Tag: party

  • ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ದಾಳಿ- 64 ಯುವಕರು, 24 ಯುವತಿಯರು ಪತ್ತೆ

    ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ದಾಳಿ- 64 ಯುವಕರು, 24 ಯುವತಿಯರು ಪತ್ತೆ

    ಬೆಂಗಳೂರು: ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮಾರತ್ತಹಳ್ಳಿಯ ಔಟರ್ ರಿಂಗ್ ರಸ್ತೆಯಲ್ಲಿರೋ ಐಷಾರಾಮಿ ಹೋಟೆಲ್ ಮೇಲೆ ನಡೆದ ದಾಳಿ ವೇಳೆ 64 ಯುವಕರು ಮತ್ತು 24 ಯುವತಿಯರು ಪತ್ತೆಯಾಗಿದ್ದಾರೆ.

    ಆಫ್ರಿಕಾ ಮೂಲದ ವ್ಯಕ್ತಿಯೊಬ್ಬ ಪಾರ್ಟಿ ಆರ್ಗನೈಸ್ ಮಾಡಿದ್ದ. ಅವಧಿಗೂ ಮೀರಿ ಪಾರ್ಟಿ ನಡೆಯುತ್ತಿತ್ತು. ಬೆಳಗ್ಗಿನಜಾವ 3.30 ತನಕ ನಡೆಯುತ್ತಿದ್ದ ಪಾರ್ಟಿ ಮೇಲೆ ಸಿಸಿಬಿ ದಾಳಿ ನಡೆಸಿದೆ. ಸೌತ್ ಪಾರ್ಟಿಯಲ್ಲಿ ಯುವಕ, ಯುವತಿಯರು ಮತ್ತಿನಲ್ಲಿ ಕುಣಿದು ಕುಪ್ಪಳಿಸ್ತಿದ್ರು. ಇದನ್ನೂ ಓದಿ: ಶ್ರೀರಾಮ ಶೋಭಾಯಾತ್ರೆ ವೇಳೆ ಕಲ್ಲುತೂರಾಟ- ಪವರ್ ಕಟ್ ಮಾಡಿ ಕಿಡಿಗೇಡಿಗಳ ದುಷ್ಕೃತ್ಯ

    ಪಾರ್ಟಿಯಲ್ಲಿ ಉತ್ತರ ಭಾರತ ಮೂಲದ ಯುವತಿಯರೇ ಹೆಚ್ಚು ಮಂದಿ ಇದ್ದರು. ಆರ್ಗನೈಸರ್ ಯುವಕರಿಗೆ 400, ಯುವತಿಯರಿಗೆ 300 ರೂಪಾಯಿ ಎಂಟ್ರಿ ಫೀಸ್ ಇಟ್ಟಿದ್ದ. ಪಾರ್ಟಿಯಲ್ಲಿ ಡ್ರಗ್ಸ್ ಇರುವ ಅನುಮಾನ ಇತ್ತ. ಆದರೆ ಹೋಟೆಲ್ ನಲ್ಲಿ ಡ್ರಗ್ಸ್ ದೊರೆತಿಲ್ಲ ಬದಲಾಗಿ ಪಾರ್ಟಿಯಲ್ಲಿದ್ದವರು ನಶೆಯಲ್ಲಿರೋ ಮಾಹಿತಿ ದೊರೆತಿದೆ.

    ಸದ್ಯ ಪಾರ್ಟಿಯಲ್ಲಿದ್ದವರನ್ನ ಮೆಡಿಕಲ್ ಚೆಕಪ್ ಮಾಡಿಸಲು ಸಿಸಿಬಿ ಪೊಲೀಸ್ರು ಮುಂದಾಗಿದ್ದಾರೆ. ಹೆಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಇದನ್ನೂ ಓದಿ: ಪಾಕ್ ಅನ್ನು ಟಿಶ್ಯೂ ಪೇಪರ್ ಆಗಿ ಬಳಸಿ ಎಸೆಯಲಾಗಿದೆ: ಇಮ್ರಾನ್ ಕಿಡಿ

  • ಕುಡಿದ ಅಮಲಿನಲ್ಲಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಬಲಿ

    ಕುಡಿದ ಅಮಲಿನಲ್ಲಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಬಲಿ

    ಬೀದರ್: ಕುಡಿದ ಅಮಲಿನಲ್ಲಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ನಗರದ ಹೊರ ವಲಯದ ದೇವ ಉದ್ಯಾನವನದ ಬಳಿ ನಡೆದಿದೆ.

    ಕುಡಿದ ಅಮಲಿನಲ್ಲಿ ಚಾಲಕನೊಬ್ಬನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತೊಬ್ಬರು ಬ್ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಲ್ಯಾಂಡಿಂಗ್

    ನಗರದ ಬುತ್ತಿ ಬಸವಣ್ಣ ಕಾಲೋನಿಯ ನಿವಾಸಿಗಳಾದ ವಿದ್ಯಾಧರ್ (28) ಹಾಗೂ ಶಾಮ್ ರಾವ್ (30) ಸಾವನ್ನಪ್ಪಿದ ದುರ್ವೈವಿಗಳು. ಇಬ್ಬರು ಯುವಕರು ಪಾರ್ಟಿ ಮಾಡಿ ತೆಲಂಗಾಣದಿಂದ ಬೀದರ್‌ಗೆ ಬರುತ್ತಿದ್ದರು. ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕಂಟೈನ್ಮೆಂಟ್ ಝೋನ್ ಹೋಮ್‍ನಲ್ಲಿ ಸ್ನೇಹಿತರೊಂದಿಗೆ ಸೋಂಕಿತ ಪಾರ್ಟಿ

