Tag: parliament

  • ಪಹಲ್ಗಾಮ್‌ ದಾಳಿಗೆ ಖಂಡನೆ – ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ʻಬ್ರಿಕ್ಸ್‌ʼ ಸದಸ್ಯ ರಾಷ್ಟ್ರಗಳ ಬೆಂಬಲ

    ಪಹಲ್ಗಾಮ್‌ ದಾಳಿಗೆ ಖಂಡನೆ – ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ʻಬ್ರಿಕ್ಸ್‌ʼ ಸದಸ್ಯ ರಾಷ್ಟ್ರಗಳ ಬೆಂಬಲ

    – ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಯಶಸ್ಸು

    ನವದೆಹಲಿ: ಭಾರತ, ಚೀನಾ, ಬ್ರೆಜಿಲ್‌, ರಷ್ಯಾ ಒಳಗೊಂಡಿರುವ ʻಬ್ರಿಕ್ಸ್ʼ (BRICS) ಒಕ್ಕೂಟದ 10 ರಾಷ್ಟ್ರಗಳು ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನು (Pahalgam Terror Attack) ಖಂಡಿಸಿವೆ. ಅಲ್ಲದೇ ಭಯೋತ್ಪಾದನೆ ವಿರುದ್ಧ ಒಗ್ಗಟ್ಟಾಗಿ ಹೋರಾಡಲು ನಿರ್ಧರಿಸಿದ್ದು, ಭಾರತಕ್ಕೆ ಬೆಂಬಲ ಸೂಚಿಸಿವೆ. ಇದು ಭಾರತಕ್ಕೆ ಸಿಕ್ಕ ಮತ್ತೊಂದು ರಾಜತಾಂತ್ರಿಕ ಯಶಸ್ಸಾಗಿದೆ.

    ಭಾರತ ಸೇರಿದಂತೆ 10 ʻಬ್ರಿಕ್ಸ್‌ʼ ಸದಸ್ಯ ರಾಷ್ಟ್ರಗಳ ಸಂಸತ್‌ ಪ್ರತಿನಿಧಿಗಳು (BRICS Parliamentary Forum) ಇದೇ ಜೂ.4-5ರಂದು ಬ್ರೆಲಿಯಾದಲ್ಲಿ ನಡೆದ 11ನೇ ವಾರ್ಷಿಕ ಸಭೆಯಲ್ಲಿ ಭಾಗವಹಿಸಿದ್ದರು. ಬ್ರಿಕ್ಸ್ ಸಂಸದೀಯ ವೇದಿಕೆಯಲ್ಲಿ ಭಾರತ, ಬ್ರೆಜಿಲ್, ರಷ್ಯಾ, ಚೀನಾ, ದಕ್ಷಿಣ ಆಫ್ರಿಕಾ, ಇರಾನ್, ಯುನೈಟೆಡ್ ಅರಬ್ ಎಮಿರೇಟ್ಸ್, ಈಜಿಪ್ಟ್, ಇಥಿಯೋಪಿಯಾ ಮತ್ತು ಇಂಡೋನೇಷ್ಯಾ ಸಂಸತ್‌ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಇದೇ ಸಭೆಯಲ್ಲಿ ಲೋಕಸಭಾ ಸ್ಪೀಕ‌ರ್ ಓಂ ಬಿರ್ಲಾ ಅವರ ನೇತೃತ್ವದ ಭಾರತೀಯ ಸಂಸದೀಯ ನಿಯೋಗವು ಬ್ರೆಸಿಲಿಯಾದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಭಾಗಿಯಾಗಿ, ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟವನ್ನು ಪ್ರತಿಪಾದಿಸಿತು.

    ಭಯೋತ್ಪಾದಕ ಸಂಘಟನೆಗಳಿಗೆ ಹಣಕಾಸಿನ ನೆರವನ್ನು ಕಡಿತಗೊಳಿಸುವುದು, ಗುಪ್ತಚರ ಮಾಹಿತಿಯನ್ನು ಹಂಚಿಕೊಳ್ಳುವುದು, ಆಧುನಿಕ ತಂತ್ರಜ್ಞಾನಗಳ ದುರ್ಬಳಕೆ ನಿಯಂತ್ರಿಸುವುದು, ಕಾನೂನು ಪ್ರಕ್ರಿಯೆಗೆ ಸಹಕರಿಸುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಭಾರತದ ನಿಯೋಗವು ಬಲವಾಗಿ ಪ್ರತಿಪಾದಿಸಿತು. ಇದನ್ನೂ ಓದಿ: `ಆಪರೇಷನ್ ಸಿಂಧೂರ’ ಪಾಕಿಸ್ತಾನಕ್ಕೆ ಸದಾ ಕಾಡಲಿದೆ: ಮೋದಿ

    ಹಲವು ಸುತ್ತಿನ ಮಾತುಕತೆ ಬಳಿಕ ಸದಸ್ಯ ರಾಷ್ಟ್ರಗಳು ಪಹಲ್ಲಾಮ್ ದಾಳಿಯನ್ನು ಖಂಡಿಸಿದವು ಮತ್ತು ಭಯೋತ್ಪಾದನೆ ನಿಗ್ರಹದ ಅಗತ್ಯತೆ ಬಗ್ಗೆ ಒತ್ತಿ ಹೇಳಿದವು. ಜೊತೆಗೆ ಕೃತಕ ಬುದ್ಧಿಮತ್ತೆ, ಜಾಗತಿಕ ವ್ಯಾಪಾರ ಮತ್ತು ಆರ್ಥಿಕತೆ, ಅಂತರ್‌ ಸಂಸದೀಯ ಸಹಕಾರ, ಜಾಗತಿಕ ಶಾಂತಿ ಮತ್ತು ಭದ್ರತೆಯಂತಹ ಪ್ರಮುಖ ವಿಷಯಗಳಿಗೆ ಒಮ್ಮತ ಸೂಚಿಸುವ ಬಗ್ಗೆಯೂ ಚರ್ಚಿಸಲಾಯಿತು. ಇದನ್ನೂ ಓದಿ: ಪರ ಪುರುಷನೊಂದಿಗೆ ಸರಸಕ್ಕೆ ಅಡ್ಡಿ – ಅನ್ನಕ್ಕೆ ವಿಷ ಹಾಕಿ ಇಡೀ ಕುಟುಂಬವನ್ನೇ ಮುಗಿಸಲು ಯತ್ನಿಸಿದ್ದಾಕೆ ಅರೆಸ್ಟ್‌

    ಸಭೆಯಲ್ಲಿ ಬ್ರೆಜಿಲ್, ರಷ್ಯಾ, ಚೀನಾ, ದಕ್ಷಿಣ ಆಫ್ರಿಕಾ, ಇರಾನ್ ಮತ್ತು ಸಂಯುಕ್ತ ಅರಬ್ ಸಂಸ್ಥಾನದ ಪ್ರತಿನಿಧಿಗಳು ಭಾಗಿಯಾಗಿದ್ದರು. ಅಲ್ಲದೇ ಮುಂದಿನ ಬ್ರಿಕ್ಸ್‌ ಸಭೆಯು ಭಾರತದಲ್ಲಿ ನಡೆಯಲಿದ್ದು, ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರನ್ನೇ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇದನ್ನೂ ಓದಿ: ದೇಶಾದ್ಯಂತ ಬಕ್ರೀದ್‌ ಆಚರಣೆ ಸಂಭ್ರಮ; ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಕೆ

  • ಸಂಸತ್‌ ಭವನದಲ್ಲಿ ಬಸವ ಜಯಂತಿ – ಉಪಸಭಾಪತಿ, ಸಂಸದರಿಂದ ಪುಷ್ಪ ನಮನ

    ಸಂಸತ್‌ ಭವನದಲ್ಲಿ ಬಸವ ಜಯಂತಿ – ಉಪಸಭಾಪತಿ, ಸಂಸದರಿಂದ ಪುಷ್ಪ ನಮನ

    ನವದೆಹಲಿ: ಕನ್ನಡ ವಚನಕಾರ ಹಾಗೂ ಸಮಾಜ ಸುಧಾರಕ ಬಸವಣ್ಣನವರ ಜಯಂತಿಯನ್ನು (Basava Jayanti) ಸಂಸತ್‌ ಭವನದಲ್ಲಿ (Parliament) ಆಚರಣೆ ಮಾಡಲಾಯಿತು.

    ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ್ ಸಿಂಗ್, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಕಿರಣ್ ರಿಜಿಜು, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಮತ್ತು ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವು ನಾಯಕರು ಬಸವಣ್ಣನವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

    ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಸಹ ಬಸವ ಜಯಂತಿಗೆ ಶುಭ ಹಾರೈಸಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ. ಜಗದ್ಗುರು ಬಸವೇಶ್ವರರ ಆಳವಾದ ಜ್ಞಾನವನ್ನು ನಾವು ಸ್ಮರಿಸುತ್ತೇವೆ. ಸಮಾಜದ ಕೆಳಹಂತದಲ್ಲಿದ್ದವರನ್ನು ಮೇಲಕ್ಕೆತ್ತಲು ಅವರು ನಡೆಸಿದ ಪ್ರಯತ್ನಗಳು ನಮಗೆ ಮಾರ್ಗದರ್ಶನ ನೀಡುತ್ತಲೇ ಇವೆ ಎಂದು ಅವರು ಬರೆದುಕೊಂಡಿದ್ದಾರೆ.

    2015 ರಲ್ಲಿ ಮೋದಿಯವರು ಲಂಡನ್‌ನಲ್ಲಿ ಬಸವೇಶ್ವರರ ಪ್ರತಿಮೆಯನ್ನು ಸಹ ಅನಾವರಣಗೊಳಿಸಿದ್ದರು.

    ಬಸವಣ್ಣನವರು 12 ನೇ ಶತಮಾನದ ಮಹಾನ್ ತತ್ವಜ್ಞಾನಿ. ಅವರು ಲಿಂಗಾಯತ ಸಂಪ್ರದಾಯವನ್ನು ಸ್ಥಾಪಿಸಿದರು. ಈ ಮೂಲಕ ಹಿಂದುಳಿದ ವರ್ಗಗಳು ಮತ್ತು ಮಹಿಳೆಯರ ಸಮಾನತೆಗಾಗಿ ಹೋರಾಡಿದರು.

    ಸಮಾನತೆಯ ಪ್ರತಿಪಾದಕ ಎಂದು ಕರೆಯಲ್ಪಡುವ ಬಸವಣ್ಣನವರು ಅನುಭವ ಮಂಟಪ (ಆಧ್ಯಾತ್ಮಿಕ ಅನುಭವದ ಸಭಾಂಗಣ) ಎಂಬ ಪರಿಕಲ್ಪನೆಯನ್ನು ಪರಿಚಯಿಸಿದರು. ಅಲ್ಲಿ ಎಲ್ಲಾ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ಪುರುಷರು ಮತ್ತು ಮಹಿಳೆಯರು ಜೀವನದ, ಆಧ್ಯಾತ್ಮಿಕ ವಿಚಾರಧಾರೆಗಳನ್ನು ಚರ್ಚಿಸುತ್ತಿದ್ದರು. ಅವರು ಅಹಿಂಸೆಯ ಪ್ರಬಲ ಪ್ರತಿಪಾದಕರಾಗಿದ್ದರು.

  • ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ ಬಿಲ್ ಪಾಸ್ ಆಗಿರೋದು ಇತಿಹಾಸದಲ್ಲಿ ಕೆಟ್ಟ ದಿನ- ಬೋಸರಾಜು

    ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ ಬಿಲ್ ಪಾಸ್ ಆಗಿರೋದು ಇತಿಹಾಸದಲ್ಲಿ ಕೆಟ್ಟ ದಿನ- ಬೋಸರಾಜು

    ಬೆಂಗಳೂರು: ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ ಬಿಲ್ (Waqf Bill) ಅಂಗೀಕಾರ ಆಗಿರುವುದು ಇತಿಹಾಸದಲ್ಲಿ ಒಂದು ಕೆಟ್ಟ ದಿನ ಎಂದು ಸಚಿವ ಎನ್.ಎಸ್ ಬೋಸರಾಜು (NS Bosaraju) ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಜುಲೈಯೊಳಗೆ ಹಳದಿ ಮಾರ್ಗ ಸಂಚಾರಕ್ಕೆ ಮುಕ್ತ

    ವಿಕಾಸಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ (BJP), ಆರ್‌ಎಸ್‌ಎಸ್ (RSS) ಅವರ ಪ್ರಯತ್ನದಿಂದ ಈ ಮಸೂದೆ ತಂದಿದ್ದಾರೆ. ದೇಶದ ಎಲ್ಲಾ ವಿರೋಧ ಪಕ್ಷಗಳು ವಿಧೇಯಕವನ್ನು ವಿರೋಧ ಮಾಡಿದ್ದಾರೆ. ಜಂಟಿ ಸದನ ಸಮಿತಿಗೆ ಹೋದಾಗಲು ಸಮಿತಿಯ ಸಭೆಯಲ್ಲಿ ವಿರೋಧಿಸಿದ್ದಾರೆ. ತಮ್ಮ ಪ್ರಯತ್ನಕ್ಕೆ ಬಲ ತೋರಿಸಿ ಬಿಲ್ ಪಾಸ್ ಮಾಡಿಕೊಂಡಿದ್ದಾರೆ. ಸಂವಿಧಾನಕ್ಕೆ ವಿರುದ್ಧವಾಗಿ ನರೇಂದ್ರ ಮೋದಿ ನಡೆದುಕೊಂಡಿದ್ದಾರೆ. ಗುರುವಾರ ಸಂಸತ್‌ನಲ್ಲಿ ನಡೆದಿರುವುದು ಕೆಟ್ಟ ದಿನ ಎಂದು ನಾವು ಭಾವಿಸುತ್ತೇವೆ. ಮುಂದೆ ಏನೇ ಪರಿಣಾಮ ಆದರೂ ಅದಕ್ಕೆ ಕೇಂದ್ರವೇ ಜವಾಬ್ದಾರಿವಹಿಸಬೇಕು ಎಂದು ಆಗ್ರಹಿಸಿದರು.

    ಕರ್ನಾಟಕದಲ್ಲಿ ಬಿಲ್ ಜಾರಿ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಏನು ಮಾಡಬೇಕು ಎಂದು ನಾವು ವಿಚಾರ ಮಾಡ್ತೀವಿ. ಬಿಲ್‌ಗೆ ನಾವು ವಿರೋಧ ಮಾಡಿದ್ದೇವೆ. ಇಡೀ ದೇಶದಲ್ಲಿ ವಿಪಕ್ಷಗಳು ವಿರೋಧ ಮಾಡಿವೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂದು ವಿಚಾರ ಮಾಡುತ್ತೇವೆ ಎಂದು ತಿಳಿಸಿದರು.ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ

  • ಮಾ.27ಕ್ಕೆ ಸಂಸತ್ತಿನಲ್ಲಿ `ಛಾವಾ’ ಸಿನಿಮಾ ವೀಕ್ಷಿಸಲಿರುವ ಪ್ರಧಾನಿ ಮೋದಿ

    ಮಾ.27ಕ್ಕೆ ಸಂಸತ್ತಿನಲ್ಲಿ `ಛಾವಾ’ ಸಿನಿಮಾ ವೀಕ್ಷಿಸಲಿರುವ ಪ್ರಧಾನಿ ಮೋದಿ

    ನವದೆಹಲಿ: ಇದೇ ಮಾ.27 ರಂದು ಸಂಸತ್ತಿನಲ್ಲಿ ಪ್ರಧಾನಿ ಮೋದಿ (PM Modi) ಸೇರಿದಂತೆ ಕೇಂದ್ರ ಸಚಿವರು ವಿಕ್ಕಿ ಕೌಶಲ್ (Vicky Kaushal)  ನಟನೆಯ `ಛಾವಾ’ (Chhaava) ಸಿನಿಮಾ ವೀಕ್ಷಿಸಲಿದ್ದಾರೆ.

