಗಳಿಂದ ತುಂಬಿ ತುಳುಕುತ್ತಿವೆ ಆಸ್ಪತ್ರೆಗಳು

  • ಪರಪುರುಷನ ಜೊತೆ ಕಾರೊಳಗೆ ಚಕ್ಕಂದವಾಡ್ತಿದ್ದ ಪತ್ನಿ- ರೊಚ್ಚಿಗೆದ್ದ ಪತಿ ಮಾಡಿದ್ದೇನು?

    ಪರಪುರುಷನ ಜೊತೆ ಕಾರೊಳಗೆ ಚಕ್ಕಂದವಾಡ್ತಿದ್ದ ಪತ್ನಿ- ರೊಚ್ಚಿಗೆದ್ದ ಪತಿ ಮಾಡಿದ್ದೇನು?

    ಚಂಡೀಗಢ: ಪರಪುರುಷನ ಜೊತೆ ತನ್ನ ಪತ್ನಿ ಕಾರೊಳಗೆ ಕುಳಿತುಕೊಂಡು ಚಕ್ಕಂದವಾಡುತ್ತಿದ್ದನ್ನು ಕಂಡು ವ್ಯಕ್ತಿಯೊಬ್ಬ ಆಕೆಯನ್ನು ಮನಬಂದಂತೆ ಥಳಿಸಿದ ಘಟನೆ ಹರಿಯಾಣದಲ್ಲಿ (Haryana) ನಡೆದಿದೆ.

    ಹರಿಯಾಣದ ಪಂಚುಕಾದ ಪಾರ್ಕ್‌ ಒಂದರಲ್ಲಿ ಪತಿ ಬ್ಯಾಟಿನಿಂದ ತನ್ನ ಪತ್ನಿಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

    ಆಗಿದ್ದೇನು..?: ವ್ಯಕ್ತಿಯ ಪತ್ನಿಯು ಕಾರಿನಲ್ಲಿ ಪರಪುರುಷನ ಜೊತೆ ಕುಳಿತುಕೊಂಡಿರುವುದು ಗಮನಕ್ಕೆ ಬಂದಿದೆ. ಕೂಡಲೇ ವ್ಯಕ್ತಿ ಕಾರಿನ ಬಳಿ ತೆರಳಿ ಮೊದಲು ಕಾರಿನ ಗ್ಲಾಸ್‌ ಒಡೆದು ಹಾಕಿದ್ದಾರೆ. ನಂತರ ಪತ್ನಿಯನ್ನು ಕಾರಿನಿಂದ ಎಳೆದು ಬ್ಯಾಟ್‌ನಿಂದ ಮನಬಂದಂತೆ ಹಲ್ಲೆ ಮಾಡಿದ್ದಾನೆ.

    ತನ್ನ ಮೇಲಿನ ಹಲ್ಲೆಯಿಂದ ಪಾರಾಗಲು ಮಹಿಳೆ ಜೋರಾಗಿ ಕೂಗಿಕೊಳ್ಳುತ್ತಾಳೆ. ಹೀಗಾಗಿ ಪಾರ್ಕ್‌ ನಲ್ಲಿದ್ದ ಮಂದಿ ಓಡೋಡಿ ಬಂದು ಹಲ್ಲೆಯನ್ನು ತಡೆಯುತ್ತಾರೆ. ಆದರೆ ಕಾರೊಳಗಡೆ ಇದ್ದ ವ್ಯಕ್ತಿ ಮಾತ್ರ ಮಹಿಳೆಯ ರಕ್ಷಣೆಗೆ ಬರಲಿಲ್ಲ. ಬದಲಾಗಿ ಗಲಾಟೆ ನೋಡಿಕೊಂಡೇ ಕಾರಿನಲ್ಲಿ ಕುಳಿತಿದ್ದನು. ಇದನ್ನೂ ಓದಿ: ಪಾಕ್‌ನಲ್ಲಿ ನನ್ನ ಮಕ್ಕಳ ಜೀವಕ್ಕೆ ಅಪಾಯವಿದೆ.. ಅವರನ್ನು ಬಿಟ್ಟು ತವರಿಗೆ ಹೋಗಲ್ಲ: ಭಾರತದ ಮಹಿಳೆ ಅಳಲು