    ಕಂಟೈನ್ಮೆಂಟ್ ಝೋನ್ ಹೋಮ್‍ನಲ್ಲಿ ಸ್ನೇಹಿತರೊಂದಿಗೆ ಸೋಂಕಿತ ಪಾರ್ಟಿ

    ಭೋಪಾಲ್: ಕೋವಿಡ್ ರೋಗಿಯೊಬ್ಬರು ಸ್ನೇಹಿತರೊಂದಿಗೆ ಪಾರ್ಟಿ ಮಾಡಿರುವ ಘಟನೆ ರತ್ಲಾಮ್ ನಗರದ ನಿರಾಲ್ ಕಾಲನಿಯ ಕಂಟೈನ್ಮೆಂಟ್ ಝೋನ್‍ನಲ್ಲಿರುವ ಮನೆಯೊಂದರಲ್ಲಿ ನಡೆದಿದೆ.

    ಕೋವಿಡ್-19 ಪಾಸಿಟಿವ್ ವ್ಯಕ್ತಿ ಮತ್ತು ಅವರ ಸ್ನೇಹಿತರು ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದರು. (ಎಮ್‍ಸಿಆರ್) ನಗರ ಪಾಲಿಕಾ ನಿಗಮ ಸಿಬ್ಬಂದಿಗೆ ಭಾನುವಾರ ಇದರ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಅಲ್ಲಿಗೆ ತಪಾಸಣಾ ತಂಡವನ್ನು ಕಳುಹಿಸಿತ್ತು. ಈ ಸಂದರ್ಭದಲ್ಲಿ ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದ ಎಲ್ಲರನ್ನೂ ಕೋವಿಡ್ ಕೇರ್ ಸೆಂಟರ್‌ ಗೆ ದಾಖಲಿಸಲಾಗಿದೆ ಎಂದು ತಹಶೀಲ್ದಾರ್ ಗೋಪಾಲ್ ಸೋನಿ ತಿಳಿಸಿದರು. ಇದನ್ನೂ ಓದಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್‌ ನಿಧನ

    ಘಟನೆ ಕುರಿತು ಇಂಡಸ್ಟ್ರಿಯಲ್ ಏರಿಯಾ ಪೊಲೀಸ್ ಠಾಣೆಯಿಂದ ಕೋವಿಡ್ ತಡೆಗಟ್ಟುವ ಆದೇಶಗಳನ್ನು ಉಲ್ಲಂಘಿಸಿದ್ದಕ್ಕಾಗಿ ಐಪಿಸಿ ಸೆಕ್ಷನ್ 188 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಅಫ್ಘಾನಿಸ್ತಾನಕ್ಕೆ ಭಾರತದ ನೆರವು – ಇರಾನ್ ಸಹಾಯ

  • ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು

    ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು

    ಚಿಕ್ಕಬಳ್ಳಾಪುರ: ನೈಟ್ ಕರ್ಪ್ಯೂ ಉಲ್ಲಂಘಿಸಿ ಪಾರ್ಟಿ ಮಾಡುತ್ತಿದ್ದವರು ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.

    ತಾಲೂಕಿನ ಅಗಲಗುರ್ಕಿ ಗ್ರಾಮದ ಬಳಿಯ ವೈಟ್ ನಿರ್ವಾಣ ಬೈ ಜಡೆ ರೆಸಾರ್ಟ್ ನಲ್ಲಿ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಈ ರೆಸಾರ್ಟ್ ನಲ್ಲಿ ತಡರಾತ್ರಿ ಡಿಜೆ ಹಾಕಿ ಮದ್ಯದ ಪಾರ್ಟಿ ಮಾಡುತ್ತಿದ್ದರು. ಈ ಮಾಹಿತಿ ಆಧರಿಸಿ ಚಿಕ್ಕಬಳ್ಳಾಪುರ ಸಿಪಿಐ ಪ್ರಶಾಂತ್ ಹಾಗೂ ಮೂವರು ಸಿಬ್ಬಂದಿ ಭೇಟಿ ನೀಡಿದ್ದರು. ಆದರೆ ಗೇಟ್ ಗೆ ಬೀಗ ಹಾಕಿದ್ದ ರೆಸಾರ್ಟ್ ಮಾಲೀಕರು ಸಾಕಷ್ಟು ಸಮಯ ಬೀಗ ತೆಗೆದಿಲ್ಲ. ನಂತರ ಗೇಟ್ ಬೀಗ ತೆಗೆದಾಗ ಕೆಲ ಪಾನಮತ್ತ ಯುವಕರು ಹೊರ ಬಂದು ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದಾರೆ. ಮಾತಿಗೆ ಮಾತು ಬೆಳೆದು ಗೇಟ್ ಬಳಿಯೇ ಪೊಲೀಸರು ಹಾಗೂ ಯುವಕರ ನಡುವೆ ತಳ್ಳಾಟ, ನೂಕಾಟ ಆಗಿದೆ. ಇದನ್ನೂ ಓದಿ: ಕಳೆದ ವರ್ಷದಂತೆ ಈ ಬಾರಿಯೂ ಸರಳವಾಗಿಯೇ ಹೊಸ ವರ್ಷ ಆಚರಣೆ

