Tag: Pathan

  • ಉರ್ಫಿ ಜಾವೇದ್ ಹುಚ್ಚಾಟ: ಕೇಸರಿ ತುಂಡುಡುಗೆ ತೊಟ್ಟು ‘ಬೇಷರಂ ರಂಗ್’ ಗೀತೆಗೆ ಕ್ಯಾಟ್ ವಾಕ್

    ಉರ್ಫಿ ಜಾವೇದ್ ಹುಚ್ಚಾಟ: ಕೇಸರಿ ತುಂಡುಡುಗೆ ತೊಟ್ಟು ‘ಬೇಷರಂ ರಂಗ್’ ಗೀತೆಗೆ ಕ್ಯಾಟ್ ವಾಕ್

    ಠಾಣ್ ಸಿನಿಮಾದ ‘ಬೇಷರಂ ರಂಗ್’ (Besharam Rang)  ಗೀತೆಯ ವಿವಾದ (controversy) ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದ್ದರೂ, ಬಿಗ್ ಬಾಸ್ ಮಾಜಿ ಸ್ಪರ್ಧಿ ಉರ್ಫಿ ಜಾವೇದ್ (Urfi Javed) ಕೊಂಚವೂ ಭಯಗೊಂಡಂತೆ ಕಾಣುತ್ತಿಲ್ಲ. ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ (saffron) ಬಿಕಿನಿ (bikini) ತೊಟ್ಟು ಬಣ್ಣಕ್ಕೆ ಅವಮಾನಿಸಿದ್ದಾರೆ ಎನ್ನುವ ಕಾರಣಕ್ಕಾಗಿ ಅಲ್ಲಲ್ಲಿ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಸೆನ್ಸಾರ್ ಮಂಡಳಿ ಕೂಡ ಅಶ್ಲೀಲ ಎನ್ನುವಂತಹ ಚಿತ್ರಿಕೆಗಳನ್ನು ಕಟ್ ಮಾಡಿಸಿದೆ. ಈ ನಡುವೆಯೂ ಉರ್ಫಿ ಜಾವೇದ್ ಹುಚ್ಚಾಟ ಮರೆದಿದ್ದಾರೆ.

    ಯಾವ ಬಣ್ಣ ಮತ್ತು ಹಾಡಿನಿಂದ ಪಠಾಣ್ ಸಿನಿಮಾ ವಿವಾದಕ್ಕೀಡಾಗಿತ್ತೋ, ಅದೇ ಬಣ್ಣದ ತುಂಡುಡುಗೆ ತೊಟ್ಟು, ಅದೇ ಹಾಡಿಗೆ ಕ್ಯಾಟ್ ವಾಕ್ ಮಾಡಿದ್ದಾರೆ ಉರ್ಫಿ. ಅವರ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಕೆಲವರು ಎಚ್ಚರಿಕೆಯ ಸಂದೇಶಗಳನ್ನೂ ಕಳುಹಿಸಿದ್ದಾರೆ. ಪ್ರಚಾರಕ್ಕಾಗಿ ಈ ರೀತಿ ಮಾಡಿದರೆ ಕಾನೂನು ರೀತಿಯಲ್ಲಿ ಉತ್ತರ ಕೊಡಬೇಕಾಗುತ್ತದೆ ಎಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಸೋನು ಗೌಡ ಜೊತೆಗಿನ ಮದುವೆ ಬಗ್ಗೆ ರಾಕೇಶ್ ಅಡಿಗ ಹೇಳೋದೇನು?

    ಉರ್ಫಿ ಹಾಕುವ ಕಾಸ್ಟ್ಯೂಮ್ ವಿವಾದ ಆಗುತ್ತಿರುವುದು ಇದೇ ಮೊದಲೇನೂ ಅಲ್ಲ. ಈಗಾಗಲೇ ಅವರ ವಿರುದ್ಧ ಅನೇಕ ದೂರುಗಳು ಸಲ್ಲಿಕೆಯಾಗಿವೆ. ಮೊನ್ನೆಯಷ್ಟೇ ದುಬೈನಲ್ಲಿ ಪೊಲೀಸರು ಉರ್ಫಿಯನ್ನು ವಶಕ್ಕೆ ಪಡೆದಿದ್ದರು. ಅಲ್ಲದೇ, ಬಿಜೆಪಿಯ ಮಹಿಳಾ ಸದಸ್ಯರೊಬ್ಬರು ಉರ್ಫಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲು ಕೂಡ ಹತ್ತಿದ್ದಾರೆ. ಇಷ್ಟೊಂದು ಘಟನೆಗಳಾದರೂ, ಉರ್ಫಿ ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಂಡಿಲ್ಲ. ತಮ್ಮ ಪಾಡಿಗೆ ತಾವು ಏನು ಮಾಡಬೇಕೋ ಅದನ್ನು ಮಾಡುತ್ತಲೇ ಇದ್ದಾರೆ.

    ನಿನ್ನೆಯಷ್ಟೇ ಪಠಾಣ್ ಸಿನಿಮಾಗೆ ಸೆನ್ಸಾರ್ ಮಂಡಳಿಯು ಕೊನೆಗೂ ಪ್ರಮಾಣ ಪತ್ರವನ್ನು ಕೊಟ್ಟಿದ್ದು, ಕೆಲವು ಚಿತ್ರಿಕೆಗಳಿಗೆ ಕತ್ತರಿ ಪ್ರಯೋಗ ಮಾಡಿದೆ. ದೀಪಿಕಾ ಪಡುಕೋಣೆಯು ಕುಣಿದ ‘ಬೇಷರಂ ರಂಗ್’ ಹಾಡಿನ ಅಶ್ಲೀಲ ಭಂಗಿಗಳನ್ನು ತಗೆದು ಹಾಕುವಂತೆ ಸೂಚಿಸಿದೆ. ಈ ಹಾಡಿನಲ್ಲಿ ಅಶ್ಲೀಲವಾಗಿ, ಒಳ ಉಡುಪುಗಳು ಕಾಣುವಂತೆ ಮತ್ತು ಕೇಸರಿ ಬಣ್ಣಕ್ಕೆ ಅವಮಾನ ಮಾಡುವಂತಹ ಎಲ್ಲ ಸಂಗತಿಗಳನ್ನೂ ಕಟ್ ಮಾಡಿಸಿದೆ. ಇಷ್ಟೆಲ್ಲ ಮುಗಿದ ನಂತರವೇ ಈ ಚಿತ್ರಕ್ಕೆ ಯು/ ಎ ಸರ್ಟಿಫಿಕೇಟ್ ಪ್ರಮಾಣಪತ್ರವನ್ನು ನೀಡಿದೆ.

    ಅಲ್ಲದೇ, ಸಿನಿಮಾದ ಡೈಲಾಗ್ ಮೇಲೂ ಸೆನ್ಸಾರ್ ಮಂಡಳಿಯು ಅಧಿಕಾರ ಚಲಾಯಿಸಿದ್ದು, ಕೆಲವು ಪದಗಳನ್ನು ಮಾರ್ಪಾಡು ಮಾಡುವಂತೆ ಸೂಚಿಸಿದೆ. ಬಾಲಿವುಡ್ ಮಾಧ್ಯಮಗಳು ವರದಿ ಮಾಡಿದಂತೆ. ‘ಲಂಗ್ಡೆ ಲುಲ್ಲೆ’ ಪದದ ಬದಲು ‘ಟೂಟೆ ಪೂಟೆ’ ಎಂದು ಬದಲಾಯಿಸಲು, 13 ಕಡೆ ‘ಪಿಎಂಓ’ ಪದವನ್ನು ತಗೆದು ಹಾಕುವಂತೆ ಸೂಚಿಸಿದೆ. ‘ಮಿಸಸ್ ಭಾರತ್ ಮಾತಾ’ ಎನ್ನುವ ಮಾತಿನ ಬದಲಾಗಿ ‘ಹಮಾರಿ ಭಾರತ್ ಮಾತಾ’ ಎಂದು ಡಬ್ ಮಾಡುವಂತೆ ಸೂಚಿಸಿದೆ. ಹೀಗೆ ಸಾಕಷ್ಟು ಪದಗಳನ್ನು ಬದಲಿಸಿ, ಬೇರೆ ಪದವನ್ನು ಬಳಸುವಂತೆ ಸೆನ್ಸಾರ್ ಮಂಡಳಿಯು ಸೂಚಿಸಿತ್ತು ಎಂದು ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಡಿಪ್ಪಿ ಹುಟ್ಟು ಹಬ್ಬಕ್ಕೆ ‘ಪಠಾಣ್’ ಸಿನಿಮಾದ ವಿಶೇಷ ಪೋಸ್ಟರ್ ರಿಲೀಸ್

