Tag: party

  • ‘ಸೈಮಾ ಅವಾರ್ಡ್’ ಐಷಾರಾಮಿ ಹೋಟೆಲ್‌ನಲ್ಲಿ ಸೆಲೆಬ್ರಿಟಿಗಳ ತಡರಾತ್ರಿ ಪಾರ್ಟಿ : FIR ದಾಖಲು

    ‘ಸೈಮಾ ಅವಾರ್ಡ್’ ಐಷಾರಾಮಿ ಹೋಟೆಲ್‌ನಲ್ಲಿ ಸೆಲೆಬ್ರಿಟಿಗಳ ತಡರಾತ್ರಿ ಪಾರ್ಟಿ : FIR ದಾಖಲು

    ದೇ ಮೊದಲ ಬಾರಿಗೆ ಸೈಮಾ (SIIMA) ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನಲ್ಲಿ (Bangalore) ನಡೆಯಿತು. ಪುನೀತ್ ರಾಜ್‌ಕುಮಾರ್ ಸ್ಮರಣೆಗಾಗಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಕ್ಷಿಣದ ಬಹುತೇಕ ತಾರೆಯರು ಭಾಗಿಯಾಗಿದ್ದರು. ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಸಿನಿಮಾ ರಂಗದ ಅನೇಕ ದಿಗ್ಗಜರು ಕೂಡ ಪಾಲ್ಗೊಂಡಿದ್ದರು. ಕಾರ್ಯಕ್ರಮ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆಯಿತು. ಸೈಮಾ ಅವಾರ್ಡ್ (Award) ನಲ್ಲಿ ಭಾಗಿಯಾಗಿದ್ದ ಗಣ್ಯರಿಗೆ ಬೆಂಗಳೂರಿನ ಐಷಾರಾಮಿ ಹೋಟೆಲ್‌ನಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಅಲ್ಲೀಗ ಎಡವಟ್ಟಾಗಿದೆ.

    ಸೈಮಾಗೆ ಹತ್ತು ವರ್ಷಗಳ ಸಂಭ್ರಮ. ಅಲ್ಲದೇ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜನೆ. ಅಲ್ಲದೇ, ಬಹುತೇಕ ತಾರೆಯರು (Celebrity) ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರಿಂದ ಕನ್ನಡದ ಅನೇಕ ಸ್ಟಾರ್ ನಟರು ಕೂಡ ಭಾಗಿಯಾಗಿದ್ದರು. ಕಾರ್ಯಕ್ರಮದ ನಂತರ ಇವರೆಲ್ಲ ಐಷಾರಾಮಿ ಹೋಟೆಲ್‌ನಲ್ಲಿ ತಡರಾತ್ರಿ ಪಾರ್ಟಿ ಮಾಡಿ, ನಿಯಮ ಮುರಿದ ಕಾರಣಕ್ಕಾಗಿ ಕಬ್ಬನ ಪಾರ್ಕ್ ಪೊಲೀಸ್ ಸ್ಟೇಶನ್ ನಲ್ಲಿ ದೂರು ದಾಖಲಾಗಿದೆ. ತಡರಾತ್ರಿ 1 ಗಂಟೆಗೆ ಪಾರ್ಟಿ ಮುಗಿಸಬೇಕು ಎಂದು ಪೊಲೀಸರು ತಿಳಿಸಿದ್ದರೂ, ಮಧ್ಯರಾತ್ರಿ 3.30ರವರೆಗೂ ಪಾರ್ಟಿ ನಡೆದಿದೆ. ಹಾಗಾಗಿ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಾರೆ. ಇದನ್ನೂ ಓದಿ:ನೆಗೆಟಿವ್ ಕಾಮೆಂಟ್ ಗೆ ಹೆದರಲ್ಲ, ತುಂಬಾ ಜನ ನನ್ನನ್ನು ಪ್ರೀತಿಸ್ತಾರೆ ಎಂದ ಸೋನು ಶ್ರೀನಿವಾಸ್ ಗೌಡ

    ಅವಧಿ ಮೀರಿ ಮಧ್ಯರಾತ್ರಿವರೆಗೂ ಪಾರ್ಟಿ (Party) ಮಾಡುವುದಕ್ಕೆ ಅವಕಾಶ ಕೊಟ್ಟ ಹೋಟೆಲ್ ಮೇಲೆ ಈ ದೂರು ದಾಖಲಾಗಿದ್ದು, ಹೋಟೆಲ್‌ನ ಮ್ಯಾನೇಜರ್ ಮತ್ತು ಪಾರ್ಟಿ ಆಯೋಜಕರ ಮೇಲೆ ಎಫ್.ಐ.ಆರ್ (FIR) ದಾಖಲಿಸಿದ್ದಾರೆ ಪೊಲೀಸ್ ಅಧಿಕಾರಿಗಳು. ಕಬ್ಬನ್ ಪಾರ್ಕ್ (Kabbana Park)  ಪೊಲೀಸ್ ಅಧಿಕಾರಿ ಚೈತನ್ಯಾ ಅವರು ಮೊದಲು ಒಂದು ಗಂಟೆಗೆ ಹೋಗಿ ಪರಿಶೀಲನೆ ಮಾಡಿದ್ದಾರೆ. ಒಂದು ಗಂಟೆಗೆ ಪಾರ್ಟಿ ಮುಗಿಸಿ ಎಂದೂ ಹೇಳಿದ್ದಾರೆ. ಆದರೆ, ಆಯೋಜಕರು ಮಧ್ಯರಾತ್ರಿ 3.30ರವರೆಗೂ ಪಾರ್ಟಿ ಮಾಡಿದ್ದಾರೆ ಎಂದು ಚೈತನ್ಯಾ (Chaitanya) ಅವರೇ ದೂರು ದಾಖಲಿಸಿದ್ದಾರೆ.