    ಈ ವೇಳೆ ಪೊಲೀಸರ ಮೇಲೆಯೇ ಪಾನಮತ್ತ ಯುವಕರ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನೆ ಮಾಡಿದ ಚಿಕ್ಕಬಳ್ಳಾಪುರ ಇನ್ಸ್ಪೆಕ್ಟರ್ ಅವರೊಂದಿಗೆ ಗಲಾಟೆ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಎಸ್ಪಿ ಹಾಗೂ ಡಿವೈಎಸ್ಪಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ನಂತರ ಪಾನಮತ್ತ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಿಕ್ಕಬಳ್ಳಾಪುರ ತಾಲೂಕು ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: 3 ಕೋಟಿ ವೆಚ್ಚದ ರಸ್ತೆ ನಿರ್ಮಾಣ, 1 ಕೋಟಿಯ ಯುಜಿಡಿ ಕಾಮಗಾರಿಗೆ ಶೀಘ್ರ ಚಾಲನೆ: ಜಗದೀಶ್ ಶೆಟ್ಟರ್

  • ಅಪಘಾತ ಪ್ರಕರಣಕ್ಕೆ ಸ್ಫೋಟಕ ತಿರುವು – ಕೇರಳ ಮಾಡೆಲ್‍ಗಳಿಗಿತ್ತಾ ಡ್ರಗ್ ಪೆಡ್ಲರ್‌ಗಳ ನಂಟು?

    ಅಪಘಾತ ಪ್ರಕರಣಕ್ಕೆ ಸ್ಫೋಟಕ ತಿರುವು – ಕೇರಳ ಮಾಡೆಲ್‍ಗಳಿಗಿತ್ತಾ ಡ್ರಗ್ ಪೆಡ್ಲರ್‌ಗಳ ನಂಟು?

    ತಿರುವನಂತಪುರ: ಕೊಚ್ಚಿಯಲ್ಲಿ ನವೆಂಬರ್ 1 ರಂದು ಅಪಘಾತದಲ್ಲಿ ಮೃತಪಟ್ಟ ಮಾಡೆಲ್‍ಗಳಿಗೆ ಡ್ರಗ್ ಪೆಡ್ಲರ್‌ಗಳ ನಂಟು ಇತ್ತಾ ಎಂಬ ಪ್ರಶ್ನೆ ಎದ್ದಿದೆ.

    ಮೃತಪಟ್ಟ ಮಾಡೆಲ್‍ಗಳ ಪ್ರಕರಣ ಕುರಿತಂತೆ ತನಿಖೆ ಚುರುಕಾಗಿದ್ದು, ಇದೀಗ ಪಾರ್ಟಿಯಲ್ಲಿ ಭಾಗವಹಿಸಿದ್ದ ಅತಿಥಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಡ್ರಗ್ಸ್ ಲಿಂಕ್ ಬಗ್ಗೆ ಅನುಮಾನ ಬಂದಿದೆ.

    Kerala Model

    ನವೆಂಬರ್ 1 ರಂದು ಫೋರ್ಟ್ ಕೊಚ್ಚಿಯ ನಂ.18 ಎಂಬ ಐಷಾರಾಮಿ ಹೋಟೆಲ್‍ನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಈ ಪಾರ್ಟಿಯಲ್ಲಿ ಮಿಸ್ ಕೇರಳ 2019 ವಿಜೇತೆ ಆನ್ಸಿ ಕಬೀರ್, ರನ್ನರ್ ಅಪ್ ಅಂಜನಾ ಶಾಜನ್ ಭಾಗಿಯಾಗಿದ್ದರು. ಪಾರ್ಟಿ ಬಳಿಕ ಇಬ್ಬರು ರಸ್ತೆ ಅಪಘತಾದಲ್ಲಿ ಸಾವನ್ನಪ್ಪಿದ್ದರು. ಇದನ್ನೂ ಓದಿ:  ರಾಜ್ಯದಲ್ಲಿ ಅಕಾಲಿಕ ಮಳೆಗೆ ಜನಜೀವನ ಅಸ್ತವ್ಯಸ್ತ – ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಕಟ್ಟೆಚ್ಚರ

    Kerala Model

    ಪ್ರಕರಣಕ್ಕೆ ಸಂಬಂಧಿಸಿ ನಂ.18 ಹೋಟೆಲ್‍ನ ಮಾಲೀಕ ರಾಯ್ ವಯಲಾತ್ ಹಾಗೂ ಹೋಟೆಲ್‍ನ ಐವರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಮಾಡೆಲ್‍ಗಳು ಹೋಗುತ್ತಿದ್ದ ಕಾರನ್ನು ಆಡಿ ಕಾರೊಂದು ಹಿಂಬಾಲಿಸುತ್ತಿದ್ದ ಸಿಸಿಟಿವಿ ದೃಶ್ಯಗಳು ಪೊಲೀಸರಿಗೆ ದೊರೆತ್ತಿತ್ತು. ಕಾರನ್ನು ಚಲಾಯಿಸುತ್ತಿದ್ದ ಸೈಜು ತಂಕಚನ್‍ಗೆ ಕೊಚ್ಚಿಯಲ್ಲಿ ಡ್ರಗ್ ಪೆಡ್ಲರ್ ಸಂಪರ್ಕವಿದೆ. ಈತ ಬೆಂಗಳೂರಿನಿಂದ ಕೊಚ್ಚಿಗೆ ಡ್ರಗ್ಸ್ ಮಾರಾಟ ಮಾಡುವ ಗುಂಪಿನಲ್ಲಿ ಕೆಲಸ ಮಾಡುತ್ತಿದ್ದ ಎಂಬ ಆರೋಪ ಬಂದಿದೆ.

