Tag: Pathanamthitta

  • 5 ವರ್ಷಗಳಲ್ಲಿ 64 ಜನರಿಂದ ಲೈಂಗಿಕ ಶೋಷಣೆ – ಕರಾಳ ಅನುಭವ ಬಿಚ್ಚಿಟ್ಟ ದಲಿತ ಬಾಲಕಿ

    ತಿರುವನಂತಪುರಂ: ಕಳೆದ 5 ವರ್ಷಗಳಲ್ಲಿ 64 ಜನರಿಂದ ತಾನು ಲೈಂಗಿಕ ಶೋಷಣೆಕ್ಕೆ ಒಳಗಾಗಿರುವುದಾಗಿ ದಲಿತ ಬಾಲಕಿ ಮಕ್ಕಳ ಕಲ್ಯಾಣ ಸಮಿತಿಗೆ (Child Welfare Committee) ತಿಳಿಸಿದ್ದಾಳೆ.

    ಬಾಲಕಿ ಮೂಲತಃ ಕೇರಳದವಳಾಗಿದ್ದು (Kerala), ಮಹಿಳಾ ಸಮಕ್ಯ ಎಂಬ ಎನ್‌ಜಿಒ ಸದಸ್ಯರು ತಮ್ಮ ನಿತ್ಯದ ಕ್ಷೇತ್ರ ಭೇಟಿಯ ಭಾಗವಾಗಿ ಬಾಲಕಿಯ ಮನೆಗೆ ಬಂದಾಗ ಈ ವಿಷಯ ಬೆಳಕಿಗೆ ಬಂದಿದೆ. ಬಳಿಕ ಅವರು ಮಕ್ಕಳ ಕಲ್ಯಾಣ ಸಮಿತಿಗೆ ವರದಿ ನೀಡಿದ್ದಾರೆ. ಸಮಿತಿ ನಡೆಸಿದ ಕೌನ್ಸೆಲಿಂಗ್ ವೇಳೆಯಲ್ಲಿ ತನ್ನ 5 ವರ್ಷಗಳ ಕಾಲ ಅನುಭವಿಸಿದ ಕಷ್ಟವನ್ನು ಬಹಿರಂಗಪಡಿಸಿದ್ದಾಳೆ.ಇದನ್ನೂ ಓದಿ: ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ಮಾದಕ ವಸ್ತು ಮಾರಾಟ ಮಾಡ್ತಿದ್ದ ಆರೋಪಿ ಮೇಲೆ ಫೈರಿಂಗ್‌!

    ಬಾಲಕಿಯೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಕೌನ್ಸೆಲಿಂಗ್ ಅವಧಿಯಲ್ಲಿ, ಆಕೆ 13 ವರ್ಷದವಳಿದ್ದಾಗ ಮೊದಲ ಬಾರಿ ನೆರೆಹೊರೆಯವರು ಆಕೆಯ ಮೇಲೆ ಲೈಂಗಿಕ ಶೋಷಣೆ ಎಸಗಿದರು. ಜೊತೆಗೆ ಆ ವ್ಯಕ್ತಿ ಆಕೆಯೊಂದಿಗೆ ಅಶ್ಲೀಲ ಚಿತ್ರಗಳನ್ನು ಹಂಚಿಕೊಂಡಿದ್ದ. ಅಲ್ಲಿಂದ ಪ್ರಾರಂಭವಾಗಿ ಕಳೆದ 5 ವರ್ಷಗಳಿಂದ ತನ್ನ ಮೇಲೆ 64 ಜನರು ಲೈಂಗಿಕ ಶೋಷಣೆ ಎಸಗಿದ್ದಾರೆ. ಪ್ರಕರಣ ಕೂಡ ದಾಖಲಾಗಿದೆ ಎಂದು ತಿಳಿಸಿದ್ದಾಳೆ.

    ಶಾಲಾ ಸಮಯದಲ್ಲಿ ಕ್ರೀಡೆಯಲ್ಲಿ ಸಕ್ರಿಯವಾದ್ದೆ. ಆಗ ಕ್ರೀಡಾ ತರಬೇತಿ ಅವಧಿಯಲ್ಲಿ ಲೈಂಗಿಕ ಶೋಷಣೆಕ್ಕೆ ಒಳಗಾಗಿದ್ದೇನೆ. ಜೊತೆಗೆ ಆ ಸಮಯದಲ್ಲಿ ತನ್ನದೇ ಆದ ಕೆಲವು ಅಶ್ಲೀಲ ವಿಡಿಯೋಗಳನ್ನು ಹರಿಬಿಡಲಾಗಿತ್ತು. ಇದೆಲ್ಲವು ಆಕೆಯಲ್ಲಿ ಭಯವನ್ನು ಹೆಚ್ಚಿಸಿದ್ದವು ಎಂದು ಬಹಿರಂಗಪಡಿಸಿದ್ದಾಳೆ.