    ಈ ಎಲ್ಲಾ ದೃಶ್ಯಗಳನ್ನು ಪಾರ್ಕ್‌ ನಲ್ಲಿದ್ದ ಇತರ ಕೆಲ ವ್ಯಕ್ತಿಗಳು ತಮ್ಮ ಮೊಬೈಲ್‌ ನಲ್ಲಿ ಸೆರೆಹಿಡಿದಿದ್ದಾರೆ. ಬಳಿಕ ಸೋಶಿಯಲ್‌ ಮೀಡಿಯಾಕ್ಕೆ ಹರಿಬಿಟ್ಟಿದ್ದಾರೆ. ಸದ್ಯ ಈ ವೀಡಿಯೋ ವೈರಲ್‌ ಆಗಿದೆ. ವೀಡಿಯೋದಲ್ಲಿ ವ್ಯಕ್ತಿಯು ನನಗೆ ಮೋಸ ಮಾಡುತ್ತಿದ್ದಿ ಎಂದು ಹೇಳುತ್ತಿರುವುದಾಗಿ ವರದಿಯಾಗಿದೆ.

    https://twitter.com/Fightter_Punch/status/1780349356467478577

    ಸದ್ಯ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಆಕೆಯ ಪತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪತಿಯ ವಿರುದ್ಧ ದೈಹಿಕ ಹಲ್ಲೆಯ ದೂರು ದಾಖಲಾಗಿದೆ. ಶೀಘ್ರವೇ ಆರೋಪಿಯನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಕಾರೊಳಗೆ ಕುಳಿತಿದ್ದ ಯುವತಿ ಮುಂದೆ ವ್ಯಕ್ತಿ ಅಸಭ್ಯ ವರ್ತನೆ

    ಕಾರೊಳಗೆ ಕುಳಿತಿದ್ದ ಯುವತಿ ಮುಂದೆ ವ್ಯಕ್ತಿ ಅಸಭ್ಯ ವರ್ತನೆ

    ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಯುವತಿಯ ಎದುರು ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿದ್ದಾನೆ. ಮಹದೇವಪುರ ಪಾರ್ಕ್ (Mahadevapura Park) ಎದುರು ಈ ಘಟನೆ ನಡೆದಿದೆ.

    ಕಾರನ್ನು ಪಾರ್ಕ್ ಮಾಡಿ ಕಾರಿನಲ್ಲಿ ಯುವತಿ ಕುಳಿತುಕೊಂಡಿದ್ದಳು. ಆ ಸಮಯದಲ್ಲಿ ಕಾರಿನ ಮುಂಭಾಗದಲ್ಲಿ ಬಂದ ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ಆತಂಕಗೊಂಡ ಯುವತಿ ಡೋರ್ ಲಾಕ್ ಮಾಡಿದ್ದಾಳೆ. ಬಳಿಕ ಕಾರಿನ ಬಳಿ ಬಂದ ಅಪರಿಚಿತ ವ್ಯಕ್ತಿ ಕಾರಿನ ಸುತ್ತ ಓಡಾಡಿದ್ದಾನೆ.

    ಭಯಭೀತಗೊಂಡ ಯುವತಿ ಕಾರಿನ ಸ್ಟೇರಿಂಗ್ ಕೆಳಗೆ ಅವಿತುಕೊಂಡಿದ್ದಾಳೆ. ಆಕೆಯ ಸ್ನೇಹಿತರೊಬ್ಬರು ಬಂದ ನಂತರ ಕಾರಿನ ಯುವತಿ ಕೆಳಗಿಳಿದಿದ್ದಾಳೆ. ತಾನು ಅನುಭವಿಸಿದ ಸಮಸ್ಯೆಯನ್ನು ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದಾಳೆ. ಜನವರಿ 5ರಂದು ಈ ಘಟನೆ ನಡೆದಿದೆ. ಇದನ್ನೂ ಓದಿ: ಅಪರೂಪದ ಬೃಹತ್ ಹಿಮಾಲಯನ್ ಗ್ರಿಫನ್ ಓಲ್ಚರ್ ರಣಹದ್ದು ಕಾರವಾರದಲ್ಲಿ ಪ್ರತ್ಯಕ್ಷ

  • ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನ

    ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನ

    ಆನೇಕಲ್: ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ (Bannerghatta) ಜೈವಿಕ ಉದ್ಯಾನವನ ವನ್ಯ ಜೀವಿಗಳ ತಾಣವಾಗಿರುವುದರಿಂದ ರಾಷ್ಟ್ರ ಮಟ್ಟದಲ್ಲಿ ಪ್ರಖ್ಯಾತಿ ಗಳಿಸಿದೆ. ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸಿ ಇಲ್ಲಿನ ವನ್ಯ ಜೀವಿಗಳನ್ನು ಕಂಡು ಸಂತಸಗೊಳ್ಳುತ್ತಾರೆ. ಇದೀಗ ಪಾರ್ಕ್‌ಗೆ ಮತ್ತೋರ್ವ ಹೊಸ ಅತಿಥಿ ಆಗಮನವಾಗಿದ್ದು, ಪ್ರಾಣಿ ಪ್ರಿಯರನ್ನು ಮತ್ತಷ್ಟು ಆಕರ್ಷಣೆಗೊಳಿಸುತ್ತಿದೆ.

    ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತಾ, ತನ್ನ ಮುದ್ದಾದ ಕಣ್ಣಿನ ನೋಟದಿಂದ ಎಲ್ಲರನ್ನೂ ತನ್ನತ್ತ ಆಕರ್ಷಿಸುತ್ತಿರುವ ಮರಿ ಜೀಬ್ರಾ (Zebra) ಬನ್ನೇರುಘಟ್ಟ ಜೈವಿಕ ಉದ್ಯಾನವನದ ಹೊಸ ಅತಿಥಿ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ (Park) ಕಬಿನಿ ಎಂಬ ಜೀಬ್ರಾ ಮುದ್ದಾರಿ ಮರಿಗೆ ಜನ್ಮ ನೀಡಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ ಕಬಿನಿ ಹಾಗೂ ಹರಿಶ್ಚಂದ್ರ ದಂಪತಿಗೆ ಮರಿ ಜನಿಸಿದೆ. ಸುಮಾರು ಮೂರರಿಂದ ನಾಲ್ಕು ವರ್ಷ ವಯಸ್ಸಿನ ತಾಯಿ ಕಬಿನಿ ಮೊದಲ ಬಾರಿಗೆ ಗರ್ಭಧರಿಸಿ ಮುದ್ದಾದ ಮರಿ ಜೀಬ್ರಾಗೆ ಜನ್ಮ ನೀಡಿದ್ದು, ಮರಿ ಜೀಬ್ರಾ ಸೇರ್ಪಡೆಯೊಂದಿಗೆ, ಮೃಗಾಲಯದಲ್ಲಿ ಒಟ್ಟು ಜೀಬ್ರಾಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ತಾಯಿ ಮತ್ತು ಮರಿ ಜೀಬ್ರಾ ಎರಡೂ ಆರೋಗ್ಯಕರವಾಗಿದ್ದು, ಪಾರ್ಕ್‌ನ ಪಶುವೈದ್ಯಕೀಯ ತಂಡ ಮತ್ತು ಪ್ರಾಣಿಪಾಲಕರು ಹೆಚ್ಚಿನ ಆರೈಕೆಯಿಂದ ನೋಡಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವೇ ದಿನಗಳಲ್ಲಿ ಪಾರ್ಕ್‌ನಲ್ಲಿ ತಾಯಿ ಜೀಬ್ರಾದೊಂದಿಗೆ ಮರಿ ಜೀಬ್ರಾವನ್ನು ಪ್ರವಾಸಿಗರು ಕಾಣಬಹುದಾಗಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯ ನಿರ್ವಾಹಕ ಅಧಿಕಾರಿ ಸೂರ್ಯ ಸೇನ್ ತಿಳಿಸಿದಿದ್ದಾರೆ. ಇದನ್ನೂ ಓದಿ:  ಸೆಪ್ಟೆಂಬರ್ 2ಕ್ಕೆ ‘ಆದಿತ್ಯ-ಎಲ್1’ ಉಡಾವಣೆ – ಏನಿದರ ವಿಶೇಷ?

