Tag: Patriotism

  • ಸಂಘದ ಟೋಪಿ ಧರಿಸಿ ಮೊದಲ ಬಾರಿಗೆ ಎಸ್‍ಎಂಕೆಯಿಂದ ಹಿಂದುತ್ವದ ಭಾಷಣ

    ಸಂಘದ ಟೋಪಿ ಧರಿಸಿ ಮೊದಲ ಬಾರಿಗೆ ಎಸ್‍ಎಂಕೆಯಿಂದ ಹಿಂದುತ್ವದ ಭಾಷಣ

    ಬೆಂಗಳೂರು: ಆರ್‍ಎಸ್‍ಎಸ್ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಎಸ್‍ಎಂ ಕೃಷ್ಣ ಅವರು ಹಿಂದುತ್ವದ ಕುರಿತು ಉಪನ್ಯಾಸ ನೀಡಿದ್ದಾರೆ.

    ಇಂದು ವಿಜಯದಶಮಿ ಹಿನ್ನೆಲೆ ಬೆಂಗಳೂರಿನ ಕೇಶವ ಕೃಪಾದಲ್ಲಿ ಆರ್‍ಎಸ್‍ಎಸ್ ಕಡೆಯಿಂದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಸ್‍ಎಂ ಕೃಷ್ಣ ಆರ್‍ಎಸ್‍ಎಸ್ ಟೋಪಿ ಧರಿಸಿ ಮೊದಲ ಬಾರಿಗೆ ಬಹಿರಂಗವಾಗಿ ಹಿಂದುತ್ವ ಮತ್ತು ಭಾರತೀಯತೆ ಬಗ್ಗೆ ಉಪನ್ಯಾಸ ಮಾಡಿದ್ದಾರೆ.

     

    ದೇಶದ ಚರಿತ್ರೆ, ನಮ್ಮ ದೇಶದ ಸಂಸ್ಕೃತಿ ಹಾಗೂ ನೈತಿಕ ನೀತಿಗಳೆ ನಮ್ಮ ದೇಶಕ್ಕೆ ಅಡಿಪಾಯ. ಸಹಸ್ರಾರು ವರ್ಷಗಳಿಂದ ಹಿಂದೂ ಧರ್ಮ ವಸುದೈವ ಕುಟುಂಬ ಎಂಬುದನ್ನು ಪ್ರತಿಪಾದಿಸಿದೆ. ವಿಶ್ವ ಕುಟುಂಬದ ಸಿದ್ಧಾಂತವನ್ನು ನಮ್ಮ ದೇಶದ ಮುಂದೆ ಇಟ್ಟವರು ಆರ್‍ಎಸ್‍ಎಸ್ ಸಂಸ್ಥಾಪಕರು. ಸಂಘದ ಅಗತ್ಯತೆ ಹಿಂದಿನಿಗಿಂತಲೂ ಈಗ ಹೆಚ್ಚಿದೆ. ನನ್ನ ಬಹಳಷ್ಟು ವರ್ಷಗಳ ರಾಜಕೀಯ ಅನುಭವದ ಬಳಿಕ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಗತ್ಯತೆಯನ್ನು ಕಂಡುಕೊಂಡಿದ್ದೇನೆ ಎಂದರು.

    ದೇಶಭಕ್ತಿಯುಳ್ಳ ಸಂಘಕ್ಕೆ ನನ್ನ ಗೌರವವನ್ನು ಅರ್ಪಣೆ ಮಾಡಲು ನಾನು ಇಲ್ಲಿಗೆ ಬಂದಿದ್ದೇನೆ. ಅಮೆರಿಕದಲ್ಲಿ ಪ್ರತಿಯೊಬ್ಬರು ದೇಶಕ್ಕೋಸ್ಕರ ಎರಡು ವರ್ಷಗಳ ಕಾಲ ತಮ್ಮ ಜೀವನ ಮೀಸಲಾಗಿಡಬೇಕು. ನಮ್ಮ ದೇಶದಲ್ಲಿಯೂ ಕೂಡ ಎರಡು ವರ್ಷಗಳ ಕಾಲ ನಮ್ಮನ್ನು ನಾವು ಅರ್ಪಿಸಿಕೊಳ್ಳುವಂತಾಗಬೇಕು. ನಮ್ಮನ್ನು ನಾವು ದೇಶಕ್ಕೆ ಅರ್ಪಣೆ ಮಾಡಿಕೊಳ್ಳುವುದರಿಂದ ನಮ್ಮ ರಾಷ್ಟ್ರಾಭಿಮಾನ ಅಭಿವ್ಯಕ್ತವಾಗುತ್ತದೆ ಎಂದು ಹೇಳಿದರು.