    ಡಿಪ್ಪಿ ಹುಟ್ಟು ಹಬ್ಬಕ್ಕೆ ‘ಪಠಾಣ್’ ಸಿನಿಮಾದ ವಿಶೇಷ ಪೋಸ್ಟರ್ ರಿಲೀಸ್

    ಬಾಲಿವುಡ್  ಖ್ಯಾತ ನಟಿ ದೀಪಿಕಾ ಪಡುಕೋಣೆ ಇಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಬರ್ತಡೇಗಾಗಿಯೇ ಪಠಾಣ್ ಸಿನಿಮಾ ಟೀಮ್ ವಿಶೇಷ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ. ಈ ಪೋಸ್ಟರ್ ನಲ್ಲಿ ದೀಪಿಕಾ ಖಡಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಶಾರುಖ್ ಖಾನ್ ಪೋಸ್ಟರ್ ಅನ್ನು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ರಿಲೀಸ್ ಮಾಡಿ, ಶುಭ ಹಾರೈಸಿದ್ದಾರೆ. ಅವರ ನಟನೆಗೆ ಹಾಡಿ ಹೊಗಳಿದ್ದಾರೆ. ಹುಟ್ಟ ಹಬ್ಬಕ್ಕೆ ಶುಭ ಹಾರೈಸಿದ್ದಾರೆ.

    ನಿನ್ನೆಯಷ್ಟೇ ಪಠಾಣ್ ಸಿನಿಮಾಗೆ ಸೆನ್ಸಾರ್ ಮಂಡಳಿಯು ಕೊನೆಗೂ ಪ್ರಮಾಣ ಪತ್ರವನ್ನು ಕೊಟ್ಟಿದ್ದು, ಕೆಲವು ಚಿತ್ರಿಕೆಗಳಿಗೆ ಕತ್ತರಿ ಪ್ರಯೋಗ ಮಾಡಿದೆ. ದೀಪಿಕಾ ಪಡುಕೋಣೆಯು ಕುಣಿದ ‘ಬೇಷರಂ ರಂಗ್’ ಹಾಡಿನ ಅಶ್ಲೀಲ ಭಂಗಿಗಳನ್ನು ತಗೆದು ಹಾಕುವಂತೆ ಸೂಚಿಸಿದೆ. ಈ ಹಾಡಿನಲ್ಲಿ ಅಶ್ಲೀಲವಾಗಿ, ಒಳ ಉಡುಪುಗಳು ಕಾಣುವಂತೆ ಮತ್ತು ಕೇಸರಿ ಬಣ್ಣಕ್ಕೆ ಅವಮಾನ ಮಾಡುವಂತಹ ಎಲ್ಲ ಸಂಗತಿಗಳನ್ನೂ ಕಟ್ ಮಾಡಿಸಿದೆ. ಇಷ್ಟೆಲ್ಲ ಮುಗಿದ ನಂತರವೇ ಈ ಚಿತ್ರಕ್ಕೆ ಯು/ ಎ ಸರ್ಟಿಫಿಕೇಟ್ ಪ್ರಮಾಣಪತ್ರವನ್ನು ನೀಡಿದೆ.

    ಅಲ್ಲದೇ, ಸಿನಿಮಾದ ಡೈಲಾಗ್ ಮೇಲೂ ಸೆನ್ಸಾರ್ ಮಂಡಳಿಯು ಅಧಿಕಾರ ಚಲಾಯಿಸಿದ್ದು, ಕೆಲವು ಪದಗಳನ್ನು ಮಾರ್ಪಾಡು ಮಾಡುವಂತೆ ಸೂಚಿಸಿದೆ. ಬಾಲಿವುಡ್ ಮಾಧ್ಯಮಗಳು ವರದಿ ಮಾಡಿದಂತೆ. ‘ಲಂಗ್ಡೆ ಲುಲ್ಲೆ’ ಪದದ ಬದಲು ‘ಟೂಟೆ ಪೂಟೆ’ ಎಂದು ಬದಲಾಯಿಸಲು, 13 ಕಡೆ ‘ಪಿಎಂಓ’ ಪದವನ್ನು ತಗೆದು ಹಾಕುವಂತೆ ಸೂಚಿಸಿದೆ. ‘ಮಿಸಸ್ ಭಾರತ್ ಮಾತಾ’ ಎನ್ನುವ ಮಾತಿನ ಬದಲಾಗಿ ‘ಹಮಾರಿ ಭಾರತ್ ಮಾತಾ’ ಎಂದು ಡಬ್ ಮಾಡುವಂತೆ ಸೂಚಿಸಿದೆ. ಹೀಗೆ ಸಾಕಷ್ಟು ಪದಗಳನ್ನು ಬದಲಿಸಿ, ಬೇರೆ ಪದವನ್ನು ಬಳಸುವಂತೆ ಸೆನ್ಸಾರ್ ಮಂಡಳಿಯು ಸೂಚಿಸಿತ್ತು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಯಶ್ ಹೊಸ ಸಿನಿಮಾದ ಬಜೆಟ್ ಬರೋಬ್ಬರಿ 400 ಕೋಟಿ: ಜ.8ಕ್ಕೆ ಘೋಷಣೆ

    ಸೆನ್ಸಾರ್ ಮಂಡಳಿಯು ಏನೇ ಸೂಚಿಸಿದ್ದರು, ಚಿತ್ರತಂಡ ಚಿತ್ರಿಕೆಗಳನ್ನು ಕಟ್ ಮಾಡಿದ್ದರೂ, ಪ್ರತಿಭಟನೆ ಮಾತ್ರ ನಿಂತಿಲ್ಲ. ಇವತ್ತು ಗುಜರಾತ್ ನ ಅಹ್ಮದಾಬಾದ್ ನ ಮಾಲ್ ಒಂದರಲ್ಲಿ ಪಠಾಣ್ ಸಿನಿಮಾದ ಪೋಸ್ಟರ್ ಅಂಟಿಸಲಾಗಿತ್ತು. ಈ ಪೋಸ್ಟರ್ ಅನ್ನು ತಗೆದು ಹಾಕುವಂತೆ ಭಜರಂಗ ದಳದ ಕಾರ್ಯಕರ್ತರು ಥಿಯೇಟರ್ ಮಾಲೀಕರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಗೆ ಪುರಸ್ಕರಿಸದೇ ಹೋದಾಗ, ಚಿತ್ರಮಂದಿರದ ಮೇಲೆ ದಾಳಿ ಮಾಡಿದ ಭಜರಂಗ ದಳದ ಕಾರ್ಯಕರ್ತರು ಅದನ್ನು ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಘಟನೆಯ ಕುರಿತಾಗಿ ಮಾತನಾಡಿರುವ ಥಿಯೇಟರ್ ಮಾಲೀಕರು, ಕೇವಲ ಪೋಸ್ಟರ್ ಮಾತ್ರ ಹರಿದು ಹಾಕದೇ, ಈ ಸಿನಿಮಾವನ್ನು ಪ್ರದರ್ಶನ ಮಾಡಬಾರದು ಎಂದು ಬೆದರಿಕೆ ಕೂಡ ಹಾಕಿದ್ದಾರೆ ಎಂದಿದ್ದಾರೆ. ಪೋಸ್ಟರ್ ಹರಿದು ಹಾಕಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿದೆ. ಇದೇ ಸಂದರ್ಭದಲ್ಲಿ ಮಾತನಾಡಿರುವ ಭಜರಂಗ ದಳದ ಸದಸ್ಯರು, ಯಾವುದೇ ಸಿನಿಮಾ ಮಂದಿರದಲ್ಲೂ ಈ ಸಿನಿಮಾ ಪ್ರದರ್ಶನ ಮಾಡಬಾರದು, ಮಾಡಿದರೆ ದಾಳಿ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪಠಾಣ್’ ಚಿತ್ರಕ್ಕೆ ಕೊನೆಗೂ ಸೆನ್ಸಾರ್: 10 ಕಡೆ ಕತ್ತರಿ, ದೀಪಿಕಾಗೆ ಮೈತುಂಬಾ ಬಟ್ಟೆ, U/A ಸರ್ಟಿಫಿಕೇಟ್