    ಸೈ,ಮಾ ಆವಾರ್ಡ್ ಸಂದರ್ಭದಲ್ಲಿ ಅದೇ ಹೋಟೆಲ್‌ನಲ್ಲಿ ಸೆಲೆಬ್ರಿಟಿಗಳು ರೂಮ್ ಬುಕ್ ಮಾಡಿದ್ದರು ಎನ್ನಲಾಗುತ್ತಿದೆ. ಅಲ್ಲದೇ, ಕನ್ನಡದ ಕೆಲ ಸ್ಟಾರ್ ನಟರು ಕೂಡ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ. ಆದರೆ, ಎಫ್.ಐ.ಆರ್ ನಲ್ಲಿ ಯಾರ ಹೆಸರೂ ದಾಖಲಿಸಿಲ್ಲ. ಕೇವಲ ಹೋಟೆಲ್ ಸಿಬ್ಬಂದಿ ಮೇಲೆ ದೂರು ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ಯಾಂಟ್ ಜೇಬಲ್ಲಿ ಗ್ಲಾಸ್ ಇಟ್ಕೊಂಡೇ ಪಾರ್ಟಿಗೆ ಬಂದ ನಟ ಸಲ್ಮಾನ್ ಖಾನ್

    ಪ್ಯಾಂಟ್ ಜೇಬಲ್ಲಿ ಗ್ಲಾಸ್ ಇಟ್ಕೊಂಡೇ ಪಾರ್ಟಿಗೆ ಬಂದ ನಟ ಸಲ್ಮಾನ್ ಖಾನ್

    ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಾರ್ಟಿ ಮೂಡ್ ನಲ್ಲಿರುವ ಸಲ್ಮಾನ್ ಖಾನ್ ತಮ್ಮ ಐಷಾರಾಮಿ ಕಾರು ಹತ್ತಿಕೊಂಡು ನಿರ್ಮಾಪಕ ಮುರಾದ್ ಖೇತನಿ ಅವರ ಹುಟ್ಟು ಹಬ್ಬದ ಪಾರ್ಟಿಗೆ ಆಗಮಿಸುತ್ತಾರೆ. ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆಯೇ ಅವರನ್ನು ಕ್ಯಾಮೆರಾಗಳು ಮುತ್ತಿಕೊಳ್ಳುತ್ತವೆ. ತಕ್ಷಣವೇ ತಮ್ಮ ಕೈಯಲ್ಲಿ ಗ್ಲಾಸ್ ಇದೆ ಎಂದು ನೆನಪಾಗಿದೆ ಅನ್ನು ಪ್ಯಾಂಟ್ ಜೇಬಿಗೆ ಇಳಿಸುತ್ತಾರೆ.

    ಕಾರಿನಲ್ಲಿ ಬರುವಾಗಲೇ ಗ್ಲಾಸ್ ಹಿಡಿದುಕೊಂಡು ಬಂದಿದ್ದ ಸಲ್ಮಾನ್, ಗ್ಲಾಸ್ ಅರ್ಧ ತುಂಬಿದ್ದರೂ ಕ್ಯಾಮೆರಾಗಳು ಕಾಣುತ್ತಿದ್ದಂತೆಯೇ ಅದನ್ನು ಜೇಬಿನಲ್ಲಿ ಇಟ್ಟುಕೊಂಡು ಏನೂ ನಡೆದೇ ಇಲ್ಲ ಎನ್ನುವಂತೆ ಕೂಲ್ ಆಗಿ ನಡೆದುಕೊಂಡು ಹೋಗುತ್ತಾರೆ. ಈ ವಿಡಿಯೋವನ್ನು ಹಲವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಆ ಗ್ಲಾಸ್ ನಲ್ಲಿ ಇರುವುದು ಏನು ಎನ್ನುವ ಕಾಮೆಂಟ್ ಅನ್ನು ಮಾಡುತ್ತಿದ್ದಾರೆ. ದೊಡ್ಡ ನಟ ಗ್ಲಾಸ್ ಹಿಡಿದುಕೊಂಡು ಪಾರ್ಟಿಗೆ ಬಂದಿದ್ದು ಯಾಕೆ? ಎಂದು ಹಲವರು ಪ್ರಶ್ನಿಸಿದ್ದಾರೆ.

    ಸಲ್ಮಾನ್ ಜೇಬಿನಲ್ಲಿ ಇಟ್ಟುಕೊಂಡಿದ್ದ ಗ್ಲಾಸ್ ನಲ್ಲಿ ಮದ್ಯ ಇತ್ತಾ? ಅಥವಾ ಅವರು ನೀರು ಕುಡಿಯುತ್ತಿದ್ದರಾ ಎನ್ನುವುದು ಅವರಿಗಷ್ಟೇ ಗೊತ್ತು. ಆದರೆ, ಕೆಲವರಂತೂ ವಿಪರೀತ ಕಲ್ಪನೆ ಮಾಡಿಕೊಂಡು ಆ ವಿಡಿಯೋಗೆ ಕಾಮೆಂಟ್ ಬರೆಯುತ್ತಿದ್ದಾರೆ. ಮನೆಯಿಂದಲೇ ಬರುವಾಗಲೇ ಕಾರಿನಲ್ಲಿ ಸಲ್ಮಾನ್ ಕುಡಿಯುತ್ತಾ ಬಂದಿದ್ದಾರೆ ಎಂದು ಕೆಲವರು ಬರೆದಿದ್ದರೆ, ಫೆವರೆಟ್ ಗ್ಲಾಸ್ ನಲ್ಲಿ ಕುಡಿಯಬೇಕು ಎನ್ನುವ ಕಾರಣಕ್ಕಾಗಿ ತಮ್ಮದೇ ಗ್ಲಾಸ್ ತಗೆದುಕೊಂಡು ಹೋಗುತ್ತಾರಾ ಎಂದು ಕೆಲವರು ಬರೆದಿದ್ದಾರೆ. ಒಟ್ಟಿನಲ್ಲಿ ಪ್ಯಾಂಟ್ ನಲ್ಲಿ ಗ್ಲಾಸ್ ಇಟ್ಟುಕೊಳ್ಳುವುದು ಭಾರೀ ಚರ್ಚೆಗೆ ಅಂತೂ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಇನ್ನೂ ಪತ್ತೆಯಾಗದ `ದಿ ಪಾರ್ಕ್’ ಡ್ರಗ್ ಮೂಲ – 40 ಫಾರಿನ್ ಮಾಡೆಲ್‍ಗಳಿಗೆ ಪೊಲೀಸ್ ನೋಟಿಸ್

