Tag: Pathan

  • ಪಠಾಣ್ ಹಿಂದಿಕ್ಕಿ ಟ್ರೆಂಡಿಂಗ್ ನಲ್ಲಿ ನಂ.1 ಸ್ಥಾನ ಪಡೆದ ಕನ್ನಡದ ‘ಕಬ್ಜ’

    ಪಠಾಣ್ ಹಿಂದಿಕ್ಕಿ ಟ್ರೆಂಡಿಂಗ್ ನಲ್ಲಿ ನಂ.1 ಸ್ಥಾನ ಪಡೆದ ಕನ್ನಡದ ‘ಕಬ್ಜ’

    ಬಾಲಿವುಡ್ ನ ಅತೀ ನಿರೀಕ್ಷಿತ ಚಿತ್ರ ‘ಪಠಾಣ್’ (Pathan) ಹವಾ ಕಳೆದ ಎರಡು ವಾರಗಳಿಂದಲೂ ಜೋರಾಗಿದೆ. ಬಾಯ್ಕಾಟ್ ಸೇರಿದಂತೆ ನಾನಾ ರೀತಿಯ ಅಡೆತಡೆಗಳನ್ನು ದಾಟಿಕೊಂಡು ಕೊನೆಗೂ ರಿಲೀಸ್ ಆಗಿದೆ. ನಿನ್ನೆ ಪಠಾಣ್ ಸಿನಿಮಾದ ರಿಲೀಸ್ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ನಲ್ಲಿತ್ತು. ಉಪೇಂದ್ರ (Upendra) ಮತ್ತು ಸುದೀಪ್ (Sudeep) ಕಾಂಬಿನೇಷನ್ ನ ‘ಕಬ್ಜ’ (Kabzaa) ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗುತ್ತಿದ್ದಂತೆಯೇ ನಂ.1 ಸ್ಥಾನವನ್ನು ಕಬ್ಜ ಸಿನಿಮಾ ಪಡೆದುಕೊಂಡಿತು. ಅಲ್ಲದೇ ಈವರೆಗೂ ಕಬ್ಜ ಟ್ರೆಂಡಿಂಗ್ ನಲ್ಲಿಯೇ ಇದೆ.

    ಕರ್ನಾಟಕ ಮಾತ್ರವಲ್ಲದೆ, ಇಡೀ ಭಾರತಾದ್ಯಂತ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಕನ್ನಡಿಗರ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’, 2023 ರ ಮಾರ್ಚ್ 17 ಅಂದರೆ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ನಾಡಿನ ದೊಡ್ಡ ಹಬ್ಬವಾದ ಯುಗಾದಿ ಕೂಡ ಸಮೀಪದಲ್ಲಿರುವುದು ವಿಶೇಷ. ಇದನ್ನೂ ಓದಿ: ರಾಜಮೌಳಿ ಹತ್ಯೆಗೆ ಸ್ಕೆಚ್ ಹಾಕಿದ ಡೈರೆಕ್ಟರ್ಸ್ : ಬಾಯ್ಬಿಟ್ಟ ವರ್ಮಾ

    ಇಂಡಿಯನ್ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಮುಖ ಪಾತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿರುವ ಹಾಗೂ ಆರ್ ಚಂದ್ರು (R. Chandru) ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ನೀಡುತ್ತಿದ್ದ ಪ್ರೋತ್ಸಾಹ ಅಪಾರ. ಚಿತ್ರದ ಕೆಲವು ತುಣುಕುಗಳನ್ನು ಅವರಿಗೆ ತೋರಿಸಿದ್ದಾಗ ಹಾಲಿವುಡ್ ಚಿತ್ರ ಇದ್ದ ಹಾಗೆ ಇದೆ ಎಂದು ಹೇಳಿ ಮೆಚ್ಚುಗೆ ಸೂಚಿಸಿದ್ದರು. ಸಹೃದಯಿ, ಅಭಿಮಾನಿಗಳ ಪಾಲಿಗಂತೂ ದೇವರೆ ಆಗಿರುವ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ನಮ್ಮ “ಕಬ್ಬ” ಚಿತ್ರವನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದೇವೆ. ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಹಾಗೂ ಹೊಸವರ್ಷದ ಮೊದಲ ದಿನವಾದ ಯುಗಾದಿ ಹಬ್ಬದ ಸಮೀಪದಲ್ಲೇ ನಮ್ಮ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂದು ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆ ತಿಳಿಸಿದೆ‌.

    ಕಳೆದವರ್ಷ ಕನ್ನಡದ ಸಾಕಷ್ಟು ಚಿತ್ರಗಳು ಭರ್ಜರಿ ಯಶಸ್ವಿಯಾಗಿ ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ನೋಡುವಂತಾಗಿತ್ತು. ಈಗ ಎಲ್ಲೆಡೆ ಅಷ್ಟೇ ಕುತೂಹಲದಿಂದ ಕಾಯತ್ತಿರುವ ಹಾಗೂ ಐಎಂಡಿಬಿ 2023ರ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡಿದಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಚಿತ್ರ “ಕಬ್ಜ”ದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.  ಆಭಿಮಾನಿಗಳ ಕಾತುರಕ್ಕೆ ಚಿತ್ರತಂಡದಿಂದ ಉತ್ತರ ಸಿಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪಠಾಣ್’ ಚಿತ್ರ ತಂಡಕ್ಕೆ ಶಾಕ್ : ಆನ್ ಲೈನ್ ನಲ್ಲಿ ಸಿನಿಮಾ ಲೀಕ್

    ‘ಪಠಾಣ್’ ಚಿತ್ರ ತಂಡಕ್ಕೆ ಶಾಕ್ : ಆನ್ ಲೈನ್ ನಲ್ಲಿ ಸಿನಿಮಾ ಲೀಕ್

    ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ (Pathan) ಸಿನಿಮಾ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. ಬಾಯ್ಕಾಟ್ (Boycott) ನಡುವೆಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ, ಪೈರಸಿ (Piracy) ಚಿತ್ರತಂಡಕ್ಕೆ ಶಾಕ್ ನೀಡಿದೆ. ಸಿನಿಮಾ ರಿಲೀಸ್ ಗೂ ಮೊದಲೇ ಹಲವು ವೆಬ್ ಸೈಟ್ ಗಳಲ್ಲಿ ಸಿನಿಮಾವನ್ನು ಲೀಕ್ ಮಾಡಲಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಹಿಂದೆಯೂ ಕೂಡ ಪಠಾಣ್ ಸಿನಿಮಾದ ಟ್ರೈಲರ್ ಕೂಡ ಒಂದು ದಿನ ಮುಂಚೆಯೇ ಲೀಕ್ ಆಗಿತ್ತು.