    ಮರಾಠಾ ದೊರೆ ಛತ್ರಪತಿ ಸಂಭಾಜಿ ಮಹಾರಾಜರ (Sambhaji Maharaj) ಜೀವನಾಧಾರಿತ `ಛಾವಾ’ ಸಿನಿಮಾವನ್ನು ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿರುವ ಬಾಲಯೋಗಿ ಸಭಾಂಗಣದಲ್ಲಿ ಪ್ರದರ್ಶಿಸಲಾಗುವುದು ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ:ತಿರುಪತಿ ತಿಮ್ಮಪ್ಪನ ಬಜೆಟ್‌ 5,259 ಕೋಟಿಗೆ ಹೆಚ್ಚಳ – ದೇವಾಲಯದಲ್ಲಿ ಅಡುಗೆ ಕೆಲಸಗಾರರ ವೇತನ ಹೆಚ್ಚಳಕ್ಕೆ ನಿರ್ಧಾರ

    ಛಾವಾ ಸಿನಿಮಾದ ವಿಶೇಷ ಪ್ರದರ್ಶನದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್  (Amit Shah) ಸೇರಿದಂತೆ ಎಲ್ಲಾ ಕೇಂದ್ರ ಸಚಿವರು ಭಾಗಿಯಾಗುವ ನಿರೀಕ್ಷೆಯಿದೆ. ಜೊತೆಗೆ ಛಾವಾ ಸಿನಿಮಾದಲ್ಲಿ ಸಂಭಾಜಿ ಮಹಾರಾಜರ ಪಾತ್ರದಲ್ಲಿ ಕಾಣಿಸಿಕೊಂಡಿರುವ ವಿಕ್ಕಿ ಕೌಶಲ್ ಹಾಗೂ ಇಡೀ ಸಿನಿಮಾ ತಂಡವು ಹಾಜರಾಗುವ ನಿರೀಕ್ಷೆಯಿದೆ.

    ಇದೇ ಫೆ.14 ರಂದು ಲಕ್ಷ್ಮಣ್‌ ಉಟೇಕರ್ (Laxman Utekar) ನಿರ್ದೇಶನದ ಛಾವಾ ಸಿನಿಮಾ ದೇಶ್ಯಾದ್ಯಂತ ಬಿಡುಗಡೆಯಾಗಿತ್ತು. ಈ ಸಿನಿಮಾ ಮರಾಠಾ ದೊರೆ ಛತ್ರಪತಿ ಸಂಭಾಜಿ ಮಹಾರಾಜರ ಜೀವನವನ್ನು ಆಧರಿಸಿದೆ. ಅವರ ಧೈರ್ಯ ಮತ್ತು ಔರಂಗಜೇಬನಿಂದಾಗಿ ಅನುಭವಿಸಿದ ಹಿಂಸೆಯನ್ನು ವಿವರಿಸುತ್ತದೆ.

    ದೇಶ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಈ ಸಿನಿಮಾ ಕುರಿತು ಕಳೆದ ಒಂದು ತಿಂಗಳ ಹಿಂದೆ ದೆಹಲಿಯಲ್ಲಿ ನಡೆದಿದ್ದ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನದ (Akhila Bharatiya Marathi Sahitya Sammelana) ಭಾಷಣದಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.ಇದನ್ನೂ ಓದಿ:ಹೊಸ ವಾಹನ ಖರೀದಿದಾರರಿಗೆ ಶಾಕ್ – ಏಪ್ರಿಲ್‌ನಿಂದ ಆಟೋ, ಕಾರು, ಬೈಕ್ ದರ ಏರಿಕೆ

  • ಸಂಸದರ ಸಂಬಳ 24% ಏರಿಕೆ – ಈಗ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

    ಸಂಸದರ ಸಂಬಳ 24% ಏರಿಕೆ – ಈಗ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

    ನವದೆಹಲಿ: ಕೇಂದ್ರ ಸರ್ಕಾರ ಸಂಸದರ ಸಂಬಳವನ್ನು (Salary) 24% ಏರಿಕೆ ಮಾಡಿದೆ. ಏಪ್ರಿಲ್‌ 1 ರಿಂದ ಇದು ಜಾರಿಗೆ ಬರಲಿದೆ.

    ಸಂಸದೀಯ ವ್ಯವಹಾರಗಳ ಸಚಿವಾಲಯದ (Ministry of Parliamentary Affairs) ಸುತ್ತೋಲೆಯ ಪ್ರಕಾರ, ಸಂಸದರ ಮಾಸಿಕ ವೇತನವು 1,00,000 ರೂ.ಗಳಿಂದ 1,24,000 ರೂ.ಗಳಿಗೆ ಏರಿಕೆಯಾಗಿದೆ.  ದೈನಂದಿನ ಭತ್ಯೆ 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ.

    ಸಂಸದರು ಮತ್ತು ಮಾಜಿ ಸಂಸದರ ಮಾಸಿಕ ಪಿಂಚಣಿಯನ್ನು 25,000 ರೂ.ಗಳಿಂದ 31,000 ರೂ.ಗಳಿಗೆ ಪರಿಷ್ಕರಿಸಲಾಗಿದೆ. ಹೆಚ್ಚುವರಿಯಾಗಿ ಮಾಜಿ ಸಂಸದರ ಹೆಚ್ಚುವರಿ ಪಿಂಚಣಿಯನ್ನು ವರ್ಷಕ್ಕೆ 2,000 ರೂ.ಗಳಿಂದ 2,500 ರೂ.ಗಳಿಗೆ ಏರಿಕೆ ಮಾಡಲಾಗಿದೆ.

    ಬೇರೆ ಏನೇನು ಸಿಗುತ್ತೆ?
    ಕ್ಷೇತ್ರದೊಳಗಿನ ತಿರುಗಾಟದ ಖರ್ಚಿಗಾಗಿ ಕ್ಷೇತ್ರದ ಭತ್ಯೆಯಾಗಿ ಪ್ರತಿ ತಿಂಗಳು 70,000 ರೂ. ಸಿಗುತ್ತದೆ. ಕಚೇರಿ ನಿರ್ವಹಣೆಗಾಗಿ ಪ್ರತಿ ತಿಂಗಳು 60,000 ರೂ. ಸಿಗುತ್ತದೆ

    ಸಂಸದರಿಗೆ ಪ್ರತಿವರ್ಷ ತಾವೂ ಸೇರಿದಂತೆ ಕುಟುಂಬ ಸದಸ್ಯರು 34 ಬಾರಿ ಉಚಿತವಾಗಿ ವಿಮಾನ ಪ್ರಯಾಣ ಕೈಗೊಳ್ಳಬಹುದು. ಅದೇ ರೀತಿ ವೈಯಕ್ತಿಕವಾಗಿ ಹಾಗೂ ಸಂಸದರ ಕಾರ್ಯಗಳಿಗಾಗಿ ಉಚಿತವಾಗಿ ಫಸ್ಟ್‌ ಕ್ಲಾಸ್‌ ರೈಲು ಪ್ರಯಾಣ ಮಾಡಬಹುದು. ಅಷ್ಟೇ ಅಲ್ಲ ತಮ್ಮ ಕ್ಷೇತ್ರ ಸುತ್ತಾಟಕ್ಕಾಗಿ ಮೈಲೇಜ್‌ ಭತ್ಯೆಯನ್ನು ಪಡೆಯಬಹುದಾಗಿದೆ.

