Tag: Pathan

  • ‘ಪಠಾಣ್’ ಕಲೆಕ್ಷನ್ ವಿಚಾರದಲ್ಲಿ ಶಾರುಖ್ ಸುಳ್ಳು ಹೇಳಿದ್ರಾ?: ಪ್ರಶ್ನೆ ಮಾಡಿದ ನಟಿ ಕಾಜೋಲ್

    ‘ಪಠಾಣ್’ ಕಲೆಕ್ಷನ್ ವಿಚಾರದಲ್ಲಿ ಶಾರುಖ್ ಸುಳ್ಳು ಹೇಳಿದ್ರಾ?: ಪ್ರಶ್ನೆ ಮಾಡಿದ ನಟಿ ಕಾಜೋಲ್

    ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಯಶಸ್ಸು ಕಂಡು ಬಾಲಿವುಡ್ (Bollywood) ಅನ್ನು ಸೋಲಿನ ಗಡಿಯಿಂದ ಆಚೆ ತಂದಿತ್ತು ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾ. ಸ್ವತಃ ಸಿನಿಮಾ ತಂಡವೇ ಘೋಷಿಸಿಕೊಂಡಂತೆ ಅದು ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಹಲವು ವರ್ಷಗಳ ಸೋಲಿನ ನಂತರ ಶಾರುಖ್ ಮತ್ತೆ ಪುಟಿದೆದ್ದಿರು. ಅಭಿಮಾನಿಗಳು ಕೂಡ ಸಂಭ್ರಮಿಸಿದ್ದರು. ಸದ್ಯ ಶಾರುಖ್ ಮತ್ತೊಂದು ಸಿನಿಮಾದ ರಿಲೀಸ್ ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ಕಲೆಕ್ಷನ್ ಬಗ್ಗೆ ಖ್ಯಾತ ಬಾಲಿವುಡ್ ನಟಿ ಕಾಜೋಲ್ (Kajol) ಅನುಮಾನ ವ್ಯಕ್ತ ಪಡಿಸಿದ್ದಾರೆ.

    ಮಾಧ್ಯಮವೊಂದರ ಸಂದರ್ಶನದಲ್ಲಿ ನಿರೂಪಕರು ‘ಶಾರುಖ್ ಖಾನ್ ಅವರಿಗೆ ಏನಾದರೂ ಕೇಳಬೇಕು ಅಂತ ನಿಮಗೆ ಅನಿಸ್ತಿದ್ಯಾ?’ ಎಂದು ಪ್ರಶ್ನೆ ಮಾಡುತ್ತಾರೆ. ಕೊಂಚ ಯೋಚನೆ ಮಾಡುವ ಕಾಜೋಲ್, ‘ಈವರೆಗೂ ಅವರ ಬಗ್ಗೆ ಎಲ್ಲವೂ ಇಂಟರ್ ನೆಟ್ ನಲ್ಲಿ ಇದೆ. ಒಂದೇ ಒಂದು ಪ್ರಶ್ನೆ  ಕೇಳುವುದಾದರೆ, ಪಠಾಣ್ ಸಿನಿಮಾ ನಿಜವಾಗಿಯೂ ಕಲೆಕ್ಷನ್ (Collection) ಎಷ್ಟು ಮಾಡಿತು? ಎನ್ನುತ್ತಾರೆ. ನಂತರ ವ್ಯಂಗ್ಯವಾಗಿ ಅವರು ನಗುತ್ತಾರೆ.

    ಕಾಜೋಲ್ ಕೇಳಿದ ಈ ಪ್ರಶ್ನೆಗೆ ಶಾರುಖ್ ಅಭಿಮಾನಿಗಳು ಗರಂ ಆಗಿದ್ದಾರೆ. ಶಾರುಖ್ ಬಗ್ಗೆ ಕಾಜೋಲ್ ಗೆ ಏಕೆ ಅನುಮಾನ? ಅವರು ಸುಳ್ಳು ಹೇಳಿದ್ದಾರೆ ಅಂತಾನಾ? ಏನು ಅವರ ಮಾತಿನ ಧಾಟಿ ಎಂದು ಹರಿಹಾಯ್ದಿದ್ದಾರೆ. ಕಾಜೋಲ್ ಈ ರೀತಿ ಮಾತನಾಡಬಾರದು ಎಂದು ತಾಕೀತು ಮಾಡಿದ್ದಾರೆ. ಬಾಲಿವುಡ್ ನಟಿಯಾಗಿ ಸುಮ್ಮನಿರಬೇಕು ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

    ಕಡಿಮೆ ದಿನದಲ್ಲೇ ಸಾವಿರ ಕೋಟಿ ದಾಟಿದ ಪಠಾಣ್

    ಶಾರುಖ್ ಖಾನ್ ನಟನೆಯ ಪಠಾಣ್ (Pathan) ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿತ್ತು. ಸಿನಿಮಾ ರಿಲೀಸ್ ಆಗಿ 27ನೇ ದಿನಕ್ಕೆ ಸಾವಿರ ಕೋಟಿ (Thousand Crore) ಕ್ಲಬ್ (Club) ಸೇರಿತ್ತು. ಈ ವರ್ಷದಲ್ಲಿ ರಿಲೀಸ್ ಆದ ಬಾಲಿವುಡ್ ಸಿನಿಮಾಗಳಲ್ಲಿ ಅತೀ ಹೆಚ್ಚು ಹಣ ಮಾಡಿದ ಚಿತ್ರ ಎನ್ನುವ ಹೆಗ್ಗಳಿಕೆಗೂ ಈ ಸಿನಿಮಾ ಪಾತ್ರವಾಗಿತ್ತು. ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ಗೆ ಅಭಿಮಾನಿಗಳು ಫಿದಾ ಆಗಿದ್ದರು.

    ಪಠಾಣ್ ಸಿನಿಮಾದ ಹಾಡೊಂದು ವಿವಾದಕ್ಕೀಡಾದಾಗ ಈ ಸಿನಿಮಾವನ್ನು ಗೆಲ್ಲಿಸಲೇಬಾರದು ಎಂದು ಹಲವರು ಕರೆ ನೀಡಿದರು. ಪ್ರತಿಭಟನೆಗಳು ನಡೆದವು, ಬಾಯ್ಕಾಟ್ ಪಠಾಣ್ ಅಭಿಯಾನ ಶುರುವಾಯಿತು. ಚಿತ್ರಮಂದಿರಗಳ ಮೇಲೆ ದಾಳಿ ನಡೆದವು. ಸಿನಿಮಾದ ಪೋಸ್ಟರ್ ಹರಿದು ಹಾಕಲಾಯಿತು. ಪೋಸ್ಟರ್ ಸುಡಲಾಯಿತು. ಏನೆಲ್ಲ ಸಂಕಷ್ಟಗಳು ಎದುರಾದರೂ, ಪಠಾಣ್ ಮಾತ್ರ ಗೆಲುವು ಸಾಧಿಸಿದೆ.