    ಬಾಲಕಿ ನೀಡಿದ ಹೇಳಿಕೆ ಆಧಾರದ ಮೇಲೆ ಮಕ್ಕಳ ಕಲ್ಯಾಣ ಸಮಿತಿಯವರು ಪತ್ತನಂತಿಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈವರೆಗೂ 10ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಬಾಲಕಿಯ ವಿವರವಾದ ಹೇಳಿಕೆ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಕುರಿತು ಪತ್ತನಂತಿಟ್ಟ ಜಿಲ್ಲಾಧ್ಯಕ್ಷ ಎನ್.ರಾಜೀವ್ ಮಾತನಾಡಿ, ಬಾಲಕಿ 8ನೇ ತರಗತಿಯಲ್ಲಿದ್ದಾಗಿನಿಂದ ಸುಮಾರು ಐದು ವರ್ಷಗಳ ಕಾಲ ಶೋಷಣೆಕ್ಕೊಳಗಾಗಿದ್ದಳು. ಅವಳು ಕ್ರೀಡೆಯಲ್ಲಿ ಸಕ್ರಿಯಳಾಗಿದ್ದಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿಯೂ ಆಕೆ ಲೈಂಗಿಕ ಶೋಷಣೆಕ್ಕೆ ಒಳಗಾಗಿದ್ದಳು. ಪ್ರಕರಣ ಗಂಭೀರವಾಗಿದ್ದು, ಸಮಿತಿಯು ಬಾಲಕಿಗೆ ಅಗತ್ಯ ಆರೈಕೆ ಮತ್ತು ರಕ್ಷಣೆ ನೀಡಲಿದೆ ಎಂದು ತಿಳಿಸಿದರು.ಇದನ್ನೂ ಓದಿ: MUDA Scam | ಜೆಡಿಎಸ್‌ ಶಾಸಕ ಜಿಟಿಡಿ ವಿರುದ್ಧವೂ ಲೋಕಾಯುಕ್ತಕ್ಕೆ ದೂರು – 2 ಸೈಟು ಕಿಕ್‌ಬ್ಯಾಕ್‌ ಆರೋಪ

  • ಭಾರೀ ಮಳೆ ಹಿನ್ನೆಲೆ – ಶಬರಿಮಲೆ ಭಕ್ತರಿಗೆ ಪಂಪಾ ನದಿಗೆ ಇಳಿಯದಂತೆ ಎಚ್ಚರಿಕೆ

    ಭಾರೀ ಮಳೆ ಹಿನ್ನೆಲೆ – ಶಬರಿಮಲೆ ಭಕ್ತರಿಗೆ ಪಂಪಾ ನದಿಗೆ ಇಳಿಯದಂತೆ ಎಚ್ಚರಿಕೆ

    ಪತ್ತನಂತಿಟ್ಟ: ಶಬರಿಮಲೆ ದರ್ಶನಕ್ಕೆ ಅಯ್ಯಪ್ಪ ಭಕ್ತರು ಪಂಪಾ ನದಿಗಿಳಿಯದಂತೆ ಪತ್ತನಂತಿಟ್ಟ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು (Pampa River), ಈ ಹಿನ್ನೆಲೆಯಲ್ಲಿ ಪಂಪಾ ನದಿಯಲ್ಲಿ (Kerala Rain) ನೀರಿನ ಹರಿವು ಹೆಚ್ಚಾಗಿದೆ. ತುಲಾ ಮಾಸ ಪೂಜೆಗಾಗಿ ಇಂದು ಸಂಜೆ 5 ಗಂಟೆಗೆ ಶಬರಿಮಲೆ ದೇವಸ್ಥಾನವನ್ನು ತೆರೆಯಲಾಗಿದೆ. ಭಾನುವಾರ ಬೆಳಗ್ಗೆ 5ರಿಂದ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

    ಪಂಪಾ ನದಿಯಲ್ಲಿ ಸದ್ಯ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಯಾತ್ರಿಗಳು ಹೆಚ್ಚು ಜಾಗರೂಕರಾಗಿರಬೇಕು ಎಂದು ಜಿಲ್ಲಾಡಳಿತ ಎಚ್ಚರಿಸಿದೆ. ಅಲ್ಲದೆ ಈ ದಾರಿಯಲ್ಲಿ ಸಾಧ್ಯವಾದಷ್ಟು ರಾತ್ರಿ ಸಂಚಾರ ಮಾಡಬೇಡಿ ಎಂದು ಜಲಸಂಪನ್ಮೂಲ ಸಚಿವ ರೋಷಿ ಅಗಸ್ಟಿನ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಪ್ರವಾಹ- ಮೂವರು ಬಲಿ, 10 ಮಂದಿ ನಾಪತ್ತೆ

    ಮಳೆಯಿಂದ ಉಂಟಾಗಬಹುದಾದ ಹಾನಿ ಸಾಧ್ಯತೆ ಹೆಚ್ಚಿರುವ ಸ್ಥಳಗಳಲ್ಲಿರುವ ಜನರನ್ನು ಸ್ಥಳಾಂತರಿಸುವ ಕೆಲಸ ಪ್ರಗತಿಯಲ್ಲಿದೆ ಎಂದೂ ಅವರು ಇದೇ ವೇಳೆ ಹೇಳಿದರು. ಇದನ್ನೂ ಓದಿ: ಜಯಲಲಿತಾ ಸಮಾಧಿಗೆ ತೆರಳಿದ ಚಿನ್ನಮ್ಮ- ಮತ್ತೆ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ?

    ಸದ್ಯ ಪತ್ತನಂತಿಟ್ಟ ಜಿಲ್ಲೆಯ ಆನತ್ತೋಡ್ ಡ್ಯಾಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಆಲೆಪ್ಪಿ, ಕೊಟ್ಟಾಯಂ, ಪತ್ತನಂತಿಟ್ಟ, ಇಡುಕ್ಕಿ, ಎರ್ನಾಕುಳಂ ಹಾಗೂ ತ್ರಿಶ್ಶೂರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಘಂಟೆಗೆ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇದನ್ನೂ ಓದಿ: ಲಸಿಕೆ ನೀಡಲು ಬಂದ ಸಿಬ್ಬಂದಿಗೆ ಹಾವು ತೋರಿಸಿ ಬೆದರಿಕೆ ಹಾಕಿದ ಮಹಿಳೆ