     

  • ಡಿಎಂಕೆ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡ್ತಿದೆ – ತ್ರಿಭಾಷಾ ಸೂತ್ರಕ್ಕೆ ವಿರೋಧಕ್ಕೆ ಧರ್ಮೇಂದ್ರ ಪ್ರಧಾನ್ ಟೀಕೆ

    ಡಿಎಂಕೆ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡ್ತಿದೆ – ತ್ರಿಭಾಷಾ ಸೂತ್ರಕ್ಕೆ ವಿರೋಧಕ್ಕೆ ಧರ್ಮೇಂದ್ರ ಪ್ರಧಾನ್ ಟೀಕೆ

    – ಸಭಾತ್ಯಾಗ, ಪ್ರತಿಭಟನೆ ಮೂಲಕ ಬಿಸಿ ಮುಟ್ಟಿಸಿದ ಡಿಎಂಕೆ ಸಂಸದರು

    ನವದೆಹಲಿ: ಹೊಸ ಶಿಕ್ಷಣ ನೀತಿ ಮತ್ತು ತ್ರಿಭಾಷಾ ಸೂತ್ರಕ್ಕೆ ವಿರೋಧ (language war) ವ್ಯಕ್ತಪಡಿಸುತ್ತಿರುವ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ವಿರೋಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಲೋಕಸಭೆಯಲ್ಲಿ ಮಾತನಾಡಿದ ಅವರು, ತಮಿಳುನಾಡಿನಲ್ಲಿ (Tamil Nadu) ವಿದ್ಯಾರ್ಥಿಗಳ ಅಭಿವೃದ್ಧಿ ಬಗ್ಗೆ ಡಿಎಂಕೆ ಪಕ್ಷವು ಅಪ್ರಾಮಾಣಿಕ ಮತ್ತು ಅಸಡ್ಡೆ ಹೊಂದಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಬಿಹಾರದಲ್ಲಿ ಸೀತಾ ಮಾತೆಯ ಭವ್ಯ ಮಂದಿರ ನಿರ್ಮಾಣಕ್ಕೆ ಬಿಜೆಪಿ ಪ್ಲ್ಯಾನ್‌

    ಡಿಎಂಕೆ ನಾಯಕರು ತಮಿಳುನಾಡಿನ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ, ಅವರ ಏಕೈಕ ಕಾರ್ಯಸೂಚಿ ಭಾಷಾ ಆಧಾರಿತ ವಿಭಜನೆಗಳನ್ನು ಹುಟ್ಟುಹಾಕುವುದು. ಅವರು ರಾಜಕೀಯ ಕಿಡಿಗೇಡಿತನ ಮಾಡುತ್ತಿದ್ದಾರೆ. ಅವರು ಪ್ರಜಾಪ್ರಭುತ್ವ ವಿರೋಧಿ ಮತ್ತು ಅನಾಗರಿಕರು ಎಂದು ಅವರು ಟೀಕಿಸಿದರು.

    ಪ್ರಧಾನ್ ಅವರು ಡಿಎಂಕೆ ಪಕ್ಷದ ವಿರುದ್ಧ ಮಾಡಿದ ಕಟು ಟೀಕೆ ಕೋಲಾಹಲಕ್ಕೆ ಕಾರಣವಾಯಿತು, ಇದು ಡಿಎಂಕೆ ಸಂಸದರ ಪ್ರತಿಭಟನೆಗೆ ಕಾರಣವಾಯಿತು ಮತ್ತು ಕಲಾಪವನ್ನು 30 ನಿಮಿಷಗಳ ಕಾಲ ಮುಂದೂಡಲಾಯಿತು. ರಾಜ್ಯಸಭೆಯಲ್ಲೂ ತ್ರಿಭಾಷಾ ನೀತಿ ಮತ್ತು ಗಡಿ ರಚನಾ ವಿಷಯಗಳ ವಿಷಯವನ್ನು ಎತ್ತಿದ್ದ ನಂತರ ಡಿಎಂಕೆ ಸಭಾತ್ಯಾಗ ಮಾಡಿತು.

    ಸಭಾತ್ಯಾಗದ ಬಗ್ಗೆ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ, ಇದು ಬೇಜವಾಬ್ದಾರಿ ವರ್ತನೆ, ಅವರು ನಿಯಮಗಳನ್ನು ಅರ್ಥಮಾಡಿಕೊಳ್ಳಬೇಕು. ಇದು ಸಂಸತ್ತಿನ ಅವಮಾನಿಸುವ ದುಷ್ಟ ಸಂಚು, ನಮ್ಮ ಸರ್ಕಾರ ನಿಯಮಗಳ ಅಡಿಯಲ್ಲಿ ಎಲ್ಲವನ್ನೂ ಚರ್ಚಿಸಲು ಸಿದ್ಧವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಸರ್ಕಾರಿ ವೈದ್ಯಕೀಯ ಕಾಲೇಜು ವೈದ್ಯರ ಹಾಜರಾತಿಗೆ ಬಯೋ ಮೆಟ್ರಿಕ್ ವ್ಯವಸ್ಥೆ: ಶರಣು ಪ್ರಕಾಶ್ ಪಾಟೀಲ್

  • ಸಂಸತ್‌ನಲ್ಲಿ ಮತದಾರರ ಪಟ್ಟಿಯಲ್ಲಿನ ದೋಷಗಳ ಚರ್ಚೆಗೆ ವಿಪಕ್ಷಗಳ ಆಗ್ರಹ

    ಸಂಸತ್‌ನಲ್ಲಿ ಮತದಾರರ ಪಟ್ಟಿಯಲ್ಲಿನ ದೋಷಗಳ ಚರ್ಚೆಗೆ ವಿಪಕ್ಷಗಳ ಆಗ್ರಹ

    ನವದೆಹಲಿ: ಮತದಾರರ ಪಟ್ಟಿಯಲ್ಲಿನ ದೋಷಗಳ ವಿಚಾರಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ವಿರೋಧ ಪಕ್ಷಗಳು ಸಂಸದರು ಆಗ್ರಹಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಾತನಾಡಿದ ಸಂಸದರು, ಈ ಬಗ್ಗೆ ಚರ್ಚೆಗೆ ಅವಕಾಶ ನೀಡಲು ಒತ್ತಾಯಿಸಿ ಗದ್ದಲ ನಡೆಸಿದರು.

    ಲೋಕಸಭೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸರ್ಕಾರ ಮತದಾರರ ಪಟ್ಟಿಗಳನ್ನು ಸಿದ್ಧಪಡಿಸುವುದಿಲ್ಲ ಎಂಬ ನಿಮ್ಮ ಹೇಳಿಕೆಯನ್ನು ನಾವು ಸ್ವೀಕರಿಸುತ್ತೇವೆ. ಆದರೆ ಈ ವಿಷಯದ ಬಗ್ಗೆ ಚರ್ಚೆ ನಡೆಯಬೇಕೆಂದು ಮಹಾರಾಷ್ಟ್ರ ಸೇರಿದಂತೆ ಪ್ರತಿಯೊಂದು ರಾಜ್ಯದಲ್ಲೂ ವಿರೋಧ ಪಕ್ಷಗಳು ಒಂದೇ ಧ್ವನಿಯಲ್ಲಿ ಪ್ರಶ್ನೆಗಳನ್ನು ಎತ್ತಿವೆ. ಹೀಗಾಗಿ ಈ ಬಗ್ಗೆ ಚರ್ಚೆಯಾಗಬೇಕು ಎಂದರು. ಇದನ್ನೂ ಓದಿ: ನಟಿ ರನ್ಯಾಗೆ ಸಿದ್ದರಾಮಯ್ಯರಿಂದ ಪರಮೇಶ್ವರ್‌ವರೆಗೆ ಯಾರೂ ಸಪೋರ್ಟ್ ಮಾಡಿಲ್ಲ: ಚಲುವರಾಯಸ್ವಾಮಿ

    ಈ ವಿಷಯದಲ್ಲಿ ರಾಜ್ಯಸಭೆಯಲ್ಲಿ ಮಾತನಾಡಿದ ಸಂಸದ ಕಪಿಲ್ ಸಿಬಲ್, ಚುನಾವಣಾ ಆಯೋಗವು ಸರ್ಕಾರದ ಕೈಯಲ್ಲಿದೆ. ಪ್ರಜಾಪ್ರಭುತ್ವ ಹೀಗೆಯೇ ಮುಂದುವರಿದರೆ ಮತ್ತು ಚುನಾವಣಾ ಆಯೋಗವು ಸರ್ಕಾರಕ್ಕಾಗಿ ಲಾಬಿ ಮಾಡುತ್ತಲೇ ಇದ್ದರೆ ಬರುವ ಫಲಿತಾಂಶಗಳು ನಿಮ್ಮ ಮುಂದೆ ಇವೆ. ಈ ವ್ಯವಸ್ಥೆ ಮುಂದುವರಿದರೆ ಇದು ಪ್ರಜಾಪ್ರಭುತ್ವವಲ್ಲ. ನಾವು ಹಲವು ವರ್ಷಗಳಿಂದ ಅನುಮಾನದಿಂದ ಇದ್ದೇವೆ. ನೆಲದ ಮೇಲೆ ಏನಾಗುತ್ತದೆ ಎಂದು ಎಲ್ಲರಿಗೂ ತಿಳಿದಿದೆ, ಆದರೆ ಕೇಳಲು ಯಾರೂ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ – ನ್ಯೂಯಾರ್ಕ್‌ಗೆ ಹೊರಟಿದ್ದ ವಿಮಾನ ಮುಂಬೈಗೆ ವಾಪಸ್‌

    ತೃಣಮೂಲ ಕಾಂಗ್ರೆಸ್ ಸದಸ್ಯ ಸೌಗತ ರಾಯ್ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಕೆಲವು ದೋಷಗಳಿವೆ. ಪಶ್ಚಿಮ ಬಂಗಾಳ ಮುರ್ಷಿದಾಬಾದ್ ಮತ್ತು ಬುರ್ದ್ವಾನ್ ಸಂಸದೀಯ ಕ್ಷೇತ್ರಗಳು ಮತ್ತು ಹರಿಯಾಣದಲ್ಲಿ ಒಂದೇ ರೀತಿಯ ಇಪಿಐಸಿ (ಚುನಾವಣಾ ಫೋಟೋ ಗುರುತಿನ ಚೀಟಿ) ಸಂಖ್ಯೆಯನ್ನು ಹೊಂದಿರುವ ಮತದಾರರಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ರನ್ಯಾ ಕೇಸ್: ಯಾವ ಸಚಿವರು? – ಎಂ.ಬಿ ಪಾಟೀಲ್‌ ಪ್ರಶ್ನೆ

    ಮಹಾರಾಷ್ಟ್ರದ ವಿಷಯದಲ್ಲಿಯೂ ಇದನ್ನು ಹೇಳಲಾಗಿದೆ. ಹರಿಯಾಣದಲ್ಲೂ ಈ ವಿಷಯದ ಬಗ್ಗೆ ಗಮನ ಸೆಳೆಯಲಾಯಿತು. ಈಗ ಅವರು ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ ಮತ್ತು ಅಸ್ಸಾಂಗೂ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ಇಡೀ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಆಗಬೇಕು. ಪಟ್ಟಿಗಳಲ್ಲಿ ಕೆಲವು ತಪ್ಪುಗಳು ಏಕೆ ಸಂಭವಿಸಿವೆ ಎಂಬುದಕ್ಕೆ ಚುನಾವಣಾ ಆಯೋಗ ದೇಶಕ್ಕೆ ಉತ್ತರಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಎಫ್‌ಬಿಐ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದ ಡ್ರಗ್ ಡೀಲರ್ ಪಂಜಾಬ್ ಪೊಲೀಸರ ವಶಕ್ಕೆ

  • ಸಿಬಿಐ ನಿರ್ದೇಶಕರಂತಹ ಕಾರ್ಯನಿರ್ವಾಹಕ ನೇಮಕಾತಿಗಳಲ್ಲಿ ಸಿಜೆಐ ಯಾಕೆ ಭಾಗಿಯಾಗಬೇಕು – ಉಪ ರಾಷ್ಟ್ರಪತಿ ಪ್ರಶ್ನೆ

    ಸಿಬಿಐ ನಿರ್ದೇಶಕರಂತಹ ಕಾರ್ಯನಿರ್ವಾಹಕ ನೇಮಕಾತಿಗಳಲ್ಲಿ ಸಿಜೆಐ ಯಾಕೆ ಭಾಗಿಯಾಗಬೇಕು – ಉಪ ರಾಷ್ಟ್ರಪತಿ ಪ್ರಶ್ನೆ

    ನವದೆಹಲಿ: ಸಿಬಿಐ ನಿರ್ದೇಶಕರಂತಹ ಕಾರ್ಯನಿರ್ವಾಹಕ ನೇಮಕಾತಿಗಳಲ್ಲಿ (Executive Appointments) ಭಾರತದ ಮುಖ್ಯ ನ್ಯಾಯಮೂರ್ತಿ ಯಾಕೆ ಭಾಗಿಯಾಗಬೇಕು ಎಂದು ಅಚ್ಚರಿ ವ್ಯಕ್ತಪಡಿಸಿರುವ ಉಪ ರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar), ಅಂತಹ ನಿಯಮಗಳನ್ನು ಮರುಪರಿಶೀಲಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

    ಭೋಪಾಲ್‌ನ ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಯಲ್ಲಿ ಮಾತನಾಡಿದ ಅವರು, ತಮ್ಮ ಅಭಿಪ್ರಾಯದಲ್ಲಿ, ‘ಮೂಲ ರಚನೆಯ ಸಿದ್ಧಾಂತ’ವು ಬಹಳ “ಚರ್ಚಾಸ್ಪದ ನ್ಯಾಯಶಾಸ್ತ್ರದ ಆಧಾರ”ವನ್ನು ಹೊಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಟ್ರಂಪ್‌ ಎಚ್ಚರಿಕೆ ಬೆನ್ನಲ್ಲೇ ಬೌರ್ಬನ್ ವಿಸ್ಕಿಯ ಆಮದು ಸುಂಕ ಭಾರೀ ಇಳಿಕೆ – ಈ ವಿಸ್ಕಿಯ ವಿಶೇಷತೆ ಏನು?