    ಇನ್ನೂ ಪತ್ತೆಯಾಗದ `ದಿ ಪಾರ್ಕ್’ ಡ್ರಗ್ ಮೂಲ – 40 ಫಾರಿನ್ ಮಾಡೆಲ್‍ಗಳಿಗೆ ಪೊಲೀಸ್ ನೋಟಿಸ್

    ಬೆಂಗಳೂರು: ಹಲಸೂರಿನ ಸ್ಟಾರ್ ಹೋಟೆಲ್‍ನಲ್ಲಿ ನಡೆದ ರೇವ್ ಪಾರ್ಟಿಯ ಫಾರಿನ್ ಮಾಡೆಲ್‍ಗಳಿಗೆ ನೋಟಿಸ್ ಜಾರಿಯಾಗಿದೆ. ಕೆಲವರ ವೀಸಾ ಅವಧಿ ಮುಗಿದಿದ್ದರೆ, ಮತ್ತೆ ಕೆಲ ಮಾಡೆಲ್‍ಗಳ ವ್ಯವಹಾರದ ಮೇಲೆ ಪೊಲೀಸರಿಗೆ ಅನುಮಾನ ಮೂಡಿದೆ.

    ಹಲಸೂರಿನ ದಿ ಪಾರ್ಕ್ ಹೊಟೇಲ್‍ನಲ್ಲಿ ನಡೆದ ಡ್ರಗ್ಸ್ ಪಾರ್ಟಿ ಕೇಸ್‍ನಲ್ಲಿ ದೊಡ್ಡ, ದೊಡ್ಡ ಮಾಡೆಲ್ ಸೆಲೆಬ್ರಿಟಿಗಳ ಪಾರ್ಟಿಗೆ ಡ್ರಗ್ಸ್ ಬಂದಿದ್ದಾದರೂ ಹೇಗೆ ಎನ್ನುವುದು ಇನ್ನೂ ನಿಗೂಢವಾಗಿಯೇ ಉಳಿದಿದೆ. ಪಾರ್ಟಿಗೆ ಡ್ರಗ್ಸ್ ತಂದವರು ಯಾರು ಎನ್ನುವುದು ಕೂಡ ಪೊಲೀಸರಿಗೆ ತಲೆನೋವು ತಂದಿದೆ. 150 ಜನರಿದ್ದ ಪಾರ್ಟಿಗೆ ಡ್ರಗ್ಸ್ ತಂದವರು ಯಾರು ಎನ್ನುವುದನ್ನು ಪತ್ತೆ ಹಚ್ಚಲು ಪೊಲೀಸರು ಗೆಸ್ಟ್ ಲಿಸ್ಟ್ ಪಡೆದಿದ್ದಾರೆ. ಇದನ್ನೂ ಓದಿ: ಇಂದು ಬೆಂಗಳೂರಿಗೆ ಮೋದಿ – ಎಲ್ಲಿ ಸಂಚಾರ ನಿಷೇಧ? ಪರ್ಯಾಯ ಮಾರ್ಗ ಯಾವುದು?

    ಗೆಸ್ಟ್ ಲಿಸ್ಟ್‌ನಲ್ಲಿರುವ ಫಾರಿನ್ ಮಾಡೆಲ್ಸ್ ಹಾಗೂ ಸೆಲೆಬ್ರಿಟಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸುಮಾರು 40 ಮಂದಿ ಮಾಡೆಲ್ಸ್‌ಗಳಿಗೆ ನೋಟಿಸ್ ನೀಡಿರುವ ಹಲಸೂರು ಪೊಲೀಸರು, ವಾರದೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಅಗ್ನಿಪಥ್‌ ವಿರೋಧಿಸಿ ಇಂದು ಭಾರತ್‌ ಬಂದ್‌ – ಹೋರಾಟಗಾರರಿಗೆ ಶಾಕ್‌, 35 ವಾಟ್ಸಪ್‌ ಗ್ರೂಪ್‌ ನಿಷೇಧ

    ಪೊಲೀಸರ ನೋಟಿಸ್ ಬೆನ್ನಲ್ಲೇ ಐವರು ವಿಚಾರಣೆಗೆ ಹಾಜರಾಗಿದ್ದರು. ಸುಮಾರು 20 ಸಿಸಿಟಿವಿ ಫೋಟೇಜ್ ಪರಿಶೀಲನೆ ನಡೆಸಿ, ಡ್ರಗ್ಸ್ ತಂದ ವ್ಯಕ್ತಿ, ಅದನ್ನು ಡಸ್ಟ್ ಬಿನ್ ಬಳಿ ಎಸೆದವರು ಯಾರು ಎಂದು ಪರಿಶೀಲನೆ ನಡೆಸಿದರು ಕೂಡ ಸ್ಪಷ್ಟತೆ ಸಿಕ್ಕಿಲ್ಲ. ಡ್ರಗ್ಸ್ ರೇವ್ ಪಾರ್ಟಿಯಲ್ಲಿ ಖ್ಯಾತನಾಮ ಮಾಡೆಲ್‍ಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದು, ಎಲ್ಲಾ ಆಯಾಮಗಳಲ್ಲೂ ಸಹ ತನಿಖೆ ಮುಂದುವರೆಸಿದ್ದಾರೆ.

    Live Tv

  • ಬರ್ತ್‍ಡೇ ಪಾರ್ಟಿಯಲ್ಲಿ ಹುಬ್ಬಳ್ಳಿಯಲ್ಲಿ ಮೊಳಗಿದ ಗುಂಡಿನ ಸದ್ದು!

    ಬರ್ತ್‍ಡೇ ಪಾರ್ಟಿಯಲ್ಲಿ ಹುಬ್ಬಳ್ಳಿಯಲ್ಲಿ ಮೊಳಗಿದ ಗುಂಡಿನ ಸದ್ದು!