    ಹಿಂದೂ ಧರ್ಮಕ್ಕೆ ಸಿನಿಮಾ ತಂಡ ಅವಮಾನ ಮಾಡಿದೆ ಎನ್ನುವ ಕಾರಣಕ್ಕಾಗಿ ಕೆಲವರು ಚಿತ್ರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಸಂಚು ಮಾಡಿ ಸಿನಿಮಾವನ್ನು ಸೋಲಿಸುವ ಪ್ರಯತ್ನ ಮಾಡಲಾಗುತ್ತಿದೆ. ಆದರೆ, ಹಣದಾಹಿ ಕೆಲ ವೆಬ್ ಸೈಟ್ ಗಳು ಸಿನಿಮಾ ರಿಲೀಸ್ ದಿನವೇ ಇಡೀ ಚಿತ್ರವನ್ನು ಲೀಕ್ ಮಾಡಿವೆ. ಹಾಗಾಗಿ ಚಿತ್ರತಂಡಕ್ಕೆ ಆತಂಕ ಎದುರಾಗಿದೆ. ಇದನ್ನೂ ಓದಿ: Oscars 2023: `ಆರ್‌ಆರ್‌ಆರ್’ ಸಿನಿಮಾದ `ನಾಟು ನಾಟು’ ಸಾಂಗ್ ನಾಮಿನೇಟ್

    ಸಿನಿಮಾ ರಿಲೀಸ್ ಆದ ಬಹುತೇಕ ಕಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ ಎಂದು ಸ್ವತಃ ಶಾರುಖ್ ಖಾನ್ ಅವರೇ ತಿಳಿಸಿದ್ದಾರೆ. ಉತ್ತಮ ಪ್ರತಿಕ್ರಿಯೆ ನೀಡಿದಕ್ಕೆ ಅವರು ಧನ್ಯವಾದಗಳನ್ನೂ ಅರ್ಪಿಸಿದ್ದಾರೆ. ಆದರೆ, ಹಲವು ಅಡೆತಡೆಗಳನ್ನು ಅವರು ಎದುರಿಸುವುದು ಅನಿವಾರ್ಯವಾಗಿದೆ. ಕೆಲ ರಾಜ್ಯಗಳಲ್ಲಂತೂ ವಿಪರೀತ ತೊಂದರೆ ಮಾಡಲಾಗುತ್ತಿದೆ. ಥಿಯೇಟರ್ ಗೆ ನುಗ್ಗಿ ಪ್ರದರ್ಶನವನ್ನು ನಿಲ್ಲಿಸಲಾಗುತ್ತಿದೆ.

    ಈ ಪ್ರತಿಭಟನೆ ಕರ್ನಾಟಕದಲ್ಲೂ ನಡೆದಿದೆ. ಬೆಳಗಾವಿ ಸೇರಿದಂತೆ ಹಲವು ಕಡೆ ಚಿತ್ರಪ್ರದರ್ಶನ ನಿಲ್ಲಿಸುವಂತೆ ಥಿಯೇಟರ್ ಗೆ ಮುತ್ತಿಗೆ ಹಾಕುವಂತಹ ಕೆಲಸಗಳು ನಡೆದಿವೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಸಿನಿಮಾಗಳಿಗೆ ತೊಂದರೆ ಮಾಡಬಾರದು ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದರೂ, ಜನರು ಮಾತ್ರ ಪ್ರತಿಭಟನೆಯನ್ನು ಕೈ ಬಿಟ್ಟಿಲ್ಲ. ಹಲವು ಕಡೆ ಮತ್ತೆ ಬಾಯ್ಕಾಟ್ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚಿತ್ರಮಂದಿರ ಮೇಲೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ದಾಳಿ – ಪಠಾಣ್ ಚಿತ್ರದ ಬ್ಯಾನರ್ ಹರಿದು ಆಕ್ರೋಶ

    ಚಿತ್ರಮಂದಿರ ಮೇಲೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ದಾಳಿ – ಪಠಾಣ್ ಚಿತ್ರದ ಬ್ಯಾನರ್ ಹರಿದು ಆಕ್ರೋಶ

    ಬೆಳಗಾವಿ: ನಗರದ ಚಿತ್ರಮಂದಿರದಲ್ಲಿ ಶಾರುಖ್ ಖಾನ್ (Shahrukh Khan) ಅಭಿನಯದ ಪಠಾಣ್ (Pathan) ಚಿತ್ರ ಪ್ರದರ್ಶನ ಮಾಡದಂತೆ ಒತ್ತಾಯಿಸಿ ಹಿಂದೂಪರ ಸಂಘಟನೆಗಳು (Pro Hindu Organizations) ಪಠಾಣ್ ಚಿತ್ರದ ಬ್ಯಾನರ್ ಹರಿದು ಆಕ್ರೋಶ ಹೊರಹಾಕಿದರು.

    ಬೆಳಗಾವಿಯ (Belagavi) ಸ್ವರೂಪ ಚಿತ್ರಮಂದಿರ ಮೇಲೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ದಾಳಿ ಮಾಡಿದ್ದು, ಸ್ವರೂಪ ಚಿತ್ರಮಂದಿರ ಬಳಿ ಹಾಕಿದ್ದ ಶಾರುಖ್ ಖಾನ್ ನಟನೆಯ ಪಠಾಣ್ ಚಿತ್ರದ ಬ್ಯಾನರ್ ಹರಿದು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು (Police) ಹಿಂದೂಪರ ಸಂಘಟನೆ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಇದನ್ನೂ ಓದಿ: Oscars 2023: `ಆರ್‌ಆರ್‌ಆರ್’ ಸಿನಿಮಾದ `ನಾಟು ನಾಟು’ ಸಾಂಗ್ ನಾಮಿನೇಟ್

    ಬೆಳಗಾವಿಯ ಸ್ವರೂಪ ಚಿತ್ರಮಂದಿರ ಬಳಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿತ್ರಮಂದಿರದ ಎದುರು ಬಿಗಿ ಭದ್ರತೆ ಒದಗಿಸಲಾಗಿದೆ. ಓರ್ವ ಸಿಪಿಐ ನೇತೃತ್ವದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದ್ದು, ಚಿತ್ರಮಂದಿರ ಬಳಿ ಒಂದು ಕೆಎಸ್‍ಆರ್‌ಪಿ ತುಕಡಿ ಇರಿಸಲಾಗಿದೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ರಾತ್ರಿ 2 ಗಂಟೆಗೆ ಅಸ್ಸಾಂ ಸಿಎಂಗೆ ಶಾರುಖ್‌ ಖಾನ್‌ ಫೋನ್‌ ಕಾಲ್‌