     

    View this post on Instagram

     

    A post shared by Ansi Kabeer (@ansi_kabeer)

    ಪಾರ್ಟಿ ನಂತರ ಭೇಟಿಯಾಗುವಂತೆ ಸೈಜು ತಿಳಿಸಿದ್ದ. ಆದರೆ ಆತನ ಆಹ್ವಾನವನ್ನು ಮಾಡೆಲ್‍ಗಳು ನಿರಾಕರಿಸಿದ್ದರು. ಆದಾದ ಬಳಿಕ ಈ ಅಪಘಾತ ನಡೆದಿದೆ. 2021 ಮೇನಲ್ಲಿ ಸೈಜು ಹೋಟೆಲ್ ಪಾರ್ಟಿಯಲ್ಲಿ ಮಾದಕ ದ್ರವ್ಯ ಸೇವೆಸಿದ್ದ ಫೋಟೋ ಲಭ್ಯವಾಗಿದೆ. ಆದರೆ ಹೋಟೆಲ್ ಮಾಲೀಕ ರಾಯ್ ವಯಲಾತ್ ಪೊಲೀಸರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರಿಂದ ತನಿಖೆಗೆ ಅಡ್ಡಿಯಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ:  1.5 ಕೋಟಿ ರೂ. ಮೌಲ್ಯದ ಹಾವಿನ ವಿಷ ಮಾರಾಟ – ಇಬ್ಬರು ಅರೆಸ್ಟ್

    ಘಟನೆಯಾಗಿ ಮೂರು ವಾರ ಕಳೆದರೂ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಲು ಸಾಧ್ಯವಾಗದ ಕಾರಣ ಇದೀಗ ಅಪರಾಧ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಬಿಜಿ ಜಾರ್ಜ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

  • ಸಮುದ್ರದ ಮಧ್ಯೆ ಡ್ರಗ್ಸ್ ಪಾರ್ಟಿ- ಸ್ಟಾರ್ ನಟನ ಮಗ ಸೇರಿ ಹತ್ತು ಮಂದಿ ವಶಕ್ಕೆ

    ಸಮುದ್ರದ ಮಧ್ಯೆ ಡ್ರಗ್ಸ್ ಪಾರ್ಟಿ- ಸ್ಟಾರ್ ನಟನ ಮಗ ಸೇರಿ ಹತ್ತು ಮಂದಿ ವಶಕ್ಕೆ

    – ಗೋವಾಕ್ಕೆ ಹೋಗ್ತಿದ್ದ ಐಷಾರಾಮಿ ಹಡಗಿನ ಮೇಲೆ ದಾಳಿ

    ಮುಂಬೈ: ಸಮುದ್ರದ ಮಧ್ಯದಲ್ಲಿ ಗೋವಾಕ್ಕೆ ಹೋಗುತ್ತಿದ್ದ ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿದ್ದು, ಬಾಲಿವುಡ್ ಸ್ಟಾರ್ ನಟನ ಮಗ ಸೇರಿ ಒಟ್ಟು ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಮುಂಬೈ ಸಮುದ್ರದ ಮಧ್ಯದಲ್ಲಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಎನ್‍ಸಿಬಿ ಅಧಿಕಾರಿಗಳು ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದಾರೆ. ಡ್ರಗ್ಸ್ ರೇವ್ ಪಾರ್ಟಿ ಮಾಡುತ್ತಿದ್ದ ಸ್ಟಾರ್ ನಟನ ಮಗ ಸೇರಿ ಒಟ್ಟು 10 ಮಂದಿಯನ್ನು ಎನ್‍ಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಕೊಕೇನ್, ಎನ್‍ಡಿಎಂ, ಹಾಶಿಶ್ ಮಾದಕ ದ್ರವ್ಯಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಸ್ವಿಗ್ಗಿ ಮೂಲಕ ಗಾಂಜಾ ಸಪ್ಲೈ – 7 ಮಂದಿ ಬಂಧನ

    ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಲಾಗ್ತಿತ್ತು. ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ಮಾದಕ ದ್ರವ್ಯ ತಡೆ ದಳದಿಂದ ಕಾರ್ಯಾಚರಣೆ ನಡೆದಿದ್ದು, ಮಾಲ್ ಸಮೇತ 10 ಜನರನ್ನು ವಶಕ್ಕೆ ಪಡೆದಿದ್ದಾರೆ.