    ಹುಬ್ಬಳ್ಳಿ: ಹುಟ್ಟುಹಬ್ಬದ ಪಾರ್ಟಿಯಲ್ಲಿ ನಗರದಲ್ಲಿ ಗುಂಡಿನ ಸದ್ದು ಮೊಳಗಿರುವ ಅನುಮಾನ ಮೂಡಿದೆ. ನಗರದ ಹೊರವಲಯದ ಕುಸುಗಲ್ ಸಮೀಪದಲ್ಲಿ ಕಲಬುರಗಿ ಫಾರ್ಮ್ ಹೌಸ್‍ನಲ್ಲಿ ಆರ್.ಟಿ.ಐ. ಕಾರ್ಯಕರ್ತನ ಪುತ್ರ ಮತ್ತು 100ಕ್ಕೂ ಹೆಚ್ಚು ರೌಡಿಗಳು ಒಂದೆಡೇ ಸೇರಿ ಭರ್ಜರಿ ಪಾರ್ಟಿ ಮಾಡುವಾಗ ಈ ಪ್ರಕರಣ ನಡೆದಿದೆ ಎನ್ನಲಾಗಿದೆ.

    ಆರ್‌ಟಿಐ ಕಾರ್ಯಕರ್ತರಾದ ಕೇಶ್ವಾಪುರದ ಫಿಲೋಮಿನಾ ಪೌಲ್ ಪುತ್ರ ಸುಂದರ ಪೌಲ್ ಹುಟ್ಟುಹಬ್ಬದ ನಿಮಿತ್ತವಾಗಿ ರಾತ್ರಿ ಫಾರ್ಮ್‍ಹೌಸ್‍ವೊಂದರಲ್ಲಿ ಗುಂಡು-ತುಂಡಿನ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಈ ಪಾರ್ಟಿಯಲ್ಲಿ ಹೊಸೂರು, ಸೆಟಲ್‍ಮೆಂಟ್ ಸೇರಿದಂತೆ ನಗರದ ವಿವಿಧ ಪ್ರದೇಶದ ರೌಡಿ ಶೀಟರ್‍ಗಳು ಪಾಲ್ಗೊಂಡಿದ್ದರು. ಕೇಕ್ ಕತ್ತರಿಸುವ ಸಮಯದಲ್ಲಿ ವೇದಿಕೆ ಮೇಲೆ ಖುಷಿಯಿಂದ ಆರು ಸುತ್ತಿನ ಗುಂಡು ಹಾರಿಸಿರುವ ಅನುಮಾನ ಮೂಡಿದೆ.‌ ಇದನ್ನೂ ಓದಿ: ಟ್ರಕ್‍ಗಳ ಮುಖಾಮುಖಿ ಡಿಕ್ಕಿ – ಚಾಲಕ ಸಾವು

    ಸುದ್ದಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್ ರಮೇಶ್ ಗೋಕಾಕ್ ನೇತೃತ್ವದ ತಂಡ ಫಾರ್ಮ್ ಹೌಸ್‍ಗೆ ಭೇಟಿ ನೀಡಿ ಪರಿಶೀಲನೆಗೆ ಮುಂದಾಗಿದೆ. ಸದ್ಯ ಫಿಲೋಮಿನ್ ಪೌಲ್ ಬಳಿ ಇದ್ದ ಲೈಸೆನ್ಸ್ ಪಿಸ್ತೂಲ್ ವಶಕ್ಕೆ ಪಡೆದಿರುವ ಪೊಲೀಸರು, ಎಫ್‍ಐಆರ್ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಸುಂದರ್ ಪೌಲ್ ಉಪಟಳ ಇದೇ ಮೊದಲಲ್ಲ, ಈ ಹಿಂದೇ ಕಾಲೇಜು ಕ್ಯಾಂಪಸ್‍ನಲ್ಲಿ ಪಿಸ್ತೂಲ್ ತೋರಿಸಿ ಸುದ್ದಿಯಾಗಿದ್ದ. ಇದನ್ನೂ ಓದಿ : ಯಶ್ ಮುಂದಿನ ಸಿನಿಮಾ ನರ್ತನ್ ಜೊತೆ ಫಿಕ್ಸ್ : ಘೋಷಣೆಯೊಂದೇ ಬಾಕಿ

  • ಪಾರ್ಟಿ ವೇಳೆ ಗುಂಡಿನ ದಾಳಿ – ಓರ್ವ ಸಾವು, 17 ಮಂದಿಗೆ ಗಾಯ

    ಪಾರ್ಟಿ ವೇಳೆ ಗುಂಡಿನ ದಾಳಿ – ಓರ್ವ ಸಾವು, 17 ಮಂದಿಗೆ ಗಾಯ

    ವಾಷಿಂಗ್ಟನ್: ಪಾರ್ಟಿ ವೇಳೆ ಗುಂಡಿನ ದಾಳಿಯಿಂದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು ಮತ್ತು 17 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕ್ಯಾಲಿಫೋರ್ನಿಯಾದ ಹುಕ್ಕಾ ಲಾಂಜ್‍ನಲ್ಲಿ ನಡೆದಿದೆ.

    ಗುಂಡಿನ ದಾಳಿಯಿಂದ ಅಲೆನ್ ಗ್ರೆಶಮ್ (20) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಲಾಸ್ ಏಂಜಲೀಸ್, ಸಾರ್ಜೆಂಟ್‍ನ ಪೂರ್ವದ ನಗರದಲ್ಲಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಶುಕ್ರವಾರ ತಡರಾತ್ರಿ ಸ್ಟ್ರಿಪ್ ಮಾಲ್ ಲಾಂಜ್‍ನ ಹೊರಗಿನ ಪಾರ್ಕಿಂಗ್ ಸ್ಥಳದಲ್ಲಿ ವ್ಯಕ್ತಿಯೊರ್ವ ಗುಂಡು ಹಾರಿಸಿರುವುದು ತಿಳಿದು ಬಂದಿರುವುದಾಗಿ ಸ್ಯಾನ್ ಬರ್ನಾರ್ಡಿನೊ ಪೊಲೀಸ್ ಅಧಿಕಾರಿ ಎಕ್ವಿನೋ ಥಾಮಸ್ ಹೇಳಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಇಳಿಕೆ – ಹೀಗಿದೆ ಇಂದಿನ ದರ