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಧಾನಿ ಮೋದಿಗೆ ನಿರ್ದೇಶಕ ಅನುರಾಗ್ ಕಶ್ಯಪ್ ಟಾಂಗ್ : ವಿವೇಕ್ ಅಗ್ನಿಹೋತ್ರಿ ತಿರುಗೇಟು

    ಪ್ರಧಾನಿ ಮೋದಿಗೆ ನಿರ್ದೇಶಕ ಅನುರಾಗ್ ಕಶ್ಯಪ್ ಟಾಂಗ್ : ವಿವೇಕ್ ಅಗ್ನಿಹೋತ್ರಿ ತಿರುಗೇಟು

    ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್, ಪ್ರಧಾನಿ ನರೇಂದ್ರ ಮೋದಿ ಆಡಿದ್ದ ಮಾತುಗಳಿಗೆ ತಮ್ಮದೇ ಆದ ರೀತಿಯಲ್ಲಿ ಟಾಂಗ್ ನೀಡಿದ್ದರು. ಸಿನಿಮಾದವರನ್ನು ಟೀಕಿಸಬೇಡಿ ಎಂದು ಮೋದಿ ತಮ್ಮ ಕಾರ್ಯಕರ್ತರಿಗೆ ತಿಳಿಸಿದ್ದರು. ಈ ಮಾತುಗಳನ್ನು ಪ್ರಧಾನಿ ಅವರು ನಾಲ್ಕು ವರ್ಷಗಳ ಹಿಂದೆಯೇ ಹೇಳಬೇಕಿತ್ತು ಎಂದು ಟಾಂಗ್ ಕೊಟ್ಟಿದ್ದರು. ಅನುರಾಗ್ ಮಾತಿಗೆ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಿರುಗೇಟು ನೀಡಿದ್ದಾರೆ. ‘ಆಡಿಯನ್ಸ್ ಈಗ ಮಾಬ್ ಕ್ರಿಯೇಟ್ ಆಗಿದೆ’ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

    ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ ಎನ್ನಲಾದ ಮಾತಿಗೆ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ತಿರುಗೇಟು ನೀಡಿದ್ದಾರೆ. ಚುನಾವಣೆ ವೇಳೆಗಾದರೂ ಅವರು ಮಾತನಾಡಿದ್ದಾರಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಿಗಳು ಪದೇ ಪದೇ ಈ ಮಾತುಗಳನ್ನು ಹೇಳುವ ಮೂಲಕ ಕಾರ್ಯಕರ್ತರನ್ನು ಸದಾ ಜಾಗೃತರಾಗಿ ಇಡಬೇಕು ಎಂದೂ ಅವರು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಬಾಲಯ್ಯ ಮುಂದೆ ಅಬ್ಬರಿಸಲು ದುನಿಯಾ ವಿಜಯ್ ಪಡೆದ ಸಂಭಾವನೆ ಎಷ್ಟು ಗೊತ್ತಾ?

    ಇತ್ತೀಚಿನ ದಿನಗಳಲ್ಲಿ ಸಿನಿಮಾಗಳ ಬಗ್ಗೆ ರಾಜಕೀಯ ಮುಖಂಡರು ಮತ್ತು ಕಾರ್ಯಕರ್ತರು ವಿಪರೀತ ಎನ್ನುವಂತೆ ಟೀಕೆ ಮಾಡುತ್ತಿದ್ದಾರೆ. ಅದರಲ್ಲೂ ಪಠಾಣ್, ಬ್ರಹ್ಮಾಸ್ತ್ರ ಸಿನಿಮಾಗಳಿಗೆ ಬಾಯ್ಕಾಟ್ ಅಭಿಯಾನ ಮಾಡುವ ಮೂಲಕ ಸಾಕಷ್ಟು ತೊಂದರೆ ಕೊಟ್ಟಿದ್ದಾರೆ. ಹಲವು ದಿನಗಳಿಂದ ಈ ರೀತಿಯ ಪ್ರತಿಭಟನೆಗಳು ಸಿನಿಮಾ ರಂಗದಲ್ಲಿ ಕಾಮನ್ ಎನ್ನುವಂತಾಗಿದೆ. ಹಾಗಾಗಿ ನರೇಂದ್ರ ಮೋದಿ ಅವರು, ಯಾವುದೇ ಸಿನಿಮಾದ ಸಹವಾಸಕ್ಕೆ ಹೋಗದೇ, ಅದರ ಬಗ್ಗೆ ಮಾತನಾಡದೇ ದೂರ ಉಳಿದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

    ಈ ಸಲಹೆಗೆ ತಮ್ಮದೇ ಆದ ರೀತಿಯಲ್ಲಿ ಪ್ರತಿಕ್ರಿಯೆ ನೀಡಿರುವ ಅನುರಾಗ್ ಕಶ್ಯಪ್, ‘ಮೋದಿ ಅವರು ಈ ಮಾತುಗಳನ್ನು ನಾಲ್ಕು ವರ್ಷಗಳ ಹಿಂದೆಯೇ ಹೇಳಬೇಕಿತ್ತು. ಈಗ ಎಲ್ಲವೂ ಕೈ ಮೀರಿ ಹೋಗಿದೆ. ಅವರ ಮಾತುಗಳನ್ನು ಯಾರೂ ಕೇಳುವುದಿಲ್ಲ ಎನ್ನುವಂತಹ ವಾತಾವರಣ ಉಂಟಾಗಿದೆ. ಅವರ ಹೇಳಿಕೆ ಯಾವುದೇ ಪರಿಣಾಮವನ್ನು ಉಂಟು ಮಾಡದು’ ಎಂದು ಅನುರಾಗ್ ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿನಿಮಾ ವಿವಾದದ ಬಗ್ಗೆ ಪ್ರಧಾನಿ ಮೋದಿ ಮಾತು : ನಿರ್ದೇಶಕ ಅನುರಾಗ್ ಕಶ್ಯಪ್ ಭಿನ್ನರಾಗ