  • ಯಾವುದೇ ಸ್ಥಾನಮಾನ ಇಲ್ಲದಿದ್ರೂ ಕೊನೇ ಉಸಿರಿರುವವರೆಗೆ ಪಕ್ಷ ಸಂಘಟನೆ ಮಾಡ್ತೇನೆ: ಬಿಎಸ್‍ವೈ

    ಯಾವುದೇ ಸ್ಥಾನಮಾನ ಇಲ್ಲದಿದ್ರೂ ಕೊನೇ ಉಸಿರಿರುವವರೆಗೆ ಪಕ್ಷ ಸಂಘಟನೆ ಮಾಡ್ತೇನೆ: ಬಿಎಸ್‍ವೈ

    ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬಲಪಡಿಸುವ ಜೊತೆಗೆ ಮತ್ತಷ್ಟು ಬೆಳೆಸಬೇಕಿದೆ. ಹೀಗಾಗಿ ನನಗೆ ಯಾವುದೇ ಸ್ಥಾನಮಾನ ಇಲ್ಲದಿದ್ದರೂ, ನನ್ನ ಕೊನೆಯ ಉಸಿರು ಇರುವವರೆಗೆ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

    ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ನಡೆದ ಪಂಡಿತ್ ದೀನ್ ದಯಾಳ್ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 135 ರಿಂದ 140 ಸ್ಥಾನ ಪಡೆದು ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕಿದೆ. ಆ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಬೇಕಿದೆ ಎಂದರು. ಇದನ್ನೂ ಓದಿ: ಸೆ.28 ರಂದು ಕಾಂಗ್ರೆಸ್ ಸೇರಲಿದ್ದಾರೆ ಜಿಗ್ನೇಶ್ ಮೇವಾನಿ, ಕನ್ಹಯ್ಯ ಕುಮಾರ್

    ಮುಂದಿನ 10-15 ದಿನಗಳ ನಂತರ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ನಡೆಸುತ್ತೇನೆ. ಈ ಸಂಬಂಧ ಪಕ್ಷದ ಮುಖಂಡರ ಜೊತೆ ಚರ್ಚೆ ನಡೆಸಿ ಪ್ರವಾಸ ನಡೆಸಲಿದ್ದೇನೆ. ನಾನು ಸಾಯುವವರೆಗೂ ಪಕ್ಷ ಸಂಘಟನೆ ಮಾಡುತ್ತೇನೆ, ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು.

    ಸಿದ್ದರಾಮಯ್ಯರಿಂದ ಪ್ರಜಾತಂತ್ರಕ್ಕೆ ದ್ರೋಹ
    ಕಾಂಗ್ರೆಸ್ ನವರು ಸದನದಲ್ಲಿ ಕೋವಿಡ್ ಬಗ್ಗೆ ಚರ್ಚೆ ನಡೆಸದೇ ವಿನಾಕಾರಣ ಸಭಾತ್ಯಾಗ ಮಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ವಿರೋಧ ಪಕ್ಷವಾಗಿ ಒಳ್ಳೆಯ ಕೆಲಸ ಮಾಡಿಲ್ಲ. ಸಿದ್ದರಾಮಯ್ಯ ಅವರು ವಿಪಕ್ಷ ನಾಯಕರಾಗಿ ಪ್ರಜಾತಂತ್ರಕ್ಕೆ ದ್ರೋಹ ಎಸಗಿದ್ದಾರೆ. ಇದನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂದು ಯಡಿಯೂರಪ್ಪ ಹರಿಹಾಯ್ದರು.

    ಬೆಲೆ ಏರಿಕೆ ವಿಚಾರ ಒಂದನ್ನೇ ಇಟ್ಟುಕೊಂಡು ಈ ರೀತಿ ಮಾಡುವುದು ಸರಿಯಲ್ಲ. ಸಂಬಂಧಪಟ್ಟ ಸಚಿವರು ಸದನದಲ್ಲಿ ವಿಪಕ್ಷಗಳು ಕೇಳಿದ ಪ್ರಶ್ನೆಗೆ ಸ್ಪಷ್ಟ ಉತ್ತರ ಕೊಡಲು ಸಿದ್ಧರಿದ್ದರೂ ಕೇಳುವ ತಾಳ್ಮೆ ಇಲ್ಲದೇ ಪಲಾಯನ ಮಾಡಿದರು. ಸದನಕ್ಕೆ ಲೋಕಸಭಾ ಸ್ಪೀಕರ್ ಭೇಟಿ ನೀಡಿದ ಸಂದರ್ಭದಲ್ಲೂ ಸಭಾತ್ಯಾಗ ಮಾಡಿದರು. ಸ್ಪೀಕರ್ ಬಂದಾಗ ಗೌರವಯುತವಾಗಿ ನಡೆದುಕೊಳ್ಳಲಿಲ್ಲ. ಇದು ಪ್ರತಿಪಕ್ಷಕ್ಕೆ ಶೋಭೆ ತರುವುದಿಲ್ಲ. ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಸೋಲು ನಿಶ್ಚಿತ ಎಂದು ಭಾವಿಸಿರುವ ಕಾರಣ ಈ ರೀತಿ ವರ್ತನೆ ಮಾಡುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಜನರೇ ಅವರಿಗೆ ಪಾಠ ಕಲಿಸಲಿದ್ದಾರೆ ಎಂದರು. ಇದನ್ನೂ ಓದಿ: ಭದ್ರತಾ ಮಂಡಳಿ ಜೊತೆ ಎನ್‍ಎಸ್‍ಜಿಯಲ್ಲೂ ಭಾರತ ಇರಬೇಕು: ಬೈಡನ್