    ಘಟನೆಯಲ್ಲಿ ಗಾಯಗೊಂಡ 8 ಮಂದಿಯನ್ನು ಅಂಬುಲೆನ್ಸ್ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರು ತಮ್ಮ ವಾಹನಲ್ಲಿಯೇ ತೆರಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅದೃಷ್ಟವಶಾತ್ ಆಸ್ಪತ್ರೆಯಲ್ಲಿರುವವರ ಜೀವಕ್ಕೆ ಯಾವುದೇ ಅಪಾಯವಿಲ್ಲ. ಇದೀಗ ಅಕ್ರಮವಾಗಿ ಬಂದೂಕು ಹೊಂದಿದ್ದ ಶಂಕೆಯ ಮೇಲೆ ಇಬ್ಬರನ್ನು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

    100ಕ್ಕೂ ಹೆಚ್ಚು ಮಂದಿ ಸೇರಿದ್ದ ಪಾರ್ಟಿಗೆ ನುಗ್ಗಿದ ಇಬ್ಬರು ವ್ಯಕ್ತಿಗಳು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದರು. ಇದರಿಂದ ಬೆಚ್ಚಿಬಿದ್ದ ಜನರು ಪಾರ್ಕಿಂಗ್ ಪ್ರದೇಶಕ್ಕೆ ಬಂದಿದ್ದಾರೆ. ಆದರೂ ಬೆಂಬಿಡದೇ ಆರೋಪಿಗಳು ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೆಹಲಿಗೆ ರೊಬೋಟಿಕ್ ಅಗ್ನಿಶಾಮಕ ವಾಹನ ಎಂಟ್ರಿ – ಏನೆಲ್ಲಾ ಇದೆ ವಿಶೇಷ?

  • ಗಂಡಸ್ತನ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

    ಗಂಡಸ್ತನ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

    ಮಂಡ್ಯ: ಗಂಡಸ್ತನದ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.

    ಸಾಗರ್ ಕೊಲೆಗೀಡಾದ ಯುವಕ. ಸಾಗರ್ ತನ್ನ ಸ್ನೇಹಿತ ಕುಂಟನಹಳ್ಳಿ ಪ್ರಸಾದ್‍ನ ಬರ್ತಡೇ ಪಾರ್ಟಿಗೆ ಕೊಪ್ಪದ ಸಿಂಚನ ಡಾಬಾಗೆ ಕಳೆದ ವಾರ ಹೋಗಿದ್ದನು. ಕೇಕ್ ಕಟ್ ಮಾಡಿಸಿ ನಂತರ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದಾನೆ. ಪಾರ್ಟಿ ಮುಗಿಸಿದ ಮೇಲೆ ಜೊತೆಯಲ್ಲಿದ್ದ ಸ್ನೇಹಿತರೇ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಚಾಕುವಿನಂದ ಚುಚ್ಚಿ ಪರಾರಿಯಾಗಿದ್ದಾರೆ.

    ಸಾಗರ್‌ನನ್ನು ಕೊಲೆ ಮಾಡಿದ್ದು ಬೇರೆ ಯಾರು ಅಲ್ಲ ಆತನ ಸ್ನೇಹಿತರಾದ ಹುರುಗಲವಾಡಿ ಗಿರಿ, ಪುನೀತ್, ರಾಕೇಶ್. ಈ ಹಿಂದೆ ಗಿರಿ ಸಣ್ಣ ಜಗಳದಲ್ಲಿ ಕೊಪ್ಪದವರು ಗಂಡಸರಲ್ಲಾ ಎಂದು ಬೈದಿದ್ದನು. ಇದೇ ವಿಚಾರ ಪಾರ್ಟಿಯಲ್ಲಿ ಪ್ರಸ್ತಾಪವಾದ ವೇಳೆ ಸಾಗರ್ ಗಂಡಸ್ತನದ ಬಗ್ಗೆ ಹೇಳ್ತೀಯಾ ಎಂದು ಗಿರಿ ಜೊತೆ ಏರು ಧ್ವನಿಯಲ್ಲಿ ಗದರುತ್ತಾನೆ.

    ಈ ವೇಳೆ ಪಾರ್ಟಿಯ ಮತ್ತಿನಲಿದ್ದ ಗಿರಿ ಮತ್ತು ಸಾಗರ್ ನಡುವೆ ಜೋರಾಗಿ ಜಗಳವಾಗುತ್ತದೆ. ಕೊನೆಗೆ ಗಿರಿ ಜೊತೆ ಇದ್ದ ಪುನೀತ್ ಮತ್ತು ರಾಕೇಶ್ ಆತನನ್ನು ಹಿಡಿದುಕೊಳ್ಳುತ್ತಾರೆ.   ಈ ವೇಳೆ ಚಾಕು ತೆಗೆದುಕೊಂಡು ಗಿರಿ ಸಾಗರ್‍ನ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಚುಚ್ಚಿ ಪರಾರಿಯಾಗಿದ್ದರು.

    ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಸಾಗರ್‍ನನ್ನು ಆಸ್ಪತ್ರಗೆ ಸಾಗಿಸುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ. ಇದೀಗ ತಲೆ ಮರಿಸಿಕೊಂಡಿದ್ದ ಆರೋಪಿಗಳನ್ನು ಮದ್ದೂರು ಇನ್ಸ್‍ಪೆಕ್ಟರ್ ಹರೀಶ್ ಅವರ ನೇತೃತ್ವದಲ್ಲಿ ಕೊಪ್ಪ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದು, ಇನ್ನೊರ್ವ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

  • ಮದ್ಯ ಬಾಟಲಿಯಿಂದ ಕೊಲೆ ಮಾಡಿ, ಶವದ ಜೊತೆ ಸೆಲ್ಫಿ ತೆಗೆದುಕೊಂಡ ಕೊಲೆಗಾರರು

    ಮದ್ಯ ಬಾಟಲಿಯಿಂದ ಕೊಲೆ ಮಾಡಿ, ಶವದ ಜೊತೆ ಸೆಲ್ಫಿ ತೆಗೆದುಕೊಂಡ ಕೊಲೆಗಾರರು

    ಚೆನ್ನೈ: ವ್ಯಕ್ತಿಯೊಬ್ಬನನ್ನು ಕೊಂದು, ಆತನ ಶವದೊಂದಿಗೆ ಸೆಲ್ಫಿ ತೆಗೆದುಕೊಂಡ ಘಟನೆ ಚೆನ್ನೈನ ನ್ಯೂ ಮನಾಲಿ ಪಟ್ಟಣದ ಸಮೀಪ ನಡೆದಿದೆ.

