Tag: Pathan

  • ವಿದೇಶದಲ್ಲಿ ಕ್ರೇಜ್ ಕ್ರಿಯೇಟ್ ಮಾಡಿದ ಶಾರುಖ್ ಖಾನ್ ‘ಪಠಾಣ್’ ಸಿನಿಮಾ

    ವಿದೇಶದಲ್ಲಿ ಕ್ರೇಜ್ ಕ್ರಿಯೇಟ್ ಮಾಡಿದ ಶಾರುಖ್ ಖಾನ್ ‘ಪಠಾಣ್’ ಸಿನಿಮಾ

    ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಕಾಂಬಿನೇಷನ್ ನ ಪಠಾಣ್ ಸಿನಿಮಾ ಭಾರತದಲ್ಲಿ ವಿವಾದಕ್ಕೆ ತುತ್ತಾದರೆ ವಿದೇಶದಲ್ಲಿ ಭರ್ಜರಿ ಓಪನಿಂಗ್ ಪಡೆದುಕೊಳ್ಳುವ ಭರವಸೆ ಸಿಕ್ಕಿದೆ. ಜರ್ಮನ್ ಸೇರಿದಂತೆ ಹಲವು ದೇಶಗಳಲ್ಲಿ ಈಗಾಗಲೇ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ಕಲ್ಪಿಸಲಾಗಿದ್ದು, ಜರ್ಮನ್ ನಲ್ಲಿ ವಾರಂತ್ಯದ ಬಹುತೇಕ ಟಿಕೆಟ್ ಖರೀದಿಯಾಗಿವೆ. ಸಿನಿಮಾ ಬಿಡುಗಡೆಗೆ ಇನ್ನೂ 27 ದಿನಗಳು ಬಾಕಿ ಇದ್ದರೂ ಕ್ರೇಜ್ ಮಾತ್ರ ಬಿಡುಗಡೆಯ ದಿನದಂತೆ ಇದೆ.

    ‘ಪಠಾಣ್’ ಸಿನಿಮಾದ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದರೂ ಮತ್ತು ಕೇಸರಿ ಬಣ್ಣಕ್ಕೆ ಅವಮಾನಿಸಲಾಗಿದೆ ಎನ್ನುವ ಕಾರಣಕ್ಕಾಗಿ ಚಿತ್ರವನ್ನು ಬಾಯ್ಕಾಟ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಹೋರಾಟ ಮಾಡಲಾಯಿತು. ಅಲ್ಲದೇ ಕೆಲವರು ಬೀದಿಗೆ ಇಳಿದು ಕೂಡ ಪ್ರತಿಭಟನೆ ಮಾಡಿದರು. ಕೆಲ ರಾಜ್ಯಗಳಲ್ಲಿ ಹೋರಾಟ ಇನ್ನೂ ತೀವ್ರವಾಗಿತ್ತು. ಆದರೆ, ವಿದೇಶದಲ್ಲಿ ಇದ್ಯಾವುದೂ ಟೆನ್ಷನ್ ಇಲ್ಲದೇ ಚಿತ್ರ ರಿಲೀಸ್ ಗೆ ರೆಡಿಯಾಗುತ್ತಿದೆ. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ ಮಾಡಲು ಲಂಡನ್‌ಗೆ ಹಾರಿದ ರಮ್ಯಾ- ಅಮೃತಾ

    ಈಗಷ್ಟೇ ಪಠಾಣ್ ಸಿನಿಮಾ ಸೆನ್ಸಾರ್ ಅಂಗಳದಲ್ಲಿ ಇತ್ತು. ಕೆಲ ಬದಲಾವಣೆಗಳನ್ನು ಸೂಚಿಸಿರುವ ಕಾರಣದಿಂದಾಗಿ ಇನ್ನೂ ಅದಕ್ಕೆ ಸೆನ್ಸಾರ್ ಪ್ರಮಾಣ ಪತ್ರ ಸಿಕ್ಕಿಲ್ಲ. ಸೆನ್ಸಾರ್ ಮಂಡಳಿಯವರು ಹೇಳಿದ ಬದಲಾವಣೆಗಳನ್ನು ಮಾಡಿ, ಮತ್ತೆ ಸಿನಿಮಾ ತೋರಿಸಬೇಕಿದೆ. ಹೀಗಾಗಿ ಅನೌನ್ಸ್ ಮಾಡಿರುವ ದಿನಾಂಕದಂದು ಸಿನಿಮಾ ರಿಲೀಸ್ ಆಗುತ್ತದಾ ಎನ್ನುವ ಪ್ರಶ್ನೆ ಕೂಡ ಉದ್ಭವಿಸಿದೆ. ಆದರೂ, ವಿದೇಶಗಳಲ್ಲಿ ಚಿತ್ರದ ಟಿಕೆಟ್ ಅನ್ನು ನಿನ್ನೆಯಿಂದಲೇ ಮಾರಾಟ ಮಾಡಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • `ಪಠಾಣ್’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಶಾಕ್

    `ಪಠಾಣ್’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಶಾಕ್

    ಶಾರುಖ್ ಖಾನ್ (Sharukh Khan) ನಟನೆಯ `ಪಠಾಣ್’ (Pathan) ಸಿನಿಮಾ ಒಂದಲ್ಲಾ ಒಂದು ವಿಚಾರವಾಗಿ ಸಂಕಷ್ಟ ಎದುರಿಸುತ್ತಲೇ ಬಂದಿದೆ. ಇತ್ತೀಚೆಗಷ್ಟೇ `ಬೇಷರಂ ರಂಗ್’ ಹಾಡಿಗೆ ಹಿಂದೂಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದೀಗ ಈ ಬೆನ್ನಲ್ಲೇ `ಬೇಷರಂ ರಂಗ್’ (Beshramrang) ಹಾಡಿನ ಜೊತೆ ಚಿತ್ರದಲ್ಲಿನ ಅನೇಕ ದೃಶ್ಯಗಳನ್ನ ಬದಲಾವಣೆ ಮಾಡುವಂತೆ ಸೆನ್ಸಾರ್ ಮಂಡಳಿ ಸೂಚಿಸಿದೆ.

    ಶಾರುಖ್, ದೀಪಿಕಾ ಪಡುಕೋಣೆ(Deepika Padukone) ನಟನೆಯ `ಪಠಾಣ್’ (Pathan) ಚಿತ್ರ ರಿಲೀಸ್‌ಗೂ ಮುನ್ನವೇ ವಿವಾದಗಳಿಂದಲೇ ಸುದ್ದಿಯಾಗುತ್ತಿದೆ. ಚಿತ್ರದಲ್ಲಿನ ದೀಪಿಕಾ ಕೇಸರಿ ಬಿಕಿನಿ ವಿಚಾರಕ್ಕೆ ಅನೇಕರು ವಿರೋಧಿಸಿದ್ದಾರೆ. ದೀಪಿಕಾ ಅವರ ಬೋಲ್ಡ್ ಲುಕ್ ನೋಡಿದವರೆಲ್ಲಾ, ಇಷ್ಟೊಂದು ಎಕ್ಸ್ಪೋಸ್ ಬೇಕಿರಲಿಲ್ಲ ಎಂದು ತಕರಾರು ತೆಗೆದಿದ್ದರು. ಈ ಹಿನ್ನೆಲೆಯಲ್ಲಿ ಸೆನ್ಸಾರ್ ಮಂಡಳಿ ಕೂಡ ಪಠಾಣ್ ಚಿತ್ರತಂಡಕ್ಕೆ ಶಾಕ್ ಕೊಟ್ಟಿದೆ. `ಬೇಷರಂ ರಂಗ್’ ಹಾಡಿನ ಜೊತೆ ಚಿತ್ರದಲ್ಲಿನ ಹಲವು ದೃಶ್ಯಗಳನ್ನ ತೆಗೆಯಲು ಸೆನ್ಸಾರ್ ಮಂಡಳಿಯ ಅಧ್ಯಕ್ಷರು ಪ್ರಸೂನ್ ಜೋಶಿ ಹೇಳಿದ್ದಾರೆ. ಸಿನಿಮಾ ರಿಲೀಸ್‌ಗೂ ಮೊದಲೇ ಕಟ್ಟುನಿಟ್ಟಾಗಿ ಚಿತ್ರತಂಡಕ್ಕೆ ಸೂಚನೆ ಕೊಟ್ಟಿದ್ದಾರೆ. ಇದನ್ನೂ ಓದಿ: ಜಮಾಲಿಗುಡ್ಡದ ಕಥೆ ಹೇಳಲು ಡಾಲಿ, ಅದಿತಿ ರೆಡಿ