    ‘ಪಠಾಣ್’ ಚಿತ್ರಕ್ಕೆ ಕೊನೆಗೂ ಸೆನ್ಸಾರ್: 10 ಕಡೆ ಕತ್ತರಿ, ದೀಪಿಕಾಗೆ ಮೈತುಂಬಾ ಬಟ್ಟೆ, U/A ಸರ್ಟಿಫಿಕೇಟ್

    ಬಾಲಿವುಡ್ ಸೆನ್ಸಾರ್ (Censor) ಮಂಡಳಿಯು ಕೊನೆಗೂ ‘ಪಠಾಣ್’ (Pathan) ಸಿನಿಮಾಗೆ ಸೆನ್ಸಾರ್ ಮಾಡಿದೆ. ಕೆಲವು ಚಿತ್ರಿಕೆಗಳಿಗೆ ಕತ್ತರಿ ಪ್ರಯೋಗ ಮಾಡಿದ್ದು, ನಟಿ ದೀಪಿಕಾ ಪಡುಕೋಣೆ (Deepika Padukone) ಕುಣಿದ ‘ಬೇಷರಂ ರಂಗ್’ ಹಾಡಿನ ಅಶ್ಲೀಲ ಭಂಗಿಗಳನ್ನು ತಗೆದು ಹಾಕುವಂತೆ ಸೂಚಿಸಿದೆ. ಈ ಹಾಡಿನಲ್ಲಿ ಅಶ್ಲೀಲವಾಗಿ, ಒಳ ಉಡುಪುಗಳು ಕಾಣುವಂತೆ ಮತ್ತು ಕೇಸರಿ ಬಣ್ಣಕ್ಕೆ ಅವಮಾನ ಮಾಡುವಂತಹ ಎಲ್ಲ ಸಂಗತಿಗಳನ್ನೂ ಕಟ್ ಮಾಡಿಸಿದೆ. ಇಷ್ಟೆಲ್ಲ ಮುಗಿದ ನಂತರವೇ ಈ ಚಿತ್ರಕ್ಕೆ ಯು/ ಎ ಪ್ರಮಾಣಪತ್ರವನ್ನು ನೀಡಿದೆ.

    ಅಲ್ಲದೇ, ಸಿನಿಮಾದ ಡೈಲಾಗ್ ಮೇಲೂ ಸೆನ್ಸಾರ್ ಮಂಡಳಿಯು ಅಧಿಕಾರ ಚಲಾಯಿಸಿದ್ದು, ಕೆಲವು ಪದಗಳನ್ನು ಮಾರ್ಪಾಡು ಮಾಡುವಂತೆ ಸೂಚಿಸಿದೆ. ಬಾಲಿವುಡ್ ಮಾಧ್ಯಮಗಳು ವರದಿ ಮಾಡಿದಂತೆ. ‘ಲಂಗ್ಡೆ ಲುಲ್ಲೆ’ ಪದದ ಬದಲು ‘ಟೂಟೆ ಪೂಟೆ’ ಎಂದು ಬದಲಾಯಿಸಲು, 13 ಕಡೆ ‘ಪಿಎಂಓ’ ಪದವನ್ನು ತಗೆದು ಹಾಕುವಂತೆ ಸೂಚಿಸಿದೆ. ‘ಮಿಸಸ್ ಭಾರತ್ ಮಾತಾ’ ಎನ್ನುವ ಮಾತಿನ ಬದಲಾಗಿ ‘ಹಮಾರಿ ಭಾರತ್ ಮಾತಾ’ ಎಂದು ಡಬ್ ಮಾಡುವಂತೆ ಸೂಚಿಸಿದೆ. ಹೀಗೆ ಸಾಕಷ್ಟು ಪದಗಳನ್ನು ಬದಲಿಸಿ, ಬೇರೆ ಪದವನ್ನು ಬಳಸುವಂತೆ ಸೆನ್ಸಾರ್ ಮಂಡಳಿಯು ಸೂಚಿಸಿತ್ತು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ಸೆನ್ಸಾರ್ ಮಂಡಳಿಯು ಏನೇ ಸೂಚಿಸಿದ್ದರು, ಚಿತ್ರತಂಡ ಚಿತ್ರಿಕೆಗಳನ್ನು ಕಟ್ ಮಾಡಿದ್ದರೂ, ಪ್ರತಿಭಟನೆ ಮಾತ್ರ ನಿಂತಿಲ್ಲ. ಇವತ್ತು ಗುಜರಾತ್ ನ ಅಹ್ಮದಾಬಾದ್ ನ ಮಾಲ್ ಒಂದರಲ್ಲಿ ಪಠಾಣ್ ಸಿನಿಮಾದ ಪೋಸ್ಟರ್ ಅಂಟಿಸಲಾಗಿತ್ತು. ಈ ಪೋಸ್ಟರ್ ಅನ್ನು ತಗೆದು ಹಾಕುವಂತೆ ಭಜರಂಗ ದಳದ ಕಾರ್ಯಕರ್ತರು ಥಿಯೇಟರ್ ಮಾಲೀಕರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಗೆ ಪುರಸ್ಕರಿಸದೇ ಹೋದಾಗ, ಚಿತ್ರಮಂದಿರದ ಮೇಲೆ ದಾಳಿ ಮಾಡಿದ ಭಜರಂಗ ದಳದ ಕಾರ್ಯಕರ್ತರು ಅದನ್ನು ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಘಟನೆಯ ಕುರಿತಾಗಿ ಮಾತನಾಡಿರುವ ಥಿಯೇಟರ್ ಮಾಲೀಕರು, ಕೇವಲ ಪೋಸ್ಟರ್ ಮಾತ್ರ ಹರಿದು ಹಾಕದೇ, ಈ ಸಿನಿಮಾವನ್ನು ಪ್ರದರ್ಶನ ಮಾಡಬಾರದು ಎಂದು ಬೆದರಿಕೆ ಕೂಡ ಹಾಕಿದ್ದಾರೆ ಎಂದಿದ್ದಾರೆ. ಪೋಸ್ಟರ್ ಹರಿದು ಹಾಕಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿದೆ. ಇದೇ ಸಂದರ್ಭದಲ್ಲಿ ಮಾತನಾಡಿರುವ ಭಜರಂಗ ದಳದ ಸದಸ್ಯರು, ಯಾವುದೇ ಸಿನಿಮಾ ಮಂದಿರದಲ್ಲೂ ಈ ಸಿನಿಮಾ ಪ್ರದರ್ಶನ ಮಾಡಬಾರದು, ಮಾಡಿದರೆ ದಾಳಿ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪಠಾಣ್’ ಪೋಸ್ಟರ್ ಅಂಟಿಸಿದ್ದ ಚಿತ್ರಮಂದಿರ ಮೇಲೆ ಭಜರಂಗದಳ ದಾಳಿ