    ಪಠಾಣ್ ಒಂದೊಳ್ಳೆ ಸಿನಿಮಾ. ಎಲ್ಲರ ಮೆಚ್ಚುಗೆಗೂ ಅದು ಪಾತ್ರವಾಗಲಿದೆ. ದೇಶಭಕ್ತಿ ಸಾರುವಂತಹ ಕಥೆಯನ್ನು ಇದು ಒಳಗೊಂಡಿದೆ ಎಂದು ಶಾರುಖ್ ಹೇಳಿದರೂ, ವಿರೋಧಿಗಳು ಮಾತ್ರ ಕೇಳಲಿಲ್ಲ. ಕೆಲವು ರಾಜ್ಯಗಳಲ್ಲಿ ಸಿನಿಮಾವನ್ನು ನಿಷೇಧ ಮಾಡುವಂತೆ ಒತ್ತಡ ತರಲಾಯಿತು. ಕೊನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಿದರು. ಆದರೂ, ಪ್ರತಿಭಟನೆ ಮಾತ್ರ ನಿಲ್ಲಲಿಲ್ಲ.

     

    ಪಠಾಣ್ ಸಿನಿಮಾಗಾಗಿ ಇಡೀ ಬಾಲಿವುಡ್ ಒಂದಾಯಿತು. ಈ ಸಿನಿಮಾವನ್ನು ಗೆಲ್ಲಿಸುವ ಮೂಲಕ ಬಾಲಿವುಡ್ ಗೆಲ್ಲಿಸೋಣ ಎನ್ನುವ ಮಾತು ಕೇಳಿ ಬಂತು. ಹಾಗಾಗಿ ಶಾರುಖ್ ವಿರೋಧಿಗಳು ಕೂಡ ಈ ಸಿನಿಮಾವನ್ನು ಮೆಚ್ಚಿ ಮಾತನಾಡಿದರು. ಮೊದ ಮೊದಲು ತೆಗಳುತ್ತಿದ್ದವರು, ಆ ಮೇಲೆ ಸಿನಿಮಾ ಬಗ್ಗೆ ಹೊಗಳಿಕೆಯ ಮಾತುಗಳನ್ನು ಆಡಿದರು. ಇದೆಲ್ಲದರ ಪರಿಣಾಮ ಇದೀಗ ಪಠಾಣ್ ಸಾವಿರ ಕೋಟಿ ಬಾಚಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತನ್ನ ಅವಳಿ ಮಕ್ಕಳಿಗೆ ‘ಪಠಾಣ್’ ಮತ್ತು ‘ಜವಾನ್’ ಹೆಸರಿಡುವೆ ಎಂದ ಶಾರುಖ್ ಅಭಿಮಾನಿ

    ತನ್ನ ಅವಳಿ ಮಕ್ಕಳಿಗೆ ‘ಪಠಾಣ್’ ಮತ್ತು ‘ಜವಾನ್’ ಹೆಸರಿಡುವೆ ಎಂದ ಶಾರುಖ್ ಅಭಿಮಾನಿ

    ಶಾರುಖ್ ಖಾನ್ (Shah Rukh Khan) ಅಭಿನಯದ ‘ಜವಾನ್’ (Jawan) ಚಿತ್ರವು ಸೆಪ್ಟೆಂಬರ್ ನಲ್ಲಿ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಬಿಡುಗಡೆಗೆ ಇನ್ನು ಎರಡೂವರೆ ತಿಂಗಳಿದ್ದರೂ, ಶಾರುಖ್ ಖಾನ್ ಆಗಲಿ, ಚಿತ್ರತಂಡದವರಾಗಲಿ ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಈಗ ಖುದ್ದು ಶಾರುಖ್ ಚಿತ್ರದ ಕುರಿತು ಒಂದು ಮಹತ್ವದ ಸುಳಿವನ್ನು ನೀಡಿದ್ದಾರೆ.

    ತಮ್ಮ ಅಭಿಮಾನಿಗಳೊಂದಿಗೆ ಆಗಾಗ ಟ್ವಿಟರ್ ನಲ್ಲಿ #AskSRK ಎಂಬ ಪ್ರಶ್ನೋತ್ತರ ಸೆಷನ್ ನಲ್ಲಿ ಭಾಗವಹಿಸುವ ಶಾರುಖ್ ಖಾನ್, ಇತ್ತೀಚೆಗೆ ಮತ್ತೆ ಅಂಥದೊಂದು ಸಂವಾದ ನಡೆಸಿದರು. ಅದಕ್ಕೆ ಕಾರಣವೂ ಇದೆ. ಶಾರುಖ್ ಖಾನ್ ಚಿತ್ರರಂಗಕ್ಕೆ ಕಾಲಿಟ್ಟು ಇತ್ತೀಚೆಗೆ 31 ವರ್ಷಗಳಾಗಿವೆ. ಈ ಸಂಭ್ರಮವನ್ನು ಅವರು ಅಭಿಮಾನಿಗಳೊಂದಿಗೆ ಈ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಆಚರಿಸಿಕೊಂಡಿದ್ದಾರೆ. ಇದನ್ನೂ ಓದಿ:ಶಾನುಭೋಗರ ಮಗಳಾದ ನಟ ಪ್ರಜ್ವಲ್ ಪತ್ನಿ ರಾಗಿಣಿ ಪ್ರಜ್ವಲ್

    ಈ 31 ವರ್ಷಗಳಲ್ಲಿ ನೀವು ನಿರಂತರವಾಗಿ ಪಾಲಿಸುತ್ತಿರುವ ಒಂದು ವಿಷಯ ಏನು ಎಂಬ ಅಭಿಮಾನಿಯೊಬ್ಬರ ಪ್ರಶ್ನೆಗೆ ಉತ್ತರಿಸಿದ ಕಿಂಗ್ ಖಾನ್, ‘ಒಂದು ಚಿತ್ರವನ್ನು ಒಪ್ಪಿಕೊಂಡ ನಂತರ ನನ್ನ ಪಾತ್ರದ ಹಿಂದಿನ ಕಥೆ ಮತ್ತು ಸಿದ್ಧಾಂತಗಳನ್ನು ಅಂದಾಜು ಮಾಡಿ ಬರೆದಿಟ್ಟುಕೊಳ್ಳುತ್ತೇನೆ. ಕೆಲವೊಮ್ಮೆ ಅದನ್ನು ನಿರ್ದೇಶಕರ ಜೊತೆಗೆ ಹಂಚಿಕೊಳ್ಳುತ್ತೇನೆ. ಅದು ಕಥೆಯ ರೂಪದಲ್ಲಿರಬಹುದು ಅಥವಾ ಕಾವ್ಯದ ರೂಪದಲ್ಲೂ ಇರಬಹುದು. ಕೆಲವೊಮ್ಮೆ ಯಾರಿಗೂ ತೋರಿಸದೆ ಎತ್ತಿಟ್ಟುಕೊಂಡಿದ್ದೂ ಇದೆ ಎಂದು ಹೇಳಿದ್ದಾರೆ ಶಾರುಖ್ ಖಾನ್.