    ಕಬಿನಿ ಜೀಬ್ರಾಗೆ ಇದು ಮೊದಲನೇ ಮರಿಯಾಗಿದ್ದು, ತಾಯಿ-ಮಗು ಆರೋಗ್ಯಕರವಾಗಿದೆ. ತಾಯಿ ಹಾಗೂ ಮರಿ ಜೀಬ್ರಾವನ್ನು ವಿಶೇಷ ಕಾಳಜಿ ಇಟ್ಟು ನೋಡಿಕೊಳ್ಳಲಾಗುತ್ತಿದೆ. ಮರಿ ಜೀಬ್ರಾಗೆ ತಾಯಿ ಕಬಿನಿ ಹೆಚ್ಚಿನ ಹಾಲು ನೀಡಬೇಕಾಗಿರುವ ಹಿನ್ನೆಲೆ ಪೋಷಕಾಂಶಗಳ ಹಣ್ಣುಹಂಪಲನ್ನು ತಾಯಿ ಜೀಬ್ರಾಗೆ ನೀಡಲಾಗುತ್ತಿದೆ. ಆದಷ್ಟು ಬೇಗ ಮರಿ ಜೀಬ್ರಾವನ್ನು ಪ್ರವಾಸಿಗರ ವೀಕ್ಷಣೆಗೆ ಅನುವು ಮಾಡಿಕೊಟ್ಟರೆ ಪಾರ್ಕ್‌ಗೆ ಬರುವ ಮಕ್ಕಳಿಗೆ ಮುದ್ದಾದ ಮರಿ ಜೀಬ್ರಾವನ್ನು ನೋಡಲು ಖುಷಿಯಾಗುತ್ತದೆ. ಜೊತೆಗೆ ಮುಂದಿನ ದಿನಗಳಲ್ಲಿ ಪಾರ್ಕ್ ನಲ್ಲಿ ಮರಿ ಜೀಬ್ರಾ ಒಂದು ರೀತಿಯ ಸಂತಸದ ಜೊತೆಗೆ ಪ್ರಾಣಿ-ಪಕ್ಷಿ ಪ್ರಿಯರ ಆಕರ್ಷಣೀಯವಾಗಲಿದೆ ಎಂದು ಪ್ರವಾಸಿಗರು ಸಂತಸ ಹಂಚಿಕೊಂಡರು. ಇದನ್ನೂ ಓದಿ: ದೇಶದಲ್ಲೇ ಮೊದಲ ಲಿಥಿಯಂ ಬ್ಯಾಟರಿ ಘಟಕ ಸ್ಥಾಪನೆಗೆ ಡಿಕೆಶಿ ಶಂಕುಸ್ಥಾಪನೆ

    ಒಟ್ಟಾರೆ ವನ್ಯ ಜೀವಿಗಳ ಪ್ರವಾಸಿ ತಾಣವಾದ ಬನ್ನೇರುಘಟ್ಟ ಜೈವಿಕ ಉದ್ಯಾನವನ ದಿನೇ ದಿನೇ ತನ್ನ ಖ್ಯಾತಿಯನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಇದೀಗ ಇದರ ಸೊಬಗನ್ನು ಮರಿ ಜೀಬ್ರಾ ಮತ್ತಷ್ಟು ಹೆಚ್ಚಿಸುವಂತೆ ಮಾಡಿದೆ. ಇದನ್ನೂ ಓದಿ: ಎರಡೂವರೆ ಗಂಟೆಯಲ್ಲಿ 9 ಎಕರೆ ಜಮೀನು ಹದ: ಜೋಡೆತ್ತುಗಳಿಗೆ ಮೆಚ್ಚುಗೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾತ್ರಿ ಪಾರ್ಕ್‍ನಲ್ಲಿ ಗೆಳೆಯನ ಜೊತೆ ಕುಳಿತಿದ್ದ ಹುಡುಗಿ ಮೇಲೆ ಗ್ಯಾಂಗ್‍ರೇಪ್!

    ರಾತ್ರಿ ಪಾರ್ಕ್‍ನಲ್ಲಿ ಗೆಳೆಯನ ಜೊತೆ ಕುಳಿತಿದ್ದ ಹುಡುಗಿ ಮೇಲೆ ಗ್ಯಾಂಗ್‍ರೇಪ್!