    ಸಿನಿಮಾ ವಿವಾದದ ಬಗ್ಗೆ ಪ್ರಧಾನಿ ಮೋದಿ ಮಾತು : ನಿರ್ದೇಶಕ ಅನುರಾಗ್ ಕಶ್ಯಪ್ ಭಿನ್ನರಾಗ

    ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ ಎನ್ನಲಾದ ಮಾತಿಗೆ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ (Anurag Kashyap) ತಿರುಗೇಟು ನೀಡಿದ್ದಾರೆ. ಚುನಾವಣೆ ವೇಳೆಗಾದರೂ ಅವರು ಮಾತನಾಡಿದ್ದಾರಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಿಗಳು ಪದೇ ಪದೇ ಈ ಮಾತುಗಳನ್ನು ಹೇಳುವ ಮೂಲಕ ಕಾರ್ಯಕರ್ತರನ್ನು ಸದಾ ಜಾಗೃತರಾಗಿ ಇಡಬೇಕು ಎಂದೂ ಅವರು ಹೇಳಿಕೆ ನೀಡಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಸಿನಿಮಾಗಳ ಬಗ್ಗೆ ರಾಜಕೀಯ ಮುಖಂಡರು ಮತ್ತು ಕಾರ್ಯಕರ್ತರು ವಿಪರೀತ ಎನ್ನುವಂತೆ ಟೀಕೆ ಮಾಡುತ್ತಿದ್ದಾರೆ. ಅದರಲ್ಲೂ ಪಠಾಣ್, ಬ್ರಹ್ಮಾಸ್ತ್ರ ಸಿನಿಮಾಗಳಿಗೆ ಬಾಯ್ಕಾಟ್ (Boycott) ಅಭಿಯಾನ ಮಾಡುವ ಮೂಲಕ ಸಾಕಷ್ಟು ತೊಂದರೆ ಕೊಟ್ಟಿದ್ದಾರೆ. ಹಲವು ದಿನಗಳಿಂದ ಈ ರೀತಿಯ ಪ್ರತಿಭಟನೆಗಳು ಸಿನಿಮಾ ರಂಗದಲ್ಲಿ ಕಾಮನ್ ಎನ್ನುವಂತಾಗಿದೆ. ಹಾಗಾಗಿ ನರೇಂದ್ರ ಮೋದಿ ಅವರು, ಯಾವುದೇ ಸಿನಿಮಾದ ಸಹವಾಸಕ್ಕೆ ಹೋಗದೇ, ಅದರ ಬಗ್ಗೆ ಮಾತನಾಡದೇ ದೂರ ಉಳಿದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: `ಶೈಲೂ’ ನಟಿ ಭಾಮಾ ದಾಂಪತ್ಯ ಬದುಕಿನಲ್ಲಿ ಬಿರುಕು?

    ಈ ಸಲಹೆಗೆ ತಮ್ಮದೇ ಆದ ರೀತಿಯಲ್ಲಿ ಪ್ರತಿಕ್ರಿಯೆ ನೀಡಿರುವ ಅನುರಾಗ್ ಕಶ್ಯಪ್, ‘ಮೋದಿ ಅವರು ಈ ಮಾತುಗಳನ್ನು ನಾಲ್ಕು ವರ್ಷಗಳ ಹಿಂದೆಯೇ ಹೇಳಬೇಕಿತ್ತು. ಈಗ ಎಲ್ಲವೂ ಕೈ ಮೀರಿ ಹೋಗಿದೆ. ಅವರ ಮಾತುಗಳನ್ನು ಯಾರೂ ಕೇಳುವುದಿಲ್ಲ ಎನ್ನುವಂತಹ ವಾತಾವರಣ ಉಂಟಾಗಿದೆ. ಅವರ ಹೇಳಿಕೆ ಯಾವುದೇ ಪರಿಣಾಮವನ್ನು ಉಂಟು ಮಾಡದು’ ಎಂದು ಅನುರಾಗ್ ಮಾತನಾಡಿದ್ದಾರೆ.

    ಪಠಾಣ್ ಸಿನಿಮಾಗೆ ಸಂಬಂಧಿಸಿದಂತೆ ಕನ್ನಡದ ನಟ, ಹೋರಾಟಗಾರ ಚೇತನ್ ಕೂಡ ಈ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯಾವ ಬಣ್ಣವೂ ಯಾವುದರ ಸಂಕೇತ ಆಗಬಾರದು ಎಂದು ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಕೇಸರಿ ಹಿಂದೂಗಳ ಸಂಕೇತವಲ್ಲ. ಹಿಂದೂಗಳ ಬಣ್ಣ ಆಗಬಾರದು. ಕೇಸರಿ ಬಣ್ಣ ತ್ಯಾಗದ ಸಂಕೇತ. ಅದು ಭಾರತದ ರಾಷ್ಟ್ರ ಧ್ವಜದಲ್ಲೂ ಇದೆ. ಹಸಿರು ಬಣ್ಣ ಕೂಡ ಅಷ್ಟೇ, ಅದು ಕೂಡ ಯಾರದೋ ಬಣ್ಣವಲ್ಲ. ಇದೊಂದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನವಷ್ಟೇ’ ಎಂದು ಪ್ರತಿಕ್ರಿಯಿಸಿದ್ದಾರೆ.

    ಪಠಾಣ್ ಸಿನಿಮಾದ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿದ್ದರು. ಆ ಹಾಡಿನ ಸಾಹಿತ್ಯದಲ್ಲೂ ಕೇಸರಿ ಬಣ್ಣಕ್ಕೆ ಅವಮಾನಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸೆನ್ಸಾರ್ ಮಂಡಳಿ ಕೂಡ ಹಾಡಿನಲ್ಲಿಯ ಕೆಲವು ಚಿತ್ರಿಕೆಗಳಿಗೆ ಕತ್ತರಿ ಹಾಕುವಂತೆ ಹೇಳಿತ್ತು. ಕೆಲವು ಕಡೆ ಈ ಸಿನಿಮಾವನ್ನು ರಿಲೀಸ್ ಮಾಡದಂತೆ ಥಿಯೇಟರ್ ಗೂ ಮುತ್ತಿಗೆ ಹಾಕಲಾಯಿತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪಠಾಣ್’ ಕೇಸರಿ ವಿವಾದಕ್ಕೆ ಚೇತನ್ ಎಂಟ್ರಿ : ವಿರೋಧಿಸುವವರಿಗೆ ಪಾಠ ಮಾಡಿದ ನಟ

    ‘ಪಠಾಣ್’ ಕೇಸರಿ ವಿವಾದಕ್ಕೆ ಚೇತನ್ ಎಂಟ್ರಿ : ವಿರೋಧಿಸುವವರಿಗೆ ಪಾಠ ಮಾಡಿದ ನಟ

    ಶಾರುಖ್ ಖಾನ್ ನಟನೆಯ ‘ಪಠಾಣ್’ (Pathan) ಸಿನಿಮಾದ ಹಾಡೊಂದರಲ್ಲಿ ಕೇಸರಿ (Saffron) ಬಣ್ಣದ ಬಿಕಿನಿ (Bikini) ಧರಿಸಲಾಗಿದೆ ಎನ್ನುವ ಕಾರಣಕ್ಕಾಗಿ ಹಿಂದೂಪರ ಸಂಘಟನೆಗಳು ಚಿತ್ರವನ್ನು ಬಾಯ್ಕಾಟ್ ಮಾಡಬೇಕು ಎಂದು ಪಟ್ಟು ಹಿಡಿದಿದ್ದವು. ಅಲ್ಲದೇ ಈ ಹಾಡಿನಲ್ಲಿ ಕೇಸರಿ ಬಣ್ಣಕ್ಕೂ ಅಪಮಾನ ಮಾಡಲಾಗಿದೆ ಎಂದು ಆರೋಪ ಮಾಡಿದ್ದವು. ದೇಶದ ನಾನಾ ಭಾಗಗಳಲ್ಲಿ ಈ ಸಿನಿಮಾ ಕುರಿತು ವಿರೋಧ ವ್ಯಕ್ತವಾಗಿತ್ತು. ಹಿಂದೂಪರ ಸಂಘಟನೆಗಳು ಮಾತ್ರವಲ್ಲ, ರಾಜಕೀಯ ಮುಖಂಡರು ಮತ್ತು ಕಲಾವಿದರು ಕೂಡ ಈ ಕುರಿತು ತಮ್ಮ ಪ್ರತಿಕ್ರಿಯೆ ದಾಖಲಿಸಿದ್ದವು.