    ಸದ್ಯದಲ್ಲೇ ಹುಟ್ಟಲಿರುವ ತಮ್ಮ ಅವಳಿ ಗಂಡು ಮಕ್ಕಳಿಗೆ ‘ಪಠಾಣ್ ಮತ್ತು ‘ಜವಾನ್’ (Pathan) ಎಂಬ ಹೆಸರಿಡಬೇಕೆಂದುಕೊಂಡಿದ್ದೇನೆ ಎಂದು ಅಭಿಮಾನಿಯೊಬ್ಬರ (Fan) ತಮಾಷೆ ಪ್ರಶ್ನೆಗೆ, ‘ಹೆಸರು ಅದ್ಭುತವಾಗಿದೆ. ಆದರೆ, ಅದಕ್ಕೂ ಮಿಗಿಲಾದ ಇನ್ನೂ ಒಳ್ಳೆಯ ಹೆಸರನ್ನು ಇಡಿ ಎಂದು ಸಲಹೆ ನೀಡಿದ್ದಾರೆ.  ‘ಜವಾನ್ ಚಿತ್ರ ನೋಡುವುದಕ್ಕೆ ಜೋಶ್ ನಲ್ಲಿ ಚಿತ್ರಮಂದಿರಕ್ಕೆ ಹೋಗಿ ಎಂದು ಕರೆ ನೀಡಿದ ಶಾರುಖ್ ಖಾನ್, ಸದ್ಯದಲ್ಲೇ ಟೀಸರ್ ಬಿಡುಗಡೆಯಾಗುತ್ತಿದೆ. ಟೀಸರ್ ಚೆನ್ನಾಗಿ ಮೂಡಿಬರುತ್ತಿದ್ದು, ಪ್ರೇಕ್ಷಕರಿಗೆ ಖಂಡಿತಾ ಇಷ್ಟವಾಗುತ್ತದೆ ಎಂಬ ನಂಬಿಕೆ ತಮಗಿದೆ ಎಂದು  ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

     

    ಈ ವರ್ಷದ ಅತೀ ನಿರೀಕ್ಷಿತ ಮತ್ತು ದುಬಾರಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಜವಾನ್ ಚಿತ್ರವನ್ನು ಶಾರುಖ್ ಖಾನ್ ಅವರ ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಸಂಸ್ಥೆ ನಿರ್ಮಿಸುತ್ತಿದ್ದು, ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಾದ ಅಟ್ಲಿ ನಿರ್ದೇಶನ ಮಾಡಿದ್ದಾರೆ. ಈ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಶಾರುಖ್ ಖಾನ್ ಜೊತೆಗೆ ನಯನತಾರಾ, ವಿಜಯ್ ಸೇತುಪತಿ, ಪ್ರಿಯಾಮಣಿ ಸೇರಿದಂತೆ ಹಲವು ಪ್ರಸಿದ್ಧ ಕಲಾವಿದರು ಅಭಿನಯಿಸಿದ್ದಾರೆ. ತಮಿಳಿನ ಜನಪ್ರಿಯ ಸಂಗೀತ ನಿರ್ದೇಶಕರಾದ ಅನಿರುದ್ಧ್ ರವಿಚಂದರ್, ಈ ಚಿತ್ರದ ಮೂಲಕ ಬಾಲಿವುಡ್ (Bollywood) ಗೆ ಎಂಟ್ರಿ ಕೊಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಠಾಣ್ ಸಿನಿಮಾದಲ್ಲಿ ನಟಿಸಲು ಭಾರೀ ಮೊತ್ತದ ಸಂಭಾವನೆ ಪಡೆದ ಶಾರುಖ್ ಖಾನ್

    ಪಠಾಣ್ ಸಿನಿಮಾದಲ್ಲಿ ನಟಿಸಲು ಭಾರೀ ಮೊತ್ತದ ಸಂಭಾವನೆ ಪಡೆದ ಶಾರುಖ್ ಖಾನ್

    ಬಾಲಿವುಡ್ (Bollywood) ಸಿನಿಮಾ ರಂಗವನ್ನು ಐಸಿಯುನಿಂದ ಆಚೆ ತಂದ ಹೆಗ್ಗಳಿಕೆ ಪಠಾಣ್ (Pathan) ಸಿನಿಮಾಗೆ ಸಲ್ಲುತ್ತದೆ. ದಕ್ಷಿಣದ ಸಿನಿಮಾಗಳ ಹಾವಳಿಗೆ ತತ್ತರಿಸಿ ಹೋಗಿದ್ದ ಬಾಲಿವುಡ್, ಒಂದು ಗೆಲುವಿಗಾಗಿ ಕಾಯುತ್ತಿತ್ತು. ಆ ಗೆಲುವನ್ನು ಪಠಾಣ್ ಸಿನಿಮಾ ತಂದುಕೊಟ್ಟಿತು. ಜೊತೆಗೆ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಕೂಡ ಮಾಡಿತು. ಇದರ ಬೆನ್ನಲ್ಲೇ ಶಾರುಖ್ ಖಾನ್ (Shah Rukh Khan) ಪಡೆದ ಮೊತ್ತದ ಬಗ್ಗೆ ಚರ್ಚೆ ಶುರುವಾಗಿದೆ. ಭಾರೀ ಮೊತ್ತದ ಸಂಭಾವನೆಯನ್ನೇ (Remuneration) ಅವರು ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

    ಬಾಕ್ಸ್ ಆಫೀಸಿನ ಅನೇಕ ದಾಖಲೆಗಳನ್ನು ಪಠಾಣ್ ಮುರಿದಿದೆ. ಅತೀ ಕಡಿಮೆ ಸಮಯದಲ್ಲೇ ಸಾವಿರ ಕೋಟಿ ಸಂಪಾದನೆ ಮಾಡಿದ ಬಾಲಿವುಡ್ ಸಿನಿಮಾ ಎನ್ನುವ ಖ್ಯಾತಿಯೂ ಅದು ಪಾತ್ರವಾಗಿದೆ. ಅಲ್ಲದೇ, ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗುವ ಮೂಲಕ ಏಕಕಾಲದಲ್ಲಿ ದೇಶ ವಿದೇಶಗಳಲ್ಲಿ ಚಿತ್ರ ಬಿಡುಗಡೆಯಾಗಿದೆ. ಬಿಡುಗಡೆಯಾದ ಅಷ್ಟೂ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನವನ್ನು ಚಿತ್ರಕಂಡಿದೆ. ನಿರ್ಮಾಣ ಸಂಸ್ಥೆಗೆ ಬರೋಬ್ಬರಿ 603 ಕೋಟಿ ಲಾಭವನ್ನು ತಂದುಕೊಟ್ಟಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ:ತೆಲುಗು ಸಿನಿಮಾ ರಂಗದಲ್ಲೇ ಇನ್ನೂ ಹತ್ತು ವರ್ಷ ಪ್ರಶಾಂತ್ ನೀಲ್ ಲಾಕ್?

    ಈ ಸಿನಿಮಾಗೆ ಯಶ್ ರಾಜ್ ಫಿಲ್ಮ್ಸ್ ಖರ್ಚು ಮಾಡಿದ್ದು 270 ಕೋಟಿ. ಥಿಯೇಟರ್ ನಿಂದಲೇ 941 ಕೋಟಿ ರೂಪಾಯಿ ಬಂದಿದೆ. ಸ್ಯಾಟಲೈಟ್ ಹಾಗೂ ಡಿಜಿಟಲ್ ಹಕ್ಕುಗಳ ರೂಪದಲ್ಲಿ 150 ಕೋಟಿ ಬಾಚಿಕೊಂಡಿತ್ತು. ಹೀಗಾಗಿ ಭಾರೀ ಮೊತ್ತದ ವ್ಯಾಪಾರವನ್ನೇ ಈ ಸಿನಿಮಾ ಮಾಡಿತ್ತು. ಈ ಎಲ್ಲ ವ್ಯಾಪಾರದ ನಂತರ ಶೇರ್ ರೂಪದಲ್ಲಿ ಶಾರುಖ್ ಖಾನ್ ಗೆ 200 ಕೋಟಿ ರೂಪಾಯಿ ಸಂಭಾವನೆ ಹೋಗಿದೆಯಂತೆ.