    ರಿಕ್ಷಾ ಚಾಲಕ ರವಿಚಂದ್ರನ್(32) ಮೃತ ದುರ್ದೈವಿ. ಮದನ್ ಕುಮಾರ್(31), ಧನುಷ್(19), ಜಯಪ್ರಕಾಶ(18), ಭರತ್(19) ಬಂಧಿತ ಆರೋಪಿಗಳು. ಈ ನಾಲ್ವರು ಸೇರಿ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರವಿಚಂದ್ರನ್ ಅವರನ್ನು ಕೊಲೆ ಮಾಡಿದ್ದಾರೆ. ನಂತರ ತಾವು ಕೊಲೆ ಮಾಡಿರುವುದಾಗಿ ಸ್ನೇಹಿತರಿಗೆ ಸಾಬೀತಪಡಿಸಲು ರವಿಚಂದ್ರನ್ ಶವದೊಂದಿಗೆ ಸೆಲ್ಫಿ ತೆಗೆದುಕೊಂಡಿದುಕೊಂಡು ವಾಟ್ಸ್‌ಪ್‌ ಗ್ರೂಪ್‌ಗೆ ಹರಿಬಿಟ್ಟು ವಿಕೃತಿ ಮೆರೆದಿದ್ದಾರೆ.

    KILLING CRIME

    ರವಿಚಂದ್ರನ್ ಕೆಲ ದಿನಗಳ ಹಿಂದೆ ಮದನ್ ಜೊತೆಗೆ ಜಗಳ ಮಾಡಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಮದನ್ ಹಾಗೂ ಆತನ ಸ್ನೇಹಿತರು ಸೇರಿ ರವಿಚಂದ್ರನ್ ಅವರನ್ನು ಕೊಲೆ ಮಾಡಬೇಕು ಎಂದು ಪ್ಲ್ಯಾನ್ ಮಾಡಿಕೊಂಡಿದ್ದರು.

    ಪ್ಲ್ಯಾನ್ ಪ್ರಕಾರವಾಗಿ ರವಿಚಂದ್ರನ್ ಅವರಿಗೆ ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ನ್ಯೂ ಮನಾಲಿ ಪಟ್ಟಣದ ಆಟದ ಮೈದಾನದಲ್ಲಿ ಮದ್ಯದ ಪಾರ್ಟಿಗಾಗಿ ಮದನ್ ಆಹ್ವಾನಿಸಿದ್ದ. ಇದಕ್ಕೆ ಒಪ್ಪಿದ್ದ ರವಿಚಂದ್ರನ್ ಪಾರ್ಟಿಗೆ ಹೋಗಿದ್ದ. ನಂತರ ಮದನ್ ಹಾಗೂ ಸ್ನೇಹಿತರು ಸೇರಿ ಮದ್ಯದ ಬಾಟಲಿಯಿಂದ ರವಿಚಂದ್ರನ್ ಮೇಲೆ ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

    CRIME 2

    ರಾತ್ರಿಯಾದರೂ ಬರದಿದ್ದರಿಂದ ರವಿಚಂದ್ರನ್ ಪತ್ನಿ ಕೀರ್ತನಾ, ರವಿಚಂದ್ರನ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಸ್ವಿಚ್ ಆಫ್ ಆಗಿತ್ತು. ಇದರಿಂದ ಗಾಬರಿಗೊಂಡ ಅವಳು ರವಿಚಂದ್ರನ್ ಅವರನ್ನು ಹುಡುಕಲು ಸಂಬಂಧಿಕರಿಗೆ ತಿಳಿಸಿದರು. ನಂತರ ವೆಟ್ರಿ ನಗರದ ಎಂಆರ್‍ಎಫ್ ಆಟದ ಮೈದಾನದ ಮೂಲೆಯಲ್ಲಿ ಆತ ಶವವಾಗಿ ಬಿದ್ದಿರುವುದು ಕಂಡಿದೆ. ಇದನ್ನೂ ಓದಿ: ಬಿಜೆಪಿ ನಾಯಕರೇ ಅಮಿತ್‌ ಶಾ ಗುಲಾಮರಾಗಬೇಡಿ, ಕನ್ನಡ ತಾಯಿ ಸ್ವಾಭಿಮಾನಿ ಮಕ್ಕಳಾಗಿ: ಸಿದ್ದು

    ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಷಯವನ್ನು ತಿಳಿಸಿದ ರವಿಚಂದ್ರನ್ ಪತ್ನಿ ಕೀರ್ತನಾ ಆವಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಟಾನ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ.

    POLICE JEEP

    ಕೀರ್ತನಾ ಅವರ ದೂರಿನ ಆಧಾರದ ಮೇಲೆ, ಆವಡಿಯ ಪೊಲೀಸ್ ಕಮಿಷನರ್ ಸಂದೀಪ್ ರೈ ರಾಥೋಡ್ ಅವರು ವಿಶೇಷ ತಂಡಗಳನ್ನು ರಚಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖಾಧಿಕಾರಿಯೊಬ್ಬರ ಪ್ರಕಾರ, ಸೆಲ್ಫಿ ಕೊಲೆಗಾರರನ್ನು ಗುರುತಿಸಲು ಸಹಾಯ ಮಾಡಿದೆ. ಇದನ್ನೂ ಓದಿ: ಮತ್ತೆ ಗಲಭೆಕೋರರ ಪರ ನಿಂತ ಜಮೀರ್- ಕಲ್ಲು ಹೊಡೆದವರ ಕುಟುಂಬಕ್ಕೆ 5 ಸಾವಿರ, ಫುಡ್‍ಕಿಟ್