    ನಾವು ಯಾವುದಕ್ಕೂ ಅಂಟಿಕೊಳ್ಳಬಾರದು ಎಂಬುದು ನಮ್ಮ ಹಿಂದೂ ಧರ್ಮದಲ್ಲಿಯೇ ಇದೆ. ದೇಶವನ್ನೇ ದೇವರು ಎಂದು ನಂಬಿರುವ ನಾವು ದೇಶಕ್ಕಾಗಿಯೇ ಎಷ್ಟು ಕಾಲ ವಿನಿಯೋಗಿಸುತ್ತೇವೆ ಎಂಬ ಪ್ರಶ್ನೆಯನ್ನು ನಾವೆಲ್ಲರೂ ನಮ್ಮಷ್ಟಕ್ಕೆ ನಾವೇ ಹಾಕಿಕೊಳ್ಳಬೇಕಾಗಿದೆ. ನಮ್ಮ ದೇಶದ ಶೈಕ್ಷಣಿಕ ಪದ್ಧತಿ ಬದಲಾಗಬೇಕಿದೆ. ರಾಷ್ಟ್ರಭಕ್ತಿ ಹಾಗೂ ರಾಷ್ಟ್ರಪ್ರೇಮ ಎಂಬ ಲಸಿಕೆಯನ್ನು ನಾವು ಸಣ್ಣವಯಸ್ಸಿನಲ್ಲಿಯೇ ಮಕ್ಕಳಿಗೆ ಕೊಡಬೇಕಾಗಿದೆ. ಸಂಘದ ಸಂಸ್ಥಾಪಕರೊಂದಿಗೆ ಲೋಕಸಭೆಯಲ್ಲಿ ಕೆಲಸ ಮಾಡುವಂತಹ ಅವಕಾಶವನ್ನು ನಮ್ಮ ಮಂಡ್ಯದ ಜನರು ಕಲ್ಪಿಸಿ ಕೊಟ್ಟಿದ್ದರು ಎಂದು ತಿಳಿಸಿದರು.

  • 3 ವರ್ಷ ಕಾಲ ಸೈನಿಕರಾಗಿ ದೇಶ ಸೇವೆ – ಭಾರತೀಯ ಸೇನೆಯಲ್ಲಿ ತಾತ್ಕಾಲಿಕ ಉದ್ಯೋಗ

    3 ವರ್ಷ ಕಾಲ ಸೈನಿಕರಾಗಿ ದೇಶ ಸೇವೆ – ಭಾರತೀಯ ಸೇನೆಯಲ್ಲಿ ತಾತ್ಕಾಲಿಕ ಉದ್ಯೋಗ

    – ಸೇನೆ ಸೇರುವ ಮಂದಿಗೆ ಸುವರ್ಣಾವಕಾಶ
    – ಟೂರ್ ಆಫ್ ಡ್ಯೂಟಿ ಜಾರಿಗೆ ಗಂಭೀರ ಚಿಂತನೆ

    ನವದೆಹಲಿ: ಭಾರತೀಯ ಸೇನೆಗೆ ಸೇರಿ ದೇಶ ಸೇವೆ ಮಾಡಬೇಕೆಂಬ ಆಸೆ ಯುವ ಜನತೆಯಲ್ಲಿರುತ್ತದೆ. ಆದರೆ ಯಾವುದೋ ಕಾರಣದಿಂದಾಗಿ ಈ ಆಸೆ ಈಡೇರುವುದಿಲ್ಲ. ಆದರೆ ಈಗ 3 ವರ್ಷಗಳ ಕಾಲ ತಾತ್ಕಾಲಿಕ ಉದ್ಯೋಗ ನೀಡುವ ಬಗ್ಗೆ ಭಾರತೀಯ ಸೇನೆ ಗಂಭೀರ ಚಿಂತನೆ ನಡೆಸಿದೆ.