    ಸಿನಿಮಾ ಬಿಡುಗಡೆಗೂ ಮುನ್ನ ಭಾರೀ ಟೀಕೆಗೆ ಪಠಾಣ್ ಗುರಿ ಆಯಿತು. ಹಾಡೊಂದರಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದರು ಎನ್ನುವ ಕಾರಣಕ್ಕಾಗಿ ಪ್ರತಿಭಟನೆ ಕೂಡ ನಡೆಯಿತು. ಉತ್ತರ ಪ್ರದೇಶ ಸೇರಿದಂತೆ ಹಲವು ಕಡೆ ಸಿನಿಮಾವನ್ನು ಬ್ಯಾನ್ ಮಾಡುವ ವಿಚಾರ ಮುನ್ನೆಲೆಗೆ ಬಂತು. ಈ ಸಿನಿಮಾದ ಬಗ್ಗೆ ಏನೂ ಮಾತನಾಡಬಾರದು ಎಂದು ಸ್ವತಃ ಪ್ರಧಾನಿ ಮೋದಿ ಅವರೇ ಕರೆಕೊಟ್ಟಿದ್ದರು. ಆದರೂ, ಪ್ರತಿಭಟನೆ ನಿಲ್ಲಲಿಲ್ಲ. ಸಿನಿಮಾ ಗೆಲ್ಲುವುದು ಮಾತ್ರ ಬಿಡಲಿಲ್ಲ.

  • ಹುಲ್ಲು ಹಸಿರಾಗಿತ್ತು, ನೀರು ನೀಲಿಯಾಗಿತ್ತು ಅದಕ್ಕೆ ಕೇಸರಿ ಬಿಕಿನಿ ಹಾಕಿಸಿದೆ : ಸಿದ್ಧಾರ್ಥ್

    ಹುಲ್ಲು ಹಸಿರಾಗಿತ್ತು, ನೀರು ನೀಲಿಯಾಗಿತ್ತು ಅದಕ್ಕೆ ಕೇಸರಿ ಬಿಕಿನಿ ಹಾಕಿಸಿದೆ : ಸಿದ್ಧಾರ್ಥ್

    ಶಾರುಖ್ ಖಾನ್ (Shahrukh Khan) ಮತ್ತು ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ನ ‘ಪಠಾಣ್’ (Pathan) ಸಿನಿಮಾದ ಕೇಸರಿ ಬಿಕಿನಿ (Kesari Bikini) ವಿವಾದದ ಬಗ್ಗೆ ಈಗ ನಿರ್ದೇಶಕ ಸಿದ್ದಾರ್ಥ್ ಆನಂದ್ (Siddharth Anand) ಮೌನ ಮುರಿದಿದ್ದಾರೆ. ಆ ಹಾಡಿನಲ್ಲಿ ದೀಪಿಕಾ ಪಡುಕೋಣೆಗೆ ಯಾಕೆ ಕೇಸರಿ ಬಿಕಿನಿ ಹಾಕಿಸಿದೆ ಎನ್ನುವ ಕುರಿತು ಅವರು ಮಾತನಾಡಿದ್ದಾರೆ. ಅದಕ್ಕೆ ಬಲವಾದ ಕಾರಣವನ್ನೂ ಕೊಟ್ಟಿದ್ದಾರೆ.

    ಈ ಹಾಡಿನ ಶೂಟಿಂಗ್ ನಡೆದದ್ದು ಸ್ಪೇನ್ ನಲ್ಲಿ. ಆಗ ಅಲ್ಲಿನ ವಾತಾವರಣಕ್ಕೆ ಹೊಂದುವಂತಹ ಬಣ್ಣ ಆಯ್ಕೆ ಮಾಡಿಕೊಳ್ಳಬೇಕಿತ್ತು. ಬಿಸಿಲಿತ್ತು. ಹುಲ್ಲು ಹಸಿರಾಗಿತ್ತು. ನೀರು ನೀಲಿಯಾಗಿತ್ತು. ಕೇಸರಿ ಬಣ್ಣ ಎದ್ದು ಕಾಣುತ್ತದೆ ಎನ್ನುವ ಕಾರಣಕ್ಕಾಗಿ ಕೇಸರಿ ಬಣ್ಣವನ್ನು ಆಯ್ಕೆ ಮಾಡಿಕೊಂಡರಂತೆ. ಅದರ ಹೊರತಾಗಿ ಬೇರೆ ಯಾವ ಆಲೋಚನೆಯೂ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: 2ನೇ ಮದುವೆ ಸುದ್ದಿಗೆ ಸ್ಪಷ್ಟನೆ ನೀಡಿದ ಕಿರುತೆರೆ ನಟಿ ಸ್ವಾತಿ

    ಕೇಸರಿ ಬಿಕಿನಿ ಆರಿಸುವ ಧಾರ್ಮಿಕ ಭಾವನೆ, ಬೇರೆಯವರಿಗೆ ನೋವಾಗತ್ತೆ ಏನೂ ಯೋಚಿಸಲಿಲ್ಲ. ಒಬ್ಬ ನಿರ್ದೇಶಕನಾಗಿ ಯಾವ ಬಣ್ಣ ಹೈಲೈಟ್ ಆಗತ್ತೆ ಅಂತ ಮಾತ್ರ ಯೋಚನೆ ಮಾಡಿದೆ. ಆದರೆ, ಕೇಸರಿ ಬಿಕಿನಿ ಈ ರೀತಿಯಲ್ಲಿ ವಿವಾದ ಎಬ್ಬಿಸುತ್ತೆ ಎನ್ನುವ ಸಣ್ಣ ಅಂದಾಜು ಕೂಡ ನನಗೆ ಇರಲಿಲ್ಲ. ಸಿನಿಮಾದಲ್ಲಿ ಯಾರ ಭಾವನೆಯನ್ನೂ ಕೆರಳಿಸುವ ಕಥೆಯೂ ಇಲ್ಲ. ಆದರೂ, ವಿವಾದ ಮಾಡಲಾಯಿತು.

    ಸಿನಿಮಾ ಚೆನ್ನಾಗಿದ್ದರೆ, ಯಾರ ಮನಸ್ಸಿಗೂ ನೋವು ಮಾಡದೇ ಇದ್ದರೆ ಸಿನಿಮಾವನ್ನು ಪ್ರೇಕ್ಷಕರು ಗೆಲ್ಲಿಸುತ್ತಾರೆ ಎನ್ನುವುದಕ್ಕೆ ಪಠಾಣ್ ಸಿನಿಮಾ ಸಾಕ್ಷಿ. ಸಿನಿಮಾ ಬಗ್ಗೆ ನನಗೆ ನಂಬಿಕೆಯಿತ್ತು. ಬಾಯ್ಕಾಟ್ ನಡೆಯಲ್ಲ ಅನ್ನುವ ವಿಶ್ವಾಸವಿತ್ತು. ಕೊನೆಗೂ ಪ್ರೇಕ್ಷಕ ಗೆಲ್ಲಿಸಿದ ಎಂದು ಅವರು ಮಾತನಾಡಿದ್ದಾರೆ.