    ಸಿದ್ಧಾರ್ಥ್ ಆನಂದ್ (Siddarth) ನಿರ್ದೇಶನದ `ಪಠಾಣ್’ ಜನವರಿ 25ರಂದು ತೆರೆಗೆ ಬರಲಿದೆ. ರಿಲೀಸ್‌ಗೂ ಮುನ್ನ ಚಿತ್ರದಲ್ಲಿ ಬದಲಾವಣೆ ಆಗದೇ ಇದ್ದಲ್ಲಿ ಸಿನಿಮಾಗೆ ಸೆನ್ಸಾರ್ ಪತ್ರ ಕೂಡ ಸಿಗುವುದು ತಡವಾಗಲಿದೆ.

    ಇನ್ನೂ ಶಾರುಖ್ ಖಾನ್ ಅವರ ಕಮ್‌ಬ್ಯಾಕ್ ಚಿತ್ರವಾಗಿರುವ ಕಾರಣ, ಚಿತ್ರದ ಬಗ್ಗೆ ಫ್ಯಾನ್ಸ್ ಸಖತ್ ನಿರೀಕ್ಷೆ ಇಟ್ಟಿದ್ದಾರೆ. ಜಾನ್ ಅಬ್ರಾಹಂ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಾರುಖ್ ಖಾನ್ ಗೆ ಅಂತಿಮ ಸಂಸ್ಕಾರ ಮಾಡಿದ ಅಯೋಧ್ಯೆಯ ಸಾಧು

    ಶಾರುಖ್ ಖಾನ್ ಗೆ ಅಂತಿಮ ಸಂಸ್ಕಾರ ಮಾಡಿದ ಅಯೋಧ್ಯೆಯ ಸಾಧು

    ಬಾಲಿವುಡ್ ನಟ ಶಾರುಖ್ ಖಾನ್ (Shahrukh Khan) ಅವರ 13ನೇ ದಿನದ ಕರ್ಮಗಳನ್ನು ರಸ್ತೆ ಮಧ್ಯೆದಲ್ಲೇ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ ಅಯೋಧ್ಯೆಯ (Ayodhya) ತಪಸ್ವಿ ಜಗದ್ಗುರು ಪರಮಹಂಸ ಆಚಾರ್ಯರು (Paramahansa Acharya). ಪಠಾಣ್ ಸಿನಿಮಾದ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರಿಗೆ ಕೇಸರಿ ಬಿಕಿನಿ ಹಾಕಿಸಿದ್ದಲ್ಲದೇ, ಹಿಂದೂಗಳಿಗೆ ಅವಮಾನ ಮಾಡುವಂತಹ ಸಾಲುಗಳನ್ನು ಈ ಹಾಡಿನಲ್ಲಿ ಬಳಸಿದ್ದಾರೆ ಎನ್ನುವ ಕಾರಣಕ್ಕಾಗಿ ಹಿಂದೂ ಸಂಪ್ರದಾಯದಂತೆ ಶಾರುಖ್ ತಿಥಿ ಮಾಡಲಾಗಿದೆ.

    ಈ ಹಿಂದೆ ಪಠಾಣ್ (Pathan) ಸಿನಿಮಾವನ್ನು ಬ್ಯಾನ್ ಮಾಡುವಂತೆ ಒತ್ತಾಯಿಸಿ ಇದೇ ಅಯೋಧ್ಯೆಯ ತಪಸ್ವಿ ಶಿಬಿರದ ಜಗದ್ಗುರುಗಳು ಪ್ರತಿಭಟನೆ ಕೂಡ ಮಾಡಿದ್ದಾರೆ. ಈ ಸಿನಿಮಾವನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡದಂತೆ ಒತ್ತಡ ಹೇರಿದ್ದರು. ಇಂದು ಮಡಿಕೆಗೆ ಶಾರುಖ್ ಖಾನ್ ಫೋಟೋ ಅಂಟಿಸಿ, ಅದನ್ನು ರಸ್ತೆಯಲ್ಲೇ ಇಟ್ಟು 13 ದಿನದ ಕರ್ಮಗಳನ್ನು ಮಾಡಿ ತಮ್ಮ ಪ್ರತಿಭಟನೆಯನ್ನು ವ್ಯಕ್ತ ಪಡಿಸಿದ್ದಾರೆ. ಸಂಸ್ಕಾರದ ವೇಳೆ ಹಿಂದೂ ಮಂತ್ರಗಳನ್ನೂ ಪಠಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುವ ಯುವಜನೋತ್ಸವಕ್ಕೆ ಮೋದಿ ಜೊತೆ ಅಕ್ಷಯ್ ಕುಮಾರ್‌ಗೆ ಆಹ್ವಾನ

    ಅಯೋಧ್ಯೆ ಸಾಧುಗಳು ಈ ಕ್ರಿಯೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ನಡೆಯ ಬಗ್ಗೆ ಪರ ವಿರೋಧದ ಚರ್ಚೆಗಳು ಕೂಡ ಶುರುವಾಗಿದೆ. ಜೀವಂತವಾಗಿರುವಾಗ ತಿಥಿ ಮಾಡುವಂತಹ ಸಂಪ್ರದಾಯ ಹಿಂದೂಗಳಲ್ಲಿ ಇಲ್ಲ. ಹೀಗಾಗಿ ಗೊತ್ತಿರುವ ಸಾಧುಗಳೇ ಹೀಗೆ ಮಾಡಬಾರದಿತ್ತು ಎಂದು ಕೆಲವರು ಕಾಮೆಂಟ್ ಮಾಡಿದ್ದರೆ, ನಮ್ಮ ಪಾಲಿಗೆ ಶಾರುಖ್ ಸತ್ತಿದ್ದಾನೆ ಎಂದು ಇನ್ನೂ ಕೆಲವರು ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೇಸರಿ ಉಡುಪು ಧರಿಸಿದ್ದಕ್ಕೆ ಬ್ಯಾನ್‌ ಮಾಡಿ ಅನ್ನೋದು ಸರಿಯಲ್ಲ – ಪಠಾಣ್‌ ಪರ ನಿಂತ ದಾದಾ ಸಾಹೇಬ್‌ ಫಾಲ್ಕೆ ಪುರಸ್ಕೃತ ನಟಿ