    ನಮ್ಮಂತಹ ದೇಶದಲ್ಲಿ ಅಥವಾ ಯಾವುದೇ ಪ್ರಜಾಪ್ರಭುತ್ವದಲ್ಲಿ, ಶಾಸನಬದ್ಧ ಕಾನೂನಿನ ಮೂಲಕ ಭಾರತದ ಮುಖ್ಯ ನ್ಯಾಯಮೂರ್ತಿಗಳು ಸಿಬಿಐ ನಿರ್ದೇಶಕರ ಆಯ್ಕೆಯಲ್ಲಿ ಯಾಕೆ ಭಾಗವಹಿಸಬೇಕು? ಇದಕ್ಕೆ ಯಾವುದಾದರೂ ಕಾನೂನು ತಾರ್ಕಿಕತೆ ಇದೆಯೇ? ಅಂದಿನ ಕಾರ್ಯನಿರ್ವಾಹಕರು ನ್ಯಾಯಾಂಗ ತೀರ್ಪಿಗೆ ಮಣಿದ ಕಾರಣ ಶಾಸನಬದ್ಧ ಕಾನೂನು ರೂಪುಗೊಂಡಿದೆ ಎಂದು ನಾನು ಪ್ರಶಂಸಿಸಬಲ್ಲೆ. ಆದರೀಗ ಇದನ್ನು ಮರುಪರಿಶೀಲಿಸುವ ಸಮಯ ಬಂದಿದೆ. ಏಕೆಂದರೆ ಇದು ಪ್ರಜಾಪ್ರಭುತ್ವವಲ್ಲ, ಯಾವುದೇ ಕಾರ್ಯನಿರ್ವಾಹಕ ನೇಮಕಾತಿಯಲ್ಲಿ ನಾವು ಸಿಜೆಐ ಅನ್ನು ಹೇಗೆ ಒಳಗೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

    ನ್ಯಾಯಾಂಗ ತೀರ್ಪಿನ ಮೂಲಕ ಕಾರ್ಯಾಂಗ ಆಡಳಿತ ನಡೆಸುವುದು ಈ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ. ಇನ್ನು ಮುಂದೆ ಭರಿಸಲಾಗದ ಸಾಂವಿಧಾನಿಕ ವಿರೋಧಾಭಾಸವಾಗಿದೆ ಎಂದು ಅವರು ಹೇಳಿದ್ದಾರೆ. ಎಲ್ಲಾ ಸಂಸ್ಥೆಗಳು ತಮ್ಮ ಸಾಂವಿಧಾನಿಕ ಮಿತಿಯೊಳಗೆ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದ್ದಾರೆ. ಶಾಸಕಾಂಗ ಅಥವಾ ನ್ಯಾಯಾಂಗದಿಂದ ಆಡಳಿತದಲ್ಲಿನ ಯಾವುದೇ ಹಸ್ತಕ್ಷೇಪವು ಸಾಂವಿಧಾನಿಕತೆಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಯುಪಿ ಆಯ್ತು.. ಲವ್ ಜಿಹಾದ್, ಬಲವಂತದ ಮತಾಂತರದ ವಿರುದ್ಧ ಸಮರ ಸಾರಿದ ಮಹಾರಾಷ್ಟ್ರ

    ಅಲ್ಲದೇ ನ್ಯಾಯಾಂಗ ಪರಿಶೀಲನೆಯ ಶಕ್ತಿಯ ಕುರಿತು ಮಾತನಾಡಿರುವ ಅವರು, ಕಾನೂನುಗಳು ಸಂವಿಧಾನಕ್ಕೆ ಅನುಗುಣವಾಗಿ ಖಚಿತಪಡಿಸಿಕೊಳ್ಳುವುದು ಒಳ್ಳೆಯ ವಿಷಯ. ಆದರೆ ಸಂವಿಧಾನ ತಿದ್ದುಪಡಿ ವಿಷಯಕ್ಕೆ ಬಂದಾಗ, ಅಂತಿಮ ಅಧಿಕಾರ ಸಂಸತ್ತಿಗೆ ಇರುತ್ತದೆ ಎಂದು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಗೋದಾವರಿ-ಕೃಷ್ಣ-ಕಾವೇರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 TMC ನೀರು ಕೊಡಬೇಕು: ಹೆಚ್.ಡಿ.ದೇವೇಗೌಡ

  • ಸಾವಿನ ಸಂಖ್ಯೆ ಮುಚ್ಚಿಡಲು ಶವಗಳನ್ನು ನದಿಗೆ ಎಸೆದಿದ್ದರಿಂದ ತ್ರಿವೇಣಿ ಸಂಗಮ ಮಲಿನವಾಗಿದೆ: ಜಯಾ ಬಚ್ಚನ್

    ಸಾವಿನ ಸಂಖ್ಯೆ ಮುಚ್ಚಿಡಲು ಶವಗಳನ್ನು ನದಿಗೆ ಎಸೆದಿದ್ದರಿಂದ ತ್ರಿವೇಣಿ ಸಂಗಮ ಮಲಿನವಾಗಿದೆ: ಜಯಾ ಬಚ್ಚನ್

    ಪ್ರಯಾಗ್‌ರಾಜ್‌: ಕುಂಭಮೇಳ ಕಾಲ್ತುಳಿತ ದುರಂತ ಸಂಸತ್ ಅಧಿವೇಶನದ ಉಭಯ ಸದನಗಳಲ್ಲಿ ಪ್ರತಿಧ್ವನಿಸಿದೆ. ಕಾಲ್ತುಳಿತದಿಂದ ಉಂಟಾದ ಸಾವುಗಳ ಬಗ್ಗೆ ಯುಪಿ ಸರ್ಕಾರ ಅಧಿಕೃತ ಅಂಕಿ ಸಂಖ್ಯೆ ನೀಡದ್ದನ್ನೇ ಅಸ್ತ್ರ ಮಾಡಿಕೊಂಡ ವಿಪಕ್ಷಗಳು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿವೆ.

    ಈ ನಡುವೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್, ಸಾವಿನ ಸಂಖ್ಯೆ ಮುಚ್ಚಿಡಲು ಸರ್ಕಾರ, ಶವಗಳನ್ನು ನದಿಗೆ ಎಸೆದಿದೆ. ಇದ್ರಿಂದ ತ್ರಿವೇಣಿ ಸಂಗಮ ಮಲಿನವಾಗಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಸಿಎಂ ಯೋಗಿ ಆದಿತ್ಯನಾಥ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಲ್ತುಳಿತದ ಸಂದರ್ಭದಲ್ಲಿ ಸಂಭವಿಸಿದ ಸಾವುಗಳ ನಿಜವಾದ ಅಂಕಿಅಂಶಗಳನ್ನು ಸರ್ಕಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

    ಜನವರಿ 13ರಂದು ಮಹಾ ಕುಂಭಮೇಳ ಶುರುವಾಯಿತು. ಜನವರಿ 29ರಂದು ಅಮೃತ ಸ್ನಾಹದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 30 ಜನ ಸಾವನ್ನಪ್ಪಿದ್ದಾರೆ ಎಂದು ಯುಪಿ ಸರ್ಕಾರ ಅಂಕಿ ಅಂಶ ಬಿಡುಗಡೆ ಮಾಡಿತ್ತು. ಶವಗಳನ್ನು ನದಿಗೆ ಎಸೆದಿದ್ದರಿಂದ ತ್ರಿವೇಣಿ ಸಂಗಮದಲ್ಲಿ ನೀರು ಕಲುಷಿತಗೊಂಡಿದೆ ಎಂದು ಹೇಳೀದ್ದಾರೆ. ಇದು ಆಕ್ರೋಶಕ್ಕೆ ಕಾರಣವಾಗಿದೆ.