  • 50 ದಿನ ಪೂರೈಸಿದ ಪಠಾಣ್: 20 ದೇಶ, 135 ಚಿತ್ರಮಂದಿರ, 800 ಸ್ಕ್ರೀನ್ ಏನಿದು ಲೆಕ್ಕಾಚಾರ

    50 ದಿನ ಪೂರೈಸಿದ ಪಠಾಣ್: 20 ದೇಶ, 135 ಚಿತ್ರಮಂದಿರ, 800 ಸ್ಕ್ರೀನ್ ಏನಿದು ಲೆಕ್ಕಾಚಾರ

    ಶಾರುಖ್ ಖಾನ್ (Shahrukh Khan) ಮತ್ತು ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ನ ಪಠಾಣ್ (Pathan) ಸಿನಿಮಾ ಇಂದಿಗೆ ಐವತ್ತು ದಿನಗಳನ್ನು ಪೂರೈಸಿದೆ. ಬೈಕಾಟ್, ವಿರೋಧ, ಹೋರಾಟ, ಕಾನೂನು ಸಮರ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸಿಕೊಂಡು ಎಲ್ಲ ವಿರೋಧಗಳ ಮಧ್ಯಯೇ ಭರ್ಜರಿ ಯಶಸ್ಸು ಸಾಧಿಸಿದೆ. ಅಲ್ಲದೇ ಇನ್ನೂ ಅನೇಕ ಚಿತ್ರಮಂದಿರಗಳಲ್ಲಿ ತುಂಬಿದ ಪ್ರದರ್ಶನ ಕಾಣುತ್ತಿದೆ.

    50 ದಿನಗಳನ್ನೂ ಪಠಾಣ್ ಸಿನಿಮಾ ಪೂರೈಸಿದ್ದರೂ, ಇನ್ನೂ 20 ದೇಶಗಳಲ್ಲಿ ಈ ಸಿನಿಮಾ ತನ್ನ ಪ್ರದರ್ಶನವನ್ನು ಮುಂದುವರೆಸಿದೆ. ಭಾರತದಲ್ಲೇ 135 ಚಿತ್ರಮಂದಿರಗಳಲ್ಲಿ 800 ಸ್ಕ್ರೀನ್ ಗಳಲ್ಲಿ ಚಿತ್ರ ಪ್ರದರ್ಶನ ಕಾಣುತ್ತಿದೆ. ಎರಡ್ಮೂರು ವರ್ಷಗಳಲ್ಲಿ ಈ ಪ್ರಮಾಣದಲ್ಲಿ ಗೆದ್ದ ಮೊದಲ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಠಾಣ್ ಪಾತ್ರವಾಗಿದೆ. ಐಸಿಯುವಿನಲ್ಲಿದ್ದ ಬಾಲಿವುಡ್ ಗೆ ಈ ಸಿನಿಮಾದಿಂದ ಮರುಜೀವ ಬಂದಿದೆ. ಇದನ್ನೂ ಓದಿ:  ಕ್ರಿಕೆಟರ್ ಶುಭಮನ್ ಗಿಲ್ ಬಗ್ಗೆ ಕೇಳಿದ್ದಕ್ಕೆ ನಾಚಿ ನೀರಾದ ರಶ್ಮಿಕಾ ಮಂದಣ್ಣ

    ಬಾಕ್ಸ್ ಆಫೀಸಿನ ಅನೇಕ ದಾಖಲೆಗಳನ್ನು ಪಠಾಣ್ ಮುರಿದಿದೆ. ಅತೀ ಕಡಿಮೆ ಸಮಯದಲ್ಲೇ ಸಾವಿರ ಕೋಟಿ ಸಂಪಾದನೆ ಮಾಡಿದ ಬಾಲಿವುಡ್ ಸಿನಿಮಾ ಎನ್ನುವ ಖ್ಯಾತಿಯೂ ಅದು ಪಾತ್ರವಾಗಿದೆ. ಅಲ್ಲದೇ, ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗುವ ಮೂಲಕ ಏಕಕಾಲದಲ್ಲಿ ದೇಶ ವಿದೇಶಗಳಲ್ಲಿ ಚಿತ್ರ ಬಿಡುಗಡೆಯಾಗಿದೆ. ಬಿಡುಗಡೆಯಾದ ಅಷ್ಟೂ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನವನ್ನು ಚಿತ್ರಕಂಡಿದೆ.

    ಸಿನಿಮಾ ಬಿಡುಗಡೆಗೂ ಮುನ್ನ ಭಾರೀ ಟೀಕೆಗೆ ಪಠಾಣ್ ಗುರಿ ಆಯಿತು. ಹಾಡೊಂದರಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದರು ಎನ್ನುವ ಕಾರಣಕ್ಕಾಗಿ ಪ್ರತಿಭಟನೆ ಕೂಡ ನಡೆಯಿತು. ಉತ್ತರ ಪ್ರದೇಶ ಸೇರಿದಂತೆ ಹಲವು ಕಡೆ ಸಿನಿಮಾವನ್ನು ಬ್ಯಾನ್ ಮಾಡುವ ವಿಚಾರ ಮುನ್ನೆಲೆಗೆ ಬಂತು. ಈ ಸಿನಿಮಾದ ಬಗ್ಗೆ ಏನೂ ಮಾತನಾಡಬಾರದು ಎಂದು ಸ್ವತಃ ಪ್ರಧಾನಿ ಮೋದಿ ಅವರೇ ಕರೆಕೊಟ್ಟಿದ್ದರು. ಆದರೂ, ಪ್ರತಿಭಟನೆ ನಿಲ್ಲಲಿಲ್ಲ. ಸಿನಿಮಾ ಗೆಲ್ಲುವುದು ಮಾತ್ರ ಬಿಡಲಿಲ್ಲ.

  • ಸಲ್ಮಾನ್ ಖಾನ್ ಸಿನಿಮಾದಲ್ಲಿ ಶಾರುಖ್ ಖಾನ್ ಗೆಸ್ಟ್ : ಇದು ‘ಪಠಾಣ್’ ಹವಾ

    ಸಲ್ಮಾನ್ ಖಾನ್ ಸಿನಿಮಾದಲ್ಲಿ ಶಾರುಖ್ ಖಾನ್ ಗೆಸ್ಟ್ : ಇದು ‘ಪಠಾಣ್’ ಹವಾ

    ಶಾರುಖ್ ಖಾನ್ (Shah Rukh Khan) ನಟನೆಯ ಪಠಾಣ್ (Pathan) ಸಿನಿಮಾ ಬಾಲಿವುಡ್ ನಲ್ಲಿ ದಾಖಲೆ ಬರೆದಿದೆ. ಸಾವಿರ ಕೋಟಿ ಕ್ಲಬ್ ಸೇರುವ ಮೂಲಕ ಬಿಟೌನ್ ಗೆ ಜೀವ ನೀಡಿದೆ. ಕಳೆದ ಎರಡ್ಮೂರು ವರ್ಷಗಳಿಂದ ಕುಸಿದು ಹೋಗಿದ್ದ ಬಾಲಿವುಡ್ ಶಕ್ತಿಗೆ ನವಚೈತನ್ಯ ಬಂದಿದೆ. ಹಾಗಾಗಿ ಶಾರುಖ್ ಖಾನ್ ಗೆ (Salman Khan) ಮತ್ತಷ್ಟು ಬೇಡಿಕೆ ಹೆಚ್ಚಾಗಿದೆ. ಶಾರುಖ್ ಇದ್ದರೆ ಸಿನಿಮಾ ಗೆಲ್ಲುವುದು ಗ್ಯಾರಂಟಿ ಎನ್ನುವ ಮಾತು ಶುರುವಾಗಿದೆ.