    ಕೇಸರಿ ಉಡುಪು ಧರಿಸಿದ್ದಕ್ಕೆ ಬ್ಯಾನ್‌ ಮಾಡಿ ಅನ್ನೋದು ಸರಿಯಲ್ಲ – ಪಠಾಣ್‌ ಪರ ನಿಂತ ದಾದಾ ಸಾಹೇಬ್‌ ಫಾಲ್ಕೆ ಪುರಸ್ಕೃತ ನಟಿ

    ಬಾದಷಾ ಶಾರುಖ್ ನಟನೆಯ `ಪಠಾಣ್’ (Pathan) ಮುಂದಿನ ಜನವರಿಗೆ ತೆರೆಯ ಮೇಲೆ ಅಬ್ಬರಿಸಲು ಸಜ್ಜಾಗಿದೆ. ರಿಲೀಸ್‌ಗೂ ಮುನ್ನವೇ ಸಾಕಷ್ಟು ವಿವಾದಗಳನ್ನ ಹುಟ್ಟು ಹಾಕಿದೆ. ಇನ್ನೂ ದೀಪಿಕಾ (Deepika Padukone) ಕೇಸರಿ ಬಿಕಿನಿ ವಿವಾದ, ಸಿನಿಮಾ ಬ್ಯಾನ್ (Ban) ವಿಷ್ಯವಾಗಿ ದಾದಾ ಫಾಲ್ಕೆ ಪುರಸ್ಕೃತ ನಟಿ ಆಶಾ ಪರೇಖ್ ಮಾತನಾಡಿದ್ದಾರೆ.

    ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ದೀಪಿಕಾ ಕೇಸರಿ ಬಿಕಿನಿ ವಿವಾದ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. `ಪಠಾಣ್’ (Pathan) ಚಿತ್ರದ ಹಾಡಿನಲ್ಲಿ ನಟಿ ದೀಪಿಕಾ ಸಖತ್ ಹಾಟ್ ಆಗಿ ಮೈಚಳಿ ಬಿಟ್ಟು ಶಾರುಖ್‌ ಜೊತೆ ಸೊಂಟ ಬಳುಕಿಸಿದ್ದಾರೆ. ʻಬೇಷರಂ ರಂಗ್ʼ ಹಾಡಿನಲ್ಲಿ ದೀಪಿಕಾ ಧರಿಸಿರುವ ಕೇಸರಿ ಬಣ್ಣದ ಬಟ್ಟೆ ಕುರಿತಾಗಿ ಈ ಚಿತ್ರವನ್ನೇ ನಿಷೇಧಿಸಬೇಕು ಎಂಬ ಕೆಲ ಮಾತುಗಳು ಸಹ ಕೇಳಿ ಬಂದಿದ್ದವು. ಸದ್ಯ ಇದೇ ವಿಚಾರವಾಗಿ ಹಿರಿಯ ನಟಿ ಆಶಾ ಪರೇಖ್ (Asha Parekh) ಮಾತನಾಡಿದ್ದಾರೆ. ಪಠಾಣ್‌ ಪರ ಹಿರಿಯ ನಟಿ ಆಶಾ ಪರೇಖ್ ಪ್ರತಿಕ್ರಿಯೆ ನೀಡಿದ್ದಾರೆ.

    ನಟಿ ಆಶಾ ಪರೇಖ್ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ `ಬೇಷರಂ ರಂಗ್’ ಹಾಡಿನ ಕುರಿತಾಗಿ ಕೇಳಲಾಗಿದೆ. ಈ ಬಗ್ಗೆ ಆಶಾ ಪರೇಖ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಚಿತ್ರದ ಮೂಲ ಉದ್ದೇಶ ಮನರಂಜನೆ ನೀಡುವುದಾಗಿದೆ. ದೀಪಿಕಾ ಕೇಸರಿ ಬಣ್ಣದ ಬಟ್ಟೆ ಧರಿಸಿರುವುದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಕೇಸರಿ ಉಡುಪು ಧರಿಸಿದ್ದಕ್ಕೆ ಬ್ಯಾನ್‌ ಮಾಡಿ ಅನ್ನೋದು ಸರಿಯಲ್ಲ. ದೀಪಿಕಾ ಬಿಕಿನಿ ಧರಿಸಿರೋದು ಅವರ ಸಮಸ್ಯೆಯಲ್ಲ. ಕೇಸರಿ ಬಣ್ಣ ಇರೋದು ಹಲವರ ಸಮಸ್ಯೆ. ನಮ್ಮ ಯೋಚನೆ ಸಂಕುಚಿತ ಸ್ವಭಾವದಿಂದ ಇದೆ. ನಾವು ಯೋಚಿಸುವ ರೀತಿ ಬದಲಾಗಬೇಕಿದೆ. ಈ ಮೂಲಕ ಬಾಲಿವುಡ್‌ನ ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ನಟಿ ಆಶಾ ಮಾತನಾಡಿದ್ದಾರೆ. ಕೆಲ ಚಿತ್ರಗಳು ಹೇಳಿಕೊಳ್ಳುವಂತಹ ದಾಖಲೆ ಮಾಡುತ್ತಿಲ್ಲ. ಹಾಗಾಗಿ ಹಿಂದಿ ಚಿತ್ರರಂಗ ಸೋಲುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಕನ್ನಡಿ ವಿಚಾರಕ್ಕೆ ರೂಪೇಶ್ ಶೆಟ್ಟಿ ಕಾಲೆಳೆದ ಕಿಚ್ಚ ಸುದೀಪ್

    ಸದ್ಯ ಚಿತ್ರರಂಗದಲ್ಲಿ ಪರಿಸ್ಥಿತಿ ಈಗಾಗಲೇ ತುಂಬಾ ಕೆಟ್ಟಿದೆ. ಸಿನಿಮಾ ನಿಷೇಧ ಮಾಡಿದ್ದರೆ ಉದ್ಯಮವೇ ಕೊನೆಗೊಳ್ಳುತ್ತದೆ. ಮುಂದೆ ಜನರು ಸಿನಿಮಾ ನೋಡಲು ಥಿಯೇಟರ್‌ಗೆ ಹೋಗುವುದಿಲ್ಲ. ಸಿನಿಮಾಗಳು ವಿಫಲವಾಗುತ್ತಲೇ ಇದ್ದರೆ, ಇನ್ನೊಂದು ಚಿತ್ರ ಹೇಗೆ ನಿರ್ಮಾಣವಾಗುತ್ತದೆ ಎಂದು ಹಿರಿಯ ನಟಿ ಆಶಾ ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಒಳ್ಳೆ ಮನಸ್ಸು ಇಟ್ಕೊಂಡು ಪಠಾಣ್ ಸಿನಿಮಾ ನೋಡಿ ಎಂದ ಶಾರುಖ್ ಖಾನ್

    ಒಳ್ಳೆ ಮನಸ್ಸು ಇಟ್ಕೊಂಡು ಪಠಾಣ್ ಸಿನಿಮಾ ನೋಡಿ ಎಂದ ಶಾರುಖ್ ಖಾನ್

    ಠಾಣ್ ಸಿನಿಮಾದ ಮತ್ತೊಂದು ಹಾಡು ನಿನ್ನೆ ಬಿಡುಗಡೆ ಆಗಿದೆ. ಈ ಹಾಡಿನ ಬಗ್ಗೆ ಸಾಕಷ್ಟು ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿದೆ. ಕೆಲವೇ ಗಂಟೆಗಳಲ್ಲಿ ಲಕ್ಷ ಲಕ್ಷ ಕಣ್ಣುಗಳು ಈ ಹಾಡನ್ನು ತುಂಬಿಕೊಂಡಿವೆ. ಈ ಹೊತ್ತಿನಲ್ಲಿ ಶಾರುಖ್ ಖಾನ್ ಪ್ರತಿಕ್ರಿಯಿಸಿದ್ದು, ಒಳ್ಳೆಯ ಮನಸ್ಸಿನಿಂದ ಹಾಡು ನೋಡಿದ್ದೀರಿ. ನಿಮಗೆ ಇಷ್ಟವಾಗಿದೆ. ಹೀಗೆಯೇ ಸಿನಿಮಾವನ್ನೂ ವೀಕ್ಷಿಸಿ ಎಂದು ಹೇಳಿದ್ದಾರೆ. ಸಿನಿಮಾವನ್ನು ಸಿನಿಮಾವಾಗಿಯೇ ತಗೆದುಕೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

    ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ಈ ಹಾಡಿಗೆ ಹೆಜ್ಜೆ ಹಾಕಿದ್ದು, ಮೂರು ದಿನಗಳ ಹಿಂದೆಯಷ್ಟೇ ಈ ಹಾಡಿನ ಒಂದೇ ಒಂದು ಫೋಟೋವನ್ನು ಚಿತ್ರತಂಡ ರಿಲೀಸ್ ಮಾಡಿತ್ತು. ದೀಪಿಕಾ ಪಡುಕೋಣೆ ಈ ಹಾಡಿನಲ್ಲೂ ಸಖತ್ ಹಾಟ್ ಹಾಟ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಈ ಹಾಡಿನಲ್ಲೂ ಅವರು ಗ್ಲಾಮರ್ ಗೆ ಯಾವುದೇ ಕೊರತೆಯನ್ನು ಮಾಡಿಲ್ಲ ಹಾಗಾಗಿ ಶಾರುಖ್ ಮತ್ತು ದೀಪಿಕಾ ಪಡುಕೋಣೆಗೆ ಡ್ಯಾನ್ಸ್ ಗೆ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಪಠಾಣ್ ಸಿನಿಮಾದ ಎರಡನೇ ಹಾಡು ಇದಾಗಿದ್ದು ‘ಜೂಮೇ ಜೋ ಪಠಾಣ್’ ಹೆಸರಿನ ಈ ಹಾಡು ಕೂಡ ಸಖತ್ ಆಗಿಯೇ ಚರ್ಚೆ ಆಗಲಿದೆ ಎಂದು ಹೇಳಲಾಗುತ್ತಿದೆ. ಮೊದಲ ಹಾಡಿನಲ್ಲಿ ದೀಪಿಕಾ ಕೇಸರಿ ಬಿಕಿನಿ ಹಾಕಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆದರೂ, ಚಿತ್ರತಂಡ ಈ ಕುರಿತು ತಲೆ ಕೆಡಿಸಿಕೊಂಡಿರಲಿಲ್ಲ. ಪಠಾಣ್ ಸಿನಿಮಾ ಜನವರಿ 25ಕ್ಕೆ ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲ ಮೊನ್ನೆಯಷ್ಟೇ ಹಾಡೊಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಈ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಿಕಿನಿ ಹಾಕಿದ್ದರು ಎನ್ನುವ ಕಾರಣಕ್ಕಾಗಿ ಭಾರೀ ವಿವಾದವಾಗಿತ್ತು. ಇದನ್ನೂ ಓದಿ: ಸಾನ್ಯ ಎಲಿಮಿನೇಷನ್ ನಂತರ ರೂಪೇಶ್ ಶೆಟ್ಟಿ ಎನರ್ಜಿ ಡಬಲ್ ಆಯ್ತು: ಅನುಪಮಾ

    ಎರಡನೇ ಹಾಡು ಬಿಡುಗಡೆಯ ಬೆನ್ನಲ್ಲೇ ಪ್ರತಿಷ್ಠಿತ ಎಂಪಾಯರ್ ಮ್ಯಾಗಜಿನ್ ಸಾರ್ವಕಾಲಿಕ ಶ್ರೇಷ್ಠ ನಟರ ಪಟ್ಟಿ ರಿಲೀಸ್ ಮಾಡಿದ್ದು, ಅದರಲ್ಲಿ ಶಾರುಖ್ ಖಾನ್ ಹೆಸರು ಇದೆ. ಭಾರತದ ನಟರಲ್ಲಿ ಈ ಸ್ಥಾನವನ್ನು ಪಡೆದ ಏಕೈಕ ನಟ ಶಾರುಖ್ ಖಾನ್ ಎನ್ನುವುದು ವಿಶೇಷ. ಈ ಮಾಹಿತಿಯನ್ನು ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಏನೇ ವಿವಾದ ಮಾಡಿದರೂ, ಅವರ ಜನಪ್ರಿಯತೆ ಯಾವತ್ತೂ ಕಡಿಮೆ ಆಗಲ್ಲ ಎಂದು ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ.

    ವಿವಾದದ ಕುರಿತು ಶಾರುಖ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ವಿವಾದ ಮಾಡುವ ಮೂಲಕ ಸಿನಿಮಾಗೆ ಮತ್ತಷ್ಟು ಪ್ರಚಾರ ಕೊಟ್ಟಿದ್ದೀರಿ, ನಿಮಗೆ ಧನ್ಯವಾದಗಳು ಎಂದು ಹೇಳಿದ್ದರು. ನೀವು ಏನೇ ಬಾಯ್ಕಾಟ್ ಮಾಡಿರಿ, ಸಿನಿಮಾ ಗೆಲ್ಲುತ್ತದೆ ಎನ್ನುವ ವಿಶ್ವಾವನ್ನೂ ಅವರು ವ್ಯಕ್ತ ಪಡಿಸಿದ್ದರು. ಶಾರುಖ್ ಏನೇ ಹೇಳಿದರೂ, ವಿವಾದದ ಉರಿ ಇನ್ನೂ ತಣ್ಣಗಾಗಲಿಲ್ಲ. ಸಿನಿಮಾ ಪ್ರೇಮಿಗಳು ಮಾತ್ರವಲ್ಲ, ರಾಜಕಾರಣಿಗಳು ಕೂಡ ಈ ವಿವಾದಲ್ಲಿ ಪ್ರವೇಶ ಮಾಡಿದ್ದಾರೆ. ಹಾಗಾಗಿ ವಿವಾದ ದೊಡ್ಡದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ‘ಪಠಾಣ್’ ಮತ್ತೊಂದು ಸಾಂಗ್ ರಿಲೀಸ್ : ಡ್ಯಾನ್ಸ್ ಮೆಚ್ಚಿಕೊಂಡ ಡಿಪ್ಪಿ-ಶಾರುಖ್ ಫ್ಯಾನ್ಸ್