    ಹೌದು, ಮಿಲಿಟರಿ ಸೇರಿದರೆ ನಿವೃತ್ತಿಯಾಗುವರೆಗೆ ಕರ್ತವ್ಯ ಮಾಡಬೇಕಾಗುತ್ತದೆ. ಆದರೆ ಈಗ ಮೂರು ವರ್ಷಗಳ ಕಾಲ ‘ಟೂರ್ ಆಫ್ ಡ್ಯೂಟಿ’ ಹೆಸರಿನಲ್ಲಿ ಯುವಜನತೆಗೆ ಸೇನೆಯಲ್ಲಿ ಸೇವೆ ಸಲ್ಲಿಸಲು ಅನುಮತಿ ನೀಡಲು ಮುಂದಾಗಿದೆ. ಸೇನೆಗೆ ಸೇರುವವರ ಸಂಖ್ಯೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಅವರನ್ನು ಉತ್ತೇಜಿಸಲು ಈ ಯೋಜನೆಗೆ ಕೈ ಹಾಕಿದೆ.

    ಒಂದು ವೇಳೆ ಈ ಪ್ರಸ್ತಾಪಕ್ಕೆ ಅನುಮತಿ ಸಿಕ್ಕರೆ ಆರಂಭದಲ್ಲಿ 100 ಅಧಿಕಾರಿಗಳು ಮತ್ತು 1 ಸಾವಿರ ಸೈನಿಕರ ನೇಮಕವಾಗಲಿದೆ. ಈ ಸಂಬಂಧ ಸೇನೆಯ ವಕ್ತಾರ ಕರ್ನಲ್ ಅಮನ್ ಆನಂದ್ ಪ್ರತಿಕ್ರಿಯಿಸಿ, ವಿವಿಧ ಸೇನಾ ಕಮಾಂಡ್ ಗಳ ಪ್ರತಿಕ್ರಿಯೆ ಪಡೆಯಲಾಗಿದೆ. ಟೂರ್ ಆಫ್ ಡ್ಯೂಟಿಯನ್ನು ಪ್ರಯೋಗಿಕವಾಗಿ ಆರಂಭಿಸಲಾಗುತ್ತಿದ್ದು, ಇದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ನೇಮಕವಾಗಲಿರುವ ವ್ಯಕ್ತಿಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

    26/ 27 ವಯಸ್ಸಿನ ಯುವಜನತೆಗೆ ತರಬೇತಿ ನೀಡಿ ಉದ್ಯೋಗ ನೀಡಿದಾಗ ತಾತ್ಕಲಿಕವಾಗಿ ನಿರುದ್ಯೋಗ ಸಮಸ್ಯೆ ಕಡಿಮೆಯಾಗುತ್ತದೆ. ಇಲ್ಲಿ ಸೇವೆ ಸಲ್ಲಿಸಿದ ಬಳಿಕ ಪ್ರಮಾಣಪತ್ರ ನೀಡಲಾಗುತ್ತದೆ. ಒಂದು ವೇಳೆ ಸೇನೆಯಲ್ಲಿ ಮುಂದುವರಿಯಲು ಆಸಕ್ತಿ ತೋರಿಸಿದರೆ ಅವರನ್ನು ಮುಂದುವರಿಸಲಾಗುತ್ತದೆ. ಟೂರ್ ಆಫ್ ಡ್ಯೂಟಿಯನ್ನು ಪೂರ್ಣಗೊಂಡ ಬಳಿಕ ಆ ಸೈನಿಕರು ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದಲ್ಲಿ ಅವರ ಇಷ್ಟದ ಉದ್ಯೋಗಕ್ಕೆ ಸೇರಬಹುದು ಎಂಬ ನಂಬಿಕೆಯನ್ನು ಸೇನೆ ಇಟ್ಟುಕೊಂಡಿದೆ.