    ಅತ್ತ, ಲೋಕಸಭೆಯಲ್ಲಿ ಕಾಲ್ತುಳಿತ ದುರಂತದ ಚರ್ಚೆಗೆ ಪಟ್ಟು ಹಿಡಿದು ವಿಪಕ್ಷಗಳು ಗದ್ದಲ ಎಬ್ಬಿಸಿದ್ವು. ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ರು. ಇದಕ್ಕೆ, ತೆರಿಗೆ ಪಾವತಿದಾರರ ಹಣ ವ್ಯರ್ಥ ಮಾಡ್ಬೇಡಿ. ಮರ್ಯಾದಾಪೂರ್ವಕವಾಗಿ ವ್ಯವಹರಿಸಿ ಎಂದು ಸ್ಪೀಕರ್ ಓಂ ಬಿರ್ಲಾ ಸಿಟ್ಟಾದ್ರು. ಆದ್ರೂ ವಿಪಕ್ಷಗಳು ಶಾಂತಿಸಲಿಲ್ಲ. ಈ ಮಧ್ಯೆ, ಕುಂಭಮೇಳ ದುರಂತದ ಘಟನೆ ದುರಾದೃಷ್ಟಕರ ಮತ್ತು ಕಳವಳಕಾರಿ ಎಂದು ಸುಪ್ರೀಂ ಕೋರ್ಟ್ ವ್ಯಾಖ್ಯಾನಿಸಿದೆ. ಆದ್ರೆ, ಪ್ರಕರಣ ಸಂಬಂಧ ಯುಪಿ ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ.. ಭಕ್ತರ ಸುರಕ್ಷತೆಗೆ ಸೂಕ್ತ ಆದೇಶ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಅಲಹಾಬಾದ್ ಹೈಕೋರ್ಟ್ಗೆ ಹೋಗಿ ಎಂದು ಅರ್ಜಿದಾರರಿಗೆ ಸೂಚಿಸಿದೆ.

  • ಬಜೆಟ್‌ 8, ಸೀರೆ ಎಂಟು – ವಿಶೇಷ ಸೀರೆಗಳನ್ನುಟ್ಟು ಮಿಂಚಿದ ನಿರ್ಮಲಾ ಸೀತಾರಾಮನ್‌ – ಏನಿದರ ಗುಟ್ಟು?

    ಬಜೆಟ್‌ 8, ಸೀರೆ ಎಂಟು – ವಿಶೇಷ ಸೀರೆಗಳನ್ನುಟ್ಟು ಮಿಂಚಿದ ನಿರ್ಮಲಾ ಸೀತಾರಾಮನ್‌ – ಏನಿದರ ಗುಟ್ಟು?

    – ಪದ್ಮ ಪ್ರಶಸ್ತಿ ಪುರಸ್ಕೃತೆ ತಯಾರಿಸಿದ ಸೀರೆಯನ್ನುಟ್ಟ ಕೇಂದ್ರ ವಿತ್ತ ಸಚಿವೆ

    ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪ್ರತಿ ವರ್ಷ ಬಜೆಟ್‌ ಜೊತೆಗೆ ಸೀರೆ ವಿಚಾರಕ್ಕೂ ಹೆಚ್ಚು ಗಮನ ಸೆಳೆದಿದ್ದಾರೆ. ಪ್ರತಿ ಬಾರಿ ಬಜೆಟ್‌ ಮಂಡಿಸುವಾಗ ಭಾರತದ ವಿವಿಧ ಪ್ರದೇಶಗಳ ಸಂಸ್ಕೃತಿಯನ್ನು ಬಿಂಬಿಸುವ ಸೀರೆಯನ್ನುಟ್ಟು ಮಿಂಚಿದ್ದಾರೆ.

    ಸೀತಾರಾಮನ್‌ ಅವರಿಗೆ ಸೀರೆಗಳೆಂದರೆ ಅಚ್ಚುಮೆಚ್ಚು. ಇದುವರೆಗೂ ತಾವು ಮಂಡಿಸಿದ ಬಜೆಟ್‌ಗಳಲ್ಲಿ ಒಂದೊಂದು ಬಗೆಯ, ಕಲಾ ಕುಸುರಿಯ ವಿಶೇಷತೆ ಇರುವ ಸೀರೆಗಳನ್ನುಟ್ಟು ಗಮನ ಸೆಳೆದಿದ್ದಾರೆ. ಅವರು ಧರಿಸುವ ಸೀರೆಗಳು ಕೈಮಗ್ಗ (ಕೈಯಿಂದ ನೇಯ್ದ) ಭಾರತೀಯ ಜವಳಿ ಮತ್ತು ಕರಕುಶಲ ವಸ್ತುಗಳ ಮೇಲಿನ ಅವರ ಪ್ರೀತಿಯನ್ನು ಪ್ರತಿಬಿಂಬಿಸುತ್ತವೆ. ಸೀರೆಗಳು ಭಾರತೀಯ ಸಂಸ್ಕೃತಿ, ಪರಂಪರೆ ಮೇಲೆ ಬೆಳಕು ಚೆಲ್ಲಿವೆ.

    ಮದುಬನಿ ಕಲಾ ಸೀರೆ
    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧುಬನಿ ಕಲೆ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ದುಲಾರಿ ದೇವಿಯ ಕೌಶಲ್ಯಕ್ಕೆ ಗೌರವಾರ್ಥವಾಗಿ ಸೀರೆ ಉಟ್ಟಿದ್ದಾರೆ. ಈ ಸೀರೆಯನ್ನು ದುಲಾರಿ ದೇವಿ ಅವರೇ ತಯಾರಿಸಿದ್ದಾರೆ. ಗೋಲ್ಡ್‌ ಕಲರ್‌ ಬಾರ್ಡರ್‌ ಹೊಂದಿರುವ ಸುಂದರವಾದ ಕ್ರೀಮ್ ಸೀರೆಯನ್ನು ಸಚಿವರು ಈ ಬಾರಿ ಬಜೆಟ್‌ ಮಂಡನೆಗೆ ಧರಿಸಿದ್ದಾರೆ. ಇದಕ್ಕೆ ಮ್ಯಾಚಿಂಗ್‌ ಎಂಬಂತೆ ಕೆಂಪು ಬಣ್ಣದ ಕುಪ್ಪಸವನ್ನು ಧರಿಸಿದ್ದಾರೆ.

    ದುಲಾರಿ ದೇವಿ 2021 ರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು. ಮಿಥಿಲಾ ಕಲಾ ಸಂಸ್ಥೆಯಲ್ಲಿ ಕ್ರೆಡಿಟ್ ಔಟ್ರೀಚ್ ಚಟುವಟಿಕೆಗಾಗಿ ಹಣಕಾಸು ಸಚಿವರು ಮಧುಬನಿಗೆ ಹೋಗಿದ್ದರು. ಆಗ ದುಲಾರಿ ದೇವಿ ಅವರನ್ನು ಭೇಟಿಯಾದರು. ಬಿಹಾರದ ಮಧುಬನಿ ಕಲೆಯ ಬಗ್ಗೆ ಸಚಿವರಿಗೆ ತಿಳಿಸಿದ್ದಲ್ಲದೇ, ಸಚಿವರಿಗೆ ಸೀರೆಯನ್ನು ಉಡುಗೊರೆಯಾಗಿ ನೀಡಿದ್ದರು. ಬಜೆಟ್ ಮಂಡನೆ ದಿನಕ್ಕೆ ಅದನ್ನು ಧರಿಸಲು ಸಚಿವರಿಗೆ ದೇವಿ ಅವರು ಕೋರಿದ್ದರು.