  • ಪಾರ್ಟಿಗೆ ಬಂದಿದ್ದ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಹತ್ಯೆಗೈದ ಬಾರ್ ಬೌನ್ಸರ್

    ಪಾರ್ಟಿಗೆ ಬಂದಿದ್ದ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಹತ್ಯೆಗೈದ ಬಾರ್ ಬೌನ್ಸರ್

    ಲಕ್ನೋ: ಸ್ನೇಹಿತರೊಂದಿಗೆ ಪಾರ್ಟಿಗೆ ಬಂದಿದ್ದ 30 ವರ್ಷದ ವ್ಯಕ್ತಿ ಮೇಲೆ ಬಾರ್ ಸಿಬ್ಬಂದಿ(ಬೌನ್ಸರ್) ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ನೋಯ್ಡಾದ ಗಾರ್ಡನ್ ಗ್ಯಾಲೇರಿಯಾ ಮಾಲ್‍ನಲ್ಲಿ ನಡೆದಿದೆ.

    ಬಿಹಾರದ ಛಾಪ್ರಾ ಜಿಲ್ಲೆಯ ಹಸನ್‍ಪುರ ಗ್ರಾಮದ ಬ್ರಿಜೇಶ್ ರೈ ಎಂಬ ವ್ಯಕ್ತಿ ತನ್ನ ಸಹೋದ್ಯೋಗಿಗಳೊಂದಿಗೆ ಪಾರ್ಟಿ ಮಾಡಲು ಮಾಲ್‍ನಲ್ಲಿರುವ ಬಾರ್‌ಗೆ ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಹೋಗಿದ್ದರು. ಈ ವೇಳೆ ಬೌನ್ಸರ್ ಹಾಗೂ ಪಾರ್ಟಿಗೆ ಬಂದಿದ್ದವರ ನಡುವೆ ಜಗಳವಾಗಿದೆ. ಗಲಾಟೆಯಲ್ಲಿ ಬ್ರಿಜೇಶ್ ರೈ ಗಂಭೀರವಾಗಿ ಗಾಯಗೊಂಡಿದ್ದರು. ಹಾಗಾಗಿ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದೀಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ರು ಸಮನ್ಸ್ ನೀಡಿದ್ದಕ್ಕೆ ಪ್ರಿಯಕರನೊಂದಿಗೆ ಬಾಲಕಿ ಆತ್ಮಹತ್ಯೆ

    ಸದ್ಯ ಬಾರ್ ಸಿಬ್ಬಂದಿ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದು, ಆತನನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಎಡಿಸಿಪಿ) ರಣವಿಜಯ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ – ಜಿಗ್ನೇಶ್ ಮೇವಾನಿ ವಿರುದ್ಧ ಮತ್ತೊಂದು ಕೇಸ್

  • ಮದುವೆ, ಪಾರ್ಟಿ ಸಮಾರಂಭಕ್ಕೆ ಗನ್ ನಿಷೇಧ

    ಮದುವೆ, ಪಾರ್ಟಿ ಸಮಾರಂಭಕ್ಕೆ ಗನ್ ನಿಷೇಧ

    ಭೋಪಾಲ್: ಸೆಕ್ಷನ್ 144 ರ ಅಡಿಯಲ್ಲಿ ಮದುವೆ ಕಾರ್ಯಕ್ರಮಗಳು, ಪಾರ್ಟಿಗಳಲ್ಲಿ ಗನ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ಎಂದು ಮಧ್ಯಪ್ರದೇಶದಲ್ಲಿ ಘೋಷಣೆ ಮಾಡಲಾಗಿದೆ.

    ಇತ್ತೀಚಿನ ಮದುವೆ ಮತ್ತು ಇತರ ಸಮಾರಂಭಗಳಲ್ಲಿ ಮಾರಣಾಂತಿಕ ಘಟನೆಗಳು ಹೆಚ್ಚಾಗುತ್ತಿದೆ. ಈ ದೃಷ್ಟಿಯಿಂದ, ಮೊರೆನಾದ ಸೆಕ್ಷನ್ 144 ರ ಅಡಿಯಲ್ಲಿ ಮದುವೆಗಳು, ಪಾರ್ಟಿಗಳು ಇತ್ಯಾದಿ ಸಮಾರಂಭಗಳಿಗೆ ಬಂದೂಕು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ ಎಂದು ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ನಾಲ್ಕೆನೇ ಅಲೆ ತಡೆಯೋದು ನಮ್ಮ ಕೈಯಲ್ಲಿಯೇ ಇದೆ: ತಜ್ಞ ವೈದ್ಯರು 

    ಮೊರೆನಾ ಎಸ್‍ಪಿ ಅಶುತೋಷ್ ಬಗ್ರಿ ಅವರು ಈ ಕುರಿತು ಮಾತನಾಡಿದ್ದು, ಮೊರೆನಾ ಸೇರಿದಂತೆ ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಇತ್ತೀಚೆಗೆ ಮಾರಣಾಂತಿಕ ಘಟನೆಗಳು ಹೆಚ್ಚಾಗುತ್ತಿದೆ. ಇದಕ್ಕೆ ಮುಖ್ಯಕಾರಣ ಸಮಾರಂಭಗಳಿಗೂ ಜನರು ಗನ್ ಮತ್ತು ಮಾರಣಾಂತಿಕ ಆಯುಧಗಳನ್ನು ತೆಗೆದುಕೊಂಡು ಹೋಗುತ್ತಿರುವುದು. ಈ ಹಿನ್ನೆಲೆ ಇದನ್ನು ತಡೆಯಬೇಕು ಎಂದು, ಯಾವುದೇ ರೀತಿಯ ಸಮಾರಂಭಗಳಿಗೆ ಗನ್ ತೆಗೆದುಕೊಂಡು ಹೋಗದಂತೆ ನಿಷೇಧ ಏರಲಾಗಿದೆ ಎಂದು ವಿವರಿಸಿದರು.