    ‘ಪಠಾಣ್’ ಮತ್ತೊಂದು ಸಾಂಗ್ ರಿಲೀಸ್ : ಡ್ಯಾನ್ಸ್ ಮೆಚ್ಚಿಕೊಂಡ ಡಿಪ್ಪಿ-ಶಾರುಖ್ ಫ್ಯಾನ್ಸ್

    ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ಕಾಂಬಿನೇಷನ್ ನ ‘ಪಠಾಣ್’ ಸಿನಿಮಾದ ಮತ್ತೊಂದು ಹಾಡು ಇಂದು ಬಿಡುಗಡೆ ಆಗಿದೆ. ಎರಡು ದಿನಗಳ ಹಿಂದೆಯಷ್ಟೇ ಈ ಹಾಡಿನ ಒಂದೇ ಒಂದು ಫೋಟೋವನ್ನು ಚಿತ್ರತಂಡ ರಿಲೀಸ್ ಮಾಡಿತ್ತು. ದೀಪಿಕಾ ಪಡುಕೋಣೆ ಈ ಹಾಡಿನಲ್ಲೂ ಸಖತ್ ಹಾಟ್ ಹಾಟ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಈ ಹಾಡಿನಲ್ಲೂ ಅವರು ಗ್ಲಾಮರ್ ಗೆ ಯಾವುದೇ ಕೊರತೆಯನ್ನು ಮಾಡಿಲ್ಲ ಹಾಗಾಗಿ ಶಾರುಖ್ ಮತ್ತು ದೀಪಿಕಾ ಪಡುಕೋಣೆಗೆ ಡ್ಯಾನ್ಸ್ ಗೆ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಪಠಾಣ್ ಸಿನಿಮಾದ ಎರಡನೇ ಹಾಡು ಇದಾಗಿದ್ದು ‘ಜೂಮೇ ಜೋ ಪಠಾಣ್’ ಹೆಸರಿನ ಈ ಹಾಡು ಕೂಡ ಸಖತ್ ಆಗಿಯೇ ಚರ್ಚೆ ಆಗಲಿದೆ ಎಂದು ಹೇಳಲಾಗುತ್ತಿದೆ. ಮೊದಲ ಹಾಡಿನಲ್ಲಿ ದೀಪಿಕಾ ಕೇಸರಿ ಬಿಕಿನಿ ಹಾಕಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆದರೂ, ಚಿತ್ರತಂಡ ಈ ಕುರಿತು ತಲೆ ಕೆಡಿಸಿಕೊಂಡಿರಲಿಲ್ಲ. ಪಠಾಣ್ ಸಿನಿಮಾ ಜನವರಿ 25ಕ್ಕೆ ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲ ಮೊನ್ನೆಯಷ್ಟೇ ಹಾಡೊಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಈ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಿಕಿನಿ ಹಾಕಿದ್ದರು ಎನ್ನುವ ಕಾರಣಕ್ಕಾಗಿ ಭಾರೀ ವಿವಾದವಾಗಿತ್ತು. ಇದನ್ನೂ ಓದಿ: ಮಂಜು ಪಾವಗಡ ಮೇಲೆ ಅಮೂಲ್ಯ ಲವ್: ರಾಕೇಶ್ ಅಡಿಗ ಕಕ್ಕಾಬಿಕ್ಕಿ

    ಎರಡನೇ ಹಾಡು ಬಿಡುಗಡೆಯ ಬೆನ್ನಲ್ಲೇ ಪ್ರತಿಷ್ಠಿತ ಎಂಪಾಯರ್ ಮ್ಯಾಗಜಿನ್ ಸಾರ್ವಕಾಲಿಕ ಶ್ರೇಷ್ಠ ನಟರ ಪಟ್ಟಿ ರಿಲೀಸ್ ಮಾಡಿದ್ದು, ಅದರಲ್ಲಿ ಶಾರುಖ್ ಖಾನ್ ಹೆಸರು ಇದೆ. ಭಾರತದ ನಟರಲ್ಲಿ ಈ ಸ್ಥಾನವನ್ನು ಪಡೆದ ಏಕೈಕ ನಟ ಶಾರುಖ್ ಖಾನ್ ಎನ್ನುವುದು ವಿಶೇಷ. ಈ ಮಾಹಿತಿಯನ್ನು ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಏನೇ ವಿವಾದ ಮಾಡಿದರೂ, ಅವರ ಜನಪ್ರಿಯತೆ ಯಾವತ್ತೂ ಕಡಿಮೆ ಆಗಲ್ಲ ಎಂದು ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ.

    ವಿವಾದದ ಕುರಿತು ಶಾರುಖ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ವಿವಾದ ಮಾಡುವ ಮೂಲಕ ಸಿನಿಮಾಗೆ ಮತ್ತಷ್ಟು ಪ್ರಚಾರ ಕೊಟ್ಟಿದ್ದೀರಿ, ನಿಮಗೆ ಧನ್ಯವಾದಗಳು ಎಂದು ಹೇಳಿದ್ದರು. ನೀವು ಏನೇ ಬಾಯ್ಕಾಟ್ ಮಾಡಿರಿ, ಸಿನಿಮಾ ಗೆಲ್ಲುತ್ತದೆ ಎನ್ನುವ ವಿಶ್ವಾಸವನ್ನೂ ಅವರು ವ್ಯಕ್ತ ಪಡಿಸಿದ್ದರು. ಶಾರುಖ್ ಏನೇ ಹೇಳಿದರೂ, ವಿವಾದದ ಉರಿ ಇನ್ನೂ ತಣ್ಣಗಾಗಲಿಲ್ಲ. ಸಿನಿಮಾ ಪ್ರೇಮಿಗಳು ಮಾತ್ರವಲ್ಲ, ರಾಜಕಾರಣಿಗಳು ಕೂಡ ಈ ವಿವಾದಲ್ಲಿ ಪ್ರವೇಶ ಮಾಡಿದ್ದಾರೆ. ಹಾಗಾಗಿ ವಿವಾದ ದೊಡ್ಡದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಶಾರುಖ್ ಖಾನ್ ಸಿಕ್ಕರೆ ಜೀವಂತ ಸುಡುವೆ: ಅಯೋಧ್ಯೆಯ ಸಾಧು ಕಿಡಿಕಿಡಿ

    ಶಾರುಖ್ ಖಾನ್ ಸಿಕ್ಕರೆ ಜೀವಂತ ಸುಡುವೆ: ಅಯೋಧ್ಯೆಯ ಸಾಧು ಕಿಡಿಕಿಡಿ

    ಬಾಲಿವುಡ್ ನಟ ಶಾರುಖ್ ಖಾನ್ (Shahrukh Khan) ನಟನೆಯ ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಹಾಡನ್ನು ವಿರೋಧಿಸಿ ಮಂಗಳವಾರ ವಿಶ್ವ ಹಿಂದೂ ಪರಿಷತ್ ಅಯೋಧ್ಯೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಯೋಧ್ಯೆಯ (Ayodhya) ತಪಸ್ವಿ ಚಾವ್ನಿ ಮಠದ ಪರಮಹಂಸ ಆಚಾರ್ಯ (Paramahamsa Acharya) ಅವರು ಮಾತನಾಡಿ, ಶಾರುಖ್ ಖಾನ್ ನನ್ನ ಎದುರಿಗೆ ಸಿಕ್ಕರೆ ಜೀವಂತವಾಗಿ ಸುಟ್ಟು ಬಿಡುವೆ ಎಂದು ಗುಡುಗಿದ್ದಾರೆ. ಇಂತಹ ಹೇಳಿಕೆಯು ಆಘಾತಕಾರಿ ಆದಂಥದ್ದು ಎಂದು ಹಲವರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

    ಪ್ರತಿಭಟನೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಾಧು, ‘ಪಠಾಣ್ (Pathan) ಸಿನಿಮಾ ಸನಾತನ ಧರ್ಮಕ್ಕೆ ಅವಮಾನ ಮಾಡಿದೆ. ಸದ್ಯಕ್ಕೆ ಶಾರುಖ್ ಖಾನ್ ಅವರ ಪೋಸ್ಟರ್ ಗಳಿಗೆ ಬೆಂಕಿ ಹಚ್ಚಿದ್ದೇವೆ. ಒಂದು ವೇಳೆ ಅವರು ಏನಾದರೂ ನನ್ನ ಎದುರಿಗೆ ಬಂದರೆ ಜೀವಂತವಾಗಿ ಸುಡಲು ಹಿಂದುಮುಂದು ನೋಡುವುದಿಲ್ಲ. ಈ ಸಿನಿಮಾವನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಲು ಬಿಡುವುದಿಲ್ಲ’ ಎಂದು ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಇದನ್ನೂ ಓದಿ: ಡೇಂಜರ್ ಝೋನ್‌ನಲ್ಲಿ 8 ಸ್ಪರ್ಧಿಗಳು, ಯಾರ ಆಟಕ್ಕೆ ಬ್ರೇಕ್ ಹಾಕಲಿದ್ದಾರೆ ಬಿಗ್ ಬಾಸ್