    ಮಂಗಳಗಿರಿ ಸೀರೆ
    2024ರಲ್ಲಿ ತಮ್ಮ ಏಳನೇ ಬಜೆಟ್‌ ಮಂಡಿಸಿದ್ದ ನಿರ್ಮಲಾ ಸೀತಾರಾಮನ್‌ ಅವರು ಮಜೆಂಟಾ (ಕೆನ್ನೇರಳೆ) ಬಾರ್ಡರ್‌ ಹೊಂದಿದ್ದ ಆಫ್‌ ವೈಟ್‌ ಬಣ್ಣ ಮಂಗಳಗಿರಿ ಸೀರೆ ಧರಿಸಿದ್ದರು. ಗುಂಟೂರು ಜಿಲ್ಲೆಯಲ್ಲಿ ತಯಾರಾದ ಸೀರೆ ಆಂಧ್ರಪ್ರದೇಶದ ಸಂಸ್ಕೃತಿಯನ್ನು ಬಿಂಬಿಸಿದೆ. ಇದೇ ಸಂದರ್ಭದಲ್ಲಿ ಆಂಧ್ರಕ್ಕೆ ವಿಶೇಷ ಆರ್ಥಿಕ ನೆರವು ಘೋಷಿಸಿದ್ದು ವಿಶೇಷವಾಗಿತ್ತು.

    ಟಸ್ಸರ್‌ ರೇಷ್ಮೆ ಸೀರೆ
    2024ರಲ್ಲೇ ಮಧ್ಯಂತರ ಬಜೆಟ್‌ಗಾಗಿ ಸೀತಾರಾಮನ್ ನೀಲಿ ಬಣ್ಣದ ಟಸ್ಸರ್ ರೇಷ್ಮೆ ಸೀರೆ ಉಟ್ಟಿದ್ದರು. ಅದರಲ್ಲಿ ಕಾಂತ ಕೈಯಿಂದ ಮಾಡಲಾಗಿತ್ತು. ಸೀರೆ ಜೊತೆಗೆ ಚಿನ್ನದ ಬಣ್ಣದ ಬ್ಲೌಸ್ ಧರಿಸಿದ್ದರು. ಪಶ್ಚಿಮ ಬಂಗಾಳವು ಕಾಂತ ಹೊಲಿಗೆಗೆ ಹೆಸರುವಾಸಿಯಾಗಿದೆ. ನೀಲಿ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡುವ, ಮೀನುಗಾರಿಕೆ ಅಭಿವೃದ್ಧಿ ಮೂಲಕ ಮತ್ಸ್ಯ ಕ್ರಾಂತಿಯ ಸಂದೇಶ ನೀಡಿದ್ದರು.

    ಕರ್ನಾಟಕದ ಇಳಕಲ್‌ ಸೀರೆ
    2023ರಲ್ಲಿ ಬಜೆಟ್‌ ಮಂಡನೆ ಸಂದರ್ಭದಲ್ಲಿ ಸಚಿವೆ ನಿರ್ಮಲಾ ಅವರು, ದೇವಾಲಯ ಬಾರ್ಡರ್‌ ಸೀರೆ ಆರಿಸಿಕೊಂಡಿದ್ದರು. ಕೆಂಪು ಬಣ್ಣದ ಟೆಂಪಲ್‌ ಬಾರ್ಡರ್‌ ಸೀರೆ ವಿಶೇಷವಾಗಿತ್ತು. ಕರ್ನಾಟಕ ಧಾರವಾಡದ ಇಳಕಲ್‌ ರೇಷ್ಮೆ ಸೀರೆ ಇದಾಗಿತ್ತು. ಕೈಯಿಂದ ನೇಯ್ದ ಕಸೂತಿ ಸೀರೆಯಿದು. ಸೀರೆಯಲ್ಲಿ ರಥ, ನವಿಲು, ಕಮಲಗಳ ಚಿತ್ರಗಳಿದ್ದವು. ಬಜೆಟ್‌ನಲ್ಲಿ ಕಸೂತಿ ಕಲೆಗೆ ಪ್ರೋತ್ಸಾಹ ನೀಡುವ ಸುಳಿವು ಕೊಟ್ಟಿದ್ದರು.

    ಬೊಮ್ಕೈ ಸೀರೆ
    2022ರಲ್ಲಿ ಬಜೆಟ್‌ ಮಂಡಿಸುವಾಗ ಸೀತಾರಾಮನ್‌ ಅವರು, ಬೊಮ್ಕೈ ಸೀರೆಯನ್ನು ಧರಿಸಿದ್ದರು. ಸೀರೆ ಕಂದು ಬಣ್ಣದ್ದಾಗಿತ್ತು. ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಕೈಮಗ್ಗದಲ್ಲಿ ನೇಯ್ದ ವಿಶೇಷ ಸೀರೆಯಿದು.

    ಪೋಂಚಪಲ್ಲಿ ಸೀರೆ
    2021 ರಲ್ಲಿ ತಮ್ಮ ಮೂರನೇ ಬಜೆಟ್ ಮಂಡನೆಗಾಗಿ ನಿರ್ಮಲಾ ಸೀತಾರಾಮನ್ ಅವರು ಹೈದರಾಬಾದ್‌ನ ಪೋಚಂಪಲ್ಲಿ ಗ್ರಾಮದ ಕೆಂಪು ಮತ್ತು ಮಾಸಲು ಬಿಳಿ ಬಣ್ಣದ ಪೋಚಂಪಲ್ಲಿ ಸೀರೆಯನ್ನು ಧರಿಸಿದ್ದರು.

    ರೇಷ್ಮೆ ಸೀರೆ
    2020ರಲ್ಲಿ ಸೀತಾರಾಮನ್‌ ಅವರು ಬಜೆಟ್‌ ಮಂಡನೆಗೆ ಹಳದಿ ರೇಷ್ಮೆ ಸೀರೆ ಉಟ್ಟು ಬಂದಿದ್ದರು. ಸೀರೆಗೆ ಮ್ಯಾಚ್‌ ಆಗುವ ಅದೇ ಬಣ್ಣದ ಕುಪ್ಪಸ ಧರಿಸಿದ್ದರು. ಸೀರೆಯ ಬಾರ್ಡರ್‌ ನೀಲಿ ಬಣ್ಣದ್ದಾಗಿತ್ತು. ಹಳದಿ ಸಮೃದ್ಧಿಯ ಸಂಕೇತವಾಗಿದೆ.

    ಮಂಗಳಗಿರಿ ಸೀರೆ
    2019 ರಲ್ಲಿ ಕೇಂದ್ರ ಹಣಕಾಸು ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಅವರ ಮೊದಲ ಬಜೆಟ್ ಮಂಡಿಸಿದ್ದರು. ಆಗ ಅವರು ಗೋಲ್ಡ್‌ ಕಲರ್‌ ಬಾರ್ಡರ್‌ ಹೊಂದಿರುವ ಗುಲಾಬಿ ಬಣ್ಣದ ಮಂಗಳಗಿರಿ ಸೀರೆಯನ್ನು ಧರಿಸಿದ್ದರು.ಸಾಂಪ್ರದಾಯಿಕ ‘ಬಹಿ ಖಾತಾ’ ದೊಂದಿಗೆ ಬಜೆಟ್ ಬ್ರೀಫ್‌ಕೇಸ್ ಅನ್ನು ತೆಗೆದುಕೊಂಡು ಬಂದಿದ್ದರು. ಅದರ ಮೇಲ್ಭಾಗದಲ್ಲಿ ರಾಷ್ಟ್ರೀಯ ಲಾಂಛನದೊಂದಿಗೆ ಚಿನ್ನದ ಎಳೆಗಳು ಇದ್ದವು.