    ‘ಪಠಾಣ್’ ಪೋಸ್ಟರ್ ಅಂಟಿಸಿದ್ದ ಚಿತ್ರಮಂದಿರ ಮೇಲೆ ಭಜರಂಗದಳ ದಾಳಿ

    ಬಾಲಿವುಡ್ ನಟ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದ ವಿವಾದ ಮತ್ತೊಂದು ರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಚಿತ್ರವನ್ನು ಬಾಯ್ಕಾಟ್ ಮಾಡಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ನಡೆಸಲಾಗಿತ್ತು. ಕೆಲ ಕಡೆ ಪ್ರತಿಭಟನೆಗಳು ನಡೆದವು. ಸೆನ್ಸಾರ್ ಮಂಡಳಿ ಕೂಡ ಕೆಲ ಭಾಗಗಳನ್ನು ಕತ್ತರಿಸಬೇಕು ಎಂದು ಸಲಹೆ ನೀಡಿತ್ತು. ಈಗ ದಾಳಿಯಂತಹ ಪ್ರಕರಣಗಳು ನಡೆಯುತ್ತಿವೆ.

    ಗುಜರಾತ್ ನ ಅಹ್ಮದಾಬಾದ್ ನ ಮಾಲ್ ಒಂದರಲ್ಲಿ ಪಠಾಣ್ ಸಿನಿಮಾದ ಪೋಸ್ಟರ್ ಅಂಟಿಸಲಾಗಿತ್ತು. ಈ ಪೋಸ್ಟರ್ ಅನ್ನು ತಗೆದು ಹಾಕುವಂತೆ ಭಜರಂಗ ದಳದ ಕಾರ್ಯಕರ್ತರು ಥಿಯೇಟರ್ ಮಾಲೀಕರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಗೆ ಪುರಸ್ಕರಿಸದೇ ಹೋದಾಗ, ಚಿತ್ರಮಂದಿರದ ಮೇಲೆ ದಾಳಿ ಮಾಡಿದ ಭಜರಂಗ ದಳದ ಕಾರ್ಯಕರ್ತರು ಅದನ್ನು ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ಮಿಲ್ಕಿ ಬ್ಯೂಟಿ ತಮನ್ನಾ – ವಿಜಯ್ ವರ್ಮಾ ಲವ್ ಸ್ಟೋರಿ ಶುರುವಾಗಿದ್ದು ಹೇಗೆ?

    ಘಟನೆಯ ಕುರಿತಾಗಿ ಮಾತನಾಡಿರುವ ಥಿಯೇಟರ್ ಮಾಲೀಕರು, ಕೇವಲ ಪೋಸ್ಟರ್ ಮಾತ್ರ ಹರಿದು ಹಾಕದೇ, ಈ ಸಿನಿಮಾವನ್ನು ಪ್ರದರ್ಶನ ಮಾಡಬಾರದು ಎಂದು ಬೆದರಿಕೆ ಕೂಡ ಹಾಕಿದ್ದಾರೆ ಎಂದಿದ್ದಾರೆ. ಪೋಸ್ಟರ್ ಹರಿದು ಹಾಕಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿದೆ. ಇದೇ ಸಂದರ್ಭದಲ್ಲಿ ಮಾತನಾಡಿರುವ ಭಜರಂಗ ದಳದ ಸದಸ್ಯರು, ಯಾವುದೇ ಸಿನಿಮಾ ಮಂದಿರದಲ್ಲೂ ಈ ಸಿನಿಮಾ ಪ್ರದರ್ಶನ ಮಾಡಬಾರದು, ಮಾಡಿದರೆ ದಾಳಿ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

    ಇದೇ ಜನವರಿ 25ರಂದು ವಿಶ್ವದಾದ್ಯಂತ ಪಠಾಣ್ ಸಿನಿಮಾ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಜನವರಿ 10ರಂದು ಚಿತ್ರದ ಟ್ರೈಲರ್ ಕೂಡ ಬಿಡುಗಡೆ ಆಗುತ್ತಿದ್ದು, ಶಾರುಖ್ ಅಂಡ್ ಟೀಮ್ ಚಿತ್ರದ ಭರ್ಜರಿ ಪ್ರಚಾರ ನಡೆಸಿದೆ. ನಿನ್ನೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಶಾರುಖ್ ಅಭಿಮಾನಿಗಳ ಜೊತೆ ಸಂವಾದ ಕೂಡ ಮಾಡಿದ್ದಾರೆ. ವಿವಾದಗಳ ಹೊರತಾಗಿಯೂ ಸಿನಿಮಾ ನೋಡುವಂತೆ ಅವರು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಠಾಣ್ ಡಿಸಾಸ್ಟರ್, ನಿವೃತ್ತಿ ತಗೊಳ್ಳಿ ಅಂದವರಿಗೆ ಶಾರುಖ್ ಕೊಟ್ಟ ಉತ್ತರ ‘ಕೂಲ್ ಕೂಲ್’

    ಪಠಾಣ್ ಡಿಸಾಸ್ಟರ್, ನಿವೃತ್ತಿ ತಗೊಳ್ಳಿ ಅಂದವರಿಗೆ ಶಾರುಖ್ ಕೊಟ್ಟ ಉತ್ತರ ‘ಕೂಲ್ ಕೂಲ್’

    ಹಿಂದಿಯ ಪಠಾಣ್ ಸಿನಿಮಾ ಬಿಡುಗಡೆ ಹೊತ್ತಿನಲ್ಲಿ ನಟ ಶಾರುಖ್ ಖಾನ್ ತಮ್ಮ ಅಭಿಮಾನಿಗಳ ಜೊತೆ ಸೋಷಿಯಲ್ ಮೀಡಿಯಾದಲ್ಲಿ ‘ಆಸ್ಕ್ ಮಿ ಎನಿಥಿಂಗ್’ ಆಯೋಜನೆ ಮಾಡಿದ್ದರು. ಇಲ್ಲಿ ಯಾರು ಬೇಕಾದರೂ ಪ್ರಶ್ನೆಗಳನ್ನು ಮಾಡಬಹುದು ಎಂದು ಹೇಳಿದ್ದರು. ಈ ಹೊತ್ತಿನಲ್ಲಿ ರೌಡಿ ಹೆಸರಿನ ಅಕೌಂಟ್ ನಿಂದ ಒಬ್ಬರು ಪ್ರಶ್ನೆ ಮಾಡಿ, ‘ನಿಮ್ಮ ಪಠಾಣ್ ಸಿನಿಮಾ ಈಗಾಗಲೇ ಡಿಸಾಸ್ಟರ್ ಆಗಿದ್ದು, ನೀವು ನಿವೃತ್ತಿ ತಗೆದುಕೊಳ್ಳಿ’ ಎಂದು ಪ್ರಶ್ನೆ ಮಾಡಿದರು. ಈ ಪ್ರಶ್ನೆಗೆ ಶಾರುಖ್ ಅಷ್ಟೇ ಕೂಲ್ ಆಗಿ ಉತ್ತರಿಸಿದ್ದಾರೆ.