    ಇದೀಗ ಕನ್ನಡದ ನಟ, ಹೋರಾಟಗಾರ ಚೇತನ್ (Chetan) ಕೂಡ ಈ ವಿವಾದದ (Controversy) ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯಾವ ಬಣ್ಣವೂ ಯಾವುದರ ಸಂಕೇತ ಆಗಬಾರದು ಎಂದು ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಕೇಸರಿ ಹಿಂದೂಗಳ ಸಂಕೇತವಲ್ಲ. ಹಿಂದೂಗಳ ಬಣ್ಣ ಆಗಬಾರದು. ಕೇಸರಿ ಬಣ್ಣ ತ್ಯಾಗದ ಸಂಕೇತ. ಅದು ಭಾರತದ ರಾಷ್ಟ್ರ ಧ್ವಜದಲ್ಲೂ ಇದೆ. ಹಸಿರು ಬಣ್ಣ ಕೂಡ ಅಷ್ಟೇ, ಅದು ಕೂಡ ಯಾರದೋ ಬಣ್ಣವಲ್ಲ. ಇದೊಂದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನವಷ್ಟೇ’ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಆದಿಲ್ ಖಾನ್ ಜೊತೆ ಮದುವೆಯಾದ ಬೆನ್ನಲ್ಲೇ ರಾಖಿ ಸಾವಂತ್ ಬಂಧನ

    ಪಠಾಣ್ ಸಿನಿಮಾದ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿದ್ದರು. ಆ ಹಾಡಿನ ಸಾಹಿತ್ಯದಲ್ಲೂ ಕೇಸರಿ ಬಣ್ಣಕ್ಕೆ ಅವಮಾನಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸೆನ್ಸಾರ್ ಮಂಡಳಿ ಕೂಡ ಹಾಡಿನಲ್ಲಿಯ ಕೆಲವು ಚಿತ್ರಿಕೆಗಳಿಗೆ ಕತ್ತರಿ ಹಾಕುವಂತೆ ಹೇಳಿತ್ತು. ಕೆಲವು ಕಡೆ ಈ ಸಿನಿಮಾವನ್ನು ರಿಲೀಸ್ ಮಾಡದಂತೆ ಥಿಯೇಟರ್ ಗೂ ಮುತ್ತಿಗೆ ಹಾಕಲಾಯಿತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಸಲಾರ್’ ನಂತರ ಮತ್ತೆ ಬಾಲಿವುಡ್ ಚಿತ್ರ ಒಪ್ಪಿಕೊಂಡ ಪ್ರಭಾಸ್

    ‘ಸಲಾರ್’ ನಂತರ ಮತ್ತೆ ಬಾಲಿವುಡ್ ಚಿತ್ರ ಒಪ್ಪಿಕೊಂಡ ಪ್ರಭಾಸ್

    ತೆಲುಗಿನ ಖ್ಯಾತ ನಟ ಪ್ರಭಾಸ್ ಸಾಲು ಸಾಲು ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗಾಗಲೇ ಆದಿಪುರಷ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಸ್ಪಿರಿಟ್ ಮತ್ತು ಪ್ರಾಜೆಕ್ಟ್ ಕೆ ಚಿತ್ರಗಳು ಕೈಯಲ್ಲಿವೆ. ಸಲಾರ್ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿಯುವ ಹಂತದಲ್ಲಿದೆ. ಈ ನಡುವೆ ಪ್ರಭಾಸ್ ಮತ್ತೊಂದು ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಬಾಲಿವುಡ್ ನಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು. ಸಿದ್ದಾರ್ಥ ಆನಂದ್ ಅವರು ಆ್ಯಕ್ಷನ್ ಕಟ್ ಹೇಳಲಿದ್ದಾರೆ.

    ಅಂದುಕೊಂಡಂತೆ ಆಗಿದ್ದರೆ ಪ್ರಭಾಸ್ ನಟನೆಯ ಆದಿಪುರುಷ್ ಚಿತ್ರ ಬಿಡುಗಡೆ ಆಗಬೇಕಿತ್ತು. ನಾನಾ ಕಾರಣಗಳಿಂದಾಗಿ ಅದು ತಡವಾಗುತ್ತಿದೆ. ವಿವಾದ ಕೂಡ ಆಗಿದ್ದರಿಂದ ಅದನ್ನು ತಿಳಿಗೊಳಿಸುವಲ್ಲಿ ನಿರ್ದೇಶಕರು ನಿರತರಾಗಿದ್ದಾರಂತೆ. ಈ ನಡುವೆಯೇ ಮತ್ತೊಂದು ಬಾಲಿವುಡ್ ಚಿತ್ರವನ್ನು ಪ್ರಭಾಸ್ ಒಪ್ಪಿಕೊಂಡಿದ್ದಾರೆ. ಈ ಮಾಹಿತಿಯನ್ನು ಚಿತ್ರ ನಿರ್ಮಾಣ ಮಾಡುವ ಮೈತ್ರಿ ಮೂವಿ ಸಂಸ್ಥೆಯೇ ಬಹಿರಂಗ ಪಡಿಸಿದೆ. ಇದನ್ನೂ ಓದಿ: ಬಿಗ್ ಬಾಸ್ ಸ್ಪರ್ಧಿಗಳ ಸಮಾಗಮ: ವೈಷ್ಣವಿ ಜೊತೆ ದಿವ್ಯಾ- ಅರವಿಂದ್ ಕೆ.ಪಿ ಜೋಡಿ