    ನವದೆಹಲಿ: 16 ವರ್ಷದ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣವೊಂದು ದೆಹಲಿಯ ಶಹಬಾದ್ ಡೈರಿ (Shahbad Dairy Rape Case) ಪ್ರದೇಶದಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಈ ಘಟನೆ ಜೂನ್ 27ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮದುವೆಯಾಗಲು ಹೆಣ್ಣು ಸಿಗದೆ ಮನನೊಂದು ಯುವಕ ಆತ್ಮಹತ್ಯೆ

    ಸಂತ್ರಸ್ತೆ ತನ್ನ ಗೆಳೆಯನ ಜೊತೆ ರಾತ್ರಿ ಸಮಯದಲ್ಲಿ ಪಾರ್ಕ್‍ನಲ್ಲಿ ಕುಳಿತಿದ್ದಳು. ಹೀಗೆ ಕುಳಿತುಕೊಂಡು ಮಾತನಾಡುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ಮೂವರು ಎಂಟ್ರಿ ಕೊಡುತ್ತಾರೆ. ಅಲ್ಲದೆ ಕುಳಿತಿರುವ ಇಬ್ಬರ ಜೊತೆ ಮಾತಿಗಿಳಿಯುತ್ತಾರೆ. ಮಾತು ಮಾತಿಗೆ ಬೆಳೆಯುತ್ತಾ ಮೂವರು ಹುಡುಗಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡುತ್ತಾರೆ.

    ತಮ್ಮ ಕಾಮತೃಷೆ ತೀರಿಸಿಕೊಂಡ ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇತ್ತ ಘಟನೆ ಸಂಬಂಧ ದೆಹಲಿ ಪೊಲೀಸರಿಗೆ (Delhi Police) ಮಾಹಿತಿ ರವಾನೆಯಾಗುತ್ತದೆ. ಸ್ಥಳಕ್ಕೆ ಬಂದ ಪೊಲೀಸರು ಹುಡುಗಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇತ್ತ ಕೃತ್ಯ ಎಸಗಿ ಪರಾರಿಯಾಗಿರುವ ಕಾಮುಕರ ಪತ್ತೆಗೆ ಬಲೆ ಬೀಸಿದ್ದಾರೆ.

    ಸದ್ಯ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಎಫ್‍ಐಆರ್ (FIR) ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂ-ಮೈ ಎಕ್ಸ್‌ಪ್ರೆಸ್‌ವೇಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ – ದಂಪತಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಫ್ಘಾನಿಸ್ತಾನದಲ್ಲಿ ಉದ್ಯಾನವನ, ರೆಸ್ಟೊರೆಂಟ್‌ಗಳಿಗೆ ಕುಟುಂಬ, ಮಹಿಳೆಯರೊಂದಿಗೆ ಹೋಗೋದು ಬ್ಯಾನ್

    ಅಫ್ಘಾನಿಸ್ತಾನದಲ್ಲಿ ಉದ್ಯಾನವನ, ರೆಸ್ಟೊರೆಂಟ್‌ಗಳಿಗೆ ಕುಟುಂಬ, ಮಹಿಳೆಯರೊಂದಿಗೆ ಹೋಗೋದು ಬ್ಯಾನ್

    ಕಾಬೂಲ್: ಅಫ್ಘಾನಿಸ್ತಾನದ (Afghanistan) ಹೆರಾತ್ (Herat) ಪ್ರಾಂತ್ಯದಲ್ಲಿ ಉದ್ಯಾನವನಗಳು (Gardens) ಹಾಗೂ ರೆಸ್ಟೊರೆಂಟ್‌ಗಳಿಗೆ (Restaurant) ಕುಟುಂಬ (Family) ಹಾಗೂ ಮಹಿಳೆಯರು (Women) ಹೋಗುವುದನ್ನು ತಾಲಿಬಾನ್ (Taliban) ನಿಷೇಧಿಸಿದೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ತಾಲಿಬಾನ್ ಮುಖ್ಯವಾಗಿ ಮಹಿಳೆಯರ ಮೇಲೆ ಹಿಡಿತ ಸಾಧಿಸುವುದನ್ನು ಮುಂದುವರಿಸುತ್ತಲೇ ಇದೆ. ಈ ಹಿಂದೆ ಪಾರ್ಕ್, ಜಿಮ್, ವಿಶ್ವವಿದ್ಯಾಲಯಗಳಿಗೆ ಮಹಿಳೆಯರು ಹೋಗುವುದನ್ನು ನಿಷೇಧಿಸಿದ ತಾಲಿಬಾನ್ ಇದೀಗ ಕುಟುಂಬದೊಂದಿಗೂ ಉದ್ಯಾನವನ ಹಾಗೂ ರೆಸ್ಟೊರೆಂಟ್‌ಗಳಿಗೆ ಹೋಗುವುದನ್ನು ನಿಷೇಧಿಸಿದೆ.

    ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರದೇಶದಲ್ಲಿ ತಾಲಿಬಾನ್ ಲಿಂಗ ಪ್ರತ್ಯೇಕತೆಯ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ ಈಗ ಪುರುಷರು ಫ್ಯಾಮಿಲಿ ರೆಸ್ಟೊರೆಂಟ್‌ಗಳಲ್ಲಿ ಕುಟುಂಬದ ಸದಸ್ಯರೊಂದಿಗೆ ಊಟ ಮಾಡುವಂತಿಲ್ಲ. ಮಾತ್ರವಲ್ಲದೇ ಪುರುಷರು ಹಾಗೂ ಮಹಿಳೆಯರು ಒಟ್ಟಿಗೆ ಉದ್ಯಾನವನಕ್ಕೂ ಹೋಗುವಂತಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಮುಸ್ಲಿಮರು ಭಾರತದಲ್ಲಿ ಚೆನ್ನಾಗೇ ಇದ್ದಾರೆ: ಪಾಶ್ಚಿಮಾತ್ಯ ದೇಶಗಳ ವಿರುದ್ಧ ಸೀತಾರಾಮನ್ ಕಿಡಿ

    ಸಾರ್ವಜನಿಕ ಪ್ರದೇಶಗಳಲ್ಲಿ ಮಹಿಳೆಯರು ಹಿಜಬ್ ಅನ್ನು ಸರಿಯಾಗಿ ಧರಿಸದ ಕಾರಣ ಹಾಗೂ ಇಂತಹ ಪ್ರದೇಶಗಳಲ್ಲಿ ಲಿಂಗ ಮಿಶ್ರಣದ ಕಾರಣದಿಂದಾಗಿ ಈ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೆಸ್ಟೊರೆಂಟ್‌ಗಳಲ್ಲಿ ಊಟಕ್ಕೆ ನಿಷೇಧ ಹೆರಾತ್ ಪ್ರದೇಶದಲ್ಲಿ ಮಾತ್ರವೇ ಅನ್ವಯಿಸುತ್ತದೆ. ಇಂತಹ ಆವರಣಗಳು ಪರುಷರಿಗೆ ತೆರೆದಿರುತ್ತದೆ ಎಂದು ವರದಿಗಳು ತಿಳಿಸಿವೆ.

    ಈ ಹಿಂದೆ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಪುರುಷರು ಹಾಗೂ ಮಹಿಳೆಯರು ವಿವಿಧ ದಿನಗಳಲ್ಲಿ ಉದ್ಯಾನವನಕ್ಕೆ ಭೇಟಿ ನೀಡಬಹುದು ಎಂದು ತಿಳಿಸಿತ್ತು. ಇದರ ಪ್ರಕಾರ ಗುರುವಾರ, ಶುಕ್ರವಾರ ಮತ್ತು ಶನಿವಾರ ಉದ್ಯಾನವನಗಳಲ್ಲಿ ಮಹಿಳೆಯರಿಗೆ ಹೋಗಲು ಅವಕಾಶವಿದ್ದು, ಭಾನುವಾರ, ಸೋಮವಾರ, ಮಂಗಳವಾರ ಹಾಗೂ ಬುಧವಾರ ಪುರುಷರಿಗೆ ಮಾತ್ರವೇ ತೆರೆಯಲಾಗುತ್ತದೆ ಎಂದು ತಿಳಿಸಲಾಗಿತ್ತು. ಇದನ್ನೂ ಓದಿ: ಉದ್ಯೋಗಿಯಿಂದಲೇ ಬ್ಯಾಂಕ್‌ನಲ್ಲಿ ಗುಂಡಿನ ದಾಳಿ – 5 ಮಂದಿ ಸಾವು, 9 ಮಂದಿಗೆ ಗಾಯ