    ಭಾರತ್ ಬಂದ್ ಅವಶ್ಯವಿಲ್ಲ
    ಜನತೆ ಮೊದಲೇ ಕೋವಿಡ್ ಸಂಕಷ್ಟದಲ್ಲಿ ಇದ್ದಾರೆ. ಇಂತಹ ಸಮಯದಲ್ಲಿ ಭಾರತ್ ಬಂದ್ ಅವಶ್ಯಕತೆ ಇಲ್ಲ. ಈಗಾಗಲೇ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಂಡಿದ್ದೇವೆ. ಆದರೂ ಬಂದ್ ಕರೆ ನೀಡಿರುವುದು ಸರಿಯಲ್ಲ. ಬಂದ್ ಗೆ ಯಾರೂ ಬೆಂಬಲ ಕೊಡಬಾರದು ಎಂದು ಬಿಎಸ್ ವೈ ತಿಳಿಸಿದರು.

  • ಚಂಪೂ, ಗುಡ್ಡು ಜೊತೆ ಪಾರ್ಟಿ ಮಾಡಿದ ಗುಂಡಮ್ಮ

    ಚಂಪೂ, ಗುಡ್ಡು ಜೊತೆ ಪಾರ್ಟಿ ಮಾಡಿದ ಗುಂಡಮ್ಮ

    ಬೆಂಗಳೂರು: ಬಿಗ್‍ಬಾಸ್ ಸೀಸನ್-8ರ ಮನೆಮಾತಾಗಿದ್ದ ಸ್ಪರ್ಧಿಗಳು ಎಂದರೆ ಅದು ಶುಭಾ ಪೂಂಜಾ ಹಾಗೂ ಮಂಜು. ದೊಡ್ಮನೆಯಲ್ಲಿ ಸದಾ ಪ್ರೇಕ್ಷಕರಿಗೆ ನಗುವಿನ ಕಚಗುಳಿ ನೀಡುತ್ತಿದ್ದ ಶುಭಾ ಪೂಂಜಾ ಮಂಜು ಹಾಗೂ ರಾಜೀವ್ ಜೊತೆಗೆ ಪಾರ್ಟಿ ಮಾಡಿದ್ದಾರೆ.

    shubha

    ತಮ್ಮ ಚೇಷ್ಟೆ ಮತ್ತು ತಮಾಷೆ ಮೂಲಕ ಸದಾ ಮನೆಮಂದಿಯನ್ನೆಲ್ಲಾ ಸಿಕ್ಕಾಪಟ್ಟೆ ಗೋಳು ಹೊಯ್ದುಕೊಳ್ಳುತ್ತಿದ್ದ ಶುಭಾ ಪೂಂಜಾ ತಮ್ಮ ಪ್ರೀತಿ ಪಾತ್ರರಿಗೆ ಒಂದೊಂದು ಕ್ಯೂಟ್ ಕ್ಯೂಟ್ ಹೆಸರಿಟ್ಟಿದ್ದರು. ಅದರಲ್ಲಿ ಶುಭಾ ಪೂಂಜಾಗೆ ಬಹಳ ಹತ್ತಿರವಾಗಿದ್ದ ರಾಜೀವ್‍ರನ್ನು ಗುಡ್ಡು ಅಂತ ಮತ್ತು ಮಂಜುರನ್ನು ಚಂಪೂ ಎಂದು ಕರೆಯುತ್ತಿದ್ದರು. ಅದೇ ರೀತಿ ಶುಭಾ ಪೂಂಜಾಗೆ ಮಂಜು ಕೂಡ ಪ್ರೀತಿಯಿಂದ ಗುಂಡಮ್ಮ ಎಂದು ಕರೆಯುತ್ತಿದ್ದರು. ಇದನ್ನೂ ಓದಿ: ನಾನು ಶಾಲೆಗೆ ಹೋಗ್ಬೇಕು – ಅಫ್ಘಾನ್ ಬಾಲಕಿಯ ಖಡಕ್ ಭಾಷಣ

    shubha

    ಇದೀಗ ಬಿಗ್‍ಬಾಸ್ ಕಾರ್ಯಕ್ರಮ ಮುಕ್ತಾಯದ ನಂತರ ಹಲವು ದಿನಗಳ ಬಳಿಕ ಶುಭಾ ಪೂಂಜಾ, ಮಂಜು ಹಾಗೂ ರಾಜೀವ್ ಒಟ್ಟಿಗೆ ಸೇರಿ ಪಾರ್ಟಿ ಮಾಡಿದ್ದಾರೆ. ವಿಶೇಷವೆಂದರೆ ಈ ಪಾರ್ಟಿಯಲ್ಲಿ ಶುಭಾ ಪೂಂಜಾ ಭಾವಿ ಪತಿ ಸುಮಂತ್, ರಾಜೀವ್ ಪತ್ನಿ ಮತ್ತು ಮಜಾ ಭಾರತ ಕಾರ್ಯಕ್ರಮದ ಕಲಾವಿದರೂ ಕೂಡ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ: ಮೂರು ತಿಂಗಳ ಹಿಂದೆ ಹೂತಿದ್ದ ಶವವನ್ನೇ ಹೊತ್ತೊಯ್ದ ಕಿಡಿಗೇಡಿಗಳು- ವಾಮಾಚಾರದ ಶಂಕೆ