    ಶಾರುಖ್ ಖಾನ್ ನಿರ್ದೇಶನದ ಪಠಾಣ್ ಸಿನಿಮಾವನ್ನು ನಿರ್ದೇಶನ ಮಾಡಿರುವ ಸಿದ್ದಾರ್ಥ ಆನಂದ್, ಪಠಾಣ್ ಚಿತ್ರದ ನಂತರ ಪ್ರಭಾಸ್ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರಂತೆ. ಹಿಂದಿ ಚಿತ್ರರಂಗದಲ್ಲಿ ಅನೇಕ ಹಿಟ್ ಚಿತ್ರಗಳನ್ನು ಕೊಟ್ಟಿರುವ ಇವರು, ಈ ಬಾರಿ ಪ್ರಭಾಸ್ ಜೊತೆ ಅದೃಷ್ಟಕ್ಕೆ ಇಳಿಯಲಿದ್ದಾರೆ. ಪ್ರಭಾಸ್ ಗಾಗಿಯೇ ಅವರು ಹೊಸ ರೀತಿಯ ಕಥೆಯನ್ನೂ ಸಿದ್ದಪಡಿಸಿದ್ದಾರಂತೆ. ಪಠಾಣ್ ಸಿನಿಮಾ ರಿಲೀಸ್ ನಂತರವೇ ಈ ಕುರಿತು ಹಲವು ಮಾಹಿತಿಗಳನ್ನು ಅವರು ಹಂಚಿಕೊಳ್ಳಲಿದ್ದಾರೆ.

    ತೆಲುಗು ಚಿತ್ರೋದ್ಯಮದಲ್ಲಿ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಎಂದೇ ಖ್ಯಾತಿ ಪಡೆದಿರುವ ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆಯು, ಭಾರೀ ಬಜೆಟ್ ಚಿತ್ರಗಳನ್ನೇ ತಯಾರು ಮಾಡುತ್ತಿದೆ. ಈ ಸಂಸ್ಥೆಯಿಂದ ಮೂಡಿ ಬಂದಿರುವ ವಾಲ್ತೇರು ವೀರಯ್ಯ ಹಾಗೂ ವೀರಸಿಂಹ ರೆಡ್ಡಿ ಚಿತ್ರಗಳು ಈ ವಾರ ದೇಶಾದ್ಯಂತ ಬಿಡುಗಡೆ ಆಗಿ, ಯಶಸ್ವಿ ಪ್ರದರ್ಶನ ಕಾಣುತ್ತಿವೆ. ಅಲ್ಲದೇ, ಇನ್ನೂ ಹಲವು ಚಿತ್ರಗಳನ್ನು ಈ ಸಂಸ್ಥೆ ನಿರ್ಮಾಣ ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜಕಾರಣಿಗಳು ನಟಿಯರ ಬಟ್ಟೆ ಬಗ್ಗೆ ಕಾಮೆಂಟ್ ಮಾಡೋದು ಬಿಡಲಿ: ಸ್ವರಾ ಭಾಸ್ಕರ್

    ರಾಜಕಾರಣಿಗಳು ನಟಿಯರ ಬಟ್ಟೆ ಬಗ್ಗೆ ಕಾಮೆಂಟ್ ಮಾಡೋದು ಬಿಡಲಿ: ಸ್ವರಾ ಭಾಸ್ಕರ್

    ತ್ತೀಚಿನ ದಿನಗಳಲ್ಲಿ ನಟಿಯರ ಕಾಸ್ಟ್ಯೂಮ್ (Costume) ಬಗ್ಗೆ ರಾಜಕಾರಣಿಗಳು ವಿಪರೀತವಾಗಿ ಮಾತನಾಡುತ್ತಿದ್ದಾರೆ. ಅದರಲ್ಲೂ ಪಠಾಣ್ (Pathan) ಸಿನಿಮಾದಲ್ಲಿ ದೀಪಿಕಾ ಪಡುಕೋಣೆ (Deepika Padukone) ಹಾಕಿರುವ ಬಟ್ಟೆಯ ಬಗ್ಗೆ ವಾರಗಟ್ಟಲೆ ರಾಜಕಾರಣಿಗಳು (Politician) ಮಾತನಾಡಿದ್ದಾರೆ. ಆಕೆ ಹೆಣ್ಣು ಅನ್ನುವುದನ್ನೂ ಮರೆತು ಬಾಯಿಗೆ ಬಂದಂತೆ ಕಾಮೆಂಟ್ ಮಾಡಿದರು. ಈ ರೀತಿಯ ಮನಸ್ಥಿತಿಯನ್ನು ರಾಜಕಾರಣಿಗಳು ಬಿಡಬೇಕು ಎಂದು ಬಾಲಿವುಡ್ ನಟಿ ಸ್ವರಾ ಭಾಸ್ಕರ್ (Swara Bhaskar) ಹೇಳಿಕೆ ನೀಡಿದ್ದಾರೆ.

    ರಾಜಕಾರಣಿಗಳಿಗೆ ಈ ರೀತಿ ಟಾಂಗ್ ಕೊಡುವ ಮೂಲಕ ಪರೋಕ್ಷವಾಗಿ ಪಠಾಣ್ ಸಿನಿಮಾಗೆ ಬೆಂಬಲ ವ್ಯಕ್ತ ಪಡಿಸಿದ್ದಾರೆ ಸ್ವರಾ. ಅವರವರ ಕೆಲಸ ಅವರು ಮಾಡಿದರೆ ಯಾವುದೇ ವಿವಾದ ಆಗುವುದಿಲ್ಲ. ಒಬ್ಬರ ವೃತ್ತಿಗೆ ಮತ್ತೊಬ್ಬರು ಮೂಗು ತೂರಿಸುವುದು ಬೇಡ ಎಂದು ಪಠಾಣ್ ಸಿನಿಮಾದ ಹಾಡು ವಿರೋಧಿಸಿದ್ದ ಅನೇಕ ರಾಜಕಾರಣಿಗಳಿಗೆ ಚಳಿ ಬಿಡಿಸಿದ್ದಾರೆ ಸ್ವರಾ ಭಾಸ್ಕರ್. ಇದನ್ನೂ ಓದಿ: ಗೆಳೆಯ ವಸಿಷ್ಠ ಸಿಂಹಗೆ ವಿಭಿನ್ನವಾಗಿ ವಿಶ್ ಮಾಡಿದ ಡಾಲಿ ಧನಂಜಯ್