    ಯುವಜನತೆಗೆ ಸೇನೆ ಸೇರಬೇಕೆಂಬ ಆಸೆ ಇರುತ್ತದೆ. ಆದರೆ ಪೂರ್ಣಾವಧಿಗೆ ಸೇರಬೇಕೆಂಬ ಆಸೆ ಇರುವುದಿಲ್ಲ. ಸೇನೆಯ ಬಗ್ಗೆ ತಿಳಿದುಕೊಳ್ಳಲು, ರಾಷ್ಟ್ರ ಭಕ್ತಿ ತೋರಿಸಲು, ಸಾಹಸ, ಅನುಭವ ಪಡೆದುಕೊಳ್ಳಲು ಇದು ಸಹಕಾರಿಯಾಗಲಿದೆ.

    ನಾಗರಿಕರಿಗೆ ಮೂರು ವರ್ಷಗಳ ಸೇನೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ಈಗಾಗಲೇ ಇಸ್ರೇಲಿನಲ್ಲಿದೆ. ಭಾರತದಲ್ಲಿ ಆಸಕ್ತರಿಗೆ ಮಾತ್ರ ಅವಕಾಶ ನೀಡುತ್ತಿದ್ದು ಇಸ್ರೇಲಿನಲ್ಲಿ ಇದು ಕಡ್ಡಾಯ. ಇಸ್ರೇಲ್ ಸುತ್ತ 7 ರಾಷ್ಟ್ರಗಳು ಇರುವ ಅಗತ್ಯಬಿದ್ದಾಗ ಜನರ ನೆರವನ್ನು ಪಡೆಯಲು ಸೇನಾ ತರಬೇತಿಯನ್ನು ನೀಡುತ್ತದೆ. 18 ವರ್ಷ ಮೇಲ್ಪಟ್ಟ ಯುವಕರು 36 ತಿಂಗಳ ಕಾಲ, ಯುವತಿಯು 24 ತಿಂಗಳ ಕಾಲ ಸೇನಾ ತರಬೇತಿ ಪಡೆಯುವುದನ್ನು ಇಸ್ರೇಲ್ ಕಡ್ಡಾಯಗೊಳಿಸಿದೆ.

     

  • ಸೈನಿಕರ ಹೆಸರಲ್ಲಿ ಮತ ಕೇಳ್ತಾರೆ, ಮೋದಿ ಏನು ಗನ್ ಹಿಡ್ಕೊಂಡು ಹೋಗಿದ್ರಾ : ಸಿದ್ದರಾಮಯ್ಯ

    ಸೈನಿಕರ ಹೆಸರಲ್ಲಿ ಮತ ಕೇಳ್ತಾರೆ, ಮೋದಿ ಏನು ಗನ್ ಹಿಡ್ಕೊಂಡು ಹೋಗಿದ್ರಾ : ಸಿದ್ದರಾಮಯ್ಯ

    – ಬಿಜೆಪಿ ಪ್ರಾಣಾಳಿಕೆ ಓಲ್ಡ್ ವೈನ್ ಇನ್ ನ್ಯೂ ಬಾಟಲ್
    – ದೇಶಭಕ್ತಿ ಹೆಸರಲ್ಲಿ ಗಾಂಧಿಯನ್ನ ಕೊಂದಿದ್ದೇ ಬಿಜೆಪಿ ಸಾಧನೆ