    ಏನೇ ಪ್ರತಿಭಟನೆ ಮಾಡಿದರೂ, ಸಿನಿಮಾ ತಂಡವಂತೂ ಸುಮ್ಮನೆ ಕೂತಿಲ್ಲ. ಸಿನಿಮಾದ ಎರಡನೇ ಹಾಡು ನಾಳೆ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ ಈ ಹಾಡಿನ ಒಂದೇ ಒಂದು ಫೋಟೋವನ್ನು ರಿಲೀಸ್ ಮಾಡಲಾಗಿದ್ದು, ದೀಪಿಕಾ ಪಡುಕೋಣೆ ಈ ಹಾಡಿನಲ್ಲೂ ಸಖತ್ ಹಾಟ್ ಹಾಟ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಈ ಹಾಡಿನಲ್ಲೂ ಅವರು ಗ್ಲಾಮರ್ ಗೆ ಯಾವುದೇ ಕೊರತೆಯನ್ನು ಮಾಡಿಲ್ಲ. ಹಾಗಾಗಿ ಈ ಹಾಡಿನ ಬಗ್ಗೆಯೂ ಅಷ್ಟೇ ನಿರೀಕ್ಷೆಯನ್ನು ಹೊಂದಲಾಗಿದೆ. ಈ ಹಾಡು ಯಾವ ರೀತಿಯಲ್ಲಿ ಮೂಡಿ ಬಂದಿದೆ ಎನ್ನುವುದು ಸದ್ಯಕ್ಕಿರುವ ಕುತೂಹಲ.

    ಪಠಾಣ್ ಸಿನಿಮಾದ ಎರಡನೇ ಹಾಡಾದ ‘ಜೂಮೇ ಜೋ ಪಠಾಣ್’ ನಾಳೆ ರಿಲೀಸ್ ಮಾಡುತ್ತಿರುವ ಕುರಿತು ನಿರ್ಮಾಣ ಸಂಸ್ಥೆಯು ವಿಷಯವನ್ನು ಹಂಚಿಕೊಂಡಿದ್ದು, ಈ ಹಾಡು ಕೂಡ ಸಖತ್ ಆಗಿಯೇ ಚರ್ಚೆ ಆಗಲಿದೆ ಎಂದು ಮೊದಲೇ ಹೇಳಿಕೊಂಡಿದೆ. ಹಾಗಾಗಿ ಮತ್ತೇನಾದರೂ ವಿವಾದಕ್ಕೆ ಕಾರಣವಾಗಿರುವ ಅಂಶಗಳು ಇರಬಹುದಾ ಎನ್ನುವ ಚರ್ಚೆ ಕೂಡ ನಡೆದಿದೆ. ಮೊದಲ ಹಾಡಿನಲ್ಲಿ ದೀಪಿಕಾ ಕೇಸರಿ ಬಿಕಿನಿ ಹಾಕಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆದರೂ, ಚಿತ್ರತಂಡ ಈ ಕುರಿತು ತಲೆ ಕೆಡಿಸಿಕೊಂಡಿರಲಿಲ್ಲ.

    Live Tv
    [brid partner=56869869 player=32851 video=960834 autoplay=true]

  • ‘ಪಠಾಣ್’ ಸಿನಿಮಾದ ಎರಡನೇ ಹಾಡಿನಲ್ಲೂ ದೀಪಿಕಾ ಪಡುಕೋಣೆ ಹಾಟ್ ಹಾಟ್

    ‘ಪಠಾಣ್’ ಸಿನಿಮಾದ ಎರಡನೇ ಹಾಡಿನಲ್ಲೂ ದೀಪಿಕಾ ಪಡುಕೋಣೆ ಹಾಟ್ ಹಾಟ್

    ಶಾರುಖ್ ಖಾನ್ (Shah Rukh Khan) ನಟನೆಯ ಪಠಾಣ್ ಸಿನಿಮಾದ ಎರಡನೇ ಹಾಡು ನಾಳೆ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ ಈ ಹಾಡಿನ ಒಂದೇ ಒಂದು ಫೋಟೋವನ್ನು ರಿಲೀಸ್ ಮಾಡಲಾಗಿದ್ದು, ದೀಪಿಕಾ ಪಡುಕೋಣೆ (Deepika Padukone) ಈ ಹಾಡಿನಲ್ಲೂ ಸಖತ್ ಹಾಟ್ ಹಾಟ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಈ ಹಾಡಿನಲ್ಲೂ ಅವರು ಗ್ಲಾಮರ್ ಗೆ ಯಾವುದೇ ಕೊರತೆಯನ್ನು ಮಾಡಿಲ್ಲ. ಹಾಗಾಗಿ ಈ ಹಾಡಿನ ಬಗ್ಗೆಯೂ ಅಷ್ಟೇ ನಿರೀಕ್ಷೆಯನ್ನು ಹೊಂದಲಾಗಿದೆ. ಈ ಹಾಡು ಯಾವ ರೀತಿಯಲ್ಲಿ ಮೂಡಿ ಬಂದಿದೆ ಎನ್ನುವುದು ಸದ್ಯಕ್ಕಿರುವ ಕುತೂಹಲ.

    ಪಠಾಣ್ (Pathan) ಸಿನಿಮಾದ ಎರಡನೇ ಹಾಡಾದ ‘ಜೂಮೇ ಜೋ ಪಠಾಣ್’ (Jhoome Jo Pathaan) ನಾಳೆ ರಿಲೀಸ್ ಮಾಡುತ್ತಿರುವ ಕುರಿತು ನಿರ್ಮಾಣ ಸಂಸ್ಥೆಯು ವಿಷಯವನ್ನು ಹಂಚಿಕೊಂಡಿದ್ದು, ಈ ಹಾಡು ಕೂಡ ಸಖತ್ ಆಗಿಯೇ ಚರ್ಚೆ ಆಗಲಿದೆ ಎಂದು ಮೊದಲೇ ಹೇಳಿಕೊಂಡಿದೆ. ಹಾಗಾಗಿ ಮತ್ತೇನಾದರೂ ವಿವಾದಕ್ಕೆ ಕಾರಣವಾಗಿರುವ ಅಂಶಗಳು ಇರಬಹುದಾ ಎನ್ನುವ ಚರ್ಚೆ ಕೂಡ ನಡೆದಿದೆ. ಮೊದಲ ಹಾಡಿನಲ್ಲಿ ದೀಪಿಕಾ ಕೇಸರಿ ಬಿಕಿನಿ ಹಾಕಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆದರೂ, ಚಿತ್ರತಂಡ ಈ ಕುರಿತು ತಲೆ ಕೆಡಿಸಿಕೊಂಡಿರಲಿಲ್ಲ.