    ಪಠಾಣ್ ಸಿನಿಮಾದ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಧರಿಸಿದ್ದರ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಅದರಲ್ಲೂ ಕೇಸರಿ ಬಣ್ಣಕ್ಕೆ ಅವಮಾನಿಸಲಾಗಿದೆ ಎಂದು ಹೋರಾಟ ಕೂಡ ಮಾಡಲಾಗಿತ್ತು. ಈ ವಿವಾದ ದೊಡ್ಡದಾಗುತ್ತಿದ್ದಂತೆಯೇ ಸೆನ್ಸಾರ್ ಮಂಡಳಿ ಕೂಡ ಅಶ್ಲೀಲ ಅನಿಸುವಂತಹ ಚಿತ್ರಿಕೆಗಳಿಗೆ ಕತ್ತರಿ ಹಾಕುವಂತೆ ಹೇಳಲಾಗಿತ್ತು. ಇನ್ನೆರಡು ವಾರದಲ್ಲಿ ಸಿನಿಮಾ ರಿಲೀಸ್ ಆಗುತ್ತಿದ್ದರೂ ವಿವಾದ ಮಾತ್ರ ಇನ್ನೂ ತಣ್ಣಗಾಗಿಲ್ಲ. ಇನ್ನು ಬಾಯ್ಕಾಟ್ ರೀತಿಯ ಮಾತುಗಳು ಕೇಳುತ್ತಲೇ ಇವೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪಠಾಣ್’ ದೇಶಭಕ್ತಿ ಸಾರುವ ಸಿನಿಮಾ : ನಟ ಶಾರುಖ್ ಖಾನ್

    ‘ಪಠಾಣ್’ ದೇಶಭಕ್ತಿ ಸಾರುವ ಸಿನಿಮಾ : ನಟ ಶಾರುಖ್ ಖಾನ್

    ನಿನ್ನೆಯಷ್ಟೇ ಪಠಾಣ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಸಿನಿಮಾದ ಹಲವು ಅಂಶಗಳನ್ನು ಈ ಟ್ರೈಲರ್ ನಲ್ಲಿ ಹೇಳುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು. ಉಗ್ರವಾದಿಗಳು ಮತ್ತು ಭಾರತದ ರಕ್ಷಣೆ ಹೊತ್ತ ‘ರಾ’ ಏಜೆಂಟ್ ನಡುವಿನ ಕಥಾಹಂದರ ಇದಾಗಿದ್ದು, ದೇಶದ ಅಪ್ಪಟ ಪ್ರೇಮಿಯೊಬ್ಬ ಭಯೋತ್ಪಾದಕರನ್ನು ಹೇಗೆ ಹಿಮ್ಮೆಟ್ಟಿಸುತ್ತಾನೆ ಎನ್ನುವ ಸಾರವನ್ನು ಈ ಸಿನಿಮಾ ಹೊಂದಿದೆ. ಹೀಗಾಗಿಯೇ ಇದೊಂದು ಅಪ್ಪಟ ದೇಶಭಕ್ತಿ ಸಾರುವ ಸಿನಿಮಾ ಎಂದಿದ್ದಾರೆ ಶಾರುಖ್ ಖಾನ್.

    ಅನೇಕ ಅಚ್ಚರಿ ಸಂಗತಿಗಳೊಂದಿಗೆ ಈ ಟ್ರೈಲರ್ ಗಮನ ಸೆಳೆಯುತ್ತಿದ್ದು, ಕೆಲವು ಪಾತ್ರಗಳ ಹಿನ್ನೆಲೆಯನ್ನೂ ಟ್ರೈಲರ್ ನಲ್ಲಿ ರಿವಿಲ್ ಮಾಡುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು.  ಈ ಸಿನಿಮಾದಲ್ಲಿ ಖ್ಯಾತ ಬಾಲಿವುಡ್ ನಟ ಜಾನ್ ಅಬ್ರಾಹಂ ಉಗ್ರ ಸಂಘಟನೆಯ ಮುಖ್ಯಸ್ಥನಾಗಿ ಕಾಣಸಿಕೊಂಡಿದ್ದರೆ, ಶಾರುಖ್ ರಾ ಏಜೆಂಟ್ ಪಾತ್ರವನ್ನು ಮಾಡಿದ್ದಾರೆ.

    ಔಟ್ ಫುಟ್ ಎಕ್ಸ್ ಎನ್ನುವ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಜಾನ್ ಅಬ್ರಾಹಂ, ಈ ಸಂಘಟನೆಯ ಮೂಲಕ ಭಾರತದ ಮೇಲೆ ದಾಳಿ ಮಾಡಲು ಸಂಚು ರೂಪಿಸುತ್ತಾರೆ. ಈ ದಾಳಿಯನ್ನು ಭಾರತ ರಾ ಏಜೆಂಟ್ ಆಗಿರುವ ಶಾರುಖ್ ಖಾನ್ ಹೇಗೆ ತಡೆಯುತ್ತಾರೆ ಎನ್ನುವುದೇ ಪಠಾಣ್ ಸಿನಿಮಾದ ಕಥಾ ಹಂದರ. ಟ್ರೈಲರ್ ನಲ್ಲಿ ಶಾರುಖ್ ಸಖತ್ತಾಗಿ ಕಾಣಿಸಿಕೊಂಡಿದ್ದಾರೆ. ಅನೇಕ ಸಾಹಸಮಯ ದೃಶ್ಯಗಳಲ್ಲಿ ಅವರು ವಯಸ್ಸಿಗೂ ಮೀರಿದ ಆ್ಯಕ್ಷನ್ ಮಾಡಿದ್ದಾರೆ. ಇಡೀ ಟ್ರೈಲರ್ ಆ್ಯಕ್ಷನ್ ದೃಶ್ಯಗಳಿಂದಲೇ ತುಂಬಿದೆ.

    ನಾನಾ ಕಾರಣಗಳಿಂದಾಗಿ ವಿವಾದಕ್ಕೆ ಕಾರಣವಾಗಿರುವ ಈ ಸಿನಿಮಾ, ದೇಶಪ್ರೇಮವನ್ನು ಸಾರಲಿದೆ ಎಂದು ಈ ಹಿಂದೆಯೇ ಶಾರುಖ್ ಹೇಳಿದ್ದರು. ಸಿನಿಮಾ ನೋಡಿದ ನಂತರ ಮಾತನಾಡಿ ಎಂದೂ ಅವರು ವಿರೋಧಿಗಳಿಗೆ ಪ್ರತಿಕ್ರಿಯಿಸಿದ್ದರು. ಕಥಾ ಹಂದರ ಮತ್ತು ಶಾರುಖ್ ಮಾಡಿರುವ ಪಾತ್ರವನ್ನು ಗಮನಿಸಿದರೆ, ಉಗ್ರರಿಂದ ಭಾರತವನ್ನು ತಪ್ಪಿಸುವಂತಹ ಕಥಾಹಂದರ ಇರು ಹೊಂದಿದೆ ಎಂದು ಮೇಲ್ನೋಟಕ್ಕೆ ತಿಳಿಯುತ್ತದೆ.