    ಸಾವಿರಾರು ಪ್ರಶ್ನೆಗಳ ಮಧ್ಯೆ ರೌಡಿ ಹೆಸರಿನ ಅಕೌಂಟ್ ನಿಂದ ಬಂದ ಪ್ರಶ್ನೆಗಳನ್ನು ಎತ್ತಿಕೊಂಡ ಶಾರುಖ್ ಖಾನ್, ‘ದೊಡ್ಡವರ ಜೊತೆ ಹಾಗೆಲ್ಲ ಮಾತನಾಡಬಾರದು’ ಎಂದಷ್ಟೇ ಉತ್ತರಿಸಿದರು. ಈ ಉತ್ತರ ನಂತರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯಿತು. ಈ ಪ್ರಶ್ನೋತ್ತರದ ಟ್ವಿಟ್ ಅನ್ನು ಸ್ಕ್ರಿನ್ ಶಾಟ್ ತಗೆದು ಹಲವಾರು ಜನರು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅವಕಾಶ ಸಿಕ್ಕಿದೆ ಎಂದು ಏನೇ ಬೇಕಾದರೂ ಪ್ರಶ್ನೆಗಳನ್ನು ಕೇಳುವುದಲ್ಲ ಎಂದು ಹಲವರು ಸಲಹೆಯನ್ನೂ ನೀಡಿದ್ದಾರೆ. ಇದನ್ನೂ ಓದಿ: ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆ ಡೇಟ್ ಫಿಕ್ಸ್

    ಪಠಾಣ್ ಸಿನಿಮಾ ನಾನಾ ಕಾರಣಗಳಿಂದ ವಿವಾದಕ್ಕೀಡಾಗಿದೆ. ಆದರೂ, ನಿಗದಿತ ಸಮಯದಲ್ಲಿ ಎಲ್ಲವೂ ಆಗಲಿದೆ ಎಂದು ಶಾರುಖ್ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ಸೆನ್ಸಾರ್ ಸಮಸ್ಯೆಯಿಂದಾಗಿ ಚಿತ್ರದ ಟ್ರೈಲರ್ ಹಾಗೂ ಸಿನಿಮಾದ ರಿಲೀಸ್ ದಿನಾಂಕದಲ್ಲಿ ವ್ಯತ್ಯಾಸ ಆಗಬಹುದು ಎಂದು ಹೇಳಲಾಗಿತ್ತು. ಆದರೆ, ಮೊದಲೇ ಫಿಕ್ಸ್ ಮಾಡಿಕೊಂಡಂತೆ ಜನವರಿ 10 ರಂದು ಟ್ರೈಲರ್ ಮತ್ತು ಜನವರಿ 25 ರಂದು ವಿಶ್ವದಾದ್ಯಂತ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ನಿರ್ಮಾಣ ಸಂಸ್ಥೆಯೇ ಘೋಷಿಸಿದೆ.

    ಈ ನಡುವೆ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಸಿನಿಮಾದ ಅಶ್ಲೀಲ ಕಂಟೆಂಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಕ್ಕಳ ಹಿತದೃಷ್ಟಿಯಿಂದ ಅವುಗಳನ್ನು ಸೋಷಿಯಲ್ ಮೀಡಿಯಾದಿಂದ ತೆಗೆದು ಹಾಕುವಂತೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದೆ.

    ಕಲ್ಯಾಣ ಸಮಿತಿಯು ಡಿಜಿಪಿಗೆ ಬರೆದ ಪತ್ರದಲ್ಲಿ, ‘ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಗೀತೆಯಲ್ಲಿ ಅಶ್ಲೀಲ ಅನಿಸುವಂತಹ ಕಂಟೆಂಟ್ ಇದೆ. ಇದು ಬಾಲಾಪರಾಧಿ ಕಾಯಿದೆ ಪ್ರಕಾರ ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹಾಗಾಗಿ ಕೂಡಲೇ ಅವುಗಳನ್ನು ಸಾಮಾಜಿಕ ಮಾಧ್ಯಮದಿಂದ ತೆಗೆಸಬೇಕು’ ಎಂದು ಬರೆಯಲಾಗಿದೆ. ಆ ಪತ್ರಕ್ಕೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಶ್ರೀವಾಸ್ತವ ಮತ್ತು ಹಲವರು ಸಹಿ ಮಾಡಿದ್ದಾರೆ.

    ಈಗಾಗಲೇ ಸೆನ್ಸಾರ್ ಮಂಡಳಿ ಕೂಡ ಕೆಲ ದೃಶ್ಯಗಳನ್ನು ತೋರಿಸಲು ಸಾಧ್ಯವೇ ಇಲ್ಲ ಎಂದೂ, ಅವುಗಳನ್ನು ಸಿನಿಮಾದಿಂದ ತೆಗೆದು ಹಾಕಬೇಕು ಎಂದೂ ನಿರ್ದೇಶನ ನೀಡಿದೆ. ಇನ್ನೂ ಹಲವರು ಈ ಚಿತ್ರಕ್ಕೆ ಪಠಾಣ್ ಎಂದು ಹೆಸರಿಡಲು ಬಿಡುವುದಿಲ್ಲ ಎಂದು ಪ್ರತಿಭಟಿಸುತ್ತಿದ್ದಾರೆ. ಬೇಷರಂ ರಂಗ್ ಕೂಡ ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಿದೆ ಎನ್ನುವ ಆರೋಪವಿದೆ. ಈ ಎಲ್ಲ ಸಂಕಟಗಳ ಮಧ್ಯೆಯೂ ಚಿತ್ರದ ಟ್ರೈಲರ್ ಅನ್ನು ರಿಲೀಸ್ ಮಾಡುವ ಸಂಭ್ರಮದಲ್ಲಿದೆ ಚಿತ್ರತಂಡ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿಗದಿತ ದಿನದಂದೇ ರಿಲೀಸ್ ಆಗಲಿದೆ ‘ಪಠಾಣ್’  ಟ್ರೈಲರ್, ಸಿನಿಮಾ

    ನಿಗದಿತ ದಿನದಂದೇ ರಿಲೀಸ್ ಆಗಲಿದೆ ‘ಪಠಾಣ್’ ಟ್ರೈಲರ್, ಸಿನಿಮಾ

    ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ (Pathan) ಸಿನಿಮಾದ ಟ್ರೈಲರ್ ಹಾಗೂ ಸಿನಿಮಾ ಅಂದುಕೊಂಡ ದಿನದಂದೇ ರಿಲೀಸ್ ಆಗಲಿವೆ. ಸೆನ್ಸಾರ್ ಸಮಸ್ಯೆಯಿಂದಾಗಿ ಚಿತ್ರದ ಟ್ರೈಲರ್ (Trailer) ಹಾಗೂ ಸಿನಿಮಾದ ರಿಲೀಸ್ ದಿನಾಂಕದಲ್ಲಿ ವ್ಯತ್ಯಾಸ ಆಗಬಹುದು ಎಂದು ಹೇಳಲಾಗಿತ್ತು. ಆದರೆ, ಮೊದಲೇ ಫಿಕ್ಸ್ ಮಾಡಿಕೊಂಡಂತೆ ಜನವರಿ 10 ರಂದು ಟ್ರೈಲರ್ ಮತ್ತು ಜನವರಿ 25 ರಂದು ವಿಶ್ವದಾದ್ಯಂತ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ನಿರ್ಮಾಣ ಸಂಸ್ಥೆಯೇ ಘೋಷಿಸಿದೆ.

    ಈ ನಡುವೆ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಸಿನಿಮಾದ ಅಶ್ಲೀಲ ಕಂಟೆಂಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಕ್ಕಳ ಹಿತದೃಷ್ಟಿಯಿಂದ ಅವುಗಳನ್ನು ಸೋಷಿಯಲ್ ಮೀಡಿಯಾದಿಂದ ತೆಗೆದು ಹಾಕುವಂತೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ಕಲ್ಯಾಣ ಸಮಿತಿಯು ಡಿಜಿಪಿಗೆ ಬರೆದ ಪತ್ರದಲ್ಲಿ, ‘ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಗೀತೆಯಲ್ಲಿ ಅಶ್ಲೀಲ ಅನಿಸುವಂತಹ ಕಂಟೆಂಟ್ ಇದೆ. ಇದು ಬಾಲಾಪರಾಧಿ ಕಾಯಿದೆ ಪ್ರಕಾರ ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹಾಗಾಗಿ ಕೂಡಲೇ ಅವುಗಳನ್ನು ಸಾಮಾಜಿಕ ಮಾಧ್ಯಮದಿಂದ ತೆಗೆಸಬೇಕು’ ಎಂದು ಬರೆಯಲಾಗಿದೆ. ಆ ಪತ್ರಕ್ಕೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಶ್ರೀವಾಸ್ತವ ಮತ್ತು ಹಲವರು ಸಹಿ ಮಾಡಿದ್ದಾರೆ.