    ಸದ್ಯ ಪಾರ್ಟಿಯ ಕೆಲವೊಂದು ಫೋಟೋವನ್ನು ಶುಭಾ ಪೂಂಜಾ ತಮ್ಮ ಇನ್‍ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಮಂಜು ಕೂಡ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅಲ್ಲದೇ ಫೋಟೋಗಳಿಗೆ ಶುಭಾ ಫ್ರೆಂಡ್ ಶಿಪ್ ಹಾಡುಗಳನ್ನು ಸೆಟ್ ಮಾಡಿಕೊಂಡು ಹಂಚಿಕೊಂಡಿದ್ದಾರೆ. ಒಟ್ಟಾರೆ ಮೂವರು ಒಟ್ಟಾಗಿ ಸೇರಿ ಪಾರ್ಟಿ ಮಾಡಿ ಸಖತ್ ಎಂಜಾಯ್ ಮಾಡಿದ್ದಾರೆ ಎಂದೇ ಹೇಳಬಹುದು.

  • ಕಾಂಗ್ರೆಸ್ ಅಧ್ಯಕ್ಷರನ್ನೇ ನೇಮಕ ಮಾಡಲು ಸಾಧ್ಯವಾಗದ ಪಕ್ಷ, ಬಿಜೆಪಿ ಮಣಿಸಲು ಸಾಧ್ಯವೇ: ಬಿ.ವೈ.ವಿಜಯೇಂದ್ರ

    ಕಾಂಗ್ರೆಸ್ ಅಧ್ಯಕ್ಷರನ್ನೇ ನೇಮಕ ಮಾಡಲು ಸಾಧ್ಯವಾಗದ ಪಕ್ಷ, ಬಿಜೆಪಿ ಮಣಿಸಲು ಸಾಧ್ಯವೇ: ಬಿ.ವೈ.ವಿಜಯೇಂದ್ರ

    ಶಿವಮೊಗ್ಗ: ಕಾಂಗ್ರೆಸ್ ಪಕ್ಷಕ್ಕೆ ಕಳೆದ ಎರಡು ವರ್ಷದಿಂದ ಒಬ್ಬ ಯೋಗ್ಯ ಅಧ್ಯಕ್ಷನನ್ನು ಹುಡುಕಿಕೊಳ್ಳುವಂತಹ ಯೋಗ್ಯತೆ ಇಲ್ಲ. ಇಂತಹ ಪಕ್ಷದಿಂದ ಬಿಜೆಪಿ ಪಕ್ಷ ಮಣಿಸುವುದು ಸಾಧ್ಯವೇ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.

    ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಆರ್‍ಎಸ್‍ಎಸ್ ಹಾಗೂ ಬಿಜೆಪಿ ಪಕ್ಷದವರು ಹಿಂದುತ್ವವಾದಿಗಳು ಎಂದು ಹೇಳಿಕೊಂಡು ನಾಟಕ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನಾನು ನಿಜವಾದ ಹಿಂದೂ ಪಂಡಿತ ಎಂದು ಕಾಶ್ಮೀರಕ್ಕೆ ಭೇಟಿ ನೀಡಿದ್ದಂತಹ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ ಆದರೆ ಇದಕ್ಕೆಲ್ಲ ಜನ ಮರುಳಾಗುವುದಿಲ್ಲ ಎಂದರು. ಇದನ್ನೂ ಓದಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ದಾವಣಗೆರೆ ಸಜ್ಜು

    ಮುಂದೆ ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹೇಗಾದರೂ ಮಾಡಿ ದೂರ ಇಡಬೇಕು. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬಾರದು ಎಂಬ ತಿರುಕನ ಕನಸು ಕಾಣುತ್ತಿದ್ದಾರೆ. ವಿಪಕ್ಷಗಳನ್ನು ಒಗ್ಗೂಡಿಸಿ, ಮೋದಿಯವರನ್ನು ಮಣಿಸಿ ತಾವು ನಾಯಕರಾಗಬೇಕು ಎಂದು ರಾಹುಲ್ ಗಾಂಧಿ ಹೊರಟಿದ್ದಾರೆ. ಅದಕ್ಕೂ ಮೊದಲು ನಿಮ್ಮ ಪಕ್ಷಕ್ಕೆ ಯೋಗ್ಯ ಅಧ್ಯಕ್ಷನನ್ನು ಹುಡುಕಿಕೊಳ್ಳಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಮ್ಮ ಮೆಟ್ರೋ ರೈಲು ಸೇವಾವಧಿ ವಿಸ್ತರಣೆ