    ಪಠಾಣ್ ಸಿನಿಮಾದ ಹಾಡಿನಲ್ಲಿ ಹಿಂದೂಗಳ ಭಾವನೆ ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಈ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಅಭಿಯಾನ ಶುರುವಾಗಿದೆ. ಈಗಾಗಲೇ ಹಲವು ಕಡೆಗಳಲ್ಲಿ ಚಿತ್ರವನ್ನು ನಿಷೇಧಿಸಬೇಕು ಎಂದು ಹೋರಾಟಗಳು ನಡೆದಿವೆ. ಈ ಸಂದರ್ಭದಲ್ಲಿ ಟ್ರೈಲರ್ ಬಿಡುಗಡೆ ಆಗಿದ್ದು, ಅದ್ಭುತ ರೆಸ್ಪಾನ್ಸ್ ಸಿಗುತ್ತಿದೆ. ಸಿನಿಮಾದ ಕಥೆಯಿಂದಾಗಿ ಚಿತ್ರವನ್ನು ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರಾ ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪಠಾಣ್’ ಸಿನಿಮಾದಲ್ಲಿ ಉಗ್ರನಾಗಿ ಕಾಣಿಸಿಕೊಂಡ ಬಾಲಿವುಡ್ ನಟ ಜಾನ್ ಅಬ್ರಾಹಂ

    ‘ಪಠಾಣ್’ ಸಿನಿಮಾದಲ್ಲಿ ಉಗ್ರನಾಗಿ ಕಾಣಿಸಿಕೊಂಡ ಬಾಲಿವುಡ್ ನಟ ಜಾನ್ ಅಬ್ರಾಹಂ

    ಬಾಲಿವುಡ್ ನಟ ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಅನೇಕ ಅಚ್ಚರಿ ಸಂಗತಿಗಳೊಂದಿಗೆ ಈ ಟ್ರೈಲರ್ ಗಮನ ಸೆಳೆಯುತ್ತಿದೆ. ಅಲ್ಲದೇ, ಕೆಲವು ಪಾತ್ರಗಳ ಹಿನ್ನೆಲೆಯನ್ನೂ ಅದು ರಿವಿಲ್ ಮಾಡಿದೆ. ಈ ಸಿನಿಮಾದಲ್ಲಿ ಖ್ಯಾತ ಬಾಲಿವುಡ್ ನಟ ಜಾನ್ ಅಬ್ರಾಹಂ ಉಗ್ರ ಸಂಘಟನೆಯ ಮುಖ್ಯಸ್ಥನಾಗಿ ಕಾಣಸಿಕೊಂಡಿದ್ದರೆ, ಶಾರುಖ್ ರಾ ಏಜೆಂಟ್ ಪಾತ್ರವನ್ನು ಮಾಡಿದ್ದಾರೆ.

    ಔಟ್ ಫುಟ್ ಎಕ್ಸ್ ಎನ್ನುವ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಜಾನ್ ಅಬ್ರಾಹಂ, ಈ ಸಂಘಟನೆಯ ಮೂಲಕ ಭಾರತದ ಮೇಲೆ ದಾಳಿ ಮಾಡಲು ಸಂಚು ರೂಪಿಸುತ್ತಾರೆ. ಈ ದಾಳಿಯನ್ನು ಭಾರತ ರಾ ಏಜೆಂಟ್ ಆಗಿರುವ ಶಾರುಖ್ ಖಾನ್ ಹೇಗೆ ತಡೆಯುತ್ತಾರೆ ಎನ್ನುವುದೇ ಪಠಾಣ್ ಸಿನಿಮಾದ ಕಥಾ ಹಂದರ. ಟ್ರೈಲರ್ ನಲ್ಲಿ ಶಾರುಖ್ ಸಖತ್ತಾಗಿ ಕಾಣಿಸಿಕೊಂಡಿದ್ದಾರೆ. ಅನೇಕ ಸಾಹಸಮಯ ದೃಶ್ಯಗಳಲ್ಲಿ ಅವರು ವಯಸ್ಸಿಗೂ ಮೀರಿದ ಆ್ಯಕ್ಷನ್ ಮಾಡಿದ್ದಾರೆ. ಇಡೀ ಟ್ರೈಲರ್ ಆ್ಯಕ್ಷನ್ ದೃಶ್ಯಗಳಿಂದಲೇ ತುಂಬಿದೆ. ಇದನ್ನೂ ಓದಿ:ಎಷ್ಟೇ ಕಷ್ಟ ಬಂದರೂ ಸಿನಿಮಾ ಮೇಲಿನ ಪ್ರೀತಿ ಕಳೆದುಕೊಂಡಿಲ್ಲ: ಗಳಗಳನೇ ಅತ್ತ ಸಮಂತಾ

    ನಾನಾ ಕಾರಣಗಳಿಂದಾಗಿ ವಿವಾದಕ್ಕೆ ಕಾರಣವಾಗಿರುವ ಈ ಸಿನಿಮಾ, ದೇಶಪ್ರೇಮವನ್ನು ಸಾರಲಿದೆ ಎಂದು ಈ ಹಿಂದೆಯೇ ಶಾರುಖ್ ಹೇಳಿದ್ದರು. ಸಿನಿಮಾ ನೋಡಿದ ನಂತರ ಮಾತನಾಡಿ ಎಂದೂ ಅವರು ವಿರೋಧಿಗಳಿಗೆ ಪ್ರತಿಕ್ರಿಯಿಸಿದ್ದರು. ಕಥಾ ಹಂದರ ಮತ್ತು ಶಾರುಖ್ ಮಾಡಿರುವ ಪಾತ್ರವನ್ನು ಗಮನಿಸಿದರೆ, ಉಗ್ರರಿಂದ ಭಾರತವನ್ನು ತಪ್ಪಿಸುವಂತಹ ಕಥಾಹಂದರ ಇರು ಹೊಂದಿದೆ ಎಂದು ಮೇಲ್ನೋಟಕ್ಕೆ ತಿಳಿಯುತ್ತದೆ.

    ಪಠಾಣ್ ಸಿನಿಮಾದ ಹಾಡಿನಲ್ಲಿ ಹಿಂದೂಗಳ ಭಾವನೆ ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಈ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಅಭಿಯಾನ ಶುರುವಾಗಿದೆ. ಈಗಾಗಲೇ ಹಲವು ಕಡೆಗಳಲ್ಲಿ ಚಿತ್ರವನ್ನು ನಿಷೇಧಿಸಬೇಕು ಎಂದು ಹೋರಾಟಗಳು ನಡೆದಿವೆ. ಈ ಸಂದರ್ಭದಲ್ಲಿ ಟ್ರೈಲರ್ ಬಿಡುಗಡೆ ಆಗಿದ್ದು, ಅದ್ಭುತ ರೆಸ್ಪಾನ್ಸ್ ಸಿಗುತ್ತಿದೆ. ಸಿನಿಮಾದ ಕಥೆಯಿಂದಾಗಿ ಚಿತ್ರವನ್ನು ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರಾ ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k