    ಈಗಾಗಲೇ ಸೆನ್ಸಾರ್ ಮಂಡಳಿ ಕೂಡ ಕೆಲ ದೃಶ್ಯಗಳನ್ನು ತೋರಿಸಲು ಸಾಧ್ಯವೇ ಇಲ್ಲ ಎಂದೂ, ಅವುಗಳನ್ನು ಸಿನಿಮಾದಿಂದ ತೆಗೆದು ಹಾಕಬೇಕು ಎಂದೂ ನಿರ್ದೇಶನ ನೀಡಿದೆ. ಇನ್ನೂ ಹಲವರು ಈ ಚಿತ್ರಕ್ಕೆ ಪಠಾಣ್ ಎಂದು ಹೆಸರಿಡಲು ಬಿಡುವುದಿಲ್ಲ ಎಂದು ಪ್ರತಿಭಟಿಸುತ್ತಿದ್ದಾರೆ. ಬೇಷರಂ ರಂಗ್ ಕೂಡ ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಿದೆ ಎನ್ನುವ ಆರೋಪವಿದೆ. ಈ ಎಲ್ಲ ಸಂಕಟಗಳ ಮಧ್ಯೆಯೂ ಚಿತ್ರದ ಟ್ರೈಲರ್ ಅನ್ನು ರಿಲೀಸ್ ಮಾಡುವ ಸಂಭ್ರಮದಲ್ಲಿದೆ ಚಿತ್ರತಂಡ.

    Live Tv
    [brid partner=56869869 player=32851 video=960834 autoplay=true]

  • ‘ಪಠಾಣ್’ ಸಿನಿಮಾದ ಅಶ್ಲೀಲ ಕಂಟೆಂಟ್ ತೆಗೆಯುವಂತೆ ಡಿಜಿಪಿಗೆ ಪತ್ರ

    ‘ಪಠಾಣ್’ ಸಿನಿಮಾದ ಅಶ್ಲೀಲ ಕಂಟೆಂಟ್ ತೆಗೆಯುವಂತೆ ಡಿಜಿಪಿಗೆ ಪತ್ರ

    ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ‘ಪಠಾಣ್’ ಸಿನಿಮಾಗೆ ಮತ್ತೊಂದು ಸಂಕಟ ಎದುರಾಗಿದೆ. ಈ ಸಿನಿಮಾದ ಅಶ್ಲೀಲ ಕಂಟೆಂಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಕ್ಕಳ ಹಿತದೃಷ್ಟಿಯಿಂದ ಅವುಗಳನ್ನು ಸೋಷಿಯಲ್ ಮೀಡಿಯಾದಿಂದ ತೆಗೆದು ಹಾಕುವಂತೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದೆ.

    ಕಲ್ಯಾಣ ಸಮಿತಿಯು ಡಿಜಿಪಿಗೆ ಬರೆದ ಪತ್ರದಲ್ಲಿ, ಪಠಾಣ್ ಸಿನಿಮಾದ ಬೇಷರಂ ರಂಗ್ ಗೀತೆಯಲ್ಲಿ ಅಶ್ಲೀಲ ಅನಿಸುವಂತಹ ಕಂಟೆಂಟ್ ಇದೆ. ಇದು ಬಾಲಾಪರಾಧಿ ಕಾಯಿದೆ ಪ್ರಕಾರ ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹಾಗಾಗಿ ಕೂಡಲೇ ಅವುಗಳನ್ನು ಸಾಮಾಜಿಕ ಮಾಧ್ಯಮದಿಂದ ತೆಗೆಸಬೇಕು’ ಎಂದು ಬರೆಯಲಾಗಿದೆ. ಆ ಪತ್ರಕ್ಕೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಶ್ರೀವಾಸ್ತವ ಮತ್ತು ಹಲವರು ಸಹಿ ಮಾಡಿದ್ದಾರೆ.

    ಈಗಾಗಲೇ ಸೆನ್ಸಾರ್ ಮಂಡಳಿ ಕೂಡ ಕೆಲ ದೃಶ್ಯಗಳನ್ನು ತೋರಿಸಲು ಸಾಧ್ಯವೇ ಇಲ್ಲ ಎಂದು, ಅವುಗಳನ್ನು ಸಿನಿಮಾದಿಂದ ತಗೆದು ಹಾಕಬೇಕು ಎಂದು ನಿರ್ದೇಶನ ನೀಡಿದೆ. ಇನ್ನೂ ಹಲವರು ಈ ಚಿತ್ರಕ್ಕೆ ಪಠಾಣ್ ಎಂದು ಹೆಸರಿಡಲು ಬಿಡುವುದಿಲ್ಲ ಎಂದು ಪ್ರತಿಭಟಿಸುತ್ತಿದ್ದಾರೆ. ಬೇಷರಂ ರಂಗ್ ಕೂಡ ಹಿಂದೂ ಭಾವನೆಗಳಿಗೆ ಧಕ್ಕೆ ಮಾಡುತ್ತಿದೆ. ಹಾಗಾಗಿ ಈ ಹಾಡನ್ನೂ ಬಿಡುವುದಿಲ್ಲ ಎಂದು ಕೆಲವರು ಹೇಳಿದ್ದಾರೆ. ಚಿತ್ರಕ್ಕೆ ಒಂದರ ಮೇಲೊಂದು ಸಂಕಟ ಎದುರಾಗುತ್ತಲೇ ಇವೆ.

    ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗಾಗಲೇ ಚಿತ್ರದ ಟ್ರೈಲರ್ ರಿಲೀಸ್ ಆಗಬೇಕಿತ್ತು. ಸೆನ್ಸಾರ್ ಹಲವು ಸೂಚನೆಗಳನ್ನು ನೀಡಿದ್ದರಿಂದ ಆ ಕಾರ್ಯದಲ್ಲಿ ಚಿತ್ರತಂಡ ತೊಡಗಿದೆ. ಅಲ್ಲದೇ, ಶೀರ್ಷಿಕೆ ಸೇರಿದಂತೆ ಹಲವು ವಿಚಾರಗಳನ್ನು ಸಿನಿಮಾದಿಂದ ಕೈ ಬಿಡುವಂತೆ ನಿರಂತರ ಪ್ರತಿಭಟನೆಗಳು ನಡೆಯುತ್ತಿರುವುದರಿಂದ ಚಿತ್ರತಂಡಕ್ಕೆ ಬಿಡುಗಡೆಗಿಂತ ಇಂತಹ ವಿಷಯಗಳೇ ತಲೆಬಿಸಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಕದ್ದ ಹಾಡು: ಪಾಕಿಸ್ತಾನಿ ಗಾಯಕನ ವಿಡಿಯೋ

    ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಕದ್ದ ಹಾಡು: ಪಾಕಿಸ್ತಾನಿ ಗಾಯಕನ ವಿಡಿಯೋ

    ಶಾರೂಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ (Pathan) ಸಿನಿಮಾ ‘ಬೇಷರಂ ರಂಗ್’ (Besharam Rang) ಹಾಡಿನ ಕಾರಣಕ್ಕಾಗಿಯೇ ಸಾಕಷ್ಟು ವಿವಾದಕ್ಕೀಡಾಗಿತ್ತು. ಈ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಧರಿಸಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಕೇಸರಿ ಬಣ್ಣಕ್ಕೆ ಅವಮಾನಿಸಿದ್ದಾರೆ ಎನ್ನುವುದು ವಿವಾದಕ್ಕೆ ಮತ್ತೊಂದು ಕಾರಣವಾಗಿತ್ತು. ಹಾಗಾಗಿ ಈ ಸಿನಿಮಾ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕೇವಲ ಸೋಷಿಯಲ್ ಮೀಡಿಯಾದಲ್ಲಿ ಮಾತ್ರವಲ್ಲ, ನಾನಾ ಕಡೆ ಪ್ರತಿಭಟನೆಗಳು ಕೂಡ ನಡೆದಿವು.