    ಎರಡನೇ ಹಾಡು ಬಿಡುಗಡೆಯ ಬೆನ್ನಲ್ಲೇ ಪ್ರತಿಷ್ಠಿತ ಎಂಪಾಯರ್ ಮ್ಯಾಗಜಿನ್ ಸಾರ್ವಕಾಲಿಕ ಶ್ರೇಷ್ಠ ನಟರ ಪಟ್ಟಿ ರಿಲೀಸ್ ಮಾಡಿದ್ದು, ಅದರಲ್ಲಿ ಶಾರುಖ್ ಖಾನ್ ಹೆಸರು ಇದೆ. ಭಾರತದ ನಟರಲ್ಲಿ ಈ ಸ್ಥಾನವನ್ನು ಪಡೆದ ಏಕೈಕ ನಟ ಶಾರುಖ್ ಖಾನ್ ಎನ್ನುವುದು ವಿಶೇಷ. ಈ ಮಾಹಿತಿಯನ್ನು ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಏನೇ ವಿವಾದ ಮಾಡಿದರೂ, ಅವರ ಜನಪ್ರಿಯತೆ ಯಾವತ್ತೂ ಕಡಿಮೆ ಆಗಲ್ಲ ಎಂದು ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಆ ಒಂದು ಮಾತಿನಿಂದ ಮುರಿದು ಬಿತ್ತು ರೂಪೇಶ್ ಶೆಟ್ಟಿ- ರಾಜಣ್ಣ ಫ್ರೆಂಡ್‌ಶಿಪ್

    ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾ ಜನವರಿ 25ಕ್ಕೆ ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲ ಮೊನ್ನೆಯಷ್ಟೇ ಹಾಡೊಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಈ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಿಕಿನಿ ಹಾಕಿದ್ದರು ಎನ್ನುವ ಕಾರಣಕ್ಕಾಗಿ ಭಾರೀ ವಿವಾದವಾಗಿತ್ತು. ಇದು ಹಿಂದೂಗಳಿಗೆ ಮಾಡುತ್ತಿರುವ ಅಪಮಾನ ಎಂದು ಬಿಂಬಿಸಲಾಗಿತ್ತು. ಶಾರುಖ್ ಖಾನ್ ಕೂಡಲೇ ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸಲಾಗಿತ್ತು.

    ವಿವಾದದ ಕುರಿತು ಶಾರುಖ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ವಿವಾದ ಮಾಡುವ ಮೂಲಕ ಸಿನಿಮಾಗೆ ಮತ್ತಷ್ಟು ಪ್ರಚಾರ ಕೊಟ್ಟಿದ್ದೀರಿ, ನಿಮಗೆ ಧನ್ಯವಾದಗಳು ಎಂದು ಹೇಳಿದ್ದರು. ನೀವು ಏನೇ ಬಾಯ್ಕಾಟ್ ಮಾಡಿರಿ, ಸಿನಿಮಾ ಗೆಲ್ಲುತ್ತದೆ ಎನ್ನುವ ವಿಶ್ವಾವನ್ನೂ ಅವರು ವ್ಯಕ್ತ ಪಡಿಸಿದ್ದರು. ಶಾರುಖ್ ಏನೇ ಹೇಳಿದರೂ, ವಿವಾದದ ಉರಿ ಇನ್ನೂ ತಣ್ಣಗಾಗಲಿಲ್ಲ. ಸಿನಿಮಾ ಪ್ರೇಮಿಗಳು ಮಾತ್ರವಲ್ಲ, ರಾಜಕಾರಣಿಗಳು ಕೂಡ ಈ ವಿವಾದಲ್ಲಿ ಪ್ರವೇಶ ಮಾಡಿದ್ದಾರೆ. ಹಾಗಾಗಿ ವಿವಾದ ದೊಡ್ಡದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸಾರ್ವಕಾಲಿಕ ಶ್ರೇಷ್ಠ ನಟರ ಪಟ್ಟಿಯಲ್ಲಿ ಶಾರುಖ್ ಖಾನ್: ಈ  ಸ್ಥಾನ ಪಡೆದ ಏಕೈಕ ಭಾರತದ ನಟ

    ಸಾರ್ವಕಾಲಿಕ ಶ್ರೇಷ್ಠ ನಟರ ಪಟ್ಟಿಯಲ್ಲಿ ಶಾರುಖ್ ಖಾನ್: ಈ ಸ್ಥಾನ ಪಡೆದ ಏಕೈಕ ಭಾರತದ ನಟ

    ಬಾಲಿವುಡ್ ನಟ ಶಾರುಖ್ ಖಾನ್ ಕುರಿತು ಭಾರತದಲ್ಲಿ ಅಸಮಾಧಾನ ಭುಗಿಲೆದಿದ್ದೆ. ಅದರಲ್ಲೂ ಪಠಾಣ್ ವಿಚಾರದಲ್ಲಿ ಅವರ ಸಿನಿಮಾಗಳನ್ನು ಬಾಯ್ಕಾಟ್ ಮಾಡಬೇಕು ಎಂದು ದೊಡ್ಡ ಅಭಿಯಾನವೇ ಶುರುವಾಗಿದೆ. ಈ ವಿವಾದದ ಕುರಿತು ದಿನಕ್ಕೊಂದು ಹೇಳಿಕೆಗಳು ಹೊರ ಬರುತ್ತಿವೆ. ಆದರೂ, ಶಾರುಖ್ ಖಾನ್ ಜನಪ್ರಿಯತೆ ಕುಂದಿಲ್ಲ ಎನ್ನುವುದಕ್ಕೆ ಇಲ್ಲೊಂದು ಸಾಕ್ಷಿ ಸಿಕ್ಕಿದೆ. ಪ್ರತಿಷ್ಠಿತ ಮ್ಯಾಗಜಿನ್ ವೊಂದು ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ನಟರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶಾರುಖ್ ಖಾನ್ ಹೆಸರು ಕಾಣಿಸಿಕೊಂಡಿದೆ.

    ಪ್ರತಿಷ್ಠಿತ ಎಂಪಾಯರ್ ಮ್ಯಾಗಜಿನ್ ಈ ಮಾಹಿತಿಯನ್ನು ಹೊರ ಹಾಕಿದ್ದು, ಭಾರತದ ನಟರಲ್ಲಿ ಈ ಸ್ಥಾನವನ್ನು ಪಡೆದ ಏಕೈಕ ನಟ ಶಾರುಖ್ ಖಾನ್ ಎನ್ನುವುದು ವಿಶೇಷ. ಈ ಮಾಹಿತಿಯನ್ನು ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಏನೇ ವಿವಾದ ಮಾಡಿದರೂ, ಅವರ ಜನಪ್ರಿಯತೆ ಯಾವತ್ತೂ ಕಡಿಮೆ ಆಗಲ್ಲ ಎಂದು ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ

    ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾ ಜನವರಿ 25ಕ್ಕೆ ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲ ಮೊನ್ನೆಯಷ್ಟೇ ಹಾಡೊಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಈ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಿಕಿನಿ ಹಾಕಿದ್ದರು ಎನ್ನುವ ಕಾರಣಕ್ಕಾಗಿ ಭಾರೀ ವಿವಾದವಾಗಿತ್ತು. ಇದು ಹಿಂದೂಗಳಿಗೆ ಮಾಡುತ್ತಿರುವ ಅಪಮಾನ ಎಂದು ಬಿಂಬಿಸಲಾಗಿತ್ತು. ಶಾರುಖ್ ಖಾನ್ ಕೂಡಲೇ ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸಲಾಗಿತ್ತು.