    ಇನ್ನೂ ಮುಂದೆ ಈ ರೀತಿಯ ಪ್ರಕರಣಗಳು ನಡೆದ್ರೆ, ಗನ್ ಪರವಾನಗಿ ರದ್ದಾಗುತ್ತೆ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ:  ಸಾಮೂಹಿಕ ಅತ್ಯಾಚಾರ ಮಾಡಿ ಮಹಿಳೆಯನ್ನು ಕೊಲೆಗೈದ ಪಾಪಿಗಳು

  • ಕೆಜಿಎಫ್ 2 : ಗೋವಾದಲ್ಲಿ ಸಕ್ಸಸ್ ಪಾರ್ಟಿ

    ಕೆಜಿಎಫ್ 2 : ಗೋವಾದಲ್ಲಿ ಸಕ್ಸಸ್ ಪಾರ್ಟಿ

    ಕೆಜಿಎಫ್ 2 ಭರ್ಜರಿ ಯಶಸ್ಸು ಕಂಡಿದೆ. ಹೀಗಾಗಿ ಇಡೀ ಸಿನಿಮಾ ತಂದ ರಿಲ್ಯಾಕ್ಸ್ ಮೂಡ್ ನಲ್ಲಿದೆ. ವಾರದ ಹಿಂದೆಯಷ್ಟೇ ಕುಟುಂಬ ಸಮೇತ ಯಶ್ ಗೋವಾದಲ್ಲಿ ಬೀಡು ಬಿಟ್ಟಿದ್ದರು. ಗೋವಾದಲ್ಲಿ ಪತ್ನಿ ರಾಧಿಕಾ ಪಂಡಿತ್ ಅಜ್ಜಿಯ ಮನೆ ಇರುವ ಕಾರಣಕ್ಕಾಗಿ ಆಗಾಗ್ಗೆ  ಅವರು ಗೋವಾಗೆ ಭೇಟಿ ಕೊಡುತ್ತಾರೆ. ಈ ಬಾರಿ ಗೋವಾದಲ್ಲಿ ಇಡೀ ತಂಡವನ್ನು ಕರೆದುಕೊಂಡು ಹೋಗಿ ಸಕ್ಸಸ್ ಪಾರ್ಟಿ ಮಾಡಿದ್ದಾರೆ ಯಶ್.  ಇದನ್ನೂ ಓದಿ : ಪ್ರಧಾನಿ ಮೋದಿ ಕೈ ಸೇರಿದ ಅನುಪಮ್ ಖೇರ್ ತಾಯಿ ಕೊಟ್ಟ ರುದ್ರಾಕ್ಷಿ

    ಗೋವಾದಲ್ಲಿ ನಡೆದ ಸಕ್ಸಸ್ ಪಾರ್ಟಿಯಲ್ಲಿ ಬಹುತೇಕ ಕೆಜಿಎಫ್ 2 ತಂಡ ಭಾಗಿಯಾಗಿದೆ. ನಟ ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್, ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಪತ್ನಿ, ನಿರ್ಮಾಪಕ ವಿಜಯ ಕಿರಗಂದೂರು ಮತ್ತು ಪತ್ನಿ, ಸಿನಿಮಾಟೋಗ್ರಾಫರ್ ಭುವನ್,  ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ, ನಿರ್ದೇಶಕ ಸೂರಿ, ಕಾಸ್ಟ್ಯೂಮ್ ಡಿಸೈನರ್ ಹೀಗೆ ಬಹುತೇಕರು ಈ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ : ಬಾಲಿವುಡ್ ಬಾಕ್ಸ್ಆಫೀಸ್‌ನಲ್ಲಿ ಯಶ್ ಮೇನಿಯಾ: 300 ಕೋಟಿ ಬಾಚಿದ `ಕೆಜಿಎಫ್ 2′

    ಗೋವಾದ ಸಮುದ್ರ ತೀರದಲ್ಲಿರುವ ಪ್ರತಿಷ್ಠಿತ ಹೋಟೆಲ್ ನಲ್ಲಿ ಈ ಪಾರ್ಟಿಯನ್ನು ಆಯೋಜನೆ ಮಾಡಿತ್ತು ಚಿತ್ರತಂಡ. ಈ ಹೋಟೆಲ್ ನಲ್ಲಿಯೇ ಕೇಕ್ ಕತ್ತರಿಸಿ ಸಂಭ್ರಮಿಸಿದೆ. ಅಲ್ಲದೇ ಯಶ್ ಅವರ ಕೆನ್ನೆಗೆ ಒಂದು ಕಡೆ ನಿರ್ಮಾಪಕ ವಿಜಯ್ ಕಿರಗಂದೂರು ಮತ್ತೊಂದು ಕೆನ್ನೆಗೆ ನಿರ್ದೇಶಕ ಪ್ರಶಾಂತ್ ನೀಲ್ ಮುತ್ತು ಕೊಡುವ ಮೂಲಕ ಪಾರ್ಟಿಯ ಕಳೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಇದನ್ನೂ ಓದಿ:ಸೀಮಂತದ ಸಂಭ್ರಮದಲ್ಲಿ ನಟಿ ಸಂಜನಾ ಗಲ್ರಾನಿ

    ಬಾಲಿವುಡ್ ಸೇರಿದಂತೆ ನಾನಾ ಕಡೆ ಕೆಜಿಎಫ್ 2 ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವೇ ದಿನಗಳಲ್ಲೇ ಈ ಸಿನಿಮಾ ಸಾವಿರ ಕೋಟಿ ಕ್ಲಬ್‍ ಗೆ ಸೇರ್ಪಡೆಯಾಗಲಿದೆ. ಅದರಲ್ಲೂ ಬಾಲಿವುಡ್ ನಲ್ಲಿ ಅತೀ ಹೆಚ್ಚು ಹಣ ಗಳಿಸುವುದರ ಮೂಲಕ ಬಾಲಿವುಡ್ ಸಿನಿಮಾಗಳ ಬಹುತೇಕ ದಾಖಲೆಗಳನ್ನು ಈ ಚಿತ್ರ ಮುರಿದಿದೆ.