    ಈಗ ಅದೇ ಹಾಡಿನ ವಿಚಾರವಾಗಿ ಮತ್ತೊಂದು ವಿವಾದ ಕೇಳಿ ಬಂದಿದೆ. ಪಾಕಿಸ್ತಾನಿಯ ಖ್ಯಾತ ಗಾಯಕ ಸಜ್ಜದ್ ಅಲಿ (Sajjad Ali) ತಮ್ಮ ಹಳೆಯ ಹಾಡೊಂದನ್ನು ಪೋಸ್ಟ್ ಮಾಡಿದ್ದಾರೆ. ಈ ಹಾಡನ್ನು ತಾವು ಇಪ್ಪತ್ತು ವರ್ಷಗಳ ಹಿಂದೆ ಹಾಡಿದ್ದು, ಇದೀಗ ಯಾವುದೋ ಹಾಡನ್ನು ಕೇಳಿದೆ. ಅದು ಇದೇ ರೀತಿ ಇತ್ತು ಎಂದು ಅವರು ಬರೆದುಕೊಂಡಿದ್ದಾರೆ. ಆ ಹಾಡನ್ನು ಕೇಳಿದ ಪ್ರೇಕ್ಷಕರು ಪಠಾಣ್ ಸಿನಿಮಾದಲ್ಲಿ ಇದನ್ನು ಕಾಪಿ ಮಾಡಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿಐದು ವರ್ಷದಲ್ಲಿ ಮೂರು ಸಾವಿರ ಕೋಟಿ ಹೂಡಿಕೆ: ಹೊಂಬಾಳೆ ಫಿಲ್ಮ್ಸ್ ಗೆ ಜೈ ಎಂದ ಚಿತ್ರೋದ್ಯಮ

    ಗಾಯಕ ಸಜ್ಜದ್ ಅಲಿ ಹಾಕಿದ ವಿಡಿಯೋಗೆ ಭಾರೀ ಪ್ರತಿಕ್ರಿಯೆಗಳು ಬಂದಿದ್ದು, ನೂರಾರು ಜನರು ತಮ್ಮ ಅಭಿಪ್ರಾಯಗಳನ್ನು ಬರೆದಿಕೊಂಡಿದ್ದಾರೆ. ಪಠಾಣ್ ಸಿನಿಮಾದಲ್ಲಿ ಇದನ್ನು ಕದಿಯಲಾಗಿದೆ ಎಂದು ಬೇಷರಂ ರಂಗ್ ಹಾಡಿನ ಬಗ್ಗೆ ಉಲ್ಲೇಖ ಮಾಡಿದ್ದಾರೆ. ನೀವು ಪರೋಕ್ಷವಾಗಿ ಹೀಗೆ ಹೇಳುವ ಬದಲು ನೇರವಾಗಿ ಕದ್ದಿದ್ದಾರೆ ಎಂದು ಹೇಳಬಹುದಲ್ಲ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಗಳ ಬಿಕಿನಿ ಫೋಟೋ ಕಳುಹಿಸಿ ಬೆದರಿಕೆ ಹಾಕುತ್ತಿದ್ದಾರೆ ಎಂದ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ

    ಮಗಳ ಬಿಕಿನಿ ಫೋಟೋ ಕಳುಹಿಸಿ ಬೆದರಿಕೆ ಹಾಕುತ್ತಿದ್ದಾರೆ ಎಂದ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ

    ಮಗೆ ಶಾರುಖ್ ಖಾನ್ ಅಭಿಮಾನಿಗಳು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಮೊನ್ನೆಯಷ್ಟೇ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಆರೋಪ ಮಾಡಿದ್ದರು. ಇದೀಗ ಅವರು ತಮಗೆ ಜೀವ ಬೆದರಿಕೆಯನ್ನೂ ಹಾಕುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ತಮ್ಮ ಮಗಳ ಬಿಕಿನಿ ಫೋಟೋ ಕಳುಹಿಸುವುದರ ಜೊತೆಗೆ ಜೀವ ಬೆದರಿಕೆಯ ಬರಹಗಳನ್ನು ಬರೆಯುತ್ತಿದ್ದಾರೆ ಎಂದು ಅವರು ಕೆಲವು ಸ್ಕ್ರೀನ್ ಶಾಟ್ ಹಾಕಿದ್ದಾರೆ.

    ಕೆಲ ಕಿಡಿಗೇಡಿಗಳು ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿರುವುದಕ್ಕೆ ಕಾರಣ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾಗೆ ಅವರು ಕೊಟ್ಟ ಪ್ರತಿಕ್ರಿಯೆ ಕಾರಣವೆಂದು ಹೇಳಲಾಗುತ್ತಿದೆ. ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದರು ಎನ್ನುವ ಕಾರಣಕ್ಕಾಗಿ ದೊಡ್ಡ ಸುದ್ದಿ ಆಗಿತ್ತು. ಹಿಂದೂಪರ ಸಂಘಟನೆಗಳು ಪ್ರತಿಭಟಿಸಿದವು. ಹಲವರು ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿದರು. ಅದೇ ರೀತಿಯ ವಿವೇಕ್ ಅಗ್ನಿಹೋತ್ರಿ ಕೂಡ ಮಾತನಾಡಿದ್ದಾರೆ.

    ಪಠಾಣ್ ಸಿನಿಮಾದಲ್ಲಿ ಕೇಸರಿ ಬಿಕಿನಿ ಮತ್ತು ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎನ್ನುವ ಕಾರಣಕ್ಕಾಗಿ ವಿವೇಕ್ ಅಗ್ನಿಹೋತ್ರಿ ಬಾಲಿವುಡ್ ಸಿನಿಮಾ ರಂಗವನ್ನು ಜರಿದಿದ್ದರು. ಅದರಲ್ಲೂ ಶಾರುಖ್ ಖಾನ್ ಅವರ ಈ ನಡೆಯನ್ನು ಖಂಡಿಸಿದ್ದರು. ಯಶಸ್ಸಿಗಾಗಿ ಇಂತಹ ಕೀಳುಮಟ್ಟಕ್ಕೆ ಇಳಿಯದಿರಲಿ ಎಂದು ಪರೋಕ್ಷವಾಗಿ ದೀಪಿಕಾ ಪಡುಕೋಣೆ ಅವರಿಗೂ ಚಾಟಿ ಬೀಸಿದ್ದರು. ವಿವೇಕ್ ಮಾತ್ರ ಹಲವರ ಕಂಗೆಣ್ಣಿಗೂ ಗುರಿಯಾಗಿತ್ತು. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    kashmir

    ವಿವೇಕ್ ಅಗ್ನಿಹೋತ್ರಿ ಅವರು ಪಠಾಣ್ ಚಿತ್ರಕ್ಕೆ ಮತ್ತು ಶಾರುಖ್ ಖಾನ್ ವಿರುದ್ಧ ಮಾತನಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಶಾರುಖ್ ಖಾನ್ ಹೆಸರಿನಲ್ಲಿ ಕಿಡಿಗೇಡಿಗಳು ವಿವೇಕ್ ಅವರಿಗೆ ಅಶ್ಲೀಲ ಸಂದೇಶವನ್ನು ಕಳುಹಿಸುತ್ತಿದ್ದಾರಂತೆ. ಮಸೆಂಜರ್ ಸೇರಿದಂತೆ ಹಲವು ಕಡೆ ಶಾರುಖ್ ಖಾನ್ ಫೋಟೋ ಇರುವಂತಹ ಫೇಕ್ ಐಡಿಗಳಿಂದ ನಿಂದನೆಯ ಮತ್ತು ಕೆಟ್ಟ ಬೈಗುಳ ಇರುವಂತಹ ಮಸೇಜ್ ಗಳನ್ನು ಕಳುಹಿಸುತ್ತಿದ್ದಾರೆ. ಈ ವಿಷಯವನ್ನು ಸ್ವತಃ ವಿವೇಕ್ ಅವರೇ ತಮ್ಮ ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