    ಮೈಸೂರು: ಬಿಜೆಪಿ ಪ್ರಾಣಾಳಿಕೆ ಓಲ್ಡ್ ವೈನ್ ಇನ್ ನ್ಯೂ ಬಾಟಲ್ ಇದ್ದಂತೆ. ದೇಶಭಕ್ತಿ ಹೆಸರಲ್ಲಿ ಮಹಾತ್ಮ ಗಾಂಧೀಜಿ ಅವರನ್ನು ಕೊಂದಿದ್ದೇ ಬಿಜೆಪಿ ಸಾಧನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

    ಜಿಲ್ಲೆಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಭಕ್ತಿ ಹೆಸರಲ್ಲಿ ಗಾಂಧಿಯನ್ನ ಕೊಂದಿದ್ದೇ ಬಿಜೆಪಿ ಸಾಧನೆ. ಬಿಜೆಪಿ ಅವರು ದೇಶ ಭಕ್ತಿ ಹೆಸರಲ್ಲಿ ಜನರನ್ನ ದಾರಿ ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ಲೋಕಸಭೆ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಸರ್ಕಾರ ಪತನವಾಗುವುದಿಲ್ಲ. ಮಾಜಿ ಸಿಎಂ ಯಡಿಯೂರಪ್ಪ ತಿಪ್ಪರಲಾಗಾ ಹಾಕಿದರೂ ಮುಖ್ಯಮಂತ್ರಿ ಆಗುವುದಿಲ್ಲ ಎಂದು ತಿರುಗೇಟು ನೀಡಿದರು.

    ನೀವು ಚಲಾಯಿಸುವ ಮತ ಸೇನೆಗೆ ನೀಡಿದಂತೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಟಾಂಗ್ ನೀಡಿದ ಸಿದ್ದರಾಮಯ್ಯ ಅವರು, ಕಳೆದ 16 ಸಾರ್ವತ್ರಿಕ ಚುನಾವಣೆಯಲ್ಲಿ ಸೈನ್ಯ ಇರಲಿಲ್ಲವೆ? ಜೈ ಜವಾನ್ ಜೈ ಕಿಸಾನ್ ಎಂದು ಹೇಳಿದವರು ಯಾರು? ದೇಶ ಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯುವ ಅಗತ್ಯವಿಲ್ಲ. ಎಲ್ಲಾ ರಂಗಗಳಲ್ಲೂ ವಿಫಲವಾಗಿರುವ ಬಿಜೆಪಿ ಸರ್ಕಾರ ಇದೀಗ ಭಾವನಾತ್ಮಕ ವಿಚಾರಗಳನ್ನು ಮುಂದಿಡುತ್ತಿದೆ. ಪುಲ್ವಾಮಾ ದಾಳಿ ಪ್ರಕರಣವನ್ನು ಮುಂದಿಡುತ್ತಿದೆ. ಹಾಗಾದ್ರೆ ಪ್ರಧಾನಿ ಮೋದಿಯೇನು ಗನ್ ಹಿಡಿದುಕೊಂಡು ಹೋಗಿದ್ದರಾ ಎಂದು ಸಿದ್ದರಾಮಯ್ಯ ಬಿಜೆಪಿಗೆ ಪ್ರಶ್ನಿಸಿದರು.

    ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಮೋದಿ ಹುಟ್ಟಿರಲಿಲ್ಲ. ಆದ್ರೆ ನಾನು ಸ್ವಾತಂತ್ರ್ಯ ಬರುವ ಮೊದಲು ಹುಟ್ಟಿದ್ದೇನೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ದೇಶದ ಸೈನ್ಯವನ್ನು ನರೇಂದ್ರ ಮೋದಿ ಸೈನ್ಯ ಎಂದು ಭಟ್ಟಂಗಿತನ ಪ್ರದರ್ಶಿಸಿದ್ದಾರೆ. ಇಂತಹವರಿಂದ ದೇಶ ರಕ್ಷಣೆ ಸಾಧ್ಯವೇ ಎಂದು ಪ್ರಶ್ನಿಸಿ ಟಾಂಗ್ ಕೊಟ್ಟರು.