    ವಿವಾದದ ಕುರಿತು ಶಾರುಖ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ವಿವಾದ ಮಾಡುವ ಮೂಲಕ ಸಿನಿಮಾಗೆ ಮತ್ತಷ್ಟು ಪ್ರಚಾರ ಕೊಟ್ಟಿದ್ದೀರಿ, ನಿಮಗೆ ಧನ್ಯವಾದಗಳು ಎಂದು ಹೇಳಿದ್ದರು. ನೀವು ಏನೇ ಬಾಯ್ಕಾಟ್ ಮಾಡಿರಿ, ಸಿನಿಮಾ ಗೆಲ್ಲುತ್ತದೆ ಎನ್ನುವ ವಿಶ್ವಾವನ್ನೂ ಅವರು ವ್ಯಕ್ತ ಪಡಿಸಿದ್ದರು. ಶಾರುಖ್ ಏನೇ ಹೇಳಿದರೂ, ವಿವಾದದ ಉರಿ ಇನ್ನೂ ತಣ್ಣಗಾಗಲಿಲ್ಲ. ಸಿನಿಮಾ ಪ್ರೇಮಿಗಳು ಮಾತ್ರವಲ್ಲ, ರಾಜಕಾರಣಿಗಳು ಕೂಡ ಈ ವಿವಾದಲ್ಲಿ ಪ್ರವೇಶ ಮಾಡಿದ್ದಾರೆ. ಹಾಗಾಗಿ ವಿವಾದ ದೊಡ್ಡದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಶಾರುಖ್ ಖಾನ್ ಮಗಳ ಜೊತೆ ಪಠಾಣ್ ಸಿನಿಮಾ ನೋಡಲಿ: ಮಧ್ಯಪ್ರದೇಶದ ಸ್ಪೀಕರ್ ಮಾತು

    ಶಾರುಖ್ ಖಾನ್ ಮಗಳ ಜೊತೆ ಪಠಾಣ್ ಸಿನಿಮಾ ನೋಡಲಿ: ಮಧ್ಯಪ್ರದೇಶದ ಸ್ಪೀಕರ್ ಮಾತು

    ಠಾಣ್ ಸಿನಿಮಾದ ಹಾಡಿನಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಡೆಯನ್ನು ವಿರೋಧಿಸಿರುವ ಮಧ್ಯಪ್ರದೇಶದ ಸ್ಪೀಕರ್ ಗಿರೀಶ್ ಗೌತಮ್, ಅದೊಂದು ಅಸಹ್ಯಕರ ಬೆಳವಣಿಗೆ ಎಂದು ನುಡಿದಿದ್ದಾರೆ. ಅಲ್ಲಿ ಅಶ್ಲೀಲತೆ ಇರದೇ ಇದ್ದರೆ, ಶಾರುಖ್ ಖಾನ್ ತನ್ನದೇ ಮಗಳ ಜೊತೆ ಕೂತುಕೊಂಡು ಸಿನಿಮಾ ನೋಡಲಿ. ಮಗಳ ಪ್ರತಿಕ್ರಿಯೆ ಕೇಳಲಿ ಎಂದು ಹರಿಹಾಯ್ದಿದ್ದಾರೆ. ಪಠಾಣ್ ಸಿನಿಮಾದ ನಿರ್ಮಾಪಕರಿಗೆ ಬೆದರಿಕೆಯೊಡ್ಡಲಾಗಿದೆ ಎನ್ನುವ ಮಾತಿಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

    ಅಭಿವ್ಯಕ್ತಿ ಹೆಸರಿನಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವ ಕಲ್ಪನೆ ಇದ್ದರೆ ಅದು ತಪ್ಪು. ಪಠಾಣ್ ವಿಷಯದಲ್ಲಿ ಒಪ್ಪುವುದಕ್ಕೆ ಸಾಧ್ಯವೇ ಇಲ್ಲ ಎಂದಿರುವ  ಅವರು, ಮಗಳ ಜೊತೆ ಶಾರುಖ್ ಸಿನಿಮಾ ನೋಡಿದ ಫೋಟೋವನ್ನು ಅಪ್ ಲೋಡ್ ಮಾಡಿ ಜಗತ್ತಿಗೆ ತೋರಿಸುವಂತೆ ಸಲಹೆ ನೀಡಿದ್ದಾರೆ. ಸ್ಪೀಕರ್ ಮಾತು ಮಧ್ಯಪ್ರದೇಶದಲ್ಲಿ ಭಾರೀ ಚರ್ಚಗೆ ಕಾರಣವಾಗಿದೆ. ಥಿಯೇಟರ್ ಗಳಲ್ಲಿ ಪಠಾಣ್ ಸಿನಿಮಾವನ್ನು ನಿಷೇಧಿಸಬೇಕು ಎನ್ನುವ ಮಾತಿಗೆ ಪರೋಕ್ಷವಾಗಿ ಅವರು ಬೆಂಬಲವನ್ನೂ ಸೂಚಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ

    ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದಲ್ಲಿ ಕೇಸರಿ ಬಿಕಿನಿ ಹಾಕಿದ್ದ ವಿವಾದವು ಇದೀಗ ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿದೆ. ಈ ಹಿಂದೆ ಕೇವಲ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಾಯ್ಕಾಟ್ ಮಾತುಗಳನ್ನು ಆಡಿದ್ದರು. ಇದೀಗ ನೇರವಾಗಿ ರಾಜಕೀಯ ವ್ಯಕ್ತಿಗಳೇ ಅಖಾಡಕ್ಕೆ ಇಳಿದು ಪರ ವಿರೋಧದ ಮಾತುಗಳನ್ನು ಆಡುತ್ತಿದ್ದಾರೆ. ಅದರಲ್ಲೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಈ ಹಿಂದಿನ ವಿಡಿಯೋವೊಂದನ್ನು ಪೋಸ್ಟ್ ಮಾಡುವ ಮೂಲಕ ವಿವಾದದಲ್ಲಿ ಸುಖಾಸುಮ್ಮನೆ ಸಚಿವೆಯನ್ನು ಎಳೆತಂದಿದ್ದಾರೆ.

    ಬಿಜೆಪಿಯ ಹಲವು ಮುಖಂಡರು ದೀಪಿಕಾ ಪಡುಕೋಣೆ ಧರಿಸಿದ್ದ ಕೇಸರಿ ಬಿಕಿನಿ ಬಗ್ಗೆ ವಿರೋಧ ವ್ಯಕ್ತ ಪಡಿಸಿದ್ದರು. ಶಾರುಖ್ ಖಾನ್ ಮತ್ತು ತಂಡವನ್ನು ತರಾಟೆಗೆ ತೆಗೆದುಕೊಂಡಿದ್ದರು. ತರಾಟೆಗೆ ತೆಗೆದುಕೊಂಡವರ ಪಕ್ಷದಲ್ಲೇ ಇರುವ ಸ್ಮೃತಿ ಇರಾನಿ 1998ರಲ್ಲಿ ನಡೆದ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕೇಸರಿ ತುಂಡುಡುಗೆಯಲ್ಲೇ ಕಾಣಿಸಿಕೊಂಡಿದ್ದರು ಎನ್ನುವುದಕ್ಕೆ ಸಾಕ್ಷಿಯಾಗಿ ಅವರು ಆ ವಿಡಿಯೋವನ್ನು ಬಳಸಿಕೊಳ್ಳಲಾಗುತ್ತಿದೆ. ಆ ವಿಡಿಯೋ ವೈರಲ್ ಕೂಡ ಆಗಿದೆ.

    Live Tv
    [brid partner=56869869 player=32851 video=960834 autoplay=true]