    ವಿವೇಕ್ ಅವರಿಗೆ ರಾಶಿ ರಾಶಿ ಅಶ್ಲೀಲ ಮಸೇಜ್ ಗಳು ಬರುತ್ತಿವೆಯಂತೆ. ಇದೇ ರೀತಿ ಮುಂದುವರೆದರೆ ಸೈಬರ್ ಠಾಣೆಗೆ ದೂರು ಕೂಡ ನೀಡುತ್ತಾರಂತೆ. ತಾವು ಯಾವುದೇ ರೀತಿಯಲ್ಲಿ ಯಾರನ್ನೂ ನಿಂದಿಸಿಲ್ಲ. ತಪ್ಪನ್ನು ಖಂಡಿಸಿದ್ದೇನೆ. ಅದಕ್ಕಾಗಿ ಈ ರೀತಿ ಶಿಕ್ಷೆ ಎಂದು ಅವರು ಬರೆದುಕೊಂಡಿದ್ದಾರೆ. ಈ ನಡೆಯನ್ನು ಬಲವಾಗಿ ಖಂಡಿಸುವುದಾಗಿಯೂ ಅವರು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿವೇಕ್ ಅಗ್ನಿಹೋತ್ರಿಗೆ ಅಶ್ಲೀಲ ಮೆಸೇಜ್: ಶಾರುಖ್ ಖಾನ್ ಹೆಸರಿನ ಕಿಡಿಗೇಡಿಗಳಿಂದ ಕೃತ್ಯ

    ವಿವೇಕ್ ಅಗ್ನಿಹೋತ್ರಿಗೆ ಅಶ್ಲೀಲ ಮೆಸೇಜ್: ಶಾರುಖ್ ಖಾನ್ ಹೆಸರಿನ ಕಿಡಿಗೇಡಿಗಳಿಂದ ಕೃತ್ಯ

    ದಿ ಕಾಶ್ಮೀರ ಫೈಲ್ಸ್ (The Kashmir Files) ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಗೆ ಕೆಲ ಕಿಡಿಗೇಡಿಗಳು ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದಾರಂತೆ. ಇಂತಹ ಮಸೇಜ್ ಬರಲು ಕಾರಣ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾಗೆ ಅವರು ಕೊಟ್ಟ ಪ್ರತಿಕ್ರಿಯೆ ಕಾರಣವೆಂದು ಹೇಳಲಾಗುತ್ತಿದೆ. ಪಠಾಣ್ (Pathan) ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದರು ಎನ್ನುವ ಕಾರಣಕ್ಕಾಗಿ ದೊಡ್ಡ ಸುದ್ದಿ ಆಗಿತ್ತು. ಹಿಂದೂಪರ ಸಂಘಟನೆಗಳು ಪ್ರತಿಭಟಿಸಿದವು. ಹಲವರು ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿದರು. ಅದೇ ರೀತಿಯ ವಿವೇಕ್ ಅಗ್ನಿಹೋತ್ರಿ ಕೂಡ ಮಾತನಾಡಿದ್ದಾರೆ.

    ಪಠಾಣ್ ಸಿನಿಮಾದಲ್ಲಿ ಕೇಸರಿ ಬಿಕಿನಿ ಮತ್ತು ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎನ್ನುವ ಕಾರಣಕ್ಕಾಗಿ ವಿವೇಕ್ ಅಗ್ನಿಹೋತ್ರಿ ಬಾಲಿವುಡ್ ಸಿನಿಮಾ ರಂಗವನ್ನು ಜರಿದಿದ್ದರು. ಅದರಲ್ಲೂ ಶಾರುಖ್ ಖಾನ್ (Shah Rukh Khan) ಅವರ ಈ ನಡೆಯನ್ನು ಖಂಡಿಸಿದ್ದರು. ಯಶಸ್ಸಿಗಾಗಿ ಇಂತಹ ಕೀಳುಮಟ್ಟಕ್ಕೆ ಇಳಿಯದಿರಲಿ ಎಂದು ಪರೋಕ್ಷವಾಗಿ ದೀಪಿಕಾ ಪಡುಕೋಣೆ ಅವರಿಗೂ ಚಾಟಿ ಬೀಸಿದ್ದರು. ವಿವೇಕ್ ಮಾತ್ರ ಹಲವರ ಕಂಗೆಣ್ಣಿಗೂ ಗುರಿಯಾಗಿತ್ತು. ಇದನ್ನೂ ಓದಿ: ‘ಬಿಗ್ ಬಾಸ್’ ಫಿನಾಲೆ ವೇದಿಕೆಯ ಮೇಲೆ ಕಣ್ಣೀರಿಟ್ಟಿ ಸುದೀಪ್

    ವಿವೇಕ್ ಅಗ್ನಿಹೋತ್ರಿ ಅವರು ಪಠಾಣ್ ಚಿತ್ರಕ್ಕೆ ಮತ್ತು ಶಾರುಖ್ ಖಾನ್ ವಿರುದ್ಧ ಮಾತನಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಶಾರುಖ್ ಖಾನ್ ಹೆಸರಿನಲ್ಲಿ ಕಿಡಿಗೇಡಿಗಳು ವಿವೇಕ್ ಅವರಿಗೆ ಅಶ್ಲೀಲ ಸಂದೇಶವನ್ನು ಕಳುಹಿಸುತ್ತಿದ್ದಾರಂತೆ. ಮಸೆಂಜರ್ ಸೇರಿದಂತೆ ಹಲವು ಕಡೆ ಶಾರುಖ್ ಖಾನ್ ಫೋಟೋ ಇರುವಂತಹ ಫೇಕ್ ಐಡಿಗಳಿಂದ ನಿಂದನೆಯ ಮತ್ತು ಕೆಟ್ಟ ಬೈಗುಳ ಇರುವಂತಹ ಮಸೇಜ್ ಗಳನ್ನು ಕಳುಹಿಸುತ್ತಿದ್ದಾರೆ. ಈ ವಿಷಯವನ್ನು ಸ್ವತಃ ವಿವೇಕ್ ಅವರೇ ತಮ್ಮ ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

    ವಿವೇಕ್ ಅವರಿಗೆ ರಾಶಿ ರಾಶಿ ಅಶ್ಲೀಲ ಮಸೇಜ್ ಗಳು ಬರುತ್ತಿವೆಯಂತೆ. ಇದೇ ರೀತಿ ಮುಂದುವರೆದರೆ ಸೈಬರ್ ಠಾಣೆಗೆ ದೂರು ಕೂಡ ನೀಡುತ್ತಾರಂತೆ. ತಾವು ಯಾವುದೇ ರೀತಿಯಲ್ಲಿ ಯಾರನ್ನೂ ನಿಂದಿಸಿಲ್ಲ. ತಪ್ಪನ್ನು ಖಂಡಿಸಿದ್ದೇನೆ. ಅದಕ್ಕಾಗಿ ಈ ರೀತಿ ಶಿಕ್ಷೆ ಎಂದು ಅವರು ಬರೆದುಕೊಂಡಿದ್ದಾರೆ. ಈ ನಡೆಯನ್ನು ಬಲವಾಗಿ ಖಂಡಿಸುವುದಾಗಿಯೂ ಅವರು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]