    ಹಾಗಂತ ಪಠಾಣ್ ಸುಮ್ಮನೆ ಗೆದ್ದಿಲ್ಲ, ನಾನಾ ರೀತಿಯಲ್ಲಿ ಹೋರಾಟ ಮಾಡಿಯೇ ಇಷ್ಟು ದೊಡ್ಡ ಯಶಸ್ಸು ಪಡೆದಿದೆ. ಬಾಯ್ಕಾಟ್ ಅಭಿಯಾನದಿಂದ ಶುರುವಾದ ಹೋರಾಟ, ಚಿತ್ರಮಂದಿರದಲ್ಲಿ ಹಾಕಿದ್ದ ಪೋಸ್ಟರ್ ಕಿತ್ತು ಹಾಕುವತನಕ ಮುಂದುವರೆಯಿತು. ಸಿನಿಮಾವನ್ನು ಮಕಾಡೆ ಮಲಗಿಸಿಲ್ಲ ಅನೇಕ ಮಾರ್ಗಗಳನ್ನು ಹುಡುಕಿದರು. ಈ ಎಲ್ಲವನ್ನೂ ದಾಟಿಕೊಂಡು ಸಿನಿಮಾ ಗೆಲುವು ಸಾಧಿಸಿತು. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ ಯುವ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿನಾ? ಸ್ಪಷ್ಟನೆ ನೀಡಿದ ನಟಿ

    ಹಾಗಾಗಿಯೇ ಸಲ್ಮಾನ್ ಖಾನ್ ತಮ್ಮ ಟೈಗರ್ 3 ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಬೇಕು ಎನ್ನುವ ಆಸೆಯನ್ನು ವ್ಯಕ್ತ ಪಡಿಸಿದ್ದಾರೆ. ಅದೊಂದು ಅತಿಥಿ ಪಾತ್ರವಾಗಿದ್ದರೂ, ಬಲು ಪ್ರೀತಿಯಿಂದಲೇ ಪಾತ್ರ ಮಾಡಲು ಒಪ್ಪಿಕೊಂಡಿದ್ದಾರಂತೆ ಶಾರುಖ್. ಪಠಾಣ್ ಸಿನಿಮಾದಲ್ಲಿ ಸಲ್ಮಾನ್ ಖಾನ್ ಕೂಡ ಅತಿಥಿ ಪಾತ್ರ ಮಾಡಿದ್ದರು. ಆ ಋಣವನ್ನು ಈ ಸಿನಿಮಾದಲ್ಲಿ ತೀರಿಸಲಿದ್ದಾರೆ ಶಾರುಖ್.

  • ಬಾಕ್ಸ್ ಆಫೀಸ್ ಚಿಂದಿ: 1000 ಕೋಟಿ ಕ್ಲಬ್ ಸೇರಿದ ‘ಪಠಾಣ್’ ಸಿನಿಮಾ

    ಬಾಕ್ಸ್ ಆಫೀಸ್ ಚಿಂದಿ: 1000 ಕೋಟಿ ಕ್ಲಬ್ ಸೇರಿದ ‘ಪಠಾಣ್’ ಸಿನಿಮಾ

    ಶಾರುಖ್ ಖಾನ್ ನಟನೆಯ ಪಠಾಣ್ (Pathan) ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿದೆ. ಸಿನಿಮಾ ರಿಲೀಸ್ ಆಗಿ 27ನೇ ದಿನಕ್ಕೆ ಸಾವಿರ ಕೋಟಿ (Thousand Crore) ಕ್ಲಬ್ (Club) ಸೇರಿದೆ. ಈ ವರ್ಷದಲ್ಲಿ ರಿಲೀಸ್ ಆದ ಬಾಲಿವುಡ್ ಸಿನಿಮಾಗಳಲ್ಲಿ ಅತೀ ಹೆಚ್ಚು ಹಣ ಮಾಡಿದ ಚಿತ್ರ ಎನ್ನುವ ಹೆಗ್ಗಳಿಕೆಗೂ ಈ ಸಿನಿಮಾ ಪಾತ್ರವಾಗಿದೆ. ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಪಠಾಣ್ ಸಿನಿಮಾದ ಹಾಡೊಂದು ವಿವಾದಕ್ಕೀಡಾದಾಗ ಈ ಸಿನಿಮಾವನ್ನು ಗೆಲ್ಲಿಸಲೇಬಾರದು ಎಂದು ಹಲವರು ಕರೆ ನೀಡಿದರು. ಪ್ರತಿಭಟನೆಗಳು ನಡೆದವು, ಬಾಯ್ಕಾಟ್ ಪಠಾಣ್ ಅಭಿಯಾನ ಶುರುವಾಯಿತು. ಚಿತ್ರಮಂದಿರಗಳ ಮೇಲೆ ದಾಳಿ ನಡೆದವು. ಸಿನಿಮಾದ ಪೋಸ್ಟರ್ ಹರಿದು ಹಾಕಲಾಯಿತು. ಪೋಸ್ಟರ್ ಸುಡಲಾಯಿತು. ಏನೆಲ್ಲ ಸಂಕಷ್ಟಗಳು ಎದುರಾದರೂ, ಪಠಾಣ್ ಮಾತ್ರ ಗೆಲುವು ಸಾಧಿಸಿದೆ.

    ಪಠಾಣ್ ಒಂದೊಳ್ಳೆ ಸಿನಿಮಾ. ಎಲ್ಲರ ಮೆಚ್ಚುಗೆಗೂ ಅದು ಪಾತ್ರವಾಗಲಿದೆ. ದೇಶಭಕ್ತಿ ಸಾರುವಂತಹ ಕಥೆಯನ್ನು ಇದು ಒಳಗೊಂಡಿದೆ ಎಂದು ಶಾರುಖ್ ಹೇಳಿದರೂ, ವಿರೋಧಿಗಳು ಮಾತ್ರ ಕೇಳಲಿಲ್ಲ. ಕೆಲವು ರಾಜ್ಯಗಳಲ್ಲಿ ಸಿನಿಮಾವನ್ನು ನಿಷೇಧ ಮಾಡುವಂತೆ ಒತ್ತಡ ತರಲಾಯಿತು. ಕೊನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಿದರು. ಆದರೂ, ಪ್ರತಿಭಟನೆ ಮಾತ್ರ ನಿಲ್ಲಲಿಲ್ಲ. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್

    ಪಠಾಣ್ ಸಿನಿಮಾಗಾಗಿ ಇಡೀ ಬಾಲಿವುಡ್ ಒಂದಾಯಿತು. ಈ ಸಿನಿಮಾವನ್ನು ಗೆಲ್ಲಿಸುವ ಮೂಲಕ ಬಾಲಿವುಡ್ ಗೆಲ್ಲಿಸೋಣ ಎನ್ನುವ ಮಾತು ಕೇಳಿ ಬಂತು. ಹಾಗಾಗಿ ಶಾರುಖ್ ವಿರೋಧಿಗಳು ಕೂಡ ಈ ಸಿನಿಮಾವನ್ನು ಮೆಚ್ಚಿ ಮಾತನಾಡಿದರು. ಮೊದ ಮೊದಲು ತೆಗಳುತ್ತಿದ್ದವರು, ಆ ಮೇಲೆ ಸಿನಿಮಾ ಬಗ್ಗೆ ಹೊಗಳಿಕೆಯ ಮಾತುಗಳನ್ನು ಆಡಿದರು. ಇದೆಲ್ಲದರ ಪರಿಣಾಮ ಇದೀಗ ಪಠಾಣ್ ಸಾವಿರ ಕೋಟಿ ಬಾಚಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪಠಾಣ್’ ಸಿನಿಮಾ ಏಟಿಗೆ, ಸಖತ್ ತಿರುಗೇಟು ನೀಡಿದ ‘ಶೆಹ್ಜಾದ’ ಟೀಮ್