    ಸ್ಥಾನಮಾನ ವರಿಷ್ಟರು ನಿರ್ಧರಿಸುತ್ತಾರೆ:
    ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ ಸೇರಲು ಬಿ.ವೈ ವಿಜಯೇಂದ್ರ ಲಾಬಿ ಮಾಡುತ್ತಿದ್ದಾರೆ ಎಂಬುದು ಕೇವಲ ಊಹಾ ಪೋಹ ಅಷ್ಟೇ. ಸದ್ಯ ನಾನೊಬ್ಬ ಬಿಜೆಪಿ ಕಾರ್ಯಕರ್ತ, ರಾಜ್ಯ ಬಿಜೆಪಿ ಉಪಾಧ್ಯಕ್ಷ. ಪಕ್ಷ ಏನನ್ನು ಸೂಚಿಸುತ್ತದೋ ಆ ಕೆಲಸ ಮಾಡುತ್ತೇನೆ. ಮಂತ್ರಿ ಮಂಡಲಕ್ಕೆ ಸೇರುವ ಬಗ್ಗೆ ಯಾವುದೇ ಲಾಬಿ ಮಾಡಿಲ್ಲ. ಮಾಡುವುದು ಇಲ್ಲ. ನಮ್ಮ ಪಕ್ಷ, ನಮ್ಮ ನಾಯಕರು ಯಾರಿಗೆ ಯಾವ ಸ್ಥಾನಮಾನವನ್ನು ಯಾವ ಸಂದರ್ಭದಲ್ಲಿ ನೀಡಬೇಕು ಎಂಬುದನ್ನು ತೀರ್ಮಾನಿಸುತ್ತಾರೆ. ಮಂತ್ರಿ ಮಂಡಲಕ್ಕೆ ಸೇರ್ಪಡೆ ಆಗುವುದು, ಚುನಾವಣೆಗೆ ಸ್ಪರ್ಧಿಸುವುದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ತಿಳಿಸಿದರು.

  • ಸಣ್ಣ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕೊಡಿಸುವ ಕನಸು ಹೊತ್ತು ಕಾಂಗ್ರೆಸ್ ಸೇರ್ಪಡೆ: ದ್ವಾರಕಾನಾಥ್

    ಸಣ್ಣ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕೊಡಿಸುವ ಕನಸು ಹೊತ್ತು ಕಾಂಗ್ರೆಸ್ ಸೇರ್ಪಡೆ: ದ್ವಾರಕಾನಾಥ್

    ಬೆಂಗಳೂರು: ದೇಶದಲ್ಲಿ ಫ್ಯಾಸಿಸ್ಟ್ ಹಾಗೂ ಮತಾಂಧ ಸಂಸ್ಕೃತಿಯ ಪ್ರಭಾವ ಹೆಚ್ಚಾಗುತ್ತಿದೆ. ಸಣ್ಣ ಹಾಗೂ ಹಿಂದುಳಿದ ಸಮುದಾಯಗಳನ್ನು ಈ ಪ್ಯಾಸಿಷ್ಟ್ ಶಕ್ತಿಗಳು ಸೆಳೆಯುತ್ತಿವೆ, ಈ ಸನ್ನಿವೇಶದಲ್ಲಿ ಈ ಸಣ್ಣ ಸಮುದಾಯಗಳನ್ನು ಕಮ್ಯೂನಲಿಸಂನಿಂದ ಉಳಿಸುವ ಸಲುವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಳ್ಳುವ ಮೂಲಕ ಈ ಸಮುದಾಯಗಳ ಅಭಿವೃದ್ಧಿ ಹಾಗೂ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಶ್ರಮಿಸುವುದಾಗಿ ಡಾ.ಸಿ.ಎಸ್ ದ್ವಾರಕಾನಾಥ್ ಹೇಳಿದ್ದಾರೆ.

    ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಮಾತನಾಡಿದ ದ್ವಾರಕಾನಾಥ್, ಸಣ್ಣ ಸಮುದಾಯದ ಸಮಸ್ಯೆಗಳ ನಿವಾರಣೆಯ ನಿಟ್ಟಿನಲ್ಲಿ ಕಳೆದ ನಾಲ್ಕೂವರೆ ದಶಕಗಳಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. ದೇಶದಲ್ಲಿ ಇತ್ತೀಚೆಗೆ ಈ ಸಮುದಾಯದ ಪರವಾಗಿ ಧ್ವನಿ ಎತ್ತುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಕೊರಿಯಾಗೆ ಕಳುಹಿಸಿದ ಸ್ವಾರಸ್ಯಕರ ಕಥೆ ಹೇಳಿದ್ರು ಡಿ.ಕೆ ಶಿವಕುಮಾರ್

    ಫ್ಯಾಸಿಸ್ಟ್ ಸಂಸ್ಕೃತಿ ಹೆಚ್ಚಾಗಿರುವ ಸಂದರ್ಭದಲ್ಲಿ ಧ್ವನಿ ಇಲ್ಲದವರ ಪರವಾಗಿ ಧ್ವನಿ ಎತ್ತುವ ಶಕ್ತಿಯನ್ನು ಹೊಂದಿರುವ ಕಾಂಗ್ರೆಸ್ ಪಕ್ಷದ ಜೊತೆಗೆ ಕೈಜೋಡಿಸಿದ್ದೇನೆ. ದೇವರಾಜ್ ಅರಸು ಅವರು ರಾಜಕೀಯದಿಂದ ಜಾತಿಗಳ ಸಮೀಕರಣ ಮತ್ತು ಸಂಪನ್ಮೂಲಗಳ ಕ್ರೊಢೀಕರಣ ಸಾಧ್ಯ ಎಂದು ಹೇಳಿದ್ದರು. ಜಾತಿಗಳ ಸಮೀಕರಣ ಹಾಗೂ ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಹಾಗೂ ಅವರಿಗೆ ರಾಜಕೀಯ ಪ್ರಾತಿನಿಧ್ಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪಕ್ಷದಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನನ್ನು ಟಾರ್ಗೆಟ್ ಮಾಡುವುದಕ್ಕೆ ಬಂದವರೆಲ್ಲಾ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ: ಪುಟ್ಟರಾಜು