    ‘ಪಠಾಣ್’ ಸಿನಿಮಾ ಏಟಿಗೆ, ಸಖತ್ ತಿರುಗೇಟು ನೀಡಿದ ‘ಶೆಹ್ಜಾದ’ ಟೀಮ್

    ಹೊಸ ಸಿನಿಮಾವೊಂದನ್ನು ತುಳಿಯಲು ಪಠಾಣ್ (Pathan) ಟೀಮ್ ಮಸಲತ್ತು ಮಾಡಿತಾ? ಇಂಥದ್ದೊಂದು ಆರೋಪ ಪಠಾಣ್ ತಂಡದ ಮೇಲೆ ಮಾಡಲಾಗಿತ್ತು. ಶಾರುಖ್ ಖಾನ್ (Shah Rukh Khan) ಮತ್ತು ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ನ ಪಠಾಣ್ ಸಿನಿಮಾ ಈಗಾಗಲೇ ಬಾಕ್ಸ್ ಆಫೀಸಿನಲ್ಲಿ 1000 ಕೋಟಿ ಕ್ಲಬ್ ತಲುಪಿದೆ. ಇನ್ನೂ ಹಲವು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕೂಡ ಕಾಣುತ್ತಿದೆ. ಆದರೂ, ಹಣದಾಹ ನಿಂತಿಲ್ಲ ಎನ್ನುವ ಆರೋಪ ಮಾಡಿದ ಶೆಹ್ಜಾದ ಟೀಮ್.

    ಈ ವಾರ ಕಾರ್ತಿಕ್ ಆರ್ಯನ್ ಮತ್ತು ಕೃತಿ ಸೆನನ್ ಕಾಂಬಿನೇಷನ್ ನ ‘ಶೆಹ್ಜಾದ’ (Shehzad) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾವನ್ನು ಹಣೆಯುವುದಕ್ಕಾಗಿಯೇ ಪಠಾಣ್ ಸಿನಿಮಾ ಏಕಾಏಕಿ ತನ್ನ ಟಿಕೆಟ್ ದರವನ್ನು ಕಡಿಮೆ ಮಾಡಿದೆ. ಇಂದು ಪಠಾಣ್ ಸಿನಿಮಾವನ್ನು ಕೇವಲ ರೂ.110ಕ್ಕೆ ನೋಡಬಹುದು ಎಂದು ಪೊಸ್ಟರ್ ರಿಲೀಸ್ ಮಾಡಿದೆ. ಸಡನ್ನಾಗಿ ಟಿಕೆಟ್ ಬೆಲೆ ಕಡಿಮೆ ಮಾಡುವುದಕ್ಕೆ ಕಾರಣ, ಹೊಸ ಸಿನಿಮಾ ಬಿಡುಗಡೆ. ಇದನ್ನೂ ಓದಿ: ಮಲಯಾಳಂ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾದ ರಾಜ್ ಬಿ ಶೆಟ್ಟಿ

    ಪಠಾಣ್ ಇಂಥದ್ದೊಂದು ನಡೆಯನ್ನು ಘೋಷಿಸುತ್ತಿದ್ದಂತೆಯೇ ಶೆಹ್ಜಾದ್ ಟೀಮ್ ಕೂಡ ಸುಮ್ಮನೆ ಕೂತಿಲ್ಲ. ಅದು ಕೂಡ ಭರ್ಜರಿಯಾಗಿಯೇ ತಿರುಗೇಟು ನೀಡಿದೆ. ಒಂದು ಟಿಕೆಟ್ ಕೊಂಡರೆ ಮತ್ತೊಂದು ಟಿಕೆಟ್ ಉಚಿತ ಎಂದು ಘೋಷಣೆ ಮಾಡಿದೆ. ಈ ಮೂಲಕ ಪಠಾಣ್‍ ಗೆ ಅದು ಮುಟ್ಟಿ ನೋಡಿಕೊಳ್ಳುವಂತಹ ಏಟನ್ನೇ ನೀಡಿದೆ.

    ಈ ಟಿಕೆಟ್ ಸಮರವನ್ನು ಬಾಲಿವುಡ್ ತುಂಬಾ ಸೂಕ್ಷ್ಮವಾಗಿ ಗಮನಿಸಿದ್ದು, ಈ ರೀತಿಯ ಪೈಪೋಟಿ ಯಾರಿಗೂ ಸರಿಯಾದದ್ದು ಅಲ್ಲ ಎಂದಿದೆ. ಸಿನಿ ಪಂಡಿತರು ಇದರಿಂದ ಮುಂದೆ ಆಗುವ ಅನಾಹುತದ ಲೆಕ್ಕಾಚಾರವನ್ನೂ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಅದರಲ್ಲೂ ನೆಟ್ಟಿಗರು ಪಠಾಣ್ ನಡೆಯನ್ನು ಖಂಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಾಯ್ಕಾಟ್ ಗ್ಯಾಂಗಿಗೆ ಅಕ್ಷಯ್ ಕುಮಾರ್ ತಿರುಗೇಟು: ಶಾರುಖ್ ಪರ ನಿಂತ ನಟ

    ಬಾಯ್ಕಾಟ್ ಗ್ಯಾಂಗಿಗೆ ಅಕ್ಷಯ್ ಕುಮಾರ್ ತಿರುಗೇಟು: ಶಾರುಖ್ ಪರ ನಿಂತ ನಟ

    ಬಾಲಿವುಡ್ ನಲ್ಲಿ ಬಾಯ್ಕಾಟ್ ಕಾವು ಜೋರಾಗಿದೆ. ಇದಕ್ಕೆ ಬಾಲಿವುಡ್ ನಿರ್ಮಾಪಕರು ಬೇಸತ್ತು ಹೋಗಿದ್ದಾರೆ. ಬಾಯ್ಕಾಟ್ ಗಾಳಿ ಎಷ್ಟೇ ಜೋರಾದರೂ, ಪಠಾಣ್ ಸಿನಿಮಾವನ್ನು ಏನೂ ಮಾಡುವುದಕ್ಕೆ ಆಗಲಿಲ್ಲ. ಹಾಗಾಗಿ ಅಕ್ಷಯ್ ಕುಮಾರ್ ತಮ್ಮ ಮುಂದಿನ ಸಿನಿಮಾ ಸೆಲ್ಫಿಯಲ್ಲಿ ಬಾಯ್ಕಾಟ್ ಮಾಡುವವರನ್ನೇ ಟ್ರೋಲ್ ಮಾಡಿದ್ದಾರೆ. ಈ ಮೂಲಕ ಅಕ್ಷಯ್ ಹೊಸದೊಂದು ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಸಡನ್ನಾಗಿ ಶಾರುಖ್ ಪರ ಅಕ್ಷಯ್ ನಿಂತಿದ್ದು ಅಚ್ಚರಿಯನ್ನೂ ಮೂಡಿಸಿದೆ.

    ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದ ಗೆಲುವನ್ನು ಅನೇಕರು, ಅನೇಕ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಬಾಲಿವುಡ್ ಸಿನಿಮಾ ರಂಗಕ್ಕೆ ಚೈತನ್ಯ ತುಂಬಿದ ಸಿನಿಮಾವಿದು ಎಂದು ಕೆಲವರು ಪ್ರಶಂಸೆ ಮಾಡುತ್ತಿದ್ದರೆ, ಶಾರುಖ್ ವಿರೋಧಿಗಳು ಈ ಗೆಲುವನ್ನು ಅರ್ಥೈಸುತ್ತಿರುವ ಪರಿಯೇ ವಿಚಿತ್ರವಿದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರಖ್ಯಾತಿಯ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ, ಬಾಯ್ಕಾಟ್ ಪರಿಯನ್ನೇ ಅವರು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಸಮಂತಾಗೆ ಹೋಲಿಸಿದ ನೆಟ್ಟಿಗರಿಗೆ `ಗಾಳಿಪಟ 2′ ನಾಯಕಿ ಏನಂದ್ರು ಗೊತ್ತಾ?

    ಪಠಾಣ್ ಸಿನಿಮಾ ಅತೀ ಹೆಚ್ಚು ಜನರಿಗೆ ತಲುಪುವಂತೆ ಮಾಡಿದ್ದು, ಸಿನಿಮಾದ ಕಂಟೆಂಟ್ ಗಿಂತಲೂ ವಿರೋಧಿಗಳು ನಡೆಸಿದ ಬಾಯ್ಕಾಟ್ ಎನ್ನುವ ಮಾತಿದೆ. ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಹಲವು ಪ್ರತಿಭಟನೆಗಳು ಕೂಡ ನಡೆದವು. ಈ ಬಾಯ್ಕಾಟ್ ಸಿನಿಮಾಗೆ ವರವಾಯಿತು ಎಂದು ಹೇಳಲಾಗುತ್ತಿದೆ. ಇದೀಗ ಆ ಬಾಯ್ಕಾಟ್ ಬಗ್ಗೆಯೇ ಅಗ್ನಿಹೋತ್ರಿ ಅನುಮಾನ ವ್ಯಕ್ತಪಡಿಸಿದ್ದಾರೆ.

    ‘ನಿಜವಾಗಿಯೂ ಬಾಯ್ಕಾಟ್ ಮಾಡಿದ್ದು ಯಾರು? ಶಾರುಖ್ ಖಾನ್ ಅವರ ಗ್ಯಾಂಗೇ ಈ ರೀತಿಯಲ್ಲಿ ಪ್ರಚಾರ ಮಾಡಿತಾ ಎನ್ನುವ ಅನುಮಾನ ನನ್ನದು. ಬಾಯ್ಕಾಟ್ ಎನ್ನುವುದು ಸಿನಿಮಾ ಪ್ರಚಾರದ ಒಂದು ಭಾಗ ಆಗಿತ್ತಾ? ‘ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಪಠಾಣ್ ಗೆಲುವನ್ನು ತಾವು ಗೆಲುವು ಎಂದು ಕರೆಯುವುದಿಲ್ಲ ಎಂದೂ ಅವರು ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪಠಾಣ್’ ಚಿತ್ರಕ್ಕೆ ಮತ್ತೊಂದು ಜಯ :  ಹಾಡು ನಿರ್ಬಂಧಕ್ಕೆ ಸಲ್ಲಿಸಿದ್ದ ಅರ್ಜಿ ವಜಾ

    ‘ಪಠಾಣ್’ ಚಿತ್ರಕ್ಕೆ ಮತ್ತೊಂದು ಜಯ : ಹಾಡು ನಿರ್ಬಂಧಕ್ಕೆ ಸಲ್ಲಿಸಿದ್ದ ಅರ್ಜಿ ವಜಾ

    ಸೆನ್ಸಾರ್ ಪ್ರಮಾಣ ಪತ್ರ ಇಲ್ಲದೇ ಪಠಾಣ್ (Pathan) ಚಿತ್ರದ ಬೇಷರಮ್ (Besharam) ಹಾಡು (Song) ಮತ್ತು ಟೀಸರ್ ಅನ್ನು ಯೂಟ್ಯೂಬ್‌‌ನಲ್ಲಿ ಬಿಡುಗಡೆ ಮಾಡಿದ್ದು ಅವುಗಳ ಪ್ರಸಾರ ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮಹಾರಾಷ್ಟ್ರ ಸಿಟಿ ಸಿವಿಲ್ ಕೋರ್ಟ್ (Court) ವಜಾ ಮಾಡಿದೆ. ಸುರೇಶ್ ಪಾಟೀಲ್ ಎಂಬುವವರು ಸಲ್ಲಿಸಿದ್ದ ಅರ್ಜಿ (Application) ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶ ಜೆ.ಡಿ.ಪಟೇಲ್, ತಾತ್ಕಾಲಿಕ ಪರಿಹಾರವನ್ನು ನೀಡದಿದ್ದರೆ ಫಿರ್ಯಾದಿದಾರರಿಗೆ ಯಾವುದೇ ನಷ್ಟ ಉಂಟಾಗುವುದಿಲ್ಲ, ಪ್ರಾಥಮಿಕ ಪ್ರಕರಣ ದಾಖಲಾಗದ ಹಿನ್ನಲೆ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಪಠಾಣ್ ಚಿತ್ರದ ಹಾಡುಗಳನ್ನು U/A ಸರ್ಟಿಫಿಕೇಟ್ ಇಲ್ಲದೇ ಯೂಟ್ಯೂಬ್ ನಲ್ಲಿ ಪ್ರಸಾರ ಮಾಡಲಾಗುತ್ತಿದೆ ಇದರಿಂದ ಮಕ್ಕಳ ಮೇಲೆ ಪರಿಣಾಮ ಬೀರಲಿದೆ. ಸಿನಿಮಾಟೋಗ್ರಫಿ ಕಾಯ್ದೆಯ 38ನೇ ನಿಯಮದ ಪ್ರಕಾರ ಅಂತಹ ಪ್ರಮಾಣಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ ಎಂದು ಅರ್ಜಿದಾರರ ಪರ ವಾದಿಸಲಾಯಿತು. ಇದನ್ನೂ ಓದಿ:`ಬಿಗ್ ಬಾಸ್’ ಖ್ಯಾತಿಯ ಅಕ್ಷತಾ ಕುಕ್ಕಿ ಮದುವೆ ಡೇಟ್ ಫಿಕ್ಸ್

    ಇದಕ್ಕೆ ಚಿತ್ರ ತಂಡದ ಪರ ವಾದ ಮಂಡಿಸಿದ ವಕೀಲರು, ಚಿತ್ರದ ನಿರ್ಮಾಣ ಸಂಸ್ಥೆಯು, ಯೂಟ್ಯೂಬ್ ಅಥವಾ ಯಾವುದೇ ಒಟಿಟಿ ಪ್ಲಾಟ್‌ಫಾರ್ಮ್‌ಗಳಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ಚಲನಚಿತ್ರದ ಜಾಹೀರಾತನ್ನು ಪ್ರಕಟಿಸುವಾಗ ಅಂತಹ ಪ್ರಮಾಣಪತ್ರವನ್ನು ತೋರಿಸುವ ಅಗತ್ಯವಿಲ್ಲ, ಸಿನಿಮಾಟೋಗ್ರಫಿ ಆಕ್ಟ್, 1953 ರ ಅಡಿಯಲ್ಲಿ ಪ್ರಮಾಣೀಕರಣದ ಅವಶ್ಯಕತೆಯು ಚಲನಚಿತ್ರದ ಥಿಯೇಟ್ರಿಕಲ್ ವಿವರಣೆಗೆ ಸೀಮಿತವಾಗಿದೆ ಎಂದು ವಾದಿಸಲಾಯಿತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k